Saturday, February 14, 2026
Saturday, February 14, 2026
Home Blog Page 117

Keladi Shivappa Nayak University of Agricultural and Horticultural Sciences ಶಿವಮೊಗ್ಗದಲ್ಲಿ” ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಕಾರ್ಯಕ್ರಮ, ನವೆಂಬರ್ 8 ರಂದು ಸಿಎಂ ಸಿದ್ಧರಾಮಯ್ಯ ಅವರಿಂದ ಉದ್ಘಾಟನೆ

0

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಬಿ.ಸಿ. ಟ್ರಸ್ಟ್ ಇವರ ಸಹಯೋಗದೊಂದಿಗೆ ನ.7 ರಿಂದ 10 ರವರೆಗೆ ಕೃಷಿ ಮಹಾವಿದ್ಯಾಲಯ ನವಲೆ ಆವರಣದಲ್ಲಿ ಕೃಷಿ-ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಆಯೋಜಿಸಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ನ.8 ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೆರವೇರಿಸುವರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಪುಸ್ತಕ/ತಾಂತ್ರಿಕ ಕೈಪಿಡಿಗಳನ್ನು ಬಿಡುಗಡೆ ಮಾಡುವರು. ಕೃಷಿ ಸಚಿವ ಹಾಗೂ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಎನ್.ಚೆಲುವರಾಯಸ್ವಾಮಿ ವಸ್ತು ಪ್ರದರ್ಶನವನ್ನು ಹಾಗೂ ಗಣಿ, ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ತಂತ್ರಜ್ಞಾನ ಉದ್ಯಾನವನ್ನು ಉದ್ಘಾಟಿಸುವರು.

ಗ್ರಾಮಾಂತರ ಶಾಸಕರಾದ ಶಾರದಾ ಪರ‍್ಯಾನಾಯ್ಕ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದು, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್‌ಕರ್, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸ್‌ರಾಜು, ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ಸಂಸದ ಬಿ.ವೈ.ರಾಘವೇಂದ್ರ ಇವರುಗಳು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.

Keladi Shivappa Nayak University of Agricultural and Horticultural Sciences ಮುಖ್ಯ ಅತಿಥಿಗಳಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ವಿವಿಧ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಮಹಾನಗರ ಪಾಲಿಕೆ ಆಯುಕ್ತರು, ವಿಶ್ವವಿದ್ಯಾಲಯದ ಅಧಿಕಾರಿ ವರ್ಗದವರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕ ವರ್ಗದವರು ಪಾಲ್ಗೊಳ್ಳುವರು.

ತಂಬಾಕು ನಿಷೇಧ ಕಾಯಿದೆ ಉಲ್ಲಂಘನೆ : ಜಿಲ್ಲೆಯಲ್ಲಿ 58 ಪ್ರಕರಣ ದಾಖಲು,₹ 6150 ದಂಡ ವಸೂಲಿ

0

ದಿನಾಂಕ 29/10/2025 ರಂದು ಶಿವಮೊಗ್ಗ ನಗರದ ಮಂಡ್ಲಿ ಹಾಗೂ ಬೈಪಾಸ್ ರಸ್ತೆಯ ಸುತ್ತಮುತ್ತ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 58 ಪ್ರಕರಣಗಳನ್ನು ದಾಖಲಿಸಿ 6150 ರೂ ದಂಡವನ್ನು ಸಂಗ್ರಹಿಸಲಾಯಿತು. 7 ತಂಬಾಕು ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು.

ತಂಡದ ನೇತೃತ್ವವನ್ನು ಡಾ. ನಾಗರಾಜ್ ನಾಯಕ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳು ವಹಿಸಿದ್ದರು.

ಡಾ.ಚಂದ್ರಶೇಖರ್, ತಾಲೂಕು ಆರೋಗ್ಯ ಅಧಿಕಾರಿಗಳು, ಡಾ. ಹರ್ಷವರ್ಧನ್ ವೈದ್ಯಾಧಿಕಾರಿಗಳು ವಿ ಡಿ ಎಲ್, ಶ್ರೀ ಬಸವರಾಜ್ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು, ಶ್ರೀ ಹೇಮಂತರಾಜ್ ಅರಸ್ K M, ಜಿಲ್ಲಾ ಸಲಹೆಗಾರರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ಶ್ರೀ ರವಿರಾಜ್, ಸಮಾಜ ಕಾರ್ಯಕರ್ತರು, ಶ್ರೀ ವಿಕಾಸ್, ಆರೋಗ್ಯ ಮೇಲ್ವಿಚಾರಕರು,ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ,ಪೊಲೀಸ್ ಇಲಾಖೆ ಹಾಗು ಮಹಾನಗರ ಪಾಲಿಕೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ COTPA ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.

