Saturday, February 14, 2026
Saturday, February 14, 2026
Home Blog Page 126

Shivamogga Jail ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ, ಎಫ್ ಐ ಆರ್ ದಾಖಲು

0

Shivamogga Jail ಶಿವಮೊಗ್ಗ ಜೈಲಿನಲ್ಲಿ ವಿಚಾರಣ ಬಂದಿ ಕೈದಿಯಿಂದ ಶಿಕ್ಷಾ ಬಂದಿಗೆ ಹಲ್ಲೆ ನಡೆದಿದ್ದು ವಿಚಾರಣಾ ಬಂದಿ ಬಳಿ ನಿಷೇಧಿತಾ ವಸ್ತುಗಳಾದ ಬ್ಲೇಡ್ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ವಿಚಾರಣಾ ಬಂದಿ ಎಂದರೆ ನ್ಯಾಯಾಲಯದಲ್ಲಿ ಇವರ ಪ್ರಕರಣ ವಿಚಾರಣ ಹಂತದಲ್ಲಿದ್ದು, ಇವರಿನ್ನೂ ಆರೋಪಿಗಳಾಗಿರುತ್ತಾರೆ. ಶಿಕ್ಷಾ ಬಂಧಿ ಎಂದರೆ ನ್ಯಾಯಾಲಯ ಇವರನ್ನ ಶಿಕ್ಷೆಗೆ ಒಳಪಡಿಸಿರುವುದರಿಂದ ಇವರನ್ನ ಶಿಕ್ಷಾ ಬಂದಿ ಅಥವಾ ಸಜಾಬಂದಿ ಎಂದು ಗುರುತಿಸಲಾಗಿರುತ್ತದೆ.

ಕುಮಧ್ವತಿ ವಾರ್ಡ್ ನ 20,21 ಹಾಗೂ 35 ನೇ ಕೊಠಡಿಯಲ್ಲಿದ್ದ ವಿಚಾರಣಾ ಬಂದಿ ನಿರಂಜನ್ ನಾಯ್ಕ್ ಯಾನೆ ನಿರಂಜನ್, ರುದ್ರೇಶ್ ನಾಯ್ಕ್ ಹಾಗೂ ರಾಜೇಶ್ ಎಂಬವರು ಅ.19 ರಂದು ಶನಿವಾರ ಮಧ್ಯಾಹ್ನದ ಊಟ ಬಡಿಸುವಾಗ ಭದ್ರಾ ವಿಭಾಗದ ಕೊಠಡಿ ಸಂಖ್ಯೆ 28 ರಲ್ಲಿದ್ದ ಶಿಕ್ಷಾ ಬಂಧಿ ಮಾರಪ್ಪ ಎಂಬುವನ ಮೇಲೆ ದಾಳಿ ನಡೆಸಿ ಹರಿತವಾದ ಆಯುಧದಿಂದ ಎಡಗಣ್ಣಿನ ಮೇಲೆ ದಾಳಿ ನಡೆಸಿದ್ದಾರೆ. Shivamogga Jail ಮಾರಪ್ಪನಿಗೆ ಜೈಲಿನಲ್ಲೇ ಇರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಆರೋಪಿಗಳಾದ ಮೂವರನ್ನ ತಪಾಸಣೆಗೊಳಪಡಿದಿದಾಗ ನಿರಂಜನ ನಾಯ್ಕನ ಬಳಿ ಬ್ಲೇಡ್ ಪತ್ತೆಯಾಗಿದೆ. ಜೈಲಿನಲ್ಲಿ ಈ ವಸ್ತುಗಳು ನಿಷೇಧವಾದುದರಿಂದ ಆತನ ಮೇಲೆ ಜೈಲ್ ಸೂಪರಿಂಟೆಂಡೆಂಟ್ ರಂಗನಾಥ ದೂರು ದಾಖಲಿಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಶಿಕ್ಷಾ ಬಂದಿ ಮಾರಪ್ಪನ ಮೇಲೆ ಹಲ್ಲೆ ನಡೆಸಿರುವುದಾಗಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

