ಭಾರತೀಯ ಹಿಂದೂ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದ್ದು, ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಪ್ರಸ್ತುತ ದಿನಗಳಲ್ಲಿ ಸಂಬಂಧ ಪಟ್ಟ ಇಲಾಖೆಗೆ ಮಾಹಿತಿ ನೀಡಿ ರಕ್ಷಣೆಗೆ ಹೋದರೂ ಸರ್ಕಾರ ಅದನ್ನು ಅಪರಾಧ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ ಎಂದು ಬಜರಂಗದಳದ ವಿಭಾಗೀಯ ಸಂಚಾಲಕ ರಾಜೇಶ್ ಗೌಡ ಆರೋಪಿಸಿದರು.
ಸೊರಬ ಪಟ್ಟಣದಲ್ಲಿ ಗೋವು ಕಳ್ಳತನ ವಿರೋಧಿಸಿ, ಗೋ ರಕ್ಷಣೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಹಿಂದೂ ಜಾಗರಣಾ ವೇದಿಕೆ, ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಹಾಗೂ ವಿವಿಧ ಹಿಂದೂ ಪರ ಸಂಘಟನೆಗಳಿAದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗೋವನ್ನು ಐದು ಕಾರಣಗಳಿಂದ ರಕ್ಷಿಸಬೇಕಿದೆ. ಮೊದಲನೆಯದಾಗಿ ಮಾನವೀಯ ದೃಷ್ಟಿ, ನಮಗೆ ಬೇಕಾದ್ದನ್ನೆಲ್ಲಾ ನೀಡುವ ಗೋವನ್ನು ಮಾನವೀಯ ದೃಷ್ಟಿಯಿಂದ ರಕ್ಷಿಸಬೇಕಿದೆ. ಎರಡನೆಯದು ಹಿಂದೂ ಧಾರ್ಮಿಕ ದೃಷ್ಟಿ, ಮುಕ್ಕೋಟಿ ದೇವತೆಗಳ ಆವಾಸಸ್ಥಾನ ಗೋವು. ಮೂರನೆಯದು ಆರ್ಥಿಕ ದೃಷ್ಟಿ, ಕೃಷಿ ಮತ್ತು ಹೈನುಗಾರಿಕೆ ಮೂಲಕ ನೆರವಾಗುತ್ತದೆ. ನಾಲ್ಕನೆಯದು ಆರೋಗ್ಯ ದೃಷ್ಟಿ, ಬಳಸುವ ಗೋವಿನ ವಸ್ತುಗಳೆಲ್ಲಾ ಆರೋಗ್ಯಕ್ಕೆ ಉಪಯೋಗವಂತಹವು. ಮುಖ್ಯವಾಗಿ ಐದನೇಯದ್ದು ಸಂವಿಧಾನ ದೃಷ್ಟಿ, ಗೋವು ಸಂರಕ್ಷಣೆ ಮಾಡಬೇಕು ಎಂದು ಸಂವಿಧಾನದಲ್ಲೇ ಇದೆ. ಸಂವಿಧಾನವನ್ನು ಗೌರವಿಸುವ ಮೂಲಕ ಗೋ ಸಂರಕ್ಷಿಸುವ ಕಾರ್ಯವಾಗಬೇಕು ಎಂದರು.
ಪಟ್ಟಣದಲ್ಲಿ ಇತ್ತೀಚೆಗೆ ಗೋವುಗಳ ಕಳ್ಳತನ, ರಸ್ತೆ ಬದಿಯಲ್ಲಿರುವ ಗೋವುಗಳ ಮೇಲೆ ವಾಹನಗಳನ್ನು ಚಲಾಯಿಸುವುದು. ಅವುಗಳನ್ನು ಊನ ಮಾಡುವ ಪೈಶಾಚಿಕ ಕೃತ್ಯಗಳು ನಡೆಯುತ್ತಿದೆ. ಗೋವು ಉಳಿದರೆ ಮಾತ್ರ ಮನುಕುಲದ ಉಳಿವು ಸಾಧ್ಯ. ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಸಹ ಗೋ ಹತ್ಯೆಯಂತಹ ಪ್ರಕರಣಗಳು ನಡೆಯುತ್ತಿದೆ. ಗೋವುಗಳ ರಕ್ಷಣೆ ಸ್ಥಳೀಯ ಆಡಳಿತದ ಹೊಣೆಯಾಗಿದ್ದು, ಬಿಡಾಡಿ ದನಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ ಗ್ರಾಮದಲ್ಲೂ ಗೋಶಾಲೆ ತೆರೆದು ನಡೆಸುವ ಜವಾಬ್ದಾರಿ ಸರ್ಕಾರ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಹಾಗೂ ದೆಹಲಿಯ ಭಾರತ ಜ್ಯೋತಿ ಪ್ರಶಸ್ತಿ ಪುರಸ್ಕೃತ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಗೋವು ಮತ್ತು ನಾವು ಎಂಬುದರ ಕುರಿತು ಭಾವದ ಕೊಂಡಿ ಇದೆ. ಗೋಮಾಳಗಳು ಉಳಿದರೆ ಮಾತ್ರ ಗ್ರಾಮೀಣ ಪ್ರದೇಶದಲ್ಲಿ ಗೋವುಗಳನ್ನು ಉಳಿಸಲು ಸಾಧ್ಯ. ಬ್ರಿಟೀಷರು ದೇಶವನ್ನು ಆಳುವ ಸಂದರ್ಭದಲ್ಲಿಯೇ ಗೋವುಗಳಿಗೆ ಗೋಮಾಳವನ್ನು ಮೀಸಲಿಟ್ಟಿದ್ದರು. ಇಂದು ಗೋಮಾಳಗಳೇ ಇಲ್ಲದಂತಾಗುತ್ತಿದೆ. ದೇಶೀಯ ಗೋ ತಳಿಗಳ ಹಾಲು, ಮೊಸರು, ತುಪ್ಪ, ಗೋಮೂತ್ರ ಸೇರಿದಂತೆ ಪಂಚಗವ್ಯದಲ್ಲಿ ಔಷಧೀಯ ಗುಣವಿದೆ. ದೇಶಿಯ ಗೋವುಗಳ ರಕ್ಷಣೆ ಸರ್ಕಾರ ಮುಂದಾಗಬೇಕು. ಬಿಡಾಡಿದನಗಳಿಂದ ಸಾರ್ವಜನಿಕರಿಗೆ ಆಗುವ ತೊಂದರೆ ತಪ್ಪಿಸಲು ಗೋಶಾಲೆಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದರು.
ಇದಕ್ಕೂ ಮೊದಲು ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮುಖ್ಯರಸ್ತೆ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ನಂತರ ತಾಲೂಕು ಶಿರಸ್ತೆದಾರ್ ರಮೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಆರ್ಎಸ್ಎಸ್ ತಾಲೂಕು ಕಾರ್ಯವಾಹ ನಾಗರಾಜ ಗುತ್ತಿ, ಪುರಸಭೆ ಸದಸ್ಯ ಮಧುರಾಯ್ ಜಿ. ಶೇಟ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ಎಚ್.ಎಲ್. ಚಂದನ್, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಬಿ. ಶಶಿಕುಮಾರ್, ವಿಹಿಂಪ ತಾಲೂಕು ಅಧ್ಯಕ್ಷ ಜೆ. ನಿರಂಜನ್, ಕಾರ್ಯದರ್ಶಿ ಸಾಥ್ವಿಕ್, ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಯೋಕ್ ಲೋಕೇಶ್ ಕಕ್ಕರಸಿ, ಬಜರಂಗದಳ ಪ್ರಮುಖರಾದ ಉಮಾಶಂಕರ, ಪ್ರಜ್ವಲ್, ನಂದನ್, ಆನಂದ, ವೀರೇಶ್, ವಿನಾಯಕ, ಜಿಪ ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ, ಎಂ.ಕೆ. ಯೋಗೇಶ್ ವಕೀಲ, ವಿಜೇಂದ್ರಗೌಡ ತಲಗುಂದ, ಸಂಜೀವ ಆಚಾರಿ, ರಂಗನಾಥ ಮೊಗವೀರ್, ಮೋಹನ್ ಹಿರೇಶಕುನ, ವೈ.ಜಿ. ಗುರುಮೂರ್ತಿ, ಆಶೀಕ್ ನಾಗಪ್ಪ, ಮಹೇಶ್ ಖಾರ್ವಿ, ಅರುಣ್ ಪುಟ್ಟಣಹಳ್ಳಿ, ಹರೀಶ್ ವಿದ್ಯುತ್ನಗರ, ಸೂರಜ್ ಸೇರಿದಂತೆ ಇತರರಿದ್ದರು.
ಹಿಂದೂ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದ್ದು, ಗೋ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ರಾಜೇಶ್ ಗೌಡ
DC Shivamogga ರಾಜ್ಯೋತ್ಸವ ಕನ್ನಡನಾಡು-ನುಡಿಯ ಅಸ್ಮಿತತೆಯ ಪ್ರತೀಕ : ಗುರುದತ್ತಹೆಗಡೆ
DC Shivamogga ಈ ನೆಲದ ಭವ್ಯ ಪರಂಪರೆ ಮತ್ತು ಶ್ರೀಮಂತ ಸಂಸ್ಕೃತಿಯ ಪ್ರತೀಕವಾಗಿರುವ, ಕನ್ನಡಿಗರ ಅಸ್ಮಿತತೆಯ ಪ್ರತಿಬಿಂಬವಾಗಿರುವ ಕನ್ನಡ ರಾಜ್ಯೋತ್ಸವವನ್ನು ನವೆಂಬರ್01ರಂದು ನಾಡಿನ ಎಲ್ಲರೂ ಪಾಲ್ಗೊಂಡು ಸಂಭ್ರಮ-ಸಡಗರಗಳಿಂದ ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತಹೆಗಡೆ ಅವರು ಹೇಳಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕನ್ನಡ ಕೇವಲ ಒಂದು ಭಾಷೆಯಾಗಿರದೆ, ಅದು ಕನ್ನಡದ ಜನರು, ಅವರ ಸಂಸ್ಕೃತಿ, ಸಾಹಿತ್ಯ, ಕಲೆ, ಸಂಗೀತ, ನೃತ್ಯ, ಭೂಮಿ ಮತ್ತು ನದಿಗಳ ಸಮಗ್ರತೆಯನ್ನು ಪ್ರತಿನಿಧಿಸುವಂತದ್ದಾಗಿದೆ ಎಂದರು.
ನಗರದ ಪ್ರಮುಖ ರಸ್ತೆಗಳ ಅಂಗಡಿ ಮುಂಗಟ್ಟುಗಳಿಗೆ ಅಳವಡಿಸಿರುವ ನಾಮಫಲಕಗಳು ಕನ್ನಡದಲ್ಲಿರುವಂತೆ ಜಿಲ್ಲಾಡಳಿತದ ವತಿಯಿಂದ ಸೂಚನೆ ನೀಡಬೇಕು. ರಾಜ್ಯೋತ್ಸವ ಆಚರಿಸುವ ಮಾಸದಲ್ಲಿ ನಗರದ ಪ್ರಮುಖ ವರ್ತುಲಗಳಿಗೆ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲು ಕ್ರಮ ವಹಿಸಬೇಕು ಎಂದು ಕನ್ನಡ ಪರ ಸಂಘಟನೆಯ ಸದಸ್ಯರಾದ ಮಧುಸೂದನ್ ಅವರು ತಿಳಿಸಿದರು.
DC Shivamogga ರಾಜ್ಯೋತ್ಸವವನ್ನು ನವೆಂಬರ್ 01ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಚರಿಸಲು ಹಾಗೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದ ಅವರು, ಅಂದು ಬೆಳಿಗ್ಗೆ 8ಗಂಟೆಗೆ ನಗರದ ಸೈನ್ಸ್ಮೈದಾನದಿಂದ ಕಲಾತಂಡಗಳೊಂದಿಗೆ ಹೊರಡುವ ಭುವನೇಶ್ವರಿಯ ಭವ್ಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ನೆಹರೂ ಕ್ರೀಡಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದರು.
ರಾಜ್ಯೋತ್ಸವ ದಿನದಂದು ನಗರದ ಪ್ರಮುಖ ರಸ್ತೆ, ವರ್ತುಲಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿ-ಕಟ್ಟಡಗಳಿಗೆ ವಿದ್ಯುತ್ ಅಲಂಕಾರಗೊಳಿಸಿ, ತಳಿರು-ತೋರಣಗಳಿಂದ ಶೃಂಗರಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದ ಅವರು, ನಗರದ ಪ್ರಮುಖ ಬೀದಿಗಳಲ್ಲಿರುವ ಅಂಗಡಿಗಳಿಗೆ ಅಳವಡಿಸಿರುವ ನಾಮಫಲಕ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಕನ್ನಡದಲ್ಲಿರುವಂತೆ ಸಾರ್ವಜನಿಕರು ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಸ್ಥಳೀಯ ಸಂಸ್ಥೆಯಿಂದ ನೀಡಲಾಗಿರುವ ವಾಣಿಜ್ಯ ಪರವಾನಿಗೆಯನ್ನು ನಿರ್ದಾಕ್ಷಿಣ್ಯವಾಗಿ ವಜಾಗೊಳಿಸಲಾಗುವುದು ಎಂದರು.
ನಿಯಮಾನುಸಾರ ಅಂದು ಬೆಳಿಗ್ಗೆ 9ಗಂಟೆಗೆ ಧ್ವಜಾರೋಹಣ, ಧ್ವಜವಂದನೆ ಸ್ವೀಕಾರ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯೋತ್ಸವ ಸಂದೇಶ, ಕವಾಯತು, ನಂತರ ಸ್ಥಳೀಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ ವಿವಿಧ ಇಲಾಖೆಗಳ ಯೋಜನೆಗಳನ್ನು ಪ್ರಚುರಪಡಿಸುವ ಸ್ಥಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು. ಆಕರ್ಷಕ ಸ್ಥಬ್ಧಚಿತ್ರಗಳಿಗೆ, ಪಥಸಂಚಲನದಲ್ಲಿ ಭಾಗವಹಿಸಿ ವಿಶೇಷ ತಂಡಗಳಿಗೆ ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು.
ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಎಲ್ಲಾ ಮಕ್ಕಳನ್ನು ಅಂದು ಸಕಾಲದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು. ಮಕ್ಕಳನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಬರಲು ವಾಹನ ವ್ಯವಸ್ಥೆ ಹಾಗೂ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.
ಅಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ., ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಸುಜಾತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕನ್ನಡಪರ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.
Sahyadri Narayana Hospital ಸಕರಾತ್ಮಕ ಚಿಂತನೆಯೇ ಕಠಿಣ ಪರಿಸ್ಥಿತಿಯಿಂದ ಹೊರಬರುವ ದಾರಿ – ಡಾ. ಅಪರ್ಣ ಶ್ರೀವತ್ಸ
Sahyadri Narayana Hospital ನಮ್ಮ ಸುತ್ತಮುತ್ತಲು ನಮಗೆ ಸ್ಪೂರ್ತಿ ನೀಡುವಂತಹ ಜನರು ಇರುತ್ತಾರೆ ಅವರನ್ನು ನೋಡಿ ನಾವು ಸ್ಫೂರ್ತಿ ತೆಗೆದುಕೊಳ್ಳಬೇಕು, ನಮ್ಮನ್ನು ನೋಡಿ ಬೇರೆಯವರು ಸಹ ಸ್ಪೂರ್ತಿಗೊಳಗಾಗಬೇಕು ಅಂದಾಗ ಮಾತ್ರ ಕೆಲವು ಆಸಾಧ್ಯ ಅಥವಾ ತುಂಬಾ ಕಠಿಣ ಪರಿಸ್ಥಿತಿಗಳಿಂದ ಹೊರ ಬರಬಹುದು ಎಂದು ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕನ್ಸಲ್ಟಂಟ್ ಮೆಡಿಕಲ್ ಅಂಕೋಲಾಜಿಸ್ಟ್ ಡಾ. ಅಪರ್ಣ ಶ್ರೀವತ್ಸ ಅವರು ಹೇಳಿದರು.
ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಬ್ರೆಸ್ಟ್ ಕ್ಯಾನ್ಸರ್ ಸರ್ವೈವರ್ಸ್ ಮೀಟ್ ನಲ್ಲಿ ಮಾತನಾಡಿದ ಡಾ. ಅಪರ್ಣ ಅವರು, ಮನುಷ್ಯ ಯಾವುದೇ ರೀತಿಯ ನಕಾರಾತ್ಮಕ ಯೋಚನೆಗಳನ್ನು ಆಲೋಚಿಸದೆ ಸಕರಾತ್ಮಕವಾಗಿ ಆಲೋಚಿಸಬೇಕು ಇಲ್ಲಿ ಸೇರಿರುವ ಎಲ್ಲ ಕ್ಯಾನ್ಸರ್ ಗೆದ್ದವರು ನಮಗೆ ಸ್ಪೂರ್ತಿ ನೀಡುವಂಥವರಾಗಿದ್ದಾರೆ ಎಂದರು.
