Sunday, February 15, 2026
Sunday, February 15, 2026
Home Blog Page 135

Gurudatta Hegde ಸ್ಚಚ್ಛತಾ ಸಿಬ್ಬಂದಿಗಳಿಗೆ ಗುರುತಿನ ಚೀಟಿ ನೀಡಿ- ಗುರುದತ್ತ ಹೆಗಡೆ

0

Gurudatta Hegde ಮ್ಯಾನ್ಯುಯಲ್‌ಸ್ಕಾವೆಂಜರ್‌ಗಳು ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಹೋಟೆಲ್‌, ಬಸ್‌ಸ್ಟ್ಯಾಂಡ್‌ಮತ್ತು ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ವಚ್ಚತಾ ಕಾರ್ಯ ಮಾಡುವವರಿಗೆ ವಿವಿಧ ಇಲಾಖಾ ನಿಗಮಗಳಲ್ಲಿ ಗುರುತಿನ ಚೀಟಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಇನ್ನೂ ಹಲವು ಸಫಾಯಿ ಕರ್ಮಚಾರಿಗಳು, ಸ್ವಚ್ಚತಾ ಕಾರ್ಮಿಕರಿಗೆ ಗುರುತಿನ ಚೀಟಿ ದೊರೆಯದಿರುವ ಬಗ್ಗೆ ಮಾಹಿತಿ ಇದ್ದು, ಕಾರ್ಮಿಕ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅವರಿಗೆ ಗುರುತಿನ ಚೀಟಿಗಳನ್ನು ಕೊಡಿಸುವಲ್ಲಿ ಶ್ರಮಿಸುವಂತೆ ಅವರು ಸೂಚಿಸಿದರು.
ಮ್ಯಾನ್ಯುಯಲ್‌ಸ್ಕಾವೆಂಜಿಂಗ್‌ನಿಷೇಧ ಕಾಯ್ದೆ ಜಾರಿಗೊಂಡಿದ್ದರೂ, ದುಷ್ಟಪದ್ದತಿ ನಿರ್ಮೂಲನೆಗೊಳಿಸುವ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಲೇ ಇವೆ. ಜಿಲ್ಲೆಯಲ್ಲಿ ಈ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ, ಮೇಲ್ವಿಚಾರಣೆ ನಡೆಸಲಾಗುತ್ತಿದೆ. ದುರ್ಬಲ ವರ್ಗದವರನ್ನು ಸಬಲರನ್ನಾಗಿ ಮಾಡಲು ಹಾಗೂ ಪ್ರತಿಯೊಬ್ಬ ವ್ಯಕ್ತಿಯೂ ವ್ಯಕ್ತಿಗೌರವದಿಂದ ತನ್ನ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಸಹಕರಿಸುವಂತೆ ಮನವಿ ಮಾಡಿದ ಅವರು, ಅದಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸುವಂತೆ ಸೂಚಿಸಿದರು.
Gurudatta Hegde ಪೌರ ಕಾರ್ಮಿಕರ ಮಕ್ಕಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಅಥವಾ ಖಾಸಗಿ ಕ್ಷೇತ್ರಗಳಲ್ಲಿ ಲಭ್ಯವಾಗಬಹುದಾದ ಉದ್ಯೋಗಾವಕಾಶಗಳನ್ನು ಒದಗಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಸೌಲಭ್ಯ ಪಡೆದುಕೊಳ್ಳುತ್ತಿರುವವರ ಹಾಗೂ ಸಂಸ್ಥೆಗಳಿಂದ ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯಗಳ ಬಗ್ಗೆ ವಿಸ್ತೃತ ಮಾಹಿತಿಯನ್ನು ಒದಗಿಸುವಂತೆ ಅವರು ಸೂಚಿಸಿದರು. ಅವಕಾಶ ವಿದ್ದಲ್ಲಿ ಅರ್ಹರನ್ನು ಗುರುತಿಸಿ, ಉದ್ಯೋಗಾವಕಾಶಗಳನ್ನು ಒದಗಿಸುವಂತೆ ಸೂಚಿಸಿದರು.
ಮ್ಯಾನ್ಯುಯಲ್‌ಸ್ಕಾವೆಂಜರ್‌ಗಳಾಗಿ ಕಾರ್ಯನಿರ್ವಹಿಸುತ್ತಿರುವ ಕುಟುಂಬದ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವಲ್ಲಿ ಹಾಗೂ ಅವರ ಆರೋಗ್ಯದಿಂದಿರಲು ಉತ್ತಮ ಚಿಕಿತ್ಸೆ ಅಥವಾ ಆರೋಗ್ಯ ತಪಾಸಣೆ ಮಾಡಿಸಲು ಸಂಬಂಧಿಸಿದ ಇಲಾಖಾಧಿಕಾರಿಗಳು ಗಮನಹರಿಸಬೇಕೆಂದು ಅವರು ಸೂಚಿಸಿದರು.
ಭದ್ರಾವತಿಯಲ್ಲಿ ಖಾಯಂ ಪೌರಕಾರ್ಮಿಕರಿಗಾಗಿ ಕಾಯ್ದಿರಿಸಲಾಗಿದ್ದ ಮನೆಗಳಲ್ಲಿ ಗುತ್ತಿಗೆ ಕಾರ್ಮಿಕರು ಅಕ್ರಮ ಪ್ರವೇಶ ಮಾಡಿ, ವಾಸವಾಗಿರುವುದು ಗಮನಕ್ಕೆ ಬಂದಿದೆ. ಸಂಬಂಧಿಸಿದ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಪೊಲೀಸ್‌ರಕ್ಷಣೆಯೊಂದಿಗೆ ಸಮಗ್ರ ದಾಖಲೆಗಳನ್ನು ಹೊಂದಿರುವ ಅರ್ಹರಿಗೆ ಮನೆಗಳನ್ನು ತೆರವು ಮಾಡಿಸಿಕೊಡಲು ಕ್ರಮ ವಹಿಸುವಂತೆ ಸೂಚಿಸಿದರು.
ಅಸುರಕ್ಷತೆ ಮತ್ತು ಅಪಾಯಕಾರಿಯಾಗಿರುವ ಕಾರ್ಯದಲ್ಲಿ ತೊಡಗಿರುವ ಸಫಾಯಿ ಕರ್ಮಚಾರಿಗಳಿಗೆ ಅವರ ಕುಟುಂಬದ ಅವಲಂಬಿತರಿಗೆ ಕಡ್ಡಾಯವಾಗಿ ವಿಮೆ ವ್ಯಾಪ್ತಿಗೊಳಪಡಿಸಲು ಸಂಬಂಧಿಸಿದ ಪ್ರಾಧಿಕಾರಗಳು ಕ್ರಮ ಕೈಗೊಂಡು ಅವರ ಆರೋಗ್ಯ ರಕ್ಷಣೆಗೆ ಮುಂದಾಗುವಂತೆ ಅವರು ಸೂಚಿಸಿದರು.
