Monday, February 16, 2026
Monday, February 16, 2026
Home Blog Page 146

Kateel Ashok Pai Memorial Institute ಗಾಂಧೀಜಿಯವರ ಸತ್ಯ,ಸಹಕಾರ, ಸಹೋದರತ್ವ, ಸ್ವಾವಲಂಬನೆ ಬಿಂಬಿಸಿದ ಗಾಂಧಿ ಜಯಂತಿ.

0

Kateel Ashok Pai Memorial Institute ಮಾನಸ ಟ್ರಸ್ಟ್ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಹಾತ್ಮ ಗಾಂಧಿಯವರ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಆಡಳಿತಾಧಿಕಾರಿಗಳಾದ ಪ್ರೊ ರಾಮಚಂದ್ರ ಬಾಳಿಗಾ ಅವರು ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜೀವನ ಮೌಲ್ಯ ಹಾಗೂ ದೇಶ ಪ್ರೇಮದ ಕುರಿತು NSS ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಮೋಹನ್ ಕುಮಾರ್ ಅವರು ಮಾತನಾಡಿದರು.

Kateel Ashok Pai Memorial Institute ಅಧ್ಯಕ್ಷತೆಯನ್ನು ವಹಿಸಿದ ಸಂಧ್ಯಾಕವೇರಿ ಅವರು “ಕರ್ನಾಟಕದಲ್ಲಿ ಗಾಂಧಿ” ಎಂಬ ಪುಸ್ತಕದಿಂದ ಗಾಂಧೀಜಿಯವರು ಭದ್ರಾವತಿಗೆ ಭೇಟಿ ನೀಡಿದ ಸಂಧರ್ಭದ ಕುರಿತ ಲೇಖನವನ್ನು ಓದಿ ಹೇಳಿದರು.

ವಿಧ್ಯಾರ್ಥಿಗಳು,ಉಪನ್ಯಾಸಕರು ಹಾಗೂ ಎಲ್ಲಾ ಸಿಬ್ಬಂದಿಗಳು ತನಮಯಿ ಹಾಗೂ ತಂಡದ ನೇತೃತ್ವದಲ್ಲಿ ಸುಶ್ರಾವ್ಯವಾಗಿ ಭಜನೆಗಳನ್ನು ಹಾಡಿದರು.
ತರುವಾಯ ಎಲ್ಲರೂ ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಮಹಾತ್ಮಗಾಂಧಿಯವರ ಸತ್ಯ ,ಸಹಕಾರ,ಸಹೋದರತ್ವ, ಸ್ವಾವಲಂಬನೆ ಕುರಿತು ಅವಲೋಕನ ಹಾಗೂ ಅನುಭವ ಹೊಂದುವ ಕಾರ್ಯಕ್ರಮ ಇದಾಗಿತ್ತು.

Ramesh Begar ರಮೇಶ್ ಬೇಗಾರ್ ನಿರ್ದೇಶನದ ಪ್ರೊಡಕ್ಷನ್, ನಂ 2 ಚಿತ್ರಕ್ಕೆ ಡಾ.ಮೇಘನಾ ನಾಯಕಿ

0

Ramesh Begar ರಮೇಶ್ ಬೇಗಾರ್ ಮಲೆನಾಡ ಭಾಗದ ಬಲುದೊಡ್ಡ , 40 ವರ್ಷಗಳಿಂದ ಜನ ಜನಿತ ಸಾಂಸ್ಕೃತಿಕ ಹೆಸರು. ಯಕ್ಷಗಾನ, ರಂಗಭೂಮಿ, ಕಿರುತೆರೆ ಜೊತೆಗೆ ಸಿನಿಮಾ ನಿರ್ದೇಶನವೂ ಸೇರಿದಂತೆ ಬಹು ಮಾಧ್ಯಮದಲ್ಲಿ ಕೆಲಸ ಮಾಡಿರುವ ಅನುಭವಿ. ಈಗಾಗಲೇ ‘ ವೈಶಂಪಾಯನ ತೀರ ‘ ಮತ್ತು 2023 ರಲ್ಲಿ ಯಶಸ್ವಿ 50 ದಿನ ಪೂರೈಸಿದ ‘ಜಲಪಾತ ‘ಎಂಬ ಪರಿಸರ ಕಾಳಜಿಯ ಚಲನಚಿತ್ರಗಳಿಗೆ ಆಕ್ಷನ್ – ಕಟ್ ಹೇಳಿರುವ ರಮೇಶ್ ಬರಹಗಾರರಾಗಿಯೂ ಸುವಿಖ್ಯಾತರು. ಮಲೆನಾಡ ಪ್ರಸಿದ್ಧ ಸಾಹಿತಿಗಳ ಸಣ್ಣ ಕಥೆಗಳನ್ನು ತೆರೆ ಮತ್ತು ರಂಗಕ್ಕೆ ತಂದವರು.

