Monday, February 16, 2026
Monday, February 16, 2026
Home Blog Page 149

Tourism Department ಕಾವೇರಿ ಆರತಿ.ಸಾಹಸ ಮತ್ತು ಜಲಕ್ರೀಡೆಗಳ ಜೊತೆ ಪ್ರವಾಸೋದ್ಯಮಕ್ಕೆ ಹೊಸ ಹೊನಲು

0

Tourism Department ಈ ಬಾರಿಯ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ.

ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವಾರು ಜಲ ಕ್ರೀಡೆಗಳು ಪ್ರವಾಸಿಗರಿಂದ ಅಪಾರ ಪ್ರತಿಕ್ರಿಯೆ ಪಡೆಯುತ್ತಿವೆ. ಸಾಹಸ ಕ್ರೀಡೆಗಳು ಯುವಕರಿಗೆ ಹೊಸ ಉತ್ಸಾಹ ನೀಡುತ್ತಿದರೆ, ಜಲಕ್ರೀಡೆಗಳು ಕುಟುಂಬ ಸಮೇತರಾಗಿ ಬರುವವರಿಗೆ ವಿಶೇಷ ಅನುಭವ ನೀಡುತ್ತಿವೆ.

ಈ ಕುರಿತು ಕಾವೇರಿ ಸಮಿತಿ ಅಧ್ಯಕ್ಷರು ಹಾಗೂ BWSSB ಅಧ್ಯಕ್ಷರಾದ ಡಾ. ರಾಮ ಪ್ರಸಾತ್ ಮನೋಹರ್ ಅವರು ಹೇಳಿದ್ದಾರೆ – “ಕೆಆರ್‌ಎಸ್‌ನಲ್ಲಿ ನಡೆಯುತ್ತಿರುವ ಜಲಕ್ರೀಡೆಗಳಿಗೆ ಪ್ರವಾಸಿಗರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸಾಹಸ, ಮನರಂಜನೆ ಮತ್ತು ಸಂಸ್ಕೃತಿಯ ಸಂಯೋಜನೆಯಿಂದ ಕೆಆರ್‌ಎಸ್ ಪ್ರವಾಸೋದ್ಯಮದ ಹೊಸ ಅಧ್ಯಾಯವನ್ನು ಬರೆಯುತ್ತಿದೆ” ಎಂದರು.

Tourism Department ಮಕ್ಕಳಿಗಾಗಿ ಸುಮಾರು 80 ಆಟಗಳನ್ನು ಪರಿಚಯಿಸಲಾಗಿದ್ದು, ಎಲ್ಲ ವಯಸ್ಸಿನ ಪ್ರವಾಸಿಗರು ತಮ್ಮ ರುಚಿಗೆ ತಕ್ಕ ಅನುಭವ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಹೀಗಾಗಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್‌ಎಸ್‌ಗೆ ಆಗಮಿಸಿ ನೂತನ ರೀತಿಯ ಈ ಆಕರ್ಷಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕು ಅವರು ಕರೆ ನೀಡಿದ್ದಾರೆ.

Dr. Babu Jagjivan Ram Leather Industries Development Corporation ಅಕ್ಟೋಬರ್ 18 ವರೆಗೆ ಲಿಡ್ಕರ್ ಚರ್ಮೋತ್ಪನ್ನಗಳು, ರಿಯಾಯಿತಿ ದರದಲ್ಲಿ ಮಾರಾಟ

0

Dr. Babu Jagjivan Ram Leather Industries Development Corporation ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್), ನೆಹರು ರಸ್ತೆ, ಬಸವಸದನ ಕಾಂಪ್ಲೆಕ್ಸ್, ಶಿವಮೊಗ್ಗ ಇಲ್ಲಿ ಅಪ್ಪಟ ಚರ್ಮ ವಸ್ತುಗಳ ಮೇಲೆ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ.29 ರಿಂದ ಅ.18ರವರೆಗೆ ಶೇ. 20% ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳುವಂತೆ ಲಿಡ್ಕರ್ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 8904510699 ನ್ನು ಸಂಪರ್ಕಿಸುವುದು.

