Saturday, February 14, 2026
Saturday, February 14, 2026
Home Blog Page 123

Mahant Rudreshwara Maha Swami ನಮ್ಮ ಸನಾತನ ಸಂಸ್ಕೃತಿಯ ಮೌಲ್ಯಪ್ರತಿಪಾದನೆಗೆ ದೇವಾಲಯ ಸಂರಚನೆಯಲ್ಲಿ ಅವಕಾಶವಿದೆ: ಡಾ.ಹೆಚ್.ಬಿ.ಮಂಜುನಾಥ್ ,ದಾವಣಗೆರೆ

0

Mahant Rudreshwara Maha Swami ತಾರತಮ್ಯ ಭೇದವಿಲ್ಲದೇ ಎಲ್ಲರೂ ಭಕ್ತಿ ಸಮರ್ಪಿಸಲು ದೇವಾಲಯಗಳು ಕಾರಣವಾಗಿ ತನ್ಮೂಲಕ ಸಾಮಾಜಿಕ ಸಾಮರಸ್ಯ ವೃದ್ಧಿಯಾಗುತ್ತದೆ ಎಂದು ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಮಹಾ ಸ್ವಾಮಿಗಳು ಹೇಳಿದರು.

ದಾವಣಗೆರೆ ತಾಲೂಕು ಕಾಶೀಪುರದಲ್ಲಿ ಶ್ರೀ ಕಾಶಿಲಿಂಗೇಶ್ವರ ಪ್ರಾಣ ಪ್ರತಿಷ್ಠಾಪನೆ, ಕಳಶಾರೋಹಣ, ಪೂರ್ಣ ಶಿಲಾ ದೇವಸ್ಥಾನದ ಶುಭಾರಂಭ ಸಾನ್ನಿಧ್ಯ ವಹಿಸಿ ಧರ್ಮಸಭೆಯಲ್ಲಿ ಆಶೀರ್ವಚನ ನೀಡುತ್ತಾ ಊರಿನ ನ್ಯಾಯ ನಿರ್ಣಯಗಳು ಊರಿನ ದೇವರುಗಳ ಸಾಕ್ಷಿಯಾಗಿ ನೆರವೇರುತ್ತಾ ವ್ಯಾಜ್ಯ ತೀರ್ಮಾನವಾಗುತ್ತಿದ್ದ ಸನಾತನ ಸಂಸ್ಕೃತಿ ನಮ್ಮದು, ಸನಾತನ ಧರ್ಮಾಧಾರಿತ ಭಗವಂತನ ಪ್ರತಿಷ್ಠಾಪನೆಗೊಂಡ ಪವಿತ್ರ ಕ್ಷೇತ್ರದಲ್ಲಿ ದುಶ್ಚಟಗಳಿಗೆ ಆಸ್ಪದವಿಲ್ಲದಂತೆ ನೋಡಿಕೊಳ್ಳಬೇಕು. ದೀನ ದುರ್ಬಲರಿಗೆ ಸಹಾಯ ಮಾಡುವುದು ನಮ್ಮ ಸನಾತನ ಧರ್ಮದ ಪರಂಪರೆ ಎಂದರಲ್ಲದೆ ಕಾಶಿ ಕ್ಷೇತ್ರದಿಂದಲೇ ಈಶ್ವರಲಿಂಗ ತಂದು ಮೂರು ಕೋಟಿ ರೂಪಾಯಿಗೂ ಅಧಿಕ ವೆಚ್ಚದ ಸಂಪೂರ್ಣ ಶಿಲಾ ಕೆತ್ತನೆಯ ಈ ದೇವಸ್ಥಾನ ನಿರ್ಮಾಣಕ್ಕೆ ಜಾತಿ ಮತ ಭೇದವಿಲ್ಲದೆ ಎಲ್ಲರೂ ಸ್ವಯಂ ಪ್ರೇರಣೆಯಿಂದ ನೀಡಿರುವವರು ಪುಣ್ಯಾತ್ಮರು, ಗ್ರಾಮದವರಲ್ಲದೆ ಸುತ್ತಮುತ್ತಲಿನ ಕ್ಯಾಂಪು ಗಳವರೂ, ಇತರರೂ ಸಹಕರಿಸಿದ್ದಾರೆ ಎಂದರು.

ಟ್ರಸ್ಟಿನ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ದಾನ ದೇಣಿಗೆ ನೀಡಿದ ಸರ್ವರನ್ನು ಸ್ವಾಮಿಗಳು ಸ್ಮರಿಸಿದರು.

