Friday, March 27, 2026
Friday, March 27, 2026
Home Blog Page 1372

ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ನಮ್ಮ ಗಣರಾಜ್ಯ ದಿನಾಚರಣೆ ಅತಿಥಿ

0

ಭಾರತವು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರನ್ನು 2023 ರಲ್ಲಿ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಅರಬ್ ಅಧ್ಯಕ್ಷರಾದ ಹೆಚ್.ಇ. ಶ್ರೀ ಅಬ್ದೇಹ್ ಫತ್ತಾಹ್ ಅಲ್ ಸಿಸಿ ಈಜಿಪ್ಟ್ ಗಣರಾಜ್ಯವು ಜನವರಿ 26, 2023 ರಂದು ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ.

ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್‌ನ ಅಧ್ಯಕ್ಷರು ನಮ್ಮ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗುತ್ತಿರುವುದು ಇದೇ ಮೊದಲು ಎಂದು ಸಚಿವಾಲಯ ತಿಳಿಸಿದೆ.

ಅಕ್ಟೋಬರ್ 16 ರಂದು ಈಜಿಪ್ಟ್‌ಗೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಕೈರೋದಲ್ಲಿ ಸಿಸಿ ಅವರನ್ನು ಭೇಟಿಯಾಗಿದ್ದ ವೇಳೆ ಔಪಚಾರಿಕವಾಗಿ ಆಹ್ವಾನವನ್ನು ನೀಡಿದ್ದರು.

2023 ರಲ್ಲಿ ಭಾರತದ ಅಧ್ಯಕ್ಷತೆಯಲ್ಲಿ G20 ಶೃಂಗಸಭೆಗೆ ಆಹ್ವಾನಿಸಲಾದ ಒಂಬತ್ತು ಅತಿಥಿ ರಾಷ್ಟ್ರಗಳಲ್ಲಿ ಈಜಿಪ್ಟ್ ಸೇರಿದೆ.

ಜನವರಿ 26 ರಂದು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನವು ದೇಶದ ನಿಕಟ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರಿಗೆ ಮೀಸಲಾಗಿರುವ ಸಂಕೇತ ಗೌರವವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ 2021 ಮತ್ತು 2022 ರಲ್ಲಿ ನಡೆದ ಆಚರಣೆಗಳಲ್ಲಿ ಯಾವುದೇ ಮುಖ್ಯ ಅತಿಥಿಗಳು ಇರಲಿಲ್ಲ.

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರು 2020 ರ ಆಚರಣೆಯಲ್ಲಿ ಭಾಗವಹಿಸಿದ ಕೊನೆಯ ಮುಖ್ಯ ಅತಿಥಿಯಾಗಿದ್ದರು.

ಕಳೆದ ಕೆಲವು ವರ್ಷಗಳಲ್ಲಿ ರಕ್ಷಣಾ ಮತ್ತು ಭದ್ರತಾ ಸಹಕಾರವು ಭಾರತ-ಈಜಿಪ್ಟ್ ಸಂಬಂಧಗಳ ಪ್ರಮುಖ ಆಧಾರಸ್ತಂಭವಾಗಿ ಹೊರಹೊಮ್ಮಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೆಪ್ಟೆಂಬರ್ 19-20 ರ ಅವಧಿಯಲ್ಲಿ ಕೈರೋಗೆ ಭೇಟಿ ನೀಡಿದಾಗ ಸಿಸಿ ಅವರನ್ನು ಭೇಟಿಯಾಗಿದ್ದರು.

ಭಾರತೀಯ ಸಂಗೀತದ ಅಭಿರುಚಿ ವಿಶ್ವದಾದ್ಯಂತ ಹಬ್ಬುತ್ತಿದೆ-ಮೋದಿ

0

ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ದೇಶದ ಹೊರಗೆ ಅದರ ಕ್ರೇಜ್ ಅನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಶಾಸ್ತ್ರೀಯ ಸಂಗೀತ ಉಪಕರಣಗಳ ರಫ್ತು ಹೆಚ್ಚಾಗಿದೆ ಮತ್ತು ಅವುಗಳ ಅತಿದೊಡ್ಡ ಖರೀದಿದಾರರಲ್ಲಿ ಅಭಿವೃದ್ಧಿ ಹೊಂದಿದ ದೇಶಗಳಾದ ಯುಎಸ್‌ಎ ಮತ್ತು ಯುಕೆ ಸೇರಿವೆ ಎಂದು ಹೇಳಿದರು.

