Sunday, March 22, 2026
Sunday, March 22, 2026
Home Blog Page 1448

ಕೇಂದ್ರದ ಪಾಲಿರುವ ಯೋಜನೆಗಳಿಗೆ ಕೇಂದ್ರದ ಹೆಸರಿರಲಿ

0

ಒಂದು ಯೋಜನೆಗೆ ಕೇಂದ್ರದ ಪಾಲು ಇದ್ದರೆ ಅದಕ್ಕೆ ಕೇಂದ್ರದ ಹೆಸರನ್ನು ಇಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಂದು ಹೇಳಿದ್ದಾರೆ.

ತೆಲಂಗಾಣ ಸಚಿವ ಹರೀಶ್ ರಾವ್ ಅವರು ಕೇಂದ್ರವು 50 ರಿಂದ 55 ಪ್ರತಿಶತದಷ್ಟು ಹಣವನ್ನು ಒದಗಿಸುವುದಿಲ್ಲ ಮತ್ತು ಉಳಿದ 45 ಪ್ರತಿಶತವನ್ನು ರಾಜ್ಯವು ಮಾತ್ರ ಭರಿಸುತ್ತದೆ ಎಂದು ಹೇಳಿದ ನಂತರ ಸಚಿವರ ಹೇಳಿಕೆ ಬಂದಿದೆ.

ಕೇಂದ್ರ ಸರ್ಕಾರ ಮಾತ್ರ ರಾಜ್ಯಕ್ಕೆ ಉಚಿತ ಅಕ್ಕಿಯನ್ನು ನೀಡುತ್ತಿದೆ ಎಂದು ಅವರು ಹೇಳುತ್ತಿದ್ದಾರೆ. ಕೇಂದ್ರವು ಕೇವಲ 50 ರಿಂದ 55 ಪ್ರತಿಶತದಷ್ಟು ಹಣವನ್ನು ಒದಗಿಸುವುದಿಲ್ಲ, ಮತ್ತು ಉಳಿದ 45 ಪ್ರತಿಶತವನ್ನು ರಾಜ್ಯವು ಮಾತ್ರ ಭರಿಸುತ್ತದೆ ಮತ್ತು ಅದಕ್ಕಾಗಿ ತೆಲಂಗಾಣ ಸರ್ಕಾರವು 3,610 ಕೋಟಿ ರೂ.ಗಳನ್ನು ಖರ್ಚು ಮಾಡುತ್ತದೆ. ನಮ್ಮ ದೇಶವನ್ನು ಆರ್ಥಿಕವಾಗಿ ನೋಡಿಕೊಳ್ಳುವ ಐದು/ಆರು ರಾಜ್ಯಗಳಲ್ಲಿ ತೆಲಂಗಾಣವೂ ಒಂದಾಗಿದೆ.

ನಾವು ದೇಶಕ್ಕಾಗಿ ಹೆಚ್ಚುವರಿಯಾಗಿ 1,70,000 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇವೆ’ ಎಂದು ತೆಲಂಗಾಣ ಸಚಿವರು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ‘ಕೇಂದ್ರದ ಪಾಲನ್ನು ಹೊಂದಿರುವ ಪ್ರತಿಯೊಂದು ಯೋಜನೆಗೆ ಕೇಂದ್ರದ ಹೆಸರನ್ನು ಇಡಬೇಕು. ರಾಜ್ಯವು ಪಾಲನ್ನು ನೀಡಿದ ತಕ್ಷಣ, ನಾವು ಕೇಂದ್ರದ ಷೇರುಗಳನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಭಾರತ ಮತ್ತು ಚೀನಾ ಭಿನ್ನಾಭಿಪ್ರಾಯದ ದುರ್ಬಳಕೆ-ಡೆನಿಸ್ ಅಲಿಪೋವ್

0

ಕೆಲವು ಶಕ್ತಿಗಳು ಭಾರತ ಮತ್ತು ಚೀನಾದ ನಡುವಿನ ಭಿನ್ನಾಭಿಪ್ರಾಯವನ್ನು ಉದ್ದೇಶಪೂರ್ವಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಈ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಭಾರತಕ್ಕೆ ರಶ್ಯದ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿದ್ದಾರೆ.

ಅಮೆರಿಕ ನೇತೃತ್ವದ ಭಾರತ- ಪೆಸಿಫಿಕ್ ಉಪಕ್ರಮವನ್ನು ಟೀಕಿಸಿದ ಅವರು, ಇದು ನಿಯಂತ್ರಕ ನೀತಿಯ ಭಾಗವಾಗಿದೆ . ಆದರೆ ಕ್ವಾಡ್‌ನ ‘ವಿಭಜಕ ಹೇಳಿಕೆ’ಯನ್ನು ಅನುಮೋದಿಸಲು ನಿರಾಕರಿಸಿದ ಭಾರತದ ನಿಲುವು ಶ್ಲಾಘನೀಯ ಎಂದರು.

