Saturday, August 8, 2026
Saturday, August 8, 2026
Home Blog Page 145

Shivaganga Yoga Center ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೊಇಗ್ದ ಅವಶ್ಯಕತೆ ಇದೆ- ಎಸ್.ಎಸ್.ಜ್ಯೋತಿಪ್ರಕಾಶ್

0

Shivaganga Yoga Center ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ ಕೇಂದ್ರದ ಪಿರಮಿಡ್ ನಲ್ಲಿ ಶ್ರೀ ಹಾಲಯ್ಯ ವಿರಕ್ತ ಮಠ ರವರ ನೇತೃತ್ವದಲ್ಲಿ ಜರುಗಿದ ಧ್ಯಾನ ಕಾರ್ಯಕ್ರಮದಲ್ಲಿ ರಾಘವ ಶಾಖೆಯ ಯೋಗ ಅಭ್ಯಾಸಿಗಳೊಂದಿಗೆ ಭಾಗವಹಿಸಿ ಯೋಗ ಕೇಂದ್ರದ ಟ್ರಸ್ಟಿ ಎಸ್.ಎಸ್. ಜ್ಯೋತಿಪ್ರಕಾಶ್ ರವರು ಮಾತನಾಡಿದರು.

ಅನುಭವ ಪಡೆದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುತ್ತಾ ಪ್ರಸ್ತುತ ಸನ್ನಿವೇಶದಲ್ಲಿ ಪ್ರತಿಯೊಬ್ಬರಿಗೂ ಧ್ಯಾನ ಮತ್ತು ಯೋಗದ ಅವಶ್ಯಕತೆ ಇದೆ. ಮಕ್ಕಳು ವಿದ್ಯಾರ್ಥಿಗಳು ವೃತ್ತಿಪರರು ವ್ಯಾಪಾರಸ್ಥರು ಕೈಗಾರಿಕೋದ್ಯಮಿಗಳು ತಮ್ಮ ಕೆಲಸ ಕಾರ್ಯದ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಂಡು ತಮ್ಮ ಕ್ಷೇತ್ರದಲ್ಲಿ ಯಶಸ್ವಿಯಾಗಲು ಮನಸು ಶಾಂತಿಯಿಂದ ಉಲ್ಲಾಸದಿಂದ ಇರುವುದು ಬಹು ಮುಖ್ಯ. ದಿನನಿತ್ಯವೂ ಧ್ಯಾನ ಯೋಗ ದಲ್ಲಿ ಮನಸ್ಸನ್ನು ತೊಡಗಿಸಿಕೊಳ್ಳಲು ಸ್ವಲ್ಪ ಸಮಯ ಮೀಸಲಾಗಿಡಬೇಕು ಮತ್ತು ಮಕ್ಕಳಿರುವಾಗಲೇ ಈ ಅಭ್ಯಾಸವನ್ನು ರೂಡಿಸುವುದು ಪೋಷಕರ ಕರ್ತವ್ಯ ಎಂದರು.

ಶ್ರೀ ಹಾಲಯ್ಯ ವಿರಕ್ತಮಠ ರವರುಮಾತನಾಡುತ್ತಾ ನೂರಕ್ಕೂ ಹೆಚ್ಚು ಧ್ಯಾನ ಪದ್ಧತಿಗಳಿವೆ, ಆನಪಾನಸತಿ ಧ್ಯಾನದ ಸರಳ ವಿಧಾನವನ್ನು ತಿಳಿಸಿ, ಯೋಗಾಚಾರ್ಯ ಶ್ರೀ ಸಿ. ವಿ.ರುದ್ರಾರಾರಾಧ್ಯರ ನೇತೃತ್ವದಲ್ಲಿ ನಿರ್ಮಾಣವಾಗಿರುವ ಪಿರಮಿಡ್ ಧ್ಯಾನಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.