ಮ್ಯಾನ್‌ಹೋಲ್‌ಮತ್ತು ಅಪಾಯಕಾರಿ ಸ್ಥಳಗಳಲ್ಲಿ ಸ್ಥಚ್ಚತಾ ಕಾರ್ಯಕ್ಕೆ ಮಾನವ ಸಂಪನ್ಮೂಲವನ್ನು ಬಳಸಿಕೊಳ್ಳುತ್ತಿರುವುದು ಅಕ್ಷಮ್ಯ. ಈ ಬಗ್ಗೆ ಸಫಾಯಿ ಕರ್ಮಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈ ಅನಿಷ್ಟವನ್ನು ಹೋಗಲಾಡಿಸಲು ಮ್ಯಾನ್ಯುಯಲ್‌ಸ್ಕಾವೆಂಜಿಂಗ್‌ನೇಮಕಾತಿ ನಿಷೇಧ ಅವರ ಪುನರ್ವಸತಿ ಕಾಯ್ದೆ ಅನುಷ್ಟಾನಕ್ಕೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬಾಲ್ಯವಿವಾಹ ನಿಯಂತ್ರಣಕ್ಕೆ ಸಮುದಾಯದ ಮುಖಂಡರು ಗಮನಹರಿಸಿ : ಗುರುದತ್ತ ಹೆಗಡೆ
ಶಿವಮೊಗ್ಗ : ಅಕ್ಟೋಬರ್ 14 : (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಗುರುತಿಸಲಾಗಿರುವ ಬಾಲ್ಯವಿವಾಹ ಮತ್ತು ಫೋಕ್ಸೊ ಪ್ರಕರಣಗಳಲ್ಲಿ ಶೇ.60ರಷ್ಟು ಪರಿಶಿಷ್ಟ ಜಾತಿ ಪಂಗಡದ ಅಭ್ಯರ್ಥಿಗಳೇ ಇರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದರ ನಿಯಂತ್ರಣಲ್ಲಿ ಸಮುದಾಯದ ಮುಖಂಡರು ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಿಗೆ ಸೂಚಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿಂದಿನ ವರ್ಷಗಳಲ್ಲಿ ನಡೆದ ಪ್ರಕರಣಗಳನ್ನು ಗಮನಿಸಿದಾಗಿ ಇತ್ತೀಚಿನ ವರ್ಷಗಳಲ್ಲಿ ಅವುಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನವಹಿಸಿದ್ದರಿಂದಾಗಿ ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿದೆ ಎಂದರು.
ಹಲವು ವರ್ಷಗಳಿಂದ ಇತ್ಯರ್ಥವಾಗದ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ವಿಶೇಷ ಗಮನಹರಿಸಲಾಗಿದೆ. ಅಲ್ಲದೇ ಪರಿಶೀಲನೆಯ ನಂತರ ಋಜುವಾತಾದ 11 ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಸುಳ್ಳು ಜಾತಿ ಪ್ರಕರಣದಡಿ ಸಲ್ಲಿಕೆಯಾದ ಮೂರು ಪ್ರಕರಣಗಳ ಕುರಿತು ಹೆಚ್ಚಿನ ಮಾಹಿತಿ ಹಾಗೂ ನೈಜತೆಯ ಪರಿಶೀಲನೆಗಾಗಿ ಡಿ.ಸಿ.ಆರ್.ಇ. ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಲಾಗಿದ್ದು, ವರದಿ ಬಂದ ನಂತರ ಕ್ರಮ ಅಗತ್ಯ ಕ್ರಮ ಕೈಗೊಳ್ಳಳಾಗುವುದು ಎಂದವರು ನುಡಿದರು.
ಈಗಾಗಲೇ ಜಿಲ್ಲೆಯಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳ ಕುರಿತು ಪರಿಹಾರ ಧನ 138.00ಲಕ್ಷ ರೂ.ಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಅನುದಾನ ಬಂದ ನಂತರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. 2024ನೇ ಸಾಲಿನಲ್ಲಿ ದಾಖಲಾದ ಒಟ್ಟು 114ಪ್ರಕರಣಗಳ ಪೈಕಿ 90ಪ್ರಕರಣಗಳ ಕುರಿತು ಚಾರ್ಜ್‌ಶೀಟ್‌ಸಲ್ಲಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ದಾಖಲಾದ 98ಪ್ರಕರಣಗಳ ಪೈಕಿ 64ಪ್ರಕರಣಗಳಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಮುಜರಾಯಿ ದೇವಸ್ತಾನಗಳಲ್ಲಿ ಎಲ್ಲಾ ಜಾತಿ-ಜನಾಂಗದವರಿಗೆ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಯಾವುದೇ ಜಾತಿ ತಾರತಮ್ಯ ಆಗದಂತೆ ಕ್ರಮ ವಹಿಸಲಾಗಿದೆ ಎಂದು ಪ್ರಚಾರ ಫಲಕ ಅಳವಡಿಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಶಿವಮೊಗ್ಗ ಬಸ್‌ಸ್ಟ್ಯಾಂಡ್‌ಹಿಂಭಾಗದಲ್ಲಿನ ಬುದ್ಧನಗರದ ಅತ್ಯಲ್ಪ ಪ್ರದೇಶದಲ್ಲಿ ಹಲವು ದಶಕಗಳಿಂದ ಕನಿಷ್ಟ ಜೀವನ ನಡೆಸುತ್ತಿರುವ ನಿರ್ವಸತಿಗರಿಗೆ ವಸತಿ ಸೌಲಭ್ಯ ಕಲ್ಪಿಸಿ. ಅಂಬೇಡ್ಕರ್‌ನಗರದಲ್ಲಿನ ನಿವಾಸಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಿ. ಮಂಜುನಾಥ್‌, ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು.

