Sunday, February 15, 2026
Sunday, February 15, 2026
Home Blog Page 134

Shivamogga Police ಅನಾಮಧೇಯ ಮೃತವ್ಯಕ್ತಿಯ ದೇಹಪತ್ತೆ. ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಪ್ರಕಟಣೆ

Shivamogga Police ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಗರದ ವೀರಭದ್ರ ಟಾಕೀಸ್ ಎದುರನ ಫುಟ್‌ಪಾತ್ ಮೇಲೆ ಸುಮಾರು 45-50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಕೈಕಾಲು ತಿರುವಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದು, ಆತನನ್ನು ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅ.09 ರಂದು ಮೃತ ಪಟ್ಟಿರುತ್ತಾರೆ. ಈತನ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರತಿಲ್ಲ.
ವ್ಯಕ್ತಿಯು ಸುಮಾರು 5.10 ಅಡಿ ಎತ್ತರವಿದ್ದು, ಕೋಲು ಮುಖ, ತೆಳ್ಳನೆಯ ಮೈಕ್ಟು, ಎಣ್ಣೆಗೆಂಪು ಬಣ್ಣ ಹೊಂದಿರುತ್ತಾನೆ. ಬಲಗೈ Shivamogga Police ತೋಳಿನ ಮೇಲೆ “ಇಂದ್ರ” ಎಂಬ ಕನ್ನಡ ಅಕ್ಷರದ ಮತ್ತು ಸೂರ್ಯನ ಚಿತ್ರವುಳ್ಳ ಟ್ಯಾಟೂ ಇರುತ್ತದೆ. ಮೈಮೇಲೆ ಬಿಳಿ ಮತ್ತು ಸಿಮೆಂಟ್ ಬಣ್ಣದ ಟೀಶರ್ಟ್ ಮತ್ತು ನೀಲಿ ಬಣ್ಣದ ಬರ್ಮುಡಾ ಚಡ್ಡಿ ಧರಿಸಿರುತ್ತಾರೆ. ಹೊಟ್ಟೆಯ ಮೇಲೆ ಸುಮಾರು 8 ಇಂಚಿನ ಉದ್ದದ ಅಪರೇಷನ್ ಆಗಿರುವ ಗಾಯದ ಗುರುತು ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆಗೆ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

District Health and Family Welfare Association ಅಂಧತ್ವ ನಿವಾರಣಾ ಚಟುವಟಿಕೆ ಹಮ್ಮಿಕೊಳ್ಳುವ ಸ್ವಯಂ ಸೇವಾ ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

0

District Health and Family Welfare Association ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತçಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಖಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿAದ (ಎನ್‌ಜಿಓ) ಅರ್ಜಿ ಆಹ್ವಾನಿಸಿದೆ.
District Health and Family Welfare Association ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್‌ಸೈಟ್ https://kppp.karnataka.gov.in/#/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/08182-222382 ಗಳನ್ನು ಸಂಪರ್ಕಿಸುವುದು

CM Siddaramaiah ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಬುದ್ಧ ಬಸವ ಅಂಬೇಡ್ಕರ್ ತತ್ವಾದರ್ಶಗಳು ಪರಿಚಿತವಾಗಬೇಕು- ಸಿದ್ಧರಾಮಯ್ಯ

0

CM Siddaramaiah ಜಡ್ಡುಗಟ್ಟಿದ ಸಮಾಜದಲ್ಲಿ ಪರಿವರ್ತನೆಯಾಗಬೇಕಾದರೆ ಹೆಚ್ಚು ಜನರಿಗೆ ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳು ಪರಿಚಿತವಾಗಬೇಕು.

ಎಲ್ಲರಿಗೂ ಸಮಾನ ಅವಕಾಶಗಳು ಇಲ್ಲದ ಕಾರಣ ಅಸಮಾನತೆ ನಿರ್ಮಾಣವಾಗಿದೆ. ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಹೊಂದಿದ್ದರೆ ಮಾತ್ರ ಸಮಾನತೆ ಸಾಧ್ಯವಾಗುತ್ತದೆ ಎಂದು ಅಂಬೇಡ್ಕರ್ ಅವರು ಪ್ರತಿಪಾದಿಸಿದರು. ಪರಧರ್ಮ ಸಹಿಷ್ಣುತೆ, ಸಹಬಾಳ್ವೆಯನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡರೆ ಮಾತ್ರ ದೇಶದಲ್ಲಿ ಶಾಂತಿ, ಅಹಿಂಸೆ ಸತ್ಯ ನೆಲೆಗೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಅವರು ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಬೌದ್ಧ ಮಹಾ ಸಮ್ಮೇಳನ ಮತ್ತು ಮಾನವ ಮೈತ್ರಿಯ ಪಯಣ 2025 ಅಂತರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಎಸ್‌ಸಿಎಸ್‌ಪಿ /ಟಿಎಸ್‌ಪಿ ಯೋಜನೆಗಾಗಿ 42 ಸಾವಿರ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಸಮಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರಿಗೂ ಆರ್ಥಿಕ ಶಕ್ತಿ ಬರಲೇಬೇಕು. ನಮ್ಮ ಸರ್ಕಾರ ಗುತ್ತಿಗೆಗಳಲ್ಲಿ ಮೀಸಲಾತಿಯನ್ನು ತಂದಿದೆ. ಬಡ್ತಿಯಲ್ಲಿ ಮೀಸಲಾತಿಯನ್ನು ಸರ್ವೋಚ್ಚ ನ್ಯಾಯಾಲಯ ಕೊಡದಿದ್ದರೂ ಸಮಿತಿ ರಚಿಸಿ, ಅದರ ವರದಿಯ ಆಧಾರದ ಮೇಲೆ ಬಡ್ತಿಯಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿದ್ದು ನಮ್ಮ ಸರ್ಕಾರ.

