Sunday, February 15, 2026
Sunday, February 15, 2026
Home Blog Page 141

Indian Medical Association Shivamogga ಶಿವಮೊಗ್ಗ ಐಎಂ ಎ ಘಟಕದ ಅಧ್ಯಕ್ಷರಾಗಿ ಡಾ.ಕೆ.ಆರ್.ರವೀಶ್ ಆಯ್ಕೆ

0

Indian Medical Association Shivamogga ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಶಿವಮೊಗ್ಗ ಶಾಖೆ ನೂತನ ಅಧ್ಯಕ್ಷರಾಗಿ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿಯಾಗಿ ಡಾ. ಕೆ.ಎಸ್.ಶುಭ್ರತಾ ಹಾಗೂ ಖಜಾಂಚಿಯಾಗಿ ಡಾ. ಎಚ್.ಎಲ್.ಶಶಿಧರ್ ಅಧಿಕಾರ ವಹಿಸಿಕೊಂಡರು.

2025-26ನೇ ಸಾಲಿನ ಹೊಸ ಕಾರ್ಯಕಾರಿ ಮಂಡಳಿ ಆಯ್ಕೆಯ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಡಾ. ಬಿ.ಎ.ಸುಭಾಷ್, ಡಾ. ರಾಮಚಂದ್ರ ಬಾದಾಮಿ, ಸಹ ಕಾರ್ಯದರ್ಶಿಗಳಾಗಿ ಡಾ. ಎಂ.ಆರ್.ಸತೀಶ್, ಡಾ. ರಾಕೇಶ್ ಬಿಸಿಲೇಹಳ್ಳಿ, ಮಹಿಳಾ ವೈದ್ಯ ಘಟಕದ ಅಧ್ಯಕ್ಷರಾಗಿ ಡಾ. ಕೌಸ್ತುಭ ಅರುಣ್ ಮತ್ತು ಕಾರ್ಯದರ್ಶಿಯಾಗಿ ಡಾ. ಶ್ವೇತ ಬಾದಾಮಿ ಅಧಿಕಾರ ವಹಿಸಿಕೊಂಡರು.

ಐಎಂಎ ಶಿವಮೊಗ್ಗ ಶಾಖೆಗೆ ರಾಜ್ಯಪ್ರಶಸ್ತಿ: ಐಎಂಎ ಶಿವಮೊಗ್ಗ ಶಾಖೆಯ ಅಮೃತ ವರ್ಷಾಚರಣೆ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ವರ್ಷಪೂರ್ತಿ ನಡೆಸಿದ ಉತ್ತಮ ಕಾರ್ಯಕ್ರಮಗಳಿಗಾಗಿ ರಾಜ್ಯ ಮಟ್ಟದಲ್ಲಿ ಮೊದಲ ಅತ್ಯುತ್ತಮ ಶಾಖೆ ಪ್ರಶಸ್ತಿ ಹಾಗು ಹೆಣ್ಣು ಮಗುವಿನ ಸುರಕ್ಷತೆಗಾಗಿ ನಡೆಸಿದ ಕಾರ್ಯಕ್ರಮಗಳಿಗೆ ಅತ್ಯುತ್ತಮ ಶಾಖೆ ಪ್ರಶಸ್ತಿಗಳನ್ನು ಪಡೆದಿದೆ.

Indian Medical Association Shivamogga ಇತ್ತೀಚೆಗೆ ನಡೆದ ವಾರ್ಷಿಕ ಮಹಾಸಭೆಯಲ್ಲಿ 2024-2025ರ ಅಮೃತ ಮಹೋತ್ಸವ ವರ್ಷದಲ್ಲಿ ಕಾರ್ಯನಿರ್ವಹಿಸಿ, ಪ್ರಶಸ್ತಿ ಗಳಿಸಿದ ಅಧ್ಯಕ್ಷ ಡಾ. ಎಸ್.ಶ್ರೀಧರ್, ಕಾರ್ಯದರ್ಶಿ ಡಾ. ವಿನಯ ಶ್ರೀನಿವಾಸ್, ಖಜಾಂಚಿ ಡಾ. ರಾಜರಾಮ್ ಅವರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಯಿತು.

Rotary Club Shimoga ಸಮಾಜದ ಸುರಕ್ಷತೆಗೆ ಪೋಕ್ಸೋ ಕಾನೂನಿನ ಅರಿವು ಅಗತ್ಯ : ನ್ಯಾಯಾಧೀಶ ಎಂ.ಎಸ್.ಸಂತೋಷ್

