Sunday, February 15, 2026
Sunday, February 15, 2026
Home Blog Page 140

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

0

Canara Bank ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 12ನೇ ತರಗತಿ ಉತ್ತೀರ್ಣರಾಗಿರಬೇಕು.

ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು

Canara Bank ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

45 ದಿನಗಳ ಕಂಪ್ಯೂಟರ್ ಡೆಸ್ಕ್ ಟಾಪ್ ಪಬ್ಲಿಕೇಶನ್ ತರಬೇತಿಯು
13/10/2025 ರಿಂದ ಪ್ರಾರಂಭವಾಗಲಿದೆ.
ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು – 577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8722384541, 9164411580, 8105378735 9449371579, 9481955721,


ಇಲ್ಲಿ ಸಂಪರ್ಕಿಸಬಹುದಾಗಿದೆ.

jawahar navodaya vidyalaya ನವೋದಯ ಪ್ರವೇಶ ಪರೀಕ್ಷೆ ಅವಧಿ ವಿಸ್ತರಣೆ

0

jawahar navodaya vidyalaya ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ 9 ಮತ್ತು 11 ನೇ ತರಗತಿ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಅ.21 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯ ದಿನಾಂಕ; 07/02/2026.
ಅರ್ಹ 9 ನೇ ತರಗತಿ ವಿದ್ಯಾರ್ಥಿಗಳು https://cbseitms.nic.in/2025/nvsix_9 ಹಾಗೂ ಅರ್ಹ 11 ನೇ ತರಗತಿ ವಿದ್ಯಾರ್ಥಿಗಳು https://cbseitms.nic.in/2025/nvsxi_11 ಈ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸುವಂತೆ ಪ್ರಾಚಾರ್ಯರು ತಿಳಿಸಿದ್ದಾರೆ.

District Child Protection Units ಬೇಡವಾದ ನವಜಾತ ಶಿಶು ಕಂಡುಬಂದಲ್ಲಿ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

0

District Child Protection Units ಬೇಡವಾದ ಮತ್ತು ಸಾರ್ವಜನಿಕ ಸ್ಥಳದಲ್ಲಿ ನವಜಾತ ಶಿಶು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಯಾವುದೇ ಕಾರಣದಿಂದ ತಮಗೆ ಜನಿಸಿದ ನವಜಾತ ಶಿಶುಗಳು, ಅನಾಥ, ಪರಿತ್ಯಕ್ತ ಮಗುವು ತಮಗೆ ಬೇಡವಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಿದರೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ಸ್ವೀಕರಿಸಿ, ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲು ಮಾಡುತ್ತಾರೆ.
District Child Protection Units ಇಲ್ಲವೇ ಬಳ್ಳಾರಿ ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಇಲ್ಲಿಗೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಈ ಪ್ರಕ್ರಿಯೆಯಲ್ಲಿ ನವಜಾತ ಮಗುವಿನ ತಾಯಿ/ಪೋಷಕರಿಗೆ ಯಾವುದೇ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹ ಯಾವುದೇ ಭಯ ಆತಂಕವಿಲ್ಲದೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಬೇಡವಾದ ಮಕ್ಕಳನ್ನು ಒಪ್ಪಿಸಬೇಕು. ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಕಸದ ಬುಟ್ಟಿಯಲ್ಲಿ, ರಸ್ತೆ ಬದಿಯಲ್ಲಿ, ತಿಪ್ಪೆ ಗುಂಡಿಯಲ್ಲಿ ಹಾಕುವುದರ ಮೂಲಕ ಮಕ್ಕಳ ಸಾವಿಗೆ ಕಾರಣರಾಗಬಾರದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