‘ಸನಾತನ ಧರ್ಮ ಮತ್ತು ದೇವಾಲಯ ಸಂಸ್ಕೃತಿ’ಯ ಬಗ್ಗೆ ಪ್ರಧಾನ ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಡಾ. ಎಚ್ ಬಿ ಮಂಜುನಾಥ ಬದುಕಿನ ಭರವಸೆಗಾಗಿ ದೈವ ಕೃಪೆ ನಿರೀಕ್ಷಿಸಿ ಬರಲು ದೇವಾಲಯಗಳು ಕಾರಣವಾಗುವುದಷ್ಟೇ ಅಲ್ಲ ನಮ್ಮ ಸನಾತನ ಸಂಸ್ಕೃತಿಯ ಮೌಲ್ಯಗಳ ಪ್ರತಿಪಾದನೆಗೂ ದೇವಾಲಯ ಸಂಸ್ಕೃತಿಯಲ್ಲಿ ಅವಕಾಶವಿದ್ದು ಅನೇಕ ವಿದೇಶೀಯರೂ ಇದರ ಮಹತ್ವ ಅರಿತು ಆಚರಿಸಲು ನಮ್ಮ ದೇಶಕ್ಕೆ ಬರುತ್ತಿದ್ದು ನಮ್ಮಲ್ಲೇ ಕೆಲವರು ಸನಾತನ ಧರ್ಮವನ್ನು ಹಾದಿ ತಪ್ಪಿಸಲು ಹೊರಟು ತಾವೇ ಹಾದಿತಪ್ಪುತ್ತಿದ್ದಾರೆ ಎಂಬುದನ್ನು ನಿದರ್ಶನಗಳ ಸಹಿತ ವಿವರಿಸಿದರು.

ಸಗುಣ ಸಾಕಾರವಾಗಿಯೇ ಆಗಲಿ ನಿರ್ಗುಣ ನಿರಾಕಾರವಾಗಿಯೇ ಆಗಲಿ, ನಾಮರೂಪ ಸಹಿತವಾಗಿಯೇ ಆಗಲಿ ರಹಿತವಾಗಿಯೇ ಆಗಲಿ ಸ್ಥಾವರವಾಗಿಯೇ ಆಗಲಿ ಜಂಗಮವಾಗಿಯೇ ಆಗಲಿ ಎಲ್ಲ ರೀತಿಯ ಆಚರಣೆಗಳಿಗೂ ಪ್ರಪಂಚದಲ್ಲಿ ಅವಕಾಶ ಸ್ವಾತಂತ್ರ್ಯ ಕೊಟ್ಟಿರುವ ಧರ್ಮವೆಂದರೆ ಅದು ನಮ್ಮ ಭಾರತೀಯ ಧರ್ಮ ಎಂದರು.

Mahant Rudreshwara Maha Swami ಬನವಾಸಿ ಕದಂಬ ಸಿಂಹ ಲಾಂಛನದ ದೊರೆ ರವಿವರ್ಮನು ತ್ರಯಂಬಕ ದೇವರಿಗೆ ಹೊಳಲಕೆರೆಯ ದುಮ್ಮಿ ಮುಂತಾದ ಗ್ರಾಮಗಳನ್ನು ದತ್ತಿ ಕೊಟ್ಟ ಉಲ್ಲೇಖವಿರುವ ತಾಮ್ರ ಶಾಸನಸ್ಥ ಗ್ರಾಮ ವಾಗಿರುವ ಕಾಶೀಪುರವು ಪುರಾತನ ಐತಿಹ್ಯ ಹೊಂದಿದ್ದು ಈ ದೇವಾಲಯವು ಆಗಮಗಳ ಅನುಸಾರವಾಗಿಯೇ ನಿರ್ಮಾಣಗೊಂಡಿದೆ ಎಂದರು.

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಮಾತನಾಡಿ ಹಿಂದಿನ ಕಾಲದಲ್ಲಿ ಕಷ್ಟಪಟ್ಟಾದರೂ ಕಾಶಿ ಯಾತ್ರೆಗೆ ಹೋಗುತ್ತಿದ್ದರು, ಈಗ ಕಾಶಿಗೆ ಹೋಗಲಾರದವರು ಈ ಕಾಶಿಪುರಕ್ಕೆ ಬಂದು ಕಾಶಿ ವಿಶ್ವನಾಥನ ದರ್ಶನ ಪಡೆಯಬಹುದಾಗಿದೆ ಎಂದರು. ಶಿಲ್ಪಿಗಳ ಪರವಾಗಿ ರಾಜೇಶ್ ರನ್ನುಸನ್ಮಾನಿಸಲಾಯಿತು.

ಟ್ರಸ್ಟಿನ ಅಧ್ಯಕ್ಷರಾದ ಶೇಖರಪ್ಪ, ಸಿದ್ದೇಶ್ ಕಾಶಿಪುರ, ಓಂಕಾರ ಗೌಡ್ರು, ಗೋಪಾಲ್ ಗೌಡ್ರು ಮುಂತಾದವರು ಉಪಸ್ಥಿತರಿದ್ದು , ಮಹೇಶ್, ಜಗದೀಶ್, ಚೇತನ್ ಮುಂತಾದವರು ಭಾಗವಹಿಸಿದ್ದು ಕೆ ವಿಶ್ವನಾಥ್ ನಿರೂಪಿಸಿದ ಧರ್ಮಸಭೆಯಲ್ಲಿ ಹಗಲು ವೇಷ ತಂಡದವರು ಪ್ರಾರ್ಥನೆಯನ್ನು ಹಾಡಿದರೆ ದೇವತಾ ಸ್ತುತಿಯನ್ನು ಮಹತಿ ಹಿರೇಮಠ್, ಪ್ರಕಾಶ್ ಮಾಡಿದರು.

