Saturday, February 14, 2026
Saturday, February 14, 2026
Home Blog Page 125

Department of Industry and Commerce ಅ.28. ಎಂಎಸ್ಎಂಇ ಗಳ ರಫ್ತು ಉತ್ತೇಜನ & ಸುಗಮಗೊಳಿಸುವಿಕೆ ಜಾಗೃತಿ‌‌ ಕಾರ್ಯಾಗಾರ

0

Department of Industry and Commerce ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು., ಬೆಂಗಳೂರು ಹಾಗೂ ಮಾಚೇನಹಳ್ಳಿ ಕೈಗಾರಿಕೆಗಳ ಸಂಘ ಇವರುಗಳ ಸಹಯೋಗದಲ್ಲಿ ಅ.28 ರಂದು ಬೆಳಗ್ಗೆ 1.30ಕ್ಕೆ ಶಿವಮೊಗ್ಗದ ಮಾಚೇನಹಳ್ಳಿಯ ಶಾಂತಲಾ ಸ್ಪೆರೋಕ್ಯಾಸ್ಟ್ ಲರ್ನಿಂಗ್ ಸೆಂಟರ್‌ನಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ ರಫ್ತು ಉತ್ತೇಜನ ಮತ್ತು ಸುಗಮಗೊಳಿಸುವಿಕೆಗಾಗಿ ಒಂದು ದಿನದ ಜಾಗೃತಿ ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್. ಉದ್ಘಾಟಿಸಲಿದ್ದಾರೆ.

Department of Industry and Commerce ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಡಿ.ಜಿ.ಬೆನಕಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಹಾಗೂ ವಿ.ಟಿ.ಪಿ.ಸಿ., ಬೆಂಗಳೂರು ಜಂಟಿ ನಿರ್ದೇಶಕ ಬಾಬು ಜಗದೀಶ್ ಸಿ.ಎಸ್., ಲೀಡ್ ಬ್ಯಾಂಕ್ ಅಧಿಕಾಋಇ ಹೊನ್ನಪ್ಪ ಬಿ. ಇವರುಗಳು ಉಪಸ್ಥಿತರಿರಲಿದ್ದಾರೆ.

Atma Yojana ಜಿಲ್ಲಾಮಟ್ಟದ “ಆತ್ಮ” ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

0

Atma Yojana 2025-26 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

Atma Yojana ನಿಗದಿತ ನಮೂನೆ ಅರ್ಜಿಯನ್ನು ನ.3 ರ ಸಂಜೆ 5.30 ರೊಳಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಕರ್ಪ ಕೇಂದ್ರದ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

MESCOM ಅಕ್ಟೋಬರ್ 24. ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ನಿರ್ವಹಣೆ: ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

0

MESCOM ಮೆಸ್ಕಾಂ ಮಾಹಿತಿ ತಂತ್ರಜ್ಞಾನ(ಐಟಿ) ವ್ಯವಸ್ಥೆಯ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿದ್ದು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು ನಗರ ಪ್ರದೇಶಗಳಲ್ಲಿ ಮೆಸ್ಕಾಂ ಆನ್ ಲೈನ್ ಸೇವೆಗಳಾದ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸಸಂಪರ್ಕ ಇತ್ಯಾದಿ ಸೇವೆಗಳು ಅ.24 ರಾತ್ರಿ 08.00 ಗಂಟೆಯಿಂದ ಅ.25 ರ ಮಧ್ಯಾಹ್ನ 01.00 ಗಂಟೆಯವರೆಗೆ ಲಭ್ಯವಿರುವುದಿಲ್ಲ.