ಅಪ್ರಾಪ್ತ ವಿವಾಹಿತರನ್ನು ಗುರುತಿಸಿ, 2ಮಕ್ಕಳು ಜನಿಸಿದ ನಂತರ ಮದುವೆಯ ವರನನ್ನು ಕಾನೂನು ಸುಪರ್ದಿಗೆ ವಹಿಸಿಕೊಡುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಪೊಲೀಸ್‌ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ತನಿಖೆ ನಡೆಸಿ, ಮಾನವೀಯ ನೆಲೆಯಲ್ಲಿ ಕ್ರಮ ವಹಿಸಬೇಕು.
-ಬೂದಿಗೆರೆ ಬಸವರಾಜ
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ನಿಯೋಜಿಸಲು ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡುವಲ್ಲಿ ತಾರತಮ್ಯವಾಗುತ್ತಿರುವ ಬಗ್ಗೆ ಸಮಿತಿ ಸದಸ್ಯರು ಸಭೆಯ ಗಮನಸೆಳೆದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳು ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇ ಮಾಡುವಂತೆ ಹಾಗೂ ವಿಸ್ತೃತ ವರದಿ ನೀಡುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ, ಸಮಿತಿ ಸದಸ್ಯರಾದ ರುದ್ರಪ್ಪ, ದಿನೇಶ್‌ಪಟೇಲ್‌, ಓಂಪ್ರಕಾಶ್‌, ನಾಗರಾಜ್‌, ಬೂದಿಗೆರೆ ಬಸವರಾಜ್‌, ಮಂಜುನಾಥ್‌, ಶಿವಬಸಪ್ಪ ಮತ್ತಿರರು ಉಪಸ್ಥಿತರಿದ್ದರು.

Blood Donation Camp ವೃತ್ತಿಯ ಜೊತೆ ಸಮಾಜ ಸೇವೆ ಅತಿಮುಖ್ಯ-ಫಾದರ್ ಜೈಸನ್

0

Blood Donation Camp ವೃತ್ತಿಯ ಜೊತೆಗೆ ಪ್ರವೃತ್ತಿ ಹಾಗೂ ಸಮಾಜ ಸೇವೆ ಅತಿ ಮುಖ್ಯ ಎಂದು ಸೇಂಟ್ ಜೋಸೆಫ್ ಅಕ್ಷರಧಾಮ ಕಾಲೇಜಿನ ಫಾದರ್ ಜೈಸನ್. ನುಡಿದರು ಅವರು ಇಂದು ನಗರದ ಫೆಡರಲ್ ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ. ಬೃಹತ್ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡುವುದರ ಮುಖಾಂತರ. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು ಇಂದು ರಕ್ತದ ಕೊರತೆ ಸಾಕಷ್ಟು ಇದೆ ಪ್ರತಿನಿತ್ಯ ಸಕಾಲದಲ್ಲಿ ರಕ್ತ ಸಿಗದೆ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಆದ್ದರಿಂದ ನಾವು ನೀವು ಎಲ್ಲರೂ ಮೂಢನಂಬಿಕೆಯಿಂದ ಹೊರಬಂದು ರಕ್ತದಾನ ಮಾಡೋಣ ಹಾಗೂ ಒಂದು ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ಕೈಜೋಡಿಸೋಣ ಎಂದು ಕರೆ ನೀಡಿದರು ಇದೇ ಸಂದರ್ಭದಲ್ಲಿ ಫೆಡರಲ್ ಬ್ಯಾಂಕಿನ ಮುಖ್ಯವ್ಯವಸ್ಥಾಪಕರಾದ ವಿಮರ್ಶ್ ಹೆಚ್ ಸಿ ಮಾತನಾಡುತ್ತಾ ನಮ್ಮ ಬ್ಯಾಂಕಿನ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ದೇಶಾದ್ಯಂತ ಇಂದು ರಕ್ತ ದಾನ ಶಿಬಿರ ಹಾಗೂ ಮಾನವೀಯ ಮನುಕುಲದ ಸೇವಾ ಕಾರ್ಯಗಳು ನೆರವೇರುತ್ತಾ ಇದೆ ಈ ನಿಟ್ಟಿನಲ್ಲಿ ನಾವು ಇಂದು ನಮ್ಮ ಶಿವಮೊಗ್ಗ ಬ್ರಾಂಚಿನಲ್ಲಿ ಈ ಬೃಹತ್ ರಕ್ತದಾನ ಶಿಬಿರವನ್ನು ನಮ್ಮ ಗ್ರಾಹಕರು ಹಾಗೂ ಸಿಬ್ಬಂದಿಗಳು ಮತ್ತು ಸ್ನೇಹಿತರೊಂದಿಗೆ ಹಾಗೂ. ಭಾರತೀಯ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದೇವೆ ಈ ಒಂದು ದಿನ ನಡೆಯುವ ರಕ್ತದಾನ ಶಿಬಿರದಲ್ಲಿ ಎಲ್ಲರೂ ರಕ್ತದಾನ ಮಾಡುವುದರ ಮುಖಾಂತರ ನಾವೆಲ್ಲರೂ ಸಮಾಜದಲ್ಲಿ ಪವಿತ್ರ ದಾನಿಗಳಾಗೋಣ ಎಂದು ನುಡಿದರು ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ .ಜಿ ವಿಜಯಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತಾ ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು ರಕ್ತದಾನ ಮಾಡುವುದರಿಂದ ಹೃದಯಾಘಾತದ ಪ್ರಮಾಣ ಕಡಿಮೆಯಾಗುತ್ತದೆ ಕೊಬ್ಬಿನ ಅಂಶ ಹೊರಗೆ ಹೋಗುತ್ತದೆ ಹಾಗೂ ನಮ್ಮ ದೇಹದಲ್ಲಿ ನಮಗೆ ಗೊತ್ತಿಲ್ಲದ ಯಾವುದಾದರೂ ಕಾಯಿಲೆಗಳಿದ್ದರೆ ತಕ್ಷಣ ತಿಳಿಯುತ್ತದೆ ಮತ್ತು ನಾವು ಸದಾ ಲವಲುವಿಕೆಯಿಂದ ಇರುತ್ತೇವೆನಿರಂತರವಾಗಿ ವೈದ್ಯರ ಸಲಹೆ ಮೇರೆಗೆ Blood Donation Camp ರಕ್ತದಾನ ಮಾಡುವುದರಿಂದ ನಾವು ದೀರ್ಘಾಯುಷ್ಯ ಉಳ್ಳವರಾಗುತ್ತೇವೆ ಈ ನಿಟ್ಟಿನಲ್ಲಿ 18 ವರ್ಷದಿಂದ 65 ವರ್ಷದವರೆಗೆ ಆರೋಗ್ಯವಂತರು ಮೂರು ತಿಂಗಳಿಗೆ ಒಮ್ಮೆ ರಕ್ತದಾನ ಮಾಡುವುದರಿಂದ ನಮ್ಮ ದೇಹಕ್ಕೆ ಸಾಕಷ್ಟು ಲಾಭಗಳಿವೆ ಎಂದು ನುಡಿದರು ಹಾಗೆ 119 ಬಾರಿ ರಕ್ತದಾನ ಮಾಡಿದ. ರಾಜ್ಯ ಪ್ರಶಸ್ತಿ ಪುರಸ್ಕೃತ ಧರಣೇಂದ್ರ ದಿನಕರ್ ಅವರು ಮಾತನಾಡುತ್ತ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ ದಾನಿಗಳ ದೇಹದಿಂದ ಮಾತ್ರ ಸಂಗ್ರಹಿಸಲು ಸಾಧ್ಯ ಇತ್ತೀಚೆಗೆ ಗರ್ಭಿಣಿ ಸ್ತ್ರೀಯರು ಮೇಜರ್ ತಲಸೇಮೆಯ ಹಾಗೂ ಅನೇಕ ಕಾಯಿಲೆಗಳಿಗೆ ಸಾಕಷ್ಟು ರಕ್ತದ ಅವಶ್ಯಕತೆ ಇದ್ದು ಜಿಲ್ಲೆಯಲ್ಲಿ ಇನ್ನೂ 30% ರಕ್ತದ ಕೊರತೆ ಎದ್ದು ಕಾಣುತ್ತಿದೆ ಈ ನಿಟ್ಟಿನಲ್ಲಿ ಎಲ್ಲರೂ ರಕ್ತದಾನ ಮಾಡಲು ಮುಂದಾಗಬೇಕು ಹಾಗೆ ನಿಮಗೆ ಅವಶ್ಯಕತೆ ಇದ್ದರೆ ನಮ್ಮ ಬ್ಲಡ್ ಬ್ಯಾಂಕುಗಳನ್ನು ಸಂಪರ್ಕಿಸಿ ಎಂದು ಮನವಿ ಮಾಡಿದರು ಇದೇ ಸಂದರ್ಭದಲ್ಲಿ ಡಾಕ್ಟರ್ ದಿನಕರ್ ರವರು ರಕ್ತದಾನದ ಹಲವಾರು ಮಾಹಿತಿ ಟಿಪ್ಸ್ ಗಳನ್ನು ನೀಡಿದರು ಫೆಡರಲ್ ಮ್ಯಾನೇಜರ್ ತ್ರಿಶೂಲ್. ಬ್ಯಾಂಕಿನ ಹಿತೈಷಿಗಳಾದ ರಾಘವೇಂದ್ರ ಹಾಗೂ ಬ್ಯಾಂಕಿನ ಎಲ್ಲಾ ಸಹೋದ್ಯೋಗಿಗಳು ಹಾಗೂ ಗ್ರಾಹಕರು ಮತ್ತು ಕಾಂಪ್ಲೆಕ್ಸ್ ನ ಉದ್ಯಮಿಗಳು ರಕ್ತದಾನ ಮಾಡಿದರು

