Saturday, May 16, 2026
Saturday, May 16, 2026
Home Blog Page 115

Republic Day ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

0

Republic Day ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ.

ಈ ಪಯಣವನ್ನು ಸಂಕೇತಿಸುವಂತೆ, ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವ ದಲ್ಲಿ ಕರ್ನಾಟಕವು ಪ್ರದರ್ಶಿಸುತ್ತಿದೆ.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ.

ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‍ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.
ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ.

ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸಾರ್ಟ್ ಅಪ್ ಕ್ಯಾಪಿಟಲ್ ಆಫ್ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಜ್ಯವು ನವ ದೆಹಲಿಯಲ್ಲಿ ಪ್ರದರ್ಶಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮನಸೂರೆಗೊಳ್ಳಲಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

Republic Day ದೆಹಲಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರದ ವಿಷಯದ ಆಯ್ಕೆ, ವಿನ್ಯಾಸ, ಕೇಂದ್ರ ಸರ್ಕಾರ ರಕ್ಷಣಾ ಸಚಿವಾಲಯದಲ್ಲಿ ಅದರ ಅನುಮೋದನೆ, ನಿರ್ಮಾಣ, ಪಾಲ್ಗೊಳ್ಳುವಿಕೆ ಹೀಗೆ ಎಲ್ಲಾ ಹಂತಗಳಲ್ಲೂ ‘ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯೇ ಸಕ್ರಿಯವಾಗಿ ಪಾಲ್ಗೊಳ್ಳುತ್ತದೆ. ಅಲ್ಲದೆ, ಇಲಾಖೆಯು ಕಳೆದ 16 ವರ್ಷಗಳಿಂದ ನಿರಂತರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದ ಪ್ರದರ್ಶನದಲ್ಲಿ (2024 ಮತ್ತು 2026ರಲ್ಲಿ) ಪಾಲ್ಗೊಳ್ಳುತ್ತಿದೆ. ಇದು ಕನ್ನಡಿಗರೆಲ್ಲರೂ ಹೆಮ್ಮೆಪಡುವ ಸಂಗತಿ ಎಂದು ಹೇಳಿದ್ದಾರೆ.

2026ರ ಜನವರಿ 26ರಂದು ನಡೆಯುವ ದೆಹಲಿ ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು

  1. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ
  2. ಕರ್ನಾಟಕ ಪುಷ್ಪ ವೈಭವ
  3. ಹಲಗಲಿ ಬೇಡರು
    4.‘ಸಿರಿಧಾನ್ಯದಿಂದ ಮೈಕ್ರೋಚಿಪ್’ ವರೆಗೆ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು.

ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮ್ಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್‍ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ.

ವಿಷಯ ಆಯ್ಕೆಯ ಬಳಿಕ ಅದನ್ನು ವಿವಿಧ ಸ್ತರಗಳನ್ನು ನಿರೂಪಿಸಬೇಕಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕೃತಿಯ ಮಹತ್ವವನ್ನು ಎತ್ತಿಹಿಡಿಯುವ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದವು. ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಬಿ. ಕಾವೇರಿ ಅವರ ಸಲಹೆ – ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯ ಆಯುಕ್ತರು ಹೇಳಿದರು.

ಸ್ತಬ್ಧಚಿತ್ರದಲ್ಲಿ ಏನಿರಲಿದೆ: ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತವಾಗಿ ಹೊಳೆಯುತ್ತಿದೆ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ.

ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್‍ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ. ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ.

ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿಂದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್‍ಗಳ ಮಧ್ಯೆ ರೋಬೋಟ್‍ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ.

ತೀವ್ರ ಪೈಪೋಟಿ: ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯವು 2022ನೇ ಸಾಲಿನಿಂದ 15 ಕ್ಕೆ ಇಳಿಸಿದೆ.

2024ರಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಎಲ್ಲಾ ರಾಜ್ಯಗಳಿಗೂ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಕಲ್ಪಿಸಲು ಆವರ್ತನ ಮಾದರಿಯಲ್ಲಿ ಒಂದು ವರ್ಷ ಪಥಸಂಚಲನ ಮತ್ತು ಅದರ ಮುಂದಿನ ವರ್ಷ ಭಾರತ ಪರ್ವದಲ್ಲಿ ಪ್ರದರ್ಶಿಸುವಂತೆ ಎಲ್ಲಾ ರಾಜ್ಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಹೀಗಾಗಿ, ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 16 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.

ಪ್ರಶಸ್ತಿಗಳ ಸರಮಾಲೆ: 2022ರಲ್ಲಿ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲು ಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟಣದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್ ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪ ಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕ ದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದು ಆಯುಕ್ತರು ತಿಳಿಸಿದ್ದಾರೆ.

Madhu Bangarappa ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲು ಸೂಚನೆ : ಮಧು ಬಂಗಾರಪ್ಪ