0

Rotary Club Shimoga ಸಮಾಜದ ಸುರಕ್ಷತೆಗಾಗಿ ಪೋಕ್ಸೋ ಕಾನೂನಿನ ಅರಿವು ಅಗತ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಮತ್ತು ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶೇಷ ಕಾನೂನು ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳ ರಕ್ಷಣೆ ವಿಷಯದಲ್ಲಿ ಸಮಾಜದ ಪ್ರತಿಯೊಬ್ಬರೂ ಹೊಣೆಗಾರರಾಗಿರಬೇಕು. ಕಾನೂನು ಮಾತ್ರವಲ್ಲ, ಸಮಾಜದ ಜವಾಬ್ದಾರಿಯೂ ಮುಖ್ಯ. ಒಂದು ಮೈನರ್ ಬಾಲಕಿ ವಿರುದ್ಧ ಅಸಭ್ಯ ವರ್ತನೆ ನಡೆಸಿದರೂ ಅದು ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆಗೆ ಕಾರಣವಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಕೇವಲ ದೈಹಿಕ ಹಾನಿ ಮಾತ್ರವಲ್ಲ, ಮಾನಸಿಕ ಹಾನಿಗೂ ಕಾನೂನು ಗಂಭೀರವಾಗಿ ನೋಡುತ್ತದೆ ಎಂದು ತಿಳಿಸಿದರು.
ಲೈಂಗಿಕ ಕಿರುಕುಳ ನೀಡಿದಲ್ಲಿ ಕನಿಷ್ಠ 3 ವರ್ಷ ಜೈಲು. ಗಂಭೀರವಾದ ದೌರ್ಜನ್ಯ ಕೇಸುಗಳಲ್ಲಿ 5 ರಿಂದ 7 ವರ್ಷ ಜೈಲು, ಅತ್ಯಾಚಾರ 10 ವರ್ಷದಿಂದ ಜೀವಾವಧಿ ಜೈಲು ಶಿಕ್ಷೆ ಹಾಗೂ ಸಹಕರಿಸಿದವರಿಗೂ ಸಮಾನ ಶಿಕ್ಷೆ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪಿಪಿಟಿ ಮುಖಾಂತರ ನೈಜ ಉದಾಹರಣೆಗಳು, ಪ್ರಶ್ನೋತ್ತರ ಮಾದರಿಯಲ್ಲಿ ಚರ್ಚೆ ನಡೆಸಲಾಯಿತು. ಮಕ್ಕಳಿಂದಲೇ ಪ್ರಶ್ನೆಗಳನ್ನು ಕೇಳಿಸಿ, ಉತ್ತರಗಳನ್ನು ಪಡೆಯಲಾಯಿತು.
Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಮಾತನಾಡಿ, ರೋಟರಿಯ ಪ್ರಮುಖ ಕರ್ತವ್ಯ ಎಂದರೆ ಸಮಾಜಕ್ಕೆ ಅರಿವು ಮೂಡಿಸುವುದು. ಕಾನೂನು ಜಾಗೃತಿಯಿಂದ ಮಕ್ಕಳ ರಕ್ಷಣೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಸುದರ್ಶನ್, ಉಪನ್ಯಾಸಕರಾದ ಡಾ. ಅನಿತಾ, ಉಮಾ, ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ, ಝೋನಲ್ ಲೆಫ್ಟಿನೆಂಟ್ ಎಸ್.ಪಿ.ಶಂಕರ್, ಎಂ.ಪಿ.ಆನಂದ್ ಮೂರ್ತಿ, ಬಿ.ಜಿ.ಧನರಾಜ್, ಎಲ್.ಪ್ರತಾಪ್, ದೇವೇಂದ್ರಪ್ಪ ಹಾಗೂ ಸಿ.ಎನ್. ಮಲ್ಲೇಶ್ ಅನೇಕ ರೋಟರಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