Department of Industry and Commerce ಜಿಲ್ಲೆಯಲ್ಲಿ ಮೂಲ ಸೌಕರ್ಯಗಳಿವೆ. ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ- ಎನ್.ಹೇಮಂತ್

0

Department of Industry and Commerce ಶಿವಮೊಗ್ಗ ಜಿಲ್ಲೆಯಲ್ಲಿ ಅಗತ್ಯ ಮೂಲಸೌಕರ್ಯಗಳಿದ್ದು, ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ಹೇಳಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೆಸಿಟಿಯು ಬೆಂಗಳೂರು ಹಾಗೂ ಮಾಚೇನಹಳ್ಳಿ ಕೈಗಾರಿಕಾ ಸಂಘದ ಸಹಯೋಗದಲ್ಲಿ ಮಾಚೇನಹಳ್ಳಿ ಶಾಂತಲಾಸ್ ಸ್ಪರೋಕಾಸ್ಟ್ ಲರ್ನಿಂಗ್ ಸೆಂಟರ್‌ನಲ್ಲಿ ಏರ್ಪಡಿಸಿದ್ದ ಎಂಎಸ್‌ಎಂಇಗಳ ಕಾರ್ಯಕ್ಷಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವುದು ಯೋಜನೆ ಅಡಿಯಲ್ಲಿ ರಫ್ತು ಉತ್ತೇಜನ ಮತ್ತು ಸುಗಮಗೊಳಿಸುವಿಕೆಗಾಗಿ ಒಂದು ದಿನದ ಜಾಗೃತಿ ಮೂಡಿಸುವ ಕಾರ್ಯಗಾರದಲ್ಲಿ ಮಾತನಾಡಿದರು.

ಉದ್ಯಮಕ್ಕೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಸರ್ಕಾರಗಳು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜನರು ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ರಾಜ್ಯದ ಹಲವು ಕುಶಲಕರ್ಮಿಗಳು ತಯಾರಿಸಿರುವ ಉತ್ಪನ್ನಗಳನ್ನು ಕ್ರಾಫ್ಟ್ ಆಫ್ ಮಲ್ನಾಡ್ ಎಂಬ ಗುರುತಿನಲ್ಲಿ ಪ್ರಚಾರ ಕೈಗೊಂಡರು. ರಫ್ತು ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ಉದ್ಯಮದ ಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

ಮಾಚೇನಹಳ್ಳಿ ಕೈಗಾರಿಕಾ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗುವ ಯೋಜನೆಗಳ ಸದುಪಯೋಗಪಡಿಸಿಕೊಂಡು ರಫ್ತು ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

Department of Industry and Commerce ರಾಜೇಶ್ ಎಸ್ ಟಿ, ದಿನೇಶ್ ಎಚ್.ಎಲ್., ಜಿಲ್ಲಾ ಕೈಗಾರಿಕಾ ಕೇಂದ್ರದ ರವೀಂದ್ರನಾಥ್ ಹಾಗೂ ಅಧಿಕಾರಿಗಳು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಸುರೇಶ್ ಮತ್ತು ಪದಾಧಿಕಾರಿಗಳು, ವಿಟಿಪಿಸಿ ಬೆಂಗಳೂರಿನ ಅರವಿಂದ್ ಭಟ್ ಮತ್ತು ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

Gangadharendra Saraswati Swamiji ಭಗವದ್ಗೀತೆಯ ಪಠಣದಿಂದ ವ್ಯಕ್ತಿತ್ವ ವಿಕಸನ,ಆತ್ಮ ಜಾಗೃತಿ.– ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು.

0

Gangadharendra Saraswati Swamiji ಭಗವದ್ಗೀತೆಯು ಓದು ಸಹನೆ ಸ್ಥೈರ್ಯ ಹಾಗೂ ವಿವೇಚನೆಗಳನ್ನು ವ್ಯಕ್ತಿಯಲ್ಲಿ ಬೆಳೆಸುತ್ತದೆ. ಭಗವದ್ಗೀತೆಯ ಪಠಣದಿಂದ ವ್ಯಕ್ತಿತ್ವ ವಿಕಸನ , ಆತ್ಮ ಜಾಗೃತಿಯಾಗುತ್ತದೆ. ಅಂತಹ ಸಹನೆ ಹಾಗೂ ಸೌಹಾರ್ದದಿಂದಲೇ ಮನುಕುಲಕ್ಕೆ ಒಳಿತಾಗುತ್ತದೆ ಎಂದು ಸ್ವರ್ಣಪಲ್ಲಿ ಮಠಾಧೀಶ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ವಿವರಿಸಿದರು.

