Chamber of Commerce Shivamogga ಆಯುಧ ಪೂಜೆಯ ಅಂಗವಾಗಿ ಶಿವಮೊಗ್ಗ ನಗರದ ದೀಪಕ್ ಪೆಟ್ರೋಲ್ ಬಂಕಿನಲ್ಲಿ ಏರ್ಪಡಿಸಲಾಗಿದ್ದ ಆಯುಧ ಪೂಜೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಡಿಎಸ್ ಅರುಣ್. ಪ್ರತಿಭಾ ಅರುಣ್. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಬಿ ಗೋಪಿನಾಥ್ ಉಪಾಧ್ಯಕ್ಷರಾದ ಜಿ ವಿಜಯಕುಮಾರ್. ಕಾರ್ಯದರ್ಶಿ ಎಎಂ ಸುರೇಶ್. ಖಜಾಂಚಿ ಆರ್ ಮನೋಹರ ಉಪಸ್ಥಿತರಿದ್ದರು.
Rotary Club Shimoga ಒತ್ತಡದ ಜೀವನ ಶೈಲಿಯಿಂದ ಹೊರಬಂದರೆ ಉತ್ತಮ ಆರೋಗ್ಯ- ಪ್ರಕಾಶ್ ಮೂರ್ತಿ
Rotary Club Shimoga ಒಳ್ಳೆಯ ಆಹಾರ ಸೇವನೆಯನ್ನು ಒಳಗೊಂಡ ಜೀವನಶೈಲಿ ಪಾಲಿಸುವುದರಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಹೇಳಿದರು.
ಮಲವಗೊಪ್ಪದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು, ಎಸ್ಸಿಐ ಹಾಗೂ ಎಫ್ಪಿಎ ಸಹಯೋಗದಲ್ಲಿ ಸಾರ್ವಜನಿಕರಿಗೆ ಆಯೋಜಿಸಿದ್ದ ಉಚಿತ ಅರೋಗ್ಯ ತಪಾಸಣೆ ಹಾಗೂ ಎಚ್ಐವಿ ಪರೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಪ್ರತಿ ನಿತ್ಯ ವ್ಯಾಯಾಮ ಮಾಡಬೇಕು. ಆರೋಗ್ಯದ ಕಾಳಜಿ ವಹಿಸಬೇಕು. ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಒತ್ತಡದ ಜೀವನಶೈಲಿಯಿಂದ ಹೊರಬರಬೇಕು ಎಂದು ಸಲಹೆ ನೀಡಿದರು.
ರೋಟರಿ ಸಂಸ್ಥೆ ವಿಶ್ವದ ಎಲ್ಲೆಡೆ ಕ್ಲಬ್ಗಳನ್ನು ಹೊಂದಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಶಾಲೆಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು, ಸಾರ್ವಜನಿಕರಿಗೆ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಕೆಲಸ ಮಾಡುತ್ತಿದೆ ಎಂದರು.
Rotary Club Shimoga ರೋಟರಿಯ ರವಿ ಮಾತನಾಡಿ, ಸಮಯ ಪ್ರಜ್ಞೆ, ಶಿಸ್ತು, ಮಾನವೀಯತೆ ಗುಣಗಳನ್ನು ಅಳವಡಿಸಿಕೊಂಡು ಅರೋಗ್ಯಯುತ ಜೀವನವನ್ನು ನಡೆಸಬೇಕು ಎಂದು ತಿಳಿಸಿದರು. ರೋಗಿಗಳಿಗೆ ಮಧುಮೇಹ ಕಿಟ್, ಬಿಪಿ ಕಿಟ್, ಔಷಧ ಮಾತ್ರೆಗಳನ್ನು ವಿತರಿಸಲಾಯಿತು. ಎಸ್ಸಿಐ ಅಧ್ಯಕ್ಷ ಬಸವರಾಜ್, ಎಫ್ಪಿಐನ ಸತೀಶ್, ರವಿ, ನವೀನ, ಮುಸ್ತಾಕ್ ಅಲಿ ಶಾಹ್, ಬಾಪೂಜಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.
MESCOM ಅಕ್ಟೋಬರ್ 4, ಹೊಳೆಹೊನ್ನೂರು ಉಪವಿಭಾಗ ಕಛೇರಿಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ
MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಅ. 04 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ.
