Sunday, February 15, 2026
Sunday, February 15, 2026
Home Blog Page 138

Rotary Shivamogga ಸಮುದಾಯದ ಒಗ್ಗಟ್ಟಿನಿಂದ ಆರ್ಥಿಕ ಅಭಿವೃದ್ಧಿ : ಡಾ. ಎ.ಟಿ.ಪದ್ಮೇಗೌಡ

0

Rotary Shivamogga ಸಮುದಾಯದ ಆರ್ಥಿಕ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈ ಜೋಡಿಸಿದಾಗ ದೇಶ ಅಭಿವೃದ್ಧಿ ಸಾಧ್ಯ ಎಂದು ಡಾ. ಎ.ಟಿ.ಪದ್ಮೇಗೌಡ ಹೇಳಿದರು.

ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಭಾರತ ಹಳ್ಳಿಗಳಿಂದ ಕೂಡಿರುವಂತಹ ದೇಶವಾಗಿದ್ದು, ದೇಶದ ಜನಸಂಖ್ಯೆ 145 ಕೋಟಿ ದಾಟಿದ್ದು, ಪ್ರತಿಯೊಬ್ಬರು ಕೂಡ ಸಮಾಜದಲ್ಲಿ ಮೊಟ್ಟಮೊದಲು ತನ್ನ ಕುಟುಂಬವನ್ನು ನಿರ್ವಹಣೆ ಮಾಡುವುದನ್ನು ಕಲಿತರೆ ಸಮುದಾಯದ ಆರ್ಥಿಕ ಅಭಿವೃದ್ಧಿಗೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರು ಅವಶ್ಯಕತೆಗಿಂತ ಹೆಚ್ಚಾಗಿ ಹಣವನ್ನು ಸಂಪಾದಿಸುತ್ತಿದ್ದಾರೆ. ಆದರೆ ಕೆಲವರು ಹಣವನ್ನು ಸಂಪಾದಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಹಬ್ಬ ಹರಿದಿನಗಳು ಬಂದ ಸಂದರ್ಭದಲ್ಲಿ ಅವಶ್ಯಕತೆಗಿಂತ ಹೆಚ್ಚು ಹಣವನ್ನು ಖರ್ಚು ಮಾಡಿ ಸಾಲಗಾರನಾಗಿ ಜೀವನ ಸಾಗಿಸುತ್ತಾನೆ. ಇದರಿಂದ ಸಮಾಜದ ಮತ್ತು ಸಮುದಾಯದ ಆರ್ಥಿಕ ಅಭಿವೃದ್ಧಿ ಬಹಳ ಕಷ್ಟವಾಗುತ್ತದೆ ಎಂದು ಹೇಳಿದರು.

ಭಾರತೀಯರು ಬೇರೆ ದೇಶಗಳಿಗಿಂತ ವಿಭಿನ್ನ ವೈವಿಧ್ಯತೆಯ ವ್ಯವಸ್ಥೆಯನ್ನು ಹೊಂದಿದ್ದೇವೆ. ಪ್ರತಿಯೊಬ್ಬರೂ ಕೂಡ ಒಗ್ಗಟ್ಟಿನಿಂದ ದುಡಿದಾಗ ಮಾತ್ರ ಸಮುದಾಯ, ಸಮಾಜ ದೇಶ ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ರೋಟರಿ ಪೂರ್ವ ಸಂಸ್ಥೆಯ ಪ್ರತಿಯೊಬ್ಬ ಸದಸ್ಯರು ಸಮಾಜಮುಖಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮುದಾಯವನ್ನು ಬಲಪಡಿಸಬೇಕು ಎಂದು ತಿಳಿಸಿದರು.

Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಧನಂಜಯ.ಬಿ.ಆರ್., ನಿಯೋಜಿತ ಜಿಲ್ಲಾ ಗವರ್ನರ್ ವಸಂತ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡುದಪ್ಪ ಕಸಬಿ, ಚಂದ್ರಹಾಸ ಪಿ ರಾಯ್ಕರ್, ಪರಮೇಶ್ವರ ಶಿಗ್ಗಾವ್, ರವಿಶಂಕರ್ ಬಿ ಎಂ, ಅರುಣ್ ದೀಕ್ಷಿತ್, ವಿಜಯಲಕ್ಷ್ಮೀ ಇತರರಿದ್ದರು.