ಇದೀಗ ಜಲಪಾತ ಸಿನಿಮಾ ನಿರ್ಮಿಸಿದ ಶ್ರೀ ಎಂಟರ್ಪ್ರೈಸಸ್ ಬ್ಯಾನರ್ನ ಜೊತೆಗೆ ಮತ್ತೊಂದು ಸಿನಿಮಾ ಕ್ಕೆ ರಮೇಶ್ ಸಿದ್ಧತೆ ನಡೆಸಿದ್ದು ಈಗಾಗಲೇ 4 ಹಂತ ದ ಚಿತ್ರೀಕರಣ ಪೂರೈಸಿದ್ದಾರೆ. ಪ್ರಸಿದ್ಧ ಪತ್ರಕರ್ತ, ಲೇಖಕ, ಮುಂಚೂಣಿ ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟ ರಾಮಯ್ಯ ಇವರ ಕಾದಂಬರಿ ಯೊಂದನ್ನು ಆಧರಿಸಿದ ಈ ಸಿನಿಮಾ ಕೂಡಾ ನೀರಿನ ಮಹತ್ವ ಸಾರುವ ವಿಶಿಷ್ಟ ಕಥಾ ಹಂದರ ಹೊಂದಿದೆ.

ಇದೀಗ ಈ ವಿಭಿನ್ನ ಪ್ರಯೋಗದ ವಿಶಿಷ್ಟ ಸಿನಿಮಾ ಗೆ ಕನ್ನಡ ದ ಸೂಕ್ಷ್ಮ ಸಂವೇದನೆಗಳ ಪ್ರತಿಭಾವಂತ ನಟಿ, ಮೇಘನಾ ಗಾಂವ್ಕರ್ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಚಿತ್ರತಂಡ ನವರಾತ್ರಿ ಪರ್ವ ಕಾಲದಲ್ಲಿ ,ವೆಲ್ಕಮ್ ಆನ್ ಬೋರ್ಡ್ ಪೋಸ್ಟರ್ ಮೂಲಕ ಅವರನ್ನು ಭವ್ಯವಾಗಿ ಬರ ಮಾಡಿಕೊಂಡಿದೆ. ರಾಣಿ ಯ ಚಂದದ ನಿಲುವಿನಲ್ಲಿ ಅವರು ಹೊಸ ಗೆಟಪ್ ನಲ್ಲಿ ಗಮನ ಸೆಳೆದಿದ್ದಾರೆ.ಮೇಘನಾ ಪಾತ್ರಗಳ ವಿಷಯ ದಲ್ಲಿ ತುಂಬಾ ಅಳೆದು ತೂಗಿ ಆಯ್ಕೆ ಮಾಡುವ ಜ್ಞಾನ ಸಂಪನ್ನ ನಟಿ. ಇತ್ತೀಚಿಗೆ ಅವರು ಡಾಕ್ಟರೆಟ್ ಕೂಡಾ ಮಾಡಿದ್ದಾರೆ. ಮೇಘನಾ ಈ ಸಿನಿಮಾದ ಎರಡು ಹಂತದ ಶೂಟಿಂಗ್ ನ್ನೂ ಕಂಪ್ಲೀಟ್ ಮಾಡಿದ್ದಾರೆ ಮತ್ತು ಮಲೆನಾಡ ಈ ಕಲಾತಂಡ ದ ಕಲಾತ್ಮಕತೆ, ಕ್ರಿಯಾಶೀಲತೆಯ ಜೊತೆಗೆ ಆಸಕ್ತಿಯಿಂದ ತೊಡಗಿಸಿಕೊಂಡಿರುವ ಮೇಘನಾ ತನ್ನ ವೃತ್ತಿ ಬದುಕಿನ ಅತ್ಯಂತ ವಿಶೇಷವಾದ ಪಾತ್ರ ಇದಾಗಿದ್ದು ಅಪಾರ ಶ್ರದ್ಧೆಯಿಂದ ನಿರ್ವಹಿಸಲು ಕಾತರಳಾಗಿದ್ದೇನೆ ಎಂದು ತಿಳಿಸಿದ್ದಾರೆ.