JCI Shimoga Malnad ಶಿವಮೊಗ್ಗದಲ್ಲಿ ಜೆಸಿಐ ವಲಯಮಟ್ಟದ ಸಮ್ಮೇಳನ ವಿಜಯಪಥಕ್ಕೆ ಚಾಲನೆ

0

JCI Shimoga Malnad ಜೆಸಿಐ ಭಾರತದ ವಲಯ 24ರ ವಾರ್ಷಿಕ ಸಮ್ಮೇಳನ ವಿಜಯ ಪಥಕ್ಕೆ ಚಾಲನೆ ನೀಡಿ ವಲಯಾಧ್ಯಕ್ಷರಾದ ಗೌರೀಶ್ ಭಾರ್ಗವವರು ಮಾತನಾಡಿದರು
ಜೆಸಿಐ ಭಾರತ ವಿಶ್ವಮಟ್ಟದಲ್ಲಿ ತನ್ನದೇ ಆದ ಚಾಪು ಮೂಡಿಸಿ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣ ಸೃಷ್ಟಿಸುವಲ್ಲಿ ಅಭೂತಪೂರ್ವ ಕೊಡುಗೆ ನೀಡುತ್ತಾ ಬಂದಿದೆ ಸಮಾಜದ ಸರ್ವತೋಮುಖ ಸ್ವತಂತ್ರ ಹಾಗು ಸದೃಢ ಭಾರತ ನಿರ್ಮಿಸುವಲ್ಲಿ ಯುವ ಜನತೆಯನ್ನು ಸದೃಢ ಗೊಳಿಸುವ ಮತ್ತು ನಾಯಕರನ್ನು ಸೃಷ್ಟಿಸುವ ದಯೋದ್ದೇಶದಿಂದ ತನ್ನ ಕಾರ್ಯ ಚಟುವಟಿಕೆಗಳನ್ನು ರೂಪಿಸಿಕೊಂಡು
JCI Shimoga Malnad ಜೆಸಿಐ ಸಂಸ್ಥೆ ತನ್ನ ಸದಸ್ಯರ ಸಹಕಾರದಿಂದ ಅಭೂತಪೂರ್ವ ಸಾಧನೆಗಳನ್ನು ಮೈಲಿ ಗಲ್ಲುಗಳನ್ನು ಸ್ಥಾಪಿಸುತ್ತಿದೆ ಎಂದು ನುಡಿದ ಅವರು ಈ ವಲಯ ಮಟ್ಟದ ಸಮ್ಮೇಳನ ಜೆಸಿಐ ಶಿವಮೊಗ್ಗ ಮೆಟ್ರೋ ಘಟಕದವರು ಆಯೋಜಿಸಿದ್ದು ಈ ಸಮ್ಮೇಳನದಲ್ಲಿ ಕರ್ನಾಟಕದ 13 ಜಿಲ್ಲೆಗಳಿಂದ ಜೆಸಿ ಸದಸ್ಯರು ಪಾಲ್ಗೊಂಡಿದ್ದಾರೆ ಮುಖ್ಯವಾಗಿ ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಬಳ್ಳಾರಿ ವಿಜಯನಗರ ಹೊಸಪೇಟೆ, ಧಾರವಾಡ ಇನ್ನಿತರೆ ಜಿಲ್ಲೆಗಳಿಂದ ಐದು ನೂರಕ್ಕೂ ಹೆಚ್ಚು ಸದಸ್ಯರು ಆಗಮಿಸಿದ್ದು ಈ ಸಮ್ಮೇಳನದ ಯಶಸ್ವಿಗೆ ಕಾರಣೀ ಭೂತರಾಗಿದ್ದಾರೆ ಎಂದು ತಿಳಿಸಿದರು ಈ ಜಾಥಾ ದಲ್ಲಿ. ಜೆ ಸಿ ಐ ಮೆಟ್ರೋದ ಅಧ್ಯಕ್ಷ ವಿಜಯ್ ಎಂ ಪ್ರಮುಖರಾದ ಸುದರ್ಶನ್ ತಾಯಿ ಮನೆ. ಸಮೃದ್ ಜಿ ರವಿ ಪ್ರಮೋದ್ ಶಾಸ್ತ್ರಿ. ಚಂದ್ರಶೇಖರ್. ಉದಯ ಕದಂಬ. ಚಂದ್ರಹಾಸ ಶೆಟ್ಟಿ
ಜೆಸಿಐ ನ ಎಲ್ಲ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು
ಹಾಗೂ ಮಧುಸೂದನ್ ನಾವಡ ಮೋಹನ್ ಕಲ್ಪತರು. ವಿನುತ್ ಆರ್ ಮಹಾಬಲೇಶ್. ಶಾಂತ ಸುರೇಂದ್ರ. ತ್ಯಾಗರಾಜ್ ರುದ್ರೇಶ್ ಕೋರಿ. ಗಣೇಶ್ ಪೈ. ನವೀನ್ ತಲಾರಿ ಮಹೇಶ್. ದೀಪು. ನಾಗರಾಜ್. ಮಹದೇವಸ್ವಾಮಿ ಸ್ವಪ್ನ ಅನುಷ್
ಸಂತೋಷ್ ವಿಜಯಲಕ್ಷ್ಮಿ ಪಾಟೀಲ್
ಜಿ ವಿಜಯಕುಮಾರ್ ಜೀವಿ ಗಣೇಶ್ ಉಪಸ್ಥಿತರಿದ್ದರು