MESCOM ನಗರ ಪ್ರದೇಶದ ಗ್ರಾಹಕರು ಬಿಲ್ ಪಾವತಿಗಾಗಿ ಹೆಚ್ಚಾಗಿ ಬಳಸುವ ಮೆಸ್ಕಾಂನ ಜಾಲತಾಣ (www.mescom.org.in) ಮೆಸ್ಕಾಂನ ಮೊಬೈಲ್ ಆಪ್ (ನನ್ನಮೆಸ್ಕಾಂ), ಕರ್ನಾಟಕ ಒನ್ ಕೌಂಟರ್‌ಗಳು, ಅಂಚೆ ಕಛೇರಿಯ ಕೌಂಟರ್‌ಗಳು ಹಾಗೂ ಇತರೆ ಬಿ,ಬಿ.ಪಿ.ಎಸ್.ನ ಚಾನಲ್‌ಗಳಲ್ಲಿ ಮೇಲೆ ತಿಳಿಸಿದ ಸಮಯದಲ್ಲಿ, ನಗರಪ್ರದೇಶದ ಗ್ರಾಹಕರಿಗೆ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ, ಅಡಚಣೆಗಾಗಿ ವಿಷಾದಿಸುತ್ತಾ ಗ್ರಾಹಕರು ಸಹಕಾರ ನೀಡಬೇಕೆಂದು ಮೆಸ್ಕಾಂ ತಿಳಿಸಿದೆ.

Ishwara Khandre ಸಕ್ರೆಬೈಲು ಆನೆಗಳಿಗೆ ಗಾಯ ಪ್ರಕರಣ. ಸಮಗ್ರ ವರದಿಗೆ ಸಚಿವ ಈಶ್ವರ ಖಂಡ್ರೆ ಆದೇಶ

0

Ishwara Khandre ಸಕ್ರೆಬೈಲು ಆನೆ ಬಿಡಾರದಲ್ಲಿ ನಾಲ್ಕು ಆನೆಗಳು ಗಾಯ ಗೊಂಡು ಗಂಭೀರ ಸ್ಥಿತಿಯಲ್ಲಿ ರುವ ವಿಷಯಕ್ಕೆ ಕಾರಣ ಕೇಳಿ ಒಂದು ವಾರದೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಮುಖೇನ ಸೂಚನೆ ನೀಡಿದ್ದಾರೆ.

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಬಾಲಣ್ಣ ವಿಕ್ರಾಂತ್, ಅಡ್ಕಬಡ್ಕ ಮತ್ತು ಸಾಗರ ಆನೆಗಳು ಗಾಯಗೊಂಡು ಬಳಲುತ್ತಿವೆ. ಬಿಡಾರದಲ್ಲಿ ಪಶುವೈದ್ಯರ ಕೊರತೆ ಇರುವ ಬಗ್ಗೆ ವರದಿಯಾಗಿದೆ. ಇದನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಇದರ ಬಗ್ಗೆ ತುರ್ತು ಕ್ರಮ ವಹಿಸಬೇಕು. ಬಾಲಣ್ಣ ಆನೆಗೆ ಚುಚ್ಚುಮದ್ದು ನೀಡುವ ವೇಳೆ ವೈದ್ಯಾಧಿ ಕಾರಿ, ಅಧಿಕಾರಿ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲ್ಲಿ ಅವರ ವಿರುದ್ಧ ಶಿಸ್ತುಕ್ರಮದ ಶಿಫಾರಸ್ಸಿನೊಂದಿಗೆ 1ವಾರದೊಳಗೆ ಸಮಗ್ರ ವರದಿಯನ್ನು ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕೆಂದು ಸಚಿವರು ಪತ್ರದಲ್ಲಿ ಸೂಚನೆ ನೀಡಿದ್ದಾರೆ.

Ishwara Khandre ರಾಜ್ಯದಲ್ಲಿರುವ ಎಲ್ಲ ಆನೆ ಬಿಡಾರಗಳು ಮತ್ತು ಮೃಗಾಲಯಗಳಲ್ಲಿ ಸಮರ್ಪಿತ ವೈದ್ಯಾಧಿಕಾರಿ ಇರಲೇಬೇಕು.
ವೈದ್ಯರ ಕೊರತೆ ಇದ್ದಲ್ಲಿ ಗುತ್ತಿಗೆ ಆಧಾರ ಅಥವಾ ನಿಯೋಜನೆ ಮೇಲೆ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು
ಎಂದು ಹಿಂದೆ ಹಲವು ಸಭೆಗಳಲ್ಲಿ ಅಧಿ ಕಾರಿಗಳಿಗೆ ತಿಳಿಸಲಾಗಿದೆ.