World Mental Health Day ದೈಹಿಕ ಆರೋಗ್ಯಕ್ಕೆ ನೀಡುವ ಕಾಳಜಿಯನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕಾಗಿರುವುದು ಅವಶ್ಯಕ : ಡಾ. ಕೆ.ಆರ್.ರವೀಶ್

0

World Mental Health Day ದೈಹಿಕ ಆರೋಗ್ಯಕ್ಕೆ ನೀಡುವ ಕಾಳಜಿಯನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕಾಗಿರುವುದು ಅವಶ್ಯಕ ಎಂದು ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಹೇಳಿದರು.

ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆ ಮತ್ತು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬರು ದಿನನಿತ್ಯ ವ್ಯಾಯಾಮದ ಜತೆಯಲ್ಲಿ ಮಾನಸಿಕ ಆರೋಗ್ಯದ ಕಾಳಜಿ ವಹಿಸಲು ಪೂರಕ ಚಟುವಟಿಕೆಗಳನ್ನು ನಡೆಸಬೇಕು. ಮಾನಸಿಕ ಆರೋಗ್ಯ ಅತ್ಯಂತ ಮುಖ್ಯ. ಇಂತಹ ಜಾಗೃತಿ ಕಾರ್ಯಕ್ರಮಗಳು ಮಾನಸಿಕ ಆರೋಗ್ಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಹೆಚ್ಚು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಹರೀಶದೇಲಂತ ಬೆಟ್ಟು ಮಾತನಾಡಿ, ವಿಶ್ವ ಮಾನಸಿಕ ಆರೋಗ್ಯ ದಿನದ ಥೀಮ್ “ವಿಪತ್ತು ಮತ್ತು ದುರಂತದ ತುರ್ತು ಪರಿಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯಕ್ಕೆ ಗಮನ” ಆಗಿದ್ದು, ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯವಿದೆ. ಪ್ರಾರಂಭಿಕ ಹಂತದಲ್ಲಿಯೇ ಮಾನಸಿಕ ಕಾಯಿಲೆಗಳ ಲಕ್ಷಣಗಳನ್ನು ಮತ್ತು ಒತ್ತಡವನ್ನು ಗುರುತಿಸಿ ಸರಿಯಾದ ಆಪ್ತಸಮಾಲೋಚನೆ ಮತ್ತು ಚಿಕಿತ್ಸೆ ಪಡೆಯಬೇಕು. ಇದನ್ನು ಸಾಧ್ಯವಾಗಿಸಲು ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

World Mental Health Day ಕಾಲೇಜಿನ ಡೀನ್ ಡಾ. ವಿನಾಯಕ ಭಟ್ ಮತ್ತು ಪ್ರಾಂಶುಪಾಲ ಡಾ. ಸಿದ್ದಲಿಂಗಪ್ಪ ಸಿಎಂ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಕೋರಿದರು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮನೋವೈದ್ಯೆ ಡಾ. ಕೆ.ಎಸ್.ಶುಭ್ರತಾ, ಡಾ. ಸಾಯಿ ಕೋಮಲ್, ಡಾ. ರಾಗಶ್ರೀ ಮತ್ತು ಆಪ್ತ ಸಮಾಲೋಚಕರಾದ ವಿದ್ಯಾ ಹಾಗೂ ಅಶ್ವಿನಿ ಭಾಗವಹಿಸಿದ್ದರು.

Kateel Ashok Pai Memorial Institute ಯುವಜನರು ಹಾಗೂ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಂರಕ್ಷಣೆ ಅತೀ ಅಗತ್ಯ : ಶ್ರೀ ಮಂಜುನಾಥ ನಾಯಕ್