CM Siddaramaiah ಸಮಾನತೆಯ ಜಾಗೃತಿಯ ಜೊತೆಗೆ ಪೂರಕ ಕಾರ್ಯಕ್ರಮಗಳಿದ್ದರೆ ಆರ್ಥಿಕ, ಸಾಮಾಜಿಕ ಶಕ್ತಿ ಬರುತ್ತದೆ. ಅಸಮಾನತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಭಾಗ್ಯಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ನಮ್ಮ ಅಧಿಕಾರದ ಅವಧಿಯಲ್ಲಿ ನೀಡಲಾಗಿದೆ.

ಶಕ್ತಿ ಯೋಜನೆಯಿಂದಾಗಿ ಒಂದು ದಿನದಲ್ಲಿ ಹಾಸನಾಂಬೆ ದರ್ಶನಕ್ಕೆ ಭೇಟಿ ನೀಡಿದ ಒಟ್ಟು 9 ಲಕ್ಷ ಪ್ರಯಾಣಿಕರ ಪೈಕಿ ಶೇ.70 ರಷ್ಟು ಮಹಿಳೆಯರೇ ಇದ್ದಾರೆ. ದೇವಸ್ಥಾನ, ಕೆಲಸದ ಸ್ಥಳಗಳಿಗೆ ಮಹಿಳೆಯರು ಓಡಾಡುವಂತಾಗಿ ಸ್ವಾವಲಂಬಿಗಳಾಗಿದ್ದಾರೆ.

ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಕೆಲವು ಮನುವಾದಿಗಳ ಸಂಚಿನಿಂದ ಇಂದಿಗೂ ಬದಲಾವಣೆ ಸಾಧ್ಯವಾಗಿಲ್ಲ. ಸಚಿವ ಪ್ರಿಯಾಂಕ್ ಖರ್ಗೆಯವರು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ಕೋರಿ ಪತ್ರ ಬರೆದಿದ್ದರು. ತಮಿಳುನಾಡಿನಲ್ಲಿ ಈ ದಿಸೆಯಲ್ಲಿ ತೆಗೆದುಕೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ.

ಸಮಾಜದಲ್ಲಿ ಬದಲಾವಣೆ ತರುವ ನಮ್ಮ ಪ್ರಯತ್ನಕ್ಕೆ ಹಲವು ತೊಡಕು ಎದುರಾಗುತ್ತವೆ. ಮೌಢ್ಯಗಳು, ಕಂದಾಚಾರಗಳ ನಿಗ್ರಹಕ್ಕೆ ನಮ್ಮ ಸರ್ಕಾರ ಕಾನೂನು ರೂಪಿಸಿದೆ.

ನಮ್ಮಲ್ಲಿರುವ ಗುಲಾಮಗಿರಿಯ ಮನಸ್ಥಿತಿಯನ್ನು ಕಿತ್ತೊಗೆಯಬೇಕು, ತನ್ಮೂಲಕ ಎಲ್ಲರೂ ಮನುಷ್ಯರಾಗಬೇಕು. ಪ್ರೀತಿಯಿಂದ ದ್ವೇಷವನ್ನು ಗೆಲ್ಲಬೇಕು. ಬುದ್ಧ, ಬಸವಣ್ಣನವರ ತತ್ವಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮ ಸಮಾಜದ ನಿರ್ಮಾಣಕ್ಕೆ ನಾಂದಿ ಹಾಡಬೇಕಿದೆ ಎಂದು ಸಿದ್ಧರಾಮಯ್ಯ ತಿಳಿಸಿದರು

Priyank Kharge ಕೆಲವು ದಿನಗಳಿಂದ ಬೆದರಿಕೆ ಮತ್ತು ನಿಂದನೆಯ ಕರೆಗಳು ಬರುತ್ತಿವೆ- ಸಚಿವ ಪ್ರಿಯಾಂಕ ಖರ್ಗೆ

0

Priyank Kharge RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ..

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ?

ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿ.ವೈ.ವಿಜಯೇಂದ್ರ, ಆರ್.ಅಶೋಕ.ಸಿ.ಟಿ.ರವಿ,ಕಾರ್ಕಳ ಸುನೀಲ್,ಪ್ರತಾಪ್ ಸಿಂಹ, ಚಲವಾದಿ ನಾರಾಯಣ ಸ್ವಾಮಿ ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ?

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ.
ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ.

Priyank Kharge ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ.

RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.
ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

B. Y. Raghavendra ಆರ್ ಎಸ್ ಎಸ್ ಟೀಕೆಗೆ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯೋಚಿಸಿ- ಬಿ.ವೈ.ರಾಘವೇಂದ್ರ

0

B. Y. Raghavendra ಸನ್ಮಾನ್ಯ ಪ್ರಿಯಾಂಕ ಖರ್ಗೆ ಅವರೇ, ಪ್ರಚಾರಕ್ಕಾಗಿ ಆರೆಸ್ಸೆಸ್ ಹಿಂದೆ ಹೋಗುವ ಬದಲು ನಿಮ್ಮ ಜಿಲ್ಲೆಯಲ್ಲಿನ ಸಮಸ್ಯೆಗಳ ಪರಿಹಾರದ ಬಗ್ಗೆ ಯೋಚಿಸಿ.

ಕೇಂದ್ರ ಸರ್ಕಾರವು ಉಡಾನ್ ಯೋಜನೆಯಡಿ ನಿರ್ಮಿಸಿದ್ದ ಕಲಬುರಗಿ ವಿಮಾನ ನಿಲ್ದಾಣವು ನಿಮ್ಮ ವೈಫಲ್ಯದಿಂದ ಮುಚ್ಚುವ ಸ್ಥಿತಿ ಎದುರಿಸುತ್ತಿದೆ.

B. Y. Raghavendra ಹಲವು ದಶಕಗಳ ಕಾಲ ನಿಮ್ಮ ಕುಟುಂಬ ಜಿಲ್ಲೆಯನ್ನು ಆಳಿದರೂ, ಕಲಬುರಗಿ ಜಿಲ್ಲೆಗೆ ಹೂಡಿಕೆಯನ್ನು ತರುವಲ್ಲಿ, ಕಂಪೆನಿಯನ್ನು ತಂದು ಜನರ ಜೀವನ ಗುಣಮಟ್ಟವನ್ನು ಸುಧಾರಿಸಿ ತಲಾದಾಯ ಹೆಚ್ಚಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಿಮ್ಮ ಈ ನಿರ್ಲಕ್ಷ್ಯದಿಂದಾಗಿ ಕಲ್ಯಾಣ ಕರ್ನಾಟಕವು ಇಂದು ಅವಕಾಶ ವಂಚಿತವಾಗುತ್ತಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಚಿವ ಖರ್ಗೆ ಅವರಿಗೆ ತೀವ್ರ
ವಾಗ್ಬಾಣ ಎಸೆದಿದ್ದಾರೆ.

B Khata ಬಿ-ಖಾತಾ ನಿವೇಶನ ಮಾಲೀಕರಿಗೆ ಎ- ಖಾತಾ ಪರಿವರ್ತನೆ ಆನ್ ಲೈನ್ ವ್ಯವಸ್ಥೆಗೆ ಚಾಲನೆ

0

B Khata ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ ನೀಡಿದರು.

B Khata ಈ ಕಾರ್ಯಕ್ರಮದಲ್ಲಿ, ಶಾಸಕರಾದ ವಿಜಯಾನಂದ್ ಕಾಶಾಪ್ಪನವರ್, ಶ್ರೀನಿವಾಸ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತಿತರರು ಉಪಸ್ಥಿತರಿದ್ದರು.

Shimoga Chamber of commerce ಅ.16 ರಂದುಆದಾಯ ತೆರಿಗೆ ಟಿಡಿಎಸ್ & ಟಿಸಿಎಸ್ ಕಾಯ್ದೆ ತಿದ್ದುಪಡಿ ಕುರಿತ ವಿಚಾರ ಸಂಕಿರಣ

0

Shimoga Chamber of commerce ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಕೆ.ಟಿ. ಶಾಮಯ್ಯ ಗೌಡ ರಸ್ತೆ, ಸಿಟಿ ಕ್ಲಬ್ ಹಿಂಬಾಗ, ಶಿವಮೊಗ್ಗದಲ್ಲಿ ದಿನಾಂಕ: ೧೬.೧೦.೨೦೨೫ನೇ ಗುರುವಾರÀ ಸಂಜೆ ೪.೦೦ಕ್ಕೆ ಸರಿಯಾಗಿ ಸಂಘದ ಶಾಂತಲಾ ಸ್ಪೇರೋಕ್ಯಾಸ್ಟ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಆದಾಯ ತೆರಿಗೆ, ಟಿ.ಡಿ.ಎಸ್ ಮತ್ತು ಟಿ.ಸಿ.ಎಸ್ ಕಾಯ್ದೆಗಳಲ್ಲಿ ಆದ ಇತ್ತೀಚಿನ ತಿದ್ದುಪಡಿ ಕುರಿತು ವಿಚಾರ ಸಂಕಿರಣ ಹಾಗೂ ಅರಿವು ಕಾರ್ಯಾಗಾರವನ್ನು ಏರ್ಪಡಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಶ್ರೀ ಬಿ. ಗೋಪಿನಾಥ್‌ರವರು ವಹಿಸಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಪಿ. ವಿಮಲ್‌ರಾಜ್, ಐ.ಆರ್.ಎಸ್, ಹೆಚ್ಚುವರಿ ಆಯುಕ್ತರು, ಆದಾಯ ತೆರಿಗೆ, ರೇಂಜ್-೬(೧) ಬೆಂಗಳೂರು ಇವರು ಉಪಸ್ಥಿತರಿರುತ್ತಾರೆ ಹಾಗೂ ವಿಶೇಷ ಕಾರ್ಯಾಗಾರದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಆದಾಯ ತೆರಿಗೆ ಹಿರಿಯ ಅಧಿಕಾರಿಗಳು ವಿಸೃತವಾಗಿ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲ್ಲಿ ಸನ್ನದು ಲೆಕ್ಕಪರಿಶೋಧಕರುಗಳ ಸಂಘ ಮತ್ತು ತೆರಿಗೆ ಸಲಹೆಗಾರರುಗಳÀ ಸಂಘದ ಅಧ್ಯಕ್ಷರುಗಳು ಉಪಸ್ಥಿತರಿರುತ್ತಾರೆ.