0

Madhu Bangarappa ಆರೋಗ್ಯ, ಶಿಕ್ಷಣ, ಕೃಷಿ, ಲೋಕೋಪಯೋಗಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನರ ಅನುಕೂಲಕ್ಕಾಗಿ ಅಗತ್ಯವಾಗಿ ಆಗಬೇಕಿರುವ ಅಭಿವೃದ್ದಿ ಕಾಮಗಾರಿಗಳು, ಯೋಜನೆಗಳ ಕುರಿತು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಸಲ್ಲಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
2026-27 ನೇ ಸಾಲಿನ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ವರದಿ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಜಿಲ್ಲಾ ಯೋಜನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2026-27 ನೇ ಸಾಲಿಗೆ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳಿಂದ ಒಟ್ಟು ರೂ.1490587.25 ಲಕ್ಷ ಅನುದಾನದ ಬೇಡಿಕೆ ಇಡಲಾಗಿದೆ. ನೀತಿ ಆಯೋಗದಿಂದ ಇದೀಗ ಪ್ರತಿ ವರ್ಷ ಯೋಜನಾ ವರದಿ ಸಲ್ಲಿಸಲು ಸೂಚಿಸಲಾಗಿದೆ. ಅದರಂತೆ ಮೊದಲು ಜಿಲ್ಲಾ ಯೋಜನಾ ಸಮಿತಿ ಸಭೆಯಲ್ಲಿ ಚರ್ಚಿಸಿ, ಅಭಿವೃದ್ದಿ ಯೋಜನಾ ವರದಿಗೆ ಅನುಮೋದನೆ ಪಡೆದ ನಂತರ ರಾಜ್ಯಕ್ಕೆ ಸಲ್ಲಿಸಲಾಗುವುದು. ಆದ್ದರಿಂದ ಅಧಿಕಾರಿಗಳು ಸ್ಥಳೀಯ ವಸ್ತುಸ್ಥಿತಿ ಬಲ್ಲ ಶಾಸಕರು, ಜನಪ್ರತಿನಿಧಿಗಳ ಸಲಹೆ ಪಡೆದು ಪ್ರಸ್ತಾವನೆ ಸಲ್ಲಿಸಬೇಕು, ಸಚಿವನಾದ ನಾನೂ ಸೇರಿದಂತೆ ಸಂಬಂಧಿಸಿದ ಎಲ್ಲರೂ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚಿಸಬೇಕು ಎಂದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ, ಹೊಳಲೂರು ಸಮುದಾಯ ಆರೋಗ್ಯ ಕೇಂದ್ರ (ಸಿಹೆಚ್‌ಸಿ)30 ಬೆಡ್ ಸಾಮರ್ಥ್ಯ ಹೊಂದಿದ್ದು 50 ಬೆಡ್‌ಗಳ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು. ಅಲ್ಲಿ ಕಳೆದ ಸಾಲಿನಲ್ಲಿ 4300 ದಾಖಲಾತಿ ಆಗಿದ್ದು ಪ್ರತಿ ದಿನ 15 ದಾಖಲಾತಿ ಇರುತ್ತದೆ. ಆದ್ದರಿಂದ ಉತ್ತಮ ಸ್ತ್ರೀರೋಗ ತಜ್ಞರನ್ನು ನೇಮಿಸಿ ಮೇಲ್ದರ್ಜೆಗೇರಿಸಬೇಕು. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿ ಕಡೆಯವರಿಗೆ ಊಟ ಮಾಡಲು ಒಂದು ಹಾಲ್ ನಿರ್ಮಿಸಲು ಯೋಜನಾ ವರದಿಯಲ್ಲಿ ಸೇರ್ಪಡೆಗೊಳಿಸಬೇಕು. ಹಾಗೂ ಬೀದಿ ನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆಗೆ ಕ್ರಮ ವಹಿಸಬೇಕೆಂದರು.
ಶಾಸಕರಾದ ಶಾರದಾ ಪರ‍್ಯಾನಾಯ್ಕ್ ಮಾತನಾಡಿ ನನ್ನ ವ್ಯಾಪ್ತಿಗೆ ತಾಲ್ಲೂಕು ಆಸ್ಪತ್ರೆ ಬರುವುದಿಲ್ಲ. ಹೊಳಲೂರು ಆಸ್ಪತ್ರೆ ಮೇಲ್ದರ್ಜೆಗೇರಿಸಿದರೆ ಸುತ್ತಮುತ್ತಲಿನ ಗ್ರಾಮಗಳಿಗೆ ಅನುಕೂಲವಾಗುತ್ತದೆ ಎಂದರು.
ಸಚಿವರು ಪ್ರತಿಕ್ರಿಯಿಸಿ, ಆರೋಗ್ಯ ಇಲಾಖೆಯ ಅಭಿವೃದ್ದಿ ಕಾಮಗಾರಿಗಳಿಗೆ ರೂ.2600.50 ಲಕ್ಷ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಳಲೂರು ಸಿಹೆಚ್‌ಸಿ ಮೇಲ್ದರ್ಜೆಗೇರಿಸುವ ಕುರಿತು ಡಿಹೆಚ್‌ಓ ರವರು ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ ಅವರು ಬೀದಿನಾಯಿಗಳ ಸಂತಾನಹರಣ ಶಸ್ತçಚಿಕಿತ್ಸೆಗೆ ಸಂಬಂಧಿಸಿದಂತೆ ಪಾಲಿಕೆ ವತಿಯಿಂದ ಪ್ರಸ್ತಾವನೆ ಸಲ್ಲಿಸಿ ಸೂಕ್ತ ಕ್ರಮ ವಹಿಸಬೇಕು ಎಂದರು.
ಶಿಕ್ಷಣ ಇಲಾಖೆಯಲ್ಲಿ ಶಾಲೆಗಳ ಕೊಠಡಿಗಳ ದುರಸ್ತಿ, ಕುಡಿಯುವ ನೀರು, ಶೌಚಾಲಯ, ಅಡುಗೆ ಮನೆ ಹಾಗೂ ಶಾಲೆಗಳಲ್ಲಿ ಸ್ಥಳಾವಕಾಶ ಇದ್ದರೆ ಸಭಾಂಗಣವನ್ನು ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿರಿ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ಬಿಸಿಎಂ ಹಾಸ್ಟೆಲ್ ಸೇರಿದಂತೆ ಕಲ್ಯಾಣ ಇಲಾಖೆಗಳ ಎಲ್ಲ ಹಾಸ್ಟೆಲ್‌ಗಳಲ್ಲಿ ಸ್ಥಳಾವಕಾಶ ಇದ್ದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿರಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಕುಡಿಯುವ ನೀರು ಮತ್ತು ಜೆಜೆಎಂ ಎರಡೂ ಯೋಜನೆಗಳಡಿ ಕುಡಿಯುವ ನೀರಿನ ಮೂಲದ ಬಗ್ಗೆ ಹಾಗೂ ಬಾಕಿ ಇರುವ ಯುಜಿಡಿ ಕಾಮಗಾರಿಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಪಿಡಬ್ಲುö್ಯಡಿ ಮತ್ತು ಪಿಆರ್‌ಇಡಿ ವಿಭಾಗದಿಂದ ಜಿಲ್ಲೆಯಲ್ಲಿ ಅವಶ್ಯವಿರುವ ರಸ್ತೆಗಳ ಕುರಿತು ಸಮರ್ಪಕವಾಗಿ ಪ್ರಸ್ತಾವನೆ ಸಲ್ಲಿಸಬೇಕು. ರಸ್ತೆಗಳು ಎಲ್ಲಿ ಮತ್ತು ಎಷ್ಟು ಬೇಕು ಎಂದು ಪ್ರಸ್ತಾವನೆ ಕಳುಹಿಸಿ, ಮುಖ್ಯಮಂತ್ರಿಗಳ ಬಳಿ ಈ ಕುರಿತು ಚರ್ಚಿಸಲಾಗುವುದು. ರಸ್ತೆ ವಿಷಯದಲ್ಲಿ ಸಾರ್ವಜನಿಕರು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದು, ಆದ್ಯತೆಯ ಮೇಲೆ ರಸ್ತೆಯ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮ ವಹಿಸಲಾಗುವುದು ಎಂದರು.
Madhu Bangarappa ಮಾಧ್ಯಮದ ವರದಿಗಳನ್ನು ಗಂಭೀರವಾಗಿ ಪರಿಗಣಿಸಿ : ಸಾರ್ವಜನಿಕ ಸಂಬAಧಿತ ವಿಷಯಗಳು, ಕುಂದು ಕೊರತೆಗಳ ಬಗ್ಗೆ ದಿನ ಪತ್ರಿಕೆಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ವರದಿಯಾಗುವ ವರದಿಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಗಮನ ಹರಿಸಿ ಗಂಭೀರವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವ, ವ್ಯವಸ್ಥೆಯನ್ನು ಸುಧಾರಿಸಲು ಕ್ರಮ ವಹಿಸಬೇಕು. ಶಿವಮೊಗ್ಗದಲ್ಲಿ ತ್ಯಾಜ್ಯ ಸಮಸ್ಯೆ ಕುರಿತು ರಾಜ್ಯ ಮಟ್ಟದ ದಿನಪತ್ರಿಕೆ ವರದಿ ಮಾಡಿರುವ ಕುರಿತು ಸಭೆಯ ಗಮನ ಸೆಳೆದ ಸಚಿವರು, ಎಲ್ಲ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಹಶೀಲ್ದಾರ್‌ಗಳು, ಪಾಲಿಕೆ ಆಯುಕ್ತರು ನಿಯಮಿತವಾಗಿ ಈ ಬಗ್ಗೆ ಗಮನ ಹರಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು, ಸ್ಥಳೀಯ ಸಮಿತಿ ಸದಸ್ಯರು, ಗ್ರಾ.ಪಂ ಸದಸ್ಯರು, , ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ತಾ.ಪಂ. ಆಡಳಿತಾಧಿಕಾರಿಗಳು, ಜಿ.ಪಂ ಮುಖ್ಯ ಯೋಜನಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Madhu Bangarappa ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸುಧಾರಣೆ – ಮಹಿಳಾ ಸಬಲೀಕರಣ : ಮಧು ಬಂಗಾರಪ್ಪ