District School Education Department ಶಿವಮೊಗ್ಗ ಜಿಲ್ಲಾ ಪಂಚಾಯತ್ ಶ್ರೀನಜೀರ್ ಸಾಬ್ ಸಭಾಂಗಣದಲ್ಲಿ ಯುವ ಸಂಸತ್ ಸ್ಪರ್ಧೆ

0

District School Education Department ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ, ಬೆಂಗಳೂರು ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಅ.27 ರಂದು ಮದ್ಯಾಹ್ನ 1.30ಕ್ಕೆ ಜಿಲ್ಲಾ ಪಂಚಾಯತ್ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ 2025-26ನೇ ಸಾಲಿನ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸಂಸದ ರಾಘವೇಂದ್ರ ಅವರ ಆರೋಪಕ್ಕೆ ಜಿಲ್ಲಾ ಕಾಂಗ್ರೆಸ್ ತಿರುಗೇಟು

0


ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಮತದಾರರ ಬಲದಿಂದ ಎಂದಿಗೂ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ. ರಾಜ್ಯದ ಜನರ ಲೂಟಿ ಮಾಡಿದ ಹಣದಿಂದಲೆ ಅಧಿಕಾರಕ್ಕೆ ಬಂದಿದ್ದು ಎನ್ನುವುದನ್ನು ಸಂಸದ ಬಿ.ವೈ. ರಾಘವೇಂದ್ರ ಮರೆಯಬಾರದೆಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾಂತ್ ಅವರು ತಿರುಗೇಟು ನೀಡಿದ್ದಾರೆ.
ರಾಜ್ಯದ ಕಾಂಗ್ರೇಸ್ ಸರ್ಕಾರ ಭ್ರಷ್ಠಾಚಾರದಲ್ಲಿ ದಾಖಲೆ ಬರೆಯುತ್ತಿದೆ. ಗ್ಯಾರಂಟಿಗಳ ಹೆಸರಿನಲ್ಲಿ ಅಭಿವೃದ್ದಿ ಕಾರ್ಯಗಳು ಸ್ಥಗಿತಗೊಂಡಿವೆ. ಗುತ್ತಿಗೆದಾರರ ಕಾಮಗಾರಿಯ ಸುಮಾರು ೩೩ ಸಾವಿರ ಕೋಟಿ ರೂಪಾಯಿಗಳ ಬಿಲ್ ಬಿಡುಗಡೆ ಮಾಡದೆ ದುರಾಡಳಿ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೇಸ್ ಪಕ್ಷದ ಸರ್ಕಾರಗಳು ಲೂಟಿ ಮಾಡುವುದಕ್ಕೆ ಆಡಳಿತಕ್ಕೆ ಬರುವುದಿಲ್ಲ. ಬದಲಿಗೆ ರಾಜ್ಯದ ಜನರ ತೆರಿಗೆ ಹಣವನ್ನು ಜನರಿಗೆ ಮರಳಿ ನೀಡುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತವೆ ಎನ್ನುವುದನ್ನು ಕಾಂಗ್ರೇಸ್ ಸರ್ಕಾರಗಳ ಜನಪರ ಯೋಜನೆಗಳ ನೋಡಿಯಾದರೂ ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿದುಕೊಳ್ಳಲಿ ಎಂದು ವೈ.ಬಿ. ಚಂದ್ರಕಾAತ ಅವರು ಹೇಳಿದ್ದಾರೆ.
ಕಾಂಗ್ರೇಸ್ ಪಕ್ಷದ ನಾಯಕರಿಗೆ ಹೈಕಮಾಂಡ್ ಮೆಚ್ಚಿಸುವ ಯಾವ ಅಗತ್ಯವೂ ಇಲ್ಲ. ಅಂತಹ ಹೈಕಮಾಂಡ್ ನೀತಿಯೇನಾದರು ಇದ್ದಿದ್ದರೆ ಕಾಂಗ್ರೇಸ್ ಪಕ್ಷ 130 ವರ್ಷಗಳಿಂದ ಜನರ ಸೇವೆ ಮಾಡದೆ, ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಾಗದೆ ಗಿರಿಕಿ ಹೊಡೆದ ಭಾರತೀಯ ಜನತಾ ಪಕ್ಷದ ದುರ್ಘತಿಯೇ ಆಗುತ್ತಿತ್ತು. ಬಿ.ಜೆ.ಪಿ. ಸರ್ಕಾರಗಳಿಂದ ವ್ಯಾಪಕವಾದ ದುರಾಡಳಿತ ಕೇಳಿ ಬಂದಿದ್ದರಿಂದಲೇ ನತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಮರ್ಜಿಯಲ್ಲಿ ಅಧಿಕಾರ ನಡೆಸಬೇಕಾದ ದುಸ್ತಿತಿಗೆ ಬಿ.ಜೆ.ಪಿ. ಬಂದು ನಿಂತಿದೆ ಎಂದು ವಕ್ತಾರರಾದ ವೈ.ಬಿ. ಚಂದ್ರಕಾಂತ್ ಅವರು ಟೀಕಿಸಿದ್ದಾರೆ.
ಸಾವಿರಾರು ಜನರು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯ ಮೇಲೆ ಕುಳಿತ್ತಿದ್ದಾಗಲೆ ಬಿ.ಜೆ.ಪಿ. ಹೈಕಮಂಡ್‌ಗೆ ೧೮೦೦ ಕೋಟಿ ರೂಪಾಯಿಗಳ ಕಪ್ಪ ಕೊಟ್ಟಿರುವ ಬಗ್ಗೆ ಒಪ್ಪಿಕೊಂಡಾಗಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಬ್ಬ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಅವರ ಸಹಿತ ಇಡೀ ಬಿ.ಜೆ.ಪಿ. ನಾಯಕರು ರಾಜ್ಯದ ಜನರ ಮುಂದೆ ಬೆತ್ತಲಾಗಿದ್ದಾರೆ. ಆದರೂ, ಕಾಂಗ್ರೇಸ್ ಪಕ್ಷದ ನಾಯಕರು ಬಿಹಾರ ಚುನಾವಣೆಗೆ ಹಣ ನೀಡಿದ್ದಾರೆಂದು ಸಂಸದ ಬಿ.ವೈ. ರಾಘವೇಂದ್ರ ನೀಡಿರುವ ಹೇಳಿಕೆ ನಾಚಿಕೆಗೇಡಿನಿಂದ ಕುಡಿದೆ. ಬಿ.ಜೆ.ಪಿ. ನಾಯಕರು ಇಂತಹ ಬಾಲಿಷಾ ಹೇಳಿಕೆಗಳ ನೀಡುವ ಮೂಲಕ ತಮ್ಮ ಪಕ್ಷದ ಮತ್ತು ತಮ್ಮ ಮಾನವನ್ನು ತಾವೇ ಹರಾಜು ಹಾಕಿಕೊಳ್ಳುತ್ತಿದ್ದಾರೆಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾಂತ್ ಅವರು ಲೇವಡಿ ಮಾಡಿದ್ದಾರೆ.