JCI Shivamogga ಕೌಶಲ್ಯ, ವ್ಯವಹಾರ ಜ್ಞಾನ ವೃದ್ಧಿಸುವಲ್ಲಿ ಜೆಸಿಐ ಸಹಕಾರಿ

0

JCI Shivamogga ಜೆಸಿಐ ಸಂಸ್ಥೆಗೆ ಸೇರುವುದರಿಂದ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುವ ಜತೆಯಲ್ಲಿ ಕೌಶಲ್ಯ ಹಾಗೂ ವ್ಯವಹಾರ ಜ್ಞಾನ ವೃದ್ಧಿಯಾಗುತ್ತದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.
ಜೆಸಿಐ ಸಹ್ಯಾದ್ರಿ ಘಟಕದ ವತಿಯಿಂದ ಸಹ್ಯಾದ್ರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಆಯೋಜಿಸಿದ್ದ ತರಬೇತಿ ಶಿಬಿರದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜೆಸಿಐ ಸಂಸ್ಥೆ ವಿಶ್ವಾದ್ಯಂತ ಮಾನವೀಯ ಸೇವೆಗಳನ್ನು ಮಾಡುವುದರಜತೆಗೆ ಯುವಜನರಲ್ಲಿ ಕೌಶಲ್ಯ, ಜ್ಞಾನ ಮತ್ತು ವ್ಯವಹಾರ ಜ್ಞಾನವನ್ನು ವೃದ್ಧಿ ಮಾಡುತ್ತದೆ. ಜೆಸಿ ಸಂಸ್ಥೆ ತರಬೇತಿಗಳಲ್ಲಿ ಪಾಲ್ಗೊಂಡರೆ ಕೌಶಲ್ಯ ವೃದ್ಧಿಯ ಜತೆಗೆ ಜೀವನೋತ್ಸಾಹ ಮೂಡುತ್ತದೆ ಎಂದು ತಿಳಿಸಿದರು.
ತರಬೇತಿಗಳಲ್ಲಿ ಪರಸ್ಪರರಲ್ಲಿ ಒಡನಾಟ ಸಂಪರ್ಕ ಪರಿಚಯ ಹಾಗೂ ಅವರ ಪ್ರತಿಭೆ ಮತ್ತು ನಮ್ಮ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗುತ್ತದೆ. ಈ ನಿಟ್ಟಿನಲ್ಲಿ ಜೆಸಿಐ ಸಂಸ್ಥೆಯು ಶಾಲಾ ಕಾಲೇಜು, ಬ್ಯಾಂಕ್ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ವಿಶೇಷವಾದ ತರಬೇತಿಗಳನ್ನು ಹಮ್ಮಿಕೊಳ್ಳುವುದರ ಮುಖಾಂತರ ಅವರಿಗೆ ಅಗತ್ಯವಾದ ಮಾಹಿತಿಗಳನ್ನು ನೀಡುತ್ತದೆ ಎಂದರು.
ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜೆಸಿಐ ಶಿವಮೊಗ್ಗ ಕಾಮರ್ಸ್ ಅಧ್ಯಕ್ಷೆ ನಿವೇದಿತಾ ವಿಕಾಸ್ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಸಹ ಕೌಶಲ್ಯಗಳು ಅತಿ ಮುಖ್ಯ. ಸರಿಯಾದ ಕೌಶಲ್ಯ ಇದ್ದರೆ ನಾವು ಯಶಸ್ವಿ ಉದ್ಯಮಿಗಳು ಹಾಗೂ ಉದ್ಯೋಗಸ್ಥರಾಗುತ್ತೇವೆ. ಸಂದರ್ಶನಗಳಲ್ಲಿ ಭಾಗವಹಿಸಬೇಕಾದರೆ ಎಲ್ಲಾ ವಿಷಯಗಳ ಅರಿವು ಜ್ಞಾನ ಹಾಗೂ ವಿಷಯಕ್ಕೆ ಸಂಬಂಧಪಟ್ಟ ಕೌಶಲ್ಯ ಅತಿ ಮುಖ್ಯ ಎಂದು ಹೇಳಿದರು.
JCI Shivamogga ಎಲ್ಲರೂ ಜೆಸಿಐ ಸಂಸ್ಥೆ ಸೇರುವುದರ ಮುಖಾಂತರ ಸಂಸ್ಥೆಯ ಕಾರ್ಯ ಚಟುವಟಿಕೆ, ಸೇವಾ ಚಟುವಟಿಕೆಗೆ ಕೈಜೋಡಿಸಬೇಕು. ಸಮಾಜದಲ್ಲಿ ಸದೃಢ ವ್ಯಕ್ತಿಗಳಾಗಿ ನಿರ್ಮಾಣಗೊಳ್ಳಲು ಸಾಧ್ಯವಾಗುತ್ತದೆ ಎಂದರು.
ಸಹ್ಯಾದ್ರಿ ಚಿಟ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಮಾತನಾಡಿ, ಎಲ್ಲಾ ಹಣಕಾಸು ಸಂಸ್ಥೆಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಇಂತಹ ತರಬೇತಿಗಳು ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ನಾವು ಎಷ್ಟೇ ವಿಷಯಗಳನ್ನು ತಿಳಿದುಕೊಂಡಿದ್ದರೂ ಇಂತಹ ತರಬೇತಿಗಳು ಉದ್ಯೋಗಿಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಿದರು.
ತರಬೇತುದಾರರಾದ ಸಪ್ನ ಅನುಷ್, ಕಾರ್ಯದರ್ಶಿ ಪ್ರಮೋದ್ ಉಡುಪ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

B.Y.Raghavendra ಸಾಗರದಲ್ಲಿ ನಡೆಯುತ್ತಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ವಿರುದ್ಧದ ಹೋರಾಟಕ್ಕೆ ಸಂಸದರ ಬೆಂಬಲ

0

B.Y.Raghavendra ಸಾಗರದಲ್ಲಿ ನಡೆಯುತ್ತಿರುವ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯ ವಿರುದ್ಧದ ರೈತ ಸಂಘದ ಹೋರಾಟಕ್ಕೆ ಸಂಸದರಾದ ವಿ ವೈ ರಾಘವೇಂದ್ರ ಬೆಂಬಲ ವ್ಯಕ್ತಪಡಿಸಿದರು. ಈ ಯೋಜನೆಯು ಪಶ್ಚಿಮ ಘಟ್ಟಗಳಿಗೆ ಗಣನೀಯ ಪರಿಸರ ಹಾನಿ ಉಂಟುಮಾಡುವ ಮತ್ತು ಆ ಭಾಗದ ವಿಶಿಷ್ಟ ಜೀವವೈವಿಧ್ಯದ ನಷ್ಟ ಹಾಗೂ ಪ್ರಮುಖ ಆವಾಸಸ್ಥಾನಗಳ ವಿಘಟನೆಗೆ ಕಾರಣವಾಗುವ ಕುರಿತು ಆತಂಕಗಳನ್ನು ಹೆಚ್ಚಿಸಿದೆ. ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುವುದು ಸಹಜ ಎಂದರು. B.Y.Raghavendra ಕೇಂದ್ರ ಸರ್ಕಾರ ಬೇರೆ ಬೇರೆ ವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡುತ್ತ ಬರುತ್ತಿದ್ದರೂ ಶರಾವತಿ ಪಂಪ್‌ ಸ್ಟೋರೇಜ್ ನಿಂದ ಆ ಭಾಗದ ಪರಿಸರ, ಜೀವವೈವಿಧ್ಯಕ್ಕೆ ಹಾನಿಯಾಗುತ್ತಿರುವುದರ ಬಗ್ಗೆ ಕೇಂದ್ರದ ಸಂಬಂಧಪಟ್ಟ ಸಚಿವರು, ಇಲಾಖೆ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

