Saturday, February 14, 2026
Saturday, February 14, 2026
Home Blog Page 129

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ಅಧಿಕಾರ ಸ್ವೀಕಾರ

0

ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ಅವರು ನಿಗಮದ ಪ್ರಧಾನ ಕಛೇರಿಯಲ್ಲಿಅಧಿಕಾರ ಸ್ವೀಕರಿಸಿದರು.

ಕರ್ನಾಟಕ ರಾಜ್ಯ ಬೀಜ ನಿಗಮವು ಸರ್ಕಾರಿ ಅಂಗ ಸಂಸ್ಥೆಯಾಗಿದ್ದು, ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತಕ್ಕೆ ನೂತನ ಅಧ್ಯಕ್ಷರಾಗಿ ಎಂ.ಆಂಜನಪ್ಪ ರವರನ್ನು ನೇಮಿಸಿ ಸರ್ಕಾರವು 2025 ನೇ ಅಕ್ಟೋಬರ್ 16 ರಂದು ಆದೇಶ ಹೊರಡಿಸಿರುತ್ತದೆ.

ಶ್ರೀಯುತರು ಅಧಿಕಾರ ಸ್ವೀಕಾರ ಸ್ವೀಕರಿಸಿದ ಸಮಯದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅನುಪ್.ಕೆ.ಜಿ. ಹಾಗೂ ನಿಗಮದ ಇನ್ನಿತರೆ ಹಿರಿಯ ಅಧಿಕಾರಿ ವರ್ಗ ಸೇರಿದಂತೆ ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೇಶವರೆಡ್ಡಿ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ್ ಅವರು ಉಪಸ್ಥಿತರಿದ್ದರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

B.Y.Raghavendra ಆರ್ ಎಸ್ ಎಸ್ ನಿರ್ಬಂಧ, ಕಾಂಗ್ರೆಸ್ ಸರ್ಕಾರದ ಅಧಃಪತನ- ಸಂಸದ ರಾಘವೇಂದ್ರ

0

B.Y.Raghavendra ಕಳೆದ ಒಂದು ವಾರದಿಂದ ಆರ್ ಎಸ್ ಎಸ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ‌‌. ಆರ್ ಎಸ್ ಎಸ್ ನಿರ್ಬಂಧ ಹೇರುವ ಕೆಲಸ ಮಾಡುತ್ತಿದೆ. ಹಿಂದೆ ಇದನ್ನು ಜಗದೀಶ್ ಶೆಟ್ಟರ್ ರವರು ಮಾಡಿದ್ರು ಅಂತ ಸಿಎಂ ರವರು ಹೇಳಿದ್ದಾರೆಂಮ ಚಿತ್ತಾಪುರದಲ್ಲಿ ಅನುಮತಿಗೆ ತಿರುಗಾಡಿಸಲಾಗುತ್ತಿದೆ. ಆರ್ ಎಸ್ ಎಸ್ ನ ಆಸ್ತಿ ಪರಿಶೀಲನೆ ಮಾಡಿಸುವ ಕೆಲಸ ಮಾಡಲಾಗುತ್ತಿದೆ‌ .
ಇದು ಕಾಂಗ್ರೆಸ್ ನ ಅಧಃ ಪತನಕ್ಕೆ ಕಾರಣವಾಗುತ್ತದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಪ್ರಿಯಾಂಕ ಖರ್ಗೆ ತಮ್ಮ ಸ್ಥಾನ ಉಳಿಸಿಕೊಳ್ಳಲು, ಹರಿಪ್ರಸಾದ್ ಮಂತ್ರಿಸ್ಥಾನ ಪಡೆಯಲು ಹೈ ಕಮಾಂಡ್ ಮೆಚ್ಚುಗೆ ಪಡೆಯಲು ಹೀಗೆ ಮಾತನಾಡುತ್ತಿದ್ದಾರೆ.
ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬೆಂಕಿ ಹಾಕಿದವರ ಪ್ರಕರಣವನ್ನು ಸಚಿವ ಸಂಪುಟದಲ್ಲಿ ರದ್ದು ಮಾಡುತ್ತಾರೆ. ಆರ್ ಎಸ್ ಎಸ್ ಗೆ ಬಂದಂತಹವರಿಗೆ ಅಮಾನತು ಮಾಡುವ ಹಾಗೆ ಆರ್ ಎಸ್ ಎಸ್ ದಂಡ ಹಿಡಿದವರನ್ನು ಹೆದರಿಸಲು ಹೊರಟಿದ್ದಾರೆ
ಆರ್ ಎಸ್ ಎಸ್ ಕಾರ್ಯಕರ್ತರು ತಮ್ಮ ಮನೆಯ ಅನ್ನ ತಿಂದು ದೇಶದ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

B.Y.Raghavendra ಇವರಿಗೆ ರಸ್ತೆ ಗುಂಡಿ ಮುಚ್ಚಲು ಆಗುತ್ತಿಲ್ಲ. ಖಾಸಗಿಯವರು ಗುಂಡಿ ಮುಚ್ಚುತ್ತೇವೆ ಎಂದ್ರೆ ಮಂತ್ರಿಗಳು ಸ್ವಾಗತ ಎನ್ನುತ್ತಾರೆ ಎಂದು ಸಂಸದ ರಾಘವೇಂದ್ರ ರಾಜ್ಯ ಸರ್ಕಾರದ ಮೇಲೆ ಟೀಕಾ ಪ್ರಹಾರ ಮಾಡಿ ಮಾತನಾಡಿದರು.

