Thursday, March 19, 2026
Thursday, March 19, 2026
Home Blog Page 1476

ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ

0

ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದೆ.

ಕಳೆದ 24 ಗಂಟೆಯಲ್ಲಿ 16,047 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,826ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,28,261 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.52ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಈವರೆಗೆ 4,35,35,610 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 15,21,429 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,07,03,71,204 ಡೋಸ್ ಲಸಿಕೆ ಹಾಕಲಾಗಿದೆ.

24 ಗಂಟೆಯಲ್ಲಿ 3,25,081 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಕಾಂಗ್ರೆಸ್ ನಾಯಕರ ಕೆಲವು ಹೇಳಿಕೆಗಳು ಅಪ್ರಬುದ್ಧತೆಯ ಪ್ರತೀಕ- ಎಚ್ ಡಿಕೆ

0

ಮಾಡಿದ ಪಾಪಕ್ಕೆ ಇವತ್ತಿನ ಕಾಂಗ್ರೆಸ್ ಶಾಸ್ತಿ ಅನುಭವಿಸುತ್ತಿದೆ. ನಾನು ಮುಖ್ಯಮಂತ್ರಿ ಆಗಿದ್ದು ಅಂದು ರಾಷ್ಟ್ರಪಿತರು ತಂದುಕೊಟ್ಟ ಸ್ವಾತಂತ್ರ್ಯ ಹಾಗೂ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಜಗತ್ ಮಾನ್ಯ ಸಂವಿಧಾನದ ಕಾರುಣ್ಯದಿಂದ.
ಇದರಲ್ಲಿ ಕಾಂಗ್ರೆಸ್ ಪಾತ್ರ ಶೂನ್ಯ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟ ಮಾಡಿದ್ದೇ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆ ಅಪ್ರಭುದ್ಧತೆಯ ಪ್ರತೀಕ ಮತ್ತು ಪರಮ ಬಾಲಿಶ ಎಂದಿದ್ದಾರೆ.

ಅವರಿಗೆ ಗೊತ್ತಿರಲಿ, 1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ. ಸಮಸ್ತ ಭಾರತೀಯರಿಗೆ ಸ್ವಾತಂತ್ರ್ಯ ತಂದುಕೊಡಲು ಮಹಾತ್ಮಗಾಂಧಿ ನೇತೃತ್ವದ ಕಾಂಗ್ರೆಸ್ ಹೋರಾಟ ಮಾಡಿತ್ತು. ನಂತರದ ಕಾಂಗ್ರೆಸ್ ಮಾಡಿದ್ದೇ ಸ್ವಾತಂತ್ರ್ಯದ ಮಾರಣಹೋಮ ಎಂದು ಕಿಡಿಕಾರಿದ್ದಾರೆ.

ನಾನು ಪಂಡಿತ್ ನೆಹರು, ಲಾಲ ಬಹದ್ದೂರ ಶಾಸ್ತ್ರಿ ಅವರ ಬಗ್ಗೆ ಹಗುರವಾಗಿ ಮಾತನಾಡಲಾರೆ. ಅವರ ನಂತರ ಕಾಂಗ್ರೆಸ್ ಹೇಗೆಲ್ಲಾ ಹಾದಿತಪ್ಪಿ ಜನರ ಸ್ವಾತಂತ್ರ್ಯ ಹರಣ ಮಾಡಿತು ಎನ್ನುವದನ್ನು ಡಿ.ಕೆ.ಶಿವಕುಮಾರ್ ಅವರು ಇತಿಹಾಸ ಓದಿದರೆ ಸತ್ಯ ಅರಿವಾಗುತ್ತದೆ ಎಂದು ಹೇಳಿದ್ದಾರೆ.

ಆಗಸ್ಟ್ ನಲ್ಲೇ ಏರ್ ಟೆಲ್ ನಿಂದ 5 G ಸೇವೆ

0

ಭಾರ್ತಿ ಏರ್ಟೆಲ್ ಈ ವರ್ಷದ ಆಗಸ್ಟ್ ನಲ್ಲಿ 5 ಜಿ ಸೇವೆಗಳನ್ನು ಪ್ರಾರಂಭಿಸಲಿದೆ ಎಂದು ಅದರ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ್ ವಿಠಲ್ ತಿಳಿಸಿದ್ದಾರೆ.

ಮಾರ್ಚ್ 2024ರ ವೇಳೆಗೆ ಏರ್ಟೆಲ್ ಭಾರತದ ಎಲ್ಲಾ ಪಟ್ಟಣಗಳು ಮತ್ತು ಪ್ರಮುಖ ಗ್ರಾಮೀಣ ಪ್ರದೇಶಗಳನ್ನು ಒಳಗೊಳ್ಳುತ್ತದೆ ಎಂದು ವಿಠ್ಠಲ್ ಹೇಳಿದರು.

