Sunday, February 15, 2026
Sunday, February 15, 2026
Home Blog Page 143

Shivaganga Yoga Center ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಿ :ಡಾ. ಎ.ಸತೀಶ್ ಕುಮಾರ್ ಶೆಟ್ಟಿ

0

Shivaganga Yoga Center ಪ್ರತಿಯೊಬ್ಬರೂ ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಲು ಮುಂದಾಗಬೇಕು ಎಂದು ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಹೇಳಿದರು.
ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ 15 ದಿನಗಳ ಉಚಿತ ಯೋಗ ಪ್ರಾಣಾಯಾಮ. ಹಾಗೂ ಧ್ಯಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಬಂಟರ ಭವನದಲ್ಲಿ ಈಗಾಗಲೇ ಅನೇಕ ಉಚಿತ ಆರೋಗ್ಯ ಶಿಬಿರ, ಯಕ್ಷಗಾನ ಪ್ರದರ್ಶನ ಹಾಗೂ ಇತರ ಕಲಾಪ್ರದರ್ಶನಗಳನ್ನು ನಡೆಸಿಕೊಡುವುದರ ಮುಖಾಂತರ ಬಂಟರ ಭವನವನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಜಂಟಿ ಆಶ್ರಯದಲ್ಲಿ ಯೋಗ ಶಿಬಿರ ನಡೆಸಿಕೊಡಲಾಗುತ್ತಿದೆ ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳಿಂದ ಪ್ರತಿಯೊಬ್ಬರು ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ ಶಿವಮೊಗ್ಗ ನಗರದಾದ್ಯಂತ ಅನೇಕ ಆಸ್ಪತ್ರೆಗಳು ನಿರ್ಮಾಣ ಆಗುತ್ತಿರುವುದನ್ನು ನೋಡಿದರೆ ಇದು ನಮ್ಮ ಆರೋಗ್ಯ ಬಹಳ ಬೇಗವಾಗಿ ಕ್ಷೀಣಿಸುತ್ತಿರುವುದರ ದ್ಯೋತಕವಾಗಿದೆ. ರಾಸಾಯನಿಕ ಮಿಶ್ರಿತ ಆಹಾರ ಸೇವನೆ ಮೇಲೆ ಹೆಚ್ಚು ಅವಲಂಬಿತರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.
Shivaganga Yoga Center ಯೋಗ ಶಿಬಿರದ ಮುಖಾಂತರ ಆಹಾರ ಪದ್ಧತಿ ಮತ್ತು ಜೀವನಶೈಲಿಯನ್ನು ಬದಲಾಯಿಸಿಕೊಂಡು ಉತ್ತಮ ಆರೋಗ್ಯ ಪಡೆಯಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ತಿಳಿಸಿದರು.
ನಗರದಲ್ಲಿ ಈಗಾಗಲೇ 38 ಕಡೆ ಉಚಿತವಾಗಿ ಯೋಗವನ್ನು ತರಬೇತಿ ಶಿಬಿರ ನಡೆಸುವುದರ ಮುಖಾಂತರ ಮನೆ ಮನೆಗಳಿಗೂ ತಲುಪಿಸುತ್ತಿದ್ದೇವೆ. ಕಾರ್ಯದರ್ಶಿ ಸುರೇಶ್ ಶೆಟ್ಟಿ, ನಿರ್ದೇಶಕರಾದ ದಿವಾಕರ್ ಶೆಟ್ಟಿ, ಶಿವಗಂಗಾ ಯೋಗ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಿ.ವಿಜಯಕುಮಾರ್, ಯೋಗ ಕೇಂದ್ರದ ಟ್ರಸ್ಟಿ ಎಂ.ಪಿ.ಆನಂದಮೂರ್ತಿ, ಯೋಗ ಶಿಕ್ಷಕರಾದ ವಿಜಯ ಬಾಯರಿ, ಕಾಟನ್ ಜಗದೀಶ್, ಕಿರಣ್, ಗಿರೀಶ್, ನೂರಾರು ಯೋಗಪಟುಗಳು ಉಪಸ್ಥಿತರಿದ್ದರು.

