Saturday, February 14, 2026
Saturday, February 14, 2026
Home Blog Page 127

ಆನೆ ಬಾಲಣ್ಣನ ಜೀವಕ್ಕೆ ಯಾವುದೇ ಅಪಾಯವಿಲ್ಲ- ಸಿಸಿಎಫ್ ಹನುಮಂತಪ್ಪ

0

ಶಿವಮೊಗ್ಗ ದಸರಾ ಆನೆ ಬಾಲಣ್ಣಗೆ ಕಿವಿಗೆ ಗಾಯ ಆದ ವಿಚಾರವಾಗಿ ಸಿಸಿಎಫ್ ಹನುಮಂತಪ್ಪ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.

ದಸರಾ ಆನೆ ಬಾಲಣ್ಣಗೆ ಕಿವಿಗೆ ಗಾಯ ಆದ ವಿಚಾರವನ್ನು ಕಳೆದ ಎರಡು ದಿನಗಳಿಂದ ಪತ್ರಿಕೆಗಳಲ್ಲಿ ಸುದ್ದಿ ಬರುತ್ತಿದೆ
ಅದು ಪ್ರಾಣಕ್ಕೆ ಅಪಾಯ ಆಗುತ್ತಿದೆ ಎಂಬ ವರದಿಯಾಗುತ್ತಿದೆ ಅದು, ಸತ್ಯಕ್ಕೆ ದೂರವಾಗಿದೆ
ಆ ರೀತಿ ಪರಿಸ್ಥಿತಿ ಅಲ್ಲಿ ಇಲ್ಲ. ಈ ಹಿಂದೆ ದಸರಾದ ವೇಳೆ ಬಾಲಣ್ಣಗೆ ಕಾಲಿಗೆ ಸ್ವಲ್ಪ ಸ್ನಾಯು ಹಿಡಿತ ಉಂಟಾಗಿತ್ತು
ಹಾಗಾಗಿ ಅದಕ್ಕೆ ಒಂದು ಇಂಜೆಕ್ಷನ್ ಕೊಡಲಾಗಿತ್ತು ಎಂದು ತಿಳಿಸಿದರು.

ನಮ್ಮ ವೈದ್ಯರಾದ ಡಾ.ಮುರಳಿ ಅವರು ಅದನ್ನ ಚೆನ್ನಾಗಿ ಹ್ಯಾಂಡಲ್ ಮಾಡುತ್ತಿದ್ದಾರೆ
ಎರಡನೇ ಬಾರಿ ಇಂಜೆಕ್ಷನ್ ಕೊಡುವ ವೇಳೆ ಅಚನಕ್ಕಾಗಿ ಆನೆ ಮೇಲೆ ಎದ್ದು ನಿಂತಿದೆ .ಇಂಜೆಕ್ಷನ್ ಕೊಟ್ಟ ಭಾಗವನ್ನ ಮರಕ್ಕೆ ಸ್ವಲ್ಪ ಉಜ್ಜಿ ಕೊಂಡಿದೆ.ಅದರಿಂದ ಕಿವಿಗೆ ಸ್ವಲ್ಪ ಗಾಯ ಆಗಿದೆ.
ದೇಹದ ಒಳಗಡೆ ರಕ್ತ ಚಲನೆಗೆ ಸ್ವಲ್ಪ ಅಡ್ಡಿ ಉಂಟಾಗಿದೆ.
ಹಾಗಾಗಿ ಅದರ ಕಿವಿಯಲ್ಲಿ ಸ್ವಲ್ಪ ಹುಣ್ಣು ಆಗಿತ್ತು. ಈಗ ಅದು ಸರಿ ಹೋಗುತ್ತಿದೆ ಎಂದರು.

ಇನ್ನು ಎರಡು ದಿನಗಳ ವೈದ್ಯಕೀಯ ಉಪಚಾರ ಆದಮೇಲೆ ಸರಿ ಹೋಗುತ್ತದೆ.
ಆದರೆ ಕಿವಿಗೆ ಯಾವುದೇ ರೀತಿ ತೊಂದರೆ ಆಗುವ ಲಕ್ಷಣಗಳು ಇಲ್ಲ.
ಈಗಾಗಲೇ ಆ ಗಾಯ ವಾಸಿಯಾಗುತ್ತಾ ಬಂದಿದೆ.
ವರದಿಯಲ್ಲಿ ಬಂದ ಹಾಗೆ ಯಾವುದೇ ರೀತಿಯ ಜೀವಕ್ಕೆ ಅಪಾಯವಿಲ್.
100% ಬಾಲಣ್ಣ ಆನೆ ಸೇಫ್ ಆಗಿದೆ ಎಂದು ತಿಳಿಸಿದರು.

ಮುಂದೆ ಗುಣವಾದ ಮೇಲೆ ಕಿವಿ ಸ್ವಲ್ಪ ನೇತಾಡಬಹುದು ಅದನ್ನು ಕೂಡ ಲೇಸರ್ ಟ್ರೀಟ್ಮೆಂಟ್ ಇಂದ ಕೂಡಿಸಲು ಸಾಧ್ಯವಿದೆ
ರಿಲಯನ್ಸ್ ವಂತಾರದ ತಜ್ಞರುಗಳಿಂದ ನಾವು ಸಲಹೆಯನ್ನ ಪಡೆದುಕೊಳ್ಳುತ್ತೇವೆ.ಸಿದ್ದಾಪುರದಿಂದ ಅಡಕ ಬಡಕಾ ಎಂಬ ಆನೆ ಹಿಡಿದು ತಂದಾಗ ಅದಕ್ಕೆ ಕಾಲಿಗೆ ಹೊಡೆತ ಬಿದ್ದಿತ್ತು. ಕ್ರಾಲ್ ನಲ್ಲಿ ಅದಕ್ಕೆ ಚಿಕಿತ್ಸೆ ಮಾಡಲಾಗುತ್ತಿದೆ. ಈಗಾಗಲೇ ಎರಡು ತಿಂಗಳಿಂದ ಅದಕ್ಕೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಎರಡು ತಿಂಗಳಲ್ಲಿ ಚಿಕಿತ್ಸೆ ನಡೆಯಲಿದೆ
ಈಗ ಆ ಆನೆ ಕೂಡ ಚೇತರಿಸಿಕೊಂಡಿದೆ ಎಂದರು.

