Saturday, February 14, 2026
Saturday, February 14, 2026
Home Blog Page 130

Shivamogga Health and Family Welfare Department ನೇತ್ರಾ ಸಹಾಯಕರ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಅವಕಾಶ

0

Shivamogga Health and Family Welfare Department ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇತ್ರಾ ಸಹಾಯಕರ 5 ಹುದ್ದೆಗಳ ಆಯ್ಕೆ ಮಾಡಲಾಗಿದ್ದು, ಆಕ್ಷೇಪಣೆಗಾಗಿ ಆರೋಗ್ಯ ಇಲಾಖೆಯ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸುವವರು ಲಿಖತ ರೂಪದಲ್ಲಿ ಅ.24ರೊಳಗಾಗಿ ಸಲ್ಲಿಸುವುದು.
Shivamogga Health and Family Welfare Department ಹೆಚ್ಚಿನ ಮಾಹಿತಿಗಾಗಿ ದೂ.ಸಂ;8197094440, 9481691580, 08182-222382 ಗೆ ಸಂಪರ್ಕಿಸುವAತೆ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

National Defense Academy ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಪರೀಕ್ಷೆಯಲ್ಲಿ ಶಿವಮೊಗ್ಗದ 3 ವಿದ್ಯಾರ್ಥಿಗಳು ತೇರ್ಗಡೆ

0

National Defense Academy ರಾಷ್ಟ್ರೀಯ ರಕ್ಷಣಾ ಅಕಾಡೆಮಿ( ಎನ್.ಡಿ. ಏ )ವತಿಯಿಂದ 2025 ನೇ ಸಾಲಿಗೆ ಸೆಪ್ಟೆಂಬರ್ ಮಾಹೆಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಶಿವಮೊಗ್ಗ ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಸರ್. ಎಂ .ವಿ. ಕಾಲೇಜಿನ 3 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಸದರಿ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Minister Priyank Kharge ಆರ್ ಎಸ್ ಎಸ್, ಈ ದೇಶದ ಸಂವಿಧಾನ, ಕಾನೂನು, ನೀತಿನಿಯಮಗಳಿಗೆ ಅತೀತವಾಗಿದೆ ಎಂದು ಭಾವಿಸಿದೆಯೇ ಬಿಜೇಪಿ?- ಸಚಿವ ಪ್ರಿಯಾಂಕ್ ಖರ್ಗೆ

0

Minister Priyank Kharge ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು. ಈ ಆದೇಶವನ್ನು ಹೊರಡಿಸಿದ್ದು 2013ರಲ್ಲಿ ಬಿಜೆಪಿ ಸರ್ಕಾರ.

ಕರ್ನಾಟಕ ಬಿಜೆಪಿ ಪಕ್ಷಕ್ಕೆ ತನ್ನದೇ ಸರ್ಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರ್ಎಸ್ಎಸ್ ಗೆ ಅನ್ವಯಿಸುವುದಿಲ್ಲವೇ?

RSS ಸಂಘಟನೆಯು ಈ ದೇಶದ ಸಂವಿಧಾನ, ಕಾನೂನು, ನೀತಿ ನಿಯಮಗಳಿಗೆ ಅತೀತವಾಗಿದೆ ಎಂದು ಭಾವಿಸಿದೆಯೇ ಬಿಜೆಪಿ?

ಈ ಆದೇಶ ಜಾರಿಯಲ್ಲಿದ್ದರೂ ಆರ್ಎಸ್ಎಸ್ ಎಂಬ ಸಂಘಟನೆಯು ಯಾವ ಅಂಜಿಕೆ ಇಲ್ಲದೆ ಶಾಲೆಗಳು ಹೆಡ್ಗೆವಾರ್ ಅವರ ವಂಶಸ್ಥರ ಆಸ್ತಿ ಎಂಬಂತಹ ಧೋರಣೆಯಲ್ಲಿ ತನ್ನ ಚಟುವಟಿಕೆ ನಡೆಸುತ್ತಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಜಾಲತಾಣದಲ್ಲಿ ವಾಗ್ಬಾಣ ಬಿಟ್ಡಿದ್ದಾರೆ.

Minister Priyank Kharge ಕೂಗುಮಾರಿಗಳಂತೆ ಕೂಗುತ್ತಿರುವ ಬಿಜೆಪಿಯವರು ತಮ್ಮ ಸರ್ಕಾರದ ಆದೇಶವನ್ನು ಒಮ್ಮೆ ಅವಲೋಕನ ಮಾಡಿ ನಂತರ ತಾವೇನು ಮಾತಾಡಬೇಕು ಎಂದು ನಿರ್ಧರಿಸಲಿ ಎಂದು ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ಮಾತಿನ ಪ್ರಹಾರ ಮಾಡಿದ್ದಾರೆ.

