Friday, February 6, 2026
Friday, February 6, 2026
Home Blog Page 12

ಜನವರಿ 25ರಂದು ‘ಗ್ಲೋಬಲ್ ಉತ್ಸವ–2026’ ವೈಭವ

0

ಮಾಲ್ನಾಡ್ ಎಜುಕೇಶನಲ್ & ಚಾರಿಟಬಲ್ ಟ್ರಸ್ಟ್ (ಆರ್) ಹಾಗೂ ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ಆಶ್ರಯದಲ್ಲಿ ‘ಗ್ಲೋಬಲ್ ಉತ್ಸವ–2026’ ಕಾರ್ಯಕ್ರಮವು ಜನವರಿ 25, ಭಾನುವಾರ ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಹರ್ಷ ದ ಫರ್ನ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶಪಥ ಸ್ವೀಕಾರ ಸಮಾರಂಭ (Oath Taking Ceremony), ವೈಟ್ ಕೋಟ್ ಸೆರೆಮನಿ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಮುಖ್ಯ ಸಚೇತಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಲೀಂ ಅಹಮದ್ ಅವರು ಭಾಗವಹಿಸಲಿದ್ದು, ಕಾರ್ಯಕ್ರಮಕ್ಕೆ ಶೋಭೆ ತರಲಿದ್ದಾರೆ.
ಗೌರವ ಅತಿಥಿಗಳಾಗಿ ಮಾಲ್ನಾಡ್ ಎಜುಕೇಶನಲ್ & ಚಾರಿಟಬಲ್ ಟ್ರಸ್ಟ್ (ಆರ್) ಅಧ್ಯಕ್ಷರಾದ ಕೆ.ಬಿ. ಬಶೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಡಾ. ಸಿ.ವಿ. ಯೋಗರಾಜ ಗೌಡ, ಡಾ. ಧನಂಜಯ ಸರ್ಜೀ, ಬಲ್ಕೀಸ್ ಬಾನು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಸುಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಸೋನಾ ಗ್ರೂಪ್ಸ್ ವ್ಯವಸ್ಥಾಪಕ ನಿರ್ದೇಶಕ ಅಲ್ ಹಾಜ್ ಇಕ್ಬಾಲ್ ಹಬೀಬ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಡಾ. ಇರ್ಫಾನ್ ಅಹಮದ್ ಎಚ್.ಬಿ. (ಎಂಬಿಬಿಎಸ್, ಎಂಡಿ) ವಹಿಸಲಿದ್ದು, ಗ್ಲೋಬಲ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪ್ರಾಂಶುಪಾಲರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡುವ ಈ ಸಮಾರಂಭವು ಶಿಸ್ತು, ಮೌಲ್ಯ ಹಾಗೂ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಲಿದೆ ಎಂದು ಆಸ್ಪತ್ರೆಯ ನಿರ್ದೇಶಕರಾದ ಡಾಕ್ಟರ್ ಇರ್ಫಾನ್ ಅಹಮದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Klive Special Article ಕೂಡಿ ಬಾಳಿದರೆ ಸ್ವರ್ಗ ಸುಖ ಲೇ: ಶ್ವೇತಾ ಸುಧೀರ್ , ಶೃಂಗೇರಿ

0

ಸಂಬಂಧದೊಳಗಿನ ಬಂಧನ:

Klive Special Article ಸಂಭಂದ ಅಂದ್ರೆ ಏನು ಎಂದು ಯೋಚನೆ ಮಾಡುತ್ತಾ ಕುಳಿತಾಗ, “ಬಂಧಗಳನ್ನು ಸೇರಿಸಿದಾಗ ಸಿಗೋದೇ ಸಂಬಂಧ” ಅನ್ನೋ ಕಲ್ಪನೆ ಮನಸ್ಸಿಗೆ ಬರುತ್ತದೆ. ಆದರೆ ಇಂದಿನ ಜಗತ್ತಿನಲ್ಲಿ ಸಂಭಂದಗಳೇ ಬಂಧನ ಅನ್ನೋ ಮನಸ್ಥಿತಿ ಹೆಚ್ಚಾಗಿ ಕಾಣಿಸುತ್ತಿದೆ. ಯಾರಿಗೂ ಯಾರೂ ಬೇಕಿಲ್ಲ ಅನ್ನೋ ಭಾವನೆ ಬೆಳೆದುಬಿಟ್ಟಿದೆ.
ಸಂಭಂದ ಅನ್ನೋ ಪದದ ಮೂಲ ಹುಡುಕುತ್ತ ಹೋದರೆ, “ಕೋಳಿ ಮೊದಲಾ, ಮೊಟ್ಟೆ ಮೊದಲಾ” ಅನ್ನೋ ಗೊಂದಲದಂತೆಯೇ ಇದು. ಹಾಗಾದರೆ ಸಂಭಂದದ ಆರಂಭ ಎಲ್ಲಿ? ಯಾರಿಂದ ಶುರು? ಇದು ಉತ್ತರವಿಲ್ಲದ ಪ್ರಶ್ನೆಯಂತೆಯೇ. ಭೂಮಿಯ ಮೇಲಿರುವ ಎಲ್ಲ ಜೀವಿಗಳನ್ನೂ ದೇವರ ಸೃಷ್ಟಿ ಎಂದು ನೋಡಿದರೆ, ಇಲ್ಲಿ ಇರುವ ಎಲ್ಲರೂ ಪರಸ್ಪರ ಸಂಬಂಧಿಕರೇ, ಎಲ್ಲರೂ ನಮ್ಮವರೇ.
ಹೀಗಿರುವಾಗ, ಯಾಕೆ ಇಷ್ಟು ಭಿನ್ನಾಭಿಪ್ರಾಯಗಳು?
ಯಾಕೆ “ನನ್ನದು”, “ನಾನು” ಅನ್ನೋ ಅಹಂಕಾರ?
ಯಾಕೆ ಮೇಲು–ಕೀಳು ಅನ್ನೋ ಭಾವನೆ?

