S.N. Channabasappa ಡಾ.ರಾಜ್ಕುಮಾರ್ ಸಿನಿಮಾಗಳು ಜೀವನ ಪಾಠದಂತಿದ್ದು, ಅವರ ಪ್ರತಿ ಪಾತ್ರ ಸಮಾಜವನ್ನು ತಿದ್ದುವ ರೀತಿಯಲ್ಲಿವೆ ಹಾಗೂ ಬದುಕಿಗೆ ಶಕ್ತಿ ತುಂಬುವುದರೊAದಿಗೆ ಜಾಗೃತಿ ಮೂಡಿಸುವಂತಿವೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಸ್ಮರಿಸಿದರು.
ಜಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಶುಕ್ರವಾರ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಪದ್ಮಭೂಷಣ ಮತ್ತು ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ, ಕನ್ನಡದ ವರನಟ ಡಾ.ರಾಜ್ ಕುಮಾರ್ರವರ 97 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇವತಾ ಮನುಷ್ಯ, ಕಸ್ತೂರಿ ನಿವಾಸ, ಸತ್ಯ ಹರಿಶ್ಚಂದ್ರ, ಸತ್ಯಕ್ಕೆ ಸಾವಿಲ್ಲ, ಹೀಗೆ ಅವರ ಎಲ್ಲ ಸಿನಿಮಾಗಳು ಕೌಟುಂಬಿಕ ಮೌಲ್ಯ, ಸಾಮಾಜಿಕ ಜವಾಬ್ದಾರಿ ಮತ್ತು ದುಶ್ಚಗಳನ್ನು, ಅನಿಷ್ಟ ಪದ್ದತಿಗಳನ್ನು ವಿರೋಧಿಸುವ, ನಿಸ್ವಾರ್ಥ ಸೇವೆ, ತ್ಯಾಗದ ಗುಣಗಳು, ದುಡಿಮೆ ಗೌರವ ತರುವ ತತ್ವಗಳನ್ನು ಹೊಂದಿದ್ದು ಬಂಗಾರದ ಮನುಷ್ಯ ಚಿತ್ರ ನೋಡಿದ ಹಲವಾರು ಯುವಕರು ಕೃಷಿಯಲ್ಲಿ ತೊಡಗಿಕೊಳ್ಳುತ್ತಾರೆಂದು ಸ್ಮರಿಸಿದರು.
ಅವರ ಸಿನೆಮಾಗಳಲ್ಲಿ ವಿಶೇಷವಾಗಿ ಕನ್ನಡ ಭಾಷಾ ಪ್ರೇಮ, ದೇಶ ಭಕ್ತಿಯನ್ನು ಕಾಣಬಹುದು. ಹಾಗೂ ಮಾನವೀಯ ಗುಣಗಳೊಂದಿಗೆ ಸರಳತೆಯನ್ನು ಕಾಣಬಹುದಾಗಿದೆ.
ರಾಜ್ ಕುಮಾರ್ ಎಂದರೆ ಒಂದು ಸಂಸ್ಕೃತಿ, ಜೀವನ, ಸಾಹಿತ್ಯ ಎಲ್ಲವೂ ಆಗಿದ್ದು ಅವರು ಕಲಾ ಕ್ಷೇತ್ರಕ್ಕೆ ದೊಡ್ಡ ಶಕ್ತಿಯಾಗಿ ನಿಂತಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬAತೆ ಎಲ್ಲಾ ಹಂದರದಲ್ಲೂ ಅವರು ಅಭಿನಯಿಸಿದ್ದಾರೆ . ಸಮಾಜದ ಅಂಕುಡೊAಕನ್ನು ಕಲೆಯ ಮೂಲಕ ತಿದ್ದುವ ಕೆಲಸ ಮಾಡಿದ್ದಾರೆ.
ಡಾ.ರಾಜ್ ಕುಮಾರ್ ಕಲಾಭಿಮಾನಿಗಳ ಆರಾಧ್ಯದೈವ. ಅವರ ಸಿನಿಮಾ ಹಾಡುಗಳೆಂದರೆ ಜೀವನ ಸಂದೇಶ ಸಾರುವ ಅರ್ಥ ಗರ್ಭಿತ ಗಾಥೆಗಳು. ಅವರನ್ನು ಅಪಹರಿಸಿದ್ದ ಕಾಡುಗಳ್ಳ ವೀರಪ್ಪನ್ ಮನಸ್ಸನ್ನು ಸಹ ಗೆದ್ದ ವ್ಯಕ್ತಿಯಾರಾದರೂ ಇದ್ದರೆ ಅದು ರಾಜ್ ಕುಮಾರ್ ಎಂದರು.
