Friday, August 7, 2026
Friday, August 7, 2026
Home Blog Page 134

Manasadhara Trust ಮಕ್ಕಳಲ್ಲಿನ ಮಾನಸಿಕ ಒತ್ತಡ ದೂರಮಾಡಲು ಬೇಸಿಗೆ ಶಿಬಿರಗಳು ಸಹಕಾರಿ- ಡಾ.ಐಶ್ವರ್ಯ.

0

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ಮಕ್ಕಳ ಕಲಿಕಾ ಕೇಂದ್ರ ಹಾಗೂ ನಮ್ಮ ಹಳ್ಳಿ ಥಿಯೇಟರ್(ರಿ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮನಃಸ್ಫೂರ್ತಿ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಡಾ.ಐಶ್ವರ್ಯ ರವರು “ಮಕ್ಕಳಿಗೆ ಪ್ರಸ್ತುತ ಒತ್ತಡದ ಬದುಕಿದೆ. ಅದನ್ನು ದೂರಗೊಳಿಸಲು ಬೇಸಿಗೆ ಶಿಬಿರಗಳ ಪಾತ್ರ ಬಹಳ ಮುಖ್ಯ. ಪೋಷಕರು ಇದನ್ನು ಮನಗಂಡು ಇಂತಹ ಶಿಬಿರಗಳಿಗೆ ಮಕ್ಕಳನ್ನು ಸೇರಿಸಬೇಕು, ಹಾಗೆಯೇ ಶಿಬಿರಗಳು ಮಕ್ಕಳಿಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ಮಾನಸಿಕವಾಗಿ ಧೈರ್ಯವನ್ನು ತುಂಬುತ್ತದೆ ಮತ್ತು ಅವರನ್ನು ಮೊಬೈಲ್ ನಿಂದ ದೂರವಿಡುವುದಕ್ಕೆ ಸಹಕಾರಿಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಈ ಶಿಬಿರ ಬಹಳ ಉಪಯುಕ್ತವಾಗಿದೆ” ಎಂದರು.

Manasadhara Trust ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ ರವರು ಮಾತನಾಡಿ “ಮನಃಸ್ಫೂರ್ತಿ ಬೇಸಿಗೆ ಶಿಬಿರವು ಸಂಪೂರ್ಣ ಉಚಿತವಾಗಿದ್ದು ಇದು ಒಂಬತ್ತನೇ ವರ್ಷದ ಶಿಬಿರವಾಗಿದೆ. ಮುಖ್ಯವಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮತ್ತು ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಈ ಶಿಬಿರವು ರೂಪುಗೊಂಡಿದ್ದು ನಾಟಕ, ಚಿತ್ರಕಲೆ, ಹಾಡು, ಕ್ರಾಫ್ಟ್, ಪರಿಸರದ ಅರಿವು…. ಹೀಗೆ ಇತ್ಯಾದಿ ವಿಷಯಗಳನ್ನು ಇಂದಿನಿಂದ ಹೇಳಿಕೊಡಲಾಗುತ್ತದೆ” ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಬಿರದ ನಿರ್ದೇಶಕರಾದ ಶ್ರೀ ಯುತ ಮಂಜುನಾಥ ಸ್ವಾಮಿ, ಶಿಬಿರದ ಸಂಚಾಲಕರಾದ ಶ್ರೀ ಮತಿ ರಂಗನಾಯಕಿ, ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್, ಶ್ರೀ ಯುತ ಪ್ರತೀಕ್.ಸಿ.ಎಂ, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ಪ್ರಶಿಕ್ಷಣಾರ್ಥಿಗಳಾದ ಸ್ಫೂರ್ತಿ.ವೈ.ಹೆಚ್, ಮಂಜುಳ, ಜ್ಯೋತಿ, ರಾಹುಲ್, ಶಶಾಂಕ್, ಮಂಜು.ಆರ್.ಪಿ, ನಮ್ಮ ಹಳ್ಳಿ ಥಿಯೇಟರ್ ನ ಸದಸ್ಯರು, ಮನಃಸ್ಫೂರ್ತಿ ಮಕ್ಕಳ ಕಲಿಕಾ ಕೇಂದ್ರದ ಶಿಕ್ಷಕರು ಉಪಸ್ಥಿತರಿದ್ದರು.