ದಿನಾಂಕ 28 .10. 2025.ರಂದು ಸಂಜೆ 3 ಗಂಟೆಗೆ ಶಂಕರ ಕಣ್ಣಿನ ಆಸ್ಪತ್ರೆಯ ರೋಗಿಗಳು ಹಾಗೂ ಸಿಬ್ಬಂದಿಗಳಿಗೆ ಭಗವದ್ಗೀತೆಯ ಪುಸ್ತಕ ವಿತರಿಸಿ ಮಾತನಾಡುತ್ತಿದ್ದರು.

ನವೆಂಬರ್ 30 ರಂದು ಶಿವಮೊಗ್ಗದಲ್ಲಿ ನಡೆಯುವ ಗೀತ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕರೆ ನೀಡಿದರು.

Gangadharendra Saraswati Swamiji ಶಂಕರ ಕಣ್ಣಿನ ಆಸ್ಪತ್ರೆಯ ವ್ಯವಸ್ಥಾಪಕ ಸಮಿತಿ ಸದಸ್ಯರಾದ ಡಾ. ವೆಂಕಟೇಶಮೂರ್ತಿ, ಡಾ. ಮಂಜುನಾಥ್, ಡಾ. ಮಹೇಶ್ ರವರು ಶ್ರೀಗಳನ್ನು ಆದರಿಸಿ ಫಲ ಸಮರ್ಪಣೆ ಮಾಡಿದರು. ಡಾ. ವೆಂಕಟೇಶಮೂರ್ತಿರವರು ಸ್ವಾಗತಿಸಿದರು. ಅಭಿಯಾನ ಸಮಿತಿ ಪರವಾಗಿ ಶ್ರೀ ಲಕ್ಷ್ಮೀನಾರಾಯಣ ಕಾಶಿಯವರು ವಂದಿಸಿದರು. ಕಾರ್ಯಕ್ರಮದಲ್ಲಿ ಸಭೆಯಲ್ಲಿ ಡಾ. ಟಿ.ಜೆ. ಲಕ್ಷ್ಮೀನಾರಾಯಣ, ಸೋಮಶೇಖರ ನಾಡಿಗ್, ಜೋಶಿ ಮುಂತಾದವರಿದ್ದರು.

ಸಿದ್ಲಿಪುರ ಕಟ್ಟಡ ಕುಸಿತ,ಬಲಿಯಾದ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ- ಶಾಸಕಿ ಶಾರದಾ ಪೂರ್ಯಾನಾಯ್ಕ