ನಾವು ಆಗಸ್ಟ್ ನಿಂದ 5 ಜಿ ಅನ್ನು ಬಿಡುಗಡೆ ಮಾಡಲು ಉದ್ದೇಶಿಸಿದ್ದೇವೆ ಮತ್ತು ಶೀಘ್ರದಲ್ಲೇ ಪ್ಯಾನ್-ಇಂಡಿಯನ್ ರೋಲ್‌ಔಟ್ಗೆ ವಿಸ್ತರಿಸಲು ಉದ್ದೇಶಿಸಿದ್ದೇವೆ. ಮಾರ್ಚ್ 2024 ರ ವೇಳೆಗೆ ನಾವು ಪ್ರತಿ ಪಟ್ಟಣ ಮತ್ತು ಪ್ರಮುಖ ಗ್ರಾಮೀಣ ಪ್ರದೇಶಗಳನ್ನು 5 ಜಿ ಯೊಂದಿಗೆ ಒಳಗೊಳ್ಳಲು ಸಾಧ್ಯವಾಗುತ್ತದೆ ಎಂದು ನಾವು ನಂಬುತ್ತೇವೆ. ವಾಸ್ತವವಾಗಿ, ಭಾರತದ 5,000 ಪಟ್ಟಣಗಳಿಗೆ ವಿವರವಾದ ನೆಟ್ವರ್ಕ್ ರೋಲ್‌ಔಟ್ ಯೋಜನೆಗಳು ಸಂಪೂರ್ಣವಾಗಿ ಜಾರಿಯಲ್ಲಿವೆ. ಇದು ನಮ್ಮ ಇತಿಹಾಸದ ಅತಿದೊಡ್ಡ ರೋಲ್ ಔಟ್ ಗಳಲ್ಲಿ ಒಂದಾಗಿದೆ’ ಎಂದು ಅವರು ಹೇಳಿದರು.

ಕಂಪನಿಯ ಗಳಿಕೆಯ ಕರೆಯಲ್ಲಿ ವಿಠ್ಠಲ್ ಅವರು ಭಾರತದಲ್ಲಿ ಮೊಬೈಲ್ ಸೇವೆಗಳ ಬೆಲೆ ತುಂಬಾ ಕಡಿಮೆ ಇದೆ ಮತ್ತು ಅದನ್ನು ಹೆಚ್ಚಿಸಬೇಕಾಗಿದೆ ಎಂದು ಹೇಳಿದರು.

ಮಂಗಳೂರು ಕಾರವಾರ ಉಡುಪಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

0

ಕರ್ನಾಟಕ, ಕೇರಳ, ಮಹಾರಾಷ್ಟ್ರ ಕರಾವಳಿ ಮತ್ತೆ ಅಲರ್ಟ್​ ಮಾಡಲಾಗಿದ್ದು, ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಮಳೆ ಸುರಿಯೋ ಸಾಧ್ಯತೆಗಳಿವೆ. ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

ಈಗಾಗಲೇ ಮುಂಬೈ ತೀರಕ್ಕೆ ಬಿರುಗಾಳಿ ಮಳೆ ಅಪ್ಪಳಿಸುತ್ತಿದೆ. ಕಳೆದ ರಾತ್ರಿಯಿಂದೀಚೆಗೆ ಮುಂಬೈನಲ್ಲಿ 90 ಮಿಲಿ ಮೀಟರ್​ ಮಳೆಯಾಗಿದೆ. ಮುಂಬೈ ತೀರಕ್ಕೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸುತ್ತಿದೆ.

ಮುಂಬೈ, ನವ ಮುಂಬೈ, ಥಾಣೆ, ಪಲ್ಗರ್​​ನಲ್ಲಿ ಭಾರೀ ಮಳೆ ಸಾಧ್ಯತೆಗಳಿವೆ. ಮುಂಬೈನ ತಗ್ಗು ಪ್ರದೇಶಗಳು, ಅಂಡರ್​ಪಾಸ್​ಗಳೆಲ್ಲಾ ಜಲಾವೃತವಾಗಿದೆ.

ಮಂಗಳೂರು, ಕಾರವಾರ, ಉಡುಪಿಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ 45-60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಿದೆ. ಅಧಿಕಾರಿಗಳು ಸಮುದ್ರ ತೀರದ ನಿವಾಸಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಕಾರ್ಮಿಕರ ಕೆಲಸದ ಸ್ಥಳದಲ್ಲಿ ಸಂಚಾರಿ ವೈದ್ಯಕೀಯ ಘಟಕ ಸೌಲಭ್ಯ

0

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳ ನಿಯಮಗಳಿಗೆ ಸರ್ಕಾರ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದೆ.

ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಸಂಚಾರಿ ವೈದ್ಯಕೀಯ ಘಟಕ ಸ್ಥಾಪನೆ, ಅವಶ್ಯವಿರುವಾಗ ಪೌಷ್ಟಿಕ ಆಹಾರ ಕಿಟ್ ವಿತರಿಸಲಾಗುವುದು.
ಹೆರಿಗೆ ಸೌಲಭ್ಯ ಸಹಾಯಧನವನ್ನು 50,000 ರೂ.ಗೆ ಹೆಚ್ಚಳ ಮಾಡಲಾಗಿದೆ.