ಆರ್‌ಐಸಿ ಈ ಪ್ರದೇಶದಲ್ಲಿ ಪರಸ್ಪರ ತಿಳುವಳಿಕೆ, ನಂಬಿಕೆ ಮತ್ತು ಸ್ಥಿರತೆಯನ್ನು ವೃದ್ಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಮತ್ತು ಇದು ಸದಸ್ಯ ದೇಶಗಳ ನಡುವೆ ಸಹಕಾರ ಮತ್ತು ಸಮನ್ವಯವನ್ನು ಹೆಚ್ಚಿಸಲು ಮತ್ತಷ್ಟು ಕೊಡುಗೆಯನ್ನು ನೀಡುತ್ತದೆ. ಇದು ಭಾರತ- ಚೀನಾ ನಡುವಿನ ರಚನಾತ್ಮಕ ಮಾತುಕತೆಗೆ ಉತ್ತೇಜನ ನೀಡುತ್ತದೆ ಎಂಬ ವಿಶ್ವಾಸ ಇರುವುದರಿಂದ ನಿಸ್ಸಂಶಯವಾಗಿ ರಶ್ಯಾಕ್ಕೆ ಇದು ಆದ್ಯತೆಯ ವಿಷಯವಾಗಿದೆ.

ಈ ವಲಯದಲ್ಲಿ ಪರಸ್ಪರ ತಿಳುವಳಿಕೆ, ವಿಶ್ವಾಸ ಮತ್ತು ಸ್ಥಿರತೆಯನ್ನು ವೃದ್ಧಿಸುವಲ್ಲಿ ಹಾಗೂ ಮೂವರೂ ಭಾಗವಾಗಿರುವ ಬ್ರಿಕ್ಸ್, ಶಾಂಘೈ ಸಹಕಾರ ಸಂಘಟನೆಯಂತಹ ಬಹುಪಕ್ಷೀಯ ಸಂಸ್ಥೆಗಳ ಕಾರ್ಯಸೂಚಿಯನ್ನು ಬೆಂಬಲಿಸುವಲ್ಲಿ ಆರ್‌ಸಿಐ ನಿರ್ಣಾಯಕವಾಗಿದೆ ಎಂದವರು ಹೇಳಿದ್ದಾರೆ.

ರಷ್ಯಾ-ಭಾರತ-ಚೀನಾ (ಆರ್‌ಐಸಿ) ತ್ರಿಪಕ್ಷೀಯ ಬಾಂಧವ್ಯವು ಮೂರೂ ದೇಶಗಳಲ್ಲಿ ಅಸಾಧಾರಣ ಸಹಕಾರ ಸಂಬಂಧದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಇದು ಭಾರತ-ಚೀನಾ ನಡುವೆ ರಚನಾತ್ಮಕ ಸಂವಾದವನ್ನು ಉತ್ತೇಜಿಸಲು ಒತ್ತಾಸೆ ನೀಡುವ ಚೌಕಟ್ಟು ಆಗಬಹುದು. ಈ ತ್ರಿಪಕ್ಷಿಯ ಬಾಂಧವ್ಯದ ಅನುಸಂಧಾನವು ಇತರ ಕೆಲವು ಶಕ್ತಿಗಳ ಧೋರಣೆಗಿಂತ ವಿಭಿನ್ನವಾಗಿರಲಿದೆ ಎಂದು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅಲಿಪೋವ್ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ 8100 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಸರ್ಕಾರದ ನಿರ್ಧಾರ

ಸರ್ಕಾರ ರಾಜ್ಯದಲ್ಲಿ ಹೊಸ 8,100 ಶಾಲಾ ಕೊಠಡಿ ನಿರ್ಮಾಣ ಮಾಡಲು ಐತಿಹಾಸಿಕ ನಿರ್ಣಯ ತೆಗೆದುಕೊಂಡಿದೆ.
15 ದಿನಗಳ ಒಳಗಾಗಿ ಟೆಂಡರ್ ಪ್ರಕ್ರಿಯೆ ಅಂತಿಮಗೊಳ್ಳಲಿದೆ.

ಕೋವಿಡ್ ಮತ್ತಿತರ ಕಾರಣಗಳಿಂದ 4-5 ವರ್ಷಗಳಿಂದ ಹೊಸ ಕೊಠಡಿ ನಿರ್ಮಾಣವಾಗಿರಲಿಲ್ಲ.
ಈ ನಿಟ್ಟಿನಲ್ಲಿ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು , 1,200 ಕೋಟಿ ರೂ. ವೆಚ್ಚದಲ್ಲಿ ಕೊಠಡಿಗಳ ನಿರ್ಮಾಣಕ್ಕೆ ಸಜ್ಜಾಗಿದೆ.

