Inner Wheel Club Shimoga ಸ್ಪರ್ಧೆಗಳಲ್ಲಿ ಗೆಲುವು ಸೋಲು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನಮ್ಮ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಪೂರ್ವದ ಅಧ್ಯಕ್ಷರಾದ ವೀಣಾ ಸುರೇಶ್ ಅವರು ಅಭಿಮತ ವ್ಯಕ್ತಪಡಿಸಿದರು.
ಅವರು ರೋಟರಿ ಸಭಾಂಗಣದಲ್ಲಿ ಇನ್ನರ್ ವೀಲ್ ಸದಸ್ಯರಿಗೆ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳು ಹಾಗೂ ಅಂತ್ಯಾಕ್ಷರಿ ಕಾರ್ಯಕ್ರಮ. ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಒತ್ತಡದಿಂದ ಹೊರಬರಲು ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳು ತುಂಬಾ ಮುಖ್ಯ. ನಮ್ಮ ಇನ್ನರ್ ವೀಲ್ ಸಂಸ್ಥೆ ಸೇವೆ ಸ್ನೇಹ ಪ್ರೀತಿಗಾಗಿ. ಸ್ಥಾಪಿತವಾಗಿದ್ದು ಪ್ರಪಂಚಾದ್ಯಂತ ಮಾನವೀಯ ಸೇವೆಗಳ ಮುಖಾಂತರ ಜನರನ್ನು ತಲುಪುತ್ತಿದೆ. ಆದ್ದರಿಂದ ಹೆಚ್ಚು ಹೆಚ್ಚು ಮಹಿಳೆಯರು ಇನ್ನರ್ ವೀಲ್ ಸಂಸ್ಥೆಗೆ ಸೇರಿ ಕೊಳ್ಳುವುದರ ಮುಖಾಂತರ ಸೇವೆ ಮಾಡುವ ಕೈಗಳನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. Inner Wheel Club Shimoga ಇದೇ ಸಂದರ್ಭದಲ್ಲಿ ವಿಜೇತರ ತಂಡಗಳಿಗೆ ಮಾಜಿ ಅಧ್ಯಕ್ಷರುಗಳಾದ ಬಿಂದು ವಿಜಯ ಕುಮಾರ್.. ಬಹುಮಾನಗಳನ್ನು ನೀಡಿ ಗೌರವಿಸಿದರು ಸಾಂಸ್ಕೃತಿಕ ಸ್ಪರ್ಧೆಗಳನ್ನು ರೋಟರಿ ಕ್ಲಬ್ ಮಿಡ್ ಟೌನ್ ಮಾಜಿ ಅಧ್ಯಕ್ಷರಾದ ಸುರೇಶ್. ನೆರವೇರಿಸಿ ಕೊಟ್ಟರು ಸಹ ಕಾರ್ಯದರ್ಶಿ ಶ್ರೀ ಲತಾ ಸೋಮಣ್ಣ. ಮಾಜಿ ಅಧ್ಯಕ್ಷರುಗಳಾದ. ರಾಜೇಶ್ವರಿ ಪ್ರತಾಪ್. ವೀಣಾ ಹರ್ಷ. ಉಮಾ ವೆಂಕಟೇಶ್ ಪೂರ್ಣಿಮಾ ನರೇಂದ್ರ. ವಿಜಯ ರಾಯ್ಕರ್. ವಿಜಯಶ್ರೀ ಷಣ್ಮುಖಪ್ಪ. ಮಮತಾ ಸುಧೀಂದ್ರ. ಸುಮಾ ಮಂಜುನಾಥ್. ನಂದ. ಸೌಭಾಗ್ಯ. ವಿಜಯ ಜವಳಿ ವಾಸಂತಿ. ಜ್ಯೋತಿ ಪ್ರಭು. ಜ್ಯೋತಿ ಸುಬ್ಬೆಗೌಡ. ಲತಾ ಶಂಕರ್. ಹಾಗೂ ಇನ್ನರ್ವಿಲ್ ಸದಸ್ಯರು ಉಪಸ್ಥಿತರಿದ್ದರು
Inner Wheel Club Shimoga ಸ್ಪರ್ಧೆಗಳಲ್ಲಿ ಗೆಲುವು ಸೋಲು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ : ವೀಣಾ ಸುರೇಶ್
Department of School Education ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ: ಸಿ. ಎಸ್. ಷಡಾಕ್ಷರಿ
Department of School Education ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಅಭಿಪ್ರಾಯ ಪಟ್ಟರು.
ಅವರು ಸೆಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ಎರಡು ದಿನ ನಡೆಸಲಾದ ಜಿಲ್ಲಾಡಳಿತ ಶಿವಮೊಗ್ಗ, ಜಿಲ್ಲಾ ಪಂಚಾಯತ್, ಶಿವಮೊಗ್ಗ, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ, ಶಿವಮೊಗ್ಗ, ಸೆಕ್ರೆಡ್ ಹಾರ್ಟ್ ಪ್ರೌಢಶಾಲೆ ಶಿವಮೊಗ್ಗ ಹಾಗು ಜಿಲ್ಲಾ ಫುಟ್ ಬಾಲ್ ಅಸೋಸಿಯೇಷನ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಫುಟ್ ಬಾಲ್ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ,ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು.
ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಪೀಲೆ. ಮೆರ್ಡೂನಾ ಮುಂತಾದ ವ್ಯಕ್ತಿಗಳ ದಂತಕಥೆಗಳನ್ನು ನೆನಪಿಸಿ ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟರೆ ನೀವು ಸಹ ಒಳ್ಳೆಯ ಫುಟ್ಬಾಲ್ ಕ್ರೀಡಾಪಟುಗಳಾಗಬಹುದೆಂದು ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.