ಅಂತಿಮ ಸಂಸ್ಕಾರ ವೆಚ್ಚ ಸೌಲಭ್ಯ ಸಹಾಯಧನವನ್ನು 50 ಸಾವಿರ ರೂ.ನಿಂದ 71,000 ರೂ.ಗೆ ಹೆಚ್ಚಳ ಮಾಡಲಾಗಿದೆ.
ಕೋವಿಡ್ ನಿಂದ ಫಲಾನುಭವಿ ಮೃತಪಟ್ಟಲ್ಲಿ ಅವಲಂಬಿತರಿಗೆ 2 ಲಕ್ಷ ರೂ. ಸಹಾಯಧನ ನೀಡಲಾಗುವುದು.
ಸಾರಿಗೆ ಸೌಲಭ್ಯದಡಿ ಫಲಾನುಭವಿಗಳಿಗೆ ರಾಜ್ಯಾದ್ಯಂತ ಕೆಎಸ್‌ಆರ್ಟಿಸಿ ಬಸ್ ಪಾಸ್ ನೀಡಲಾಗುವುದು.

ಗೃಹಭಾಗ್ಯ ಸೌಲಭ್ಯದಡಿ 21 ರಿಂದ 50 ವರ್ಷದ ನೋಂದಾಯಿತ ಫಲಾನುಭವಿಗಳಿಗೆ ಮನೆ ನಿರ್ಮಿಸಲು 10 ಕಂತುಗಳಲ್ಲಿ ಸಾಲ ನೀಡಲು ನಿಯಮ ಸರಳಿಕರಣ ಮಾಡಲಾಗಿದೆ.

ಪಿಂಚಣಿ ಸೌಲಭ್ಯವನ್ನು 2000 ರೂ.ನಿಂದ 3000 ರೂ.ಗೆ ಏರಿಕೆ ಮಾಡಲಾಗಿದೆ.
ಫಲಾನುಭವಿಗಳ ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ತರಬೇತಿ, ಕಲಿಕಾ ಕಿಟ್, ಕಂಪ್ಯೂಟರ್, ಲ್ಯಾಪ್ಟಾಪ್ ಲ್ಯಾಬ್ ವಿತರಿಸಲಾಗುವುದು.
ವೈದ್ಯಕೀಯ ಸೌಲಭ್ಯ ಯೋಜನೆಯಡಿ ಸಹಾಯಧನವನ್ನು 10 ಸಾವಿರ ರೂ.ನಿಂದ 20 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.

ಫಲಾನುಭವಿಗಳು ಕೆಲಸದ ಸ್ಥಳದಲ್ಲಿ ಅಪಘಾತದಿಂದ ಮೃತಪಟ್ಟರೆ ಅವಲಂಬಿತರಿಗೆ ಪರಿಹಾರದ ಮೊತ್ತವನ್ನು 2 ಲಕ್ಷದಿಂದ 5 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ.
ಮದುವೆ ಸಹಾಯಧನ ಮೊತ್ತವನ್ನು 50 ರಿಂದ 60,000 ರೂ.ಗೆ ಹೆಚ್ಚಳ ಮಾಡಲಾಗಿದೆ.

ನೆಮ್ಮದಿ ಹಿತಕರ ಪ್ರಯಾಣಕ್ಕೆ ಬೋಮ್ ಕ್ಯಾಬ್ಸ್ ಬುಕ್ ಮಾಡಿ

0

ಬೆಂಗಳೂರಿನ ಪ್ರವಾಸಿಗರಿಗಾಗಿ ಉತ್ತಮ ಪ್ಯಾಕೇಜ್ ಜೊತೆಗೆ ಉತ್ತಮ ಸಾರಿಗೆ ಸೌಲಭ್ಯವನ್ನು ನೀಡುವ ನಿಟ್ಟಿನಲ್ಲಿ ಬೋಮ್ ಕ್ಯಾಬ್ಸ್ ಗಳನ್ನು ಪರಿಚಯಿಸಲಾಗಿದೆ.

ಬೋಮ್ ಕ್ಯಾಬ್ಸ್ ಗಳು ಪ್ರಯಾಣಿಕರಿಗೆ ಅನುಕೂಲ ಒದಗಿಸುವಲ್ಲಿ ಕೈಗೆಟುಕುವ ಬೆಲೆ ಹಾಗೂ ವಿಶ್ವಾಸರ್ಹ ಪ್ರಯಾಣಕ್ಕೆ ಬೋಮ್ ಕ್ಯಾಬ್ಸ್ ಬಳಸಬಹುದು.