MESCOM ಅ.24, ಶಿವಮೊಗ್ಗ ಮೆಸ್ಕಾಂ ಉಪವಿಭಾಗ – 2. ಕಛೇರಿಯಲ್ಲಿ‌ ಜನ ಸಂಪರ್ಕ ಸಭೆ

0

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಕಛೇರಿಯಲ್ಲಿ ಅ 24 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಇಲಾಖೆ ತಿಳಿಸಿದೆ.

Pragya Bharathi High School ರಾಜ್ಯಮಟ್ಟದ ಅಂಡರ್_14 ವಿಭಾಗದ ಚೆಸ್ ಪಂದ್ಯಾವಳಿಗೆ ಶಿವಮೊಗ್ಗದ ಕೆ.ಎನ್.ದೀಪಾ ಆಯ್ಕೆ

0

Pragya Bharathi High School ತೀರ್ಥಹಳ್ಳಿ ಪಟ್ಟಣದ ಸಮೀಪದಲ್ಲಿರುವ ಚಿಟ್ಟೆಬೈಲ್ ನ ಪ್ರಜ್ಞಾಭಾರತಿ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯ 14 ವರ್ಷದ ವಯೋಮಿತಿ ಒಳಗಿನ ವಿಭಾಗದಲ್ಲಿ ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ದೀಪಿಕಾ ಕೆ.ಎನ್. ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Pragya Bharathi High School ಪತ್ರಕರ್ತ ನಾಗೇಶನಾಯ್ಕ ಹಾಗೂ ಶಕುಂತಲಾ ಇವರ ಪುತ್ರಿಯಾಗಿದ್ದು, ನ.10 ರಿಂದ ಮಂಡ್ಯದಲ್ಲಿರುವ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿ ಭಾಗವಹಿಸಲಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ.