ಈ ಕಾರ್ಯಕ್ರಮವು ಕ್ಯಾನ್ಸರ್ನಿಂದ ಗುಣಮುಖರಾದವರ ಧೈರ್ಯ, ಆಶಾಭಾವನೆ ಮತ್ತು ಪುನರುತ್ಥಾನದ ಪಯಣವನ್ನು ಆಚರಿಸುವ ಉದ್ದೇಶದಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಸರ್ವೈವರ್ಸ್ ತಮ್ಮ ಅನುಭವಗಳನ್ನು ಹಂಚಿಕೊಂಡು, ಕ್ಯಾನ್ಸರ್ ವಿರುದ್ಧ ಹೋರಾಡುವ ಇತರರಿಗೆ ಪ್ರೇರಣೆಯಾಗಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಶೈಲಶ್ರೀ ಕೆ, ಸಹ ಪ್ರಾಧ್ಯಾಪಕಿ – ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗ, ಜೆ.ಎನ್.ಎನ್.ಸಿ.ಇ., ಶಿವಮೊಗ್ಗ ಅವರು ಜೀವನದಲ್ಲಿ ನಗು ಇರಬೇಕು ಸಣ್ಣ ಪುಟ್ಟ ನಗು ಕ್ಯಾನ್ಸರ್ ಗೆದ್ದಿದ್ದೇನೆ ಅನ್ನೋ ಖುಷಿ ದುಪ್ಪಟ್ಟು ಮಾಡುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀಮತಿ ಭಾರತೀ ಆರ್. ಬಾಣಕರ್, ಉಪನಿರ್ದೇಶಕಿ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರು ಮಾತನಾಡಿ ಹೆಣ್ಣು ಮಕ್ಕಳಿಗೆ ಇರುವ ಹಕ್ಕುಗಳು ಹಾಗೂ ಸರ್ಕಾರದಿಂದ ಇರುವ ಯೋಜನೆಗಳು ಅದರ ಸದುಪಯೋಗ ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ “ಆರ್ಯಾ ಫೌಂಡೇಶನ್ ಫಾರ್ ಕ್ಯಾನ್ಸರ್ ರೆಸಿಲಿಯನ್ಸ್” ಅನ್ನು ಪ್ರಾರಂಭಿಸಲಾಯಿತು. ಇದರ ಜೊತೆಗೆ ಯೋಗ ತರಬೇತಿ ಅಧಿವೇಶನವನ್ನು ಆಯೋಜಿಸಿ, ದೈಹಿಕ ಹಾಗೂ ಮಾನಸಿಕ ಸಮತೋಲನದ ಮಹತ್ವವನ್ನು ಎತ್ತಿಹಿಡಿಯಲಾಯಿತು.
Sahyadri Narayana Hospital ವಿಗ್ಸ್ ಡಿಸೈನ್ಸ್ ವತಿಯಿಂದ ನಡೆದ ವಿಶೇಷ ಅಧಿವೇಶನದಲ್ಲಿ, ರೋಗಿಣಿಯರಿಗೆ ವಿಗ್ಸ್ (ಕೃತಕ ಕೂದಲು) ಮತ್ತು ಬ್ರೆಸ್ಟ್ ಪ್ರೋಸ್ಥೆಸಿಸ್ಗಳನ್ನು ಹೇಗೆ ಬಳಸಬೇಕು ಎಂಬುದರ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್ ಪಿ ಜಾನ್, ರೇಡಿಯೇಶನ್ ಆಂಕೋಲಾಜಿಸ್ಟ್ರಾದ ಡಾ. ರವಿ ನಡಹಳ್ಳಿ, ಡಾ. ಸುದರ್ಶನ್ ಗುಪ್ತಾ, ಸರ್ಜಿಕಲ್ ಆಂಕೋಲಾಜಿಸ್ಟ್ ಡಾ ವಿವೇಕ ಎಂ.ಎ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.
Photo caption: ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್ ಪಿ ಜಾನ್, ಡಾ. ಅರ್ಪಣಾ ಶ್ರೀವತ್ಸ ಸೇರಿದಂತೆ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಿದರು
Namma TV Shivamogga ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಶೈಕ್ಷಣಿಕ ಪ್ರಗತಿ : ಡಾ. ಕೆ.ವಿ.ಗಿರೀಶ್
Namma TV Shivamogga ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡುವುದರಿಂದ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ಪೋದಾರ್ ಶಾಲೆ ಗಣಿತ ಶಿಕ್ಷಕ ಡಾ. ಕೆ.ವಿ.ಗಿರೀಶ್ ಹೇಳಿದರು.
ನಮ್ಮ ಟಿವಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ಪೂರಕವಾದ ಕೌಶಲ್ಯಗಳನ್ನು ಕಲಿತುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲೆಗೆ ಆರು ವಿಶ್ವ ದಾಖಲೆ ಮತ್ತು ಎರಡು ಗೌರವ ಡಾಕ್ಟರೇಟ್ ಜತೆಯಲ್ಲಿ 21 ಪ್ರಶಸ್ತಿಗಳನ್ನ ತಂದು ಕೊಟ್ಟಿದ್ದೇನೆ. 1600ಕ್ಕೂ ಹೆಚ್ಚು ಆನ್ಲೈನ್ ರಸಪ್ರಶ್ನೆಯಲ್ಲಿ ಭಾಗವಹಿಸಿ ಸಾಧನೆ ಮಾಡಿದ್ದೇನೆ ಎಂದರು.
ಸಾಧನ ಅಕಾಡೆಮಿ ಶಿಕಾರಿಪುರ, ಸ್ಪರ್ಧಾ ಕರ್ನಾಟಕ ಅಕಾಡೆಮಿ ಶಿವಮೊಗ್ಗ, ಸಾಧನ ಸ್ಕೂಲ್ ಶಿಕಾರಿಪುರ ಯೂಟ್ಯೂಬ್ ಚಾನಲ್ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ವರ್ಲ್ಡ್ ಕಲ್ಚರ್ ಎನ್ವಿರಾನಮೆಂಟಲ್ ಪ್ರೊಟೆಕ್ಷನ್ ಕಮಿಷನ್ ನವದೆಹಲಿ ವತಿಯಿಂದ ಗೌರವ ಡಾಕ್ಟರೇಟ್ ಪಡೆದಿದ್ದೇನೆ. ವರ್ಲ್ಡ್ ಎಜುಕೇಶನಲ್ ಅಚೀವ್ವ್ಮೆಂಟ್ ಅವಾರ್ಡ್ ಕೌನ್ಸಿಲ್ ನವೋದಯ ಕೂಡ ಎರಡನೇ ಗೌರವ ಡಾಕ್ಟರೇಟ್ ಕೊಟ್ಟು ಸನ್ಮಾನಿಸಿದೆ ಎಂದರು.
Namma TV Shivamogga ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಡಾ. ಕೆ.ವಿ.ಗಿರೀಶ್ ಅವರನ್ನು ನಮ್ಮ ಟಿವಿ ಬಳಗದ ವತಿಯಿಂದ ಸನ್ಮಾನಿಸಲಾಯಿತು. ನಮ್ಮ ಟಿವಿ ಮಾಲಿಕ ಜಗದೀಶ್, ನಿರೂಪಕ ಜಿ.ವಿಜಯಕುಮಾರ್, ಲೋಕೇಶ್ವರಪ ಉಪಸ್ಥಿತರಿದ್ದರು.
ಶಿವಮೊಗ್ಗ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷರಾದ ಸನ್ಮಾನ್ಯ ಶ್ರೀ ಬಿ ಕೆ ಸಂಗಮೇಶ್ವರ ರವರಿಗೆ ಸನ್ಮಾನ
ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಭಿವೃದ್ಧಿ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಉಪಾಧ್ಯಕ್ಷರು ಜಿಲ್ಲಾ ಪದಾಧಿಕಾರಿಗಳು ಹಾಗೂ ಭದ್ರಾವತಿ ತಾಲ್ಲೂಕಿನ ಸಂಘದ ಪದಾಧಿಕಾರಿಗಳೊಂದಿಗೆ ಭೇಟಿ ನೀಡಿ ದಸರಾ ಉತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಸಿ ಕೊಟ್ಟಿದ್ದಕ್ಕೆ ಹಾಗು KRIDL ಅಧ್ಯಕ್ಷರಾಗಿ ನೇಮಕವಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಸೇವೆ ಸಲ್ಲಿಸುವ ಅವಕಾಶ ಅತ್ಯಂತ ಶೀಘ್ರವಾಗಿ ಲಭಿಸಲಿ ಎಂದು ಹಾರೈಸಲಾಯಿತು. ದಿನಾಂಕ 25.10.2025 ರಂದು ನಡೆಯುವ ಸರ್ವ ಸದಸ್ಯರ ಮಹಾಸಭೆ ಹಾಗು ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಂಘವನ್ನು ಹೆಚ್ಚು ಸಂಘಟಿಸುವ ವಿಚಾರವಾಗಿ ಅನೇಕ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಜಿ ವಿಜಯ್ ಕುಮಾರ್, ಕಾರ್ಯದರ್ಶಿಯವರಾದ ಶ್ರೀ ಎಮ್ ಆರ್ ಕಿರಣ್ ಕುಮಾರ್, ಖಜಾಂಚಿಯವರಾದ ಶ್ರೀ ರವಿ ಅಜ್ಮನಿ, ಸಂಚಾಲಕರಾದ ಶ್ರೀ ಗುರುರಾಜ್ ಮಟ್ಟಿ, ನಿರ್ದೇಶಕರುಗಳಾದ ಶ್ರೀ ಚನ್ನವೀರೇಶ್ ಕಲ್ಲಿಹಾಳ, ಶ್ರೀ ಮಂಜಪ್ಪ ಸಜ್ಜನಶೆಟ್ಟರ್, ಶ್ರೀ ಕೆ ಪಿ ರವೀಶ್, ಶ್ರೀ ಬಸವರಾಜ್ ಎಮ್, ಶ್ರೀ ಲಿಂಗರಾಜು ಜಿ ಸಿ, ಭದ್ರಾವತಿ ತಾಲೂಕು ಅಧ್ಯಕ್ಷರಾದ ಶ್ರೀ ಆನಂದ್ ಕುಮಾರ್, ಶ್ರೀ ವಾಗೀಶ ಕೋಠಿ, ಶ್ರೀ ಮಹದೇವ್ ನಂದಿನಿ ಹೋಟೆಲ್ ಹಾಗು ಅನೇಕ ಹಿರಿಯರು ಹಾಜರಿದ್ದರು.