Ramesh Begar ರಮೇಶ್ ಅವರ ಕಥನ ಕ್ರಮದಲ್ಲಿ ಭಾವನೆಗಳ ಕುಸುರಿ ಮತ್ತು ಬದ್ಧತೆ ಗೆ ಹೆಚ್ಚು ಆಯಾಮ ಇರುವುದು ಈಗಾಗಲೇ ಬಂದಿರುವ ಅವರ ಧಾರಾವಾಹಿ, ಕಿರುಚಿತ್ರ ಮತ್ತು ಸಿನಿಮಾ ಗಳಲ್ಲಿ ಕಾಣಬಹುದು. ಹಾಗಾಗಿ ಇವರ ಗರಡಿಯಲ್ಲಿ ಮೇಘನಾ ಅತೀ ವಿಶಿಷ್ಟ ವಾದ ಪಾತ್ರ ಪ್ರಸ್ತುತಿಯಲ್ಲಿ ತೆರೆಯ ಮೇಲೆ ಕಾಣಿಸಲಿದ್ದಾರಂತೆ. ಶೀಘ್ರದಲ್ಲಿ ಸಿನಿಮಾ ಶೀರ್ಷಿಕೆ, ನಾಯಕ ನಟ, ವಸ್ತು, ವಿಶೇಷತೆ ಮತ್ತು ಪೂರ್ಣ ಮಾಹಿತಿಯನ್ನು ಟೀಸರ್ ಮೂಲಕ ತಿಳಿಸಲು ಚಿತ್ರತಂಡ ಸಿದ್ಧತೆ ನಡೆಸಿದೆ. ಈ ಸಿನಿಮಾದ ತಾಂತ್ರಿಕ ವರ್ಗದಲ್ಲಿ ಬಹುತೇಕ ಜಲಪಾತ ತಂಡವೇ ಇದೆ. ನಾಗಶ್ರೀ ಬೇಗಾರ್ ರ ಕ್ರಿಯಾತ್ಮಕ ನಿರ್ದೇಶನ ಇರುವ ಈ ಚಿತ್ರದಲ್ಲಿ ವೀರ್ ಸಮರ್ಥ್ – ಸಂಗೀತ, ಶಶಿರ ಶೃಂಗೇರಿ -ಛಾಯಾಗ್ರಹಣ , ಅವಿನಾಶ್ ಶೃಂಗೇರಿ – ಸಂಕಲನ, ಅಭಿಷೇಕ್ ಹೆಬ್ಬಾರ್ – ಕಲೆ, ರಚಿತಾ – ವಸ್ತ್ರ ಅಲಂಕಾರ, ಶೈಲೂ – ಮೇಕಪ್ , ಶ್ರೀನಿಧಿ – ಸಹ ನಿರ್ದೇಶನ ಕಾರ್ತಿಕ್ ಎ – ನಿರ್ವಹಣೆ ಇದೆ.

S.N.Chennabasappa ಗಾಂಧೀಜಿಯವರ ಸರಳತೆ,ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಸಮಾಜಕ್ಕೆ ಮಾದರಿ- ಶಾಸಕ ಚನ್ನಬಸಪ್ಪ

0

S.N.Chennabasappa ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಗಾಂಧಿ ಪಾರ್ಕ್‌ನಲ್ಲಿ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತೋತ್ಸವ ಕಾರ್ಯಕ್ರಮಗಳಲ್ಲಿ ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

S.N.Chennabasappa ದೇಶದ ಸ್ವಾತಂತ್ರ್ಯ, ಅಹಿಂಸಾ ತತ್ವ ಮತ್ತು ಸತ್ಯದ ಮೌಲ್ಯಗಳನ್ನು ಪ್ರತಿಪಾದಿಸಿದ ಗಾಂಧಿಜಿಯವರ ಜೀವನ, ಸರಳತೆ ಹಾಗೂ ಪ್ರಾಮಾಣಿಕತೆಗೆ ಮಾದರಿಯಾದ ಶಾಸ್ತ್ರಿಜಿಯವರ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿ ದೀಪವಾಗಿವೆ ಎಂದು ತಿಳಿಸಿದರು.