D.S.Arun ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆ ಕಿರಿದಾಗಿ ಸಂಚಾರಕ್ಕೆ ಕಿರಿಕಿರಿ. ಪರಿಹಾರ ಮಾಡಿ- ಡಿ.ಎಸ್.ಅರುಣ್ .

0

D.S.Arun ಶಿವಮೊಗ್ಗ ಜಿಲ್ಲೆಯ ಮಾಚೇನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕೈಗಾರಿಕಾ ಪ್ರದೇಶಕ್ಕೆ ವಿಧಾನ ಪರಿಷತ್ತಿನ ಸದಸ್ಯರಾದ ಡಿ.ಎಸ್.ಅರುಣ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಪ್ರದೇಶದಿಂದ ಭಾರಿ ವಾಹನಗಳು ರಾಷ್ಟ್ರೀಯ ಹೆದ್ದಾರಿಗೆ ಸೇರುವಾಗ ಸರ್ವಿಸ್ ರಸ್ತೆ ಬಹಳ ಕಿರಿದಿರುವುದು ಆಗಷ್ಟೇ ಶಾಸಕರ ಗಮನಕ್ಕೆ ಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ ಸರ್ವಿಸ್ ರಸ್ತೆಯನ್ನು ಅಗಲೀಕರಣ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಡಿ.ಎಸ್.ಅರುಣ್. ಸೂಚಿಸಿದರು. ಅಧಿಕಾರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದರು..

D.S.Arun ಈ ಸಂದರ್ಭದಲ್ಲಿ ಶಿವಮೊಗ್ಗ-ಭದ್ರಾವತಿ ಕೈಗಾರಿಕಾ ಸಂಘದ ಕಾರ್ಯದರ್ಶಿ ರಾಜೇಶ್, ಪ್ರವೀಣ್, ಸೌರಬ್, ಸಂಜಯ್ ಪಾಟೀಲ್ ಹಾಗೂ ಅಧಿಕಾರಿಗಳಾದ ವಸಂತ್ ಕುಮಾರ್ ಸೇರಿದಂತೆ ಇತರರು ಹಾಜರಿದ್ದರು.

S. N. Channabasappa ಶಿಕಾರಿಪುರ ಬಸ್ ಅಪಘಾತ. ಗಾಯಾಳುಗಳ ಕ್ಷೇಮ ವಿಚಾರಿಸಿದ ಶಾಸಕ ಚನ್ನಿ.

0

S. N. Channabasappa ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ನಿನ್ನೆ ಬೆಳಿಗ್ಗೆ ಸಂಭವಿಸಿದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಕಳಕಳಿ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಅವರೊಂದಿಗೆ ಶಾಸಕರು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಹಾಗೂ ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು

S. N. Channabasappa ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಧನಂಜಯ್ ಸರ್ಜಿ, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ದತ್ತಾತ್ರಿ, ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಅಪಘಾತದಲ್ಲಿ ಗಾಯಗೊಂಡವರೆಲ್ಲರೂ ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಾಸಕ ಚನ್ನಬಸಪ್ಪ ಸಾಮಾಜಿಕ ತಾಣದಲ್ಲಿ
ತಮ್ಮ ಕಾಳಜಿಯನ್ನ ಹಂಚಿಕೊಂಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾಗಿ ಟೆಲೆಕ್ಸ್ ರವಿಕುಮಾರ್ ಆಯ್ಕೆ

0

ಏ. 12ರಂದು ಬೀದರ್ ನ 40ನೇ ರಾಜ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಕಾರ್ಯಕಾರಿ, ನಂತರ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ವಿಷಯವನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ್ ಘೋಷಿಸಿದ್ದಾರೆ.
ರವಿಕುಮಾರ್‌ರವರು ಈ ಹಿಂದೆ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರಲ್ಲದೇ ಇತ್ತೀಚೆಗೆ ಸಂಘ ರಾಜ್ಯ ಚುನಾವಣಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.

