Tuesday, December 9, 2025
Tuesday, December 9, 2025
Home Blog Page 15

Dr. Nagalakshmi ಮಹಿಳೆಯರೊಂದಿಗೆ ಸೂಕ್ಷ್ಮವಾಗಿ ನಡೆದುಕೊಳ್ಳಿ- ಡಾ.ನಾಗಲಕ್ಷ್ಮಿ ಚೌಧರಿ.

0

Dr. Nagalakshmi ಪೊಲೀಸರು ಹೆಣ್ಣುಮಕ್ಕಳೊಂದಿಗೆ ಸೂಕ್ಷö್ಮತೆ ಮತ್ತು ಸಮಾಧಾನದಿಂದ ನಡೆದುಕೊಳ್ಳಬೇಕು. ಹಾಗೂ ಅವರಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ಡಾ.ನಾಗಲಕ್ಷ್ಮಿ ಚೌಧರಿ ಸೂಚಿಸಿದರು.
ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ 2013(POSH) ಅನುಷ್ಟಾನ, ಮಹಿಳಾ ಸ್ಪಂದನ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪೊಲೀಸರು ಮಹಿಳೆಯರು, ಮಕ್ಕಳಸ್ನೇಹಿ ಮತ್ತು ಜನಸ್ನೇಹಿಯಾಗಿರಬೇಕು, ಸ್ಥಳೀಯ ಠಾಣೆಗಳಲ್ಲಿ ಹೆಣ್ಣು ಮಕ್ಕಳೊಂದಿಗೆ ಸಮಾಧಾನ, ಸೂಕ್ಷ್ಮತೆಯಿಂದ ನಡೆದುಕೊಳ್ಳಬೇಕು. ಪೊಲೀಸ್ ಸಿಬ್ಬಂದಿಗಳಿಗೆ ಆಪ್ತಸಮಾಲೋಚನಾ ತರಬೇತಿಯನ್ನು ಕಡ್ಡಾಯವಾಗಿ ಮಾಡಿಸಬೇಕು. ತರಬೇತಿ ನೀಡಿದ ಬಗ್ಗೆ ಆಯೋಗಕ್ಕೆ ವರದಿ ನೀಡಬೇಕು ಎಂದ ಅವರು ಹೆಣ್ಣು ಮಕ್ಕಳು ಸಹ ಪೊಲೀಸ್ ಠಾಣೆಗಳ ಬಗ್ಗೆ ಭಯ ತೊರೆದು ಉತ್ತಮ ಸಂಬAಧ ಹೊಂದಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ 3612 ಸರ್ಕಾರಿ ಕಚೇರಿಗಳಿದ್ದು 10 ಜನಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ 1050 ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸಲಾಗಿದೆ ಎಂದರು.
ಅಧ್ಯಕ್ಷರು, ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೆಣ್ಣುಮಕ್ಕಳು, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಯಾವುದೇ ರೀತಿಯಲ್ಲಿ ದೈಹಿಕ, ಮಾನಸಿಕ ದೌರ್ಜನ್ಯ, ಕಿರುಕುಳ ನೀಡುತ್ತಿದ್ದರೆ ಯಾವುದೇ ಭಯ-ಆತಂಕಕ್ಕೆ ಒಳಗಾಗದೇ ಆಂತರಿಕ ದೂರು ಸಮಿತಿಗೆ ದೂರು ನೀಡಬೇಕೆಂದು ತಿಳಿಸಿದರು.
Dr. Nagalakshmi ಮೆಗ್ಗಾನ್ ಆಸ್ಪತ್ರೆಯಲ್ಲಿ ಓಪಿಡಿ, ಔಷಧಿ ಕೌಂಟರ್‌ಗಳ ಬಳಿ ಗರ್ಭಿಣಿಯರು, ಮಕ್ಕಳು ಸರತಿ ಸಾಲಿನಲ್ಲಿ ತುಂಬಾ ಹೊತ್ತು ನಿಲ್ಲುವ ಸ್ಥಿತಿ ಇದ್ದು, ಹೆಚ್ಚುವರಿ ಕೌಂಟರ್‌ನ್ನು ತೆರೆಯಲು ಕೂಡಲೇ ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಸೇರಿದಂತೆ ತಾಲ್ಲೂಕು ಆಸ್ಪತ್ರೆಗಳು, ಪಿಹೆಚ್‌ಸಿ, ಸಿಹೆಚ್‌ಸಿ ಗಳ ಎಲ್ಲ ಹೊರಗುತ್ತಿಗೆ ನೌಕರರಿಗೆ ನಿಯಮಿತವಾಗಿ ಪಿಎಫ್ ಮತ್ತು ಇಎಸ್‌ಐ ಸೌಲಭ್ಯ ನೀಡಿರುವ ವರದಿ ನೀಡುವಂತೆ ತಿಳಿಸಿದರು.
ಶೌಚಾಲಯ ನಿರ್ಮಿಸಿ : ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಜನರಲ್ ವಾರ್ಡಿನಲ್ಲಿ ಮಹಿಳೆಯರಿಗೆ ಶೌಚಾಲಯ ಇಲ್ಲದೇ ಮಹಿಳೆಯರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ವಾರ್ಡಿನಿಂದ ಹೊರಗಡೆ ಹೋಗಿ ಅಲ್ಲಿರುವ ಶೌಚಾಲಯ ಬಳಕೆ ಮಾಡಿ ಮತ್ತೆ ವಾರ್ಡಿಗೆ ಬರಬೇಕು. ಆದ್ದರಿಂದ ಶೀಘ್ರದಲ್ಲೇ ವಾರ್ಡಿನಲ್ಲಿ ಶೌಚಾಲಯ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಕೂಡಲೇ ಲೈಟ್ ಹಾಕಿಸಿ : ನೆಹರು ಸ್ಟೇಡಿಯಂ ನ ಒಳಗೆ ವ್ಯವಸ್ಥಿತವಾದ ಬೆಳಕು ಇಲ್ಲ. ಸಂಜೆ ಆಗುತ್ತಿದ್ದ ಹಾಗೆ ಸಂಪೂರ್ಣ ಕತ್ತಲು ಆವರಿಸುತ್ತಿದೆ. ಕ್ರೀಡಾ ವಸತಿ ನಿಲಯದ ಹೆಣ್ಣುಮಕ್ಕಳು À ಕತ್ತಲಲ್ಲೇ ಅಭ್ಯಾಸ ಮಾಡುತ್ತಿದ್ದು, ಈ ಕೂಡಲೇ ಲೈಟ್‌ಗಳನ್ನು ಹಾಕಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಿಸಿ ಟಿವಿ ಕಡ್ಡಾಯವಾಗಿ ಅಳವಡಿಸಬೇಕು. ಕುಡಿಯುವ ನೀರು, ಶೌಚಾಲಯ, ಲೈಟ್‌ಗಳು, ಕ್ರೀಡಾ ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಕಬೋರ್ಡ್, ಹೆಣ್ಣುಮಕ್ಕಳಿಗೆ ಸ್ಯಾನಿಟರಿ ಪ್ಯಾಡ್ ನೀಡುವುದು ಸೇರಿದಂತೆ ಸಣ್ಣಪುಟ್ಟ ದೋಷಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ತಂದೆ ರೀತಿ ಜವಾಬ್ದಾರಿ ವಹಿಸಿ : ಸಕ್ರೆಬೈಲು ಬಳಿಯ ಮೊರಾರ್ಜಿ ದೇಸಾಯಿ ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸಬೇಕು. ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಕಲ್ಯಾಣ ಇಲಾಖೆಗಳ ಮುಖ್ಯಸ್ಥರು ಪ್ರತಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಮಾತನಾಡಬೇಕು. ಆಗ ಸಮಸ್ಯೆ ತಿಳಿಯುತ್ತದೆ. ನಿಯೋಜಿತ ಅಧಿಕಾರಿಗಳು ತಂದೆ ರೀತಿ ಹಾಸ್ಟೆಲ್‌ಗಳ ಜವಾಬ್ದಾರಿ ವಹಿಸಬೇಕು. ವಾರ್ಡನ್‌ಗಳು ಮಕ್ಕಳೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳಬೇಕು. ಹಾಸ್ಟೆಲ್‌ನಲ್ಲಿನ ಕಂಪ್ಯೂಟರ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಹಾಗೂ ಉತ್ತಮ ಆಹಾರ ನೀಡಬೇಕು. ಜಿಲ್ಲಾಧಿಕಾರಿ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳ ಹೆಸರನ್ನು ಹಾಸ್ಟೆಲ್ ಫಲಕದಲ್ಲಿ ಬರೆಸುವಂತೆ ಸೂಚನೆ ನೀಡಿದ ಅವರು ಏನಾದರೂ ಸಮಸ್ಯೆಗಳಿದ್ದಲ್ಲಿ ವಿದ್ಯಾರ್ಥಿಗಳು ಸಂಬAಧಿಸಿದ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಬಹುದು ಎಂದರು.
ಬಾಣAತಿ ಸಾವು ತಗ್ಗಿಸಿ : ಡಿಹೆಚ್‌ಓ ಡಾ. ನಟರಾಜ್ ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಇಲ್ಲಿಯವರೆಗೆ 12 ಬಾಣಂತಿಯರ ಸಾವು ಸಂಭವಿಸಿದ್ದು, 9 ನಮ್ಮ ಜಿಲ್ಲೆ ಮತ್ತು 03 ಹೊರ ಜಿಲ್ಲೆಯ ಪ್ರಕರಣಗಳಾಗಿವೆ. ಬಿಪಿ, ಹಿಮೊಗ್ಲೋಬಿನ್ ಕೊರತೆ, ರಕ್ತಸ್ರಾವ ಸೇರಿದಂತೆ ಇತರೆ ಸಂಕೀರ್ಣತೆಗಳಿAದ ಸಾವು ಸಂಭವಿಸುತ್ತಿದೆ ಎಂದರು.
ಅಧ್ಯಕ್ಷರು, ಬಾಣಂತಿ ಸಾವು ನಿಯಂತ್ರಣ ಮಾಡಲು ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳಬೇಕು. ಸೂಕ್ತ ಔಷಧೋಪಚಾರ ಮತ್ತು ಚಿಕಿತ್ಸೆ ನೀಡಬೇಕು. ಶಿವಮೊಗ್ಗದಲ್ಲಿ ಬಾಣಂತಿ ಸಾವು ಪ್ರಕ್ರರಣಗಳು ಪೂರ್ಣವಾಗಿ ತಗ್ಗಬೇಕು. ನರ್ಸ್ಗಳಿಗೆ ಬಾಣಂತಿ ರಕ್ತಸ್ರಾವ ತಗ್ಗಿಸುವ ಕುರಿತಾದ ತರಬೇತಿಯನ್ನು ಕಡ್ಡಾಯವಾಗಿ ನೀಡಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ನಾಪತ್ತೆಯಾಗಿ ಸುಳಿವು ಪತ್ತೆಯಾಗದ ಮಹಿಳೆಯರ ವಿವರವನ್ನು ಆಯೋಗಕ್ಕೆ ನೀಡಬೇಕು. ಸಮರ್ಥ ಸೇತು ಕಾರ್ಯಕ್ರಮಗಳನ್ನು ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಕೈಗೊಳ್ಳಬೇಕು ಎಂದು ಎಸ್‌ಪಿ ಯವರಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಓಸಿ ಮತ್ತು ಡ್ರಗ್ಸ್ ದಂಧೆ ಹಾಗೂ ಗ್ರಾಮೀಣ ಭಾಗದಲ್ಲಿ ಹೆಂಡ ಮಾರಾಟ ಹೆಚ್ಚಿದೆ ಎಂಬ ಮಾಹಿತಿ ದೊರೆತಿದ್ದು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ದೊಡ್ಡ ಮಟ್ಟದಲ್ಲಿ ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಸೂಚನೆ ನೀಡಿದರು.