Adi Karmayogi Campaign ಕೇಂದ್ರ ಸರ್ಕಾರದ ಬುಡಕಟ್ಟು ಅಭಿವೃದ್ಧಿ ಮಂತ್ರಾಲಯದ ವತಿಯಿಂದ ಆದಿ ಕರ್ಮಯೋಗಿ ಅಭಿಯಾನ

0

Adi Karmayogi Campaign ಭಾರತದ ಗೌರವಾನ್ವಿತ ರಾಷ್ಟ್ರಪತಿಗಳ ಉಪಸ್ಥಿತಿಯಲ್ಲಿ ಅಕ್ಟೋಬರ್ 17, 2025 ರಂದು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಬುಡಕಟ್ಟು ಅಭಿವೃದ್ಧಿ ಮಂತ್ರಾಲಯದ ವತಿಯಿಂದ ಆದಿ ಕರ್ಮಯೋಗಿ ಅಭಿಯಾನ (AKA) ಮತ್ತು ಧರತಿ ಅಭಾ ಜನಜಾತಿಯ ಗ್ರಾಮ ಉತ್ಕರ್ಷ ಅಭಿಯಾನ (DA JGUA) ಯೋಜನೆಯ ಅನುಷ್ಠಾನದ ಸಾಧನೆಗಳನ್ನು ಗುರುತಿಸಲು “ಆದಿ ಕರ್ಮಯೋಗಿ ಅಭಿಯಾನದ ರಾಷ್ಟ್ರೀಯ ಸಮಾವೇಶ-2025” ಅನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯವು ವಿವಿಧ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ ಎಂಬ ಹೆಮ್ಮೆಯ ಸಂಗತಿಯನ್ನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

1)ವಿಕಸಿತ ಭಾರತಕ್ಕಾಗಿ ಬುಡಕಟ್ಟುಗಳ ಸಬಲೀಕರಣ ವಿಭಾಗದಲ್ಲಿ 5 ರಾಷ್ಟ್ರೀಯ ಅತ್ಯುತ್ತಮ ಪ್ರದರ್ಶನ ನೀಡಿದ ಜಿಲ್ಲೆಗಳು:

ಚಿಕ್ಕಬಳ್ಳಾಪುರ – DA JGUA ಧರತಿ ಅಭಾ ಜನಜಾತಿಯ ಗ್ರಾಮ ಉತ್ಕರ್ಷ ಅಭಿಯಾನ

ಚಿಕ್ಕಬಳ್ಳಾಪುರ – ಆದಿ ಕರ್ಮಯೋಗಿ ಅಭಿಯಾನ (AKA)

ಬೀದರ್ – ಆದಿ ಕರ್ಮಯೋಗಿ ಅಭಿಯಾನ (AKA)

ರಾಯಚೂರು – ಆದಿ ಕರ್ಮಯೋಗಿ ಅಭಿಯಾನ (AKA)

ಬಳ್ಳಾರಿ – ಆದಿ ಕರ್ಮಯೋಗಿ ಅಭಿಯಾನ (AKA)

Adi Karmayogi Campaign 2)ಧರತಿ ಅಭಾ ಜನಭಾಗೀದಾರ ಅಭಿಯಾನದಡಿಯಲ್ಲಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ತೋರಿದ ಜಿಲ್ಲೆ ಚಿಕ್ಕಬಳ್ಳಾಪುರ
3)ಉತ್ತಮ ಪ್ರದರ್ಶನ ತೋರಿದ ರಾಜ್ಯ ಮಟ್ಟದ ಮಾಸ್ಟರ್ ತರಬೇತುದಾರರು ಶ್ರೀ ಎ. ರಾಜಶೇಖರ್, ಸಂಶೋಧನಾ ಅಧಿಕಾರಿ, ಬುಡಕಟ್ಟು ಅಭಿವೃದ್ಧಿ ಇಲಾಖೆ
ಬುಡಕಟ್ಟು ಜನಾಂಗದವರ ಏಳಿಗೆಗೆ ನಮ್ಮ ಸರ್ಕಾರದ ಸದಾ ಬದ್ಧವಾಗಿದ್ದು, ಪ್ರಶಸ್ತಿ ವಿಜೇತ ತಂಡಗಳಿಗೆ ಅಭಿನಂದನೆಗಳು ಎಂದು ಸಿದ್ಧರಾಮಯ್ಯನವರು ವಿಜೇತರನ್ನ ಅಭಿನಂದಿಸಿದ್ದಾರೆ.