ಸೆಕ್ರೆಡ್ ಹಾರ್ಟ್ ಕಾರ್ಯದರ್ಶಿಗಳಾದ ಫಾದರ್ ರೋಷನ್ ಪಿಂಟೋ ಮಾತನಾಡುತ್ತಾ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್,ಟಿವಿಗಳ ಹಾವಳಿಯಿಂದ ಕ್ರೀಡೆಗೆ ಎಲ್ಲೋ ಒಂದು ರೀತಿ ಪ್ರಾಮುಖ್ಯತೆ ಕಡಿಮೆಯಾಗುತ್ತಾ ಇದೆ ಎಂಬುದು ನನ್ನ ಭಾವನೆ. ಓದಿಗೆ ಕೊಡುವಷ್ಟು ಪ್ರಾಮುಖ್ಯತೆಯನ್ನು, ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆಯನ್ನು ಕೊಡಬೇಕು ಎಂದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಶಾರೀರಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಯಾಕೆಂದರೆ ಒಟ್ಟಾರೆ ದೈಹಿಕ ಸಾಮರ್ಥ್ಯವನ್ನು ಕಾಣಬಹುದು.ಕ್ರೀಡೆಯಲ್ಲಿ ನಾಯಕತ್ವದ ಗುಣ ಬೆಳೆಸುತ್ತದೆ.ಸೋಲು ಗೆಲುವನ್ನು ಹೇಗೆ ಒಂದೇ ಸಮನಾಗಿ ತೆಗೆದುಕೊಳ್ಳಬಹುದು ಎಂಬುದನ್ನು ಕ್ರೀಡೆಯಲ್ಲಿ ಕಾಣಬಹುದು.
Department of School Education ಅಂಕಗಳು ಒಂದು ಸಲ ಕಡಿಮೆ ಆಗುತ್ತದೆ, ಹೆಚ್ಚು ಆಗುತ್ತದೆ, ಇಂತಹ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗುತ್ತಾರೆ. ಆದರೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಇಂತಹ ನೂನ್ಯತೆಗಳಿಂದ ದೂರವಾಗಬಹುದು, ಹಾಗಾಗಿ ಪ್ರತಿದಿನ ವಿದ್ಯಾರ್ಥಿಗಳು ಅರ್ಧ ಗಂಟೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ, ಧೈರ್ಯ ವಂತರಾಗಲು ಕಾರಣವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸೆಕ್ರೆಡ್ ಹಾರ್ಟ್ ವ್ಯವಸ್ಥಾಪಕರಾದ ಫಾದರ್ ಸ್ಕ್ಯಾನಿ ಡಿಸೋಜಾ, ಕ್ಯಾಂಪಸ್ ಡೈರೆಕ್ಟರ್ ಫಾದರ್ ಪ್ರಾನ್ಸಿಸ್ ನರೋನ್ಹಾ,
ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಳ್ಳೇಕೆರೆ ಸಂತೋಷ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುನಾಥ ಎಸ್. ಆರ್., ವಾಯು ಮಾಲಿನ್ಯ ವಿಭಾಗದ ಅಧಿಕಾರಿ, ಶಾಲೆಯ ಹಳೆಯ ವಿದ್ಯಾರ್ಥಿ ಹರ್ಷ, ಕೆಪಿಟಿಸಿಎಲ್ ನ ಮೋಹನ್ ಕುಮಾರ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ ಪ್ರಕಾಶ್. ನಿವೃತ್ತ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀ ನಿರಂಜನ್ ಮೂರ್ತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
World Arthritis Day ಸಂಧಿವಾತದ ತಡೆಗಟ್ಟುವಿಕೆ ಹಾಗೂ ನಿರ್ವಹಣೆಗೆ ಸರಿಯಾದ ವ್ಯಾಯಾಮ ಅವಶ್ಯಕ : ಡಾ. ರಾಮಚಂದ್ರ ಬಾದಾಮಿ
World Arthritis Day ಸಂಧಿವಾತದ ತಡೆಗಟ್ಟುವಿಕೆ ಹಾಗೂ ನಿರ್ವಹಣೆಗೆ ಸರಿಯಾದ ವ್ಯಾಯಾಮ ಅವಶ್ಯಕ ಎಂದು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಉಪಾಧ್ಯಕ್ಷ, ಮೂಳೆ ಕೀಲು ತಜ್ಞ ಡಾ. ರಾಮಚಂದ್ರ ಬಾದಾಮಿ ಹೇಳಿದರು.
