Sunday, February 15, 2026
Sunday, February 15, 2026
Home Blog Page 132

Islamic Family Counseling Committee ಆಧುನಿಕತೆಯ ಬದುಕಿನಲ್ಲಿ ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕೆ ಇಸ್ಲಾಮಿಕ್ ತತ್ವದಲ್ಲಿ ಪರಿಹಾರವಿದೆ-ಮುಫ್ತಿ ಮುಜೀಬುಲ್ಲಾ ಸಾಬ್

0

Islamic Family Counseling Committee ಇಸ್ಲಾಮಿಕ್ ತತ್ವಗಳ ಅಡಿಯಲ್ಲಿ ಕೌಟುಂಬಿಕ ಸಮಸ್ಯೆಗಳಿಗೆ ಸೂಕ್ತ ಪರಿಹಾರವಿದ್ದು, ಈ ಬಗ್ಗೆ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಶಿವಮೊಗ್ಗದ ಮುಪ್ತಿ ಮುಜೀಬುಲ್ಲಾ ಸಾಬ್ ಹೇಳಿದರು.
ಸೊರಬ ಪಟ್ಟಣದ ಮಾರ್ಕೆಟ್ ರಸ್ತೆಯ ಉಮಾ ಶಂಕರ ರೆಸಿಡೆನ್ಸಿಯಲ್ ಸಭಾಂಗಣದಲ್ಲಿ ಹಮ್ಮಿಕೊಂಡ ಇಸ್ಲಾಮಿಕ್ ಫ್ಯಾಮಿಲಿ ಕೌನ್ಸಲಿಂಗ್ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಯುವ ಸಮುದಾಯದಲ್ಲಿ ಬೆಳೆಯುತ್ತಿರುವ ಕೆಡುಕು ಮತ್ತು ಅದರ ನಿರ್ಮೂಲನೆ ಹೇಗೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಆಧುನಿಕತೆಯ ಬದುಕಿನಲ್ಲಿ ಕೌಟುಂಬಿಕ ಸಮಸ್ಯೆಗಳ ಪರಿಹಾರಕ್ಕೆ ಇಸ್ಲಾಮಿಕ್ ತತ್ವದಡಿಯಲ್ಲಿ ಅವಕಾಶವಿದೆ. ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಸ್ಲಾಮಿಕ್ ಫ್ಯಾಮಿಲಿ ಕೌನ್ಸಲಿಂಗ್ ಸಮಿತಿ ಕಚೇರಿ ಆರಂಭಿಸಿರುವುದು ಸ್ವಾಗತಾರ್ಹ ವಿಷಯವಾಗಿದೆ. ಕುಟುಂಬದ ಸದಸ್ಯರ ನಡುವಿನ ಸಂಘರ್ಷ, ಭಿನ್ನಾಭಿಪ್ರಾಯಗಳನ್ನು ಗುರು-ಹಿರಿಯರ ಸಮ್ಮುಖದಲ್ಲಿ ಪರಿಹರಿಸಿಕೊಂಡರೆ, ಭವಿಷ್ಯದ ಮಕ್ಕಳ ಮೇಲೆ ಕೆಟ್ಟ ಪ್ರಭಾವ ಭೀರಲು ಸಾಧ್ಯವಾಗುವುದಿಲ್ಲ. ಮೊಬೈಲ್ ಪ್ರಸ್ತುತ ದಿನಮಾನಗಳಲ್ಲಿ ಅವಿಭಾಜ್ಯ ಅಂಗದಂತಾಗಿದ್ದು, ಇದನ್ನು ಜ್ಞಾನದ ವೃದ್ಧಿಗೆ ಬಳಸಿಕೊಳ್ಳಬೇಕೆ ವಿನಃ, ದುರುಪಯೋಗ ಪಡೆಸಿಕೊಳ್ಳುವುದು ಮತ್ತು ಮಾರುಹೋಗುವುದು ಸಲ್ಲದು ಎಂದರು.
ಕೌಟುಂಬಿಕ ವಿಷಯದಲ್ಲಿ ಪತಿ ಪತ್ನಿಯರ ನಡುವೆ ಹೊಂದಾಣಿಕೆಯ ಕೊರತೆ ಎದುರಾದಾಗ ಅನೇಕ ಸಮಸ್ಯೆಗಳು ವಿಕೋಪಕ್ಕೆ ತಿರುಗುತ್ತವೆ. ಇವೆಲ್ಲವನ್ನೂ ರಾಜಿ-ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದು. ಆದರೆ, ಕೆಲವರು ಸಣ್ಣ-ಪುಟ್ಟ ವಿಷಯಗಳನ್ನು ಸಹ ಗಂಭೀರವಾಗಿ ಪರಿಗಣಿಸಿಕೊಂಡು ತಮ್ಮ ಅಮೂಲ್ಯವಾದ ಜೀವನವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಯುವ ಜನತೆ ಮಾದಕ ವ್ಯಸನಕ್ಕೆ ಒಳಗಾಗುವುದು, ಸಾಮಾಜಿಕ ಜಾಲತಾಣಗಳಲ್ಲಿನ ಸುಳ್ಳು ಮಾಹಿತಿಗಳಿಗೆ ಕಿವಿಗೊಡುವುದು ಸಹ ಸಮಾಜಕ್ಕೆ ಮಾರಕವಾಗುತ್ತದೆ. ಮಾನಸಿಕ ಕಿನ್ನತೆಗೆ ಒಳಗಾದವರು ಇಂತಹ ಕೌನ್ಸಲಿಂಗ್ ಸಮಿತಿಯನ್ನು ಸಂಪರ್ಕಿಸಿದರೆ ಸೂಕ್ತ ಮಾರ್ಗದರ್ಶನ ದೊರೆಯಲಿದೆ ಎಂದರು.
ನಿಕಾಃ ತಲಾಕ್ ಖುಲಾ ಮತ್ತು ಫ್ಯಾಮಿಲಿ ಕೌನ್ಸಲಿಂಗ್‌ನ ಜಿಲ್ಲಾ ಪ್ರಮುಖರಾದ ಮೌಲಾನ ಹಾಮಿದ್ ಉಮ್ರಿ ಶಿವಮೊಗ್ಗ ಮಾತನಾಡಿ, ಮೊಬೈಲ್ ವ್ಯಾಮೋಹದಿಂದ ಅಪ್ರಾಪ್ತ ವಯಸ್ಸಿನ ಮಕ್ಕಳ ಭವಿಷ್ಯಕ್ಕೆ ಕುಂದು ಬರುತ್ತದೆ. ಈ ನಿಟ್ಟಿನಲ್ಲಿ ಇಂತಹ ಕೌನ್ಸಲಿಂಗ್ ಸಮಿತಿಗಳ ಅವಶ್ಯಕತೆ ಇದೆ. ಪೋಷಕರು ಸಹ ತಮ್ಮ ಮಕ್ಕಳ ಶಿಕ್ಷಣದ ಜೊತೆಗೆ ಚಲನವಲನಗಳ ಬಗ್ಗೆ ನಿಗಾ ವಹಿಸುವುದು ಅತಿ ಮುಖ್ಯವಾಗಿದೆ. ತಾಲೂಕು ಸಮಿತಿಯಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗದಿದ್ದರೆ, ಜಿಲ್ಲಾ ಹಾಗೂ ರಾಜ್ಯ ಸಮಿತಿಗಳ ನೆರವನ್ನು ಪಡೆಯಬಹುದು. ಕುಟುಂಬಗಳಲ್ಲಿ ಪರಸ್ಪರ ಒಪ್ಪಿತ ಮದುವೆಗಳು ಯಶ ಕಾಣುತ್ತವೆ. ಕೌಟುಂಬಿಕ ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಪ್ರಕರಣಗಳು ನ್ಯಾಯಾಲಯ ಮೆಟ್ಟಿಲೇರುವ ಮುನ್ನ ಪರಿಹಾರ ಕಂಡುಕೊAಡರೆ, ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಸಾಧ್ಯವಿದೆ ಎಂದರು.
Islamic Family Counseling Committee ತಾಲೂಕು ಸಮಿತಿ ಅಧ್ಯಕ್ಷ ಮೌಲಾನಾ ರಿಯಾಜ್ ಆಹ್ಮದ್ ಉಮ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಂಜುಮನ್ ಇಸ್ಲಾಹುಲ್ ಮುಸ್ಲಿಮೀನ್ ಸಮಿತಿ ಅಧ್ಯಕ್ಷ ಸೈಯದ್ ಅಬ್ದುಲ್ ರೆಹಮಾನ್, ಉಪಾಧ್ಯಕ್ಷ ಟಿ. ವಝೀರ್ ಅಹ್ಮದ್, ಮೌಲಾನಾ ಮುಫ್ತಿ ತಫಜೀಲ್ ಆಲಂ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಧರ್ಮಗುರುಗಳು, ಉಲ್ಮಾ ಹುಫ್ಫಾಝ್ ಸಮಿತಿಯವರು ಮತ್ತು ಇತರರಿದ್ದರು.

CIPET ಉಚಿತ ಕೌಶಲ್ಯ ತರಬೇತಿ ಪಡೆಯಲು ಅರ್ಜಿ ಆಹ್ವಾನ

0

CIPET ಮೈಸೂರು CIPET ವತಿಯಿಂದ “ಮೆಷಿನ್ ಆಪರೇಟರ್ & ಪ್ರೋಗ್ರಾಮರ್ – CNC ಮಿಲ್ಲಿಂಗ್” ವಿಷಯದಲ್ಲಿ ಪಿಯುಸಿ, ಐಟಿಐ, ಡಿಪ್ಲೊಮಾ/ಪದವಿ ವಿದ್ಯಾಭ್ಯಾಸ ಹೊಂದಿರುವವರಿಗೆ ಅ.23 ರಿಂದ 3 ½ ತಿಂಗಳ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY 4.0) ಅಡಿ ಉಚಿತ ಆಹಾರ ಹಾಗೂ ವಸತಿ ಸೌಲಭ್ಯದೊಂದಿಗೆ ಆಯೋಜಿಸಲಾಗಿದೆ.
ಮೈಸೂರು – ಕೇಂದ್ರ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ & ಟೆಕ್ನಾಲಜಿ ಸಂಸ್ಥೆ (CIPET) ಒಂದು ರಾಷ್ಟ್ರೀಯ ಮಟ್ಟದ ಸಂಸ್ಥೆ ಆಗಿದ್ದು, ರಾಸಾಯನಿಕ ಮತ್ತು ಪೆಟ್ರೋಕೆಮಿಕಲ್ಸ್ ಇಲಾಖೆ, ರಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯ, ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಪೆಟ್ರೋಕೆಮಿಕಲ್ಸ್, ಪ್ಲಾಸ್ಟಿಕ್ಸ್ ಮತ್ತು ಪಾಲಿಮರ್ ಸಂಬಂಧಿತ ಕೈಗಾರಿಕೆಗಳಿಗೆ ವಿಶ್ವದಾದ್ಯಂತ ಕೌಶಲ್ಯಯುತ ತಾಂತ್ರಿಕ ಸಿಬ್ಬಂದಿಯನ್ನು ತಯಾರಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ.