Jog Falls ಜೋಗದಲ್ಲಿ 2000 ಮೆ.ವ್ಯಾ. ವಿದ್ಯುತ್ಉತ್ಪಾದನೆಗೆ ಕ್ರಮ : ಕೆ.ಜೆ.ಜಾರ್ಜ್

0

Jog Falls ಮುಂದಿನ ಕೆಲವು ದಶಕಗಳ ದೂರದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ರಾಜ್ಯದಲ್ಲಿ ಬರಬಹುದಾದ ವಿದ್ಯುತ್ಕೊರತೆಯನ್ನು ನೀಗಿಸಿ, ಸಮರ್ಪಕವಾಗಿ ವಿದ್ಯುತ್ನ್ನು ಸರಬರಾಜುಗೊಳಿಸಲು 2000ಕೋಟಿ ರೂ.ಗಳ ವೆಚ್ಚದಲ್ಲಿ ಪಂಪ್ಡ್ಸ್ಟೋರೇಜ್ನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ಅವರು ಹೇಳಿದರು.
ಅವರು ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು. ಹರಿಯುವ ನದಿಗೆ ಯಾವುದೇ ಅಡತಡೆ ಮಾಡದಂತೆ ಈಗಿರುವ ನೀರನ್ನು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅಂದಾಜು 2000ಮೆ.ವ್ಯಾ. ವಿದ್ಯುತನ್ನು ಉತ್ಪಾದಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಉದ್ದೇಶಿತ ಶರಾವತಿ ಪಂಪ್ಡ್ಸ್ಟೋರೇಜ್ನ್ನು ನಿರ್ಮಿಸುವಲ್ಲಿ ಪರಿಸರವಾದಿಗಳು ಸೇರಿದಂತೆ ಅನೇಕ ಜನರ ವಿರೋಧವಿರುವುದನ್ನು ತಿಳಿಯಲಾಗಿದೆ. ಈ ವಿಷಯದ ಕುರಿತಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಅಂತೆಯೇ ಸ್ಥಳೀಯರಿಂದ ಅಹವಾಲುಗಳನ್ನು ಸ್ವೀಕರಿಸಿ, ಅವರಿಗೆ ಪರಿಸರ ನಾಶವಾಗದಿರುವ ಹಾಗೂ ಯಾರಿಗೂ ತೊಂದರೆ ಆಗದಿರುವ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಈ ಯೋಜನೆಗೆ ಬಳಸಿಕೊಳ್ಳಲಾಗುತ್ತಿರುವ 120ಎಕರೆ ಭೂಪ್ರದೇಶದಲ್ಲಿನ ಅರಣ್ಯದಲ್ಲಿ ಹಾದು ಹೋಗಲಿರುವ ಪೈಪ್ಲೈನ್ಮೇಲ್ಭಾಗದಲ್ಲಿ ನೈಸರ್ಗಿಕವಾಗಿ ಗಿಡಗಳನ್ನು ಬೆಳೆಸಲಾಗುವುದು ಎಂದರು.
ಕೇಂದ್ರ ಪರಿಸರ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ, ಯೋಜನೆಯನ್ನು ಆರಂಭಿಸಲಾಗುವುದು ಎಂದ ಅವರು, ಪ್ರಸ್ತುತ ಉತ್ಪಾದನೆಯಾಗುತ್ತಿರುವ ವಿದ್ಯುತ್1000ಮೆ.ವ್ಯಾ. ವಿದ್ಯುತ್ಉತ್ಪಾದನೆಯಾಗುತ್ತಿದೆ. ಈ ಯೋಜನೆಯ ಅನುಷ್ಠಾನದಿಂದ ಸುಮಾರು 3000ಮೆ.ವ್ಯಾ. ವಿದ್ಯುತ್ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದರು.
Jog Falls ಇದರೊಂದಿಗೆ ಅತ್ಯಂತ ಕಡಿಮೆ ವೆಚ್ಚದ ಸೋಲಾರ್ವಿದ್ಯುತ್ನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೇ ಜನರಿಗೆ ಸಕಾಲದಲ್ಲಿ ವಿದ್ಯುತ್ಸರಬರಾಜು ಮಾಡುವುದು ಈ ಯೋಜನೆಯ ಉದ್ದೇಶ. ಈ ಸಂದರ್ಭದಲ್ಲಿ ಕಡಿತಲೆಯಾಗುವ ಮರಗಳಿಗೆ ಪರ್ಯಾಯವಾಗಿ ಮರಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ. ಇದರಿಂದಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗಲಾರದು. ಅಲ್ಲದೇ ಯಾವುದೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗುವುದಿಲ್ಲ ಎಂದವರು ತಿಳಿಸಿದ್ದಾರೆ.

