Saturday, February 14, 2026
Saturday, February 14, 2026
Home Blog Page 121

Shivamogga Industrial Production Supply and Sales Cooperative Society ಜಿಲ್ಲಾ ಕೈಗಾರಿಕಾ ಉತ್ಪಾದನೆ , ಸರಬರಾಜು & ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ‌ ಶಾಸಕಿ ಬಲ್ಕೀಸ್ ಬಾನು ಅವಿರೋಧ ಆಯ್ಕೆ

0

Shivamogga Industrial Production Supply and Sales Cooperative Society ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಕೈಗಾರಿಕಾ ಉತ್ಪಾದನಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಚುನಾವಣೆಯಲ್ಲಿ ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಬಲ್ಕೀಸ್ ಬಾನು ರವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.

ಉಪಾಧ್ಯಕ್ಷರಾಗಿ ತಿರುಪಯ್ಯ ರವರು ಆಯ್ಕೆಯಾಗಿರುತ್ತಾರೆ.

2020 ರಿಂದ 2025 ರ ವರೆಗೆ ಮಾನ್ಯ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮತ್ತೆ ಪುನರಾಯ್ಕೆಯಾಗಿ ಮುಂದಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.

Ranji Trophy Cricket ರಣಜಿ ಕ್ರಿಕೆಟ್, ಕರ್ನಾಟಕ ಮೊದಲ ಇನ್ನಿಂಗ್ಸ್ , 371.ಗೋವಾ 83-4, ಕರುಣ್ ನಾಯರ್ ಆಕರ್ಷಕ ಶತಕ

0

Ranji Trophy Cricket ಶಿವಮೊಗ್ಗದ ಕ್ರಿಕೆಟ್ ಪ್ರಿಯರಿಗೆ ಗೋವಾ ಮತ್ತು ಕರ್ನಾಟಕ‌ ನಡುವಣ ರಣಜಿ ಪಂದ್ಯ ನೆನಪಲ್ಲಿಡುವಂತೆ ಮಾಡಿದೆ.
ಕರುಣ್ ನಾಯರ್ ಸ್ಥಳೀಯ ಅಭಿಮಾನಿಗಳನ್ನ ನಿರಾಸೆ ಮಾಡದೇ 174 ರನ್ ಸಿಡಿಸಿದರು.
2017 ರಲ್ಲಿ‌ ಇದೇ ಸ್ಟೇಡಿಯಂನಲ್ಲಿ ಹೈದ್ರಾಬಾದ್ ವಿರುದ್ಧ 132 ರನ್ ಗಳಿಸಿ ರಾಜ್ಯ ತಂಡಕ್ಕೆ ಗೆಲುವಿನ ಗರಿ ಸಿಗಿಸಿದ್ದರು.
ಈ ಬಾರಿ ಕರುಣ್ 267 ಬಾಲ್ ಗಳು,14 ಬೌಂಡರಿ, 3 ಭರ್ಜರಿ ಸಿಕ್ಸರ್ ಎತ್ತಿ ಶಿವಮೊಗ್ಗದ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾದರು.
Ranji Trophy Cricket ಮೊದಲ ದಿನದಿಂದಲೂ ಮಳೆಯ ಕಣ್ಣಾಮುಚ್ಚಾಲೆ. ಹೀಗಾಗಿ ಬ್ಯಾಟಿಂಗ್ ಪಡೆದ ಕರ್ನಾಟಕ ಮೊದಲ ದಿನ 5 ವಿಕೆಟ್ ನಷ್ಟಕ್ಕೆ 222 ಮೊತ್ತದಿಂದ ಎರಡನೇ ದಿನ 371 ರನ್ ಮೊತ್ತಕ್ಕೆ ಆಲೌಟ್ ಆಯಿತು.
ಗೋವಾಪರ ಬೌಲಿಂಗ್ ನಲ್ಲಿ ಅರ್ಜುನ್ ತೆಂಡುಲ್ಕರ್ 100-1, ವಾಸುಕಿ ಕೌಶಿಕ್ 35-3 ,ದರ್ಶನ್ ಮಿಸಲ್ 74-2 ಯಶಸ್ವಿ ಎನಿಸಿದರು. ಈ ಪೈಕಿ ಕರ್ನಾಟಕದವರೇ ಆಗಿ ಈಗ ಗೋವಾ ತಂಡ ಸೇರಿರುವ ಕೌಶಿಕ್ ಬೌಲಿಂಗ್ ನಲ್ಲಿ ಗಮನ ಸೆಳೆದಿದ್ದಾರೆ .
ಗೋವಾ ಒಂದು ವಿಕೆಟ್ ನಷ್ಟಕ್ಕೆ 28 ಗಳಿಸಿ ಇಂದಿನ ಆಟ ಮುಂದುವರೆಸಿದೆ.