CM Siddharamaiah ಸಮೀಕ್ಷೆ ಆರಂಭದಲ್ಲಿ ಸ್ವಲ್ಪ ತೊಡಕಾಯಿತು- ಮುಖ್ಯಮಂತ್ರಿ ಸಿದ್ಧರಾಮಯ್ಯ

0

CM Siddharamaiah “ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಸರ್ವೆ ಮಾಡುವುದರಿಂದ, ಆರಂಭದಲ್ಲಿ ಇದಕ್ಕಾಗಿ ಮೂರ್ನಾಲ್ಕು ಆ್ಯಪ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅವುಗಳನ್ನು ಕಾರ್ಯಗತಗೊಳಿಸಲು ಹೆಚ್ಚು ಕಡಿಮೆ ಎರಡು ಮೂರು ದಿನಗಳು ಬೇಕಾಯಿತು. ಅಲ್ಲದೇ, ಸಮೀಕ್ಷೆಯ ಜವಾಬ್ದಾರಿಯನ್ನು ಶಿಕ್ಷಕರಿಗೆ ನೀಡಿದ್ದ ಕಾರಣ, ಅವರಲ್ಲಿ ಈ ಬಗ್ಗೆ ಆರಂಭದಲ್ಲಿ ಉತ್ಸಾಹ ಇರಲಿಲ್ಲ. ನಂತರ ತರಬೇತಿ ಕೊಟ್ಟು ಸಮೀಕ್ಷೆಗೆ ತಯಾರು ಮಾಡಿದೆವು. CM Siddharamaiah ಜೊತೆಗೆ ಮಾಧ್ಯಮದಲ್ಲಿ ಸಮೀಕ್ಷೆ ನಡೆಯುವುದಿಲ್ಲ ಎಂದೆಲ್ಲ ತಪ್ಪು ಮಾಹಿತಿ ಬರುತ್ತಲೇ ಇತ್ತು. ಹೀಗಾಗಿ ಸಮೀಕ್ಷೆಗೆ ಆರಂಭದಲ್ಲಿ ಸ್ವಲ್ಪ ತೊಡಕಾಯಿತು.”
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜಾಲತಾಣದಲ್ಲಿ ತಿಳಿಸಿದ್ದಾರೆ.

Department of Railway ದೀಪಾವಳಿ ಪ್ರಯುಕ್ತ ಬೆಂಗಳೂರು ಮತ್ತು ಶಿವಮೊಗ್ಗ ನಡುವೆ ವಿಶೇಷ ರೈಲು ಸೇವೆ

0

Department of Railway ಹಬ್ಬದ ಪ್ರಯುಕ್ತ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು-ಶಿವಮೊಗ್ಗ ಟೌನ್ ನಡುವೆ ಹಾಗೂ ಬೆಂಗಳೂರು ಕಂಟೋನ್ಮೆಂಟ್-ಶಿವಮೊಗ್ಗ ಟೌನ್ ನಡುವೆ ತಲಾ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳ ವಿವರಗಳು ಹೀಗಿವೆ:

  1. ರೈಲು ಸಂಖ್ಯೆ 06225/06226 ಕೆಎಸ್ಆರ್ ಬೆಂಗಳೂರು-ಶಿವಮೊಗ್ಗ ಟೌನ್-ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್):

ರೈಲು ಸಂಖ್ಯೆ 06225 ಅಕ್ಟೋಬರ್ 22, 2025 ರಂದು ಬೆಳಿಗ್ಗೆ 08:05 ಗಂಟೆಗೆ ಕೆಎಸ್ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು, ಅದೇ ದಿನ ಮಧ್ಯಾಹ್ನ 01:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ ರೈಲು ಸಂಖ್ಯೆ 06226 ಅಕ್ಟೋಬರ್ 22, 2025 ರಂದು ಸಂಜೆ 05:15 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಅದೇ ದಿನ ರಾತ್ರಿ 10:45 ಗಂಟೆಗೆ ಕೆಎಸ್ಆರ್ ಬೆಂಗಳೂರು ತಲುಪಲಿದೆ.

ಈ ರೈಲು ಯಶವಂತಪುರ, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ ಮತ್ತು ಶಿವಮೊಗ್ಗ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ರೈಲು ಒಂದು ಎಸಿ 2- ಟೈರ್, ಒಂದು ಎಸಿ 3- ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.

  1. ರೈಲು ಸಂಖ್ಯೆ 06215/06216ಬೆಂಗಳೂರು ಕಂಟೋನ್ಮೆಂಟ್–ಶಿವಮೊಗ್ಗ ಟೌನ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್):

ರೈಲು ಸಂಖ್ಯೆ 06215 ಅಕ್ಟೋಬರ್ 22, 2025 ರಂದು ಬೆಳಿಗ್ಗೆ 10:45 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಅದೇ ದಿನ ಸಂಜೆ 06:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ. ಮರಳಿ, ರೈಲು ಸಂಖ್ಯೆ 06216 ಅಕ್ಟೋಬರ್ 22, 2025 ರಂದು ರಾತ್ರಿ 11:55 ಗಂಟೆಗೆ ಶಿವಮೊಗ್ಗ ಟೌನ್‌ನಿಂದ ಹೊರಟು, ಮರುದಿನ ಬೆಳಿಗ್ಗೆ 07:00 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.