ಸ್ವಾಗತವನ್ನು ಗುರುಮೂರ್ತಿ ಕೋರಿದರು, ನಿಜಲಿಂಗಪ್ಪ ವಂದನೆಗಳನ್ನು ಸಮರ್ಪಿಸಿದರು. ವೇದಾಗಮೋಕ್ತವಾದ ಪ್ರತಿಷ್ಠಾಪನಾ ವಿಧಿ ವಿಧಾನಗಳನ್ನು ವೇದಮೂರ್ತಿಗಳ ತಂಡ ನೆರವೇರಿಸಿದರೆ ಆಗಮಿಸಿದ್ದ ಸಹಸ್ರಾರು ಸಂಖ್ಯೆಯ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯು ಅತ್ಯುತ್ತಮವಾಗಿ ಏರ್ಪಾಡಾಗಿತ್ತು.

Mayuri Dance Arts Centre ಅಕ್ಟೋಬರ್ 27, ಶಿವಮೊಗ್ಗದಲ್ಲಿಅದ್ಭುತ ಮಯೂರ ನೃತ್ಯೋತ್ಸವ-5

0

Mayuri Dance Arts Centre ವಿಜಯನಗರದ ಮಯೂರಿ ನೃತ್ಯ ಕಲಾ ಕೇಂದ್ರದಿಂದ ವಿದುಷಿ ಶ್ರೀಮತಿ ಶ್ವೇತ ಪ್ರಕಾಶ್ ಪ್ರಸ್ತುತ ಪಡಿಸುವ ಮಯೂರ ನೃತ್ಯೋತ್ಸವ-5 ಕಾರ್ಯಕ್ರಮವನ್ನು ಅ. 27ರಂದು ಸಂಜೆ 5:30 ಗಂಟೆಗೆ ನಗರದ ಕುವೆಂಪು ನಗರದಲ್ಲಿ ಏರ್ಪಡಿಸಲಾಗಿದೆ.
Mayuri Dance Arts Centre ಕಲಾಸಕ್ತರು ಭಾಗವಹಿಸಲು ಕೇಂದ್ರದ ಪ್ರಮುಖರು ಕೋರಿದ್ದಾರೆ.

ದೇಗುಲಗಳಿಗೆ ಕನ್ನ ಹಾಕುತ್ತಿದ್ದ ‘ಚಾಂಪಿಯನ್ ಕಳ್ಳ’ನ ಬಂಧನ

0

ಸೊರಬ ಪಟ್ಟಣದ ಪುರಸಭೆ ಮುಂಭಾಗದಲ್ಲಿ ದೀಪಾವಳಿ ಹಬ್ಬದ ನಿಮಿತ್ತ ಗಸ್ತಿನಲ್ಲಿದ್ದ ಸಿಬ್ಬಂದಿಯನ್ನು ಕಂಡು ವ್ಯಕ್ತಿಯೋರ್ವ ಓಡಲು ಯತ್ನಿಸಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ದೇವಸ್ಥಾನಗಳ ಕಳುವು ಪ್ರಕರಣಗಳು ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದ ಕೆ. ಸಂದೀಪ ಕರಿಬಸಪ್ಪ ಬಂಧಿತ ಆರೋಪಿ.
ಇತ್ತೀಚೆಗೆ ಕಡಸೂರು ಗ್ರಾಮದ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಕಳ್ಳತನವಾದ ಬಗ್ಗೆ ದೂರು ದಾಖಲಾಗಿತ್ತು. ಬಂಧಿತ ಆರೋಪಿಯಿಂದ ಸುಮಾರು ನಾಲ್ಕು ಲಕ್ಷ ರೂ., ಮೌಲ್ಯದ 37 ಗ್ರಾಂ ಬಂಗಾರದ ಒಡವೆಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಾಗರ ತಾಲೂಕಿನ ಯಲಕುಂದ್ಲಿ ಗ್ರಾಮದ ಶ್ರೀ ರಾಚಮ್ಮ ದೇವಸ್ಥಾನ, ದಿಗಟೆಕೊಪ್ಪ ಗ್ರಾಮದ ಚೌಡಮ್ಮ ದೇವಸ್ಥಾನ, ಶಿರೂರು-ಆಲಳ್ಳಿ ಗ್ರಾಮದ ಯಕ್ಷಾಂಬ ದೇವಸ್ಥಾನ, ಬಲೆಗಾರು ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನ, ಮರತ್ತೂರು ಗ್ರಾಮದ ದುರ್ಗಮ್ಮ ದೇವಸ್ಥಾನ ಹಾಗೂ ಕಾರ್ಗಲ್ ಠಾಣಾ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಕೋಟೇಶ್ವರ ದೇವಸ್ಥಾನಗಳಲ್ಲಿ ಕಳವು ಮಾಡಿರುವುದು ವಿಚಾರಣೆ ವೇಳೆ ತಿಳಿದುಬಂದಿರುತ್ತದೆ.
ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್, ಎಎಸ್‌ಪಿಗಳಾದ ಬಿ. ರಮೇಶ್ ಹಾಗೂ ಕಾರಿಯಪ್ಪ, ಶಿಕಾರಿಪುರ ಡಿವೈಎಸ್‌ಪಿ ಕೆ.ಇ. ಕೇಶವ, ಸಿಪಿಐ ಮಹಾಂತೇಶ ಕೆ. ಲಂಬಿ ಮಾರ್ಗದರ್ಶನದಲ್ಲಿ ಪಿಎಸ್‌ಐ ಎಂ.ಎಚ್. ನವೀನ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ನಾಗೇಶ್, ರಾಜುನಾಯ್ಕ್, ಆರ್. ಗಿರೀಶ್, ರಾಘವೇಂದ್ರ, ಲೋಕೇಶ್, ವಿನಯ, ಗಿರೀಶ್, ಹನುಮಂತ, ಮಲ್ಲೇಶ್, ಕೆ.ಎನ್. ಶಶಿಧರ, ಸಂದೀಪ, ಸೋಮಶೇಖರ, ಉಮೇಶ್, ಕಿರಣ್, ಮೋಹನ್, ರವೀಂದ್ರ, ಹೇಮಲತಾ, ರೂಪಾಲಿ ಪಾಲ್ಗೊಂಡಿದ್ದರು.

