Saturday, May 16, 2026
Saturday, May 16, 2026
Home Blog Page 121

S.N.Chennabasappa ಶಿವಮೊಗ್ಗ ನಗರದ 14 ನೇ ವಾರ್ಡಿಗೆ ಶಾಸಕ ಚೆನ್ನಿ ಭೇಟಿ

0

S.N.Chennabasappa ಶಿವಮೊಗ್ಗ ನಗರದ 14ನೇ ವಾರ್ಡ್ ವ್ಯಾಪ್ತಿಯ ವಿದ್ಯಾನಗರ ಬಡಾವಣೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಅವರು ಪರಿಶೀಲಿಸಿದರು.

ಬಡಾವಣೆಯ ಪ್ರವೇಶ ದ್ವಾರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಹಾದ್ವಾರದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೆಲಸದ ವೇಗ ಹಾಗೂ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಸ್ಥಳೀಯ ಉದ್ಯಾನವನಕ್ಕೆ ಭೇಟಿ ನೀಡಿ, ಉದ್ಯಾನವನದ ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಓದುಗರಿಗೆ ಪುಸ್ತಕಗಳ ಲಭ್ಯತೆಯ ಬಗ್ಗೆ ಚರ್ಚಿಸಿದರು.

ವಿಶೇಷವಾಗಿ ವಿದ್ಯಾನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

S.N.Chennabasappa ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಾಜು, ಪ್ರಮುಖರಾದ ಶ್ರೀ ಮೋಹನ್, ಶ್ರೀ ಲಕ್ಷ್ಮಣ್ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

S.N. Channabasappa ಫಲಾನುಭವಿಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸಿ – ಎಸ್.ಎನ್.ಚನ್ನಬಸಪ್ಪ.

0

S.N. Channabasappa “ನಗರದ ಶಾಂತಿನಗರ, ಟಿಪ್ಪು ನಗರ ಹಾಗೂ ಚಿಕ್ಕಮಟ್ಟಿ ಕ್ಯಾಂಪ್ (ತ್ರಿಮೂರ್ತಿ ನಗರ) ಬಡಾವಣೆಗಳಲ್ಲಿ ಈಗಾಗಲೇ ಹಕ್ಕುಪತ್ರಗಳು ತಯಾರಾಗಿದ್ದು, ಅವುಗಳನ್ನು ತಕ್ಷಣವೇ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು” ಎಂದು ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ನಗರದ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ (KSDB) ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ಧವಿರುವ ದಾಖಲೆಗಳನ್ನು ಹಸ್ತಾಂತರಿಸುವಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು.

S.N. Channabasappa ಜೊತೆಗೆ, ಸರ್ಕಾರಿ ಜಾಗಗಳಲ್ಲಿರುವ ನಿವಾಸಿಗಳಿಗೆ ಪಹಣಿಯಲ್ಲಿ ದಾಖಲೆಗಳನ್ನು ಸರಿಪಡಿಸಿ ಹಕ್ಕುಪತ್ರ ಒದಗಿಸುವುದು ಹಾಗೂ ಸರ್ಕಾರದ ಹಂತದಲ್ಲಿ ಬಾಕಿ ಇರುವ ಪ್ರದೇಶಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಂದಾಯ ಮತ್ತು ಸರ್ವೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಹಕ್ಕುಪತ್ರ ವಿತರಣಾ ಪ್ರಕ್ರಿಯೆಯನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಡವರ ಹಕ್ಕುಗಳ ವಿಷಯದಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ. ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಹಕ್ಕುಪತ್ರ ವಿತರಣೆ ಕುಂಠಿತವಾಗಬಾರದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು” ಎಂದು ಅವರು ತಿಳಿಸಿದರು.

B. Y. Raghavendra ನಾಣ್ಯಗಳು , ಅಂಚೆಚೀಟಿಗಳು ನಮ್ಮ ಇತಿಹಾಸ ಮತ್ತು ಪರಂಪರೆಗಳ ಪ್ರತೀಕ- ಬಿ.ವೈ.ರಾಘವೇಂದ್ರ.

0

B. Y. Raghavendra ಶಿವಮೊಗ್ಗ ನಗರದಲ್ಲಿ ಮಲೆನಾಡು ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಾಹಕರ ಸಂಘ ಹಾಗೂ ಕರ್ನಾಟಕ ನ್ಯೂಮಿಸ್ಮ್ಯಾಟಿಕ್ ಸೊಸೈಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ ‘ಶಿವಮೊಗ್ಗ ಕಾಯಿನ್ ಎಕ್ಸ್‌ಪೋ-2026’ (ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಪ್ರದರ್ಶನ) ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.

ನಮ್ಮ ಇತಿಹಾಸ ಮತ್ತು ಪರಂಪರೆಯನ್ನು ಸಾರುವ ಅಪರೂಪದ ನಾಣ್ಯಗಳು ಮತ್ತು ಅಂಚೆ ಚೀಟಿಗಳ ಸಂಗ್ರಹವನ್ನು ಇಲ್ಲಿ ವೀಕ್ಷಿಸಬಹುದು ಎಂದು ಸಂಸದರು ನುಡಿದರು.