World Mental Health Day ಮಾನಸಿಕ ಆರೋಗ್ಯ ಸಂರಕ್ಷಣೆ ನಮ್ಮ ಹಕ್ಕು: ಶ್ರೀ ಸಂತೋಷ್ ಎಂ. ಎಸ್.
World Mental Health Day ದಿನಾಂಕ 17 ಅಕ್ಟೋಬರ್ 2025 ರಂದು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಮಾನಸಿಕ ಆರೋಗ್ಯ ಅರಿವು ಸಪ್ತಾಹ ಕಾರ್ಯಕ್ರಮಗಳ ಸಮಾರೋಪ ನುಡಿಗಳನ್ನು ಆಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆಗಿರುವ ಶ್ರೀ ಸಂತೋಷ್ ಎಂ ಎಸ್ ರವರು ಮಾನಸಿಕ ಆರೋಗ್ಯ ಸಂರಕ್ಷಣೆಯು ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಎಂದು ತಿಳಿಸಿದರು .ಮಾನಸಿಕ ಆರೋಗ್ಯ ಕಾಯಿದೆ 2017ರ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಮಾನಸಿಕ ಆರೋಗ್ಯವೆಂಬುದು ತನ್ನ ಹಕ್ಕು ಎಂದು ಅವರು ತಿಳಿಸಿದರು. ಈ ನಿಟ್ಟಿನಲ್ಲಿ ವಿಶ್ವಮಾನಸಿಕ ಆರೋಗ್ಯ ದಿನಾಚರಣೆ ಪ್ರಯುಕ್ತ ದಿನಾಂಕ 10 ಅಕ್ಟೋಬರ್ 2025 ರಿಂದ ದಿನಾಂಕ 17 ಅಕ್ಟೋಬರ್ 2025 ರವರೆಗೆ ಸತತ ಏಳು ದಿನಗಳ ಕಾಲ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗೂ ಕಟೀಲ ಅಶೋಕ್ ಪೈ ಸ್ಮಾರಕ ಪೂರಕ ಆರೋಗ್ಯ ವಿಜ್ಞಾನ ಸಂಸ್ಥೆ ಮತ್ತು ಕಟೀಲ ಅಶೋಕ್ ಪೈಸ್ಮಾರಕ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ನಡೆಸಿರುವ ಅರಿವಿನ ಕಾರ್ಯಕ್ರಮಗಳು ಒಂದು ಆಂದೋಲನವೇ ಸರಿ. ಅಂದು ಡಾ. ಅಶೋಕ್ ಪೈರವರು ಮಾನಸಿಕ ಆರೋಗ್ಯದ ಕುರಿತಾದ ಹಲವಾರು ಮಿಥೈಗಳನ್ನು ತನ್ನ ವಿವಿಧ ಕಾರ್ಯಕ್ರಮಗಳ ಮೂಲಕ ಹೋಗಲಾಡಿಸಲು ಶ್ರಮಿಸಿದರು. ಇಂದು ಡಾ. ರಜನಿ ಪೈ ಹಾಗೂ ಡಾಕ್ಟರ್ ಪ್ರೀತಿ ಶಾನಭಾಗ ರವರು ತಮ್ಮ ಸಂಸ್ಥೆಗಳ ಮೂಲಕ ಮಾನಸಿಕ ಆರೋಗ್ಯಕ್ಕೆ ಸಂಬಂಧಪಟ್ಟ ವಿವಿಧ ಸೇವೆಗಳನ್ನು ನೀಡುವುದಲ್ಲದೆ ಇಲ್ಲಿಯ ವಿದ್ಯಾರ್ಥಿಗಳ ಮೂಲಕ ಒಂದು ಮಾನಸಿಕ ಆರೋಗ್ಯ ಸಂರಕ್ಷಣೆಯ ಪಡೆಯನ್ನೇ ನಿರ್ಮಾಣ ಮಾಡುತ್ತಿದ್ದಾರೆ .ಮಾನಸಿಕ ಆರೋಗ್ಯದ ಕುರಿತು ಆಗಲಿ ಮಾನಸಿಕ ಅನಾರೋಗ್ಯದ ಕುರಿತಾಗಲಿ ಜನರು ಮುಕ್ತವಾಗಿ ಮಾತನಾಡಲು ಹಿಂಜರಿಯುತ್ತಾರೆ .ಆದರೆ ಮಾನಸ ಸಂಸ್ಥೆ ಇಂತಹ ಸಾರ್ವಜನಿಕ ಸ್ಥಳದಲ್ಲೂ ಮಾನಸಿಕ ಆರೋಗ್ಯವನ್ನು ಮುಕ್ತವಾಗಿ ಮಾತನಾಡಬೇಕು ಹಾಗೂ ಪ್ರಾಮುಖ್ಯತೆಯನ್ನು ನೀಡಬೇಕು ಎಂದು ತೋರಿಸಿ ಕೊಡುತ್ತಿದೆ. ಇದು ಒಂದು ಅತ್ಯಂತ ಪ್ರಶಂಸನೀಯ ವಿಷಯ .ನಮ್ಮ ಕಾನೂನು ಸೇವಾ ಪ್ರಾಧಿಕಾರವೂ ಕೂಡ ಮಾನಸಿಕ ಆರೋಗ್ಯ ಪರಿಶೀಲನಾ ಸಮಿತಿಯನ್ನು ರಚಿಸಿ ನಿನ್ನೆಯಷ್ಟೇ ಮೆಗನ್ ಆಸ್ಪತ್ರೆಯಲ್ಲಿ ಅದನ್ನು ಉದ್ಘಾಟಿಸಿದೆ. ಅದಕ್ಕೆ ಡಾಕ್ಟರ್ ರಜನೀ ಪೈರವರು ಒಬ್ಬ ಸದಸ್ಯರಾಗಿರುತ್ತಾರೆ. ಮಾನಸಿಕ ಆರೋಗ್ಯ ಹಾಗೂ ಮಾನಸಿಕ ಅಸ್ವಸ್ಥತೆ, ಇವೆರಡರ ಕುರಿತು ಮುಕ್ತವಾಗಿ ಮಾತನಾಡುವ ಪರಸ್ಪರ ಬೆಂಬಲ ಮೂಡಿಸುವ ವಾತಾವರಣ ನಮ್ಮಲ್ಲಿ ಸೃಷ್ಟಿಯಾಗಬೇಕು ಎಂದು ಅವರು ತಿಳಿಸಿದರು. World Mental Health Day ಈ ಕಾರ್ಯಕ್ರಮದಲ್ಲಿ ಮನೋಸಾಮಾಜಿಕ ಸಂರಕ್ಷಣೆಗಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸುವ ಕಾರ್ಯವನ್ನು ನಡೆಸಲಾಯಿತು. ಇದನ್ನು ಬೋಧಿಸಿದ ಶಿವಮೊಗ್ಗದ ಖ್ಯಾತ ಕವಯತ್ರಿ ಶ್ರೀಮತಿ ಸವಿತಾ ನಾಗಭೂಷಣರವರು ಮಾತನಾಡುತ್ತಾ ಮಾನಸಿಕ ಆರೋಗ್ಯ ಎಂಬುದು ಜೀವನದಲ್ಲಿ ಅತ್ಯಂತ ಪ್ರಮುಖ ಅಂಶ. ಮನಸ್ಸಿನ ಆರೋಗ್ಯವಿಲ್ಲದ ವ್ಯಕ್ತಿ ಯಾವುದನ್ನು ಸಾಧಿಸಲಾರ. ನಮ್ಮ ಮಾನಸಿಕ ಆರೋಗ್ಯವನ್ನು ಉಳಿಸಿಕೊಳ್ಳಬಲ್ಲ ದಾರಿಯನ್ನು ನಾವು ಕಂಡುಕೊಳ್ಳಬೇಕು ,ಮಾತ್ರವಲ್ಲ ಮಾನಸಿಕ ತೊಂದರೆಗೆ ಒಳಗಾದ ಯಾವುದೇ ವ್ಯಕ್ತಿಗೆ ಸೂಕ್ತ ಸಮಾಧಾನ ಬೆಂಬಲ ಹಾಗೂ ಭರವಸೆಯನ್ನು ನೀಡುವ ಮನೋಭಾವ ನಮ್ಮೆಲ್ಲರದ್ದು ಆಗಿರಬೇಕು. ನೊಂದವರಿಗೆ ಹೆಗಲು ನೀಡಲು ಪ್ರತಿಯೊಬ್ಬರೂ ಸಿದ್ದರಿರಬೇಕು ಎಂದು ಅವರು ತಿಳಿಸಿದರು. ಮನೋ ಸಾಮಾಜಿಕ ಸಂರಕ್ಷಣೆಗಾಗಿ ಎಲ್ಲರೂ ಕೂಡ ಪ್ರತಿಜ್ಞೆಯನ್ನು ಸ್ವೀಕರಿಸುವಂತೆ ಅವರು ತಿಳಿಸಿದರು .ಈ ಪ್ರತಿಜ್ಞೆಯಲ್ಲಿ ಮಾನಸಿಕ ಆರೋಗ್ಯವನ್ನು ಹಕ್ಕು ಎಂದು ಪರಿಗಣಿಸುವ ಹಾಗೂ ಅದರ ವಿರುದ್ಧದ ಮಿತ್ಯಗಳನ್ನುಗಳನ್ನು ಹೋಗಲಾಡಿಸಿಕೊಳ್ಳುವ ಹಾಗೂ ಮಾನಸಿಕ ಆರೋಗ್ಯವನ್ನು ಎತ್ತಿ ಹಿಡಿಯುವ ಕಾಯಿದೆಗಳನ್ನು ಸಮರ್ಥಿಸುವ ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು .ಈ ಕಾರ್ಯಕ್ರಮದಲ್ಲಿ ಮಾನಸ ಸಂಸ್ಥೆಯ ನಿರ್ದೇಶಕರಾದ ಡಾಕ್ಟರ್ ರಜನಿ ಎ ಫೈ ರವರು ಶೈಕ್ಷಣಿಕ ನಿರ್ದೇಶಕರಾದ ಡಾ. ಪ್ರೀತಿ ಶಾನ್ಭಾಗ್, ಆಡಳಿತಾಧಿಕಾರಿ ಪ್ರೊಫೆಸರ್ ರಾಮಚಂದ್ರ ಬಾಳಿಗ ಹಾಗೂ ಶೈಕ್ಷಣಿಕ ಸಲಹೆಗಾರರಾದ ಡಾ. ರಾಜೇಂದ್ರ ಚೆನ್ನಿ ಉಪಸ್ಥಿತರಿದ್ದರು .ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಎಲ್ಲರ ನೋವನ್ನು ಬಲ್ಲವೆಯಾದರೆ ಗೆಲ್ಲುವೆ ನೀನು ಬಾಳಲ್ಲಿ ಎಂದು ಅರ್ಥಪೂರ್ಣವಾಗಿ ಹಾಡನ್ನು ಹೇಳಿದರು. ಉಪನ್ಯಾಸಕರಾದ ಶ್ರೀಮತಿ ಶ್ರೀದೇವಿ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಮಂಜುನಾಥ ಸ್ವಾಮಿ ಎಲ್ಲರನ್ನು ವಂದಿಸಿದರು. ಕಾರ್ಯಕ್ರಮದ ಸಂಪೂರ್ಣ ನಿರ್ವಹಣೆಯನ್ನು ಮನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರ್ಚನಾ ಭಟ್ ,ಡಾಕ್ಟರ್ ಹರಿಹರನ್, ಶ್ರೀ ಮಂಜುನಾಥ್ ಹಾಗೂ ಡಾಕ್ಟರ್ ಕೆ ಟಿ ಶ್ವೇತಾ ವಹಿಸಿದ್ದರು. ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ಸಿಬ್ಬಂದಿಗಳು ಹಾಗೂ ಹಲವಾರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೊಂಬತ್ತಿ ಬೆಳಗಿಸಿ ಪ್ರತಿಜ್ಞಾವಿಧಿಯನ್ನು ಅರ್ಥಪೂರ್ಣವಾಗಿ ನಡೆಸಿಕೊಟ್ಟರು. ಕಾರ್ಯಕ್ರಮದ ಉದ್ದೇಶ, ಏಳು ದಿನಗಳ ಕಾಲ ನಡೆಸಲಾದ ವಿವಿಧ ಅರಿವಿನ ಕಾರ್ಯಕ್ರಮಗಳ ವಿವರಗಳನ್ನು ತಿಳಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ಸಂಧ್ಯಾ ಕಾವೇರಿ ಅವರು ಎಲ್ಲರನ್ನು ಈ ಕಾರ್ಯಕ್ರಮದಲ್ಲಿ ಸ್ವಾಗತಿಸಿದರು. ಮನೋ ಸಾಮಾಜಿಕ ಸಂರಕ್ಷಣೆ ಎಂಬುದು ಮಾನಸಿಕ ಆರೋಗ್ಯದ ಕುರಿತ ಅರಿವು ,ಮಾನಸಿಕ ಸ್ವಾಸ್ಥ್ಯಕ್ಕೆ ತೊಂದರೆಯಾದಾಗ ಆರೋಗ್ಯ ಸೇವೆಗಳನ್ನು ಶೀಘ್ರವಾಗಿ ಪಡೆಯುವುದು ಹಾಗೂ ದೊರಕಿಸುವುದು ,ಮಾನಸಿಕ ಆರೋಗ್ಯವನ್ನು ವೃದ್ಧಿಸುವ ಮಾರ್ಗೋಪಾಯಗಳನ್ನು ಕಂಡುಕೊಳ್ಳುವುದು, ಮಾನಸಿಕ ಬೆಂಬಲವನ್ನು ನೀಡಬಲ್ಲ ಸಾಮರಸ್ಯದ ಸಹಕಾರದ ವಿಶ್ವಾಸದ ಸಾಮಾಜಿಕ ವಾತಾವರಣವನ್ನು ಕಲ್ಪಿಸಿಕೊಳ್ಳುವುದು, ಮಾನಸಿಕ ಆರೋಗ್ಯವನ್ನು ಹಕ್ಕು ಎಂದು ಪರಿಗಣಿಸಿ ಗೌರವಿಸುವುದು, ಪ್ರತಿಯೊಬ್ಬರ ಘನತೆ ಗೌರವ ಹಾಗೂ ಭಾವನಾತ್ಮಕ ಸ್ಥಿತಿಗತಿಗಳನ್ನು ಗೌರವಿಸಿ ಬಾಳುವುದು ಇತ್ಯಾದಿ ಅಂಶಗಳನ್ನು ಒಳಗೊಂಡಿದೆ ಎಂದು ಡಾಕ್ಟರ್ ಸಂಧ್ಯಾ ಕಾವೇರಿ ತಿಳಿಸಿದರು. ಮಾನಸಿಕ ಆರೋಗ್ಯವೆಂಬುದು ಇಡೀ ಸಮಾಜ ಅತಿ ಅಗತ್ಯವಾಗಿ ಪರಿಗಣಿಸಬೇಕಾದ ಹಾಗೂ ಸಮಗ್ರ ಆರೋಗ್ಯದಲ್ಲಿ ಸೇರಿಸಿಕೊಳ್ಳಬೇಕಾದ ಅಂಶ ಎಂಬುದನ್ನು ಸಾರ್ವಜನಿಕರ ಗಮನ ಸೆಳೆದು ಮನವರಿಕೆ ಮಾಡುವುದು ಸಪ್ತಾಹ ಕಾರ್ಯಕ್ರಮದ ಹಾಗೂ ಇಂದಿನ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಉದ್ದೇಶ ಎಂದು ಅವರು ತಿಳಿಸಿದರು. ಮೊಂಬತ್ತಿ ಬೆಳಗಿ ಗೋಪಿ ವೃತ್ತದಿಂದ ಮಾನಸ ನರ್ಸಿಂಗ್ ಹೋಮ್ ವರೆಗೆ ಸಾಗುವುದರ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. ಮಾನಸ ಸಂಸ್ಥೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 10 ಅಕ್ಟೋಬರ್ 2025 ರಂದು ಶಿವಮೊಗ್ಗದ ಡಿಎಆರ್ ಸಭಾಂಗಣದಿಂದ ಮಾನಸ ನರ್ಸಿಂಗ್ ಹೋಮ್ ವರೆಗೆ ಜಾಗೃತಿ ಜಾತಾವನ್ನು ನಡೆಸಿದ್ದರು .ಅದೇ ದಿನ ಜಿಲ್ಲಾ ಪೊಲೀಸ್ ಇಲಾಖೆಯ ಸುಮಾರು 200 ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಹಾಗೂ ತುರ್ತು ಸನ್ನಿವೇಶಗಳಲ್ಲಿ ಮಾನಸಿಕ ಆರೋಗ್ಯ ಸೇವೆ ವಿಷಯಗಳ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀ ಮಂಜುನಾಥ ನಾಯಕರವರು ನಡೆಸಿದ್ದರು .ಕಾರ್ಯಕ್ರಮದಲ್ಲಿ ನ್ಯಾಯಾಧೀಶರಾದ ಶ್ರೀ ಸಂತೋಷ್ ಎಂ ಎಸ್,ಜಿಲ್ಲಾ ರಕ್ಷಣಾಧಿಕಾರಿ ಶ್ರೀ ಮಿಥುನ್ ಕುಮಾರ್ ರವರು ಉಪಸ್ಥಿತರಿದ್ದರು. ಅದೇ ದಿನ ವೆಬಿನಾರ್ ಮೂಲಕ ಮಾನಸಿಕ ಆರೋಗ್ಯ ಸೇವೆ ಲಭ್ಯತೆ _ತುರ್ತು ಹಾಗೂ ಬಿಕ್ಕಟ್ಟು ಸನ್ನಿವೇಶದಲ್ಲಿ ಎಂಬ ವಿಷಯದ ಕುರಿತು ವೆಬಿನಾರ್ ಮೂಲಕ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ದಿನಾಂಕ 11 ಅಕ್ಟೋಬರ್ 2025 ರಂದು ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ಸಿಟಿ ಸೆಂಟರ್ ಮಾಲ್ ನಲ್ಲಿ ನೃತ್ಯರೂಪಕದ ಮೂಲಕ ಮಾನಸಿಕ ಆರೋಗ್ಯದ ಪ್ರಾಮುಖ್ಯತೆಯ ಕುರಿತು ಸಾರ್ವಜನಿಕರ ಗಮನವನ್ನು ಸೆಳೆದರು .