ಮನುಕುಲಕ್ಕೆ ಅಗತ್ಯವಾದ ಸತ್ಯ, ಪ್ರಾಮಾಣಿಕತೆ, ದಯೆ, ಪ್ರೀತಿ, ದೇಶಭಕ್ತಿ ಹೀಗೆ ಎಲ್ಲಾ ಸಂಗತಿಗಳು ಅವರ ಸಿನಿಮಾಗಳಲ್ಲಿ ಇದೆ. ಗೋಕಾಕ್ ವರದಿ ಚಳುವಳಿ ವೇಳೆ ಡಾ. ರಾಜ್ ಕುಮಾರ್ ಶಿವಮೊಗ್ಗಕ್ಕೆ ಬಂದಿದ್ದರು. ಕನ್ನಡ ನೆಲ, ಜಲ ಭಾಷೆಗೆ ಅಪಮಾನ ಆಗಬಾರದು, ಅದನ್ನು ಸಹಿಸುವುದಿಲ್ಲ ಎನ್ನುತ್ತಿದ್ದರು. ಅಣ್ಣಾವ್ರು ಶಿವಮೊಗ್ಗಕ್ಕೆ ಬಂದಾಗ ಅವರ ಮೆರವಣಿಗೆ ಮಾಡಲಾಗಿತ್ತು, ಆಗ ಇಡೀ ಭದ್ರಾವತಿ ಜನ ಪ್ರವಾಸಿ ಮಂದಿರಕ್ಕೆ ರಾಜ್ ಕುಮಾರ್ ರವರ ದರ್ಶನ ಮಾಡಲು ಬಂದಿದ್ದರು ಎಂದು ಸ್ಮರಿಸಿದರು.
ಡಾ. ರಾಜ್ ಕುಮಾರ್ ಅವರನ್ನು ವಿರೋಧ ಮಾಡಿದವರು ಯಾರೂ ಇಲ್ಲ. ಅವರೊಬ್ಬ ಅಜಾತಶತೃ. ಅವರು ಕರ್ನಾಟಕಕ್ಕೆ ದೊಡ್ಡ ಆಸ್ತಿ. ಅವರು ಹಾಕಿಕೊಟ್ಟಿರುವ ಆದರ್ಶದ ಮಾರ್ಗದಲ್ಲಿ ಜೀವನವನ್ನು ನಡೆಸೋಣ. ಮುಂದಿನ ದಿನಗಳಲ್ಲಿ ಇನ್ನಷ್ಟು ಅದ್ದೂರಿಯಾಗಿ ಜನ್ಮ ದಿನವನ್ನು ಆಚರಣೆ ಮಾಡೊಣ ಎಂದರು.
ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕಳವಕಟ್ಟಿ ಮಾತನಾಡಿ, ಡಾ.ರಾಜ್ ಕುಮಾರ್ ರವರದ್ದು ಮೇರು ವ್ಯಕ್ತಿತ್ವ. ಅವರು ಲಕ್ಷಾಂತರ ಜನರಿಗೆ ಆದರ್ಶಪ್ರಾಯರಾಗಿದ್ದು, ಅವರ ಸಿನಿಮಾಗಳು ಮನರಂಜನೆ ಮಾತ್ರವಲ್ಲದೇ ಸಮಾಜಕ್ಕೆ ಹಲವಾರು ಉತ್ತಮ ಸಂದೇಶಗಳನ್ನು ನೀಡಿವೆ.
