Sunday, February 15, 2026
Sunday, February 15, 2026
Home Blog Page 137

Madhu Bangarappa ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸಬೇಡಿ – ಎಸ್.ಮಧು ಬಂಗಾರಪ್ಪ ಸೂಚನೆ

0

Madhu Bangarappa ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ನೋಟಿಸ್ ನೀಡುವುದು, ತೊಂದರೆ ಕೊಟ್ಟು ಒಕ್ಕಲೆಬ್ಬಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬಾರದು. ಹಾಗೂ ರೈತರ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುಗಳನ್ವಯ ನಡೆದುಕೊಳ್ಳಬೇಕೆಂದು ಸಂಬಂಧಿಸಿದ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.
ಹೊಸದಾಗಿ ಒತ್ತುವರಿಗೆ ಅವಕಾಶ ಮಾಡಬಾರದು. ಹಾಗೂ 27-04-1978 ರ ಪೂರ್ವದ ಅರಣ್ಯ ಒತ್ತುವರಿವನ್ನು ಸಕ್ರಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ಸರ್ಕಾರದ ವಿವಿಧ ಭೂ ಮಂಜೂರಾತಿ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಮಂಜೂರು ಮಾಡಲಾದ ರೈತರ ಸಾಗುವಳಿ/ವಸತಿ ಭೂಮಿಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವ ಸಂಬಂಧ ಕೈಗೊಂಡ ಕ್ರಮದ ಕುರಿತು ವರದಿಯನ್ನು ನೀಡಬೇಕೆಂದು ತಿಳಿಸಿದರು.
ಶಾಸಕರಾದ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಮಲೆನಾಡಿನ ಭಾಗದಲ್ಲಿ ರೈತನ್ನು ಒಕ್ಕಲೆಬ್ಬಿಸುವ ಸಂಬAಧ ನೋಟಿಸ್ ನೀಡಲಾಗುತ್ತಿದೆ. ಕೆಲವೆಡೆ ತೊಂದರೆ ನೀಡಲಾಗುತ್ತಿದೆ. ಇದು ಸರಿಯಾದ ಕ್ರಮವಲ್ಲ ಎಂದರು.
ಸಿಸಿಎಫ್ ಹನುಮಂತಪ್ಪ ಮಾತನಾಡಿ, ಪಿಎಫ್ ಮತ್ತು ಎಂಎಫ್ ಪ್ರಕರಣಗಳು ಕಿರು ಅರಣ್ಯ ವ್ಯಾಪ್ತಿಗೆ ಬರುತ್ತವೆ. ಇವುಗಳನ್ನು ಸೆಟ್ಲ್ ಮಾಡಬಹುದು, ಈ ಸಂಬಂಧ 375 ಅಧಿಸೂಚನೆಗಳಿವೆ ಎಂದು ತಿಳಿಸಿದರು.
ರಸ್ತೆ ಕಾಮಗಾರಿ ಪೂರ್ಣಗೊಳಿಸಿ : ಸಚಿವರು, ಜಿಲ್ಲೆಯ ಎಲ್ಲ ರಾಜ್ಯ ಹೈವೇಗಳು, ಮುಖ್ಯ ರಸ್ತೆಗಳನ್ನು ನವೆಂಬರ್ ಅಂತ್ಯದೊಳಗೆ ಮತ್ತು ಇತರೆ ಎಲ್ಲ ರಸ್ತೆಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಪಿಡಬ್ಲೂಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
Madhu Bangarappa ಮಳೆ ಮುಗಿದ ತಕ್ಷಣ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಬೇಕು. ಗುಂಡಿಗಳನ್ನು ಮುಚ್ಚುವ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಗುಂಡಿಗಳಿಂದ ದ್ವಿಚಕ್ರ ವಾಹನಗಳ ರಸ್ತೆ ಅಪಘಾತಗಳು ಹೆಚ್ಚುತ್ತಿದ್ದು ಸಾವು-ನೋವು ಸಂಭವಿಸುತ್ತಿದೆ. ಆದ್ದರಿಂದ ಶೀಘ್ರವಾಗಿ ಗುಂಡಿಗಳನ್ನು ಮುಚ್ಚಬೇಕು ಮತ್ತು ರಸ್ತೆಯ ಎಡ್ಜ್ ಹಾಗೂ ಮಧ್ಯಭಾಗವನ್ನು ಮಾರ್ಕಿಂಗ್ ಮಾಡಬೇಕೆಂದು ಸೂಚಿಸಿದ ಅವರು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕೆಂದು ತಿಳಿಸಿದರು. ಹಾಗೂ ಎನ್‌ಹೆಚ್ ಕಾಮಗಾರಿಗಳನ್ನು ನಿಗದಿತ ವೇಳೆಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದರು.