ಎಸ್‌ಪಿ ಮಿಥುನ್ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ 2023 ರಲ್ಲಿ 454 ಮಹಿಳೆಯರ ನಾಪತ್ತೆ ಪ್ರಕರಣ ದಾಖಲಾಗಿದ್ದು 450 ಮಹಿಳೆಯರನ್ನು ಪತ್ತೆ ಹಚ್ಚಿದ್ದು 8 ಮಹಿಳೆಯರು ಪತ್ತೆಯಾಗಿಲ್ಲ, 2024 ರಲ್ಲಿ 506 ನಾಪತ್ತೆ ಪ್ರಕರಣದಲ್ಲಿ 497 ಪತ್ತೆ ಹಚ್ಚಿದ್ದು, 11 ಪತ್ತೆಯಾಗಿಲ್ಲ. 2025 ರಲ್ಲಿ 395 ನಾಪತ್ತೆ ಪ್ರಕರಣದಲ್ಲಿ 374 ಪತ್ತೆ ಹಚ್ಚಿದ್ದು, 27 ಪ್ರಕರಣ ಪತ್ತೆಯಾಗಿಲ್ಲವೆಂದು ವರದಿ ನೀಡಿದರು.
ಹಾಗೂ ನಗರದ ಶಾಲಾ-ಕಾಲೇಜು, ಸಾರ್ಜಜನಿಕ ಸ್ಥಳಗಳಲ್ಲಿ ಚೆನ್ನಮ್ಮ ಪಡೆ ಕಳೆದ ವರ್ಷದಿಂದ ಕೆಲಸ ಮಾಡುತ್ತಿದೆ. ರಸ್ತೆ ಸುರಕ್ಷತೆ, ಮಹಿಳೆಯರ ಸುರಕ್ಷತೆ, ಸೈಬರ್ ಕ್ರೆöÊಂ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.
ಜಿ.ಪಂ. ಸಿಇಓ ಹೇಮಂತ್ ಎನ್ ಮಾತನಾಡಿ, ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಶೇ 75.59 ಪ್ರಗತಿ ಸಾಧಿಸಲಾಗಿದೆ. ಶೇ .55.73 ಮಹಿಳೆಯರ ಭಾಗವಹಿಸುವಿಕೆ ಇದೆ ಎಂದರು.
ಕೋಟೆಗಂಗೂರು, ಹರಮಘಟ್ಟದ ಶಾಲಾ ಕಾಲೇಜು ವಿದ್ಯಾರ್ಥಿಗಳು ತಮ್ಮ ಊರಿಗೆ ಬಸ್ ಇಲ್ಲದೇ ವಿದ್ಯಾಸಂಸ್ಥೆಗೆ ಬರುವುದು ಕಷ್ಟವಾಗುತ್ತಿದೆ ಎಂದು ದೂರಿತ್ತಿದ್ದು ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.
ಕೂಡಿ ಬಾಳೋಣ ಕಾರ್ಯಕ್ರಮ ಮಾಡಿ : ರಾಷ್ಟ್ರೀಯ ಮಹಿಳಾ ಆಯೋಗದಡಿ ಕೈಗೊಳ್ಳಲಾಗಿರುವ ‘ಕೂಡಿ ಬಾಳೋಣ’ ಎಂಬ ವಿವಾಹ ಪೂರ್ವ ಆಪ್ತ ಸಮಾಲೋಚನೆಯಂತಹ ಚಟುವಟಿಕೆಯನ್ನು ಜಿಲ್ಲೆಯಲ್ಲಿಯೂ ಕೈಗೊಳ್ಳಬೇಕು. ಇಲ್ಲಿ ವಿವಾಹ ಪೂರ್ವದಲ್ಲಿ ಗಂಡು ಮತ್ತು ಹೆಣ್ಣಿನ ಎರಡೂ ಕುಟುಂಬಗಳು ಒಬ್ಬರನ್ನೊಬ್ಬರು ಅರಿಯುವ ಅವಕಾಶ ಲಭಿಸುವುದರಿಂದ ವಿಚ್ಚೇದನದಂತಹ ಪ್ರಕರಣಗಳು ಕಡಿಮೆಯಾಗಲಿವೆ ಎಂದರು.
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದಿಂದ ಮಹಿಳೆಯರಿಗೆ ಲಭ್ಯವಿರುವ ಉಚಿತ ಸೇವೆ, ಸೌಲಭ್ಯಗಳ ಕುರಿತು ತಿಳಿಸಿ, ಪ್ರಾಧಿಕಾರದ ಸೇವೆಯಿಂದಾಗಿ ಮಹಿಳಾ ಮಧ್ಯಸ್ಥಿಕೆ ಸಂಖ್ಯೆ ಹೆಚ್ಚಿದೆ, ಲೋಕ ಅದಾಲತ್ ನಿಂದಾಗಿ ಸಾವಿರಾರು ಪ್ರಕರಣಗಳು ರಾಜೀ ಸಂಧಾನದಿAದ ಇತ್ಯರ್ಥವಾಗುತ್ತಿವೆ. ಮಹಿಳೆಯರು ಕಾನೂನಿಗೆ ಸಂಬAಧಿಸಿದ ಏನಾದರೂ ಸಮಸ್ಯೆಗಳು ಇದ್ದಲ್ಲಿ ನಾಲ್ಸಾ ಸಹಾಯವಾಣಿ ಸಂಖ್ಯೆ 15100 ಕರೆ ಮಾಡಿ ಉಚಿತವಾಗಿ ಕಾನೂನಿನ ನೆರವು ಪಡೆಯಬಹುದು ಎಂದರು.
ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯೋರ್ವರು ಲಿಮಿಟೇಷನ್ ಅವಧಿ ಮೀರಿ ನೀಡಿದ್ದ ಅರ್ಜಿಯನ್ನು ಪ್ರಾಧಿಕಾರ ಪುರಸ್ಕರಿಸಿ ಅವರಿಗೆ ಪರಿಹಾರ ನೀಡಿದ ಬಗೆಯನ್ನು ವಿವರಿಸಿದರು.
ಅಧ್ಯಕ್ಷರು ಮಹಿಳೆಯರಿಗೆ ಕಾನೂನಿನ ಅರಿವು ಮತ್ತು ನೆರವು ನೀಡುವುದು ನಿಜವಾದ ಮಹಿಳಾ ಸಬಲೀಕರಣ. ಕಾನೂನು ಸೇವಾ ಪ್ರಾಧಿಕಾರ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ಉತ್ತಮ ಕಾರ್ಯವೆಸಗುತ್ತಿದೆ ಎಂದು ಶ್ಲಾಘಿಸಿದರು.
ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರು ಸಾಯುವವರೆಗೆ ಚಿಕಿತ್ಸೆ ಪಡೆಯುವ ಅವಶ್ಯಕತೆ ಇರುವುದರಿಂದ ಅವರಿಗೆ ಸಕ್ಷಮ ಪ್ರಾಧಿಕಾರವು ಸೂಕ್ತ ಪರಿಹಾರ ,ಸೌಲಭ್ಯ ನೀಡಬೇಕೆಂದರು.
54 ಲಕ್ಷ ಸೈಬರ್ ಕ್ರೈಮ್ ಮೂಲಕ ಹಣ ಕಳೆದುಕೊಂಡ ಸಂತ್ರಸ್ತೆ, ಮಹಿಳೆಯೋರ್ವರು ಮನೆಗೆ ಹೋಗಲು ರಸ್ತೆ ಇಲ್ಲವೆಂದು, ಆಸಿಡ್ ಸಂತ್ರಸ್ತರು ಪರಿಹಾರ ಕೋರಿ, ವಿಕಲಚೇತನರು ಮನೆ, ಕೆಲಸ ಬೇಕೆಂದು, ಮಹಿಳಾ ಪೇದೆ ಪತಿಯಿಂದ ದೌರ್ಜನ್ಯ ಹಾಗೂ ಅನೇಕ ಮಹಿಳಾ ದೌರ್ಜನ್ಯದ ಪ್ರಕರಣಗಳು, ಕೌಟುಂಬಿಕ ದೌರ್ಜನ್ಯ, ಖಾಸಗಿ ವಿಷಯಗಳು, ವಿವಿಧ ಇಲಾಖೆಗಳಿಗೆ ಸಂಬAಧಿಸಿದ ವಿಷಯಗಳು ಸೇರಿದಂತೆ 100 ಕ್ಕೂ ಹೆಚ್ಚು ಅರ್ಜಿದಾರರು ಅರ್ಜಿ ನೀಡಿದ್ದು, ಆಯುಕ್ತರು ಹಲವಾರು ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಇದ್ದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿಲ್ಲಾ ಕಾನೂನು ಸೇವಾ ಪ್ರಾಧಿಕರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ ಸೂಕ್ತ ಪರಿಹಾರ ಮತ್ತು ನಿರ್ದೇಶನ ನೀಡಲು ಸೂಚಿಸಿದರು.
ಜಿಲ್ಲಾ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಹೇಮಂತ್ ಎನ್, ಎಸ್ ಪಿ ಜಿ.ಕೆ. ಮಿಥುನ್ ಕುಮಾರ್ ಹಾಜರಿದ್ದರು.