B. Y. Raghavendra ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ‘ಶಿವಮೊಗ್ಗ ಟೈಮ್ಸ್’ ಸಂಪಾದಕರಾದ ಶ್ರೀನಿವಾಸ ಚಂದ್ರಕಾಂತ್, ಸೂಡಾ ಅಧ್ಯಕ್ಷರಾದ ಶ್ರೀ ಎಚ್.ಎಸ್. ಸುಂದರೇಶ್, ಶ್ರೀ ದೇವದಾಸ್ ನಾಯ್ಕ್, ಹಾಗೂ ಶ್ರೀ ಜ್ಯೋತಿ ಪ್ರಕಾಶ್ ಉಪಸ್ಥಿತರಿದ್ದರು.

Shimoga News ಮಾರ್ಗಸೂಚಿ ಆಧರಿತ ಕನ್ನಡ ನಾಮಫಲಕ ಅಳವಡಿಕೆ& ರಸ್ತೆ ತಿರುವುಗಳಲ್ಲಿ ಫ್ಲೆಕ್ಸಿ‌ ಪ್ರದರ್ಶನ ನಿಷೇಧಿಸಲು ಮನವಿ ಅರ್ಪಣೆ.

0

Shimoga News ಶಿವಮೊಗ್ಗ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಮಾಲ್‌ಗಳು ಮತ್ತು ಶೋರೂಂಗಳಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು 100ಕ್ಕೆ 60 ಭಾಗ ಅಳವಡಿಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆಯಲ್ಲಿ ನಡೆದ 2026-27ನೇ ಸಾಲಿನ ಆಯ-ವ್ಯಯ ಒಂದನೇ ಪೂರ್ವ ಭಾವಿ ಸಭೆಯಲ್ಲಿ ಕರುನಾಡು ಸಂರಕ್ಷಣಾ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.

Shimoga News ನಗರದ ಖಾಸಗಿ ಆಸ್ಪತ್ರೆಗಳಲ್ಲಿ, ವಾಹನ ಪಾರ್ಕಿಂಗ್ ಆಸ್ಪತ್ರೆಯ ಜಾಗದಲ್ಲಿಯೇ ನಿರ್ಮಿಸಿಕೊಳ್ಳಲು ಮತ್ತು ನಗರದಲ್ಲಿ ಅಳವಡಿಸುವ ಪ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು 3 ದಿವಸಗಳ ಅವಧಿ ಮೀರದಂತೆ ಕ್ರಮ ಕೈಗೊಳ್ಳಬೇಕು. ನಗರದ ಮುಖ್ಯ ರಸ್ತೆಗಳ ಯುಟರ್ನ್, ಎಡ ಮತ್ತು ಬಲಭಾಗದಲ್ಲಿ ಯಾವುದೇ ಪ್ಲೆಕ್ಸಿಗಳನ್ನಾಗಲೀ ಮತ್ತು ಜಾಹಿರಾತು ಫಲಕಗಳನ್ನು ಹಾಕದಂತೆ ಕ್ರಮ ಕೈಗೊಳ್ಳಬೇಕು ಮತ್ತು ಮಹಾನಗರಪಾಲಿಕೆಯಲ್ಲಿ ಖಾತೆ ಬದಲಾವಣೆಯ ನೂರಾರು ಅರ್ಜಿಗಳು ಮತ್ತು ಇ ಸ್ವತ್ತು ಮಾಡಿಸಿಕೊಳ್ಳಲು ನೂರಾರು ಅರ್ಜಿಗಳನ್ನು ವಿಲೇ ಇಟ್ಟಿರುವುದನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಿವಮೂರ್ತಿ ಎಸ್.ಪಿ., ಪ್ರಧಾನ ಕಾರ್ಯದರ್ಶಿ ಮೂರ್ತಿ ಸಿ, ಪದಾಧಿಕಾರಿಗಳಾದ ಅರುಣ್, ನಿರಂಜನ್, ಶ್ರೀನಿವಾಸ ಶಿವಣ್ಣ ಇತರರಿದ್ದರು.

MSME ಎಂಎಸ್ಎಮ್ಇ ಗಲ ಅಭಿವೃದ್ಧಿಗೆ ಅನೇಕ ಯೋಜನೆಗಳಿವೆ. ಅವುಗಳನ್ನ ಸದುಪಯೋಗಪಡಿಸಿಕೊಳ್ಳಬೇಕು- ಆರ್.ಗಣೇಶ್.

