Tuesday, April 7, 2026
Tuesday, April 7, 2026
Home Blog Page 1291

B.Y Raghavendra ಉದ್ಯಮಗಳಲ್ಲಿ ಆಸಕ್ತಿಯಿರುವ ಯುವಜನರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕು- ಸಂಸದ ರಾಘವೇಂದ್ರ

0

B.Y Raghavendra  ಶಿವಮೊಗ್ಗ; ಯುವ ಉದ್ಯಮಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಸೂಕ್ತ ಪ್ರೋತ್ಸಾಹ ನೀಡುತ್ತಿದ್ದು, ಉದ್ಯಮದಲ್ಲಿ ಆಸಕ್ತಿಯಿರುವ ಯುವಜನರು ಈಗಾಗಲೇ ಅನುಷ್ಠಾನಗೊಳಿಸಿರುವ ಸರ್ಕಾರದ ಯೋಜನೆಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ದೇಶದಲ್ಲಿ ಅತಿ ಹೆಚ್ಚು ಎಥೆನಾಲ್ ಉತ್ಪಾದಿಸಿ ದೇಶ ವಿದೇಶಗಳಿಗೆ ಪೂರೈಸಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಿರುವ ಮುರುಗೇಶ್ ನಿರಾಣಿ ಅವರ ಪುತ್ರ ಉದ್ಯಮಿ ವಿಜಯ ನಿರಾಣಿ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಿ ಮಾತನಾಡಿದರು.
ಸರ್ಕಾರದ ಯೋಜನೆಗಳಿಂದ ಸಿಗುವ ಆರ್ಥಿಕ ಸೌಲಭ್ಯ ಬಳಸಿಕೊಂಡು ಸರಿಯಾದ ಯೋಜನೆ ಹಾಕಿಕೊಂಡು ಉದ್ಯಮದಲ್ಲಿ ಮುನ್ನಡೆಯಬೇಕು. ವ್ಯವಹಾರದಲ್ಲಿ ಎಚ್ಚರಿಕೆ ವಹಿಸಬೇಕು. ಹಂತ ಹಂತವಾಗಿ ಆಲೋಚನೆಗಳನ್ನು ಉದ್ಯಮದಲ್ಲಿ ಅಳವಡಿಸಿ ಯಶಸ್ಸು ಸಾಧಿಸಬೇಕು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕನಸು 2050ರೊಳಗೆ ದೇಶದ ನಿರುದ್ಯೋಗ ಮುಕ್ತವಾಗಬೇಕು. ಸರ್ಕಾರವೇ ಎಲ್ಲ ಉದ್ಯೋಗ ನೀಡಲಾಗುವುದಿಲ್ಲ. ಯುವಜನತೆ ಹೊಸ ಹೊಸ ಉದ್ಯಮಗಳನ್ನು ಆರಂಭಿಸಬೇಕು. ಸದೃಢ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆಯು ಉತ್ತಮ ಸಂಪನ್ಮೂಲ ಸೌಕರ್ಯಗಳನ್ನು ಹೊಂದಿರುವ ಜಿಲ್ಲೆ ಆಗಿದ್ದು, ಜಿಲ್ಲೆಯ ಯುವಜನತೆ ಹೊಸ ಹೊಸ ಆಲೋಚನೆ ಬೆಳೆಸಿಕೊಂಡು ಉದ್ಯಮ ಕ್ಷೇತ್ರದಲ್ಲಿ ಮುನ್ನಡೆಯಬೇಕು. ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.

B.Y Raghavendra  ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಬಿ.ಆರ್.ಸಂತೋಷ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರದೀಪ್ ಎಲಿ, ಹಾಲಸ್ವಾಮಿ, ಗಣೇಶ್ ಅಂಗಡಿ, ಎಂ.ರಾಜ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು. Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

JCI ಉದ್ಯಮಗಳಲ್ಲಿ ಸಮಯ ನಿರ್ವಹಣೆ ಬಹಳ ಪ್ರಮುಖ-ಅಂಜಲಿ ಕಾತರಕಿ

0

JCI ಕನಸು‌ ಸಾಕಾರ ಮಾಡಿಕೊಳ್ಳಲು ಆತ್ಮವಿಶ್ವಾಸ ಹಾಗೂ ಶ್ರದ್ಧೆ, ಪರಿಶ್ರಮ ಅತ್ಯಂತ ಮುಖ್ಯ. ಉದ್ಯಮ ಸೇರಿದಂತೆ ಯಾವುದೇ ಕ್ಷೇತ್ರ ಆದರೂ ಸರಿ ಯಶಸ್ವಿಯಾಗಲು ಸಮಯದ ನಿರ್ವಹಣೆ ಬಹಳ ಪ್ರಮುಖ ಆಗುತ್ತದೆ ಎಂದು ಮಹಿಳಾ ಉದ್ಯಮಿ, ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ ಅಂಜಲಿ ಕಾತರಕಿ ಹೇಳಿದರು.