ವಿಶ್ವ ಸಂಧಿವಾತದ ದಿನದ ಪ್ರಯುಕ್ತ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ವತಿಯಿಂದ ಪರಿಹಾರ ಆಧಾರ ಆರೈಕೆ ಕೇಂದ್ರದಲ್ಲಿ ಆಯೋಜಿಸಿದ್ದ ಸಂಧಿವಾತ ಕುರಿತ ಜಾಗೃತಿ ಉಪನ್ಯಾಸ ಮತ್ತು ಸರಳ ವ್ಯಾಯಾಮಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಧಿವಾತದ ಸಾಮಾನ್ಯ ಲಕ್ಷಣಗಳಾದ ಸಂಧಿಗಳ ನೋವು, ಊತ, ಗಟ್ಟಿತನ, ಸಂಧಿಯ ಚಲನೆಗೆ ಆಗುವ ಅಡಚಣೆ ಇತ್ಯಾದಿ ಕುರಿತು ಮಾಹಿತಿ ಹೊಂದಬೇಕು. ತೂಕ ನಿಯಂತ್ರಣ, ಸಮತೋಲಿತ ಆಹಾರ ಮತ್ತು ನಿಯಮಿತ ವೈದ್ಯಕೀಯ ತಪಾಸಣೆ ಮಹತ್ವ ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಮಾತನಾಡಿ, ಪ್ರತಿ ವರ್ಷ ಅಕ್ಟೋಬರ್ 12ರಂದು ವಿಶ್ವ ಸಂಧಿವಾತ ದಿನ ಆಚರಿಸಲಾಗುತ್ತದೆ. ಸಂಧಿವಾತ ಹಾಗೂ ಇತರ ಸಂಧಿ ಸಂಬಂಧಿತ ರೋಗಗಳ ಬಗ್ಗೆ ಸಾರ್ವಜನಿಕರು ಅರಿವು ಮೂಡಿಸಿಕೊಳ್ಳಬೇಕು. ತ್ವರಿತ ಪತ್ತೆ, ಸರಿಯಾದ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
World Arthritis Day ಸಂಧಿಗಳನ್ನು ಚುರುಕುಗೊಳಿಸುವ ಸರಳ ವ್ಯಾಯಾಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ಡಾ. ರಾಮಚಂದ್ರ ಬಾದಾಮಿ ತೋರಿಸಿಕೊಟ್ಟರು. ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಖಜಾಂಚಿ ಡಾ. ಶಶಿಧರ ಹೆಚ್ ಎಲ್, ಪರಿಹಾರ ಆಧಾರ ಆರೈಕೆ ಕೇಂದ್ರದ ಮುಖ್ಯಸ್ಥ ರಾಘವೇಂದ್ರ ಭಟ್, ಆರೈಕೆ ಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Rotary Club Shimoga ಕುಟಂಬದ ಆರ್ಥಿಕ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯ :ಎಸ್.ವಿ.ಚಂದ್ರಕಲಾ
Rotary Club Shimoga ಹೆಣ್ಣುಮಕ್ಕಳು ಆರ್ಥಿಕವಾಗಿ ಸಬಲವಾದರೆ ಕುಟುಂಬ ಮತ್ತು ದೇಶದ ಪ್ರಗತಿ ಸಾಧ್ಯ ಎಂದು ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆಯ ಇಸಿ ಕಮಿಟಿ ಸದಸ್ಯೆ ಎಸ್.ವಿ.ಚಂದ್ರಕಲಾ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಸಭಾಂಗಣದಲ್ಲಿ ಏರ್ಪಡಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿ, ಗುಡಿ ಕೈಗಾರಿಕೆ ಹಾಗೂ ಸ್ವಂತ ಉದ್ದಿಮೆಗಳಿಂದ ಹಣದ ದುಡಿಮೆ, ಹಣದಿಂದಲೇ ಮತ್ತೆ ಹಣವನ್ನು ಗಳಿಸುವಂತೆ ಧೈರ್ಯವಾಗಿ ಮುನ್ನಡೆಯಬೇಕು ಎಂದು ತಿಳಿಸಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲರಾದರೆ ಕುಟುಂಬದ ನಿರ್ವಹಣೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತದೆ. ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕೈಜೋಡಿಸಲು ಸಹಾಯಕ ವಾಗುತ್ತೆದೆ. ಸ್ತ್ರೀ ಶಕ್ತಿ ಸಾಲವು ಗುಡಿ ಕೈಗಾರಿಕೆ ಮಹಿಳೆಯರ ಸ್ವಾವಲಂಬನೆಗೆ ನೆರವಾಗುತ್ತೆದೆ ಎಂದು ಹೇಳಿದರು.
ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದು, ಉದ್ಯಮ ನಡೆಸಲು ಅವಶ್ಯವಿರುವ ಅರಿವು ಶಿಬಿರಗಳನ್ನು ಆಯೋಜಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ ಎಂದು ತಿಳಿಸಿದರು.
Rotary Club Shimoga ಎಸ್ಬಿಐ ಮುಖ್ಯ ವ್ಯವಸ್ಥಾಪಕ ಗಂಗಾಧರಪ್ಪ ಮಾತನಾಡಿ, ಬ್ಯಾಂಕ್ ಗಳ ಸಾಲ ಸೌಲಭ್ಯಗಳು ಎಲ್ಲಾ ಜನರಿಗೂ ತಲುಪುತಿಲ್ಲ. ಎಸ್ಬಿಐನಿಂದ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳಿದ್ದು, ಸಾಲ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಯಶಸ್ವಿ ಮಹಿಳೆಯರಾಗಬೇಕು ಎಂದು ತಿಳಿಸಿದರು.
ಗೋಪಾಳ ಮಹಿಳಾ ಸಹಕಾರ ಸಂಘದ ಸದಸ್ಯರು ಹಾಗೂ ರೋಟರಿ ಸದಸ್ಯರಾದ ರವಿ, ಎಚ್ಎಲ್ ಕಮ್ಯೂನಿಟಿ ಡೈರೆಕ್ಟರ್ ಮಂಜುಳಾ ರಾಜು, ಸಿದ್ದಲಿಂಗ ಮೂರ್ತಿ, ಕಾರ್ಯದರ್ಶಿ ರಶ್ಮಿ, ನಾಗರಾಜ್ ಹಾಗೂ ಹಲವು ರೋಟರಿ ಸದಸ್ಯರು ಭಾಗವಹಿಸಿದ್ದರು.