Shivamogga Karnataka Sanga ಅಕ್ಟೋಬರ್ 26, ಕರ್ನಾಟಕ ಸಂಘದಲ್ಲಿ “ಮಾತು ಮದ್ದಳೆ” ಕೃತಿ‌ ಲೋಕಾರ್ಪಣೆ

0

Shivamogga Karnataka Sanga ದಿನಾಂಕ 25ನೇ ಅಕ್ಟೋಬರ್ 2025ರ ಶನಿವಾರ, ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತ್ರಿ ಇವರ ಅಧ್ಯಕ್ಷತೆಯಲ್ಲಿ ಯಕ್ಷ ಕೌಮುದೀ ಟ್ರಸ್ಟ್ (ರಿ) ಶ್ರೀರಂಗಪಟ್ಟಣ ಇವರಿಂದ ತಾಳ ಮದ್ದಳೆ ಕಾರ್ಯಕ್ರಮ ಮತ್ತು ಶ್ರೀ ಗ.ನಾ ಭಟ್ಟ ಅವರ ‘ಮಾತು ಮದ್ದಳೆ’ ಪುಸ್ತಕ ಬಿಡುಗಡೆ ಸಮಾರಂಭವನ್ನು ಆಯೋಜಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ವಿದ್ಯಾವಾಚಸ್ಪತಿ ಉಮಾಕಾಂತ ಭಟ್ಟ, ಡಾ. ಕಬ್ಬಿನಾಲೆ ವಸಂತ ಭಾರಧ್ವಾಜ್ ಹಾಗೂ ಪ್ರೊ. ಗಣರಾಜ ಕುಂಬ್ಳೆ ಭಾಗವಹಿಸಲಿದ್ದಾರೆ.

ದಿನಾಂಕ 26ನೇ ಅಕ್ಟೋಬರ್ 2025ರ ಭಾನುವಾರ ಸಂಜೆ 5:30ಕ್ಕೆ ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣ ಶಾಸ್ತಿç ಇವರ ಅಧ್ಯಕ್ಷತೆಯಲ್ಲಿ ‘ವಿದ್ಯಾಲಂಕಾರ’ ಪ್ರೊ. ಎಸ್.ಕೆ. ರಾಮಚಂದ್ರರಾಯರ ಜನ್ಮಶತಾಬ್ದಿ-ಸ್ಮರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

Shivamogga Karnataka Sanga ಮುಖ್ಯ ಭಾಷಣಕಾರರಾಗಿ ಬೆಂಗಳೂರಿನ ಶ್ರೀ ಎಸ್. ಸೂರ್ಯಪ್ರಕಾಶ ಪಂಡಿತ್, ಲೇಖಕರು-ಪತ್ರಕರ್ತರು, ಹಾಗೂ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಬಹುಶ್ರುತ ವಿದ್ವಾಂಸರು ಇವರು ಮಾತನಾಡಲಿದ್ದಾರೆ.

ಆಸಕ್ತರು ಈ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

ವಡ್ಡಿನಕೊಪ್ಪದ ಮನೆಯಲ್ಲಿ ಕಳ್ಳತನ. ನಗದು ಮತ್ತು ಬಂಗಾರ ಎಗರಿಸಿದ ಕಳ್ಳರು

0

ದೀಪಾವಳಿ ಸಂಭ್ರಮದಲ್ಲಿದ್ದ ವಡ್ಡಿನಕೊಪ್ಪದ ಕರಿಯಪ್ಪನವರ ಮನೆಯವರಿಗೆ ಶಾಕ್.
ಮನೆ ಬೀಗ ಒಡೆದು ಹಣ, ಬಂಗಾರ ಕಳ್ಳರು
ಎಗರಿಸಿದ್ದಾರೆ. ಶಿವಮೊಗ್ಗದ ವಡ್ಡಿನಕೊಪ್ಪದಲ್ಲಿ ಈ ಘಟನೆ ನಡೆದಿದೆ.
ಕರಿಯಪ್ಪ, ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ.