ಮನ್ ಕಿ ಬಾತ್’ ಕಾರ್ಯಕ್ರಮದ 95ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಕಳೆದ ವರ್ಷದಿಂದ ಭಾರತದಿಂದ ಸಂಗೀತ ಉಪಕರಣಗಳ ರಫ್ತು 3.5 ಪಟ್ಟು ಹೆಚ್ಚಾಗಿದೆ. ಇದು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ಪ್ರಪಂಚದ ಆಸಕ್ತಿಯನ್ನು ತೋರಿಸುತ್ತದೆ. ಕಳೆದ ಎಂಟು ವರ್ಷಗಳಲ್ಲಿ, ಸಂಗೀತ ಉಪಕರಣಗಳ ರಫ್ತು 3.5 ಪಟ್ಟು ಹೆಚ್ಚಾಗಿದೆ.

ಎಲೆಕ್ಟ್ರಿಕಲ್ ಸಂಗೀತ ಉಪಕರಣಗಳ ರಫ್ತು ಕೂಡ 60 ಪಟ್ಟು ಹೆಚ್ಚಾಗಿದೆ. ಇದು ಭಾರತೀಯ ಸಂಸ್ಕೃತಿ ಮತ್ತು ಸಂಗೀತದ ಗೀಳು ಪ್ರಪಂಚದಾದ್ಯಂತ ಹೆಚ್ಚುತ್ತಿದೆ ಎಂದು ಸೂಚಿಸುತ್ತದೆ.

ಭಾರತೀಯ ಸಂಗೀತ ವಾದ್ಯಗಳ ಅತಿದೊಡ್ಡ ಖರೀದಿದಾರರು ಯುಎಸ್‌ಎ, ಜರ್ಮನಿ, ಫ್ರಾನ್ಸ್, ಜಪಾನ್ ಮತ್ತು ಯುಕೆ ಮುಂತಾದ ಅಭಿವೃದ್ಧಿ ಹೊಂದಿದ ದೇಶಗಳು’ ಎಂದು ಹೇಳಿದರು.

ಮಹಾತ್ಮಾ ಗಾಂಧಿಯವರ ಅಚ್ಚುಮೆಚ್ಚಿನ ಹಾಡು ಎಂದು ಹೇಳಲಾದ ವೈಶವ್ ಜನತೋ ಹಾಡನ್ನು ಮಾಡಿದ ಗ್ರೀಸ್ ಕಲಾವಿದ ಕಾನ್ಸ್ಟಾಂಟಿನೋಸ್ ಕಲೈಟ್ಜಿಸ್ ಅವರ ಬಗ್ಗೆ ಪ್ರಧಾನಿ ಪ್ರಸ್ತಾಪಿಸಿದರು.

ಅಷ್ಟೇ ಅಲ್ಲದೇ, ಭಾರತದ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಸಂಪ್ರದಾಯಗಳನ್ನು ಅಧ್ಯಯನ ಮಾಡಲು ಕಾನ್ಸ್ಟಾಂಟಿನೋಸ್ ಕಳೆದ 42 ವರ್ಷಗಳಲ್ಲಿ ನಿಯಮಿತವಾಗಿ ಭಾರತಕ್ಕೆ ಭೇಟಿ ನೀಡಿದ್ದಾರೆ ಎಂದರು.

‘ನಮ್ಮ ಸಂಸ್ಕೃತಿಯಲ್ಲಿ ಶಾಸ್ತ್ರೀಯ ಸಂಗೀತವನ್ನು ದೈವಿಕವೆಂದು ಪರಿಗಣಿಸಲಾಗುತ್ತದೆ. ನಮ್ಮ ಎಲ್ಲಾ ದೇವರು ಮತ್ತು ದೇವತೆಗಳು ಅನೇಕ ಸಂಗೀತ ವಾದ್ಯಗಳನ್ನು ನುಡಿಸುತ್ತಾರೆ. ಹರಿಯುವ ನದಿಗಳಿಂದ ಹಿಡಿದು ಪಕ್ಷಿಗಳ ಚಿಲಿಪಿಲಿ ನಾದದವರೆಗೆ ನಾವು ಎಲ್ಲೆಡೆ ಸಂಗೀತವನ್ನು ಕಾಣಬಹುದು. ನಮ್ಮ ಸಂಗೀತ ಪ್ರಕಾರಗಳು ನಮ್ಮ ಸಂಸ್ಕೃತಿಯನ್ನು ಶ್ರೀಮಂತಗೊಳಿಸಿವೆ. ಅದು ಜಗತ್ತಿನ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ ಎಂದು ಹೇಳಿದರು.