ಬೋಮ್ ಕ್ಯಾಬ್ಸ್ ನವೀನ ಸೇವೆಗಳು ಮತ್ತು ಉತ್ತಮ ಗುಣಮಟ್ಟ, ಮೌಲ್ಯವರ್ದಿತ ಸೇವೆಯನ್ನ ಒದಗಿಸುವುದರ ಜೊತೆಗೆ ಉದ್ಯಮದ ಕ್ಷೇತ್ರದಲ್ಲಿ ಹೆಸರನ್ನ ಪಡೆದುಕೊಳ್ಳುವ ಗುರಿಯನ್ನು ಹೊಂದಿದೆ.

ಬೆಂಗಳೂರು ನಗರದಲ್ಲಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ಪ್ರಯಾಣಿಸಲು ಕ್ಯಾಬ್ ಗಳು ಅತ್ಯಂತ ಅವಶ್ಯಕ. ಈ ಕ್ಯಾಬ್ಸ್ ಸೇವೆ ಯನ್ನು ನಿರಂತರ 24×7 ಪಡೆದುಕೊಳ್ಳಬಹುದು.

ಬೋಮ್ ಕ್ಯಾಬ್ಸ್ ನಿಮ್ಮ ಫೋನ್ , Bom Cabs web ಸೈಟ್ ನಲ್ಲಿಯೂ, ಬುಕ್ ಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ.

ಈ ವ್ಯವಸ್ಥೆ ಗ್ರಾಹಕರಿಗೆ ಕೈಗೆಟುಕು ವ ಬೆಲೆಯಲ್ಲಿ ಮನೆಮನೆಗೂ ಸಹ ಸೇವೆಗಳನ್ನ ಒದಗಿಸಲಾಗುತ್ತದೆ.

ಬೋಮ್ ಕ್ಯಾಬ್ಸ್ ಗಳನ್ನು ನೀವು ಸುಲಭವಾಗಿ ಬುಕ್ಕಿಂಗ್ ಮಾಡಬಹುದು.

ನಿಮ್ಮ ಟ್ಯಾಕ್ಸಿಯನ್ನ ಬುಕ್ ಮಾಡಲು 0804144120, or 6366340660
ಕರೆ ಮಾಡಬಹುದು…

Email ID: info@bomcabs.in

Web: https://bomcabs.in

ಕಚೇರಿಯ ವಿಳಾಸ: 161/2 ಮೊದಲ ಮಹಡಿ, ಗಾರ್ಡನ್ ಲೇಔಟ್ ಸೆಕ್ಟ್ 2, HSR ಲೇಔಟ್ ಬೆಂಗಳೂರು

ಸುಗ್ರೀವಾಜ್ಞೆಗಳಿಗೆ ಪರಿಶೀಲಿಸದೇ ಸಹಿ ಹಾಕಲಾರೆ- ಆರೀಫ್ ಖಾನ್

0

ಕೇರಳ ಲೋಕಾಯುಕ್ತ ಸೇರಿದಂತೆ ಅನೇಕ ಸುಗ್ರೀವಾಜ್ಞೆಗಳ ಅವಧಿ ಸೋಮವಾರ ಮುಕ್ತಾಯಗೊಳ್ಳುತ್ತಿರುವಂತೆಯೇ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಅವರು ಸುಗ್ರೀವಾಜ್ಞೆಗಳ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಒಂದು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಈ ರೀತಿಯ ಆಡಳಿತ ಸರಿಯಾದುದಲ್ಲ ಎಂದು ಎಲ್‌ಡಿಎಫ್ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಅಷ್ಟೇ ಅಲ್ಲ, ನಾನು ಈ ಸುಗ್ರೀವಾಜ್ಞೆಗಳನ್ನು ಸಂಪೂರ್ಣವಾಗಿ ಪರಿಶೀಲಿಸದೇ ಅವುಗಳ ಮರು ಜಾರಿಗೆ ಒಪ್ಪಿಗೆ ನೀಡುವುದಿಲ್ಲ ಎಂದೂ ಆರಿಫ್ ಖಾನ್‌ ಅವರು ಸ್ಪಷ್ಟಪಡಿಸಿದ್ದಾರೆ.

ನಾನು, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಿತಿ ಸಭೆಗೆಂದು ದೆಹಲಿಗೆ ಹೊರಟ ದಿನವೇ 13-14 ಸುಗ್ರೀವಾಜ್ಞೆಗಳನ್ನು ನನಗೆ ಕಳುಹಿಸಲಾಗಿದೆ. ಅವುಗಳನ್ನು ನೋಡಲು ನನಗೆ ಸಮಯ ಸಾಕಾಗುತ್ತಿಲ್ಲ. ಹಿಂದೆ ಮುಂದೆ ಯೋಚಿಸದೇ ಸಹಿ ಹಾಕುವುದು ಸರಿಯೇ? ಪ್ರಜಾಪ್ರಭುತ್ವ ದೇಶದಲ್ಲಿ ಈ ರೀತಿ ಸುಗ್ರೀವಾಜ್ಞೆಗಳ ಮೂಲಕ ಆಡಳಿತ ನಡೆಸುವುದು ಸಮಂಜಸವಾದುದಲ್ಲ ಎಂದು ರಾಜ್ಯಪಾಲ ಖಾನ್‌ ಅವರು ಹೇಳಿದ್ದಾರೆ.