Tourism Day ಶಿವಮೊಗ್ಗದ ಫೋಟೋಗ್ರಾಫರ್ ಆದಿತ್ಯ ಪ್ರಸಾದ್ ಗೆ ಪ್ರವಾಸೋದ್ಯಮ ದಿನಾಚರಣೆ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ

0

Tourism Day ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಫೋಟೋಗ್ರಫಿ ಸ್ಪರ್ಧೆಯಲ್ಲಿ ಹವ್ಯಾಸಿ ಛಾಯಾಗ್ರಾಹಕ ಆದಿತ್ಯಪ್ರಸಾದ್ ಎಮ್. ಅವರ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ.

ಬಹುಮಾನವು ಎಂಟು ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಕುವೆಂಪು ರಂಗಮಂದಿರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಿದರು.

ಬಹುಮಾನಿತ ಚಿತ್ರ

Bhadravati Police ಭದ್ರಾವತಿ ನಗರಸಭೆ ಸನಿಹ ಮಹಿಳೆಯ ಮೃತದೇಹ ಪತ್ತೆ. ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

0

Bhadravati Police ಸೆ. 26 ರಂದು ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಗರಸಭೆ ಮುಂಭಾಗದ ಭದ್ರಾ ಹೊಳೆಯ ನೀರಿನಲ್ಲಿ ಮಕಾಡೆ ಮಲಗಿದ್ದ ಸುಮಾರು 60-70 ವರ್ಷ ವಯಸ್ಸಿನ ಅನಾಮಧೇಯ ಹೆಂಗಸಿನ ಮೃತದೇಹ ಪತ್ತೆಯಾಗಿದೆ.

ಚಹರೆ 5 ಅಡಿ ಎತ್ತರ, ತಲೆಯಲ್ಲಿ 6 ಇಂಚು ಬಿಳಿ ಕೂದಲು ಇದ್ದು, ಸೊಂಟಕ್ಕೆ ಡಾಬು ಧರಿಸಿರುತ್ತಾರೆ. ಒಂದು ಕಪ್ಪು ಬಣ್ಣದ ಎಲೆ ಅಡಿಕೆ ಹಾಕುವ ಸಣ್ಣ ಚೀಲ ಸೊಂಟಕ್ಕೆ ಸಿಕ್ಕಿಸಿರುತ್ತದೆ. ಎಡಕೈಯಲ್ಲಿ ತಾಮ್ರದಂತಿರುವ ಬಳೆ ಇದ್ದು, ತೋರು ಬೆರಳಿನಲ್ಲಿ ತಾಮ್ರದಂತಿರುವ ಉಂಗುರು ಇರುತ್ತದೆ.

Bhadravati Police ಎರಡು ಕಾಲು, ಕೈ, ಕಣ್ಣು, ಮುಖ, ಮೂಗು, ಎದೆ ನೀರಿನಲ್ಲಿ ಕೊಳೆತು ಚರ್ಮ ಸುಲಿದಿರುತ್ತೆ. ಮೈಮೇಲೆ ಕೆಂಪು ಸೀರೆ, ಕಪ್ಪು ಜಾಕೇಟ್ ಧರಿಸಿದೆ.
ಈ ಅನಾಮಧೆಯ ಹೆಂಗಸಿನ ಶವದ ವಾರಸುದಾರರು ಪತ್ತೆಯಾದಲ್ಲಿ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಸಬ್‌ಇನ್ಸಪೆಕ್ಟರ್ ತಿಳಿಸಿದ್ದಾರೆ.

Tiger and Lion Safari ತ್ಯಾವರೆಕೊಪ್ಪ ಹುಲಿ-ಸಿಂಹ ಸಫಾರಿಗೆ ಸೆ.30 ಮತ್ತು ಅಕ್ಟೋಬರ್ 7 ರಂದು ರಜಾದಿನವಿಲ್ಲ. ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

0

Tiger and Lion Safari ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಹುಲಿ- ಸಿಂಹಧಾಮ ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:30.09.2025 ಹಾಗೂ 07.10.2025ರ ಮಂಗಳವಾರವೂ ಸಹ ತೆರೆದಿರುತ್ತದೆ.

Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

Goddess Chowdeshwari ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಿಗೆ ಮಹಾಗೌರಿ‌ ಅಲಂಕಾರ ಪೂಜೆ

0

Goddess Chowdeshwari ಶಿವಮೊಗ್ಗ ನಗರದ ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ದೇವಿಗೆ
ಸೆ. 29 ರಂದು ಶ್ರೀಮತಿ ಮಂಜುಳ ಶ್ರೀ ತುಕಾರಾಮ್ ಕುಟುಂಬದವರಿಂದ ಕನಕ ದುರ್ಗಾಹೋಮ, ಸರಸ್ವತಿ ಶ್ರೀ ವಿನಾಯಕ ಕುಟುಂಬದವರಿಂದ ಸರಸ್ವತಿ ಅಲಂಕಾರ ನೆರವೇರಿಸಲಾಯಿತು.

ನೂರಾರು ವಿದ್ಯಾರ್ಥಿಗಳಿಂದ ಸರಸ್ವತಿ ಪೂಜೆ ನೆರವೇರಿಸಲಾಯಿತು.
ಸೆ. ೩೦ರಂದು ಶ್ರೀಮತಿ ಸಂಧ್ಯಾ ಶ್ರೀ ಸುರೇಶ್ ಬಾಬು ಕುಟುಂಬದಿಂದ ಮಹಿಷಾಸುರ ಮರ್ಧಿನಿ ಅಲಂಕಾರ, ಶ್ರೀಮತಿ ಸುಕನ್ಯಾ ಮತ್ತು ಶ್ರೀ ನಾಗಭೂಷಣ ಕುಟುಂಬದಿಂದ ಮತ್ತು ಸಮಸ್ತ ಭಕ್ತಾದಿಗಳಿಂದ ಸಾಮೂಹಿಕ ಶ್ರೀ ಚಂಡಿಕಾ ಹೋಮ ಏರ್ಪಡಿಸಲಾಗಿದೆ.

12:30ಕ್ಕೆ ಮಹಾಮಂಗಳಾರತಿ, ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಅದೇ ದಿನ ಸಂಜೆ 6.30 ರಿಂದ ಶ್ರೀ ಜಿ ಎಸ್ ನಟೇಶ್ ಇವರಿಂದ ಮಂಕು ತಿಮ್ಮನ ಕಗ್ಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾತ್ರಿ 8:00 ರಿಂದ ಶ್ರೀ ಜಯರಾಮ್ ಕುಟುಂಬದವರಿಂದ ಉಯ್ಯಾಲೇ ಸೇವೆ ಹಮ್ಮಿಕೊಳ್ಳಲಾಗಿದೆ. 8:30ಕ್ಕೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ವಿರುತ್ತದೆ
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿ ಕೋರಿದ್ದಾರೆ.

Goddess Chowdeshwari ಹೆಚ್ಚಿನ ಮಾಹಿತಿಗಾಗಿ : ಚೇತನಭಟ್ 9980247081,ಕೆ. ಶೇಖರ 9448888129 ಸಂಪರ್ಕಿಸಬಹುದು.

Klive Special Article ನವರಾತ್ರಿ ಎಂಟನೇ ದಿನ, ದೇವಿಯ ಮಹಾಗೌರಿ ರೂಪದ ಆರಾಧನೆ, ” ಮಹಾಗೌರಿ ಶುಭಂ ದದ್ಯಾತ್”

0

ಲೇ: ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ

ನವರಾತ್ರಿ(ಎಂಟನೆಯದಿನ)