Senior Citizens Day ಹಿರಿಯ ನಾಗರಿಕರು ಹಾಗೂ ವೃದ್ಧರು ದೇವರ ಪ್ರತಿರೂಪ : ಕೆ ಪಿ ಶೆಟ್ಟಿ
Senior Citizens Day ಬುದ್ಧಿಮಾಂದ್ಯರು ಹಾಗೂ ಹಿರಿಯ ನಾಗರಿಕರ ಸೇವೆ ದೇವರ ಪೂಜಿಸಿದಂತೆ ಅವರ ಅನುಭವಗಳು ಇಂದಿಗೂ ನಮಗೆ ದಾರಿ ದೀಪವಾಗಿವೆ ಎಂದು ರೋಟರಿ ಸಹಾಯಕ ಗೌರ್ನರ್ ಕೆ ಪಿ ಶೆಟ್ಟಿ ಅವರು ಅಭಿಮತ ವ್ಯಕ್ತಪಡಿಸಿದರು. ಅವರು ಗುಡ್ ಲಕ್ ಆರೈಕೆ ಕೇಂದ್ರದಲ್ಲಿ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಆಶ್ರಮವಾಸಿಗಳಿಗೆ ಅನ್ನಪೂರ್ಣ ಯೋಜನೆ ಅಡಿಯಲ್ಲಿ ಒಂದು ದಿನದ ಪ್ರಸಾದ ವ್ಯವಸ್ಥೆ ಹಾಗೂ ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಬೇಕಾಗಿರುವ ಅಗತ್ಯ ವಸ್ತುಗಳು ಮತ್ತು ಮೈಕ್ ಸೆಟ್ ಅನ್ನು ನೀಡುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಮಾಜದಲ್ಲಿ ಇಂದು ಹೊಂದಾಣಿಕೆ ಪ್ರೀತಿ ವಿಶ್ವಾಸ ಇದರ ಕೊರತೆ ಹೆಚ್ಚಾಗಿ ಕಾಣುತ್ತಿದೆ. ಅನಾಥಾಶ್ರಮಗಳು ಹಾಗೂ ವೃದ್ಧಾಶ್ರಮಗಳು ಸಮಾಜದಲ್ಲಿ ಹೆಚ್ಚಾಗದಂತೆ ನಾವು ನೀವೆಲ್ಲರೂ ನೋಡಿಕೊಳ್ಳಬೇಕು ನಮ್ಮ ಹಿರಿಯರು ನಮ್ಮ ಕುಟುಂಬಕ್ಕೆ ಮಾಡಿದ ತ್ಯಾಗ ಸೇವೆ ಹಾಗೂ ವ್ಯವಸ್ಥೆ ಎಂದು ಮರೆಯಲು ಸಾಧ್ಯವಿಲ್ಲ. ಇಂದು ಆಧುನಿಕತೆ ಹೆಚ್ಚಾದಂತೆ ಪರಸ್ಪರರಲ್ಲಿ ಒಡನಾಟದ ಕೊರತೆ ಎದ್ದು ಕಾಣುತ್ತಿದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ರೋಟರಿ ಮಾಜಿ ಸಹಾಯಕ ಗೌರ್ನರ್ಜಿ ವಿಜಯಕುಮಾರ್ ಮಾತನಾಡುತ್ತಾ, ತಂದೆ ತಾಯಿಗಳ ಗುರಿ ಹಿರಿಯರ ಆಶೀರ್ವಾದವೇ ನಮ್ಮ ಬೆನ್ನಿಗೆ ವಜ್ರ ಕವಚ ಅವರ ಮಾರ್ಗದರ್ಶನ ನಮ್ಮಲ್ಲಿ ಎಲ್ಲೂ ದಾರಿ ತಪ್ಪಾದ ಹಾಗೆ ನೋಡಿಕೊಳ್ಳುತ್ತದೆ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳ ಕೊರತೆ ಎದ್ದು ಕಾಣಿಸುತ್ತಿದೆ. ಈ ನಿಟ್ಟಿನಲ್ಲಿ ನಮ್ಮ ಗುಡ್ ಲಕ್ ಆರೈಕೆ ಕೇಂದ್ರ ಎಲ್ಲಾ ದಾನಿಗಳ ಸಹಾಯದಿಂದ ಯಾವುದೇ ಸರ್ಕಾರದ ನೆರವು ಇಲ್ಲದ ಹಾಗೆ ಪ್ರತಿನಿತ್ಯ ತುಂಬಾ ವ್ಯವಸ್ಥಿತವಾಗಿ ಶಿವಮೊಗ್ಗದಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ. ಇಂದು ಜನರು ನಮ್ಮ ಹಾರೈಕೆ ಕೇಂದ್ರದ ಮೇಲೆ ಇಟ್ಟಂತಹ ಗೌರವ ಪ್ರೀತಿ ವಿಶ್ವಾಸಕ್ಕೆ ನಾವು ಚಿರಋಣಿ ಎಂದು ನುಡಿದರು. Senior Citizens Day ಇದೇ ಸಂದರ್ಭದಲ್ಲಿ ಗುಡ್ ಲಕ್ ಆರೈಕೆ ಕೇಂದ್ರದ ಅಧ್ಯಕ್ಷರಾದ ಯು. ರವೀಂದ್ರನಾಥ್ ಐತಾಳ್ ಅವರು ಮಾತನಾಡುತ್ತಾ ನಮ್ಮ ಆರೈಕೆ ಕೇಂದ್ರದಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ. ನಮ್ಮ ಹುಟ್ಟುಹಬ್ಬ ವಿವಾಹ ವಾರ್ಷಿಕೋತ್ಸವ ಹಾಗೂ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಚಿಕ್ಕದಾಗಿ ಮಾಡಲು ಆದ್ದರಿಂದ ನಮ್ಮ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಿ ಸಹಾಯ ಹಸ್ತ ನೀಡಬೇಕೆಂದು ಕರೆ ನೀಡಿದರು.
CM Siddharamaiah ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ
CM Siddharamaiah ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ. ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ.
144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ಮುಖ್ಯಮಂತ್ರಗಳು ನೀರಿಗಾಗಿ ನಾಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
CM Siddharamaiah ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ನುಡಿದರು.