0

ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತದಿಂದ ಕಾರ್ಮಿಕನೊರ್ವ ಸಾವನ್ನಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ ತಿಳಿಸಿದರು.
ಶಿವಮೊಗ್ಗ ನಗರದ ತಾಲ್ಲೂಕು ಪಂಚಾಯತಿಯಲ್ಲಿ ಏರ್ಪಡಿಸಿದ್ದ 2025-26 ನೇ ಸಾಲಿನ ಮೊದಲನೇ ಮತ್ತು ಎರಡನೇ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಮಿಕ ಇಲಾಖೆಯು ಜಿಲ್ಲೆಯಲ್ಲಿ ಇಂತಹ ಘಟನೆಯ ಮುಂದೆಂದು ನಡೆಯದಂತೆ ಜಾಗೃತಿ ವಹಿಸಬೇಕು. ಸಾವನ್ನಪ್ಪಿರುವ ವ್ಯಕ್ತಿಗೆ ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯವನ್ನು ನೀಡಬೇಕು ಎಂದರು.
ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಮಂಡಳಿಗಳ ಯೋಜನೆ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸಬೇಕು. ವಾಹನ ಬ್ರಾಂಡಿAಗ್ ಹಾಗೂ ಆಟೋ ಪ್ರಚಾರ ಮೂಲಕ ಜಿಲ್ಲಾದ್ಯಂತ ಈ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು.
ಮಿಷನ್ ಸುರಕ್ಷ ಅಭಿಯಾನಕ್ಕೆ ಆಯನೂರು, ಕುಂಸಿ, ಚೋರಡಿ ಮತ್ತು ತುಪ್ಪೂರು ಗ್ರಾಮ ಪಂಚಾಯಿತಿಗಳಿಗೆ ಕಾರ್ಮಿಕ ನಿರೀಕ್ಷಕರನ್ನು ನೋಡಲ್ ಆಫೀಸರ್ ಆಗಿ ನೇಮಕ ಮಾಡಲಾಗಿದ್ದು, ಕಾರ್ಮಿಕ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ಕುರಿತು ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕ ಆಯ್ಕೆ, ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರದ ನೀಡುವ ಸೌಲಭ್ಯ ಸರಿಯಾದ ನಿಟ್ಟಿನಲ್ಲಿ ದೊರಕಬೇಕು. ಗ್ರಾಮೀಣ ಹಾಗೂ ನಗರದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಇದರಿಂದ ವಂಚಿತರಾಗಬಾರದು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಕ್ರಿಯಿಸಿ, 124 ಅತಿಥಿ ಶಿಕ್ಷಕರ ಹುದ್ದೆ ಖಾಲಿ ಇದ್ದು, 114 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಹುದ್ದೆ ಭರ್ತಿ ಮಾಡುತ್ತೇವೆ. ಸರ್ಕಾರದಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯವನ್ನು ವ್ಯರ್ಥ ಮಾಡದೆ ಸರಿಯಾದ ಕ್ರಮದಲ್ಲಿ ತಲುಪಿಸಲಾಗುತ್ತಿದೆ. 20,146 ಮಕ್ಕಳಿಗೆ ಉಚಿತ ಪುಸ್ತಕ, 22,144 ಮಕ್ಕಳಿಗೆ ಉಚಿತ ಬ್ಯಾಗ್, 22,146 ಮಕ್ಕಳಿಗೆ ಉಚಿತ ಶೂ ಹಾಗೂ ಸಾಕ್ಸ್ ನೀಡಲಾಗಿದ್ದು, 32,028 ಮಕ್ಕಳು ಕ್ಷೀರಭಾಗ್ಯ ಹಾಗೂ 32,028 ಮಕ್ಕಳು ಬಿಸಿ ಊಟ ಯೋಜನೆ ಫಲಾನುಭವಿಗಳಾಗಿದ್ದಾರೆ. ಇದರೊಂದಿಗೆ ವಾರದಲ್ಲಿ 5 ದಿನ ಹಾಲಿನೊಂದಿಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಶಾಲಾ ಅಡುಗೆ ಸಿಬ್ಬಂದಿಗೆ ಜೂನ್-2025 ರಿಂದ ರೂ.1,000 ಸಂಭಾವನೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕುರಿತು ಮಾತನಾಡಿದ ಅವರು, ಭಾಗ್ಯಲಕ್ಷ್ಮೀ ಬಾಂಡ್ ಫಲಾನುಭವಿಗಳಿಗೆ ಸರಿಯಾಗಿ ತಲುಪಿಸುವ ಕೆಲಸ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜವಾಬ್ದಾರಿಯಾಗಿದ್ದು, ಇದರಿಂದ ಅನೇಕ ಕುಟುಂಬಗಳಿಗೆ ಅನುಕೂಲವಾಗುತ್ತದೆ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಡಿಪಿಒ ಪ್ರತಿಕ್ರಿಯಿಸಿ, ಏಪ್ರಿಲ್ 2025 ರಿಂದ ಸೆಪ್ಟಂಬರ್ 2025 ರವರೆಗೆ ಗ್ರಾಮೀಣ ಹಾಗೂ ನಗರ ಸೇರಿದಂತೆ 879 ಜನ ಸುಕನ್ಯಾ ಸಮೃದ್ಧಿಗೆ ಅರ್ಜಿಯನ್ನು ಹಾಕಿದ್ದು, 1.37 ಲಕ್ಷ ಬಾಂಡ್ ಇದಾಗಿದೆ. ಅಂಗನವಾಡಿ ಕಾರ್ಯಕರ್ತರು ಇದರ ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊತ್ತುಕೊಂಡಿದ್ದಾರೆ. ಅದರಂತೆ ಅಂಗನವಾಡಿಯಲ್ಲಿ ಈ ಬಾಂಡ್‌ನ ಅರ್ಜಿ ದೊರೆಯಲಿದ್ದು, ಅಲ್ಲೆ ಭರ್ತಿ ಮಾಡಿ ಪಡೆಯಲಾಗುತ್ತದೆ ಎಂದರು.
ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಜುಲೈ ಮಾಹೆವರೆಗೂ ಜಿಲ್ಲೆಯಲ್ಲಿ 1400 ಖಾತೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಉಳಿದಂತೆ ಐಟಿ ಹಾಗೂ ಜಿಎಸ್‌ಟಿ ಇರುವುದರಿಂದ ಸರ್ಕಾರ ಆದೇಶದಂತೆ ಪಾಲನೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ಮಧು, ನಾಮ ನಿರ್ದೇಶಿತ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಹಾಗೂ ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