S.N. Channabasappa 2006 ರ ಏ 12 ರಂದು ರಾಜ ಕುಮಾರ್ರವರು ಅಗಲಿದ ದಿನವಾಗಿದ್ದು ಅದಾದ ನಾಲ್ಕು ದಿನ ನಂತರ ನನಗೆ ಐಎಎಸ್ ಸಂದರ್ಶನ ಇತ್ತು. ಸಂದರ್ಶಕರು ನನಗೆ, ಒಬ್ಬ ನಟ ನಿಧನ ಆಗಿದ್ದಕ್ಕೆ ನಿಮ್ಮ ರಾಜ್ಯದಲ್ಲಿ ಅಷ್ಟು ಗಲಾಟೆ ಮಾಡಿದ್ದಾರೆ ಇದಕ್ಕೆ ಕಾರಣವೇನೆಂದು ಕೇಳಿದರು. ಆಗ ನಾನು ಡಾ. ರಾಜ ಕುಮಾರ್ ಅವರ ಕುರಿತು ಹೇಳಿದಾಗ ಅವರು ಡಾ. ರಾಜ್ ಕುಮಾರ್ ಅವರ ಬಗ್ಗೆ ತಿಳಿದುಕೊಳ್ಳಲು ಪುಸ್ತಕಗಳಿದ್ದರೆ ತಿಳಿಸಿ ತಾವು ಓದುವುದಾಗಿ ತಿಳಿಸಿದರು. ಈ ಘಟನೆ ನನ್ನ ಜೀವನದಲ್ಲಿ ಚಿರಸ್ಮರಣೆಯಾಗಿ ಉಳಿದಿರುತ್ತದೆ ಎಂದು ತಿಳಿಸಿದ ಅವರು ಐಎಎಸ್ ಅಧಿಕಾರಿಯಾದ ರಾಮಚಂದ್ರರವರು ದಿನಕ್ಕೆ ಎರಡು ಚಲನಚಿತ್ರಗಳನ್ನು ನೋಡುವ ಮೂಲಕ ಕನ್ನಡ ಕಲಿತಿದ್ದೇನೆ ಎಂದು ತಿಳಿಸಿದ ಪ್ರಸಂಗವನ್ನು ಹಂಚಿಕೊAಡರು.
ಜಿ.ಪಂ ಉಪ ಕಾರ್ಯದರ್ಶಿ ಸುಜಾತ ಮಾತನಾಡಿ, ಹಿಂದೆ ಸಿನೆಮಾ ಒಂದು ಅತ್ಯುತ್ತಮ ಮಾಧ್ಯಮವಾಗಿತ್ತು. ಡಾ.ರಾಜ್ ಕುಮಾರ್ ರವರ ಸಿನೆಮಾಗಳು ಕೇವಲ ಮನರಂಜನೆಗೆ ಸೀಮಿತವಾಗದೇ ಸಮಾಜಕ್ಕೆ ಪೂರಕವಾದ ಮೌಲ್ಯಗಳನ್ನು ಸಾರುವಲ್ಲಿ ಯಶಸ್ವಿಯಾಗಿವೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆಯ ರಾಜ್ಯಾಧ್ಯಕ್ಷ ಡಾ.ಹೆಚ್ ಸುರೇಶ್ ಮಾತನಾಡಿ, ಕರ್ನಾಟಕ ರಕ್ಷಣಾ ವೇದಿಕೆಯು ಡಾ.ರಾಜ್ ಕುಮಾರ್ರವರ ಜನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದ ನಡೆಸಿಕೊಡಲು ಹೋರಾಟ ನಡೆಸಿತ್ತು, ಅದಕ್ಕೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅಣ್ಣಾವ್ರ ಜನ್ಮದಿನಾಚರಣೆಯನ್ನು ಘೋಷಿಸಿರುವುದು ಸಂತಸದ ವಿಷಯವಾಗಿದ್ದು ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ಮುಂಬರುವ ದಿನಗಳಲ್ಲಿ ಎಲ್ಲರೂ ಕೈಜೋಡಿಸಿ ಅದ್ದೂರಿಯಾಗಿ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆಯನ್ನು ಆಚರಿಸೋಣವೆಂದ ಅವರು ಕನ್ನಡ ನಾಡು ನುಡಿಗೆ ಸಿನೆಮಾ ಮಾಧ್ಯಮದ ಮೂಲಕ ಚಿರಸ್ಮರಣೀಯ ಕೊಡುಗೆ ನೀಡಿದ ರಾಜ್ ಕುಮಾರ್ರವರ ಪುತ್ಥಳಿಯನ್ನು ನಗರದಲ್ಲಿ ಸ್ಥಾಪಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಭಾಗ್ಯ ಎಂ.ಟಿ, ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆಯ ಜಿಲ್ಲಾಧ್ಯಕ್ಷ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಉಮೇಶ್ ಕೆ ಬಿ, ರಾಜ್ಕುಮಾರ್ ಗೀತೆಗಳನ್ನು ಗಾಯನ ಮಾಡಿದ ಸಾಹಿತಿಗಳಾದ ಡಾ.ಶಶಿಕಾಂತ್ ಜೈನ್ ಮತ್ತು ಎಂಸಿಎ ವ್ಯವಸ್ಥಾಪಕ ಸಿದ್ದೇಶ್, ಅಧಿಕಾರಿ, ಸಿಬ್ಬಂದಿ ವರ್ಗದವರು ಹಾಜರಿದ್ದರು.
S.N. Channabasappa ಡಾ.ರಾಜ್ ಅವರ ಸಿನಿಮಾ, ಪಾತ್ರಗಳು ಸಮಾಜ ತಿದ್ದುವ ರೀತಿಯಲ್ಲಿವೆ- ಎಸ್.ಎನ್.ಚನ್ನಬಸಪ್ಪ.