Shimoga Chamber of commerce ಈ ವಿಶೇಷ ಉಪನ್ಯಾಸ ಹಾಗೂ ಸಂವಾದ ಕಾರ್ಯಕ್ರಮಕ್ಕೆ ಸಂಘದ ಸದಸ್ಯ ವಾಣಿಜ್ಯೋದ್ಯಮಿಗಳು, ಕೈಗಾರಿಕೋದ್ಯಮಿಗಳು, ಸನ್ನದು ಲೆಕ್ಕಪರಿಶೋಧಕರು, ತೆರಿಗೆ ಸಲಹೆಗಾರರು, ವೃತ್ತಿಪರರು, ತೆರಿಗೆ ಪಾವತಿದಾರರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡು ಯಶಸ್ವಿಗೊಳಿಸಲು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಶ್ರೀ ಎ.ಎಂ. ಸುರೇಶ್‌ರವರು ಸಂಘದ ಪ್ರಕಟಣೆಯಲ್ಲಿ ಕೋರಿದ್ದಾರೆ.

Dr Virupakshappa ಬಡವರಿಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಗುಣಮಟ್ಟದ,ಉಚಿತ ಚಿಕಿತ್ಸೆ- ಡಾ.ವಿರೂಪಾಕ್ಷಪ್ಪ