JCI Shivamogga ಸಾರ್ಥಕ ಸೇವೆ ಸಲ್ಲಿಸುವವರನ್ನು ಸನ್ಮಾನಿಸುವುದು ಸಂಘ ಸಂಸ್ಥೆಗಳ ಕರ್ತವ್ಯ

0

JCI Shivamogga ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಗಣ್ಯರನ್ನು ಸನ್ಮಾನಿಸುವುದು ಸಂಘ ಸಂಸ್ಥೆಗಳ ಆದ್ಯ ಕರ್ತವ್ಯ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ಗಣೇಶ್ ಹೇಳಿದರು.
ಜೆಸಿಐ ಸಹ್ಯಾದ್ರಿ ಘಟಕದ ವತಿಯಿಂದ ಜೆಸಿ ಸಪ್ತಾಹದ ಅಂಗವಾಗಿ ಶ್ರೀಧಾತ್ರಿ ಭವನದಲ್ಲಿ ಹಮ್ಮಿಕೊಳ್ಳಲಾದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ಜೆಸಿಐ ಸಂಸ್ಥೆ ವತಿಯಿಂದ ಪ್ರತಿ ವರ್ಷ ವಿವಿಧ ಇಲಾಖೆಗಳಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಉದ್ಯೋಗಿಗಳಿಗೆ ಹಾಗೂ ಕಾರ್ಮಿಕರಿಗೆ ಕೊಡುವ ವಿಶೇಷ ಪ್ರಶಸ್ತಿ ನೀಡಲಾಗುತ್ತದೆ ಎಂದು ತಿಳಿಸಿದರು.
ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಹಾಗೂ ಬಿ ಟೂ ಬಿ ಪ್ರಶಸ್ತಿಗೆ ಭಾಜನರಾದ ನ್ಯಾನೋ ಟೆಕ್ ಫೋಟೋ ಸ್ಟುಡಿಯೋದ ಮಾಲೀಕ ವಿಜಯಕುಮಾರ್, ಸೇವಾಲಾಲ್ ಎಣ್ಣೆ ಗಾಣದ ಮಾಲೀಕ ಸಂತೋಷ್, ಪೋಸ್ಟ್ ಆಫೀಸಿನಲ್ಲಿ ಪೋಸ್ಟ್ ಮಾರ್ಕೆಟಿಂಗ್ ಹೆಡ್ ಆಶಾ ಹಾಗೂ ಪೋಸ್ಟ್ ವುಮನ್ ಆಗಿ 20 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಪೂರ್ಣಿಮ ಗುಜ್ಜಾರ್ ಅವರ ಸೇವೆ ಗುರುತಿಸಿ ವಿಶೇಷ ಪ್ರಶಸ್ತಿ ನೀಡಲಾಯಿತು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ವೃತ್ತಿಯಲ್ಲಿ ವಿಶೇಷವಾಗಿ ಸಾರ್ಥಕ ಸೇವೆ ಸಲ್ಲಿಸುವುದರ ಜೊತೆಗೆ ಸಮಾಜಕ್ಕೆ ಸೇವೆ ಸಲ್ಲಿಸಿದ ಮಹನೀಯರನ್ನು ಸನ್ಮಾನಿಸಿದರೆ ಸಂಸ್ಥೆಯ ಗೌರವ ಹೆಚ್ಚುತ್ತದೆ ಎಂದು ಹೇಳಿದರು.
ಸನ್ಮಾನಿತರಾದ ವಿಜಯಕುಮಾರ್ ಮಾತನಾಡಿ, ನಮ್ಮ ವೃತ್ತಿ ಸೇವೆಯನ್ನು ಗುರುತಿಸಿ ನೀಡಿದಂತಹ ಶ್ರೇಷ್ಠ ಪ್ರಶಸ್ತಿ ನಮಗೆ ಸಂತಸ ತಂದಿದೆ ಎಂದು ಹೇಳಿದರು.
JCI Shivamogga ಜೆಸಿಐ ವಲಯ ಉಪಾಧ್ಯಕ್ಷ ಬೇಸಿಗೆರೆ ಮಾತನಾಡಿ, ವೃತ್ತಿಯ ಜೊತೆಗೆ ನಮ್ಮ ಒಳ್ಳೆಯ ಪ್ರವೃತ್ತಿಯು ಬಹಳ ಮುಖ್ಯ. ಸಮಾಜದಲ್ಲಿ ನಮ್ಮ ವೃತ್ತಿಯಲ್ಲಿ ಸಾರ್ಥಕ ಸೇವೆ ಜೊತೆಗೆ ಮನುಕುಲದ ಸೇವೆಯು ಮುಖ್ಯ ಎಂದು ತಿಳಿಸಿದರು.
ಜೆಸಿಐ ಸಂಸ್ಥೆಯ ಪ್ರಮುಖರಾದ ಮಹದೇವಸ್ವಾಮಿ, ಸತೀಶ್ ಚಂದ್ರ, ಇನ್ನರ್ ವೀಲ್ ಸಂಸ್ಥೆ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ವೀಣಾ ಕಿಶೋರ್, ಹರೀಶ್, ಕರುಣಾಕರ್, ಶಿಲ್ಪ, ಸುಪ್ರಿಯಾ, ಉಮಾ, ಸಂಧ್ಯಾ ಇತರರಿದ್ದರು. ನಂತರ ಸದಸ್ಯರಿಂದ ಹಳೆಯ ಚಿತ್ರಗೀತೆಗಳ ಕಾರ್ಯಕ್ರಮ ಸವಿನೆನಪು ನಡೆಯಿತು.