Kittur Chennamma ಕಿತ್ತೂರು ಚೆನ್ನಮ್ಮನವರ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಕರ್ನಾಟಕ ಸರ್ಕಾರ ಮಾಡಬೇಕಿದೆ- ಸಚಿವ ವಿ.ಸೋಮಣ್ಣ

0

Kittur Chennamma ನವದೆಹಲಿಯ ಸಂಸತ್ ಆವರಣದ ಪ್ರೇರಣಾ ಸ್ಥಳದಲ್ಲಿ ತುಮಕೂರು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆಯ ಸಚಿವ ವಿ. ಸೋಮಣ್ಣನವರ ನೇತೃತ್ವದಲ್ಲಿ ಕನ್ನಡನಾಡಿನ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ. ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ಮದಿನೋತ್ಸವವನ್ನು ವಿಜ್ರಂಭಣೆಯಿಂದ ಆಚರಿಸಲಾಗಿತ್ತು.

ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ವಿ. ಸೊಮಣ್ಣ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಪೂರಕವಾಗಿ 2025. ನೇ ಅಕ್ಟೋಬರ್ 24 ರಂದು ದೆಹಲಿಯ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸ್ವಾತಂತ್ರ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳಿಗೆ ಪತ್ರ ಬರೆದು ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ದಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಕೇಂದ್ರ ಸಚಿವ ವಿ. ಸೋಮಣ್ಣ ಮನವಿ ಮಾಡಿದ್ದಾರೆ.

Kittur Chennamma ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯರಾದ ಶ್ರೀಮತಿ ಸುಧಾಮೂರ್ತಿಯವರು, ಶ್ರೀ ಶ್ರೀ ಜಯಮೃತ್ಯುಂಜಯ ಸ್ವಾಮಿಗಳು, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷರು, ದೆಹಲಿ ಕನ್ನಡಿಗರು, ದೆಹಲಿಯಲ್ಲಿನ ಕನ್ನಡ ಮಾಧ್ಯವ ಮಿತ್ರರುಗಳು ಭಾಗಿಯಾಗಿ ರಾಣಿ ಚೆನ್ನಮ್ಮನವರ ವಿಜಯೋತ್ಸವದ ಮತ್ತು ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿದ ಲೋಕಸಭಾ ಸಚಿವಾಲಯ ಮತ್ತು ರೇಲ್ವೆ ಸಚಿವಾಲಯದ ಅಧಿಕಾರಿಗಳಿಗೆ ಮತ್ತು ಈ ಕಾರ್ಯಕ್ರಮದಲ್ಲಿ ಭಾಗಿಯಾದ ಎಲ್ಲಾ ದೆಹಲಿ ಕನ್ನಡಿಗರಿಗೆ ಅಭಿನಂದನೆಯನ್ನು ತಿಳಿಸಿದರು.

Department of Kannada and Culture ಚೆನ್ನಮ್ಮನವರು ಜನಸಾಮಾನ್ಯರನ್ನ ಒಗ್ಗೂಡಿಸಿ ದೇಶದ ಒಳಿತಿಗೆ, ಸ್ವತಂತ್ರ ಹೋರಾಟ ಮಾಡಿದವರು- ಎಸ್.ಎನ್.ಚನ್ನಬಸಪ್ಪ