Eshwara Khandre ಜ್ಞಾನ, ಜ್ಞಾಪಕಶಕ್ತಿಯ ಸಂಗಮ ಥಟ್ ಅಂತ ಹೇಳಿ: ಈಶ್ವರ ಖಂಡ್ರೆ
Eshwara Khandre ಜ್ಞಾನ ಮತ್ತು ಜ್ಞಾಪಕಶಕ್ತಿಯ ಸಮ್ಮಿಲನವೇ ರಸಪ್ರಶ್ನೆ ಸ್ಪರ್ಧೆ. ಇದು ಬುದ್ಧಿ, ಭಾವಕ್ಕೆ ಕಸರತ್ತು ನೀಡುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ನಗರದ ಜಿಕೆವಿಕೆಯ ಸಭಾಂಗಣದಲ್ಲಿಂದು ಬೆಂಗಳೂರು ದೂರದರ್ಶನ ಚಂದನವಾಹಿಯಿಂದ ಪ್ರಸಾರವಾಗುವ ಥಟ್ ಅಂತ ಹೇಳಿ ರಸಪ್ರಶ್ನೆ ಕಾರ್ಯಕ್ರಮ 5000 ಸಂಚಿಕೆಯೊಂದಿಗೆ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರುತ್ತಿರುವ ಸಂದರ್ಭಕ್ಕೆ ಸಚಿವರು ಸಾಕ್ಷಿಯಾದರು.
ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ಸಭಿಕರ ಅಮಿತೋತ್ಸಾಹದ ನಡುವೆ ಉತ್ಸಾಹಭರಿತರಾಗಿ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಮಾಹಿತಿ ಮತ್ತು ಮನೋರಂಜನೆ ನೀಡುವ ಈ ಕಾರ್ಯಕ್ರಮ ಕಳೆದ 23 ವರ್ಷಗಳಿಂದ ವೀಕ್ಷಕರ ಜ್ಞಾನದಾಹ ತಣಿಸುತ್ತಿದೆ ಎಂದರು.
ಬೆಂಗಳೂರು ದೂರದರ್ಶನ ಆರಂಭವಾದ 1980ರ ದಶಕದಿಂದಲೂ ತನ್ನ ಗಾಂಭೀರ್ಯತೆ, ವೃತ್ತಿ ನಿಷ್ಠೆ ಉಳಿಸಿಕೊಂಡಿದೆ. ವಿಚಾರಪೂರ್ಣ ಮಾಹಿತಿ, ಆರೋಗ್ಯಕರ ಮನರಂಜನೆಯನ್ನು ಉಚಿತವಾಗಿ ಸಮಸ್ತ ಜನತೆಗೆ ನೀಡುತ್ತಿದೆ. ಹಲವು ಪ್ರತಿಭೆಗಳ ಪ್ರಕಾಶಕ್ಕೆ ಅನುವು ಮಾಡಿಕೊಟ್ಟಿದೆ ಎಂದರು.
ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದಾರೆ. 75 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದು ಅಚ್ಚರಿ ಎನಿಸಿತು. ಮಾಧ್ಯಮ ತಜ್ಞರಾದ ಡಾ. ನಾ. ಸೋಮೇಶ್ವರ್ ಅಭಿನಂದನಾರ್ಹರು ಎಂದರು.
ಥಟ್ ಅಂತ ಹೇಳಿ ಕಾರ್ಯಕ್ರಮವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿಯೂ ನಡೆಸಲಾಗಿತ್ತು. ಪ್ರಕೃತಿ, ಪರಿಸರ, ವನ್ಯಜೀವಿಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದಲೂ ಮಾಹಿತಿ ಆಹ್ವಾನಿಸಿ ಅದನ್ನು ತಿಳಿಯಪಡಿಸಲಾಗುತಿದೆ. ಒಟ್ಟಾರೆ ಥಟ್ ಅಂತ ಹೇಳಿ ಕಾರ್ಯಕ್ರಮ ಒಂದು ಜ್ಞಾನಭಂಡಾರ ಎಂದು ಈಶ್ವರ ಖಂಡ್ರೆ ಬಣ್ಣಿಸಿದರು.
Eshwara Khandre ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಭಿಕರಲ್ಲಿ ಆಸಕ್ತರನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಿ ಅಪಾರ ಜನ ಸಮೂಹದ ನಡುವೆ ಗಿನ್ನೆಸ್ ದಾಖಲೆಯ 5 ಸಾವಿರದ ಸ್ಮರಣೀಯ ಸಂಚಿಕೆಯನ್ನು ಚಿತ್ರೀಕರಿಸಲಾಯಿತು. ಸೋಮವಾರ [ಅ.13 ರಂದು] ಈ ಮೈಲಿಗಲ್ಲಿನ ಕಾರ್ಯಕ್ರಮ ಪ್ರಸಾರವಾಗಲಿದೆ.
ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ಭಾಷಾ ವಿಜ್ಞಾನ, ನಾಡೋಜ ಪ್ರೊ. ಹಂಪಾ ನಾಗರಾಜಯ್ಯ, ಶಿಕ್ಷಣ ತಜ್ಞ ನಾಡೋಜ ವೊಡೇ ಪಿ ಕೃಷ್ಣ, ಕಲ್ಬುರ್ಗಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಶಿಕಾಂತ್ ಉಡಿಕೇರಿ, ವಿದುಷಿ ರೇವತಿ ಕಾಮತ್, ದೂರದರ್ಶನ ಕೇಂದ್ರ ದಕ್ಷಿಣ ವಲಯದ ಉಪ ಮಹಾನಿರ್ದೇಶಕರಾದ ಭಾಗ್ಯವಾನ್, ಕಾರ್ಯಕ್ರಮದ ಉಸ್ತುವಾರಿ ಮತ್ತು ನಿರ್ವಹಣೆ ಜವಾಬ್ದಾರಿ ನಿಭಾಯಿಸುತ್ತಿರುವ ಎಚ್.ಎನ್. ಆರತಿ, ಥಟ್ ಅಂತ ಹೇಳಿ ಕಾರ್ಯಕ್ರಮದ ನಿರ್ಮಾಪಕರಾದ ಚಂದ್ರಕಲಾ, ಕಾರ್ಯಕ್ರಮ ನಿರೂಪಕರಾದ ಡಾ. ನಾ. ಸೋಮೇಶ್ವರ್ ಮೊದಲಾದವರು ಪಾಲ್ಗೊಂಡಿದ್ದರು.