ನೀರಾವರಿ ಇಲಾಖೆ : ಸೊರಬ ತಾಲ್ಲೂಕಿನ ಗುಡುವಿ, ಯಡಗೊಪ್ಪ, ದಂಡಾವತಿ ಮತ್ತು ವರದಾ ನದಿಗಳಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.160 ಕೋಟಿ ಮೊತ್ತದ ಕಾಮಗಾರಿಯನ್ನು ಶೀಘ್ರದಲ್ಲೇ ಪ್ರಾರಂಭಿಸಬೇಕು. ಹಾಗೂ ಕಾಲುಸಂಕಗಳ ಕಾಮಗಾರಿಯನ್ನು ಸಹ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳ ನಡುವೆ ಸಮನ್ವಯತೆ ಇದ್ದಲ್ಲಿ ಕಾಮಗಾರಿ ಕ್ಷಿಪ್ರಗತಿಯಲ್ಲಿ ಆಗಲು ಸಾಧ್ಯವಾಗುತ್ತದೆ. ಆದ್ದರಿಂದ ಎಲ್ಲರೂ ಒಂದು ತಂಡದಂತೆ ಸಮನ್ವಯದೊಂದಿಗೆ ಕೆಲಸ ಮಾಡಬೇಕೆಂದರು.
ಸೊರಬ ತಾಲ್ಲೂಕು ಮಾವಿನ ಹೊಳೆ, ಕೆರೆಹಳ್ಳಿ, ಜಂಗಿನಕೊಪ್ಪ ಗ್ರಾಮಗಳಲ್ಲಿ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಮತ್ತು ಬ್ಯಾರೇಜ್ ನಿರ್ಮಾಣ ಕಾಮಗಾರಿಗಳ ಕುರಿತು ವರದಿ ಪಡೆದುಕೊಂಡರು.
ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಘೋಷಿತವಾಗಿರುವ ಕೊಳಚೆ ಪ್ರದೇಶಗಳ ಕುರಿತು ಪ್ರಗತಿ ಪರಿಶೀಲಿಸಿದ ಸಚಿವರು, ಗ್ರಾಮೀಣ ಭಾಗದ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ ಹಕ್ಕುಪತ್ರ ನೀಡುವುದು ಹಾಗೂ ನಗರ ಪ್ರದೇಶದಲ್ಲಿನ ಕೊಳಚೆ ಪ್ರದೇಶಗಳಲ್ಲಿನ ಮನೆಗಳಿಗೆ 94 ಸಿ ಮತ್ತು ಸಿಸಿ ನೀಡುವ ಕುರಿತು ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.
ಶಾಸಕರು, ಸಾಗರದ ಕೊಳಚೆ ಪ್ರದೇಶದಲ್ಲಿನ ಮನೆ ನಿರ್ಮಾಣ ಕಾಮಗಾರಿ ನಿಂತು 12 ವರ್ಷ ಆಯ್ತು. 150 ಮನೆಗಳ ಕೆಲಸ ಬಾಕಿ ಇದ್ದು, ಶೀಘ್ರದಲ್ಲಿ ಈ ಕಾಮಗಾರಿ ಆರಂಭಿಸಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದರು.
ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ, ಶಿವಮೊಗ್ಗ ಮಹಾನಗರಪಾಲಿಕೆಯ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿ ಮಹಾನಗರಪಾಲಿಕೆ ಒಡೆತನಕ್ಕೆ ಸೇರಿದ ನಿವೇಶನಗಳಲ್ಲಿ 40 ವರ್ಷಗಳಿಂದ ವಾಸ ಮಾಡುತ್ತಿರುವ ಬಡ ಕುಟುಂಬಗಳ ಮನೆಗಳನ್ನು ಸಕ್ರಮಗೊಳಿಸುವ ಸಂಬಂಧ 9000 ಅರ್ಜಿಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವರು, ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿಸಬೇಕು. ಯುದ್ದೋಪಾದಿಯಲ್ಲಿ ಈ ಕಾರ್ಯ ಕೈಗೊಂಡು ನವೆಂಬರ್ ಅಂತ್ಯದೊಳಗೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಅಪಘಾತ, ಅನಾಹುತಗಳ ಸಂಖ್ಯೆ ಹೆಚ್ಚಲಿದೆ ಎಂದು ತಿಳಿಸಿದರು. ಸಚಿವರು ಜಿಲ್ಲೆಯಲ್ಲಿ 62 ಪ್ರವಾಸಿ ತಾಣಗಳಿದ್ದು ಈ ಕುರಿತು ಹೋರ್ಡಿಂಗ್, ಮಾಹಿತಿ ಫಲಕಗಳ ಮೂಲಕ ಪ್ರಚಾರ ಮಾಡಬೇಕು ಎಂದು ತಿಳಿಸಿದರು.

ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯಲ್ಲಿ ಜಿಲ್ಲೆಯು 6 ನೇ ಸ್ಥಾನದಲ್ಲಿದೆ. ಶೇ.96 ಸಮೀಕ್ಷೆ ಮುಗಿದಿದ್ದು, ನಗರದಲ್ಲಿ ಇನ್ನು 8000 ಮನೆಗಳು ಹಾಗೂ ಜಿಲ್ಲೆಯಲ್ಲಿ ಸುಮಾರು 15 ಸಾವಿರ ಮನೆಗಳು ಸಮೀಕ್ಷೆಗೆ ಬಾಕಿ ಇದ್ದು, ಈ ಸಮೀಕ್ಷೆ ನಂತರ ಶರಾವತಿ ಸಂತ್ರಸ್ತರಿಗೆ ಸಂಬಂಧಿಸಿದಂತೆ ಬಂದಿರುವ ಆಕ್ಷೇಪಣೆಗಳನ್ನು ಆಲಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಡಿಸೆಂಬರ್ ನಂತರ ಮೀಸಲು ಅರಣ್ಯ ಕ್ಷೇತ್ರದ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ತಿಳಿಸಿದರು.

ಸಭೆಯಲ್ಲಿ ​ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಚೇತನ್ ಕೆ, ​ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್,ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ. ಸಿಇಓ ಹೇಮಂತ್ ಎನ್, ಎಸ್ ಪಿ ಜಿ.ಕೆ.ಮಿಥುನ್ ಕುಮಾರ್, ​ ​ಅರಣ್ಯ, ನೀರಾವರಿ, ಕಂದಾಯ, ಪಿಡಬ್ಲೂಡಿ, ಕೆಎನ್‌ಎನ್‌ಎಲ್ ಇತರೆ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Bhimashankar Linga Shivacharya Bhagavatpada Swamiji ಕೇದಾರ ಶ್ರೀಗಳಿಗೆ ಶಿವಮೊಗ್ಗದಲ್ಲಿ ಅದ್ಧೂರಿ ಸ್ವಾಗತ

0

Bhimashankar Linga Shivacharya Bhagavatpada Swamiji ಶಿವಮೊಗ್ಗದಲ್ಲಿ ಕೇದಾರ ಶ್ರೀಗಳಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಶಿವಮೊಗ್ಗ ನಗರದಲ್ಲಿ ಆಯೋಜಿಸಿರುವ ಇಷ್ಠಲಿಂಗ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕಾಗಮಿಸಿದ ಉತ್ತರಾಖಂಡದ ಕೇದಾರ ಪೀಠದ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿಗಳಿಗೆ ಭಕ್ತರು ಅದ್ದೂರಿ ಸ್ವಾಗತ ಕೋರಿದರು.

Bhimashankar Linga Shivacharya Bhagavatpada Swamiji ನಗರದ ಪ್ರಮುಖ ರಸ್ತೆಗಳಲ್ಲಿ ಶ್ರೀಗಳ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಶಿವಶಕ್ತಿ ಸಮಾಜ, ಜಿಲ್ಲಾ ವೀರಶೈವ ಜಂಗಮ ಅಚರ್ಕರು ಹಾಗೂ ಪುರೋಹಿತರ ಕ್ಷೇಮಾಭಿವೃದ್ದಿ ಸಂಘದ ಪ್ರಮುಖರು ಸೇರಿದಂತೆ ವೀರಶೈವ ಸಮಾಜ ಬಾಂಧವರು ಉಪಸ್ಥಿತರಿದ್ದರು. ಈ ವೇಳೆ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾ ತಂಡಗಳು, ವಿವಿಧ ವೇಷಭೂಷಣ ತೊಟ್ಟ ಕಲಾವಿದರು ಗಮನ ಸೆಳೆದರು.