ಕುವೆಂಪು ವಿವಿಯಲ್ಲಿ ಸಂವಿಧಾನ ದಿನಾಚರಣೆ

0

ಜಿಲ್ಲಾಡಳಿತ, ಜಿಲ್ಲಾ‌ ಕಾನೂನು ಸೇವೆಗಳ ಪ್ರಾಧಿಕಾರ, ನೆಹರು ಯುವ ಕೇಂದ್ರ, ಶಿವಮೊಗ್ಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ವಿಶ್ವವಿದ್ಯಾಲಯ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಗೌಡರವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಸನ್ಮಾನ್ಯ ಅಪರ ಜಿಲ್ಲಾಧಿಕಾರಿಗಳಾದ ಡಾ. ನಾಗೇಂದ್ರ ಎಫ್‌.ಹೊನ್ನಳ್ಳಿರವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶ್ರೀ‌ ರಾಜಣ್ಣ ಸಂಕಣ್ಣನವರ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಡಿವೈಎಸ್ಪಿ ಬಾಲರಾಜ್ ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಫ್ರೊ. ಸದಾನಂದ ರವರು ಸಂವಿಧಾನದ ರಚನೆ ಹಾಗೂ ಮೂಲಭೂತ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.

ಸ್ವಾಗತವನ್ನು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ್ ಪರಿಸರ ನೆರವೇರಿಸಿ, ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್ ಹೆಚ್.ರವರು ವಂದಿಸಿದರು.

ಶಾರದಾ ಸಂಗೀತ ವಿದ್ಯಾಲಯದ ವಿದ್ಯಾರ್ಥಿಗಳು ನಾಡಗೀತೆಯನ್ನು ಹಾಡಿದರು.
ನೆಹರೂ ಯುವ ಕೇಂದ್ರದ ಯುವ ಅಧಿಕಾರಿಗಳಾದ ಶ್ರೀ ಉಲ್ಲಾಸ್ ಕೆ.ಟಿ.ಕೆ., ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಟ್ಸ್ ಆ್ಯಪ್ ನಲ್ಲಿ ಹೊಸ ಪೀಚರ್ಸ್

0

ಬಳಕೆದಾರರ ಅನುಕೂಲಕ್ಕಾಗಿ ಹಲವು ಹೊಚ್ಚ ಹೊಸ ಫೀಚರ್‌ಗಳನ್ನು ಪರಿಚಯಿಸುತ್ತಿರುವ ವಾಟ್ಸ್‌ಆಯಪ್‌ ಈಗ ಮತ್ತೊಂದು ಫೀಚರ್‌ ಹೊರತರಲು ಸಿದ್ಧತೆ ನಡೆಸಿದೆ.

ಈಗ ಬಳಕೆದಾರರು ತಮ್ಮ ವಾಟ್ಸ್‌ಆಯಪ್‌ ಸ್ಟೇಟಸ್‌ನಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಮಾತ್ರ ಶೇರ್‌ ಮಾಡಲು ಅವಕಾಶವಿದೆ.

ಇನ್ನು ಮುಂದೆ, ನಿಮ್ಮ ವಾಯ್ಸ ನೋಟ್‌(ಧ್ವನಿ ಸಂದೇಶ)ಗಳನ್ನೂ ಸ್ಟೇಟಸ್‌ಗೆ ಅಪ್‌ಲೋಡ್‌ ಮಾಡಲು ಸಾಧ್ಯವಾಗುವಂಥ ಫೀಚರ್‌ವೊಂದನ್ನು ಕಂಪನಿ ಅಭಿವೃದ್ಧಿಪಡಿಸುತ್ತಿದೆ.

ಇದು ಯಶಸ್ವಿಯಾದರೆ, ಒಟ್ಟಾರೆ 30 ಸೆಕೆಂಡುಗಳ ಅವಧಿಯ ಧ್ವನಿ ಸಂದೇಶಗಳನ್ನು ನೀವು ಸ್ಟೇಟಸ್‌ಗೆ ಹಾಕಬಹುದು. ಸಂದೇಶ ಬರೆಯುವಂಥ ಸ್ಥಳದಲ್ಲಿರುವ ಮೈಕ್ರೋಫೋನ್‌ ಐಕಾನ್‌ ಅನ್ನು ಟ್ಯಾಪ್‌ ಮಾಡುವ ಮೂಲಕ ಧ್ವನಿ ಸಂದೇಶವನ್ನು ಸ್ಟೇಟಸ್‌ಗೆ ಅಪ್‌ಲೋಡ್‌ ಮಾಡಬಹುದು ಎಂದು ಹೇಳಲಾಗಿದೆ.