Karnataka Law Commission ಮುಟ್ಟಿನ ರಜೆ ಕುರಿತು ಸಮಿತಿಯೊಂದಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಂದ ಮಹತ್ವದ ಸಭೆ
Karnataka Law Commission ರಾಜ್ಯದಲ್ಲಿನ ಎಲ್ಲಾ ವರ್ಗದ ಮಹಿಳಾ ಕಾರ್ಮಿಕರಿಗೆ ಮುಟ್ಟಿನ ರಜೆ ಬಗ್ಗೆ ಶಿಫರಸ್ಸು ಮಾಡುವುದಕ್ಕಾಗಿ
ಡಾ: ಸಪ್ನ ಎಸ್. ಅಸೋಸಿಯೋಟ್ ಡೀನ್, ಕ್ರೈಸ್ಟ್ ಯೂನಿವರ್ಸಿಟಿ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯ ಸದಸ್ಯರುಗಳೊಂದಿಗೆ ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ತಮ್ಮ ಗೃಹ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು.
ಕರ್ನಾಟಕ ಕಾನೂನು ಆಯೋಗವು ಜನವರಿ 23, 2025 ರಂದು ತನ್ನ 62 ನೇ ವರದಿಯಲ್ಲಿ ಕರ್ನಾಟಕ ಮುಟ್ಟಿನ ರಜೆ ಮತ್ತು ನೈರ್ಮಲ್ಯ ಮಸೂದೆ, 2025 ರ ಕರಡು ಮಸೂದೆಯನ್ನು ರಚಿಸಿತು.ಅದರಂತೆ
ಮಸೂದೆಯು ಶಾಲಾ ಕಾಲೇಜುಗಳಲ್ಲಿ ಅಧ್ಯಯನ ಮಾಡಲು ಹುಡುಗಿಯರಿಗೆ 2 ದಿನಗಳ ಮುಟ್ಟಿನ ರಜೆ ಮತ್ತು ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯನ್ನು ಶಿಫಾರಸು ಮಾಡಿದ್ದು, ಇದಕ್ಕೆ ಸಚಿವ ಸಂಪುಟದಿಂದ ಅನುಮೋದನೆ ಕೇಳಲಾಗಿದೆ.
ವಿವಿಧ ಕಾರ್ಮಿಕ ಸಂಘಗಳು, ಉದ್ಯೋಗದಾತರು ಮುಂತಾದ ಪಾಲುದಾರರಿಂದ ಸಲಹೆಗಳು/ಅಭಿಪ್ರಾಯಗಳು ಮತ್ತು ಆಕ್ಷೇಪಣೆಗಳನ್ನು ಕರೆಯಲಾಯಿತು.
ಯಾವುದೇ ನೀತಿಗಳು ಅಥವಾ ನೀವು ಮಹಿಳೆಯರ ವಿರುದ್ಧ ತಾರತಮ್ಯ ಮಾಡಿದರೆ, ಬದಲಿಗೆ ಅವರಿಗೆ ಸಮಾನ ಅವಕಾಶಗಳು ಮತ್ತು ರಕ್ಷಣೆಯನ್ನು ಒದಗಿಸಿದರೆ ಮುಟ್ಟಿನ ಸಮಯವು ಪ್ರಸ್ತುತವಾಗುತ್ತದೆ.
ಭಾರತದ ಸಂವಿಧಾನದ 15ನೇ ವಿಧಿಯು ಲಿಂಗದ ಆಧಾರದ ಮೇಲೆ ತಾರತಮ್ಯ ಮಾಡುವುದನ್ನು ನಿಷೇಧಿಸುತ್ತದೆ. ಮುಟ್ಟಿನ ರಜೆಯನ್ನು ಒದಗಿಸುವುದನ್ನು ಸಂವಿಧಾನದ ಆದೇಶವನ್ನು ಪೂರೈಸುವತ್ತ ಸಕಾರಾತ್ಮಕ ಹೆಜ್ಜೆಯಾಗಿ ಕಾಣಬಹುದು.
ವಿವಿಧ ಕಾರ್ಮಿಕ ಸಂಘಗಳು, ಉದ್ಯೋಗದಾತರು, ಉದ್ಯೋಗಿಗಳು, ಉದ್ಯೋಗದಾತ ಸಂಘಟನೆ, ಎನ್ಜಿಒಗಳು ಮತ್ತು ಇತರ ಪಾಲುದಾರರಿಂದ ಸಲಹೆಗಳು/ಅಭಿಪ್ರಾಯಗಳು ಮತ್ತು ಆಕ್ಷೇಪಣೆಗಳನ್ನು ಕರೆಯಲಾಯಿತು. 75 ಅಭಿಪ್ರಾಯಗಳಲ್ಲಿ 56 ಅಭಿಪ್ರಾಯಗಳು ಮುಟ್ಟಿನ ರಜೆಯನ್ನು ಬೆಂಬಲಿಸಿದವು ಮತ್ತು ಉಳಿದವುಗಳು 19 ಮಹಿಳೆಯರಿಗೆ ಮುಟ್ಟಿನ ರಜೆಯನ್ನು ವಿರೋಧಿಸಿದವು.ಮುಟ್ಟಿನ ರಜೆಯ ಬದಲಿಗೆ 12 ರಜೆಗಳನ್ನು ಮಂಜೂರು ಮಾಡಬಹುದು ಎಂಬುದು ಹೆಚ್ಚಿನ ಪಾಲುದಾರರ ಅಭಿಪ್ರಾಯವಾಗಿದೆ.