ಹಣಕಾಸು ಸಂಸ್ಥೆಗಳಲ್ಲಿ ತೊಡಗಿಸಿರುವ ಹಣವನ್ನ ಸೂಕ್ತವಾಗಿ ಪಡೆಯಲು ವ್ಯಕ್ತಿಗಳಿಗೆ/ ವಾರಸುದಾರರಿಗೆ ತಲುಪಿಸಲು ವಿಶೇಷ ಆಂದೋಲನ- ಅಭಿಷೇಕ್

0

ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಬ್ಯಾಂಕುಗಳಲ್ಲಿ, ವಿಮಾ ಕಂಪನಿಗಳಲ್ಲಿ ಹಾಗೂ ಮ್ಯೂಚ್ಯುಯಲ್ಫಂಡ್ಗಳಲ್ಲಿ ತೊಡಗಿಸಿದ ಹಣದ ಮೂಲ ವ್ಯಕ್ತಿಗಳಿದ್ದಲ್ಲಿ ಅಥವಾ ಅವರ ವಾರಸುದಾರರಿದ್ದಲ್ಲಿ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ಹಣ ಪಡೆದುಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್ ಅವರು ಹೇಳಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ದ ವಾರಸುದಾರರಿಗೆ ಹಸ್ತಾಂತರಿಸುವ ಸಂಬಂಧ ಏರ್ಪಡಿಸಲಾಗಿದ್ದ ವಿಶೇಷ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ಈ ವಿಶೇಷ ಆಂದೋಲನವು ಅಕ್ಟೋಬರ್ಮಾಹೆಯಿಂದ ಆರಂಭಗೊಂಡು ಡಿಸೆಂಬರ್ಮಾಸಾಂತ್ಯದವರೆಗೆ ನಡೆಯಲಿದೆ. ಜಿಲ್ಲೆಯ ರಾಷ್ಟ್ರೀಯ ಬ್ಯಾಂಕುಗಳಲ್ಲಿನ ಒಟ್ಟು 3.66ಲಕ್ಷ ಖಾತೆಗಳಿದ್ದು ಅವುಗಳಲ್ಲಿನ ಆಯ್ದ 79ಕೋಟಿ+, ವಿಮಾ ಕಂಪನಿಗಳಲ್ಲಿ 1043ಖಾತೆಗಳ ಪೈಕಿ 1.82ಕೋಟಿ ಮೊತ್ತ ವಾರಸುದಾರರಿಲ್ಲದೆ ಉಳಿದುಕೊಂಡಿದದೆ. ಜಿಲ್ಲೆಯ ಆಯ್ದ 08ರಾಷ್ಟ್ರೀಯ ಬ್ಯಾಂಕುಗಳಲ್ಲಿ ತಲಾ 1ಕೋಟಿಗೂ ಹೆಚ್ಚಿನ ಮೊತ್ತ ವಾರಸುದಾರರಿಲ್ಲದೆ ಉಳಿದುಕೊಂಡಿರುವುದನ್ನು ಗುರುತಿಸಲಾಗಿದೆ. ಶೇ.20ರಷ್ಟು ವಾರಸುದಾರರಿಗೆ ಸದರಿ ಮೊತ್ತವನ್ನು ತಲುಪಿಸಲು ಗುರಿ ನೀಡಲಾಗಿದೆ ಎಂದ ಅವರು, 34ಮ್ಯೂಚ್ಯುಯಲ್ಫಂಡ್ಗಳಲ್ಲಿ ತೊಡಗಿಸಲಾಗಿದ್ದ ಹಣವನ್ನು ಸಂಬಂಧಿಸಿದ ವಾರಸುದಾರರಿಗೆ ತಲುಪಿಸಲಾಗಿದೆ ಎಂದವರು ನುಡಿದರು.
ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ ಡಿಸೆಂಬರ್ಮಾಸಾಂತ್ಯವರೆಗೆ ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ನಡೆಯಲಿರುವ ಈ ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿನ ಹಣ ಮತ್ತು ಕ್ಲೈಮ್ ಮಾಡದ ಠೇವಣಿಗಳನ್ನು ಹಿಂಪಡೆದುಕೊಳ್ಳಬಹುದಾಗಿದೆ. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಆಸಕ್ತರಿಗೆ ಸಲಹೆ ನೀಡಲಿದ್ದಾರೆ ಎಂದರು.
ವಾರಸುದಾರಿಕೆಯನ್ನು ಪ್ರತಿಪಾದಿಸಿ, ಮೊತ್ತವನ್ನು ಪಡೆದುಕೊಳ್ಳಲಿಚ್ಚಿಸುವ ವ್ಯಕ್ತಿಗಳು ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸಿ, ಸೂಕ್ತ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರವನ್ನು ಬಳಿಸಿಕೊಳ್ಳಬಹುದಾಗಿದೆ ಎಂದವರು ನುಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕ ಹನುಮಂತಪ್ಪ, ಸಂಯೋಜಕ ಬಿ.ಹೊನ್ನಪ್ಪ ಸೇರಿದಂತೆ ಲೀಡ್ ಬ್ಯಾಂಗ್ ಹಾಗು ಎಲ್ಲ ಬ್ಯಾಂಕುಗಳ ಪ್ರಬಂಧಕರು ಉಪಸ್ಥಿತರಿದ್ದರು.