ನೂತನವಾಗಿ ರಾಜ್ಯಸಮಿತಿ ಸದಸ್ಯಯರಾಗಿ ನೇಮಕಗೊಂಡ ಎನ್. ರವಿಕುಮಾರ್‌ರವರನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ನಿರ್ದೇಶಕ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಎಸ್. ಹಾಲಸ್ವಾಮಿ, ಕಾರ್ಯಕಾರಿ ಪದಾಽಕಾರಿಗಳು, ಸಮಿತಿ ಸದಸ್ಯರು, ಅಭಿನಂದಿಸಿದ್ದಾರೆ. ಏಪ್ರಿಲ್ 12ರಂದು ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40 ನೇ ರಾಜ್ಯ ಸಮ್ಮೇಳನದಲ್ಲಿ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ,ಉಪಾಧ್ಯಕ್ಷರಾದ ಹೆಚ್ ಬಿ ಮದನಗೌಡ, ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ , ಪತ್ರಕರ್ತ ಅಪ್ಪರಾವ್ ಸೌದಿ ಅವರು ನೂತನ ನಿರ್ದೇಶಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರನ್ನು ಸನ್ಮಾನಿಸಿದರು.

ತೀರ್ಥಹಳ್ಳಿ ತಾಲ್ಲೂಕಿನ ರಶ್ಮಿತಾ ಗೆ ಪಿಯು ಪರೀಕ್ಷೆಯಲ್ಲಿ ಶೇ.93 ಅಂಕಗಳು

0

ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 93ರಷ್ಟು ಅಂಕ ಪಡೆದಿದ್ದಾರೆ.

ಈ ಪ್ರತಿಭಾನ್ವಿತೆ ತೀರ್ಥಹಳ್ಳಿ ತಾಲೂಕಿನ ಹಿರೇಗೋಡು ಗ್ರಾಮದ ಶ್ರೀಮತಿ ಕವಿತಾ ರಾಜೇಶ್ ಅವರ ಪುತ್ರಿ.

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

0

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ ನಡೆದ ಖಾಸಗಿ ಬಸ್ ಅಪಘಾತದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು ಎಂದು ಸಂಸದರಾದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿರುವ ಪ್ರಯಾಣಿಕರನ್ನು ಭೇಟಿ ಮಾಡಿ, ಅವರ ಆರೋಗ್ಯದ ಸ್ಥಿತಿಗತಿಯನ್ನು ವಿಚಾರಿಸಿದರು. B.Y. Raghavendra ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುವಂತೆ ಮೆಗ್ಗಾನ್ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಲಾಗಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಅಪಘಾತದ ಸಮಯದಲ್ಲಿ ತಕ್ಷಣವೇ ಸ್ಪಂದಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ ಸ್ಥಳೀಯ ಸಾರ್ವಜನಿಕರ ಕಾರ್ಯ ಶ್ಲಾಘನೀಯ.ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಏಪ್ರಿಲ್ 15. ಶಿವಮೊಗ್ಗದ ವಿದ್ಯಾನಗರ ಮುಖ್ಯರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

0

ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿದ್ದು, ಏ.15 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ, ಜನರಲ್ ಹಾಸ್ಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗದ ಎಸ್.ಲಾವಣ್ಯ ಪಿಯು ವಿಜ್ಞಾನ ವಿಭಾಗದಲ್ಲಿ 566 ಅಂಕ ಗಳಿಕೆ