0

Madhu Bangarappa ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆ ಮತ್ತು ಮಹಿಳಾ ಸಬಲೀಕರಣವಾಗಿದೆ ಜೊತೆಗೆ ಬಡವರನ್ನು ಮುಖ್ಯವಾಹಿನಿಗೆ ತರುವ ಕೆಲಸವಾಗುತ್ತಿದೆ ಎಂದು ಶಾಲಾ ಶಿಕ್ಷಣಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ನುಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಆಹಾರ ಮತ್ತು ನಾಗರೀಕ ಇಲಾಖೆ, ಇಂಧನ ಇಲಾಖೆ, ಸಾರಿಗೆ ಇಲಾಖೆ, ಉದ್ಯೋಗ ವಿನಿಮಯ ಇಲಾಖೆ, ಕೌಶಲ್ಯಾಭಿವೃದ್ದಿ ಇಲಾಖೆ, ಜಿಲ್ಲಾ/ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಕುರಿತಾದ ಪಂಚ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರ ರೈತರ ಹಿಂದುಳಿದವರ, ಬಡವರ ಮತ್ತು ಮಹಿಳೆಯರ ಪರವಾಗಿದ್ದು, ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಬಳಿ ದುಡ್ಡು ಬಂದು ಖರ್ಚು ಸಹ ಹೆಚ್ಚಾಗಿದೆ. ಇದರಿಂದ ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಆದಾಯ ಬರುತ್ತದೆ. ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆಗಳಿಂದ ಮಹಿಳೆಯರು ಸ್ವಾವಲಂಬಿಗಳಾಗಿ, ಖರ್ಚು ಮಾಡಿದ್ದಾರೆ. ಇದರಿಂದ ದೇವಸ್ಥಾನದ ಆದಾಯ ಕೂಡ ಹೆಚ್ಚಿದೆ. ಗೃಹಜ್ಯೋತಿಯಿಂದ ಓದುವ ಮಕ್ಕಳಿಗೆ ಬಹಳ ಅನುಕೂಲವಾಗಿದೆ. ರಾಜ್ಯದ ಆರ್ಥಿಕ ವ್ಯವಸ್ಥೆ ಸರಿಪಡಿಸಲು ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿದ್ದು ಗ್ಯಾರಂಟಿ ಪ್ರಾಧಿಕಾರ ಕ್ಯಾಬಿನೆಟ್‌ಗಿಂತ ಉತ್ತಮ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಕೂಲಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕಿದೆ. ಈ ನಿಟ್ಟಿನಲ್ಲಿ ಕಾರ್ಯಾಗಾರ ಉಪಯುಕ್ತವಾಗಿದೆ ಎಂದರು.ನಾವು ಚೆನ್ನಾಗಿರಬೇಕೆಂದರೆ ಬ್ಲಡ್ ಮತ್ತು ದುಡ್ಡು ಬೇಕು. ಸರ್ಕಾರ ಮತ್ತು ಮಾರುಕಟ್ಟೆ ಚೆನ್ನಾಗಿರಬೇಕಾದರೆ ಮಹಿಳಾ ಸಬಲೀಕರಣ ಆಗಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ರೂ. 1,13,000 ಕೋಟಿ ಹಣವು ನೇರವಾಗಿ ಬಡವರ ಖಾತೆಗೆ ತಲುಪಿದೆ. ಹಾಗೂ ನಮ್ಮ ಜಿಲ್ಲೆಯಲ್ಲಿ ರೂ.3023 .95 ಕೋಟಿ ಫಲಾನುಭವಿಗಳಿಗೆ ತಲುಪಿದೆ ಎಂದರು.