MESCOM ಶಿರಾಳಕೊಪ್ಪ: ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಶಿರಾಳಕೊಪ್ಪ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಅ.14ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ ;9448998776.

Shiralkoppa Police ಕಾಣೆಯಾಗಿದ್ದಾರೆ: ಮಾಹಿತಿ ನೀಡಲು ಮನವಿ

0

Shiralkoppa Police ಶಿಕಾರಿಪುರ ತಾಲೂಕು, ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳುಕೊಪ್ಪ ಗ್ರಾಮ ವಾಸಿ 85 ವರ್ಷದ ಈರಪ್ಪ ಬಿನ್ ಸೆದಿಯಪ್ಪ ಎಂಬುವವರು ಅ. 03 ರಂದು ಮನೆಯಿಂದ ಹೊರಗೆ ಹೋದವರು ವಾಪಾಸ್ಸಾಗಿರುವುದಿಲ್ಲ.
ಚಹರೆ: 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕೆಂಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಟೀ ಶರ್ಟ್, ಕಪ್ಪು ಮತ್ತು ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.
ಈತನ ಬಗ್ಗೆ ಸುಳಿವು ದೊರೆತಲ್ಲಿ ಶಿರಾಳಕೊಪ್ಪ ಪೊಲೀಸ್ ಠಾಣೆ ದೂ.ಸಂ.: 8722973310 /9480803367 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆಗಳ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಕಾಯ್ದೆ ಅಧಿನಿಯಮ 1997 ರ ಕಲಂ 25 ರನ್ವಯ ಶಿವಮೊಗ್ಗ ಜಿಲ್ಲೆಯ ಬಿ ಮತ್ತು ಸಿ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾಧಿಗಳು/ ಸಾರ್ವಜನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶಿವಮೊಗ್ಗ ತಾಲ್ಲೂಕಿನಲ್ಲಿ ಪ್ರವರ್ಗ “ಸಿ” ಯಲ್ಲಿ ಶಿವಮೊಗ್ಗ ಗ್ರಾಮದ ಶ್ರೀ ಕೋಟೆ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಹೊಸನಗರ ತಾಲ್ಲೂಕಿನ ಬಾಣಿಗ ಗ್ರಾಮದ ಶ್ರೀ ವೆಂಕಟರಮಣ ದೇವರು, ಅರಮನೆ ಕೊಪ್ಪ ಗ್ರಾಮದ ಶ್ರೀ ಬಪ್ಪನಮನೆ ಗೋಪಾಲಕೃಷ್ಣ ದೇವಸ್ಥಾನ, ತಳಲೆ ಗ್ರಾಮದ ಶ್ರೀ ತಿರುಮಲ ವೆಂಕಟರಮಣ ದೇವರು, ಹೊಸಕೆಸರೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರು, ಕಡಸೂರು ಗ್ರಾಮದ ಶ್ರೀ ವಿನಾಯಕ ದೇವರು, ಉಳ್ತಿಗ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವರು, ಹೊಸಕೆಸರೆ ಗ್ರಾಮದ ಶ್ರೀ ಜೇನುಕಲ್ಲಮ್ಮ ದೇವರು ಅಮ್ಮನಘಟ್ಟ, ಅಂಡಗದೂದುರು ಗ್ರಾಮದ ಶ್ರೀ ಹೆಬ್ಬುಲಿಗೆ ಲಕ್ಷ್ಮೀನರಸಿಂಹ ದೇವರು, ರಿಪ್ಪನ್‌ಪೇಟೆ ಗ್ರಾಮದ ಶ್ರೀಸಿದ್ದಿ ವಿನಾಯದ ದೇವರು, ಬರುವೆ ಗ್ರಾಮದ ಶ್ರೀಕಲಾನಾಥ ದೇವರು, ಹುಂಚ ಗ್ರಾಮದ ಕಮ್ಮಟೇಶ್ವರ ದೇವರು, ಯಡಿಯೂರು ಗ್ರಾಮದ ಶ್ರೀರಾಮಭೂತ ದೇವರು, ಕಚ್ಚಿಗೆ ಬೈಲು ಗ್ರಾಮದ ಶ್ರೀ ಮಾನವಿಹೊಳೆ ಬಸವಣ್ಣ ದೇವರು, ಹೊಸಕೆಸರೆ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವರು, ಭೈಸೆ ಗ್ರಾಮದ ಶ್ರೀ ನೇತ್ರಾಭೈಲು ಚೌಡ ದೇವರು, ಅಮೃತ ಗ್ರಾಮದ ಶ್ರೀ ಭಳ್ಳಶ್ವರ ದೇವರು, ಕಡಸೂರು ಗ್ರಾಮದ ಶ್ರೀ ವಿನಾಯಕ ದೇವರು, ಹುಂಚ ಗ್ರಾಮದ ಶ್ರೀ ವೀರಭದ್ರ ದೇವರು, ಕಮ್ಮಚ್ಚಿ ಗ್ರಾಮದ ಶ್ರೀ ತಿರುಮಲ ವೆಂಕಟರಮಣ ದೇವರು, ಕಿಳಂದೂರು ಗ್ರಾಮದ ಶ್ರೀ ಮರ್ಕಾಂಡೇಶ್ವರ ದೇವರು, ಬ್ರಾಹ್ಮಣದೇವರು ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹ ದೇವರು, ಬ್ರಾಹ್ಮಣವಾಡ ಗ್ರಾಮದ ಶ್ರೀ ವಿನಾಯಕ ದೇವರು, ಮತ್ತಿಕೈ ಗ್ರಾಮದ ಶ್ರೀ ಅಂಗಡೇರಮನೆ ಶ್ರೀ ಲಕ್ಷ್ಮೀನಾರಾಯಣ ದೇವರು ಇವುಗಳು ವ್ಯವಸ್ಥಾಪನಾ ಸಮಿತಿ ರಚನೆ ಮಾಡಲು ಬಾಕಿ ಇರುವ ಸಂಸ್ಥೆಗಳು.
ಆಸಕ್ತರು ನಿಗದಿತ ನಮೂನೆ ಅರ್ಜಿಗಳನ್ನು ಆಯಾ ತಾಲ್ಲೂಕು ತಹಶೀಲ್ದಾರ್ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಅ.24 ರೊಳಗಾಗಿ ಸಲ್ಲಿಸುವುದು.
ಅರ್ಜಿ ಸಲ್ಲಿಸಬಯಸುವ ಆಸಕ್ತ ಕನಿಷ್ಟ 25 ವರ್ಷ ವಯಸ್ಸಿನವರಾಗಿರಬೇಕು. ಒಂದು ಅಧಿಸೂಚಿತ ಸಂಸ್ಥೆಯ/ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವವನ್ನು ಕೋರಿ ಅರ್ಜಿಯನ್ನು ನಿಗದಿತ ನಮೂನೆ-1(ಬಿ)(22 ನೇ ನಿಯಮ)ರಲ್ಲಿ ಭರ್ತಿ ಮಾಡಿ ತಾಲ್ಲೂಕು ತಹಶೀಲ್ದಾರ್ ಕಚೇರಿಗೆ ನೇರವಾಗಿ ಸಲ್ಲಿಸಬಹುದೆಂದು ಹಾಗೂ ನಿಗದಿಪಡಿಸಿ ದಿನಾಂಕ ನಂತರದ ಸ್ವೀಕೃತವಾಗುವ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

