Agricultural Marketing Committee ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್ಕಾಮ್ಸ್) ನಿರ್ದೇಶಕರಾಗಿ ವೆಂಟಕಪುರದ ಎಂ.ಪಿ.ದಿನೇಶ್ ಪಟೇಲ್ ಹಾಗೂ ಜಿ.ನಾಗೇಶ್ ನಾಯ್ಕ್ ಸೇರಿದಂತೆ ಜಿಲ್ಲೆಯಲ್ಲಿ 15 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 15 ನಿರ್ದೇಶಕರ ಸ್ಥಾನಗಳಿದ್ದು, ಅದರಲ್ಲಿ ಶಿವಮೊಗ್ಗ ತಾಲೂಕಿನಿಂದ 6 ಜನರು ಆಯ್ಕೆಯಾಗಿದ್ದು, ಪರಿಶಿಷ್ಟ ವರ್ಗದಿಂದ ಜಿ.ನಾಗೇಶ್ನಾಯ್ಕ, ಸಾಮಾನ್ಯ ವರ್ಗದಿಂದ ಎಂ.ಪಿ.ದಿನೇಶ್ಪಟೇಲ್, ಎಸ್ಟಿ ಕ್ಷೇತ್ರದಿಂದ ಪರಶುರಾಮ್, ಸಾಮಾನ್ಯ ಕ್ಷೇತ್ರದಿಂದ ವಿಜಯಕುಮಾರ್ (ದನಿ) ಬಿಸಿಎಂ ಎನಿಂದ ಡಾ.ಶರತ್ ಮರಿಯಪ್ಪ, ಬಿಸಿಎಂ ಬಿನಿಂದ ಚಂದ್ರೇಗೌಡ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 15 ಜನರು ಮುಂದಿನ 5 ವರ್ಷದ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 15 ಕ್ಷೇತ್ರಕ್ಕೆ 20 ಜನರು ನಾಮಪತ್ರ ಸಲ್ಲಿಸಿದ್ದು, ಐವರು ನಾಮಪತ್ರ ವಾಪಕ್ ತೆಗೆದುಕೊಂಡಿದ್ದರಿಂದ ಉಳಿದವರು ಅವಿರೋಧವಾಗಿ ಆಯ್ಕೆಗೊಂಡಂತಾಗಿದೆ.
Agricultural Marketing Committee ಈ ಸಂದರ್ಭದಲ್ಲಿ ಮಾತನಾಡಿದ ಮೊದಲ ಬಾರಿ ಆಯ್ಕೆಯಾದ ಎಂ.ಪಿ.ದಿನೇಶ್ಪಟೇಲ್ ಎಲ್ಲರ ಪ್ರೀತಿ ವಿಶ್ವಾಸದಿಂದ ಮೊದಲ ಬಾರಿ ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿದ್ದೇನೆ. ಪ್ರಮಾಣಿಕವಾಗಿ ಸೇವೆ ಸಲ್ಲಿಸುವೆ, ಆಯ್ಕೆಗೆ ಸಹಕರಿಸಿದ ಎಂಎಡಿಬಿ ಅಧ್ಯಕ್ಷ ಆರ್.ಮಂಜುನಾಥ್ಗೌಡ, ಪಿಒ ಶಿವಕುಮಾರ್, ಪಿ.ಎಸ್.ಗಿರೀಶ್ರಾವ್ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.
Agricultural Marketing Committee ಶಿವಮೊಗ್ಗ ಹಾಪ್ ಕಾಮ್ಸ್ ನಿರ್ದೇಶಕರಾಗಿ ದಿನೇಶ್ ಪಟೇಲ್ ಆಯ್ಕೆ
Bharat Scouts and Guides ತಂತ್ರಜ್ಞಾನ ಅಗಾಧ ಬೆಳೆದಿದೆ. ಇದರೊಟ್ಟಿಗೆ ಸ್ಕೌಟ್ ಗೈಡ್ ಮಕ್ಕಳೂ ಸಹ ಬೆಳೆಯಬೇಕು- ಶಕುಂತಲಾ ಚಂದ್ರಶೇಖರ್
Bharat Scouts and Guides ಸ್ಕೌಟ್ ಗೈಡ್ ಚಳುವಳಿಗೆ ಸೇರುವುದರಿಂದ ಕೌಶಲ್ಯ ವೃದ್ಧಿಸುತ್ತದೆ ಎಂದು ಶಕುಂತಲಾ ಚಂದ್ರಶೇಖರ್ ಹೇಳಿದ್ದಾರೆ.
ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಶಿವಮೊಗ್ಗ ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಮತ್ತು ಮಲ್ನಾಡ್ ಓಪನ್ ಗ್ರೂಪ್ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಆಯೋಜಿಸಿದ್ದ ಜಂಬೂರೀ ಆನ್ ದಿ ಏರ್ ( ಜೋಟ ), ಜಂಬೂರೀ ಆನ್ ದಿ ಇಂಟರ್ನೆಟ್ ( ಜೋಟಿ ) ಕಾರ್ಯಕ್ರಮದಲ್ಲಿ ಭಾಗವಹಿಸಿ ಪದಾಧಿಕಾರಿಗಳು ಮತ್ತು ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮುಂದುವರೆದು ತಂತ್ರಜ್ಞಾನ ಅಗಾಧವಾಗಿ ಬೆಳೆದಿರುವ ಇವತ್ತಿನ ಕಾಲಮಾನದಲ್ಲಿ ಎಲ್ಲರೊಂದಿಗೆ ಸ್ಕೌಟ್ ಗೈಡ್ ಮಕ್ಕಳು ಸಹ ಬೆಳೆಯಬೇಕೆಂದು ಹೇಳಿದರು. ಮತ್ತು ಅದಕ್ಕೆ ಈ ಜೋಟ ಜೋಟಿ ಕಾರ್ಯಕ್ರಮ ಸಹಾಯವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಆಯುಕ್ತ ರೋವರ್ ಶ್ರೀ ಕೆ. ರವಿ ಮಾತನಾಡುತ್ತಾ ಸ್ಕೌಟ್ ಗೈಡ್ ಚಳುವಳಿಯ ವಿಶಿಷ್ಟ ಕಾರ್ಯಕ್ರಮ ಜೋಟ ಜೋಟಿ ಯಾಗಿದ್ದು, ಇದರ ಮೂಲಕ ವೈಜ್ಞಾನಿಕವಾಗಿಯೂ ಬೆಳೆಯಬಹುದಾಗಿದೆ ಎಂದು ಹೇಳಿದರು. ಈ ಚಳುವಳಿಗೆ ಸೇರಿಕೊಂಡರೆ ದೇಶಪ್ರೇಮ, ಸಾಮಾಜಿಕ ಬದ್ಧತೆ ಬೆಳೆಯುವುದಲ್ಲದೆ ಮುಂದಿನ ಜೀವನಕ್ಕೂ ಸಹಕಾರಿಯಾಗಲಿದೆ ಎಂದು ಹೇಳಿದರು. ಕೇಂದ್ರ ಸ್ಥಾನಿಕ ಆಯುಕ್ತರಾದ ಶ್ರೀ ಜಿ. ವಿಜಯ್ ಕುಮಾರ್ ಮಾತನಾಡುತ್ತ ಇಂತಹ ವಿಶಿಷ್ಟ ಕಾರ್ಯಕ್ರಮ ಆಯೋಜಿಸಿರುವ ಸರ್ವರಿಗೂ ಅಭಿನಂದಿಸಿದರು. Bharat Scouts and Guides ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಶ್ರೀ ಘನಶ್ಯಾಮ್ ಗಿರಿಮಾಜಿ ಸರ್ವರನ್ನು ಸ್ವಾಗತಿಸಿದರು. ಶ್ರೀ ರಾಜೇಶ್ ವಿ. ಅವಲಕ್ಕಿ, ಶಿವಮೊಗ್ಗ ಸ್ಥಳೀಯ ಸಂಸ್ಥೆ ಮತ್ತು ಶಿವಮೊಗ್ಗ ಆಮೇಚೂರ್ ರೇಡಿಯೋ ಕ್ಲಬ್ ಕಾರ್ಯದರ್ಶಿ ಪ್ರಸ್ತಾವಿಕವಾಗಿ ಮಾತನಾಡುತ್ತಾ ಹ್ಯಾಮ್ ರೇಡಿಯೋ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂಧರ್ಭದಲ್ಲಿ ಶಿಕಾರಿಪುರ ತಾಲೂಕಿನ ಸರ್ಕಾರಿ ಪದವೀಪೂರ್ವ ಕಾಲೇಜಿನಿಂದ ಆಗಮಿಸಿದ್ದ ರೋವರ್ ಸ್ಕೌಟ್ ಲೀಡರ್ ಶ್ರೀ ಸದಾಶಿವಯ್ಯ ಮತ್ತು ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು. ಸ್ಕೌಟ್ ಮಾಸ್ಟರ್ ಶ್ರೀ ಅಣ್ಣಪ್ಪ ಒಂಟಮಾಳಿಗಿ ಹಾಗೂ ಸಹ್ಯಾದ್ರಿ ಕಲಾ ಮತ್ತು ವಿಜ್ಞಾನ ಕಾಲೇಜು, ಮಲ್ನಾಡ್ ಓಪನ್ ಗ್ರೂಪಿನ ಸದಸ್ಯರು, ಸರ್ಕಾರಿ ಹಿರಿಯ ಪ್ರಥಮಿಕ ಶಾಲೆ, ಆಳದಹಳ್ಳಿ ಮತ್ತು ವಿವಿಧ ಶಾಲೆ, ಕಾಲೇಜಿನ, ಮುಕ್ತದಳದ ಸದಸ್ಯರು ಮತ್ತು ಪೋಷಕರು ಉಪಸ್ಥಿತರಿದ್ದರು. ಶ್ರೀ ಅಣ್ಣಪ್ಪ ಒಂಟಮಾಳಿಗಿ ಸರ್ವರಿಗೂ ವಂದಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಶ್ರೀ ಚಂದ್ರಶೇಖರಯ್ಯ, ಸಹ ಕಾರ್ಯದರ್ಶಿ ಶ್ರೀ ವೈ. ಆರ್. ವೀರೇಶಪ್ಪ ಉಪಸ್ಥಿತರಿದ್ದರು.
ಸ್ಕೈಪ್ ತಂತ್ರಶ ಮುಖಾಂತರ ಮಕ್ಕಳು ಇಂಡೋನ್ಎಷಿಯ, ಜಪಾನ್, ಮುಂತಾದ ದೇಶ ವಿದೇಶದ ಸ್ಕೌಟ್ ಗೈಡ್ ಮಕ್ಕಳೊಂದಿಗೆ ಸಂವಹನ ನಡೆಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಟ್ಟರು.