Shimoga Badminton Premier League ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಸೀಸನ್ 2ಗೆ ಸಿದ್ಧತೆ

0

Shimoga Badminton Premier League ಶಿವಮೊಗ್ಗ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್‌ನ ಮೊದಲ ಅತ್ಯಂತ ಯಶಸ್ವಿಯಾಗಿದ್ದು, ಇದೀಗ್ ಎರಡನೇ ಸೀಸನ್ ಆಯೋಜಿಸಲು ಸಿದ್ಧತೆ ಆರಂಭವಾಗಿದೆ.
ಶಿವಮೊಗ್ಗ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಸೀಸನ್ 2ನ ಆಕ್ಷನ್ ಕಾರ್ಯಕ್ರಮವು ನಗರದ ಗುಂಡಪ್ಪ ಶೆಡ್‌ನ ರಾವ್ ಅಕಾಡೆಮಿಯಲ್ಲಿ ನಡೆಯಿತು. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 200ಕ್ಕೂ ಹೆಚ್ಚು ಆಟಗಾರರು ಭಾಗವಹಿಸಿದ್ದರು.
Shimoga Badminton Premier League ಅಕ್ಟೋಬರ್ 26ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಎಂಟು ತಂಡದ ಮಾಲೀಕರಾದ ಆರ್ ಆರ್ ಸ್ಮಾಶರ್ಸ್ ನ ರಮೇಶ್, ಆರ್‌ವಿಡಿ ರ‍್ಯಾಕೆಟ್ ರಾಕರ್ಸ್ ನ ರಘುನಂದನ್ ಮತ್ತು ರಾಕೇಶ್, ಟೀಮ್ ಸ್ಮಾಶ್ ಇಟ್‌ನ ಯಶಸ್ ಗೌಡ ಮತ್ತು ಪ್ರಶಾಂತ್, ಬ್ಯಾಡ್ಮಿಂಟನ್ ವಾರಿಯರ‍್ಸ್ ನ ರಘು ಬಿ.ಇ., ಭದ್ರಾ ಬ್ಲಾಕ್ ಪ್ಯಾಂಥರ‍್ಸ್ ನ ಲೋಕೇಶ್, ಜೆಕೆಜಿ ಬುಲ್ಸ್ ನ ಜೆ.ಕೆ.ಗೋಕುಲ್, ಗುತ್ತಿ ಸ್ಟ್ರೈಕರ್ಸ್‌ನ ಸಚಿನ್ ಮತ್ತು ಸಂತೋಷ್, ಶಿವಮೊಗ್ಗ ಕಾನ್‌ಕ್ವರರ್ಸ್ ನ ದರ್ಶನ್ ಮತ್ತು ಜೈಭಾರತ್ ರೆಡ್ಡಿ ಹಾಗೂ ಶಶಾಂಕ್ ಕ್ರೀಡಾಲೋಕ, ಎಸ್‌ಪಿಬಿಎಲ್ ಕಾರ್ಯನಿರ್ವಾಹಕ ದೀಪಕ್, ಶಿವ ಚರಣ್ ಹಾಗೂ ಸುಧಾಕರ್ ಬಿಜೂರ್ ಪಾಲ್ಗೊಂಡಿದ್ದರು.

Klive Special Article ಜಾತಿ ಜನಗಣತಿ ಸಮೀಕ್ಷೆ ಮತ್ತು ಯುವ ನಿಧಿ ಫಲಾನುಭವಿಗಳ ಸೇವೆ ಬಳಕೆ

0

ಲೇ: ಮುರಳೀಧರ ನಾಡಿಗೇರ್.
ವಿಜಯನಗರ.

Klive Special Article ಸರ್ಕಾರದ ನಿಧಿ ಸರಿಯಾದ ರೀತಿಯಲ್ಲಿ ಬಳಸಿಕೊಂಡಿದ್ದರೆ — ಯುವಕರಿಗೂ ಉದ್ಯೋಗ ಅನುಭವ, ಸರ್ಕಾರಕ್ಕೂ ಉತ್ತಮ ಹೆಸರು ಸಿಗುತ್ತಿತ್ತು