CIPET ಈ ತರಬೇತಿಗೆ ದಾಖಲಾದ ಪ್ರತಿಯೊಬ್ಬ ವಿದ್ಯಾರ್ಥಿಗೂ ಕ್ಯಾಂಪಸ್ ನೇಮಕಾತಿಯ ಮೂಲಕ ಉದ್ಯೋಗಾವಕಾಶದ ಖಚಿತತೆ ನೀಡಲಾಗುತ್ತದೆ. ತಾಂತ್ರಿಕ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನ ರೂಪಿಸಿಕೊಳ್ಳಲು ಇದು ಯುವಜನರಿಗೆ ಅತ್ಯುತ್ತಮ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ CIPET: CSTS, Mysuru 437/O, ಹೆಬ್ಬಾಳ ಕೈಗಾರಿಕಾ ಪ್ರದೇಶ, ಮೈಸೂರು – 570016, ದೂರವಾಣಿ: 9480253024 / 9741719645 ವೆಬ್‌ಸೈಟ್: www.cipet.gov.in. ಗಳನ್ನು ಸಂಪರ್ಕಿಸುವುದು.

MESCOM ಅಕ್ಟೋಬರ್ 18 ರಂದು ಆಲ್ಕೊಳ ಸುತ್ತಮುತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮೆಸ್ಕಾಂ ಪ್ರಕಟಣೆ

0

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್-8, ಎಎಫ್-12 ಮತ್ತು ಎಎಫ್-13 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
MESCOM ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಸಹ್ಯಾದ್ರಿ ನಗರ, ಜೆ.ಹೆಚ್.ಪಟೇಲ್ ಬಡಾವಣೆಯ ಎ,ಬಿ,ಸಿ,ಡಿ ಮತ್ತು ಈ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗೂರುಜಿ ಶಾಲೆ ಸುತ್ತಮುತ್ತ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಲೇಔಟ್, ಸೋಮನಾಥ ಲೇಔಟ್, ಭೋವಿ ಕಾಲೋನಿ, ಆದರ್ಶ ನಗರ, ಆಟೋ ಕಾಲೋನಿ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ರಾಜೇಶ್ ಲೇಔಟ್, ಗೆಜ್ಜೇಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

C.M.Siddharamaiah ಆಹಾರ ವ್ಯರ್ಥಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ- ಸಿದ್ಧರಾಮಯ್ಯ

0

C.M.Siddharamaiah ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ನಡೆದ ವಿಶ್ವ ಆಹಾರ ದಿನಾಚರಣೆಯ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು.

C.M.Siddharamaiah ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ.
ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ
ಎಂದು ಸಿದ್ಧರಾಮಯ್ಯ ವಿಶ್ವ ಆಹಾರ ದಿನದ ಮಹತ್ವ ಒತ್ತಿ ಹೇಳಿದರು

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ವಸತಿ ಸಚಿವ ಜಮೀರ್ ಅಹಮದ್ ಖಾನ್, ಶಾಸಕ ರವಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Shimoga McGann Hospital ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಪರಿಶೀಲನಾ ಮಂಡಳಿ ಕಾರ್ಯಾಲಯಕ್ಕೆ ಚಾಲನೆ

0

Shimoga McGann Hospital ಶಿವಮೊಗ್ಗದ ಜಿಲ್ಲಾ ಹಾಗೂ ತರಬೇತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಕಚೇರಿಯನ್ನು ಅಧಿಕೃತವಾಗಿ ಅದರ ಗೌರವಾನ್ವಿತ ಅಧ್ಯಕ್ಷರು ಹಾಗೂ ಒಂದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಶ್ರೀ ಅಭಯ್ ಡಿ. ಚೌಗಲಾ ರವರು ಉದ್ಘಾಟನೆ ಮಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಎಂ. ಎಸ್., ಶಿವಮೊಗ್ಗದ ಹೆಚ್ಚುವರಿ ಜಿಲ್ಲಾಧಿಕಾರಿಗಳಾಗಿರುವಂತಹ ಶ್ರೀ ಅಭಿಷೇಕ್, ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ, ಸಿಮ್ಸ್ ವೈದ್ಯಕೀಯ ಅಧೀಕ್ಷಕರಾದ ಡಾಕ್ಟರ್ ಟಿ. ಡಿ. ತಿಮ್ಮಪ್ಪ, ಜಿಲ್ಲಾ ಶಾಸ್ತ್ರ ಚಿಕಿತ್ಸೆಕರಾದ ಡಾಕ್ಟರ್ ಸಿದ್ದನಗೌಡ ಪಿ, ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಸದಸ್ಯರಾಗಿರುವ ಡಾಕ್ಟರ್ ರಾಮ್ ಪ್ರಸಾದ್ ಕೆ. ಎಸ್., ಡಾಕ್ಟರ್ ಉಮಾ ಎಚ್. ಎಂ., ಡಾಕ್ಟರ್ ರಜನಿ ಎ. ಪೈ, ಹಾಗೂ ಡಾಕ್ಟರ್ ಶುಭ್ರತಾ ರವರು ಹಾಜರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ಜಿಲ್ಲಾ ಮಾನಸಿಕ ಆರೋಗ್ಯ ಪರಿಶೀಲನ ಮಂಡಳಿಯ ಗೌರವಾನ್ವಿತ ಅಧ್ಯಕ್ಷರು ಹಾಗೂ ಸದಸ್ಯರು ಸಭೆಯನ್ನು ನಡೆಸಿದರು.