DC Shivamogga ಸಮೀಕ್ಷೆಗೆ ಒಳಗೊಳ್ಳಲು ತಾಲ್ಲೂಕಿನಾದ್ಯಾಂತ ಸಹಾಯವಾಣಿ ತೆರೆಯಲಾಗಿದೆ: ಡಿಸಿ ಗುರುದತ್ತ ಹೆಗಡೆ

0

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವು ಪ್ರಗತಿಯಲಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಶೇ.85 ರಷ್ಟು ಸಮೀಕ್ಷಾ ಕಾರ್ಯವು ಪೂರ್ಣಗೊಂಡಿದೆ.
ರಾಜ್ಯದ ಸರ್ಕಾರದ ಆದೇಶದಂತೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು, ಇನ್ನೂ ಹಲವು ಕುಟುಂಬಗಳು ಸಮೀಕ್ಷೆಗೆ ಒಳಪಟ್ಟಿರುವುದಿಲ್ಲ ಹಾಗೂ ಸಮೀಕ್ಷೆಗೆ ಒಳಪಟ್ಟಿರುವ ಮನೆಗಳಲ್ಲಿ ಕುಟುಂಬದ ಸದಸ್ಯರು ಸಹಿತ ಹೊರಗೆ ಉಳಿದಿರುವುದು ಕಂಡುಬಂದಿದೆ. ಹಾಗಾಗಿ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಸಹಾಯವಾಣಿಯನ್ನು ತೆರೆಯಲಾಗಿದೆ.
DC Shivamogga ಆಯಾ ತಾಲ್ಲೂಕಿಗೆ ಸಂಬಂಧಿಸಿದ ದೂರವಾಣಿ ಸಂಖ್ಯೆ: ಶಿವಮೊಗ್ಗ-08182-279312, ಭದ್ರಾವತಿ-8904325166, ಶಿಕಾರಿಪುರ-7795352158, ಸಾಗರ-08183-298014, ಸೊರಬ-9611097690, ತೀರ್ಥಹಳ್ಳಿ-9901088210/9481075115, ಹೊಸನಗರ-9741621135 ಗಳನ್ನು ಸಂಪರ್ಕಿಸಿ ತಮ್ಮ ವಾಸ ಸ್ಥಳದ ವಿವರವನ್ನು ನೀಡಿದಲ್ಲಿ ಗಣತಿದಾರರು ತಮ್ಮ ಮನೆಗೆ ಬಂದು ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

CM Siddharamaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ

0

CM Siddharamaiah ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು.