MESCOM ಅ.14 ರಂದು ಶಿವಮೊಗ್ಗ ಎಂಆರ್‌ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯ

0

MESCOM ಶಿವಮೊಗ್ಗ ಎಂಆರ್‌ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 4.30ಕ್ಕೆ ಹೊಳೆಹೊನ್ನೂರು ಹೊಳಲೂರು ಹಾಗೂ ತಾವರೆಚಟ್ನಹಳ್ಳಿ ವಿವಿ ಕೇಂದಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಹೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, MESCOM ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು ಮೇಲಿನ ಹಸನವಾಡಿ, ಬೆಳಲಕಟ್ಟೆ, ಮೋಜಪ್ಪ, ಹೊಸೂರು, ಸುತ್ತಮುತ್ತಲ್ಲಿನ ಜಲ್ಲಿ ಕ್ರಷರ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಆಟೋ ಕಾಂಪ್ಲೆಕ್ಸ್ ಆವರಣವನ್ನು ತ್ಯಾಜ್ಯ ವಿಲೇವಾರಿ

0

ಆಟೋ ಕಾಂಪ್ಲೆಕ್ಸ್ ಆವರಣವನ್ನು ಅಂತಿಮವಾಗಿ ತ್ಯಾಜ್ಯ ವಿಲೇವಾರಿ ಮಾಡಿ ಸಂಪೂರ್ಣ ಆಟೋ ಕಾಂಪ್ಲೆಕ್ಸ್ ಆವರಣವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಕೈ ಜೋಡಿಸಿದ ಮಹಾನಗರ ಪಾಲಿಕೆಯ ಆಯುಕ್ತರು, ಹೆಲ್ತ್ ಇನ್ಸ್ಪೆಕ್ಟರ್ ಲೋಹಿತ್ ರವರು ಮೇಸ್ತ್ರಿ ಆದಂತಹ ಗಣೇಶ್ ರವರು ಹಾಗೂ ಸಿಬ್ಬಂದಿ ವರ್ಗದವರಿಗೆ ಆಟೋ ಕಾಂಪ್ಲೆಕ್ಸ್ ಮಾಲೀಕರ ಸಂಘದ ಅಧ್ಯಕ್ಷರಾದ ಚಿನ್ನಪ್ಪ ಹಾಗೂ ಪದಾಧಿಕಾರಿಗಳಾದ ದಯಾನಂದ್, ಚಂದ್ರಶೇಖರ್ ಎಂ ಬಿ, ಜಾರ್ಜ್ ಕುರಿಯನ್, ಪಿ ವೆಂಕಟೇಶ್, ವಿ ವೆಂಕಟೇಶ್, ಅಣ್ಣಪ್ಪ, ಪ್ರಕಾಶ್, ಮಾಲತೇಶ್ ಅಂತೋಣಿ ರಾಜ್, ಹಿದಾಯತ್ ಖಾನ್,ರಮೇಶ್ ಬಾಬು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ.

Karnataka Working Journalists Association ನ. 09 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮತ್ತು ಜಿಲ್ಲಾ ಘಟಕಗಳಿಗೆ ಚುನಾವಣೆ

0

Karnataka Working Journalists Association ರಾಜ್ಯದ ಕಾರ್ಯನಿರತ ಪತ್ರಕರ್ತರ ಪ್ರತಿಷ್ಠಿತ ಪ್ರಾತಿನಿಧಿಕ ಸಂಘಟನೆಯಾದ “ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೆ ಅವಧಿಯ ಆಡಳಿತ ಮಂಡಳಿ ಆಯ್ಕೆಗೆ ಚುನಾವಣೆ ಘೋಷಣೆ ಆಗಿದೆ.

ಸುದ್ದಿಗೋಷ್ಟಿಯಲ್ಲಿ ಚುನಾವಣೆ ಕುರಿತು ಮಾಹಿತಿ ನೀಡಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯಚುನಾವಣಾಧಿಕಾರಿ ಎನ್ .ರವಿಕುಮಾರ್ ( ಟೆಲೆಕ್ಸ್) ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು 9000 ಸಾವಿರಕ್ಕೂ ಹೆಚ್ಚು ಸಕ್ರೀಯ ಕಾರ್ಯನಿರತ ಪತ್ರಕರ್ತ ಸದಸ್ಯರುಗಳನ್ನೊಳಗೊಂಡ ಬೃಹತ್ ಸಂಘಟನೆಯಾಗಿದ್ದು, ಕಾರ್ಮಿಕ ಇಲಾಖೆಯ ಉಸ್ತುವಾರಿಯಲ್ಲಿ ಸಂಘದ ರಾಜ್ಯ ಘಟಕವೂ ಸೇರಿದಂತೆ ಎಲ್ಲಾ ಜಿಲ್ಲಾ ಘಟಕದ ಆಡಳಿತ ಮಂಡಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಅಕ್ಟೋಬರ್ 13 ರಂದು ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟಗೊಳ್ಳಲಿದ್ದು, ಅಂದೇ ವೇಳಾಪಟ್ಟಿ ಹಾಗೂ ಮತದಾರರ ಕರಡು ಪ್ರತಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಅ.27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಅ.28 ನಾಮಪತ್ರಗಳ ಪರಿಶೀಲನೆ, ಅ. 30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.