ಹೈನುಕೃಷಿಕರಿಗೆ ಗುಡ್ ನ್ಯೂಸ್: ಹಾಲಿನ ಖರೀದಿ ಕೇಜಿಗೆ ₹ 1 ಹೆಚ್ಚಳ

0

ಶ್ರಾವಣ ಮಾಸದ ಕೊಡುಗೆಯಾಗಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ ಗೆ ರೂ.1 ಹೆಚ್ಚಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದರಾವ್ ತಿಳಿಸಿದರು.

ಮಾಚೇನಹಳ್ಳಿ ಹಾಲಿನ ಡೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲ ಕಾಲಕ್ಕೆ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಪ್ರಗತಿಯಾಗಿದ್ದು,
ದಿನಾಂಕ : 11-08-2022 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ. ಗೆ ರೂ.1 ಹೆಚ್ಚಿಸಲಾಗುವುದು.

ಈ ದರ ಹೆಚ್ಚಳ ಕುರಿತು ದಿನಾಂಕ: 02-08-2022 ರಂದು ನಡೆದ ಒಕ್ಕೂಟದ 421 ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಹಾಲಿ ನೀಡುತ್ತಿರುವ ದರ ಪ್ರತಿ ಕೆ.ಜಿ ಹಾಲಿಗೆ (ಶೇ. 4.0 ಎಸ್‍ಎನ್‍ಎಫ್ 8.50%) 29.02 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ ರೂ.30.06/- ಆಗಲಿದೆ. ಸಂಘದಿಂದ ಉತ್ಪಾದರಿಗೆ ಹಾಲಿ ನೀಡುತ್ತಿರುವ ದರ (ಶೇ. 4.0 ಎಸ್‍ಎನ್‍ಎಫ್ 8.50%) ಪ್ರತಿ ಲೀಟರ್ ಹಾಲಿಗೆ ರೂ. 27.16 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ ರೂ.28.20 ಆಗಿರುತ್ತದೆ ಎಂದರು.

ಹಾಲಿನ ಮಾರಾಟವನ್ನು ಅಂತರ ರಾಜ್ಯ ಮಟ್ಟದಲ್ಲಿ ವಿಸ್ತರಿಸುವ ಯೋಜನೆಯಿದ್ದು ದೆಹಲಿ ಮತ್ತು ಮಹಾರಾಷ್ಟ್ರಗಳಿಗೆ 1 ಲಕ್ಷ ಲೀ. ಹಾಲು ಸರಬರಾಜು ಮಾಡುವ ಕುರಿತು ಇದೇ ಆ.12 ರಂದು ಸಭೆ ನಡೆಸಲಿದ್ದೇವೆ. ಹಾಗೂ ಒಕ್ಕೂಟದ ಅಭಿವೃದ್ದಿ ಉದ್ದೇಶದಿಂದ ಹಲವಾರು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ.

ಪ್ರಸ್ತುತ ಒಕ್ಕೂಟದ ವ್ಯಾಪ್ತಿಯಲ್ಲಿ 1347 ಸಹಕಾರ ಸಂಘಗಳು ಇದ್ದು ಪ್ರತಿ ದಿನ 7 ಲಕ್ಷ ಲೀಟಲ್ ಹಾಲು ಉತ್ಪಾದನೆಯಾಗುತ್ತಿದೆ. 60 ಸಾವಿರ ಹಸುಗಳ ವಿಮೆ ಗುರಿ ಹೊಂದಲಾಗಿದೆ. ಶಿವಮೊಗ್ಗ ಹಾಲಿನ ಡೇರಿ ಆವರಣದಲ್ಲಿ ಆಧುನಿಕ ಪ್ಯಾಕಿಂಗ್ ಯಂತ್ರೋಪಕರಣ ಅಳವಡಿಸುವ ಹಾಗೂ ಕಚ್ಚಾ ಹಾಲಿನ ಪ್ರಯೋಗಾಲಯ ಆಧುನೀಕರಣಗೊಳಿಸಲು ಯೋಜನೆ ರೂಪಿಸಲಾಗಿದೆ.