0

MSME ಜಾಗತಿಕವಾಗಿ ನಮ್ಮ ದೇಶ ಬಹು ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಎಂಎಸ್‌ಎಂಇ ಗಳ ಪಾತ್ರ ಮಹತ್ತರವಾಗಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಂಎಸ್‌ಎಂಇ ಗಳ ಅಭಿವೃದ್ದಿಗಾಗಿ ಅನೇಕ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ರೂಪಿಸಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಉದ್ಯಮಿಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಗಣೇಶ್ ಕರೆ ನೀಡಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಶಿವಮೊಗ್ಗ, ಕೆಸಿಟಿಯು ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘ ಶಿವಮೊಗ್ಗ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೆರೊಕ್ಯಾಸ್ಟ್ ಸಭಾಂಗಣದಲ್ಲಿ ಎಂಎಸ್‌ಎಂಇ ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವುದು(ಆರ್‌ಎಎಂಪಿ) ಯೋಜನೆಯಡಿಯಲ್ಲಿ ‘ನೋ ಯುರ್ ಎಂಎಸ್‌ಎAಇ ಇಕೊ ಸಿಸ್ಟಂ’(ಏಟಿoತಿ ಥಿouಡಿ ಒSಒಇ ಇಛಿo Sಥಿsಣem) ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಮ್ಮ ದೇಶ ಜಾಗತಿಕವಾಗಿ 4 ನೇ ದೊಡ್ಡ ಆರ್ಥಿಕ ಶಕ್ತಿಯಾಗಿದ್ದು ಇನ್ನೂ ಎತ್ತರಕ್ಕೇರಲು ಎಂಎಸ್‌ಎಂಇ ಗಳ ಪಾತ್ರ ಮುಖ್ಯವಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಎಂಎಸ್‌ಎಂಇ ಗಳ ಅಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿವೆ. ರಾಜ್ಯ ಸರ್ಕಾರ ಪ್ರತಿ 5 ವರ್ಷಕ್ಕೊಮ್ಮೆ ಹೊಸ ಕೈಗಾರಿಕಾ ನೀತಿ ರೂಪಿಸಿ, ರಿಯಾಯಿತಿ ಮತ್ತು ಉತ್ತೇಜನಗಳನ್ನು ನೀಡುತ್ತಿದೆ.
ಎಂಎಸ್‌ಎಂಇ ಗಳ ಸ್ಥಾಪನೆಯಿಂದ ಉದ್ಯೋಗಾವಕಾಶಗಳು ಹೆಚ್ಚುತ್ತಿವೆ. ರಾಜ್ಯ ಸರ್ಕಾರ ಎಂಎಸ್‌ಎಂಇ ಉತ್ತೇಜಿಸಲು 2 ಎಕರೆ ಕೃಷಿ ಭೂಮಿ ಕನ್ವವರ್ಷನ್‌ನ್ನು 30 ದಿನಗಳ ಒಳಗೆ ಮಾಡಲು ಅನುಮೋದನೆ ನೀಡಿದ್ದು, 30 ದಿನಗಳ ಒಳಗೆ ಆಗದಿದ್ದರೆ ಆಟೋ ಕನ್ವವರ್ಷನ್ ಮಾಡುವಂತಹ ಐತಿಹಾಸಿಕ ನಿಲುವು ತೆಗೆದುಕೊಂಡಿದೆ.
ಎಂಎಸ್‌ಎಂಇ ಗಳ ಅಭಿವೃದ್ಧಿಯಿಂದ ಜಿಡಿಪಿ ಮತ್ತು ಉದ್ಯೋಗಾವಕಾಶದಲ್ಲಿ ಪ್ರಗತಿಯಾಗಿ ದೇಶದ ಅಭಿವೃದ್ಧಿಯಾಗಲಿದ್ದು ಇಲಾಖೆಗಳು ಎಂಎಸ್‌ಎಂ ಇಗಳಿಗೆ ತಮ್ಮ ಸಹಕಾರ ನೀಡಬೇಕು. ಹೊಸ ನೀತಿಗಳು, ಕಾರ್ಯಕ್ರಮಗಳ ಬಗ್ಗೆ ತಿಳಿದುಕೊಂಡು ಎಂಎಸ್‌ಎಂಇ ಗಳಿಗೆ ಉತ್ತಮ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷರಾದ ಜೋಯಿಸ್ ರಾಮಾಚಾರ್ ಮಾತನಾಡಿ, ಕೃಷಿಯ ನಂತರ ಅತಿ ದೊಡ್ಡ ಆರ್ಥಿಕ ವಲಯವಾಗಿ ಹೊರಹೊಮ್ಮುತ್ತಿರುವ ಎಂಎಸ್‌ಎಂಇ ಪ್ರಾರಂಭಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಈ ಕುರಿತು ಸಮಗ್ರ ಮಾಹಿತಿ ನೀಡುವ ಈ ಕಾರ್ಯಾಗಾರ ಅತಿ ಉಪಯುಕ್ತವಾಗಿದ್ದು ಹೊಸ ಉದ್ಯಮಿಗಳು ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದರು.

MSME ಅತಿ ಸಣ್ಣ, ಸಣ್ಣ, ಮಧ್ಯಮ ಉದ್ಯಮಗಳನ್ನು (ಎಂಎಸ್‌ಎಂಇ) ಆರಂಭಿಸಲು ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ತಿಳಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ.