Department of Railway ಈ ರೈಲು ಎಸ್ಎಂಟಿವಿ ಬೆಂಗಳೂರು, ಚಿಕ್ಕಬಾಣಾವರ, ತುಮಕೂರು, ಬಾಣಸಂದ್ರ, ತಿಪಟೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿ ಮತ್ತು ಶಿವಮೊಗ್ಗ ಹಾಲ್ಟ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಈ ರೈಲಿನಲ್ಲಿ ಒಂದು ಎಸಿ 2- ಟೈರ್, ಎರಡು ಎಸಿ 3- ಟೈರ್, ಹನ್ನೊಂದು ಸ್ಲೀಪರ್ ಕ್ಲಾಸ್, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್‌ಎಲ್‌ಆರ್/ಡಿ ಬೋಗಿಗಳು ಇರಲಿವೆ.

Karnataka Milk Board Limited 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳ ಮಾರಾಟ. ರೂ 46 ಕೋಟಿ ದಾಖಲೆ ವಹಿವಾಟು-ಸಚಿವ ಕೆ.ವೆಂಕಟೇಶ್.

0

Karnataka Milk Board Limited ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹನು ಸಹಕಾರಿ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ.

ಪ್ರತಿದಿನ ರಾಜ್ಯದ ವಿವಿಧ ಹೈನುಗಾರ ರೈತರಿಂದ ಸರಾಸರಿ 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗುತ್ತಿದ್ದು, ಅದರಲ್ಲಿ ಸುಮಾರು 65 ಲಕ್ಷ ಲೀಟರ್ ಹಾಲು, ಮೊಸರು ಹಾಗೂ ಯುಎಚ್‌ ಹಾಲು ಉತ್ಪನ್ನಗಳನ್ನು ರಾಜ್ಯ ಮತ್ತು ಹೊರರಾಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರಿಗೆ ತಲುಪಿಸಲಾಗುತ್ತಿದೆ.

“ನಂದಿನಿ” ಬ್ರಾಂಡ್ ನಡಿಯಲ್ಲಿ ಹಾಲಿನೊಂದಿಗೆ ತುಪ್ಪ ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175 ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿ, ಅಸ್ಸಾಂ ಮತ್ತು ಕೆಲ ಹೊರದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ.

ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು “ನಂದಿನಿ” ಬ್ರಾಂಡ್ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವನ್ನಾಗಿ ಮಾಡಿದೆ.

ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿತಿನಿಸುಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಬೇಡಿಕೆ ಕಂಡುಬರುತ್ತದೆ. ಈ ಹಬ್ಬದ ಅವಧಿಯಲ್ಲಿ ನಂದಿನಿ ಬ್ರಾಂಡ್‌ನಡಿಯಲ್ಲಿ ಲಭ್ಯವಿರುವ 40 ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು.

2024ರ ದಸರಾ ಮತ್ತು ದೀಪಾವಳಿ ಹಬ್ಬದ ಅವಧಿಯಲ್ಲಿ ಒಟ್ಟು 725 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿ ರೂ. 33.48 ಕೋಟಿ ವಹಿವಾಟು ದಾಖಲಿಸಲಾಗಿತ್ತು. ಈ ಬಾರಿ 2025ರ ಹಬ್ಬದ ಅವಧಿಗೆ ಹೆಚ್ಚುವರಿ ಬೇಡಿಕೆಯನ್ನು ಪರಿಗಣಿಸಿ, ಸುಮಾರು ಎರಡು ತಿಂಗಳುಗಳ ಮುಂಚಿತವಾಗಿ ಎಲ್ಲ ಸದಸ್ಯ ಹಾಲು ಒಕ್ಕೂಟಗಳ ಸಹಕಾರದೊಂದಿಗೆ ನಿಖರ ಯೋಜನೆ ರೂಪಿಸಿ 1000 ಮೆಟ್ರಿಕ್ ಟನ್ ಮಾರಾಟ ಗುರಿ ನಿಗಿದಪಡಿಸಲಾಯಿತು.

ಸದರಿ ಗುರಿಯನ್ನು ಮೀರಿ ಈ ವರ್ಷ ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು “ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ ರೂ. 46.00 ಕೋಟಿಗಳ ದಾಖಲೆಯ ವಹಿವಾಟು” ಸಾಧಿಸುವ ಮೂಲಕ ಒಂದು ಮಹತ್ವದ ಮೈಲುಗಲ್ಲು ನಿರ್ಮಿಸಲಾಗಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 38 ರಷ್ಟು ವಹಿವಾಟು ಪ್ರಗತಿಯಾಗಿದ್ದು, ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆಯಾಗಿರುತ್ತದೆ.

Karnataka Milk Board Limited ಈ ಸಾಧನೆ “ನಂದಿನಿ” ಬ್ರಾಂಡ್‌ ನ ಗುಣಮಟ್ಟ ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ.

ಸದರಿ ಮಾಹಿತಿಯನ್ನು ತಮ್ಮ ಮಾಧ್ಯಮಗಳ ಮೂಲಕ ಸಾರ್ವಜನಿಕರ ಗಮನಕ್ಕೆ ತರಲು ಈ ಮೂಲಕ ವಿನಂತಿಸಲಾಗುತ್ತಿದೆ.

CM Siddharamaiah ಹುತಾತ್ಮ ಪೊಲೀಸರ ತ್ಯಾಗ,ಬಲಿದಾನಕ್ಕೆ ಬೆಲೆ ಕಟ್ಟಲಾಗದು, ಅವರನ್ನ ಸ್ಮರಿಸಿ ನಮಿಸುವುದು ನಮ್ಮ ಕರ್ತವ್ಯ- ಸಿದ್ಧರಾಮಯ್ಯ

0

CM Siddharamaiah ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು
ಹೇಳಿದ್ದಾರೆ.