Klive Special Article ಶ್ರೀಮಹಾಗೌರಿ ಮಾತೆಯ ಆರಾಧನೆಯ ದಿನ

“ಶ್ವೇತೆ ವೃಷೇ ಸಮಾರೂಢಾ ಶ್ವೇತಾಂಬರಧರಾ ಶುಚಿಃ/
ಮಹಾಗೌರೀ ಶುಭಂ ದದ್ಯಾತ್ ಮಹಾದೇವ
ಪ್ರಮೋದದಾ//


ಇಂದು ನವರಾತ್ರಿಯ ಎಂಟನೆಯ ದಿವಸ.
ಇಂದು ದೇವಿಯ ಎಂಟನೆಯ ರೂಪವಾದ ಮಹಾ
ಗೌರಿಯ ಆರಾಧನೆಯ ದಿನ.
ಸರ್ವ ಸನ್ಮಂಗಳ ಕಾರಿಣಿಯಾದ ದೇವಿಯ ರೂಪ
ಮಹಾಗೌರಿಯ ಅವತಾರ ರೂಪ.
ಶ್ವೇತ ವರ್ಣದಿಂದ ಕಂಗೊಳಿಸುವ ಮಾತೆಯ ದೇಹವೆಲ್ಲಾ ಪ್ರಭೆಯಿಂದ ಹೊಳೆಯುವುದು. ನಂದಿ ವಾಹನ ರೂಢಳಾದ ದೇವಿಯು ಶಾಂತಿ ಮತ್ತು ಸಂತೋಷದ ಪ್ರತೀಕ.
ನಾಲ್ಕು ಭುಜಗಳನ್ನು ಹೊಂದಿರುವ ಮಾತೆ,ಅಭಯ ಹಸ್ತದಿಂದ ಭಕ್ತರನ್ನು ಹರಸುತ್ತಿದ್ದಾಳೆ.ಒಂದು ಕೈಯಲ್ಲಿ
ದುಷ್ಟಶಕ್ತಿಗಳನ್ನು ನಿಗ್ರಹಿಸಲು ತ್ರಿಶೂಲವನ್ನು ಹಿಡಿದಿರು
ತ್ತಾಳೆ.ಪಾರ್ವತೀ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. ಶಿವನನ್ನು ಪಡೆಯುವುದು ಅವಳ ಗುರಿಯಾಗಿರುತ್ತದೆ. ನಾರದ ಮಹರ್ಷಿಗಳ ಸಲಹೆಯಂತೆ ಶಿವನನ್ನು ಒಲಿಸಿಕೊಳ್ಳಲು ತಪಸ್ಸನ್ನು ಮಾಡುವರು. ಸುದೀರ್ಘ
ತಪಸ್ಸನ್ನು ಮಾಡುತ್ತಾ ನೀರು ಆಹಾರವನ್ನೂ ತ್ಯಜಿಸುತ್ತಾಳೆ.
ಬಿಸಿಲಿನಿಂದ ಆಗಿ ಆಕೆಯ ದೇಹವು ಸಂಪೂರ್ಣವಾಗಿ ಕಪ್ಪಾಗುವುದು ಮತ್ತು ದೀರ್ಘಕಾಲ ತಪಸ್ಸನ್ನು ಮಾಡುತ್ತಾ ಕುಳಿತ ಕಾರಣ ಆಕೆಯ ಮುಂಬೈಗೆ ಧೂಳು ಮೆತ್ತಿಕೊಳ್ಳುತ್ತದೆ.
Klive Special Article ಇವಳ ತಪಸ್ಸಿಗೆ ಸಂತುಷ್ಟನಾದ ಶಿವನು ಪಾರ್ವತಿಯ ಮೈಮೇಲಿನ ಕಪ್ಪುಬಣ್ಣ ಮತ್ತು ಇಷ್ಟು ದಿನಗಳ ಕಷ್ಟಗಳ ಪರಿಹಾರಕ್ಕಾಗಿ ಗಂಗಾಜಲವನ್ನು ಮೈಮೇಲೆ ಹರಿಸಿದ್ದರಿಂದ ಮೈಯೆಲ್ಲಾ ಕಾಂತಿಯಿಂದ ಹೊಳೆಯತೊಡಗಿತು.
ಆಕೆಯು ಮಹಾಗೌರಿಯಾಗಿ ಹೊಸ ಜನ್ಮ ಎತ್ತಿದಳು.ಶಿವನು ಆಕೆಯ ಭಕ್ತಿಗೆ ಮೆಚ್ಚಿ ಅವಳ ಇಷ್ಟದ ಪ್ರಕಾರ ಆಕೆಯನ್ನು ವರಿಸಿದ.
ಭಕ್ತರಿಗೆ ಶಾಂತಿ ಮತ್ತು ಸಂತೋಷವನ್ನು ಕೊಟ್ಟು ಅನುಗ್ರಹಿಸುವ ಮಹಾಗೌರಿಮಾತೆಗೆ ಭಕ್ತಿಯ ನಮನಗಳನ್ನು ಅರ್ಪಿಸಿ ತಾಯಿಯ ಅನುಗ್ರಹಕ್ಕೆ ಪಾತ್ರರಾಗೋಣ.