ಉತ್ತಮ ಆಹಾರ, ವ್ಯಾಯಾಮದಿಂದ ಸದೃಢ ಆರೋಗ್ಯ : ಡಾ. ಪ್ರವೀಣ್ ದೇವರಬಾವಿ

0

ಉತ್ತಮ ಆಹಾರ ಸೇವನೆ, ಒಳ್ಳೆಯ ಜೀವನಶೈಲಿ ಹಾಗೂ ವ್ಯಾಯಾಮ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ವೈದ್ಯ ಡಾ. ಪ್ರವೀಣ್ ದೇವರಬಾವಿ ಹೇಳಿದರು.
ಶಿವಮೊಗ್ಗ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಸಂಯುಕ್ತ ವಿಶ್ರಾಂತ ನೌಕರರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ಆರೋಗ್ಯದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಧುನಿಕ ಕಾಲದಲ್ಲಿ ನಮ್ಮ ಆರೋಗ್ಯವನ್ನು ಸದೃಢವಾಗಿ ಇಟ್ಟುಕೊಳ್ಳುವುದೇ ಒಂದು ಸವಾಲಾಗಿದೆ. ಪ್ರತಿ ನಿತ್ಯ ಯೋಗ ಮತ್ತು ವ್ಯಾಯಾಮ ಮಾಡಬೇಕು. ಸಕಾರಾತ್ಮಕ ಭಾವನೆಗಳು ನಮ್ಮ ಆರೋಗ್ಯ ಮತ್ತು ಮನಸ್ಸನ್ನು ಸದೃಢವಾಗಿ ಇಡುತ್ತವೆ ಎಂದು ತಿಳಿಸಿದರು.
ಮಧುಮೇಹ ಕರ್ನಾಟಕದ ಹೆಚ್ಚು ಜನರಲ್ಲಿ ಸಮಸ್ಯೆ ಉಂಟುಮಾಡುತ್ತಿದೆ. ಕಾಯಿಲೆಗಳಿಗೆ ನಾವು ಹೆದರದೆ ಸಕಾಲದಲ್ಲಿ ಆರೋಗ್ಯದ ತಪಾಸಣೆ ಮಾಡಿಸಬೇಕು. ಆರೋಗ್ಯ ಪದ್ಧತಿಯನ್ನು ಸರಿಯಾಗಿ ರೂಡಿಸಿಕೊಂಡರೆ ಯಾವ ಕಾಯಿಲೆಗಳು ಸಹ ನಮಗೆ ತೊಂದರೆ ಕೊಡುವುದಿಲ್ಲ. 40 ವರ್ಷ ದಾಟಿದ ನಂತರ ಪ್ರತಿಯೊಬ್ಬರು ಆರು ತಿಂಗಳಿಗೆ ಒಮ್ಮೆ ಒಂದು ಬಾರಿ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಮತ್ತು ಕಣ್ಣುಗಳನ್ನು ಸಾಮಾನ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಪ್ರತಿನಿತ್ಯ ಆಹಾರದಲ್ಲಿ ತರಕಾರಿ, ಹಣ್ಣು ಹಾಲು ಮತ್ತು ಪ್ರೋಟೀನ್ ಅಂಶ ಇರುವ ಹಾಗೆ ನೋಡಿಕೊಳ್ಳಬೇಕು. ಕರಿದ ಪದಾರ್ಥಗಳು, ಬೇಕರಿ ಪದಾರ್ಥಗಳು ಕೊಬ್ಬಿನ ಪದಾರ್ಥಗಳಿಂದ ದೂರವಿರಬೇಕು ಎಂದರು.
ವೈದ್ಯ ಅಭಿಷೇಕ್ ನುಚ್ಚಿನ್ ಮಾತನಾಡಿ ಶ್ವಾಸಕೋಶ ಹಾಗೂ ವಿವಿಧ ಕಾಯಿಲೆಗಳ ಬಗ್ಗೆ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಸಂಯುಕ್ತ ವಿಶ್ರಾಂತ ನೌಕರರ ಸಂಘದ ಸಂಸ್ಥಾಪಕ ಅಧ್ಯಕ್ಷ ರವಿಕುಮಾರ್ ಮಾತನಾಡಿ, ನಿವೃತ್ತ ಜೀವನದಲ್ಲಿ ನಮ್ಮ ಆರೋಗ್ಯ ಹಾಗೂ ಪ್ರತಿನಿತ್ಯದ ಚಟುವಟಿಕೆಗಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಸರಳ ವ್ಯಾಯಾಮ ಹಾಗೂ ಮನಸ್ಸಿಗೆ ಉಲ್ಲಾಸ ನೀಡುವಂತಹ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಗೌರವಾಧ್ಯಕ್ಷ ಪಿ.ಒ.ಶಿವಕುಮಾರ್ ಮಾತನಾಡಿ, ಒತ್ತಡ ಹಾಗೂ ಖಿನ್ನತೆಯಿಂದ ದೂರವಿರಬೇಕು. ಒಳ್ಳೆಯ ಆಲೋಚನೆ ಚಿಂತನೆ ನಮಗೆ ಜೀವನೋತ್ಸಾಹವನ್ನು ಉಂಟು ಮಾಡುತ್ತವೆ ಎಂದರು.
ಕಾರ್ಯದರ್ಶಿ ಕುಮಾರ್ ಬೆನಕಪ್ಪ, ರವಿಕುಮಾರ್, ನಿರ್ದೇಶಕರಾದ ಎನ್.ಬಿ.ಮಂಜುನಾಥ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಶಿವಮೊಗ್ಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ – ಅಕ್ಟೋಬರ್ 10ರಂದು ಡಾ. ಅಂಬೇಡ್ಕರ್ ಭವನದಲ್ಲಿ