0

Department of Kannada and Culture ಜಾತಿ ಮೀರಿ ಬದುಕಿದ್ದ ಕಿತ್ತೂರು ರಾಣಿ ಚೆನ್ನಮ್ಮ ತನ್ನ ಸಾಮ್ರಾಜ್ಯದಲ್ಲಿ ಜನಸಾಮಾನ್ಯರನ್ನು ಒಗ್ಗೂಡಿಸಿಕೊಂಡು ಈ ದೇಶದ ಒಳಿತಿಗಾಗಿ ಸ್ವತಂತ್ರ ಹೋರಾಟ ಮಾಡಿದರು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ ಹೋರಾಟವನ್ನು ನೆನಪು ಮಾಡುವ ದಿಸೆಯಲ್ಲಿ, ನಮ್ಮೆಲ್ಲರ ಮುಂದಿನ ಜೀವನ ಹೇಗೆಲ್ಲಾ ಆದರ್ಶಪ್ರಾಯವಾಗಿರಬೇಕೆಂಬ ಉದ್ದೇಶದಲ್ಲಿ ರಾಜ್ಯ ಸರ್ಕಾರ ಇಂತಹ ಮಹನೀಯರ ಜಯಂತಿಯನ್ನು ಮಾಡುತ್ತಿದ್ದು, ನಾವೆಲ್ಲರೂ ಅವರ ಜೀವನಾನುಕ್ರಮವನ್ನು ಅರಿತುಕೊಳ್ಳಬೇಕಿದೆ ಎಂದರು.
ಸ್ವಾತಂತ್ರ ಹೋರಾಟದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಕೊಡುಗೆ ಅಪಾರ. ಬ್ರಿಟಿಷರು ಹಾಗೂ ಮೊಘಲರ ವಿರುದ್ದ ಹೋರಾಡಿದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಸದಾ ಸಮಾಜಕ್ಕೆ ಒಳಿತಾಗಬೇಕೆಂದು ಯೋಚಿಸುತ್ತಿದ್ದರು. ಜಾತಿ ಭೇದದ ಅಂಕೆ ಇಲ್ಲದೆ ಎಲ್ಲರನ್ನೂ ದೇಶದ ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಇವರು ಸಮಗ್ರವಾಗಿ ಯೋಚಿಸಿ ರಾಜ್ಯಭಾರ ಮಾಡಿದರು ಎಂದರು.
ಕಿತ್ತೂರು ರಾಣಿಯ ಚೆನ್ನಮ್ಮನ ಆದರ್ಶವನ್ನು ಇಂದಿನ ಯುವ ಪಿಳಿಗೆಗಳಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಇದರಿಂದ ಅವರ ಹೋರಾಟದ ಬದುಕು, ಜೀವನಶೈಲಿಯನ್ನು ಅರಿತುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪಗೊಳ್ಳಲು ಸಾಧ್ಯವಾಗುತ್ತದೆ ಎಂದರು.