Madhu Bangarappa ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಂ ರೇವಣ್ಣ ಮಾತನಾಡಿ, ಎಲ್ಲ ಮುಖ್ಯಮಂತ್ರಿಗಳು ಜನರ ಉದ್ದಾರಕ್ಕಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ನೀಡಿದ್ದಾರೆ. ದೇವರಾಜ ಅರಸು, ಗುಂಡೂರಾವ್, ಬಂಗಾರಪ್ಪ, ವೀರಪ್ಪ ಮೊಯ್ಲಿ, ಎಸ್.ಎಂ.ಕೃಷ್ಣ ಸೇರಿದಂತೆ ಸಿದ್ದರಾಮಯ್ಯನವರು ರಾಜ್ಯದಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಬಸವಣ್ಣನವರ ತತ್ವದ ಆಧಾರದಲ್ಲಿ ಅಧಿಕಾರ ನಡೆಸಿ ರೈತರಿಗೆ, ಜನರಿಗೆ, ವಿದ್ಯಾರ್ಥಿಗಳಿಗೆ ಅತ್ಯುತ್ತಮ ಯೋಜನೆಗಳನ್ನು ನೀಡಿದ್ದಾರೆ. ಸಿದ್ದರಾಮಯ್ಯನವರು ನೀಡಿದ್ದ 165 ಭರವಸೆಗಳನ್ನು ಈಡೇರಿಸಿದ್ದಾರೆ.
ರಾಜ್ಯದ ಆರ್ಥಿಕ ಪರಿಸ್ಥಿತಿ ಚೇತರಿಕೆ ಕಂಡಿದೆ. ತಲಾ ಆದಾಯ ಮತ್ತು ಜಿಎಸ್‌ಟಿ ಯಲ್ಲಿ ರಾಜ್ಯ ಮೊದಲನೇ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ನಷ್ಟವೇನೂ ಆಗಿಲ್ಲ. ಲಾಭವೇ ಆಗುತ್ತಿದೆ. ಇದೀಗ ಎಲ್ಲ ರಾಜ್ಯಗಳಲ್ಲಿ ನಮ್ಮಂತೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದ್ದಾರೆ ಎಂದರು.
ಈ ಕಾರ್ಯಾಗಾರದಿಂದ ಗ್ಯಾರಂಟಿ ಯೋಜನೆಗಳ ಕುರಿತಾದ ಮಾಹಿತಿ ಅರ್ಥಪೂರ್ಣವಾಗಿ ದೊರಕಿದೆ. ಜಿಲ್ಲೆಯು ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಶೇ.98 ಪ್ರಗತಿ ಸಾಧಿಸಿದೆ. ಯುವನಿಧಿ ಯೋಜನೆಯಡಿ ನಮ್ಮ ಸದಸ್ಯರೇ ಮುಂದೆ ಹೋಗಿ ನೋಂದಣಿ ಮಾಡಿಸಬೇಕು ಎಂದು ಸೂಚಿಸಿದ ಅವರು ಗೃಹಲಕ್ಷಿö್ಮ ಯೋಜನೆಗೆ ಸಂಬAಧಿಸಿAದAತೆ ಜಿಎಸ್‌ಟಿ ಬಗ್ಗೆ ಸಭೆ ನಡೆಸಲಾಗಿದೆ. ಜಿಎಸ್‌ಟಿ ಯಿಂದಾಗಿ ಯೋಜನೆಯ ಫಲ ಸ್ಥಗಿತವಾಗಿದ್ದ 60 ಸಾವಿರ ಅರ್ಜಿ ವಿಲೇವಾರಿ ಆಗಿದ್ದು ಉಳಿದ 60 ಸಾವಿರ ಅರ್ಜಿಗಳನ್ನು ಕ್ಲಿಯರ್ ಮಾಡುತ್ತೇವೆ. ಗೃಹಲಕ್ಷಿö್ಮ ಯೋಜನೆಯಡಿ ರಾಜ್ಯದಲ್ಲಿ ಮರಣ ಹೊಂದಿದ 1,44,056 ಜನರಿಗೆ ಹಣ ಸಂದಾಯವಾಗಿದ್ದು, ಇದನ್ನು ಸರಿಪಡಿಸಲು ಕ್ರಮ ವಹಿಸಲಾಗುತ್ತಿದೆ.
ರಾಜ್ಯದಲ್ಲಿ ಈವರೆಗೆ 600 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ ನಿರ್ಮಿಸಲಾಗಿದೆ. ಇನ್ನು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಜನರ ದಟ್ಟಣೆ ತಗ್ಗಿಸಲು ಹೊಸದಾಗಿ 3000 ಬಸ್ ಖರೀದಿಸಲಾಗಿದೆ, ನೇಮಕಾತಿಯನ್ನೂ ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ ಕೋವಿಡ್ ಸಮಯದಲ್ಲಿ ಸ್ಥಗಿತಗೊಂಡಿದ್ದ ಬಸ್ ಗಳ ಓಡಾಟ ರಿಶೆಡ್ಯೂಲ್ ಮಾಡಲಾಗುವುದು ಎಂದ ಅವರು ಗ್ಯಾರಂಟಿ ಯೋಜನೆಗಳನ್ನು ಇನ್ನೂ ಯಶಸ್ವಿಗೊಳಿಸಲು ನಮ್ಮ ತಂಡ ಶ್ರಮಿಸಲಿದೆ ಎಂದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಜಾರಿಯಾಗಿವೆ. ಬಜೆಟ್‌ನಲ್ಲಿ ಗ್ಯಾರಂಟಿಯೋಜನೆಗಳಿಗಾಗಿ ರೂ 4.968 ಕೋಟಿ ಹಣವನ್ನು ಮೀಸಲು ಇಡಲಾಗಿದ್ದು ಈವರೆಗೆ ರೂ. 1,13,000 ಕೋಟಿ ಹಣ ಜನ ಸಾಮಾನ್ಯರ ಖಾತೆಗೆ ಜಮೆ ಮಾಡಲಾಗಿದೆ. ರೂ. 1.25 ಸಾವಿರ ಕೋಟಿ ಹಣವನ್ನು ಅಭಿವೃದ್ಧಿ ಕಾಮಗಾರಿಗಳಿಗಾಗಿ ಮೀಸಲಿಡಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ. 98 ಪ್ರಗತಿಯಲ್ಲಿದ್ದು ಈ ಯೋಜನೆಗಳು ಮಹಿಳೆಯರು, ರೈತರು, ಬಡವರರು, ಹಿಂದುಳಿದವರ ಪರವಾಗಿದೆ. ಕೇವಲ ಗ್ಯಾರಂಟಿ ಯೋಜನೆಗಳಲ್ಲದೇ ಇತರೆ ಅಭಿವೃದ್ದಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಲ ಕಾಲಕ್ಕೆ ಗೊಬ್ಬರ, ಬಿತ್ತನೆ ಬೀಜ ದೊರಕುತ್ತಿದ್ದು ರಾಜ್ಯಾದ್ಯಂತ ಅಭಿವೃದ್ದಿ ಆಗುತ್ತಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮಾತನಾಡಿ, ರಾಜ್ಯ ಸರ್ಕಾರ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ನೀಡಿದೆ. ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ರೂಪಿಸಿರುವ ಯೋಜನೆ ಇದಾಗಿದೆ. ಜಾತ್ಯಾತೀತ, ಪಕ್ಷಾತೀತ, ಧರ್ಮಾತೀತವಾದ ಯೋಜನೆಗಳು ಇವಾಗಿದ್ದು, ಆರ್ಥಿಕವಾಗಿ, ಸಾಮಾಜಿವಾಗಿ ಸಮಾನತೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿವೆ ಎಂದರು.
ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಮಹಿಳೆಯರ ಆರ್ಥಿಕ, ಸಾಮಾಜಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆಂದು ನೀಡಲಾದ ಭರವಸೆಯನ್ನು ರಾಜ್ಯ ಸರ್ಕಾರ ಈಡೇರಿಸಿದ್ದು, ಮಹಿಳಾ ಸಬಲೀಕರಣ ಸಾಧ್ಯವಾಗಿದೆ. ವಿಶೇಷವಾಗಿ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಲಾಗಿದೆ. ಮಹಿಳೆಯರು ಈ ಹಣವನ್ನು ಖರ್ಚು ಮಾಡುತ್ತಿದ್ದಾರೆ. ಸ್ವಾವಲಂಬಿಗಳಾಗಿದ್ದಾರೆ. ಜೊತೆಗೆ ಉದ್ಯಮಿಗಳು ಉದ್ಯಮಿಗಳಾಗಬೇಕು ಎಂದರು.
ಸAಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಡಾ.ವಾಸು ಹೆಚ್ ಪಿ ಮಾತನಾಡಿ, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಗ್ಯಾರಂಟಿಗಳೇ ಕಾರಣ. ರೂ. 1,13,000 ಕೋಟಿ ಹಣವನ್ನು ಜನ ಸಾಮಾನ್ಯರಿಗೆ ಈ ಯೋಜನೆಗಳು ತಲುಪಿಸಿದ್ದು, ಗ್ಯಾರಂಟಿ ಯೋಜನೆಗಳು 2019 ರಲ್ಲಿ ನ್ಯಾಯ್ ಎಂಬ ಯೋಜನೆಯಡಿಯ ಪರಿಕಲ್ಪನೆಯಾಗಿದೆ.
ಗ್ಯಾರಂಟಿ ಯೋಜನೆಗಳಿಂದ ನಷ್ಟ, ಮಹಿಳೆಯರ ವೋಟ್‌ಗಾಗಿ ಮಾಡಲಾಗಿದೆ ಇನ್ನಿತರೆ ಅಪಪ್ರಚಾರ ಮಾಡಲಾಗಿತ್ತು. ಆದರೆ ಅದು ಸತ್ಯವಲ್ಲ. ಅರ್ಥಶಾಸ್ತ್ರಜ್ಞರು ದೇಶದ/ರಾಜ್ಯದ ಅಭಿವೃದ್ದಿಯಾಗಬೇಕಾದರೆ ಜನ ಸಾಮಾನ್ಯರಿಗೆ ನೀವು ಯಾವುದಾದರೂ ರಿತಿಯಲ್ಲಿ ಹಣ ಕೊಡಬೇಕೆಂದು ಹೇಳಿದ್ದಾರೆ. ನರೇಗಾ ಅಥವಾ ಸಮುದಾಯದ ಜನರಿಗೆ ಉದ್ಯೋಗ ನೀಡಬೇಕು. ಹಾಗೂ ಸಾರ್ವತ್ರಿಕ ಕನಿಷ್ಟ ಆದಾಯದಿಂದ ಅಭಿವೃದ್ಧಿ ಸಾಧ್ಯವೆಂದು ಹೇಳಿದ್ದಾರೆ.