ಶಿವಮೊಗ್ಗ ನಗರದ ಸರ್ಕಾರಿ ‌ನೌಕರರ ಭವನದಲ್ಲಿ ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯಿಂದ ಮಹಿಳಾ‌ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

JCI ಪ್ರತಿಯೊಬ್ಬರೂ ದಿನಚರಿ ನಿರ್ವಹಣೆ ಮಾಡಲು‌ ಅಭ್ಯಾಸ ಮಾಡಿಕೊಳ್ಳಿ, ಪ್ರತಿ‌ ನಿತ್ಯ ಅಂದುಕೊಂಡ ಕೆಲಸವನ್ನು ತಪ್ಪದೇ ಮಾಡಿ, ಇದರಿಂದ ಕಾರ್ಯಕ್ಷಮತೆ ವೃದ್ಧಿಸುತ್ತದೆ. ಬದುಕಿನ ಇಷ್ಟದ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ. ಬದುಕಿನಲ್ಲಿ ಉನ್ನತ ಸ್ಥಾನ ಗಳಿಸುವ ಗುರಿ ತಲುಪಬಹುದು ಎಂದು ತಿಳಿಸಿದರು.

ಜೆಸಿಐ ಸಂಸ್ಥೆಯು ಜೀವನದ ಅತ್ಯಮೂಲ್ಯ ಸಂಗತಿಗಳನ್ನು ಕಲಿಸಿಕೊಡುತ್ತದೆ. ಉತ್ತಮ ವ್ಯಕ್ತಿತ್ವ ನಿರ್ಮಾಣ, ಸಂವಹನ ಕೌಶಲ್ಯ ಅನೇಕ ಸಂಗತಿಗಳನ್ನು ಅರಿತುಕೊಳ್ಳಲು ನೆರವಾಗುತ್ತದೆ. ಜೆಸಿಐ ಸಂಸ್ಥೆ ಕಲಿಸುವ ಅಂಶಗಳನ್ನು ಜೀವನದಲ್ಲಿ‌ ಅಳವಡಿಸಿಕೊಳ್ಳಬೇಕು ಎಂದರು.

ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಉತ್ತಮ‌ ಸಾಧನೆ ಮಾಡುತ್ತಿದ್ದು, ಅವರಿಗೆ ಮತ್ತಷ್ಟು ಬೆಂಬಲ ಹಾಗೂ ಪ್ರೋತ್ಸಾಹ ನೀಡುವ ಅಗತ್ಯವಿದೆ. ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ವಿವಿಧ ಕ್ಷೇತ್ರದ ‌ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದು ಹೇಳಿದರು.

ನಮ್ಮ ಸಂಸ್ಥೆ ವತಿಯಿಂದ ಪ್ರಸ್ತಕ ಸಾಲಿನ ಅನೇಕ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದ್ದು, ಶಿಕ್ಷಣ ಮತ್ತು ಆರೊಗ್ಯ ಕ್ಷೇತ್ರದ ಸೇವಾ ಚಟುವಟಿಕೆಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಜಾಗೃತಿ ಶಿಬಿರಗಳನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ‌ಸಾಧನೆ ಮಾಡಿರುವ ಮಹಿಳಾ ಸಾಧಕಿಯರಾದ ಕೆರೆಕೊಪ್ಪ ಭಾಗೀರಥಿ, ಡಾ. ಕಾಂಚನ್ ಕುಲಕರ್ಣಿ, ರುಕ್ಮಿಣಿ ವೇದವ್ಯಾಸ್, ದೀಪಾ ಕುಬುಸದ್, ಬಿ.ಎಸ್.ಭಾಗೀರಥಿ ಅವರನ್ನು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು.