Shimoga News ಪ್ರತಿಯೊಬ್ಬರೂ ತಮ್ಮ ಎಚ್ ಐ ವಿ ಸ್ಥಿತಿಯ ಅರಿವು ಹೊಂದಿರಬೇಕು- ಡಾ.ಕೆ.ಎಸ್.ನಟರಾಜ್.

0

Shimoga News ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶಿವಮೊಗ್ಗ ಮತ್ತು ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕೇಂದ್ರ ಹಾಗೂ ಜಿಲ್ಲೆಯ ಸರ್ಕಾರೇತರ ಸಂಘ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಹೆಚ್.ಐ.ವಿ ನಿಯಂತ್ರಣಕ್ಕಾಗಿ ತೀವ್ರಗೊಳಿಸಿದ ಪ್ರಚಾರಾಂದೋಲನದ ಅಂಗವಾಗಿ ದಿನಾಂಕ 14-10-25 ಎಂದು ಏರ್ಪಡಿಸಲಾಗಿದ್ದ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಡಿಹೆಚ್‌ಓ ಡಾ. ನಟರಾಜ್ ಕೆ ಎಸ್ ಚಾಲನೆ ನೀಡಿದರು.
ಈ ವೇಳೆ ಅವರು ಮಾತನಾಡಿ, 2030 ಕ್ಕೆ ಹೆಚ್.ಐ.ವಿ ಮುಕ್ತ ಭಾರತವನ್ನು ನಿರ್ಮಿಸಲು ಕಾರ್ಯ ಚಟುವಟಕೆಗಳನ್ನು ಕೈಗೊಳ್ಳಲಾಗುತ್ತಿದೆ. ಹೊಸದಾಗಿ ಹೆಚ್‌ಐವಿ ಸೋಂಕಿಗೆ ತುತ್ತಾಗುವುದನ್ನು ಸೊನ್ನೆಗೆ ತರುವುದು, ಹೆಚ್.ಐ.ವಿ ಯಿಂದ ಆಗುವ ಮರಣಗಳನ್ನು ಸೊನ್ನೆಗೆ ತರುವುದು ಹಾಗೂ ಹೆಚ್.ಐ.ವಿ ಯಿಂದಾಗುವ ತಾರತಮ್ಯ, ಕಳಂಕವನ್ನು ಸೊನ್ನೆಗೆ ತರುವ ನಿಟ್ಟಿನಲ್ಲಿ 95-95-95 ರ ಗುರಿಯನ್ನು ಹೊಂದಿದ್ದು ಪ್ರತಿಯೊಬ್ಬರು ತಮ್ಮ ಹೆಚ್. ಐ. ವಿ ಸ್ಥಿತಿಯನ್ನು ತಿಳಿದಿರಬೇಕು ಹಾಗೂ ಹೆಚ್‌ಐವಿ ಸೋಂಕಿತರು ತಪ್ಪದೇ ಎ.ಆರ್.ಟಿ ಚಿಕಿತ್ಸೆಯನ್ನು ಪಡೆಯಬೇಕು ಹಾಗೂ ಎಆರ್‌ಟಿ ಚಿಕಿತ್ಸೆಯನ್ನು ಪಡೆಯುವವರಲ್ಲಿ ವೈರಸ್ ಲೋಡ್ ಕಡಿಮೆ ಆಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯನಿರ್ವಹಿಸಿ ಹೆಚ್.ಐ.ವಿ ಸೋಂಕು ಕಡಿಮೆ ಮಾಡುವಂತೆ ತಿಳಿಸಿದರು.
ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಸಿದ್ದನಗೌಡ ಪಾಟೀಲ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೆಚ್.ಐ.ವಿ ಸೋಂಕಿನ ಪ್ರಮಾಣ ಕಡಿಮೆ ಆಗುತ್ತಿದ್ದು, ನಿಯಂತ್ರಣದ ನಿಟ್ಟಿನಲ್ಲಿ ಇಲಾಖೆಯಿಂದ ಹೆಚ್ಚಿನ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ತಿಳಿಸಿದರು.
Shimoga News ಜಿಲ್ಲಾ ಕ್ಷಯ ಮತ್ತು ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ನಾಗೇಶ್ ಬಿ ಪಿ, ಎನ್‌ಎಸಿಓ ದಿಶಾ ಸಂಯೋಜಕರು ಬೆಂಗಳೂರು, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ವೈದ್ಯಾಧಿಕಾರಿಗಳು, ನರ್ಸಿಂಗ್ ಅಧಿಕಾರಿಗಳು, ಆಡಳಿತ ಅಧಿಕಾರಿಗಳು, ಡಿಎಪಿಸಿಯು ಸಿಬ್ಬಂದಿಗಳು, ಎನ್‌ಟಿಇಪಿ ಸಿಬ್ಬಂದಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಜಾಥಾವು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಿಂದ ಆರಂಭಗೊAಡು ಬಸ್ ನಿಲ್ದಾಣ, ಅಮೀರ್ ಅಹ್ಮದ್ ಸರ್ಕಲ್, ಗೋಪಿ ಸರ್ಕಲ್, ಕೋರ್ಟ್ ಸರ್ಕಲ್, ಡಿಸಿ ಕಚೇರಿ, ಶಿವಮೂರ್ತಿ ಸರ್ಕಲ್, ಜಿಲ್ಲಾ ಪಂಚಾಯತ್, ಜೈಲ್ ಸರ್ಕಲ್, ಕುವೆಂಪು ರಸ್ತೆ ಮೂಲಕ ಹಾದು ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕಚೇರಿ ಬಳಿ ಸಮಾಪ್ತಗೊಂಡಿತು.