ದೈನಿಕ ಮುದ್ರಣಗೊಳ್ಳುವ ಪತ್ರಿಕಾ ಸಂಪಾದಕರ ಅಧ್ಯಕ್ಷರಾಗಿ “ತುಂಗಾತರಂಗ”ದ ಎಸ್.ಕೆ.ಗಜೇಂದ್ರ ಸ್ವಾಮಿ ಆಯ್ಕೆ

0

ದಿನನಿತ್ಯ ಪ್ರಕಟಗೊಳ್ಳುವ ದಿನ ಪತ್ರಿಕೆಗಳ ಸಂಪಾದಕರಗಳ ಒಕ್ಕೂಟವಾದ ಶಿವಮೊಗ್ಗ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿ ತುಂಗಾತರಂಗ ದಿನ ಪತ್ರಿಕೆಯ ಸಂಪಾದಕ ಎಸ್ ಕೆ ಗಜೇಂದ್ರ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸಹ್ಯಾದ್ರಿ ದಿನಪತ್ರಿಕೆಯ ಸಂಪಾದಕ ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದ್ದು, ಖಜಾಂಚಿಯಾಗಿ ಹೊಸ ನಾವಿಕ ದಿನಪತ್ರಿಕೆಯ ಸಂಪಾದಕ ರಾಕೇಶ್ ಡಿಸೋಜಾ ಅವರನ್ನು ನೇಮಕ ಮಾಡಲಾಗಿದೆ.
ಹಿರಿಯ ಪತ್ರಿಕಾ ಸಂಪಾದಕರಾದ ಜಿ. ಪದ್ಮನಾಭ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಪತ್ರಿಕಾ ಭವನದಲ್ಲಿ ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಈ ಮೂವರನ್ನು ಆಯ್ಕೆ ಮಾಡಲಾಗಿದೆ.
ಸಂಘದ ಉಪಾಧ್ಯಕ್ಷರಾಗಿ ರಂಜಿತ್, ಭರತೇಶ್, ಹಿತಕರ್ ಜೈನ್, ಸುಭಾಷ್
ಕಾರ್ಯದರ್ಶಿಗಳಾಗಿ ನಾಗರಾಜ್ ಶೆಣೈ, ಲಿಯಾಕತ್, ರಾಘವೇಂದ್ರ, ಸಹ ಕಾರ್ಯದರ್ಶಿಗಳಾಗಿ ಜಿ. ಚಂದ್ರಶೇಖರ, ಹೆಚ್.ಎನ್. ಮಂಜುನಾಥ್ ಆಯ್ಕೆ ಯಾಗಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಂಘದ ಹಿರಿಯ ನಿರ್ದೇಶಕರಾದ ಎನ್. ಮಂಜುನಾಥ್ ಕಾರ್ಯದರ್ಶಿ ನಾಗರಾಜ್ ನೇರಿಗೆ, ಖಜಾಂಚಿ ಜೇಸುದಾಸ್ ಅವರು ನೂತನ ಪದಾಧಿಕಾರಿಗಳಿಗೆ ಅಭಿನಂದಿಸಿ, ಸಂಘದ ಮೂಲಕ ಶಿವಮೊಗ್ಗ ಜಿಲ್ಲಾ ಪತ್ರಿಕೆಗಳ ಒಳಿತಿಗೆ ಕಾರ್ಯನಿರ್ವಹಿಸಲು ನಿರ್ವಹಿಸಲು ಕೋರಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಪ್ರಕಟವಾಗುವ ದಿನಪತ್ರಿಕೆಗಳ 25ಕ್ಕೂ ಹೆಚ್ಚು ಸಂಪಾದಕರು ಹಾಜರಿದ್ದರು.

Shikaripura Animal Husbandry and Veterinary Services Department ಶಿಕಾರಿಪುರ ತಾಲ್ಲೂಕಿನ 99 ಗ್ರಾಮೀಣ ಮಹಿಳೆಯರಿಗೆ ಸಾಕಾಣಿಕೆಗಾಗಿ ಕೊಳಿಮರಿಗಳ ಉಚಿತ ವಿತರಣೆ