N. Santosh Hegde ಕಾಂಗ್ರೆಸ್ ಸರ್ಕಾರವು ಆರ್ ಎಸ್ ಎಸ್ ನಿಷೇಧ ಮಾಡಿದರೆ ಅದಕ್ಕೇ ತಿರುಗು ಬಾಣವಾಗುತ್ತದೆ : ಮಾಜಿ ನ್ಯಾ. ಸಂತೋಷ್ ಹೆಗಡೆ

0

N. Santosh Hegde ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಸಂಘಟನೆಗಳ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆಯಾಗುತ್ತದೆ ಎಂದು ಕರ್ನಾಟಕದ ಮಾಜಿ‌ ಲೋಕಾಯುಕ್ತ ಶ್ರೀ ಸಂತೋಷ ಹೆಗಡೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಧಾರವಾಡದಲ್ಲಿ ಶ್ರೀ ಸಂತೋಷ್ ಹೆಗಡೆ ಮಾತನಾಡುತ್ತಿದ್ದರು.
ಸಂಘಟನೆ ಮಾಡುವ ಹಕ್ಕು ಸಂವಿಧಾನ ಕೊಟ್ಟಿದೆ. ಹೀಗಿರುವಾಗ ಆರ್.ಎಸ್.ಎಸ್. ಅನ್ನು ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ಯಾಗುತ್ತದೆ ಎಂದರು.

N. Santosh Hegde ಸರ್ಕಾರವು ಆರ್ ಎಸ್ ಎಸ್ ಸಂಘಟನೆ ನಿಷೇಧ ಮಾಡಿದ್ದೇ ಆದರೆ ಆ ನಿರ್ಧಾರವೇ ಕಾಂಗ್ರೆಸ್ ಗೆ ತಿರುಗು ಬಾಣವಾಗಲಿದೆ ಎಂದು ಹೆಗಡೆ ಅವರು ನುಡಿದರು.

Atma Yojana ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

0

Atma Yojana 2025-26 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.
Atma Yojana ನಿಗದಿತ ನಮೂನೆ ಅರ್ಜಿಯನ್ನು ನ.3 ರ ಸಂಜೆ 5.30 ರೊಳಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ರೈತ ಸಂಕರ್ಪ ಕೇಂದ್ರದ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Shivamogga Police ಅ.21 ರಂದು ಪೊಲೀಸ್ ಹುತ್ಮಾತ ದಿನಾಚರಣೆ

0

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಅ.21 ರ ಬೆಳಿಗ್ಗೆ 8 ಗಂಟೆಗೆ ಪೊಲೀಸ್ ಹುತ್ಮಾತ ದಿನಾಚರಣೆ-2025 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಗೌರವ ವಂದನೆ ಸ್ವೀಕರಿಸುವರು.
Shivamogga Police ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿ.ಪಂ ಸಿಇಓ ಹೇಮಂತ್ ಎನ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಳ್ಳುವರು.

Canara Bank ವಾರಸುದಾರರಿಲ್ಲದ ಬ್ಯಾಂಕ್ ಠೇವಣಿಗಳ ವಸೂಲಿ ವಿಶೇಷ ಶಿಬಿರ

0

Canara Bank ಕೆನರಾ ಬ್ಯಾಂಕ್‌ಗಳಲ್ಲಿ ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಸಲುವಾಗಿ ಅ. 24 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
Canara Bank ಈ ಶಿಬಿರದಲ್ಲಿ ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿ ಹಣ ಮತ್ತು ಮಾಡದ ಠೇವಣಿಗಳನ್ನು ಕ್ಲೈಮ್ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.
ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರದ ಸದುಪಯೋಗಪಡೆದುಕೊಳ್ಳುವಂತೆ ಕೆನರಾ ಬ್ಯಾಂಕ್ ಲೀಡ್ ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

Nidhi Apke Nikat ಅ. 27: ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

0

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಅ. 27 ರಂದು ಆಯೋಜಿಸಲಾಗಿದ್ದು, ಇಪಿಎಫ್‌ಒ ಮತ್ತು ಇಎಸ್‌ಐಸಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಲಿದ್ದಾರೆ.
Nidhi Apke Nikat ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ, ಗಾಂಧಿ ಪಾರ್ಕ್ ಎದುರು ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ವಿದ್ಯಾದಾಯಿನಿ ಶಾಲೆ, ಕೆ.ಆರ್.ನಗರ, ಹರಿಹರ, ದಾವಣಗೆರೆ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

Kuvempu University ಸೃಜನಶೀಲತೆಯನ್ನು ಬಳಸಿಕೊಂಡಾಗ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ : ಪ್ರೊ. ಕೆ ವಸಂತ್ ಕುಮಾರ್ ಪೈ