ಅದೇ ಸ್ಥಳದಲ್ಲಿ ವಿದ್ಯಾರ್ಥಿಗಳು ಎಕ್ಸ್ಪ್ರೆಸ್ವೆ ಆರ್ಟ್ ಅಥವಾ ಅಭಿವ್ಯಕ್ತಿ ಕಲೆ ಹಾಗೂ ಚಿಕಿತ್ಸೆ ಎಂಬ ವಿಷಯದ ಪ್ರಾತ್ಯಕ್ಷಿಕೆಯನ್ನು ನೀಡಿದರು. ದಿನಾಂಕ 12 ಅಕ್ಟೋಬರ್ 2025 ರಂದು ಆನ್ಲೈನ್ ರಸಪ್ರಶ್ನೆ ಕಾರ್ಯಕ್ರಮವನ್ನು ಮಾನಸಿಕ ಆರೋಗ್ಯದ ಕುರಿತಾಗಿ ನಡೆಸಲಾಯಿತು. ಇದರಲ್ಲಿ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ದಿನಾಂಕ 13 ಅಕ್ಟೋಬರ್ 2025 ರಂದು ಕಾಲೇಜಿನ ಮನಸ್ ಶಾಸ್ತ್ರ ವಿಭಾಗದ ಮೂಲಕ ಹದಿಹರೆಯದ ವಿದ್ಯಾರ್ಥಿಗಳಿಗಾಗಿ ಆಪ್ಟಿಟ್ಯೂಡ್ ಪರೀಕ್ಷೆ ಅಂದರೆ ಅಭಿಕ್ಷಮತೆ ಪರೀಕ್ಷೆಯನ್ನು ನಡೆಸಿ ಮುಂದಿನ ವಿದ್ಯಾಭ್ಯಾಸ ಹಾಗೂ ಉದ್ಯೋಗಕ್ಕೆ ಅವರನ್ನು ಪ್ರೋತ್ಸಾಹಿಸಲಾಯಿತು. ದಿನಾಂಕ 14 ಅಕ್ಟೋಬರ್ 2025 ರಂದು ಕಾಲೇಜಿನ ಮನಶಾಸ್ತ್ರ ವಿದ್ಯಾರ್ಥಿಗಳು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಅಥವಾ ಬಿಕ್ಕಟ್ಟು ನಿರ್ವಹಣೆ ಎಂಬ ವಿಷಯದ ಕುರಿತು ವಿಚಾರ ಸಂಕಿರಣವನ್ನು ನಡೆಸಿಕೊಟ್ಟರು. ದಿನಾಂಕ 15 ಅಕ್ಟೋಬರ್ 2025 ರಂದು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಆಪ್ತ ಎಂಬ ಆಪ್ತ ಸಮಾಲೋಚನಾ ಹಾಗೂ ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಆಪ್ತ ಸಮಾಲೋಚನೆಯ ಕುರಿತು ವಿಚಾರ ಸಂಕಿರಣವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮನೋವೈದ್ಯರಾದ ಡಾಕ್ಟರ್ ಪ್ರವೀಣ್ ಹಾಗೂ ಹಿರಿಯ ಆಪ್ತ ಸಮಾಲೋಚಕರಾದ ಶ್ರೀ ಗಣೇಶ ರಾವ್ ನಾಡಿಗೇರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು .ದಿನಾಂಕ 16 ಅಕ್ಟೋಬರ್ 2025 ರಂದು ಕಟೀಲ ಅಶೋಕ್ ಪೈ ಸ್ಮಾರಕ ಕಾಲೇಜಿನ ಮನಶಾಸ್ತ್ರ ಪದವಿ ವಿದ್ಯಾರ್ಥಿಗಳು ಶಿವಮೊಗ್ಗ ಎಫ್ ಎಂ ಮೂಲಕ ಮಾನಸಿಕ ಆರೋಗ್ಯ ಹಾಗೂ ಅದರ ಪ್ರಾಮುಖ್ಯತೆಯ ಕುರಿತು ಸಂವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ದಿನಾಂಕ 17 ಅಕ್ಟೋಬರ್ 2025 ರಂದು ಡಾಕ್ಟರ್ ಸುಭಾಸಿಸ್ ಭಾದ್ರ ,ಮುಖ್ಯಸ್ಥರು ಬಿಕ್ಕಟ್ಟು ನಿರ್ವಹಣಾ ಮನಶಾಸ್ತ್ರಜ್ಞ ವಿಭಾಗ ,ಬೆಂಗಳೂರು ಇವರಿಂದ “ಮಾನಸಿಕ ಆರೋಗ್ಯ ಪ್ರಥಮ ಚಿಕಿತ್ಸೆ /ಸೈಕಲಾಜಿಕಲ್ ಫಸ್ಟೇಡ್ “ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ಅಲ್ಲದೆ ಏಳು ದಿನಗಳ ಸಪ್ತಾಹ ಕಾರ್ಯಕ್ರಮವನ್ನು ನಗರದ ಗೋಪಿ ವೃತ್ತದಲ್ಲಿ ಸಾರ್ವಜನಿಕರೊಂದಿಗೆ ಮಾನ್ಯ ನ್ಯಾಯಾಧೀಶರಾದ ಶ್ರೀ ಸಂತೋಷ್ ಎಂ ಎಸ್ ರವರ ಸಮ್ಮುಖದಲ್ಲಿ ಹಾಗೂ ಹಿರಿಯ ಕವಯತ್ರಿ ಸವಿತಾ ನಾಗಭೂಷಣರವರ ನೇತೃತ್ವದಲ್ಲಿ ಮನೋ ಸಾಮಾಜಿಕ ಸಂರಕ್ಷಣೆಗಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿ ಮೊಂಬತ್ತಿ ಬೆಳಗಿಸುವುದರ ಮೂಲಕ ಸಮಾರೋಪಗೊಳಿಸಲಾಯಿತು
Rotary Shimoga ಸಕಾಲದಲ್ಲಿ ವೈದ್ಯರ ಮಾರ್ಗದರ್ಶನ ಅವಶ್ಯಕ :ಡಾ. ಪ್ರಿಯಂ ವದ
Rotary Shimoga ವಿವಾಹಕ್ಕಿಂತ ಮುಂಚೆ ಎಚ್ಐವಿ ವ್ಯಾಕ್ಸಿನೇಷನ್ ಪಡೆದರೆ ಗರ್ಭ ಕ್ಯಾನ್ಸರ್ ತಡೆಗಟ್ಟಬಹುದು ಎಂದು ವೈದ್ಯೆ ಡಾ. ಪ್ರಿಯಂ ವದ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ವತಿಯಿಂದ ಅಖಿಲ ಭಾರತ ವೈದ್ಯಕೀಯ ಸಂಸ್ಥೆ ಮತ್ತು ಶಿವಮೊಗ್ಗ ಅಬ್ಸ್ತಿಟ್ರಿಕ್ಸ್ ಗೈನೋಕಾಲಜಿಕಲ್ ಸೊಸೈಟಿ ವುಮೆನ್ ಡಾಕ್ಟರ್ ವಿಂಗ್ ಶಿವಮೊಗ್ಗ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಸ್ತುತ ಪರಿಸ್ಥಿತಿಯಲ್ಲಿ ವಿವಾಹಕ್ಕಿಂತ ಮುಂಚೆ ಮಹಿಳೆಯರು ಎಚ್ಪಿವಿ ವ್ಯಾಕ್ಸಿನೇಷನ್ ಪಡೆದರೆ ಗರ್ಭ ಕ್ಯಾನ್ಸರ್ ತಡೆಗಟ್ಟಬಹುದು ಹಾಗೂ ಸಕಾಲದಲ್ಲಿ ವೈದ್ಯರ ಮಾರ್ಗದರ್ಶನ ಪಡೆಯುವುದರಿಂದ ಮಹಿಳೆಯರು ಬ್ರೆಸ್ಟ್ ಕ್ಯಾನ್ಸರ್, ಲಿವರ್ ಕ್ಯಾನ್ಸರ್ ತಡೆಯಲು ಸಾಧ್ಯ ಎಂದು ತಿಳಿಸಿದರು.