U.T. Khader Farid ಸ್ಪೀಕರ್ ಯು.ಟಿ.ಖಾದರ್ ನೇತೃತ್ವದ ತಂಡದಿಂದ ನಾರ್ವೆ ಸಂಸತ್ತಿಗೆ ಭೇಟಿ
U.T. Khader Farid ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರ ನೇತೃತ್ವದಲ್ಲಿ ನಿಯೋಗವೊಂದು ನಾರ್ವೆ ಪಾರ್ಲಿಮೆಂಟ್ಗೆ ಅಧಿಕೃತ ಭೇಟಿ ನೀಡಿತು. 1814ರಲ್ಲಿ ಸ್ಥಾಪಿತವಾದ ನಾರ್ವೆ ಸಂಸತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ ಸಂಸತ್ತುಗಳಲ್ಲಿ ಒಂದು ಹಾಗೂ ಅದೇ ವರ್ಷ ಅಂಗೀಕರಿಸಲಾದ ನಾರ್ವೆಯ ಸಂವಿಧಾನವು ಇಂದಿಗೂ ಶಾಶ್ವತ ಪ್ರಜಾಪ್ರಭುತ್ವದ ಮಾದರಿಯಾಗಿ ಉಳಿದಿದೆ. ಈ ಸಂದರ್ಭದಲ್ಲಿ ಅವರು ನಾರ್ವೆಯ ಮಾಜಿ ಸಚಿವರೂ ಹಾಗೂ ಮಾಜಿ ಸಂಸದರೂ ಆಗಿದ್ದ ಹಿಮಾಂಶು ಗುಲೇಟ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು.
ಭೇಟಿಯ ವೇಳೆ, ನಾರ್ವೆಯ ಇತಿಹಾಸ, ಸಂವಿಧಾನ, ಆಡಳಿತ ವ್ಯವಸ್ಥೆ ಹಾಗೂ ಜನಪರ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೆ, ಎರಡೂ ರಾಷ್ಟ್ರಗಳ ಸಂಸತ್ತಿನ ಕಾರ್ಯನಿರ್ವಹಣಾ ವಿಧಾನಗಳು, ಜನತಾಂತ್ರಿಕ ಪ್ರಕ್ರಿಯೆಗಳ ವಿನ್ಯಾಸ ಹಾಗೂ ಸಂಸದೀಯ ಅಧಿವೇಶನಗಳ ನಿರ್ವಹಣೆ ಕುರಿತಂತೆ ಪರಸ್ಪರ ಅಭಿಪ್ರಾಯ ವಿನಿಮಯವೂ ನಡೆಯಿತು. ಸಭಾಧ್ಯಕ್ಷರಾದ
ಖಾದರ್ ಫರೀದ್ ಅವರು, ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕಲ್ಯಾಣ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪ್ರಮುಖ ಯೋಜನೆಗಳನ್ನು ವಿವರಿಸಿದರು.
ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ನಾರ್ವೆಯ ಪ್ರಗತಿಶೀಲ ಜನತಾಂತ್ರಿಕ ಮಾದರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕರ್ನಾಟಕ ಮತ್ತು ನಾರ್ವೆ ದೇಶದ ನಡುವೆ ಶಿಕ್ಷಣ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಹಕಾರ ವೃದ್ಧಿಯ ಸಾಧ್ಯತೆಗಳ ಬಗ್ಗೆ ಚರ್ಚಿಸಿದರು.
U.T. Khader Farid ಈ ಸಂದರ್ಭದಲ್ಲಿ ಕರ್ನಾಟಕ ವಿಧಾನಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಹಾಗೂ ಸಭಾಧ್ಯಕ್ಷರ ಆಪ್ತ ಕಾರ್ಯದರ್ಶಿ ಮಹೇಶ್ ಕರ್ಜಗಿ ಉಪಸ್ಥಿತರಿದ್ದರು.
ಸೊರಬ ತಾಲ್ಲೂಕು ಕಛೇರಿ ಮುಂದೆ ಅರಣ್ಯ ಭೂಮಿ ಸಾಗುವಳಿದಾರರ ಪ್ರತಿಭಟನೆ
ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಲ್ಲಿನ ವಿಳಂಭ ಧೋರಣೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಮಾತನಾಡಿ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶವಿದ್ದರೂ ಅನುಷ್ಠಾನಗೊಂಡಿಲ್ಲ.
1979ರ ಏಪ್ರೀಲ್ 27ಕ್ಕಿಂತ ಹಿಂದೆ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯ್ದೆಯ ಅನ್ವಯ 1996ರಲ್ಲಿ 43 ಸಾವಿರ ಎಕರೆ ಭೂಮಿಯನ್ನು ಬಿಡುಗಡೆ ಮಾಡಿದೆ. ಆದರೆ, ತಾಲೂಕಿನಲ್ಲಿ 900 ರೈತರು ಅರ್ಜಿಗಳನ್ನು ಸಲ್ಲಿಸಿದ್ದರೂ, ರೈತರಿಗೆ ಕಚೇರಿಗೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ರೈತರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡುವಂತೆ ತಾಲೂಕು ಕಚೇರಿಗೆ ಕಳುಹಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ರೈತರಿಗೆ ಅನಾವಶ್ಯಕವಾಗಿ ತಹಶೀಲ್ದಾರರು ಕಾಲಹರಣ ಮಾಡಿರುವ ಬಗ್ಗೆ ಉಪವಿಭಾಗಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ಷೇತ್ರದ ಶಾಸಕರಾದ ಮಧು ಬಂಗಾರಪ್ಪ ಅವರು ರೈತರಿಗೆ ಹಕ್ಕು ಪತ್ರ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಸಿಸಿಎಫ್ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಸಚಿವರೊಂದಿಗೆ ಸಭೆಗಳನ್ನು ನಡೆಸಿ, ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶಿಸಿದ್ದಾರೆ.
ಆದರೂ ತಹಶೀಲ್ದಾರರು ಉದಾಸೀನತೆಯಿಂದ ವರ್ತಿಸುತ್ತಿದ್ದಾರೆ. ಇದರಿಂದ ಅರಣ್ಯ ಭೂಮಿಯ ಹಕ್ಕು ಮರೀಚಿಕೆಯಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಂತರ ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರಿಗೆ ಮನವಿ ಸಲ್ಲಿಸಿದ ರೈತರು, ಕೂಡಲೇ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿದರು.
