Saturday, February 14, 2026
Saturday, February 14, 2026
Home Blog Page 118

ಸ್ವಿಟ್ಜರ್ಲೆಂಡ್ ಪ್ರವಾಸದ ಫಲಶೃತಿ:ಕ್ವಾಂಟಮ್ ಕ್ಷೇತ್ರದ ಸಂಶೋಧನೆ ಸಂಸ್ಥೆಗಳ ಸಕಾರಾತ್ಮಕ ಸ್ಪಂದನೆ- ಸಚಿವ ಎನ್.ಎಸ್.ಬೋಸರಾಜು

0

(ಬೆಂಗಳೂರು ಪ್ರತಿನಿಧಿಯಿಂದ) ಬೆಂಗಳೂರು ನಗರದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವಂತಹ ಕ್ವಾಂಟಮ್‌ ಸಿಟಿಯಲ್ಲಿ ಸಹಭಾಗಿತ್ವಕ್ಕೆ, ಸ್ವಿಟ್ಜರ್ಲೆಂಡ್‌ ಕಂಪನಿಗಳು ಹಾಗೂ ಕ್ವಾಂಟಮ್‌ ಕ್ಷೇತ್ರದ ಸಂಶೋಧನೆಯಲ್ಲಿ ಪ್ರಮುಖವಾಗಿರುವಂತಹ ಸಂಸ್ಥೆಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ವಿಟ್ಜರ್ಲೆಂಡ್‌ ಪ್ರವಾಸದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಕ್ವಾಂಟಮ್‌ ಸಿಟಿಯಲ್ಲಿ ಹೂಡಿಕೆಗೆ ಆಹ್ವಾನ:
ಕರ್ನಾಟಕ ರಾಜ್ಯ ಸರ್ಕಾರ ಬೆಂಗಳೂರು ನಗರವನ್ನು ವಿಶ್ವದ ಕ್ವಾಂಟಮ್‌ ಕ್ಷೇತ್ರದ ಕೇಂದ್ರಬಿಂದುವನ್ನಾಗಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ನಡೆದ ದೇಶದ ಮೊದಲ ಕ್ವಾಂಟಮ್‌ ಸಮಾವೇಶದಲ್ಲಿ ಘೋಷಿಸಿದ್ದಂತೆ ಈಗಾಗಲೇ ಕ್ವಾಂಟಮ್‌ ಸಿಟಿಗೆ ಭೂಮಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಈ ಸಿಟಿಯ ಅಭಿವೃದ್ದಿಗಾಗಿ ಕ್ವಾಂಟಮ್‌ ಸಂಶೋಧನೆಯಲ್ಲಿ ತೊಡಗಿಕೊಂಡಿರುವ ವಿಶ್ವದ ಪ್ರಮುಖ ಸಂಸ್ಥೆಗಳಾದ ಇಟಿಹೆಚ್‌ ಜ್ಯೂರಿಚ್‌, ಸೆರಿ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯದಲ್ಲಿ ಕ್ವಾಂಟಮ್‌ ಪರಿಣಿತ ಮಾನವ ಸಂಪನ್ಮೂಲ ಅಭಿವೃದ್ದಿಗಾಗಿ ಐಐಎಸ್‌ಸಿ ಜೊತೆಗೂಡಿ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದೆ. ನಮ್ಮ ರಾಜ್ಯದಲ್ಲಿ ಪರಿಣಿತ ಮಾನವ ಸಂಪನ್ಮೂಲ ಲಭ್ಯವಿದ್ದು, ಹೊಸ ಸಂಶೋಧನೆಗಳನ್ನು ಕೈಗೊಳ್ಳಲು ಉತ್ತಮ ಪರಿಸರವಿದೆ. ಈ ಹಿನ್ನಲೆಯಲ್ಲಿ ಸಂಶೋಧನಾ ಯೋಜನೆಗಳಲ್ಲಿ ಸಹಕರಿಸುವಂತೆ ನಮ್ಮ ಮನವಿಗೆ ಇಟಿಎಚ್ ಜ್ಯೂರಿಕ್ [ETH Zurich] ಮಂಡಳಿಯ ಅಧ್ಯಕ್ಷರಾದ ಡಾ. ಮೈಕೇಲ್ ಹೆಂಗಾರ್ಟ್ನರ್ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಹೇಳಿದರು.

ಸ್ವಿಸ್‌ನೆಕ್ಸ್‌ ಕ್ವಾಂಟಮ್‌ ಸಮಾವೇಶದಲ್ಲಿ ಪಾಲ್ಗೊಂಡು, ನಮ್ಮ ರಾಜ್ಯದಲ್ಲಿ ಹೂಡಿಕೆಗೆ ಇರುವಂತಹ ಅವಕಾಶಗಳ ಬಗ್ಗೆ ವಿಶ್ವದ ಪ್ರಮುಖ ಕ್ವಾಂಟಮ್‌ ಕ್ಷೇತ್ರದ ಕಂಪನಿಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಯಿತು. ಕ್ವಾಂಟಮ್‌ ಸಿಟಿಯ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. ನಮ್ಮ ರಾಜ್ಯ ಅದರಲ್ಲೂ ಬೆಂಗಳೂರು ನಗರದ ತಾಂತ್ರಿಕ ಅವಕಾಶಗಳು, ಮಾನವ ಸಂಪನ್ಮೂಲ ಲಭ್ಯತೆ, ಹೂಡಿಕೆಗೆ ಉತ್ತಮ ಪರಿಸರ, ರಾಜ್ಯ ಸರ್ಕಾರದಿಂದ ಸಿಗುತ್ತಿರುವ ಉತ್ತಮ ಸಹಕಾರದ ಬಗ್ಗೆ ಮಾಹಿತಿ ನೀಡಲಾಯಿತು. ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡುವಂತೆಯೂ ಆಹ್ವಾನ ನೀಡಲಾಯಿತು ಎಂದು ಸಚಿವರು ತಿಳಿಸಿದರು.

ಕ್ವಾಂಟಮ್ ಬೇಸೆಲ್, CERN, ETH Zurich ಮತ್ತು Zurich Instruments ಸಂಸ್ಥೆಗಳಿಗೆ ಭೇಟಿ:
ಐನ್‌ಸ್ಟೀನ್‌ ಅವರು ಸಂಶೋಧನೆಯಲ್ಲಿ ತೊಡಗಿಕೊಂಡಿದ್ದ ETH Zurich ಸಂಸ್ಥೆಗೆ ಭೇಟಿ ನೀಡಿ ,ಸುಪರ್‌ಕಂಡಕ್ಟಿಂಗ್ ಕ್ಯೂಬಿಟ್ ಮತ್ತು ಟ್ರಾಪ್ಡ್ ಐಯಾನ್ ಸಿಸ್ಟಮ್ಸ್‌ಗಳ ಕುರಿತ ಸಂಶೋಧನೆಯಲ್ಲಿ ಇಪ್ಪತ್ತು ವರ್ಷಗಳಿಂದ ಪಯೋನಿಯರ್‌ಗಳಾಗಿ ಗುರುತಿಸಿಕೊಂಡಿರುವಂತಹ, ETH Zurich ಕ್ವಾಂಟಮ್ ಸೆಂಟರ್‌ ನ ನಿರ್ದೇಶಕರುಗಳಾದ ವಿಶ್ವವಿಖ್ಯಾತ ಪ್ರೊ. ಆಂಡ್ರಿಯಾಸ್ ವಾಲ್ರಾಫ್ ಹಾಗೂ ಪ್ರೊ. ಜೊನಥನ್ ಹೋಮ್ ಮತ್ತು ಪ್ರೊ. ಕ್ಲಾಸ್ ಎನ್ಸ್‌ಸ್ಲಿನ್ ಅವರನ್ನು ಮುಂದಿನ ಕ್ವಾಂಟಮ್‌ ಇಂಡಿಯಾ ಸಮ್ಮೇಳನದಲ್ಲಿ ಭಾಗವಹಿಸುವಂತೆ ಅಹ್ವಾನ ನೀಡಿದ್ದೇವೆ.