Bharat Scouts and Guides Shivamogga ವಿದ್ಯಾರ್ಥಿಗಳಿಗಾಗಿ ರೋವರ್ಸ್ & ರೇಂಜರ್ಸ್ ಅಹೋರಾತ್ರಿ ಶಿಬಿರ ಉದ್ಘಾಟನೆ

0

Bharat Scouts and Guides Shivamogga ಶಿವಮೊಗ್ಗ ನಗರದ ಎನ್‌ಇಎಸ್‌ ಇನ್ಸ್ಟಿಟ್ಯೂಟ್‌ ಆಫ್‌ ಅಡ್ವಾನ್ಸ್ಡ್‌ ಸ್ಟಡೀಸ್‌ ಕಾಲೇಜಿನ ವತಿಯಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ರೋವರ್ಸ್‌ ಮತ್ತು ರೇಂಜರ್ಸ್‌ ಅಹೋರಾತ್ರಿ ಶಿಬಿರವನ್ನು ಮಾಜಿ ಸಚಿವ ಹಾಗೂ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಉದ್ಘಾಟಿಸಿದರು.

Bharat Scouts and Guides Shivamogga ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್‌, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲ ಚಂದ್ರಶೇಖರ್‌, ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಘಟಕದ ರೋವರ್ಸ್ ಜಿಲ್ಲಾ ಆಯುಕ್ತರಾದ‌ ಕೆ.ರವಿ, ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್‌, ಸಂಯೋಜಕರಾದ ರೋವರ್‌ ಸ್ಕೌಟ್‌ ನಾಯಕ ವಿನಯ್.ಹೆಚ್.ಬಿ.ಪಟೇಲ್‌, ಅರುಣ್‌ ಕುಮಾರ್‌, ರೇಂಜರ್‌ ನಾಯಕಿ ರಮ್ಯಶ್ರೀ ಉಪಸ್ಥಿತರಿದ್ದರು.

“ನೀರಿದ್ದರೆ ನಾಳೆ” ಅಂತರ್ಜಲ ಹೆಚ್ಚಿಸುವ ಯೋಜನೆ, ಸಚಿವ ಬೋಸರಾಜು ಅವರ ವಿನೂತನ ಹೆಜ್ಜೆ

0

ನೀರನ್ನು ಸೃಷ್ಟಿಸುವ ಶಕ್ತಿಯಂತೂ ನಮಗಿಲ್ಲ, ಆದರೆ ಪೂರ್ವಜರು ನಿರ್ಮಿಸಿದ ಜಲಮೂಲಗಳನ್ನು ಸಂರಕ್ಷಿಸುವ ಮೂಲಕ ಅಂತರ್ಜಲ ಮಟ್ಟ ವೃದ್ಧಿಸಬಹುದು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ಈ ಸಂಪನ್ಮೂಲವನ್ನು ಭವಿಷ್ಯದ ಪೀಳಿಗೆಗಾಗಿ ಉಳಿಸಿ, ಬೆಳೆಸಿ, ಸುಸ್ಥಿರ ಮತ್ತು ಸಮೃದ್ಧ ಕರ್ನಾಟಕ ಕಟ್ಟುವ ಜವಾಬ್ದಾರಿ ನಮ್ಮೆಲ್ಲರದ್ದು, ಈ ನಿಟ್ಟಿನಲ್ಲಿ ಸಚಿವರಾದ ಶ್ರೀ ಎನ್.ಎಸ್.ಬೋಸರಾಜು ಅವರ ಮಾರ್ಗದರ್ಶನದಲ್ಲಿ ಸಣ್ಣ ನೀರಾವರಿ ಇಲಾಖೆಯು ಮಹತ್ವಾಕಾಂಕ್ಷೆಯ ʼನೀರಿದ್ದರೆ ನಾಳೆʼ ಎಂಬ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅಂತರ್ಜಲ ಅಭಿವೃದ್ಧಿಪಡಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುತ್ತಿದೆ.