ಎಲ್ಲವನ್ನೂ ಕೊಡುವುದು ದೇವರು. ನಮ್ಮದು ಅನ್ನೋದೇನೂ ಇಲ್ಲ ಇಲ್ಲಿ. ಇರುವಷ್ಟು ದಿನ ಎಲ್ಲರ ಒಳಿತನ್ನೇ ಬಯಸುತ್ತ, ಸಂತೋಷದಿಂದ ಬದುಕಿದರೆ ಎಷ್ಟು ಚೆನ್ನ. ಬರುವಾಗ ಒಂಟಿಯಾಗಿ ಬರುತ್ತೇವೆ, ಹೋಗುವಾಗಲೂ ಒಂಟಿಯಾಗೇ ಹೋಗುತ್ತೇವೆ. ಮಧ್ಯದಲ್ಲಿ ಅಪ್ಪ–ಅಮ್ಮ, ತಮ್ಮ–ತಂಗಿ, ಅಣ್ಣ–ಅಕ್ಕ, ಗಂಡ-ಹೆಂಡತಿ, ಮಕ್ಕಳು, ಅತ್ತೆ–ಮಾವ, ಗೆಳೆಯರು… ಹೀಗೆ ಅನೇಕ ಸಂಬಂಧಗಳು ನಮ್ಮ ಜೀವನಕ್ಕೆ ಬಂದು ಹೋಗುತ್ತವೆ. ಇದ್ದಷ್ಟು ದಿನ ನಗುತ್ತಾ, ಎಲ್ಲರನ್ನು ನಗಿಸುತ್ತಾ ಬದುಕಲು ಯಾಕೆ ಸಾಧ್ಯವಾಗಬಾರದು?
ನಮ್ಮದು ಅನ್ನೋದು ಶಾಶ್ವತ ಅಲ್ಲ ಅನ್ನೋದು ಗೊತ್ತಿದ್ದರೂ, ಯಾಕೆ ದ್ವೇಷ, ಕೋಪ, ಭಿನ್ನಾಭಿಪ್ರಾಯ? ಸಿ. ಅಶ್ವಥ್ ಅವರು ಹಾಡಿದ ಹಾಡಿನಂತೆ “ಒಳಿತು ಮಾಡು ಮನುಷಾ, ನೀ ಇರೋದು ಮೂರು ದಿವಸಾ ” , “ಮೂರು ದಿನದ ಜೀವನವೆಂಬ ಸಂತೆಯಲ್ಲಿ, ದ್ವೇಷವೆಂಬ ಕಂತೆಯನ್ನು ಸುಟ್ಟು ಹಾಕಿ ನಗು ನಗುತ್ತ ಬದುಕೋದು ಯಾಕೆ ಕಷ್ಟ” .
ಒಬ್ಬ ಶ್ರೀಮಂತನ ಕಥೆ ಕೇಳಿದ್ದೇನೆ—ಅವನು ಅಪಾರ ಸಂಪತ್ತು ಗಳಿಸಿದ್ದ, ಆದರೆ ಸಂಪತ್ತು ಗಳಿಸುವ ಭರದಲ್ಲಿ ಎಲ್ಲರ ಪ್ರೀತಿಯನ್ನು ಗಳಿಸಲು ಮರೆತೇಬಿಟ್ಟ, ಅವನು ಮರಣಹೊಂದಿದಾಗ ಅವನ ಚಟ್ಟ ಹೊರಲು ಬಂದಿದ್ದು ಮೂವರು ಮಾತ್ರ! ಜನರ ಪ್ರೀತಿಯನ್ನು ಸಂಪಾದನೆ ಮಾಡಲು ಆಗದಂತಹ ಶ್ರೀಮಂತಿಕೆ ಯಾಕೆ ಬೇಕು?
ಸತ್ತಮೇಲೆ ಏನಾಗುತ್ತೋ ಯಾರಿಗೂ ಗೊತ್ತಿಲ್ಲ. ಇರುವಾಗ ಬೇಕಾದದ್ದು ಸಂಭಂದಗಳನ್ನ ಉಳಿಸಿಕೊಳ್ಳೋ ಪ್ರಯತ್ನ. ನಾವು ಸತ್ತಮೇಲೆ ಜನ ಎಷ್ಟು ದಿನ ಅಳ್ತಾರೆ? ಒಂದು ದಿನ, ಒಂದು ವಾರ, ಮೂರು ತಿಂಗಳು… ನಂತರ ಪರಿಸ್ಥಿತಿ ಎಲ್ಲವನ್ನೂ ಮರೆಸುತ್ತದೆ. ವರ್ಷಕ್ಕೆ ಒಮ್ಮೆ ನೆನಪಾಗೋದು ಕೂಡಾ ಕಷ್ಟಕರ ಅನ್ನೋ ಬಾಳು ನಮ್ಮ ಜೀವನ. ಯಾರಾದರೂ ನಮಗೆ ಆಗೋದೇ ಇಲ್ಲ ಅಂದ್ಕೊಂಡರೆ ಇರೋದು ಎರಡು ಮಾರ್ಗ—ಮಾತಾಡದೆ ಇರೋದು, ಅಥವಾ ಅಪಪ್ರಚಾರ ಮಾಡದೇ ದೂರವಿರೋದು. ಆದರೆ ದ್ವೇಷಿಸೋದು, ಕೋಪ ಮಾಡಿಕೊಳ್ಳೋದು, ಮನಸ್ಸು ಹಾಳು ಮಾಡಿಕೊಳ್ಳೋದು—ಇವುಗಳಿಂದ ಏನು ಲಾಭ?
Klive Special Article ” ದ್ವೇಷ ” ಮಾಡಿದರೂ ಸಾಯ್ತೀವಿ, ಪ್ರೀತಿ ಮಾಡಿದರೂ ಸಾಯ್ತೀವಿ, ಹಾಗಿದ್ದಾಗ ಯಾಕೆ ದ್ವೇಷದ ಹೊರೆ ಹೊತ್ತು ಬದುಕಬೇಕು? ದ್ವೇಷವಿರುವ ವ್ಯಕ್ತಿಯ ಜೊತೆ ಒಮ್ಮೆ ಪ್ರೀತಿಯಿಂದ ಮಾತನಾಡಿದರೆ, ಅವರ ಮನಸ್ಸು ಕೂಡಾ ಬದಲಾಗೋ ಸಾಧ್ಯತೆ ಇದೆ. ಇಷ್ಟು ಸುಲಭವಾಗಿ ಉಳಿಸಬಹುದಾದ ಸಂಬಂಧವನ್ನು ಯಾಕೆ ಭಿನ್ನಾಭಿಪ್ರಾಯಗಳಿಂದ ಹಾಳು ಮಾಡಿಕೊಳ್ಳಬೇಕು? ಭಾಂದವ್ಯ ಅನ್ನೋದು ಅಷ್ಟು ಸುಲಭವಾಗಿ ಬರೋಲ್ಲ ಅಲ್ಲವೇ, ಒಮ್ಮೆ ನಮ್ಮವರು, ನಮ್ಮ ಪ್ರೀತಿಪಾತ್ರರು ಅನ್ನೋ ಮನಸ್ಥಿತಿ ಬಂದಮೇಲೆ ಸಂಭಂದ ಉಳಿಸೋದು ಅಷ್ಟು ಕಷ್ಟವಲ್ಲ. ಬೇಕಾಗಿರುವುದು ಪ್ರೀತಿಯ ಮಾತು, ನಂಬಿಕೆ, ವಿಶ್ವಾಸ..
ಒಂದು ಸಂಭಂದ ಕೆಟ್ಟರೆ, ಅದಕ್ಕೆ ಇಬ್ಬರೂ ಕಾರಣ. ಎರಡೂ ಕೈ ಇಲ್ಲದೇ ಚಪ್ಪಾಳೆಯಾಗಲು ಸಾಧ್ಯವೇ? ಇದಕ್ಕೆ ಪ್ರಮುಖ ಕಾರಣ “ನಾನು” ಅನ್ನೋ ಅಹಂಕಾರ. “ನಾನೇ ಏಕೆ ಬಗ್ಗಬೇಕು?” ಅನ್ನೋ ಹಠ. ಸಂಭಂದ ಉಳಿಸಬೇಕಾದರೆ ಒಬ್ಬರು ಬಗ್ಗಬೇಕು ಅಥವಾ ಇಬ್ಬರೂ ಬಗ್ಗಬೇಕು; ಅಷ್ಟೂ ಮಾಡಲು ಸಾಧ್ಯವಿಲ್ಲ ಅಂದರೆ ಅದು ನಿಜವಾದ ಸಂಭಂದವೇ? ಅಥವಾ ಕೇವಲ ಬಂಧನವೇ?
ಅಹಂಕಾರ ಇರುವ ತನಕ ಸಂಭಂದ ಗಟ್ಟಿ ಆಗೋದಿಲ್ಲ. “ನಾನು ” “ನನ್ನದು” ಅನ್ನೋ ಅಹಂಕಾರವೇ ಸಂಭಂದಗಳನ್ನು ಮುರಿಯುತ್ತದೆ. ಎಲ್ಲರಿಗಾಗಿ ಬದುಕಬೇಕು. ನಮಗೆ ಬದುಕುವ ಹಕ್ಕು ಇದ್ದಂತೆ ಎಲ್ಲರಿಗೂ ಇರುತ್ತದೆ. ಎಲ್ಲರೂ ನಮ್ಮವರೇ ಅನ್ನೋ ಮನಸ್ಸು ಸಂಭಂದಗಳನ್ನು ಜೋಡಿಸುವ ಮೂಲ. ಪ್ರೀತಿ ಕೊಟ್ಟು ಪ್ರೀತಿ ಪಡೆಯಬೇಕು. ನಂಬಿಕೆಗೆ ಅರ್ಹರಾಗಿ ನಂಬಿಕೆ ಗಳಿಸಬೇಕು. ಪ್ರೀತಿ ಮತ್ತು ನಂಬಿಕೆ—ಇವೇ ಸಂಭಂದದ ತಳಹದಿ. ಅಪನಂಬಿಕೆ ಬಂದ ಕ್ಷಣದಿಂದಲೇ ಸಂಭಂದದಲ್ಲಿ ಬಿರುಕುಮೂಡುತ್ತದೆ. ಸಂಭಂದಗಳಲ್ಲಿ ಗಳಿಸಿದ ಪ್ರೀತಿ–ವಿಶ್ವಾಸವನ್ನು ಸಣ್ಣ ಪುಟ್ಟ ವಿಷಯಗಳಿಗಾಗಿ ನಾಶ ಮಾಡಿಕೊಳ್ಳದೇ ಸಾಗೋದು ಜೀವನದ ಉತ್ತಮ ಮಾರ್ಗ. ಪರಸ್ಪರ ಪ್ರೀತಿ ಗೌರವ ನಂಬಿಕೆ ಇವುಗಳೇ ಉತ್ತಮ ಬಾಂಧವ್ಯದ ಬುನಾದಿ. ಎಲ್ಲರೂ ನಮ್ಮವರೆಂದು ಪ್ರೀತಿಸುತ್ತ, ಇರುವಷ್ಟು ದಿನ ಸಂತೋಷವಾಗಿ ಬದುಕೋಣ.