ತಾಲೂಕು ಸಂಚಾಲಕ ಪರಶುರಾಮಪ್ಪ ಶಿಡ್ಡಿಹಳ್ಳಿ, ನಾಗರಾಜ, ವೈ.ಕೆ. ಮಧುಕರ, ಕೆ. ನಾಗರಾಜ, ಶಿವಮೂರ್ತಿ, ಫಕೀರಮ್ಮ, ಗಂಗಮಾಳಮ್ಮ, ಬಸವಣ್ಯಪ್ಪ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Klive Special Article ಪ್ರವಾಸಿಯ ಪುಟಗಳಿಂದ ತಮಿಳುನಾಡು, ಗಂಗೈಕೊಂಡ ಚೋಳಪುರಂ
ಬರಹ: ಡಾ.ಸುಧೀಂದ್ರ.
ಪ್ರಧಾನ ಸಂಪಾದಕ.
ಕೆ ಲೈವ್.ನ್ಯೂಸ್
Klive Special Article ಗಂಗೈಕೊಂಡ ಚೋಳಪುರಂ ತಮಿಳುನಾಡಿನಲ್ಲಿರುವ ಒಂದು ಐತಿಹಾಸಿಕ ಪಟ್ಟಣ ಮತ್ತು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿದೆ.
ಇದು 11ನೇ ಶತಮಾನದಲ್ಲಿ ಚೋಳ ರಾಜವಂಶದ ರಾಜಧಾನಿಯಾಗಿತ್ತು ಮತ್ತು ರಾಜೇಂದ್ರ ಚೋಳ I ಅವರು ಸ್ಥಾಪಿಸಿದರು. ಇಲ್ಲಿನ ಪ್ರಮುಖ ಆಕರ್ಷಣೆ ‘ಗಂಗೈಕೊಂಡ ಚೋಳಪುರಂ ದೇವಾಲಯ’ ಆಗಿದ್ದು, ಇದು ಶಿವನಿಗೆ ಸಮರ್ಪಿತವಾಗಿದೆ ಮತ್ತು ದ್ರಾವಿಡ ಶೈಲಿಯ ವಾಸ್ತುಶಿಲ್ಪಕ್ಕೆ ಅತ್ಯುತ್ತಮ ಉದಾಹರಣೆಯಾಗಿದೆ.
ತಂಜಾವೂರಿನ ಬೃಹದೀಶ್ವರ ದೇಗುಲದ ಪುಟ್ಟ ಮಾದರಿ ಎನ್ನಬಹುದು. ಆದರೆ ಬೃಹದೀಶ್ವರ ದೇಗುಲ ನೋಡುವ ಶ್ರಮ ಇಲ್ಲಿ ಬೇಕೇಬೇಕಾಗುತ್ತದೆ.
ಐತಿಹಾಸಿಕ ಮಹತ್ವ
ರಾಜಧಾನಿ: ರಾಜೇಂದ್ರ ಚೋಳ I ಅವರು ತಮ್ಮ ಗಂಗಾ ನದಿಯ ದಿಗ್ವಿಜಯದ ನಂತರ ಈ ನಗರವನ್ನು ಸ್ಥಾಪಿಸಿದರು. ಇದು ಸುಮಾರು 250 ವರ್ಷಗಳ ಕಾಲ ಚೋಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು.
ಸಾಮ್ರಾಜ್ಯದ ಕೇಂದ್ರ: ಈ ಪಟ್ಟಣವು ದಕ್ಷಿಣ ಭಾರತದ ರಾಜಕೀಯ, ವ್ಯಾಪಾರ ಮತ್ತು ಸಾಂಸ್ಕೃತಿಕ ಕೇಂದ್ರವಾಗಿತ್ತು.
ದೇವಾಲಯದ ವೈಶಿಷ್ಟ್ಯಗಳು
ಶಿವ ದೇವಾಲಯ: ಈ ದೇವಾಲಯವು ದಕ್ಷಿಣ ಭಾರತದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾಗಿದೆ. ಇದರ ಮುಖ್ಯ ದೇವರು ಶಿವ.
ದ್ರಾವಿಡ ಶೈಲಿ: ದೇವಾಲಯವು ದ್ರಾವಿಡ ವಾಸ್ತುಶಿಲ್ಪ ಶೈಲಿಗೆ ಒಂದು ಉತ್ತಮ ಉದಾಹರಣೆಯಾಗಿದೆ.
ಶಿಲ್ಪಕಲೆ: ದೇವಾಲಯದ ಹೊರಭಾಗದಲ್ಲಿ ಶಿವನ ವಿವಿಧ ರೂಪಗಳ ಅದ್ಭುತವಾದ ಶಿಲ್ಪಗಳನ್ನು ಕಾಣಬಹುದು.
ಸಿಂಹಕೇಣಿ: ದೇವಾಲಯದ ಪ್ರಮುಖ ವೈಶಿಷ್ಟ್ಯವೆಂದರೆ ಸಿಂಹದ ಬಾಯಿಯ ಮೂಲಕ ನಿರ್ಮಿಸಲಾದ ವೃತ್ತಾಕಾರದ ಬಾವಿ, ಇದನ್ನು ಸಿಂಹಕೇಣಿ ಎಂದು ಕರೆಯಲಾಗುತ್ತದೆ.
Klive Special Article ಶಿವಲಿಂಗ: ದೇವಾಲಯದ ಗರ್ಭಗುಡಿಯಲ್ಲಿ 13.5 ಅಡಿ ಎತ್ತರದ ಶಿವಲಿಂಗವಿದೆ.