ಆಯಾ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಶಾಲಾ ಕೊಠಡಿ ನಿರ್ವಣದ ಜವಾಬ್ದಾರಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದರು.

ಅತಿವೃಷ್ಟಿ ಕೂಡ ಶಾಲಾ ಕೊಠಡಿ ಹಾನಿಗೆ ಕಾರಣವಾಗಿದೆ. ಕಳೆದ ವರ್ಷ 48 ಸಾವಿರ ಶಾಲೆಯನ್ನು ಎ-ಬಿ-ಸಿ ಎಂದು ವರ್ಗೀಕರಣ ಮಾಡಿದ್ದೇವೆ. ಎ ವರ್ಗದಲ್ಲಿ 28 ಸಾವಿರ ಶಾಲೆಗಳಿವೆ. ಬಿ ವರ್ಗದಲ್ಲಿ 12-13 ಸಾವಿರ, ಸಿ ವರ್ಗದಲ್ಲಿ 7-8 ಸಾವಿರ ಶಾಲೆಗಳಿವೆ. ಮಲೆನಾಡು ಮತ್ತಿತರ ಕಡೆ ಮಳೆಯಿಂದ ಶಾಲೆಗಳು ಹಾನಿಗೀಡಾಗಿವೆ. ಅನೇಕ ಶಾಲೆಗಳು 10ಕ್ಕಿಂತ ಕಡಿಮೆ ಮಕ್ಕಳು ಇರುವಂತಹವುಗಳಾಗಿವೆ ಎಂದರು.

ಬಿಬಿಎಂಪಿ ಯಿಂದ ಹೊಸ ಫ್ಲ್ಯಾಟ್ ಖರೀದಿಸುವ ಬಡಜನತೆಗೆ ಆರ್ಥಿಕ ನೆರವು

0

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬಡಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬೆಂಗಳೂರು ಅಮೃತೋತ್ಸವ ಮನೆ ಯೋಜನೆಯಡಿ ಬಿಹೆಚ್ ಕೆ ಫ್ಲಾಟ್ ಖರೀದಿಸುವ ಆರ್ಥಿಕ ಹಿಂದುಳಿದ ನಿವೇಶನ ರಹಿತರಿಗೆ 5 ಲಕ್ಷ ರೂ. ಸಹಾಯಧನ ನೀಡಲು ಬಿಬಿಎಂಪಿ ಚಿಂತನೆ ನಡೆಸಿದೆ.

ನಗರದಲ್ಲಿ 20*30 ಅಥವಾ ಕಡಿಮೆ ಅಳತೆಯ ಸ್ವಂತ ನಿವೇಶ ಹೊಂದಿದ ಆರ್ಥಿಕ ಹಿಂದುಳಿದ ವರ್ಗಗಳ ಫಲಾನುಭವಿಗಳಿಗೆ ಈ ಯೋಜನೆಯಿಂದ ಮನೆ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಆದರೆ ನಿವೇಶನ ಖರೀದಿಸಲು ಆಗದ ಬಡವರು ಸ್ವಂತ ಮನೆಕಟ್ಟಲು ಆಗುತ್ತಿಲ್ಲ. ಹೀಗಾಗಿ ಒಂಟಿ ಮನೆ ಯೋಜನೆಯಡಿ ನೀಡುವ ಸ್ವಲ್ಪ ಅನುದಾನವನ್ನು ಸರ್ಕಾರದ ವಿವಿಧ ಯೋಜನೆಗಳಡಿ ನಿರ್ಮಿಸಲಾದ ಮನೆಗಳ ಖರೀದಿಗೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ ಎಂದರು.

ಈ ಕುರಿತು ಮಾಹಿತಿ ನೀಡಿರುವ ಪಾಲಿಕೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಡಾ.ರಾಮ್ ಪ್ರಸಾದ್ ಮನೋಹರ್, ಬಿಡಿಎ ಕೊಳಗೇರಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸುವ ಅಪಾರ್ಟ್ ಮೆಂಟ್ ಖರೀದಿಗೆ ಬಡವರಿಗೆ 5 ಲಕ್ಷ ರೂ. ನೆರವು ನೀಡುವ ಪ್ರಸ್ತಾವನೆಗೆ ಮುಖ್ಯ ಆಯುಕ್ತರು ಒಪ್ಪಿಗೆ ನೀಡಿದ್ದು, ಆಡಳಿತಾಧಿಕಾರಿಗಳ ಸಮ್ಮತಿ ಬಾಕಿ ಇದೆ ಎಂದು ಹೇಳಿದ್ದಾರೆ.