ಮುಖ್ಯಮಂತ್ರಿಗಳು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು.

CM Siddharamaiah ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.
ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದು ತಮ್ಮ ಭಾಷಣದಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆ ಬಗ್ಗೆ
ಮೆಚ್ಚುಗೆ ವ್ಯಕ್ತಪಡಿಸಿದರು.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು..

ಶಿವಮೊಗ್ಗದ ಖಾಸಗಿ ಪ್ರವಾಸಿ ಏಜೆನ್ಸಿಯಿಂದ ಮೋಸ, ಪ್ರವಾಸಿಗರಿಂದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆ

0

ನಮ್ಮ ವಿದೇಶಿ ಪ್ರವಾಸದಲ್ಲಿ ನಿಬಂಧನೆಯಂತೆ ನಡೆದುಕೊಳ್ಳದೆ, ನಮಗೆ ಸಾಕಷ್ಟು ಕಿರಿಕಿರಿಯನ್ನು ಉಂಟು ಮಾಡಿದ ಹಾಗೂ ತೊಂದರೆ ನೀಡಿದ ಶಿವಮೊಗ್ಗ ವಿನೋಬನಗರ ಸವಿ ಬೇಕರಿ ಬಳಿಯ ಟ್ರಾವೆಲ್ ಜೋನ್ ವಿರುದ್ಧ ಕ್ರಮ ಕೈಗೊಂಡು, ನಮಗೆ ನಾವು ಕಟ್ಟಿರುವ ಅರ್ಧದಷ್ಟು ಹಣವನ್ನು ವಾಪಸ್ ಕೊಡಿಸಬೇಕೆಂದು ವಿನಂತಿಸಿ ವಿನೋಬನಗರ ಪೊಲೀಸ್ ಪಿಐ ಸಂತೋಷ್ ಕುಮಾರ್ ಅವರಿಗೆ ಕಾಶಿಪುರದ ಎಸ್ ಮಂಜುನಾಥ್ ಹಾಗೂ ಪ್ರವಾಸ ಹೋಗಿದ್ದ 43 ಸ್ನೇಹಿತರು ದೂರು ನೀಡಿದರು.
ನಾವು 43 ಜನ ಸ್ನೇಹಿತರು ಥೈಲ್ಯಾಂಡ್ ದೇಶದ ಟ್ರಾಬಿ, ಪಟ್ಟಾಯ ಹಾಗೂ ಪುಕೇಟ್ ಗೆ ಕಳೆದ ಅಕ್ಟೋಬರ್ ಮೂರರಂದು ಶಿವಮೊಗ್ಗದಿಂದ ಪ್ರವಾಸ ಹೋಗಿದ್ದು, ನಮ್ಮ ಪ್ರವಾಸ ವ್ಯವಸ್ಥೆಯನ್ನು ಈ ಟ್ರಾವೆಲ್ ಜೋನ್ ಗೆ ನೀಡಿದ್ದೆವು. 70000 ನಿರ್ಧಾರವಾಗಿದ್ದು, ಅದನ್ನು ನೀಡಿದ್ದೆವು. ಅದಕ್ಕೆ ಪೂರಕವಾಗುವಂತೆ ಪ್ರವಾಸ, ವಸತಿ, ತಿಂಡಿ, ಊಟ, ಕ್ರೂಸ್ ಸೇರದಂತೆ ಎಲ್ಲಾ ಜವಾಬ್ದಾರಿಗಳನ್ನು ಒಪ್ಪಿಕೊಂಡಿದ್ದರು. ಆದರೆ ನಾವು ಪ್ರವಾಸಕ್ಕೆ ಹೋಗಿದ್ದಾಗ ಯಾವುದೇ ವ್ಯವಸ್ಥೆಯನ್ನು ಮಾಡದೆ ನಮಗೆ ವಸತಿಯನ್ನು ಸಹ ಸಿಗದಂತೆ ಮಾಡಿ ಊಟ ಹಾಗೂ ತಿಂಡಿ ವ್ಯವಸ್ಥೆಯನ್ನು ಸರಿಯಾಗಿ ಮಾಡಿಲ್ಲ ಎಂದು ಆರೋಪಿಸಿದರು.
ನಾವು ಕೇಳಿದರೆ ಶಿವಮೊಗ್ಗದಿಂದಲೇ ಹಾರಿಕೆ ಉತ್ತರ ನೀಡುತ್ತಾ ನಮ್ಮ ಇಡೀ ಪ್ರವಾಸವನ್ನು ನಿಜಕ್ಕೂ ಅತ್ಯಂತ ಕೆಟ್ಟದನಿಸುವಂತೆ ಮಾಡಿದರು. ಬಸ್ ನಲ್ಲಿಯೇ ಉಪವಾಸ ಕೂರಬೇಕಾದಂತ ಪರಿಸ್ಥಿತಿ ನಮಗೆ ನಿರ್ಮಾಣವಾಗಿತ್ತು ಎಂದರು.
ಈ ಸಂಬಂಧ ನಾವು ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದಾಕ್ಷಣ ನಮ್ಮಿಂದ ವಂಚನೆಯಾಗಿದೆ ಎಂದು ಅನಗತ್ಯ ದೂರು ನೀಡುವ ಪ್ರಯತ್ನ ಅವರಿಂದ ನಡೆಯಿತು. ಕೂಡಲೇ ತಾವುಗಳು ಈ ಟ್ರಾವೆಲ್ ಜೋನ್ ಅವರನ್ನು ಕರೆಸಿ ನಾವು ಪ್ರವಾಸಕ್ಕೆ ಹೋಗಿರುವ ಪ್ರಯಾಣದ ವೆಚ್ಚ ಹೊರತುಪಡಿಸಿ ಉಳಿದ ಅರ್ಧದಷ್ಟು ಹಣವನ್ನು ನಮಗೆ ವಾಪಸ್ ಕೊಡಿಸಬೇಕು ಹಾಗೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಂಜುನಾಥ್, ನರಸಿಂಹ, ಆರ್ಮುಗಂ, ಸಂದೀಪ್, ಕೆ., ನಾಗರಾಜ್, ಅರುಣ್, ಲೋಹಿತ್, ರಮೇಶ್, ಲೋಕೇಶ್, ಶಂಕರ್, ರಾಜು, ಆದರ್ಶ್, ರಾಜು, ಶರತ್, ಮೋಹನ್ ರಾಜ್, ಬಂಡೆ ಶೀನಣ್ಣ ಹಾಗೂ ಇತರರಿದ್ದರು.