B. Y. Raghavendra ಸಾಲೂರಿನಲ್ಲಿ ಸಂಸದ ರಾಘವೇಂದ್ರ ಅವರಿಂದ ಮಹಿಳಾ ಸಹಕಾರ ಸಂಘದ ಬೆಳ್ಳಿಹಬ್ಬದ ಉದ್ಘಾಟನೆ

0

B. Y. Raghavendra ಇಂದು ಶಿಕಾರಿಪುರ ತಾಲೂಕಿನ ಸಾಲೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಉದ್ಘಾಟನೆ ನೆರವೇರಿಸಲಾಯಿತು.

B. Y. Raghavendra ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಮಹಿಳಾ ಉತ್ಪಾದಕರ ಸಬಲೀಕರಣ ಮತ್ತು ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗೆ ಸಂಘ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ.

B. Y. Raghavendra ಶಿಕಾರಿಪುರದಲ್ಲಿ “ರೋಗ ಪತ್ತೆ ಹಚ್ಚುವ” ಆಧುನಿಕ ಯಂತ್ರದ ಉದ್ಘಾಟನೆ.

0

B. Y. Raghavendra ಶಿಕಾರಿಪುರದಲ್ಲಿ ಆಧುನಿಕ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸುವ ದಿಸೆಯಲ್ಲಿ CBNAAT ಯಂತ್ರವನ್ನು ಇಂದು ಉದ್ಘಾಟಿಸಲಾಯಿತು. ಈ ಯಂತ್ರವು ಕ್ಷಯರೋಗ (TB) ಸೇರಿದಂತೆ ಪ್ರಮುಖ ಸೋಂಕುಗಳನ್ನು ಅತಿ ವೇಗವಾಗಿ ಮತ್ತು ಅಚ್ಚುಕಟ್ಟಾಗಿ ಪತ್ತೆಹಚ್ಚುವ ಸಾಮರ್ಥ್ಯ ಹೊಂದಿದೆ.

ಈ ಸಂಯೋಜಿತ ತಂತ್ರಜ್ಞಾನದಿಂದ ರೋಗನಿರ್ಣಯಕ್ಕೆ ಬೇಕಾಗುವ ಸಮಯ ತುಂಬಾ ಕಡಿಮೆಯಾಗುತ್ತದೆ. ಗ್ರಾಮೀಣ ಪ್ರದೇಶಗಳಿಗೂ ತ್ವರಿತ ಪರೀಕ್ಷಾ ಸೌಲಭ್ಯ ದೊರೆಯಲು ಇದು ಮಹತ್ವದ ಹೆಜ್ಜೆಯಾಗಿದೆ. ಪರಿಣಾಮವಾಗಿ, ರೋಗಿಗಳಿಗೆ ಸಮಯೋಚಿತ ಚಿಕಿತ್ಸೆ ನೀಡುವಿಕೆ ಇನ್ನಷ್ಟು ಪರಿಣಾಮಕಾರಿಯಾಗಲಿದೆ.

B. Y. Raghavendra ಶಿಕಾರಿಪುರ ತಾಲ್ಲೂಕಿನ ಜನತೆಗೆ ಉತ್ತಮ, ವಿಶ್ವಾಸಾರ್ಹ ಮತ್ತು ವೇಗದ ಆರೋಗ್ಯ ಸೇವೆ ತಲುಪಿಸಲು ಈ ಹೊಸ ಯಂತ್ರದ ಉದ್ಘಾಟನೆ ಮಹತ್ತರ ಕೊಡುಗೆ ಆಗಿದೆ.

Women’s Cricket ಅಂಧರ ಕ್ರಿಕೆಟ್ ವಿಶ್ವಕಪ್ ಗೆದ್ದ ತಂಡದಲ್ಲಿ ರಿಪ್ಪನ್ ಪೇಟೆ ಯುವತಿಯ ಕಮಾಲ್

0

Women’s Cricket ಮಹಿಳಾ ಅಂಧರ T20 ವಿಶ್ವಕಪ್ ಪ್ರಶಸ್ತಿಯನ್ನು ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಪಡೆದಿದೆ.

ಮೊದಲ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತದ ಮಹಿಳೆಯರ ತಂಡ ದ ಆನಂದಕ್ಕೆ ಪಾರವೇ ಇಲ್ಲ.

ಭಾನುವಾರ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ರೋಚಕ ಫೈನಲ್‌ನಲ್ಲಿ ದೀಪಿಕಾ ಟಿ.ಸಿ. ಅವರ ನಾಯಕತ್ವದ ಭಾರತ ತಂಡ
ನೇಪಾಳವನ್ನು ಏಳು ವಿಕೆಟ್‌ಗಳಿಂದ ಮಣಿಸಿತು.

ಕರ್ಣಾಟಕದ ಮೂವರಲ್ಲಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್ ಪೇಟೆಯ ಕಾವ್ಯಾ, ವಿ.‌ಕ್ರಿಕೆಟ್ ಕ್ಷೇತ್ರದಲ್ಲಿ ಗಮನ ಸೆಳೆದಿದ್ದಾರೆ

ಗೆಲುವಿಗೆ ಕೈಜೋಡಿಸಿದ ರಿಪ್ಪನ್ ಪೇಟೆಯ ಪ್ರತಿಭೆ ಕಾವ್ಯಾ .ವಿ .

ಕಾವ್ಯಾ ವಿ ರಿಪ್ಪನ್ ಪೇಟೆಯ ಬರುವೆ ಗ್ರಾಮದ ಆಚಾರ್ ಕೇರಿ ನಿವಾಸಿ
ಜಯಮ್ಮ–ವೆಂಕಟೇಶ್ ಆಚಾರ್ ದಂಪತಿಯ ಪುತ್ರಿ .
ನಾಲ್ಕನೇ ತರಗತಿಯವರೆಗೂ ಪಟ್ಟಣದ ಬರುವೆ ಗ್ರಾಮದ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

Women’s Cricket ದೃಷ್ಟಿಯಲ್ಲಿ ಸಮಸ್ಯೆಯುಂಟಾದ ಕಾರಣ ‌ಕಾವ್ಯ ಅವರು ಶಿವಮೊಗ್ಗದ ಗೋಪಾಲ ಬಡಾವಣೆಯ ಶಾರದ ಅಂಧರ ಶಾಲೆಯಲ್ಲಿ 2009–2015 ರವರೆಗೆ ಶಿಕ್ಷಣ ಪಡೆದರು.

ಬಳಿಕ ಬೆಂಗಳೂರಿನ ಸಮರ್ಥನಂ ಅಂಧರ ವಿಕಾಸ ಕೇಂದ್ರದಲ್ಲಿ ಬಿ.ಎ ಪದವಿ ಪೂರೈಸಿದ್ದಾರೆ.
ಪ್ರಸ್ತುತ ಜ್ಞಾನಭಾರತಿ ಎಜುಕೇಶನ್ ಸೊಸೈಟಿಯಲ್ಲಿ ಕಾವ್ಯ ಅವರು
ಎಂ.ಎ ವ್ಯಾಸಂಗ ಮಾಡುತ್ತಿದ್ದಾರೆ

ಐದು ಹೆಣ್ಣುಮಕ್ಕಳ ಬಡ ಕುಟುಂಬದಲ್ಲಿ ಬೆಳೆದ ಕಾವ್ಯಾ
ಪೋಷಕರಿಗೆ ಗ್ರಾಮಸ್ಥರ ವತಿಯಿಂದ ಅಭಿಮಾನಪೂರ್ವಕ ಸನ್ಮಾನಮಾಡಲಾಯಿತು.

ಈ ಸಂಧರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ , ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ ಅವರು ಭಾಗಿಯಾಗಿದ್ದರು.

Sri Harakere Kalikamba Devasthana ಹರಕೆರೆ ಶ್ರೀಕಾಳಿಕಾಂಬ ದೇಗುಲದಲ್ಲಿ ದೀಪೋತ್ಸವ.

0

Sri Harakere Kalikamba Devasthana ಗಾಂಧಿ ಬಜಾರ್ ನ ಶ್ರೀ ಹರಕೆರೆ ಕಾಳಿಕಾಂಬ ದೇವಸ್ಥಾನ ಸಮಿತಿಯಿಂದ ನ. ೨೬ರ ನಾಳೆ ಕಡೆಯ ಕಾರ್ತಿಕ ದೀಪೋತ್ಸವದ ನಿಮಿತ್ತ ಶ್ರೀ ಕಾಳಿಕಾಂಬ ದೇವಿಗೆ ವಿಶೆಷ ಪೂಜಾ ಅಲಂಕಾರ ಹಾಗೂ ಸಂಜೆ ೬ಗಂಟೆಗೆ ದೇವಿಯ ಸನ್ನಿಧಿಯಲ್ಲಿ ದೀಪಗಳನ್ನು ಎಲ್ಲಾ ಭಕ್ತಾದಿ ಗಳಿಂದ ಬೆಳಗಿಸುವ ದೀಪೋತ್ಸವ ವನ್ನು ಹಮ್ಮಿಕೊಳ್ಳಲಾಗಿದೆ.

Sri Harakere Kalikamba Devasthana ದೀಪೋತ್ಸವ ನಂತರ ಮಹಾ ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. ಸಮಸ್ತ ಸಮಾಜ ಬಾಂಧವರು ದೀಪೋತ್ಸವ ದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಲು ಸಮಿತಿಯ ಅಧ್ಯಕ್ಷ ಎಂ. ಶ್ರೀನಿವಾಸ ಮೂತಿ, ಪ್ರಧಾನ ಕಾರ್ಯದರ್ಶಿ ಕೆ. ಮೌನೇಶ್ವ ರಾಚಾರ್ ಮತ್ತು ಖಜಾಂಚಿ ಎಸ್. ಜಗನ್ನಾಥ ಅವರು ಕೋರಿದ್ದಾರೆ

IMA KARNATAKA ಸ್ಟೆಥಾಸ್ಕೋಪ್ ಹಿಡಿದ‌ ಕೈ ,ಕವನ ಬರೆದಾಗ…

0

IMA KARNATAKA ಮುಂದಿನ ದಿನಗಳಲ್ಲಿ ನಮ್ಮ ಮಕ್ಕಳು ಕನ್ನಡ ಪುಸ್ತಕಗಳನ್ನು ರದ್ದಿಗೆ ಕೊಡದಂತೆ ಆಗದಿರಲಿ. ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಹೇಳಿದರು.