ಬಿದನೂರಿನ ಬೆಲ್ಲ, ಸವಿಯಿರಿ ಎಲ್ಲ

0

ಐತಿಹಾಸಿಕ ನಗರಿ, ಹಲವು ಪ್ರಥಮಗಳನ್ನು, ಕೌತುಕಗಳನ್ನೂ ತನ್ನ ಒಡಲಿನೊಳಗಿಟ್ಟುಕೊಂಡು ಇಂದಿಗೂ ಸಂಶೋಧಕರಿಗೆ, ಅಧ್ಯಯನಕಾರರಿಗೆ ಸವಾಲು ಒಡ್ಡುವ ಬಿದನೂರು(ವೇಣುಪು ರ) ದ ಮಾರಿ ಜಾತ್ರೆ. ಬಿದನೂರಿನ ಅರಸರು ಸಾಂಪ್ರದಾಯಿಕ ಶೈಲಿಯ ಹಬ್ಬವನ್ನು ಬಿಡದೆ ಆಚರಿಸಿದವರು, ವರುಷಕ್ಕೊಮ್ಮೆ ಮಾರಿ(ದಂಡಿನ ಮಾರಮ್ಮ) ಗೆ ಬಲಿ ನೈವೇದ್ಯಮಾಡಿ ಯುದ್ದಕಾಲದಲ್ಲಿ ಶತೃವಿನ ರಕ್ತದ ಕಲೆಯನ್ನು ತಮ್ಮ ಶಸ್ತ್ರದಲ್ಲಿ ಉಳಿಸಿಕೊಂಡವರು. ಗುಜರಿಪೇಟೆ ವೆಂಕಟರಮಣ, ಕಂಬದ ನರಸಿಂಹ, ಕಂಬದ ಆಂಜನೇಯರಂತೂ ಕಣ್ಮನ ತಣಿಸು ಮೂರ್ತಿಗಳು.

ಇನ್ನು ಕೆಳದಿ, ಬಿದನೂರು,(ನಗರ) ಕಪಿಲೆ ದುರ್ಗ(ಕವಲೇ ದುರ್ಗ ಕೆಳದಿ ಮನೆತನಕ್ಕೆ ಒಂದಕ್ಕೊಂದು ಬೆಸೆದ ಕೊಂಡಿ. ಕೆಳದಿಯನ್ನು ಸುಮಾರು ೩೦೦ ವರ್ಷಗಳ ಕಾಲ ಆಳಿದ ಹಿರಿಮೆ ಕೆಳದಿಯ ಅರಸುಮನೆತನದ್ದಾಗಿದೆ. ಕೆಳದಿ, ಇಕ್ಕೇರಿ, ನಗರ(ಬಿದನೂರು, ವೇಣುಪುರ) ಪ್ರಾಚೀನ ಕಾಲದ ನಗರಗಳು. ಈ ನಗರಗಳು ಶಿವಮೊಗ್ಗ ಜಿಲ್ಲೆಯ ಕಣ್ಣುಗಳು ಇದ್ದಂತೆ.

ಅಲ್ಲದೆ ಕೆಳದಿ ಅರಸರ ಬಿರುದಾವಳಿಗಳು ಹೀಗಿದೆ. ಪರಯಡವಮುರಾರಿ
ಕೋಟೆಕೋಲಾಹಲೇನ
ಪ್ರವಿಚಲಿತವಿಶುದ್ಧಾದ್ವೈತಸಿದ್ಧಾಂತಭೂಮ್ನಾ|
ಅಸಿಯುಗಲಭೃತಾ ಚ ವೈರಿಸಪ್ತಾಂಗಲಕ್ಷ್ಮೀ ಹರಹರಿತ ಪಟೋದ್ಯತ್ಕೇತನಶ್ರೀಯುತೇನ|
ಚೌಡಪ್ಪನಾಯಕ ಸಮುನ್ಮಿಷಿತಾನ್ಚವಾಯ
ದುಗ್ದಾಬ್ಧಿವೃದ್ದಿಕರಕೈರವಬಾಂಧವೇನ| ಏಕಾಂಗಿವೀರರಣರಂಗವಿಹಾರಧೀರ ದೋನೇಜ ಪಶ್ಚಿಮ ಸರಸ್ವದಧೀಶ್ವರೇಣ. ಇವುಗಳು ಬಿರುದುಗಳು.

ಸಿಸ್ತಿನ ಶಿವಪ್ಪನಾಯಕರ ಕಾಲದಲ್ಲಿ ಕೃಷಿಗೆ ಕೊಟ್ಟಷ್ಟು ಮಹತ್ವ ಬಹುಶಃ ಕನ್ನಡದ ಅರಸರು ಮತ್ಯಾರು ಕೊಟ್ಟಿಲ್ಲವೆಂದೇ ಹೇಳಬೇಕು.‌ಸಾಂಪ್ರದಾಯಿಕ ಬೆಳೆಗಳು, ನೀರಾವರಿ ಕಾಲುವೆ, ಆಲೆಮನೆಗಳು ಇವರ ಕಾಲದಲ್ಲಿ ಉನ್ನತಿ ಪಡೆಯಿತು.

ತಿಗಳರ ಕುಲದೇವರಾದ ಧರ್ಮರಾಯನ ಕರಗವನ್ನು ಮೊಟ್ಟಮೊದಲು ಆರಂಭಿಸಿದ್ದು
ಕೆಳದಿ ಅರಸು ಮನೆತನದ ಕಾಲದಿಂದಲೇ.

ಮರೆಯಾಗುತ್ತಿರುವ ಸಾಂಪ್ರದಾಯಿಕ ಆಲೆಮನೆಗಳು.

ಕಬ್ಬು ಭೂಮಿಯಲ್ಲಿ ಅವತರಿಸಿ ಅದರಿಂದ ಬೆಲ್ಲ ಮಾಡುವ ವಿಧಾನವನ್ನು ಮನುಷ್ಯ ಅದ್ಯಾವಾಗ ಕಂಡುಹಿಡಿದನೋ ಭಗವಂತನೇ ಬಲ್ಲ, ಅಂದಿನಿಂದಿಲೂ ಇಂದಿನವರೆಗೂ ಕಬ್ಬಿನ ಹಾಲಿನಿಂದ ಬೆಲ್ಲವನ್ನು ತಯಾರಿಸುತ್ತಲೇ ಇದ್ದಾರೆ. ಹಿಂದೆಲ್ಲಾ ಕೋಣವನ್ನು, ಎತ್ತನ್ನು ಕಟ್ಟಿ ಗಾಣವನ್ನು ಹೂಡಿ ಕಬ್ಬನ್ನು ಅರೆದು ರಸತೆಗೆದು ಭೂಮಿಯ ಆರೇಳು ಅಡಿಗಳ ಆಳದಲ್ಲಿ ಒಲೆಗಳನ್ನು ನಿರ್ಮಿಸಿ ಕಟ್ಟಿಗೆಗಳನ್ನು, ದಪ್ಪ ದಪ್ಪ ಕೊರಡನ್ನು ಹಾಕಿ ಹದವಾದ ಬೆಂಕಿಯನ್ನು ಮಾಡಿಕೊಂಡು ದೊಡ್ಡ ದೊಡ್ಡ ತಪ್ಪಲೆಗಳಿಗೆ ಹಾಲನ್ನು ಸುರಿದು ಹದವಾಗಿ ಕೈಯಾಡಿಸುತ್ತಾ ಹಾಲನ್ನು ಚೆನ್ನಾಗಿ ಕುದಿಸಿ ಪಾಕವನ್ನು ಮಾಡುತ್ತಲೇ ಅದನ್ನು ದೊಡ್ಡ ಹರಿವಾಣಕ್ಕೆ ಸುರಿದು ಆರಲು ಬಿಟ್ಟರೆ ಅದು ನೊರೆ ಬೆಲ್ಲವಾಗಿ ಅದನ್ನು ತಿನ್ನುವುದೇ ಒಂದು ಮಹದಾನಂದ. ನೊರೆಬೆಲ್ಲ, ಜೋನಿಬೆಲ್ಲ, ಅಚ್ಚು ಬೆಲ್ಲ, ವಾಲೆಬೆಲ್ಲ, ಶುಂಠಿ ಬೆರೆಸಿದ ಬೆಲ್ಲ ಎಲ್ಲವೂ ಸಾಂಪ್ರದಾಯಿಕ ರೀತಿಯಲ್ಲಿ ರಾಸಾಯನಿಕ ಮುಕ್ತವಾಗಿ ತಯಾರಾಗುತಿತ್ತು.