Shivaganga Yoga Center ಇದೆ ಸಂದರ್ಭದಲ್ಲಿ ಯೋಗ ಶಿಬಿರದಲ್ಲಿ ಜಿ ವಿಜಯಕುಮಾರ್. ಯೋಗ ಶಿಕ್ಷಕರಾದ ವಿಜಯ ಕೃಷ್ಣ. ಎಚ್ ಕೆ ಹರೀಶ್. ದೀಪಕ್. ಸುಜಾತಾ ಮಧುಕೇಶ್ವರ್. ಗಾಯಿತ್ರಿ. ಶ್ರೀನಿವಾಸ್. ಕಾಟನ್ ಜಗದೀಶ್. ಆನಂದ್. ಸುಬ್ರಮಣಿ. ನರಸೋಜಿ ರಾವ್. ಶಂಕರ್ ಹಾಗೂ ಶಿವಗಂಗಾ ಯುವ ಕೇಂದ್ರದ ಯೋಗ ಶಿಬಿರಾರ್ಥಿಗಳು ಉಪಸ್ಥಿತರಿದರು ಶಿಬಿರಾರ್ಥಿಗಳಿಂದ ಒಂದು ಗಂಟೆಗೂ ಹೆಚ್ಚು ಕಾಲ ಧ್ಯಾನ ಮಾಡಲಾಯಿತು‌

Canara Bank ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ.

0

Canara Bank ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಮಹಿಳೆಯರಿಗೆ 31 ದಿನಗಳ ಅವಧಿಯ ಉಚಿತ ಮಹಿಳಾ ಟೈಲರಿಂಗ್ ತರಬೇತಿ ಶಿಬಿರವನ್ನು ಏಪ್ರಿಲ್ ತಿಂಗಳ 17 ನೇ ತಾರೀಖಿನಿಂದ ಪ್ರಾರಂಭಿಸಲಾಗುತ್ತಿದ್ದು, ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

Canara Bank ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ : 08/04/2026 ಬುಧವಾರ ಬೆಳಿಗ್ಗೆ 9.30 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ.

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ : 08/04/2026 ರೊಳಗೆ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050/ 9591514154/ 9686248369/ 6363139123/ 9505894247 ಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವAತೆ ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.

MESCOM ಏಪ್ರಿಲ್ 4. ಶಿವಮೊಗ್ಗದ ಹೊಸಳ್ಳಿ, ರಾಮೇನಕೊಪ್ಪ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ.

0

MESCOM  ಶಿವಮೊಗ್ಗ ಮಂಡ್ಲಿ 110\11 ಕೆವಿ ವಿದ್ಯುತ್ ಉಪಕೇಂದ್ರದಿAದ ಎಂ.ಆರ್.ಎಸ್ 220\11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110ಕೆವಿ ಎಸ್. ಎಸ್-1 ಮಾರ್ಗದಲ್ಲಿ ಏ. 04 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ರವರೆಗೆ ತ್ರೈಮಾಸಿಕ ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವದರಿಂದ ಹೊಸಳ್ಳಿ, ರಾಮೇನಕೊಪ್ಪ, ಕಲ್ಲೂರು, ಅಗಸವಳ್ಳಿ, ಹೊಸೂರು, ಲಕ್ಷ್ಮೀಪುರ, ಹೊನ್ನಾಪುರ, ಈಚಲವಾಡಿ, ಹಾಯ್‌ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಭಾರತಿನಗರ, ಅನುಪಿನಕಟ್ಟೆ, ಗೋವಿಂದಾಪುರ, MESCOM  ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲು ” ಅಲಂಕಾರ್. ಶೋ ಫಾರ್ ವಿಮೆನ್”- ಅಂಜು ಸುರೇಶ್

0

ಶಿವಮೊಗ್ಗ ನಗರದ ಬಾಲರಾಜ್ ರಸ್ತೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಏಪ್ರಿಲ್ 4ರಂದು ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ “ಅಲಂಕಾರ ದ ಶೋ ಫಾರ್ ವುಮೆನ್” ಪ್ರದರ್ಶನ ಮತ್ತು ಮಾರಾಟ ಮೇಳ ಹಮ್ಮಿಕೊಳ್ಳಲಾಗಿದೆ. ಕಂಚಿ ಸೀರೆಗಳು, ಬನಾರಸ್ ಸೀರೆಗಳು, ಡಿಸೈನರ್ ಸೀರೆಗಳು, ಡಿಸೈನರ್ ರವಿಕೆಗಳು, ಕುರ್ತಾ ಸೆಟ್‌ಗಳು, ಜ್ಯೂವೆಲ್ಲರಿ, ಬೆಡ್‌ಲೈನ್ಸ್, ಹ್ಯಾಂಡ್ ಬ್ಯಾಗ್ಸ್, ಗೃಹೋಪಯೋಗಿ ವಸ್ತುಗಳು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಲಭ್ಯವಿದೆ. ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಮೇಳ ಆಯೋಜನೆ ಮಾಡಲಾಗಿದ್ದು, ವೈವಿಧ್ಯಮಯ ಸ್ಟಾಲ್‌ಗಳನ್ನು ತೆರೆಯಲಾಗಿರುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಬೇಕು ಎಂದು ಆಯೋಜಕರಾದ ಅಂಜು ಸುರೇಶ್ ಮತ್ತು ಸುಪ್ರಿಯಾ ತಿಳಿಸಿದ್ದಾರೆ.