Yuvajanate ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಬಹಳ ಮುಖ್ಯ- ಸಿ.ಎಸ್.ಚಂದ್ರಭೂಪಾಲ್

0

Yuvajanate ಯುವಜನತೆ ದೇಶದ ಶಕ್ತಿ ಮತ್ತು ಸಂಪತ್ತು. ದೇಶದ ಅಭಿವೃದ್ದಿಯಲ್ಲಿ ಇವರ ಪಾತ್ರ ಬಹು ಮುಖ್ಯವಾಗಿದ್ದು ನಮ್ಮ ಯುವಜನತೆ ಸದಾ ಸಕ್ರಿಯರಾಗಿರಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದÀ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ಯುವಜನತೆಗೆ ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ, ಮೇರಾ ಯುವ ಭಾರತ್ ಹಾಗೂ ಎನ್ ಎಸ್ ಎಸ್ ಘಟಕಗಳು ಶಿವಮೊಗ್ಗ ಇವರ ಸಹಯೋಗದಲ್ಲಿ ಬುಧವಾರ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯುವಕರು ಸದಾ ಉತ್ಸುಕರಾಗಿ, ಜಾಗೃತರಾಗಿರಬೇಕು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು ಸೇರಿದಂತೆ ಎಲ್ಲ ರಂಗಗಳಲ್ಲಿ ಸದಾ ಚಟುವಟಿಕೆಯಿಂದಿರಬೇಕು. ಹಾಗೂ ಚಿಂತನಶೀಲರಾಗಿರಬೇಕು.
‘ಏಳಿ, ಎದ್ದೇಳಿ, ಗುರು ಮುಟ್ಟುವವರೆಗೆ ನಿಲ್ಲದಿರಿ’ ಎಂಬ ಸ್ವಾಮಿವಿವೇಕಾನಂದರವರ ನುಡಿಯಂತೆ ಯುವಕರು ಎಚ್ಚೆತ್ತುಕೊಂಡು ಗುರಿ ಮುಟ್ಟುವವರೆಗೆ ಸಾಗಬೇಕು. ದೇಶ ಅಭಿವೃದ್ಧಿ ಕಾಣಬೇಕಾದರೆ ಯುವಜನತೆ ಪಾತ್ರ ಬಹಳ ಮುಖ್ಯ. ಅವರÀ ಧ್ವನಿಗೆ ಬಹಳ ಶಕ್ತಿ ಮತ್ತು ಮಹತ್ವ ಇದೆ. ಇಂದು ಇಡೀ ಜಗತ್ತು ನಮ್ಮ ದೇಶವನ್ನು ಗಮನಿಸುತ್ತಿದೆ. ಇದಕ್ಕೆ ಕಾರಣ ನಮ್ಮ ಯುವಜನತೆ ಎಂದ ಅವರು ಯುವಜನತೆ ಇಂದಿನ ಯುವಜನೋತ್ಸವದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉನ್ನತ ಮಟ್ಟಕ್ಕೆ ಆಯ್ಕೆಯಾಗಬೇಕೆಂದು ಹಾರೈಸಿದರು.
Yuvajanate ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಮಾತನಾಡಿ, ಯುವಜನತೆ ಅತಿ ಉತ್ಸಾಹದಿಂದ ಯುವಜನೋತ್ಸವದಲ್ಲಿ ಪಾಲ್ಗೊಳ್ಳಬೇಕು. ಜಿಲ್ಲೆಯಿಂದ ರಾಜ್ಯ, ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿಯನ್ನು ತರಬೇಕೆಂದು ಹಾರೈಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಮೇರಾ ಯುವ ಭಾರತ್‌ನ ಅಧಿಕಾರಿ ಹೇಮಲತಾ, ಇತರೆ ಅಧಿಕಾರಿಗಳು, ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.
ಯುವ ಜನೋತ್ಸವದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಕಥೆ ಬರೆಯುವುದು, ಚಿತ್ರಕಲೆ, ಭಾಷಣ ಮತ್ತು ಕವಿತೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Supreme Court ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ಶೂ ಎಸೆಯಲು ಯತ್ನಿಸಿದ ವಕೀಲರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಮಂಜುಳಾ ಹೆಗಡಾಳ್