ಸಿಇಟಿಯಲ್ಲಿ ಪಿಯಸಿಯ ಅಂಕಗಳನ್ನ ಪರಿಗಣಿಸಿ ಹೊಸ ಪಟ್ಟಿಗೆ ಸೂಚನೆ

0

2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್‌ ಈಶ್ವರ್‌ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.

ಸಂಕಷ್ಟದಲ್ಲಿ ಸಹಾಯ ನೀಡಿದ ಭಾರತಕ್ಕೆ ಬಾಂಗ್ಲಾಪ್ರಧಾನಿ ಶ್ಲಾಘನೆ

ರಷ್ಯಾ-ಉಕ್ರೇನ್ ಸಂಘರ್ಷದ ವೇಳೆ ಮತ್ತು ಕೋವಿಡ್ ಸಂಕಷ್ಟದ ಕಾಲದಲ್ಲಿ ನೆರವಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಮವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶ್ಲಾಘಿಸಿದ್ದಾರೆ.

ಸೋಮವಾರ ಭಾರತಕ್ಕೆ ಭೇಟಿ ನೀಡಲಿರುವ ಪ್ರಧಾನಿ ಹಸೀನಾ ಅವರು, ಕೊರೋನಾ ಸಾಂಕ್ರಾಮಿಕ ರೋಗ ವೇಗವಾಗಿ ಹರಡುತ್ತಿರುವಾಗ ಲಸಿಕೆ ಅಭಿಯಾನದಡಿ ನೆರೆಯ ದೇಶಗಳಿಗೆ ಕೋವಿಡ್-19 ಲಸಿಕೆ ಒದಗಿಸಿದ ನರೇಂದ್ರ ಮೋದಿ ಸರ್ಕಾರದ ನಡೆಯನ್ನೂ ಶ್ಲಾಘಿಸಿದ್ದಾರೆ.

ಉಭಯ ದೇಶಗಳ ನಡುವೆ ಭಿನ್ನಾಭಿಪ್ರಾಯಗಳಿರಬಹುದು, ಆದರೆ, ಇವುಗಳನ್ನು ಸಂವಾದದ ಮೂಲಕ ಪರಿಹರಿಸಿಕೊಳ್ಳಬೇಕು. ಭಾರತ ಮತ್ತು ಬಾಂಗ್ಲಾದೇಶಗಳು ಹಲವಾರು ಕ್ಷೇತ್ರಗಳಲ್ಲಿ ಅದನ್ನು ನಿಖರವಾಗಿ ಮಾಡಿದೆ ಎಂದು ಅವರು ಹೇಳಿದರು.

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಸಮಯದಲ್ಲಿ ನಮ್ಮ ಅನೇಕ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು. ಈ ವೇಳೆ ಭಾರತವು ತನ್ನ ದೇಶ ವಿದ್ಯಾರ್ಥಿಗಳನ್ನು ಉಕ್ರೇನ್ ನಂದ ಸ್ಥಳಾಂತರಿಸಿದಾಗ ನಮ್ಮ ದೇಶದ ವಿದ್ಯಾರ್ಥಿಗಳನ್ನು ಕರೆತಂದರು. ಹೀಗಾಗಿ ನಮ್ಮ ವಿದ್ಯಾರ್ಥಿಗಳು ಮನೆಗೆ ಮರಳಿದ್ದಾರೆ. ನೀವು ಸ್ಪಷ್ಟವಾಗಿ ಸೌಹಾರ್ದ ಮನೋಭಾವವನ್ನು ತೋರಿದ್ದೀರಿ. ಈ ಉಪಕ್ರಮಕ್ಕಾಗಿ ನಾನು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದು ಪ್ರಧಾನಿ ಹಸೀನಾ ಅವರು ಹೇಳಿದರು.

ಸಾರ್ಕ್ ರಾಷ್ಟ್ರಗಳ ನಡುವೆ ಸಹಕಾರದ ಕೊರತೆಯಿದೆ ಎಂದು ಪಾಶ್ಚಿಮಾತ್ಯ ವೀಕ್ಷಕರು ಆಗಾಗ್ಗೆ ಮಾಡುವ ಟೀಕೆಗಳ ಕುರಿತಾದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಭಾರತ ಸರ್ಕಾರದ ಲಸಿಕೆ ಮೈತ್ರಿ ಕಾರ್ಯಕ್ರಮದ ಕುರಿತು ಇದು ಪ್ರಧಾನಿ ಮೋದಿಯವರು ಕೈಗೊಂಡ ಅತ್ಯಂತ ವಿವೇಕಯುತ ಉಪಕ್ರಮ ಎಂದು ಹೇಳಿದರು.