Karnataka Working Journalists Association ನವಂಬರ್ 09 ಭಾನುವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೇಂದ್ರ )ಕಚೇರಿ ಕಂದಾಯ ಭವನ ೩ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು ಮತ್ತು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 9 ರಿಂದ ಮದ್ಯಾಹ್ನ 3ಗಂಟೆ ವರೆಗೆ ಮತದಾನ ನಡೆಯಲಿದೆ. ಮತದಾನ ಬಳಿಕ ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಎನ್.ರವಿಕುಮಾರ್ (ಟೆಲೆಕ್ಸ್) ವಿವರಿಸಿದರು. ಮಾದರಿ ನೀತಿ ಸಂಹಿತೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಘಟಕ ಮತ್ತು ಜಿಲ್ಲಾ ಘಟಕಗಳಿಗೆ ಚುನಾವಣೆ ಹಿನ್ನಲೆಯಲ್ಲಿ ಅ. 10 ರಿಂದ ನ.09 ರವರೆಗೆ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ರಾಜ್ಯ ಮತ್ತು ಜಿಲ್ಲಾ ಘಟಕಗಳು ಯಾವುದೇ ಅಧಿಕೃತ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ. ಜಾತಿ, ಧರ್ಮ, ಲಿಂಗ ಆಧಾರಿತವಾಗಿ ಮತಯಾಚಿಸುವಂತಿಲ್ಲ. ಅಭ್ಯರ್ಥಿಗಳ ವಿರುದ್ದ ವ್ಯಕ್ತಿಗತ ಆರೋಪ. ಅಪಪ್ರಚಾರಗಳನ್ನು ನಡೆಸುವಂತಿಲ್ಲ.

Rotary Shivamogga ಸಮುದಾಯದ ಒಗ್ಗಟ್ಟಿನಿಂದ ಆರ್ಥಿಕ ಅಭಿವೃದ್ಧಿ : ಡಾ. ಎ.ಟಿ.ಪದ್ಮೇಗೌಡ

0

Rotary Shivamogga ಸಮುದಾಯದ ಆರ್ಥಿಕ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಿದಾಗ ದೇಶ ಅಭಿವೃದ್ಧಿ ಸಾಧ್ಯ ಎಂದು ಡಾ. ಎ.ಟಿ.ಪದ್ಮೇಗೌಡ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ ಹಳ್ಳಿಗಳಿಂದ ಕೂಡಿರುವಂತಹ ದೇಶವಾಗಿದ್ದು, ದೇಶದ ಜನಸಂಖ್ಯೆ 145 ಕೋಟಿ ದಾಟಿದ್ದು, ಪ್ರತಿಯೊಬ್ಬರು ಕೂಡ ಸಮಾಜದಲ್ಲಿ ಮೊಟ್ಟಮೊದಲು ತನ್ನ ಕುಟುಂಬವನ್ನು ನಿರ್ವಹಣೆ ಮಾಡುವುದನ್ನು ಕಲಿತರೆ ಸಮುದಾಯದ ಆರ್ಥಿಕ ಅಭಿವೃದ್ಧಿಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಅವಶ್ಯಕತೆಗಿಂತ ಹೆಚ್ಚಾಗಿ ಹಣವನ್ನು ಸಂಪಾದಿಸುತ್ತಿದ್ದಾರೆ. ಆದರೆ ಕೆಲವರು ಹಣವನ್ನು ಸಂಪಾದಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಹಬ್ಬ ಹರಿದಿನಗಳು ಬಂದ ಸಂದರ್ಭದಲ್ಲಿ ಅವಶ್ಯಕತೆಗಿಂತ ಹೆಚ್ಚು ಹಣವನ್ನು ಖರ್ಚು ಮಾಡಿ ಸಾಲಗಾರನಾಗಿ ಜೀವನ ಸಾಗಿಸುತ್ತಾನೆ. ಇದರಿಂದ ಸಮಾಜದ ಮತ್ತು ಸಮುದಾಯದ ಆರ್ಥಿಕ ಅಭಿವೃದ್ಧಿ ಬಹಳ ಕಷ್ಟವಾಗುತ್ತದೆ ಎಂದು ಹೇಳಿದರು.