ETH ಜ್ಯೂರಿಚ್‌ ವಿಶ್ವವಿದ್ಯಾಲಯದ ಪ್ರಯೋಗಾಲಯಗಳಲ್ಲಿ ಸಂಶೋಧಿಸಲಾದ ಹಲವಾರು ಸಂಶೋಧನೆಗಳು ಸ್ಟಾರ್ಟಪ್‌ಗಳಾಗಿ ಬೆಳೆದಿವೆ. ಇಂತಹ ಪರಿಸರವನ್ನು ಕ್ವಾಂಟಮ್‌ ಸಿಟಿಯಲ್ಲಿ ಅಳವಡಿಸುವ ನಿಟ್ಟಿನಲ್ಲಿ ಹಾಗೂ ಸಹಭಾಗಿತ್ವದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಸಚಿವರು ತಿಳಿಸಿದರು.

Zurich Instruments ಸಂಸ್ಥೆಗೆ ಭೇಟಿ ನೀಡುವ ಮೂಲಕ ಕ್ವಾಂಟಮ್‌ ಕಂಪ್ಯೂಟಿಂಗ್‌ ಅಭಿವೃದಿಗೆ ಅಗತ್ಯವಿರುವಂತಹ ಉಪಕರಣಗಳ ತಯಾರಿಕೆಯ ಬಗ್ಗೆ ಮಾಹಿತಿ ನೀಡಲಾಯಿತು. ಇದೇ ಸಂಧರ್ಭದಲ್ಲಿ ಕರ್ನಾಟಕ ರಾಜ್ಯದ ಸಂಶೋಧನಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಈ ಸಂಸ್ಥೆ ಮುಂದಾಗಿದೆ ಎನ್ನುವುದನ್ನು ಸಚಿವರು ತಿಳಿಸಿದರು.

ಜಿನೆವಾದ ಸೈನ್ಸ್‌ ಅಂಡ್‌ ಡಿಪ್ಲೋಮಸಿ ಆಂಟಿಸಿಪೇಟರ್‌ ಸಮಾವೇಶದಲ್ಲಿ ಭಾಗಿಯಾದ ಸಂಧರ್ಭದಲ್ಲಿ ಭಾರತ ಸರ್ಕಾರದ ಮುಖ್ಯ ವೈಜ್ಞಾನಿಕ ಸಲಹೆಗಾರರಾದ ಪ್ರೊ. ಅಜಯ್ ಸೂದ್ ಅವರನ್ನು ಸಮಾವೇಶದಲ್ಲಿ ಭೇಟಿಯಾದ ಸಚಿವರು, ರಾಜ್ಯದ ಕ್ವಾಂಟಮ್‌ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಅಗತ್ಯವಿರುವಂತಹ ಸಲಹೆ ಹಾಗೂ ಸಹಕಾರ ನೀಡುವ ನಿಟ್ಟಿನಲ್ಲಿ ಚರ್ಚಿಸಿದರು. ಅಲ್ಲದೇ, ವಿಶ್ವದ ಇತರೆ ದೇಶಗಳ ಪ್ರಮುಖ ಸಂಶೋಧನಾ ಸಂಸ್ಥೆಗಳ ಜೊತೆಯಲ್ಲಿ ನಡೆಸುತ್ತಿರುವ ಸಭೆಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಕೆಸ್ಟೆಪ್ಸ್‌ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು, ಸಚಿವರ ಆಪ್ತ ಕಾರ್ಯದರ್ಶಿಗಳಾದ ವೀರಭದ್ರ ಹಂಚಿನಾಳ್‌ ಉಪಸ್ಥಿತರಿದ್ದರು.

DVS College of Arts, Science and Commerce ಭ್ರಷ್ಟಚಾರ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಜನರ ಪಾತ್ರ ಅಪಾರ- ಡಾ.ಬಿ.ಪಿ.ಚಂದ್ರಶೇಖರ್

0

DVS College of Arts, Science and Commerce ಭ್ರಷ್ಟಚಾರಮುಕ್ತ ಸಮಾಜ ನಿರ್ಮಿಸುವಲ್ಲಿ ಯುವಜನರ ಪಾತ್ರ ಅಪಾರ ಎಂದು ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಡಾ. ಬಿ.ಪಿ.ಚಂದ್ರಶೇಖರ್ ಅನಿಸಿಕೆ ವ್ಯಕ್ತಪಡಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಸಿಂಗಾರ ಸಭಾಂಗಣದಲ್ಲಿ ಯುವ ರೆಡ್‌ಕ್ರಾಸ್ ಘಟಕದಿಂದ ನಟ ಡಾ. ಪುನೀತ್ ರಾಜ್ಕುಮಾರ್ ಅವರ ಸ್ಮರಣಾರ್ಥ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಮತ್ತು ನೇತ್ರ ತಪಾಸಣೆ ಹಾಗೂ ನೇತ್ರದಾನ ನೋಂದಣಿ ಶಿಬಿರ 2025 ಉದ್ಘಾಟಿಸಿ ಮಾತನಾಡಿದರು.
ಯುವಜನರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಉತ್ತಮ ಸಮಾಜ ನಿರ್ಮಾಣ ಮಾಡಲು ಕೈಜೋಡಿಸಬೇಕು. ಮತದಾನ ಮಾಡಲು ಯಾವುದೇ ಹಣ ಪಡೆಯಬಾರದು. ಚುನಾವಣಾ ಸಂದರ್ಭದಲ್ಲಿ ಯಾವುದೇ ಆಮಿಷಗಳಿಗೆ ಬಲಿಯಾಗಿ ಮತದಾನ ಮಾಡಬಾರದು. ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಸದೃಢ ಸಮಾಜ ನಿರ್ಮಿಸಬೇಕು ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿಯು ಶಿಕ್ಷಣದ ಜತೆಯಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ. ನಾನೂ ಸಹ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು, ಶಿಕ್ಷಣ ಪಡೆದಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸಿದ್ದಾರೆ. ನೀವು ಸಹ ಜೀವನದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದರು.
DVS College of Arts, Science and Commerce ದೇಶೀಯ ವಿದ್ಯಾಶಾಲಾ ಸಮಿತಿಯ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ರಕ್ತದಾನ ಅತ್ಯಂತ ಶ್ರೇಷ್ಠ ಕಾರ್ಯ ಆಗಿದ್ದು, ಒಮ್ಮೆ ರಕ್ತದಾನ ಮಾಡುವುದರಿಂದ ನಾಲ್ಕು ಜೀವ ಉಳಿಸಲು ಸಾಧ್ಯವಿದೆ. ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗುತ್ತದೆ. ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಪ್ರತಿ ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿದ್ದು, ಯುವಜನರು ರಕ್ತದಾನದ ಮಹತ್ವ ಅರಿತುಕೊಳ್ಳಬೇಕು ಎಂದು ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ದೇಶೀಯ ವಿದ್ಯಾಶಾಲಾ ಸಮಿತಿಯ ಖಜಾಂಚಿ ಬಿ.ಗೋಪಿನಾಥ್, ರಕ್ತನಿಧಿ ಕೇಂದ್ರದ ಸಂಯೋಜಕ ಡಾ. ನಾಗೇಶ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಡಾ. ಶ್ರೀನಿವಾಸ್ ಲಮಾಣಿ, ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಯು.ಗೀತಾಲಕ್ಷ್ಮೀ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರದ ಕಾರ್ಯದರ್ಶಿ ಮಂಜುನಾಥ ಅಪ್ಪಾಜಿ, ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಡಾ. ಸ್ಪಂದನಾ ಮತ್ತಿತರರು ಇದ್ದರು.
ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ಐಕ್ಯೂಎಸಿ ಘಟಕ, ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿ ಕೇಂದ್ರ, ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