0

Shikaripura Animal Husbandry and Veterinary Services Department ಶಿಕಾರಿಪುರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯು 2025-26ನೇ ಸಾಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ, ಬೆಂಗಳೂರು ವತಿಯಿಂದ ಶಿಕಾರಿಪುರ ತಾಲೂಕಿನ ಗ್ರಾಮೀನ ಭಾಗದ ಎಲ್ಲಾ ವರ್ಗದ ಒಟ್ಟು 99 ಜನ ರೈತ ಮಹಿಳೆಯರಿಗೆ ಐದು ವಾರದ 20 ನಾಟಿ ಕೋಳಿಮರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ರೈತ ಮಹಿಳೆಯರು ಹತ್ತಿರದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಂಸ್ಥೆಗಳಲ್ಲಿ ನಿಗದಿತ ನಮೂನೆ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನ. 20 ರೊಳಗಾಗಿ ಸಲ್ಲಿಸುವಂತೆ ಶಿಕಾರಿಪುರ ಮುಖ್ಯ ಪಶುವೈದ್ಯಾಧಿಕಾರಿ ಡಾ. ರವಿ ಎಂ. ತಿಳಿಸಿದ್ದಾರೆ.

Atma Yojana ಆಯನೂರು & ನಿದಿಗೆ ರೈತಸಂಪರ್ಕ ಕೇಂದ್ರಕ್ಕೆ ಗುತ್ತಿಗೆ ಆಧಾರದ ಮೇಲೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಕಾತಿ

0

Atma Yojana ಕೃಷಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಆಯನೂರು ಹಾಗೂ ನಿದಿಗೆ-1 ರ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು 45 ವರ್ಷ ಮೀರಿರಬಾರದು. ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಯಲ್ಲಿ 1 ವರ್ಷ ಸೇವಾನುಭವ ಹೊಂದಿರಬೇಕು. ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕ್ಕೋತ್ತರ ಪದವಿಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪದವಿ/ಸ್ನಾತಕ್ಕೋತ್ತರ ಪದವಿಯ ಅಂತಿಮ ಅಂಕಪಟ್ಟಿ, ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಯಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ದಾಖಲಾತಿಗಳನ್ನು ಹೊಂದಿರಬೇಕು.

Atma Yojana ನಿಗದಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕ ಕಚೇರಿ, ಹಳೇ ತೀರ್ಥಹಳ್ಳಿ ರಸ್ತೆ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೇವಾ ಅನುಭವ ಪ್ರಮಣ ಪತ್ರ, ಕೆಲಸ ನಿರ್ವಹಿಸಿದ ಸಂಸ್ಥೆಯು ನೀಡಿದ ಪ್ರಮಾಣ ಆದೇಶ ಪತ್ರ, ಕೆಲಸ ನಿರ್ವಹಿಸಿದ ಅವಧಿಗೆ ಸಂಬಂಧಪಟ್ಟ ಸಂಸ್ಥೆಯಿಂದ ಹಾಜರಾತಿ ಪ್ರಮಾಣ ಪತ್ರ, ಸಂಸ್ಥೆಯಿಂದ ವೇತನ ದೃಢೀಕರಣ ಹಾಗೂ ವೇತನ ಜಮಾ ಆದ ಕುರಿತು ಬ್ಯಾಂಕ್ ಖಾತೆಯ ವಿವರಗಳನ್ನು ಲಗತ್ತಿಸಿ ನ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು (ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-221906 ನ್ನು ಸಂಪರ್ಕಿಸುವುದು

Backward Classes and Minorities Welfare Committee ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಜಿಲ್ಲಾ ಪ್ರವಾಸ

0

Backward Classes and Minorities Welfare Committee ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಅ.28 ರಿಂದ 30 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ.

District Legal Services Authority ಸರ್ಕಾರಿ ನೌಕರಿ ಎಂದರೆ ಜನಸೇವೆಗೆ ಸಿಕ್ಕ ಅವಕಾಶ,ಅಧಿಕಾರ ಸಾಧಿಸುವ ವೇದಿಕೆ ಅಲ್ಲ- ನ್ಯಾ.ಮಂಜುನಾಥ ನಾಯಕ್