ʼನೀರಿದ್ದರೆ ನಾಳೆʼ ಎಂಬ ವಿಶೇಷ ಪರಿಕಲ್ಪನೆಯ ಮೂಲಕ ನೀರಿನ ಮಹತ್ವವನ್ನು ತಿಳಿಸುವುದು, ರಾಜ್ಯದ ಜಲಮೂಲಗಳ ಸಂರಕ್ಷಣೆಗೆ ಯೋಜನೆ ರೂಪಿಸುವುದು, ನಾಗರೀಕರನ್ನು ನೀರಿನ ಸಂರಕ್ಷಣೆಯ ಅಭಿಯಾನದಲ್ಲಿ ಪಾಲುದಾರರನ್ನಾಗಿ ಮಾಡುವುದು ಮುಖ್ಯ ಉದ್ದೇಶವಾಗಿದೆ.

ಮೊದಲನೇ ಹಂತದಲ್ಲಿ 27 ತಾಲೂಕುಗಳ 525 ಅಂತರ್ಜಲ ಬಳಕೆ ಗ್ರಾಮ ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಪೈಕಿ ಕಲ್ಯಾಣ ಕರ್ನಾಟಕ ಭಾಗದ 100ಕ್ಕೂ ಹೆಚ್ಚು ಅಂತರ್ಜಲ ಬಳಕೆಯ ಗ್ರಾಮ ಪಂಚಾಯಿತಿಗಳಲ್ಲಿ ಸಣ್ಣ ನೀರಾವರಿ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ 2025-26 ನೇ ಸಾಲಿನಲ್ಲಿ ರೂ.200 ಕೋಟಿ ವೆಚ್ಚದಲ್ಲಿ ಅಂತರ್ಜಲ ಅಭಿವೃದ್ಧಿ ಯೋಜನೆಯನ್ನು ರೂಪಿಸಲಾಗಿದೆ.
ʼನೀರಿದ್ದರೆ ನಾಳೆʼ ಎಂಬ ಪರಿಕಲ್ಪನೆಯು ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಎಂಬುದನ್ನು ನಾವು ಮೆರೆಯೋಣ. ಸುಂದರ ಹಾಗೂ ಸುಭದ್ರ ನಾಳೆಗಳ ಗ್ಯಾರಂಟಿಗಾಗಿ ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳೋಣ ಎಂದು ರಾಜ್ಯ ಪ್ರಚಾರ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿ ನಿಲಯ & ವಸತಿ ಶಾಲೆಗಳಲ್ಲಿನ ಆಹಾರ ಪಾರದರ್ಶಕತೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಶೇ.83 ಶ್ರೇಯಾಂಕ

0

ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ಆಹಾರ ಪಾರದರ್ಶಕತೆಯನ್ನು ಪರಿಶೀಲಿಸಿ, ದಿನಾಂಕ: 13.10.2025 ರಿಂದ 19.10.2025 ವರೆಗೆ ಸಾಮಾಜಿಕ ಪರಿಶೋಧನೆಯ ಅನುಸಾರ 7 ದಿನಗಳ ವರದಿಯನ್ವಯ ಈ ಜಿಲ್ಲೆಗಳ ಶ್ರೇಯಾಂಕವನ್ನು ಪ್ರಕಟಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿನ ವಿದ್ಯಾರ್ಥಿ ನಿಲಯ ಮತ್ತು ವಸತಿ ಶಾಲೆಗಳ ಆಹಾರ ಪಾರದರ್ಶಕ ಪ್ರಮಾಣ ಶೇ. 83 ಆಗಿರುವುದು ಪಟ್ಟಿಯಲ್ಲಿದೆ.

CM Siddharamaiah ಜನ ನಾಯಕ ಎಸ್.ಬಂಗಾರಪ್ಪ ಅವರನ್ನ ಸ್ಮರಿಸಿದ ಸಿದ್ಧರಾಮಯ್ಯ

0

CM Siddharamaiah ಜೀವನದಲ್ಲಿ ತಾನು ಕಂಡುಂಡ ಅಸಮಾನತೆ, ಅನ್ಯಾಯ, ಶೋಷಣೆಗಳ ವಿರುದ್ಧದ ಹೋರಾಟಕ್ಕೆ ರಾಜಕೀಯ ರಂಗ ಪ್ರವೇಶಿಸಿದ ಬಂಗಾರಪ್ಪನವರು, ದುರ್ಬಲ ಸಮುದಾಯಗಳ ಏಳಿಗೆಗಾಗಿಯೇ ಬದುಕಿನುದ್ದಕ್ಕೂ ಶ್ರಮಿಸಿದ ಧೀಮಂತ ನಾಯಕರು.