ಪ್ರಧಾನಿ ಮೋದಿ ಬಾಂಗ್ಲಾದೇಶಕ್ಕೆ ಮಾತ್ರವಲ್ಲದೆ ಕೆಲವು ದಕ್ಷಿಣ ಏಷ್ಯಾದ ದೇಶಗಳಿಗೂ ಲಸಿಕೆಗಳನ್ನು ಕೊಡುಗೆ ನೀಡಿದ್ದಾರೆ. ಹಾಗೂ ಇದು ನಿಜವಾಗಿಯೂ ತುಂಬಾ ಸಹಾಯಕವಾಗಿದೆ. ಮತ್ತು ಇದು ನಿಜವಾಗಿಯೂ ವಿವೇಕಯುತ ಉಪಕ್ರಮವಾಗಿದೆ ಎಂದರು.

ಬಾಂಗ್ಲಾದೇಶವು ತನ್ನ ಜನಸಂಖ್ಯೆಯ ಶೇ.90 ರಷ್ಟು ಜನರಿಗೆ ಕೋವಿಡ್ -19 ಲಸಿಕೆಗಳನ್ನು ನೀಡಿದೆ. ನಮ್ಮ ದೇಶದ ಜನರು, ವಿಶೇಷವಾಗಿ ಗ್ರಾಮ ಮಟ್ಟದ ಜನರು, ಕೆಲವು ಪಟ್ಟಣಗಳಲ್ಲಿಯೂ ಸಹ, ನಾನು ಅನೇಕ ಜನರು ಲಸಿಕೆ ತೆಗೆದುಕೊಳ್ಳಲು ತುಂಬಾ ಹಿಂಜರಿಯುವುದನ್ನು ನಾನು ಕಂಡುಕೊಂಡಿದ್ದೇನೆ ಎಂದು ಅವರು ಹೇಳಿದರು.

ಭಾರತವನ್ನು ಉತ್ತಮ ಸ್ನೇಹಿತ ಎಂದು ಉಲ್ಲೇಖಿಸಿದ ಬಾಂಗ್ಲಾ ಪ್ರಧಾನಿ, ಭಾರತ ದೇಶವು ಬಾಂಗ್ಲಾದೇಶದ ಅಗತ್ಯದ ಯುದ್ಧದ ಸಮಯಗಳಾದ 1971 ಮತ್ತು 1975 ರಲ್ಲಿ ನೆರವು ನೀಡಿತು. 1975 ರಲ್ಲಿ ಆಗಿನ ಪ್ರಧಾನಿ ನಮಗೆ ಭಾರತದಲ್ಲಿ ಆಶ್ರಯ ನೀಡಿದರು. ನಾವು ಹತ್ತಿರದ ನೆರೆಹೊರೆಯವರು ಹಾಗೂ ನಾನು ಯಾವಾಗಲೂ ನಮ್ಮ ನೆರೆಯ ದೇಶಗಳೊಂದಿಗೆ ಸ್ನೇಹಕ್ಕಾಗಿ ಪ್ರಾಮುಖ್ಯತೆ ಮತ್ತು ಆದ್ಯತೆಯನ್ನು ನೀಡುತ್ತೇನೆ ಎಂದು ಅವರು ಹೇಳಿದರು.

ಉಭಯ ದೇಶಗಳ ನಡುವಿನ ಬಾಂಧವ್ಯವು ತಮ್ಮ ನಾಗರಿಕರ ಒಳಿತಿಗಾಗಿ ಇರಬೇಕು ಎಂದರು.

ತೆಂಗಿನಕಾಯಿಯ ಪೌಷ್ಠಿಕಾಂಶದ ಬಗ್ಗೆ ಮಾಹಿತಿ

0

ತಾಜಾ ತೆಂಗಿನಕಾಯಿಯಿಂದ ತಯಾರಿಸಿದ ತೆಂಗಿನ ಎಣ್ಣೆ,ತೆಂಗಿನಕಾಯಿ ಗಂಜಿ, ತೆಂಗಿನ ಹಾಲು ಮತ್ತು ಕೊಬ್ಬರಿಯನ್ನು ಭಾರತೀಯ ಅಡುಗೆ ಮತ್ತು ಆಹಾರ ಪದ್ಧತಿಯಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತದೆ. ತೆಂಗಿನಕಾಯಿಯಲ್ಲಿರುವ ಪೌಷ್ಟಿಕಾಂಶದ ಕೊಬ್ಬು ನಮ್ಮ ದೇಹಕ್ಕೆ ಸಂಪೂರ್ಣ ಪೋಷಣೆ ನೀಡುತ್ತದೆ ಎಂದು ಸಂಶೋಧನೆ ಹೇಳುತ್ತದೆ.