0

District Legal Services Authority ಸರ್ಕಾರಿ ನೌಕರಿ ಎಂದರೆ ಜನಸೇವೆ ಮಾಡಲು ಸಿಕ್ಕ ಅವಕಾಶವೇ ಹೊರತು ಅಧಿಕಾರ ಸಾಧಿಸುವ ವೇದಿಕೆ ಅಲ್ಲ. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರ ಮನೋಭಾವ ಬದಲಾಗಬೇಕು. ಆಗ ಮಾತ್ರ ಸರ್ಕಾರಿ ಇಲಾಖೆಗಳಲ್ಲಿ ಶೇ.50 ರಷ್ಟಾದರು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ರವರು ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ಲೋಕಾಯುಕ್ತ ಇವರ ಸಂಯುಕ್ತಾಶ್ರಯದಲ್ಲಿ ಜಿ.ಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ “ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ-2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
District Legal Services Authority ಬಡತನ, ನಿರುದ್ಯೋಗ ಹಾಗೂ ಭ್ರಷ್ಟಾಚಾರದ ಅಂಶಗಳು ನಮ್ಮ ದೇಶದ ಅಭಿವೃದ್ದಿಗೆ ಕಂಟಕವಾಗಿದೆ. ದೇಶದಲ್ಲಿ ಜನಸಂಖ್ಯೆ ಹೆಚ್ಚಾದಂತೆ ಅದರ ಅನುಗುಣವಾಗಿ ಉದ್ಯೋಗದ ಅವಕಾಶ ಹಾಗೂ ಅದಕ್ಕೆ ಬೇಕಾದ ಸಂಪನ್ಮೂಲಗಳ ಕೊರತೆಯು ಉಂಟಾಗುತ್ತಿದ್ದು, ಅದಕ್ಕಾಗಿ ಪೈಪೋಟಿ ನಡೆಯುತ್ತಿದೆ. ಈ ಕಾರಣದಿಂದಲೇ ಅಧಿಕಾರಿಗಳಲ್ಲಿ ಭ್ರಷ್ಟಾಚಾರದಲ್ಲಿ ತೊಡಗುತ್ತಾರೆ ಎಂದರು.
ಭ್ರಷ್ಟಾಚಾರ ನಿಗ್ರಹ ಕಾನೂನುಗಳಲ್ಲೆ ಬಹಳಷ್ಟು ಲೋಪಗಳಿದ್ದು, ಕಾನೂನು ಮೂಲಕ ಭ್ರಷ್ಟಾಚಾರವನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರ ಉಪಯೋಗವನ್ನು ಭ್ರಷ್ಟಾಚಾರದಲ್ಲಿ ತೊಡಗಿರುವವರೇ ಹೆಚ್ಚಾಗಿ ಪಡೆಯುತ್ತಿದ್ದಾರೆ. ನಮ್ಮ ದೇಶದಲ್ಲಿ ಶೇ.90 ರಷ್ಟು ಸರ್ಕಾರ ಮತ್ತು ಸರ್ಕಾರಿ ಅಧಿಕಾರಿಗಳು ಪಕ್ಷಗಾರರಾಗಿದ್ದು, ಭ್ರಷ್ಟಾಚಾರಕ್ಕೆ ಇದು ಕೂಡ ಕಾರಣವಾಗಿದೆ. ಹಾಗಾಗಿ ಇದರ ಸಂಪೂರ್ಣ ನಿರ್ಮೂಲನೆ ಅಸಾಧ್ಯವಾಗಿದೆ. ಆದರಿಂದ ಸರ್ಕಾರಿ ನೌಕರರಿಗೆ ಭ್ರಷ್ಟಾಚಾರ ಕುರಿತು ಜಾಗೃತಿ ಮೂಡಿಸುವುದು ಮುಖ್ಯವಾಗಿದೆ ಎಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್.ಎA.ಎಸ್ ಮಾತನಾಡಿ, ಸರ್ಕಾರಿ ನೌಕರರ ನಗದು ವ್ಯವಹಾರ ಪ್ರಶ್ನಾರ್ಥವಾಗಿದೆ. ಹಾಗಾಗಿ ಸರ್ಕಾರಿ ನೌಕರರು 20 ಸಾವಿರಕ್ಕಿಂತ ಅಧಿಕವಾಗಿ ಖರ್ಚು ಮಾಡುವುದಾದರೆ ಅದನ್ನು ಬ್ಯಾಂಕ್ ಮೂಲಕ ಮಾಡಬೇಕು. ಇತ್ತೀಚೆಗೆ ಸರ್ವೋಚ್ಛ ನ್ಯಾಯಾಲಯವು ಕೂಡ ಸರ್ಕಾರಿ ನೌಕರರು 20 ಸಾವಿರಕ್ಕಿಂತ ಅಧಿಕ ನಗದು ವ್ಯವಹಾರ ಮಾಡಿದರೆ ಅದನ್ನು ಆದಾಯ ತೆರಿಗೆ ಇಲಾಖೆಯ ತನಿಖೆ ಒಳಪಡಿಸಬೇಕೆಂದು ತಿಳಿಸಿದೆ ಎಂದರು.