ಹಣ ಕೊಡುವುದರಿಂದ ಕೊಳ್ಳುವ ಶಕ್ತಿ ಹೆಚ್ಚಿಗೆಯಾಗಿ, ಘನತೆ, ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗುತ್ತದೆ. ಇದನ್ನು ಗ್ಯಾರಂಟಿ ಯೋಜನೆಗಳು ಸಾಧ್ಯವಾಗಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿದೆ. ಜನರ ತೆರಿಗೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ. ಗ್ಯಾರಂಟಿ ಯಿಂದ ಬಂದ ಹಣವನ್ನು ಖರ್ಚು ಮಾಡುತ್ತಾರೆ. ಖರೀದಿ ಹೆಚ್ಚಾದಂತೆ ಉತ್ಪಾದನೆ ಸಹ ಹೆಚ್ಚುತ್ತದೆ.
ಗ್ಯಾರಂಟಿ ಯೋಜನೆಳಿಂದಾಗಿ ಜನರಲ್ಲಿ ಕೊಳ್ಳುವ ಶಕ್ತಿ ಹೆಚ್ಚಿದೆ. ಜಿಎಸ್‌ಟಿಗೆ ಉತ್ತಮ ಕೊಡುಗೆ ನೀಡಿದೆ. ರಾಜ್ಯದ ತಲಾದಾಯ ರೂ. 2.4 ಲಕ್ಷ ಆಗಿದೆ(ದೇಶದ ತಲಾ ಆದಾಯ 1.14 ಲಕ್ಷ ). ಜಿಎಸ್ಟಿ ಬೆಳವಣಿಗೆ ದರ ಸಾಕಷ್ಟು ಹೆಚ್ಚಿದೆ.
ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ನಷ್ಟದಲ್ಲಿ ಇಲ್ಲ. ಸಕಾಲದಲಿ ್ಲಸರ್ಕಾರಿ ನೌಕರರಿಗೆ ಸಂಬಳ ನೀಡಲಾಗುತ್ತಿದೆ. ಇತರೆ ಹಲವಾರು ಅಭಿವೃದ್ದಿ ಯೋಜನೆಗಳು, ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಮೊದಲ ವರ್ಷಗಳಲ್ಲಿ ಗ್ಯಾರಂಟಿ ಅನುಷ್ಟಾನದಿಂದ ಕಷ್ಟ ಆಗುತ್ತದೆ. ಆದರೆ ನಂತರ ತೆರಿಗೆ ಹಣವೇ ಅಭಿವೃದ್ಧಿಗೆ ಚಾಲಕ ಶಕ್ತಿಯಾಗುತ್ತದೆ. ಈ ಯೋಜನೆಗಳಿಂದ ಜನರು ಸೋಮಾರಿಗಳಲ್ಲ, ಬದಲಾಗಿ ಅವರಲ್ಲಿ ಉದ್ಯೋಗಶೀಲತೆ ಹೆಚ್ಚುತ್ತದೆ.
ಹೆಚ್ಚು ಗ್ಯಾರಂಟಿಗಳಿರುವ ತಮಿಳುನಾಡಿನಲ್ಲಿ ಶೇ.43 ಮಹಿಳೆಯರು ದುಡಿಯುತ್ತಿದ್ದರೆ ದೇಶದಲ್ಲಿ ಶೇ.31 ಮಹಿಳೆಯರು ದುಡಿಯುತ್ತಿದ್ದಾರೆ. ಮಹಿಳೆಗೆ ಯಾಕೆ ಹೆಚ್ಚು ಯೋಜನೆಳೆಂದರೆ ಅವರ ಉದ್ಯಮಶೀಲತೆ ಪುರುಷರಿಗಿಂತ ಹೆಚ್ಚಿದೆ. ಗೃಹಲಕ್ಷಿö್ಮ ಹಣ ವೇತನವಿಲ್ಲದೆ ದುಡಿಯುತ್ತಿರುವ ಮಹಿಳೆಯರಿಗೆ ನೀಡುತ್ತಿರುವ ಆದಾಯವಾಗಿದೆ ಗ್ಯಾರಂಟಿ ಬಿಟ್ಟಿ ಅಲ್ಲ, ಅದು ದಾಸೋಹ ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ವಿರೋಧ ಮಾಡಿಲ್ಲ. ಆದರೆ ಬಜೆಟ್‌ನಲ್ಲಿರುವ ಯೋಜನೆಗಳು ಜಾರಿಗೆ ಬರಬೇಕೆಂದು ಆಗ್ರಹಿಸಿದ್ದೆವು. ಯೋಜನೆಗಳು ಜನರಿಗೆ ಪೂರಕವಾಗಿರಬೇಕು ಎಂದ ಅವರು ಈ ಕಾರ್ಯಾಗಾರ ಒಂದು ಅವಲೋಕನ ಕಾರ್ಯಕ್ರಮವಾಗಿದ್ದು ಯೋಜನೆಯಲ್ಲಿನ ಕೊರತೆಗಳ ಕಡೆಯೂ ಗಮನ ಹರಿಸಬೇಕು ಎಂದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ನೋಂದಣಿ ಕಡಿಮೆ ಇದೆ. ಹಾಗೂ 2022-23 ರಲ್ಲಿ ಪದವಿ/ಡಿಪ್ಲೊಮ ಮುಗಿಸಿದವರಿಗೆ ಮಾತ್ರ ಅವಕಾಶ ನೀಡಿದ್ದು ಉಳಿದವರು ವಂಚಿತರಾಗುತ್ತಾರೆ. ಭತ್ಯೆ ಸಮಯವನ್ನು 2 ವರ್ಷಕ್ಕಿಂತ ಹೆಚ್ಚಿಸಬೇಕು. ಶಕ್ತಿ ಯೋಜನೆಯಿಂದಾಗಿ ಬಸ್ ಸಂಚಾರ ಪ್ರಮಾಣ ಇಳಿಕೆಯಾಗಿದೆ. ಜನದಟ್ಟಣೆಯಿಂದಾಗಿ ಅಸುರಕ್ಷಿತ ಪ್ರಯಾಣ ಉಂಟಾಗಿದೆ. ಬಿಪಿಎಲ್ ನಿಂದ ಎಪಿಎಲ್ ಆಗುತ್ತಿರುವ ಬಗ್ಗೆ ಯೋಚಿಸಬೇಕಿದ್ದು ಜಿಲ್ಲೆಯಲ್ಲಿ 1700 ಜನ ಎಪಿಎಲ್‌ಗೆ ಬಂದಿದ್ದು ಈ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೊಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಸಿ ಎಸ್ ಚಂದ್ರಭೂಪಾಲ ಸ್ವಾಗತಿಸಿದರು.
ಫಲಾನುಭವಿಗಳ ಅನಿಸಿಕೆ : ಭದ್ರಾವತಿಯ ಶಾಲಿನಿ ಶಕ್ತಿ ಯೋಜನೆ ಬಗ್ಗೆ ಮಾತನಾಡಿ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಹೊಸ ಶಕ್ತಿ ಬಂದಿದೆ. ನಾವು ಮನೆಯ ಪುರುಷರ ಮೇಲೆ ಅವಲಂಬಿತರಾಗದೇ ಎಲ್ಲೆಡೆ ಉಚಿತವಾಗಿ ಓಡಾಡಲು ಸಾಧ್ಯವಾಗಿದೆ. ಪುಣ್ಯಕ್ಷೇತ್ರಗಳ ದರ್ಶನ ಮಾಡಲು ಸಾಧ್ಯವಾಗಿದ್ದು ತುಂಬಾ ಅನುಕೂಲವಾಗಿದೆ ಎಂದರು.
ಗಾಡಿಕೊಪ್ಪದ ಕುಸುಮಾ ಅನ್ನಭಾಗ್ಯ ಯೋಜನೆ ಕುರಿತು ಮಾತನಾಡಿ, ಅನ್ನಭಾಗ್ಯದಿಂದ ಬಡವರ ಹಸಿವು ನೀಗಿದೆ. ರಾಗಿ ಕೊಟ್ಟರೆ ಇನ್ನೂ ಅನುಕೂಲ ಆಗುತ್ತದೆ. ಇಂದಿರಾ ಕಿಟ್ ನೀಡುವುದರಿಂದ ಸಹ ಅನುಕೂಲವಾಗುತ್ತದೆ ಎಂದರು.
ಭದ್ರಾವತಿಯ ಶ್ವೇತಾ ಗೃಹಜ್ಯೋತಿ ಬಗ್ಗೆ ಮಾತನಾಡಿ ಉಚಿತವಾಗಿ 200 ಯುನಿಟ್ ವಿದ್ಯುತ್ ನಿಂದ ನಮಗೆ ಬಹಳ ಅನುಕೂಲವಾಗಿದೆ. ಯುನಿಟ್‌ನ್ನು ಇನ್ನೂ ಹೆಚ್ಚಿಸುವ ಬಗ್ಗೆ ಸರ್ಕಾರ ಯೋಚಿಸಬೇಕು ಎಂದರು.
ಗೃಹಲಕ್ಷ್ಮಿ ಗೋಪಾಳದ ಅಮೃತಾ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡಿ, ಈ ಯೋಜನೆಯಿಂದಾಗಿ ನಾವು ಗಂಡನ ಮೇಲೆ ಅವಲಂಬಿಸದೆ ವಸ್ತುಗಳನ್ನು ತೆಗೆಕೊಳ್ಳಲು, ಮಕ್ಕಳಿಗೆ ಸಹಾಯ ಮಾಡಲು ಸಾಧ್ಯವಾಗಿದೆ. ಈ ಹಣದಿಂದ ನಾನು ಹೊಲಿಗೆ ಯಂತ್ರೆ ತೆಗೆದುಕೊಂಡಿದ್ದೇನೆ.ಬಡ ಮಹಿಳೆಯರಿಗೆ ಇದು ಅತಿ ಉಪಯುಕ್ತವಾಗಿದೆ.
ಸೊರಬ ತಾಲ್ಲೂಕಿನ ಕಪ್ಪಗಳಲೆ ರೇಣುಕಮ್ಮ ಗೃಹಲಕ್ಷಿö್ಮ ಯೋಜನೆ ಬಗ್ಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಿಂದಾಗಿ ನನ್ನ ಮಗಳ ಮದುವೆ ಜವಳಿಗೆ, ಕಿರಾಣಿಗೆ ಹಣ ಹೊಂದಿಸಿದ್ದೇನೆ. ಕುರಿ ಖರೀದಿ ಮಾಡಿ ಸಾಕುತ್ತಿದ್ದೇನೆ. ಧನ್ಯವಾದಗಳು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಎಸ್‌ಸಿ/ಎಸ್ ಟಿ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ)ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, , ಎಂಎಡಿಬಿ ಅಧ್ಯಕ್ಷ ಆರ್ ಎಂ.ಮಂಜುನಾಥ್ ಗೌಡ, ಜಿ.ಪಂ. ಸಿಇಓ ಹೇಮಂತ್ ಎನ್,
ಪುಷ್ಪಾ ಅಮರನಾಥ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸದಸ್ಯರು, ತಾಲ್ಲೂಕು ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು.