Shivananda Patil ರಾಜ್ಯಕ್ಕೆ ಅಕ್ಕಪಕ್ಕದ ರಾಜ್ಯಗಳ ಜವಳಿ ಉದ್ಯಮಿಗಳನ್ನ ಹೂಡಿಕೆಗೆ ಆಕರ್ಷಿಸಲು ವರದಿ ಸಿದ್ಧಪಡಿಸಿ- ಸಚಿವ ಶಿವಾನಂದ ಪಾಟೀಲ್

0

(ಬೆಂಗಳೂರು ಪ್ರತಿನಿಧಿಯಿಂದ) ರಾಜ್ಯದಲ್ಲಿ ಘಟಕ ಸ್ಥಾಪನೆಗೆ ಜವಳಿ ಉದ್ಯಮಿಗಳ ಆಕರ್ಷಣೆಗೆ ಅಗತ್ಯ ನೆರವು ಕೋರಿ ಶೀಘ್ರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದು, ಮಧ್ಯಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿನ ನೀತಿಯ ವರದಿ ಸಿದ್ದಪಡಿಸಿ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯಕ್ಕೆ ನೆರೆ ರಾಜ್ಯಗಳ ಜವಳಿ ಉದ್ಯಮಿಗಳನ್ನು ಆಕರ್ಷಣೆ ಮಾಡಲು ಇರುವ ಸಾಧ್ಯತೆಗಳ ಕುರಿತು ವರದಿ ಸಿದ್ಧಪಡಿಸಿ, ಮಧ್ಯಪ್ರದೇಶ, ತಮಿಳು ನಾಡು ರಾಜ್ಯಗಳು ಉದ್ಯಮಿಗಳಿಗೆ ಯಾವ ಯಾವ ಸವಲತ್ತುಗಳನ್ನು ನೀಡುತ್ತಿವೆ ಎಂಬ ಮಾಹಿತಿ ಈ ವರದಿಯಲ್ಲಿರಲಿ ಎಂದು ವಿಧಾನಸೌಧದಲ್ಲಿ ನಡೆದ ಕರ್ನಾಟಕ ನೂತನ ಜವಳಿ ಮತ್ತು ಸಿದ್ದ ಉಡುಪು ನೀತಿ ಅನುಷ್ಠಾನ ಕುರಿತ ಉನ್ನತ ಮಟ್ಟದ ಸಬಲೀಕರಣ ಸಮಿತಿ ಸಭೆಯಲ್ಲಿ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Shivananda Patil ಬಾಂಗ್ಲಾ ದೇಶದಲ್ಲಿನ ಪ್ರತಿಕೂಲ ಪರಿಸ್ಥಿತಿ ಪರಿಣಾಮ ಅಲ್ಲಿನ ಜವಳಿ ಉದ್ಯಮ ಬೇರೆಡೆಗೆ ಸ್ಥಳಾಂತರವಾಗುತ್ತಿದ್ದು, ಅಲ್ಲಿನ ಉದ್ಯಮಿಗಳನ್ನು ಕರ್ನಾಟಕಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಯತ್ನ ಮಾಡಿ, ತಮಿಳು ನಾಡಿನಲ್ಲಿ ಉದ್ಯಮ ಸುಸ್ಥಿತಿಯಲ್ಲಿದೆ ಎಂಬ ವರದಿ ಇದೆ. ಆ ರಾಜ್ಯದಲ್ಲಿ ಜವಳಿ ಉದ್ಯಮಿಗಳಿಗೆ ಅಲ್ಲಿನ ಸರ್ಕಾರ ಏನೇನು ಸವಲತ್ತುಗಳನ್ನು ನೀಡುತ್ತಿದೆ. ಯಾವ ಕಾರಣಕ್ಕೆ ಉದ್ಯಮಿಗಳು ತಮಿಳುನಾಡಿನಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರುತ್ತಿದ್ದಾರೆ. ಅವರನ್ನು ಕರ್ನಾಟಕ ರಾಜ್ಯದತ್ತ ಸೆಳೆಯಲು ಏನು ಮಾಡಬೇಕು ಎಂದು ಅ‍ಧ್ಯಯನ ಮಾಡಿ ವರದಿ ರೂಪಿಸಿ ಎಂದು ಸೂಚನೆ ನೀಡಿದರು.

ಈ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ, ಅಗತ್ಯ ಸಹಾಯ ಸಹಕಾರ ನೀಡಬೇಕು ಎಂದು ಮನವಿ ಮಾಡೋಣ, ನೆರೆ ರಾಜ್ಯಗಳ ಸರ್ಕಾರಗಳು ನೀಡುತ್ತಿರುವ ಸವಲತ್ತುಗಳನ್ನು ಕರ್ನಾಟಕ ಸರ್ಕಾರವೂ ನೀಡಿದರೆ ರಾಜ್ಯದಲ್ಲಿ ಜವಳಿ ಉದ್ಯಮ ಬೆಳೆಸಿ ಉದ್ಯೋಗ ಸೃಷ್ಟಿಗೆ ನೆರವಾಗಲಿದ್ದು, ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ಸಬ್ಸಿಡಿ ಸೇರಿದಂತೆ ಜವಳಿ ಉದ್ಯಮಿಗಳಿಂದ ಬರುವ ಪ್ರಸ್ತಾವನೆಗಳನ್ನು ಅನುಮೋದನೆ ಮಾಡಲು ವಿಳಂಬ ನೀತಿ ಅನುಸರಿಸಬೇಡಿ, ಇಲಾಖೆಯ ನೆರವು ಸಹಕಾರ ನೀಡುವುದು ವಿಳಂಬವಾದರೆ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಸಹಜವಾಗಿ ಹಿಂದೇಟು ಹಾಕುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ ಎಂದು ಸೂಚಿಸಿದರು.

ಕೆಲವು ಕಂಪನಿಗಳು ಸಬ್ಸಿಡಿ ಕೋರಿ ಪ್ರಸ್ತಾವನೆ ಸಲ್ಲಿಸಲು ವಿಳಂಬವಾಗಿರುವುದಕ್ಕೆ ಕಾರಣ ಕೇಳಿದ ಸಚಿವರು, ಸಮಸ್ಯೆಗಳಿದ್ದರೆ ಅಧಿಕಾರಿಗಳು ಉದ್ಯಮಿಗಳಿಗೆ ಸೂಕ್ತ ಮಾಹಿತಿ ನೀಡಿ ನೆರವಾಗಬೇಕು ಎಂದು ಕಿವಿಮಾತು ಹೇಳಿದರು.

ಮಹಾರಾಷ್ಟ್ರ ಸರ್ಕಾರ ವಿದ್ಯುತ್‌ ಬಿಲ್‌ನಲ್ಲೇ ಸಬ್ಸಿಡಿ ಕಡಿತ ಮಾಡುತ್ತಿದ್ದು, ನಮ್ಮಲ್ಲಿಯೂ ಈ ಪದ್ಧತಿ ಅನುಸರಿಸಿದರೆ ಮಹಾರಾಷ್ಟ್ರದ ಜವಳಿ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಸಿದ್ಧರಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಮಾದರಿಯಲ್ಲೇ ವಿದ್ಯುತ್‌ ನೀತಿಯನ್ನು ಅನುಸರಿಸುವ ಪ್ರಯತ್ನ ಮಾಡಬೇಕಾಗಿದೆ ಎಂದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಎಷ್ಟು ಉದ್ಯಮಿಗಳು ಬಂಡವಾಳ ಹೂಡಲು ಆಸಕ್ತಿ ತೋರಿದ್ದರು. ಅವರಲ್ಲಿ ಎಷ್ಟು ಉದ್ಯಮಿಗಳು ಬಂಡವಾಳ ಹೂಡಿದರು. ಯಾವ ಯಾವ ಉದ್ಯಮಿಗಳು ಬಂಡವಾಳ ಹೂಡಿಕೆಯಿಂದ ಹಿಂದೆ ಸರಿದರು ಎಂಬ ಬಗ್ಗೆ ಒಂದೆರಡು ದಿನಗಳಲ್ಲಿ ಮಾಹಿತಿ ಕೊಡಿ. ಬಂಡವಾಳ ಹೂಡಿಕೆಗೆ ಹಿಂದೇಟು ಹಾಕಲು ಏನು ಕಾರಣ ಎಂಬ ಮಾಹಿತಿಯೂ ಬೇಕು ಎಂದು ಹೇಳಿದರು.