ದೀಪಾ ಕುಬುಸದ್ ಮಾತನಾಡಿ, ಸಾಧಕರನ್ನು‌ಗುರುತಿಸಿ ಪ್ರೋತ್ಸಾಹ ‌ನೀಡುವುದರಿಂದ ಇತರರಿಗೂ ಸ್ಫೂರ್ತಿ ಸಿಗುತ್ತದೆ. ನಮ್ಮ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುತ್ತದೆ. ಇನ್ನೂ ಗುರುತಿಸದೇ ಉಳಿದಿರುವ ಮಹಿಳಾ ಸಾಧಕರಿದ್ದು, ಅವರನ್ನು ಗುರುತಿಸಿ ಗೌರವಿಸುವ ಕೆಲಸ ಆಗಬೇಕು ಎಂದು ಹೇಳಿದರು.

ವೈದ್ಯೆ ಡಾ. ಕಾಂಚನ್ ಕುಲಕರ್ಣಿ ಮಾತನಾಡಿ, ಆಧ್ಯಾತ್ಮಿಕ, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ತಿಳಿಸಿದರು.

ಇನ್ನುಳಿದ ಮಹಿಳಾ ಸಾಧಕರು ತಮ್ಮ ಕ್ಷೇತ್ರಗಳಲ್ಲಿನ ಸೇವೆಯ ಬಗ್ಗೆ ಅನಿಸಿಕೆ ಹಂಚಿಕೊಂಡರು.
ಜೆಸಿಐ ಶಿವಮೊಗ್ಗ ಭಾವನಾ ನಿಕಟಪೂರ್ವ ಅಧ್ಯಕ್ಷೆ ಶಾರದಾ ಶೇಷಗಿರಿ ಗೌಡ, ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಕಾರ್ಯದರ್ಶಿ ಕವಿತಾ ಜೋಯೀಸ್, ವಿಜಯಾ ಶಿವಕುಮಾರ್, ಕರಿಬಸಮ್ಮ, ಉಮಾ ಮೂರ್ತಿ, ವಂದನಾ, ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

B.s Yediyurappa ಶಿವಮೊಗ್ಗ ಚೇಂಬರ್ ಆಫ್ ಕಾಮರ್ಸ್ ನಿಂದ ರಾಜಾಹುಲಿಗೆ ಜನ್ಮದಿನ ಸನ್ಮಾನ

0

B.s Yediyurappa  ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಅಭಿವೃದ್ಧಿ ಹರಿಕಾರ, ರೈತರ ಕಣ್ಮಣಿ, ಜನಪ್ರಿಯ ನಾಯಕ ಬಿ.ಎಸ್.ಮುಖ್ಯಮಂತ್ರಿ ಅವರಿಗೆ ಜನ್ಮದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ರಾಜ್ಯದ ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕ್ಷಣ, ಆರೋಗ್ಯ, ಉದ್ಯಮ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಕ್ಷೇತ್ರ ಸೇರಿದಂತೆ ಎಲ್ಲ ವಲಯಗಳ ಅಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದಾರೆ.
ಐದು ದಶಕಗಳಿಗೂ ಅಧಿಕ ರಾಜಕೀಯ ಜೀವನದಲ್ಲಿ ಅಧಿಕಾರ ವಹಿಸಿಕೊಂಡಿದ್ದು ಕೆಲವೇ ವರ್ಷಗಳೇ ಆದರೂ ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಉದ್ಯಮಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೂ ಉಪಯುಕ್ತವಾಗುವಂತಹ ಜನಪ್ರಿಯ ಯೋಜನೆಗಳ ಅನುಷ್ಠಾನಗೊಳಿಸಿದ್ದರು. ಪೂರ್ಣ ಅವಧಿ ಮುಖ್ಯಮಂತ್ರಿ ಆಗಿದ್ದಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿ ನಂಬರ್ 1 ರಾಜ್ಯವಾಗಿ ರೂಪುಗೊಳ್ಳುತ್ತಿತ್ತು ಎಂದು ವಾಣಿಜ್ಯ ಸಂಘದ ಪದಾಧಿಕಾರಿಗಳು ಅನಿಸಿಕೆ ವ್ಯಕ್ತಪಡಿಸಿದರು.