ದಾವಣಗೆರೆ ಡೇರಿಯಲ್ಲಿ ದಿನವಹಿ 1.50 ಲಕ್ಷ ಲೀ. ಹಾಲು ಮತ್ತು 0.50 ಲಕ್ಷ ಕೆ.ಜಿ ಮೊಸರು ಉತ್ಪಾದನೆಗೆ ಅನುಕೂಲವಾಗುವಂತೆ ರೂ.15.00 ಕೋಟಿ ವೆಚ್ಚದಲ್ಲಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ. ತಡಗಣಿ ಶೀತಲೀಕರಣ ಕೇಂದ್ರದಲ್ಲಿ ಹಾಲಿನ ತಣಿಸುವಿಕೆ ಸಾಮಥ್ರ್ಯವನ್ನು ಹೆಚ್ಚಿಸಲು ನೂತನ 20.0 ಕೆ.ಎ.ಪಿ.ಹೆಚ್ ಸಾಮಥ್ರ್ಯದ ಚಿಲ್ಲರ್ ಹಾಗೂ ಸ್ಟೋರೇಜ್ ಟ್ಯಾಂಕ್‍ಗಳನ್ನು ಅಳವಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಹೊನ್ನಾಳಿ ಶೀತಲೀಕರಣ ಕೇಂದ್ರದಲ್ಲಿ ನೂತನ 20.0 ಕೆ.ಎಲ್.ಪಿ.ಹೆಚ್ ಸಾಮಥ್ರ್ಯದ ಚಿಲ್ಲರ್ ಅಳವಡಿಸುವ ಪ್ರಕ್ರಿಯೆ ಕೂಡ ಜಾರಿಯಲ್ಲಿದೆ ಹಾಗೂ ಹೊಸದುರ್ಗ ಪಟ್ಟಣದಲ್ಲಿ ನೂತನ ನಿವೇಶನ ಖರೀದಿಸಿ 60 ಕೆ.ಎಲ್ ಸಾಮಥ್ರ್ಯದ ಚಿಲ್ಲರ್ ಅಳವಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ತಿಳಿಸಿದರು.

ಆಜಾದಿ ಕ ಅಮೃತ ಮಹೋತ್ಸವ ಅಂಗವಾಗಿ ಎಲ್ಲ ಸಂಘಗಳಲ್ಲಿ ಮತ್ತು ಉತ್ಪಾದರ ಮನೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಬೇಕೆಂದು ಇದೇ ಸಂದರ್ಭದಲ್ಲಿ ಅಧ್ಯಕ್ಷರು ಮನವಿ ಮಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಶಿಮುಲ್ ನಿರ್ದೇಶಕರು, ಪಶಪಾಲನಾ ಇಲಾಖೆಯ ಉಪನಿರ್ದೇಶಕ ಎಸ್.ವಿ.ಯಲಿ, ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್ ಇದ್ದರು.

ದಿ ಫ್ಯಾಟ್ ಮ್ಯಾನ್ ದುರಂತ ನಾಗಸಾಕಿ ದಿನ ಸ್ಮರಣೆ

0

1945ರ ವಿಶ್ವ ಸಮರ II ರ ಸಮಯದಲ್ಲಿ ಜಪಾನ್‌ನ ಹಿರೋಷಿಮಾ ಮತ್ತು ನಾಗಸಕಿ ಮೇಲೆ ಪರಮಾಣು ದಾಳಿಗೆ ಸಾಕ್ಷಿಯಾದವು. ಈ ಎರಡು ದಿನ ಜಪಾನಿಯರ ಪಾಲಿನ ಕಪ್ಪು ದಿನವಾಗಿದೆ. ಬಾಂಬ್ ದಾಳಿಯ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ನಾಗಸಾಕಿ ದಿನವನ್ನು ಪ್ರತಿ ವರ್ಷ ಆಗಸ್ಟ್ 9 ರಂದು ಆಚರಿಸಲಾಗುತ್ತದೆ.

ಜಪಾನ್‌ನಲ್ಲಿ ಪ್ರತಿ ವರ್ಷ ಆಗಸ್ಟ್ 9 ಅನ್ನು ಕಪ್ಪು ದಿನವಾಗಿ ಆಚರಿಸಲಾಗುತ್ತದೆ. ಹಿರೋಷಿಮಾ ಮತ್ತು ನಾಗಸಕಿಯಲ್ಲಿ ನಡೆದ ಪರಮಾಣು ಬಾಂಬ್ ದಾಳಿಯು ವ್ಯಾಪಕ ವಿನಾಶಕ್ಕೆ ಕಾರಣವಾದವು. ದಾಳಿಯನ್ನು ಧೈರ್ಯದಿಂದ ಎದುರಿಸಿದವರಿಗೆ ಮತ್ತು ಪರಮಾಣು ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ನೆನಪಿಗಾಗಿ ಸಹಾನುಭೂತಿ ಮತ್ತು ಜಾಗೃತಿ ಮೂಡಿಸಲು ನಾಗಸಕಿ ದಿನವನ್ನು ಆಚರಿಸಲಾಗುತ್ತದೆ .