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗದ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ವಿಶೇಷ ಕವಿಗೋಷ್ಠಿಯಲ್ಲಿ ಮಾತನಾಡಿ, ವೈದ್ಯರಾದವರು ಕವನ ರಚನೆಯಲ್ಲಿ ಇಷ್ಟು ತೊಡಗಿಸಿಕೊಂಡಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.

ಪದ್ಯ, ಕವಿತೆ ರಚನೆಗೆ ಇಂತಹ ವೃತ್ತಿ ಎಂಬುದಿಲ್ಲ. ಸೂಕ್ಷ್ಮ ಮನಸ್ಸಿನವರು ಇರುವವರೆಗೂ ಕಾವ್ಯಗಳು ಹುಟ್ಟುತ್ತದೆ. ಕಾವ್ಯಗಳು ರಚನೆಯಾಗುವವರೆಗೂ ಬದುಕಿನಲ್ಲಿ ಮತ್ತು ವಿಶ್ವದಲ್ಲಿ ಶಾಂತಿ ನೆಲೆಸಿರುತ್ತದೆ. ಕವಿತೆಗಳಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವವನು ಓದುಗ. ಓದುಗನ ಹೃದಯಕ್ಕೆ ಕವಿತೆ ಸ್ಪಂದಿಸಿತೆಂದರೆ ಅದಕ್ಕೆ ಜೀವ ಬಂದಂತೆ ಎಂದರು.

ಕವಯಿತ್ರಿ, ಸಾಹಿತಿ ಸವಿತಾ ನಾಗಭೂಷಣ ಅವರು ಕಾವ್ಯರಚನೆಯ ಬಗ್ಗೆ, ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡಿದರು. ಡಾ. ಚಿತ್ರ ಶ್ರೀನಿವಾಸ್ ಪ್ರಾರ್ಥನೆ ನಡೆಸಿದರು. ಡಾ. ವಿನಯ ಶ್ರೀನಿವಾಸ ಅವರು ಕಾರ್ಯಕ್ರಮ ನಿರ್ವಹಿಸಿದರು.

IMA KARNATAKA ಡಾ. ಗುರುದತ್ತ.ಕೆ.ಎನ್., ಡಾ. ವೈ.ಜೆ.ಅನುಪಮ, ಡಾ. ಡೋ.ನ.ವೆಂಕಟೇಶ್, ಡಾ. ವಿಜಯಲಕ್ಷ್ಮೀ ರವೀಶ್, ಡಾ. ಕೌಸ್ತುಭ ಅರುಣ್, ಡಾ. ಭಾರತಿ.ಎಚ್.ಜಿ., ಡಾ. ಅರವಿಂದನ್, ಡಾ. ಶಾಂತಲಾ ಮತ್ತು ಡಾ. ಚಂದ್ರಕಾಂತ್.ಎಸ್.ಎಸ್ ಸ್ವರಚಿತ ಕವಿತೆಗಳನ್ನು ಓದಿದರು.

ಐಎಂಎ ಶಿವಮೊಗ್ಗದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಮಹಿಳಾ ಘಟಕದ ಅಧ್ಯಕ್ಷೆ ಡಾ. ಕೌಸ್ತುಭಾ ಅರುಣ್ ಮತ್ತು ಇತರ ವೈದ್ಯರು ಉಪಸ್ಥಿತರಿದ್ದರು.

Lions Club Shimoga ಲಯನ್ಸ್ ಕ್ಲಬ್ ನಿಂದ ತುಂಗಾನಗರದಲ್ಲಿ ಉಚಿತ ನೇತ್ರ ತಪಾಸಣೆ & ಕನ್ನಡಕ ವಿತರಣೆ.

0

Lions Club, Shimoga ಜಿ.ಪಂ. ತಾ.ಪಂ. ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ, ಜಿಲ್ಲಾ ಅಂಧತ್ವ ನಿಯಂತ್ರಣ ಸಂಘ ಹಾಗೂ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ತುಂಗನಗರದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಉಚಿತ ಕನ್ನಡಕ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು.

ಈ ಶಿಬಿರಕ್ಕೆ ವಿವಿಧ ಗ್ರಾಮಗಳಿಂದ ಬಂದ ಸುಮಾರು ೧೮೫ ರೋಗಿಗಳು ನೇತ್ರ ತಪಾಸಣೆಗೆ ಭಾಗವಹಿಸಿದರು. ನೇತ್ರ ತಜ್ಞರಿಂದ ಸಂಪೂರ್ಣ ದೃಷ್ಟಿ ಪರೀಕ್ಷೆ ನಡೆಯಿತು. ತಪಾಸಣೆಯ ನಂತರ ೪೮ರೋಗಿಗಳು ಮುತ್ತಿನ ಬಿಂದು (ಕ್ಯಾಟರ್‍ಯಾಕ್ಟ್) ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಶೀಘ್ರದಲ್ಲೇ ಶಿವಮೊಗ್ಗ ಶಂಕರ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆ ಮಾಡಿಕೊಡಲಾಗು ವುದು ಎಂದು ತಿಳಿಸಲಾಯಿತು.