0

Dr Virupakshappa ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು.
ಮಂಗಳವಾರ ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್ ಹಾಲ್‌ನಲ್ಲಿ ಮಾಧ್ಯಮಗಾರರನ್ನು ಉದ್ದೇಶಿಸಿ ಅವರು ಮಾತನಾಡಿ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ 1200 ಹಾಸಿಗೆಯ ಸಾಮರ್ಥ್ಯವನ್ನು ಹೊಂದಿದೆ. ಇದರಿಂದ ಅಕ್ಕ ಪಕ್ಕದ ಜಿಲ್ಲೆಗಳಾದ ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾವೇರಿ ಹಾಗೂ ಉತ್ತರ ಕನ್ನಡದಿಂದಲೂ ಸಹ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಪ್ರತಿ ದಿನ ಶೇ.90 ರಷ್ಟು ಹೊರರೋಗಿಗಳು ದಾಖಲಾಗುತ್ತಿದ್ದಾರೆ ಎಂದರು.
ಹೊರರೋಗಿಗಳ ಅನುಕೂಲಕ್ಕಾಗಿ ದಿನದ 24 ಗಂಟೆಯು ಓ.ಪಿ.ಡಿ. ವಿಭಾಗವು ತೆರದಿದ್ದು, ಪ್ರಸ್ತುತ ಸೇವೆಯನ್ನು ಹೆಚ್ಚುವರಿ ಮಾಡಲು ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಆರಂಭಿಸಲಾಗುತ್ತಿದೆ. ಅದರಂತೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್ ಸರ್ಜರಿ, ಕ್ಯಾನ್ಸರ್ ಸರ್ಜರಿ, ನ್ಯೂರೋ ಸರ್ಜರಿ, ಮಕ್ಕಳ ಶಸ್ತçಚಿಕಿತ್ಸೆ, ಮೂತ್ರ ರೋಗ ಶಸ್ತçಚಿಕಿತ್ಸೆ ಹಾಗೂ ಕಿಡ್ನಿ ಕಾಯಿಲೆ ಸಂಬAಧಿಸಿದAತೆ ಚಿಕಿತ್ಸೆ ನೀಡಲು ಚಿಂತನೆ ಮಾಡಲಾಗಿದ್ದು, ಇದರ ಸೇವೆ ಸೋಮವಾರ ಮತ್ತು ಗುರುವಾರ ಮಾತ್ರ ದೊರೆಯಲಿದೆ. ಹಾಗೂ ನರರೋಗ ಶಸ್ತçಚಿಕಿತ್ಸಾ ಸೇವೆ ಮಂಗಳವಾರ, ಗುರುವಾರ, ಶನಿವಾರದಂದು ಹೊರರೋಗಿಗಳ ಸೇವೆಗೆ ಲಭ್ಯವಿದ್ದು, ಈ ಚಿಕಿತ್ಸೆಗೆ ಬಿ.ಪಿಎಲ್. ಕಾರ್ಡುದಾರರಿಗೆ ಎ,ಬಿ,ಎ,ಆರ್,ಕೆ ಅಡಿಯಲ್ಲಿ ಉಚಿತ ಸೌಲಭ್ಯ ನೀಡಲಾಗುತ್ತದೆ ಎಂದರು.
ಇದರ ಜೊತೆಗೆ ಈಗ ಪ್ಯಾರ ಮೆಡಿಕಲ್, ಪಿಹೆಚ್ ಎಸ್, ನರ್ಸಿಂಗ್ ಕಾಲೇಜುಗಳು ನಡೆಯುತ್ತಿದ್ದು, 2000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾತಿಯಾಗಿದ್ದಾರೆ. ಸೂಪರ್ ಸ್ಪೆಷಲಿಟಿ, ಮಕ್ಕಳ ಆಸ್ಪತ್ರೆ, ವಸತಿ ಗೃಹ, ಯುಜಿ ಹಾಸ್ಟೆಲ್, ಬಾಯ್ಸ್ ಅಂಡ್ ರ್ಲ್ಸ್ ಹಾಸ್ಟೆಲ್, ಆಧುನಿಕ ಶವಗಾರ ಹಾಗೂ ವೈದ್ಯಕೀಯ ಅಧಿಕಾರಿಗಾಗಿ 237 ಕ್ವಾಟ್ರಸ್ ಮನೆಗಳನ್ನು ನಿರ್ಮಿಸಲಾಗಿದೆ ಎಂದರು.
ಮೂರು ನಾಲ್ಕು ಆಸ್ಪತ್ರೆಗಳು ಸೇರಿ ಒಂದೇ ಆಸ್ಪತ್ರೆಯಲ್ಲಿ ಸೇವೆ ಮೆಗ್ಗಾನ್ ಅಲ್ಲಿ ಸಿಗುತ್ತಿದೆ. ಜನವರಿ ಯಿಂದ ಆಗಸ್ಟ್ ನಲ್ಲಿ ಪ್ರತಿ ದಿನ ಹೊರರೋಗಿಗಳು ಮತ್ತು ಒಳರೋಗಿಗಳು ಸೇರಿ 4500 ಜನ ಹಾಗೂ ಪ್ರತಿ ತಿಂಗಳು ಎಬಿಆರ್‌ಕೆ ಯಲ್ಲಿ 3000 ರೋಗಿಗಳು ಉಚಿತ ಸೇವೆ ಪಡೆಯುತ್ತಿದ್ದಾರೆ. ಇದರಿಂದ 200 ಕೋಟಿ ಹಣವನ್ನು ಪ್ರತಿರ್ಷ ರೋಗಿಗಳಿಗೆ ಈ ಯೋಜನೆಯಲ್ಲಿ ವೆಚ್ಚ ಮಾಡುತ್ತಿದೆ ಎಂದರು.
ಪ್ರತಿದಿನ 50-60 ಮೇಜರ್ ಸರ್ಜರಿ ಹಾಗ 130-140 ಜನ ಮೈನರ್ ಸರ್ಜರಿ ಮಾಡಲಾಗುತ್ತಿದ್ದು, ಪ್ರತಿತಿಂಗಳು 240 ನವಜಾತ ಶಿಶುಗಳ ಮಕ್ಕಳಿಗೆ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 25 ರಿಂದ 30 ಎಂಆರ್‌ಐ, 125 ಸಿಟಿಸ್ಕಾö್ಯನಿಂಗ್, 370 ರಿಂದ 400 ಜನರಿಗೆ ಎಕ್ಸ್ರೇ ಹಾಗೂ 100 ಜನರಿಗೆ ಅಲ್ಟçಸೌಂಡ್ ಸ್ಕಾö್ಯನಿಂಗ್ ಸೇವೆಗಳನ್ನು ಪ್ರತಿ ದಿನ ನೀಡಲಾಗುತ್ತಿದೆ.