ನಂದಿ: ದೇವಾಲಯದ ಎದುರು ಭಾಗದಲ್ಲಿ ದೊಡ್ಡ ನಂದಿಯ ವಿಗ್ರಹವಿದೆ.
ಪ್ರಸ್ತುತ ಸ್ಥಿತಿ
ಇದು ಈಗ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಗುರುತಿಸಲ್ಪಟ್ಟಿದೆ.
Klive Special Article ದಿನದ ಒಳ್ಳೆಯ ಮಾತು (ಬೆಳಕಿನ ಹಬ್ಬ ದೀಪಾವಳಿ)
Klive Special Article ದೀಪಾವಳಿ ಹಬ್ಬ ಬಹಳ ದೊಡ್ಡ ಸಂದೇಶವನ್ನೇ
ಕೊಡುತ್ತದೆ. ದೀಪಾವಳಿ ಎಂದರೆ ಕತ್ತಲನ್ನು ಸರಿಸಿ
ಬೆಳಕನ್ನು ಹರಿಸುವ ಹಬ್ಬ. ದುಷ್ಟ ಶಕ್ತಿಗಳನ್ನು ಸಂಹರಿಸಿ
ಒಳ್ಳೆಯದನ್ನು ತರುವ ಬೆಳಕಿನ ಹಬ್ಬ. ನರಕಾಸುರನೆಂಬ ಅಜ್ಞಾನವನ್ನು ಓಡಿಸಿ ನಮಗೆ
ಸುಜ್ಞಾನವೆಂಬ ಬೆಳಕನ್ನು ತಂದು ಕೊಡುವ ಹಬ್ಬ. ಹಿಂಸಾಚಾರ ಹೆಚ್ಚಾದಾಗಲೆಲ್ಲಾ ವಿಷ್ಣುವು ಒಂದೊಂದು ಅವತಾರವೆತ್ತಿ ಅದನ್ನು ಮೆಟ್ಟಿ ಹಾಕಿದ್ದಾನೆ. ರಾಕ್ಷಸರನ್ನು ಸಂಹಾರ ಮಾಡಿದ್ದಾನೆ. ಜಗತ್ತು ಕತ್ತಲಲ್ಲಿ ಇದ್ದಾಗಲೆಲ್ಲ ಬೆಳಕುನೀಡಿದ್ದಾನೆ. ಕತ್ತಲನ್ನು ಕಳೆದು ಬೆಳಕು ತರುವುದೇ ದೀಪಾವಳಿಯ ಉದ್ದೇಶ. ನರಕ ಚತುರ್ದಶಿ ಎಂದರೆ ವಿಷ್ಣುವು ನರಕಾಸುರನೆಂಬೊ ರಾಕ್ಷಸನನ್ನು ಸಂಹರಿಸಿದ ದಿನ. ತ್ರಯೋದಶಿಯಂದು ನೀರು ತುಂಬುವ ಹಬ್ಬ. ಮಾರನೆಯ ದಿನ ನರಕತುರ್ದಶಿ . ಇಂದು ಅಮಾವಾಸ್ಯೆ.
ಬುಧವಾರದ ದಿನ ಬಲಿ ಪಾಡ್ಯಮಿ ಹಬ್ಬ. ಈ ದೀಪಾವಳಿ ಹಬ್ಬದಲ್ಲಿ ಧನ, ಧಾನ್ಯ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ. ಹಾಗಾಗಿ ಈ ಭೂಮಿಯಲ್ಲಿ ಸಂತರು, ಯತಿಗಳು, ಶರಣರು ಮತ್ತು ಹರಿ ದಾಸರುಗಳು ಧರ್ಮದ ರಕ್ಷಣೆ ಮತ್ತು ಮನುಕುಲದ ಉದ್ಧಾರಕ್ಕಾಗಿ ಅವತಾರ ಮಾಡಿದ್ದಾರೆ.
Klive Special Article ಹೆಚ್ಚಿನ ಜನರಲ್ಲಿ ಸತ್ಯಪಾಲನೆ ಧರ್ಮವನ್ನು ಬಿಟ್ಟು ಅಧರ್ಮಾಚರಣೆಯಿಂದ ಈ ಕಲಿಯುಗದಲ್ಲಿ ಅರಾಜಕತೆ ಎದ್ದು ಕಾಣುತ್ತಿದೆ. ಕಾಲ ಕಾಲಕ್ಕೆ ಮಳೆಬೆಳೆ
ಯಾಗುತ್ತಿಲ್ಲ, ರೋಗರುಜಿನಾದಿಗಳು ಹೆಚ್ಚುತ್ತಲೇ ಇವೆ. ಭಗವಂತನು ಭಕ್ತಿಗೆ ಒಲಿದೇ ಒಲಿಯುತ್ತಾನೆ. ಭಗವಂತನಲ್ಲಿ ನಿಶ್ಚಲವಾದ ಭಕ್ತಿಯನ್ನು ಮಾಡಿದರೆ ರೋಗ, ರುಜಿನ, ಕಷ್ಟ ಕಾರ್ಪಣ್ಯಗಳಿಂದ ರಕ್ಷಣೆ ಪಡೆಯಬಹುದು. ಆದ್ದರಿಂದ ಈ ದೀಪಾವಳಿ ಹಬ್ಬದಂದು ನಾವೂ ಸಹ ಅಜ್ಞಾನವೆಂಬೋ ಅಂಧಕಾರವನ್ನು ಓಡಿಸಿ ಸುಜ್ಞಾನವೆಂಬೋ ಜ್ಞಾನದ ಬೆಳಕನ್ನು ಅನುಗ್ರಹಿಸುವಂತೆ ಭಗವಂತನಲ್ಲಿ ಪ್ರಾರ್ಥಿಸೋಣ. ಹಾಗೆಯೇ ಎಲ್ಲರಿಗೂ ಆಯುರಾರೋಗ್ಯ ಐಶ್ವರ್ಯ,ಸಕಲ ಸನ್ಮಂಗಳವನ್ನು ಮತ್ತು ಜ್ಞಾನ
ಸಂಪತ್ತನ್ನು ಕರುಣಿಸುವಂತೆ ಪ್ರಾರ್ಥಿಸೋಣ.