Rotary Club Shivamogga ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯರೂಪಿಸುವಲ್ಲಿ ಶ್ರೇಷ್ಠ ಮಾರ್ಗದರ್ಶನ ನೀಡಬೇಕು- ವಿಲಿಯಂ ಡಿಸೋಜಾ

0

Rotary Club Shivamogga ಭವ್ಯ ಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅಪಾರ ಎಂದು ಅಂತರಾಷ್ಟ್ರೀಯ ತರಬೇತುದಾರ ವಿಲಿಯಂ ಡಿಸೋಜಾ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ಸಹಯೋಗದಲ್ಲಿ ಎಟಿಎನ್‌ಸಿಸಿ ಕಾಲೇಜಿನಲ್ಲಿ ಆಯೋಜಿಸಿದ್ದ ವಾಣಿಜ್ಯ ಶಿಕ್ಷಕರ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಕರು ಸಮಯ ಪಾಲನೆ ಮಾಡಬೇಕು. ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಶ್ರೇಷ್ಠ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶ್ ಮೂರ್ತಿ ಮಾತನಾಡಿ ಭಾರತೀಯ ಸಂಸ್ಕೃತಿಯಲ್ಲಿ ಶಿಕ್ಷಣ ಮತ್ತು ಸಂಸ್ಕಾರ ಅತ್ಯಂತ ಅವಶ್ಯಕ. ಮಕ್ಕಳಿಗೆ ಉತ್ತಮ ಶಿಕ್ಷಣ ಸೌಲಭ್ಯ ಸಿಗುವಂತಾಗಬೇಕು ಎಂದರು.
ಸಮಾಜಮುಖಿ ಕಾರ್ಯ ಚಟುವಟಿಕೆಗಳ ಜತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ವಿಶೇಷವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ. ಉತ್ತಮ ನಿರ್ಮಾಣ ಮಾಡುವಲ್ಲಿ ರೋಟರಿ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.

ಎಟಿಎನ್‌ಸಿಸಿ ಪ್ರಾಚಾರ್ಯೆ ಮಮತಾ ಮಾತನಾಡಿ, ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡುವ ಮೂಲಕ ಉನ್ನತ ಸಾಧನೆ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ರೋಟರಿ ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, ಮೌಲ್ಯಗಳಿಲ್ಲದ ಜ್ಞಾನವು ಬೇರು ರಹಿತ ಸಸಿಯಂತೆ, ಜ್ಞಾನವಿಲ್ಲದ ಮೌಲ್ಯಗಳು ಶಕ್ತಿಹೀನ. ವಿದ್ಯಾರ್ಥಿಗಳು ಸಂಸ್ಕಾರ ಮತ್ತು ಮೌಲ್ಯಯುತ ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

Rotary Club Shivamogga ಪ್ರೊ. ಸತ್ಯನಾರಾಯಣ, ರೋಟರಿ ಲರ್ನಿಂಗ್ ಫೆಸಿಲಿಟೇಟರ್ ನಾಗರಾಜು, ರೋಟರಿ ಕಾರ್ಯದರ್ಶಿ ರಶ್ಮಿ, ರೋಟರಿ ಕ್ಲಬ್‌ನ ಸಿದ್ದಲಿಂಗಮೂರ್ತಿ, ಸ್ವಪ್ನ, ಸ್ಮಿತಾ, ರೋಟರಿ ಉತ್ತರ ಅಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.

Geetha Shivarajkumar ಚುನಾವಣೆಗೆ ” ಗುಡ್ ಬೈ” – ಗೀತಾ ಶಿವರಾಜ್ ಕುಮಾರ್

0

Geetha Shivarajkumar ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ರಾಜಿನಾಮೆ ನೀಡಿದ್ದಾರೆ.

ಪಕ್ಷ ಸಂಘಟನಾ ಕೆಲಸದಲ್ಲಿ ಮುಂದುವರಿಯುವುದಾಗಿ ಘೋಷಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಪತ್ನಿ ಹಾಗೂ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Geetha Shivarajkumar ಮಹಿಳೆಯರು ಎಂದಿಗೂ ಅಬಲೆಯಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ದಿಟ್ಟವಾಗಿ ಮಾಡುತ್ತಾರೆ ಎಂದರು.