0

ಶಿವಮೊಗ್ಗದಲ್ಲಿ ಅ.10ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಶಿವಮೊಗ್ಗ, ಅಕ್ಟೋಬರ್ 6, 2025:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅ.10, 2025 ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.


ಈ ವರ್ಷದ ಘೋಷವಾಕ್ಯ

“ಹಿರಿಯ ನಾಗರಿಕರು; ನಮ್ಮ ಆಶೋತ್ತರಗಳು, ನಮ್ಮ ಯೋಗಕ್ಷೇಮ ಮತ್ತು ಹಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು” ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ನಾಗರಿಕರ ಹಕ್ಕುಗಳು, ಭದ್ರತೆ ಮತ್ತು ಸಾಮಾಜಿಕ ಭಾಗವಹಿಸುವಿಕೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ.


ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆ

  • ಉದ್ಘಾಟನೆ: ಎಸ್. ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು
  • ಅಧ್ಯಕ್ಷತೆ: ಎಸ್. ಎನ್. ಚನ್ನಬಸಪ್ಪ – ಶಾಸಕ, ಶಿವಮೊಗ್ಗ ನಗರ ಕ್ಷೇತ್ರ

ವಿಶೇಷ ಅತಿಥಿಗಳು

  • ಶ್ರೀಮತಿ ಲಕ್ಷ್ಮಿ ಆರ್. ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ
  • ಬಿ.ಕೆ. ಸಂಗಮೇಶ್ವರ – ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಹಾಗೂ ಶಾಸಕ
  • ಗೋಪಾಲಕೃಷ್ಣ ಬೇಳೂರು – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ಹಾಗೂ ಶಾಸಕ

ಭಾಗವಹಿಸುವ ಗಣ್ಯರು

  • ಲೋಕಸಭೆ ಮತ್ತು ವಿಧಾನಮಂಡಳಿಯ ಸದಸ್ಯರು
  • ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು
  • ಶಿವಮೊಗ್ಗ ಜಿಲ್ಲಾಧಿಕಾರಿ
  • ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
  • ಜಿಲ್ಲಾ ಪಂಚಾಯತ್ ಸಿಇಒ
  • ಮಹಾನಗರ ಪಾಲಿಕೆ ಆಯುಕ್ತರು
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು
  • ಅಂಗವಿಕಲರ ಕಲ್ಯಾಣಾಧಿಕಾರಿಗಳು
  • ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು
  • ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು
  • ವಿವಿಧ ಸಂಘಟನೆಗಳ ಪ್ರತಿನಿಧಿಗಳು
  • ಮಾಧ್ಯಮ ಪ್ರತಿನಿಧಿಗಳು
  • ಸಾರ್ವಜನಿಕರು ಮತ್ತು ಹಿರಿಯ ನಾಗರಿಕರು