ಈಗ ಕೋಣ, ಎತ್ತಿನ ಬದಲು ಯಾಂತ್ರಿಕ ಮೋಟಾರು ಬಳಸಿ ಕಬ್ಬನ್ನು ಅರೆಯಲಾಗುತ್ತಿದೆ. ಕಬ್ಬನ್ನು ಹಲ್ಲಿನಲ್ಲಿ ಸಿಗಿದು ಕಚ್ಚಿ ತಿಂದು ರಸವನ್ನು ನುಂಗುವ ಕಲೆಯೂ ತಿಳಿಯದ ಇಂದಿನ ಪೀಳಿಗೆಗೆ ಸಾಂಪ್ರದಾಯಿಕ ಶೈಲಿಯ ಆಲೆಮನೆ ಎಂದರೇನೆಂದು ಚಿತ್ರದಲ್ಲಿ ಮಾತ್ರ ತೋರಿಸಬೇಕಾಗಿದೆ. ಕಬ್ಬುಡೊಂಕಾದರೇನು ಸಿಹಿ ಡೊಂಕೆ ವಿಠ್ಠಲ.

ವಿಶೇಷ ಧನ್ಯವಾದಗಳು:
ಚಿತ್ರ ಕೃಪೆ: ಡಾ. ಶಾಂತಾರಾಮ್ ಸಾಮಕ್,
ಶ್ರೀಕಂಠ ಶರ್ಮ,‌ಪತ್ರಕರ್ತರು,
ಹೊಸನಗರ

✍️ದಿಲೀಪ್ ನಾಡಿಗ್
6361124316

ಬೊಮ್ಮನಕಟ್ಟೆ ಹಾಗೂ ನ್ಯೂ ಮಂಡ್ಲಿ ಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

0

ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಂದು ನಗರದ ಬೊಮ್ಮನಕಟ್ಟೆ ಹಾಗೂ ನ್ಯೂ ಮಂಡ್ಲಿ ಪ್ರದೇಶಗಳಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣ ಹಾಗೂ ಯುಜಿಡಿ (UGD) ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ನ್ಯೂ ಮಂಡ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಬಡಾವಣೆಗಳಲ್ಲಿ ಸುಗಮ ಸಂಚಾರ ಹಾಗೂ ನೈರ್ಮಲ್ಯ ಕಾಪಾಡುವುದು ನಮ್ಮ ಆದ್ಯತೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರ ಅನುಕೂಲಕ್ಕಾಗಿ ಈ ಪ್ರದೇಶದ ಪ್ರತಿಯೊಂದು ಗಲ್ಲಿಯೂ ಅಭಿವೃದ್ಧಿ ಕಾಣಲಿದೆ.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಬಿಜೆಪಿ ಶಿವಮೊಗ್ಗ ನಗರದ ಪ್ರಧಾನ ಕಾರ್ಯದರ್ಶಿಗಳಾದ ನವಲೆ ಮಂಜು, ಸ್ಥಳೀಯ ಮುಖಂಡರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.

B.Y.Raghavendra “ಭಾವಸಾರ ಸಂಸ್ಕೃತಿ ಭವನ”ವನ್ನು ಲೋಕಾರ್ಪಣೆಗೊಳಿಸಿದ ಸಂಸದ ರಾಘವೇಂದ್ರ

0

B.Y.Raghavendra ಶಿವಮೊಗ್ಗದ ಆಲ್ಕೋಳ ಬಡಾವಣೆಯಲ್ಲಿ ಭಾವಸಾರ ಸಂಸ್ಕೃತಿ ಭವನ ಟ್ರಸ್ಟ್ ಹಾಗೂ ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾ ವತಿಯಿಂದ ನಿರ್ಮಿಸಲಾಗಿರುವ ನೂತನ “ಭಾವಸಾರ ಸಂಸ್ಕೃತಿ ಭವನ”ವನ್ನು ಸಂಸದ ರಾಘವೇಂದ್ರ ಲೋಕಾರ್ಪಣೆಗೊಳಿಸಿದರು

B.Y.Raghavendraಈ ಭವನವು ಸಮಾಜದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಮತ್ತು ಒಗ್ಗಟ್ಟಿಗೆ ಸಾಕ್ಷಿಯಾಗಲಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹಾರೈಸಿದರು. ಈ ಸಮಾರಂಭದಲ್ಲಿ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಪ್ರಶ್ನಿಸುವ ಹಕ್ಕನ್ನೂ ನೀಡುವ ಮತದಾನ ಶ್ರೇಷ್ಟತಮ ಪ್ರಕ್ರಿಯೆ : ನ್ಯಾ.ಮಂಜುನಾಥ ಜಿ. ಎ.