Dr. N.B. Sridhar ವೈದ್ಯಕೀಯ ಸಾಹಿತಿ ,ಸಂಶೋಧಕ ಡಾ.ಎನ್.ಬಿ.ಶ್ರೀಧರ್ ಅವರಿಗೆ “ಶ್ರೇಷ್ಠ ಸಂಶೋಧಕ ” ಪುರಸ್ಕಾರ

0

Dr. N.B. Sridhar ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ ಡಾ: ಎನ್.ಬಿ.ಶ್ರೀಧರ ಇವರಿಗೆ “ಶ್ರೇಷ್ಟ ಸಂಶೋಧಕ” ಪ್ರಶಸ್ತಿ
ನಾಡಿನ ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರರಾದ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಶಿಕ್ಷಕರ ಸಂಘವು ಇವರ ಉತ್ತಮ ಸಂಶೋಧನೆಗಳ ಯಶೋಗಾಥೆಯನ್ನು ಗುರುತಿಸಿ ಸಂಶೋಧನಾ ಕ್ಷೇತ್ರದಲ್ಲಿ ಇವರು ಮಾಡಿದ ಗಣನೀಯ ಸಾಧನೆಗಾಗಿ 2025 ನೇ ಸಾಲಿನ “ “ಶ್ರೇಷ್ಟ ಸಂಶೋಧಕ” ಪ್ರಶಸ್ತಿ ನೀಡಿ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದೆ.

ಇವರು ಪಶುವೈದ್ಯಕೀಯ ರಂಗದಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಷಯವನ್ನು ಬೋಧನೆ ಮಾಡಿರುವುದನ್ನು, 200ಕ್ಕೂ ಹೆಚ್ಚಿನ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ಮಾರ್ಗದರ್ಶನ ಮಾಡಿರುವುದನ್ನು, ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ ಸಸ್ಯಜನ್ಯ ಶಿಲೀಂದ್ರವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ ಮಾಡಿ ಸಹಸ್ರಾರು ಜಾನುವಾರುಗಳ ಉಳಿವಿಗೆ ಕಾರಣರಾಗಿರುವುದನ್ನು, ಜಾನುವಾರುಗಳಲ್ಲಿ ಕಾರಣ ಗೊತ್ತಿರದ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ಮತ್ತು ಚಿಕಿತ್ಸೆ ಕಂಡು ಹಿಡಿದು ಸಾವಿರಾರು ಮೂಕ ಪಶುಗಳ ಜೀವ ಉಳಿಸಲು ಕಾರಣರಾಗಿರುವುದನ್ನು, ಬಂಜೆತನದಿಂದ ಬಳಲುತ್ತಿರುವ ಅನುತ್ಪಾದಕ ಗೋವುಗಳನ್ನು ಸಂಶೋಧನೆಗಳ ಮೂಲಕ ಕಂಡುಕೊಂಡ ಆಯ್ದ ಚಿಕಿತ್ಸಾ ವಿಧಾನವನ್ನು ಗ್ರಾಮ ಮಟ್ಟದಲ್ಲಿ ಅಳವಡಿಸಿ ಅವುಗಳನ್ನು ಉತ್ಪಾದಕತೆಯತ್ತ ಕೊಂಡೊಯ್ದಿರುವ ಮತ್ತು ಅವುಗಳನ್ನು ಕಟುಕರ ಕತ್ತಿಯಿಂದ ತಪ್ಪಿಸುವ ಸಂಶೋಧನಾ ಚಟುವಟಿಕೆಗಳನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

Dr. N.B. Sridhar ಇತ್ತೀಚಿಗಷ್ಟೆ ಇವರಿಗೆ ಭಾರತೀಯ ಪಶುವೈದ್ಯಕೀಯ ಔಷಧಶಾತ್ರಜ್ಞರ ಮತ್ತು ವಿಷಶಾಸ್ತ್ರಜ್ಞರ ಸಂಘವು “ರಾಷ್ಟ್ರೀಯ ಫೆಲೊ” ಪ್ರಶಸ್ತಿ ನೀಡಿರುವುದನ್ನು, ಕರ್ನಾಟಕ ರಾಜ್ಯ ಪಶುವೈದ್ಯ ಸಂಘವು “ಜೀವ ಮಾನದ ಶ್ರೇಷ್ಟ ಪಶುವೈದ್ಯ” ಪ್ರಶಸ್ತಿ ನೀಡಿರುವುದನ್ನು ಮತ್ತು ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯವು “ಶ್ರೇಷ್ಟ ಶಿಕ್ಷಕ” ಪ್ರಶಸ್ತಿಯನ್ನು ನೀಡಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.