B.s Yediyurappa  ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಸಂಘದ ವತಿಯಿಂದ ಶುಭಾಶಯ ಕೋರಿ ಅಭಿನಂದಿಸಿದರು.
ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಬಿ.ಗೋಪಿನಾಥ್, ಕಾರ್ಯದರ್ಶಿ ವಸಂತ್ ಹೋಬಳಿದಾರ್, ಬಿ.ಆರ್.ಸಂತೋಷ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರದೀಪ್ ಎಲಿ, ಹಾಲಸ್ವಾಮಿ, ಗಣೇಶ್ ಅಂಗಡಿ, ಎಂ.ರಾಜ್, ಜೆ.ಆರ್.ವಾಸುದೇವ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Shivamogga ತ್ಯಾವರೆಚಟ್ನಳ್ಳಿ ಯ ವಸತಿ ಬಡಾವಣೆ ಎ ಮತ್ತು ಡಿ ಬ್ಲಾಕ್ ಗಳು ಪಾಲಿಕೆಗೆ ಹಸ್ತಾಂತರ

0

Shivamogga ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕುವೆಂಪು ನಗರದ ತ್ಯಾವರೆ ಚಟ್ನಹಳ್ಳಿ ವಸತಿ ಬಡಾವಣೆಯ ಎ ಯಿಂದ ಡಿ ಬ್ಲಾಕ್‌ಗಳನ್ನು ಮುಂದಿನ ನಿರ್ವಹಣೆಗಾಗಿ ಮಾ.24 ರಿಂದ ಜಾರಿಗೆ ಬರುವಂತೆ ಪ್ರಾಧಿಕಾರದಿಂದ ಶಿವಮೊಗ್ಗ ಮಹಾನಗರ ಪಾಲಿಕೆಗೆ ಹಸ್ತಾಂತರ ಮಾಡಲಾಗಿದೆ.

ಈ ಬಡಾವಣೆಗಳ ಸಾರ್ವಜನಿಕರು ಇನ್ನು ಮುಂದೆ ನೀರು, ಒಳಚರಂಡಿ, ವಿದ್ಯುತ್, ಸ್ವಚ್ಛತೆ, ನಿವೇಶನ/ಕಟ್ಟಡ ಪರವಾನಿಗೆ, ಕಂದಾಯ ಪಾವತಿ ಮುಂತಾದ ಸಾರ್ವಜನಿಕ ಕೆಲಸಗಳಿಗಾಗಿ ಹಾಗೂ ಅಗತ್ಯ ಸೇವೆಗಳಿಗಾಗಿ ಮಹಾನಗರ ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ Shivamogga -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Klive Article ಮನಸ್ಸಿನಿಂದ ಮನಸ್ಸಿಗೆ-17

0

Klive Article ಗುಡಿಯನೆಂದು ಕಟ್ಟದಿರು,
ನೆಲೆಯನೆಂದು ನಿಲ್ಲದಿರು…….

ಒಮ್ಮೆ ಬೆಳಕಾದೆ ನಾನು,
ದೇಹ ಗಾಳಿಯಾಯಿತು,
ಮನಸ್ಸು ವಿಶಾಲವಾಯಿತು,
ವಿಶ್ವ ಪರ್ಯಟನೆ ಯಾತ್ರೆ ಹೊರಟಿತು…….

ಅಗೋ ಅಲ್ಲಿ ಮಿನುಗುತ್ತಿವೆ ನಕ್ಷತ್ರಗಳು, ಉರಿಯುತ್ತಿವೆ ಧೂಮಕೇತುಗಳು,
ಕೆಂಪಡರಿದ ಸೂರ್ಯ,
ತಂಪಡರಿದ ಚಂದ್ರ,

ಓ ಮೇಲೆ ನೋಡು ನೀಲಾಕಾಶ ,
ಕೆಳಗೆ ನೋಡು ಭೂಲೋಕ,
ಕಣ್ಣಿನ ನೋಟಕ್ಕೂ ಸಿಗದಷ್ಟು ನೀರು,
ಕಣ್ಣಂಚಿನಲ್ಲಿ ಕಾಣುವಷ್ಟು ಕಾಡು,
ಅಲ್ಲಲ್ಲಿ ಪ್ರಾಣಿ ಪಕ್ಷಿಗಳು,
ಎಲ್ಲೆಲ್ಲೂ ನರಮಾನವರು,

ಒಂದು ಕಡೆ ಹಚ್ಚ ಹಸಿರು,
ಇನ್ನೊಂದು ಕಡೆ ಮರುಭೂಮಿ,
ಅಗೋ ಅಲ್ಲಿ ಅಗ್ನಿ ಪರ್ವತ,
ಇಗೋ ಇಲ್ಲಿ ಹಿಮಪರ್ವತ,
ಎಲ್ಲೆಲ್ಲೂ ಸುಂಟರಗಾಳಿ,
ಮತ್ತೆಲ್ಲೊ ಪ್ರಶಾಂತ ಗಾಳಿ,