Dr. Dhananjaya Sarji ಹಸಿರು ಪಟಾಕಿಗಳನ್ನೇ ಹಚ್ಚಿರಿ,ಸುರಕ್ಷತೆಗೆ ಆದ್ಯತೆ ಕೊಡಿ- ಡಾ.ಧನಂಜಯ ಸರ್ಜಿ

0

Dr. Dhananjaya Sarji ದೀಪಾವಳಿ ಹಿಂದುಗಳ ಪವಿತ್ರ ಹಬ್ಬ. ದೀಪಗಳ ಹಬ್ಬ ಇದಾಗಿದ್ದು, ಹಸಿರು ಪಟಾಕಿಗಳನ್ನು ಬಳಸೋಣ, ಪಟಾಕಿ ಹಚ್ಚುವ ಸಂದರ್ಭದಲ್ಲಿ ಸುರಕ್ಷತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ಶಿವಮೊಗ್ಗ ನಗರದ ಸವಾರ್‌ಲೈನ್ ರಸ್ತೆಯಲ್ಲಿರುವ ಸಾವಿತ್ರಮ್ಮ ಫೈನಾನ್ಸ್ ನಲ್ಲಿ ಜಿ.ವಿಜಯಕುಮಾರ್ ದಂಪತಿ ದೀಪಾವಳಿ ಹಬ್ಬದ ಎರಡನೇ ದಿನ ನರಕ ಚತುರ್ದಶಿ ಹಾಗೂ ಲಕ್ಷ್ಮೀ ಪೂಜೆ ಪ್ರಯುಕ್ತ ಏರ್ಪಡಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ವಾಯುಮಾಲಿನ್ಯ, ಪರಿಸರ ಮಾಲಿನ್ಯ, ಶಬ್ದ ಮಾಲಿನ್ಯ ತಡೆಗಟ್ಟಲು ಹಸಿರು ಪಟಾಕಿಗಳನ್ನು ಕಡ್ಡಾಯವಾಗಿ ಬಳಸಬೇಕು. ಪಾಲಕರು, ಹಿರಿಯರು ಮಕ್ಕಳೊಂದಿಗೆ ಇರಬೇಕು. ಪ್ರತಿ ವರ್ಷ ಪಟಾಕಿಗಳ ದುರಂತದಿಂದ ದೇಶಾದ್ಯಂತ ಅನೇಕರು ಕಣ್ಣುಗಳನ್ನು ಕಳೆದುಕೊಂಡು ಇತರ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ಹಬ್ಬಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ಹಬ್ಬಗಳು ನಮ್ಮಲ್ಲಿ ಜೀವನೋತ್ಸಾಹವನ್ನು ಮೂಡಿಸುತ್ತವೆ. ಪರಸ್ಪರಲ್ಲಿ ಪ್ರೀತಿ ವಿಶ್ವಾಸ ವೃದ್ಧಿಗೊಳಿಸುತ್ತವೆ. ನಮ್ಮ ಮನಸ್ಸಿನ ಖಿನ್ನತೆ ದೂರವಾಗುತ್ತದೆ. ನಮ್ಮ ದೇಶ ಹಾಗೂ ನಮ್ಮ ರಾಜ್ಯದಲ್ಲಿ ಇರುವಂತಹ ಹಬ್ಬ ಹಾಗೂ ಸಂಪ್ರದಾಯಗಳು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಸಡಗರದಿಂದ ಹಬ್ಬವನ್ನು ಆಚರಿಸೋಣ ಎಂದು ನುಡಿದರು.

Dr. Dhananjaya Sarji ನಾಲ್ಕು ದಿನಗಳ ಕಾಲ ನಡೆಯುವ ವಿಶೇಷ ಹಬ್ಬ ಎಲ್ಲರಿಗೂ ಸಡಗರ ಸಂಭ್ರಮ ಸಂತೋಷವನ್ನು ತರಲಿ, ಗೋಪೂಜೆಯಲ್ಲಿ ಎಲ್ಲರೂ ಭಾಗಿಯಾಗಿ ಗೋಮಾತೆಯ ಶ್ರೀ ರಕ್ಷೆಯಲ್ಲಿ ಎಲ್ಲರೂ ಭಾಗಿಯಾಗೋಣ ಎಂದರು.
ಕಾಂಗ್ರೆಸ್ ಮುಖಂಡ ಚಿನ್ನಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಕೆ.ರವಿ, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರ್, ಧನಂಜಯಪ್ಪ, ಬಿಂದು ವಿಜಯ ಕುಮಾರ್, ಜಂಗಮ ಸಮಾಜದ ಮುಖಂಡ ಉಮೇಶ್ ಹಿರೇಮಠ ಉಪಸ್ಥಿತರಿದ್ದರು.

