Monday, February 16, 2026
Monday, February 16, 2026
Home Blog Page 150

Geetha Shivarajkumar ಚುನಾವಣೆಗೆ ” ಗುಡ್ ಬೈ” – ಗೀತಾ ಶಿವರಾಜ್ ಕುಮಾರ್

0

Geetha Shivarajkumar ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜಕುಮಾರ್ ಅವರು ಚುನಾವಣಾ ರಾಜಕೀಯಕ್ಕೆ ರಾಜಿನಾಮೆ ನೀಡಿದ್ದಾರೆ.

ಪಕ್ಷ ಸಂಘಟನಾ ಕೆಲಸದಲ್ಲಿ ಮುಂದುವರಿಯುವುದಾಗಿ ಘೋಷಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಪತ್ನಿ ಹಾಗೂ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಶಿವರಾಜ್ ಕುಮಾರ್ ಅವರು ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Geetha Shivarajkumar ಮಹಿಳೆಯರು ಎಂದಿಗೂ ಅಬಲೆಯಲ್ಲ, ಎಲ್ಲರೂ ಸಬಲೆಯರು. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ದಿಟ್ಟವಾಗಿ ಮಾಡುತ್ತಾರೆ ಎಂದರು.

Dr. N.B. Sridhar ವೈದ್ಯಕೀಯ ಸಾಹಿತಿ ,ಸಂಶೋಧಕ ಡಾ.ಎನ್.ಬಿ.ಶ್ರೀಧರ್ ಅವರಿಗೆ “ಶ್ರೇಷ್ಠ ಸಂಶೋಧಕ ” ಪುರಸ್ಕಾರ

0

Dr. N.B. Sridhar ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ ಡಾ: ಎನ್.ಬಿ.ಶ್ರೀಧರ ಇವರಿಗೆ “ಶ್ರೇಷ್ಟ ಸಂಶೋಧಕ” ಪ್ರಶಸ್ತಿ
ನಾಡಿನ ಖ್ಯಾತ ಪಶುವೈದ್ಯಕೀಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರರಾದ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರಿಗೆ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಶಿಕ್ಷಕರ ಸಂಘವು ಇವರ ಉತ್ತಮ ಸಂಶೋಧನೆಗಳ ಯಶೋಗಾಥೆಯನ್ನು ಗುರುತಿಸಿ ಸಂಶೋಧನಾ ಕ್ಷೇತ್ರದಲ್ಲಿ ಇವರು ಮಾಡಿದ ಗಣನೀಯ ಸಾಧನೆಗಾಗಿ 2025 ನೇ ಸಾಲಿನ “ “ಶ್ರೇಷ್ಟ ಸಂಶೋಧಕ” ಪ್ರಶಸ್ತಿ ನೀಡಿ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಸನ್ಮಾನಿಸಿದೆ.

ಇವರು ಪಶುವೈದ್ಯಕೀಯ ರಂಗದಲ್ಲಿ ಸಹಸ್ರಾರು ವಿದ್ಯಾರ್ಥಿಗಳಿಗೆ ಔಷಧಶಾಸ್ತ್ರ ಮತ್ತು ವಿಷಶಾಸ್ತ್ರ ವಿಷಯವನ್ನು ಬೋಧನೆ ಮಾಡಿರುವುದನ್ನು, 200ಕ್ಕೂ ಹೆಚ್ಚಿನ ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಸಂಶೋಧನೆಯಲ್ಲಿ ಮಾರ್ಗದರ್ಶನ ಮಾಡಿರುವುದನ್ನು, ಜಾನುವಾರುಗಳಲ್ಲಿ ಬರುವ ಅನೇಕ ರೀತಿಯ ಸಸ್ಯಜನ್ಯ ಶಿಲೀಂದ್ರವಿಷಜನ್ಯ ಮತ್ತಿತರ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ನಡೆಸಿ ಅವುಗಳಿಗೆ ಕಾರಣ ಮತ್ತು ಚಿಕಿತ್ಸೆಯನ್ನು ಪತ್ತೆ ಮಾಡಿ ಸಹಸ್ರಾರು ಜಾನುವಾರುಗಳ ಉಳಿವಿಗೆ ಕಾರಣರಾಗಿರುವುದನ್ನು, ಜಾನುವಾರುಗಳಲ್ಲಿ ಕಾರಣ ಗೊತ್ತಿರದ ನಿಗೂಢ ಕಾಯಿಲೆಗಳ ಬಗ್ಗೆ ಸಂಶೋಧನೆ ಮತ್ತು ಚಿಕಿತ್ಸೆ ಕಂಡು ಹಿಡಿದು ಸಾವಿರಾರು ಮೂಕ ಪಶುಗಳ ಜೀವ ಉಳಿಸಲು ಕಾರಣರಾಗಿರುವುದನ್ನು, ಬಂಜೆತನದಿಂದ ಬಳಲುತ್ತಿರುವ ಅನುತ್ಪಾದಕ ಗೋವುಗಳನ್ನು ಸಂಶೋಧನೆಗಳ ಮೂಲಕ ಕಂಡುಕೊಂಡ ಆಯ್ದ ಚಿಕಿತ್ಸಾ ವಿಧಾನವನ್ನು ಗ್ರಾಮ ಮಟ್ಟದಲ್ಲಿ ಅಳವಡಿಸಿ ಅವುಗಳನ್ನು ಉತ್ಪಾದಕತೆಯತ್ತ ಕೊಂಡೊಯ್ದಿರುವ ಮತ್ತು ಅವುಗಳನ್ನು ಕಟುಕರ ಕತ್ತಿಯಿಂದ ತಪ್ಪಿಸುವ ಸಂಶೋಧನಾ ಚಟುವಟಿಕೆಗಳನ್ನು ಗುರುತಿಸಿ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.