CM Siddharamaiah ಸರ್ಕಾರ ಆರ್.ಎಸ್.ಎಸ್. ನಿಷೇಧ ಮಾಡಿಲ್ಲ- ಸಿದ್ಧರಾಮಯ್ಯ ಸ್ಪಷ್ಟನೆ
CM Siddharamaiah ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ – ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.
ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ?
2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೇಶ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ.
CM Siddharamaiah ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಬೀರುವ ಪರಿಣಾಮವನ್ನು ಯೋಚಿಸಿ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ.
ಎಂದು ಪುತ್ತೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದ್ದಾರೆ.
ಆಯನೂರು ಗೇಟ್ ಬಳಿ ಸರಣಿ ಅಪಘಾತ, ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಶಿವಮೊಗ್ಗದಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಮೂವರಿಗೆ ಗಾಯಗಳಾಗಿದ್ದು ಮೂವರಲ್ಲಿ ಒಬ್ಬರಿಗೆ ಹೆಡ್ ಇಂಜುರಿಯಾಗಿದ್ದು ಭೀಕರ ಅಪಘಾತ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಘಟನೆ ನಡೆದಿದೆ. ಘಟನೆಯಲ್ಲಿ ಗಂಭೀರಗೊಂಡ ಬೈಕ್ ಸವಾರ ಫುಡ್ ಡೆಲಿವರಿ ಬಾಯ್ ಯಡವಟ್ಟಿನಿಂದ ಆದ ಸರಣಿ ಅಪಘಾತ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಮೂರು ಬೈಕ್ ಎರಡು ಕಾರುಗಳು ಜಖಂಗೊಂಡಿದೆ.
ಸಿಗ್ನಲ್ ಬ್ರೇಕ್ ಮಾಡಿದ ಫುಡ್ ಡೆಲಿವರಿ ಬಾಯ್ ಗೆ ಶರಾವತಿ ನಗರದ ಕಡೆಯಿಂದ ಬರುತ್ತಿದ್ದ ಎರಿಟಿಗಾ ಕಾರು ಫುಡ್ ಡೆಲಿವರಿ ಬಾಯ್ ಉಳಿಸಲು ಹೋಗಿ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ಮತ್ತೊಂದೆಡೆ ರಸ್ತೆಯ ಸಿಗ್ನಲ್ ನಲ್ಲಿ ನಿಂತಿದ್ದ ವಾಹನ ಸವಾರರ ಮೇಲೆ ಹರಿದಿದೆ. ವಾಹನಗಳ ಮೇಲೆ ಹರಿದ ಪರಿಣಾಮ ಇಬ್ಬರಿಗೆ ಗಾಯವಾಗಿದೆ, ಒಬ್ಬನಿಗೆ ಗಂಭೀರವಾಗಿ ತಲೆಗೆ ಪೆಟ್ಟಾಗಿದೆ
ಬೈಕ್ ನಲ್ಲಿದ್ದ ಕಿರಣ್, ಅರುಣ್ ಪ್ರವೀಣ ಗಾಯಾಳುಗಳು ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಮತ್ತು ಕಾರನ್ನ ಠಾಣೆಗೆ ರವಾನಿಸಲಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Madhu Bangarappa ಶಿಕ್ಷಣ ಇಲಾಖೆಯ ಯೋಜನೆಗಳ ಉದ್ಘಾಟನೆಗೆ ಸಿ.ಎಂ. ಶೀಘ್ರ ಶಿವಮೊಗ್ಗಕ್ಕೆ : ಎಸ್.ಮಧು ಬಂಗಾರಪ್ಪ
Madhu Bangarappa ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಣ ಇಲಾಖೆಯು ರೂಪಿಸಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ವಿವಿಧ ಯೋಜನೆಗಳ ಉದ್ಘಾಟನೆಗೆ ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ಮಾಹೆಯಲ್ಲಿ ಆಗಮಿಸಲಿದ್ದಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಅವರು ತಮ್ಮ ಕಚೇರಿ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು. 3000 ಕೋಟಿ ರೂ.ಗಳ ಅಂದಾಜು ವೆಚ್ಚದ ಕರ್ನಾಟಕ ಪಬ್ಲಿಕ್ ಶಾಲೆ ಮಹತ್ವದ ಯೋಜನೆಗೆ ಶಿವಮೊಗ್ಗದಲ್ಲಿಯೇ ಚಾಲನೆ ದೊರೆಯಲಿರುವುದು ವಿಶೇಷವಾಗಿದೆ. ಈ ಹಿಂದೆ ಯುವನಿಧಿ ಯೋಜನೆಯನ್ನೂ ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಉದ್ಘಾಟಿಸಿದ್ದರು ಎಂದವರು ನುಡಿದರು.