0

ಮತದಾನ ಒಂದು ಶ್ರೇಷ್ಟವಾದ ಪ್ರಕ್ರಿಯೆಯಾಗಿದ್ದು ಇದು ನಮಗೆ ಪ್ರಶ್ನಿಸುವ ಹಕ್ಕನ್ನೂ ನೀಡುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ಜಿ ಎ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಘೂ ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಕುವೆಂಪು ರಂಗಮAದಿರದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ವಿಶಾಲ ಮತ್ತು ಸಂಬತ್ಭರಿತ ದೇಶವಾಗಿದ್ದರೂ ಸ್ವಾತಂತ್ರಾö್ಯ ಮುನ್ನ ಒಗ್ಗಟ್ಟಿನ ಕೊರತೆ ಕಾರಣ ಉತ್ತಮ ನಾಯಕರನ್ನು ಆರಿಸಲು ಆಗದೇ ನಾಯಕನ ಕೊರತೆ ಕಾಣುತ್ತಿತ್ತು. ಸ್ವಾತಂತ್ರಾö್ಯ ನಂತರ ಸಂವಿಧಾನ ರಚನೆಯಾದ ಮೇಲೆ ಮುಕ್ತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಆರಂಭಿಸಿದೆವು. ಚುನಾವಣೆ ಎಂಬುದೊAದು ಶ್ರೇಷ್ಟತಮ ಪ್ರಕ್ರಿಯೆಯಾಗಿದ್ದು ಎಲ್ಲ ಮತದಾರರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮತದಾನವು ನಮ್ಮ ನಾಯಕರ ಕುರಿತು ಪ್ರಶ್ನಿಸುವ ಹಕ್ಕನ್ನು ಸಹ ನೀಡುವುದರಿಂದ ಇದೊಂದು ಉತ್ಕೃಷ್ಟ ಕೆಲಸವಾಗಿದೆ. ಅತ್ಯಂತ ನಿಷ್ಟೆ ಮತ್ತು ನ್ಯಾಯಪರವಾಗಿ ಚುನಾವಣೆಗಳನ್ನು ಮಾಡಬೇಕು. ನಾವೆಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಜಿಲ್ಲಾಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ನಾವು ರಾಷ್ಟçಕ್ಕಾಗಿ ಮಾಡುವ ಪ್ರಮುಖ ಕೆಲಸ ಮತದಾನವಾಗಿದ್ದು, ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳುವುದು ಅತಿ ಮುಖ್ಯ ಕೆಲಸವಾಗಿದೆ ಎಂದರು.
ಚುನಾವಣಾ ಪ್ರಕಿಯೆ ಬಗ್ಗೆ, ತಾವು ಆರಿಸಲಿರುವ ನಾಯಕರ ಬಗ್ಗೆ ಸರಿಯಾಗಿ ತಿಳಿದುಕೊಂಡು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು. ನಗರ ಪ್ರದೇಶದಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ನಾಗರೀಕರಲ್ಲಿ ಈ ನಿರಾಸಕ್ತಿ ಹೋಗಬೇಕು. ಯುವ ಮತದಾರರು ಮತದಾನದ ಕುರಿತು ಜಾಗೃತಿ ಮೂಡಿಸಬೇಕು ಎಂದ ಅವರು ಮತದಾನದಲ್ಲಿ ಮೂಲ ದಾಖಲಾತಿ ಮತದಾರರ ಪಟ್ಟಿಯಾಗಿದ್ದು, ಇದು ಸಮರ್ಪಕವಾಗಿದ್ದರೆ ಮುಂದಿನ ಎಲ್ಲ ಹಂತಗಳು ಸುಸೂತ್ರವಾಗಿ ಆಗುತ್ತದೆ. ಆದ್ದರಿಂದ ಪ್ರತಿ ಮತದಾರ ತನ್ನ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯೇ ಎಂದು ಪರಿಶೀಲಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ(ಎಸ್‌ಐಆರ್) ಪೂರ್ವಭಾವಿ ಚಟುವಟಿಕೆಗಳು ಚೆನ್ನಾಗಿ ನಡೆಯುತ್ತಿದ್ದು ಚುನಾವಣಾ ಆಯೋಗದ ನಿರ್ದೇಶನದಂತೆ ಶೇ. 100 ಕಾರ್ಯ ಸಾಧಿಸುತ್ತೇವೆ. ಎಲ್ಲ ಬಿಎಲ್ ಓಗಳು ಮತದಾರರ ಮ್ಯಾಪಿಂಗ್, ಪ್ರೊಜೆನಿ ಮ್ಯಾಪಿಂಗ್ ಕಾರ್ಯ ಮಾಡುವಲ್ಲಿ ಸಹಕರಿಸಬೇಕು. ಬಿಎಲ್‌ಓ ಸೇರಿದಂತೆ ಎಲ್ಲ ಹಂತದ ಚುನಾವಣಾ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿ ಜಿಲ್ಲೆಗೆ ಒಳ್ಳೆಯ ಹೆಸರು ತರೋಣ ಎಂದರು..
ಜಿಲ್ಲಾ ಪೊಲೀಸ್ ವರಿಷ್ಟಾದಿಕಾರಿ ನಿಖಿಲ್ ಬಿ ಮಾತನಾಡಿ, ಚುನಾವಣೆಯ ಸಂಪೂರ್ಣ ಪ್ರಕ್ರಿಯೆ ಸಾಮಾನ್ಯವಾದುದ್ದಲ್ಲ. ಚುನಾವಣೆ ಒಂದು ಅತಿ ಮುಖ್ಯ ಕೆಲಸವಾಗಿದ್ದು ಸಂವಿಧಾನದ ಎಲ್ಲ ಆಶಯಗಳನ್ನು ಜಾರಿಗೆ ತರುವ ಒಂದು ಪ್ರಮುಖ ಪ್ರಕ್ರಿಯೆಯಾಗಿದೆ. ಬಿಎಲ್‌ಓ ಮಟ್ಟದಿಂದ ಎಲ್ಲ ಹಂತದ ಅಧಿಕಾರಿಗಳು ಕಷ್ಟು ಪಟ್ಟು ಕೆಲಸ ಮಾಡುತ್ತೀರಿ. ಇದು ನಾವು ಸಂವಿಧಾನಕ್ಕಾಗಿ ಮಾಡುವ ಕೆಲಸ. ಅತ್ಯಂತ ಸಮರ್ಪವಾಗಿ ಮಾಡಬೇಕು.
ಸ್ವೀಪ್ ಚಟುವಟಿಕೆಯಿಂದ ಹಿಡಿದು ಮತಗಳ ಎಣಿಕೆ ವರೆಗೆ ಅನೇಕ ಕೆಲಸಗಳಿದ್ದು ಅತ್ಯಂತ ಜವಾಬ್ದಾರಿಯಿಂದ ಮಾಡಬೇಕು. ಪ್ರತಿಯೊಂದು ಚುನಾವಣೆಯನ್ನು ಹೆಮ್ಮೆಯಿಂದ ಮಾಡಬೇಕು. ಇವಿಎಂ ಒಂದು ಅದ್ಭುತ ಆಯುಧ ಎಂದೇ ಹೇಳಬಹುದಾಗಿದ್ದು ಇದನ್ನು ಅಭೂತಪೂರ್ವವಾಗಿ ಮಾಡಿದ್ದಾರೆ.
ಪ್ರಜಾಪ್ರಭುತ್ವ ಎತ್ತಿ ಹಿಡಿಯುವುದು ಚುನಾವಣೆಯಾಗಿದ್ದು ನಾವೆಲ್ಲಾ ನಮ್ಮ ವಿವೇಚನೆ ಉಪಯೋಗಿಸಿ ಮತ ಚಲಾಯಿಸಬೇಕು. ಪ್ರತಿ ಮತದಾರರು ಪಕ್ಷದ ಪ್ರಣಾಳಿಕೆಯನ್ನು ಸರಿಯಾಗಿ ಓದಿಕೊಂಡು, ಯೋಚಿಸಿ ಮತದಾನ ಮಾಡಬೇಕು. ಮಹಿಳೆಯರು ಸಕ್ರಿಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ತಮಗೆ ಸರಿಯಾಗಿ ಕಂಡ ಅಭ್ಯರ್ಥಿಗೆ ಮತ ಹಾಕಿರಿ ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ.ಎಸ್. ‘ನನ್ನ ಭಾರತ ನಮ್ಮ ಮತ ನಾನು ಭಾರತೀಯ’ ಎಂಬ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 1752885 ಜನ ನೋಂದಯಿತ ಮತದಾರರ ಪೈಕಿ 1378579 ಜನರು ಮಾತ್ರ ಮತ ಚಲಾವಣೆ ಮಾಡಿರುತ್ತಾರೆ. 2023 ರ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರದಲ್ಲಿ ಅತಿ ಕಡಿಮೆ ಪ್ರಮಾಣದ ಅಂದರೆ ಶೇ. 68.96 ಮತದಾನವಾಗಿದೆ.
ಮತದಾನದಲ್ಲಿ ಎಲ್ಲ ಮತದಾರರು ಪಾಲ್ಗೊಳ್ಳಬೇಕಿರುವುದು ಅತಿ ಅವಶ್ಯವಾಗಿದ್ದು 2013 ರಲ್ಲಿ ಸರ್ವೋಚ್ಚ ನ್ಯಾಯಾಲಯವು ನೋಟಾ(ನನ್ ಆಫ್ ದಿ ಎಬವ್) ಅಂದರೆ ಯಾವುದೇ ಅಭ್ಯರ್ಥಿಗೆ ಮತ ನೀಡಲು ಇಷ್ಟವಿಲ್ಲ ಎಂಬುದನ್ನು ನಮೂದಿಸಲು ಅವಕಾಶವನ್ನು ನೀಡುವ ಮೂಲಕ ನಮ್ಮ ಮೂಲಭೂತ ಹಕ್ಕನ್ನು ಕರ್ತವ್ಯ ಕೂಡ ಆಗಿದೆ ಎಂದು ಆದೇಶಿಸಿದೆ. ಆದ್ದರಿಂದ ಯಾವುದೇ ಅಭ್ಯರ್ಥಿಗಳಿಗೆ ಮತ ಹಾಕಲು ಇಷ್ಟವಿಲ್ಲದಿದ್ದರೆ ನೋಟಾ ಹಾಕುವ ಮೂಲಕವಾದರೂ ಶೇ. 100 ಮತದಾನವಾಗಬೇಕು ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್ ವಿ. ಮಾತನಾಡಿ, ನಮ್ಮ ದೇಶದಲ್ಲಿ ಸಂವಿಧಾನ ರಚನೆಯಾದ ಮೊದಲನೇ ದಿನದಿಂದ ಸಾರ್ವತ್ರಿಕ ಮತದಾನದ ಮೂಲಕ ಮಹಿಳೆಯರಿಗೆ ಸಮಾನ ಹಕ್ಕು ನೀಡಲಾಗಿದೆ. ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಮುಕ್ತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿ ಮತಗಟ್ಟೆಗಳಲ್ಲಿ ಒಂದು ಮದುವೆಯಂತೆ ನಡೆಯುತ್ತದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಬಿಎಲ್‌ಓ ಗಳ ಕಾರ್ಯ ಪ್ರಮುಖವಾಗಿದ್ದು ನಿಮ್ಮ ಶ್ರಮ ಅಭಿನಂದನಾರ್ಹವಾಗಿದೆ ಎಂದ ಅವರು ಚುನಾವಣಾ ಆಯೋಗವು ನೀಡುವ ಸೂಚನೆ, ನಿರ್ದೇಶನಗಳ ಅನುಗುಣವಾಗಿ ನಾವೆಲ್ಲ ಚುನಾವಣಾ ಕೆಲಸಗಳನ್ನು ಮಾಡೋಣ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಹಾಗೂ ಅತ್ಯುತ್ತಮ ಬಿಎಲ್‌ಓ ಗಳು, ಅತ್ಯುತ್ತಮ ಸೂಪರ್‌ವೈಸರ್ ಗಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಮತ್ತು ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಮತದಾರರ ನೋಂದಣಾಧಿಕಾರಿ ಪ್ರಶಸ್ತಿ ಪಡೆದ ಪಾಲಿಕೆಯ ಆಯುಕ್ತರಾದ ಕೆ.ಮಾಯಣ್ಣ ಗೌಡರನ್ನು ಅಭಿನಂದಿಸಲಾಯಿತು.
ಮಹಾನಗರಪಾಲಿಕೆ ಆಯುಕ್ತರು ಹಾಗೂ 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಮಾಯಣ್ಣಗೌಡ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಶಿವಮೊಗ್ಗ ಉಪ ವಿಭಾಗಾಧಿಕಾರಿ ಬಿ.ಹೆಚ್ ಸತ್ಯನಾರಾಯಣ, ಸಾಗರ ಉಪ ವಿಭಾಗದ ಉಪ ವಿಭಾಗಾಧಿಕಾರಿ ವೀರೇಶಕುಮಾರ್, ಶಿವಮೊಗ್ಗ ತಹಶೀಲ್ದಾರ್ ವಿ.ಎಸ್. ರಾಜೀವ್,ತಹಶೀಲ್ದಾರ್ (ಚುನಾವಣೆ) ಶೋಭಾಲಕ್ಷ್ಮಿ ಹೆಚ್.ಎಸ್., ಪಾಲಿಕೆ ಕಾರ್ಯಪಾಲಕ ಅಭಿಯಂತರರು ಪ್ರಿಯಾ.ಪಿ., ಜಿಲ್ಲಾ ಪಂಚಾಯತ್ ಸಿಪಿಓ ಹನುಮಾನಾಯಕ್ ಮತ್ತು ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ನೋಟಿಸ್: ಹರತಾಳು ಹಾಲಪ್ಪ