MESCOM ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480833052
PM Narendra Modi ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ಮೋದೀಜಿ ದಸರಾ ಕೊಡುಗೆ
PM Narendra Modi ಈಗ ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.
ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಮೂವತ್ತು ದಿನಗಳ ಬೋನಸ್ ಘೋಷಿಸಿದೆ. ಈ ಅಡ್ ಹಾಕ್ ಬೋನಸ್ ಮಿತಿಯು ಮುವತ್ತು ದಿನಗಳಿಗೆ ಲೆಕ್ಕಹಾಕಿ ವಿತರಿಸಲಾಗುತ್ತದೆ.
ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರೊಡಕ್ಟ್ವಿಟಿ ಆಧಾರಿತ ಬೋನಸ್ ಅನ್ನು ಘೋಷಿಸಿದೆ ಎಂದು ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ. PM Narendra Modi ಗ್ರೂಪ್ ಸಿ ಮತ್ತು ನಾನ್ ಗೆಜೆಟೆಡ್ ಗ್ರೂಪ್ ಬಿ ನೌಕರರಿಗೆ ಈ ಬೋನಸ್ ಪಡೆಯಲು ಅವಕಾಶವಿದೆ.
Navaratri Day 9 ನವರಾತ್ರಿ ಒಂಭತ್ತನೇ ದಿನ. ದೇವಿಯ ಸಿದ್ಧಿಧಾತ್ರಿ ರೂಪ
ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ
“ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/
ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ ಸಿದ್ಧಿ
ದಾಯಿನೀ”//
Navaratri Day 9 ಇಂದು ಶರನ್ನವರಾತ್ರಿಯ ಒಂಭತ್ತನೆಯ ದಿನ.ಇಂದು
ನವಮಿ ತಿಥಿ,ಮಹಾನವಮಿ ಎಂದು ಕರೆಯುತ್ತಾರೆ.
ದುರ್ಗಾಮಾತೆಯನ್ನು ಇಂದು ತನ್ನ ಒಂಭತ್ತನೇ ರೂಪವಾದ ಸಿದ್ಧಿಧಾತ್ರಿಯ ರೂಪದಲ್ಲಿ ಆರಾಧಿಸುತ್ತಾರೆ.ಇದು ಆದಿಶಕ್ತಿಯ ವಿಶಿಷ್ಟ ರೂಪ.
ನವ ದುರ್ಗೆಯರಲ್ಲಿ ಕೊನೆಯರೂಪವಾಗಿರುವುದು
ಸಿದ್ಧಿಧಾತ್ರಿ ದೇವಿಯ ರೂಪ.ಸಿದ್ಧಿಧಾತ್ರಿ ಮಾರ್ಕಂಡೇಯ ಪುರಾಣಗಳ ಪ್ರಕಾರ ಈ ದೇವಿಯು ಎಲ್ಲಾರೀತಿಯಸಿದ್ಧಿಯನ್ನುಕರುಣಿಸುವಳು.ಆದ್ದರಿಂದಲೇ ಈ ದೇವಿಯನ್ನು ಸಿದ್ಧಿಧಾತ್ರಿ ಎಂದು ಕರೆಯಲಾಗುವುದು.ಈ ದೇವಿಯು
ಕಮಲದಮೇಲೆಕುಳಿತಿದ್ದಾಳೆ,ದೇವಿಗೆಚತುರ್ಭುಜ
ಗಳಿವೆ.ಶಂಖ,ಚಕ್ರ ಮತ್ತು ಕಮಲ ಪುಷ್ಪವನ್ನು ಕೈಗಳಲ್ಲಿ ಹಿಡಿದುಕೊಂಡಿದ್ದಾಳೆ.ಈ ದೇವಿಯು ಮಹಾಲಕ್ಷ್ಮಿಯ ಸ್ವರೂಪವನ್ನು ಹೊಂದಿರುತ್ತಾಳೆ.ನವರಾತ್ರಿಯ ಒಂಭತ್ತನೇ ದಿನ ಭಕ್ತಿಯಿಂದ ಆರಾಧಿಸಿ ಪೂಜಿಸುವುದರಿಂದ ಮಾತೆಯು ಭಕ್ತರ ಅಭೀಷ್ಟಗಳನ್ನು ಈಡೇರಿಸುವಳು ಎಂಬನಂಬಿಕೆಯಿದೆ.