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

0

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಸಮರ್ಪಕವಾಗಿ ನಡೆಯದೇ ಸಾರ್ವಜನಿಕ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿರುವ ವಿಷಯವನ್ನು ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಸರ್ಕಾರದ ಗಮನಕ್ಕೆ ತಂದರು.

ಘನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಯಲ್ಲಿ ಭಾರೀ ಅವ್ಯವಸ್ಥೆಗಳು ಕಂಡುಬರುತ್ತಿದ್ದು, ಈ ವ್ಯವಸ್ಥೆ ಕ್ರಮೇಣ ಮಾಫಿಯಾ ಸ್ವರೂಪಕ್ಕೆ ತಿರುಗುತ್ತಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು. ಕಸ ಸಂಸ್ಕರಣೆ ವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿಲ್ಲದೆ, ಅಧಿಕಾರಿಗಳ ಹೊಣೆಗಾರಿಕೆಯ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾನ್ಯ ಶಾಸಕರು ಟೀಕಿಸಿದರು.

ರಾಜ್ಯದಲ್ಲಿ ಉತ್ಪತ್ತಿಯಾಗುವ ಕಸದ ಪ್ರಮಾಣದ ಲೆಕ್ಕಾಚಾರದಲ್ಲಿಯೇ ದೊಡ್ಡ ಮಟ್ಟದ ಅಸಂಗತತೆ ಇದೆ ಎಂದು ಪ್ರಶ್ನಿಸಿದರು. 100 ಟನ್ ಕಸ ಉತ್ಪತ್ತಿಯಾದರೆ ಕೇವಲ 50 ಟನ್ ಮಾತ್ರ ದಾಖಲಾಗುತ್ತಿದೆ ಎಂಬುದು ಗಂಭೀರ ಅನುಮಾನಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ಪ್ರಮಾಣದ ಕಸವನ್ನು ಡಂಪಿಂಗ್ ಯಾರ್ಡ್‌ಗಳಿಗೆ ಕಳುಹಿಸಲಾಗುತ್ತಿದ್ದು, ಮರುಬಳಕೆ ಹಾಗೂ ಉಪ ಉತ್ಪನ್ನಗಳ ಅಭಿವೃದ್ಧಿಗೆ ಯಾವುದೇ ಆದ್ಯತೆ ನೀಡಲಾಗುತ್ತಿಲ್ಲವೆಂದು ಅವರು ಆರೋಪಿಸಿದರು. ಅಲ್ಲದೇ, ಹೆಚ್ಚುವರಿ ಕಸವನ್ನು ಗ್ರಾಮೀಣ ಪ್ರದೇಶಗಳಲ್ಲಿ ಸುರಿಯುತ್ತಿರುವ ಘಟನೆಗಳತ್ತ ಗಮನ ಸೆಳೆದು, ಇದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ಹಾಗೂ ಪೌರಾಡಳಿತ ಇಲಾಖೆಗಳ ಸಮನ್ವಯದ ಮೂಲಕ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕೆಂದು ಒತ್ತಾಯಿಸಿದರು.

ಇ-ವೆಸ್ಟ್ ಹಾಗೂ ಮೆಡಿಕಲ್ ವೆಸ್ಟ್‌ನಂತಹ ಅಪಾಯಕಾರಿ ತ್ಯಾಜ್ಯಗಳ ನಿರ್ವಹಣೆಯಲ್ಲಿಯೂ ನಿರ್ಲಕ್ಷ್ಯ ಮುಂದುವರಿದಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಹಾಗೂ ಪರಿಸರಕ್ಕೆ ದೀರ್ಘಕಾಲಿಕ ಹಾನಿ ಸಂಭವಿಸುತ್ತಿದೆ ಎಂದು ಎಚ್ಚರಿಸಿದರು.
D.S. Arun 2016ರ ಘನ ತ್ಯಾಜ್ಯ ನಿರ್ವಹಣಾ ನಿಯಮಗಳು ಜಾರಿಯಾದು ದಶಕವಾಗುತ್ತಿದ್ದರೂ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ಘನ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಮಾಫಿಯಾ ಪ್ರಭಾವದಿಂದ ಮುಕ್ತಗೊಳಿಸಿ, ಜನಾರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ತಕ್ಷಣವೇ ಪಾರದರ್ಶಕ, ಕಟ್ಟುನಿಟ್ಟಾದ ಮತ್ತು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಡಿ.ಎಸ್. ಅರುಣ್ ಅವರು ಸರ್ಕಾರವನ್ನು ಎಚ್ಚರಿಸಿದರು.