SSLC ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸ.ಬಾಲಕಿಯರ ಬಾಲಮಂದಿರದ ಸಾಧನೆ
SSLC ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸ.ಬಾಲಕಿಯರ ಬಾಲಮಂದಿರದ ಸಾಧನೆಸರ್ಕಾರಿ ಬಾಲಕಿಯರ ಬಾಲ ಮಂದಿರದ ವಿದ್ಯಾರ್ಥಿನಿಯರು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಎಲ್ಲ ಶೇ.100 ಫಲಿತಾಂಶ ಲಭಿಸಿದೆ.
ಪೋಷಕರಿಂದ ನಿರ್ಲಕ್ಷö್ಯಕ್ಕೊಳಗಾಗಿ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಪಾಲನೆ ಪೋಷಣೆಯಡಿ ಇರುವ ಚೈತ್ರಾ ವಿ ಸಿ ಎಂಬ ವಿದ್ಯಾರ್ಥಿನಿ ಶೇ.89 ಅಂಕ ಪಡೆದು ಅತ್ಯುನ್ನತ ಶ್ರೇಣಿ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿ, ಬಾಲ ಮಂದಿರಕ್ಕೆ ಕೀರ್ತಿ ತಂದಿದ್ದಾರೆ.
ಬಾಲಕಿಯರ ಬಾಲಮಂದಿರದ ಮೂರು ವಿದ್ಯಾರ್ಥಿನಿಯರು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದು ಚೈತ್ರಾ ವಿ ಸಿ ಶೇ.89, ಸಿಂಧು ಶೇ.63 ಮತ್ತು ವರ್ಷಿಣಿ ಶೇ.52 ಫಲಿತಾಂಶ ಪಡೆದಿದ್ದಾರೆ.
ಸರ್ಕಾರಿ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳಾದ ಗಣೇಶ್ ಆರ್, ಹರೀಶ್ ಎಂ ಮತ್ತು ನಿತಿನ್ ಜಿ ಪರೀಕ್ಷೆ ಬರೆದೆದ್ದು, ಮೂರೂ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
SSLC ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಸ.ಬಾಲಕಿಯರ ಬಾಲಮಂದಿರದ ಸಾಧನೆಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಮಂಜುನಾಥ್ ಆರ್ ಹಾಗೂ ಬಾಲಕಿಯರ ಬಾಲ ಮಂದಿರದ ಅಧೀಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿನಿಯರು ಹಾಗೂ ಬಾಲಕರ ಬಾಲ ಮಂದಿರದ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.
Prabhuling Kavalikatti ಜೋಗದಲ್ಲಿನ ಕಾಮಗಾರಿಗಳು ಗುಣಮಟ್ಟವಿರಲಿ. ನಿಗದಿತ ಅವಧಿಯೊಳಗೆ ಪೂರೈಸಿ- ಪ್ರಭುಲಿಂಗ ಕವಳಿಕಟ್ಟಿ.
Prabhuling Kavalikatti ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿಯವರು ಶುಕ್ರವಾರ ಜೋಗಕ್ಕೆ ಭೇಟಿ ನೀಡಿ ಪ್ರವಾಸೋದ್ಯಮ ಇಲಾಖೆ ಹಾಗೂ ಜೋಗ ನಿರ್ವಹಣಾ ಪ್ರಾಧಿಕರದ ವತಿಯಿಂದ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಸೂಕ್ತ ಸಲಹೆ ಸೂಚನೆಗಳನ್ನು ಸಂಬAಧಿಸಿದ ಅಧಿಕಾರಿಗಿಗೆ ನೀಡಿದರು.
ಜೋಗದಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು, ಮತ್ತು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
Prabhuling Kavalikatti ಪ್ರವಾಸಿಗರಿಗಾಗಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ಪ್ರವಾಸಿಗರಿಗೆ ಅಗತ್ಯವಿರುವ ಕುಡಿಯುವ ನೀರು, ಮೂಲಭೂತ ಸೌಲಭ್ಯಗಳು, ಪಾರ್ಕಿಂಗ್ ಇತರೆ ವ್ಯವಸ್ಥೆಗಳ ಕುರಿತಾದ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ವೀಕ್ಷಣಾ ಗೋಪುರ, ಪ್ರವೇಶದ್ವಾರ ಮತ್ತು ಇತರೆ ಕಾಮಗಾರಿಗಳನ್ನು ವೀಕ್ಷಿಸಿ, ಪರಿಶೀಲನೆ ನಡೆಸಿದರು.