CM Siddharamaiah ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ರಹೀಂ ಖಾನ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Karnataka Government Employees Association ಸರ್ಕಾರಿ ನೌಕರರ ಸಹಕಾರ ಸಂಘದ ಮಾಜಿ ನಿರ್ದೇಶಕರಾಗಿದ್ದ ವಿ.ಲಕ್ಷ್ಮಣ್ ಅಪಘಾತದಲ್ಲಿ ನಿಧನ

0

Karnataka Government Employees Association ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕರು ಹಾಗೂ ಸರ್ಕಾರಿ ನೌಕರರ ಸಹಕಾರ ಸಂಘದ ಮಾಜಿ ನಿರ್ದೇಶಕರಾಗಿದ್ದ ವಿ. ಲಕ್ಷ್ಮಣ್ ತರೀಕೆರೆಯಿಂದ ವಾಪಾಸ್ ಬರುವಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

Karnataka Government Employees Association ಸದಾ ಹಸನ್ಮುಖಿ ಯಾಗಿ ಲವಲವಿಕೆಯಿಂದ ಇರುತ್ತಿದ್ದ ವಿ. ಲಕ್ಷ್ಮಣ್ ಕುಟುಂಬದವರಿಗೆ ಅವರ
ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಹಾಗೂ ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ನೌಕರರ ಸಂಘದ ರಾಜ್ಯಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ಜಿಲ್ಲಾ ಘಟಕದ ಅಧ್ಯಕ್ಷ ಆರ್. ಮೋಹನ್ ಕುಮಾರ್ ಅವರು ಪ್ರಾರ್ಥಿಸಿದ್ದಾರೆ.

Kannada Book Authority ತುಂಗಾ ಮಹಾವಿದ್ಯಾಲಯ ಹಾಗೂ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ನನ್ನ ಮೆಚ್ಚಿನ ಪುಸ್ತಕ ” ಕಾರ್ಯಕ್ರಮ

0

Kannada Book Authority ಕನ್ನಡ ಪುಸ್ತಕ ಪ್ರಾಧಿಕಾರದ ನೇತೃತ್ವದಲ್ಲಿ ತೀರ್ಥಹಳ್ಳಿಯ ತುಂಗಾ ಮಹಾವಿದ್ಯಾಲಯ ಹಾಗೂ ಶಿಕಾರಿಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ನನ್ನ ಮೆಚ್ಚಿನ ಪುಸ್ತಕ ” ಕಾರ್ಯಕ್ರಮವು ಆಯಾ ಕಾಲೇಜಿನ ಪ್ರಾಂಶುಪಾಲರು ಹಾಗೂ ಪ್ರಾಧ್ತಾಪಕರ ಸಹಕಾರದೊಂದಿಗೆ ಅರ್ಥಪೂರ್ಣ ವಾಗಿ ಜರುಗಿತು. ವಿದ್ಯಾರ್ಥಿಗಳು ತಮ್ಮ ಇಷ್ಟದ ಲೇಖಕ ಲೇಖಕಿಯರ ಒಂದು ಕೃತಿಯನ್ನು ಆಯ್ಸುಕೊಂಡು…ಓದಿಕೊಂಡು ಬಂದು ಆ‌ ಕೃತಿಯ ಬಗ್ಗೆ ತಮ್ಮ ಗ್ರಹಿಕೆ,ವಿಮರ್ಶೆ ಮೆಚ್ಚುಗೆ ಎಲ್ಲವನ್ನು ಮಂಡಿಸಿದರು. Kannada Book Authority ಬಹುತೇಕ ಮಕ್ಕಳ ತಯಾರಿಯಂತೂ ಶ್ರಮ, ಶ್ರದ್ದೆ ಅವರ‌ಮಾತುಗಳಲ್ಲಿ ವ್ಯಕ್ತವಾಗುತಿತ್ತು. ವಿವೇಚನೆಯಿಂದ ಮಕ್ಕಳು ಪುಸ್ತಕವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂಬುದು ಆಹ್ವಾನ ಪತ್ರಿಕೆಯಲ್ಲಿ ಆಯ್ಕೆ ಮಾಡಿಕೊಂಡ ಪುಸ್ತಕ ಪಟ್ಟಿ ಓದಿದರೆ ಯಾರಿಗೂ ತಿಳಿವಂತಿದೆ… ಕುವೆಂಪು, ಶಿವರಾಮಕಾರಂತ, ತೇಜಸ್ವಿ, ದೇವನೂರು ಅವರ ಪುಸ್ತಕಗಳ ಬಗೆಗೆ ಮಕ್ಕಳ ವಿಶ್ಲೇಷಣಾಭರಿತ ಮಾತುಗಳನ್ನು ಕೇಳುವಂತಾಗಿದ್ದು, ವಿಶೇಷವಾಗಿತ್ತು.