0

Supreme Court ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರಿಗೆ ಶೂ ಎಸೆಯಲು ಯತ್ನಿಸಿದ ವಕೀಲರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಸೊರಬ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಣ್ಣ ತುಡನೀರು ಮಾತನಾಡಿ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿ ಅವರ ಮೇಲೆ ನಡೆದ ದಾಳಿಯಲ್ಲ, ಇದು ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ. ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಾಧೀಶರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆಗಳ ಮೂಲಕ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಯಾಗಿ ಏಳು ದಶಕಗಳು ಕಳೆದರೂ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದಿರುವುದಕ್ಕೆ ಘಟನೆಯು ಸಾಕ್ಷಿಯಾಗಿದೆ. ಇದೊಂದು ಈ ನೆಲದಲ್ಲಿ ಕಾನೂನು ಮತ್ತು ನ್ಯಾಯಾಂಗದ ವ್ಯವಸ್ಥೆಯ ನಡೆದಿರುವ ನಾಚಿಗೆಗೇಡಿನ ಹಾಗೂ ಸಹಿಸಲಾಗದ ಅಕ್ರಮಣವಾಗಿದೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ಮೇಲೆ ಮನುವಾದಿಗಳು ಹಲ್ಲೆ ಮಾಡುತ್ತಾರೆ. ಹೀಗಿದ್ದಲ್ಲಿ ಈ ದೇಶದ ಅಸಹಾಯಕ ದಲಿತರ ಸ್ಥಿತಿ ಹೇಗೆ ಎಂಬುದರ ಬಗ್ಗೆ ಉನ್ನತ ಸ್ಥಾನದಲ್ಲಿ ಕುಳಿತು ದಲಿತರ ಒಮ್ಮೆ ಅಲೋಚಿಸಬೇಕಿದೆ. ದೇಶದ ವಕೀಲರು, ಎಲ್ಲ ಸಂಘಟನೆಗಳು ಈ ಘಟನೆ ಖಂಡಿಸಿ ಮತ್ತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ಬೆಂಬಲಿಸಿ ಪ್ರತಿರೋಧ ವ್ಯಕ್ತಪಡಿಸುವುದು ತುಂಬಾ ಅಗತ್ಯವಾಗಿದೆ. ಇಂತಹ ಘಟನೆಯು ದೇಶದಲ್ಲಿ ನಡೆದ ಕಪ್ಪು ಚುಕ್ಕೆ ದಿನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Supreme Court ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿ ಅವರ ಮೇಲೆ ಕೋರ್ಟ್ ಹಾಲ್ ನಲ್ಲಿ ಮಧ್ಯಾಹ್ನ ವಕೀಲರೊಬ್ಬರು ತನ್ನ ಕಾಲಿನಲ್ಲಿರುವ ಬೂಟನ್ನು ಅವರ ಮೇಲೆ ಎಸೆದು ದೇಶದ ನಾಗರಿಕ ಸಮಾಜಕ್ಕೆ ತಲೆತಗ್ಗಿಸುವಂತೆ ಮಾಡಿದ್ದಾರೆ. ಬೂಟು ಎಸೆದ ವಕೀಲರ ಪರವಾನಗಿ ರದ್ದುಪಡಿಸಿ ಅವರನ್ನು ದೇಶದಿಂದ ಗಡಿಪಾರು ಮಾಡುವ ಮೂಲಕ ದೇಶದ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಈ ಕುತಂತ್ರದ ಹಿಂದೆ ಯಾರಿದ್ದಾರೆ ಎನ್ನುವುದು ಸಿಬಿಐ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಸಂಚಾಲಕ ಎಂ.ಎಸ್. ಪ್ರದೀಪ್ ಕುಮಾರ್, ಖಜಾಂಚಿ ಕೆ.ಎಸ್. ಗದಿಗೇಶ್, ತಾಲೂಕು ಸಂಘಟನಾ ಸಂಚಾಲಕರಾದ ಕೆ.ಎಚ್. ಯುವರಾಜ್, ಎಂ. ಜಗದೀಶ್ ಸೇರಿದಂತೆ ಇತರರಿದ್ದರು.

Priyank Kharge ಆರ್.ಎಸ್.ಎಸ್.ನಿಷೇಧಿಸಲು” ಸಿಎಂ” ಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ

0

Priyank Kharge ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.

ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.

Priyank Kharge ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದು ರಾಜ್ಯದ ಗ್ರಾಮಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಬಗ್ಗೆ ತಮ್ಮ ನಿಲುವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Chirantana Yoga and Music Trust ಕಲಾವಿದ ತಬಲಾ ನಾಣಿಗೆ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಸನ್ಮಾನ

0

Chirantana Yoga and Music Trust ಶಿವಮೊಗ್ಗ ನಗರದ ಶುಭಂ ಹೋಟೇಲ್ ಸಭಾಂಗಣದಲ್ಲಿ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ವತಿಯಿಂದ ಕಲಾವಿದ ತಬಲಾ ನಾಣಿ ಅವರಿಗೆ ಸನ್ಮಾನಿಸಲಾಯಿತು.
ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷೆ ಶಾಂತಾ ಶೆಟ್ಟಿ ಮಾತನಾಡಿ, ತಬಲಾ ನಾಣಿ ಅವರು ಕನ್ನಡ ಚಿತ್ರರಂಗದಲ್ಲಿ ಅಪರೂಪದ ಹಾಸ್ಯ ನಟನಾಗಿ ಯುವ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಸಾಕಷ್ಟು ವಿಶೇಷ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಚಿತ್ರೀಕರಣಕ್ಕೆ ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ನಮ್ಮ ಕಲಾವಿದರೊಂದಿಗೆ ಸ್ವಲ್ಪ ಹೊತ್ತು ಸಮಯ ವಿನಿಯೋಗಿಸಿ ಅನಿಸಿಕೆ ಹಂಚಿಕೊಂಡಿದ್ದಾರೆ. ಅವರ ಮುಂದಿನ ಚಿತ್ರರಂಗದ ಬದುಕು ಇನ್ನು ಹಸನಾಗಲಿದೆ ಎಂದು ಶುಭಹಾರೈಸಿದರು.
ತಬಲಾ ನಾಣಿ ಮಾತನಾಡಿ, ಶಿವಮೊಗ್ಗ ಜಿಲ್ಲೆಗೂ ನನಗೂ ಸಾಕಷ್ಟು ನಂಟು ಇದ್ದು, ಆಗಾಗ್ಗೆ ಚಿತ್ರೀಕರಣಕ್ಕೆ ಶಿವಮೊಗ್ಗ ಬರುತ್ತಿರುತ್ತೇನೆ ಎಂದು ತಿಳಿಸಿದರು.
Chirantana Yoga and Music Trust ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಮತ್ತು ಸುಗಮ ಸಂಗೀತ ಪರಿಷತ್ ಜಿಲ್ಲಾ ಘಟಕದ ಖಜಾಂಚಿ ಜಿ.ವಿಜಯಕುಮಾರ್ ತಬಲ ನಾಣಿ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ತಬಲಾ ನಾಣಿ ಹಾಗೂ ಶಾಂತಾ ಶೆಟ್ಟಿ ಅವರು ಜಿ.ವಿ.ಅತ್ರಿ ಅವರ ನೇತೃತ್ವದ ಸಂಗೀತ ಗಂಗಾ ವಾದ್ಯ ವೃಂದದಲ್ಲಿ ಸಹ ಕಲಾವಿದರಾಗಿ 30 ವರ್ಷಗಳ ಕಾಲ ಅನೇಕ ವೇದಿಕೆಯಲ್ಲಿ ಕಾರ್ಯಕ್ರಮ ನೀಡಿದ್ದಾರೆ.
ಶುಭಂ ಹೋಟೆಲ್ ಮಾಲೀಕರಾದ ಚಂದ್ರಹಾಸ ಅವರ ಪತ್ನಿ ಶ್ಯಾಮಲಾ, ಇನ್ನರ್‌ವ್ಹೀಲ್ ಸಂಸ್ಥೆಯ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್ ಉಪಸ್ಥಿತರಿದ್ದರು.