Department of Kannada and Culture ಕನ್ನಡ ಉಪನ್ಯಾಸಕ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಜಿಲ್ಲಾ ಸಂಚಾಲಕರಾದ ಡಾ.ಗಣೇಶ ಆರ್. ಕೆಂಚನಾಲ್ ವಿಶೇಷ ಉಪನ್ಯಾಸ ನೀಡಿ, 1778 ಅ.23 ರಂದು ಬೆಳಗಾವಿಯ ಕಾಕತೀಯ ಹಳ್ಳಿಯಲ್ಲಿ ಜನಿಸಿದ ಚೆನ್ನಮ್ಮ, ಆರಂಭದಲ್ಲೆ ಕತ್ತಿವರೆಸಿ ಸೇರಿದಂತೆ ಅನೇಕ ಯುದ್ದೋಪಾಯವನ್ನು ಕಲಿತಳು. ತನ್ನ 15 ನೇ ವಯಸ್ಸಿನಲ್ಲಿ ಮಲ್ಲಸರ್ಜನನ 2 ನೇ ಮಡದಿಯಾಗಿ ವಿವಾಹವಾದರು. ನಂತರ ರಾಜ್ಯದ ಜವಾಬ್ದಾರಿಯನ್ನು ಹೊತ್ತ ಚೆನ್ನಮ್ಮ 1824 ರಲ್ಲಿ ದತ್ತುಪುತ್ರನನ್ನು ಸ್ವೀಕಾರ ಮಾಡುವ ಮೂಲಕ ಬ್ರಿಟಿಷರ ನಿಯಮವನ್ನು ಮುರಿದಳು. ಇದರಿಂದ ಕೋಪಗೊಂಡ ಬ್ರಿಟಿಷ್ ಅಧಿಕಾರಿ ತಾಕ್ರೆ ಕಿತ್ತೂರಿನ ಮೇಲೆ ಯುದ್ದ ಸಾರಿದ, ಚೆನ್ನಮ್ಮ ತಾಕ್ರೆ ಸೈನ್ಯವನ್ನು ಯುದ್ದದಲ್ಲಿ ಸೋಲಿಸಿದಳು. ಆ ಮೂಲಕ ದೇಶದಲ್ಲಿ ಬ್ರಿಟಿಷರನ್ನು ಪ್ರಥಮ ಬಾರಿಗೆ ಸಂಪೂರ್ಣವಾಗಿ ಸೋಲಿಸಿ ಕೀರ್ತಿ ಕಿತ್ತೂರು ರಾಣಿ ಚೆನ್ನಮ್ಮರವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ರಾಣಿ ಚೆನ್ನಮ್ಮ ಸದಾ ದೇಶ ಸೇವೆಗಾಗಿ ಹಾತೊರಿಯುತ್ತಿದ್ದಳು. ಮೊಘಲರು, ಬ್ರಿಟಿಷರ ವಿರುದ್ದ ದಿಟ್ಟವಾಗಿ ಹೋರಾಡಿದ್ದಳು. ದೇಶ, ರಾಜ್ಯ ಬಂದಾಗ ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ತಿಳಿಸಿದ್ದ ಅವರು ರಾಜ್ಯಭಾರ ಒಂದು ಕುಟುಂಬಕ್ಕೆ ಮಾತ್ರ ಸಿಮೀತವಾಗಬಾರದು, ಅದು ಜನಸಾಮಾನ್ಯರಿಗೂ ತಲುಪಬೇಕೆಂದ ಆಶಯವನ್ನು ಹೊಂದಿದ್ದಳು ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಮಹೇಶ್ವರಪ್ಪ, ಸಂಘಟನೆಯ ಕಾರ್ಯದರ್ಶಿ ಎಂ.ಸಿದ್ದೇಶ್ ಬೇಗೂರು, ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಪ್ಪ ಮೇಡ್ಲೀರಿ, ಶಿವಮೊಗ್ಗ ನಗರದ ಅಧ್ಯಕ್ಷ ಟಿ.ಎಂ.ಕುಮಾರ್, ಪೊಲೀಸ್ ಹೆಚ್ಚುವರಿ ಅಧೀಕ್ಷಕರಾದ ರಮೇಶ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ಉಮೇಶ್ ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