ಸಾರ್ವಜನಿಕರ ಪಾಲ್ಗೊಳ್ಳುವಿಕೆ

ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು, ಸಾರ್ವಜನಿಕರು ಮತ್ತು ಸಮಾಜ ಸೇವಾ ಸಂಘಟನೆಗಳ ಸದಸ್ಯರು ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವು ಹಿರಿಯ ನಾಗರಿಕರ ಹಕ್ಕು, ಗೌರವ ಮತ್ತು ಜೀವನದ ಗುಣಮಟ್ಟವನ್ನು ಉತ್ತೇಜಿಸಲು ನಿಗದಿಯಾಗಿದೆ.

ತರೀಕೆರೆ – ಮೊಸರಳ್ಳಿ ನಡುವೆ ತಾತ್ಕಾಲಿಕವಾಗಿ ಮಾರ್ಗ ಬದಲಾವಣೆ

0

ತರೀಕೆರೆ – ಮೊಸರಳ್ಳಿ ನಡುವೆ ಬರುವ ಎಲ್‌ಸಿ.ನಂ: 24 ಮತ್ತು25 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.06 ರಿಂದ 08 ರವರೆಗೆ ತಾತ್ಕಾಲಿಕವಾಗಿ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ.
ಎಲ್‌ಸಿ 24- ಕಾಳಿಂಗಹಳ್ಳಿ ರಸ್ತೆ ರೈಲು ನಿಲ್ದಾಣ ಅ. 06 ರಂದು ಬೆ. 9.00 ರಿಂದ 07 ರಂದು ಬೆ 10.00ರವರೆಗೆ ಮಾರ್ಗ-1 ಬಾರಂದೂರು ಮೂಲಕ ಎಲ್.ಸಿ. 25 ಹಳ್ಳಿಕೆರೆ ಮುಖಾಂತರ ಮೊಸರಳ್ಳಿಗೆ ಹೋಗುವುದು ಹಾಗು 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ, ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗಂಗೆಯಿಂದ ಮೊಸರಳ್ಳಿಗೆ ಹೋಗುವುದು.
ಎಲ್.ಸಿ.25- ಕೆಂಚೇನಹಳ್ಳಿ ರಸ್ತೆ ರೈ.ನಿ.-ಅ.07 ಮತ್ತು 08 ರಂದು ಮಾರ್ಗ-1 ಬರಂದೂರು ಮೂಲಕ ಎಲ್‌ಸಿ -24 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗAಗೆ ಯಿಂದ ಮೊಸರಳ್ಳಿಗೆ ಹೋಗುವುದು.
ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

ಪ್ರತಿಭಾ ಪುರಸ್ಕಾರಕ್ಕೆ ನೋಂದಾಯಿಸಲು ಆಹ್ವಾನ

0

ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಅ.25ರಂದು ಹಮ್ಮಿಕೊಂಡಿದ್ದು, ಗಾಣಿಗ ಸಮಾಜದ ಹಿರಿಯ ನಾಗರಿಕರಿಗೆ ಗೌರವ ಸಮರ್ಪಣೆ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ನಾಗರಿಕರು ಹಾಗೂ ವಿದ್ಯಾರ್ಥಿಗಳು ನೋಂದಾಯಿಸಲು ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಅವರನ್ನು (ಮೊ.ಸಂ. 9448105198 ) ಹಾಗೂ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಎಮ್ ಆರ್ ಅವರನ್ನು (ಮೊ.ಸಂ. 9742778252 ) ಸಂಪರ್ಕಿಸಬಹುದಾಗಿದೆ. ಅ.15ರೊಳಗೆ ಅಗತ್ಯ ದಾಖಲೆಗಳೊಂದಿಗೆ ಹೆಸರುಗಳನ್ನು ನೋಂದಾಯಿಸಬಹುದಾಗಿದೆ.