ಮನೆ ಬಾಗಿಲು ಬೀಗ ಒಡೆದು ಕಳ್ಳರ ಕೈಚಳಕ ತೋರಿದ್ದಾರೆ.
ಮನೆಯಲ್ಲಿದ್ದ 80,000 ನಗದು 1 ವರೆ ತೊಲ ಬಂಗಾರ ಕಳುವುಮಾಡಿದ್ದಾರೆ.

ದೀಪಾವಳಿ ಹಬ್ಬಕ್ಕೆ ಅವರು ಸಂಬಂಧಿಕರ ಮನೆಗೆ ತೆರಳಿದ್ದ ಮನೆಯವರು
ನಿನ್ನೆ ತಡ ರಾತ್ರಿ ನಡೆದಿರುವ ಘಟನೆ, ಬೆಳಗಿನ ಜಾವ ಬೆಳಕಿಗೆ
ಬೀಗ ಒಡೆದಿರುವುದನ್ನು ಕಂಡು ‌ ಆಸುಪಾಸಿನ ಜನ ಮಾಲೀಕರ ಗಮನಕ್ಕೆ ತಂದಿದ್ದಾರೆ.
ತುಂಗಾನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Madhu bangarappa ಕರ್ನಾಟಕಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರದ ನಿರ್ಧಾರ- ಮಧು ಬಂಗಾರಪ್ಪ

0

Madhu bangarappa ರಾಜ್ಯ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿವರ ನೀಡಿದ್ದಾರೆ.
ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ‌ ಹೇಳಿದ್ದಾರೆ.

Dr. Besagarahalli Ramanna Foundation ಕುಪ್ಪಳಿಯಲ್ಲಿ ಸಾಹಿತ್ಯ ಕಮ್ಮಟ-೨೦೨೫. ಅರ್ಜಿ ಸಲ್ಲಿಕೆಗೆ ಕೊನೇ ದಿನ

0

Dr. Besagarahalli Ramanna Foundation ಡಾ. ಬೆಸಗರಹಳ್ಳಿ ರಾಮಣ್ಣ ಪ್ರತಿಷ್ಠಾನವು ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಜೊತೆಯಲ್ಲಿ ಆಯೋಜಿಸಿರುವ ‘ಸಾಹಿತ್ಯ ಕಮ್ಮಟ – ೨೦೨೫’ ಕ್ಕೆ ಅರ್ಜಿ ಸಲ್ಲಿಸಲು ಇಂದು ಕಡೆಯ ದಿನ. ಭಾಗವಹಿಸಲು ಇಚ್ಚಿಸುವ ಎಲ್ಲರಿಗೂ ಅರ್ಜಿ ಸಲ್ಲಿಸುವುದು ಕಡ್ಡಾಯ. ಆಯ್ಕೆಗೊಂಡವರಿಗೆ ಇಮೇಲ್ ಮೂಲಕ ತಿಳಿಸಲಾಗುವುದು.

ಈ ಬಾರಿ ಕುವೆಂಪು ಅವರ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಕುರಿತಾಗಿ ಚರ್ಚೆ, ಸಂವಾದಗಳು ನಡೆಯಲಿವೆ. ಹಿರಿಯರಾದ ಡಾ. ಕೆ.ವಿ. ನಾರಾಯಣ ಅವರು ಕಮ್ಮಟ ನಿರ್ದೇಶಕರಾಗಿದ್ದಾರೆ. ಜೊತೆಯಲ್ಲಿ ಓ ಎಲ್ ನಾಗಭೂಷಣಸ್ವಾಮಿ, ಕೆ.ವೈ. ನಾರಾಯಣಸ್ವಾಮಿ, ಕೆ. ಪುಟ್ಟಸ್ವಾಮಿ, ಮೇಟಿ ಮಲ್ಲಿಕಾರ್ಜುನ, ವಿಕ್ರಂ ವಿಸಾಜಿ, ಬಿ ಎಲ್ ರಾಜು, ಆರ್ ಶಿವಪ್ಪ, ಬಿ ಎಂ ಪುಟ್ಟಯ್ಯ, ಸಬಿತಾ ಬನ್ನಾಡಿ, ಗೀತಾ ವಸಂತ ಮುಂತಾದ ಬರಹಗಾರರು ಸಂವಾದಗಳನ್ನು ಮುನ್ನಡೆಸುವರು.