Donald Trump ಅಮೆರಿಕ ಎಚ್1 ಬಿ ವೀಸಾ ವಿವಾದ, ಕೊಂಚ ವಿನಾಯಿತಿ ನೀಡಿದ ಟ್ರಂಪ್ ಕಾನೂನು

0

Donald Trump ಅಮೆರಿಕ ಅದ್ಯಕ್ಷ ಡೊನಾಲ್ಡ್ ಟ್ರಂಪ್ ಒಂದಲ್ಲ ಒಂದು ಸುದ್ದಿಯಿಂದ ಮಾಧ್ಯಮದಲ್ಲಿ ಬಿರುಗಾಳಿ ಎನ್ ಬಳಸುತ್ತಿದ್ದಾರೆ.
ಭಾರತದ ಮೇಲೆ ಸುಂಕಾಸ್ತ್ರ ಪ್ರಯೋಗಮಾಡಿ ಮಹತ್ವವಾದದ್ದನ್ನ ಸಾಧಿಸುವಂತೆ ಮಾತಾಡುತ್ತಿರುತ್ತಾರೆ.
ಈಗ ಎಚ್-1 ಬಿ ವೀಸಾ ಬಗ್ಗೆ ಒಂದುಲಕ್ಷಡಾಲರ್ ಸದುಲ್ಕ ವಿಧಿಸಿ ಬರೆ ಎಳೆದಿದ್ದರು. ಆದರೆ ಅಮೆರಿಕಾದ ಒಳಗಿನ ಉದ್ಯಮಿಗಳೇ ಅದನ್ನ ವಿರೋಧಿಸಿದ್ದರು.
ಈಗ ಮತ್ತೊಂದು ಸುದ್ದಿ ಬಾಣ ಬಂದಿದೆ.
ಚಾಲ್ತಿಯಲ್ಲಿರುವ ಎಚ್-1 ವೀಸಾಗಳಿಗೆ ಹೆಚ್ಚುವರಿ ಶುಲ್ಕವಿಲ್ಲ.
ಮೊದಲಿನ ಕ್ರಮದಿಂದ ಭಾರತೀಯ ಟೆಕ್ಕಿಗಳು, ಅಮೆರಿಕಾದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಿಸಿತುಪ್ಪವಾಗಿತ್ತು .
ಈಗ ಈ ಸುದ್ದಿಯಿಂದ
ನಿರಾಳತೆ ಬಂದಿದೆ. ಆದರೆ ಈ ಕಾನೂನು ‌ಹೊಸದಾಗಿ ಸೆ.21 ರ‌ ನಂತರ ವಿಸಾಗೆ ಅರ್ಜಿ ಸಲ್ಲಿಸುವವರಿಗೆ ಅನ್ವಯವಾಗುತ್ತದೆ.

Shivamogga Jail ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ, ಎಫ್ ಐ ಆರ್ ದಾಖಲು

0

Shivamogga Jail ಶಿವಮೊಗ್ಗ ಜೈಲಿನಲ್ಲಿ ವಿಚಾರಣ ಬಂದಿ ಕೈದಿಯಿಂದ ಶಿಕ್ಷಾ ಬಂದಿಗೆ ಹಲ್ಲೆ ನಡೆದಿದ್ದು ವಿಚಾರಣಾ ಬಂದಿ ಬಳಿ ನಿಷೇಧಿತಾ ವಸ್ತುಗಳಾದ ಬ್ಲೇಡ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ವಿಚಾರಣಾ ಬಂದಿ ಎಂದರೆ ನ್ಯಾಯಾಲಯದಲ್ಲಿ ಇವರ ಪ್ರಕರಣ ವಿಚಾರಣ ಹಂತದಲ್ಲಿದ್ದು, ಇವರಿನ್ನೂ ಆರೋಪಿಗಳಾಗಿರುತ್ತಾರೆ. ಶಿಕ್ಷಾ ಬಂಧಿ ಎಂದರೆ ನ್ಯಾಯಾಲಯ ಇವರನ್ನ ಶಿಕ್ಷೆಗೆ ಒಳಪಡಿಸಿರುವುದರಿಂದ ಇವರನ್ನ ಶಿಕ್ಷಾ ಬಂದಿ ಅಥವಾ ಸಜಾಬಂದಿ ಎಂದು ಗುರುತಿಸಲಾಗಿರುತ್ತದೆ.