ಜನಪರ ಕಾಳಜಿ, ನೇರನಿಷ್ಠುರ ನಡೆ, ಸಮಾಜವಾದಿ ಚಿಂತನೆಗಳಲ್ಲಿ ಬಂಗಾರಪ್ಪನವರಿಗಿದ್ದ ಬದ್ಧತೆಯನ್ನು ಅವರ ಜನ್ಮದಿನದ ಸಂದರ್ಭದಲ್ಲಿ ನೆನೆಯುತ್ತಾ, ನಮಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ನೋಂದಣಿ ಪ್ರಕ್ರಿಯೆ ಪ್ರಕಟಣೆ

0

ಕರ್ನಾಟಕ ವಿಧಾನ ಪರಿಷತ್ ನ ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿ ಹೊಸದಾಗಿ ತಯಾರಿಸಲು ಮತದಾರರ ನೊಂದಣಿ ಪ್ರಕ್ರಿಯೆ ಕಾರ್ಯ ನಡೆಯುತ್ತಿರುತ್ತದೆ.

ದಿನಾಂಕ:01-11-2022 ರೊಳಗಾಗಿ ಶೈಕ್ಷಣಿಕ ಪದವಿ ಪೂರ್ಣಗೊಳಿಸಿರುವವರು ಮತದಾರರ ಪಟ್ಟಿಗೆ ಸೇರ್ಪಡೆಗೆ ಅರ್ಹತೆ ಹೊಂದಿರುತ್ತಾರೆ.

ನಮೂನೆ-18 ರ ಅರ್ಜಿ ಪಡೆದು ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬಹುದಾಗಿದೆ.

ಹಾಗೂ ಪದವಿ ಹೊಂದಿರುವ ತಮ್ಮ ಕುಟುಂಬಸ್ಥರು ಮತ್ತು ಪರಿಚಯಸ್ತರಿಗೆ ಈ ಬಗ್ಗೆ ಮಾಹಿತಿಯನ್ನು ನೀಡಿ ಅವರುಗಳನ್ನು ಮತದಾರರ ಪಟ್ಟಿಗೆ ನೋಂದಾಯಿಸಿಕೊಳ್ಳಲು ಮಾಹಿತಿ ನೀಡಿ ಸಹಕರಿಸಲು ಕೋರಿದೆ.

ದಾವಣಗೆರೆ ಉತ್ತರ ಕ್ಷೇತ್ರ ಮತ್ತು ದಕ್ಷಿಣ ಕ್ಷೇತ್ರದವರು ಅರ್ಜಿಗಳನ್ನು ಸಲ್ಲಿಸಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

Basavaraja Horatti ಪ್ರಸಕ್ತ ಸಾಲಿನ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿ.8 ರಿಂದ ಆರಂಭ

0

Basavaraja Horatti ಪ್ರಸಕ್ತ ಸಾಲಿನ ವಿಧಾನಮಂಡಲ ಚಳಿಗಾಲ ಅಧಿವೇಶನ ಡಿ.8 ರಿಂದ ಬೆಳಗಾವಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು,
ಚಳಿಗಾಲದ ಅಧಿವೇಶನದ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರು ವೇಳಾಪಟ್ಟಿಯನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

Basavaraja Horatti ಇದೇ ವೇಳೆ ಉತ್ತರ ಕರ್ನಾಟಕದ ಕೆಲವು ಚುನಾಯಿತ ಪ್ರತಿನಿಧಿಗಳು ಈ ಪ್ರದೇಶದ ಸಮಸ್ಯೆಗಳ ಬಗ್ಗೆ ಚರ್ಚಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಸಲು ಎರಡು ದಿನಗಳನ್ನು (ಬುಧವಾರ ಮತ್ತು ಗುರುವಾರ) ಮೀಸಲಿಡಲಾಗುವುದು ಎಂದು ಹೇಳಿದರು.

ಆಗುಂಬೆಯ ಮಲ್ಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷ ಸ್ಥಳಿಯರಲ್ಲಿ ಆತಂಕ

0

ಆಗುಂಬೆ ಭಾಗದಲ್ಲಿ ಮತ್ತೊಮ್ಮೆ ಕಾಡಾನೆ ಕಾಣಿಸಿಕೊಂಡಿರುವ ಘಟನೆ ನಡೆದಿದೆ .

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಮಲ್ಲಂದೂರಿನಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ.

ತಡರಾತ್ರಿ ಗದ್ದೆಗೆ ನುಗ್ಗಿದ ಕಾಡಾನೆ ಸಂಪೂರ್ಣ ಬೆಳೆದ ಬೆಳೆ ಹಾಳು ಮಾಡಿದೆ. ಕಾಡಾನೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳುಹರಸಾಹಸ ಪಡುತ್ತಿದ್ದಾರೆ‌.