ನೂರಾರು ವರ್ಷಗಳಿಂದ ಮನೆಯಲ್ಲೇ ಕೈಮಗ್ಗ ಹಾಕಿಕೊಂಡಿರುವವರಿಗೆ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿನಾಯಿತಿ ಕೊಡಿಸುವ ಪ್ರಯತ್ನ ಆಗಬೇಕಿದೆ. ಬೆಂಗಳೂರಿನ ಕಬ್ಬನ್‌ ಪೇಟೆ, ಕಾಟನ್‌ ಪೇಟೆ ಮತ್ತಿತರ ಕಡೆ ಇರುವ ನೇಕಾರರಿಗೆ ಸಮಸ್ಯೆಯಾಗಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಪೂರ್ಣ ಪ್ರಮಾಣದಲ್ಲಿ ಇರುವ ನೇಕಾರರ ಕಾಲನಿಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವಿನಾಯಿತಿ ನೀಡಬೇಕು. ಇತರ ಕಡೆ ಸಮಯ ನಿಗದಿಪಡಿಸಬೇಕು ಎಂಬ ಸಲಹೆ ಸೂಕ್ತವಾಗಿದೆ. ಇದನ್ನೇ ಪಾಲನೆ ಮಾಡುವುದು ಸರಿಯಾದ ಕ್ರಮವಾಗಿದ್ದು, ಈ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಮನವರಿಕೆ ಮಾಡಿ ಎಂದು ಸೂಚನೆ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂದೂರಿ, ಜವಳಿ ಇಲಾಖೆ ಆಯುಕ್ತೆ ಕೆ. ಜ್ಯೋತಿ, ಅಪರ ನಿರ್ದೇಶಕ ಯೋಗೀಶ್‌, ಕೆಎಸ್‌ಟಿಐಡಿಸಿ ಎಂಡಿ ಯೋಗೀಶ್‌, ಕಾವೇರಿ ಹ್ಯಾಂಡ್‌ಲೂಮ್ಸ್‌ ಎಂಡಿ ಸೌಮ್ಯ, ರಂಗಸ್ವಾಮಿ ಹಾಗೂ ಕೆಎಐಡಿ, ಕೆಎಸ್‌ಎಫ್‌ಸಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಪಿಎಂ ಮಿತ್ರ ಪಾರ್ಕ್‌ ಪ್ರಗತಿ ಪರಿಶೀಲನೆ

ಕಲಬುರಗಿಯಲ್ಲಿ ಪಿಎಂ ಮಿತ್ರ ಪಾರ್ಕ್‌ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಶಿವಾನಂದ ಪಾಟೀಲ ಅವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂದೂರಿ ಅವರಿಗೆ ಸೂಚನೆ ನೀಡಿದರು.

ಹಲವು ರಾಜ್ಯಗಳಲ್ಲಿ ಈಗಾಗಲೇ ಪಿಎಂ ಮಿತ್ರ ಪಾರ್ಕ್‌ ಯೋಜನೆಗಳು ಅನುಷ್ಠಾನಕ್ಕೆ ಬಂದಿವೆ. ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿಇನ್ನೂ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯ ಸರ್ಕಾರ ಒಂದು ಸಾವಿರ ಎಕರೆ ಭೂಮಿಯನ್ನು ಒದಗಿಸಿದ್ದು, ಮೂಲ ಸೌಕರ್ಯ ಕಲ್ಪಿಸಲು ಅನುದಾನವನ್ನೂ ಬಿಡುಗಡೆ ಮಾಡಿದೆ. ಸಂಬಂಧಿತ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಬೇಗ ಕಾಮಗಾರಿಗಳನ್ನು ಮುಗಿಸಿ ಎಂದು ಸೂಚಿಸಿದರು.

ಇದುವರೆಗಿನ ಪ್ರಗತಿ ಬಗ್ಗೆ ಮಾಹಿತಿ ನೀಡಿದ ಆಯುಕ್ತೆ ಜ್ಯೋತಿ ಅವರು, ಕಂದಾಯ ಇಲಾಖೆಯಿಂದ ಇಸಿ ಲಭ್ಯವಾಗಿದ್ದು, 1.3 ಕಿಮೀ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು ಪೂರೈಕೆ ಪೈಪ್‌ಲೈನ್‌ ನಿರ್ಮಾಣ ಮಾಡಲು ಭೀಮಾ ನದಿಗೆ ಬ್ಯಾರೇಜ್‌ ನಿರ್ಮಿಸಬೇಕಿದೆ ಎಂದು ವಿವರಿಸಿದರು.

ಜವಳಿ ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಮಂಗಳವಾರ ಕರ್ನಾಟಕ ನೂತನ ಜವಳಿ ಮತ್ತು ಸಿದ್ದ ಉಡುಪು ನೀತಿ ಅನುಷ್ಠಾನ ಕುರಿತ ಉನ್ನತ ಮಟ್ಟದ ಸಬಲೀಕರಣ ಸಮಿತಿ ಸಭೆ ಜರುಗಿತು. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ರೋಹಿನಿ ಸಿಂದೂರಿ, ಜವಳಿ ಇಲಾಖೆ ಆಯುಕ್ತೆ ಕೆ. ಜ್ಯೋತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

ನಾಮಫಲಕ, ಶಾಲಾವಾಹನ, ಆಹಾರಪೂರೈಕೆ ಕಂಪನಿಗಳ ಹೆಸರು ಇತ್ಯಾದಿಗಳಲ್ಲಿ ಕನ್ನಡ ಬಳಸದೇ ಉಪೇಕ್ಷೆ. ಕ್ರಮಕ್ಕಾಗಿ ಮನವಿ