ಕುಮಧ್ವತಿ ವಾರ್ಡ್ ನ 20,21 ಹಾಗೂ 35 ನೇ ಕೊಠಡಿಯಲ್ಲಿದ್ದ ವಿಚಾರಣಾ ಬಂದಿ ನಿರಂಜನ್ ನಾಯ್ಕ್ ಯಾನೆ ನಿರಂಜನ್, ರುದ್ರೇಶ್ ನಾಯ್ಕ್ ಹಾಗೂ ರಾಜೇಶ್ ಎಂಬವರು ಅ.19 ರಂದು ಶನಿವಾರ ಮಧ್ಯಾಹ್ನದ ಊಟ ಬಡಿಸುವಾಗ ಭದ್ರಾ ವಿಭಾಗದ ಕೊಠಡಿ ಸಂಖ್ಯೆ 28 ರಲ್ಲಿದ್ದ ಶಿಕ್ಷಾ ಬಂಧಿ ಮಾರಪ್ಪ ಎಂಬುವನ ಮೇಲೆ ದಾಳಿ ನಡೆಸಿ ಹರಿತವಾದ ಆಯುಧದಿಂದ ಎಡಗಣ್ಣಿನ ಮೇಲೆ ದಾಳಿ ನಡೆಸಿದ್ದಾರೆ. Shivamogga Jail ಮಾರಪ್ಪನಿಗೆ ಜೈಲಿನಲ್ಲೇ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಆರೋಪಿಗಳಾದ ಮೂವರನ್ನ ತಪಾಸಣೆಗೊಳಪಡಿದಿದಾಗ ನಿರಂಜನ ನಾಯ್ಕನ ಬಳಿ ಬ್ಲೇಡ್ ಪತ್ತೆಯಾಗಿದೆ. ಜೈಲಿನಲ್ಲಿ ಈ ವಸ್ತುಗಳು ನಿಷೇಧವಾದುದರಿಂದ ಆತನ ಮೇಲೆ ಜೈಲ್ ಸೂಪರಿಂಟೆಂಡೆಂಟ್ ರಂಗನಾಥ ದೂರು ದಾಖಲಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಶಿಕ್ಷಾ ಬಂದಿ ಮಾರಪ್ಪನ ಮೇಲೆ ಹಲ್ಲೆ ನಡೆಸಿರುವುದಾಗಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

District School Education Department ಶಿವಮೊಗ್ಗ ಜಿಲ್ಲಾ ಪಂಚಾಯತ್ ಶ್ರೀನಜೀರ್ ಸಾಬ್ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆ

0

District School Education Department ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ, ಬೆಂಗಳೂರು ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅ.27 ರಂದು ಮದ್ಯಾಹ್ನ 1.30ಕ್ಕೆ ಜಿಲ್ಲಾ ಪಂಚಾಯತ್ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ 2025-26ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸಂಸದ ರಾಘವೇಂದ್ರ ಅವರ ಆರೋಪಕ್ಕೆ ಜಿಲ್ಲಾ ಕಾಂಗ್ರೆಸ್ ತಿರುಗೇಟು