ಈ ಕಾರ್ಯಾಗಾರದಲ್ಲಿ ಎಂಎಸ್‌ಎಂಇ ಆರಂಭಿಸಲು ಅಗತ್ಯವಾದ ಎಲ್ಲ ಮಾಹಿತಿಯೂ ಸಿಗಲಿದೆ. ಮುಂದಿನ ದಿನ ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯಾಗಾರ ನಡೆಸುವ ಉದ್ದೇಶವಿದೆ.
ಈ ಹಿಂದೆ ಒಂದು ಉದ್ಯಮ ಆರಂಭಿಸುವುದು ಅಷ್ಟು ಸುಲಭವಾಗಿರಲಿಲ್ಲ. ಮಾಹಿತಿ, ತರಬೇತಿ, ಮೂಲಭೂತ ಸೌಕರ್ಯಗಳ ಕೊರತೆ ಇತ್ತು. ಸರ್ಕಾರದಿಂದ ಸೌಲಭ್ಯವೂ ಕಷ್ಟ ಇತ್ತು. ಆದರೆ ಇದೀಗ ಮಾಹಿತಿ ಹೇರಳವಾಗಿ ದೊರೆಯುತ್ತಿದೆ. ದೇಶಾದ್ಯಂತ ತರಬೇತಿ ಕೇಂದ್ರಗಳಿವೆ. ಇಲಾಖೆಗಳಲ್ಲೂ ವ್ಯವಸ್ಥಿತ ಕಾರ್ಯಕ್ರಮಗಳಿವೆ.

ಡಿಜಿಟಲ್ ಮೀಡಿಯಾದಲ್ಲೂ ಮಾಹಿತಿ ಸಾಕಷ್ಟಿದೆ. ಸರ್ಕಾರ ನೀಡುವ ಸೌಲಭ್ಯಗಳ ಕುರಿತಾದ ಈ ಕಾರ್ಯಾಗಾರ ತುಂಬಾ ಉಪಯುಕ್ತವಾಗಿದೆ. ಹಾಗೂ ಇಲಾಖೆ ಅಧಿಕಾರಿಗಳು ಅತ್ಯಂತ ಸಹಕಾರಿಯಾಗಿದ್ದಾರೆ. ಹೊಸಬರು ಸೇರಿದಂತೆ ಎಲ್ಲ ಉದ್ಯಮಾಕಾಂಕ್ಷಿಗಳು ಇಂತಹ ಕಾರ್ಯಕ್ರಮಗಳ ಸದ್ಬಳಕೆ ಮಾಡಿಕೊಳ್ಳಿರಿ ಎಂದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಗೋಪಿನಾಥ್ ಪಿ ಮಾತನಾಡಿ, ಎಂಎಸ್‌ಎಂಇ ಗಳ ಅಭಿವೃದ್ಧಿಯಿಂದ ದೇಶದ ಆರ್ಥಿಕತೆ ಸುಧಾರಣೆ ಆಗುತ್ತಿದೆ. ಕಳೆದ ಬಜೆಟ್‌ನಲ್ಲಿ ಎಂಎಸ್‌ಎಂಇ ಗಳಿಗೆ ಸಾಕಷ್ಟು ಯೋಜನೆಗಳನ್ನು ಕಲ್ಪಿಸಲಾಗಿದೆ.

ನಮ್ಮ ದೇಶ ಉತ್ಪಾದನಾ ಹಬ್ ಆಗಲು ಪ್ರಯತ್ನ ಮಾಡಲಾಗುತ್ತಿದ್ದು ಹೊಸ ಮತ್ತು ಯುವ ಉದ್ಯಮಿಗಳು ಮುಂದೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳ ವಿವರ ಮತ್ತು ಎಲ್ಲ ರೀತಿಯ ಮಾಹಿತಿ ಇಂತಹ ಕಾರ್ಯಾಗಾರದಲ್ಲಿ ನೀಡಿ ಸಹಕರಿಸಲಾಗುತ್ತಿದೆ. ಭೂಮಿ ಖರೀದಿಯಿಂದ ಹಿಡಿದು, ಬ್ಯಾಂಕ್ ಸಾಲ, ಉದ್ಯಮ ಸ್ಥಾಪನೆವರೆಗೆ ಸಹಕಾರ ದೊರಕಲಿದೆ. ಬ್ಯಾಂಕ್‌ನವರೂ ಕೈ ಜೋಡಿಸಿದ್ದಾರೆ. ಹೊಸ ಉದ್ಯಮ, ಕೈಗಾರಿಕೆಗಳನ್ನು ಆರಂಭಿಸಲು ಅಗತ್ಯವಾದ ಎಲ್ಲ ಜ್ಞಾನ, ಮಾಹಿತಿ ಸಹಕಾರ ಇಲ್ಲಿ ಲಭ್ಯವಿದ್ದು, ಇದೊಂದು ಅತ್ಯುತ್ತಮ ಕಾರ್ಯಕ್ರಮವಾಗಿದೆ ಎಂದರು.

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ವ್ಯವಸ್ಥಾಪಕ ವಿಶುಕುಮಾರ್ ಮಾತನಾಡಿ, ಕೃಷಿ ಹೊರತಾದ ಎಲ್ಲ ವ್ಯವಹಾರಗಳು ಎಂಎಸ್‌ಎಂಇ ಆಗಿವೆ. ಇವು ನಮ್ಮ ಆರ್ಥಿಕತೆಯ ಬೆನ್ನೆಲುಬಾಗಿದ್ದು ನಮ್ಮ ಸರ್ಕಾರಗಳು ಕೂಡ ಎಂಎಸ್‌ಎಂಇ ಗಳಿಗೆ ಅತ್ಯಂತ ಪ್ರಾಮುಖ್ಯತೆ ನೀಡಿವೆ. ದೇಶದ ಶೇ.30 ಜಿಡಿಪಿ ಎಂಎಸ್‌ಎಂಇ ಯ ಕೊಡುಗೆಯಾಗಿದ್ದು, 28 ಕೋಟಿಗೂ ಅಧಿಕ ಉದ್ಯೋಗ ನೀಡಿವೆ. ಸುಮಾರು 6.8 ಕೋಟಿ ಎಂಎಸ್‌ಎಂಇ ಗಳು ನೋಂದಣಿಯಾಗಿವೆ. ಈಗ ಬಹುತೇಕ ಕೈಗಾರಿಕೆಗಳು ಎಂಎಸ್‌ಎಂಇ ಚೌಕಟ್ಟಿನಲ್ಲಿ ಬರುತ್ತಿವೆ. ಎಂಎಸ್‌ಎಂಇ ಗಳಿಗೆ ಉದ್ಯಮ್ ನೋಂದಣಿ ಕಡ್ಡಾಯವಾಗಿದ್ದು ಇದರಿಂದ ಸರ್ಕಾರಿ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ.