Roller Skating Federation of India ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಗೆ ಗೋಪಾಳ, ಎಪಿಎಂಸಿ ಯಲ್ಲಿ ಆಯ್ಕೆ ಪ್ರಕ್ರಿಯೆ

0

Roller Skating Federation of India ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನಿಂದ ಅ. 18ರಂದು ಶಿವಮೊಗ್ಗ ನಗರದ ಗೋಪಾಲಗೌಡ ಕ್ರೀಡಾ ಸಂಕೀರ್ಣ ಮತ್ತು ಅ. ೧೯ರಂದು ಎಪಿಎಂಸಿ ಯಾರ್ಡ್ನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Roller Skating Federation of India ಅಡ್ಜೆಸ್ಟೆಬಲ್ ಸ್ಕೇಟ್, ಫ್ಯಾನ್ಸಿ ಇನ್‌ಲೈನ್, ಸ್ಪೀರ್ಡ್ ಕ್ವಾಡ್ ಹಾಗೂ ಪ್ರೊಫೇಷನಲ್ ಇನ್‌ಲೈನ್ ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಭಾಗವಹಿಸುವ ಸ್ಕೇಟಿಂಗ್ ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಸೈಜ್ 3 ಫೋಟೊವನ್ನು ಖಡ್ಡಾಯವಾಗಿ ತರಬೇಕು. ಹೆಚ್ಚಿನ ಮಾಹಿತಿಗೆ 9448681748, 9480294366, 7483885457, 8660257334ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Medical Oncologist ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಅಕ್ಟೋಬರ್ 16 ರಂದು ಸ್ತನ ಕ್ಯಾನ್ಸರ್‌ನಿಂದ ಬದುಕುಳಿದವರ ಸಮಾವೇಶ

0

Medical Oncologist ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ಅಪರ್ಣಾ ಶ್ರೀವತ್ಸ ಅವರ ನೇತೃತ್ವದಲ್ಲಿ ಮಾಸಿಕ ಕ್ಯಾನ್ಸರ್ ಸರ್ವೈವರ್ಸ್ ಕ್ಲಿನಿಕ್ ಆಯೋಜಿಸುತ್ತಿರುವ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು, ಸ್ತನ ಕ್ಯಾನ್ಸರ್ ಜಾಗೃತಿ ದಿನದ ಭಾಗವಾಗಿ, ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್‌ ವಿರುದ್ಧ ಯಶಸ್ವಿಯಾಗಿ ಹೊರಾಟ ನಡೆಸಿದವರ ವಿಶೇಷ ಸಮಾವೇಶವನ್ನು ನಡೆಸಲಿದೆ.

ಡಾ. ಅಪರ್ಣಾ ಅವರು ಈ ಉಪಕ್ರಮವನ್ನು ಸತತ ಏಳನೇ ತಿಂಗಳಿನಿಂದ ಮುನ್ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದ ಗೌರವ ಅತಿಥಿಯಾಗಿ ಶಿವಮೊಗ್ಗದ ಜೆಎನ್‌ಎನ್‌ಸಿಇ, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಶೈಲಶ್ರೀ ಕೆ. ಅವರು “ಭರವಸೆಯನ್ನು ಹಂಚಿಕೊಳ್ಳುವುದು – ಬದುಕುಳಿದವರ ಧ್ವನಿ” (“Sharing Hope – The Survivor’s Voice”) ಎಂಬ ವಿಷಯದ ಮೇಲೆ ಮಾತನಾಡಲಿದ್ದಾರೆ.

ಈ ಕಾರ್ಯಕ್ರಮದ ಬಗ್ಗೆ ವಿವರಿಸಿದ ಡಾ. ಅಪರ್ಣಾ, ಸ್ತನ ಕ್ಯಾನ್ಸರ್ ಆರೈಕೆ ಮತ್ತು ಚೇತರಿಕೆಯಲ್ಲಿ ದೃಢತೆ, ಹೊಸ ಆವಿಷ್ಕಾರ ಮತ್ತು ಬದುಕುಳಿದವರ ಧ್ವನಿಗೆ ಪ್ರೋತ್ಸಾಹ ನೀಡುವ ಸಂವಾದಾತ್ಮಕ ವೇದಿಕೆಯಾಗಿ ಇದನ್ನು ವಿನ್ಯಾಸಗೊಳಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಪ್ರಮುಖಾಂಶಗಳು:

Medical Oncologist ಸ್ತನದ ಪ್ರಾಸ್ಥೆಸಿಸ್ (ಕೃತಕ ಅಂಗ) ಮತ್ತು ಕೂದಲಿನ ಜೋಡಣೆಗಳನ್ನು (hair attachments) ಬಳಸುವ ಬಗ್ಗೆ ಮಾರ್ಗದರ್ಶನ
ಕ್ಯಾನ್ಸರ್‌ನಿಂದ ಬದುಕುಳಿದವರಿಗೆ ಅವರ ಬೆಂಬಲದ ಉಪಕ್ರಮಗಳ ಕುರಿತು ಆರ್ಯ ಫೌಂಡೇಶನ್ ಫಾರ್ ಕ್ಯಾನ್ಸರ್ ರೆಸಿಲಿಯನ್ಸ್‌ನಿಂದ ಪ್ರಸ್ತುತಿ
ಸ್ತನ ಕ್ಯಾನ್ಸರ್ ಕುರಿತು ತಮ್ಮ ಮುಂಬರುವ ಪುಸ್ತಕದ ಬಗ್ಗೆ ಲೇಖಕರಾದ ಶ್ರೀಮತಿ ಗಾಯತ್ರಿ ಶೇಷಗಿರಿ ಮತ್ತು ಡಾ. ಸ್ವಾತಿ ಸಚಿನ್ ಅವರಿಂದ ಮಾತುಕತೆ
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಿವಮೊಗ್ಗದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಭಾರತಿ ಆರ್. ಬಣಕಾರ್ ಅವರು ಭಾಗವಹಿಸಲಿದ್ದಾರೆ, ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀ ವರ್ಗಿಸ್‌ ಪಿ ಜಾನ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: 9986759661