Department of Treasury ವ್ಯವಹಾರದ ಬಹುಮುಖಿ ವಿಶ್ಲೇಷಣೆಗೆ ಖಜಾನೆ ತಂತ್ರಜ್ಞಾನ ಸಹಕಾರಿ- ಆರ್.ಮೋಹನ್ ಕುಮಾರ್

0

Department of Treasury ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಆರ್ಥಿಕ ವ್ಯವಹಾರದ ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ವಿಶ್ಲೇಷಣೆಗಾಗಿ ಸಮಗ್ರ ಸಾಧನಗಳನ್ನು ಹೊಂದಿರುವ ಖಜಾನೆ ತಂತ್ರಾಂಶ ಹಣಕಾಸು ನಿರ್ವಹಣೆಯನ್ನು ಸುಗಮಗೊಳಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌ಅವರು ಹೇಳಿದರು.

ಅವರು ಖಜಾನೆ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ನೌಕರರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಆದಾಯ ತೆರಿಗೆ‌, ಟಿಡಿಎಸ್, ಜಿ.ಎಸ್.ಟಿ., ಮತ್ತು ಖಜಾನೆ-2 ಎನ್.ಪಿ.ಎಸ್.ವಿಷಯಗಳ ಕುರಿತು ಸರ್ಕಾರದ ಎಲ್ಲಾ ಇಲಾಖೆಯ ಅಧಿಕಾರೇತರ ಸಿಬ್ಬಂಧಿಗಳಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಈ ಅತ್ಯಾಧುನಿಕ ಸಾಫ್ಟ್‌ವೇರ್ ಹಣಕಾಸು ಬಳಕೆಯ ನಿಯಮಗಳನ್ನು ಖಚಿತಪಡಿಸಿಕೊಳ್ಳಲು ಪೂರಕವಾಗಿರಲಿದೆ ಅಲ್ಲದೆ, ಕಚೇರಿಯ ದಿನನಿತ್ಯದ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸುವುದರಿಂದ ಹಿಡಿದು ನೈಜ-ಸಮಯದ ಒಳನೋಟಗಳನ್ನು ಒದಗಿಸುವವರೆಗೆ, ಖಜಾನೆ ಸಾಫ್ಟ್‌ವೇರ್ ಸಹಕಾರಿಯಾಗಿದೆ. ಡೇಟಾ ಸಂಗ್ರಹಣೆ ಮತ್ತು ವರದಿ ಮಾಡುವಿಕೆಯಂತಹ ಸಂಕೀರ್ಣ ಕಾರ್ಯಗಳನ್ನು ಸ್ವಯಂಚಾಲಿತಗೊಳಿಸುತ್ತದೆ. ಆರ್ಥಿಕವಾಗಿರುವ ಎಲ್ಲಾ ಚಟುವಟಿಕೆಗಳನ್ನು ನಿರ್ವಹಿಸುವ ಅತ್ಯಾಧುನಿಕ ವ್ಯವಸ್ಥೆಯಾಗಿ ರೂಪುಗೊಂಡಿದೆ ಎಂದರು.

ಸರ್ಕಾರಕ್ಕೆ ಬರುವ ಜಮಾ-ಖರ್ಚುಗಳನ್ನು ಶೀರ್ಷಿಕೆಯನುಸಾರ ಲೆಕ್ಕ ಮಾಡುವುದು. ಸರ್ಕಾರದಿಂದ ಪಾವತಿಗಳನ್ನು ಮೌಲ್ಯಾಂಶ ರೀತ್ಯಾ ಪರಿಶೀಲಿಸಿ ತೀರ್ಣಗೊಳಿಸುವುದು ಖಜಾನೆ ಇಲಾಖೆಯ ಪ್ರಮುಖ ಕಾರ್ಯವಾಗಿದೆ. ಖಜಾನೆ-2 ತಂತ್ರಾಂಶದ ಬಳಕೆಯ ಕುರಿತು ವಿವಿಧ ಇಲಾಖೆಯ ಅಧಿಕಾರೇತರ ಸಿಬ್ಬಂಧಿಗಳಿಗೆ ಎದುರಾಗಬಹುದಾದ ಅನೇಕ ಸಮಸ್ಯೆ-ಸವಾಲುಗಳಿಗೆ ತರಬೇತಿ ಕಾರ್ಯಾಗಾರ ಉತ್ತಮ ವೇದಿಕೆಯಾಗಿದೆ ಅಲ್ಲದೇ ತಕ್ಷಣದ ಪರಿಹಾರ ಕ್ರಮವಾಗಿದೆ. ಈ ತಂತ್ರಜ್ಞಾನವನ್ನು ಅರಿತು, ಅಳವಡಿಸಿಕೊಂಡು ಕಾರ್ಯನಿರ್ವಹಿಸುವುದರಿಂದ ಸರಳವಾಗಿ, ಸುಲಭವಾಗಿ ನಿಶ್ಚಿಂತೆಯಿಂದ ಅಧಿಕಾರಿ-ಸಿಬ್ಬಂಧಿಗಳು ಕೆಲಸ ಮಾಡಬಹುದಾಗಿದೆ ಎಂದ ಅವರು, ಕಾಲಕಾಲಕ್ಕೆ ವಿಷಯ ನಿರ್ವಾಹಕರಿಗೆ ಎದುರಾಗುವ ಸಮಸ್ಯೆಗಳಿಗೆ ತಜ್ಞರಿಂದ ಮೊಬೈಲ್‌ಸಂದೇಶದ ಮೂಲಕವೂ ಮಾಹಿತಿ ಪಡೆದು ನಿರ್ವಹಿಸಬಹುದಾಗಿದೆ ಎಂದರು.