ಜೊತೆಗೆ ಪ್ರತಿ ವರ್ಷ ಅಪ್‌ಡೇಟ್ ಮಾಡಬೇಕು. ಕಮರ್ಷಿಯಲ್ ಸಿಬಿಲ್ ರೇಟಿಂಗ್ ಚೆನ್ನಾಗಿರಬೇಕು. ಬ್ಯಾಲೆನ್ಸ್ ಶೀಟ್ ರೇಷಿಯೋ ಚೆನ್ನಾಗಿಟ್ಟುಕೊಳ್ಳಬೇಕು. ಬ್ಯಾಂಕ್‌ಗಳಿಗೆ ಕಂತು ಕಟ್ಟುವ ದಿನ ಕಟ್ಟದೇ ವಿಳಂಬ ಮಾಡಿದರೆ ಸಿಬಿಲ್ ರೇಟಿಂಗ್ ಇಳಿಕೆಯಾಗುತ್ತದೆ. ಆದ್ದರಿಂದ ಈ ಬಗ್ಗೆ ಗಮನ ಹರಿಸಬೇಕು. ಎಂಎಸ್‌ಎಂಇ ಗಳಿಗೆ ಸರ್ಕಾರದಿಂದ ಅನೇಕ ಸೌಲಭ್ಯಗಳಿದ್ದು ಸಿಜಿಟಿಎಂಎಸ್ ಕೂಡ ಉತ್ತಮ ಯೋಜನೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿ ಉಮೇಶ್ ಶಾಸ್ತ್ರಿ, ಉದ್ಯಮಿಗಳು, ಅಧಿಕಾರಿಗಳು ಪಾಲ್ಗೊಂಡಿದ್ದರು. ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಸಂಘದ ಕಾರ್ಯದರ್ಶಿ ಎಸ್.ವಿಶ್ವನಾಥಯ್ಯ ಸ್ವಾಗತಿಸಿದರು.

Mescom ಜನವರಿ 17. ಮಾಚೇನಹಳ್ಳಿ ಸುತ್ತಮುತ್ತ ವಿದ್ಯುತ್ನಿಲುಗಡೆ .ಮೆಸ್ಕಾಂ ಪ್ರಕಟಣೆ..

0

Mescom ಶಿವಮೊಗ್ಗ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 17 ರಂದು ಬೆಳಗ್ಗೆ 9.30 ರಿಂದ ಸಂಜೆ 4.00 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Mescom ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಜ. 17 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಪೇಪರ್ ಪ್ಯಾಕೇಜ್, ಅರಮನೆ ಹೋಟೆಲ್, ಹಳೇ ಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಮಲ್ನಾಡ್ ಕೊಕೊ,, ತಿವಾರಿ ಕಾಂಕ್ರೀಟ್, ಶಾರದಾನಗರ 1 ರಿಂದ 5ನೇ ಕ್ರಾಸ್, ಭೈರವ ಟಾರ್ಪಲ್, ಓಂ ಲ್ಯಾಬ್, ಗಣೇಶ ಇಂಜಿನಿಯರಿಂಗ್ ವರ್ಕ್ಸ್ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Sahyadri Areca Co-Op Society ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರಿ ಬ್ಯಾಂಕ್; ಪಿ.ವೀರಮ್ಮ ಅಧ್ಯಕ್ಷರಾಗಿ‌ ಅವಿರೋಧ ಆಯ್ಕೆ

0

Sahyadri Areca Co-Op Society ಸಹ್ಯಾದ್ರಿ ಮಹಿಳಾ ಪಟ್ಟಣ ಸಹಕಾರ ಬ್ಯಾಂಕ್ ನಿ., ದರ್ಗಾ ಕಾಂಪ್ಲೆಕ್ಸ್, ತಿಲಕ್ ನಗರ, ಶಿವಮೊಗ್ಗ ಇದರ 2026-2031ನೇ ಸಾಲಿನವರೆಗೆ ದಿನಾಂಕ:05-01-2026ರಂದು ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಶ್ರೀಮತಿ ವೀರಮ್ಮ.ಪಿ ಹಾಗೂ ಅವರ ಸಾರತ್ಯದಲ್ಲಿ ಸಂಪೂರ್ಣ ನಿರ್ದೇಶಕ ಮಂಡಳಿಯವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

Sahyadri Areca Co-Op Society ದಿನಾಂಕ:14-01-2026 ರಂದು ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾಗಿ ಸತತವಾಗಿ 2007ರಿಂದ 7ನೇ ಬಾರಿಗೆ ಶ್ರೀಮತಿ ವೀರಮ್ಮ.ಪಿ ರವರು ಮುಂದಿನ 5 ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಎಂ.ಕೆ.ಜ್ಯೋತಿ ರವರು ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು, ಪಿಗ್ಮಿ ಸಂಗ್ರಹಕಾರರು ಶುಭ ಹಾರೈಸಿದ್ದಾರೆ.