ಪ್ರವಾಸೋದ್ಯಮ ಇಲಾಖೆ, ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಈ ವೇಳೆ ಹಾಜರಿದ್ದರು.
ಎಸ್ಎಸ್ಎಲ್ ಸಿ ಪರೀಕ್ಷೆ: ಹೆಚ್.ವಿ.ಇಂಚರ,625 ಕ್ಕೆ 598 ಅಂಕಗಳಿಕೆ
ಶಿವಮೊಗ್ಗ ನಗರದ ಪ್ರವೇಟ್ ಎಂಪ್ಲಾಯ್ ಮೆಂಟ್ ಬ್ಯೂರೊದ ಮ್ಯಾನೇಜರ್ ವಿನಯಚಂದ್ರ ಮತ್ತು ನಂದಿತಾ ದಂಪತಿ ಪುತ್ರಿ ಇಂಚರ ಹೆಚ್.ವಿ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 598 ಅಂಕ ಪಡೆದು ಉನ್ನತ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಾಳೆ. ಸಾಮಾಜಿಕ ವಿಜ್ಞಾನ ವಿಷಯದಲ್ಲಿ 100 ಕ್ಕೆ 100 ಅಂಕ ಪಡೆದು ಸಾಧನೆ ಮಾಡಿರುವ ಈ ಬಾಲಕಿ ರಾಷ್ಟ್ರಪ್ರಶಸ್ತಿ ಪ್ರಶಸ್ತಿ ಪುರಸ್ಕೃತ ದಿ.ಸತೀಶ್ಶ್ಚಂದ್ರ ಅವರ ಮೊಮ್ಮಗಳಾದ ಇಂಚರಾ ಗೋಪಾಳದ ಇಂಡೊಕಿಡ್ಸ್ ಶಾಲೆಯಲ್ಲಿ ಅಭ್ಯಾಸ ಮಾಡಿದ್ದಳು.
ಶಾಲಾಕಾಲೇಜುಗಳಲ್ಲಿ ಅತೀಯಾದ ಶುಲ್ಕ,ಡೊನೇಷನ್ ವಸೂಲಿ. ಕರವೇ ಕಾವಲು ಪಡೆಯಿಂದ ಪ್ರತಿಭಟನೆ
ಶಿವಮೊಗ್ಗ ನಗರದಲ್ಲಿನ ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಡೊನೇಷನ್ ಹಾಗೂ ಅತಿಯಾದ ಶುಲ್ಕದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ಶಿವಮೊಗ್ಗ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಈ ಕುರಿತು ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿ, ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಸಂಘಟನೆಯ ಪ್ರಕಾರ, ಶಿಕ್ಷಣ ಮತ್ತು ವೈದ್ಯಕೀಯ ಸೇವೆಗಳು ಜನರಿಗೆ ಉಚಿತವಾಗಿ ದೊರಕುವ ರಾಜ್ಯಗಳಲ್ಲಿ ಜನಪರ ಆಡಳಿತವಿದೆ ಎನ್ನಬಹುದು. ಆದರೆ ಶಿಕ್ಷಣ ಕ್ಷೇತ್ರದಲ್ಲಿ ಅತಿಯಾದ ಶುಲ್ಕ ಮತ್ತು ಡೊನೇಷನ್ ಮೂಲಕ ಜನರಿಂದ ಸುಲಿಗೆ ನಡೆಯುತ್ತಿರುವುದು ಸರ್ಕಾರದ ಜನವಿರೋಧಿ ನಿಲುವನ್ನು ತೋರಿಸುತ್ತದೆ ಎಂದು ಆರೋಪಿಸಲಾಗಿದೆ.
ಶಿವಮೊಗ್ಗದಲ್ಲಿನ ಅನೇಕ ಖಾಸಗಿ ಶಾಲಾ-ಕಾಲೇಜುಗಳು ಅತೀ ಹೆಚ್ಚು ಶುಲ್ಕ ವಸೂಲಿಸುತ್ತಿದ್ದರೂ, ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಾಸ್ಪದವಾಗಿದೆ.
ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯ ತಿಳಿದಿದ್ದರೂ ಮೌನ ವಹಿಸಿರುವುದು ಪ್ರಶ್ನಾರ್ಥಕವಾಗಿದೆ ಎಂದು ಸಂಘಟನೆ ತಿಳಿಸಿದೆ.
ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವುದನ್ನು ಉಲ್ಲೇಖಿಸಿದ ಸಂಘಟನೆ, ಉಚಿತ ಹಾಗೂ ಗುಣಮಟ್ಟದ ಶಿಕ್ಷಣವನ್ನು ಎಲ್ಲರಿಗೂ ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದೆ. ಇದರಿಂದ ಶ್ರೀಮಂತರ ಮಕ್ಕಳಿಗೆ ಮಾತ್ರ ಉತ್ತಮ ಶಿಕ್ಷಣ ದೊರೆಯುತ್ತಿದ್ದು, ಬಡ ಮಕ್ಕಳಿಗೆ ಸಮಾನ ಸ್ಪರ್ಧೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ಸೌಲಭ್ಯಗಳನ್ನು ಪಡೆದುಕೊಂಡ ನಂತರ ಶಿಕ್ಷಣವನ್ನು ವ್ಯಾಪಾರವನ್ನಾಗಿ ಮಾಡುತ್ತಿರುವುದು ದುಃಖಕರ ಸಂಗತಿ ಎಂದು ಸಂಘಟನೆ ಹೇಳಿದೆ. 1ರಿಂದ 10ನೇ ತರಗತಿವರೆಗೆ ಉಚಿತ ಶಿಕ್ಷಣವನ್ನು ಸರಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದೆ.
ಈ ಹಿನ್ನೆಲೆಯಲ್ಲಿ, ತಕ್ಷಣವೇ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅತಿಯಾದ ಶುಲ್ಕ ವಸೂಲಿಯನ್ನು ನಿಲ್ಲಿಸಿ, ನಿಯಮ ಉಲ್ಲಂಘಿಸಿದ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಮುಂದೆ ಕೂಡ ಹೆಚ್ಚಿನ ಶುಲ್ಕ ವಸೂಲಿಯ ಬಗ್ಗೆ ಮಾಹಿತಿ ಲಭ್ಯವಾದರೆ, ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ವಿರುದ್ಧ ಮುತ್ತಿಗೆ ಹಮ್ಮಿಕೊಳ್ಳುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.
ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆಯ ಸಂಸ್ಥಾಪಕರಾಧ್ಯಕ್ಷರಾದ ಡಾ. ಎಚ್ ಸುರೇಶ್ ರವರು. ಗೌರವಾಧ್ಯಕ್ಷರಾದ ಮೂರ್ತಿ ವಿ. ಜಿಲ್ಲಾಧ್ಯಕ್ಷರಾದ ಶಿವಕುಮಾರ್ ಎಸ್ ಬಿ. ಜಿಲ್ಲಾ ಕಾರ್ಯ ಅಧ್ಯಕ್ಷ ಜೀವನ್. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕೆ ಬಿ. ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಮಲ್ಲಿಗೇನಹಳ್ಳಿ. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಗದೀಶ್ ವೈಎಸ್ ಪತ್ರಿಕೆ ಸಲಹೆಗಾರರಾದ ಮಾಲತೇಶ್. ರಾಮಣ್ಣ ರಾಗಿಗುಡ್ಡ. ಕುಮಾರ್. ಗಣೇಶ್. ಪಂಚಾಕ್ಷರಿ. ಶಿವಣ್ಣ. ರಾಮು,ವಿ ಸಂಗಮೇಶ್, ಪ್ರತಾಪ್, ಮಹಿಳಾ ಘಟಕದ ಉಪಾಧ್ಯಕ್ಷರಾದ ಅನ್ನಪೂರ್ಣ. ಕೃಷ್ಣವೇಣಿ. ಅನಿತಾ ರಾಜನ್. ಶಿಲ್ಪ ಇನ್ನು ಹಲವಾರು ಕಾರ್ಯಕರ್ತರು ಭಾಗಿಯಾಗಿದ್ದರು.
ಅರಹತೊಳಲು ಗ್ರಾಮದಲ್ಲಿ ನೂತನ ಶ್ರೀವೀರಭದ್ರೇಶ್ವರ ಶಿಲಾದೇಗುಲ ಅದ್ಧೂರಿ ಉದ್ಘಾಟನೆ
ಭದ್ರಾವತಿ ತಾಲೂಕು, ಹೊಳೆಹೊನ್ನೂರು ಹೋಬಳಿಯ ಅರಹತೊಳಲು ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾದ ಸುಮಾರು ಒಂದು ಕೋಟಿ ರೂಗೂ ಹೆಚ್ಚು ವೆಚ್ಚದಲ್ಲಿ ಕಲ್ಲಿನ ಕೆತ್ತನೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಾಲಯದ ಉದ್ಘಾಟನೆ ನಡೆದು, ಅಪಾರ ಭಕ್ತರ ಸಮ್ಮುಖದಲ್ಲಿ ಶ್ರೀ ವೀರಭದ್ರಸ್ವಾಮಿಯ ಪುನರ್ ಪ್ರಾಣ ಪ್ರತಿಷ್ಟಾಪನೆ ನೆರವೇರಿತು.