Indian Medical Association ಹೃದಯ ಶ್ವಾಸಕೋಶ ಪುನಶ್ಚೇತನ ತರಬೇತಿಯನ್ನ ಎಲ್ಲರೂ ಪಡೆಯಬೇಕು- ಡಾ.ಕೆ.ಆರ್.ರವೀಶ್

0

Indian Medical Association ಸಾಮಾನ್ಯ ನಾಗರಿಕರಲ್ಲಿ ಜೀವ ರಕ್ಷಿಸುವ ಕೌಶಲ್ಯವನ್ನು ಬೆಳೆಸುವುದು ಅತ್ಯಂತ ಅಗತ್ಯ ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಹೇಳಿದರು.

ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯಿಂದ ನಗರದ ವಿವಿಧೆಡೆ ಆಯೋಜಿಸಿದ್ದ ಹೃದಯ ಶ್ವಾಸಕೋಶ (ಸಿಪಿಆರ್) ಪುನಶ್ಚೇತನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ತುರ್ತು ಪರಿಸ್ಥಿತಿಯಲ್ಲಿ ಹೇಗೆ ಸಹಾಯ ಮಾಡಬಹುದು ಎಂಬುದನ್ನು ಎಲ್ಲರೂ ಅರಿತಿರಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆದೇಶದಂತೆ ರಾಷ್ಟ್ರೀಯ ಮಟ್ಟದಲ್ಲಿ ಐಎಂಎ ಕಾರ್ಯಕ್ರಮ ಆಯೋಜಿಸಿದ್ದು, ಐಎಂಎ ಶಿವಮೊಗ್ಗ ಈಗಾಗಲೇ ಸಿಪಿಆರ್ ಕಾರ್ಯಕ್ರಮವನ್ನು ಮೂರು ವರ್ಷಗಳಿಂದ ಹಲವಾರು ಕಡೆ ಸಂಯೋಜಿಸಿಕೊಂಡು ಬಂದಿದೆ ಎಂದರು.

ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ ಮಾತನಾಡಿ, ಸಾಮಾಜಿಕ ಜಾಗೃತಿಗೆ, ಜೀವ ರಕ್ಷಣಾ ಶಿಕ್ಷಣಕ್ಕೆ ಹಾಗೂ ಸೇವಾ ಮನೋಭಾವ ಬೆಳೆಸುವ ಪ್ರಯತ್ನದಲ್ಲಿ ಐಎಂಎ ಅರ್ಥಪೂರ್ಣ ಹೆಜ್ಜೆ ಇಟ್ಟಿದೆ. ಮುಂದಿನ ದಿನಗಳಲ್ಲಿಯೂ ಕೂಡ ಸಿಪಿಆರ್ ಅರಿವು ಕಾರ್ಯಕ್ರಮಗಳನ್ನು ವಿವಿಧ ಕಡೆ ಮಾಡುವ ಯೋಜನೆಯನ್ನು ಸಂಘ ಹೊಂದಿದೆ. ಸಿಪಿಆರ್ ಕಲಿತು ಜೀವ ಉಳಿಸಲು ಪ್ರತಿಯೊಬ್ಬರೂ ಸನ್ನದ್ಧರಾಗಿರಲಿ ಎಂಬುದು ಐಎಂಎ ಶಿವಮೊಗ್ಗದ ಮಹತ್ತರ ಧ್ಯೇಯವಾಗಿದೆ ಎಂದು ಹೇಳಿದರು.

ಶ್ರೀಧರ್ ನರ್ಸಿಂಗ್ ಹೋಂ, ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್, ಅನಿಕೇತನ ಪಾರ್ಕ್, ರಾಜೇಂದ್ರ ನಗರ, ಸ್ನೇಹವಾಹಿನಿ ಮಹಿಳಾ ಸಹಕಾರ ಸಂಘ, ಫ್ರೀಡಂ ಪಾರ್ಕ್, ಶಿವಮೊಗ್ಗ ಸೈಕಲ್ ಕ್ಲಬ್, ಶ್ರೀರಾಮಪುರ ಪ್ರಾಥಮಿಕ ಚಿಕಿತ್ಸಾ ಕೇಂದ್ರ, ಸೀಗೆಹಟ್ಟಿ ಪ್ರಾಥಮಿಕ ಚಿಕಿತ್ಸಾ ಕೇಂದ್ರ, ವೈಎಚ್‌ಎಐ ತರುಣೋದಯ ಘಟಕ, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕ್ಯಾಂಟೀನ್ ಸಿಬ್ಬಂದಿ, ಓಟಿ ಸಿಬ್ಬಂದಿ ಮತ್ತು ಆಟೋ ಡ್ರೈವರ್ ಸೆಕ್ಯೂರಿಟಿ ಗಾರ್ಡ್ಗಳು, ಕಮಲ ನೆಹರು ರಾಷ್ಟ್ರೀಯ ಕಾಲೇಜಿನ ವಿದ್ಯಾರ್ಥಿನಿಯರು, ಎನ್‌ಸಿಸಿ ವಿದ್ಯಾರ್ಥಿನಿಯರು ಸಿಪಿಆರ್ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

Indian Medical Association ಡಾ. ಎಚ್.ಎಲ್.ಶಶಿಧರ್ ಅವರು ಶಿವಮೊಗ್ಗ ಐಎಂಎ ಸಿಪಿಆರ್ ಕಾರ್ಯಕ್ರಮದ ಸಂಯೋಜಕರಾಗಿದ್ದರು. ಡಾ. ಕೆ ಅನುಪ್ ರಾವ್, ಡಾ. ಕೌಸ್ತುಭ ಅರುಣ್, ಡಾ. ಶ್ವೇತಾ ಬಾದಾಮಿ, ಡಾ. ಶಂಭುಲಿಂಗ ಬಂಕೊಳ್ಳಿ, ಡಾ. ಅಜಯ್ ಬಡ್ಡಿ, ಡಾ. ಸಂಧ್ಯಾ ಪಣಜಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.