ಇತ್ತೀಚೆಗೆ ರಾಜ್ಯ ಸರ್ಕಾರವು ನೌಕರರ ಮತ್ತು ಅವರ ಅವಲಂಬಿತ ಕುಟುಂಬದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ನೌಕರರ ಸಂಘದ ಕೋರಿಕೆಯ ಮೇರೆಗೆ ರೂಪಿಸಿ ಅನುಷ್ಠಾನಗೊಳಿಸಿರುವ ಆರೋಗ್ಯ ಸಂಜೀವಿನಿ ಯೋಜನೆಯ ಅನುಷ್ಠಾನದಲ್ಲಿ ಕೆಲವು ಅಡತಡೆಗಳಿರುವುದನ್ನು ಗಮನಿಸಲಾಗಿದೆ. ಆರಂಭದ ಹಂತ ಇದಾಗಿರುವುದರಿಂದ ಅಲ್ಪಮಟ್ಟಿನ ಅಡಚಣೆ ಎದುರಾಗಿದ್ದು, ಅದಕ್ಕಾಗಿ ವಿಷಾಧಿಸುತ್ತೇವೆ. ಆದರೆ, ಪೂರ್ಣಪ್ರಮಾಣದಲ್ಲಿ ಯೋಜನೆ ಅನುಷ್ಠಾನದ ನಂತರ ದೇಶದ ಉತ್ತಮ ಯೋಜನೆಗಳಲ್ಲೊಂದಾಗಿ ಹೊರಹೊಮ್ಮಲಿದೆ ಅಲ್ಲದೇ ಇದೊಂದು ನೌಕರಸ್ನೇಹಿ ಯೋಜನೆಯಾಗಿರಲಿದೆ ಎಂದವರು ನುಡಿದರು.

Department of Treasury ಕಾರ್ಯಾಗಾರದಲ್ಲಿ ಪ್ರಾಸ್ತಾವಿಕವಾಗಿ ಜಿಲ್ಲಾ ಖಜಾನೆ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಹೆಚ್.ಎಸ್.ಸಾವಿತ್ರಿ ಅವರು ಮಾತನಾಡಿ, ವಿಷಯ ನಿರ್ವಾಹಕರು ತಮ್ಮ ಕಾರ್ಯಕ್ಷೇತ್ರದಲ್ಲಿ ಖಜಾನೆ-2 ತಂತ್ರಾಂಶದ ಕುರಿತು ಎದುರಾಗುವ ಸಮಸ್ಯೆಗಳಿಗೆ ಡಿಸೆಂಬರ್‌ಮಾಸಾಂತ್ಯದೊಳಗಾಗಿ ತಜ್ಞರಿಂದ ಮಾಹಿತಿ ಪಡೆದು, ಪರಿಹಾರ ಕಂಡುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿದೆ ಅನುಷ್ಠಾನಕ್ಕೆ ತರಲಾಗುವುದು ಎಂದರು.

ನೌಕರರು ಖಜಾನೆ-2 ತಂತ್ರಾಂಶವನ್ನು ಬಳಸುವಲ್ಲಿ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದ ಅವರು, ನೌಕರರ ವೇತನದಲ್ಲಿನ ಕಟಾವಣೆ, ತೆರಿಗೆ ಮುಂತಾದ ಪಾವತಿಗಳಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿರುವುದು ಕಂಡಬರುತ್ತಿದೆ. ಇವೆಲ್ಲವೂಗಳಿಗೆ ತರಬೇತಿ ಕಾರ್ಯಾಗಾರದಲ್ಲಿ ಪರಿಹಾರ ದೊರೆಯಲಿದೆ ಎಂದರು.

ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ದಾವಣಗೆರೆಯ ಆದಾಯ ತೆರಿಗೆ ಅಧಿಕಾರಿ ಸುಬ್ಬರಾಜು ಎಸ್., ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಚೇತನ್‌ಎ.ಬಿ., ಜಿ.ಎಸ್.ಟಿ. ಟಿಡಿಎಸ್ ಸಮಾಲೋಚಕ ಪುರುಷೋತ್ತಮ್‌ಮತ್ತು ಖಜಾನೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಅನಿತಾ ಕೆ.ಎಂ. ಅವರು ಆಗಮಿಸಿ, ವಿಷಯ ಮಂಡನೆ ಮಾಡಿದರು.