ಅಲ್ಲಿ ನಡೆಯುತ್ತಿದೆ ನೋಡು ರಕ್ತಪಾತ,
ಇಲ್ಲಿ ಕೇಳುತ್ತಿದೆ ನೋಡು ಶಾಂತಿ ಮಂತ್ರ,
ಅಲ್ಲೆಲ್ಲೋ ಗುಂಡಿನ ಸದ್ದು,
ಇನ್ನೆಲ್ಲೂ ನೀರವ ಮೌನ,

ಸ್ವಲ್ಪ ಹೊತ್ತು ಬೆಳಕೋ ಬೆಳಕು,
ಮತ್ತಷ್ಟು ಹೊತ್ತು ಕಾರ್ಗತ್ತಲು,
ಒಮ್ಮೆ ಮೈ ಕೊರೆಯುವ ಚಳಿ,
ಮತ್ತೊಮ್ಮೆ ಬೆವರು ಸುರಿಸುವ ಬಿಸಿಲು,
ಭೋರ್ಗರೆಯುವ ಮಳೆ ,
ರೊಪ್ಪನೆ ಬೀಸುವ ಗಾಳಿ,

ನಭೋಮಂಡಲದ ಹಗಲು ರಾತ್ರಿಗಳ ನೀರವ ಮೌನ………..

ಆಫ್ರಿಕಾದ ದಟ್ಟ ಕಾಡುಗಳ ಹಸಿರ ವನಸಿರಿ………….

ಪ್ರಾಣಿ ಪಕ್ಷಿಗಳ ಮಿಲನ ಮಹೋತ್ಸವ………..

Klive Article ಜಿಂಬಾಬೆ – ನೈಜೀರಿಯಾ – ನಮೀಬಿಯಾ – ಇಥೋಪಿಯಾ – ಉಗಾಂಡ – ದಕ್ಷಿಣ ಆಫ್ರಿಕಾ ಮುಂತಾದ ದೇಶಗಳ ಜನರ ಜಾನಪದೀಯ ಜೀವನ ಶೈಲಿ………..

ನ್ಯೂಜಿಲ್ಯಾಂಡ್ ನ ಹಿಮಶಿಖರಗಳ ರಾಶಿ, ಆಸ್ಟ್ರೇಲಿಯಾದ ವೈಭವೋಪೇತ ಬೆಳಕಿನ ಕಾರಂಜಿ, ಸಣ್ಣ ಸಣ್ಣ ದ್ವೀಪಗಳ ಜನರ ಬದುಕು………

ಆಲ್ಫ್ಸ್ ಪರ್ವತಗಳ ಮೇಲೆ ತೇಲುವ ಯುರೋಪಿನ ಪ್ರಾಕೃತಿಕ ಸೌಂದರ್ಯ……….

ಸ್ವಿಟ್ಜರ್ಲೆಂಡ್‌‌ನ ಆ ಅದ್ಬುತ ನೋಟ, ಆಸ್ಟ್ರಿಯಾದ ಆ ನಯನ ಮನೋಹರ ತೋಟಗಳು…………….

ಬೆಲ್ಜಿಯಂನ ಅತ್ಯಾಕರ್ಷಕ ಹೂದೋಟಗಳು,
ಜರ್ಮನಿಯ ಭವ್ಯ ಕಟ್ಟಡಗಳು, ಫ್ರಾನ್ಸಿನ ಯುವ ಪ್ರೇಮಿಗಳ ಮುಕ್ತ ಸರಸ ಸಲ್ಲಾಪಗಳು…………

ಇಟಲಿಯ ಪಾರಂಪರಿಕ ಐತಿಹಾಸಿಕ ಸ್ಥಳಗಳು……….

ಇಂಗ್ಲೇಂಡಿನ ಥೇಮ್ಸ್‌ ನದಿಯ ದಡದಲ್ಲಿರುವ ಲಂಡನ್ ನಗರದ ಸೌಂದರ್ಯ………..

ನಾರ್ವೆಯ ಶಾಂತಿ ನೆಮ್ಮದಿಯನ್ನು ಸಾರುವ ಜನರ ಮುಖಾರವಿಂದಗಳು……

ಪರ್ಶಿಯನ್ ಭವ್ಯತೆಯನ್ನು ಸಾರುವ ಈಜಿಪ್ಟಿನ ಪಿರಮಿಡ್ ಗಳು……..

ಟರ್ಕಿಯ ಸ್ಮಾರಕಗಳು,
ಇರಾನ್ ಇರಾಕಿನ ಕಟ್ಟುಮಸ್ತು ದೇಹದ ಸುಂದರ ಯುವಕ ಯುವತಿಯರು……….