DC Shivamogga ಶಿವಮೊಗ್ಗದ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳೊಂದಿಗೆ ಸಂಸದರ ಸಭೆ

0

DC Shivamogga ಶಿವಮೊಗ್ಗ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಗುರುತಿಸಿ ರಕ್ಷಿಸುವ ಉದ್ದೇಶದಿಂದ, ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಸಭೆ ನಡೆಸಿದರು. ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ, ಜಿಲ್ಲೆಯಾದ್ಯಂತ ಉತ್ಖನನ (excavation) ಕಾರ್ಯಗಳನ್ನು ವೈಜ್ಞಾನಿಕವಾಗಿ ನಡೆಸುವ ಬಗ್ಗೆ ಚರ್ಚಿಸಿ. ಉತ್ಖನನದಿಂದ ದೊರೆಯುವ ಐತಿಹಾಸಿಕ ಕಲಾಕೃತಿಗಳನ್ನು ಮತ್ತು ಪುರಾತನ ಅವಶೇಷಗಳನ್ನು ವಿಶ್ಲೇಷಿಸುವ ಮತ್ತು ಅವುಗಳ ಮಹತ್ವವನ್ನು ದಾಖಲಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲು ನಿರ್ಧಾರ ಮಾಡಲಾಯಿತು. DC Shivamogga ಗುರುತಿಸಲಾದ ಎಲ್ಲಾ ಪುರಾತತ್ವ ತಾಣಗಳನ್ನು ಶಾಶ್ವತವಾಗಿ ಸಂರಕ್ಷಿಸುವ ಮೂಲಕ ಶಿವಮೊಗ್ಗದ ಶ್ರೀಮಂತ ಇತಿಹಾಸವನ್ನು ಭವಿಷ್ಯದ ಪೀಳಿಗೆಗೆ ಉಳಿಸಲು ಅಧಿಕಾರಿಗಳಿಗೆ ಬಿ.ವೈ‌ರಾಘವೇಂದ್ರ ಸೂಚನೆ ನೀಡಿದರು.

ಕೆನಡಾ ದೇಶದ ಭಾರತೀಯ ಉಪ ಹೈಕಮಿಷನರ್ ಜಿಯಾಫ್ರಿ ಡೀನ್ ಅವರು ಭೇಟಿ ಮಾಡಿದ ಶಾಲಿನಿ ರಜನೀಶ್

0

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಕೆನಡಾ ದೇಶದ ಭಾರತೀಯ ಉಪ ಹೈಕಮಿಷನರ್ ಜಿಯಾಫ್ರಿ ಡೀನ್ ಅವರು ಭೇಟಿ ಮಾಡಿ, ಕರ್ನಾಟಕ ರಾಜ್ಯ ಹಾಗೂ ಕೆನಡಾ ದೇಶದ ಸಹಯೋಗದಲ್ಲಿ ಕರ್ನಾಟಕದಲ್ಲಿ ಹಮ್ಮಿಕೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿದರು.
ರಾಜ್ಯದಲ್ಲಿ ಔದ್ಯೋಗೀಕರಣ, ಸ್ಟಾರ್ಟ್ ಅಪ್ ಗಳ ಕುರಿತು, ಕೃತಕ ಬುದ್ಧಿಮತ್ತೆ ಹಾಗೂ ಡಿಜಿಟಲೀಕರಣ, ಉನ್ನತ ಶಿಕ್ಷಣ ಹಾಗೂ ನೈಪುಣ್ಯತೆ, ಶುದ್ಧ ಇಂಧನ, ಕರ್ನಾಟಕ ಮತ್ತು ಕೆನಡಾ ದೇಶದ ಬಾಂಧವ್ಯ, ಪ್ರವಾಸೋದ್ಯಮದ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೆನಡಾ ದೇಶದ ರಾಯಭಾರಿ ಮಾರ್ಟಿನ್ ಬರ್ರಾಟ್ , ಮಂಜುನಾಥ ಕೆ. ಎಸ್, ಪ್ರಧಾನ ಕಾರ್ಯದರ್ಶಿಗಳಾದ ಸೆಲ್ವಕುಮಾರ್, ಮಂಜುಳ ಎನ್ ಮತ್ತಿತರರು ಉಪಸ್ಥಿತರಿದ್ದರು.