0

ನಾನು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ನೋಟಿಸ್ ಕೊಟ್ಟಿದ್ದೇನೆ. ಅವರು ಸಮರ್ಪಕ ಉತ್ತರ ಕೊಡದೇ ಇದ್ದಲ್ಲಿ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಅವರು ಸಿಗಂದೂರು ದೇವಸ್ಥಾನದ ವಿಷಯ ಪ್ರಸ್ತಾಪ ಮಾಡುತ್ತಾರೆ. ಹಾಲಪ್ಪ ಅವರು ಶಾಸಕರಾಗಿದ್ದಾಗ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವ ಪ್ರಯತ್ನ ಮಾಡಿದ್ದರೆಂದು ಸುಳ್ಳು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವುದಾಗಲೀ, ಸರಕಾರದ ವಶಕ್ಕೆ ಪಡೆಯುವ ಕುರಿತು ಕನಸು ಮನಸಲ್ಲೂ ಎಣಿಸಿಲ್ಲ. ಆ ರೀತಿ ಯಾವ ಪ್ರಯತ್ನವನ್ನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.
ನನ್ನ ತಂದೆ, ತಾಯಿ, ಅಜ್ಜ ಅಜ್ಜಿ ಕಾಲದಿಂದಲೂ ಸಿಗಂದೂರು ದೇವಸ್ಥಾನದ ಭಕ್ತರು. ನಾನೂ ಅದರ ಭಕ್ತ. ಸಮಯ ಬಂದಾಗಲೆಲ್ಲ ದೇವಸ್ಥಾನದ ಪರವಾಗಿ ನಿಂತಿದ್ದೇವೆ. ಅದು ದೇವಸ್ಥಾನದ ಆಡಳಿತ ಮಂಡಳಿ ಪರವಾಗಿಯೂ ಅಲ್ಲ; ಭಟ್ಟರ ಪರವಾಗಿಯೂ ಅಲ್ಲ; ಎಲ್ಲರ ಪರವಾಗಿ ದೇವಸ್ಥಾನ ಉಳಿಯಬೇಕು, ಬೆಳೆಯಬೇಕೆಂಬ ಪ್ರಯತ್ನ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಸರಕಾರ ವಹಿಸಿಕೊಳ್ಳಲಿ; ಮುಜರಾಯಿ ವಹಿಸಿಕೊಳ್ಳಲೆಂದು ಯಾವತ್ತೂ ಹೇಳಿಲ್ಲ ಎಂದು ವಿವರಿಸಿದರು.
ನಾನು ಅಲ್ಲಗಳೆದ ಬಳಿಕವೂ ಗೋಪಾಲಕೃಷ್ಣ ಅವರು ಪದೇಪದೇ ಹೇಳಿದ್ದಾರೆ. ಹಾಲಪ್ಪನವರು ಇದನ್ನು ಮುಜರಾಯಿಗೆ ವಹಿಸಬೇಕೆಂಬ ಪ್ರಯತ್ನ ಮಾಡಿದ್ದಾಗಿ ವಿವಿಧ ಪತ್ರಿಕೆಗಳಲ್ಲಿ ಬಂದಿದೆ ಎಂದು ದೈನಿಕವನ್ನು ಪ್ರದರ್ಶಿಸಿದರು. ಅವರು ಆಟಾಟೋಪದ ಮಾತನ್ನಾಡುತ್ತಾರೆ. ಆದರೆ, ನಾವು ಅಂಥ ಪ್ರಯತ್ನವನ್ನು ಯಾವತ್ತೂ ಮಾಡಿಲ್ಲ ಎಂದು ತಿಳಿಸಿದರು.
ಸಿಗಂದೂರು ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರಿದ್ದಾರೆ. ಅವರಲ್ಲಿ, ದೇವಸ್ಥಾನದ ಅರ್ಚಕರಲ್ಲಿ, ಆಡಳಿತ ಮಂಡಳಿ, ಧರ್ಮದರ್ಶಿಗಳಲ್ಲಿ ತಪ್ಪು ಭಾವನೆ ತರತಕ್ಕಂಥ ಕೆಲಸ ಮಾಡಿ ನನ್ನ ಮಾನ ಹರಾಜು ಹಾಕಬೇಕೆಂದು ಹಾಗೂ ನನಗೆ ಕೆಟ್ಟ ಹೆಸರು ತರಬೇಕೆಂದು ಸತತ ಪ್ರಯತ್ನ ಮಾಡುತ್ತಿದ್ದಾರೆ. ನಾನು ಅಂಥದ್ದೇನೂ ಮಾಡಿಲ್ಲ ಎಂದು ಅನೇಕ ಸಲ ಹೇಳಿದ್ದೇನೆ. ಆದರೂ ಪದೇಪದೇ ಹೇಳಿ ನನ್ನ ತೇಜೋವಧೆ ಮಾಡುವ, ಭಕ್ತÀರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಈ ಸಂಬಂಧ ಅವರಿಗೆ ಕಾನೂನಿನಡಿ ನೋಟಿಸ್ ಕೊಟ್ಟಿದ್ದಾಗಿ ಹೇಳಿದರು.
5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲಿದ್ದೇನೆ; ಇಲ್ಲವೇ ಬೇóಷರತ್ ಕ್ಷಮೆ ಕೇಳಬೇಕು ಅಥವಾ ನಿಮ್ಮ ಬಳಿ ಸಾಕ್ಷ್ಯಾಧಾರ ಇದ್ದರೆ ಒದಗಿಸಬೇಕು ಎಂದು ತಿಳಿಸಿರುವುದಾಗಿ ಹೇಳಿದರು. ಅವರು, ಅವರ ಕುಟುಂಬದವರು ಈ ದೇವಸ್ಥಾನವನ್ನು ಮುಜರಾಯಿಗೆ ವಹಿಸಿ ಕೊಡಬೇಕೆಂದು ಹೇಳಿದ್ದಿದೆ ಎಂದು ಆರೋಪಿಸಿದರು.
ರಾಜಕೀಯದಲ್ಲಿ ಸುಳ್ಳು ಹೇಳುತ್ತಾರೆ; ಅಭಿವೃದ್ಧಿಯ ವಿಷಯದಲ್ಲೂ ಸುಳ್ಳು ಹೇಳುತ್ತಾರೆ. ಆದರೆ, ದೇವರ ವಿಷಯದಲ್ಲಿ ಸುಳ್ಳು ಹೇಳುವ ಇವರಿಗೆ ಕಾನೂನು ಕ್ರಮವೇ ಸರಿಯಾದುದೆಂದು ನೋಟಿಸ್ ಕೊಟ್ಟಿದ್ದೇನೆ ಎಂದು ತಿಳಿಸಿದರು.