ಪುರುಷರು ಸಹ ಸಕಾಲದಲ್ಲಿ ವೈದ್ಯರನ್ನು ಸಂಪರ್ಕಿಸಿದರೆ ಲಿವರ್ ಕ್ಯಾನ್ಸರ್, ಪಿತ್ತಕೋಶ ಕ್ಯಾನ್ಸರ್ ಹಾಗೂ ಇನ್ನಿತರ ಕ್ಯಾನ್ಸರ್ಗಳನ್ನು ತಡೆಗಟ್ಟಬಹುದು. ಪರಿಸ್ಥಿತಿಯಲ್ಲಿ ಯುವ ಪೀಳಿಗೆ ಜಂಕ್ ಫುಡ್, ಪದಾರ್ಥಗಳು ಮತ್ತು ಪರ್ಫ್ಯೂಮ್ ವಿಭಿನ್ನ ರೀತಿಯ ಪೌಡರ್ಗಳನ್ನ ಬಳಸೋದನ್ನ ಕಡಿಮೆ ಮಾಡಿದರೆ ಮಾತ್ರ ಕೆಲವೊಂದು ಕಾಯಿಲೆಗಳಿಂದ ದೂರ ಇರಬಹುದು. Rotary Shimoga ಆದ್ದರಿಂದ ಪ್ರತಿಯೊಬ್ಬರೂ ಸಕಾಲದಲ್ಲಿ ವೈದ್ಯರನ್ನು ಸಂಪರ್ಕಿಸುವುದು ಬಹಳ ಅವಶ್ಯಕ. ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನ ಕೈಗೊಳ್ಳಬೇಕು. ರೋಟರಿ ಸಂಸ್ಥೆಗಳು ಇಂತಹ ಕಾರ್ಯಕ್ರಮಗಳನ್ನು ಕೈಗೊಂಡು ಜನರಲ್ಲಿ ಅರಿವನ್ನು ಮೂಡಿಸುವುದು ಬಹಳ ಅವಶ್ಯಕವಾಗಿದೆ ಎಂದರು.
ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ಪ್ರತಿಯೊಬ್ಬರು ನಿರ್ದಿಷ್ಟ ಸಮಯದಲ್ಲಿ ವೈದ್ಯರನ್ನ ಸಂಪರ್ಕಿಸುವುದರಿAದ ಹಲವಾರು ಕ್ಯಾನ್ಸರ್ ಮತ್ತು ವಿಭಿನ್ನವಾದ ಕಾಯಿಲೆಗಳಿಂದ ದೂರವಿರಬಹುದು. ಮುನ್ನೆಚ್ಚರಿಕೆಯಾಗಿ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳುವುದು ಅವಶ್ಯ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಕಾರ್ಯದರ್ಶಿ ಧನಂಜಯ ಬಿಆರ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಡಾ. ಅರುಣ್ ಎಂ ಎಸ್, ಚಂದ್ರಹಾಸ್ ಪಿ ರಾಯ್ಕರ್, ಮಾಜಿ ಸಹಾಯಕ ಗವರ್ನರ್ ಡಾ. ಪರಮೇಶ್ವರ ಶಿಗ್ಗಾವ್, ಡಾ. ಗುಡದಪ್ಪ ಕಸಬಿ, ಗಂಗಪ್ಪ, ವೀಣಾ ಕಿಶೋರ್ ಮತ್ತು ಇತರ ರೋಟರಿ ಸದಸ್ಯರು ಉಪಸ್ಥಿತರಿದ್ದರು.
Tiger and Lion Safari ಅಕ್ಟೋಬರ್ 21 ರಂದು ತ್ಯಾವರೆಕೊಪ್ಪ ಜೂ & ಸಫಾರಿ ಓಪನ್!
Tiger and Lion Safari ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:21.10.2025 ರ ಮಂಗಳವಾರವೂ ಸಹ ತೆರೆದಿರುತ್ತದೆ.
Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.
Child Labor Rehabilitation Scheme ರಾಜ್ಯ ಬಾಲಕಾರ್ಮಿಕ ನಿರ್ಮೂಲನೆ ಯೋಜನಾ ಸಂಸ್ಥೆಗೆ ದೇಣಿಗೆ ನೀಡಲು ಮನವಿ
Child Labor Rehabilitation Scheme ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ನಿಯಮಗಳು 2017 (ಕೇಂದ್ರ /ರಾಜ್ಯ) ಎಸ್.ಓ.ಪಿ( ಕೇಂದ್ರ/ರಾಜ್ಯ) 2017 ಗಳ ಅನುಷ್ಠಾನ ಮಾಹಿತಿ ಶಿಕ್ಷಣ ಮತ್ತು ಸಂವಹನ(ಐಇಸಿ) ಚಟುವಟಿಕೆಗಳು, ಸಮೀಕ್ಷೆ, ಕಾರ್ಯಾಗಾರ, ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮತ್ತು ಕರ್ನಾಟಕವನ್ನು ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ರಾಜ್ಯವನ್ನಾಗಿಸಲು ರಾಜ್ಯ ಸರ್ಕಾರವು ಜಾರಿಗೆ ತಂದಿರುವ ರಾಜ್ಯ ಬಾಲಕಾರ್ಮಿಕ ಪುನರ್ವಸತಿ ಯೋಜನೆ ಅನುಷ್ಠಾನ ಹಾಗೂ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಉದ್ಯೋಗದಾತರಿಂದ, ಸಂಸ್ಥೆಗಳಿAದ ಹಾಗೂ ಸಾರ್ವಜನಿಕರಿಂದ ದೇಣಿಗೆಯನ್ನು ಪಡೆಯುವುದು ಅವಶ್ಯವಿರುತ್ತದೆ ಎಂದು ಸರ್ಕಾರವು ಅನುಮೋದನೆ ನೀಡಿರುತ್ತದೆ.
Child Labor Rehabilitation Scheme ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ವತಿಯಿಂದ ದೇಣಿಗೆ ಪಡೆಯುವ ಕುರಿತು ಆದಾಯಕರ ಇಲಾಖೆಯಿಂದ 80ಜಿ, 12ಎ ಪ್ರಮಾಣ ಪತ್ರವನ್ನು ಹಾಗೂ CSR ಚಟುವಟಿಕೆಗಳನ್ನು ನಡೆಸಲು Ministry of Corporate Affairs, Government of India ಇವರಿಂದ ಅನುಮತಿ ಪಡೆಯಲಾಗಿದೆ. ಈ ದೇಣಿಗೆಯನ್ನು ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ Canara Bank Account Number :110058103941 IFSC Code; CNRB0007295 Bangalore ಗೆ ಜಮಾ ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರು ಮನವಿಯಲ್ಲಿ ತಿಳಿಸಿರುತ್ತಾರೆ.