Karnataka Legislative Council ಬಾರ್ಬ್ಡೋಸ್‌ನಲ್ಲಿ ನಡೆಯುವ 68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗಿ

0

Karnataka Legislative Council ಅಕ್ಟೋಬರ್ 6 ರಿಂದ 10ರ ವರೆಗೆ ಕೆರೆಬಿಯನ್ ಪೂರ್ವ ದ್ವೀಪ ರಾಷ್ಟçವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ನ ಗಣರಾಜ್ಯವಾಗಿರುವ ಬಾರ್ಬ್ಡೋಸ್ ದೇಶದ ರಾಜಧಾನಿ ಬ್ರಿಜ್ಡ್ಟೌನ್ ನಗರದಲ್ಲಿ ನಡೆಯುವ 68ನೇ ಕಾಮನ್‌ವೆಲ್ತ್ನ ಸಂಸದೀಯ ಸಮಾವೇಶ ನಡೆಯಲಿದ್ದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ.

ಈ ಸಮಾವೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳು, ಲೋಕಸಭಾಧ್ಯಕ್ಷರು, ರಾಜ್ಯಸಭೆಯ ಉಪ ಸಭಾಪತಿಗಳು, ವಿವಿಧ ರಾಜ್ಯಗಳ ವಿಧಾನ ಸಭೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ನಾಲ್ಕು ದಿನಗಳ ಸಮಾವೇಶದಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ಅಂತಾರಾಷ್ಟಿçÃಯ ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

ಸಮಾವೇಶದ ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮುಖ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಲಿದ್ದು “ಪ್ರಜಾಪ್ರಭುತ್ವ ದೃಢಗೊಳಿಸುವಲ್ಲಿ ಶಾಸನ ಸಭೆಗಳ ಪಾತ್ರ”, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಹಾಗೂ ಪಾರದರ್ಶಕತೆಯ ಅವಶ್ಯಕತೆ”, “ಚುನಾವಣೆಗಳಲ್ಲಿ ಆರ್ಥಿಕ ಪಾರದರ್ಶಕತೆ ಮಹತ್ವ” ಹಾಗೂ “ಅತ್ಯುತ್ತಮ ಆಡಳಿತ, ಬಹುಪಕ್ಷೀಯತೆ ಮತ್ತು ಅಂತಾರಾಷ್ಟಿçÃಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಕಾಮನ್‌ವೆಲ್ತ್ನ ಪಾತ್ರ” ಮುಂತಾದ ವಿಷಯಗಳ ಕುರಿತು ಪ್ರತ್ಯೇಕವಾಗಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ.

Karnataka Legislative Council ಜಗತ್ತಿನಾದ್ಯಂತ ರಾಜಕೀಯ ಧುರೀಣರು ಮತ್ತು ನೀತಿ ನಿರೂಪಕರು ಸೇರಿಂದತೆ ಸಾವಿರಾರು ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲಿರುವ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೆ ಪ್ರಯಾಣ ಬೆಳೆಸಿದ್ದು, ಅಕ್ಟೋಬರ್ 05 ರಂದು ನಾಳೆ ಬಾರ್ಬ್ಡೋಸ್ ದೇಶದ ರಾಜಧಾನಿ ಬ್ರಿಜ್ಡ್ಟೌನ್ ನಗರ ತಲುಪಲಿದ್ದಾರೆ.