0


ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಮತದಾರರ ಬಲದಿಂದ ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜ್ಯದ ಜನರ ಲೂಟಿ ಮಾಡಿದ ಹಣದಿಂದಲೆ ಅಧಿಕಾರಕ್ಕೆ ಬಂದಿದ್ದು ಎನ್ನುವುದನ್ನು ಸಂಸದ ಬಿ.ವೈ. ರಾಘವೇಂದ್ರ ಮರೆಯಬಾರದೆಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾಂತ್ ಅವರು ತಿರುಗೇಟು ನೀಡಿದ್ದಾರೆ.
ರಾಜ್ಯದ ಕಾಂಗ್ರೇಸ್ ಸರ್ಕಾರ ಭ್ರಷ್ಠಾಚಾರದಲ್ಲಿ ದಾಖಲೆ ಬರೆಯುತ್ತಿದೆ. ಗ್ಯಾರಂಟಿಗಳ ಹೆಸರಿನಲ್ಲಿ ಅಭಿವೃದ್ದಿ ಕಾರ್ಯಗಳು ಸ್ಥಗಿತಗೊಂಡಿವೆ. ಗುತ್ತಿಗೆದಾರರ ಕಾಮಗಾರಿಯ ಸುಮಾರು ೩೩ ಸಾವಿರ ಕೋಟಿ ರೂಪಾಯಿಗಳ ಬಿಲ್ ಬಿಡುಗಡೆ ಮಾಡದೆ ದುರಾಡಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಸರ್ಕಾರಗಳು ಲೂಟಿ ಮಾಡುವುದಕ್ಕೆ ಆಡಳಿತಕ್ಕೆ ಬರುವುದಿಲ್ಲ. ಬದಲಿಗೆ ರಾಜ್ಯದ ಜನರ ತೆರಿಗೆ ಹಣವನ್ನು ಜನರಿಗೆ ಮರಳಿ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತವೆ ಎನ್ನುವುದನ್ನು ಕಾಂಗ್ರೇಸ್ ಸರ್ಕಾರಗಳ ಜನಪರ ಯೋಜನೆಗಳ ನೋಡಿಯಾದರೂ ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿದುಕೊಳ್ಳಲಿ ಎಂದು ವೈ.ಬಿ. ಚಂದ್ರಕಾAತ ಅವರು ಹೇಳಿದ್ದಾರೆ.
ಕಾಂಗ್ರೇಸ್ ಪಕ್ಷದ ನಾಯಕರಿಗೆ ಹೈಕಮಾಂಡ್ ಮೆಚ್ಚಿಸುವ ಯಾವ ಅಗತ್ಯವೂ ಇಲ್ಲ. ಅಂತಹ ಹೈಕಮಾಂಡ್ ನೀತಿಯೇನಾದರು ಇದ್ದಿದ್ದರೆ ಕಾಂಗ್ರೇಸ್ ಪಕ್ಷ 130 ವರ್ಷಗಳಿಂದ ಜನರ ಸೇವೆ ಮಾಡದೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಾಗದೆ ಗಿರಿಕಿ ಹೊಡೆದ ಭಾರತೀಯ ಜನತಾ ಪಕ್ಷದ ದುರ್ಘತಿಯೇ ಆಗುತ್ತಿತ್ತು. ಬಿ.ಜೆ.ಪಿ. ಸರ್ಕಾರಗಳಿಂದ ವ್ಯಾಪಕವಾದ ದುರಾಡಳಿತ ಕೇಳಿ ಬಂದಿದ್ದರಿಂದಲೇ ನತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಮರ್ಜಿಯಲ್ಲಿ ಅಧಿಕಾರ ನಡೆಸಬೇಕಾದ ದುಸ್ತಿತಿಗೆ ಬಿ.ಜೆ.ಪಿ. ಬಂದು ನಿಂತಿದೆ ಎಂದು ವಕ್ತಾರರಾದ ವೈ.ಬಿ. ಚಂದ್ರಕಾಂತ್ ಅವರು ಟೀಕಿಸಿದ್ದಾರೆ.
ಸಾವಿರಾರು ಜನರು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯ ಮೇಲೆ ಕುಳಿತ್ತಿದ್ದಾಗಲೆ ಬಿ.ಜೆ.ಪಿ. ಹೈಕಮಂಡ್‌ಗೆ ೧೮೦೦ ಕೋಟಿ ರೂಪಾಯಿಗಳ ಕಪ್ಪ ಕೊಟ್ಟಿರುವ ಬಗ್ಗೆ ಒಪ್ಪಿಕೊಂಡಾಗಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಬ್ಬ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಅವರ ಸಹಿತ ಇಡೀ ಬಿ.ಜೆ.ಪಿ. ನಾಯಕರು ರಾಜ್ಯದ ಜನರ ಮುಂದೆ ಬೆತ್ತಲಾಗಿದ್ದಾರೆ. ಆದರೂ, ಕಾಂಗ್ರೇಸ್ ಪಕ್ಷದ ನಾಯಕರು ಬಿಹಾರ ಚುನಾವಣೆಗೆ ಹಣ ನೀಡಿದ್ದಾರೆಂದು ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ನಾಚಿಕೆಗೇಡಿನಿಂದ ಕುಡಿದೆ. ಬಿ.ಜೆ.ಪಿ. ನಾಯಕರು ಇಂತಹ ಬಾಲಿಷಾ ಹೇಳಿಕೆಗಳ ನೀಡುವ ಮೂಲಕ ತಮ್ಮ ಪಕ್ಷದ ಮತ್ತು ತಮ್ಮ ಮಾನವನ್ನು ತಾವೇ ಹರಾಜು ಹಾಕಿಕೊಳ್ಳುತ್ತಿದ್ದಾರೆಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾಂತ್ ಅವರು ಲೇವಡಿ ಮಾಡಿದ್ದಾರೆ.