Chess ಜನವರಿ 18 ರಾಜ್ಯಮಟ್ಟದ ರಾಪಿಡ್ ಚೆಸ್ ಪಂದ್ಯಾವಳಿ

0

Chess ಜನವರಿ 18 ಭಾನುವಾರ ದಂದು ಚಾಣಕ್ಯ ಚೆಸ್ ಸ್ಕೂಲ್ ಹಾಗೂ ಭಾರತೀಯ ವಿದ್ಯಾ ಭವನ ಸ್ಕೂಲ್ ಸಹಯೋಗದಲ್ಲಿ, ಶಿವಮೊಗ್ಗ ನಗರದ ವಿದ್ಯಾ ನಗರ ಬಡಾವಣೆಯ ಭಾರತೀಯ ವಿದ್ಯಾ ಭವನ ಶಾಲೆಯಲ್ಲಿ ರಾಜ್ಯ ಮಟ್ಟದ ರಾಪಿಡ್ ಚೆಸ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಈ ಪಂದ್ಯದಲ್ಲಿ ರಾಜ್ಯದ ಎಲ್ಲಾ 17ವರ್ಷ ವಯೋಮಿತಿಯ ಮಕ್ಕಳು ಭಾಗವಹಿಸಬಹುದು.

ಆಸಕ್ತರು ಹೆಸರು ನೋಂದಾಯಿಸಲು ಹಾಗೂ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9845830133 ,9741591672

Shimoga News ರಾಜ್ಯ “ಯುವ ಪ್ರಶಸ್ತಿ,- 2025-26” . ಶಿವಮೊಗ್ಗದ ಎಸ್.ವಿ.ರಂಜಿತಾ ಆಯ್ಕೆ.

0

Shimoga News ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವಜನ ವತಿಯಿಂದ ಕನ್ನಡ ರಾಜ್ಯ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಬಾಲಾಜಿ ಅವರ ನೇತೃತ್ವದಲ್ಲಿ ನೀಡುವ ‘ಯುವ ಸಂಭ್ರಮ 2026’ ‘ರಾಜ್ಯ ಯುವ ಪ್ರಶಸ್ತಿ 2025-26’ಕ್ಕೆ ಶಿವಮೊಗ್ಗ ಜಿಲ್ಲಾ ಜಾನಪದ ಪರಿಷತ್, ಯುವ ಬ್ರಿಗೇಡ್ ಜಾನಪದ ಕಲಾವಿದೆ, ನಿರೂಪಕಿ ಎಸ್.ವಿ.ರಂಜಿತಾ ಆಯ್ಕೆಯಾಗಿದ್ದಾರೆ.

Shimoga News ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 18ರಂದು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆಯಲಿದೆ. ಡಿವಿಎಸ್ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಹಾಗೂ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಅಭಿನಂದಿಸಿದ್ದಾರೆ.

B.Y. Raghavendra ಕಾಯಕವೇ ಶ್ರೇಷ್ಠ, ಮನುಷ್ಯತ್ವ ಬೋಧಿಸುವುದೇ ನಿಜವಾದ ಧರ್ಮ- ಬಿ.ವೈ.ರಾಘವೇಂದ್ರ