ಕಳೆದ ತಿಂಗಳು ಇದೇ ಭಾಗದಲ್ಲಿ ಕಾಡಾನೆ ಕಂಡು ಬಂದಿತ್ತು.

ಮತ್ತೆ ಕಾಡಾನೆ ದಾಳಿಯಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

Karnataka Media Academy ಅಗಲಿದ ಹಿರಿಯ ಪತ್ರಕರ್ತ ಟಿ.ಜೆ.ಎಸ್.ಜಾರ್ಕ್ ಹೆಸರಲ್ಲಿ ದತ್ತಿ ಸ್ಥಾಪನೆ- ಶಾಸಕ ಕೆ.ಶಿವಕುಮಾರ್

0

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಾಧ್ಯಮ ಸಂಸ್ಥೆಗಳ ಸಂಪಾದಕರಿಗೆ ದತ್ತಿ ಪ್ರಶಸ್ತಿ ಸ್ಥಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಸದಸ್ಯ ಕೆ.ಶಿವಕುಮಾರ್‌ ಅವರು ಘೋಷಿಸಿದರು.

ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ತಾವು ಈಗಾಗಲೇ ಸಾಮಾಜಿಕ ನ್ಯಾಯದ ಕುರಿತು ಬರೆಯುವ ಅಂಕಣಕಾರರಿಗೆ “ಮೂಕನಾಯಕ ಡಾ. ಬಿ.ಆರ್.‌ ಅಂಬೇಡ್ಕರ್‌ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದು, ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ ಟಿ.ಜೆ.ಎಸ್.‌ ಜಾರ್ಜ್‌ ಅವರು ನಿಷ್ಪಕ್ಷಪಾತಿ ಪತ್ರಕರ್ತರಾಗಿದ್ದರು.

ಅವರು ಸ್ವತಃ ಪತ್ರಕರ್ತರ ವರದಿಗಳನ್ನು ತಿದ್ದಿ , ಮಾರ್ಗದರ್ಶನ ನೀಡುತ್ತಿದ್ದರು ಎಂದು ಸ್ಮರಿಸಿದರು. ಅವರ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಗುರುತಿಸುವ ಸಲುವಾಗಿ 1.5 ಲಕ್ಷ ರೂ.ಗಳ ದತ್ತಿನಿಧಿ ಸ್ಥಾಪಿಸುವುದಾಗಿ ತಿಳಿಸಿದರು.
ತಾವು ಇನ್ನೂ ಪತ್ರಿಕೋದ್ಯಮದಿಂದ ಹೊರ ಬಂದಿಲ್ಲ. ಸದನದಲ್ಲಿಯೂ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಕುರಿತು ದನಿ ಎತ್ತುವುದಾಗಿ ಅವರು ತಿಳಿಸಿದರು. ತಮ್ಮ ಪತ್ರಕರ್ತ ವೃತ್ತಿ ಜೀವನ ಹಾಗೂ ಅಕಾಡೆಮಿಯ ಸದಸ್ಯರಾಗಿ ಕಾರ್ಯನಿರ್ವಹಣೆಯ ಸಂದರ್ಭಗಳನ್ನು ಮೆಲುಕು ಹಾಕಿದ ಶಿವಕುಮಾರ್‌ ಅವರು ಅಕಾಡೆಮಿಯ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.

Karnataka Media Academy ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಸದಸ್ಯೆ ಶ್ರೀಮತಿ ಆಯೇಶಾ ಖಾನಂ ಅವರು, ಶಿವಕುಮಾರ್‌ ಅವರು ಮೂರು ದಶಕಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದು, ತಮ್ಮ ನಿಷ್ಠುರ ವರದಿಗಳಿಗಾಗಿ ಹೆಸರುವಾಸಿಯಾಗಿದ್ದಾರೆ. ಅವರು ಇಂದು ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವುದು ಪತ್ರಕರ್ತರಿಗೆಲ್ಲ ಹೆಮ್ಮೆಯ ವಿಷಯ. ಅವರು ಅಕಾಡೆಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅವರ ಬೆಂಬಲ ಪತ್ರಕರ್ತರಿಗೆ ಸದಾ ಇರುವುದೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದಸ್ಯರಾದ ಕೆ. ನಿಂಗಜ್ಜ, ಕೆ.ವೆಂಕಟೇಶ್‌, ಶಿವಾನಂದ ತಗಡೂರು, ಅಬ್ಬಾಸ್‌ ಮುಲ್ಲಾ ಮೊದಲಾದವರು ಶಿವಕುಮಾರ್‌ ಅವರ ಕುರಿತು ಮಾತನಾಡಿದರು.