ಕಳೆದ ಒಂದು ವರ್ಷದಿಂದ ಅತ್ಯಂತ ವ್ಯವಸ್ಥಿತ ಹಾಗೂ ವೈಭವೋಪೇತವಾಗಿ ಕಲ್ಲಿನ ದೇವಸ್ಥಾನವನ್ನು ಗ್ರಾಮಸ್ಥರು ನಿರ್ಮಿಸಿದ್ದು, ಇಂದು ಬೆಳಿಗ್ಗೆ ಹೊನ್ನಾಳಿ ಶ್ರೀ ಗಿರಿರಾಜ ಸೂರ್ಯ ಸಿಂಹಾಸನಾ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಎರಡು ದಿನದ ಪೂಜೆ ನಡೆಯಿತು.
ಶ್ರೀ ವೀರಭದ್ರೇಶ್ವರ ಸ್ವಾಮಿಯ ಪ್ರಾಣ ಪ್ರತಿಷ್ಠಾಪನೆ, ಅರ್ಚನೆ ನಡೆಯಿತು.
ಸಾವಿರಾರು ಗ್ರಾಮದ ಗ್ರಾಮಸ್ಥರು ಹಾಗೂ ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯವರು ಬಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕೊನೆಗೆ ಪ್ರಸಾದ ವಿನಿಯೋಗ ನೆರವೇರಿತು.
Kuvempu university ಕುವೆಂಪು ವಿವಿ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಿಂದ ಆವರಣ ಸ್ವಚ್ಛತೆ ಮತ್ತು ಉಚಿತ ನೇತ್ರ ತಪಾಸಣೆ ಶಿಬಿರ
Kuvempu university ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದಿಂದ ಆಯೋಜಿಸಲಾದ ಸಮಾಜಕಾರ್ಯ ಗ್ರಾಮೀಣ ಶಿಬಿರದಲ್ಲಿ ಪ್ರಾಶಿಕ್ಷಣಾರ್ಥಿಗಳು ಗ್ರಾಮದ ಶಾಲಾ ಅವಣವನ್ನು ಸ್ವಚ್ಛಗೊಳಿಸಿದರು.
ಹಾಗೂ ಶಂಕರ್ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಅಂತರಗಂಗೆ ಭದ್ರಾವತಿ ತಾಲೂಕು ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ಸಂದರ್ಭದಲ್ಲಿ ಸವಿತಾ ಅಕ್ಷಿತ್ ಶಾಗುತ್ತಾ, ಪರ್ವೀನ್ ಜ್ಞಾನೇಶ್ವರಿ, ಪೂಜಾ, ಶಾಲಿನಿ ಲತೀಶ್ ಮಂಜುನಾಥ್ ಲಲಿತ ಗೌರಮ್ಮ ಮತ್ತು ಸ್ನಾತಕೋತರ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕರು ಹಾಗೂ ಪ್ರಾಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಮೊಬೈಲ್ ರಿಪೇರಿ, ಟೈಲರಿಂಗ್, ಬ್ಯೂಟಿ ಪಾರ್ಲರ್,ಹೈನುಗಾರಿಕೆ ಉಚಿತ ತರಬೇತಿ. ಕೆನರಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಕೇಂದ್ರದ ಪ್ರಕಟಣೆ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು 18 ರಿಂದ 49 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.
ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
30 ದಿನಗಳ
ಮೊಬೈಲ್ ಫೋನ್ ರಿಪೇರ್ & ಸರ್ವಿಸಸ್ ತರಬೇತಿಯು
02/05/2026ರಿಂದ ಆರಂಭಗೊಳ್ಳಲಿದೆ.
06 ದಿನಗಳ
ವಿಭಿನ್ನ ಶೈಲಿಯ ಬ್ಲೌಸ್ ಡಿಸೈನಿಂಗ್ ಅನ್ನು
04/05/2026 ರಿಂದ ಆರಂಭಗೊಳ್ಳಲಿದೆ.
35 ದಿನಗಳ
ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್
12/05/2026 ರಿಂದ ಆರಂಭಗೊಳ್ಳಲಿದೆ.