  • ಕುಪ್ಪಳಿಯಲ್ಲಿ ನವಂಬರ್ 14, 15, 16 ಮೂರು ದಿನಗಳ ಕಮ್ಮಟ ನಡೆಯಲಿದ್ದು. ಮೂರೂ ದಿನಗಳ ಕಾಲ ಭಾಗವಹಿಸುವಿಕೆ ಕಡ್ಡಾಯ.
  • ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಉಚಿತವಾದ ಊಟ ಮತ್ತು ಸರಳವಾದ ವಸತಿ ವ್ಯವಸ್ಥೆ ಇರುತ್ತದೆ. ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.
  • ಅರ್ಜಿಸಲ್ಲಿಸದೇ, ಆಯ್ಕೆಗೊಳ್ಳದೇ ನೇರ ಪ್ರವೇಶವಿಲ್ಲ.
  • 60 ಮಂದಿಗೆ ಮಾತ್ರ ಅವಕಾಶ. ಅದರಲ್ಲಿ 30 ಸೀಟುಗಳು ಹೆಣ್ಣುಮಕ್ಕಳಿಗೆ ಮೀಸಲು.

ಆಸಕ್ತರು ನಿಮ್ಮ‌ ಹೆಸರು, ವಯಸ್ಸು, ಉದ್ಯೋಗ, ವಿಳಾಸ ಮತ್ತು ಆಸಕ್ತಿಗಳ ವಿವರಗಳುಳ್ಳ ಅರ್ಜಿಯನ್ನು email ಮಾಡಬಹುದು. Email : drbrtrust@gmail.com

Madhu Bangarappa ಜಿಲ್ಲೆಯಲ್ಲಿ ಶೇ.97 ರಷ್ಟು ಜಾತಿಜನಗಣತಿ ಸಮೀಕ್ಷೆ ಮುಗಿದಿದೆ – ಮಧು ಬಂಗಾರಪ್ಪ

0

Madhu Bangarappa ಜಾತಿಜನ ಗಣತಿ ಸಮೀಕ್ಷೆ ಶೇ.90.12 ರಷ್ಟು ಆಗಿದೆ.
ಸಮೀಕ್ಷೆ ತುಂಬ ಅವಶ್ಯಕತೆ ಇದೆ. ಇದರಿಂದ ಬಜೆಟ್ ಗೆ ಅನುಕೂಲವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ದೊಡ್ಡ ದೊಡ್ಡ ಉದ್ಯಮಿಗಳು ಸಹ ಸಹಕಾರ ನೀಡಬೇಕಾಗುತ್ತದೆ ಎಂದು ಪರೋಕ್ಷವಾಗಿ ಇನ್ಫೋಸಿಸ್ ನ ದಂಪತಿಗಳ ಹೆಸರನ್ನು ಹೇಳದೆ ಮನವಿ ಮಾಡಿದರು. ಎಲ್ಲಾರು ಸಹ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.
ಜಿಲ್ಲೆಯಲ್ಲಿ 97 % ರಷ್ಟು ಸಮೀಕ್ಷೆ ಮುಕ್ತಾಯವಾಗಿದೆ.

Madhu Bangarappa ನಿನ್ನೆಗೆ ಶಿಕ್ಷಕರನ್ನು ಸಮೀಕ್ಷೆಗೆ ಬಳಸುವುದನ್ನು ನಿಲ್ಲಿಸಲಾಗಿದೆ.
ಕೆಲವರು ಮತವೇ ಹಾಕುವುದಿಲ್ಲ. ಅಂತಹವರು ಮಾತ್ರ ಎಲ್ಲಾ ಸೌಲಭ್ಯವನ್ನು ಕೇಳುತ್ತಾರೆ.
ಇಂತಹವರು ಪ್ರಜಾಪ್ರಭುತ್ವಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.