Athletics Championship 36ನೇ ಸೌತ್‌ಜೋನ್ ಜೂ. ಅಥ್ಲೇಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಪಡೆದ ಜಿಲ್ಲಾ ಕ್ರೀಡಾಪಟುಗಳು

0

Athletics Championship ಆಂದ್ರಪ್ರದೇಶದ ಗುಂಟೂರು ನಾಗಾರ್ಜುನ್ ಯೂನಿವರ್ಸಿಟಿಯಲ್ಲಿ ಸೆ. 23 ರಿಂದ 25ರವರೆಗೆ ಅಥ್ಲೆಟಿಕ್ಸ್ ಅಸೋಸಿಯೇಸನ್ಸ್ ವತಿಯಿಂದ ನಡೆದ 36ನೇ ಸೌತ್‌ಜ್ಹೋನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2025ರ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಶಾಲೆ/ ವಸತಿ ನಿಲಯಗಳ ಕ್ರೀಡಾಪಟಗಳು ಭಾಗವಹಿಸಿ ಪದಕಗಳನ್ನು ಗಳಿಸಿದ್ದಾರೆ. ಸಂಜಯ್ ಸುನೀಲ್ ಹಂಚಿನಮನೆ 60ಮೀ ಮಿಡ್ಲ್ ಪ್ರಥಮ, ರಿಲೇಯಲ್ಲಿ ದ್ವಿತೀಯ, ಶರತ್ ಕೆ.ಜೆ. 600 ಮೀ ಮತ್ತು ಮಿಡ್ಲ್ ರಿಲೇಯಲ್ಲಿ ದ್ವಿತೀಯ, ಸಚಿನ್ ಎಲ್.ಜೆ.. ಮಿಡ್ಲ್ ರಿಲೇಯಲ್ಲಿ ಮತ್ತು ಮತ್ತು ಸಿರಿ ಕೆ.ಜೆ. ಮಿಡ್ಲ್ ರಿಲೇ ತೃತೀಯ ಸ್ಥಾನಗಳಲ್ಲಿ ವಿಜೇತರಾಗಿದ್ದು, ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ಬಾಳಪ್ಪ ಮಾನೆ ಅಥ್ಲೆಟಿಕ್ ದೈನಂದಿನ ತರಬೇತಿ ನೀಡುತ್ತಿದ್ದಾರೆ. Athletics Championship ವಿಜೇತರಿಗೆ ಜಿಲ್ಲಾಧಿಕಾರಿಗಳು, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ಜಿಲ್ಲಾ ಅಥ್ಲೆಟಿಕ್ ಅಸೋಸಿಯೋಶನ್ ಕಾರ್ಯದರ್ಶಿಗಳು ಹಾಗು ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

B.Y.Raghavendra ಸಂವಿಧಾನದ ಪ್ರಕಾರ ಜಾತಿ‌ ಜನಗಣತಿ ಮಾಡಲು ಕೇಂದ್ರಕ್ಕೆ ಮಾತ್ರ ಅಧಿಕಾರ.-ಸಂಸದ ಬಿ.ವೈ.ರಾಘವೇಂದ್ರ

0

B.Y.Raghavendra ಜಿಲ್ಲಾ ಉಸ್ತುವಾರಿ ಸಚಿವರು ಜಾತಿ ಗಣತಿ ವಿಷಯದಲ್ಲಿ ಮಾಧ್ಯಮದಲ್ಲಿ ಮಾತನಾಡಿದ್ದಾರೆ
ಇದನ್ನು ಗಮನಿಸಿದರೆ ಅವರಿಗೆ ಏನೂ ಗೊತ್ತಾಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ವಿರೋಧ ಪಕ್ಷವಾಗಿ ನಾವು ವಿಷಯವನ್ನು ತೆಗೆದುಕೊಳ್ಳುವುದಕ್ಕಿಂತ ಅವರ ಪಕ್ಷದವರೇ ಹೇಗೆ ತೆಗೆದುಕೊಂಡಿದ್ದಾರೆ ಎಂದು ಗೊತ್ತಾಗುತ್ತದೆ.
ಗಣತಿ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಜೋಶಿ ಹಾಗೂ ವಿಜಯೇಂದ್ರ ಬಗ್ಗೆ ಸುಮೊಟೋ ಕೇಸ್ ದಾಖಲಾಗಬೇಕು ಸಂಸದರಾದ ಬಿ.ವೈ.ರಾಘವೇಂದ್ರ ಎಂದಿದ್ದಾರೆ.