ಸಂವಿಧಾನ ನಮ್ಮ ದೇಶದ ಅತ್ಯುನ್ನತ ಕಾನೂನು-ಶ್ರೀಪಾಲ್

0

ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಐಕ್ಯೂಎಸಿ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

“ಸಂವಿಧಾನದ ಮೂಲ ಆಶಯಗಳು” ಎಂಬ ವಿಷಯದ ಕುರಿತು ಮಾತನಾಡಲು ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಯುತ ಕೆ.ಪಿ. ಶ್ರೀಪಾಲ್, ನ್ಯಾಯವಾದಿಗಳು, ಶಿವಮೊಗ್ಗ ಇವರು ಆಗಮಿಸಿದ್ದರು.

ಶ್ರೀಯುತರು ಸಂವಿಧಾನದ ಮೂಲ ಆಶಯವು ‘ಸಮಾನತೆ’ ಎಂದು ಹೇಳುತ್ತಾ ವಿವಿಧ ಜಾತಿ ಮತ, ಸಂಸ್ಕೃತಿಯನ್ನು ಹೊಂದಿರುವ ನಮ್ಮ ದೇಶದಲ್ಲಿ ಮೂಡಿಬಂದ ಸಂವಿಧಾನವು ನಮ್ಮ ದೇಶದ ಅತ್ಯುನ್ನತ ಕಾನೂನು ಎಂದು ಹೇಳಿದರು.

ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ದೇಶದ ಮೀಸಲಾತಿ ವ್ಯವಸ್ಥೆ, ತೃತೀಯ ಲಿಂಗಿಗಳ ಹಕ್ಕುಗಳ ಬಗೆಗೆ ಸಮಾನತೆಯ ಕುರಿತಾಗಿ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಅವರು ಸಮಂಜಸವಾಗಿ ಉತ್ತರಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಂಸಿಸಿಎಸ್ ನ ನಿರ್ದೇಶಕರಾದ ಡಾ. ರಾಜೇಂದ್ರ ಚೆನ್ನಿಯವರು ಮಾತನಾಡಿ ಸಂವಿಧಾನದ ಅರಿವು ಪ್ರತಿಯೊಬ್ಬ ಪ್ರಜೆಗೂ ಮುಖ್ಯ. ಅದರಂತೆ ಸಂವಿಧಾನದ ರಕ್ಷಣೆಯ ಜವಾಬ್ದಾರಿಯೂ ಪ್ರಜೆಗಳದ್ದೇ ಎಂದರು.

ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಡಾ. ಸುಕೀರ್ತಿ, ಐಕ್ಯೂಎಸಿ ಸಂಯೋಜಕರಾದ ಡಾ. ಅರ್ಚನಾ ಕೆ ಭಟ್ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯೆ ಡಾ. ಸಂದ್ಯಾಕಾವೇರಿ ವಹಿಸಿದ್ದರು. ಕುಮಾರಿ ಮಧುಶ್ರೀ ನಿರೂಪಿಸಿ, ಡಾ. ಸುಕೀರ್ತಿ ಸ್ವಾಗತಿಸಿ, ಶ್ರೀ ರಕ್ಷಿತ್ ವಂದಿಸಿದರು.

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿಗೆ ಸಿದ್ಧಶ್ರೀ ಪ್ರಶಸ್ತಿ

0

ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ಡಿ.2ರಂದು ನಡೆಯಲಿರುವ ಶ್ರೀ ಷಡಕ್ಷರಿ ಶಿವಯೋಗಿ ಡಾ| ಮುರುಘ ರಾಜೇಂದ್ರ ಮಹಾ ಸ್ವಾಮಿಗಳ 38ನೇ ಗುರು ವಂದನಾ ಮಹೋತ್ಸವದಲ್ಲಿ ರಾಷ್ಟ್ರ ಮಟ್ಟದ ಸಿದ್ಧಶ್ರೀ ಪ್ರಶಸ್ತಿ ನೀಡಿ ಗೌರವಿಸ ಲಾಗುವುದು ಎಂದು ಗುರುವಂದನ ಸ್ವಾಗತ ಸಮಿತಿ ಗೌರವ ಅಧ್ಯಕ್ಷ ಅಭಿನವ ಶಿವಲಿಂಗ ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 38ನೇ ಗುರುವಂದನೆ ಮಹೋತ್ಸವದ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಡಿ.1ರಂದು ಮುಗಳಖೋಡ ಶ್ರೀಮಠದ ಗೋ ಶಾಲೆಯಲ್ಲಿ 38 ಗೋಮಾತೆ ಪೂಜೆ ನೆರವೇರಿಸಲಾಗುವುದು.

ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ 5 ಸಾವಿರ ಸಸಿಗಳನ್ನು ನೆಡಲಾಗುವುದು.
ಮಹೋತ್ಸವದಲ್ಲಿ ಹರ-ಗುರು-ಚರ ಮೂರ್ತಿಗಳು ರಾಜಕೀಯ ಧುರೀಣರು ಉಪಸ್ಥಿತರಿರಲಿದ್ದು, ಐದು ರಾಜ್ಯಗಳಿಂದ 1.5 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಖ್ಯಾತ ಸಾಹಿತಿಗಳಾದ ವಿ.ನಾಗೇಂದ್ರ ಪ್ರಸಾದ ಮತ್ತು ಡಾ|ಶಿವಶಂಕರಪ್ಪ ಸಾಹುಕಾರ, ಕೆಪಿಎಸ್‌ಸಿ ಚೇರ್ಮನ್‌ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು. ಸಂಜೆ ಖ್ಯಾತ ಹಿನ್ನೆಲೆ ಗಾಯಕರಾದ ವಿಜಯ ಪ್ರಕಾಶ ತಂಡದಿಂದ ಸ್ವರ ಸಂಗೀತ ಸಂಭ್ರಮ ಹಾಗೂ ಗುರುವಂದನ ಮಹೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ವಿಶೇಷ ಪ್ರತಿಭೆಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಮಹಾರಾಷ್ಟ್ರ ಕರ್ನಾಟಕ ಗಡಿ ಸಮಸ್ಯೆ ಸೀಎಂ ಅವರಿಂದ ಮಹತ್ವದ ಸಭೆ

0

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಚರ್ಚೆ ನಡೆಸಲು ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಇಂದು ಸಂಜೆ 7 ಗಂಟೆಗೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಗಡಿ, ನದಿ ರಕ್ಷಣಾ ಆಯೋಒಗದ ಅಧ್ಯಕ್ಷ ನ್ಯಾ. ಶಿವರಾಜ ಪಾಟೀಲ್, ಎ.ಜಿ ಪ್ರಭುಲಿಂಗ ನಾವದಗಿ, ಸುಪ್ರೀಂಕೋರ್ಟ್ ನ ಕೆಲ ವಕೀಲರ ಜೊತೆಗೆ ಸಭೆ ನಡೆಸಲಿದ್ದಾರೆ.

ಸಭೆಯಲ್ಲಿ ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕದ ಪರ ವಾದ, ಸರ್ಕಾರದ ನಿಲುವು, ಸರ್ವಪಕ್ಷ ಸಭೆ ಕರೆಯುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.

ಭಾರತೀಯ ಒಲಂಪಿಕ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಪಿ.ಟಿ.ಉಷಾ ಅಭ್ಯರ್ಥಿ

0

ಮುಂದಿನ ತಿಂಗಳು ನಡೆಯುವ ಭಾರತೀಯ ಒಲಂಪಿಕ್​ ಅಸೋಸಿಯೇಷನ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಓಟಗಾರ್ತಿ ಪಿಟಿ ಉಷಾ ಅವರು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು, ನನ್ನ ಸಹ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ ಆತ್ಮೀಯರು ನನ್ನನ್ನು ಬೆಂಬಲಿಸಿದ್ದಾರೆ. ಹೀಗಾಗಿ ನಾನು ಅವರ ನಾಮನಿರ್ದೇಶವನ್ನು ವಿನಮ್ರದಿಂದ ಗೌರವಿಸಿ ಒಲಿಂಪಿಕ್​ ಸಂಸ್ಥೆಯ ಅಧ್ಯಕ್ಷ ಸ್ಥಾನದ ಚುನಾವಣಾ ಕಣಕ್ಕೆ ಧುಮುಕುವೆ ಎಂದು ಹೇಳಿದ್ದಾರೆ.