0

ವಾಣಿಜ್ಯ ಮಳಿಗೆಯ ನಾಮಫಲಕ ಜಾಹೀರಾತು ಫಲಕ ಶಾಲೆ ಮತ್ತು ಶಾಲಾ ವಾಹನಗಳಲ್ಲಿನಾ ನಾಮಫಲಕ ಆಹಾರ ಸರಬರಾಜುಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಒತ್ತಾಯಿಸಿ ಕನ್ನಡ ನಾಡು ಭಾಷೆ ಎಂದು ಭಾಷಣದಲ್ಲಿ ಮಾತ್ರ ಬೊಗಳೆ ಬಿಡುವ ರಾಜಕಾರಣಿಗಳು ಮತ್ತು ಅದಕ್ಕೆ ತಕ್ಕಂತೆ ವರ್ತಿಸುವ ಅಧಿಕಾರಿಗಳು ಎಲ್ಲಿಯೂ ಕನ್ನಡವನ್ನು ಬಳಸುವಂತೆ ಒತ್ತಾಯ ಪಡಿಸುವುದಾಗಲಿ, ಕಾನೂನನ್ನು ಪಾಲಿಸುವುದಾಗಲಿ ಯಾವುದನ್ನು ಮಾಡದೆ ಕನ್ನಡ ಉಳಿವಿಗಾಗಿ ಪತ್ರಗಳಲ್ಲಿ ಸುತ್ತೋಲೆಗಳಲ್ಲಿ ಮಾತ್ರ ಕಾಣುವುದು ವಿಪರ್ಯಾಸದ ಸಂಗತಿಯಾಗಿದೆ.
ಕನ್ನಡ ಉಳಿವಿಗಾಗಿ ಹೋರಾಟ ಮಾಡುವ ನಾಯಕರ ಮಕ್ಕಳೇ ಆಂಗ್ಲ ಶಾಲೆಗೆ ಸೇರಿಸುವುದು ತಮ್ಮ ವ್ಯವಹಾರಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಆಸ್ಪತ್ರೆಗಳಲ್ಲಿ ತಾವುಗಳೇ ಕನ್ನಡ ಬಳಕೆಯನ್ನು ಮಾಡದೆ ಕನ್ನಡ ನಾಡಿಗೆ ಕನ್ನಡದ ಜನತೆಗೆ ದ್ರೋಹ ಎಸಗುತ್ತಿದ್ದಾರೆ
ಕರ್ನಾಟಕ ಸರ್ಕಾರ ಈಗಾಗಲೇ ಕನ್ನಡ ಉಳಿವಿಗಾಗಿ ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದೆ. ಅವುಗಳೆಲ್ಲವೂ ಕಾಗದಗಳಲ್ಲೇ ಉಳಿದುಹೋಗಿದೆ ಕಾನೂನಿನ ಪ್ರಕಾರ ಯಾವುದೇ ಅಂಗಡಿ ಮುಂಗಟ್ಟುಗಳ ಮುಂದೆ ಶೇಕಡ 60ರಷ್ಟು ಕನ್ನಡ ಭಾಷೆ ಹಾಗೂ ಶೇಕಡ 40ರಷ್ಟು ಅನ್ಯ ಭಾಷೆ ಬಳಸುವಂತೆ ಆದೇಶವಿದ್ದರೂ ಸಹ ಇದನ್ನು ಅನುಷ್ಠಾನ ತರಲು ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು ಅವರ ಭಾಷಾ ಪ್ರೀತಿ ಏನೆಂದು ಇಲ್ಲಿಯ ಗೊತ್ತಾಗುತ್ತದೆ.
ಸಾಮಾನ್ಯವಾಗಿ ನಗರಗಳಲ್ಲಿ ಎಲ್ಲಿ ನೋಡಿದರೂ ಯಾವ ಜಾಹಿರಾತು ಫಲಕಗಳಲ್ಲಿಯೂ ಅಂಗಡಿ ಮುಂಗಟ್ಟುಗಳ ಮುಂದೆ ಪ್ರದರ್ಶನ ಮಾಡಿದ ನಾಮ ಪಲಕಗಳಲ್ಲಿ ಹಾಗೆಯೇ ಶಾಲೆಗೆ ಓಡಾಡುವ ವಾಹನಗಳಲ್ಲಾಗಲಿ, ಆಹಾರ ಪೂರೈಕೆಯ ಕಂಪನಿಗಳ ಹೆಸರು, ಸಮವಸ್ತ್ರ ಗಳಲ್ಲಾಗಲಿ ಕನ್ನಡ ಇಲ್ಲದೆ ಇಂಗ್ಲಿಷ್ ಭಾಷೆ ರಾರಾಜಿಸುತ್ತಿರುವುದು ಖಂಡನೀಯ ಇವೆಲ್ಲವನ್ನೂ ಅಧಿಕಾರಿಗಳು ಗೊತ್ತಿದ್ದರೂ ಕಂಡರೂ ಕಾಣದ ಹಾಗೆ ವರ್ತನೆ ಮಾಡುತ್ತಿರುವುದು ಕನ್ನಡ ನಾಡು ನುಡಿ ಭಾಷೆಗೆ ಮಾಡುವ ದ್ರೋಹವಾಗಿರುತ್ತದೆ. ಹಾಗಾಗಿ ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾಹಿರಾತು ಫಲಕದಲ್ಲಿ ಪ್ರತಿಷ್ಠಿತ ಶಾಲೆಗಳ ಗೋಡೆ ಬರಹದಲ್ಲಾಗಲಿ ಶಾಲೆಗೆ ಓಡಾಡುವ ವಾಹನಗಳ ಫಲಕದಲ್ಲಾಗಲಿ, ಮನೆಮನೆಗೆ ಆಹಾರ ಪೂರೈಕೆ ಮಾಡುವ ಕಂಪನಿ ಗಳಲ್ಲಾಗಲಿ ಈ ಕೂಡಲೇ ಕನ್ನಡ ಬಳಕೆಯನ್ನು ಬಳಸುವಂತೆ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಒತ್ತಾಯಿಸುತ್ತದೆ ಒಂದು ಪಕ್ಷದಲ್ಲಿ ಈ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳದೆ ಇದ್ದಲ್ಲಿ ಸಂಘಟನೆಯು ಕಟ್ಟಾಳುಗಳ ಮುಂದಾಳತ್ವದಲ್ಲಿ ಕನ್ನಡ ಬಳಸದ ಜಾಹೀರಾತು ಬಳಕೆಗಳಿಗೆ ಮಸಿ ಬಳೆಯುವುದು ಹಾಗೂ ಕನ್ನಡ ಬಳಸದೆ ಓಡಾಡುವ ಶಾಲಾ ವಾಹನಗಳ ವಾಹನಗಳ ಅಡ್ಡ ಹಾಕುವುದು ಅಂತಹ ಶಾಲೆಯ ವಿರುದ್ಧ ಮುತ್ತಿಗೆ ಹಾಕಲಾಗುವುದು ಎಂದು ಸಂಘಟನೆ ಎಚ್ಚರಿಸುತ್ತದೆ.

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್, ಜಿಲ್ಲಾ ಖಜಾಂಚಿ ಗಣೇಶ್ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಜಿಲ್ಲಾ ಕಾರ್ಯದರ್ಶಿ ರಾಮು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಾಧಿಕ್, ನಗರಾಧ್ಯಕ್ಷ ಜೀವನ್ ಯುವ ಅಧ್ಯಕ್ಷ ಸಂತೋಷ್, ಮಹಿಳಾ ಘಟಕದ ಅಧ್ಯಕ್ಷ ಕವಿತಾ ಉಪಾಧ್ಯಕ್ಷರಾದ ಪದ್ಮ ಮಾಲತಿ ಪ್ರಧಾನ ಕಾರ್ಯದರ್ಶಿ ಆರ್ಥಿಕ ತಿವಾರಿ ಸಂಘಟನಾ ಕಾರ್ಯದರ್ಶಿ ಜ್ಯೋತಿ ನಾಗರಾಜ್, ಪ್ರದೀಪ್, ನೂರಲ್ಲಕಾನ್, ಪ್ರಚಾರ ಸಮಿತಿ ಅಧ್ಯಕ್ಷರಾದ ಮಾಲತೇಶ್ ಮುಂತಾದ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

Jnaneshwari Goshala ಜನ್ಮದಿನದ ವಿಶೇಷವಾಗಿ ಗೋಶಾಲೆಗೆ ಗೋಗ್ರಾಸ ಕೊಡುಗೆ ನೀಡಿದ ಶಾಸಕ ಸಂಗಮೇಶ್ವರ್

0

Jnaneshwari Goshala ಭದ್ರಾವತಿ ಶಾಸಕರಾದ ಶ್ರೀ ಸಂಗಮೇಶ್ವರ ಹುಟ್ಟು ಹಬ್ಬದ ಸಲುವಾಗಿ ಹುಣಸೂಡಿನಲ್ಲಿರುವ ಶ್ರೀ ಜ್ಞಾನೇಶ್ವರಿ ಗೋಶಾಲೆಗೆ ಅವರ ಅಭಿಮಾನಿ ಬಳಗದವರು ಹಾಗೂ ಶಿಮೊಗ್ಗ ಯುವ ಕಾಂಗ್ರೆಸ್ ಮುಖಂಡರು ಆದ ಮಧುಣ್ಣ, ಸ್ನೇಹಿತರು ಗೋಶಾಲೆಗೆ ಗೋವುಗಳಿಗೆ ಅಗತ್ಯವಾಗಿ ಬೇಕಾಗಿರುವ 20 ಚೀಲ ಹಿಂಡಿ, ಒಂದು ಚೀಲ ಬೆಲ್ಲ, ಬಾಳೆಹಣ್ಣು ಹಾಗೂ ಮೇವುಗಳನ್ನು ನೀಡಿ ಗೋಮಾತೆಯ ಆಶೀರ್ವಾದವನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಜ್ಞಾನೇಶ್ವರಿ ಗೋಶಾಲೆಯ ಉಪಾಧ್ಯಕ್ಷರಾದ ಪ್ರಶಾಂತ್ ರಾಯ್ಕರ್
ಗೋಶಾಲೆ ಆಡಳಿತ ಮಂಡಳಿಯ ಸದಸ್ಯರು. ಕಾಂಗ್ರೆಸಿನ ಮುಖಂಡರು ಪದಾಧಿಕಾರಿಗಳು ಉಪಸ್ಥಿತರಿದ್ದರು.