ಹಾಗಾಗಿ ತೆಂಗಿನಕಾಯಿಯನ್ನು ಪೂಜೆ, ಅಡುಗೆ, ಆರೋಗ್ಯ ದಿನಚರಿಯಲ್ಲಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪೋಷಕಾಂಶಗಳಿಂದ ಸಮೃದ್ಧವಾಗಿರುವ ತೆಂಗಿನಕಾಯಿ ಸೂಪರ್‌ಫುಡ್ ಆಗಿದೆ. ಹಣ್ಣಿನ ರೂಪದಲ್ಲಿ ಹಸಿ ತೆಂಗಿನಕಾಯಿಯನ್ನು ಅನೇಕ ಭಕ್ಷ್ಯಗಳಲ್ಲಿ ಬಳಸುತ್ತಾರೆ. ಜೊತೆಗೆ ಒಣ ತೆಂಗಿನಕಾಯಿ ಕೊಬ್ಬರಿಯನ್ನು ಸಿಹಿತಿಂಡಿಗಳಲ್ಲಿ ಬಳಸಲಾಗುತ್ತದೆ.

ಸಸ್ಯಾಹಾರಿಗಳಿಗೆ ತೆಂಗಿನ ಹಾಲು ಅತ್ಯುತ್ತಮ ಪರ್ಯಾಯ ಪದಾರ್ಥವಾಗಿದೆ. ತೆಂಗಿನಕಾಯಿಯನ್ನು ಸಿಹಿ ತಿಂಡಿ, ಸಾಂಬಾರು, ಪಲ್ಯ, ಪೂಜಾ ವಿಧಿ ವಿಧಾನ ಸೇರಿದಂತೆ ಹಲವು ರೂಪಗಳಲ್ಲಿ ಬಳಸುತ್ತಾರೆ. ಒಣ ಕೊಬ್ಬರಿ, ಎಳನೀರು, ತಾಜಾ ಕೊಬ್ಬರಿ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನ ನೀಡುತ್ತದೆ. ತೆಂಗಿನಕಾಯಿ ನಮ್ಮ ಹೃದಯವನ್ನು ಸಹ ಆರೋಗ್ಯವಾಗಿರಿಸುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ತೆಂಗಿನಕಾಯಿಯನ್ನು ಸಾಮಾನ್ಯವಾಗಿ ಉತ್ತಮ ಕೊಬ್ಬಿನ ಮೂಲವೆಂದು ಹೇಳುತ್ತಾರೆ. ಪ್ರೋಟೀನ್ ಹಾಗೂ ಫೈಬರ್ ಜೊತೆಗೆ ಕಬ್ಬಿಣ, ಮ್ಯಾಂಗನೀಸ್, ತಾಮ್ರ, ಸೆಲೆನಿಯಮ್, ಪೊಟ್ಯಾಸಿಯಮ್, ಸತು, ರಂಜಕ, ಮೆಗ್ನೀಸಿಯಮ್ ಕೂಡ ಇದರಲ್ಲಿ ಸಾಕಷ್ಟು ಕಂಡು ಬರುತ್ತದೆ.

ಗುರುವಿನ ಮಾರ್ಗದರ್ಶನದಿಂದ ಬಾಳು ಸುಂದರ

0

ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ ಎಂಬುದು ಅದ್ಭುತ ಜೀವನ ಸಂದೇಶ. ತಂದೆ, ತಾಯಿಯಷ್ಟೇ, ಗುರುವಿಗೂ ಪವಿತ್ರ ಸ್ಥಾನ ಇದೆ. ಮುಂದೆ ಗುರಿ ಇರಬೇಕು, ಹಿಂದೆ ಗುರು ಇರಬೇಕು. ಆಗ ಬದುಕು ಇನ್ನೂ ಚೆಂದ ಎನ್ನುವ ಮಾತಿದೆ. ಒಂದಕ್ಷರ ಕಲಿಸಿದಾತನೂ ಗುರುವೇ. ಬದುಕು ಎಂಬುದೇ ಕಲಿಕೆ. ಜೀವನದ ಪ್ರತಿಯೊಂದು ಹಂತದಲ್ಲೂ ನಮಗೆ ಕಲಿಯುವುದಕ್ಕೆ ಸಿಗುತ್ತದೆ. ಹೀಗೆ ಒಳ್ಳೆಯ ವಿಚಾರಗಳನ್ನು ಕಲಿಯುತ್ತಾ ಮುನ್ನಡೆದಾಗ ಬದುಕು ಇನ್ನಷ್ಟು ಸುಂದರವಾಗಿ ಗೋಚರಿಸುತ್ತಾ ಸಾಗುತ್ತದೆ.

ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ, ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ.. ಇದನ್ನು ಆದಿ ಶಂಕರರು ರಚಿಸಿರುವ ಶ್ಲೋಕವಾಗಿದೆ. ಈ ಶ್ಲೋಕದ ಅರ್ಥ ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರಃ, ಈ ಲೋಕದ ಸೃಷ್ಟಿಕರ್ತ ಗುರು. ಆ ಮಹಾನ್ ಗುರುವಿಗೆ ನಮನ ಎನ್ನುವುದರ ಮೂಲಕ ಇಡೀ ಲೋಕವೇ ಗುರುವಿಗೆ ತಲೆಬಾಗುತ್ತದೆ.

ಒಬ್ಬ ವ್ಯಕ್ತಿಯನ್ನು ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವದಾಗಿದೆ. ಅದಲ್ಲದೇ ಒಂದು ದೇಶವನ್ನು ಕಟ್ಟಲು ಸಹ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ. ಗುರುಕುಲ ಶಿಕ್ಷಣ ದಿಂದ ಹಿಡಿದು ಇಂದಿನ ಶಿಕ್ಷಣದವರೆಗೂ ಶಿಕ್ಷಕರು ಇತರರ ಜೀವನವನ್ನು ರೂಪಿಸಲು ತಮ್ಮನ್ನು ತಾವು ಅರ್ಪಿಸಿಕೊಳ್ಳುತ್ತಿದ್ದಾರೆ. ಅವರು ವ್ಯಕ್ತಿಯ ಆತ್ಮ ವಿಶ್ವಾಸ, ಬದುಕನ್ನು ಬಲಪಡಿಸುತ್ತಾರೆ. ಜೀವನದ ಪ್ರತಿಯೊಂದು ತಪ್ಪು, ಒಪ್ಪುಗಳನ್ನು ತಿದ್ದಿ ತೀಡಿ ಮತ್ತು ಜವಬ್ದಾರಿಯ ಬಗ್ಗೆ ಕಲಿಸಿ ಕೊಡುತ್ತಾರೆ. ಹಾಗಾಗಿ ಇಷ್ಟೆಲ್ಲಾ ಜೀವನದ ಪಾಠಗಳನ್ನು ಕಲಿಸಿಕೊಡುವ ಶಿಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸುವ ಸಲುವಾಗಿ ಪ್ರತಿ ವರ್ಷ ಶಿಕ್ಷಕರ ದಿನವನ್ನು ಆಚರಣೆ ಮಾಡಲಾಗುತ್ತದೆ.

ನಮ್ಮ ಜೀವನದಲ್ಲಿ ಒಬ್ಬರು ಮಾರ್ಗದರ್ಶಕರು ಇರಲೇಬೇಕು. ಆಗಾ ಮಾತ್ರ ನಮ್ಮ ಜೀವನದಲ್ಲಿ ಯಶಸ್ಸುಗಳನ್ನು ಕಾಣಬಹುದು. ನಮ್ಮಲ್ಲಿ ಯಶಸ್ಸನ್ನು ಕಾಣಲು ವಿಶ್ವಾಸಯುತವಾದ ಗುರಿಯನ್ನು ಹುಟ್ಟುಹಾಕಲು ಪ್ರೋತ್ಸಾಹ ನೀಡುವವರು ಶಿಕ್ಷಕರೇ.. ಅನೇಕ ಕನಸುಗಳನ್ನು ಹುಟ್ಟು ಹಾಕಿ, ಅವುಗಳನ್ನು ಸಹಕಾರಗೊಳಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಸೋತಾಗ ಜೊತೆಯಿದ್ದು ಧೈರ್ಯ ತುಂಬುವವರು ಶಿಕ್ಷಕರು. ಗೆದ್ದಾಗ ಬೆನ್ನು ತಟ್ಟಿ ಹುರಿದುಂಬಿಸುವವರು ಶಿಕ್ಷಕರರು… ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವ ಇತಂಹ ಗುರುಗಳಿಗೆ ಶಿಷ್ಯರಾದ ನಾವು ಒಂದು ನಮನ ಸಲ್ಲಿಸುವುದು ನಮ್ಮ ಧರ್ಮ…