(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ

ನಕಾರಾತ್ಮಕ ಪರಿಣಾಮ ಕಡಿಮೆ ಮಾಡಲು ಸಾಮಾಜಿಕ ಮಾಧ್ಯಮ ನಿಯಂತ್ರಣ ಅಗತ್ಯ: ಕೈಲಾಶ್‌ ಸತ್ಯಾರ್ಥಿ

0

ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅಪ್ರಾಪ್ತರಿಗೆ ಸಾಮಾಜಿಕ ಮಾಧ್ಯಮದ ನಿಯಂತ್ರಣ ನಿರ್ಧಾರವನ್ನು ಬೆಂಬಲಿಸಿದ್ದಾರೆ. ‘ಇದರ ನಕಾರಾತ್ಮಕ ಪರಿಣಾಮವನ್ನು ಕಡಿಮೆ ಮಾಡಲು, ಸಕಾರಾತ್ಮಕವಾಗಿ ನೈತಿಕ ಮೌಲ್ಯಗಳನ್ನು ಹರಡಲು ಮತ್ತು ಸಮುದಾಯಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ’ ಎಂದು ಹೇಳಿದ್ದಾರೆ.

ಆಸ್ಟ್ರೇಲಿಯಾ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿದ ಹಿನ್ನೆಲೆಯಲ್ಲಿ ಸತ್ಯಾರ್ಥಿ ಅವರ ಈ ಹೇಳಿಕೆ ಬಂದಿದೆ.

“ವಿಶ್ವದ ಎಲ್ಲಿಯೂ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಬಾರದು, ನಿಯಂತ್ರಿಸಬೇಕು ಎಂದು ನಾನು ಭಾವಿಸುತ್ತೇನೆ. ಏಕೆಂದರೆ, ಸಾಮಾಜಿಕ ಮಾಧ್ಯಮದ ಮೂಲಕ ಬಹಳಷ್ಟು ದ್ವೇಷ, ಹಿಂಸೆ, ಬಹಳಷ್ಟು ಸುಳ್ಳು ಮತ್ತು ನಕಲಿ ವಿಷಯಗಳನ್ನು ಪ್ರಚಾರ ಮಾಡಲಾಗುತ್ತದೆ” ಎಂದು ಹೈದರಾಬಾದ್ ಸಾಹಿತ್ಯ ಉತ್ಸವದಲ್ಲಿ ಮಾತನಾಡಿದರು.

“ಮಕ್ಕಳ ಕಳ್ಳಸಾಗಣೆ, ಮಕ್ಕಳ ಲೈಂಗಿಕ ದೌರ್ಜನ್ಯಕ್ಕಾಗಿ ಸಾಮಾಜಿಕ ಮಾಧ್ಯಮವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತದೆ ಎಂಬುದನ್ನು ನಾವು ನೋಡುತ್ತೇವೆ; ಇವುಗಳನ್ನು ನಿಯಂತ್ರಿಸಬೇಕಾಗಿದೆ” ಎಂದು ಆಸ್ಟ್ರೇಲಿಯಾದಂತೆ ಭಾರತದಲ್ಲಿ ಮಕ್ಕಳಿಗಾಗಿ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಅವರು ಒಲವು ತೋರುತ್ತಾರೆಯೇ ಎಂದು ಕೇಳಿದಾಗ ಅವರು ಪ್ರತಿಕ್ರಿಯಿಸಿದರು. ಸಾಮಾಜಿಕ ಮಾಧ್ಯಮದ ದುರುಪಯೋಗವನ್ನು ನಿಲ್ಲಿಸಬೇಕು ಎಂದು ಅವರು ಹೇಳಿದರು.

ಭಾರತದಲ್ಲಿ, ಆಂಧ್ರಪ್ರದೇಶ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳನ್ನು ಬಳಸುವುದನ್ನು ನಿರ್ಬಂಧಿಸುವ ಅಥವಾ ನಿಷೇಧಿಸುವ ಸಾಧ್ಯತೆಯನ್ನು ಅನ್ವೇಷಿಸಲು ಒಂದು ಸಮಿತಿಯನ್ನು ನೇಮಿಸಿದೆ.
ಡಿಸೆಂಬರ್ 10, 2025 ರಿಂದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ, ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಪ್ರವೇಶವನ್ನು ನಿರ್ಬಂಧಿಸುತ್ತದೆ.
ಆನ್‌ಲೈನ್ ಮಕ್ಕಳ ಲೈಂಗಿಕ ದೌರ್ಜನ್ಯವನ್ನು ನಿಲ್ಲಿಸಲು, ಅಪರಾಧೀಕರಿಸಲು ತಮ್ಮ ಸಂಘಟನೆ ಹೋರಾಡಿದೆ ಎಂದು ಸತ್ಯಾರ್ಥಿ ಹೇಳಿದರು, ಇದು ಸಂಘಟಿತ ಅಪರಾಧವಾಗಿದೆ ಎಂದರು.

ಆನ್‌ಲೈನ್ ಮಕ್ಕಳ ಲೈಂಗಿಕ ದೌರ್ಜನ್ಯವನ್ನು ಪರಿಶೀಲಿಸಲು ಯಾವುದೇ ಅಂತರರಾಷ್ಟ್ರೀಯ ಕಾನೂನು ಇಲ್ಲ ಎಂಬುದನ್ನು ಗಮನಿಸಿದ ಅವರು, ಈ ವಿಷಯದ ಕುರಿತು ವಿಶ್ವಸಂಸ್ಥೆಯ ಸಮಾವೇಶಕ್ಕಾಗಿ 20 ಕ್ಕೂ ಹೆಚ್ಚು ಅಧ್ಯಕ್ಷರು, ಪ್ರಧಾನ ಮಂತ್ರಿಗಳು ಮತ್ತು ಇತರ ಉನ್ನತ ನಾಯಕರನ್ನು ಭೇಟಿಯಾಗಿದ್ದೇನೆ ಎಂದು ಹೇಳಿದರು. “ಇದು ಬಳಕೆಯ ಬಗ್ಗೆ ಅಲ್ಲ. ದೇಶಗಳಲ್ಲಿ ಬಳಕೆ-ಸಂಬಂಧಿತ ಕಾನೂನುಗಳು ಅಸ್ತಿತ್ವದಲ್ಲಿವೆ. ಅದರ ಮೇಲೆ ಸಕ್ರಿಯವಾಗಿರುವ ಇಂಟರ್‌ಪೋಲ್ ಕೂಡ ಇದೆ. ಆದರೆ ಇಂಟರ್ನೆಟ್ ಪೂರೈಕೆದಾರರನ್ನು ತಡೆಯಲು ಯಾವುದೇ ನಿರ್ದಿಷ್ಟ ವಿಶ್ವಸಂಸ್ಥೆ ಸಮಾವೇಶ ಅಥವಾ ಅಂತರರಾಷ್ಟ್ರೀಯ ಕಾನೂನು ಇಲ್ಲ. ಏಕೆಂದರೆ ಅವರು ಮೂಲದಿಂದ ಪರಿಶೀಲಿಸಬಹುದು” ಎಂದು ಅವರು ಹೇಳಿದರು.