Jnaneshwari Goshala ಇದೇ ಸಂದರ್ಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

MESCOM ಅಕ್ಟೋಬರ್ 30, ಭದ್ರಾವತಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

0

MESCOM ಭದ್ರಾವತಿ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಅ. 30 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ; 9448289454.

“ಕರೆಂಟಿನ ಕತೆ” ಪುಸ್ತಕ ಲೋಕಾರ್ಪಣೆ. ಒಲವಿನ ಓದುಗರಿಗೆ ಲೇಖಕ ಡಾ.ಗಜಾನನ ಶರ್ಮ‌ರಿಂದ ಆತ್ಮೀಯ ಕರೆಯೋಲೆ

0

ನಮ್ಮ ಅಂದರೆ ಭಾರತದ ವಿದ್ಯುತ್ ಬಳಕೆ 2000ನೇ ಇಸವಿಯಲ್ಲಿ 112Twh (112 ಟ್ರಿಲಿಯನ್ ಯೂನಿಟ್) ಇದ್ದರೆ, ಆದು 2023-24ರ ಹೊತ್ತಿಗೆ 1,622 Twh ಅಂದರೆ ಹದಿನಾಲ್ಕು ಪಟ್ಟು ಏರಿದೆ. ನಮ್ಮ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ 2000ದಲ್ಲಿ ಸುಮಾರು ಒಂದು ಲಕ್ಷ ಮೆಗಾವಾಟ್ ಆಗಿದ್ದರೆ, ಅದು ಕಳೆದ ವರ್ಷಾಂತ್ಯಕ್ಕೆ ನಾಲ್ಕೂವರೆ ಲಕ್ಷ ಮೆಗಾವಾಟಿಗೆ, ಅಂದರೆ ನಾಲ್ಕೂವರೆ ಪಟ್ಟು ಏರಿದೆ. ವಾರ್ಷಿಕ ತಲಾವಾರು ವಿದ್ಯುತ್ ಬಳಕೆ 2000ನೇ ಇಸವಿಯಲ್ಲಿ 447ಯೂನಿಟ್ ಇದ್ದರೆ ಕಳೆದ ವರ್ಷಕ್ಕೆ 1,395 ಯೂನಿಟ್ ಅಂದರೆ ಮೂರು ಪಟ್ಟು ಹೆಚ್ಚಿದೆ. ( ಜನಸಂಖ್ಯೆಯ ಅಗಾದ ಹೆಚ್ಚಳದ ನಡುವೆಯೂ)
ಇಷ್ಟೆಲ್ಲ ವಿದ್ಯುತ್ ಬಳಸುತ್ತಿರುವ ನಮಗೆ ವಿದ್ಯುತ್ ಎಂಬ ವಿಸ್ಮಯ ಶಕ್ತಿ, ಹುಟ್ಟಿ, ಬೆಳೆದು, ವಿಸ್ತರಿಸಿದ್ದು ಹೇಗೆಂಬ ಕುರಿತು ಅಪಾರ ಆಸಕ್ತಿ ಸಹಜ. ಬಹಳ ಜನಕ್ಕೆ ವಿದ್ಯುತ್ ಬಗ್ಗೆ ಸಾಕಷ್ಟು ಮಾಹಿತಿ ಇದ್ದಿರಬಹುದಾದರೂ, ಅಂಥದ್ದೊಂದು ಮಾಹಿತಿಯನ್ನು ಇನ್ನೊಮ್ಮೆ ಕೊಡುವ ಕಿರುಪ್ರಯತ್ನ ನನ್ನದು. ಜಗತ್ತಿನಲ್ಲಿ ವಿದ್ಯುಚ್ಛಕ್ತಿಯ ಉಗಮ ಹೇಗಾಯಿತು, ಅದನ್ನು ಕಂಡುಹಿಡಿದವರಾರು, ಅದು ಒಬ್ಬರೇ, ಅನೇಕರೇ, ಅದರ ವಿಸ್ತರಣೆ ಸಾಧ್ಯವಾದದ್ದು ಹೇಗೆ, ಕಳೆದ 150 ವರ್ಷಗಳಲ್ಲಿ ಅದು ಮನುಷ್ಯನ ಬದುಕನ್ನು ಹೇಗೆ ಪರಿವರ್ತಿಸಿತು ಮತ್ತು ಆವರಿಸಿತು ಎಂಬ ಮಾಹಿತಿಗಳನ್ನು ಒಳಗೊಂಡ ಈ ನನ್ನ ಕೃತಿ, “ಕರೆಂಟಿನ ಕತೆ”, ಅಂಕಿತ ಪ್ರಕಾಶನದ ಮೂಲಕ ನವೆಂಬರ್ ಎಂಟರಂದು ಬೆಳಿಗ್ಗೆ ಹತ್ತೂವರೆಗೆ ಬೆಂಗಳೂರಿನ ಬನಶಂಕರಿ, ಸುಚಿತ್ರ ಫಿಲ್ಮ ಸೊಸೈಟಿ ಸಭಾಂಗಣದಲ್ಲಿ ಬಿಡುಗಡೆ ಕಾಣುತ್ತಿದೆ.

Sharavati Pumped Storage ಪರಿಸರಕ್ಕೆ ಮಾರಕವಾದ ಶರಾವತಿ ಪಂಪ್ಡ್ ಸ್ಟೊರೇಜ್. ಕೆಪಿಸಿಎಲ್ ಹಠ ಯಾಕೆ?- ಡಾ. ಬಾಲಕೃಷ್ಣ ಹೆಗಡೆ.