Information and Public Relations Department ಇತಿಹಾಸಕಾರ ಸಾಹಿತಿ ಡಾ.ರಾಮಚಂದ್ರ ಗುಹಾ ಅವರಿಗೆ ” ಮಹಾತ್ಮಗಾಂಧಿ ಸೇವಾರತ್ನ ಪ್ರಶಸ್ತಿ ” ಘೋಷಣೆ

0

Information and Public Relations Department ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕರಾದ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕ ಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯಿಂದ ಆಚರಿಸಲು ರಾಜ್ಯ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಆಚರಣೆಯ ಅಂಗವಾಗಿ ಗಾಂಧೀಜಿಯವರ ತತ್ವ, ಮೌಲ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಜನಮನಗಳಲ್ಲಿ ಬಿತ್ತುವಲ್ಲಿ ಮಹತ್ವದ ಪಾತ್ರವಹಿಸಿರುವ ಡಾ. ರಾಮಚಂದ್ರ ಗುಹಾ ಅವರನ್ನು ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಡಾ. ಗುಹಾ ಅವರು ಭಾರತದ ಸಮಕಾಲೀನ ಇತಿಹಾಸ, ರಾಜಕೀಯ ಚಳವಳಿಗಳು, ಪರಿಸರ ಹೋರಾಟಗಳು ಹಾಗೂ ಕ್ರಿಕೆಟ್ ಕುರಿತ ತಮ್ಮ ಅಧ್ಯಯನ ಮತ್ತು ಗ್ರಂಥ ರಚನೆಗಳ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದಾರೆ.

ಅವರ ಪ್ರಮುಖ ಕೃತಿಗಳು:

India After Gandhi (ಸ್ವಾತಂತ್ರ್ಯಾನಂತರ ಭಾರತದ ಇತಿಹಾಸ)

A Corner of a Foreign Field (ಭಾರತೀಯ ಕ್ರಿಕೆಟ್‌ನ ಸಾಮಾಜಿಕ ಇತಿಹಾಸ)

Gandhi Before India (ಮಹಾತ್ಮ ಗಾಂಧೀಜಿಯವರ ಜೀವನಚರಿತ್ರೆಯ ಮೊದಲ ಭಾಗ)

Gandhi: The Years That Changed the World (ಜೀವನಚರಿತ್ರೆಯ ಎರಡನೇ ಭಾಗ)

The Unquiet Woods (ತಳಸ್ಥರದ ಪರಿಸರ ಚಳವಳಿಗಳ ಅಧ್ಯಯನ)

Information and Public Relations Department ಈ ಕೃತಿಗಳು ಇತಿಹಾಸ ಅಧ್ಯಯನವನ್ನು ಶ್ರೀಮಂತಗೊಳಿಸುವುದಷ್ಟೇ ಅಲ್ಲದೆ, ಸಾಮಾನ್ಯ ಓದುಗರಿಗೂ ಸುಲಭವಾಗಿ ತಲುಪುವ ಶೈಲಿಯಲ್ಲಿ ಬರೆದಿರುವುದರಿಂದ ಸಮಾಜದಲ್ಲಿ ಚಿಂತನ–ಮನನಕ್ಕೆ ಪ್ರೇರಣೆಯಾಗಿವೆ. ವಿಶೇಷವಾಗಿ ಗಾಂಧೀ ತತ್ವಗಳನ್ನು ಆಳವಾಗಿ ವಿಶ್ಲೇಷಿಸಿ ಅವನ್ನು ಸಮಕಾಲೀನ ಭಾರತಕ್ಕೆ ಸಂಬಂಧಿಸಿದಂತೆ ಅರ್ಥೈಸುವಲ್ಲಿ ಡಾ. ಗುಹಾ ಅವರಿಗೆ ಒಂದು ವಿಶಿಷ್ಟ ಸ್ಥಾನವಿದೆ. ಅವರ ಗಾಂಧೀಜಿಯವರ ಎರಡು ಸಂಪುಟಗಳ ಜೀವನಚರಿತ್ರೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಗೆ ಅನುವಾದಗೊಂಡಿದೆ.

ರಾಜ್ಯ ಸರ್ಕಾರವು ಈ ಪ್ರಶಸ್ತಿಯ ಮೂಲಕ ಯುವ ಪೀಳಿಗೆಗೆ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಿ, ಸತ್ಯ, ಅಹಿಂಸೆ, ಶಾಂತಿ ಮತ್ತು ಸೇವಾ ಮನೋಭಾವನೆಗಳನ್ನು ಬಲಪಡಿಸಲು ಬದ್ಧವಾಗಿದೆ. ಡಾ. ರಾಮಚಂದ್ರ ಗುಹಾ ಅವರಿಗೆ ಈ ಪ್ರಶಸ್ತಿ ಪ್ರದಾನವಾಗುವುದು, ಸಮಾಜದಲ್ಲಿ ಗಾಂಧೀಜಿಯವರ ಆದರ್ಶಗಳ ಪ್ರಚುರತೆ, ಸಂವಾದ ಮತ್ತು ಅಧ್ಯಯನಕ್ಕೆ ಪ್ರೇರಣೆಯಾದಂತಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