ಕಾರ್ಯಾಗಾರದಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ್‌, ಸಂಘದ ಕಾರ್ಯದರ್ಶಿ ಆರ್.ಪಾಪಣ್ಣ, ಎಂ.ಎನ್.ರಂಗನಾಥ್‌, ಡಾ|| ಸಿ.ಎ.ಹಿರೇಮಠ್‌, ಸಿದ್ಧಬಸಪ್ಪ ಮತ್ತಿತರರು ಉಪಸ್ಥಿತರಿದ್ದರು. ಸತ್ಯಭೋದ ಅವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಹಾಯಕ ಖಜಾನಾಧಿಕಾರಿ ಶ್ರೀಮತಿ ದಾಕ್ಷಾಯಣಿ ಅವರು ಸ್ವಾಗತಿಸಿದರು. ಶ್ರೀಮತಿ ಜ್ಯೋತಿ ಲಕ್ಷ್ಮೀ ವಂದಿಸಿದರು.

S.N. Channabasappa ಶಿವಮೊಗ್ಗ 16 ನೇ ವಾರ್ಡ್ ಗೆ ಶಾಸಕ ಚೆನ್ನಿ ಭೇಟಿ ಸ್ಥಳಿಯರ ಸಮಸ್ಯೆ ಪರಿಶೀಲನೆ

0

S.N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 16ರ ಜ್ಯೋತಿ ನಗರಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಡಾವಣೆಯ ಉದ್ಯಾನವನದ ಪ್ರದೇಶದಲ್ಲಿ ನಡೆದಿರುವ ಅನಧಿಕೃತ ಒತ್ತುವರಿ (ಅಕ್ರಮ ಅತಿಕ್ರಮಣ) ಕುರಿತು ಸ್ಥಳೀಯ ನಿವಾಸಿಗಳಿಂದ ಸಮಗ್ರ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ, ಬಡಾವಣೆಯಲ್ಲಿನ ಇತರ ಮೂಲಭೂತ ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಲಾಯಿತು ಮತ್ತು ಆ ಸಮಸ್ಯೆಗಳ ನಿವಾರಣೆ ಹಾಗೂ ಬಡಾವಣೆಯ ಸಮಗ್ರ ಅಭಿವೃದ್ಧಿಯ ಕುರಿತು ಮುಂದಿನ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

S.N. Channabasappa ಭೇಟಿಯ ವೇಳೆ ಮಹಾನಗರ ಪಾಲಿಕೆಯ ಅಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು.

District Legal Services Authority ಅ.18 ರಂದು ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ & “ಅರಿವು” ಕಾರ್ಯಕ್ರಮ

0

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಿಆರ್‌ಎ ಸಭಾ ಭವನದಲ್ಲಿ ಅ.18 ರಂದು ಬೆಳಿಗ್ಗೆ 10.30ಕ್ಕೆ “ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ” ಮತ್ತು “ಬೇಟಿ ಬಚಾವೋ ಬೇಟಿ ಪಡಾವೋ” ಕುರಿತು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿ.ಪಂ ಸಿಇಓ ಹೇಮಂತ್.ಎನ್ ವಹಿಸಿಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್.ಎಂ.ಎಸ್ ಘನ ಉಪಸ್ಥಿತರಿರುವರು.
District Legal Services Authority ಮುಖ್ಯ ಅತಿಥಿಗಳಾಗಿ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಳ್ಳುವರು. ಬಾಲ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಮನೋರೋಗ ತಜ್ಞರಾದ ಡಾ.ಪವಿತ್ರ ಕೆ.ಎಸ್ ವಿಶೇಷ ಉಪನ್ಯಾಸ ನೀಡುವರು.

Shimoga Rotary Club ಕ್ಯಾಟರಿಂಗ್ ಕ್ಷೇತ್ರದ ಹಿರಿಯ ಅನುಭವಿ, ಪ್ರಕಾಶ್ ಪ್ರಭು ಅವರಿಗೆ ಸನ್ಮಾನ