ಸಾಮಾನ್ಯ, ಎಸ್‌ಸಿ/ಎಸ್‌ಟಿ ರೈತರಿಗೆ ಎಎಂಸಿ ವಿತರಣೆ ಕಾರ್ಯಕ್ರಮ ಆಯೋಜನೆ

0

National Horticulture Mission 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ “ಸಮಗ್ರ ಪೋಷಕಾಂಶ ನಿರ್ವಹಣೆ ಹಾಗೂ ಸಮಗ್ರ ರೋಗ/ಕೀಟ ನಿಯಂತ್ರಣ” ಕಾರ್ಯಕ್ರಮದಡಿ ಜೈವಿಕ ಗೊಬ್ಬರವಾದ ಅರ್ಕಾ ಮೈಕ್ರೋಬಿಯಲ್ ಕನ್ಸಾರ್ಷಿಯಮ್ (ಎಎಂಸಿ) ಪರಿಕರವನ್ನು ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಹ ರೈತರಿಂದ ನೋಂದಣಿ ಆಹ್ವಾನಿಸಿದೆ.
ಆಸಕ್ತ ರೈತರು ಪಹಣಿ, ಆಧಾರ ಮತ್ತು ಬ್ಯಾಂಕ್ ಪಾಸ್‌ಬುಕ್, ಎಸ್‌ಸಿ/ಎಸ್‌ಟಿ ರೈತರು ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ನಕಲುಗಳೊಂದಿಗೆ ಸಹಾಯಕ ತೋಟಗಾರಿಕೆ ಕಚೇರಿಯನ್ನು ಸಂಪರ್ಕಿಸಿ.
National Horticulture Mission ಹೆಚ್ಚಿನ ಮಾಹಿತಿಗಾಗಿ ದೂ,ಸಂ: ಕಸಬಾ ಹೋಬಳಿಯ ಅಧಿಕಾರಿ ಪ್ರಿಯಾಂಕ-9113812090, ಅಂಜನಾಪುರ ಹೋಬಳಿಯ ಅಧಿಕಾರಿ ದೊರೆರಾಜ್-8861994178, ಉಡುಗಣಿ ಹೋಬಳಿಯ ಅಧಿಕಾರಿ ಅಶೋಕ ಎಂ.ಸಿ-9108548454, ಹೊಸೂರು ಹೋಬಳಿಯ ಅಧಿಕಾರಿ ಶರತ್-6363095898, ತಾಳಗುಂದ ಹೋಬಳಿಯ ಅಧಿಕಾರಿ ರುದ್ರೇಶ್-7975515575 ಗೆ ಸಂಪರ್ಕಿಸಬಹುದೆAದು ಶಿಕಾರಿಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.

IMA Shivamogga ಸೆರೆಬ್ರಲ್ ಪಾಲ್ಸಿಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಚಿಕಿತ್ಸೆಗೆ ಬಹಳ ಮುಖ್ಯ : ಡಾ. ಯತೀಶ್

0

IMA Shivamogga ಸೆರೆಬ್ರಲ್ ಪಾಲ್ಸಿಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚುವುದು ಚಿಕಿತ್ಸೆಗೆ ಬಹಳ ಮುಖ್ಯ ಎಂದು ಭಾರತೀಯ ಮಕ್ಕಳ ಅಕಾಡೆಮಿ ಶಿವಮೊಗ್ಗ ಅಧ್ಯಕ್ಷ ಡಾ. ಯತೀಶ್ ಹೇಳಿದರು.