CM Siddharamaiah ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾಸಂತ, ಗಾಂಧೀಜಿ- ಸಿದ್ಧರಾಮಯ್ಯ

0

CM Siddharamaiah ಶಸ್ತ್ರವಿಲ್ಲದೆ ಯುದ್ಧ ಗೆಲ್ಲಲು ಸಾಧ್ಯವೆಂಬುದನ್ನು ಸಾಧಿಸಿ ತೋರಿಸಿದ ಮಹಾತ್ಮ ಗಾಂಧಿ, ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಗಾಂಧಿ ಜಯಂತಿ ಸಂದೇಶದಲ್ಲಿ ತಿಳಿಸಿದ್ದಾರೆ.

ತನ್ನ ವೈರಿಗಳಿಗೂ ಮಾನವೀಯತೆಯ ಕಣ್ಣುತೆರೆಸಿದ ಮಹಾನ್ ಸಂತ, ಧರ್ಮದ ಹಾದಿಯಲ್ಲಿ ನಡೆಸಿದ ದಾರ್ಶನಿಕ.
ಜಗದ ಕಷ್ಟಗಳಿಗೆಲ್ಲ ಮರುಗುತ್ತಿದ್ದ ಬಾಪುವಿನ ಹೃದಯದೊಳಗೆ ಅದೆಷ್ಟು ಕರುಣೆ, ಪ್ರೀತಿ ತುಂಬಿತ್ತೆಂದು ಊಹಿಸುವುದು ಅಸಾಧ್ಯ.

ಸತ್ಯ, ಶಾಂತಿ, ಸಹನೆ, ಸರ್ವಧರ್ಮ ಸಮಭಾವ ಗಾಂಧೀಜಿಯವರ ಚಿಂತನೆಗಳಾಗಿರಲಿಲ್ಲ, ಅದು ಜೀವನ ಮಾರ್ಗವಾಗಿತ್ತು. ಜಗತ್ತು ಹಿಂಸೆ, ಅಶಾಂತಿಗಳ ದಾಳಿಗೆ ಒಳಗಾದಾಗಲೆಲ್ಲ ಮತ್ತೆ ಮತ್ತೆ ನೆನಪಾಗುವವರು ಗಾಂಧಿ.

CM Siddharamaiah ಇಂದು ಮಹಾತ್ಮ ಗಾಂಧಿಯವರ ಜನ್ಮದಿನ. ಅವರ ಸೇವೆ, ಸಮರ್ಪಣಾಭಾವ, ತ್ಯಾಗ, ಬಲಿದಾನವನ್ನು ಅತ್ಯಂತ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದು ಸಿದ್ಧರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ
ಸಂದೇಶ ಹಂಚಿಕೊಂಡಿದ್ದಾರೆ.

Shivamogga BJP ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಗಾಂದೀಜಿ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ

0

Shivamogga BJP ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಜಿಲ್ಲಾ ಅಧ್ಯಕ್ಷರಾದ ಎನ್. ಕೆ ಜಗದೀಶ್ ಹಾಗೂ ಶಾಸಕರಾದ ಎಸ್ ಎನ್ ಚನ್ನಬಸಪ್ಪರವರು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಜಯಂತಿ ಆಚರಿಸಲಾಯಿತು..
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಸಿ ಹೆಚ್, ಹಾಗೂ ವಿವಿಧ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು…

Ashwini Vaishnav ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ!ಶೇ.3 ರಷ್ಟು ತುಟ್ಟಿಭತ್ಯೆ ಹೆಚ್ಚಳ ಘೋಷಣೆ

0

Ashwini Vaishnav ಬೆಲೆ ಏರಿಕೆಯನ್ನು ಸರಿದೂಗಿಸಲು ಮೂಲ ವೇತನ/ಪಿಂಚಣಿಯ 55% ಅಸ್ತಿತ್ವದಲ್ಲಿರುವ ದರಕ್ಕಿಂತ 3% ರಷ್ಟು ಡಿಎ/ಡಿಆರ್ ಹೆಚ್ಚಳವು
ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಜುಲೈ 1, 2025 ರಿಂದ ಸಿಗುವಂತೆ ಜಾರಿಗೆ ಬರಲಿದೆ .

ಡಿಎ ಮತ್ತು ಡಿಆರ್ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ವಾರ್ಷಿಕ ₹10,083.96 ಕೋಟಿಗಳ ಒಟ್ಟು ಪರಿಣಾಮ ಬೀರುತ್ತದೆ ಎಂದು ಕೇಂದ್ರ ಸೂಚನಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ವಿವರಿಸುತ್ತಾ ಹೇಳಿದರು.