0


Sharavati Pumped Storage ಪಶ್ಚಿಮ ಘಟ್ಟದ ಸೆರಗಿನಲ್ಲಿರುವ ಅತ್ಯಂತ ಸೂಕ್ಷ್ಮ ಪ್ರದೇಶ, ಅಳಿವಿನಂಚಿನಲ್ಲಿರುವ ಸಿಂಗಳೀಕ, ಮಂಗಟ್ಟೆ ಹಕ್ಕಿ ಮೊದಲಾದ ವನ್ಯ ಜೀವಿಗಳ ಆವಾಸ ಸ್ಥಾನ ಶರಾವತಿ ಕಣಿವೆ ಪ್ರದೇಶದಲ್ಲಿ ಸುಮಾರು 10 ಸಾವಿರ ಕೋಟಿ ರೂ.ವೆಚ್ಚದ 2,000 ಮೆ.ವ್ಯಾ. ವಿದ್ಯುತ್ ಯೋಜನೆಗೆ ಶರಾವತಿ ಪಂಪ್ಡ್ ಸ್ಟೋರೇಜ್ ಎಂಬ ಪರಿಸರ ಮಾರಕ ಯೋಜನೆಯ ಜಾರಿಗೆ ಸರ್ಕಾರ, KPCL ಹಠಕ್ಕೆ ಬಿದ್ದಿದ್ದೇಕೆ? ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಈ ಯೋಜನೆಯ ಜಾರಿಗೆ ಅಷ್ಟೊಂದು ಆತುರ ಏಕೆ?
ಶಿವಮೊಗ್ಗದಲ್ಲಿ KPCL ಮತ್ತು KPTCL ಉನ್ನತ ಅಧಿಕಾರಿಗಳು ನಿನ್ನೆ ಅ.27ರಂದು ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ತಮ್ಮ ಯೋಜನೆ ಬಗ್ಗೆ ವಿವರ ಮಾಹಿತಿ ನೀಡಿದರೇ ವಿನ: ಈ ಯೋಜನೆಯಿಂದಾಗುವ ಪರಿಸರ ಹಾನಿ, ಸ್ಥಳೀಯ ಜನರು ಅನುಭವಿಸುವ ತೊಂದರೆ ತೊಡಕುಗಳು, ಈ ಪ್ರದೇಶದ ಭೂಕುಸಿತ, ಶಿಲಾ ಪದರಗಳ ಬಗ್ಗೆ, ದಟ್ಟ ಅರಣ್ಯ ನಾಶದ ಬಗ್ಗೆ, ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ASI)ದಿಂದ ಸಂರಕ್ಷಿಸಲ್ಪಟ್ಟ ಐತಿಹಾಸಿಕ ಮಹತ್ವದ ಸ್ಮಾರಕಗಳ ಮುಂದಿನ ಕಥೆಗಳ ಬಗ್ಗೆ ಏನೂ ಹೇಳಲಿಲ್ಲ. ಏಕೆಂದರೆ ಇವುಗಳ ಬಗ್ಗೆ ವಿವರ ಅಧ್ಯಯನವನ್ನೆ ಮಾಡಲಾಗಿಲ್ಲ. 13 ಇಲಾಖೆಗಳಿಂದ ಅನುಮತಿ ಪಡೆಯಲಾಗಿದೆ ಎಂದು ಹೇಳಿದರೂ ಕೇಂದ್ರ ಸರ್ಕಾರದ ಪರಿಸರ ಸಂಬಂಧಿ ಇಲಾಖೆಯಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಅದನ್ನು ಇಲ್ಲಿ ಲಗತ್ತಿಸಿರುವ ವೀಡಿಯೋದಲ್ಲಿ ಅವರ ಬಾಯಿಯಿಂದಲೇ ಕೇಳಿ.
1972 ವನ್ಯ ಜೀವಿ ಕಾಯ್ದೆ ಸೆಕ್ಷನ್ 29 ರ ಪ್ರಕಾರ ವನ್ಯ ಜೀವಿ ಧಾಮ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬಾರದು ಎಂದಿದೆ. ಪ್ರಸ್ತಾವಿತ ಯೋಜನೆ ಈ ಕಾಯ್ದೆಯನ್ನೂ ಉಲ್ಲಂಘಿಸಿದೆ. ಉಲ್ಲಂಘನೆ ಬಗ್ಗೆಯೂ ಅಧಿಕಾರಿಗಳಿಂದಲೇ ಈ ವೀಡಿಯೋದಲ್ಲಿ ಮಾಹಿತಿ ಕೇಳಿ.
Sharavati Pumped Storage ಪ್ರಾಚೀನ ಸ್ಮಾರಕಗಳ ಸಂರಕ್ಷಣಾ ಕಾಯ್ದೆಯ ಉಲ್ಲಂಘನೆಯೂ ಈ ಯೋಜನೆಯಿಂದಾಗುತ್ತಿದೆ ಅಲ್ವೆ ಎಂಬ ಪ್ರಶ್ನೆಗೂ ಈ ವೀಡಿಯೋದಲ್ಲಿ ಅಧಿಕಾರಿಗಳು ನೀಡಿದ ಉತ್ತರ ನೋಡಿ.
ವೆಚ್ಚ ಮತ್ತು ಲಾಭದ ಲೆಕ್ಕಾಚಾರದಲ್ಲಿ ವೆಚ್ಚದ ಎದಿರು ಲಾಭದ ಅನುಪಾತ 75 ಎಂದು ಹೇಳಲಾಗಿದೆ. ಇದರಲ್ಲಿ 10000 ಕೋಟಿ ಯೋಜನಾ ವೆಚ್ಚ ಮತ್ತು ಗೇರುಸೊಪ್ಪಾ ಅಣೆಕಟ್ಟಿನಿಂದ ನೀರನ್ನು ಮೇಲೆ ತಲಕಳಲೆ ಅಣೆಕಟ್ಟಿಗೆ ಸಾಗಿಸುವ ವಿದ್ಯುತ್ ವೆಚ್ಚವನ್ನು ಏಕೆ ಪರಿಗಣಿಸಲಾಗಿಲ್ಲ.
ಒಟ್ಟಿನಲ್ಲಿ ಪಡೆಯ ಬೇಕಾದ ಪ್ರಮುಖ ಇಲಾಖೆಯಿಂದಲೇ ಇನ್ನೂ ಅನುಮತಿಯನ್ನೇ ಪಡೆಯದೆ ಸರ್ಕಾರ ಈ ಯೋಜನೆ ಜಾರಿ ಮಾಡ ಹೊರಟಿದ್ದು ತೀವ್ರ ವಿರೋಧಕ್ಕೆ ಯೋಗ್ಯವಾಗಿದೆ.
– ಡಾ. ಬಾಲಕೃಷ್ಣ ಹೆಗಡೆ.

Shivaganga Yoga Center ಸನ್ಮಾರ್ಗ,ಒಳ್ಳೆಯ ಚಿಂತನೆಗಳಿಂದ ಉತ್ತಮ ಕಾರ್ಯ-ಸಂತವಿಜ್ಞಾನ ದೇವ್ ಜಿ ಮಹಾರಾಜ್

0

Shivaganga Yoga Center ಸರಿಯಾದ ವಿದ್ಯೆ, ಸರಿಯಾದ ಜ್ಞಾನ, ಯೋಗ್ಯವಾದ ಮಾರ್ಗದರ್ಶನ ದಿಂದ ಪ್ರತಿಯೊಬ್ಬರ ಜೀವನ ಪಾವನವಾಗುತ್ತದೆ. ಆದ್ದರಿಂದ ಸನ್ಮಾರ್ಗ, ಒಳ್ಳೆಯ ಚಿಂತನೆ ಮತ್ತು ಉತ್ತಮ ಕಾರ್ಯ ಇವುಗಳಿಂದ ಮನುಷ್ಯನಾದವನು ಸಮಾಜದಲ್ಲಿ ಒಳ್ಳೆಯ ಹೆಸರನ್ನು ಗಳಿಸಲು ಸಾಧ್ಯ. ಇಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂತಹ ಒಂದು ಸತ್ಕಾರ್ಯ ನಡೆಯುತ್ತಿರುವುದಕ್ಕೆ ಕಾರಣ ಇಲ್ಲಿನ ಸದ್ಭಕ್ತರು ಮತ್ತು ಯೋಗ ಬಂಧುಗಳು ಎಂದು ವಿಹಂಗಮ ಯೋಗ ಸಂತ ಸಮಾಜ, ವಾರಣಾಸಿಯ ಸದ್ಗುರು ಸಂತ ವಿಜ್ಞಾನ ದೇವ್ ಜಿ ಮಹಾರಾಜ್ ತಿಳಿಸಿದ್ದಾರೆ. ಅವರು ಶಿವಮೊಗ್ಗದ ಶಿವಗಂಗಾ ಯೋಗ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸತ್ಸಂಗ ಮತ್ತು ಹೋಮ ಕಾರ್ಯ ಇವುಗಳಲ್ಲಿ ಪಾಲ್ಗೊಂಡು ಭಕ್ತರಿಗೆ ಯೋಗ ಧ್ಯಾನ ಮತ್ತು ಭಕ್ತಿಯ ಸಂದೇಶವನ್ನು ನೀಡಿದರು. ಈ ಸಂದರ್ಭದಲ್ಲಿ 500ಕ್ಕೂ ಹೆಚ್ಚು ಮಂದಿ ಸೇರಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಮಾತನಾಡಿ ಶಿವಮೊಗ್ಗ ನಗರಕ್ಕೆ ಸದ್ಗುರುಗಳು ನಗರದ ಶಾಂತಿ ಮತ್ತು ಸಮೃದ್ಧಿಗೆ ಹರಸಬೇಕೆಂದು ಮನವಿ ಮಾಡಿದರು. ಶಿವಮೊಗ್ಗದ ಶಾಸಕ ಚನ್ನಬಸಪ್ಪನವರು ಅಧ್ಯಕ್ಷತೆ ವಹಿಸಿ ಇಂತಹ ಕಾರ್ಯಕ್ರಮಗಳು ನಗರದಲ್ಲಿ ಆಗಾಗ ನಡೆದರೆ ನಗರದಲ್ಲಿ ಸೌಹಾರ್ದತೆ ವಾತಾವರಣ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.
ಪ್ರಾರಂಭದಲ್ಲಿ ಶಶಿರೇಖಾ ಕೆಕೆ ಇವರಿಂದ ಪ್ರಾರ್ಥನೆ ಮತ್ತು ಜಿ ವಿಜಯ ಕುಮಾರ್ ಇವರಿಂದ ಸ್ವಾಗತ ನಡೆಯಿತು.