0

ದ್ವಿತೀಯ ಪಿಯು ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಎಸ್.ಲಾವಣ್ಯ 566 ಅಂಕ ಗಳಿಸಿದ್ದಾಳೆ. ಕನ್ನಡ 98, ಇಂಗ್ಲೀಷ್ 91, ಭೌತಶಾಸ್ತ್ರ 97, ರಾಸಾಯನ ಶಾಸ್ತ್ರ 90, ಗಣಿತ 96 ಮತ್ತು ಜೀವಶಾಸ್ತ್ರದಲ್ಲಿ 94 ಅಂಕ ಗಳಿಸಿದ್ದಾಳೆ. ವಿ.ಸತೀಶ್ ಮತ್ತು ಜಿ.ಎಲ್.ಶಿಲ್ಪಾ ದಂಪತಿ ಪುತ್ರಿ. ಸರ್ ಎಂ.ವಿ.ಕಾಲೇಜು ( ವಿದ್ಯಾ ಭಾರತಿ ) ಆಡಳಿತ ಮಂಡಳಿ, ಪ್ರಾಂಶುಪಾಲರು, ಪೋಷಕರು ಮತ್ತು ಜಿಲ್ಲಾ ಗಾಣಿಗ ಕ್ಷೇಮ ಅಭಿವೃದ್ಧಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಪತ್ರಕರ್ತ ವೆಂಕಟೇಶ್ ಎಸ್ ಸಂಪ ಅವರಿಗೆ ಮಂಗಳ ಎಂ.ಸಿ.ವರ್ಗೀಸ್ ಪ್ರಶಸ್ತಿ

0

ಪತ್ರಕರ್ತ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ವೆಂಕಟೇಶ ಎಸ್ ಸಂಪ ಅವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಮಂಗಳ ಎಂ. ಸಿ. ವರ್ಗೀಸ್ ಪ್ರಶಸ್ತಿಯನ್ನು ಏ.12 ರಂದು ಬೀದರನಲ್ಲಿ ನೆಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು. ಟಿ. ಖಾದರ್, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್, ಅರಣ್ಯ ಹಾಗೂ ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ,ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಬೀದರ್ ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಪ್ರದಾನ ಮಾಡಿದರು.

ವೆಂಕಟೇಶ ಸಂಪ ಅವರು ಕಳೆದ 20 ವರ್ಷಗಳಿಂದ ನಿರಂತರವಾಗಿ ಸಂಪದ ಸಾಲು ಎನ್ನುವ ಧನಾತ್ಮಕ ಪತ್ರಿಕೆಯನ್ನು ನಡೆಸುತ್ತಿರುವ ವೆಂಕಟೇಶ ಸಂಪರವರ ಸಾವಿರಾರು ಲೇಖನಗಳು ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಧನಾತ್ಮಕವಾಗಿ ಸಮಾಜಮುಖಿಯಾಗಿ ಮತ್ತು ಯುವಕರಿಗೆ ಸ್ಪೂರ್ತಿದಾಯಕವಾಗಿ ಅವರ ಹಲವಾರು ಲೇಖನಗಳು ಸಂಪದ ಸಾಲು ಪತ್ರಿಕೆಯ ಸಂಪಾದಕೀಯದಲ್ಲಿಯೂ ಪ್ರಕಟವಾಗಿವೆ ಮತ್ತು ಜನಪ್ರಿಯತೆ ಪಡೆದಿದೆ, ಹಾಗೂ ರೇಡಿಯೋ ಟಿವಿಗಳಲ್ಲಿ ನೂರಾರು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಇವರು ಹಲವಾರು ಟೀವಿ ಚಾನಲ್ ಗಳ ಪ್ಯಾನಲ್ ಡಿಸ್ಕಷನ್ ಗಳಲ್ಲಿ ಭಾಗವಹಿಸುವುದರ ಜೊತೆಗೆ ಹಲವಾರು ಸಿನಿಮಾ ಧಾರವಾಹಿಗಳಲ್ಲಿ ನಟಿಸಿದ್ದಾರೆ.