Ashwini Vaishnav 7 ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳ ಆಧಾರದ ಮೇಲೆ ಅಂಗೀಕರಿಸಲ್ಪಟ್ಟ ಸೂತ್ರಕ್ಕೆ ಅನುಗುಣವಾಗಿ ಹೆಚ್ಚಳವಾಗಿದೆ ಎಂದು ಹೇಳಲಾಗಿದೆ.

Klive Special Article “ಶಮೀ ಶಮಯತೇ ಪಾಪಂ,ಶಮೀ ಶತ್ರು ವಿನಾಶಿನಿ”

0

ವಿಜಯದಶಮೀ…

ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article “ಶಮೀ ಶಮಯತೇ ಪಾಪಂ,ಶಮೀ ಶತ್ರು ವಿನಾಶಿನಿ” ವಿಜಯದಶಮಿ ನವರಾತ್ರಿಯ ಉತ್ಸವದ ಕಡೆಯ ದಿನ.ಈ ದಿನದಂದು ಪಾಂಡವರು ಶತೃಗಳ ಮೇಲೆ ಜಯ‌ ಸಾಧಿಸಿದ ದಿನವೆಂದು ಹೇಳಲಾಗುತ್ತದೆ.ಹೆಸರೇ ಹೇಳುವಂತೆ ವಿಜಯ ದಶಮಿ.ಪಾಂಡವರು ತಮ್ಮ ವನವಾಸದ ಅವಧಿಯನ್ನು ಮುಗಿಸಿ ತಮ್ಮ ಶಸ್ತ್ರಾಸ್ತ್ರ
ಗಳನ್ನು ಇಟ್ಟಿದ್ದ ಶಮೀವೃಕ್ಷದಿಂದ ಶಸ್ತ್ರಾಸ್ತ್ರಗಳನ್ನು
ಮರಳಿಹಿಂಪಡೆದದಿವಸವಿಜಯದಶಮಿಯ
ದಿನವಾಗಿದೆ.
ಹತ್ತನೆಯ ದಿನ ಅಂದರೆ ದಸರಾ ಉತ್ಸವದ ಹತ್ತನೆಯ ದಿನ.ದಸರಾ ಎಂದೇ ಪ್ರಸಿದ್ಧವಾಗಿರುವ ಶಕ್ತಿ ಪೂಜೆಯ ಶರನ್ನವರಾತ್ರಿಗಳನಂತರದವಿಜಯೋತ್ಸವದದಿನ.ಚಾಂದ್ರಮಾನ ರೀತಿಯಲ್ಲಿ ಹೇಳುವುದಾದರೆ ಶರದೃತುವಿನ ಆಶ್ವಯುಜ ಮಾಸದ ಹತ್ತನೆಯದಿನ.”ದಶಹರ”ದಂದು ದಶಕಂಠ ರಾವಣನನ್ನು ಶ್ರೀರಾಮನು ಸಂಹರಿಸಿದ ವಿಜಯೋತ್ಸವವೆಂದೂಪ್ರತೀತಿಯಿದೆ.ಈ ದಿನ ಶಮೀ ವೃಕ್ಷವು ಬಹಳ ಮಹತ್ವ ಪಡೆದಿದೆ.ನವರಾತ್ರಿಯ ಹತ್ತನೇ ದಿನ ಅಂದರೆ ವಿಜಯದಶಮಿಯಂದು ಬನ್ನಿವೃಕ್ಷಕ್ಕೆ (ಶಮೀವೃಕ್ಷ)ಪೂಜೆಸಲ್ಲಿಸುವ ಸಂಪ್ರದಾಯ ನಡೆದು
ಬಂದಿದೆ.ವಿಜಯದಶಮಿಯಂದು ಕೆಲವೊಂದು ಕಡೆ ದೇವರಿಗರ್ಪಿಸಿದ ಶಮೀ ಸೊಪ್ಪನ್ನು ಒಬ್ಬರಿಗೊಬ್ಬರು ಕೊಟ್ಟು ಶುಭಾಶಯ ವಿನಿಮಯ ಮಾಡಿಕೊಳ್ಳುವುದು ರೂಢಿಯಲ್ಲಿದೆ.
ಅಂತೂ ಒಂಭತ್ತು ದಿನಗಳ ನವರಾತ್ರಿಯ ಹಬ್ಬ ಹತ್ತನೇ ದಿನದ ವಿಜಯದಶಮಿಯಆಚರಣೆಯಿಂದಮುಕ್ತಾಯ
ಗೊಳ್ಳುತ್ತದೆ.
Klive Special Article “ಶಮೀ ಶಮಯತೇ ಪಾಪಂ,ಶಮೀ ಶತ್ರು ವಿನಾಶಿನಿ” ಸಾಮಾನ್ಯವಾಗಿ ಹಬ್ಬಗಳು ಒಂದು ದಿನ ಅಥವಾ ಎರಡು ದಿನ ಆಚರಣೆ ಮಾಡುವುದು ಇದೆ.ಆದರೆ ನವರಾತ್ರಿ ಹಬ್ಬ ಒಂಭತ್ತು ದಿನಗಳ ಕಾಲ ನಡೆಯುವ ಹಬ್ಬವಾಗಿದೆ.ಹತ್ತನೇದಿವಸ ವಿಜಯದಶಮಿಯ ಆಚರಣೆಯಿಂದ ಮುಕ್ತಾಯಗೊಳ್ಳುತ್ತದೆ.
ದುಷ್ಟರ ನಾಶ ಶಿಷ್ಟರ ವಿಜಯವೆಂದೇ ವಿಜಯದಶಮಿ ಪ್ರಾಮುಖ್ಯತೆ ಹೊಂದಿದೆ.
ವಿಜಯದಶಮಿ ಎಲ್ಲರ ಬಾಳಿನಲ್ಲಿ ಸುಖ,ಸಂತೋಷ,ನೆಮ್ಮದಿ ಸಕಲ ಸನ್ಮಂಗಳವನ್ನೂ
ತರಲಿ ಎಂದು ಪ್ರಾರ್ಥಿಸೋಣ.