ಕರ್ತವ್ಯದಲ್ಲಿ ನಿಷ್ಠೆ ತೋರಿದರೆ ಇಲಾಖೆಗೆ ಉತ್ತಮ ಹೆಸರು.ಆತ್ಮತೃಪ್ತಿ- ಎ.ಎಸ್.ರಾಜಕುಮಾರ್

0

ಸಮಯ ಪ್ರಜ್ಞೆ ಮತ್ತು ನಿಷ್ಟೆಯಿಂದ ಕರ್ತವ್ಯದಲ್ಲಿ ತೊಡಗಿದರೆ ಇಲಾಖೆಗೆ ಉತ್ತಮ ಹೆಸರು ಬರುವುದರೊಂದಿಗೆ ಪ್ರಶಂಸೆ, ಆತ್ಮತೃಪ್ತಿ ಲಭಿಸುತ್ತದೆ ಎಂದು ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರ ಹೇಳಿದರು.
ಶಿವಮೊಗ್ಗ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಏರ್ಪಡಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಕಾನೂನು ಸುವ್ಯವಸ್ಥೆಗಾಗಿ ಹಗಲಿರುಳು ದುಡಿಯುವ ಆರಕ್ಷಕ ಪಡೆಯ ಕರ್ತವ್ಯ ಸೇವೆ ನೆನೆಯುವ ದಿನ ಇದಾಗಿದೆ. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕವನ್ನು ಏಪ್ರಿಲ್ 2 ರಂದು ಮತ್ತು ಕರ್ತವ್ಯ ಮಾಡುತ್ತಲೇ ನಿಧನ ಹೊಂದಿದವರನ್ನು ಸ್ಮರಿಸಲು ಅ.21 ರಂದು ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದ್ದು, ಪೊಲೀಸ್ ಇಲಾಖೆಗೆ ಇವೆರೆಡು ವಿಶೇಷ ದಿನಗಳಾಗಿವೆ.
ಜಿಲ್ಲೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಶಾಂತಿ ಸ್ಥಾಪನೆಗೆ ಕೊಡುಗೆಯನ್ನಿತ್ತ ಪೊಲೀಸ್ ಪಡೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ದಕ್ಷತೆ, ಸಮಯ ಪ್ರಜ್ಞೆಯಿಂದ ದುಡಿದ ಪೊಲೀಸ್ ನೌಕರರ ಕುಂದುಕೊರತೆಗಳನ್ನು ಆಲಿಸಿ ಭದ್ರತೆಯನ್ನು ಒದಗಿಸುವಂತೆ ಇದೇ ವೇಳೆ ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್.ಬಿ ಮಾತನಾಡಿ, ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗಾಗಿಯೇ ನಿವೃತ್ತ ಪೊಲೀಸ್ ಕಲ್ಯಾಣ ನಿಧಿ ಸ್ಥಾಪಿಸಲಾಗಿದೆ. ಇದರ ಪ್ರಯುಕ್ತವಾಗಿ ಈ ದಿನದಂದು ಪೊಲೀಸ್ ಸಾಂಕೇತಿಕ ಧ್ವಜಗಳನ್ನು ಪೊಲೀಸ್ ಅಧಿಕಾರಿಗಳಿಗೆ, ಆಹ್ವಾನಿತ ಉನ್ನತ ಅಧಿಕಾರಿಗಳಿಗೆ, ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಸಂಗ್ರಹವಾಗಿ ಬಂದ ಹಣದಲ್ಲಿ ಶೇ. 50 ರಷ್ಟು ಹಣವನ್ನು ನಿವೃತ್ತ ಕ್ಷೇಮಾಭಿವೃದ್ದಿ ನಿಧಿಗೆ ಮತ್ತು ಶೇ.50 ರಷ್ಟನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮಾ ಮಾಡಲಾಗುವುದು ಎಂದರು.
2025 ನೇ ಸಾಲಿನಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಗಳ ಕಲ್ಯಾಣ ನಿಧಿಗೆ ರೂ. 26,96,870 ಹಣವನ್ನು ಸಂಗ್ರಹಣೆ ಮಾಡಲಾಗಿದೆ. ಇದರಲ್ಲಿ ಶೇ.50 ರಷ್ಟನ್ನು ಕೇಂದ್ರ ಕಲ್ಯಾಣ ನಿಧಿಗೆ ಜಮೆ ಮಾಡಲಾಗಿದೆ. ನಿವೃತ್ತ ಅಧಿಕಾರಿಗಳು ಮರಣ ಹೊಂದಿದಾಗ ಅವರ ಅಂತ್ಯ ಸಂಸ್ಕಾರ ನಿರ್ವಹಣೆಗಾಗಿ ಈ ಕಲ್ಯಾಣ ನಿಧಿಯಿಂದ ರೂ. 10 ಸಾವಿರ ಹಣವನ್ನು ನೀಡಲಾಗುತ್ತಿದೆ. 2025 ನೇ ಸಾಲಿನಲ್ಲಿ 17 ಜನ ಅಧಿಕಾರಿ/ಸಿಬ್ಬಂದಿಗಳಿಗೆ ರೂ. 1,70,000 ಹಣವನ್ನು ಅಂತ್ಯಸಂಸ್ಕಾರಕ್ಕೆ ನೀಡಲಾಗಿದೆ.
2025-26 ನೇ ಸಾಲಿನಲ್ಲಿ ಒಟ್ಟು 93 ಜನ ನಿವೃತ್ತ ಅಧಿಕಾರಿ, ಸಿಬ್ಬಂದಿಗಳಿಗೆ ನಿವೃತ ಕಲ್ಯಾಣ ನಿಧಿನಿಯಿಂದ ರೂ.3,29,000 ಗಳನ್ನು ವೈದ್ಯಕೀಯ ಚಿಕಿತ್ಸೆ ವೆಚ್ಚಕ್ಕಾಗಿ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ 70 ವರ್ಷ ಮೇಲ್ಪಟ್ಟ ನಿವೃತ್ತ ಪೊಲೀಸ್ ಅಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಹಾಗೂ 2013 ರಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದ ಪೂರ್ವ ಸಂಚಾರಿ ಪೊಲೀಸ್ ಠಾಣೆ ನಿವೃತ್ತ ಎ ಎಸ್ ಐ ರಾಜಕುಮಾರರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಕಾರಿಯಪ್ಪ, ಹಿರಿಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಪೊಲೀಸ್ ಪಬ್ಲಿಕ್ ಶಾಲೆಯಲ್ಲಿನ ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಜಿ‌ ಆಹ್ವಾನ