0

Kateel Ashok Pai Memorial Institute ಅಕ್ಟೋಬರ್ 10ರಂದು ನಗರದ ಪೋಲಿಸ್ ಸಭಾಂಗಣದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯದಿನಾಚರಣೆಯ ಕಾರ್ಯಕ್ರಮಗಳ ಉದ್ಘಾಟನೆಯನ್ನು ನೆರವೇರಿಸಿ ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಶ್ರೀ ಮಂಜುನಾಥ ನಾಯಕ ರವರು ಮಾನಸಿಕ ಆರೋಗ್ಯ ಸಂರಕ್ಷಣೆಯ ಮಹತ್ವದ ಕುರಿತು ಮಾತನಾಡಿದರು.
ಭಾರತದಲ್ಲಿ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಕೇವಲ ಒಂದು ವರ್ಷದಲ್ಲಿ 13,900 ಕ್ಕಿಂತಲೂ ಹೆಚ್ಚು ಯುವಜನರು,ವಿಧ್ಯಾರ್ಥಿಗಳು ಆತ್ಮಹತ್ಯೆಗೆ ಒಳಗಾಗಿರುವುದು ಆತಂಕಕಾರಿ ಎಂದರು. ವಿದ್ಯಾರ್ಥಿಗಳಿಗೆ ತಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸುವ ತರಬೇತಿ ಹಾಗೂ ಬೆಂಬಲದ ಅಗತ್ಯವಿದೆ ಎಂದು ಅವರು ತಿಳಿಸಿದರು. ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಶೈಕ್ಷಣಿಕ ಸಂಸ್ಥೆಗಳು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಪೊಲೀಸ್ ಸಿಬ್ಬಂದಿಗಳಿಗಾಗಿ ವಿಚಾರ ಸಂಕಿರಣ ಏರ್ಪಡಿಸಿರುವುದರ ಕುರಿತು ಮಾತನಾಡಿದ ಪ್ರಧಾನ ನ್ಯಾಯಾಧೀಶರು ಪೊಲೀಸ್ ಸಿಬ್ಬಂದಿ ಗಳು ಸಾರ್ವಜನಿಕರೊಂದಿಗೆ ಎಲ್ಲಾ ತುರ್ತು ಸನ್ನಿವೇಶಗಳಲ್ಲಿ ಉಂಟಾಗ ಬಹುದಾದ ಮಾನಸಿಕ ಸಮಸ್ಯೆಗಳನ್ನು ಗುರುತಿಸ ಬೇಕು. ಮಾತ್ರವಲ್ಲದೆ ತಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು .ತಮ್ಮ ಹಾಗೂ ಇತರರ ಮಾನಸಿಕ ಆರೋಗ್ಯ ನಿರ್ವಹಣೆಯ ಸಂಧರ್ಭದಲ್ಲಿ ಕೇವಲ ಪೊಲೀಸ್ ಎಂದಷ್ಟೇ ಅಲ್ಲದೆ ಮಾನವರಾಗಿ ಮನುಷ್ಯರಂತೆ ನಿರ್ವಹಿಸಬೇಕು ಎಂದು ಕಿವಿ ಮಾತು ಹೇಳಿದರು. ಪೊಲೀಸ್ ಸಿಬ್ಬಂದಿಗಳಿಗೆ ಮಾನಸಿಕ ಆರೋಗ್ಯ ಕುರಿತ ವಿಚಾರ ಸಂಕಿರಣ ಉಪಯುಕ್ತವಾಗಬಲ್ಲದು ಎಂದು ಅವರು ತಿಳಿಸಿದರು. ಜಿಲ್ಲಕಾನುನು ಸೇವಾ ಪ್ರಾಧಿಕಾರವು ಮಾನಸ ಸಂಸ್ಥೆಯ ಸಹಯೋಗದೊಂದಿಗೆ ಮಾನಸಿಕ ಆರೋಗ್ಯ ಕ್ಲಿನಿಕ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