ಕರ್ನಾಟಕ ಸರ್ಕಾರ ಜನಗಣತಿ ಮತ್ತು ಜಾತಿಗಣತಿ ಕಾರ್ಯಕ್ಕಾಗಿ ಸರ್ಕಾರಿ ನೌಕರರನ್ನು ನಿಯೋಜಿಸುವ ಬದಲಿಗೆ, ಕಾಂಗ್ರೆಸ್ ಸರ್ಕಾರದ “ಯುವನಿಧಿ” ಯೋಜನೆಯಡಿ ತಿಂಗಳಿಗೆ ರೂ 3000 ಪಡೆಯುತ್ತಿರುವ ನಿರುದ್ಯೋಗಿ ಯುವಕರು ಮತ್ತು ಯುವತಿಯರನ್ನು ಈ ಕಾರ್ಯದಲ್ಲಿ ತೊಡಗಿಸಬಹುದಿತ್ತು ಎಂಬ ಅಭಿಪ್ರಾಯ ಜನಸಾಮಾನ್ಯರಲ್ಲಿ ಮತ್ತು ಸರ್ಕಾರಿ ನೌಕರರಲ್ಕಿಯೇ ವ್ಯಾಪಕವಾಗಿ ವ್ಯಕ್ತವಾಗಿದೆ.

ಸರ್ಕಾರ ನೀಡುತ್ತಿರುವ ಯುವನಿಧಿ ಯೋಜನೆಯಡಿ ಲಕ್ಷಾಂತರ ಯುವಕರು ನೋಂದಾಯಿಸಿಕೊಂಡಿದ್ದಾರೆ. ಇವರಿಗೆ ಅಗತ್ಯ ತರಬೇತಿ ನೀಡಿ ಜನಗಣತಿ ಕಾರ್ಯದಲ್ಲಿ ಬಳಸಿದ್ದರೆ, ಯುವಕರಿಗೂ ಉದ್ಯೋಗದ ಅನುಭವ ದೊರಕುತ್ತಿತ್ತು, ಕೈಗೆ ಆದಾಯ ಸಿಗುತ್ತಿತ್ತು ಮತ್ತು ಸರ್ಕಾರಕ್ಕೂ ಜನಮನ್ನಣೆ ದೊರೆಯುತ್ತಿತ್ತು ಎಂದು ನಾಗರಿಕರು ಅಭಿಪ್ರಾಯಪಟ್ಟಿದ್ದಾರೆ.

ಅವರು ಹೇಳುವಂತೆ, ಸರ್ಕಾರ ನೀಡುತ್ತಿರುವ ನಿಧಿಯನ್ನು ನೇರವಾಗಿ ಸಹಾಯಧನವಾಗಿ ನೀಡುವ ಬದಲಿಗೆ, ಈ ರೀತಿಯ ಸಾರ್ವಜನಿಕ ಸೇವಾ ಕಾರ್ಯಗಳಲ್ಲಿ ಯುವಕರನ್ನು ತೊಡಗಿಸುವುದು ಉತ್ತಮ ಪ್ರಯೋಜನಕಾರಿಯಾಗುತ್ತಿತ್ತು. ಇದು ಯುವಜನರಲ್ಲಿ ಕೌಶಲ್ಯಾಭಿವೃದ್ಧಿ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಜವಾಬ್ದಾರಿತೆ ಬೆಳೆಯಲು ಸಹಾಯಕವಾಗುತ್ತಿತ್ತು.

Klive Special Article ಸರ್ಕಾರ ಈಗಾಗಲೇ ಜನಗಣತಿ ಕಾರ್ಯ ಪ್ರಾರಂಭವಾಗಿದೆ ತಕ್ಷಣವೇ ಸರ್ಕಾರಿ ನೌಕರರನ್ನು ತಡೆಗಟ್ಟಿ , ಮುಂದಿನ ಹಂತಗಳಲ್ಲಿ ಯುವನಿಧಿ ಯೋಜನೆ ಫಲಾನುಭವಿಗಳಿಗೆ ಇಂತಹ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ ಕಲ್ಪಿಸಬೇಕು, ಈಗ ನೇಮಕ ಮಾಡಿರುವ ಸರ್ಕಾರಿ ಅಧಿಕಾರಿಗಳು ಮತ್ತು ಟೀಚರ್ಸ್ ಗಳಿಂದ ದಿನಂಪ್ರತಿ ಮಾಡುವ ಕೆಲಸಕ್ಕೆ ಅಡ್ಡಿಯಾಗಿರುತ್ತದೆ ಅಲ್ಲಾದೆ ಅರಿಯಾದ ಅಭಿಪ್ರಾಯಗಳು ಮತ್ತು ವಿಷಯಗಳ ಹಂಚಿಕೆ ಸರಿಯಾಗಿ ಆಗದೆ ಕಾಲಹರಣವಾಗುತ್ತಿದೆ. ಕಾರಣ ಸರ್ಕಾರ ಇದರಕಡೆ ಹೆಚ್ಚಿಗೆ ಗಮನಹರಿಸುವುದು ಒಳ್ಳೆಯದು.