0

ಶಿವಮೊಗ್ಗ ನಗರದ ಮಾಚೇನಹಳ್ಳಿಯಲ್ಲಿರುವ 8ನೇ ಪಡೆ, ಕೆ.ಎಸ್.ಆರ್.ಪಿ ಘಟಕದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಖಾಲಿ ಇರುವ ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇಂಗ್ಲಿಷ್ ಶಿಕ್ಷಕರ ಹುದ್ದೆ, 02 ಸಂಖ್ಯೆ, ವಿದ್ಯಾರ್ಹತೆ ಬಿಎ/ಎಂಎ ಮತ್ತು ಬಿಡ್ ಆಗಿರಬೇಕು. ಸಮಾಜ ವಿಜ್ಞಾನ ಶಿಕ್ಷಕರು 02 ಸಂಖ್ಯೆ, ಬಿಎ/ಎಂಎ ಮತ್ತು ಬಿಎಡ್. ನರ್ಸರಿ ಶಿಕ್ಷಕರ ಹುದ್ದೆ 01 ಸಂಖ್ಯೆ, ಎನ್‌ಟಿಟಿ/ಇಸಿಸಿಇ/ಎಂಟಿಟಿ. ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ 01 ಸಂಖ್ಯೆ, ಬಿಪಿಎಡ್/ಎಂಪಿಎಡ್. ಸಂಗೀತ ಶಿಕ್ಷಕರ ಹುದ್ದೆ 01 ಸಂಖ್ಯೆ, ಸಂಗೀತದಲ್ಲಿ ಡಿಪ್ಲೊಮಾ ಆಗಿರಬೇಕು.
ಪೂರ್ಣ ಮಾಹಿತಿಯುಳ್ಳ ಅರ್ಜಿಯನ್ನು ಏಪ್ರಿಲ್ 7 ರೊಳಗೆ ಶಾಲೆಯ ಇಮೇಲ್ ವಿಳಾಸ pps8bnksrp@gmail.com ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ : 9480805961, 6363570450 ಗೆ ಕರೆ ಮಾಡಬಹುದು ಎಂದು ಕೆಎಸ್‌ಆರ್‌ಪಿ 8ನೇ ಪಡೆ ಕಮಾಂಡೆAಟ್ ಎಸ್ ಯುವಕುಮಾರ್ ತಿಳಿಸಿದ್ದಾರೆ.

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

0

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ ಸಂಕೇತ್‌ನ ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯ ಮತ್ತು ಅಸಹನೀಯವಾಗಿದ್ದು, ಇದು ವಿಕೃತ ಮನಸ್ಥಿತಿಯ ಪರಮಾವಧಿಯಾಗಿದೆ ಎಂದು ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಘಟನಾ ಸ್ಥಳವಾದ ಊರುಗಡೂರನ ರುದ್ರಭೂಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಮೃತ ಬಾಲಕನ ತಂದೆಗೆ ಧೈರ್ಯ ತುಂಬಿದರು.

ಸ್ಥಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕರು, “ಸತ್ತ ಮೇಲೆಯೂ ಹಗೆತನ ಸಾಧಿಸುವ ಇಂತಹ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ. ಸಂಕೇತ್ ತಂದೆಯ ಬೆನ್ನಿಗೆ ನಿಂತು ನಾನು ಸ್ಪಷ್ಟವಾಗಿ ಹೇಳಿದ್ದೇನೆ — ನಿಮ್ಮೊಂದಿಗೆ ನಾವಿದ್ದೇವೆ ಮತ್ತು ಇಡೀ ಹಿಂದೂ ಸಮಾಜವಿದೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು,” ಎಂದು ತಿಳಿಸಿದರು.

ಸಂಕೇತ್ ಹತ್ಯೆಯಾದ ಸಮಯದಲ್ಲಿ ಸಾಂತ್ವನ ಹೇಳಲು ‘ಕ್ಯಾಂಡಲ್ ಮಾರ್ಚ್’ ನಡೆಸಿದ್ದ ಮುಸ್ಲಿಂ ಸಮಾಜದ ಮುಖಂಡರು, ಇಂದು ಸಮಾಧಿ ಧ್ವಂಸವಾಗಿರುವ ಈ ಹೇಯ ಕೃತ್ಯಕ್ಕೆ ಏನು ಉತ್ತರ ನೀಡುತ್ತಾರೆ? ಸಂಕೇತ್‌ನನ್ನು ಹತ್ಯೆ ಮಾಡಿದವರು ನಶೆಯಲ್ಲಿದ್ದರು ಎಂದು ಹೇಳಲಾಗಿತ್ತು, ಅವರು ಈಗ ಜೈಲಿನಲ್ಲಿದ್ದಾರೆ. ಆದರೆ, ಈಗ ಈ ಸಮಾಧಿಯನ್ನು ಹಾಳು ಮಾಡಿದವರ ತಲೆಯಲ್ಲಿದ್ದ ಆ ‘ಕೋಮುವಾದಿ ನಶೆ’ ಯಾವುದು?” ಎಂದು ಶಾಸಕರು ಪ್ರಶ್ನಿಸಿದರು.

S.N. Channabasappa ಶಿವಮೊಗ್ಗದ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕದಡಲು ಯತ್ನಿಸುವ ಇಂತಹ ಪುಂಡಾಟಿಕೆಗಳನ್ನು ಹತ್ತಿಕ್ಕಲು ನಾವು ಬದ್ಧರಾಗಿದ್ದೇವೆ. ಈ ಘಟನೆಯ ಹಿಂದೆ ಇರುವ ತಪ್ಪಿತಸ್ಥರನ್ನು ತಕ್ಷಣವೇ ಗುರುತಿಸಿ ಅವರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಲು ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ವಿಶ್ರಮಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.