ಎರಡನೆಯ ಮಹಾಯುದ್ಧದ ಸಮಯದಲ್ಲಿ ಜಪಾನ್ ಯುಎಸ್ ಮತ್ತು ಮಿತ್ರರಾಷ್ಟ್ರಗಳ ವಿರುದ್ಧ ಹೋರಾಡಿತು. 1945ರ ಮೇ 8 ರಂದು ಜರ್ಮನಿಯ ಶರಣಾಗತಿಯೊಂದಿಗೆ ಯುರೋಪ್​ನಲ್ಲಿ ಯುದ್ಧವು ಕೊನೆಗೊಂಡಿತು. ಆದರೆ ಪೆಸಿಫಿಕ್​ನಲ್ಲಿನ ಯುದ್ಧವು ಮಿತ್ರರಾಷ್ಟ್ರಗಳು ಮತ್ತು ಜಪಾನ್ ನಡುವೆ ಮುಂದುವರೆಯಿತು. ಜುಲೈ 1945 ರಲ್ಲಿ ಪಾಟ್ಸ್‌ಡ್ಯಾಮ್ ಘೋಷಣೆಯಲ್ಲಿ ಮಿತ್ರರಾಷ್ಟ್ರಗಳು ಜಪಾನ್‌ಗೆ ಬೇಷರತ್ತಾದ ಶರಣಾಗತಿಯನ್ನು ಕೇಳಿದರು. ಆದಾಗ್ಯೂ ಇದನ್ನು ಜಪಾನ್ ನಿರ್ಲಕ್ಷಿಸಿ ಯುದ್ಧವನ್ನು ಮುಂದುವರೆಸಿತು. ಇದರಿಂದಾಗಿ ಜಪಾನ್ ಮತ್ತು ಯುಎಸ್ ನಡುವಿನ ಸಂಬಂಧಗಳು ಮತ್ತಷ್ಟು ಹದಗೆಡಲು ಕಾರಣವಾಯಿತು.
ಜಪಾನಿನ ಪಡೆಗಳು ಈಸ್ಟ್ ಇಂಡೀಸ್ನ ತೈಲ-ಸಮೃದ್ಧ ಪ್ರದೇಶಗಳನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ಇಂಡೋಚೈನಾದಲ್ಲಿ ಗುರಿಯನ್ನು ತೆಗೆದುಕೊಳ್ಳಲು ನಿರ್ಧರಿಸಿದವು. ಹೀಗಾಗಿ ಯುಎಸ್ ಅಧ್ಯಕ್ಷ ಹ್ಯಾರಿ ಟ್ರೂಮನ್ ಎರಡನೇ ಮಹಾಯುದ್ಧದಲ್ಲಿ ಸಮಯದಲ್ಲಿ ಜಪಾನ್ ಶರಣಾಗುವಂತೆ ಮಾಡಲು ಪರಮಾಣು ಬಾಂಬ್‌ಗಳ ಬಳಕೆಯನ್ನು ಅಧಿಕೃತಗೊಳಿಸಿದರು. ಇದರ ಪರಿಣಾಮವಾಗಿ 1940 ರ ದಶಕದಲ್ಲಿ ಮ್ಯಾನ್ಹ್ಯಾಟನ್ ಯೋಜನೆಯ ಪರಿಣಾಮವಾಗಿ ಅಭಿವೃದ್ಧಿಪಡಿಸಲಾದ ಎರಡು ರೀತಿಯ ಪರಮಾಣು ಬಾಂಬ್ಗಳನ್ನು ಬಳಸಲಾಯಿತು.

ಲಿಟಲ್ ಬಾಯ್ ಯುರೇನಿಯಂ ಬಾಂಬ್ ಅನ್ನು ಹಿರೋಷಿಮಾ ನಗರದಲ್ಲಿ 6 ಆಗಸ್ಟ್ 1945 ರಂದು ಮತ್ತು ‘ದಿ ಫ್ಯಾಟ್ ಮ್ಯಾನ್’, ಪ್ಲುಟೋನಿಯಂ ಬಾಂಬ್ ಅನ್ನು ನಾಗಸಾಕಿ ನಗರದಲ್ಲಿ ಅದೇ ವರ್ಷದ ಆಗಸ್ಟ್ 9 ರಂದು ಹಾಕಲಾಯಿತು.

ಹಿರೋಷಿಮಾದ ಮೇಲೆ ಹಾಕಲಾದ ಲಿಟಲ್ ಬಾಯ್ ಅಣುಬಾಂಬ್ 2.5 ಕಿಮೀ ವ್ಯಾಪ್ತಿಯಲ್ಲಿರುವ ಕಟ್ಟಡಗಳನ್ನು ನಾಶಪಡಿಸಿತು. 28,000 ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಸಾವನ್ನಪ್ಪಿದರು. ನಾಗಸಾಕಿಯ ಮೇಲೆ ಬಿದ್ದ ಪ್ಲುಟೋನಿಯಂ ಬಾಂಬ್ 75000 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತು. ಘಟನೆಯ ವರ್ಷಗಳ ನಂತರವೂ ನಗರದಲ್ಲಿ ಬದುಕುಳಿದವರು ಇನ್ನೂ ಹೆಚ್ಚಿನ ಆವರ್ತನದಲ್ಲಿ ಲ್ಯುಕೇಮಿಯಾ, ಥೈರಾಯ್ಡ್, ಸ್ತನ ಮತ್ತು ಶ್ವಾಸಕೋಶದ ಕ್ಯಾನ್ಸರ್‌ಗಳಂತಹ ಕಾಯಿಲೆಗಳನ್ನು ಅನುಭವಿಸುತ್ತಾರೆ.