CM Siddharamaiah ಮುಖ್ಯಮಂತ್ರಿಗಳಿಂದ ಕಲ್ಯಾಣ ಕರ್ನಾಟಕ ನೆರೆ ಹಾವಳಿ‌ ವೈಮಾನಿಕ ಸಮೀಕ್ಷೆ

0

CM Siddharamaiah ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ‌ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ.

ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ.
ಎಂದು
ಕಲ್ಯಾಣ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ.

CM Siddharamaiah ಭಾಗಶಃ ಹಾನಿಯಾದ ಮನೆಗಳು (ಶೇ.50 ರಿಂದ 75) ಇವುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ವಿತರಿಸಲಾಗಿದೆ.

Shri Kshetra Dharmasthala Rural Development ಧನ ಸಂಪತ್ತಿನಂದಲೇ ಸುಖವಿಲ್ಲ. ಜ್ಞಾನ & ಆರೋಗ್ಯ ಸಂಪತ್ತೂ ಬೇಕು- ಡಾ.ಹೆಚ್.ಬಿ.ಮಂಜುನಾಥ್

0

Shri Kshetra Dharmasthala Rural Development ಧನಸಂಪತ್ತಿನಿಂದಲೇ ಸುಖ ನೆಮ್ಮದಿ ಸಾಧ್ಯವಿಲ್ಲ, ಜ್ಞಾನ ಸಂಪತ್ತು ಹಾಗೂ ಆರೋಗ್ಯ ಸಂಪತ್ತು ಸಹಾ ಬೇಕು ಎಂದು ಹಿರಿಯ ಪತ್ರಕರ್ತ ಡಾ.ಎಚ್.ಬಿ. ಮಂಜುನಾಥ ಹೇಳಿದರು.

ದಾವಣಗೆರೆ ತಾಲೂಕು ಲೋಕಿಕೆರೆ ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಏರ್ಪಾಡಾಗಿದ್ದ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ ಧಾರ್ಮಿಕ ಸಭೆಯ ಪ್ರಧಾನ ಉಪನ್ಯಾಸ ನೀಡುತ್ತಾ ಬದುಕು ಸಾಗಿಸಲು ಹಣ ಬೇಕು, ಆದರೆ ಬದುಕು ನೆಮ್ಮದಿ ಆಗಿರಬೇಕೆಂದರೆ ಜ್ಞಾನವೂ ಬೇಕು, ಆರೋಗ್ಯವೂ ಬೇಕು, ನೆಮ್ಮದಿಯ ಬದುಕಿನಲ್ಲಿ ತೃಪ್ತಿಯೂ ಬೇಕೆಂದರೆ ಆಧ್ಯಾತ್ಮಿಕತೆಯೂ ಬೇಕು, ಇದಕ್ಕೆ ಪೂರಕವಾಗಿ ಇಂತಹ ಸಾಮೂಹಿಕ ಧಾರ್ಮಿಕ ಕಾರ್ಯಕ್ರಮಗಳು ಅವಶ್ಯ ಎಂದರಲ್ಲದೆ ಶಾಸನಸ್ಥ ಪುರಾತನ ಗ್ರಾಮವಾದ ಲೋಕಿಕೆರೆಯ ಚಾರಿತ್ರಿಕ ಐತಿಹಾಸಿಕ ಮಹತ್ವವನ್ನು ವಿವರಿಸಿದರು. ಗ್ರಾಮಾಭಿವೃದ್ಧಿಯೇ ರಾಷ್ಟ್ರಾಭಿವೃದ್ಧಿಗೆ ಸೋಪಾನ ಎನ್ನುವುದು ಧರ್ಮಸ್ಥಳ ಸಂಸ್ಥೆಯ ಧ್ಯೇಯವಾಗಿದೆ ಎಂಬುದನ್ನು ಯೋಜನೆಗಳ ಅಂಕಿ ಅಂಶಗಳ ಸಹಿತ ಮಂಜುನಾಥ್ ವಿವರಿಸಿದರು.

ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದ ಹದಡಿ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಶ್ರೀಶೈಲ ಪಟ್ಟಣಶೆಟ್ಟಿ ಮೊಬೈಲ್ ಗೀಳು ಅನೇಕ ಅಚಾತುರ್ಯ ಅಪರಾಧಗಳಿಗೂ ಕಾರಣವಾಗುತ್ತಿದ್ದು ಸಾಧ್ಯವಾದಷ್ಟು ಮಕ್ಕಳ ಕೈಗೆ ಮೊಬೈಲ್ ಕೊಡುವುದನ್ನು ಕಡಿಮೆ ಮಾಡಬೇಕು ಎಂದು ಹೇಳಿದರು.

Shri Kshetra Dharmasthala Rural Development ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಹೆಬ್ಬಾಳು ವಿರಕ್ತ ಮಠದ ಶ್ರೀ ಮಹಾಂತರುದ್ರೇಶ್ವರ ಮಹಾ ಸ್ವಾಮಿಗಳು ಸತ್ಯ ಶುದ್ಧ ಕಾಯಕ ಮಾಡುವವರಿಗೆ ಲಕ್ಷ್ಮಿ ಒಲಿಯುತ್ತಾಳೆ, ಸತ್ಯ ಶುದ್ಧ ಕಾಯಕದಲ್ಲೇ ಕೈಲಾಸವೂ ಇರುತ್ತದೆ, ಇದಕ್ಕಾಗಿ ದೇಹವೇ ಪ್ರಸಾದ ಕಾಯವಾಗಬೇಕು, ಪ್ರತಿಯೊಬ್ಬರೂ ತಮ್ಮ ತಂದೆ ತಾಯಿಗಳಲ್ಲಿ ದೇವರನ್ನು ಕಾಣುತ್ತಾ ವೃದ್ಧಾಪ್ಯದಲ್ಲಿ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದರು.

ಗ್ರಾಮಾಭಿವೃದ್ಧಿ ಟ್ರಸ್ಟಿನ ಜಿಲ್ಲಾ ನಿರ್ದೇಶಕ ಎಂ ಲಕ್ಷ್ಮಣ್ ಪ್ರಾಸ್ತಾವಿಕ ಮಾತುಗಳ ನಾಡಿದರು. ಪೂಜಾ ಸಮಿತಿ ಅಧ್ಯಕ್ಷ ಮಂಜಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರುಗಳಾದ ವೈ ಟಿ ಮಲ್ಲಿಕಾರ್ಜುನಪ್ಪ, ಜಯಮ್ಮ, ಸುರೇಶ್, ಓಬೇಶಪ್ಪ ಬಿ ಹೆಚ್, ನಿರಂಜನ ಮೂರ್ತಿ ಮುಂತಾದವರು ಉಪಸ್ಥಿತರಿದ್ದು ಬಸವರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ತಂಡದವರು ಪ್ರಾರ್ಥನೆ ಹಾಡಿದರು. ಗ್ರಾಮಾಭಿವೃದ್ಧಿ ಟ್ರಸ್ಟಿನ ಯೋಜನಾಧಿಕಾರಿ ನವೀನ್ ಸ್ವಾಗತ ಕೋರಿದರು, ರೇಖಾ ವಂದನೆ ಸಲ್ಲಿಸಿದರು. ಮಕ್ಕಳಿಂದ ಸಾಂಸ್ಕೃತಿಕ ನೃತ್ಯ ಪ್ರಸ್ತುತಿಗಳು ನೆರವೇರಿದವು.