ನಮ್ಮ ರಾಜ್ಯದ ಮಹಿಳಾ ಕಾರ್ಮಿಕರ ಹಿತದೃ ಷ್ಟಿಯನ್ನು ಪರಿಗಣಿಸಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾನೂನು ಮತ್ತು ಸಂಸಾದೀಯ ಇಲಾಖೆ ಸಮ್ಮತಿಸಿದೆ. ಆದರೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಣಕಾಸು ಇಲಾಖೆ ಒಪ್ಪಲಿಲ್ಲವಾದ್ದರಿಂದ ಡಿಪಿ ಆರ್ ಕಾರ್ಮಿಕ ಇಲಾಖೆಗೆ ಹಣಕಾಸು ಇಲಾಖೆಯೊಂದಿಗೆ ಸಮಾಲೋಚಿಸಲು ಸಲಹೆ ನೀಡಿದೆ.ಇನ್ನೂ ಶಿಕ್ಷಣ ಇಲಾಖೆಯು ಕಾರ್ಮಿಕರಿಗೆ ಸಂಬಂಧಿಸಿದೆಯಾದ್ದರಿಂದ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ.
Karnataka Law Commission ಸಮಿತಿಯು ವರ್ಷಕ್ಕೆ 6 ದಿನಗಳ ಮುಟ್ಟಿನ ರಜೆಯನ್ನು ಶಿಫಾರಸು ಮಾಡಿತು.ಅವರು ಅಗತ್ಯವಿದ್ದಾಗ ಮತ್ತು ಯಾವಾಗ ಬೇಕಾದರೂ ಪಡೆಯಬಹುದು. ಭಾರತದ ಸಂವಿಧಾನದ 14ನೇ ವಿಧಿಯು ಕಾನೂನಿನ ಮುಂದೆ ಸಮಾನತೆಯನ್ನು ಖಾತರಿಪಡಿಸುತ್ತದೆ ಮತ್ತು ಧರ್ಮ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಮುಟ್ಟಿನ ರಜೆಯನ್ನು ಪರಿಗಣಿಸುವಾಗ
ಯಾವುದೇ ನೀತಿಗಳು ಮಹಿಳೆಯರ ವಿರುದ್ಧ ತಾರತಮ್ಯ ಮಾಡದಂತೆ ನೋಡಿಕೊಳ್ಳುವ ಬದಲು ಅವರಿಗೆ ಸಮಾನ ಅವಕಾಶಗಳು ಮತ್ತು ರಕ್ಷಣೆಯನ್ನು ಒದಗಿಸುವಲ್ಲಿ ಪ್ರಸ್ತುತವಾಗುತ್ತದೆ. ಭಾರತದ ಸಂವಿಧಾನದ 15 ನೇ ವಿಧಿಯು ಲಿಂಗದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ.ಮುಟ್ಟಿನ ರಜೆಯನ್ನು ಸಕಾರಾತ್ಮಕ ಹೆಜ್ಜೆಯಾಗಿ ಕಂಡು ಸಂವಿಧಾನದ ಆದೇಶವನ್ನು ಪೂರೈಸುವ ಉದ್ದೇಶ ಇದರದ್ದಾಗಿದೆ.
ಕಾರ್ಖಾನೆಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಕಂಪನಿಗಳು ಮತ್ತು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿದಂತೆ ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಮಹಿಳೆಯರು ಕೆಲಸ ಮಾಡುತ್ತಿದ್ದು, ಮುಟ್ಟಿನ ರಜೆ ಪಡೆಯುವುದು ಮಹಿಳೆಯರ ಮೂಲಭೂತ ಹಕ್ಕಾಗಿದ್ದರೂ ಇದಕ್ಕೆ ಸಂಬಂಧಿಸಿದಂತೆ ಯಾವುದೇ ರಾಷ್ಟ್ರೀಯ ಶಾಸನವಿಲ್ಲ.ದೇಶದಲ್ಲಿ ಹಲವಾರು ರಾಜ್ಯಗಳು ಮತ್ತು ಸಂಸ್ಥೆಗಳು ಮಹಿಳಾ ಉದ್ಯೋಗಿಗಳಿಗೆ ಮುಟ್ಟಿನ ರಜೆಯನ್ನು ನೀಡುತ್ತಿವೆ.ವಿವಿಧ ರಾಜ್ಯಗಳಲ್ಲಿ ಈ ಮುಟ್ಟಿನ ರಜೆಗೆ ತಮ್ಮದೇ ಆದ ನೀತಿ ನಿಯಮಗಳನ್ನು ಮಾಡಿಕೊಂಡಿವೆ. ಆ ಬಗ್ಗೆ ನೋಡುವುದಾದರೆ 1992ರಲ್ಲಿ ಬಿಹಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2ದಿನಗಳ ರಜೆ, 2023ರಲ್ಲಿ ಕೇರಳ ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಸಹಿತ 2ದಿನಗಳ ರಜೆ, ಇನ್ನೂ ಮಹಾರಾಷ್ಟ್ರದಲ್ಲಿ ನೀತಿಯಾಗಿದ್ದರೂ ಅದು ಅನುಷ್ಠಾನಗೊಂಡಿಲ್ಲ. ಜೋಮ್ಯಾಟೋ 2020ರಲ್ಲಿ ಜಾರಿಗೋಳಿಸಿರುವ ಪ್ರಕಾರ ಮಹಿಳಾ ಉದ್ಯೋಗಿಗಳು ಪ್ರತಿ ವರ್ಷ 10 ದಿನಗಳ ರಜೆಗೆ ಅರ್ಹರಾಗಿದ್ದಾರೆ. ಸ್ವಿಗ್ಗಿ ತಿಂಗಳಿಗೆ 2 ದಿನಗಳ ರಜೆ ನೀಡುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ನೋಡೋ ದಾದ್ರೆ, ಸ್ಪೇನ್ ದೇಶ ಸ್ತ್ರೀಯರಿಗೆ ತಿಂಗಳಿಗೆ 3 ದಿನಗಳ ರಜೆ ಇರುತ್ತದೆ.