ಈ ಮಹಾತಾಯಿ ಭಕ್ತರಿಗೆ ಇಷ್ಟಾರ್ಥ ಸಿದ್ಧಿಗಳನ್ನು
Navaratri Day 9 ನೀಡಿ,ಮೋಕ್ಷವನ್ನು ದಯಪಾಲಿಸುವ ಶಕ್ತಿಮಾತೆ ಈ ದೇವಿ.ನವರಾತ್ರಿಯಲ್ಲಿ ನವದುರ್ಗೆಯರನ್ನು
ಪೂಜಿಸುವ ಪದ್ಧತಿ ಅತ್ಯಂತ ಮಹತ್ವದ್ದು ಮತ್ತು
ವಿಶೇಷವಾಗಿದೆ.ಒಂಭತ್ತು ದಿನಗಳ ಕಾಲ ಒಂಭತ್ತು ದೇವಿಯರ ಆರಾಧನೆಯನ್ನು ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಮಾಡಿದರೆ ಯಶಸ್ಸು ಸಿಗುವುದು
ಖಚಿತ.ಮಹಾ ಶಕ್ತಿ ಸ್ವರೂಪಿಣಿ ದೇವಿಯರ ಆಶೀರ್ವಾದ ನಮ್ಮ ಮೇಲೆ ಇದ್ದರೆ ಜೀವನದಲ್ಲಿ
ಬರುವ ಕಷ್ಟಗಳು ಪರಿಹಾರವಾಗುತ್ತವೆ.ಶತೃಗಳ ಭಯವಿರುವುದಿಲ್ಲ.ಆತ್ಮವಿಶ್ವಾಸವನ್ನು ದೇವಿಯು ಕರುಣಿಸಿ ಕಾಪಾಡುತ್ತಾಳೆ.
ನವರಾತ್ರಿಯ ಒಂಭತ್ತುದಿವಸಗಳ ಕಾಲ ದೇವಿಯ ಪೂಜೆಯನ್ನು ಭಕ್ತಿಯಿಂದ ಮಾಡಿರುವ ನಾವು
ದೇವಿಯನ್ನು ಎಲ್ಲರಿಗೂ ಆಯುರಾರೋಗ್ಯ,ಸುಖ ಶಾಂತಿ ನೆಮ್ಮದಿಯನ್ನು ದಯಪಾಲಿಸಿ ಅನುಗ್ರಹಿಸುವಂತೆ ಪ್ರಾರ್ಥಿಸೋಣ.
Department of Empowerment of the Disabled and Senior Citizens ವಿವಿಧ ಯೋಜನೆಗಳ ಲಾಭ ಪಡೆಯಲು ಅರ್ಹರಿಂದ ಆನ್ ಲೈನ್ ಅರ್ಜಿ ಆಹ್ವಾನ
Department of Empowerment of the Disabled and Senior Citizens ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಸುವಿಧಾ ಯೋಜನೆಯಡಿ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿಕ ದ್ವಿಚಕ್ರವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿಚಾಲಿತ ವ್ಹೀಲ್ಚೇರ್ ಯೋಜನೆಗಳನ್ನು ಡಿ.ಬಿ.ಟಿ ತಂತ್ರಾಂಶದ ಮೂಲಕ ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ.
Department of Empowerment of the Disabled and Senior Citizens ಆಸಕ್ತ ಅರ್ಹ ವಿಕಲಚೇತನರು ಆನ್ಲೈನ್ ಮೂಲಕ ಗ್ರಾಮಾ ಒನ್, ಕರ್ನಾಟಕ ಒನ್, ಸೇವಾಸಿಂಧು ಪೋರ್ಟಲ್ನಲ್ಲಿ ಅ.15ರೊಳಗಾಗಿ ಅರ್ಜಿ ಸಲ್ಲಿಸಿ ಎಲ್ಲಾ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ದ್ವಿಪ್ರತಿಗಳಲ್ಲಿ ಆಯಾ ತಾಲೂಕು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ಎಂಆರ್. ಡಬ್ಲ್ಯೂ)ಗಳಿಗೆ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರು (ಯು.ಆರ್. ಡಬ್ಲ್ಯೂ)ಗಳಿಗೆ ನೀಡುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
Civil Service Posts ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್, ಎಲ್ಲಾ ಪ್ರವರ್ಗಗಳಿಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ
Civil Service Posts ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹಲವಾರು ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಇಂದು ಆದೇಶ ಪ್ರಕಟಿಸಿದೆ.
ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ಆದೇಶದವರೆವಿಗೂ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.
ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.
ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿರುತ್ತು.
ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.
ಆದರೆ ಹಲವಾರು ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.
Civil Service Posts ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ದಿನಾಂಕ: 06.09.2025ರ ಆದೇಶದ ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31-12-2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.
Bharat Scouts and Guides ಮಕ್ಕಳಲ್ಲಿ ಶಿಸ್ತು,ಪ್ರಾಮಾಣಿಕತೆ ರೂಪಿಸುವಲ್ಲಿ ಸ್ಕೌಟ್ಸ್ & ಗೈಡ್ಸ್ ಸಹಕಾರಿ- ಚಂದ್ರಪ್ಪ ಎಸ್.ಗುಂಡಪಲ್ಲಿ
Bharat Scouts and Guides ಮಕ್ಕಳಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆ ಹಾಗೂ ಶಿಸ್ತಿನ ಜೀವನಶೈಲಿ ರೂಪಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗುತ್ತದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಪ್ಪ ಎಸ್.ಗುಂಡಪಲ್ಲಿ ಹೇಳಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯಿಂದ ಪದವಿಪೂರ್ವ ರೋವರ್ ರೇಂಜರ್ಸ್ ಮಕ್ಕಳಿಗೆ ಹಮ್ಮಿಕೊಳ್ಳಲಾದ ಮೂರು ದಿನಗಳ ನಿಪುಣ ಪರೀಕ್ಷಾ ಶಿಬಿರ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಉತ್ತಮ ವ್ಯಕ್ತಿತ್ವ ಬೆಳೆಸುವಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಿಂದ ಮಕ್ಕಳ ಮನಸ್ಸು ಕಲುಷಿತವಾಗಿದ್ದು, ಸ್ವಂತ ಬುದ್ಧಿವಂತಿಕೆ ಕಡಿಮೆಯಾಗಿದೆ. ಮೊಬೈಲ್ ಹಾವಳಿಯಿಂದ ಮಕ್ಕಳು ದೈಹಿಕ ಚಟುವಟಿಕೆಗಳಿಂದ ದೂರ ಸರಿಯುತ್ತಿದ್ದಾರೆ. ಆದ್ದರಿಂದ ಇಂತಹ ಸ್ಕೌಟ್ಸ್ ಅಂಡ್ ಗೈಡ್ಸ್ ಚಳುವಳಿಯಲ್ಲಿ ಮಕ್ಕಳು ತೊಡಗಿಕೊಳ್ಳುವುದರಿಂದ ಸೃಜನಶೀಲರಾಗುತ್ತಾರೆ. ಆತ್ಮವಿಶ್ವಾಸ ಸಹ ವೃದ್ಧಿಯಾಗುತ್ತದೆ. ಸಾಮಾಜಿಕ ಜವಾಬ್ದಾರಿಯೂ ಕೂಡ ವೃದ್ಧಿಸುತ್ತದೆ ಎಂದರು.
ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕಾಚಿನಕಟ್ಟೆಯ ಪಂಡರಿನಾಥ್ ಮಾತನಾಡಿ, ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಪಂಚಾದ್ಯಂತ ಮಕ್ಕಳಲ್ಲಿ ಜೀವನದ ಕಲೆ, ವ್ಯಕ್ತಿತ್ವ ನಿರ್ಮಾಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಮೂಡಿಸುತ್ತಿದೆ ಎಂದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಈ ತರಬೇತಿ ಪಡೆದ ನಂತರ ಮಕ್ಕಳು ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಇಂತಹ ಪರೀಕ್ಷೆಗಳನ್ನು ಸದಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