CM Siddharamaiah ಕೆಎಸ್ ಡಿ ಎಲ್ ನಿಂದ ₹135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ

0

CM Siddharamaiah ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ ರೂ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು.

ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

ಸಚಿವ ಎಂ.ಬಿ.ಪಾಟೀಲ ಅವರು ಮಾತನಾಡಿ, ಕೆ.ಎಸ್.ಡಿ.ಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ ರೂ 1,700 ಕೋಟಿ ವಹಿವಾಟು ನಡೆಸಿ, ರೂ 451 ಕೋಟಿ ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.

2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ ರೂ 54 ಕೋಟಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ ರೂ 108 ಕೋಟಿ ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ ರೂ 27 ಕೋಟಿ ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.

CM Siddharamaiah ಈ ಸಂದರ್ಭದಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ.ಸುಧಾಕರ, ಸಂತೋಷ ಲಾಡ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.

S. Bangarappa ಈಗ ಸೊರಬದ ” ಬಂಗಾರಧಾಮ” ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣ

0

S. Bangarappa ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್‌.ಬಂಗಾರಪ್ಪ ಹಾಗೂ ಪತ್ನಿ ದಿವಗಂತ ಶಕುಂತಲಾ ಬಂಗಾರಪ್ಪ ಅವರ ಸಮಾಧಿ ಸ್ಥಳ ಬಂಗಾರ ಧಾಮಕ್ಕೆ ಈಗ ಪ್ರವಾಸಿ ತಾಣದ ಆಕರ್ಷಣೆ.

ಪ್ರವಾಸಿ ತಾಣವಾಗಿ ರಾಜ್ಯ ಸರ್ಕಾರವು ಮನ್ನಣೆ ನೀಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಎಸ್. ಬಂಗಾರಪ್ಪ ಸ್ವಂತ ಖರ್ಚಿನಲ್ಲಿ ಬಂಗಾರ ಧಾಮ
ನಿರ್ಮಾಣ ಮಾಡಿದ್ದಾರೆ.

ಎಸ್. ಬಂಗಾರಪ್ಪ ಫೌಂಡೇಷನ್ ನಿರ್ವಹಿಸುತ್ತಿರುವ ಬಂಗಾರಧಾಮವು
ಕುಂವೆಂಪು ಅವರ ಸಮಾಧಿಯಂತೆ ಇಲ್ಲೂ ಪ್ರವಾಸೋದ್ಯಮ ಮೌಲ್ಯ ಹೆಚ್ಚಿಸುವ ಚಿಂತನೆ ನಡೆದಿದೆ. ಇದೇ ತಿಂಗಳ 26ರಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಜನ್ಮದಿನ ಆಚರಿಸಲಾಗುತ್ತಿದೆ. ದಿ ಎಸ್‌.ಬಂಗಾರಪ್ಪ ಅವರ ಚಿಂತನೆ, ಅಭಿರುಚಿಗೆ ಪೂರಕವಾಗಿ ಒಂದು ಕಾಲು ಎಕರೆ ಪ್ರದೇಶದಲ್ಲಿ ಬಂಗಾಧಾಮ ನಿರ್ಮಾಣವಾಗಿದೆ.