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಶಿಕ್ಷಕರ ಸಂಖ್ಯೆ ಅತ್ಯಲ್ಪ. ಆದರೆ, ಅಧಿಕವಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಸರ್ಕಾರವು ದಿಟ್ಟ ಹೆಜ್ಜೆ ಇರಿಸಿದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸುವ ಸಂಬಂಧ ಖಾಲಿ ಇರುವ 13,000 ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಅರ್ಹ ಪದವೀಧರರಿಗೆ ಡಿಸೆಂಬರ್ 07 ರಂದು ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಲು ಇಲಾಖೆಯು ಅಕ್ಟೋಬರ್ 23 ರಂದು ಅಧಿಸೂಚನೆ ಪ್ರಕಟಿಸಲಿದ್ದು, ಪರೀಕ್ಷೆಯಲ್ಲಿ ಹಾಜರಾಗಲಿಚ್ಚಿಸುವ ಅರ್ಹ ಪದವೀಧರರು ನವೆಂಬರ್ 09 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಅಲ್ಲದೇ ಪ್ರಸ್ತುತ ಶಿಕ್ಷಕರ ಕೊರತೆಯನ್ನು ನೀಗಿಸಲು ಅತಿಥಿ ಶಿಕ್ಷಕರನ್ನು ಸಕಾಲದಲ್ಲಿ ನೇಮಿಸಿಕೊಂಡು ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ಅಡಚಣೆಯಾಗದಂತೆ ಕ್ರಮ ವಹಿಸಲಾಗಿದೆ. ಹೊಸ ಶಿಕ್ಷಕರ ನೇಮಕಾತಿಯಿಂದಾಗಿ ಆಡಳಿತಾರೂಢ ಸರ್ಕಾರದ ಅವಧಿಯಲ್ಲಿ ಸುಮಾರು 26000 ಶಿಕ್ಷಕರನ್ನು ನೇಮಕಾತಿಗೊಳಿಸಿದಂತಾಗಲಿದೆ ಎಂದ ಅವರು, ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರ್ಥಿಗಳಿಗೆ ಉತ್ತೀರ್ಣಗೊಳಿಸಲು ನಿಗಧಿಪಡಿಸಿದ ಅಂಕವನ್ನು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ಶೇ.33ಕ್ಕೆ ಮರುನಿಗಧಿಪಡಿಸಲಾಗಿದೆ. ಅದಕ್ಕಾಗಿ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದರು.
Madhu Bangarappa ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಅಮೂಲಾಗ್ರ ಬದಲಾವಣೆ ಮತ್ತು ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಆರಂಭಿಸಲು ಉದ್ದೇಶಿಸಲಾಗಿದ್ದ ಕರ್ನಾಟಕ ಪಬ್ಲಿಕ್ ಶಾಲೆಗಳ ಸಂಖ್ಯೆಯನ್ನು 500 ರಿಂದ 800ಕ್ಕೆ ಹೆಚ್ಚಿಸಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 200ಶಾಲೆಗಳನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಇದರಿಂದಾಗಿ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಶಿಕ್ಷಣ ಕ್ಷೇತ್ರದ ಪ್ರಗತಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಿದೆ ಎಂದವರು ನುಡಿದರು.
ಈ ಯೋಜನೆಯ ಸಮರ್ಪಕ ಅನುಷ್ಠಾನದಿಂದಾಗಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೌಲಭ್ಯ, ಒಂದೇ ಶಾಲಾ ಆವರಣದಲ್ಲಿ 14 ವರ್ಷದವರೆಗೆ ಎಲ್ಲಾ ರೀತಿಯ ಶಿಕ್ಷಣ, 01 ರಿಂದ 05 ರವರೆಗೆ ಕನ್ನಡ ಕಡ್ಡಾಯ ಹಾಗೂ ದ್ವಿಭಾಷಾ ಕಲಿಕೆಗೆ ಅವಕಾಶ, ಮಕ್ಕಳ ಭಾಷಾ ಕಲಿಕೆಯನ್ನಾಧರಿಸಿ, 6ನೇ ತರಗತಿಯ ನಂತರ ಮಾಧ್ಯಮ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಈ ಎಲ್ಲಾ ಶಾಲೆಗಳನ್ನು ಸ್ಮಾರ್ಟ್ ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇಂತಹ ಶಾಲೆಗಳಲ್ಲಿ ಏಕಕಾಲಕ್ಕೆ ಒಂದು ಕೇಂದ್ರದಿಂದ ವಿಶೇಷ ತರಗತಿ, ಉಪನ್ಯಾಸಗಳನ್ನು ನೀಡಬಹುದಾಗಿದೆ. ಅಂತಹ ಶಾಲೆಗಳ ಉಸ್ತುವಾರಿಗಾಗಿ ಆಯಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ರಚಿಸಿ ನಿರ್ವಹಣೆಯ ಹೊಣೆಗಾರಿಕೆ ನೀಡಲಾಗುವುದು ಎಂದರು.
ಇಷ್ಟೇ ಅಲ್ಲದೇ ʼಮೊಬೈಲ್ ಬಿಡಿ, ಪುಸ್ತಕ ಹಿಡಿʼ ಸೇರಿದಂತೆ ಇನ್ನಷ್ಟು ವಿಶೇಷ ಯೋಜನೆಗಳನ್ನು ರೂಪಿಸಲಾಗಿದ್ದು, ಮಕ್ಕಳ ದಿನಾಚರಣೆ ಸಂದರ್ಭದಲ್ಲಿ ಅವುಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ವಿಶೇಷವಾಗಿ ಶಿವಮೊಗ್ಗ ಜಿಲ್ಲೆಯ 19ಕೆ.ಪಿ.ಎಸ್. ಶಾಲೆಗಳ ಹಂಚಿಕೆಯಾಗಿದ್ದು, ಅದರ ಪ್ರಮಾಣ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಂಭವವಿದೆ ಎಂದವರು ನುಡಿದರು.