0

B.Y. Raghavendra ಕಾಯಕವೇ ಎಲ್ಲಕ್ಕಿಂತ ಶ್ರೇಷ್ಟ. ಮನುಷ್ಯತ್ವ ಬೋಧಿಸುವುದೇ ನಿಜವಾದ ಧರ್ಮ ಎಂದು ನಂಬಿ ಅದನ್ನೇ ಪ್ರತಿಪಾತಿಸುತ್ತಿದ್ದ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರು ನಮ್ಮೆಲ್ಲರಿಗೂ ಆದರ್ಶ ಪುರುಷರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ಸಿದ್ದರಾಮೇಶ್ವರರು ನೇರ ಮತ್ತು ನಿಷ್ಟುರ ನುಡಿಯ ದಾರ್ಶಜನಿಕರು. ಬಸವಾದಿ ಶರಣರೊಂದಿಗೆ ಸಮ ಸಮಾಜದ ನಿರ್ಮಾಣದಲ್ಲಿ ತೊಡಗಿದ್ದವರು. 12 ನೇ ಶತಮಾನದಲ್ಲೇ ನೂರಾರು ಕೆರೆ ಕಟ್ಟೆಗಳನ್ನು ನಿರ್ಮಿಸುವ ಮೂಲಕ ನೀರಾವರಿ ಕ್ರಾಂತಿಗೆ ನಾಂದಿ ಹಾಡಿದವರು. ಕುಡಿಯುವ ನೀರಿನ ಯೋಜನೆಗಳಿಗೆ ಇವರೇ ಪ್ರೇರಕ ಶಕ್ತಿ .
ಇವರು ದೂರದೃಷ್ಟಿವುಳ್ಳ ಕಾರ್ಯಕ್ರಮ ನೀಡುತ್ತಿದ್ದರು. ಹಾಗೂ ಜನ ಸೇವೆಯ ಮೂಲಕ ಶಿವಾರಾಧನೆ ಮಾಡುತ್ತಿದ್ದರು. ಇಂತಹ ದಾರ್ಶನಿಕರ ಜೀವನ ಮೌಲ್ಯಗಳನ್ನು ನಾವು ಅಳವಡಿಸಿಕೊಂಡಲ್ಲಿ ಈ ಸಮಾಜಕ್ಕೆ, ನಮ್ಮ ಜೀವನಕ್ಕೆ ನಾವು ನ್ಯಾಯ ಒದಗಿಸಬಹುದು.
ಮೂಢನಂಬಿಕೆ, ಅಸಮಾನತೆ, ತಾರತಮ್ಯ ತಿರಸ್ಕರಿಸಿದ್ದ ಅವರು ಮನುಷ್ಯತ್ವವೇ ಮುಖ್ಯವೆಂದು ಮನುಕುಲದ ಏಳ್ಗೆಗಾಗಿ ದುಡಿದರು. ಇಂತಹ ಮಹಾನ್ ಪುರುಷರ ಮೌಲ್ಯಗಳು, ತತ್ವಗಳು ಯುವ ಪೀಳಿಗೆಗೆ ಎಂದಿಗೂ ಮಾದರಿಯಾಗಿವೆ ಎಂದ ಅವರು ಶ್ರೀ ಸಿದ್ದರಾಮೇಶ್ವರರಂತೆ ಅವರ ಸಮಾಜ ಕೂಡ ಶ್ರೇಷ್ಠವಾಗಿದೆ ಎಂದರು.
B.Y. Raghavendra ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ದೇಶಾದ್ರಿ ಹೊಸ್ಮನೆ ಉಪನ್ಯಾಸ ನೀಡಿ ಮಾತನಾಡಿ, ಯಾವುದೇ ಮಹಾನ್‌ಪುರುಷರ, ದಾರ್ಶನಿಕರ ಜಯಂತಿಗಳು ಆತ್ಮಾವಲೋಕನಕ್ಕೆ ಒಂದು ವೇದಿಕೆಯಾಗಿ, ಅವರ ಜೀವನ ಚರಿತ್ರೆ, ಮೌಲ್ಯಗಳು, ತತ್ವಗಳನ್ನು ಅರಿತು ಅವುಗಳನ್ನು ಅಳವಡಿಸಿಕೊಂಡು ಅವರ ದಾರಿಯಲ್ಲಿ ನಡೆಯುವ ಪ್ರಯತ್ನಗಳಾಗಬೇಕೇ ವಿನಃ ಕೇವಲ ಸಭೆ ಸಭಾರಂಭಗಳಿಗೆ ಸೀಮಿತವಾಗಬಾರದು ಎಂದರು.
ಶ್ರೀ ಸಿದ್ದರಾಮೇಶ್ವರರು ಕಾಯಕಯೋಗಿಗಳು. ಕಾಯಕವೇ ಸರ್ವಶ್ರೇಷ್ಟವೆಂದು ಅದನ್ನೇ ನಂಬಿ ನಡೆದವರು. 12 ನೇ ಶತಮಾನದಲ್ಲಿಯೇ ಯಾವುದೇ ಆಧುನಿಕ ಇಂಜಿನಿಯರಿAಗ್ ವ್ಯವಸ್ಥೆ ಇಲ್ಲದ ಕಾಲದಲ್ಲಿ ಜನ-ಜಾನುವಾರುಗಳಿಗೆ ಅತ್ಯುತ್ತಮವಾದ ಕೆರೆ ಕಟ್ಟೆಗಳನ್ನು ನಿರ್ಮಿಸಿದ್ದರು. ಸಮ ಸಮಾಜದ ನಿರ್ಮಾಣಕ್ಕಾಗಿ ಬಸವಾದಿ ಶರಣರೊಂದಿಗೆ ಹೋರಾಡಿದ್ದರು. ಅತ್ಯುತ್ನತ ಉನ್ನತ ಸ್ಥಾನವಾದ ಅನುಭವ ಮಂಟಪದ 3 ನೇ ಪೀಠಾಧ್ಯಕ್ಷರಾಗಿದ್ದರು.
12 ನೇ ಶತಮಾನದ ವಚನ ಚಳವಳಿಯನ್ನು ನಾವ್ಯಾರೂ ಮರೆಯಲಿಕ್ಕೆ ಸಾಧ್ಯವಿಲ್ಲ. ಅಂತಹ ಚಳವಳಿಯಲ್ಲಿ ಇವರು ಮುಂಚೂಣಿಯಲ್ಲಿದ್ದು, ಬಸವಣ್ಣನವರ ಸಮ ಸಮಾಜ ನಿರ್ಮಾಣ ಪರಿಕಲ್ಪನೆಯಿಂದ ಪ್ರೇರೇಪಣೆಗೊಂಡು ಅದೇ ಮಾರ್ಗದಲ್ಲಿ ನಡೆದವರು.