ಗ್ರಾನೈಟ್ ಮತ್ತು ಮಾರ್ಬಲ್ ಕೆತ್ತನೆಯ ಕಲಾಕೃತಿಗಳು ಅದರ ಸೌಂದರ್ಯ ಹೆಚ್ಚಿಸಿವೆ.
ಧ್ಯಾನಮಂದಿರ, ಕುಡಿಯುವ ನೀರು, ಶೌಚಾಲಯ, ವಾಕಿಂಗ್ ಪಾಥ್, ಹೂವಿನ ತೋಟ, ಅಲಂಕಾರಿಕ ಗಿಡಗಳು ಸೇರಿದಂತೆ ಅಗತ್ಯ ಸೌಲಭ್ಯಗಳು ಲಭ್ಯವಿದೆ.
1,500 ಮಂದಿಗೆ ಆಸನ ವ್ಯವಸ್ಥೆಯೊಂದಿಗೆ ಆಧುನಿಕ ಬಯಲು ರಂಗಮಂದಿರ ನಿರ್ಮಾಣಗೊಂಡಿದೆ. ಸಾಂಸ್ಕೃತಿಕ ಹಾಗೂ ಸಂಗೀತ ಕಾರ್ಯಕ್ರಮಗಳಿಗೆ ಅನುಕೂಲವಾಗಿದೆ.
ಹೆಲಿಫ್ಯಾನ್ ಅಳವಡಿಕೆ ಮಾಡಲಾಗಿದೆ. ಸಂಪಿಗೆ ಮರ, ಕಲ್ಪವೃಕ್ಷ, ಈಚಲು ಮರಗಳನ್ನು ಒಳಗೊಂಡ ಸಸ್ಯ ಸಂಪತ್ತು ಇಲ್ಲಿ ಬೆಲಕೆಸಲಾಗಿದೆ.

S. Bangarappa 56 ಅಡಿ ಎತ್ತರದ ಕ್ಲಾಕ್ ಟವರ್, ವಿದ್ಯುತ್‌ ದೀಪಾಲಂಕಾರ ಹಾಗೂ ಹಿನ್ನೆಲೆಯಲ್ಲಿ ಸುಮಧುರ ಸಂಗೀತ ಬಂಗಾರ ಧಾಮದ ವೈಶಿಷ್ಟ್ಯವಾಗಿದೆ. ಶಿವಮೊಗ್ಗ ಜಿಲ್ಲೆಯ ಕಣ್ಮಣಿ ಹಾಗೂ ದುರ್ಬಲ ವರ್ಗದವರ ಪ್ರತಿನಿಧಿ , ಸಾರೆಕೊಪ್ಪ ಬಂಗಾರಪ್ಪ ಅವರ ಹೆಸರು ಚಿರಸ್ಥಾಯಿಯಾಗಿಸಲು
ಪುತ್ರ ,ಸಚಿವ ಮಧು ಬಂಗಾರಪ್ಪ ಅವರ ಶ್ರಮ ಸಾರ್ಥಕವಾಗಿದೆ.

Sri Adichunchanagiri Mutt ಶ್ರೀಆದಿಚುಂಚನಗಿರಿ ಶಾಖಾಮಠದ ವಾರ್ಷಿಕೋತ್ಸವ: ವಿಶೇಷ ಪುರಂದರ ಕೀರ್ತನೋತ್ಸವ ಆಯೋಜನೆ