B.Y.Raghavendra ಧನ್ವಂತರಿಯು ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯದ ದೇವತೆ- ಬಿ.ವೈ.ರಾಘವೇಂದ್ರ

0

B.Y.Raghavendra ಶಿವಮೊಗ್ಗದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ನಗರದ ಪ್ರತಿಷ್ಠಿತ ಯೋಗ ಶಿಕ್ಷಣ ಸಮಿತಿ(ರಿ.) ಆಶ್ರಯದಲ್ಲಿ ಹಮ್ಮಿಕೊಂಡಿದ್ದ “ಧನ್ವಂತರಿ ಜಯಂತಿ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಭಾಗವಹಿಸಿದ್ದರು .

ಇಂದು ಆಯುರ್ವೇದದ ದೇವರಾದ ಶ್ರೀ ಧನ್ವಂತರಿ ಜನ್ಮದಿನವಾಗಿದೆ. ಈ ಜಯಂತಿಯು ಹಿಂದೂ ಧರ್ಮದ ಮಹತ್ವದ ಆಚರಣೆಯಾಗಿದೆ. ಶ್ರೀ ಧನ್ವಂತರಿಯು ಆಯುರ್ವೇದದ ಸ್ಥಾಪಕರಾಗಿದ್ದು ನಮ್ಮೆಲ್ಲರ ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯದ ದೇವರಾಗಿದ್ದಾರೆ ಎಂಬುದು ನಮ್ಮೆಲ್ಲರ ನಂಬಿಕೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

B.Y.Raghavendra ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಚನ್ನಬಸಪ್ಪ ಅವರು, ಗಣ್ಯರಾದ ಶ್ರೀ ರಂಗನಾಥ್ ಅವರು, ಶ್ರೀ ಸಂಜಯ್ ಅವರು, ಡಾ.ಕೃಷ್ಣ ಎಸ್.ಭಟ್ ಅವರು, ಶ್ರೀಮತಿ ಅಂಬಿಕಾ ಅವರು, ಶ್ರೀಮತಿ ವಿಮಲಾ ಅವರು ಉಪಸ್ಥಿತರಿದ್ದರು.

Rotary Club Shimoga ಪ್ಲಾಸ್ಟಿಕ್ ಹೆಚ್ಚಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು: ಪ್ರೊ. ಚಂದ್ರಶೇಖರ್

0

Rotary Club Shimoga ಪ್ಲಾಸ್ಟಿಕ್ ಹೆಚ್ಚಾದ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದ್ದು, ಪ್ರತಿಯೊಬ್ಬರೂ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಅಗತ್ಯ ಕೆಲಸಗಳಿಗೆ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಪ್ರೊ. ಚಂದ್ರಶೇಖರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಮತ್ತು ಇನ್ನರ್‌ವ್ಹೀಲ್ ಶಿವಮೊಗ್ಗ ಉತ್ತರದ ವತಿಯಿಂದ ವಿನೋಬನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಆಯೋಜಿಸಿದ್ದ ಪ್ಲಾಸ್ಟಿಕ್ ಕವರ್ ತ್ಯಜಿಸಿ, ಬಟ್ಟೆ ಬ್ಯಾಗ್ ಬಳಸಿ ಅಭಿಯಾನದಲ್ಲಿ ಮಾತನಾಡಿದರು.
ಈಗ ಎಲ್ಲರಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ ರೋಗಕ್ಕೆ ನಾವು ಬಳಸುವ ಪ್ಲಾಸ್ಟಿಕ್ ಮೂಲ ಕಾರಣ. ಬಿಸಿ ಆಹಾರ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಕವರ್‌ನಲ್ಲಿ ಹಾಕಬೇಡಿ, ನಾವು ಬೇಡದ ಆಹಾರ ತುಂಬಿ ಎಸೆದ ಪ್ಲಾಸ್ಟಿಕ್ ಕವರ್‌ಗಳನ್ನು ಅರಿವಿಲ್ಲದೆಯೇ ತಿನ್ನುವ ಹಸುಗಳು, ಎಮ್ಮೆ, ಕತ್ತೆ, ಕುದುರೆ ಮತ್ತು ಇತರ ಪ್ರಾಣಿಗಳ ಹೊಟ್ಟೆ ಸೇರಿ ಅವುಗಳ ಪ್ರಾಣಕ್ಕೆ ಸಂಚಕಾರ ತರುತ್ತದೆ. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಎಸೆಯುವ ಪ್ಲಾಸ್ಟಿಕ್ ಕವರ್‌ಗಳು ಜಲಮೂಲಗಳನ್ನು ಸೇರಿ ಜಲಚರಗಳಿಗೂ ಹಾನಿಕಾರಕವಾಗಿದೆ. ನಾವು ಈಗಲಾದರೂ ಎಚ್ಚತ್ತುಕೊಂಡು ಪರಿಸರ ರಕ್ಷಿಸಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ಅಭಿಯಾನವನ್ನು ವರ್ಷಪೂರ್ತಿ ಹಮ್ಮಿಕೊಳ್ಳಲಾಗುವುದು. ಸಮಾಜಮುಖಿ ಕಾರ್ಯಗಳಲ್ಲಿ ನಿರಂತರ ತೊಡಗಿಸಿಕೊಳ್ಳಲಾಗುವುದು ಎಂದರು.
Rotary Club Shimoga ಅಭಿಯಾನದಲ್ಲಿ ರೋಟರಿ ಹಾಗೂ ಇನ್ನರ್‌ವ್ಹೀಲ್ ಲೋಗೋ ಇರುವ 500 ಬಟ್ಟೆ ಬ್ಯಾಗ್‌ಗಳನ್ನು ಪ್ರಥಮ ಹಂತದಲ್ಲಿ ವಿತರಿಸಲಾಯಿತು. ಪ್ಲಾಸ್ಟಿಕ್ ಕವರ್ ಬಳಸಬೇಡಿ, ಬಟ್ಟೆ ಬ್ಯಾಗ್ ಬಳಸಿ ಎಂದು ಜಾಗೃತಿ ಮೂಡಿಸಲಾಯಿತು.
ಇನ್ನರ್‌ವ್ಹೀಲ್ ಶಿವಮೊಗ್ಗ ಉತ್ತರ ಅಧ್ಯಕ್ಷೆ ಶಾರದಾ ಬಸವರಾಜ್ ಮಾತನಾಡಿ, ಸಾಮಾಜಿಕ ಕಳಕಳಿ ಕಾರ್ಯಕ್ಕೆ ಕೈಜೋಡಿಸುತ್ತೇವೆ ಎಂದರು. ಅಭಿಯಾನದಲ್ಲಿ ಶಿವಕುಮಾರ್, ಸರ್ಜಾ ಜಗದೀಶ್, ಶ್ರೀಧರ್, ರಮೇಶ್, ನಾಗರಾಜ್, ದತ್ತಾತ್ರಿ, ಸುಂದರ್, ಶರವಣ, ಜಿ.ವಿಜಯ ಕುಮಾರ್, ಭಾರತಿ, ವಾರಿಜಾ ಜಗದೀಶ್, ಸುಜಾತ, ಸುನೀತಾ, ಕಾವ್ಯ, ಕೋಮಲ, ಉಷಾ, ಬಿಂದು, ಸುಮ, ಪ್ರಜ್ಞಾ ಇತರರಿದ್ದರು.