0

Shimoga Rotary Club ವೃತ್ತಿಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವುದು ಸಂಘ ಸಂಸ್ಥೆಗಳ ಕರ್ತವ್ಯ ಎಂದು ರೋಟರಿ ಕ್ಲಬ್ ರಿವರ್‌ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಹೇಳಿದರು.
ಶಿವಮೊಗ್ಗ ರೋಟರಿ ಕ್ಲಬ್ ರಿವರ್‌ಸೈಡ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್.ಪ್ರಕಾಶ್ ಪ್ರಭು ಅವರಿಗೆ ವೃತ್ತಿಪರ ಸೇವಾ ಗೌರವ ನೀಡಿ ಸನ್ಮಾನಿಸಿ ಮಾತನಾಡಿದರು.
ರೋಟರಿ ಸಂಸ್ಥೆಯಿಂದ ವರ್ಷಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು, ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ವೃತ್ತಿಕ್ಷೇತ್ರದ ಸಾಧಕರನ್ನು ಗುರುತಿಸಿ ವೃತ್ತಿ ಸೇವಾ ಗೌರವ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದೇವೆ ಎಂದು ತಿಳಿಸಿದರು.
Shimoga Rotary Club ಪ್ರಕಾಶ್ ಪ್ರಭು ಅವರು ಸೇವೆಯ ಅರ್ಥವನ್ನು ನೈಜವಾಗಿ ಬದುಕುಳಿಸಿದ್ದಾರೆ. ಹಣಕ್ಕಿಂತ ಮನಸ್ಸಿಗೆ ಆದ್ಯತೆ ನೀಡುವವರೇ ನಿಜವಾದ ವೃತ್ತಿಪರರು. ಅವರಂತಹ ವ್ಯಕ್ತಿತ್ವವನ್ನು ರೋಟರಿ ಇಂದು ಗುರುತಿಸುವುದು ನಮ್ಮ ಕ್ಲಬ್‌ನ ಭಾಗ್ಯ ಎಂದು ಹೇಳಿದರು.
ವೃತ್ತಿ ಸೇವಾ ಗೌರವ ಪ್ರಶಸ್ತಿ ಪಡೆದ ಪ್ರಕಾಶ್ ಪ್ರಭು ಅವರು ಮನೆಯಲ್ಲಿಯೇ ಕ್ಯಾಟರಿಂಗ್ ವ್ಯವಸ್ಥೆ ಆರಂಭಿಸಿ, ಮದುವೆ, ಧಾರ್ಮಿಕ ಹಾಗೂ ಸಾಮಾಜಿಕ ಸಮಾರಂಭಗಳಿಗೆ ಶುದ್ಧ, ರುಚಿಕರ ಊಟ ಬಡಿಸುತ್ತ ಅನೇಕ ದಶಕಗಳಿಂದ ಜನರ ಪ್ರೀತಿ ಗಳಿಸಿದ್ದಾರೆ.
ರೋಟರಿ ಕ್ಲಬ್ ರಿವರ್‌ಸೈಡ್ ಕಾರ್ಯದರ್ಶಿ ನಿತಿನ್ ಯಾದವ್, ನಿಯೋಜಿತ ಅಧ್ಯಕ್ಷ ಎಂ.ಎಂ.ರವಿ, ಮಾಜಿ ಅಧ್ಯಕ್ಷರಾದ ಬಿ.ಜಿ.ಧನರಾಜ್, ಸಿ.ಎನ್.ಮಲ್ಲೇಶ್, ಬಸವರಾಜ, ರಾಜೇಶ್ ಶ್ಯಾಮ್, ಮಂಜುನಾಥ್, ಜೈಪ್ರಕಾಶ್, ಸಂತೋಷ್ ಶೆಟ್ಟಿ, ರೋಟರಿ ಕ್ಲಬ್ ರಿವರ್‌ಸೈಡ್ ಪದಾಧಿಕಾರಿಗಳು, ಇನ್ನರ್‌ವ್ಹೀಲ್ ಸದಸ್ಯರು, ಮಾಜಿ ಅಧ್ಯಕ್ಷರು ಮತ್ತು ಕುಟುಂಬ ಸದಸ್ಯರು ಹಾಜರಿದ್ದರು.

District Chamber of Commerce and Industry ದೇಶದ ಜನಸಂಖ್ಯೆಗೆ ಹೋಲಿಸಿದರೆ ಆದಾಯ ತೆರಿಗೆದಾರರ ಸಂಖ್ಯೆ ಕಡಿಮೆ- ಬಿ.ಗೋಪಿನಾಥ್

0

District Chamber of Commerce and Industry ಆದಾಯ ತೆರಿಗೆ ಇಲಾಖೆಯು ಕೈಗೊಂಡಿರುವ ಅನೇಕ ಸುಧಾರಣೆ ಕ್ರಮಗಳಿಂದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿರುವವರ ಸಂಖ್ಯೆ ಹೆಚ್ಚಾಗಿದ್ದು, ಆದಾಯ ತೆರಿಗೆ ಪಾವತಿಸುವವರ ಸಂಖ್ಯೆ ಇನ್ನು ಹೆಚ್ಚಾಗಬೇಕಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆದಾಯ ತೆರಿಗೆ ಇಲಾಖೆ ಶಿವಮೊಗ್ಗ, ದಾವಣಗೆರೆ ವಿಭಾಗ, ಜಿಲ್ಲಾ ಚಾರ್ಟರ್ಡ್ ಅಕೌಂಟೆಂಟ್, ಜಿಲ್ಲಾ ತೆರಿಗೆ ಸಲಹೆಗಾರರ ಸಂಘಗಳ ಸಹಯೋಗದೊಂದಿಗೆ ಸಂಘದ ಶಾಂತಲಾ ಸ್ಪೇರ್ ಕಾಸ್ಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕೇಂದ್ರ ಬಜೆಟ್ 2025ರಲ್ಲಿ ಆದಾಯ ತೆರಿಗೆ, ಟಿಡಿಎಸ್ ಮತ್ತು ಟಿಸಿಎಸ್‌ನ ನಿಯಮಗಳಿಗೆ ಇತ್ತೀಚಿಗೆ ಆದ ಬದಲಾವಣೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಜನಸಂಖ್ಯೆಗೆ ಹೋಲಿಸಿದರೆ ಆದಾಯ ತೆರಿಗೆ ಪಾವತಿಸುವವರ ಸಂಖ್ಯೆ ಅತ್ಯಂತ ಕಡಿಮೆ ಇದೆ. ಆದಾಯ ತೆರಿಗೆ ಇಲಾಖೆಯು ಪ್ರಮುಖ ಜನಸ್ನೇಹಿ ಕಾರ್ಯಕ್ರಮ ಹಾಗೂ ದಶಕದಿಂದ ಆದ ತೆರಿಗೆ ಸುಧಾರಣೆಗಳಿಂದ ತೆರಿಗೆದಾರನಿಗೆ ಪ್ರಯೋಜನವಾಗಿದ್ದು, ಸರ್ಕಾರದ ಖಜಾನೆಗೆ ಹೆಚ್ಚಿನ ಪ್ರಮಾಣದಲ್ಲಿ ನೇರ ತೆರಿಗೆ ಬಂದಿದೆ. ಇದರಿಂದ ದೇಶದಲ್ಲಿ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮ ಹಾಗೂ ಮೂಲ ಸೌಕರ್ಯದ ಅಭಿವೃದ್ಧಿಯಾಗಿದೆ. ಇಂತಹ ಅರಿವು ಕಾರ್ಯಕ್ರಮಗಳಿಗೆ ಆದಾಯ ತೆರಿಗೆ ಇಲಾಖೆ ಜತೆಗೆ ಸಂಘ ಕೈಗೂಡಿಸುತ್ತದೆ ಎಂದರು.