0

Sri Adichunchanagiri Mutt ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾ ಮಠದ 35 ನೇ ವಾರ್ಷಿಕೋತ್ಸವ ಸಮಾರಂಭವನ್ನು ಅತ್ಯಂತ ವಿಭಿನ್ನ,ವಿಶೇಷವಾಗಿ ಆಚರಿಸಲು ಶ್ರೀ ಆದಿಚುಂಚನಗಿರಿ ಮಠ ತೀರ್ಮಾನಿಸಿದೆ.
ಇದೇ ಮೊದಲ ಬಾರಿಗೆ ದಾಸವರೇಣ್ಯ ಪುರಂದದಾಸರ ಕೀರ್ತನೋತ್ಸವ ಸಮಾರಂಭವನ್ನು ಮಾಜಿ ಸಚಿವ ಆರಗಜ್ಞಾನೇಂದ್ರ ಅವರ ಹುಟ್ಟೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಶಿವಮೊಗ್ಗದ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ 4 ಮತ್ತು 5 ರಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ನವಂಬರ್ 4 ರಂದು ಬೆಳಗ್ಗೆ 10ರಿಂದ ತೀರ್ಥಹಳ್ಳಿ ತಾಲ್ಲೂಕಿನ ಆರಗದಲ್ಲಿರುವ ಸಹಕಾರ ಸಂಘ ಸಭಾ ಭವನದಲ್ಲಿ ದಾಸವರೇಣ್ಯ ಪುರಂದರದಾಸರ ಕೀರ್ತನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿವ್ಯ ಸಾನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಜರುಗಲಿದ್ದು, ಕಾರ್ಯಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನ.5ರ ಬೆಳಗ್ಗೆ 10 ಗಂಟೆಗೆ ಶ್ರೀ ಮಠದ 35 ನೇ ವಾರ್ಷಿಕೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಕೃಷಿ ವಿಜ್ಞಾನ ಕ್ಷೇತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ನಮ್ಮ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಗೆ ಪೂಜ್ಯರಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯುವುದು.
ನವೆಂಬರ್ 5ರಂದು ಬೆಳಿಗ್ಗೆ 7 ಗಂಟೆಗೆ ಶರಾವತಿ ನಗರದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಪೂಜ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಹೋಮ – ಹವನ ಮತ್ತು ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಶ್ರೀ ಮಠದ ಶಾಖೆಯ ಶ್ರೀಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು,
ಕಾರ್ಯಕ್ರಮಕ್ಕೆ ಸರ್ವರನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾಮಠ ಸ್ವಾಗತಿಸಿ, ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಶೇಷ ಕಾರ್ಯಕ್ರಮ:
Sri Adichunchanagiri Mutt ತೀರ್ಥಹಳ್ಳಿ ತಾಲೂಕಿನ ಆರಗದಲ್ಲಿ ನ. 4ರಂದು ನಡೆಯಲಿರುವ ವಿಶೇಷ, ವಿಭಿನ್ನವಾದ ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವ ಸಮಾರಂಭದಲ್ಲಿ ನಾಡಿನ ಖ್ಯಾತ ಗಾಯಕರು ಆಗಮಿಸಿ ವಿವಿಧ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಮೊದಲ ಅವಧಿಯಲ್ಲಿ: ವಿದ್ವಾನ್ ಪಣೀಂದ್ರ ಬೆಂಗಳೂರು ಮತ್ತು ಸಂಗಡಿಗರಿಂದ ಹಾಡುಗಾರಿಕೆಯನ್ನು ನಡೆಸಿಕೊಡಲಿದ್ದಾರೆ.
2ನೇ ಅವಧಿ : ವಿದ್ವಾನ್ ಹೊಸಳ್ಳಿ.ಕೆ.ವೆಂಕಟರಾಂ,ವಿದ್ವಾನ್ ಹೊಸಳ್ಳಿ ಕೆ. ಸುಬ್ಬರಾವ್, ವಿದ್ವಾನ್ ಹೊಸಳ್ಳಿ ವಿ.ರಘುರಾಂ ಮತ್ತು ಸಂಗಡಿಗರಿಂದ ಪಿಟೀಲು ವಾದನ ನಡೆಸಿಕೊಡುವರು.
3ನೇ ಅವಧಿ: ವಿದ್ವಾನ್ ಶೃಂಗೇರಿ ನಾಗರಾಜ್ ರವರ ಶಿಷ್ಯ ವೃಂದದವರಿಂದ ಮತ್ತು ಆರಗ ಗ್ರಾಮದ ಭಜನಾ ಮಂಡಳಿಯವರಿಂದ ಹಾಡುಗಾರಿಕೆ.
4ನೇ ಅವಧಿ : ವಿದ್ವಾನ್ ಹುಮಾಯುನ್ ಹರ್ಲಾಪುರ್, ವಿದ್ವಾನ್ ನವಶಾದ್ ಹರ್ಲಾಪುರ್, ವಿದ್ವಾನ್ ನಿಶಾದ್ ಹರ್ಲಾಪುರ್ ಮತ್ತು ಸಂಗಡಿಗರಿಂದ ಹಿಂದೂಸ್ತಾನಿ ಗಾಯನ.
5ನೇ ಅವಧಿ : ರಾಷ್ಟ್ರಪತಿ ಪ್ರಶಸ್ತಿ ವಿಜೇತ ವಿದ್ವಾನ್ ಮಾರುತಿ ಪ್ರಸಾದ್ ಬೆಂಗಳೂರು ಮತ್ತು ಸಂಗಡಿಗರಿಂದ ಹಾಡುಗಾರಿಕೆ.
6ನೇ ಅವಧಿ: ಪೂಜ್ಯ ಶ್ರೀ ಶ್ರೀ ಸಾಯಿ ಕೀರ್ತಿನಾಥ ಸ್ವಾಮೀಜಿ ಹಾಗೂ ವಿದ್ವಾನ್ ಮಾರುತಿ ಪ್ರಸಾದ್ ಅವರಿಂದ ಹಾರ್ಮೋನಿಯಂ, ಕೀಬೋರ್ಡ್,ಜುಗಲ್ ಬಂದಿ ಕಾರ್ಯಕ್ರಮ ನಡೆಯುವುದು.
ಖ್ಯಾತ ಸಂಗೀತಗಾರರಿಂದ ಸಾಮೂಹಿಕ ಗಾಯನ ಹಾಗೂ ಸತ್ಸಂಗ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರು, ಶ್ರೀಮಠದ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕಾಗಿ ಕಾರ್ಯಕ್ರಮದ ಆಯೋಜಕರು ಕೋರಿದ್ದಾರೆ.