ಸಂಪದ ಫೌಂಡೇಶನ್ ಫಾರ್ ಪಬ್ಲಿಕ್ ಅವೇರ್ನಸ್ ಸಂಸ್ಥೆ ಮೂಲಕ ಹಲವಾರು ಸಾಮಾಜಿಕ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

0

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರ ಜವಾಬ್ದಾರಿ ಹಾಗೂ ಮಾಧ್ಯಮಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತ ಗಂಭೀರ ಚರ್ಚೆಗಳಿಗೆ ಈ ಸಮ್ಮೇಳನ ಸಾಕ್ಷಿಯಾಯಿತು.
ಸಮ್ಮೇಳನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
ಎರಡನೇ ದಿನ ವಿವಿಧ ವಿಷಯಾಧಾರಿತ ಗೋಷ್ಠಿಗಳು ನಡೆದವು. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ದೇಶ ಮತ್ತು ಸಮಾಜವನ್ನು ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ. ಲೇಖನಿ ಎಂಬುದು ಕೇವಲ ಶಬ್ದಗಳನ್ನಲ್ಲ, ಸತ್ಯವನ್ನು ಬರೆಯುವ ಶಕ್ತಿಯಾಗಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರತಿಪಕ್ಷದಂತೆ ಕೆಲಸ ಮಾಡಬೇಕು. ಪತ್ರಕರ್ತರು ಭಯವಿಲ್ಲದೆ ವೃತ್ತಿ ನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮದ ಘನತೆ ಹೆಚ್ಚುತ್ತದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತೆ ಎಂದು ಅಭಿಪ್ರಾಯಪಟ್ಟರು.
U.T. Khader ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, 371ಜೆ ಸಾಂವಿಧಾನಿಕ ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗ ಇಂದು ಪ್ರಗತಿಯತ್ತ ಸಾಗುತ್ತಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮಾಧ್ಯಮಗಳು ಪೂರಕ ಸಲಹೆಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಅವರು ಇಂದಿನ ಸವಾಲಿನ ದಿನಗಳಲ್ಲಿ ಸರ್ಕಾರ ಪತ್ರಕರ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
ಸಮ್ಮೇಳನದ ಸಮಾರೋಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೪೦ ಪತ್ರಕರ್ತರಿಗೆ ದತ್ತಿನಿಽ, ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಸಮ್ಮೇಳನದಲ್ಲಿ ಶಿವಮೊಗ್ಗೆಯ ಪತ್ರಕರ್ತರಾದ ಮಹೇಶ್ ಹೆಗ್ಡೆ, ಶರತ್‌ಕುಮಾರ್ ಹಾಗೂ ಅರುಣ್ ಕುಮಾರ್‌ರವರನ್ನು ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಜಿಲ್ಲಾ ಶಾಖೆಯ ಅಧ್ಯಕ್ಷರಾದ ಹೆಚ್. ಯು. ವೈದ್ಯನಾಥ್, ಉಪಾಧ್ಯಕ್ಷರಾದ ದೇಶಾದ್ರಿ ಹೊಸ್ಮನಿ, ನೂತನ ರಾಜ್ಯಸಮಿತಿ ಸದಸ್ಯ ಎನ್. ರವಿಕುಮಾರ್, ಖಜಾಂಚಿ ಎಸ್. ಆರ್. ರೋಹಿತ್, ನಗರ ಕಾರ್ಯದರ್ಶಿ ಕೆ. ಆರ್. ಸೋಮನಾಥ್, ನಿರ್ದೇಶಕರಾದ ಎಸ್. ಆರ್. ರಂಜಿತ್, ಆರುಂಡಿ ಶ್ರೀನಿವಾಸ ಮೂರ್ತಿ ಹಾಗೂ ಪತ್ರಕರ್ತ ನಾಗೇಶ್ ನಾಯ್ಕ ಉಪಸ್ಥಿತರಿದ್ದರು.