ಜಪಾನ್ ಮುಟ್ಟಿನ ಸಮಯದಲ್ಲಿ ಕೆಲಸ ಮಾಡಲು ಒತ್ತಾಯಿಸಬೇಡಿ ಎಂದಿದೆ.ಇಂಡೋನೇಷ್ಯಾ ತಿಂಗಳಿಗೆ 2 ದಿನಗಳು.ದಕ್ಷಿಣ ಕೊರಿಯಾ ತಿಂಗಳಿಗೆ 2 ದಿನ ದೈಹಿಕ ರಜೆ.ವಿಯೆ ಟ್ನಾಮ್ ಮುಟ್ಟಿನ ಸಮಯದಲ್ಲಿ 30 ನಿಮಿಷಗಳ ವಿರಾಮ.ಜಾಮ್ಬಿಯರ್ 1 ದಿನ ರಜೆ ನೀಡಿದೆ.
ಸಮಿತಿಯ ಸದಸ್ಯರು ಈ ಕೆಳಗಿನಂತಿದ್ದಾರೆ:
(i) ಶ್ರೀಮತಿ ಪ್ರತಿಭಾ, ಗಾರ್ಮೆಂಟ್ ಯೂನಿಯನ್ ಪ್ರತಿನಿಧಿ.
(ii) ಶ್ರೀಮತಿ ಜಯಮ್ಮ, ಉಪಾಧ್ಯಕ್ಷೆ, ಎಐಟಿಯುಸಿ
(iii) ಶ್ರೀಮತಿ ಕಾತ್ಯಾಯಿನಿ ಚಮ್ರಂ, ಎಕ್ಸಿಕ್ಯೂಟಿವ್ ಟ್ರಸ್ಟಿ, ಸಿವಿಐಸಿ, ಬೆಂಗಳೂರು.
(iv) ಶ್ರೀಮತಿ ಶ್ಯಾಮಲಾ, ಸಮಾಜ ಕಲ್ಯಾಣ ಜನಸಂಖ್ಯಾ ಸಂಶೋಧನಾ ಕೇಂದ್ರ.
(v) ಶ್ರೀಮತಿ ಮೀನಾ ಪಾಟೀಲ್, ALC
(vi) ಶ್ರೀಮತಿ ರುತ್ ಮನೋರಮಾ, ಸಾಮಾಜಿಕ ಕಾರ್ಯಕರ್ತೆ.
(vii) ಡಾ. ಮಂಜುಳಾ, ಪ್ರೊಫೆಸರ್, ಕಿಮ್ಸ್
(viii) ಡಾ. ಸುನಿತಾ, ಉಪ ನಿರ್ದೇಶಕಿ,
(ix) ಶ್ರೀಮತಿ ಶ್ರುತಿ, ಎಒ, ಇನ್ಫೋಸಿಸ್.
(x) ಶ್ರೀ ರವಿಕುಮಾರ್, ಜಂಟಿ ಕಾರ್ಮಿಕ ಆಯುಕ್ತರು
(xi) ಶ್ರೀಮತಿ ಅನುರಾಧ, ಉಪ ಕಾರ್ಯದರ್ಶಿ, ಕಾರ್ಮಿಕ ಇಲಾಖೆ.
(xii) ಶ್ರೀ ಉಮೇಶ್, ಜಂಟಿ ಕಾರ್ಮಿಕ ಆಯುಕ್ತರು,
(xiii) ಕರ್ನಾಟಕ ನೌಕರರ ಸಂಘದ ಪ್ರತಿನಿಧಿ.
Madhu Bangarappa ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ
Madhu Bangarappa ಶಿವಮೊಗ್ಗ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ನೂತನ ತಾಲ್ಲೂಕು ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ ಎಂದ ಅವರು ಇನ್ನು ಬಾಕಿ ಉಳಿದಿರುವ ಕಾಮಗಾರಿಗಳಿಗೆ, ಹೆಚ್ಚಿನ ಅನುದಾನ ತಂದು ಉಳಿದ ಕೆಲಸವನ್ನು ಸಂಪೂರ್ಣ ಮಾಡಲು ಸಹಕರಿಸುವುದಾಗಿ ಇದೇ ವೇಳೆ ಭರವಸೆ ನೀಡಿದರು.
Madhu Bangarappa ಕಾರ್ಯಪಾಲಕ ಅಭಿಯಂತರರಾದ ಬಿ.ಎನ್. ಮಂಜುನಾಥ್ ಮಾತನಾಡಿ, ತಾ.ಪಂ. ಕಟ್ಟಡವು ರೂ.2 ಕೋಟಿ ಮೊತ್ತದಲ್ಲಿ ಅನುಮೋದನೆಗೊಂಡಿದ್ದು, 1.72 ಕೋಟಿ ಮೊತ್ತದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಹಾಗೂ ಕಟ್ಟಡಕ್ಕೆ ತಾರಸಿ ಶೀಟ್ ಸೇರಿದಂತೆ ಇನ್ನೂ ಕೆಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಸಚಿವರು ಅನುದಾನ ಬಿಡುಗಡೆ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ತಾ.ಪಂ. ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮವಾದ ಆಡಳಿತ ನಡೆಸುವಂತಾಗಲಿ ಎಂದು ಹಾರೈಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ್, ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಮಧು ಹೆಚ್.ಎಂ, ಜಿ.ಪಂ.ಸಿಇಓ ಹೇಮಂತ್, ತಾಲ್ಲೂಕು ಪಂಚಾಯತ್ ಇಓ ತಾರಾ, ಇತರೆ ಅಧಿಕಾರಿಗಳು ಹಾಜರಿದ್ದರು.
Information and Public Relations Department ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ
Information and Public Relations Department ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.
Information and Public Relations Department ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.