ಪಂ.ಗುರುರಾಜಾಚಾರ್ಯರಿಗೆ “ದ್ವೈತದ್ಯುಮಣಿ ವಿಶಾರದ” ಪ್ರಶಸ್ತಿ

0

ಸಮಗ್ರ ದ್ವೈತದ್ಯುಮಣಿ ಪರಿಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪಂ.ಗುರುರಾಜಾಚಾರ್ಯ ಪಗಡಾಲ ಅವರಿಗೆ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು “ದ್ವೈತದ್ಯುಮಣಿ ವಿಶಾರದ” ಎಂಬ ಬಿರುದು ನೀಡಿದರು.
ಜೊತೆಗೆ 5 ಲಕ್ಷ ರೂಪಾಯಿಗಳನ್ನು ಅನುಗ್ರಹ ಪೂರ್ವಕವಾಗಿ ನೀಡಿ ಸಂತೋಷದಿಂದ ಸುವರ್ಣದ ಕಡಗವನ್ನು ತೊಡಿಸಿದರು

CM Siddhramaiah ರಾಜ್ಯ ಉನ್ನತ ಮಟ್ಟದಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ

0

CM Siddhramaiah ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.

CM Siddhramaiah ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಂ.ಬಿ. ಪಾಟೀಲ್,  ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ. ಎಂ.ಸಿ.ಸುಧಾಕರ್, ಸಂತೋಷ್ ಲಾಡ್,
ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹಾಗೂ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

Department of Agriculture ಸಮುದಾಯ ಬೀಜ ಬ್ಯಾಂಕ್ ಸ್ಥಾಪನೆಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನ

0

ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ಹಾಗೂ ನಶಿಸಿಹೋಗುತ್ತಿರುವ ಸ್ಥಳೀಯ ಬೆಳೆಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮೂದಾಯ ಬೀಜ ಬ್ಯಾಂಕ್ ಸ್ಥಾಪಿಸುತ್ತಿದ್ದು, ಆಸಕ್ತಿಯುಳ್ಳ ರೈತರಿಂದ ಅರ್ಜಿ ಆಹ್ವಾನಿಸಿದೆ.

ಆಯಾ ಪ್ರದೇಶದಲ್ಲಿ ಸ್ಥಳೀಯ ಅಥವಾ ಸಾಂಪ್ರದಾಯಕವಾಗಿ ಕೃಷಿ ಪದ್ಧತಿಯಿಂದ ಅಭಿವೃದ್ಧಿ, ಮತ್ತು ನಿರ್ವಹಿಸುವ ತಳಿಗಳನ್ನು ದೇಸಿ ತಳಿಗಳೆಂದು ಕರೆಯಲಾಗುತ್ತದೆ.

ಈ ಕಾರ್ಯಕ್ರಮದಡಿ ಆಯ್ಕೆಯಾದ ಬೆಳೆಗಳೆಂದರೆ ಭತ್ತ, ರಾಗಿ, ಜೋಳ, ತೊಗರಿ, ಹುರುಳಿ, ಅವರೆ, ಅಲಸಂದೆ, ಮಡಕಿಕಾಳು, ಹುಚ್ಚೆಳ್ಳು, ಕುಸುಬೆ, ಎಳ್ಳು, ನವಣೆ, ಸಾಮೆ, ಊದಲು, ಕೊರಲೆ, ಹಾರಕ, ಬರಗು ಮತ್ತು ಸಲಹಾ ಸಮಿತಿ ಶಿಫಾರಸು ಮಾಡಲು ಇತರೆ ಬೆಳೆಗಳಲ್ಲಿ ದೇಸಿ ತಳಿಗಳಿದ್ದರೆ ರೈತರು ಸಮೀಪದ ರೈತ ಸಂಪರ್ಕ ಕೇಂದ್ರದಲ್ಲಿ ನೋಂದಾಯಿಸಿಕೊಳ್ಳುವುದು.
Department of Agriculture ಇತ್ತಿಚೆಗೆ ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಮೂಲ ಸಮೀಕ್ಷೆ ಮೂಲಕ ಗುರುತಿಸಿ ಸಂರಕ್ಷಣೆಯನ್ನು ಮಾಡುವ ಗುರಿಯನ್ನು ಹೊಂದಲಾಗಿದ್ದು, ಯೋಜನೆಯಲ್ಲಿ ದೇಸಿ ತಳಿಗಳ ಸಂರಕ್ಷಣೆ ಮತ್ತು ಕೃಷಿಯಲ್ಲಿ ತೊಡಗಿರುವ ರೈತರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿಗೆ ಇರಬೇಕು. ಬೀಜ ಬ್ಯಾಂಕ್ ನಲ್ಲಿರಿಸಲು ರೈತರು ಕಡ್ಡಾಯವಾಗಿ ಅಗತ್ಯ ಪ್ರಮಾಣದ ದೇಸಿ ತಳಿಗಳ ಬೀಜಗಳನ್ನು ನೀಡಲು ಸಿದ್ಧರಿರಬೇಕು. ಜಾನುವಾರು ನಿರ್ವಹಣೆ, ಕೊಟ್ಟಿಗೆ ಗೊಬ್ಬರ, ಎರೆಹುಳು ಗೊಬ್ಬರ, ಪುನರುತ್ಪಾದಕ ಕೃಷಿ ಮತ್ತು ಇತರೆ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರಬೇಕು.
ಯೋಜನೆಯಡಿ ಆಸಕ್ತಿಯುಳ್ಳ ರೈತರು ನೋಂದಾಯಿಸಿಕೊಳ್ಳಲು ಅವಕಾಶವಿದ್ದು ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.