Shivaganga Yoga Center ಈ ಸಂದರ್ಭದಲ್ಲಿ ಪ್ರಾಸ್ತಾವಿಕ ನುಡಿಗಳನ್ನು ಆಡಿದ ಸಾಹಿತಿ ಎಂ ಎನ್ ಸುಂದರ್ ರಾಜ್ ಮಾತನಾಡಿ ಶಿವಗಂಗಾ ಯೋಗ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ವಾರಣಾಸಿಯಲ್ಲಿ ನವಂಬರ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿರುವ 25 ಸಹಸ್ರ ಕುಂಡಗಳಲ್ಲಿ ನಡೆಯುವ ಹೋಮ ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿದ್ದು ಗುರುಗಳು ಅದಕ್ಕಾಗಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸ್ವರ್ವೇದ ಸಂದೇಶ ಯಾತ್ರೆಯನ್ನು ಕೈಗೊಂಡಿದ್ದಾರೆ ಇದರ ಅಂಗವಾಗಿ ಇಂದು ಶಿವಮೊಗ್ಗಕ್ಕೆ ಆಗಮಿಸಿ ಭಕ್ತರನ್ನು ಹರಸುತ್ತಿದ್ದಾರೆ, ಎಂದು ತಿಳಿಸಿದರು.

ಯೋಗಾಚಾರ್ಯ ಸಿವಿ ರುದ್ರಾರಾಧ್ಯ ಅವರು ಮಾತನಾಡಿ ಇಲ್ಲಿ ನಡೆಯುತ್ತಿರುವ ಈ ಜ್ಞಾನ ಮಹಾಯಜ್ಞ ತಮಗೆ ನೀಡಿದ ಒಂದು ಸದವಕಾಶ ಎಂದು ತಿಳಿಸಿದರು. ವೇದಿಕೆಯಲ್ಲಿ ಶ್ರೀಮತಿ ಸುಮಾ ಮತ್ತು ರಶ್ಮಿ ನಾಗರಾಜ್, ಸಂತ ಕಿಶನ್ ಲಾಲ್ ಜಿ, ಮುಕ್ತಿ ರಂಜನ್.. ಕಾಟನ್ ಜಗದೀಶ್. ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಧ್ಯಾನ ಪ್ರಾರ್ಥನೆ ಮತ್ತು ಭಜನಾ ಕಾರ್ಯಕ್ರಮಗಳು ನಡೆದವು. ಪಾಂಡುರಂಗ ಭಜನಾ ಮಂಡಳಿಯಿಂದ ಭಕ್ತಿಗೀತೆಗಳ ಗಾಯನ ನಡೆಯಿತು.
ಎರಡು ಕುಂಡಗಳಲ್ಲಿ ಹೋಮ ಹವನ ನಡೆದು ಎಲ್ಲ ಭಕ್ತರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಸ್ವಂತ ವಿಜ್ಞಾನ ದೇವ್ ಜಿ ಮಹಾರಾಜ್ ಇವರಿಗೆ ರೇಷ್ಮೆ ಶಾಲು ಹೊಂದಿಸಿ ಬೃಹತ್ ಈಶ್ವರನ ಮೂರ್ತಿಯನ್ನು ನೀಡಿ ಗೌರವಿಸಲಾಯಿತು.
ನ್ಯಾಮತಿ ಚನ್ನಬಸಪ್ಪ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಶ್ರೀ ಓಂಕಾರ ವಂದಿಸಿದರು.
ಆಗಮಿಸಿದ್ದ ಎಲ್ಲ ಭಕ್ತರಿಗೆ ಕೊನೆಯಲ್ಲಿ ಪ್ರಸಾದ ವಿನಿಯೋಗ ಮತ್ತು ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ಭಕ್ತಿ ಪ್ರವಚನದಲ್ಲಿ ಮಿಂದು ಕೃತಾರ್ಥರಾದರು.

Ranaji Trophy ಕರ್ನಾಟಕ – ಗೋವಾ ರಣಜಿ‌ ಕ್ರಿಕೆಟ್ ಪಂದ್ಯ ಡ್ರಾ ನಲ್ಲಿ ಮುಕ್ತಾಯ

0

Ranaji Trophy ಶಿವಮೊಗ್ಗದ ಕೆಎಸ್ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೋವಾ ತಂಡ
ಟಾಸ್ ಗೆದ್ದು ಬೋಲಿಂಗ್
ಆಯ್ಕೆ ಮಾಡಿಕೊಂಡಿತ್ತು.

ಮೊದಲು ಬ್ಯಾಟಿಂಗ್ ಮಾಡಿ ಕರ್ನಾಟಕ ತಂಡ
371 ರನ್ ಗಳಿಸಿತು‌
ನಂತರ ಬ್ಯಾಟಿಂಗ್ ಮಾಡಿದ್ದ ಗೋವಾ ತಂಡ 217 ಕ್ಕೆ ಎಲ್ಲ ವಿಕೇಟ್ ಕಳೆದುಕೊಂಡಿತು.

ಫಾಲೋ ಆನ್ ತಪ್ಪಿಸಿಕೊಳ್ಳದ ಗೋವಾತಂಡ ಮತ್ತೆ ಬ್ಯಾಟಿಂಗ್ ಮಾಡಿ ಒಂದು ವಿಕೆಟ್ ನಷ್ಟಕ್ಕೆ 143 ರನ್ನುಗಳನ್ನ ಗಳಿಸಿತ್ತು

ಈ ಪಂದ್ಯ ಡ್ರಾ ಆದ ಹಿನ್ನೆಲೆ, ಕರ್ನಾಟಕ ತಂಡಕ್ಕೆ 3 ಅಂಕ ಗೋವಾ ತಂಡಕ್ಕೆ 1ಅಂಕ ಹಂಚಲಾಗಿದೆ

Ranaji Trophy ಗ್ರೂಪ್ ಬಿ ನಲ್ಲಿ ಗೋವಾ ತಂಡ 10 ಅಂಕ ಪಡೆದು ಮೊದಲ ಸ್ಥಾನದಲ್ಲಿ ಇದ್ದರೆ, ಕರ್ನಾಟಕ 4 ಅಂಕ ಪಡೆದು 2ನೇ ಸ್ಥಾನದಲ್ಲಿದೆ

ನವೆಂಬರ್ ಒಂದರಿಂದ ಕೇರಳ ತಂಡದೊಂದಿಗೆ ಕರ್ನಾಟಕ ತಂಡ ಸೆಣಸಲಿದೆ
ಕರಣ್ ನಾಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.