ಶಿವಮೊಗ್ಗ ನಗರದ ವಿವಿಧೆಡೆ ವೈದ್ಯರು ಮತ್ತು ತರಬೇತಿದಾರರ ಮಾರ್ಗದರ್ಶನದಲ್ಲಿ ಸಿಪಿಆರ್ ಪ್ರಾತ್ಯಕ್ಷಿಕೆ ತೋರಿಸಲಾಯಿತು. ಹೃದಯ ನಿಲ್ಲುವ ಸ್ಥಿತಿಯನ್ನು ಗುರುತಿಸುವುದು, ತುರ್ತು ಸಹಾಯ ಕೋರುವುದು ಹಾಗೂ ಸ್ವತಃ ಕೈಯಿಂದ ಹಾರ್ಟ್ ಕಂಪ್ರೆಶನ್ ವಿಧಾನವನ್ನು ಮ್ಯಾನಿಕಿನ್ ಸಹಾಯದಿಂದ ಕಲಿಸಲಾಯಿತು.

ಅಭಿಯಾನದಲ್ಲಿ ಸಾವಿರಕ್ಕಿಂತ ಹೆಚ್ಚು ನರ್ಸ್, ನಾಗರಿಕರು, ವಿದ್ಯಾರ್ಥಿಗಳು, ಶಿಕ್ಷಕರು ಸಕ್ರಿಯವಾಗಿ ಪಾಲ್ಗೊಂಡರು. ಐಎಂಎ ಶಿವಮೊಗ್ಗ ವೈದ್ಯರು ನಗರ ಮಟ್ಟದ ಕಾರ್ಯಚಟುವಟಿಕೆಯನ್ನು ಯಶಸ್ವಿಗೊಳಿಸಿದರು.

Shree Dodamma Temple ಅಕ್ಟೋಬರ್ 31. ಶಿವಮೊಗ್ಗದಲ್ಲಿನ ಶ್ರೀದೊಡ್ಡಮ್ಮ ದೇಗುಲದಲ್ಲಿ ದುರ್ಗಾ ಮಂತ್ರ ದೀಕ್ಷಾ ಕಾರ್ಯಕ್ರಮ

0

Shree Dodamma Temple ಕೆಎಚ್‌ಬಿ ಪ್ರೆಸ್‌ಕಾಲೋನಿಯ ಶ್ರೀ ದೊಡ್ಡಮ್ಮ ದೇವಾಲಯದಲ್ಲಿ ಅ.31ರಂದು ಬೆಳಗ್ಗೆ 5ಕ್ಕೆ ದುರ್ಗಾ ಮಂತ್ರ ದೀಕ್ಷೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

ದುರ್ಗಾದೇವಿಯ ಮಂತ್ರದೀಕ್ಷೆ ಪಡೆಯುವುದು ಪುಣ್ಯದ ಕಾರ್ಯ. ಮಕ್ಕಳು ವಿದ್ಯಾವಂತರಾಗಲು, ಕ್ಷೇಮವಾಗಿರಲು ಹಾಗೂ ದೊಡ್ಡವರು ಸಹ ಸುರಕ್ಷತೆಯಿಂದ ಇರಲು ದುರ್ಗೆಯ ರಕ್ಷಣೆ ಅನಿವಾರ್ಯ.

ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜೀ ಮಂತ್ರ ದೀಕ್ಷೆ ನೀಡಲಿದ್ದಾರೆ. 15-60 ವರ್ಷದೊಳಗಿನ 100 ಜನರಿಗೆ ಮಾತ್ರ ದೀಕ್ಷೆಗೆ ಅವಕಾಶ. ದೀಕ್ಷೆ ಪಡೆಯುವವರಿಗೆ ಬೆಳಗ್ಗೆ 8ಕ್ಕೆ ಉಪಾಹಾರ ವ್ಯವಸ್ಥೆ ಇರುತ್ತದೆ. ಹೆಸರು ನೋಂದಾಯಿಸಲು ಅ.25 ಕೊನೆಯ ದಿನ. ಹೆಸರು ನೋಂದಾಯಿಸಲು ಅನುರಾಧಾ ಸಿದ್ದಪ್ಪಾಜೀ ಮೊ: 98802 91968, ಕುಮಾರ್ ಮೊ: 88848 69515, ಸತೀಶ್ ಮೊ: 99453 11477, ಗಜೇಂದ್ರ ಮೊ: 9972161461 ಇಲ್ಲಿಗೆ ಸಂಪರ್ಕಿಸಬಹುದು.