Dr Virupakshappa ಸಿಮ್ಸ್ನ ಮುಖ್ಯ ಅಧೀಕ್ಷಕರಾದ ಡಾ.ಸಿದ್ದಪ್ಪ ಮಾತನಾಡಿ, ಉಪ ಲೋಕಾಯುಕ್ತರು ಮೆಗ್ಗಾನ್ ಭೇಟಿ ನೀಡಿ ರೋಗಿಗಳೊಂದಿಗೆ ಸಮಾಲೋಚಿಸಿದ್ದರೂ ಆಸ್ಪತ್ರೆಯ ಬಗ್ಗೆ ಯಾವುದೇ ಸಮಸ್ಯೆ ಕಂಡುಬAದಿಲ್ಲ. ಆಸ್ಪತ್ರೆಯ ಒಳಾಂಗಣದಲ್ಲಿ ಹಾಗೂ ಹೊರಾಂಗಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಾಡಲು ಈಗಾಗಲೇ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಂತೆ ಹೆರಿಗೆನಲ್ಲಿ ವಾರ್ಡ್ ನಲ್ಲಿ ಪುರುಷ ಸಿಬ್ಬಂದಿಯನ್ನು ನಿರ್ಬಂಧಿಸಲಾಗಿದೆ. ಮಕ್ಕಳ ಕಳ್ಳತನ ತಡೆಯಲು ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ.
ಮುಲಭೂತ ಸೌಕರ್ಯ ಸಂಬAಧಿಸಿದAತೆ ರೋಗಿಗಳಿಗೆ ಹಾಗೂ ಚಿಕಿತ್ಸೆಗೆ ಬರುವ ಸಾರ್ವಜನಿಕರಿಗೆ ಸಮರ್ಪಕವಾಗಿ ಕುಡಿಯುವ ನೀರು, ಹಾಸಿಗೆ ಹಾಗೂ ಶೌಚಾಲಯಗಳನ್ನು ದಿನಕ್ಕೆ ಕನಿಷ್ಠ ಎರಡು ಬಾರಿ ಸ್ವಚ್ಛವಾಗಿಸಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಿಮ್ಸ್ ಅಧೀಕ್ಷಕರಾದ ಡಾ. ತಿಮ್ಮಪ್ಪ, ಸಿಮ್ಸ್ ವಿಶೇಷ ಅಧಿಕಾರಿಯಾದ ಪರಮೇಶ್ವರಪ್ಪ, ಜಿಲ್ಲಾ ಶಸ್ತçಚಿಕಿತ್ಸಕರಾದ ಸಿದ್ದನಗೌಡ ಪಾಟೀಲ್ ಹಾಗೂ ವೈದ್ಯಕೀಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದರು.

JCI Shimoga Malnad ಜೆಸಿಐ ವಲಯಾಧ್ಯಕ್ಷರಾಗಿ ಮಧುಸೂದನ ನಾವಡ ಆಯ್ಕೆ

0

JCI Shimoga Malnad ಪ್ರತಿಷ್ಠಿತ ಜೆಸಿಐ ವಲೆಯ ಮಟ್ಟದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ. ನೂತನ ವಲಯ್ಯಾಧ್ಯಕ್ಷರಾಗಿ ಮಧುಸೂದನ್ ನಾವಡ ಆಯ್ಕೆ
ಜೆಸಿಐ ವಲಯ 24ರ 2026 ನೇ ಸಾಲಿಗೆ. ಶಿವಮೊಗ್ಗ ನಗರದ ಒಕ್ಕಲಿಗರ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ
ಜೆ ಸಿಐನ. ಮಧುಸೂದನ್ ನಾವಡ ಅವರು ವಲಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ವಲಯ ಉಪಾಧ್ಯಕ್ಷರಾಗಿ ಕುಮಾರ್ ಬೆಣ್ಣೆ. ಅಭಿಜಿತ್ ಎಚ್ ಎಫ್. ಅಮೃತ್ ಸಿ. ಕಾರ್ಕಳ ಗಣೇಶ್ ರಮೇಶ್ ಪೈ. ಹಾಗೂ ಜೋನ್ ಆಫೀಸರ್ ಆಗಿ ಜೀವಿ ಗಣೇಶ್.. ಪ್ರಮೋದ್ ಶಾಸ್ತ್ರಿ. ರಸುಲ್.. ಆಯ್ಕೆಯಾಗಿ. ಅಧಿಕಾರವಹಿಸಿಕೊಂಡು ಪ್ರಮಾಣವಚನ ಸ್ವೀಕರಿಸಿದರು.
JCI Shimoga Malnad ಈ ಚುನಾವಣಾ ಅಧಿಕಾರಿಗಳಾಗಿ. ಜೆ ಸಿ ಐ ಭಾರತದಿಂದ. ವರ್ಷ ಮೆನನ್. ರಾಷ್ಟ್ರೀಯ ನಿರ್ದೇಶಕರಾದ. ಅನುಷ್ ಗೌಡ. ಚನ್ನ fc ವೀರೇಶ್. ಶಿವಕುಮಾರ್. ಪ್ರಶಾಂತ್ ಉಪಸ್ಥಿತರಿದ್ದರು ವಿಜೇತ ತಂಡದವರಿಗೆ. ಹಾಲಿ ವಲಯ ಅಧ್ಯಕ್ಷರಾದ. ಗೌರೀಶ್ ಭಾರ್ಗವ್. ಹಾಗೂ ಎಲ್ಲಾ ಜೆ ಸಿ ಐ

ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಅಭಿನಂದಿಸಿದ್ದಾರೆ

Karnataka Rakshana Vedike ಶಿವಮೊಗ್ಗ ಇಎಸ್ಐ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ವಿರುದ್ದ ಕರವೇ ಸ್ವಾಭಿಮಾನಿ ಬಣದಿಂದ ದೂರು ಸಲ್ಲಿಕೆ