0

Kuvempu University ಮಕ್ಕಳಿಗೆ ಯಾವುದೇ ವಿಷಯವನ್ನು ಸೂಕ್ಷ್ಮವಾಗಿ ಗಮನಿಸಿ ಹೇಗೆ ಏಕೆ ಏನು ಎಂಬ ಪ್ರಶ್ನೆಗಳನ್ನು ಮೂಡುವಂತೆ ಮಾಡುವುದು ಉತ್ತಮ. ಇದರಿಂದ ಆ ಮಕ್ಕಳಲ್ಲಿ ವಿಷಯದ ಆಳವಾದ ಜ್ಞಾನ ಮೂಡಲು ಸಾಧ್ಯ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಪ್ರೊ. ಕೆ ವಸಂತ್ ಕುಮಾರ್ ಪೈ ತಿಳಿಸಿದರು.
ಶ್ರಮ, ಶ್ರದ್ಧೆ, ಕಠಿಣ ಪರಿಶ್ರಮ ಬದುಕಿನಲ್ಲಿ ಎಲ್ಲರನ್ನೂ ದೃಢವಾಗಿ ನಿಲ್ಲುವಂತೆ ಮಾಡುತ್ತದೆ. ಸೃಜನಶೀಲತೆಯನ್ನು ಬಳಸಿಕೊಂಡಾಗ ಬದುಕಿನಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅವರು ಇಂದು ಬೆಳಿಗ್ಗೆ ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಆರಂಭಗೊಂಡ ಜ್ಞಾನ ವಿಜ್ಞಾನ ಹಾಗೂ ಸೃಜನಶೀಲ ದಿನಾಚರಣೆಯನ್ನು ಉದ್ಘಾಟಿಸಿ ತಿಳಿಸಿದರು.
ನಾವು ನೋಡುವಂತೆ ವಸ್ತುಗಳನ್ನು ನಮ್ಮ ಆಲೋಚನೆಗೆ ತಕ್ಕಂತೆ ಬಳಸಿಕೊಳ್ಳಬೇಕು ಎಂಬುದಕ್ಕೆ ಉದಾಹರಣೆ ಸಹಿತ ಕಥೆಯೊಂದನ್ನು ಹೇಳಿದ ಅವರು ಮಾತೃ ವಾತ್ಸಲ್ಯದ ಕುರಿತು ಮಾತನಾಡಿದರು.
ಹಿಂದಿನ ಎಲ್ಲಾ ಸಂಶೋಧನೆಗಳು ಏಕಾಏಕಿ ಆದಂತಹವು. ಆ ವಿಷಯಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗ ಅಲ್ಲಿ ಸಂಶೋಧನೆ Kuvempu University ಕೈಗೊಂಡಿರುವುದನ್ನು ನಾವು ನೋಡಿದ್ದೇವೆ. ನಮ್ಮ ಹಿರಿಯ ವಿಜ್ಞಾನಿಗಳ ಸಂಶೋಧನೆ ಮತ್ತು ಜೀವನ ಶೈಲಿ ಮಕ್ಕಳಿಗೆ ಸ್ಪೂರ್ತಿ ತರುವಂತಹ ಪ್ರಯತ್ನವನ್ನು ಶಿಕ್ಷಕರು ಮಾಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಮಕೃಷ್ಣ ವಿದ್ಯಾನಿಕೇತನದ ಅಧ್ಯಕ್ಷ ಡಾ ಡಿ ಆರ್ ನಾಗೇಶ್ ಅವರು ಮಕ್ಕಳ ಚಟುವಟಿಕೆಗಳನ್ನು ಹಾಗೂ ಪ್ರದರ್ಶನಗಳನ್ನು ಪ್ರಶಂಸಿದರು.
ಕಾರ್ಯಕ್ರಮದಲ್ಲಿ ರಾಮಕೃಷ್ಣ ವಿದ್ಯಾನಿಕೇತನದ ಕಾರ್ಯದರ್ಶಿ ಶೋಭಾ ವೆಂಕಟರಮಣ, ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷಕ ವೃಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.
ರಾಮಕೃಷ್ಣ ವಿದ್ಯಾನಿಕೇತನದ ಎಲ್ ಕೆ ಜಿ ಇಂದ ಎಸ್ ಎಸ್ ಎಲ್ ಸಿ ವರೆಗಿನ ಎಲ್ಲಾ ವಿದ್ಯಾರ್ಥಿಗಳು 6,000 ಹೆಚ್ಚು ಭಾಷಾವಾರು ಪ್ರದರ್ಶನಗಳನ್ನು ಪ್ರದರ್ಶಿಸಿದರು, ಹಾಗೂ ವಿವರಣೆ ನೀಡುತ್ತಿದ್ದರು.