Police Martyrs’ Day ಶಿವಮೊಗ್ಗದಲ್ಲಿ ಸಕಲ ಗೌರವಗಳೊಂದಿಗೆ ಪೊಲೀಸ್ ಹುತಾತ್ಮರ ದಿನಾಚರಣೆ

0

Police Martyrs’ Day ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ದಿನಾಂಕ:21-10-1959 ರಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಡಿ.ಎಸ್.ಪಿ. ರವರಾದ ಶ್ರೀ.ಕರಣ್ ಸಿಂಗ್ ನೇತೃತ್ವದ 20 ಜನರ ತಂಡ ಭಾರತ ಮತ್ತು ಚೀನಾ ದೇಶದ ಗಡಿ ಪ್ರದೇಶದ ಲಡಾಕ್ ನ ಹಾಟ್ ಸ್ಟಿಂಗ್ ಎಂಬ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವಾಗ ಚೀನಾ ದೇಶದ ಸೈನಿಕರು ಹಠಾತ್ತನೆ ಆಕ್ರಮಣ ಮಾಡಿ ಶ್ರೀ.ಕರಣ್ ಸಿಂಗ್ ಮತ್ತು ಇತರೆ 09 ಸಿಬ್ಬಂದಿಗಳನ್ನು ಹತ್ಯೆ ಮಾಡಿದ್ದು, ಹುತಾತ್ಮರ ದೇಹಗಳನ್ನು ದಿನಾಂಕ:28-11-1959 ರಂದು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, ಸಕಲ ಪೊಲೀಸ್ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಮಾಡಲಾಗಿರುತ್ತದೆ. ಈ ದಾರುಣ ಘಟನೆಯಲ್ಲಿ ಪ್ರಾಣ ತ್ಯಾಗ ಮಾಡಿದವರ ನೆನಪಿನಲ್ಲಿ ರಾಷ್ಟ್ರಾದ್ಯಾಂತ ಪ್ರತಿ ವರ್ಷ ಅಕ್ಟೋಬರ್ 21 ನೇ ತಾರೀಖಿನಂದು ಪೊಲೀಸ್ ಹುತಾತ್ಮ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿ ವರ್ಷದ 21ನೇ ಅಕ್ಟೊಬರ್ ನಂದು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಾಗ, ರಾಷ್ಟ್ರ ರಕ್ಷಣೆ ಮಾಡುವಾಗ ಮತ್ತು ಇತರೆ ಕರ್ತವ್ಯ ನಿರತ ಅವಧಿಯಲ್ಲಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿರವರನ್ನು ಗೌರವ ಪೂರ್ವಕವಾಗಿ ಸ್ಮರಿಸಲಾಗತ್ತಿದೆ.

ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಮಂಜುನಾಥ ನಾಯಕ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗರವರು ವಹಿಸಿದ್ದು, ಮುಖ್ಯ ಆಹ್ವಾನಿತರಾಗಿ ಹೇಮಂತ್ ಎನ್,ಐಎಎಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ರವರು ಉಪಸ್ಥಿತರಿದ್ದರು.

Police Martyrs’ Day ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಜಿ ಕೆ ಮಿಥುನ್ ಕುಮಾರ್ ಐಪಿಎಸ್ ರವರು ಮಾತನಾಡಿ, ಹುತಾತ್ಮ ಯೋಧರ ಸೇವೆಯನ್ನು ಸ್ಮರಿಸಿ,
ಸಮಾಜದ ರಕ್ಷಣಾ ಕರ್ತವ್ಯ ಪರಿಪಾಲನೆಯಲ್ಲಿ ದಿನಾಂಕ: 01-09-2024 ರಿಂದ 31-08-2025 ರ ಅವಧಿಯಲ್ಲಿ ಭಾರತ ದೇಶದಲ್ಲಿ ಒಟ್ಟು 191 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ, ಮೃತಪಟ್ಟಿರುತ್ತಾರೆ, ಇದರಲ್ಲಿ ಕರ್ನಾಟಕ ರಾಜ್ಯದ 08 ಪೊಲೀಸ್ ಅಧಿಕಾರಿ / ಸಿಬ್ಬಂದಿರವರು ಮೃತಪಟ್ಟಿದ್ದು ಇವರುಗಳ ಹೆಸರನ್ನು ವಾಚಿಸಿ, ಹುತಾತ್ಮರ ಸ್ತಂಭಕ್ಕೆ ಹೂ ಗುಚ್ಛವನ್ನು ಅರ್ಪಿಸುವ ಮೂಲಕ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೋಲಿಸ್ ಅಧೀಕ್ಷಕರು – 1 ಶಿವಮೊಗ್ಗ ಜಿಲ್ಲೆ, ಶ್ರೀ ರಮೇಶ್ ಕುಮಾರ್ ಹೆಚ್ಚುವರಿ ಪೋಲಿಸ್ ಅಧೀಕ್ಷಕರು – 2 ಶಿವಮೊಗ್ಗ ಜಿಲ್ಲೆ, ಶ್ರೀ ಯುವಕುಮಾರ್ ಎಸ್ ಕಮಾಂಡೆಂಟ್ 8ನೇ ಪಡೆ ಕೆ.ಎಸ್.ಆರ್.ಪಿ ಮಾಚೇನಹಳ್ಳಿ, ಶಿವಮೊಗ್ಗ, ಶ್ರೀ ಮಂಜುನಾಥ್ ಅಣಜಿ ಡೆಪ್ಯುಟಿ ಕಮಾಂಡೆಂಟ್, 2ನೇ ಪಡೆ ಕೆ.ಎಸ್.ಐ.ಎಸ್.ಎಫ್, ಶಿವಮೊಗ್ಗ, ಶ್ರೀ ಬೆನಕ ಪ್ರಸಾದ್ ಐಪಿಎಸ್, ಎ.ಎಸ್.ಪಿ, ಸಾಗರ ಉಪ ವಿಭಾಗ, ಶ್ರೀ ಬಾಬು ಆಂಜನಪ್ಪ ಪೋಲಿಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ, ಶ್ರೀ ಸಂಜೀವ್ ಕುಮಾರ್ ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ-ಬಿ ಉಪ ವಿಭಾಗ, ಶ್ರೀ ದಿಲೀಪ್ ಪೋಲಿಸ್ ಉಪಾಧೀಕ್ಷಕರು ಡಿಎಆರ್ ಶಿವಮೊಗ್ಗ, ಶ್ರೀ ಅರವಿಂದ್ ಕಲಗುಚ್ಚಿ ಪೋಲಿಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ, ಶ್ರೀ ಕೇಶವ್, ಪೋಲಿಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗ, ಶ್ರೀ ನಾಗರಾಜ್ ಪೋಲಿಸ್ ಉಪಾಧೀಕ್ಷಕರು ಭದ್ರಾವತಿ ಉಪವಿಭಾಗ, ಶ್ರೀ ಕೃಷ್ನಮೂರ್ತಿ ಪೋಲಿಸ್ ಉಪಾಧೀಕ್ಷಕರು ಶಿವಮೊಗ್ಗ-ಎ ಉಪ ವಿಭಾಗ, ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.