0

Karnataka Rakshana Vedike ಶಿವಮೊಗ್ಗದ ಕಾರ್ಮಿಕರು ಪ್ರಗತಿಪರರು ಸಂಘಗಳ ಹೋರಾಟದ ಫಲವಾಗಿ ಬಹುಕಾಲದ ಬೇಡಿಕೆಯಂತೆ ಕಡುಬಡವ ಕಾರ್ಮಿಕರ ಆರೋಗ್ಯ ಉಚಿತ ತಪಾಸಣೆಗೆಂದು ಶಿವಮೊಗ್ಗದ ವಿನೋಬನಗರ ಸವಿ ಬೇಕರಿ ಮುಂಭಾಗದಲ್ಲಿ ಬಿ ಎಚ್ ರಸ್ತೆಯಲ್ಲಿ ಹಾಗೂ ಎಂಟಿ ರಸ್ತೆಯಲ್ಲಿ ಇಎಸ್ಐ ಆಸ್ಪತ್ರೆಯನ್ನು ಪ್ರಾರಂಭಿಸಲಾಯಿತು. ಇದರ ಉದ್ದೇಶ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ಮತ್ತು ಸಮಯೋಚಿತ ಸೇವೆಗಳನ್ನು ಪಡೆಯುವ ಉದ್ದೇಶಗಳಿಂದ ಸರ್ಕಾರ ಪ್ರಾರಂಭಿಸುತ್ತದೆ ಆದರೆ ಇದಕ್ಕೆ ಸಂಬಂಧಪಟ್ಟ ಇಲಾಖೆಯ ಮಲತಾಯಿ ಧೋರಣೆಯಿಂದ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳು ಸಿಗದೇ ವಂಚಿತರಾಗಿರುತ್ತಾರೆ ಆ ಸಮಸ್ಯೆಗಳು ಎಂದರೆ
1) ಸಮಯ-ಇಎಸ್ಐ ಆಸ್ಪತ್ರೆಯ ಸರ್ಕಾರದ ಸುತ್ತೋಲೆಯಂತೆ ಬೆಳಗ್ಗೆ 9:00 ರಿಂದ ಸಂಜೆ 4 ಗಂಟೆಯವರೆಗೆ ಸಮಯ ನಿಗದಿಯಾಗಿದ್ದರು ಸಹ ಈ ಆಸ್ಪತ್ರೆಗಳು ಪ್ರಸ್ತುತ ಬೆಳಗ್ಗೆ 9 ರಿಂದ 1 ಗಂಟೆಯವರೆಗೆ ಮುಚ್ಚಿ ಸಂಜೆ 5 ಗಂಟೆಯಿಂದ 6:30ರ ನಂತರ ಮುಚ್ಚಲ್ಪಡುತ್ತದೆ
2) ಸಿಸಿ ಕ್ಯಾಮೆರಾ -ಇಎಸ್ಐ ಆಸ್ಪತ್ರೆಯ ಮುಖ್ಯದ್ವಾರ ಓ ಪಿ ಡಿ ಸ್ಥಳ ಹಾಗೂ ಔಷಧಿ ಕೊಡುವ ಸ್ಥಳಗಳಲ್ಲಿ ಮತ್ತು ಔಷಧಿ ಸಂಗ್ರಹಿಸಿರುವ ಉಗ್ರಾಣ ದಲ್ಲೂ ಸಹ ಸಿಸಿ ಕ್ಯಾಮೆರಾ ಅಳವಡಿಸಬೇಕು ಅಲ್ಲಿ ಸಿಬ್ಬಂದಿಗಳ ಅನುಚಿತ ವರ್ತನೆಯನ್ನು ದಾಖಲಾಗದ ಹಾಗೆ ನೋಡಿಕೊಳ್ಳುವುದೇ ಇದ್ದಿದ್ದು ಸಹ ಕಾನೂನು ಬಾಹಿರವಾಗುತ್ತದೆ
3) ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ನಾಮಫಲಕ- ಈ ಆಸ್ಪತ್ರೆಯಲ್ಲಿ ಪ್ರಸ್ತುತವಾಗಿ ಯಾವ ವೈದ್ಯಾಧಿಕಾರಿಗಳು ಹಾಗೂ ಈ ಇಲಾಖೆಯ ಸಂಬಂಧ ಪಟ್ಟ ಅಧಿಕಾರಿಗಳ ನಾಮಫಲ ಪ್ರದರ್ಶನ ಮಾಡದೆ ಇರುವುದು ಕಾನೂನು ಉಲ್ಲಂಘನೆ ಆಗಿರುತ್ತದೆ
4) ರನ್ನಿಂಗ್ ಲೆಟರ್ ನೀಡುವುದರಲ್ಲಿ ಅವ್ಯವಸ್ಥೆ- ಒಬ್ಬ ಕಾರ್ಮಿಕ ತನ್ನ ತುರ್ತು ಚಿಕಿತ್ಸೆ ಎಂದು ಈ ಇಲಾಖೆಯಿಂದ ರನ್ನಿಂಗ್ ಲೆಟರ್ ಪಡೆದರೆ ಮಾತ್ರ ಆತನ ಆತನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅರನ್ ಆಗಿರುತ್ತಾನೆ. ಆದರೆ ಇವರು ಸರಿಯಾದ ಸಮಯ ಸಮಯವನ್ನು ನಿಗದಿ ಮಾಡದೆ ದೂರದೂರಿನಿಂದ ಬರುವವರಿಗೆ ರನ್ನಿಂಗ್ ಲೆಟರ್ ಪಡೆಯಲು ತೊಂದರೆ ಆಗಿರುತ್ತದೆ