ರಷ್ಯಾದ ಬ್ಯಾಲೆ,
ಇಸ್ರೇಲ್ ಪ್ಯಾಲಿಸ್ಟೈನ್ ನ ಅಗಾಧ ಸಾಮರ್ಥ್ಯ………….

ಅಮೆರಿಕಾದ ಆ ಶ್ರೀಮಂತಿಕೆ, ಹಾಲಿವುಡ್ ನ ಆ ರೋಚಕತೆ, ನಯಾಗರ ಜಲಪಾತದ ರೋಮಾಂಚನ……….

ನ್ಯೂಯಾರ್ಕ್ ನ ಸ್ವಾತಂತ್ರ್ಯ ದೇವತೆಯ ಸಾರ್ಥಕತೆ,
ವೆಸ್ಟ್ಇಂಡೀಸ್ ದ್ವೀಪಗಳ ಜನರ ನಡವಳಿಕೆ,
ಕ್ಯೂಬಾದ ಬದ್ದತೆ………

ಬ್ರೆಜಿಲ್ ಅರ್ಜೆಂಟೈನಾ ಕೊಲಂಬಿಯಾ ದೇಶಗಳ ಪುಟ್ಬಾಲ್ ಅಭ್ಯಾಸ ಮಾಡುವ ಯುವಕರ ಚಾಕಚಕ್ಯತೆ…………

ಅಮೆಜಾನ್ ನದಿಯ ಆ ವಿಶಾಲತೆ…………

ಅಂಟಾರ್ಟಿಕಾದ ಆ ಮೈಕೊರೆಯುವ ಚಳಿಯಲ್ಲಿ ಹಿಮಕರಡಿಗಳ ಸಾಲುಗಟ್ಟಿದ ರಾಶಿ, ಶೀತವಲಯದ ಪ್ರಾಣಿಗಳ ದರ್ಶನ………..

ಆಫ್ಘನಿಸ್ತಾನದ ಬೆಟ್ಟ ಗುಡ್ಡಗಳ ಸಾಲುಗಳು,
ಪಾಕಿಸ್ತಾನದ ಸುಂದರ ಮನಮೋಹಕ ಕಣಿವೆಗಳು……

ಚೀನಾದ ಆ ಆಗಾಧ ಕೋಟೆ ಕೊತ್ತಲುಗಳು,
ಜಪಾನಿನ ಜನರ ಶ್ರಮದಾಯಕ ಪ್ರಾಮಾಣಿಕ ದುಡಿಯುವ ಕೈಗಳು…

ಕೊರಿಯಾದ ಉದ್ದಿಮೆಗಳು, ವಿಯೆಟ್ನಾಂ ನ ಯುದ್ಧ ಸ್ಮಾರಕಗಳು, ಭೂತಾನಿನ ಬೌದ್ದ ವಿಹಾರಗಳು,…….

ನೇಪಾಳದ ಗೂರ್ಖಾಗಳ ವೇಷಭೂಷಣಗಳು,
ಶ್ರೀಲಂಕಾದ ಪ್ರಾಕೃತಿಕ ಸೌಂದರ್ಯ………

ನನ್ನ ಭಾರತ ಮಾತೆಯ ಪ್ರಕೃತಿಯ ಮಡಿಲು,
ಕನ್ನಡ ನಾಡಿನ ನೆಲದ ಸ್ಪರ್ಶ…………

ಮತ್ತೆ ನಿಮ್ಮೊಂದಿಗೆ ಹೀಗೆ ಬದುಕು,…….
ನಿಮ್ಮ ಹೃದಯಗಳಲ್ಲಿ ಶಾಶ್ವತ ನೆಲೆಸು,……..

ಎಂದೆಂದಿಗೂ………

ಮುಷ್ಟಿಯಷ್ಟಿದೆ ಈ ಲೋಕ,
ಹಿಡಿಯ ಹೋದರೆ ಸಮಷ್ಟಿ,
ಮುಗಿಯಿತು ತ್ರಿಲೋಕ ಸಂಚಾರ,
ಆಯಿತು ಬದುಕು ಸಾಕ್ಷಾತ್ಕಾರ.