Keladi Shivappa Nayaka University of Agricultural ಕೃಷಿ ತಂತ್ರಜ್ಞಾನ ಹೊಂದಿದ ರೈತರು ಉಪಬೆಳೆಗಳಿಂದ ಮಾಲ್ & ಸೂಪರ್ ಮಾರ್ಕೆಟ್ ಗಳಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಿ- ಡಾ.ವಿ.ವೆಂಕಟಸುಬ್ರಮಣಿಯನ್
Keladi Shivappa Nayaka University of Agricultural ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬೆಂಗಳೂರು ಕೃಷಿ ತಂತ್ರಜ್ಞಾನ ಅನ್ವಯಿಕ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ||ವಿ. ವೆಂಕಟಸುಬ್ರಮಣಿಯನ್ ತಿಳಿಸಿದರು.
ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಕಳೆದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ, ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವ ಆಹಾರ ದಿನಾಚರಣೆ ಅಂಗವಾಗಿ ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ “ ಕೃಷಿ ಯಾನ- ಕೃಷಿ ಪ್ರವಾಸೋದ್ಯಮ ಕೇಂದ್ರ” ಹಾಗೂ “ ಸಹ್ಯಾದ್ರಿ ಆಹಾರೋತ್ಪನ್ನಗಳ ಮಾರಾಟ ಮಳಿಗೆ”ಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರ ಹಿತದೃಷ್ಟಿಯಿಂದ ಕೃಷಿ ವಿಶ್ವವಿದ್ಯಾಲಯವು ಹೊಸ ಉತ್ಪನ್ನಗಳನ್ನು ತಯಾರು ಮಾಡಲು ಅನೇಕ ಸೌಲಭ್ಯಗಳು ಹಾಗೂ ಸಹಕಾರವನ್ನು ನೀಡುತ್ತಿದ್ದು, ರೈತರು ಇದನ್ನು ಸರಿಯಾಗಿ ಬಳಸಿಕೊಳ್ಳಬೇಕು. ವರ್ತಮಾನದಲ್ಲಿ ರೈತರು ಉಪ ಬೆಳೆಗಳನ್ನು ಬೆಳೆಯುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬೇಕಿದ್ದು, ಈ ನಿಟ್ಟಿನಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಇದರಿಂದ ರೈತರ ಉತ್ಪನ್ನಗಳಿಗೆ ಬೃಹತ್ ಮಾರುಕಟ್ಟೆ ಸೃಷ್ಟಿಯಾಗಲಿದೆ ಎಂದರು.
ಭಾರತವು ಹಸಿರು ಕ್ರಾಂತಿ, ಕ್ಷೀರಾ ಕ್ರಾಂತಿ, ನೀಲಿ ಕ್ರಾಂತಿ ಬಳಿಕ ಈಗ ಸಮೃದ್ಧಿ ಕ್ರಾಂತಿಗೆ ಕಾಲಿಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಿಸಾನ್ ಸಮೃದ್ದಿ ಕ್ರಾಂತಿಗೆ ಕರೆ ನೀಡಿದ್ದು, ಕೃಷಿ ಸಂಶೋಧನೆಗಳು ಆ ದಿಕ್ಕಿನಲ್ಲಿ ಸಾಗಬೇಕಿದೆ. ಕೃಷಿಯಲ್ಲಿನ ತಂತ್ರಜ್ಞಾನವು ರೈತರ ಉತ್ಪನ್ನಗಳ ಮಾರುಕಟ್ಟೆಯ ನೆರವಿಗೆ ಬರಬೇಕಿದೆ. ಆ ಮೂಲಕ ಕೃಷಿ ಲಾಭದಾಯಕವಾಗಬೇಕು, ಇದರಿಂದ ಯುವಜನರು ಕೂಡ ಕೃಷಿಯತ್ತ ಮುಖ ಮಾಡುವ ವಾತಾರವಣ ನಿರ್ಮಾಣವಾಗುತ್ತದೆ ಎಂದರು.
Keladi Shivappa Nayaka University of Agricultural ಕೃಷಿ ವಿವಿ ಆಡಳಿತ ಮಂಡಳಿ ಸದಸ್ಯ ಹೆಚ್.ಡಿ. ದೇವಿಕುಮಾರ್ ಅವರು ಕೃಷಿ ವಿವಿ ಪರಿಚಯಿಸಿದ ಕೃಷಿ ಪ್ರವಾಸೋದ್ಯಮ ಪ್ರಚಾರ ಕರಪತ್ರ ಬಿಡುಗಡೆ ಮಾತನಾಡಿ, ಬಡತನದಿಂದ ದೇಶದಲ್ಲಿ ಒಂದು ಹೊತ್ತಿನ ಊಟಕ್ಕಾಗಿ ಜನರು ನರಳುತ್ತಿದ್ದಾರೆ. ಅನ್ನ ತಿನ್ನುವವನಿಗಿಂತ ಚೆಲ್ಲುವವರ ಸಂಖ್ಯೆ ಹೆಚ್ಚಾಗಿದ್ದು, ತಿಳುವಳಿಕೆ ಹೊಂದಿರುವ ಜನರೇ ಇಂತಹ ಕೆಲಸವನ್ನು ಮಾಡುತ್ತಿರುವುದು ದುಃಖಕರವಾಗಿದೆ. ಇಂದಿಗೂ ಸಹ ವಿಶ್ವದಾದ್ಯಂತ ಕೋಟ್ಯಾಂತರ ಜನರು ಹಸಿವಿನಿಂದ ಬಳಲುತ್ತಿದ್ದು, ಹಸಿವಿನ ಸಮಸ್ಯೆ ಹಾಗೂ ಆಹಾರ ಸೇವೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಅ.16 ರಂದು ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ವಿಶ್ವಸAಸ್ಥೆ ಆಹಾರ ಮತ್ತು ಕೃಷಿ ಸಂಸ್ಥೆ ಸ್ಥಾಪನೆಯ ವಾರ್ಷಿಕೋತ್ಸವವನ್ನು ಗುರುತಿಸಲು ವಿಶ್ವ ಆಹಾರ ದಿನವನ್ನು 1945 ಅ.16 ರಂದು ಪ್ರಾರಂಭಿಸಲಾಯಿತು. ಪ್ರಪಂಚದಾದ್ಯAತ ಬಡತವನ್ನು ಕಡಿಮೆ ಮಾಡುವುದು ಮತ್ತು ಜೀವನದ ಗುಣಮಟ್ಟವನ್ನು ಸುಧಾರಿಸುವುದು ಇದರ ಮುಖ್ಯ ಧ್ಯೇಯವಾಗಿದ್ದು, ಆ ನಿಟ್ಟಿನಲ್ಲಿ ಕಾರ್ಯ ಮಾಡಲಾಗುತ್ತಿದೆ.
ಈ ವರ್ಷದ ಆಹಾರ ದಿನಾಚರಣೆಯು ಎಲ್ಲರಿಗೂ ನೀರು ಮತ್ತು ಪೋಷಣೆ ಬಗ್ಗೆ ಕೇಂದ್ರಿಕರಿಸುತ್ತಿದೆ. ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ವ್ಯರ್ಥ ಮಾಡಬಾರದು. ಹಸಿದವರಿಗೆ ಊಟವನ್ನು ನೀಡಬೇಕು. ಆ ಮೂಲಕ ದಯೆ, ಕರುಣೆಯ ಬದುಕನ್ನು ಸಾಗಿಸಬೇಕು. ಆರೋಗ್ಯ ಮತ್ತು ಅಭಿವೃದ್ದಿ, ಆಹಾರ ಭದ್ರತೆ ಮತ್ತು ಪೌಷ್ಟಿಕಾಂಶ ಎಲ್ಲರಿಗೂ ಅಗತ್ಯವಾಗಿ ಬೇಕಾಗಿದ್ದು, ಜನರಿಗೆ ಪೌಷ್ಟಿಕ ಆಹಾರ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಆರ್.ಸಿ.ಜಗದೀಶ್ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕೆ.ಕಿರಣ್ ಕುಮಾರ್, ವ್ಯವಸ್ಥಾಪನಾ ಮಂಡಳಿಯ ಸದಸ್ಯರಾದ ಹೆಚ್.ಎಸ್.ಶಶಾಂಕ್, ಕೃಷಿ ವಿವಿಯ ಡೀನ್ ಡಾ.ಡಿ.ತಿಪ್ಪೇಶ್, ವಿವಿಯ ವಿಸ್ತರಣಾ ನಿರ್ದೇಶಕರು ಜಿ.ಕೆ.ಗೀರೀಶ್ ವಿವಿ ಸಹ ವಿಸ್ತರಣಾ ನಿರ್ದೇಶಕ ಡಾ.ಬಿ.ಸಿ.ಹನುಮಂತಸ್ವಾಮಿ, ವಿವಿ ಶಿಕ್ಷಣ ನಿರ್ದೇಶಕ ಡಾ. ಹೇಮ್ಲಾ ನಾಯ್ಕ್, ವಿವಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ರೈತರು ಹಾಜರಿದ್ದರು.