Shri Gangadharendra Saraswati Mahaswami ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ ಇದರ 2025ರ ಕಾರ್ಯಕ್ರಮ

0

Shri Gangadharendra Saraswati Mahaswami ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ ಇದರ 2025ರ ಕಾರ್ಯಕ್ರಮವು ಅ.25ರಂದು ಮಧ್ಯಾಹ್ನ 3 ಗಂಟೆಗೆ ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉದ್ಘಾಟನಾ ಸಮಾರಂಭವು ನಡೆಯಲಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರಾದ ಜಗದ್ಗುರು ಶ್ರೀಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ತಿಳಿಸಿದರು.
ಅವರು ರವೀಂದ್ರನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಮತ್ತು ಸ್ವರ್ಣರಶ್ಮೀ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ರಾಜ್ಯಮಟ್ಟದ ಈ ಅಭಿಯಾನವು ನಡೆಯುತ್ತಿದ್ದು, ಭಗವದ್ಗೀತೆ ಅಭಿಯಾನದ ಉದ್ಘಾಟನೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ವ್ಯಕ್ತಿತ್ವ ವಿಕಸನ ನೈತಿಕತೆಯ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಭಾವೈಕ್ಯತೆಯನ್ನು ಸಾಧಿಸುವುದೇ ಈ ಭಗವದ್ಗೀತಾ ಅಭಿಯಾನದ ಮೂಲ ಉದ್ದೇಶ ಈ ಅಭಿಯಾನವು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆಯುತ್ತಿದ್ದು, ಸುಶ್ರಾವ್ಯ ಧ್ವನಿಯಲ್ಲಿ ಭಗವದ್ಗೀತೆಯ 11ನೇ ಅಧ್ಯಾಯದ ಶ್ಲೋಕಗಳನ್ನು ಶಾಲೆಗಳಲ್ಲಿ, ದೇವಸ್ಥಾನಗಳಲ್ಲಿ ಹಾಗೂ ವಿವಿಧ ಶ್ಲೋಕ ಕೇಂದ್ರಗಳಲ್ಲಿ ನಡೆಸಿಕೊಡಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯ 157 ಸ್ಥಳಗಳಲ್ಲಿ, ರಾಜ್ಯದ ಇತರ 337 ಸ್ಥಳಗಳಲ್ಲಿ ಏಕಕಾಲದಲ್ಲಿ ಉದ್ಘಾಟನಾ ಸಮಾರಂಭವು ನಡೆಯಲಿದೆ. ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ಅ.25ರಂದು ಮಧ್ಯಾಹ್ನ 3 ಗಂಟೆಗೆ ಅಭಿಯಾನದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸ್ವರ್ಣವಲ್ಲಿ ಮಹಾಸಂಸ್ಥಾನದ ಜಗದ್ಗುರು ಶ್ರೀಶ್ರೀಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ಪ್ರಸನ್ನನಾಥ ಸ್ವಾಮಿಗಳು, ಶ್ರೀ ಬಸವ ಕೇಂದ್ರದ ಡಾ.ಬಸವಮರುಳಸಿದ್ಧ ಸ್ವಾಮಿಗಳ ದಿವ್ಯ ಉಪಸ್ಥಿತಿ ಇರಲಿದೆ. ಸಂಸದ ಬಿ.ವೈ. ರಾಘವೇಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಗೂ ಭಗವದ್ಗೀತಾ ಅಭಿಯಾನದ ಗೌರವಾಧ್ಯಕ್ಷರಾದ ಕೆ.ಎಸ್. ಈಶ್ವರಪ್ಪ, ಅಧ್ಯಕ್ಷತೆ ವಹಿಸುವರು. ಸಂಸ್ಕೃತ ವಿದ್ವಾಂಸ ಹಾಗೂ ವೇದಾಂತ ಚಿಂತಕರಾದ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರು, ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಭಗವದ್ಗೀತಾ ಅಭಿಯಾನ ಸಮಿತಿಯ ಅಧ್ಯಕ್ಷರಾದ ಶಾಸಕ ಡಿ.ಎಸ್. ಅರುಣ್ ಉಪಸ್ಥಿತರಿರುವರು ಎಂದು ತಿಳಿಸಿದರು.
Shri Gangadharendra Saraswati Mahaswami ರಾಜ್ಯದ ಧಾರಾವಾಡದಲ್ಲಿ-13, ಬೆಳಗಾವಿ-೨೫, ಉತ್ತರಕನ್ನಡ-೨೧, ಹಾವೇರಿ-೧೮, ದಾವಣಗೆರೆ-೦೮, ಚಿತ್ರದುರ್ಗ-೧೪, ತುಮಕೂರು-೦೯, ಮಂಡ್ಯ-೦೮, ಹಾಸನ-೦೬, ಮಂಗಳೂರು-೦೯, ಶಿವಮೊಗ್ಗ-೨೦, ಉಡುಪಿ-೧೨, ಮೈಸೂರು-೦೭, ಚಾಮರಾಜ ನಗರ-೦೫, ವಿಜಯನಗರ-೪, ಕೋಲಾರ-೪, ರಾಮನಗರ-೨, ಚಿಕ್ಕಬಳ್ಳಾಪುರ-೭, ಬೆಂಗಳೂರು ಗ್ರಾಮಾಂತರ-೧೨, ಕೊಡಗು-೪, ಚಿಕ್ಕಮಗಳೂರು-೬, ಬೆಂಗಳೂರು-೮, ಬೀದರ್-೫, ಕಲ್ಬುರ್ಗಿ-೮, ವಿಜಯಪುರ-೧೨, ಬಾಗಲಕೋಟೆ-೭, ರಾಯಚೂರು-೪, ಬಳ್ಳಾರಿ-೨೨, ಕೊಪ್ಪಳ-೫, ಯಾದಗಿರಿ-೧೮, ಗದಗ್-೧೪ ಕೇಂದ್ರಗಳಲ್ಲಿ ಈಗಾಗಲೇ ಭಗವದ್ಗೀತಾ ಅಭಿಯಾನ ಕಲಿಕಾ ಕೇಂದ್ರ ಆರಂಭವಾಗಿದೆ. ಭಗವದ್ಗೀತೆಯ ೧೧ನೇ ಅಧ್ಯಾಯ ಕಲಿಸಿಕೊಡಲು ಪ್ರಶಿಕ್ಷಕರಿಗೆ ತರಬೇತಿ ಕೊಡಲಾಗಿದೆ.
ನ.೧೮ರಂದು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಎಂಬ ನೂತನ ವಿಚಾರ ಸಂಕಿರಣ ನಡೆಯಲಿದೆ. ಮನಶಾಸ್ತç, ಕ್ರಿಮಿನಾಲಜಿ, ಭಗವದ್ಗೀತೆಯ ಪ್ರಾಚೀನ ಪದ್ಧತಿಯ ಯೋಗಪದ್ಧತಿ, ಮೊದಲಾದ ವಿಷಯಗಳ ಬಗ್ಗೆ ಇಡೀ ದಿನ ಪ್ರಬಂಧ ಮಂಡನೆಯಾಗಲಿದೆ. ವಿಚಾರ ಸಂಕಿರಣವನ್ನು ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಹೆಚ್. ಬಿಲ್ಲಪ್ಪ, ಬೆಕ್ಕಿನಕಲ್ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ, ಮಹಾಸ್ವಾಮಿಗಳು, ವಿ.ವಿ. ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಉದ್ಘಾಟಿಸುವರು. ವಿಶೇಷ ಉಪನ್ಯಾಸಕರಾಗಿ ಡಾ.ಕೆ.ಆರ್. ಶ್ರೀಧರ್, ಡಾ.ರಾಮಚಂದ್ರ ಕೋಟೆಮನೆ, ವಿಕ್ರಂ ಫಡ್ಕೆ, ರಾಮಕೃಷ್ಣ ಮುದ್ದೆಪಾಲು, ಆಗಮಿಸಲಿದ್ದಾರೆ ಎಂದರು.
ನ.30ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆ ಸಮಾರಂಭ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಗೌರವಾಧ್ಯಕ್ಷ ಕೆ.ಎಸ್. ಈಶ್ವರಪ್ಪ, ಕಾರ್ಯಾಧ್ಯಕ್ಷ ಅಶೋಕ್ ಜಿ. ಭಟ್, ಪ್ರಮುಖರಾದ ಲಕ್ಷ್ಮೀನಾರಾಯಣಸ್ವಾಮಿ, ಪಿ.ಪಿ. ಹೆಗಡೆ, ಟಿ.ಆರ್. ಅಶ್ವತ್ಥನಾರಾಯಣಶೆಟ್ಟಿ, ಟಿ.ಜೆ. ಲಕ್ಷ್ಮೀನಾರಾಯಣಸ್ವಾಮಿ, ಡಾ.ಬಾಲಕೃಷ್ಣ ಹೆಗಡೆ, ಮಂಜುನಾಥ್ ಶರ್ಮ ಮೊದಲಾದವರಿದ್ದರು.

DC Shivamogga ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

0

DC Shivamogga ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 35,38 ಮತ್ತು 38/ಎ ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.19 ರಿಂದ ಅ.25ರವರೆಗೆ ವಿವಿಧ ದಿನಗಳಂದು ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.

ಎಲ್‌ಸಿ 35- ಲಕ್ಷ್ಮೀಪುರ ರಸ್ತೆ ಅ. 19ರ ಬೆ.8 ರಿಂದ ಅ.20 ರ ಸಂಜೆ 6ರವರೆಗೆ ಬಿ.ಹೆಚ್.ರಸ್ತೆ ಮುಖಾಂತರ ಕಡದಕಟ್ಟೆ-ಹೆಬ್ಬಂಡಿ ರಸ್ತೆ ಸಂಪರ್ಕ-ಲಕ್ಷ್ಮೀಪುರ ರಸ್ತೆ ಮಾರ್ಗ.

ಎಲ್‌ಸಿ 38- ನವುಲೆ ಬಸವಾಪುರ ರಸ್ತೆ .-ಅ.22ರ ಬೆ.8 ರಿಂದ ಅ.23 ರ ಸಂಜೆ 6 ರವರೆಗೆ ಎಲ್.ಸಿ.ನಂ.35ರ ಮೂಲಕ ಮಜ್ಜಿಗೇನಹಳ್ಳಿ-ನವುಲೆ ಬಸವಾಪುರ ಸಂಪರ್ಕ ರಸ್ತೆ ಮಾರ್ಗ.

ಎಲ್‌ಸಿ 38/ಎ-ಹೊನ್ನವಿಲೆ ರಸ್ತೆ -ಅ.34 ರ ಬೆ. 8 ರಿಂದ ಅ 25ರ ಸಂಜೆ 6 ರವರೆಗೆ ಎಲ್ ಸಿ 38 ರ ಮೂಲಕ ನವುಲೆ ಬಸವಾಪುರ ರಸ್ತೆ – ಹೊನ್ನವಿಲೆ ರಸ್ತೆ ಮಾರ್ಗ.

DC Shivamogga ಸಾರ್ವಜನಿಕರು/ ವಾಹನ ಸವಾರರು ಈ ಬದಲಿ ಮಾರ್ಗಗಳಲ್ಲಿ ಅಯಾ ದಿನಾಂಕಗಳಂದು ಮಾತ್ರ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

Shimoga District Kannada and Culture Department “ಕಲಾಪ್ರತಿಭೋತ್ಸವ” ಕ್ಕೆ ಅರ್ಜಿ ಆಹ್ವಾನ

0

Shimoga District Kannada and Culture Department ಶಿವಮೊಗ್ಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2025-26 ನೇ ಸಾಲಿನ ನವೆಂಬರ್‌ನಲ್ಲಿ “ಕಲಾಪ್ರತಿಭೋತ್ಸವ” ಆಯೋಜಿಸಿದ್ದು, ವಿವಿಧ ಕಲಾಪ್ರಕಾರದ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಲಾಪ್ರಕಾರದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಬಾಲಪ್ರತಿಭೆಗೆ 8 ರಿಂದ 13 ವರ್ಷ, ಕಿಶೋರ ಪ್ರತಿಭೆಗೆ 14 ರಿಂದ 18 ವರ್ಷ, ಯುವ ಪ್ರತಿಭೆಗೆ 19 ರಿಂದ 30 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದ್ದು, ವಯಸ್ಸಿನ ದಾಖಲೆಗಾಗಿ ಶಾಲೆ/ ಕಾಲೇಜಿನಿಂದ ದೃಢೀಕರಿಸಿದ ಪತ್ರ ಹಾಗೂ ವಿದ್ಯಾರ್ಥಿಗಳಲ್ಲದಿದ್ದಲ್ಲಿ ನಗರಸಭೆ/ ಪಂಚಾಯಿತಿಯಿAದ ದೃಢೀಕರಣ ಪತ್ರ ಪಡದು ಸಲ್ಲಿಸಬೇಕು.

Shimoga District Kannada and Culture Department ಒಬ್ಬರು ಒಂದೇ ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ಕೈ ಬರಹದ ಅರ್ಜಿಯ ಮೂಲಕ ತಾವು ಭಾಗವಹಿಸುವ ಸ್ಪರ್ಧೆಯ ವಿವರದೊಂದಿಗೆ ವಯಸ್ಸಿನ ದಾಖಲಾತಿಯನ್ನು ಸೇರಿಸಿ ಅ.31 ರೊಳಗೆ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ರಂಗಮAದಿರ ಇವರಿಗೆ ಸಲ್ಲಿಸಬೇಕೆಂದು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಬೆಳೆಗಳಿಗೆ ರೋಗ ಭಾದೆ, ರೈತರು ನಿರ್ವಹಣಾ ಕ್ರಮವಹಿಸಿ

0

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕೂರಿಗೆ ಮತ್ತು ನಾಟಿ ಮಾಡಿದ ಭತ್ತದ ಬೆಳೆಯು 45 ರಿಂದ 75 ದಿವಸಗಳವರೆಗಿನ ಅವಧಿಯ ಬೆಳೆ ಇದೆ. ಆದರ ಇತ್ತೀಚಿನ ದಿನಗಳಲ್ಲಿ ಬೀಳುತ್ತಿರುವ ತುಂತುರು ಮಳೆ ಹಾಗೂ ತಾಪಮಾನದಿಂದ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆ ಉಂಟಾಗಿ ಅಲ್ಲಲ್ಲಿ ಕೀಟ ಮತ್ತು ರೋಗ ಭಾದೆಗಳನ್ನ ಕಂಡುಬರುತ್ತಿದ್ದು, ಸರಿಯಾಗಿ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಕ್ರಮದ ಮಾಹಿತಿಯನ್ನು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೆಶಕರು ರೈತರಿಗೆ ನೀಡಿದ್ದಾರೆ
ಎಲೆ ಸುರುಳಿ ಹುಳು /ಕೊಳವೆ ಹುಳು: – ಈ ಹುಳುಗಳು ಮಡಚಿ ಕೊಳವೆ ಕೋಶದಲ್ಲಿ ಎಲೆಯನ್ನು ತಿನ್ನುತ್ತವೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ ಹಾಗೂ ಬದುಗಳನ್ನು ಸ್ವಚ್ಛಗೊಳಿಸುವುದು. ಕ್ವಿನಾಲ್ ಫಾಸ್ 2 ಮಿಲೀ ಅಥವಾ ಇಂಡಾಕ್ಸಿ ಕಾರ್ಬ್ 14.5 ಎಸ್‌ಸಿ 0.5 ಮಿಲಿ ಪ್ರತಿ ಲೀ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು.
ಕಾಂಡಕೊರೆಯುವ ಹುಳು:- ಸುಳಿ ಒಣಗುವುದು ಮತ್ತು ಬಿಳಿ ತೆನೆಯಾಗಿ ಕಾಳು ಜೊಳ್ಳಾಗುವುದರಲ್ಲಿ ಈ ಹುಳುಗಳು ಕಂಡು ಬರಲಿದ್ದು, ಕ್ಲೋರೋಪೈರಿಪಾಸ್ 2 ಮಿಲಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು.
ಕಂದುಜಿಗಿ ಹುಳು:- ಈ ಹುಳುಗಳು ಭತ್ತದ ಕಾಂಡದ ಬುಡದಲ್ಲಿ ಗುಂಪಾಗಿ ರಸಹೀರುವುದರಿಂದ ಅಲ್ಲಲ್ಲಿ ಸಸಿಗಳು ಮೊದಲು ಹಳದಿ ಬಣ್ಣಕ್ಕೆ ತಿರುಗಿ, ನಂತರ ಒಣಗಿ ಹೋಗಿ ವೃತ್ತಾಕಾರದಲ್ಲಿ ಬೆಳೆ ಸುಟ್ಟಂತೆ ಕಾಣಲಿದೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ ಗದ್ದೆಯಲ್ಲಿ ನೀರನ್ನು ಬಸಿದು ಪ್ರತಿ 10 ಅಡಿಗೆ ಪೂರ್ವ ಪಶ್ಚಿಮಾಭಿಮುಖವಾಗಿ ಗಾಳಿ ಆಡುವಂತೆ ಪಾತಿ ಮಾಡುವುದು ಹಾಗೂ ಕ್ಲೋರೋಪೈರಿಪಾಸ್/ಪೋಸಲನ್ 2 ಮಿಲಿ ಅಥವಾ ಇಮಿಡಾ ಕ್ಲೋಪ್ರಿಡ್ 0.5 ಮಿಲಿ ಪ್ರತಿ ಲೀಟರ್‌ಗೆ ಬೆರೆಸಿ ಬುಡಕ್ಕೆ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು.
ಬೆಂಕಿರೋಗ:- ಈ ರೋಗದಲ್ಲಿ ಎಲೆ ಮತ್ತು ಕಾಂಡದ ಮೇಲೆ ಕದಿರಿನ ಆಕಾರದ ಚುಕ್ಕೆ ಕಂಡು ಬರುತ್ತದೆ. ಈ ಚುಕ್ಕೆಗಳ ಅಂಚು ಕಂದು ಹಾಗೂ ಮಧ್ಯ ಭಾಗವು ಬೂದಿಬಣ್ಣದಿಂದ ಕೂಡಿರಲಿದ್ದು, ಕೊನೆಗೆ ಬೆಳೆ ಬೆಂಕಿಯಿAದ ಸುಟ್ಟಂತೆ ಕಾಣುತ್ತದೆ. ಟ್ರೈಸೈಕ್ಲೋಕೋಲ್ 0.6 ಗ್ರಾಂ, ಕಿಟಾಜಿನ್ 1 ಮಿಲೀ ಅಥವಾ ಕಾರ್ಬನ್ ಡೈಜಿಮ್ 1 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಬೆಳೆಗೆ ಸಿಂಪಡಿಸುವ ಮೂಲಕ ರೋಗವನ್ನು ಹತೋಟಿಗೆ ತರಬಹುದು.
ಎಲೆ ಕವಚದ ಮಚ್ಚೆ ರೋಗ:- ಈ ರೋಗದಲ್ಲಿ ಎಲೆ ಹೊದಿಕೆ ಮೇಲೆ ಅಂಡಾಕಾರದ ಚುಕ್ಕೆಗಳು ಕಂಡುಬಂದು ಬೂದಿ ಮಿಶ್ರಿತ ಬಿಳಿ ಬಣ್ಣದಿಂದ ಕೂಡಿರುತ್ತದೆ ಹಾಗೂ ಕಂದು ಬಣ್ಣದ ಗುಂಗುರದಿAದ ಅವೃತವಾಗಿರುತ್ತದೆ. ಶಿಲೀಂಧ್ರವು ನೀರಿನ ಮೇಲ್ಭಾಗದ ಗಿಡದ ಎಲ್ಲಾ ಭಾಗಗಳಿಗೆ ಹಾನಿಯುಂಟು ಮಾಡುತ್ತದೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ, ಕಾರ್ಬನ್ ಡೈಜಿಮ್ 50 ಡಬ್ಲ್ಯೂ.ಪಿ 1 ಗ್ರಾಂ, ಮ್ಯಾಂಕೋಜಿಬ್ 75 ಡಬ್ಲ್ಯೂ.ಪಿ 2 ಗ್ರಾಂ ಅಥವಾ ಹೆಕ್ಸಾಕೋನಾಜೋಲ್ ಶೇ.5 ಎಸ್‌ಸಿ 2 ಮಿಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸುವ ಮೂಲಕ ರೋಗವನ್ನು ಹತೋಟಿಗೆ ತರಬಹುದು.
ದುಂಡಾಣು ಎಲೆ ಅಂಗಮಾರಿ ರೋಗ:- ಈ ರೋಗದಲ್ಲಿ ಎಲೆಗಳ ನರಗಳ ಮಧ್ಯದಲ್ಲಿ ಹಳದಿ ಅಥವಾ ಕಿತ್ತಳೆ ಬಣ್ಣದ ಉದ್ದನೆಯ ಮಚ್ಚೆಗಳು ಕಾಣುತ್ತವೆ. ಸ್ಟ್ರೇಪ್ಟೋಸೈಕ್ಲಿನ್ 0.6 ಗ್ರಾಂ ಪ್ರತಿ 16 ಲೀ ನೀರಿಗೆ ಜೊತೆಗೆ ತಾಮ್ರದ ಆಕ್ಸಿಕ್ಲೋರೈಡ್ 1 ಗ್ರಾಂ ಪ್ರತಿ ಲೀಟರ್ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸುವ ಮೂಲಕ ರೋಗವನ್ನು ಹತೋಟಿ ತರಬಹುದು.
ಹೆಚ್ಚಿನ ಮಾಹಿತಿಗಾಗಿ ರೈತರ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸುವAತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Karnataka State Child Labour Eradication Project Society ಪಟಾಕಿ ಮಾರಾಟ : 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

0

Karnataka State Child Labour Eradication Project Society ಶಿವಮೊಗ್ಗ ಜಿಲ್ಲೆಯ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರನ್ವಯ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಪ್ಪಿದಲ್ಲಿ ಕಾಯ್ದೆಯಡಿ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ.

District Legal Services Authority ಅಂಗನವಾಡಿಯ ಕಾರ್ಯಕರ್ತರು ತಾಯಿ ಸ್ವರೂಪರು: ಸಂತೋಷ್.ಎಂ.ಎಸ್

0

District Legal Services Authority ಅಂಗನವಾಡಿಯ ಕಾರ್ಯಕರ್ತರು ತಾಯಿ ಸ್ವರೂಪರಾಗಿದ್ದು, ಅಂಗನವಾಡಿಯಲ್ಲಿ ಮಗುವಿನ ಪಾಲನೆ ಮತ್ತು ಪೋಷಣೆ ಮಾಡುವ ಮೂಲಕ ಮಾತೃ ವಾತ್ಸಲ್ಯ ನೀಡುತ್ತಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ.ಎಸ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಡಿಆರ್‌ಎ ಸಭಾ ಭವನದಲ್ಲಿ ಆಯೋಜಿಸಿದ್ದ “ ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ ” ಮತ್ತು “ಬೇಟಿ ಬಚಾವೋ ಬೇಟಿ ಪಡಾವೋ” ಕುರಿತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು
ಸಮಾಜದಲ್ಲಿ ಶಾಂತಿ ಮತ್ತು ಅಭಿವೃದ್ದಿ ಕಾಪಾಡಲು ಈ ಇಲಾಖೆ ಬಹಳಷ್ಟು ಶ್ರಮಿಸುತ್ತಿದ್ದು, ಇದ್ದಕ್ಕಾಗಿ ಅಂಗನವಾಡಿ ಕಾರ್ಯಕರ್ತರು ಸೈನಿಕರಂತೆ ಸೇವೆ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯನ್ನು ಭವಿಷ್ಯದಲ್ಲಿ ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಇನ್ನಷ್ಟು ಕಾರ್ಯವನ್ನು ಮಾಡಬೇಕಿದೆ ಎಂದು ತಿಳಿಸಿದರು.
District Legal Services Authority ಮಗುವಿಗೆ ಶೋಷಣೆ ಆಗಬಾರದು ಹಾಗೂ ಪಾಲನೆಯಲ್ಲಿ ಯಾವುದೇ ಕೊರತೆ ಉಂಟಾಗಬಾರದೆAಬ ಉದ್ದೇಶದಿಂದ ಈ ಇಲಾಖೆ ಸ್ಥಾಪನೆ ಮಾಡಲಾಗಿದ್ದು, ಪ್ರತಿದಿನವೂ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ. ಈ ಮೂಲಕ ಮಗುವಿನ ಲಾಲನೆ, ಪಾಲನೆ ಮಾಡುತ್ತಾ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತರು ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳು ತಡೆಗಟ್ಟುವಲ್ಲಿ, ಆ ಬಗ್ಗೆ ಜಾಗೃತಿ ಮೂಡಿಸಲು ಕೂಡ ಬಹುಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದರು.
ಮಗುವನ್ನು ಮಾತ್ರವಲ್ಲದೆ, ಅಂಗನವಾಡಿಯು ಶುಚಿತ್ವವಾಗಿ ಇರಬೇಕು ಹಾಗೂ ಅದರ ಸುತ್ತಮುತ್ತಲಿನ ವಾತಾವರಣದಲ್ಲಿ ಶುಚಿತ್ವ ಕಾಪಾಡಬೇಕು. ಅದಕ್ಕೆ ಸಮಾಜದಲ್ಲಿನ ನಾಗರೀಕರು ಹಾಗೂ ಸ್ಥಳೀಯ ಸಂಸ್ಥೆಗಳು ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಆಗ ಮಾತ್ರ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ನಮ್ಮ ದೇಶದಲ್ಲಿ ಭ್ರೂ ಹತ್ಯೆ, ವರದಕ್ಷಿಣೆ ಕಿರಕುಳ, ಕೌಟುಂಬಿಕ ದೌರ್ಜನ್ಯ ಎಂಬ ಅನಿಷ್ಟ ಪದ್ದತಿಗಳು ಒಳಗೊಂಡಿದ್ದವು. ಆದರೆ ಸಂವಿಧಾನ ಇವೆಲ್ಲವನ್ನು ಅಪರಾಧ ಪ್ರಕರಣಗಳೆಂದು ಪರಿಗಣಿಸಿ ಅದನ್ನು ಅನುಸರಿಸುವವರಿಗೆ ಶಿಕ್ಷೆ ನೀಡಲು ಕಾಯ್ದೆ ತಂದಿದೆ. ಇದರ ಜೊತೆಗೆ ಹೆಣ್ಣಿಗೂ ಆಸ್ತಿಯಲ್ಲಿ ಹಕ್ಕಿದೆ ಎಂಬ ಕಾನೂನನ್ನು ಜಾರಿ ಮಾಡಿದೆ ಎಂದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಮಲ್ಲಪ್ಪ ಓ. ಮಾತನಾಡಿ, ಇದು ಸರ್ಕಾರದ ಮಹಾತ್ವಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಬೆನ್ನೆಲುಬು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರಾಗಿದ್ದಾರೆ. ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸೇವೆಯನ್ನು ಸಲ್ಲಿಸಿರುವ ಇವರು ಆರೋಗ್ಯದ ಹೋರಾಟಗಾರರು, ಜೀವ ರಕ್ಷಕರು ಹಾಗೂ ಪ್ರತಿ ಸಮುದಾಯಗಳ ಆಶಾಕಿರಣರಾಗಿದ್ದಾರೆ ಎಂದರು.
ಜಿಲ್ಲೆಯಾಗುವ ತಾಯಿ ಹಾಗೂ ಮಕ್ಕಳ ಮರಣವನ್ನು ತಡೆಗಟ್ಟುವಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಕೆಲಸ ಮಾಡಬೇಕು. ರಾಜ್ಯದಲ್ಲಿ 59 ತಾಯಂದಿರ ಮರಣ ಪ್ರಕರಣ ದಾಖಲಾಗಿದ್ದು, ಇದನ್ನು ತಡೆಗಟ್ಟುವ ಜವಾಬ್ದಾರಿ ನಮ್ಮೆಲ್ಲರದ್ದೂ ಆಗಿದೆ. ಆ ನಿಟ್ಟಿನಲ್ಲೇ ವೈದ್ಯಕೀಯ ತುರ್ತು ಸೇವೆ, ಚಿಕಿತ್ಸೆ ಸಕಲರಣಗಳನ್ನು ಈ ಯೋಜನೆಯಿಂದ ಒದಗಿಸಲಾಗುತ್ತಿದೆ. ಅದರಂತೆ ಆಸ್ಪತ್ರೆಯಲ್ಲಿ ಹೆರಿಗೆ ಆಗಬೇಕು. ಪ್ರಸವದಿಂದ ಹೆಚ್ಚು ರಕ್ತಸ್ರಾವ ಉಂಟಾಗುತ್ತಿದ್ದರೆ ಅದರ ಬಗ್ಗೆ ಜಾಗೃತಿ ಮೂಡಿಸಬೇಕು. ಗಂಡಾAತರ ಗರ್ಭಿಣಿಯರನ್ನು ಗುರುತಿಸಿ ಅವರನ್ನು ಹಾರೈಕೆ ಮಾಡಬೇಕು. ಗಭಿರ್ಣಿಯರನ್ನು ಇಲಾಖೆ ಅಡಿಯಲ್ಲಿ ನೋಂದಾಯಿಸಬೇಕು. ಅವರುಗಳ ತಪಾಸಣೆ, ಚಿಕಿತ್ಸೆ ಕುರಿತು ಪರಿಶೀಲನೆ ಮಾಡಬೇಕು ಎಂದರು.
ರಾಜ್ಯದಲ್ಲಿ ಶೇ.47 ರಷ್ಟು ತಾಯಂದಿರು ಹಾಗೂ ಗರ್ಭಿಣಿಯರು ರಕ್ತಹೀನತೆಯಿಂದ ಬಳಲುತ್ತಿದ್ದು, ಗರ್ಭಿಣಿಯರ ದೇಹದಲ್ಲಿ ಹೆಚ್.ಬಿ. ಮಟ್ಟ 11 ಕ್ಕಿಂತ ಹೆಚ್ಚು ಹೊಂದಿರಬೇಕು. ರಾಜ್ಯದಲ್ಲಿ ಶೇ.98 ರಷ್ಟು ಮಗುಗಳಿಗೆ ಜನಿಸಿದ 1 ಗಂಟೆವರೆಗೂ ಎದೆ ಹಾಲು ಸಿಗುತ್ತಿದೆ. ಇದು ಶೇ.100 ರಷ್ಟು ಆಗಬೇಕು ಆ ನಿಟ್ಟಿನಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಶ್ರಮ ವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಆರ್.ಬಣಕಾರ್ ಪ್ರಸ್ತಾವಿಕವಾಗಿ ಮಾತನಾಡಿದರು.
District Legal Services Authority ಈ ವೇಳೆ ಬಾಲ ನ್ಯಾಯಮಂಡಳಿ ಹಾಗೂ ಮನೋರೋಗ ತಜ್ಞರಾದ ಡಾ.ಪವಿತ್ರ ಕೆ.ಎಸ್ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್.ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಬಾಯಿ.ಸಿ, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.