5) ಮೂಲಭೂತ ಸೌಕರ್ಯ -ಶಿವಮೊಗ್ಗದ ಈ ಮೂರು ಆಸ್ಪತ್ರೆಯಲ್ಲಿ ಕಾರ್ಮಿಕ ರೋಗಿಗಳಿಗೆ ಸರಿಯಾದ ಆಸನದ ವ್ಯವಸ್ಥೆ ಕುಡಿಯಲು ಶುದ್ಧ ನೀರಿನ ವ್ಯವಸ್ಥೆ ಆಗಲಿ ಶೌಚಾಲಯದ ವ್ಯವಸ್ಥೆಯಾಗಲಿ, ಮಕ್ಕಳಿಗೆ ಹಾಲುಣಿಸುವ ಪ್ರತ್ಯೇಕ ಕೊಠಡಿಯಲ್ಲಿ ಇರುವುದಿಲ್ಲ ಇದರಿಂದ ಕಾರ್ಮಿಕರಿಗೆ ಸಮಸ್ಯೆಯಾಗುತ್ತಿದೆ
6) ಬಯೋಮೆಟ್ರಿಕ್ /ಹಾಜರಾತಿ- ಇಲ್ಲಿನ ಆಸ್ಪತ್ರೆಗಳಲ್ಲಿ ಬಯೋಮೆಟ್ರಿಕ್/ ಹಾಜರಾತಿ ಇಲ್ಲದೆ ಇಲ್ಲಿಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಇಷ್ಟ ಬಂದ ಸಮಯಕ್ಕೆ ಬಂದು ಹೋಗುವುದನ್ನು ಮಾಡುತ್ತಾರೆ ಆದರೆ ಕೆಲವು ವೈದ್ಯಾಧಿಕಾರಿಗಳು ಅಪರೂಪಕ್ಕೆ ಬರುವ ವ್ಯವಸ್ಥೆ ಇಲ್ಲಿ ಇರುತ್ತದೆ
7) ಆಸ್ಪತ್ರೆಯ ನಾಮಫಲಕ- ಶಿವಮೊಗ್ಗದ ಇ ಎಸ್ ಐ ನ ಕೆಲವು ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಗೊತ್ತಾಗುವ ಹಾಗೆ ಆಸ್ಪತ್ರೆಯ ಬೋರ್ಡ್. ಕಾರ್ಮಿಕರಿಗೆ ಸೌಲಭ್ಯದ ಬಗ್ಗೆ ಮಾಹಿತಿ ಹಾಕದಿರುವುದು ಇದರಿಂದ ತೊಂದರೆಯಾಗುತ್ತದೆ
ಈ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಪ್ರತಿ ತಾಲೂಕು ಗಳಲ್ಲಿಯೂ ಸುಸಜ್ಜಿತವಾದ ಈಎಸ್ಐ ಆಸ್ಪತ್ರೆಗಳನ್ನು ನಿರ್ಮಿಸಬೇಕೆಂದು ಆಯುಕ್ತರು ಕಾರ್ಮಿಕರ ರಾಜ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಬೆಂಗಳೂರು ಸಂಘಟನೆ ಆಗ್ರಹಿಸುತ್ತದೆ ಒಂದು ಪಕ್ಷ ಈ ನಮ್ಮ ಮೇಲಿನ ಬೇಡಿಕೆಗಳು ಸರಿಪಡಿಸದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಇಲಾಖೆಯ ಮುಂಭಾಗದಲ್ಲಿ Karnataka Rakshana Vedike ಅಹೋ ರಾತ್ರಿ ಧರಣಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಸುತ್ತದೆ ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಎಚ್ಎಸ್ ಯುವ ಘಟಕದ ಅಧ್ಯಕ್ಷರಾದ ಸಂತೋಷ್ ಗ್ರಾಮಾಂತರ ಅಧ್ಯಕ್ಷರಾದ ಮಂಜುನಾಥ್ ಜಿಲ್ಲಾ ಕಾರ್ಯದರ್ಶಿ ರಾಮು ಮಹಿಳಾ ಘಟಕದ ಅಧ್ಯಕ್ಷರಾದ ಕವಿತಾ ಸಿ ಉಪಾಧ್ಯಕ್ಷರಾದ ಪದ್ಮ ಸಂಘಟನಾ ಕಾರ್ಯದರ್ಶಿಯಾದ ಜ್ಯೋತಿ ನಗರ ಅಧ್ಯಕ್ಷರಾದ ಜೀವನ್ ನಗರ ಕಾರ್ಯಾಧ್ಯಕ್ಷರಾದ ನಾಗರಾಜ್ ಪ್ರಶಾಂತ್ ನೂರುಲ್ಲಾ ಯುವ ನಗರ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಎಚ್ಎಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ಮಾಲತೇಶ ಎನ್ ಮುಂತಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು