Sunday, February 15, 2026
Sunday, February 15, 2026
Home Blog Page 142

Yesvantpur Talguppa Train ಯಶವಂತಪುರ–ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ

0

Yesvantpur Talguppa Train ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ.

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್‌ಪ್ರೆಸ್‌ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

Yesvantpur Talguppa Train ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ಗಳು ಇರಲಿವೆ.

ಪೃಥ್ವಿ ಎಸ್ ಹುಲ್ಲತ್ತಿ
ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಮತ್ತು
ಸಾರ್ವಜನಿಕ ಸಂಪರ್ಕ ಅಧಿಕಾರಿ
ಮೈಸೂರು ವಿಭಾಗ

Shimoga News ತಾಳಗುಂದದಲ್ಲಿ ಪುರಾತತ್ವ ಇಲಾಖೆ ಉತ್ಸುಕ

0

Shimoga News ತಾಳಗುಂದ ಗ್ರಾಮವು ಅತ್ಯಂತ ಅಮೂಲ್ಯವಾದ ಸಾಂಸ್ಕೃತಿಕ ಹಾಗೂ ಪುರಾತತ್ವದ ಮಹತ್ವ ಹೊಂದಿದೆ. ಈ ಸ್ಥಳದಲ್ಲಿ ಉತ್ಪನನ ಕಾರ್ಯ ನಡೆಸುವ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಉತ್ಸುಕವಾಗಿದ್ದು, ಶೀಘ್ರದಲ್ಲೇ ಕೆಲಸ ಪ್ರಾರಂಭಿಸಲಾಗುವುದು ಎಂದು ಬೆಂಗಳೂರು ವೃತ್ತದ ಅಧಿಕಾರಿ ಸುಜಿತ್ ನಯನ್ ಹೇಳಿದರು.

ಹತ್ತಿರದ ಬಳ್ಳಿಗಾವಿ, ತಾಳಗುಂದ ಹಾಗೂ ಬಂದಳಿಕೆ ಗ್ರಾಮಗಳಿಗೆ ಭೇಟಿ ನೀಡಿದ ಅವರು ಜನರನ್ನು ಉದ್ದೇಶಿಸಿ ಮಾತನಾಡಿ, ತಾಳಗುಂದದೆ ಇತಿಹಾಸವು ಕರ್ನಾಟಕದ ಪ್ರಾಚೀನ ರಾಜವಂಶಗಳ ಬೆಳವಣಿಗೆಯ ಸಾಕ್ಷಿಯಾಗಿದೆ. ಇಲಾಖೆಯು ಎಲ್ಲ ಅಡೆತಡೆಗಳನ್ನು ನಿವಾರಿಸಿ ಶೀಘ್ರದಲ್ಲೇ ಪುರಾತತ್ರ ತಪಾಸಣೆ ಮತ್ತು ಸಂಶೋಧನೆ ಪ್ರಾರಂಭಿಸುತ್ತದೆ ಎಂದು ತಿಳಿಸಿದರು.

Shimoga News ಬಳ್ಳಿಗಾವಿಯ ಅಂಜನೇಯ ಸ್ವಾಮಿ ದೇವಾಲಯದ ನೂತನ ಕಟ್ಟಡ ನಿರ್ಮಾಣದ ಕುರಿತು ಪ್ರತಿಕ್ರಿಯಿಸಿದ ಅವರು, ಗ್ರಾಮಸ್ಥರ ಮನವಿ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ಶಿಫಾರಸ್ಸಿನ ಮೇರೆಗೆ ಪುರಾತತ್ವ ಇಲಾಖೆ ಈ ಕಾಮಗಾರಿಯನ್ನು ಕೈಗೊಳ್ಳಲಿದೆ. ಅಲ್ಲಮ್ಮ ಪ್ರಭು ಗದ್ದಿಗೆಗೆ ಸಂಬಂಧಿಸಿದ ಎಲ್ಲ ಕಾನೂನು ತೊಡಕುಗಳನ್ನು ನಿವಾರಿಸಲಾಗಿದೆ. ಅನುಮತಿ ಪಡೆಯಬಹುದು. ಸ್ಥಳೀಯ ಅಧಿಕಾರಿಗಳು ಅವರಿಗೆ ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರು ಹಾರ ಹಾಕಿ ಸ್ವಾಗತಿಸಿದರು. ಪುರಾತತ್ವ ಇಲಾಖೆಯ ಶಿವಮೊಗ್ಗ ವಿಭಾಗದ ಅಧಿಕಾರಿ ಗೌತಮ್, ದಾವಣಗೆರೆ ವಿಭಾಗದ ಅಧಿಕಾರಿ ಸುಧೀರ್, ಮಲೆನಾಡು ಇತಿಹಾಸ ಸಂಶೋಧನಾ ಮತ್ತು ಅಧ್ಯಯಕ ವೇದಿಕೆ ಅಧ್ಯಕ್ಷ ಡಾ.ಸಾಮಕ್‌, ಕಾರ್ಯದರ್ಶಿ ದಿಲೀಪ್ ನಾಡಿಗ್, ಬಳ್ಳಿಗಾವಿ ಗ್ರಾಪಂ ಸದಸ್ಯ ಮಲ್ಲಿಕಾರ್ಜುನ್ ದಾನೇರ್, ರಾಮಣ್ಣ, ತಾಪಂ ಮಾಜಿ ಸದಸ್ಯ ಲಾರಿ ಮಲ್ಲಣ್ಣ, ಎಪಿಎಂಸಿ ಮಾಜಿ ಸದಸ್ಯ ನಾಗರಾಜ್, ಪ್ರಮುಖರಾದ ಉಜ್ಜಪ್ಪ, ಮಂಜುನಾಥ್, ರಾಜಣ್ಣ ಭಾರಂಗಿ, ರಾಜೇಶ್ವರಿ ದಾನೇರ್, ಶಿಲ್ಪ, ನಾಗರಾಜ್, ರಾಜಶೇಖರ್ ಇತರರಿದ್ದರು.

MESCOM ಆಲ್ಕೋಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

0

MESCOM ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎ.ಎಫ್ 12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಆಲ್ಕೊಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕೀರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜ್ ರಸ್ತೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೋಳ್ಳಿರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳ್ ಸಾಯಿ ಭವನ, ಹೊಂಗಿರಣ ಬಡಾವನೆ, ಸಹಕಾರಿನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಆಟೋಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್ ಭೋವಿ ಕಾಲೋನಿ, ಆದರ್ಶನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತನಗರ, MESCOM ದೇವಕಾತಿಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖನೆ, ಶರ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

MESCOM ಅ. 9 ರಂದು ಮೆಸ್ಕಾಂ ಜನಸಂಪರ್ಕ ಸಭೆ

0

MESCOM ಶಿವಮೊಗ್ಗ ನಗರ ಉಪವಿಭಾಗ-1, ಸರ್ವಜ್ಞ ವೃತ್ತ, ಬಾಲರಾಜ್ ಅರಸ್ ರಸ್ತೆ, ಮೆಸಾಂ ಕಚೇರಿಯಲ್ಲಿ ಅ. 9 ರಂದು ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, ಮೆಸ್ಜಾಂನ ಹಿರಿಯ ಅಧಿಕಾರಿಗಳು ಗ್ರಾಹಕರಿಂದ ಮೆಸ್ಕಾಂ ವಿದ್ಯುತ್ ಸಂಬಂಧಿತ ಅಹವಾಲುಗಲನ್ನು ಸ್ವೀಕರಿಸಲಾಗುವುದರಿಂದ ಈ ವ್ಯಾಪ್ತಿಯ ಗ್ರಾಹಕರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಮೆಸ್ಕಾಂ ತಿಳಿಸಿದೆ.

ಸೊರಬದ ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆಯಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ

0

ಸ್ವಚ್ಛ, ಸುಂದರ ಪಟ್ಟಣವನ್ನಾಗಿಸುವ ಕನಸು ಕಾಣುತ್ತಿರುವ ಅಧಿಕಾರಿಗಳು ಕಸ ವಿಲೇವಾರಿ ಮಾಡುವುದನ್ನು ಮರೆತಂತೆ ಕಾಣುತ್ತಿದ್ದು, ಡಾ. ಬಿ.ಆರ್. ಅಂಬೇಡ್ಕರ್ ಬಡಾವಣೆಯಲ್ಲಿ ತ್ಯಾಜ್ಯ ವಿಲೇವಾರಿಯಾಗದೆ ರಸ್ತೆ ಬದಿಯಲ್ಲಿ ಕಸದ ರಾಶಿ ರಾರಾಜಿಸುತ್ತಿದೆ.
ಪ್ರತಿ ವರ್ಷ ಪುರಸಭೆ ವತಿಯಿಂದ ಕಸ ವಿಲೇವಾರಿಗಾಗಿ ಕೋಟ್ಯಂತರ ರೂ., ವ್ಯಯ ಮಾಡಲಾಗುತ್ತಿದೆ ಎನ್ನುವ ಅಧಿಕಾರಿಗಳು ಬಿಡುಗಡೆಯಾದ ಅನುದಾನ ಸರಿಯಾಗಿ ಬಳಕೆಯಾಗುತ್ತಿದೆಯೇ ಎನ್ನುವ ಕುರಿತು ಗಮನಹರಿಸಿದಂತೆ ಕಾಣುತ್ತಿಲ್ಲ. ಅಧಿಕಾರಿಗಳ ಕರ್ತವ್ಯ ಲೋಪದಿಂದ ಪಟ್ಟಣದಲ್ಲಿ ಕಸದ ರಾಶಿ ದ್ವಿಗುಣ ಗೊಳ್ಳುತ್ತಿದೆ. ಸುಂದರ ಪಟ್ಟಣವನ್ನಾಗಿಸುವ ಕನಸು ಕಗ್ಗಂಟಾಗಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡೇ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಬಡಾವಣೆಯ ಬಿಎಸ್‌ಎನ್‌ಎಲ್ ಕಚೇರಿ ಬಳಿ ಸಮರ್ಪಕವಾಗಿ ಕಸ ವಿಲೇವಾರಿಯಾಗದೆ ರಸ್ತೆ ಬದಿಯಲ್ಲೇ ಕಸದ ರಾಶಿ ರಾರಾಜಿಸುತ್ತಿದೆ. ಪುರಸಭೆಯಿಂದ ಆಟೋ, ಟ್ರ್ಯಾಕ್ಟರ್ಗಳು ಸಮರ್ಪಕವಾಗಿ ಕಸ ನಿರ್ವಹಣೆ ಮಾಡುತ್ತಿಲ್ಲ ಎನ್ನುವ ಆರೋಪ ಒಂದಡೆಯಾದರೆ, ಮತ್ತೊಂದಡೆ ಅಧಿಕಾರಿಗಳನ್ನು ಕೇಳಿದರೆ ಆಟೋ, ಟ್ರ್ಯಾಕ್ಟರ್ಗಳು ಮನೆ ಬಾಗಿಲಿಗೆ ಬರುತ್ತಿವೆ. ಆದರೂ, ಸಾರ್ವಜನಿಕರು ರಸ್ತೆ ಬದಿಯಲ್ಲಿಯೇ ಕಸ ಸುರಿಯುತ್ತಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿಕ್ರಿಯೆ ನೀಡುತ್ತಾರೆ.
ರಸ್ತೆ ಬದಿಯಲ್ಲಿ ಕಸದ ರಾಶಿ ಹಾಕುವುದರಿಂದ ದಾರಿ ಹೋಕರು ದುರ್ವಾಸನೆಯ ಜೊತೆಗೆ ತ್ಯಾಜ್ಯಗಳಲ್ಲಿನ ಪ್ಲಾಸ್ಟಿಕ್ ಕವರ್‌ಗಳು ರಸ್ತೆಯನ್ನೇ ಆಕ್ರಮಿಸುತ್ತಿವೆ. ಈ ಬಗ್ಗೆ ನೆರೆ ಹೊರೆಯವರು ಪ್ರಶ್ನಿಸಿದರೆ, ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆಗಳು ಜರುಗಿವೆ. ಮಾತ್ರವಲ್ಲದೇ ತ್ಯಾಜ್ಯವು ಚರಂಡಿಗಳನ್ನು ಸೇರುತ್ತಿದ್ದು, ಮಳೆ ಬಂದರೆ ನೀರು ಸರಾಗವಾಗಿ ಹರಿಯದೇ ರಸ್ತೆಯನ್ನು ಆಕ್ರಮಿಸುತ್ತದೆ. ಅಲ್ಲದೇ ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಮಾರ್ಪಡುತ್ತಿದೆ. ಇದರಿಂದ ಅನೇಕ ರೋಗಳು ಹರಡುವ ಭೀತಿ ಜನತೆಯಲ್ಲಿ ಉಂಟಾಗಿದೆ. ತ್ಯಾಜ್ಯವು ಅಲ್ಲೇ ಕುಳಿತು ದುರ್ವಾಸನೆ ಉಂಟಾಗುತ್ತಿದೆ. ಇದರಿಂದ ಅಕ್ಕಪಕ್ಕದ ನಿವಾಸಿಗಳ ಆರೊಗ್ಯದ ಮೆಲೆ ವಿಪರೀತ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿನಿಯರ ವಸತಿ ನಿಲಯ, ಸುಭಾಷ್ ಚಂದ್ರ ಬೋಸ್ ಸರ್ಕಾರಿ ಉರ್ದು ಪ್ರೌಢ ಶಾಲೆಗಳು ಇದ್ದು, ವಿದ್ಯಾಥಿಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತಾರೆ. ಪಾದಚಾರಿಗಳು, ವಾಹನಗಳ ಸವಾರರು ಪುರಸಭೆ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುವಂತಾಗಿದೆ.
ಪುರಸಭೆ ಅಧಿಕಾರಿಗಳು ಶೀಘ್ರ ಎಚ್ಚೆತ್ತುಕೊಂಡು ಕಸ ವಿಲೇವಾರಿ ನಿರ್ವಹಣೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ರಸ್ತೆ ಬದಿಯಲ್ಲಿ ಕಸ ಹಾಕುವವರಿಗೆ ದಂಡ ವಿಧಿಸಬೇಕು. ಈ ಮೂಲಕ ಪಟ್ಟಣದ ಸ್ವಚ್ಛತೆ, ಸೌಂದರ್ಯ ಕಾಪಾಡುವ ಮೂಲಕ ಆರೋಗ್ಯಕರ ವಾತಾವಣ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

Ministry of Parliamentary Affairs ಕಾರ್ಮಿಕರ ಸೇವೆಗಳ ವಿವಿಧ್ಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸುವ ಕುರಿತು ಸಭೆ

0

Ministry OF Parliamentary Affairs ವಿಧಾನಸೌಧದಲ್ಲಿ ಶ್ರೀ ಹೆಚ್ ಕೆ ಪಾಟೀಲ್, ಮಾನ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿಧ್ಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸ್ಥಾಪಿಸುವ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಸಚಿವ ಸಂಪುಟ ಉಪ ಸಮಿತಿ ಸಭೆಯನ್ನು ನಡೆಸಿದರು. .ಈ ಸಭೆಯಲ್ಲಿ ಶ್ರೀ ಪ್ರಿಯಾಂಕ್ ಖರ್ಗೆ, ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು, ಆರ್ಥಿಕ ಇಲಾಖೆಯ ಕಾರ್ಯದರ್ಶಿ ಗಳಾದ ಡಾ: ಎಂ.ಟಿ.ರೇಜು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶೆಟ್ಟಣ್ಣನವರ್, ಕಾರ್ಮಿಕ ಆಯುಕ್ತರಾದ ಡಾ:ಹೆಚ್.ಎನ್. ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತರಾದ ಡಾ:ಎಸ್.ಬಿ. ರವಿಕುಮಾರ್, ಕಾರ್ಮಿಕ ಇಲಾಖೆಯ ಉಪ ಕಾರ್ಯದರ್ಶಿ, ಶ್ರೀಮತಿ ರಾಜಶ್ರೀ ಹಾಜರಿದ್ದರು .

DC Shivamogga ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಿ ಸಹಕರಿಸಿ : ಗುರುದತ್ತ ಹೆಗಡೆ

0

DC Shivamogga ರಾಜ್ಯದ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ದಾಖಲೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಾದ್ಯಂತ ಆರಂಭಗೊಳಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯದಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಜನರು ತಮ್ಮ ಮಾಹಿತಿಯನ್ನು ನೀಡಿ, ಸಮೀಕ್ಷೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಆರ್ಥಿಕ ಮತ್ತು ಸಾಮಾಜಿಕ ಗಣತಿ ಬಗ್ಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅಂದಾಜು 4.85ಲಕ್ಷ ಕುಟುಂಬಗಳ ಪೈಕಿ ಈಗಾಗಲೇ 4ಲಕ್ಷ ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಂಡು ಶೇ. 80ರಷ್ಟು ಪ್ರಗತಿ ಸಾಧಿಸಲಾಗಿದ್ದು, ಉಳಿದ ಮನೆಗಳ ಸಮೀಕ್ಷೆಯನ್ನು ಮುಂದಿನ ಎರಡು ದಿನಗಳೊಳಗಾಗಿ ಪೂರ್ಣಗೊಳಿಸಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುವುದು. ಅದಕ್ಕಾಗಿ 4543ಬ್ಲಾಕ್‌ಗಳನ್ನು ಸೃಜಿಸಲಾಗಿದೆ ಎಂದವರು ತಿಳಿಸಿದರು.
ಈಗಾಗಲೇ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಶೇ.100ರಷ್ಟು ಸಮೀಕ್ಷಾ ಕಾರ್ಯ ಪೂರ್ಣಗೊಳಿಸಲಾಗಿದೆ. ಅಲ್ಲದೇ ಶಿಕಾರಿಪುರದಲ್ಲಿ ಶೇ.90ರಷ್ಟು ಗಣತಿ ಪೂರ್ಣಗೊಂಡಿರುವ ಮಾಹಿತಿ ಇದೆ. ಉಳಿದಂತೆ ಜಿಲ್ಲೆಯಾದ್ಯಂತ ಸಮೀಕ್ಷೆ ಪ್ರಗತಿ ಹಂತದಲ್ಲಿದೆ. ಸಮೀಕ್ಷೆಗೆ ಅಡಚಣೆಯಾಗುತ್ತಿರುವ ಕೆಲವು ಸ್ಥಳಗಳನ್ನು ಗುರುತಿಸಿ, ಸಮೀಕ್ಷೆಗೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಗಣತಿದಾರರು ಮನೆಮನೆ ಸಮೀಕ್ಷೆಗೆ ಬಂದಾಗ ಮಾಹಿತಿ ನೀಡಿ ಸಹಕರಿಸಿ ಎಂದು ಮನವಿ ಮಾಡಿದ ಅವರು, ಒತ್ತಾಯಪೂರ್ವಕವಾಗಿ ಮಾಹಿತಿ ಪಡೆದುಕೊಳ್ಳಲಾಗದು. ಸಮೀಕ್ಷೆಗೆ ಸರಿಯಾದ ಮಾಹಿತಿ ನೀಡಿದಲ್ಲಿ, ಸರ್ಕಾರದ ಯೋಜನೆಗಳ ಲಾಭ ಇನ್ನಷ್ಟು ಸಾರ್ವಜನಿಕರು ಪಡೆದುಕೊಳ್ಳಲು ಅನುಕೂಲವಾಗಲಿದೆ. ಇಲ್ಲದಿದ್ದಲ್ಲಿ ಮಾಹಿತಿ ನಿಖರವಾಗಿ ದಾಖಲಿಸಲಾಗದೆ ಸೌಲಭ್ಯಗಳಿಂದ ವಂಚಿತರಾಗಬಹುದಾದ ಸಂಭವವಿದೆ ಎಂದವರು ನುಡಿದರು.
ಸಮೀಕ್ಷಾ ಕಾರ್ಯದ ಪೂರ್ವದಲ್ಲಿ ಮನೆಮನೆಗೆ ಅಂಟಿಸಲಾಗಿರುವ ಗುರುತಿನ ಸಂಖ್ಯೆಯನ್ನು ಖಾಲಿ ಮನೆ, ಧಾರ್ಮಿಕ ಸ್ಥಳಗಳು,ವಾಣಿಜ್ಯ ಕಟ್ಟಡಗಳು ಸೇರಿದಂತೆ ಮತ್ತಿತರೆಡೆ ಅಂಟಿಸಲಾಗಿದೆ. ಇವುಗಳನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಮೇಲ್ವಿಚಾರಕರು ಇನ್ನೂ ಒಂದೆರೆಡು ದಿನಗಳಲ್ಲಿ ಅವುಗಳನ್ನು ಸರಿಪಡಿಸಿ, ಅಂತಿಮ ಮಾಹಿತಿಯನ್ನು ನೀಡಲಿದ್ದಾರೆ ಎಂದವರು ನುಡಿದರು.
DC Shivamogga ಕೆಲವು ಸ್ಥಳಗಳಲ್ಲಿನ ಟವರ್‌ಸಮಸ್ಯೆಗೆ ತಕ್ಷಣದ ಪರಿಹಾರ ಕಂಡುಕೊಂಡು ವಾಸಸ್ಥಳಕ್ಕೆ ಬಂದು ಸಮೀಕ್ಷೆ ಮಾಡಿ ಎಂದು ಕೆಲವು ಗ್ರಾಮೀಣ ಪ್ರದೇಶಗಳಲ್ಲಿನ ನಿವಾಸಿಗಳು ಬೇಡಿಕೆ ಇಟ್ಟಿರುವುದು ಗಮನಕ್ಕೆ ಬಂದಿದೆ. ಈ ಸಮಸ್ಯೆ ತಕ್ಷಣಕ್ಕೆ ಇತ್ಯರ್ಥಪಡಿಸಲು ಸಾಧ್ಯವಾಗದು. ಇದನ್ನು ಆದ್ಯತೆಯ ಮೇರೆಗೆ ಸಹಕರಿಸಲು ಗಮನಹರಿಸಲಾಗುವುದು. ಗ್ರಾಮೀಣರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದರು.
ಈ ಸಮೀಕ್ಷಾ ಕಾರ್ಯದಲ್ಲಿ ಕಂದಾಯ, ಬಿ.ಸಿ.ಎಂ., ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಸಹಕಾರ ಪಡೆದುಕೊಳ್ಳಲಾಗಿದೆ. ಸಮೀಕ್ಷೆಯ ಕುರಿತು ಸಮಸ್ಯೆಗಳಿಗಾಗಿ ನಗರದ ಮಹಾನಗರಪಾಲಿಕೆ ಮತ್ತು ಸಾಗರದ ತಾಲೂಕು ಕಚೇರಿಯಲ್ಲಿ ಸಹಾಯವಾಣಿ ಕೇಂದ್ರಗಳನ್ನು ಆರಂಭಿಸಿರುವುದಾಗಿ ಅವರು ತಿಳಿಸಿದರು.
ಜಿಲ್ಲೆಯ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿ ತಾಲೂಕುಗಳ ಕೆಲವು ಆಯ್ದ ಭಾಗಗಳಲ್ಲಿ ನೆಟ್ವರ್ಕ್‌ನ ಸಮಸ್ಯೆಯಿಂದಾಗಿ ಗಣತಿ ಕಾರ್ಯಕ್ಕೆ ಅಡಚಣೆ ಉಂಟಾಗುತ್ತಿದೆ. ಈ ಸಮೀಕ್ಷೆಯನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಪರ್ಯಾಯ ಕ್ರಮಗಳನ್ನು ಕೈಗೊಂಡಿದ್ದು, ಸಮೀಪದ ಗ್ರಾಮ ಪಂಚಾಯಿತಿ ಅಥವಾ ಶಾಲೆಗಳಲ್ಲಿ ನೆಟ್‌ವರ್ಕ್‌ನ ಸೌಲಭ್ಯವಿರುವ ಸ್ಥಳಗಳಲ್ಲಿ ದಾಖಲೆಗಳನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ. 250ಕ್ಕೂ ಹೆಚ್ಚಿನ ಸ್ಥಳಗಳನ್ನು ಗುರುತಿಸಿ, ಸಮೀಕ್ಷೆ ನಡೆಸಲಾಗುತ್ತಿದೆ. ಅದಕ್ಕಾಗಿ ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂಧಿಗಳ ಸಹಕಾರವನ್ನು ಪಡೆದುಕೊಳ್ಳಲಾಗುತ್ತಿದೆ ಎಂದರು. – ಎನ್.ಹೇಮಂತ್‌, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ. ಮತ್ತು ಇತರೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀಮತಿ ಶೋಭಾ ಅವರು ಉಪಸ್ಥಿತರಿದ್ದರು.

VISL Bhadravati ವಿಐಎಸ್‌ಎಲ್‌ ವತಿಯಿಂದ ಅರಕೆರೆ ಗ್ರಾಮದಲ್ಲಿ ಉಚಿತ ವೈದ್ಯಕೀಯ ಆರೋಗ್ಯ ಶಿಬಿರ

0

VISL Bhadravati ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ (ಶಿವಮೊಗ್ಗ), ಶಂಕರ ಕಣ್ಣಿನ ಆಸ್ಪತ್ರೆ (ಶಿವಮೊಗ್ಗ), ಭದ್ರಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಮತ್ತು ವಿಐಎಸ್‌ಎಲ್ ಆಸ್ಪತ್ರೆಗಳ ಸಹಯೋಗದೊಂದಿಗೆ ಭದ್ರಾವತಿಯ ಅರಕೆರೆ ಗ್ರಾಮದಲ್ಲಿ ಸಮಗ್ರ ಉಚಿತ ವೈಧ್ಯಕೀಯ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಹೃದಯಶಾಸ್ತ್ರ, ಮೂಳೆ ಚಿಕಿತ್ಸೆ, ಸಾಮಾನ್ಯ ತಪಾಸಣೆ, ನೇತ್ರವಿಜ್ಞಾನ, ದಂತವೈದ್ಯಶಾಸ್ತ್ರ ಮತ್ತು ಸ್ತ್ರೀರೋಗ ಶಾಸ್ತ್ರದಂತಹ ಕ್ಷೇತ್ರಗಳಲ್ಲಿ ಅನುಭವಿ ತಜ್ಞವೈದ್ಯರು ಭಾಗವಹಿಸುವ ಮೂಲಕ ಆರೋಗ್ಯ ಸಮಾಲೋಚನೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡಲಾಯಿತು. ಈ ಉಪಕ್ರಮದ ಭಾಗವಾಗಿ ರಕ್ತದೊತ್ತಡ (ಬಿಪಿ), ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಕಣ್ಣಿನ ಪರೀಕ್ಷೆ, ದಂತ ತಪಾಸಣೆ, ಎಲೆಕ್ಟ್ರಾಕಾರ್ಡಿಯೋಗ್ರಾಮ್ (ಇಸಿಜಿ), ೨ಡಿ ಎಕೋಕಾರ್ಡಿಯೋಗ್ರಫಿ (೨ಡಿ ಎಕೋ) ಮತ್ತು ಸ್ತ್ರೀ ಸಂಬಂಧಿತ ರೋಗಗಳ ತಪಾಸಣೆಗಳನ್ನು ಮಾಡಲಾಯಿತು.

VISL Bhadravati ಶ್ರೀ ಬಿ.ಎಲ್. ಚಾಂದವಾನಿ, ಕಾರ್ಯಪಾಲಕ ನಿರ್ದೇಶಕರು, ವಿಐಎಸ್‌ಎಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇವರೊಂದಿಗೆ ವಿಐಎಸ್‌ಎಲ್‌ನ ಅಧಿಕಾರಿಗಳಾದ ಶ್ರೀ ಎಲ್. ಪ್ರವೀಣ್ ಕುಮಾರ್, ಶ್ರೀಮತಿ ಶೋಭಾ ಶಿವಶಂಕರನ್, ಡಾ|| ಕೆ.ಎಸ್. ಸುಜೀತ್ ಕುಮಾರ್, ಡಾ|| ಎಸ್.ಎನ್. ಸುರೇಶ್, ಶ್ರೀ ಎಮ್.ಎಲ್. ಯೋಗೀಶ್, ಶ್ರೀಮತಿ ಅಪರ್ಣ, ಅರಕೆರೆ ಗ್ರಾಮದಿಂದ ಶ್ರೀಮತಿ ರತ್ನಮ್ಮ ರುದ್ರೇಶ್, ಅಧ್ಯಕ್ಷರು ಅರಕೆರೆ ಗ್ರಾಮಪಂಚಾಯ್ತಿ, ಶ್ರೀ ಆರ್.ಶಿವಶಂಕರಮೂರ್ತಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಅರಕೆರೆ ಗ್ರಾಮಪಂಚಾಯ್ತಿಯ ಸದಸ್ಯರಾದ ಶ್ರೀ ಎಸ್.ಎಲ್. ರವಿಕುಮಾರ್, ಶ್ರೀ ಟಿ.ಎಮ್.ಗುರುಮೂರ್ತಿ, ಶ್ರೀಮತಿ ಟಿ. ಗಾಯತ್ರಿ ಶಂಕರಪ್ಪ, ಶ್ರೀಮತಿ ಕಮಲಮ್ಮ, ಮುಖ್ಯೋಪಾಧ್ಯಾರು, ಸರ್ಕಾರಿ ಪ್ರೌಢಶಾಲೆ
ಅರಕೆರೆ, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಡಾ|| ಹರ್ಷಗೌಡ, ಡಾ|| ಚಂದನ್, ಡಾ|| ಬಸವರಾಜ್, ಶ್ರೀ ಗಣೇಶ್. ಶಂಕರ ಕಣ್ಣಿನ ಆಸ್ಪತ್ರೆಯ ಹರ್ಷ ಆರ್. ಗೌಡ. ಡಾ|| ಹರ್ಷಿತ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಮಾರಶೆಟ್ಟಿಹಳ್ಳಿ, ಭದ್ರಾವತಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಶ್ರೀಮತಿ ಕೆ.ಎಮ್. ಮಂಜುಳ, ಶ್ರೀಮತಿ ನಾಗರತ್ನ, ಶ್ರೀಮತಿ ಲಲಿತ, ಮತ್ತು ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಉಪಸ್ಥಿತರಿದ್ದರು. ೩೧೦ ಗ್ರಾಮಸ್ಥರು ಈ ಶಿಬಿರದ ಸದುಪಯೋಗಪಡಿಸಿಕೊಂಡರು.

ವಿಐಎಸ್‌ಎಲ್‌ ವತಿಯಿಂದ ಉಚಿತ ಔಷಧಿಗಳನ್ನು ವಿತರಿಸಲಾಯಿತು.

Shivaganga Yoga Center ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಿ :ಡಾ. ಎ.ಸತೀಶ್ ಕುಮಾರ್ ಶೆಟ್ಟಿ

0

Shivaganga Yoga Center ಪ್ರತಿಯೊಬ್ಬರೂ ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಲು ಮುಂದಾಗಬೇಕು ಎಂದು ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಹೇಳಿದರು.
ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ 15 ದಿನಗಳ ಉಚಿತ ಯೋಗ ಪ್ರಾಣಾಯಾಮ. ಹಾಗೂ ಧ್ಯಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಬಂಟರ ಭವನದಲ್ಲಿ ಈಗಾಗಲೇ ಅನೇಕ ಉಚಿತ ಆರೋಗ್ಯ ಶಿಬಿರ, ಯಕ್ಷಗಾನ ಪ್ರದರ್ಶನ ಹಾಗೂ ಇತರ ಕಲಾಪ್ರದರ್ಶನಗಳನ್ನು ನಡೆಸಿಕೊಡುವುದರ ಮುಖಾಂತರ ಬಂಟರ ಭವನವನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಜಂಟಿ ಆಶ್ರಯದಲ್ಲಿ ಯೋಗ ಶಿಬಿರ ನಡೆಸಿಕೊಡಲಾಗುತ್ತಿದೆ ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳಿಂದ ಪ್ರತಿಯೊಬ್ಬರು ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ ಶಿವಮೊಗ್ಗ ನಗರದಾದ್ಯಂತ ಅನೇಕ ಆಸ್ಪತ್ರೆಗಳು ನಿರ್ಮಾಣ ಆಗುತ್ತಿರುವುದನ್ನು ನೋಡಿದರೆ ಇದು ನಮ್ಮ ಆರೋಗ್ಯ ಬಹಳ ಬೇಗವಾಗಿ ಕ್ಷೀಣಿಸುತ್ತಿರುವುದರ ದ್ಯೋತಕವಾಗಿದೆ. ರಾಸಾಯನಿಕ ಮಿಶ್ರಿತ ಆಹಾರ ಸೇವನೆ ಮೇಲೆ ಹೆಚ್ಚು ಅವಲಂಬಿತರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.
Shivaganga Yoga Center ಯೋಗ ಶಿಬಿರದ ಮುಖಾಂತರ ಆಹಾರ ಪದ್ಧತಿ ಮತ್ತು ಜೀವನಶೈಲಿಯನ್ನು ಬದಲಾಯಿಸಿಕೊಂಡು ಉತ್ತಮ ಆರೋಗ್ಯ ಪಡೆಯಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ತಿಳಿಸಿದರು.
ನಗರದಲ್ಲಿ ಈಗಾಗಲೇ 38 ಕಡೆ ಉಚಿತವಾಗಿ ಯೋಗವನ್ನು ತರಬೇತಿ ಶಿಬಿರ ನಡೆಸುವುದರ ಮುಖಾಂತರ ಮನೆ ಮನೆಗಳಿಗೂ ತಲುಪಿಸುತ್ತಿದ್ದೇವೆ. ಕಾರ್ಯದರ್ಶಿ ಸುರೇಶ್ ಶೆಟ್ಟಿ, ನಿರ್ದೇಶಕರಾದ ದಿವಾಕರ್ ಶೆಟ್ಟಿ, ಶಿವಗಂಗಾ ಯೋಗ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಿ.ವಿಜಯಕುಮಾರ್, ಯೋಗ ಕೇಂದ್ರದ ಟ್ರಸ್ಟಿ ಎಂ.ಪಿ.ಆನಂದಮೂರ್ತಿ, ಯೋಗ ಶಿಕ್ಷಕರಾದ ವಿಜಯ ಬಾಯರಿ, ಕಾಟನ್ ಜಗದೀಶ್, ಕಿರಣ್, ಗಿರೀಶ್, ನೂರಾರು ಯೋಗಪಟುಗಳು ಉಪಸ್ಥಿತರಿದ್ದರು.