ಬೆAಗಳೂರಿನ ಆದಾಯ ತೆರಿಗೆ (ಎಸಿಐಟಿ) ಹೆಚ್ಚುವರಿ ಆಯುಕ್ತ ಪಿ.ವಿಮಲ್ ರಾಜ್ ಮಾತನಾಡಿ, ನಾಗರಿಕರಲ್ಲಿ ಆದಾಯ ತೆರಿಗೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯ ಇದೆ. ಸಕಾಲದಲ್ಲಿ ಐಟಿ ರಿಟರ್ನ್ಸ್ ಸಲ್ಲಿಸುವುದರಿಂದ ಆಗುವ ಅನುಕೂಲಗಳು ಮತ್ತು ಅದನ್ನು ಸಲ್ಲಿಸದಿರುವುದರಿಂದಾಗುವ ಅನಾನುಕೂಲಗಳನ್ನು ವಿವರಿಸಿದರು.

ಶಿವಮೊಗ್ಗ ಆದಾಯ ತೆರಿಗೆ ಅಧಿಕಾರಿ ಕೆ.ಶ್ರೀನಿವಾಸರಾವ್ ಮಾತನಾಡಿ, ತೆರಿಗೆದಾರನು ಸರಿಯಾಗಿ ಆದಾಯ ತೆರಿಗೆ ರಿಟರ್ನ್ಸ್ ಅನ್ನು ಸಲ್ಲಿಸುವ ಮೂಲಕ ವ್ಯಾಜ್ಯಗಳಿಗೆ ಒಳಪಡದೇ ಸರಿಯಾದ ದಾಖಲೆಗಳನ್ನು ಹೇಗೆ ನಿರ್ವಹಣೆ ಮಾಡಬಹುದು ಎನ್ನುವುದರ ಬಗ್ಗೆ ಪಿಪಿಟಿ ಮೂಲಕ ವಿವರವಾಗಿ ಮಾಹಿತಿ ನೀಡಿದರು.

ದಾವಣಗೆರೆ ಆದಾಯ ತೆರಿಗೆ ಅಧಿಕಾರಿ ಸುಬ್ಬರಾಜು ಮಾತನಾಡಿ, ಟಿಡಿಎಸ್ ಮತ್ತು ಟಿಸಿಎಸ್ ನಿಯಮಾವಳಿಗೆ ಇತ್ತೀಚಿಗೆ ಆದ ತಿದ್ದುಪಡಿಗೆಗಳ ಕುರಿತು ಪಿಪಿಟಿ ಮೂಲಕ ವಿವರಣೆ ನೀಡಿದರು.

District Chamber of Commerce and Industry ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಪ್ರೋಗ್ರಾಮ್ ಕಮಿಟಿ ಛೇರ್ಮನ್ ಸಿ.ಎ.ಶರತ್, ನಿರ್ದೇಶಕರಾದ ಗಣೇಶ್ ಎಂ.ಅಂಗಡಿ, ಎಸ್.ಎಸ್.ಉದಯ್ ಕುಮಾರ್, ವಿನೋದ್ ಕುಮಾರ್ ಜೈನ್, ಎಚ್.ಎಸ್.ನರೇಂದ್ರ, ಎಸ್.ಪಿ.ಶಂಕರ್, ಕೆ.ಎನ್.ರಾಜಶೇಖರ್, ರವಿಪ್ರಕಾಶ್ ಜನ್ನಿ, ಲಕ್ಷ್ಮೀ ಗೋಪಿನಾಥ್, ಬಿ.ಸುರೇಶ್ ಕುಮಾರ್, ಮಾಜಿ ಅಧ್ಯಕ್ಷರಾದ ಕೆ.ವಿ.ವಸಂತ್ ಕುಮಾರ್, ಶಿವಮೊಗ್ಗ ಜಿಲ್ಲಾ ಸಿಎ ಅಸೋಸಿಯೇಷನ್ ಅಧ್ಯಕ್ಷ ಎನ್.ಎಲ್.ಪ್ರಸಾದ್, ಜಿಲ್ಲಾ ಟ್ಯಾಕ್ಸ್ ಬಾರ್ ಅಸೋಸಿಯೇಷನ್ ಪದಾಧಿಕಾರಿಗಳು, ತೆರಿಗೆದಾರರು, ಸಂಯೋಜಿತ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಾಣಿಜ್ಯೋದ್ಯಮಿಗಳು, ಸನ್ನದು ಲೆಕ್ಕ ಪರಿಶೋಧಕರು, ತೆರಿಗೆ ಸಲಹೆಗಾರರು, ಆದಾಯ ತೆರಿಗೆ ಇಲಾಖೆಯ ಇತರೆ ಅಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.