ಡಿಸೆಂಬರ್​ 10 ರಂದು ಐಒಎಗೆ ಚುನಾವಣೆ ಘೋಷಿಸಲಾಗಿದೆ. ಭಾನುವಾರ(ನವೆಂಬರ್​ 27) ನಾಮಪತ್ರ ಸಲ್ಲಿಸುವ ಅಂತಿಮ ದಿನವಾಗಿದೆ.

ಜನವರಿ 6ರಿಂದ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

0

ಜನವರಿ 6ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವು ಪ್ಲಾಸ್ಟಿಕ್ ಮುಕ್ತವಾಗಿರಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ 3ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಪ್ಲಾಸ್ಟಿಕ್ ವಸ್ತುಗಳನ್ನು ದೂರವಿಡುವ ಮೂಲಕ ಇದನ್ನು ಯಶಸ್ವಿಯಾಗಿಸಲು ಸಂಘಟನಾ ಸಮಿತಿ ಶ್ರಮಿಸುತ್ತಿದೆ.

ಪ್ರಕೃತಿಯನ್ನು ಬೆಂಬಲಿಸಲು ಮತ್ತು ದೊಡ್ಡ ಕಾರ್ಯಕ್ರಮಗಳಿಂದ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಮರುಬಳಕೆ ಮಾಡಬಹುದಾದ ಉತ್ಪನ್ನಗಳನ್ನು ಬಳಸಲು ನಿರ್ಧರಿಸಿದೆ.

ಕೋವಿಡ್-19 ಸಾಂಕ್ರಾಮಿಕದಿಂದಾಗಿ ಎರಡು ವರ್ಷಗಳ ಬಳಿಕ ಹಾವೇರಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ.

ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾಗಿದ್ದು, ಎಲ್ಲಾ ಸಂಘಟನಾ ಸಮಿತಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿವೆ.

ಕಾರ್ಯಕ್ರಮವು ಪ್ರಾಸ್ಟಿಕ್ ಮುಕ್ತವಾಗಲಿದೆ ಮತ್ತು ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಕಡಿಮೆ ಮಾಡಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಆಹಾರ ಕೌಂಟರ್‍ಗಳಲ್ಲಿ ನಾವು ಅಡಗೆ ಎಲೆಯಿಂದ ಮಾಡಿದ ಪ್ಲೇಟ್‍ಗಳು, ಚಮಚಗಳು ಮತ್ತು ಕಪ್‍ಗಳನ್ನು ಬಳಸುತ್ತಿದ್ದೇವೆ.

ಈ ಹಿಂದಿನ ಸಮ್ಮೇಳನದಲ್ಲಿ ಆಹಾರವನ್ನು ಪ್ಲಾಸ್ಟಿಕ್ ಪ್ಲೇಟ್‍ಗಳಲ್ಲಿ ನೀಡಲಾಗುತ್ತಿತ್ತು. ಈ ಬಾರಿ ಮರುಬಳಕೆ ಮಾಡಬಹುದಾದ ವಸ್ತುಗಳನ್ನು ನೀಡಲಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

ರಾಜ್ಯ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ನ್ಯಾ. ಶಿವರಾಜ್ ಪಾಟೀಲ್ ನೇಮಕ

0

ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಚಾಲ್ತಿಯಲ್ಲಿರುವಾಗಲೇ ಕರ್ನಾಟಕ ಗಡಿ ಮತ್ತು ‌ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದಿನ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ಎಲ್‌.ಮಂಜುನಾಥ್‌ ಅವರು ನಿಧನರಾದ ಬಳಿಕ ಕಳೆದ ಹತ್ತು ತಿಂಗಳಿಂದ ಈ ಹುದ್ದೆ ಖಾಲಿ ಇತ್ತು. 2018ಕ್ಕೂ ಮುನ್ನ ಮಹಾರಾಷ್ಟ್ರ-ಕರ್ನಾಟಕ ಗಡಿ ವ್ಯಾಜ್ಯದ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಗಡಿ ಆಯೋಗವೊಂದನ್ನು ರಚನೆ ಮಾಡಲಾಗಿತ್ತು.

ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಆಯೋಗಕ್ಕೆ ಜಲವ್ಯಾಜ್ಯಗಳ ವ್ಯಾಪ್ತಿಯನ್ನು ನೀಡಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗ ಎಂದು ಮರು ರಚನೆ ಮಾಡಲಾಯಿತು.