ಇದೇ ವೇಳೆ ೬೬ರೋಗಿಗಳಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾ ಯಿತು. ಪ್ರದೇಶ ಅಧ್ಯಕ್ಷ ಎಂ.ಜೆ.ಎಫ್. ಗಿರೀಶ್ ಕೆ. ನಾಯಕ್, ಶಿವರಾಮ ಜಿ.ಪಿ., ಎಂಜೆಎಫ್. ಕುಮಾರ್ ಜಿ.ಎಸ್., ಎಂ.ಜೆ.ಎಫ್. ಡಾ. ಉಮಾದೇವಿ ಎಸ್. ಬಿರಾದಾರ್, ಐರಿನ್ ಗೋವಿಯಾಸ್, ಎಂಜೆಎಫ್ ಪೌಲ್ ಗೋವಿಯಾಸ್.ಶಂಕರ ಆಸ್ಪತ್ರೆ ಸಿಬ್ಬಂದಿ, ಡಾ. ಲಕ್ಷಿತಾ (ನೇತ್ರ ತe), ಸಚಿನ್ ಎ.ಆರ್., ಭಾರ್ಗವಿ, ಅನುಷಾ, ಕಂಚನಾ (ಜಿಎನ್‌ಎಂ), ಪ್ರವೀಣ್ ಕೆ. ಶಿಬಿರ ಉದ್ಘಾಟಿಸಿದ ೧ನೇ ಉಪ ರಾಜ್ಯಪಾಲ (ವಿಡಿಜಿ) ಅಭ್ಯರ್ಥಿ ಎಂ.ಜೆ.ಎಫ್. ಲಯನ್ ಡಾ. ಎಸ್.ಐ. ಬಿರಾದಾರ್ ಅವರು ಲಯನ್ಸ್ ಕ್ಲಬ್ ಕೈಗೊಂಡಿರುವ ಸಾಮಾಜಿಕ ಆರೋಗ್ಯ ಸೇವೆಗಳ ಮಹತ್ವವನ್ನು ಪ್ರಶಂಸಿಸಿ, ಇಂತಹ ಶಿಬಿರಗಳು ಗ್ರಾಮೀಣ ಜನತೆಗೆ ಮಹತ್ತರವಾದ ನೆರವು ಆಗುತ್ತಿವೆ ಎಂದು ಹೇಳಿದರು.

Lions Club, Shimoga ಈ ಶಿಬಿರದ ಯಶಸ್ವಿ ಸಂಯೋಜನೆ ಯನ್ನು ಲಯನ್ ನಂದೀಶ್ ಎನ್.ಟಿ., ಜಿಲ್ಲಾ ಸಂಯೋಜಕ ನೇತ್ರ ತಪಾಸಣೆ ಮತ್ತು ಕನ್ನಡಕ ವಿತರಣೆ (೩೧೭ಸಿ) ಅವರು ಶಿವಮೊಗ್ಗ ಆಪ್ಟಿಕಲ್ಸ್ ಸಹಯೋಗದಲ್ಲಿ ಅತ್ಯುತ್ತ ಮವಾಗಿ ನಿರ್ವಹಿಸಿ ಮಾತನಾಡಿ, ಈ ವರ್ಷ ಲಯನ್ಸ್ ಜಿಲ್ಲೆ ೩೧೭ಅ ನಲ್ಲಿ ೩೦೦೦ ( ಬೆಲೆ ೫೪೦೦೦೦ )ಕ್ಕೂ ಹೆಚ್ಚು ಉಚಿತ ಕನ್ನಡಕಗಳನ್ನು ವಿತರಿಸುವ ಗುರಿ ಹೊಂದಿದ್ದೇವೆ. ಈಗಾಗಲೇ ಸಾಗರ, ಸಾಗರ ಶ್ರೀಗಂಧ, ಸೊರಬ, ಶಿವಮೊಗ್ಗ, ಭದ್ರಾವತಿ ಮತ್ತು ಶುಗರ್ ಟೌನ್ ಲಯನ್ಸ್ ಕ್ಲಬ್‌ಗಳ ಮೂಲಕ ೭೫೦(ಬೆಲೆ ೧೩೫೦೦೦)ಕ್ಕೂ ಹೆಚ್ಚು ಕನ್ನಡಕ ವಿತರಣೆ ಹಾಗೂ ೮೦೦ಕ್ಕೂ ಹೆಚ್ಚು ಮುತ್ತಿನಬಿಂದು (ಕ್ಯಾಟರ್‍ಯಾಕ್ಟ್) ಶಸ್ತ್ರಚಿಕಿತ್ಸೆಗಳು ನೆರವೇರಿವೆ ಎಂದು ತಿಳಿಸಿದರು. ಲಯನ್ಸ್ ಜಿಲ್ಲೆ ೩೧೭ ಜಿಲ್ಲಾ ಸಂಯೋ ಜಕರಾದ ಲಯನ್ ನಂದೀಶ್ ಎನ್.ಟಿ. ಅವರು ನೇತ್ರ ಶಿಬಿರ ಮತ್ತು ಕನ್ನಡಕ ವಿತರಿಸಿದರು.

B. Y. Raghavendra ಹುಣಸೆಕೊಪ್ಪದಲ್ಲಿ ಸಂಸದರಿಂದ ಅಂಗನವಾಡಿ ಕೇಂದ್ರದ ಉದ್ಘಾಟನೆ

0

B. Y. Raghavendra ಇಂದು ಹಿತ್ತಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಣಸೆಕೊಪ್ಪದಲ್ಲಿ ಹೊಸ ಅಂಗನವಾಡಿ ಕೇಂದ್ರವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಹಿತ್ತಲ ಹಾಗೂ ಹುಣಸೇಕೊಪ್ಪದ ಗ್ರಾಮಸ್ಥರು ಉಪಸ್ಥಿತರಿದ್ದರು.