ಸರ್ಕಾರಿ ನೌಕರರು ತಮ್ಮ ಹೆಂಡತಿ, ಮಕ್ಕಳ ಆದಾಯ ಇದ್ದರೆ ಅದನ್ನು ವರದಿ ಮಾಡಿ. ಹೊಸದಾಗಿ ಅಧಿಕಾರ ವಹಿಸಿಕೊಳ್ಳುವ ಇಲಾಖೆಯಲ್ಲಿ ಹಿಂದಿನ ಅಧಿಕಾರದ ಅವಧಿಯಲ್ಲಿ ಮಾಡಿದ ಲೋಪದ ಬಗ್ಗೆ ಲೋಕಾಯುಕ್ತರು ನಿಮ್ಮನ್ನು ಪ್ರಶ್ನಿಸಿದರೆ ಅದಕ್ಕೆ ಹಾರಿಕೆ ಉತ್ತರ ನೀಡದೆ ಹಿಂದಿನ ಅಧಿಕಾರದಲ್ಲಿದ್ದ ಅಧಿಕಾರಿಯ ಸಂಕ್ಷೀಪ್ತ ಮಾಹಿತಿಯನ್ನು ಲೋಕಾಯುಕ್ತರಿಗೆ ಒದಗಿಸಿ ಹಾಗೂ ನೀವು ಯಾವಾಗ ಅಧಿಕಾರ ವಹಿಸಿಕೊಂಡಿದ್ದಿರಾ ಎಂಬ ಮಾಹಿತಿಯನ್ನು ಕೂಡ ನೀಡಿ ಎಂದು ಹೇಳಿದರು.
ಅಧಿಕಾರಿಗಳು ತಮ್ಮ ಖಾಸಗಿ ಜೀವನದಲ್ಲಿ ಬೇರೆ ಇಲಾಖೆಯ ಬಗ್ಗೆ ನಕರಾತ್ಮಕವಾಗಿ ಮಾತನಾಡಬಾರದು. ಇದರಿಂದ ಸರ್ಕಾರಿ ಅಧಿಕಾರಿಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಅಧಿಕಾರಿಗಳು ತಮ್ಮ ಖಾಸಗಿ ಜೀವನದಲ್ಲಿ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಪಾರದರ್ಶಕವಾಗಿ ಸೇವೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆರವರ ಅಧ್ಯಕ್ಷ ಭಾಷಣದಲ್ಲಿ ಭ್ರಷ್ಟಾಚಾರದ ನಿರ್ಮೂಲನೆ ಆರಂಭವಾಗಬೇಕಿರುವುದು ಉನ್ನತ ಅಧಿಕಾರಿಗಳ ಖುರ್ಚಿಯಿಂದ. ಸರ್ಕಾರಿ ವ್ಯವಸ್ಥೆ ಹಾಗೂ ಸರ್ಕಾರಿ ನೌಕರರ ತಮ್ಮ ಖುರ್ಚಿಯನ್ನು ಶುದ್ಧವಾಗಿಕೊಟ್ಟುಕೊಳ್ಳಬೇಕು. ಆಗ ಮಾತ್ರ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ. ಅಧಿಕಾರಿಗಳು ಶುದ್ದವಾಗಿದ್ದರೆ ವ್ಯವಸ್ಥೆಯು ಶುದ್ದವಾಗಿರುತ್ತದೆ ಎಂದು ಸಲಹೆ ನೀಡಿದರು.
ಹಣ ಹಾಗೂ ಅಧಿಕಾರದ ಪ್ರಭಾವದಿಂದ ಭ್ರಷ್ಟಾಚಾರ ಆರಂಭವಾಗುತ್ತದೆ. ಇದರಿಂದ ಬಡವರಿಗೆ ಹಾಗೂ ದುರ್ಬಲರಿಗೆ ಅನ್ಯಾಯವಾಗುತ್ತದೆ. ಹಾಗಾಗಿ ಅಧಿಕಾರಿಗಳು ಯಾರ ಪ್ರಭಾವಕ್ಕೆ ಒಳಗಾಗದೆ ಕಾನೂನು ಹಾಗೂ ಕಾಯ್ದೆಯ ಅಡಿಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಸಿಇಓ ಹೇಮಂತ್.ಎನ್. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಹನುಮಂತಪ್ಪ ಕೆ.ಟಿ, ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ.ಹೆಚ್, ಹಾಗೂ ಉಪಾಧೀಕ್ಷರಾದ ಬಿ.ಪಿ.ಚಂದ್ರಶೇಖರ್, ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್, ಲೋಕಾಯುಕ್ತ ಪೊಲೀಸ್ ನಿರೀಕ್ಷಕ ರುದ್ರೇಶ್.ಕೆ.ಪಿ. ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.