Kateel Ashok Pai Memorial Institute ಇದೇ ಸಂಧರ್ಭದಲ್ಲಿ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜ್ ಹಾಗೂ ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಏರ್ಪಡಿಸಿದ ಮಾನಸಿಕ ಆರೋಗ್ಯ ಜನ ಜಾಗೃತಿ ಜಾಥಾವನ್ನು ಮಾನ್ಯ ಶ್ರೀ ಮಂಜುನಾಥ ನಾಯಕ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂತೋಷ್ ಎಂ ಎಸ್ ರವರು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನಕುಮಾರ್ ರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನಕುಮಾರ್ ಅವರು ಪೊಲೀಸ್ ಸಿಬ್ಬಂದಿಗಳು ತಮ್ಮ ಹಾಗೂ ತಮ್ಮ ಮಾನಸಿಕ ಆರೋಗ್ಯಸಂರಕ್ಷಿಸಿಕೊಳ್ಳ ಬೇಕಾದ ಅಗತ್ಯಗಳನ್ನು ಉದಾಹರಣೆಗಳೊಂದಿಗೆ ತಿಳಿಸಿದರು.
ದಿಕ್ಸೂಚಿ ಭಾಷಣ ಮಾಡಿದ ಮಾನಸ ನರ್ಸಿಂಗ್ ಹೋಮ್ ನ ಮನೋವೈದ್ಯರಾದ ಡಾಕ್ಟರ್ ನವೀನ್ ರವರು ವಿಪತ್ತು ಸನ್ನಿವೇಶಗಳ ಮಾನಸಿಕ ಸ್ಥಿತಿಗತಿಗಳನ್ನು ವಿವರಿಸಿ ಸಾರ್ವಜನಿಕ ಸೇವೆಯಲ್ಲಿ ಇರುವವರ ಜವಾಬ್ದಾರಿ ಹಾಗೂ ಕೌಶಲ್ಯ ಗಳ ಕುರಿತು ಉಲ್ಲೇಖಿಸಿದರು. ಮಾನಸಿಕ ಆರೋಗ್ಯ ಸೇವೆ ಕುಟುಂಬ ಹಾಗೂ ನೆರೆಹೊರೆಯ ಜನರ ಬೆಂಬಲ ಹಾಗೂ ಸಾಂತ್ವನದಿಂದ ಪ್ರಾರಂಭವಾಗುತ್ತದೆ. ಎರಡನೇ ಹಂತ ವಿವಿಧ ಇಲಾಖೆ ಹಾಗೂ ಸಂಸ್ಥೆಗಳದ್ದು. ಮೂರನೆಯ ಹಂತ ಮಾನಸಿಕ ಆರೋಗ್ಯ ತಜ್ಞರದ್ದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಏ ಜಿ ಕಾರಿಯಪ್ಪ, ಶ್ರೀರಮೇಶಕುಮಾರ್,ಮಾನಸ ಸಂಸ್ಥೆ ಆಡಳಿತಾಧಿಕಾರಿ ಪ್ರೊ ರಾಮಚಂದ್ರ ಬಾಳಿಗಾ,ಪ್ರಾಂಶುಪಾಲರಾದ ಸಂಧ್ಯಾ ಕಾವೇರಿ, ಡಾಕ್ಟರ್ ಮಲ್ಲಿಕಾರ್ಜುನ್, ಡಾಕ್ಟರ್ ಅರ್ಚನಾ ಭಟ್, ಡಾಕ್ಟರ್ ಹರಿಹರನ್,ಉಪಸ್ಥಿತರಿದ್ದರು. ಪ್ರಸ್ತಾವಿಕ ನುಡಿಗಳನ್ನಾಡಿದ ಸಂಧ್ಯಾ ಕಾವೇರಿಯವರು ಮಾನಸಿಕ ಆರೋಗ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ 7 ದಿನಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಮಾನಸಿಕ ಆರೋಗ್ಯ ಸಂರಕ್ಷಣೆಯ ಕುರಿತು ಸಾರ್ವಜನಿಕ ಗಮನ ಸೆಳೆಯಲು ದಿನಾಂಕ 11 ರಂದು ಸಿಟಿ ಸೆಂಟರ್ ಮಾಲ್ ನಲ್ಲಿ ಸಂಜೆ 5 ಗಂಟೆಗೆ ನೃತ್ಯ ರೂಪಕ ನಡೆಯಲಿದೆ. ಎರಡು ದಿನಗಳ ಕಾಲ ವೆಬಿನರ್ ನಡೆಯಲಿದೆ. ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಆಪ್ತ ಎಂಬ ಸಮಾಲೋಚನಾ ಕೇಂದ್ರ ಉದ್ಘಾಟನೆ ಆಗಲಿದೆ. ರಸಪ್ರಶ್ನೆ ಹಾಗೂ ವಿಡಿಯೋ ಸ್ಪರ್ಧೆ ನಡೆಯಲಿದೆ. ವಿವಿಧ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ತರಬೇತಿ ಕಾರ್ಯಕ್ರಮ ನಡೆಸಲಾಗುತ್ತದೆ. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಮಾನಸ ನರ್ಸಿಂಗ್ ಹೋಮ್ ನಲ್ಲಿ ವಿಶೇಷ ಮನೋಶಿಕ್ಷಣ ಆಪ್ತ ಸಮಾಲೋಚನೆಯನ್ನು 1 ವಾರಗಳ ಕಾಲ ಉಚಿತವಾಗಿ ನೀಡಲಾಗುತ್ತದೆ. ಸಪ್ತಾಹ ಕಾರ್ಯಕ್ರಮಗಳ ಸಮಾರೋಪವು ದಿನಾಂಕ 17ರಂದು ನಗರದ ಗೋಪಿ ವೃತ್ತದಲ್ಲಿ ಮನೋ ಸಾಮಾಜಿಕ ಸಂರಕ್ಷಣೆಯ ಪ್ರತಿಜ್ಞಾ ವಿಧಿಯ ಮೂಲಕ ನಡೆಯಲಿದೆ . ಸಾಯಂಕಾಲ 5.30 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಶ್ರೀಮತಿ ಸವಿತಾ ನಾಗಭೂಷಣ್ ಅವರು ಪ್ರತಿಜ್ಞಾ ವಿಧಿ ಬೋಧಿಸಲಿದ್ದು , ನ್ಯಾಯಾಧೀಶರಾದ ಶ್ರೀ ಸಂತೋಷ್ ಅವರು, ಡಾಕ್ಟರ್ ರಜನಿ ಪೈ , ರಾಜೇಂದ್ರ ಚೆನ್ನಿ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ ಎಂದರು. ತದ ನಂತರ ಸಂಪನ್ಮೂಲ ವ್ಯಕ್ತಿಗಳಾದ ಮನಶಾಸ್ತ್ರಜ್ಞರಾದ ಶ್ರೀಮತಿ ಶ್ರೀದೇವಿ ಹಾಗೂ ಡಾಕ್ಟರ್ ಶ್ವೇತಾ ರವರು , ಎಂ ಫಿಲ್ ಕ್ಲಿನಿಕಲ್ ಸೈಕಾಲಜಿ ಪ್ರಶಿಕ್ಷಣಾರ್ಥಿಗಲಾದ ದೃಶ್ಯ ಮತ್ತು ಚೇತನ ಒತ್ತಡ ನಿರ್ವಹಣೆ ಕುರಿತು ಅಧಿವೇಶನಗಳನ್ನು ನಡೆಸಿದರು.
ಶ್ರೀಮತಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು.ಡಾಕ್ಟರ್ ಅರ್ಚನಾ ಸ್ವಾಗತಿಸಿ, ಡಾಕ್ಟರ್ ಹರಿಹರನ್ ವಂದಿಸಿದರು.ಎಂ ಎಸ್ ಸಿ ಕ್ಲಿನಿಕಲ್ ಸೈಕಾಲಜಿ ವಿಧ್ಯಾರ್ಥಿಗಳು ಪ್ರಾರ್ಥನೆಯನ್ನು ಹಾಡಿದರು.ಸುಮಾರು 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