Friends Center Shivamogga ನವೆಂಬರ್ 28. ಶಿವಮೊಗ್ಗದಲ್ಲಿ ಸಿರಿಧಾನ್ಯ ಅಡುಗೆ ಸ್ಪರ್ಧೆ

0

Friends Center Shivamogga ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ವತಿಯಿಂದ ನಗರದ ಎಟಿಎನ್‌ಸಿಸಿ ಕಾಲೇಜಿನ ಫ್ರೆಂಡ್ಸ್ ಸಭಾಂಗಣದಲ್ಲಿ ನವೆಂಬರ್ 28ರಂದು ಬೆಳಗ್ಗೆ 11.30ಕ್ಕೆ ಅಡುಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಮೊದಲ 50 ಸ್ಪರ್ಧಿಗಳಿಗೆ ಆದ್ಯತೆ ನೀಡಲಾಗುವುದು. ಸಿರಿಧಾನ್ಯಗಳಿಂದ ತಯಾರಿಸಿದ ಒಂದು ಸಿಹಿ ಮತ್ತು ಒಂದು ಖಾರದ ಖಾದ್ಯವನ್ನು ಮನೆಯಲ್ಲೇ ತಯಾರಿಸಿಕೊಂಡು ಬಂದು ಆಕರ್ಷಕವಾಗಿ ಪ್ರದರ್ಶಿಸಬೇಕು. ಸ್ಪರ್ಧೆಯ ವಿಜೇತರಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುತ್ತದೆ. ಶುಚಿ, ರುಚಿ Friends Center Shivamogga ಹಾಗೂ ಅಚ್ಚುಕಟ್ಟಾಗಿ ಪ್ರದರ್ಶಿಸುವ ಖಾದ್ಯಗಳನ್ನು ಪರಿಗಣಿಸಲಾಗುವುದು. 100 ರೂ. ಪ್ರವೇಶ ಶುಲ್ಕ ಇರುತ್ತದೆ. ಮಾಹಿತಿಗೆ 8088882425, 9449230127, 9481500004 ಸಂಪರ್ಕಿಸಬಹುದಾಗಿದೆ ಎಂದು ಫ್ರೆಂಡ್ಸ್ ಸೆಂಟರ್ ಮಹಿಳಾ ವಿಭಾಗದ ಅಧ್ಯಕ್ಷೆ ಸ್ವಪ್ನಾ ಬದ್ರಿನಾಥ್ ತಿಳಿಸಿದ್ದಾರೆ.

ಫೋಟೊ: ಸ್ವಪ್ನಾ ಬದ್ರಿನಾಥ್

Sri Sri Sri Dr.Nirmalanandanatha Maha Swamiji ನಮ್ಮ ಭಾರತೀಉ ಸಂಸ್ಕೃತಿಯು ಕಲೆಗೆ ಹೆಚ್ಚು ಮಹತ್ವ ನೀಡಿದೆ- ಶ್ರೀನಾದಮಯಾನಂದನಾಥಶ್ರೀ

0

Sri Sri Sri Dr.Nirmalanandanatha Maha Swamiji ಪ್ರತಿಭೆ ಎಲ್ಲಾ ಮಕ್ಕಳಲ್ಲಿ ಅಡಗಿರುತ್ತದೆ.ಅದನ್ನು ಹೊರ ತೆಗೆಯುವುದಕ್ಕಾಗಿಯೇ ವಿವಿಧ ಸಾಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ, ಹಾಗೂ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ರ (ರಿ). ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜು ಶಿವಮೊಗ್ಗ.ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕೃತಿ, ಕಲೆಗೆ ಹೆಚ್ಚು ಮಹತ್ವ ನೀಡಿದೆ,ನಮ್ಮ ಗ್ರಾಮೀಣ ಜನಪದ ಕಲೆಗಳ ಸೊಗಡು ತುಂಬಾ ಅಭೂತ ಪೂರ್ವವಾದದು. ಪ್ರತಿಯೊಂದು ಮಗುವಿನಲ್ಲಿಯೂ ಪ್ರತಿಭೆ ಎನ್ನುವುದು ಬೂದಿ ಮುಚ್ಚಿದ ಕೆಂಡದಂತಿರುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯು ಆತ್ಮ ಸಾಕ್ಷಿಯಾಗಿ ತಮ್ಮಲ್ಲಿರುವ ಕಲೆಯನ್ನು ಪ್ರದರ್ಶಿಸಬೇಕು ಎಂದ ಅವರು, ನಿಮ್ಮ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಉಪನ್ಯಾಸಕರ ಹಾಗೂ ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದರು.
ಗೆಲುವು ಸೋಲುಗಳನ್ನು ನಮ್ಮ ಪ್ರಯತ್ನದ ಮೂಲಕ ನೋಡುತ್ತೇವೆ. ಸೋಲು ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸ್ಪರ್ಧೆಯನ್ನು ಸ್ಪರ್ಧೆಯಾಗಿ ನೋಡಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ,ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ. ಗುರುರಾಜ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ಆಯೋಜಿಸಿದ್ದು, ಉತ್ತಮವಾಗಿ ನಡೆಸಿ ಕೊಡಲಿದ್ದೇವೆ ಎಂದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಕೊಳಿಗೆ ವಾಸಪ್ಪ ಗೌಡ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಫ್.ಕುಟ್ರಿ, ಎಸ್.ಎ.ವಿ. ಪಿಯು ಕಾಲೇಜಿನ ಭದ್ರಾವತಿಯ ಪ್ರಾಚಾರ್ಯರಾದ ಡಾ.ಹರಿಣಾಕ್ಷಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Sri Sri Sri Dr.Nirmalanandanatha Maha Swamiji ಸಂಜೆ 4 ಗಂಟೆಗೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ಪ್ರಬಾನ್ವಿತರಿಗೆ ಅತ್ಯಾಕರ್ಷಕ ಪ್ರಶಸ್ತಿ ಪತ್ರ, ಬಹುಮಾನಗಳನ್ನು ನೀಡಿ ಪೂಜ್ಯರಿಂದ ಗೌರವಿಸಲಾಯಿತು. ಸಮಗ್ರ ಪ್ರಶಸ್ತಿಯನ್ನು ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿಪೂರ್ವ ಕಾಲೇಜು ಶರಾವತಿ ನಗರ ಶಿವಮೊಗ್ಗ ಇವರು ಪಡೆದುಕೊಂಡಿರುತ್ತಾರೆ.
ಕು. ಅನನ್ಯ ಪ್ರಾರ್ಥಿಸಿ. ಸೋಹನ್ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿ, ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿ. ಮುಖ್ಯ ಶಿಕ್ಷಕಿ ಸುಜಾತ ವಂದಿಸಿದರು.
ಬಾಕ್ಸ್:
ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕದ ಜ್ಞಾನದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿ ಕಾರ್ಯಕ್ರಮಗಳು ಅತ್ಯವಶ್ಯಕವಾಗಿವೆ. ನಮ್ಮ ನಾಡು,ನುಡಿ, ಸಾಹಿತ್ಯ, ಸಂಸ್ಕೃತಿ, ಪರಂಪರೆ,ಕಲೆ ಶ್ರೀಮಂತವಾಗಿದೆ. ಇಂದಿನ ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರವಾಗುತ್ತಿದ್ದು, ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ನಮ್ಮ ದೇಶದ ಶ್ರೀಮಂತ ಸಂಸ್ಕೃತಿ ಪರಂಪರೆಯನ್ನು ಉಳಿಸಬೇಕೆಂದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ . ಶಿವಮೊಗ್ಗ.