MESCOM ಶಿವಮೊಗ್ಗ ನಾಗರೀಕ ಹಿತ ರಕ್ಷಣಾ ವೇದಿಕೆಯ ಕಳಕಳಿಯ ಮನವಿ

0

MESCOM ಮೆಸ್ಕಾಂ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಸುಮಾರು 300 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗ ನಗರದಾದ್ಯಂತ ಭೂಗತ ಕೇಬಲ್ ಗಳನ್ನು ಅಳವಡಿಸಿ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು ಹಾಕದೆ ಹಾಗೆಯೇ ಬಿಟ್ಟಿರುವುದರಿಂದ ರಸ್ತೆಗಳ ಎರಡು ಬದಿಗಳಲ್ಲಿ ವಿದ್ಯುತ್ ಕಂಬಗಳಿದ್ದು ವಾಹನ ಸಂಚಾರಕ್ಕೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ತೀವ್ರ ತೊಂದರೆಯಾಗಿದೆ.

ವಿದ್ಯುತ್ ಕಂಬಗಳನ್ನು ಶೀಘ್ರವಾಗಿ ತೆಗೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಮಾನ್ಯ ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ಮೆಸ್ಕಾಂ ಅಧಿಕಾರಗಳಿಗೆ ಈಗಾಗಲೇ ಮೂರು ಮನವಿಗಳನ್ನು ಸಲ್ಲಿಸಿದ ನಂತರವೂ ಯಾವುದೇ ಪ್ರತಿಕ್ರಿಯೆ ಇಲ್ಲ.

ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಮಿತಿ ಸಭೆ ಕರೆಯುವಂತೆ ಹಲವು ಬಾರಿ ಮನವಿ ನೀಡಿದರೂ ಇಲ್ಲಿಯವರೆಗೆ ಯಾವುದೇ ಸಭೆಯನ್ನು ಕರೆದಿರುವುದಿಲ್ಲ.

MESCOM ಮಾನ್ಯ ಜಿಲ್ಲಾಧಿಕಾರಿಗಳು ಸಭೆ ಕರೆಯದಿರುವುದನ್ನು ಖಂಡಿಸಿ ಇದೇ ಅಕ್ಟೋಬರ್ ತಿಂಗಳ 9 ನೇ ತಾರೀಖು, ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ “ಧರಣಿ ಸತ್ಯಾಗ್ರಹ” ಹಮ್ಮಿಕೊಳ್ಳಲಾಗಿದೆ.

Valmiki Awardee 2025 ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರ ಚಿತ್ರಗಳು

0

Valmiki Awardee 2025 ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಹರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪ್ರತಿ‌ ವರ್ಷ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

ಪ್ರತಿ ವರ್ಷದಂದಂತೆ‌ ಈ ವರ್ಷವೂ ಸಹ ರಂಗಭೂಮಿ, ಸಂಘಟನೆ, ಮಾಧ್ಯಮ, ‌ಸಾಮಾಜಿಕ ಕ್ಷೇತ್ರ ಮತ್ತು ಸಮಾಜ ಸೇವೆಯಲ್ಲಿ ತಮ್ಮದೇ ಅದ‌ ವಿಶಿಷ್ಟ ಸೇವೆ ಸಲ್ಲಿಸಿ‌ ವಾಲ್ಮೀಕಿ ಸಮಾಜಕ್ಕೆ‌ ತಮ್ಮ ಕೊಡಿಗೆಯನ್ನು ನೀಡಿರುವ ಅರ್ಹ ಸಾಧಕರನ್ನು ಗುರುತಿಸಿ ವಾಲ್ಮೀಕಿ ಪ್ರಶಸ್ತಿಯನ್ನು ಸರ್ಕಾರವು ಪ್ರಕಟಿಸಿದೆ.

2025ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಬೆಂಗಳೂರು ಕೇಂದ್ರ ದ ಮಾಧ್ಯಮ ಕ್ಷೇತ್ರದಿಂದ ಬೆಂಗಳೂರಿನ ನಾಗರಾಜು ಗಾಣದ ಹುಣಸೆ, ಬೆಂಗಳೂರು ವಿಭಾಗ ದಲ್ಲಿ ರಂಗಭೂಮಿ ಕ್ಷೇತ್ರದಿಂದ ಚಿತ್ರದುರ್ಗದ ಚಳ್ಳಕೆರೆಯ ಪಿ. ತಿಪ್ಪೇಸ್ವಾಮಿ, ಮೈಸೂರು ವಿಭಾಗ ದಲ್ಲಿ ಸಂಘಟನೆ ಕ್ಷೇತ್ರದಿಂದ ಕೊಡಗಿನ ವಿರಾಜಪೇಟೆಯ ಶ್ರೀಮತಿ ಜೆ.ಕೆ. ಮುತ್ತಮ್ಮ, ಬೆಳಗಾವಿ ವಿಭಾಗ ದಲ್ಲಿ ಸಮಾಜಸೇವೆ ಕ್ಷೇತ್ರದಿಂದ ವಿಜಯಪುರ ಟೌನ್ ನ ಮಳಸಿದ್ದ ಲಕ್ಷ್ಮಣ ನಾಯಕೋಡಿ ಮತ್ತು ಕಲಬುರಗಿ ವಿಭಾಗ ದಲ್ಲಿ ಸಾಮಾಜಿಕ ಕ್ಷೇತ್ರದಿಂದ ವಿಜಯನಗರ ಜಿಲ್ಲೆಯ+ ಹರಪನಹಳ್ಳಿ ಟೌನ್ ನ ಕೆ. ಉಚ್ಚಂಗಪ್ಪ ಅವರು ಭಾಜನರಾಗಿದ್ದಾರೆ ‌

ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ: ಬಿ.ಆರ್. ಅಂಬೇಡ್ಕ‌ರ್, ಡಾ: ಬಾಬು ಜಗಜೀವನರಾಂ ಹಾಗೂ ಶ್ರೀ ಡಿ. ದೇವರಾಜು ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

Valmiki Awardee 2025 ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶೈಕ್ಷಣಿಕ ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು. ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನಗದು ಮೊತ್ತ ಹಾಗೂ ಬಂಗಾರದ ಪದಕಗಳನ್ನು ನೀಡಿ ಗೌರವಿಸಲಾಗುವುದು.

2025-26ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಡಾ.ಎ.ಬಿ ರಾಮಚಂದ್ರಪ್ಪ ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ಸಮಿತಿಯು ಸಭೆಗಳನ್ನು ನಡೆಸಿ ಪ್ರಶಸ್ತಿಗಾಗಿ ಸ್ವೀಕರಿಸಲಾದ ಸುಮಾರು 133 ನಾಮನಿರ್ದೇಶನಗಳನ್ನು ಪರಿಶೀಲಿಸಿ ಅರ್ಹ ಸಾಧಕರನ್ನು ಗುರುತಿಸಿ ಗುರುತಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು ಸರ್ಕಾರವು ಸಮಿತಿಯ ಶಿಫಾರಸ್ಸನ್ನು ಒಪ್ಪಿ ಅರ್ಹರಿಗೆ ಪ್ರಶಸ್ತಿಯನ್ನು ಘೋಷಿಸಿರುತ್ತದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Shimoga News ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘರಾಜ್ಯ ಮುಖ್ಯ ಚುನಾವಣಾಧಿಕಾರಿಯಾಗಿ ಎನ್. ರವಿಕುಮಾರ್

0

Shimoga News ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮುಖ್ಯ ಚುನಾವಣಾಧಾರಿಯಾಗಿ ಹಿರಿಯ ಪತ್ರಕರ್ತ ಶಿವಮೊಗ್ಗ ಟೆಲೆಕ್ಸ್ ಪತ್ರಿಕೆಯ ಸಂಪಾದಕ ಎನ್. ರವಿಕುಮಾರ್‌ರವರು ಇಂದು ಅಽಕಾರ ಸ್ವೀಕರಿಸಿದರು.

ಬೆಂಗಳೂರಿನ ಕಂದಾಯ ಭವನದಲ್ಲಿನ ಕೇಂದ್ರ ಕಛೇರಿಯಲ್ಲಿ ಅಽಕಾರ ಸ್ವೀಕರಿಸಿದ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಸಂಘದ ಕಾನೂನು ಸಲಹೆಗಾರರಾದ ಗೋಪಾಲ ಗೌಡ, ಪ್ರಧಾನ ಕಾರ್ಯದರ್ಶಿ ಜೆ.ಸಿ. ಲೋಕೇಶ್, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಚ್. ಯು. ವೈದ್ಯನಾಥ್ ಸೇರಿದಂತೆ ರಾಜ್ಯ ಪದಾಽಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.

Shimoga News ಈ ಸಂದರ್ಭದಲ್ಲಿ ಮಾತನಾಡಿದ ಶಿವಾನಂದ ತಗಡೂರುರವರು, ಪತ್ರಕರ್ತರ ಈ ಚುನಾವಣೆಯು ರಾಜ್ಯದ ಗಮನ ಸೆಳೆದಿದ್ದು, ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ಗುರುತರವಾದ ಜವಾಬ್ದಾರಿ ಅಽಕಾರಿಗಳ ಮೇಲಿದೆ. ಇದನ್ನು ಸಮರ್ಥವಾಗಿ ನಿಭಾಯಿಸುವ ವಿಶ್ವಾಸವಿದೆ ಎಂದರು.

ನೂತನವಾಗಿ ಅಧಿಕಾರ ಸ್ವೀಕರಿಸಿದ ಎನ್. ರವಿಕುಮಾರ್‌ರವರು, ಚುನಾವಣೆಯ ವಿಽ ವಿಧಾನಗಳನ್ನು ವಿವರಿಸಿ, ಎಲ್ಲರ ಸಹಕಾರ ಕೋರಿದರು.

ಇದೇ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಽಕಾರಿ ಜಗದೀಶ್‌ರವರು, ಸಂಘದ ಕಛೇರಿಯಲ್ಲಿ ನಿರ್ಮಿಸಲಾದ ಅಪರೂಪದ ಪುಸ್ತಕ ಸಂಗ್ರಹ ನೂತನ ಗ್ರಂಥಾಲಯವನ್ನು ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಕಂಕಮೂರ್ತಿ ಗ್ರಂಥಾಲಯ ಹಾಗೂ ಪುಸ್ತಕಗಳ ಮಹತ್ವವನ್ನು ವಿವರಿಸಿದರು.