JCI Shivamogga ರಾಜ್ಯಮಟ್ಟದ ಜೆಸಿಐ ವಲಯ ಸಮ್ಮೇಳನ 2025

0

JCI Shivamogga ದಿನಾಂಕ 11, 12 ಶನಿವಾರ ಮತ್ತು ಭಾನುವಾರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಜೆಸಿಐ ಭಾರತದ ವಲಯ 24ರ ವಲಯ-ಸಮ್ಮೇಳನ 2025 ನಡೆಯುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಜೆಸಿಐ ಸದಸ್ಯರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಈ ಸಮ್ಮೇಳನದ ಅಧ್ಯಕ್ಷತೆ ಜೆಸಿ ಗೌರೀಶ್ ಭಾರ್ಗವ್ ವಲಯ ಅಧ್ಯಕ್ಷ, ಮುಖ್ಯ ಅತಿಥಿಗಳಾಗಿ ಮಂಜುನಾಥ್ ಭಂಡಾರಿ ಎಂ.ಎಲ್.ಸಿ, ಉದ್ಘಾಟನೆ ಕೆ ಎಸ್ ಈಶ್ವರಪ್ಪ ಮಾಜಿ ಉಪ ಮುಖ್ಯಮಂತ್ರಿ, ಮುಖ್ಯ ಅತಿಥಿಗಳಾಗಿ ಬಿ.ವೈ ರಾಘವೇಂದ್ರ ಸಂಸದರು, ಕಾಂತೇಶ್ ಕೆ.ಇ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಮಹಾಬಲೇಶ್ವರ ಉದ್ಯಮಿ, ಮುಖ್ಯ ಭಾಷಣಕಾರರಾಗಿ ಓಂ ಗಣೇಶ್ ಉಪ್ಪುಂದ ನಟ, ಸಾಹಿತಿ ಆಗಮಿಸುತ್ತಿದ್ದಾರೆ, ಹಾಗೂ ಜೆಸಿ ವರ್ಷ ಮೆನನ್, ಜೆಸಿ ಚನ್ನವೀರೇಶ, ಜೆಸಿ ಪ್ರಭು ಹಲಗೇರಿ ಉಪಸ್ಥಿತರಿರುತ್ತಾರೆ.
ಸಮ್ಮೇಳನದಲ್ಲಿ ಮೊದಲ ದಿನ ಉದ್ಘಾಟನಾ ಕಾರ್ಯಕ್ರಮ, ವಲಯ ಅಧ್ಯಕ್ಷರ ಮೆರವಣಿಗೆ, ಪರಿಣಾಮಕಾರಿ ಭಾಷಣ ಸ್ಪರ್ಧೆ, ಟ್ಯಾಲೆಂಟ್ ಹಂಟ್, ಅವಾರ್ಡ್ ನೈಟ್, ನಡೆಯಲಿದೆ. JCI Shivamogga ಎರಡನೇ ದಿನ ವಲಯ ಅಧ್ಯಕ್ಷರ ವರದಿ ಒಪ್ಪಿಸುವುದು, 2026 ರ ವಲಯ ಮಂಡಳಿಯ ಚುನಾವಣೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದಿಂದ ಸಾವಿರಾರು ಜನ ಜೆಸಿಐ ಸದಸ್ಯರು ಭಾಗವಹಿಸುತ್ತಿದ್ದಾರೆ.
ಜೆಸಿ ನವೀನ್ ಕುಮಾರ್ ಎನ್ ವಿ, ಪೂರ್ವ ವಲಯ ಅಧಿಕಾರಿ, ರಾಜ್ಯದ್ಯಂತ ವಲಯ ಸಮ್ಮೇಳನಕ್ಕೆ ಆಗಮಿಸುತ್ತಿರುವ ಜೆಸಿ ಮಿತ್ರರಿಗೆ ಸ್ವಾಗತ ಕೋರುತ್ತಿದ್ದಾರೆ. ಈ ಮೂಲಕ ಮಾಧ್ಯಮ ಮಿತ್ರರಿಗೂ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮ ಯಶಸ್ವಿ ಮಾಡಿಕೊಡಲು ಮನವಿ ಮಾಡಿಕೊಳ್ಳುತ್ತಿದ್ದಾರೆ.

Children’s Day ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

0

Children’s Day ಮಕ್ಕಳ ದಿನಾಚರಣೆ-2025 ರ ಅಂಗವಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಸಾಹಸ ಪ್ರಕರಣವು ದಿ: 01/08/2024 ರಿಂದ 31/07/2025 ರೊಳಗೆ ನಡೆದಿರಬೇಕು. ಧೈರ್ಯ ಸಾಹಸ ಪ್ರದರ್ಶಿಸಿದ ಕುರಿತು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು ಮತ್ತು ಈ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ಪರಿಶೀಲನಾ ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
Children’s Day ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದಿ: 27/10/2025 ರೊಳಗಾಗಿ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-294414 ನ್ನು ಸಂಪರ್ಕಿಸುವುದು.