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿ ಸಾಧನೆ

0

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಒಟ್ಟು 14 ಬಂಗಾರದ ಪದಕಗಳು, 24 ಬೆಳ್ಳಿ ಪದಕಗಳು ಹಾಗೂ 37 ಕಂಚಿನ ಪದಕಗಳನ್ನು ಗಳಿಸಿದ್ದು, ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ ನವೀನಾ ಎಂ. ಪೈಸ್, ಶಾಲಾ ಮ್ಯಾನೇಜ್ಮೆಂಟ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

Raghavendra Yoga Center ಎಸ್‌ಆರ್‌ವೈ ಕೇಂದ್ರದಿಂದ ರಥಸಪ್ತಮಿ ದಿನ 108 ಸೂರ್ಯ ನಮಸ್ಕಾರ ಯಜ್ಞ ಆಯೋಜನೆ

0

Raghavendra Yoga Center ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ರಾಘವೇಂದ್ರ ಯೋಗ ಕೇಂದ್ರ ಹಾಗು ಪತಂಜಲಿ ಯೋಗ ಸಮಿತಿಯಿಂದ ಜ. 25ರ ಭಾನುವಾರ ಬೆಳಿಗ್ಗೆ 5.30ರಿಂದ 7.30ರವರೆಗೆ ವೀರಶೈವ ಕಲ್ಯಾಣ ಮಂದಿರದಲ್ಲಿ ಸೂರ್ಯ ನಮಸ್ಕಾರ ಯಜ್ಞವನ್ನು ಆಯೋಜಿಸಲಾಗಿದೆ.

ಸೂರ್ಯ ದೇವನನ್ನು ಆರಾಧಿಸುವ ದಿನ ರಥಸಪ್ತಮಿ ನಿಮಿತ್ತ 108 ಸೂರ್ಯ ನಮಸ್ಕಾರ ಯಜ್ಞ ನಡೆಯಲಿದೆ. ಕೇಂದ್ರದ ಎಲ್ಲಾ ಯೋಗ ಬಂದುಗಳು ಹಾಗೂ ಸಾರ್ವಜನಿಕರು ಮುಕ್ತವಾಗಿ ಭಾಗವಹಿಸಲು ಅವಕಾಶವಿದ್ದು, ಸಕಾಲದಲ್ಲಿ ಭಾಗವಹಿಸಿ ಯಜ್ಞವನ್ನು ಯಶಸ್ವಿಗೊಳಿಸಲು ಕೇಂದ್ರದ ಯೋಗ ಸಾಮ್ರಾಟ್ ಗೋಪಾಲಕೃಷ್ಣ ಅವರು ವಿನಂತಿಸಿದ್ದಾರೆ.

ಈ ಅಂಗವಾಗಿ ಜ. 22ರ ನಾಳೆಯಿಂದ ಜ. 24ರವರೆಗೆ ಬೆಳಿಗ್ಗೆ ಮತ್ತು ಸಂಜೆ ಯೋಗ ಕ್ಲಾಸ್ ಸಮಯದಲ್ಲಿ ಉಚಿತವಾಗಿ ಸೂರ್ಯ ನಮಸ್ಕಾರ ಹೇಳಿಕೊಡಲಾಗುತ್ತಿದೆ. ಆಸಕ್ತರು ಮಾಹಿತಿಗೆ ಗೋಪಾಲಕೃಷ್ಣ ಮೊ. 9448414849, ಶಶಿಮೌಳಿ ಮೊ. 9742339404ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Department of Youth Empowerment and Sports ಶಿವಮೊಗ್ಗ ಜಿಲ್ಲೆಗೆ ಕರ್ನಾಟಕ ಕ್ರೀಡಾಕೂಟದಲ್ಲಿ ಎರಡು ಪದಕ

0

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟುಗಳು ಶೋಭಿಸಿದರು.

ಜನವರಿ 18 ರಿಂದ 20 ರವರೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರತಿನಿಧಿಸಿದ ಶ್ರೀಮತಿ ಮೀನಾಕ್ಷಿ 57-60 ಕೆಜಿ ತೂಕದ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಮೊದಲ ಬಾರಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅಲ್ಲದೆ, ಯೋಗಾನಂದ +90 ಕೆಜಿ ತೂಕದ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರೊಂದಿಗೆ ದಿಗಂತ್ ಮತ್ತು ಶೇಕ್ ಮೊಹಮ್ಮದ್ ಸಾದ್ ಉತ್ತಮ ಪ್ರದರ್ಶನ ನೀಡಿದ್ದಾರೆ. ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆಯನ್ನು ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ ಮಾಡಿದರು.

ಈ ಸಂದರ್ಭದಲ್ಲಿ ಶ್ರೀಮತಿ ಕನ್ನಿಕಾ ಪರಮೇಶ್ವರಿ, ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್, ತುಮಕೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ತುಮಕೂರು ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಚಂದ್ರಕುಮಾರ್ ಇದ್ದರು.