ಇತರೆ ರಾಷ್ಟ್ರಗಳಿಗೆ ಶಾಂತಿಯುತ ಸಹಬಾಳ್ವೆಯ ಸಂದೇಶವನ್ನು ಕಳುಹಿಸುವುದು ಈ ದಿನದ ಇನ್ನೊಂದು ಗುರಿಯಾಗಿದೆ. ಪರಮಾಣು ಯುದ್ಧ ಮತ್ತು ಪ್ರಸರಣದ ನೆರಳಿನಲ್ಲಿ ಬದುಕುತ್ತಿರುವ ಜಪಾನ್‌ನ ನಾಗರಿಕರು ದಿನದ ಅಂಗವಾಗಿ ಅನೇಕ ಶಾಂತಿ ಅಭಿಯಾನಗಳನ್ನು ಆಯೋಜಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಮತ್ತು ಸಹಬಾಳ್ವೆಯ ಸಂದೇಶವನ್ನು ಹರಡಿದರು. ಸಭೆಗಳು, ಸಮ್ಮೇಳನಗಳು, ವಿಮರ್ಶೆಗಳು ಮತ್ತು ಪ್ರಸ್ತಾಪಗಳನ್ನು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುತ್ತದೆ.

ಚೀನಾದ ಅಗ್ಗದ ಬೆಲೆ ಮೊಬೈಲ್ ಫೋನುಗಳ ನಿರ್ಬಂಧಕ್ಕೆ ಚಿಂತನೆ

0

ಚೀನಾದ ಕಂಪನಿಗಳ 12,000 ರೂಪಾಯಿಗಳಿಗಿಂತ (150 ಡಾಲರ್) ಅಗ್ಗದ ಸ್ಮಾರ್ಟ್‌ಫೋನ್‌ ಸಾಧನಗಳ ಮಾರಾಟವನ್ನ ನಿರ್ಬಂಧಿಸಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್ಬರ್ಗ್ ವರದಿ ಮಾಡಿದೆ.

ವರದಿಯ ಪ್ರಕಾರ, ಸರ್ಕಾರದ ಈ ಕ್ರಮವು ಜಾರಿಗೆ ಬಂದರೆ, ಶಿಯೋಮಿ ಕಾರ್ಪ್ ಸೇರಿದಂತೆ ಚೀನಾದ ಬ್ರಾಂಡ್‌ಗಳಿಗೆ ತೀವ್ರ ಹೊಡೆತವನ್ನ ನೀಡಬಹುದು.
ಚೀನಾದ ಪ್ರಮುಖ ಕಂಪನಿಗಳನ್ನ ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಮಾರುಕಟ್ಟೆಯ ಕೆಳಭಾಗದಿಂದ ಹೊರದಬ್ಬುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬ್ಲೂಮ್ಬರ್ಗ್ ಮೂಲಗಳು ತಿಳಿಸಿವೆ.

ರಿಯಲ್ಮಿ ಮತ್ತು ಟ್ರಾನ್ಸ್ಷನ್ನಂತಹ ಹೆಚ್ಚಿನ ಪ್ರಮಾಣದ ಬ್ರಾಂಡ್ಗಳ ಬಗ್ಗೆ ಹೆಚ್ಚುತ್ತಿರುವ ಕಳವಳವು ಸ್ಥಳೀಯ ತಯಾರಕರನ್ನು ಕಡಿಮೆ ಮಾಡುತ್ತದೆ ಎಂದು ಮೂಲಗಳು ತಿಳಿಸಿವೆ.

ಮಾರುಕಟ್ಟೆ ಟ್ರ್ಯಾಕರ್ ಕೌಂಟರ್‌ ಪಾಯಿಂಟ್‌ ಪ್ರಕಾರ, 150 ಡಾಲರ್ಗಿಂತ ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ಗಳು ಜೂನ್ 2022 ರವರೆಗಿನ ತ್ರೈಮಾಸಿಕದಲ್ಲಿ ಭಾರತದ ಮಾರಾಟದ ಪರಿಮಾಣದ ಮೂರನೇ ಒಂದು ಭಾಗಕ್ಕೆ ಕೊಡುಗೆ ನೀಡಿವೆ, ಚೀನಾದ ಕಂಪನಿಗಳು ಆ ಸಾಗಣೆಗಳಲ್ಲಿ ಶೇಕಡಾ 80ರಷ್ಟು ಪಾಲನ್ನ ಹೊಂದಿವೆ.