ಉತ್ತಮ ಆಹಾರ, ವ್ಯಾಯಾಮದಿಂದ ಸದೃಢ ಆರೋಗ್ಯ : ಡಾ. ಪ್ರವೀಣ್ ದೇವರಬಾವಿ

0

ಉತ್ತಮ ಆಹಾರ ಸೇವನೆ, ಒಳ್ಳೆಯ ಜೀವನಶೈಲಿ ಹಾಗೂ ವ್ಯಾಯಾಮ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ವೈದ್ಯ ಡಾ. ಪ್ರವೀಣ್ ದೇವರಬಾವಿ ಹೇಳಿದರು.
ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಸಂಯುಕ್ತ ವಿಶ್ರಾಂತ ನೌಕರರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಧುನಿಕ ಕಾಲದಲ್ಲಿ ನಮ್ಮ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳುವುದೇ ಒಂದು ಸವಾಲಾಗಿದೆ. ಪ್ರತಿ ನಿತ್ಯ ಯೋಗ ಮತ್ತು ವ್ಯಾಯಾಮ ಮಾಡಬೇಕು. ಸಕಾರಾತ್ಮಕ ಭಾವನೆಗಳು ನಮ್ಮ ಆರೋಗ್ಯ ಮತ್ತು ಮನಸ್ಸನ್ನು ಸದೃಢವಾಗಿ ಇಡುತ್ತವೆ ಎಂದು ತಿಳಿಸಿದರು.
ಮಧುಮೇಹ ಕರ್ನಾಟಕದ ಹೆಚ್ಚು ಜನರಲ್ಲಿ ಸಮಸ್ಯೆ ಉಂಟುಮಾಡುತ್ತಿದೆ. ಕಾಯಿಲೆಗಳಿಗೆ ನಾವು ಹೆದರದೆ ಸಕಾಲದಲ್ಲಿ ಆರೋಗ್ಯದ ತಪಾಸಣೆ ಮಾಡಿಸಬೇಕು. ಆರೋಗ್ಯ ಪದ್ಧತಿಯನ್ನು ಸರಿಯಾಗಿ ರೂಡಿಸಿಕೊಂಡರೆ ಯಾವ ಕಾಯಿಲೆಗಳು ಸಹ ನಮಗೆ ತೊಂದರೆ ಕೊಡುವುದಿಲ್ಲ. 40 ವರ್ಷ ದಾಟಿದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೆ ಒಮ್ಮೆ ಒಂದು ಬಾರಿ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಮತ್ತು ಕಣ್ಣುಗಳನ್ನು ಸಾಮಾನ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪ್ರತಿನಿತ್ಯ ಆಹಾರದಲ್ಲಿ ತರಕಾರಿ, ಹಣ್ಣು ಹಾಲು ಮತ್ತು ಪ್ರೋಟೀನ್ ಅಂಶ ಇರುವ ಹಾಗೆ ನೋಡಿಕೊಳ್ಳಬೇಕು. ಕರಿದ ಪದಾರ್ಥಗಳು, ಬೇಕರಿ ಪದಾರ್ಥಗಳು ಕೊಬ್ಬಿನ ಪದಾರ್ಥಗಳಿಂದ ದೂರವಿರಬೇಕು ಎಂದರು.
ವೈದ್ಯ ಅಭಿಷೇಕ್ ನುಚ್ಚಿನ್ ಮಾತನಾಡಿ ಶ್ವಾಸಕೋಶ ಹಾಗೂ ವಿವಿಧ ಕಾಯಿಲೆಗಳ ಬಗ್ಗೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಂಯುಕ್ತ ವಿಶ್ರಾಂತ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷ ರವಿಕುಮಾರ್ ಮಾತನಾಡಿ, ನಿವೃತ್ತ ಜೀವನದಲ್ಲಿ ನಮ್ಮ ಆರೋಗ್ಯ ಹಾಗೂ ಪ್ರತಿನಿತ್ಯದ ಚಟುವಟಿಕೆಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಸರಳ ವ್ಯಾಯಾಮ ಹಾಗೂ ಮನಸ್ಸಿಗೆ ಉಲ್ಲಾಸ ನೀಡುವಂತಹ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಗೌರವಾಧ್ಯಕ್ಷ ಪಿ.ಒ.ಶಿವಕುಮಾರ್ ಮಾತನಾಡಿ, ಒತ್ತಡ ಹಾಗೂ ಖಿನ್ನತೆಯಿಂದ ದೂರವಿರಬೇಕು. ಒಳ್ಳೆಯ ಆಲೋಚನೆ ಚಿಂತನೆ ನಮಗೆ ಜೀವನೋತ್ಸಾಹವನ್ನು ಉಂಟು ಮಾಡುತ್ತವೆ ಎಂದರು.
ಕಾರ್ಯದರ್ಶಿ ಕುಮಾರ್ ಬೆನಕಪ್ಪ, ರವಿಕುಮಾರ್, ನಿರ್ದೇಶಕರಾದ ಎನ್.ಬಿ.ಮಂಜುನಾಥ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.