Department of Youth Empowerment and Sports ವಿಶೇಷವಾಗಿ ಶಿವಮೊಗ್ಗದಿಂದ ಈ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಪ್ರೀತಿ ಶ್ರೀ ಭಾಗವಹಿಸಿದ್ದರು ಮತ್ತು ಕೋಚ್ ಆಗಿ ಸಚಿನ್ ಟಿ ಎಸ್ ಇದ್ದರು. ವಿಜೇತ ಕ್ರೀಡಾಪಟುಗಳಿಗೆ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಶುಭಕೋರಿದ್ದಾರೆ

ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

0

ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ರವರೆಗೆ ಗುಡ್‌ಲಕ್ ಸರ್ಕಲ್ ಹತ್ತಿರ, ಎಸ್. ವಿ. ಬಡಾವಣೆಯ ಮೆಸ್ಕಾಂ ಕಚೇರಿಯಲ್ಲಿ ಜ.23 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಜನಸಂಪರ್ಕ ಸಭೆಗೆ ಹಾಜಾರಾಗಿ ತಮ್ಮ ಅಹವಾಲುಗಳನ್ನು ನೀಡಬಹುದಾಗಿರುತ್ತದೆ. ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

Pradhan Mantri Shramayogi Man-Dhan Yojana ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ

0

Pradhan Mantri Shramayogi Man-Dhan Yojana ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ.
18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ ರೂ. 200/- ರವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
Pradhan Mantri Shramayogi Man-Dhan Yojana ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ. ಸದಸ್ಯರು, ಕೃಷಿ ಕಾರ್ಮಿಕರು. ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವಮೊಗ್ಗ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Klive Special Article ಶ್ರೀಮದ್ಭಗವದ್ಗೀತೆ ಮತ್ತುಅಪರಾಧ ಶಾಸ್ತ್ರ

0


ಭಾಗ: 3
ಲೇ: ಡಾ.ರಾಮಕೃಷ್ಣ ಮುದ್ದೇಪಾಲ.

Klive Special Article ಅಪರಾಧ ನಿಯಂತ್ರಣದ ದೃಷ್ಟಿಯಿಂದ ಹಲವು ಆಯಾಮಗಳಲ್ಲಿ ಭಗವದ್ಗೀತೆಯನ್ನು ಪ್ರಯೋಗಿಸಬಹುದು.
೧. ನೈತಿಕ ಮೌಲ್ಯಗಳಿಂದ ವ್ಯಕ್ತಿತ್ವ ಪರಿವರ್ತನೆ:
ಅಭಯಂ ಸತ್ವಸಂಶುದ್ಧಿರ್ಜ್ಞಾನಯೋಗವ್ಯವಸ್ಥಿತಿಃ
ದಾನಂ ದಮಶ್ಚ ಯಜ್ಞಶ್ಚ ಸ್ವಾಧ್ಯಾಯಸ್ತಪ ಆರ್ಜವಮ್‌
ಅಹಿಂಸಾ ಸತ್ಯಮಕ್ರೋಧಸ್ತ್ಯಾಗಃ ಶಾಂತಿರಪೈಶುನಮ್‌
ದಯಾ ಭೂತೇಷ್ವಲೋಲುಪ್ತ್ವಂ ಮಾರ್ದವಂ ಹ್ರೀರಚಾಪಲಮ್‌
ತೇಜಃ ಕ್ಷಮಾ ಧೃತಿಃ ಶೌಚಮದ್ರೋಹೋ ನಾತಿಮಾನಿತಾ
ಭವಂತಿ ಸಂಪದಂ ದೈವೀಮಭಿಜಾತಸ್ಯ ಭಾರತII 16.1,2,3II
ದೈವೀಸಂಪತ್ತುಗಳೆಂದು ಕರೆಯಲ್ಪಡುವ ೨೬ ಗುಣಗಳು ನೈತಿಕ ಮೌಲ್ಯಗಳಾಗಿದ್ದು ಅವುಗಳಲ್ಲಿ ಕೆಲವನ್ನು ಅಳವಡಿಸಿಕೊಂಡರೂ ಅವು ವ್ಯಕ್ತಿತ್ವ ಪರಿವರ್ತನೆ ಮಾಡಬಲ್ಲವು ಅಥವಾ ಆದರ್ಶ ವ್ಯಕ್ತಿತ್ವವನ್ನು ರೂಪಿಸಿ ಅಪರಾಧೀ ಮಾನಸಿಕತೆಯನ್ನು ತೊಡೆಯಬಲ್ಲವು. ಇವುಗಳಿಗೆ ವಿರುದ್ಧವಾಗಿರುವ ಆಸುರೀ ಸಂಪತ್ತುಗಳು ಅಪರಾಧಕ್ಕೆ ಪೂರಕ ಅಂಶಗಳಾಗಿವೆ.
ದಂಭೋ ದರ್ಪೋತಿಮಾನಶ್ಚ ಕ್ರೋಧಃ ಪಾರುಷ್ಯಮೇವಚ‌I
ಅಜ್ಞಾನಂ ಚಾಭಿಜಾತಸ್ಯ ಪಾರ್ಥಸಂಪದಮಾಸುರೀಮ್II16.4II