Shimoga Institute of Medical Sciences ಸಿಮ್ಸ್; ಬೋಧಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

0

Shimoga Institute of Medical Sciences ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳನ್ನು ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅನಾಟಮಿ- 02, ಪಿಸಿಯೋಲಜಿ-02, ಬಯೋಮಿಸ್ಟಿç-02, ಫಾರ್ಮಕಾಲಜಿ-01, ಮೈಕ್ರೋಲಜಿ-01, ಜನರಲ್ ಮೆಡಿಸಿನ್-04, ಜನರಲ್ ಸರ್ಜರಿ-4, ಆರ್ಥೋಪೆಡಿಕ್-2, ಆಪ್ತಮೊಲಜಿ-2, ಇ.ಎನ್.ಟಿ.-2, ಓಬಿಜಿ-1, ಅನಸ್ತೇಷಿಯ-4, ರೇಡಿಯೋ ಡಯಾಗ್ನೋಸಿಸ್-6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅ. 15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸಿಮ್ಸ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https:sims.karnataka.gov.in ನ್ನು ಸಂಪರ್ಕಿಸುವುದು.

TMES Ayurvedic Medical College ವೈದ್ಯಕೀಯ ಪದವಿಯಲ್ಲಿ ಎರಡನೇ ಟಾಪರ್ ಆಗಿ ಲಲಿತೇಶ್ವರಿ ಕೆ.ಎಸ್.

0

TMES Ayurvedic Medical College ಶಿವಮೊಗ್ಗ ತಾಲೂಕಿನ ನಿದಿಗೆ ಡೈರಿ ಸಮೀಪವಿರುವ ಪ್ರತಿಷ್ಠಿತ ಟಿಎಂಎಇಎಸ್ ಆಯುರ್ವೇದ ವೈದ್ಯಕೀಯ ಶಿಕ್ಷಣ ಕಾಲೇಜಿನ ೨೦೨೦-೨೧ನೇ ಬ್ಯಾಚ್‌ನ ಟಾಪರ್ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಎರಡನೇ ಟಾಪರ್ ಆಗಿ ಲಲಿತೇಶ್ವರಿ ಕೆ.ಎಸ್. ಅವರು ಉತ್ತೀರ್ಣರಾಗಿ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
TMES Ayurvedic Medical College ಈ ಪ್ರತಿಭಾನ್ವಿತೆಯು ನಗರದ ಖ್ಯಾತ ಪತ್ರಿಕಾ ಛಾಯಾಗ್ರಾಹಕರಾದ ಕೆ.ಆರ್. ಸೋಮನಾಥ್ ಮತ್ತು ಉಷಾ ದಂಪತಿಗಳ ಪುತ್ರಿ. ಇವರ ಸಾಧನೆಗೆ ಸಂಸದ ಬಿ.ವೈö. ರಾಘವೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪö, ಶಾಸಕರಾದ ಚನ್ನಬಸಪ್ಪ, ರಾಷ್ಟç ಬಳಗದ ಯುವ ಮುಖಂಡ ಕೆ.ಇ. ಕಾಂತೇಶ್ ಇನ್ನಿತರರು ಅಭಿನಂದಿಸಿದ್ದಾರೆ.

Shivamogga Bahumukhi ಬಹುಮುಖಿ ಆಯೋಜನೆ ಮೈ -ಸೊರ್ -ಸ್ಟೋರಿ ಪುಸ್ತಕ ಕುರಿತು ಸಂವಾದ

0

Shivamogga Bahumukhi ಶಿವಮೊಗ್ಗ ನಗರದ ಬಹುಮುಖಿಯ 60ನೇ ಕಾರ್ಯಕ್ರಮವಾಗಿ, ವಿಶ್ರಾಂತ ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರ ಬಹುಚರ್ಚಿತ ಮೈ- ಸೊರ್ – ಸ್ಟೋರಿ ಕೃತಿ ಕುರಿತು ಸಂವಾದ ಆಯೋಜಿಸಲಾಗಿದೆ..