ಸಂವಿಧಾನದ ೭ನೇ ಶಡ್ಯೂಲ್ ನಲ್ಲಿ ಯಾರು ಗಣತಿ‌ ಮಾಡಬೇಕು ಎಂದು ಹೇಳಿದೆ
ಅದರ ಪ್ರಕಾರ ಜನಗಣತಿ ನಡೆಸುವ ಅಧಿಕಾರ ಕೇಂದ್ರಕ್ಕೆ ಮಾತ್ರ ಇದೆ. ಹೀಗಿದ್ದೂ ರಾಜ್ಯ ಸರ್ಕಾರ ಸಮೀಕ್ಷೆ-ಗಣತಿ ನಡೆಸುತ್ತಿದೆ
ಹಿಂದೆ ಇವರೇ ಮಾಡಿದ ಸಮೀಕ್ಷೆ ಪಕ್ಕಕ್ಕಿಡಲಾಗಿದೆ. ಹಿಂದಿನ ಸಮೀಕ್ಷೆಯ ಮಾಹಿತಿ ಸಹ ಸೋರಿಕೆ ಆಗಿದೆ
ಶಿಕ್ಷಕರು ಬಲವಂತವಾಗಿ ಸಮೀಕ್ಷೆಯಲ್ಲಿ ಭಾಗವಹಿಸುತ್ತಿದ್ದಾರೆ
ಅಧಿಕಾರಿಗಳು ರಿನೀವಲ್ ಪ್ರೊಸೆಸ್ ಗೆ ಸಿಲುಕಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಹಿಂದವನ್ನು ತೃಪ್ತಿಗೊಳಿಸಲು ಸಿಎಂ‍ ಸಿದ್ದರಾಮಯ್ಯ ಸಮೀಕ್ಷೆ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರ ಇದೆಯಾ ಎಂಬುದರ ಬಗ್ಗೆ ಜನ ಮಾತನಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಿಂದುಳಿದ ವರ್ಗದ ಚಾಂಪಿಯನ್‌ ರೀತಿ ನಡೆದುಕೊಳ್ಳುತ್ತಿದ್ದಾರೆ
ಆದರೆ ಕಾಂಗ್ರೆಸ್ ಕುತಂತ್ರದಿಂದ ಅಂಬೇಡ್ಕರ್ ಗೆ ಸೋಲಾಯಿತು, ತುರ್ತು ಪರಿಸ್ಥಿತಿ ಜಾರಿಗೆ ಬಂತು, ಕಾಕಾ ಕಾಲೇತ್ಕರ್ ವರದಿ‌ ಏಕೆ ಜಾರಿಯಾಗಲಿಲ್ಲ. ಮೊನ್ನೆ ತಾನೇ ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಹೋಗಿ ಸಚಿವರಾಗಿರುವ ಮಧು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

B.Y.Raghavendra ಕಾಂಗ್ರೆಸ್ ಪಕ್ಷದಲ್ಲಿ ಹಿಂದುಳಿದವರ ಕತೆ ಏನಾಗಿದೆ, ಬಿಜೆಪಿಯಲ್ಲೇನಾಗಿದೆ ಎಂದು ಜನರಿಗೆ ಗೊತ್ತಿದೆ
ಹಿಂದುಳಿದ ವರ್ಗದವರಿಗೆ ಕೇಂದ್ರದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಯಡಿಯೂರಪ್ಪ ಸಿಎಂ‌‌ ಆಗಿದ್ದಾಗ ಎಷ್ಟೊಂದು ಸಂಖ್ಯೆಯಲ್ಲಿ ಹಿಂದುಳಿದ ವರ್ಗಕ್ಕೆ ಅನುಕೂಲ ಮಾಡಿದ್ದಾರೆ.
ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ ?ಎಂದು ನಾಡಿನ ಜನತೆಗೆ ಗೊತ್ತಿದೆ
ಈ ಸಮೀಕ್ಷೆಯೂ ಯಶಸ್ವಿಯಾಗುವುದಿಲ್ಲ. ಹಿಂದೆ ಮಾಡಿದ‌ ಸಮೀಕ್ಷೆ ಏನಾಯಿತು, ಈಗೀನ ಸಮೀಕ್ಷೆ ಸಹ ಅದೇ ರೀತಿ ಆಗಲಿದೆ ಎಂದು ಹೇಳಿದ್ದಾರೆ.