ಭಾರತೀಯರು ಬೇರೆ ದೇಶಗಳಿಗಿಂತ ವಿಭಿನ್ನ ವೈವಿಧ್ಯತೆಯ ವ್ಯವಸ್ಥೆಯನ್ನು ಹೊಂದಿದ್ದೇವೆ. ಪ್ರತಿಯೊಬ್ಬರೂ ಕೂಡ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಮುದಾಯ, ಸಮಾಜ ದೇಶ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ರೋಟರಿ ಪೂರ್ವ ಸಂಸ್ಥೆಯ ಪ್ರತಿಯೊಬ್ಬ ಸದಸ್ಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮುದಾಯವನ್ನು ಬಲಪಡಿಸಬೇಕು ಎಂದು ತಿಳಿಸಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ.ಬಿ.ಆರ್., ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡುದಪ್ಪ ಕಸಬಿ, ಚಂದ್ರಹಾಸ ಪಿ ರಾಯ್ಕರ್, ಪರಮೇಶ್ವರ ಶಿಗ್ಗಾವ್, ರವಿಶಂಕರ್ ಬಿ ಎಂ, ಅರುಣ್ ದೀಕ್ಷಿತ್, ವಿಜಯಲಕ್ಷ್ಮೀ ಇತರರಿದ್ದರು.

World Mental Health Day ದೈಹಿಕ ಆರೋಗ್ಯಕ್ಕೆ ನೀಡುವ ಕಾಳಜಿಯನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕಾಗಿರುವುದು ಅವಶ್ಯಕ : ಡಾ. ಕೆ.ಆರ್.ರವೀಶ್

0

World Mental Health Day ದೈಹಿಕ ಆರೋಗ್ಯಕ್ಕೆ ನೀಡುವ ಕಾಳಜಿಯನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕಾಗಿರುವುದು ಅವಶ್ಯಕ ಎಂದು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಹೇಳಿದರು.

ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಮತ್ತು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರು ದಿನನಿತ್ಯ ವ್ಯಾಯಾಮದ ಜತೆಯಲ್ಲಿ ಮಾನಸಿಕ ಆರೋಗ್ಯದ ಕಾಳಜಿ ವಹಿಸಲು ಪೂರಕ ಚಟುವಟಿಕೆಗಳನ್ನು ನಡೆಸಬೇಕು. ಮಾನಸಿಕ ಆರೋಗ್ಯ ಅತ್ಯಂತ ಮುಖ್ಯ. ಇಂತಹ ಜಾಗೃತಿ ಕಾರ್ಯಕ್ರಮಗಳು ಮಾನಸಿಕ ಆರೋಗ್ಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಹೆಚ್ಚು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಹರೀಶದೇಲಂತ ಬೆಟ್ಟು ಮಾತನಾಡಿ, ವಿಶ್ವ ಮಾನಸಿಕ ಆರೋಗ್ಯ ದಿನದ ಥೀಮ್ “ವಿಪತ್ತು ಮತ್ತು ದುರಂತದ ತುರ್ತು ಪರಿಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಗಮನ” ಆಗಿದ್ದು, ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯವಿದೆ. ಪ್ರಾರಂಭಿಕ ಹಂತದಲ್ಲಿಯೇ ಮಾನಸಿಕ ಕಾಯಿಲೆಗಳ ಲಕ್ಷಣಗಳನ್ನು ಮತ್ತು ಒತ್ತಡವನ್ನು ಗುರುತಿಸಿ ಸರಿಯಾದ ಆಪ್ತಸಮಾಲೋಚನೆ ಮತ್ತು ಚಿಕಿತ್ಸೆ ಪಡೆಯಬೇಕು. ಇದನ್ನು ಸಾಧ್ಯವಾಗಿಸಲು ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

World Mental Health Day ಕಾಲೇಜಿನ ಡೀನ್ ಡಾ. ವಿನಾಯಕ ಭಟ್ ಮತ್ತು ಪ್ರಾಂಶುಪಾಲ ಡಾ. ಸಿದ್ದಲಿಂಗಪ್ಪ ಸಿಎಂ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ, ಡಾ. ಸಾಯಿ ಕೋಮಲ್, ಡಾ. ರಾಗಶ್ರೀ ಮತ್ತು ಆಪ್ತ ಸಮಾಲೋಚಕರಾದ ವಿದ್ಯಾ ಹಾಗೂ ಅಶ್ವಿನಿ ಭಾಗವಹಿಸಿದ್ದರು.