ಅ. 10ರ ಶುಕ್ರವಾರ ಸಂಜೆ 05.30ಕ್ಕೆ ಫ್ರೆಂಡ್ಸ್ ಸೆಂಟರ್ ಹಾಲ್ (ವಾಣಿಜ್ಯ ಕಾಲೇಜು, ATNCC ಆವರಣ)ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿಕೃತಿಯನ್ನು ಕುರಿತು ಪೂರ್ವ ವಲಯ ಐ ಜಿ ಪಿ ರವಿಕಾಂತೆ ಗೌಡ ಅವರು ಮಾತನಾಡಲಿದ್ದಾರೆ…

ಜಿಲ್ಲಾ ಪೊಲೀಸ್ ಅದೀಕ್ಷಕ ರಾದ ಮಿಥುನ್ ಕುಮಾರ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾಧ್ಯಕ್ಷ ಕೆ. ವಿ. ಶಿವಕುಮಾರ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಾಘವೇಂದ್ರ ಉಪಸ್ಥಿತರಿರಲಿದ್ದಾರೆ…

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಶಾಖೆ ಮತ್ತು ಶಿವಮೊಗ್ಗ ಬಾರ್ ಅಸೋಸಿಯೇಶನ್ ಈ ಸಂವಾದ ಕಾರ್ಯಕ್ರಮಕ್ಕೆ ಕೈ ಜೋಡಿಸಿವೆ..

Shivamogga Bahumukhi ಕಾರ್ಯಕ್ರಮದಲ್ಲಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳುವಂತೆ ವಿನಂತಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ
9449284495, 9845014229,
95380 20367ರಲ್ಲಿ ಸಂಪರ್ಕಿಸಬಹುದು…

Adichunchanagiri Mahasansthan Mutt ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆಯಲ್ಲಿ – ಕುಶಾಲ್ ಎಂ.

0

Adichunchanagiri Mahasansthan Mutt ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರ ಆಶ್ರಯದಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮತ್ತು ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾನ್ವಿತ ಕ್ರೀಡಾಪಟು ಕುಶಾಲ್ ಎಂ. ತಾಲೂಕು ಮತ್ತು ಜಿಲ್ಲಾಮಟ್ಟದ 45 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮ ಸ್ಪರ್ಧೆಯನ್ನು ನೀಡಿ,ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾನೆ.
Adichunchanagiri Mahasansthan Mutt ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಈ ಪ್ರತಿಭೆಯು ಕ್ರೀಡೆಯ ಜೊತೆಗೆ, ಓದಿನಲ್ಲಿಯೂ ಪ್ರತಿಭಾನ್ವಿತನಾಗಿರುತ್ತಾನೆ.ಗುರುಪುರದಲ್ಲಿ ವಾಸವಿರುವ ಮೋಹನ್ ಕೆ. ಎಸ್. ಮತ್ತು ಉಮಾದೇವಿ ದಂಪತಿಗಳ ಪುತ್ರನಾಗಿರುತ್ತಾನೆ.
ಈ ಕ್ರೀಡಾ ಪ್ರತಿಭೆಯ ಮುಂದಿನ ಕ್ರೀಡಾ ಜೀವನ ಯಶಶ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Prime Minister’s Relief Fund ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ತಿಂಗಳ ಪಿಂಚಣಿ ಸಲ್ಲಿಕೆ

0

Prime Minister’s Relief Fund ಶಹಾಪುರ ಶಿಕ್ಷಣ ಸೇವಾ ಸಹಕಾರಿ ನಿತ್ಯ ಶೈಕ್ಷಣಿಕ ಸಹಕಾರ ಸಂಘದ ಸೋಮಶೇಖರಯ್ಯ ಹಿರೇಮಠ ಅವರು ರಾಜ್ಯ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಮಳೆಗಾಲದ ಅಬ್ಬರದಿಂದಾಗಿ ಜನರು ಅನುಭವಿಸುತ್ತಿರುವ ಸಂಕಷ್ಟವನ್ನು ಮನಗಂಡು, ತಮ್ಮ ಮಾಸಿಕ ವೇತನವಾದ ರೂ. ೪೨,೩೨೭ ಅನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.
ಮಳೆಗಾಲದ ಹಾವಳಿಯಿಂದ ತತ್ತರಿಸಿದ ಜನತೆಗೆ ನೆರವಾಗುವ ಉದ್ದೇಶದಿಂದ ಅವರು ಈ ಮಾನವೀಯ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಸಾಮಾಜಿಕ ಸೇವಾ ಮನೋಭಾವವನ್ನು ಸಹೋದ್ಯೋಗಿಗಳು ಮತ್ತು ಸ್ಥಳೀಯರು ಶ್ಲಾಘಿಸಿದ್ದಾರೆ.