ಅದ್ಧೂರಿಯಾಗಿ‌ ನಡೆದ ಶ್ರೀಬಸವೇಶ್ವರ ಸ್ವಾಮಿಯ ರಥೋತ್ಸವ

0

ಶ್ರೀ ಅಕ್ಕನ ಹುಣ್ಣಿಮೆಯ ಪ್ರಯುಕ್ತ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘ ದ ವತಿಯಿಂದ ಶ್ರೀ ಬಸವೇಶ್ವರ ಸ್ವಾಮಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಗೆ ರುದ್ರಾಭಿಷೇಕ ಮತ್ತು ಮಹಾಪೂಜೆ ಕಾರ್ಯಕ್ರಮ ನೆರವೇರಿತು ಹಾಗೆ ಶರಬಿ ಗುಗ್ಗುಳ ಮತ್ತು ಕೆಂಡದಾರ್ಚನೆ ಕಾರ್ಯಕ್ರಮದೊಂದಿಗೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಓಕಳಿ ಮತ್ತು ರಾಜಭೀದಿ ಉತ್ಸವ ನೆರವೇರಿತು. ಮೆರವಣಿಗೆಯಲ್ಲಿ ಶ್ರೀ ಅಕ್ಕಮಹಾದೇವಿಯ ಭಾವಚಿತ್ರದ ಉತ್ಸವ ನೆರವೇರಿತು ಹಾಗೆ ಬಸವೇಶ್ವರ ಸ್ವಾಮಿ ರಥೋತ್ಸವದಲ್ಲಿ ದಿವಂಗತ ಉಡುಗಣಿ ಶೇಖರಪ್ಪ ಮತ್ತು ಮಕ್ಕಳು ಪಾನಕ ಸೇವೆ ನೆರವೇರಿಸಿದರು ಕೋಸಂಬರಿ ಸೇವೆಯನ್ನು ದಿವಂಗತ ಬಿಜಿ ಮಲ್ಲೇಶಪ್ಪ ಹಾಗೂ ದೇವಂಗತ ಬಿಜಿ ಗಂಗಾಧರಪ್ಪ ಮಕ್ಕಳು ದಿವಂಗತ ಎಸ್ ಪಿ ಶಾಂತಪ್ಪ ಮತ್ತು ಮಕ್ಕಳು ಇವರುಗಳು ನೆರವೇರಿಸಿ ಕೊಟ್ಟರು. ಕಾರ್ಯಕ್ರಮದಲ್ಲಿ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್ ಎಸ್ ಜ್ಯೋತಿಪ್ರಕಾಶ್. ನಿರ್ದೇಶಕರಾದ ಪಿ ರುದ್ರೇಶ್. ಮಹೇಶ್ ಮೂರ್ತಿ. ಮರುಳೆಶ್. ಹೆಚ್ ವಿ ಮಹೇಶ್ವರಪ್ಪ. ಶಿವಾನಂದ್. ಮಹೇಶ್ವರಪ್ಪ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ರುದ್ರಪ್ಪ ಚಿಲೂರು ಸಮಾಜದ ಭಕ್ತರು ಉಪಸ್ಥಿತರಿದ್ದರು ಕಾರ್ಯಕ್ರಮದ ನಂತರ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಯಿತು.

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡಸಿನ ಶವ ಪತ್ತೆ.ಮಾಹಿತಿ ಪ್ರಕಟಣೆ

0

ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಪಕ್ಕದಲ್ಲಿ ಸುಮಾರು 35 ವರ್ಷದ ಗಂಡಸಿನ ಶವ ಪತ್ತೆಯಾಗಿದೆ. ಆತನ ಚಹರೆ 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಎಡಗೈ ಮೇಲೆ ಜಿ. ರತ್ನಮ್ಮ ಮತ್ತು ಬಲಗೈ ಮೇಲೆ ಸಂಗೀತಾ ಜಿ.ಅಣ್ಣಪ್ಪ ಎಂದು ಕನ್ನಡದಲ್ಲಿ ಹಚ್ಚೆ ಗುರುತು ಇರುತ್ತದೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಇರುತ್ತದೆ. ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿಯ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ದೂ.ಸಂ.: 08182-222974/ 9480802124 ಗಳನ್ನು ಸಂಪರ್ಕಿಸುವಂತೆ ಪೊಲೀಸ್ ತಿಳಿಸಿದೆ.