  1. ಅಪರಾಧ ಮೂಲದ ವಿಶ್ಲೇ಼ಷಣೆ: ೧೪ನೇ ಅಧ್ಯಾಯದಲ್ಲಿ ತ್ರಿಗುಣಗಳನ್ನು ವಿಶ್ಲೇಷಿಸಲಾಗಿದೆ. ಸತ್ವಗುಣ ನೈತಿಕ ಬದುಕಿಗೆ ಪೂರಕವಾದರೆ ರಜೋಗುಣ ಕಾಮ, ಕ್ರೋಧದಿಂದ ಮತ್ತು ತಮೋಗುಣ ಅಜ್ಞಾನದಿಂದ ಅಪರಾಧವನ್ನು ಪ್ರೇರೇಪಿಸುತ್ತವೆ.
    ೩. ನಿಷ್ಕಾಮ ಕರ್ಮಯೋಗ, ಕರ್ತವ್ಯ ಪ್ರಜ್ಞೆ : ಗೀತೆಯ ಪ್ರಸಿದ್ಧ ವಾಕ್ಯವಾದ ” ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ” (೨.೪೭) ವ್ಯಕ್ತಿಗೆ ಕರ್ತವ್ಯಪ್ರಜ್ಞೆಯನ್ನು ಮೂಡಿಸಿ ಅಪರಾಧ ಪ್ರಜ್ಞೆಯನ್ನು ಹಿಮ್ಮೆಟ್ಟಿಸುತ್ತದೆ. ಪ್ರತಿಯೊಂದು ಕೃತ್ಯಕ್ಕೂ ಫಲವಿದೆ ಎಂಬ ಭಾವನೆ ವ್ಯಕ್ತಿಯನ್ನು ಅಪರಾಧ ಮಾಡಲು ಹಿಂಜರಿಯುವಂತೆ ಮಾಡುತ್ತದೆ.
    ೪. ಧರ್ಮಾಧರ್ಮ ವಿವೇಚನೆ: ನೈತಿಕ ಮೌಲ್ಯಗಳ ಸಾರವೆಂದು ಗುರುತಿಸಲ್ಪಡುವ “ಧರ್ಮ” ವನ್ನು ಭಗವದ್ಗೀತೆ ಬೋಧಿಸುತ್ತದೆ.
    ಶ್ರೇಯಾನ್‌ ಸ್ವಧರ್ಮೋ ವಿಗುಣಃ ಪರಧರ್ಮಾತ್‌ ಸ್ವನುಷ್ಠಿತಾತ್‌I
    ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃII3.35II
    ಸ್ವಧರ್ಮವು ವಿಗುಣವಾಗಿದ್ದರೂ ಚೆನ್ನಾಗಿ ಅನುಷ್ಠಾನ ಮಾಡಿದ ಪರಧರ್ಮಕ್ಕಿಂತ ಒಳ್ಳೆಯದು. ಸ್ವಧರ್ಮದಲ್ಲಿ ಮರಣವು ಶ್ರೇಯಸ್ಕರವಾದದ್ದು; ಪರಧರ್ಮವು ಭಯಂಕರವಾದದ್ದು.
    ಸ್ವಧರ್ಮಾನುಷ್ಠಾನವು ವ್ಯಕ್ತಿಯು ಅಪರಾಧದಂತಹ ಅಧಃಪಾತಕ್ಕೆ ಈಡಾಗುವುದನ್ನು ತಡೆಗಟ್ಟುತ್ತದೆ.
    ೫.ಭಕ್ತಿಮಾರ್ಗ: ಭಕ್ತಿಮಾರ್ಗವನ್ನು ಆಶ್ರಯಿಸಿದವನು ದುಷ್ಪ್ರವೃತ್ತಿಯವನಾದರೂ ಪರಿವರ್ತನೆ ಹೊಂದಿ ಪಾಪ ಬುದ್ಧಿಯನ್ನು ಕಳೆದುಕೊಳ್ಳುತ್ತಾನೆ.
    ಅಪಿ ಚೇತ್ಸುದುರಾಚಾರೋ ಭಜತೇ ಮಾಮನನ್ಯಭಾಕ್‌I
    ಸಾಧುರೇವ ಸ ಮಂತವ್ಯ: ಸಮ್ಯಗ್ವ್ಯವಸಿತೋ ಹಿ ಸಃII9.30II
    ಅತ್ಯಂತ ದುರಾಚಾರಿಯಾಗಿದ್ದರೂ ಅನನ್ಯಭಕ್ತಿಯಿಂದ ನನ್ನನ್ನು ಭಜಿಸಿದರೆ ಅವನು ಸಾಧುವೆಂದೇ ತಿಳಿಯತಕ್ಕದ್ದು, ಯಾಕೆಂದರೆ ಅವನು ನಿಶ್ಚಯ ಬುದ್ಧಿಯುಳ್ಳವನು.
    ಕ್ಷಿಪ್ರಂ ಭವತಿ ಧರ್ಮತ್ಮಾ ಶಶ್ವಚ್ಛಾಂತಿಂ ನಿಗಚ್ಛತಿI
    ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿII9.31II
    Klive Special Article ಅಂಥವನು ಬೇಗ ಧರ್ಮಾತ್ಮನಾಗಿ ಶಾಶ್ವತವಾದ ಶಾಂತಿಯನ್ನು ಹೊಂದುತ್ತಾನೆ. ನನ್ನ ಭಕ್ತನು ನಾಶವಾಗುವುದಿಲ್ಲ ಎಂದು ತಿಳಿದುಕೊ.
    ೬. ಜ್ಞಾನಯೋಗ: ಒಂದು ದೃಷ್ಟಿಯಿಂದ ನೋಡಿದರೆ ಅಪರಾಧಕ್ಕೆ ಅಜ್ಞಾನವೇ ಮೂಲವಾಗಿರುತ್ತದೆ. ” ನ ಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ (೪.೩೮)” ಎಂದರೆ ಈ ಲೋಕದಲ್ಲಿ ಜ್ಞಾನಕ್ಕೆ ಸಮನಾದ ಪವಿತ್ರವಸ್ತುವು ಯಾವುದೂ ಇರುವುದಿಲ್ಲ. ಜ್ಞಾನವನ್ನು ಪಡೆದವನು ಪರಮಶಾಂತಿಯನ್ನು ಪಡೆಯುತ್ತಾನೆ.
    ೭. ಮನೋನಿಯಂತ್ರಣ: ಇದು ಅಪರಾಧನಿಯಂತ್ರಣದಲ್ಲಿ ಅತಿ ಮಹತ್ವದ ವಿಷಯ ಆಗಿದ್ದು ಮನುಷ್ಯ ಯಾಕೆ ಪಾಪ ಮಾಡುತ್ತಾನೆ ಎನ್ನುವ ಅರ್ಜುನನ ಪ್ರಶ್ನೆಗೆ ಉತ್ತರ ಕೊಡುತ್ತ ಶ್ರೀಕೃಷ್ಣನು “ಕಾಮ ಏಷ ಕ್ರೋಧ ಏಷ ರಜೋಗುಣಸಮುದ್ಭವಃ(೩.೩೭)” ಅಂದರೆ ರಜೋಗುಣದಿಂದ ಹುಟ್ಟಿದ ಕಾಮ ಕ್ರೋಧಗಳೇ ಪಾಪಕ್ಕೆ ಕಾರಣವೆಂದು ವಿವರಿಸಿ ಇವುಗಳ ಆಶ್ರಯವಾಗಿರುವ ಇಂದ್ರಿಯ, ಮನಸ್ಸು ಬುದ್ಧಿಗಳನ್ನು ನಿಯಂತ್ರಿಸಿದರೆ ಅವುಗಳನ್ನು ನಿಯಂತ್ರಿಸಬಹುದೆಂದು ತಿಳಿಸುತ್ತಾನೆ.
    ಅಸಂಶಯಂ ಮಹಾಬಾಹೋ ಮನೋ ದುರ್ನಿಗ್ರಹಂ ಚಲಮ್‌I
    ಅಭ್ಯಾಸೇನ ತು ಕೌಂತೇಯ ವೈರಾಗ್ಯೇಣ ಚ ಗೃಹ್ಯತೇII6.35II
    ಮನಸ್ಸು ದುರ್ನಿಗ್ರಹವಾದದ್ದು ಮತ್ತು ಚಂಚಲವಾದದ್ದು. ಅಭ್ಯಾಸದಿಂದಲೂ ಮತ್ತು ವೈರಾಗ್ಯದಿಂದಲೂ ಅದನ್ನು ನಿಗ್ರಹಿಸಬಹುದು.
    ೮.ಸಮದರ್ಶಿತ್ವ: ವಿದ್ಯಾವಿನಯಸಂಪನ್ನೇ…..(೫.೧೮) ಮುಂತಾದ ಶ್ಲೋಕಗಳಲ್ಲಿ ಗೀತೆಯು ಎಲ್ಲರನ್ನು ಸಮನಾಗಿ ನೋಡುವುದನ್ನು ಬೋಧಿಸುತ್ತದೆ. ಸಮದರ್ಶಿತ್ವ, ಸಹಾನುಭೂತಿ, ಸೌಹಾರ್ದತೆ ಮತ್ತು ಸಹಕಾರಗಳಿಂದ ಅಪರಾಧವನ್ನು ತೊಡೆಯಬಹುದು. ಸಮದರ್ಶಿತ್ವವನ್ನು ೬ನೇ ಅಧ್ಯಾಯದ ೨೯,೩೦,೩೧,೩೨ನೇ ಶ್ಲೋಕಗಳಲ್ಲಿ ಚೆನ್ನಾಗಿ ವಿವರಿಸಲಾಗಿದೆ.
    ಆತ್ಮೌಪಮ್ಯೇನ ಸರ್ವತ್ರ ಸಮಂ ಪಶ್ಯತಿ ಯೋsರ್ಜುನI
    ಸುಖಂ ವಾ ಯದಿ ವಾ ದುಃಖಂ ಸ ಯೋಗೀ ಪರಮೋ ಮತಃII6.32II
    ಯಾವನು ಎಲ್ಲ ಪ್ರಾಣಿಗಳಲ್ಲಿಯೂ ಸುಖವನ್ನಾಗಲಿ ದುಃಖವನ್ನಾಗಲಿ ತನ್ನಂತೆಯೇ ಸಮವಾಗಿ ನೋಡುವನೋ ಆ ಯೋಗಿಯು ಶ್ರೇಷ್ಠನೆಂದು ನನ್ನ ಅಭಿಪ್ರಾಯ.

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ ಜ.23 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480841339.