ಪ್ರಸ್ತುತ ಆರಂಭಿಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಿಂದಾಗಿ ಸರ್ಕಾರದಿಂದ ಜನರ ಹಿತಕ್ಕಾಗಿ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವಂತೆ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಜನರ ಜೀವನ ಗುಣಮಟ್ಟವನ್ನು, ಆರ್ಥಿಕ ಅಭಿವೃದ್ಧಿಯ ಶ್ರೇಯಾಂಕವನ್ನು ಗುರುತಿಸಲು ಉಪಕಾರಿಯಾಗಲಿದೆ. ಸದರಿ ಸಮೀಕ್ಷೆಗೆ ಈವರೆಗೂ ಮಾಹಿತಿ ನೀಡದವರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ ಅವರು, ಸಮೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಶೇ.91.29ರಷ್ಟು ಪ್ರಗತಿ ಸಾಧಿಸಲಾಗಿದೆ. ಸದರಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕರನ್ನು ಮುಕ್ತಗೊಳಿಸಿ, ಉಳಿಕೆ ಕಾರ್ಯಕ್ಕೆ ಶಿಕ್ಷಣೇತರ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು.
ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ, ಮನೋರಂಜನೆಗೆ ಪೂರಕವಾಗಿದ್ದ ಚಿನ್ನಿದಾಂಡು, ಲಗೋರಿ, ಬುಗುರಿ, ನಶಿಸುತ್ತಿರುವ ಮತ್ತಿತರ ಗ್ರಾಮೀಣ ಕ್ರೀಡೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ. ಅದಕ್ಕಾಗಿ ಮಕ್ಕಳ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಅವಕಾಶ ನೀಡಬೇಕಾದ ಅಗತ್ಯವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಆರ್.ಪ್ರಸನ್ನಕುಮಾರ್, ರಮೇಶ್ಶೆಟ್ಟಿ, ಕಲಗೋಡು ರತ್ನಾಕರ್, ಆಯನೂರು ಮಂಜುನಾಥ್, ಹಾಲಪ್ಪ, ವೈ.ಹೆಚ್.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
B.Y. Raghavendra “ಕಾಯಕ ಸೇತು” ಉಚಿತ ಜಾಬ್ ಪೋರ್ಟಲ್ & ಶಾಸಕ ಡಾ.ಧನಂಜಯ ಸರ್ಜಿ ಸಾಧನೆ ‘ಹೊತ್ತಿಗೆ’ ಲೋಕಾರ್ಪಣೆ
B.Y. Raghavendra ಶಿವಮೊಗ್ಗ, ವಿನೋಬನಗರ ಪೊಲೀಸ್ ಚೌಕಿಯ ಮಹಾನಗರಪಾಲಿಕೆ ವಾಣಿಜ್ಯ ಸಂಕೀರ್ಣದಲ್ಲಿ ವಿಧಾನ ಪರಿಷತ್ ಶಾಸಕರ ಕಚೇರಿಯಲ್ಲಿ ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ.ವೈ ರಾಘವೇಂದ್ರ ಅವರು ಜಿಲ್ಲೆಯ ಪದವೀಧರ ಯುವಕ ಯುವತಿಯರಿಗೆ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸಿಕೊಡಬೇಕು ಎಂಬ ಆಶಯದೊಂದಿಗೆ ನಿರ್ಮಾಣಮಾಡಿರುವ “ಕಾಯಕ ಸೇತು” ಜಾಬ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದರು.
ವಿಧಾನ ಪರಿಷತ್ ಶಾಸಕರಾಗಿ ಡಾ.ಧನಂಜಯ ಸರ್ಜಿ ಅವರು ಕ್ಷೇತ್ರದಲ್ಲಿ ಸಾಧಿಸಿದ ಕಾರ್ಯಗಳ ಕಿರುಹೊತ್ತಿಗೆಯನ್ನು ಬಿಡುಗಡೆಗೊಳಿಸಿಲಾಯಿತು.
ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ “ಕಾಯಕ ಸೇತು” ಎಂಬ ಉಚಿತ ಜಾಬ್ ಪೋರ್ಟಲ್ ನಿರ್ಮಿಸಿ ಉದ್ಯೋಗ ಕಲ್ಪಿಸಿಕೊಡುವ ಮಹತ್ತರವಾದ ಕಾರ್ಯವನ್ನು ವಿಧಾನ ಪರಿಷತ್ ಶಾಸಕರ ಜನಸಂಪರ್ಕ ಕಚೇರಿಯಿಂದ ಮಾಡಲಾಗುತ್ತಿದ್ದು, ಸ್ಥಳೀಯ ಪ್ರತಿಭೆಗಳಿಗೆ ಸ್ಥಳೀಯವಾಗಿ ಉದ್ಯೋಗ ದೊರಕಿಸುವ ಉದ್ದೇಶದಿಂದ ಈ ಪೋರ್ಟಲ್ ನಿರ್ಮಾಣ ಮಾಡಲಾಗಿದೆ.
ವಿಶೇಷವಾದ ಈ ಪ್ರಯತ್ನವು ಉದ್ಯೋಗ ನೀಡುವವರಿಗೂ ಉದ್ಯೋಗ ಬಯಸುವವರಿಗೂ ಉಚಿತವಾಗಿರಲಿದೆ.
B.Y. Raghavendra ಈ ಕಾರ್ಯಕ್ರಮದಲ್ಲಿ ಪಟ್ಟಾಭಿ ಜೀ ಅವರು, ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಅವರು, ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕರಾದ ಎಸ್.ದತ್ತಾತ್ರಿ ಅವರು, ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್ ಅವರು, ಸ್ಥಳೀಯ ಬಿಜೆಪಿ ಮುಖಂಡರು, ಮಹಾಶಕ್ತಿಕೇಂದ್ರದ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