12 ದಿನಗಳ
ಹೈನುಗಾರಿಕೆ & ಎರೆಹುಳೂ ಗೋಬ್ಬರ ತಯಾರಿಕೆ ಇತ್ಯಾದಿ ) ತರಬೇತಿಯು
14/05/2026 ರಿಂದ ಆರಂಭಗೊಳ್ಳಲಿದೆ.
10 ದಿನಗಳ
ಅಣಬೆ ಬೇಸಾಯ ತರಬೇತಿಯು
20/05/2026ರಿಂದ ಆರಂಭಗೊಳ್ಳಲಿದೆ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು- 577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9481955721, 9743429595, 9164411580, 9632961707, 8722384541, 9449371579 ಗೆ ಸಂಪರ್ಕಿಸಬಹುದಾಗಿದೆ
₹15 ಕೋಟಿ ವೆಚ್ಚದಲ್ಲಿ ‘ಟಿಎಂಎಇ’ ಆಯುರ್ವೇದ ಕಾಲೇಜಿನ ನೂತನ ಕಟ್ಟಡ ನಿರ್ಮಾಣ- ಜಿ.ಎ.ಹಿರೇಮಠ್.
ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರೂ ಟಿಎಂಎಇ ಸೊಸೈಟಿಯ ಅಧ್ಯಕ್ಷರೂ ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರು ಭಾರತೀಯ ಪಾರಂಪರಿಕ ವೈದ್ಯ ಪದ್ಧತಿಯಾದ ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುಮಾರು 15 ಕೋಟಿ ರೂ. ವೆಚ್ಚದಲ್ಲಿ ಟಿಎಂಎಇಎಸ್ ಆಯುರ್ವೇದ ಕಾಲೇಜಿನ ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಿ.ಎ. ಹಿರೇಮಠ ತಿಳಿಸಿದರು.
ತಾಲೂಕಿನ ನಿದಿಗೆಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಏ. 24ರ ಶುಕ್ರವಾರ ಬೆಳಿಗ್ಗೆ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರ 33ನೇ ವರ್ಧಂತ್ಯುತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉಚಿತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಅಕ್ಷರ ದಾಸೋಹಿಗಳು ಹಾಗೂ ಶೈಕ್ಷಣಿಕ ಕ್ಷೇತ್ರದ ಹರಿಕಾರರು ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯರು ಧರ್ಮ ಮತ್ತು ತತ್ವ ಜಾಗೃತಿ, ಶಿಕ್ಷಣ ಹಾಗೂ ಜ್ಞಾನ ಪ್ರಸಾರ, ಗುರು-ವಿರಕ್ತ ಪರಂಪರೆ ಸೇರಿದಂತೆ ಒಟ್ಟಾರೆಯಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕಂಕಣ ಬದ್ಧರಾಗಿದ್ದಾರೆ. ಟಿಎಂಎಇಎಸ್ ಸಂಸ್ಥೆಯ ಮೂಲಕ ಇವರು ನಾಡಿನಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟು ಮಾಡುತ್ತಿದ್ದಾರೆಂದರು.
ಟಿಎAಎಇಎಸ್ ವತಿಯಿಂದ ರಾಜ್ಯದ ಏಳು ಜಿಲ್ಲೆಗಳಲ್ಲಿ 72 ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಈವರೆಗೆ ಈ ವಿದ್ಯಾಸಂಸ್ಥೆಗಳ ಮೂಲಕ ಒಂದು ಲಕ್ಷದ 80 ಸಾವಿರಕ್ಕೂ ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅಲ್ಲದೆ 18 ಸಾವಿರದಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಪ್ರಾAಶುಪಾಲರಾದ ರುದ್ರಾಂಬಿಕ ಬಿರಾದಾರ್, ಉಪ ಪ್ರಾಂಶುಪಾಲ ಡಾ. ಸದಾನಂದ ಜೋಶಿ, ಡಾ.ಎಸ್.ವಿ. ಪ್ರಶಾಂತ್, ಡಾ. ರಮ್ಯಾ, ಡಾ. ಮಲ್ಲಿಕಾ ನಡುಮನಿ, ಡಾ.ಎಂ.ಎಲ್. ಅಶೋಕ್, ಆರ್ ಎಂಓ ಡಾ. ಶುಕ್ಲದಾಸ್, ಸಂತೋಷ್ ಕುಮಾರ್ ವಿ., ಡಾ. ಅರ್ಪಿತ, ಡಾ. ಅನುಷಾ, ಡಾ. ತೀರ್ಥಶ್ರೀ, ಡಾ. ಯಶೋಧ, ರೂಪ, ರೇಖಾ ಮತ್ತಿತರರು ಉಪಸ್ಥಿತರಿದ್ದರು.