ಜೆಡಿಎಸ್ ಗೆ 85 ರಿಂದ 90 ಸ್ಥಾನ ಗೆಲ್ಲಲಿದೆ- ಕುಮಾರಣ್ಣ

0

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 85ರಿಂದ 90 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಗಮಂಗಲ ತಾಲೂಕಿನ ಚಿಕ್ಕಜಕ್ಕನಹಳ್ಳಿ ಗ್ರಾಮದಲ್ಲಿ ಪಕ್ಷದ ಮುಖಂಡರೊಬ್ಬರ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ದೇಶ ಮತ್ತು ರಾಜ್ಯದಲ್ಲಿ ಜನವಿರೋಧಿ ಸರಕಾರಗಳು ಅಧಿಕಾರ ನಡೆಸುತ್ತಿವೆ. ಜನರು ಸಂಕಷ್ಟಗಳನ್ನು ಸರಕಾರಗಳು ಕೇಳುತ್ತಿಲ್ಲ. ಹಾಗಾಗಿ ಜನಪರ, ಜನರ ಸಂಕಷ್ಟಗಳಿಗೆ ಸ್ಪಂದಿಸುವ ಸರಕಾರ ಬರಲು ಜೆಡಿಎಸ್‍ಗೆ ಮತ ಹಾಕಬೇಕು ಎಂದು ಅವರು ಮನವಿ ಮಾಡಿದರು.

ಜೆಡಿಎಸ್ ಸರಕಾರದ ಅಗತ್ಯವಿದೆ ಎಂದು ರಾಜ್ಯದಲ್ಲಿ ಜನತೆ ಚರ್ಚಿಸುತ್ತಿದ್ದಾರೆ.
ನಾವು ಹಿಂದಿನ ಚುನಾವಣೆಯಲ್ಲಿ ಜೆಡಿಎಸ್‍ಗೆ ಮತ ಹಾಕದೆ ತಪ್ಪು ಮಾಡಿದ್ದೇವೆ. ಈ ಚುನಾವಣೆಯಲ್ಲಿ ಜೆಡಿಎಸ್ ಸರಕಾರ ತರಬೇಕು ಎಂದು ಜನರು ಮಾತನಾಡಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ಹೇಳಿದರು.

ಮೋದಿ ಗೊಂಬೆ ಕುಣಿಸಲು ಬರುತ್ತಾರ?: ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೊಮ್ಮೆ ರಾಜ್ಯಕ್ಕೆ ಏಕೆ ಬರುತ್ತಾರೆ? ಇಲ್ಲಿ ಗೊಂಬೆ ಕುಣಿಸಲು ಬರುತ್ತಾರ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕಳೆದ ಮೂರು ವರ್ಷದಲ್ಲಿ ಸುಮಾರು 30ರಿಂದ 40 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಮೂಲ ಸೌಕರ್ಯಕ್ಕೆ ಹಾನಿಯಾಗಿದೆ. ಕೇಂದ್ರ ಸರಕಾರ ಯಾವುದೇ ಅನುದಾನ ನೀಡಿಲ್ಲ.ಇನ್ನೇಕೆ ರಾಜ್ಯಕ್ಕೆ ಮೋದಿ ಪದೇ ಪದೇ ಭೇಟಿ ನೀಡುತ್ತಾರೆ? ಎಂದು ತರಾಟೆಗೆ ತೆಗೆದುಕೊಂಡರು.
ರಾಜ್ಯದ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರದಿಂದ ಯಾವುದೇ ನೆರವು ದೊರೆಯುತ್ತಿಲ್ಲ. ಮೋದಿ ಅವರು ಕರ್ನಾಟಕ ರಾಜ್ಯಕ್ಕೆ ಏನು ನೆರವು ಕೊಟ್ಟಿದ್ದೀವಿ ಎಂದು ಬರುತ್ತಾರೆ? ಜನರ ಸಮಸ್ಯೆಗೆ ಏನು ಮಾಡಿದ್ದೇನೆಂದು ಬರುತ್ತಾರೆ? ಕೇವಲ ಭಾಷಣ ಬಿಗಿಯಲು ಬರುತ್ತಾರ? ಎಂದು ಅವರು ಕಿಡಿಕಾರಿದರು.

ಶಿಕ್ಷಕರು ಕಠಿಣ ಪರಿಶ್ರಮದಿಂದ ಯುವ ಮನಸ್ಸುಗಳಿಗೆ ಸಂತೋಷ ಹಂಚುತ್ತಾರೆ

0

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಅಲ್ಲದೆ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಅಧ್ಯಾಪಕರಿಗೆ ಶುಭಾಶಯ ಕೋರಿದ್ದಾರೆ.

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಎಲ್ಲ ಕಠಿಣ ಪರಿಶ್ರಮ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ನಾನು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು ಎಂದು ಹೇಳಿದ್ದಾರೆ.

ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು,

ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಯನ್ನು ಸ್ಮರಿಸುವ ದಿನವಿದು. ಭವ್ಯ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರವನ್ನು ಗುರುತಿಸಿ ಗೌರವಿಸುವ ದಿನವಿದು