ಆದರೂ,ಇನ್ನೊಂದಾಸೆ,
ಒಂದೇ ಒಂದಾಸೆ,
ನಿಮ್ಮ ಹೃದಯದಾಳದಲಿ ಅಣುವಾಗುವಾಸೆ,,
ನಿಮ್ಮ ಮನದಾಳದಲಿ ಕಣವಾಗುವಾಸೆ,
ನಿಮ್ಮ ನೆನಪಿನಾಳದಲಿ ಶಾಶ್ವತವಾಗಿ ನೆಲೆಯಾಗುವಾಸೆ,
ಒಪ್ಪಿಕೊಳ್ಳಿ ,ಅಪ್ಪಿಕೊಳ್ಳಿ ದಾರಿ ತಪ್ಪಿದೀ ಜೀವಿಯನ್ನ……

ಬದುಕಿನೊಂದಿಗೆ ಸರಸವಾಡುತ್ತಾ,
ವಿಧಿಯೊಂದಿಗೆ ಚೆಲ್ಲಾಟವಾಡುತ್ತಾ,
ಬರುವುದನ್ನು ಸ್ವೀಕರಿಸುತ್ತಾ,
ಹೋಗುವುದನ್ನು ಬೀಳ್ಕೊಡುತ್ತಾ,
ನಗುತ್ತಾ, ಅಳುತ್ತಾ,…

ಸಾಗುತ್ತಲೇ ಇರಲಿ ಜೀವನ…

ಕೊನೆಯೇ ಇಲ್ಲವೇನೋ ಎಂಬ ಭಾವದೊಂದಿಗೆ..‌‌‌.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Power Cut in Shivamogga ಮಾರ್ಚ್ 3 ರಂದು ಶಿವಮೊಗ್ಗ ಆಲ್ಕೊಳ ಸುತ್ತಮುತ್ತ ವಿದ್ಯುತ್ ವ್ಯತ್ಯಯ

0

Power Cut in Shivamogga   ಶಿವಮೊಗ್ಗದ ಆಲ್ಕೊಳ ವಿ ವಿ ಕೇಂದ್ರದ ವ್ಯಾಪ್ತಿಯ ಎಂಎಫ್-5 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 03 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗೋಪಾಳ ಇ ಬ್ಲಾಕ್, ಕೆ.ಹೆಚ್.ಬಿ., ಎಲ್.ಐ.ಜಿ., ಎಂಐಜಿ.

Power Cut in Shivamogga  ಅಲ್‍ಹರೀಮ್ ಲೇಔಟ್, ಡಿ.ವಿ.ಜಿ. ವೃತ್ತ, ಪ್ರೆಸ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಗ್ರಾಮಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Power Cut in Shivamogga Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Home Minister Araga Jnanendra ಶಿವಮೊಗ್ಗದಲ್ಲಿ ರಾಷ್ಟ್ರೀಯ ರಕ್ಷಣಾ ವಿವಿ ಸ್ಥಾಪನೆ- ಆರಗ ಜ್ಞಾನೇಂದ್ರ

Home Minister Araga Jnanendra ರಾಷ್ಟ್ರೀಯ ಮತ್ತು ಆಂತರಿಕ ಭದ್ರತೆ ಮತ್ತು ಅಪರಾಧಗಳ ತನಿಖೆಗೆ ಸಂಬಂಧಿಸಿದ ಕೋರ್ಸ್ ಗಳನ್ನು ಒದಗಿಸುವ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುತ್ತದೆ. ಈ ವಿಶ್ವವಿದ್ಯಾಲಯವು ಶಿವಮೊಗ್ಗದ ರಾಗಿಗುಡ್ಡದಲ್ಲಿ ಈ ಹಿಂದೆ ಕೇಂದ್ರೀಯ ವಿಶ್ವವಿದ್ಯಾಲಯವಿದ್ದ ಕನ್ನಡದಲ್ಲಿ ಮೇ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಹೇಳಿದರು.

ಶಿವಮೊಗ್ಗದಲ್ಲಿ ಈ ವಿಶ್ವವಿದ್ಯಾಲಯವು ಆರಂಭವಾಗುತ್ತಿರುವುದು ಸ್ಥಳೀಯ ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳನ್ನ ತರಲಿದೆ ಎಂದು ಹೇಳಿದರು.

Home Minister Araga Jnanendra ಶಿವಮೊಗ್ಗದ ಹೊರವಲಯ ನವುಲೆಯ ಸರ್ವೇ ನಂಬರ್ 112 ರಲ್ಲಿ 8 ಎಕರೆ ಜಮೀನನ್ನು ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಲಾಗಿದೆ. ಈ ಸ್ಥಳವನ್ನು ವಿಶ್ವವಿದ್ಯಾಲಯ ಮಂಜೂರು ಪ್ರಾಧಿಕಾರದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿ ವಿಶ್ವವಿದ್ಯಾಲಯದ ಆರಂಭಕ್ಕೆ ಒಪ್ಪಿಗೆ ನೀಡಿದ್ದಾರೆ. ತಾತ್ಕಾಲಿಕವಾಗಿ ರಾಗಿ ಗುಡ್ಡದಲ್ಲಿ ಆರಂಭವಾಗಿ ನವುಲೆಯ ನಿಗದಿತ ಹಳದಲ್ಲಿ ಸುಸಜ್ಜಿತ ಕ್ಯಾಂಪಸ್ ನಿರ್ಮಾಣವಾದ ನಂತರ ಸ್ಥಳಾಂತರಗೊಳ್ಳಲಿದೆ ಎಂದು ತಿಳಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Power Cut in Shimogga  ಮಾಚೇನಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ‌ ವಿದ್ಯುತ್ ವ್ಯತ್ಯಯ

0

Power Cut in Shimogga    ಶಿವಮೊಗ್ಗದ ಮಾಚೇನಹಳ್ಳಿ ವಿ ವಿ ಕೇಂದ್ರದ ವ್ಯಾಪ್ತಿಯ ಎಂಸಿಎಫ್- 1 ಮತ್ತು 18 ರ ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಮಾರ್ಚ್ 3,6 ಮತ್ತು 9 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬಸವಾಪುರ,

Power Cut in Shimogga ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೆಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಗ್ರಾಮಗಳ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Holi Festival ಹೋಳಿ ಹಬ್ಬದ ಪ್ರಯುಕ್ತ ಮನ್ಮಥ ಮೂರ್ತಿ ಸ್ಥಾಪನೆ

0

Holi Festival  ಶಿವಮೊಗ್ಗ :- ಬಾಹುಸಾರ ಕ್ಷತ್ರಿಯ ಮಹಾಜನ ಸಮಾಜದಿಂದ ಗಾಂಧಿ ಬಜಾರ್‌ನ ಪ್ರಸಿದ್ಧ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ಮಾ. 3ರ ನಾಳೆ ಸಂಜೆ 6.30ಕ್ಕೆ ಶ್ರೀ ಮನ್ಮಥನ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಮಾ. 8ರ ಬುಧವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ಗಂಟೆವರೆಗೆ ಕಾಮ ದಹನ ಕಾರ್ಯಕ್ರಮ ನಡೆಯಲಿದೆ.

Holi Festival  ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮತ್ತು ಪ್ರಧಾನ ಕಾರ್ಯದರ್ಶಿ ಎಸ್. ಗೋಪಾಲ್ ನವಲೆ ಕೋರಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Diana Book Gallery ಡಯಾನ ಬುಕ್ ಗ್ಯಾಲರಿಯಿಂದ ಸಾಹಿತ್ಯಕ ಚಟುವಟಿಕೆ ಶ್ಲಾಘನೀಯ-ಬಿ.ವೈ. ವಿಜಯೇಂದ್ರ

0

Diana Book Gallery  ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರರವರು ಶಿವಮೊಗ್ಗೆಯ ಪ್ರತಿಷ್ಟಿತ ಡಯಾನಾ ಬುಕ್ ಗ್ಯಾಲರಿಗೆ ಭೇಟಿ ನೀಡಿದ್ದರು.

Diana Book Gallery  ಪುಸ್ತಕ ಮಳಿಗೆಯ 3 ಅಂತಸ್ತುಗಳನ್ನು ಸೂಕ್ಷ್ಮವಾಗಿ ಗಮನಿಸಿದ ಅವರು, ಅಚ್ಚುಕಟ್ಟಾದ ಹಾಗೂ ಗ್ರಾಹಕ ಸ್ನೇಹಿ ವ್ಯವಸ್ಥೆಯನ್ನು ಪ್ರಶಂಸಿಸಿದರು. ಡಯಾನ ಬುಕ್ ಗ್ಯಾಲರಿ, ಕೇವಲ ಪುಸ್ತಕಗಳ ವಹಿವಾಟುಗಳಿಗೆ ಸೀಮಿತವಾಗದೇ, ಸಾಹಿತ್ಯಕ ಚಟುವಟಿಕೆಗಳನ್ನೂ ನಡೆಸುತ್ತಿರುವುದು ಶ್ಲಾಘನೀಯ. ಈ ಮೂಲಕ ಪುಸ್ತಕ ಸಂಸ್ಕೃತಿ ಉಳಿಯುವಂತಾಗಲಿ ಎಂದು ಆಶಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.