ಶ್ರಮ ಸಂಸ್ಕೃತಿಯಲ್ಲಿ ನಂಬಿಕೆ ಇರಿಸಿದ್ದ ಇವರು ಮೂರ್ತಿ ಪೂಜೆಗಿಂತ ಕಾಯಕವೇ ಶ್ರೇಷ್ಟವೆಂದು ನಡೆದವರು. ಮನುಕುಲದ ಏಳ್ಗೆಯೇ ಮುಖ್ಯ ಎಂದು ನಂಬಿದವರು. ನಾವು ಕೂಡ ಇಂತಹ ದಾರ್ಶನಿಕರ ದೇವಾಲಯ ನಿರ್ಮಿಸಿ ಇವರ ಮೂರ್ತಿ ಪೂಜೆ ಮಾಡುವುದಕ್ಕಿಂತ ಇವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ನಡೆಯಬೇಕು. ಶೋಷಿತ ಸಮಾಜಗಳ ಸಂಘಟಕರಾದ ಇವರು ಸಂಘಟನೆಯ ಪ್ರತಿಪಾದಕರಾಗಿದ್ದು, ನಾವೆಲ್ಲ ಸಂಘಟಿತರಾಗಬೇಕು ಹಾಗೂ ಇವರ ಆದರ್ಶಗಳ ಅಡಿಯಲ್ಲಿ ನಾವು ಸಮಾಜ ಕಟ್ಟಬೇಕು.
ಕೇವಲ ಮೂರ್ತಿ ಪೂಜೆ ಮಾಡಿದರೆ ಸಮಾಜ ಎಚ್ಚರಗೊಳ್ಳಲು ಸಾಧ್ಯವಿಲ್ಲ. ವಚನಕಾರರ ಅನುಯಾಯಿಗಳಾದ ನಮ್ಮ ಸಮಾಜ ಆಚರಣೆಗಳಿಗೆ ಬಲಿಯಾಗುತ್ತಿದ್ದೇವೆ. ಆಚರಣೆಗಳಿಗಿಂತ ತಿಳುವಳಿಕೆಯ ಜ್ಞಾನದ ಕಡೆ ನಡೆಯಬೇಕಿದೆ ಎಂದ ಅವರು ಶ್ರೀ ಸಿದ್ದರಾಮೇಶ್ವರ ಬಾಲ್ಯ ಸೇರಿದಂತೆ ಜೀವನ ಚರಿತ್ರೆ ಕುರಿತು ವಿವರಿಸಿದರು.
ಶ್ರೀ ಸಿದ್ದರಾಮೇಶ್ವರರು ಅಧಿಕಾರದ ಆಸೆ ತಿರಸ್ಕರಿಸಿ, ಬಸವಣ್ಣನವರ ಸಂಪರ್ಕ ಬೆಳೆಸಿ ವಚನ ಚಳವಳಿಯಲ್ಲಿ ಪಾಲ್ಗೊಳ್ಳುತ್ತಾರೆ. ಜಾತಿ ವ್ಯವಸ್ಥೆ ವಿರುದ್ದ ಹೋರಾಡುತ್ತಾರೆ.
ಕಲ್ಲು, ಮಣ್ಣು, ನೀರಿನ ಮೂಲಕ ದೊಡ್ಡ ದೊಡ್ಡ ಕಟ್ಟಡಗಳು, ಅರಮನೆ, ಅಣೆಕಟ್ಟು ಇತರೆ ಕಟ್ಟುವ ಸಂಸ್ಕೃತಿಯ ಪ್ರತೀಕವಾದ ನಮ್ಮ ಸಮಾಜ ಕೀಳರಿಮೆ ಬಿಟ್ಟು ಉನ್ನತ ಸ್ಥಾನದಲ್ಲಿದ್ದೇವೆ ಎಂದು ಹೆಮ್ಮೆ ಪಡಬೇಕು. ಸಂಘಟಿತರಾಗಬೇಕು. ನಮ್ಮ ಸಮಾಜಕ್ಕಾಗಿ ನಾವು ಕೊಡುಗೆಗಳನ್ನು ನೀಡಬೇಕು. ಕುಲಗುರುಗಳ ಮಹತ್ವ ತಿಳಿದು ಎಚ್ಚರಗೊಳ್ಳಬೇಕು. ಅವರ ವಚನಗಳ ಸಾರವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದ ಅವರು ಅವರ ಆದರ್ಶಗಳನ್ನು ಪಾಲಿಸಿದರೆ ಮಾತ್ರ ಸಮಾಜದ ಉದ್ದಾರ ಸಾಧ್ಯ ಎಂದರು.
ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ, ರಾಜ್ಯ ಜವಳಿ ಮೂಲ ಸೌಲಭ್ಯ(ವಿದ್ಯುತ್ ಮಗ್ಗಗಳ) ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ ಮಾತನಾಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಸಿ ಎಸ್, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎನ್ ರವಿಕುಮಾರ್, ತಾಲ್ಲೂಕು ಭೋವಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಟಿ.ಜಗದೀಶ್, ಸಮಾಜದ ಮುಖಂಡರು, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ರ‍್ದೇಶಕ ಉಮೇಶ್ ಹೆಚ್, ಅಧಿಕಾರಿಗಳು ಹಾಜರಿದ್ದರು.