ಐಎಂಎ ಶಿವಮೊಗ್ಗ ವತಿಯಿಂದ ಭಾರತೀಯ ಮಕ್ಕಳ ಸಂಘದ ಸಹಯೋಗದಲ್ಲಿ ಧೀಮಹಿ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಸೆರೆಬ್ರಲ್ ಪಾಲ್ಸಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಸೆರೆಬ್ರಲ್ ಪಾಲ್ಸಿ ಲಕ್ಷಣಗಳನ್ನು ನಿಯಂತ್ರಿಸಲು ಹಾಗೂ ಜೀವನ ಗುಣಮಟ್ಟವನ್ನು ಸುಧಾರಿಸಲು ಬದಲಾವಣೆಗಳನ್ನು ತರಬಹುದಾಗಿದೆ ಎಂದು ತಿಳಿಸಿದರು.

ಸೆರೆಬ್ರಲ್ ಪಾಲ್ಸಿಯೊಂದಿಗೆ ವಾಸಿಸುವವರ ವೈವಿಧ್ಯಮಯ ಅನುಭವಗಳನ್ನು ಗುರುತಿಸಿ ಮತ್ತು ಅವರು ಅಭಿವೃದ್ಧಿ ಹೊಂದಲು ಅಧಿಕಾರ ನೀಡುವ ಮೂಲಕ ಹೆಚ್ಚು ಒಳಗೊಳ್ಳುವ ಮತ್ತು ಸಮಾನವಾದ ಜಗತ್ತನ್ನು ಸೃಷ್ಟಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸೆರೆಬ್ರಲ್ ಪಾಲ್ಸಿಗೆ ಸಂಬಂಧಿಸಿದ ಸಮಸ್ಯೆಗಳು, ಫಿಸಿಯೋಥೆರಪಿ ಮತ್ತು ತರಬೇತಿಯಂತಹ ವಿಷಯಗಳು ಕಾರ್ಯಕ್ಷಮತೆಯನ್ನು ಹೇಗೆ ಸುಧಾರಿಸಬಹುದು ಎಂಬುದರ ಕುರಿತು ವಿವರಿಸಿದರು.

ಐಎಂಎ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಮಾತನಾಡಿ, ಪೋಷಕರು ಸೆರೆಬ್ರಲ್ ಪಾಲ್ಸಿ ಎಂದಾಕ್ಷಣ ಹೆದರದೇ, ಒತ್ತಡಕ್ಕೆ ಒಳಗಾಗದೇ ಮಗುವಿಗೆ ತರಬೇತಿ ನೀಡುವುದು ತುಂಬಾ ಅಗತ್ಯ. ವೈದ್ಯರನ್ನು ಭೇಟಿಯಾಗಿ ಮಾರ್ಗದರ್ಶನ ಪಡೆಯುವುದು. ವಿಶೇಷ ಶಿಕ್ಷಣ ಮತ್ತು ಚಿಕಿತ್ಸಾ ಮಾರ್ಗಗಳನ್ನು ಅನುಸರಿಸಬೇಕು ಎಂದು ತಿಳಿಸಿದರು.

IMA Shivamogga ಐಎಂಎ ಶಿವಮೊಗ್ಗ ಶಾಖೆ ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಡಾ. ರಾಜರಾಮ್.ಯು.ಹೆಚ್, ಐಎಂಎ, ಐಎಪಿ ಗಣ್ಯರು ಮತ್ತು ಪೋಷಕರು ಮಕ್ಕಳೊಂದಿಗೆ ಉಪಸ್ಥಿತರಿದ್ದರು. ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಮಸ್ಯೆಗಳಿಗೆ ಉತ್ತರ ಮತ್ತು ಮಾಹಿತಿ ಪಡೆದುಕೊಂಡರು.