Bharat Scouts and Guides ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಆಯುಕ್ತರಾದ ಕೆ.ರವಿ, ಲಕ್ಷ್ಮೀ ರವಿ, ಎಸ್.ಜಿ.ಆನಂದ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ವೈ.ಆರ್.ವೀರೇಶಪ್ಪ, ಶಿವಶಂಕರ್, ರಾಜೇಶ್ ಅವಲಕ್ಕಿ, ಮಲ್ಲಿಕಾರ್ಜುನ್ ಕಾನೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Bhadravati All India Radio ಭದ್ರಾವತಿ ಆಕಾಶವಾಣಿ ಕೇಂದ್ರದಲ್ಲಿ ” ಸ್ವಚ್ಛತಾ ಹಿ ಸೇವಾ” ಚಟುವಟಿಕೆ
Bhadravati All India Radio ಶಿವಮೊಗ್ಗ ನಗರದ ಸಿಬಿಆರ್ ಕಾನೂನು ಮಹಾ ವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರದ ಆಶ್ರಯದಲ್ಲಿ ಗಾಂಧಿ ಜಯಂತಿ ನಿಮಿತ್ತ ನಿನ್ನೆ ಶಾಂತಿ ಸಂದೇಶ ಸೌಹಾರ್ದ ಸಪ್ತಾಹ ಕಾರ್ಯಕ್ರಮದಡಿ ಗಾಂಧಿ ಪಾರ್ಕ್ ಸ್ವಚ್ಛತಾ ಕಾರ್ಯ ವನ್ನು ಎನ್ . ಎಸ್ ಎಸ್.ಹಾಗೂ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳ ಲಾಗಿತ್ತು. ಸ್ವಚ್ಛತಾ ಕಾರ್ಯ ಚಾಲನೆ ನೀಡಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎ. ಅನಲ ಅವರು, ವಿದ್ಯಾರ್ಥಿಗಳು ಶ್ರಮದಾನ ಮಾಡುವುದರ ಜೊತೆಗೆ ಗಾಂಧೀಜಿ ಆದರ್ಶಗಳನ್ನು ಮೈಗೂಡಿಸಿಕೊಳ್ಳ ಬೇಕು ಎಂದರು. ಈ ಸಂದರ್ಭದಲ್ಲಿ ಆಯೋ ಜಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು. Bhadravati All India Radio ಕಾರ್ಯಕ್ರಮವನ್ನು ಕಾಲೇಜಿನ ಎನ್.ಎಸ್.ಎಸ್ ಸಂಯೋಜಕರಾದ ಡಾ. ಕಾಂತರಾಜ್ ಎಸ್. ಹಾಗೂ ಕಾಲೇಜಿನ ಸಹಪ್ರಾಧ್ಯಾಪಕರಾದ ಡಾ. ಆದರ್ಶ ಎಂ.ಎಸ್. ಉಪಸ್ಥಿತರಿದ್ದರು. ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕಾರಿ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನೆರವೇರಿಸಿದರು.
State Roller Skating Association ರಾಜ್ಯಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಗೆ ಶಿವಮೊಗ್ಗದಿಂದ 22 ಮಕ್ಕಳ ಆಯ್ಕೆ
State Roller Skating Association ಶಿವಮೊಗ್ಗ ಗೋಪಾಳದಲ್ಲಿರುವ ಕ್ರೀಡಾ ಸಂಕೀರ್ಣದ ಸ್ಕೇಟಿಂಗ್ ಕ್ರೀಡಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮಕ್ಕಳ ಪ್ರಕ್ರಿಯೆಯನ್ನು ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಡೆಸಿತು. ಈ ಸಂದರ್ಭದಲ್ಲಿ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನಿಂದ ಪಾಲ್ಗೊಂಡಿದ್ದ 40 ಮಕ್ಕಳಲ್ಲಿ 22 ಮಕ್ಕಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆಯಾದರು. State Roller Skating Association ಈ ಸಂದರ್ಭದಲ್ಲಿ ಸ್ಕೇಟಿಂಗ್ ಕ್ರೀಡಾಪಟುಗಳೊಂದಿಗೆ ರಾಜ್ಯ ಅಸೋಸಿಯೇಷನ್ ತೀರ್ಪುಗಾರರಾದ ಅನಿಲ್ ಕುಮಾರ್, ಮಲ್ಲಿಕಾರ್ಜುನ್, ಗಣೇಶ್, ರಾಜ್ಯ ಅಸೋಸಿಯೇಷನ್ ಸಹಕಾರ್ಯದರ್ಶಿ ಹಾಗೂ ಶಿವಮೊಗ್ಗ ಜಿಲ್ಲಾ ತಂಡದ ಪ್ರಧಾನ ಕಾರ್ಯದರ್ಶಿ ಎಂ. ರವಿ, ಜಿಲ್ಲಾ ತಂಡದ ಅಧ್ಯಕ್ಷ ಮೋಹನ್ ಕುಮಾರ್ ಸೇರಿದಂತೆ ಪದಾದಿಕಾರಿಗಳು, ವಿವಿಧ ಗಣ್ಯರು, ಪೋಷಕರು, ಉಪಸ್ಥಿತರಿದ್ದರು.