ಆನ್‌ಲೈನ್ ಮಕ್ಕಳ ಲೈಂಗಿಕ ದೌರ್ಜನ್ಯವನ್ನು ಅಪ್‌ಲೋಡ್ ಮಾಡುವುದು ಮತ್ತು ಡೌನ್‌ಲೋಡ್ ಮಾಡುವುದು ನಡೆಯುವಾಗ, ಅದು ಇಂಟರ್ನೆಟ್ ಪೂರೈಕೆದಾರರ ಮೂಲಕ ಹೋಗುತ್ತದೆ ಎಂದು ಅವರು ಹೇಳಿದರು.
ಇಂಟರ್ನೆಟ್ ಅಥವಾ ವೈ-ಫೈ ಪೂರೈಕೆದಾರರನ್ನು (ಟೆಲಿಕಾಂ ಕಂಪನಿಗಳು) ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.

ಬಿಜೆಪಿ ಫ್ಲೆಕ್ಸ್ ಗೆ ದಂಡ ವಿಧಿಸಿದ ತಿರುವನಂತಪುರಂ ಪಾಲಿಕೆ

0

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿಗೆ ಸಂಬಂಧಿಸಿದಂತೆ ನಗರದಲ್ಲಿನ ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದಕ್ಕಾಗಿ ಬಿಜೆಪಿ ಆಡಳಿತವಿರುವ ತಿರುವನಂತಪುರಂ ಮಹಾನಗರ ಪಾಲಿಕೆ ತನ್ನದೇ ಪಕ್ಷಕ್ಕೆ ದಂಡ ವಿಧಿಸಿದೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ತಿರುವನಂತಪುರಂ ಮಹಾನಗರ ಪಾಲಿಕೆ ಕಾರ್ಯದರ್ಶಿ ಸಲ್ಲಿಸಿದ ದೂರಿನ ಆಧಾರದ ಮೇಲೆ, ಕಂಟೋನ್ಮೆಂಟ್ ಪೊಲೀಸರು ಶುಕ್ರವಾರ ತಡರಾತ್ರಿ ಬಿಜೆಪಿ ಜಿಲ್ಲಾಧ್ಯಕ್ಷ ಕರಮಣ ಜಯನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇರಳ ಹೈಕೋರ್ಟ್‌ನ ಹಲವು ಆದೇಶಗಳು ಮತ್ತು ಸ್ಥಳೀಯ ಸ್ವಯಂ ಆಡಳಿತ ಇಲಾಖೆ ಹೊರಡಿಸಿದ ನಿರ್ದೇಶನಗಳನ್ನು ಉಲ್ಲಂಘಿಸಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಧಾನಿಯವರ ಭೇಟಿಯ ಭಾಗವಾಗಿ ಬಿಜೆಪಿ ಜಿಲ್ಲಾ ಸಮಿತಿಯು ಪಾದಚಾರಿ ಮಾರ್ಗಗಳಲ್ಲಿ ಫ್ಲೆಕ್ಸ್ ಬೋರ್ಡ್‌ಗಳನ್ನು ಅಳವಡಿಸಿದ್ದು, ಇದರಿಂದಾಗಿ ಪಾಲಯಂ ಜಂಕ್ಷನ್‌ನಿಂದ ಪುಲಿಮೂಡು ಜಂಕ್ಷನ್‌ವರೆಗಿನ ಸಾರ್ವಜನಿಕರಿಗೆ ಅನಾನುಕೂಲವಾಗಿದೆ.
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 223 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಗಳಿಗೆ ಅವಿಧೇಯತೆ) ಮತ್ತು 285 (ಸಾರ್ವಜನಿಕ ಮಾರ್ಗಗಳಲ್ಲಿ ಅಪಾಯ, ಅಡಚಣೆ ಮತ್ತು ಅಪಾಯವನ್ನುಂಟುಮಾಡುವುದು) ಮತ್ತು ಕೇರಳ ಪೊಲೀಸ್ ಕಾಯ್ದೆಯ ಸೆಕ್ಷನ್ 120 (ಬಿ) (ಸಾರ್ವಜನಿಕರಿಗೆ ಅಡಚಣೆ, ಅನಾನುಕೂಲ ಮತ್ತು ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಫ್‌ಐಆರ್ ದಾಖಲಾದ ನಂತರ ತನಿಖೆ ಆರಂಭಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಮಧ್ಯೆ, ತಿರುವನಂತಪುರಂ ಕಾರ್ಪೊರೇಷನ್ ಬಿಜೆಪಿ ಜಿಲ್ಲಾ ನಾಯಕತ್ವದ ಮೇಲೆ 19.7 ಲಕ್ಷ ರೂ. ದಂಡ ವಿಧಿಸಿದೆ.
ಅಕ್ರಮವಾಗಿ ಸ್ಥಾಪಿಸಲಾದ ಫ್ಲೆಕ್ಸ್ ಬೋರ್ಡ್‌ಗಳನ್ನು ತೆಗೆದುಹಾಕಲು ಬಿಜೆಪಿ ನಾಯಕರಿಗೆ ನಿರ್ದೇಶನಗಳನ್ನು ನೀಡಲಾಗಿದೆ. ಆದರೆ, ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕಾರ್ಪೊರೇಷನ್ ಕಾರ್ಯದರ್ಶಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು

0

ಹಿರಿಯ ಹಿನ್ನೆಲೆ ಗಾಯಕಿ ಎಸ್ ಜಾನಕಿ ಅವರ ಪುತ್ರ ಮುರಳಿ ಕೃಷ್ಣ ಹಠಾತ್ ಹೃದಯಾಘಾತದಿಂದ ಮೃತಪಟ್ಟಿದ್ದು ಇದು ಚಲನಚಿತ್ರ ಮತ್ತು ಸಂಗೀತ ವಲಯದಲ್ಲಿ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮುರಳಿ ಕೃಷ್ಣ ನಿಧನರಾಗಿದ್ದು ಎಸ್ ಜಾನಕಿ ಅವರ ಪುತ್ರನನ್ನು ಕಳೆದುಕೊಂಡಿದ್ದಾರೆ. ಮುರಳಿ ಕೃಷ್ಣ ಅವರ ನಿಧನವು ಸಿನಿಮಾರಂಗದಲ್ಲಿ ದುಃಖದ ಅಲೆಯನ್ನು ಉಂಟುಮಾಡಿದೆ. ಈ ಕಷ್ಟದ ಸಮಯದಲ್ಲಿ ಕಲಾವಿದರು, ಸಂಗೀತಗಾರರು ಮತ್ತು ಅಭಿಮಾನಿಗಳು ಖ್ಯಾತ ಗಾಯಕಿ ಮತ್ತು ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಆಂಧ್ರಪ್ರದೇಶದ ಗುಂಟೂರಿನಲ್ಲಿ ಜನಿಸಿದ ಎಸ್ ಜಾನಕಿ 1950ರ ದಶಕದ ಆರಂಭದಲ್ಲಿ ಹಿನ್ನೆಲೆ ಗಾಯಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ನಂತರ ಅಂತಿಮವಾಗಿ ಚೆನ್ನೈನಲ್ಲಿ ನೆಲೆಸಿದರು. ಇದು ಅವರ ವೃತ್ತಿಜೀವನದ ಅತ್ಯಂತ ಸಮೃದ್ಧ ಅವಧಿಯನ್ನು ಗುರುತಿಸಿತು. ಅವರು ರಾಮ್ ಪ್ರಸಾದ್ ಅವರನ್ನು ವಿವಾಹವಾಗಿದ್ದು ದಂಪತಿಗೆ ಮಗನಾಗಿ ಮುರಳಿ ಕೃಷ್ಣ ಜನಿಸಿದ್ದರು.
ಮುರಳಿ ಕೃಷ್ಣ
ಬಗ್ಗೆ, ವಿಶೇಷವಾಗಿ ತಮಿಳು ಮತ್ತು ತೆಲುಗು ಚಿತ್ರಗಳ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದರು. ಭರತನಾಟ್ಯದಲ್ಲಿಯೂ ತರಬೇತಿ ಪಡೆದಿದ್ದರು. ಅವರು ಚೆನ್ನೈ ಮೂಲದ ನರ್ತಕಿ ಉಮಾ ಅವರನ್ನು ವಿವಾಹವಾಗಿದ್ದು ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ನಂತರ ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಛೇದನ ಪಡೆದು ತಾಯಿಯೊಂದಿಗೆ ವಾಸಿಸುತ್ತಿದ್ದರು. ಮುರಳಿ ಕೃಷ್ಣ ಅವರು ಮುಂಜಾನೆ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ಒಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.