Dr. N.B. Sridhar ಇತ್ತೀಚಿಗಷ್ಟೆ ಇವರಿಗೆ ಭಾರತೀಯ ಪಶುವೈದ್ಯಕೀಯ ಔಷಧಶಾತ್ರಜ್ಞರ ಮತ್ತು ವಿಷಶಾಸ್ತ್ರಜ್ಞರ ಸಂಘವು “ರಾಷ್ಟ್ರೀಯ ಫೆಲೊ” ಪ್ರಶಸ್ತಿ ನೀಡಿರುವುದನ್ನು, ಕರ್ನಾಟಕ ರಾಜ್ಯ ಪಶುವೈದ್ಯ ಸಂಘವು “ಜೀವ ಮಾನದ ಶ್ರೇಷ್ಟ ಪಶುವೈದ್ಯ” ಪ್ರಶಸ್ತಿ ನೀಡಿರುವುದನ್ನು ಮತ್ತು ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯವು “ಶ್ರೇಷ್ಟ ಶಿಕ್ಷಕ” ಪ್ರಶಸ್ತಿಯನ್ನು ನೀಡಿರುವುದನ್ನು ಈ ಸಂದರ್ಭದಲ್ಲಿ ನೆನೆಯಬಹುದಾಗಿದೆ.

World Heart Day ಹೃದಯದ ಆರೋಗ್ಯಕ್ಕೆ ಮಹತ್ವ ನೀಡಿ.- ಡಾ.ಕೆ.ಎಸ್.ನಟರಾಜ್

0

World Heart Day ವಿಶ್ವ ಹೃದಯ ದಿನದ ಅಂಗವಾಗಿ ಶಿವಮೊಗ್ಗ ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವತಿಯಿಂದ ಭಾನುವಾರ ಬೆಳಗ್ಗೆ ಹಮ್ಮಿಕೊಂಡಿದ್ದ ವಾಕಥಾನ್ ಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸಾವಿರಾರು ಜನರು ವಾಕಥಾನ್ ನಲ್ಲಿ ಹೆಜ್ಜೆ ಹಾಕಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕೆ ಎಸ್ ನಟರಾಜ್ ಅವರು ಹೃದಯವು ಮನುಷ್ಯ ಹುಟ್ಟಿನಿಂದ ಸಾಯುವವರೆಗೂ ಸತತವಾಗಿ ಬಡೆದುಕೊಳ್ಳುತ್ತದೆ, ಸತತವಾಗಿ ಕಾರ್ಯನಿರ್ವಹಿಸುವ ಈ ಅಂಗಕ್ಕೆ ನಾವು ಕಾಳಜಿ ವಹಿಸುವುದು ಅತ್ಯವಶ್ಯಕ. ಇಂದಿನ ದಿನಮಾನಗಳಲ್ಲಿ ಸಣ್ಣ ಯುವ ವಯಸ್ಸಿನ ಯುವಕರು ಸಹ ಹೃದಯಘಾತಕ್ಕೆ ಬಲಿಯಾಗುತ್ತಿರುವುದು ಕಳವಳಕಾರಿಯಾಗಿದೆ, ಎಂದರು.

ಹೃದಯದ ಆರೋಗ್ಯಕ್ಕೆ ಹೆಚ್ಚು ಮಹತ್ವ ಕೊಡಿ ಅದು ಎಷ್ಟು ಸರಿಯಾಗಿ ಕೆಲಸ ಮಾಡುತ್ತದೆಯೋ ಅಷ್ಟು ಜೀವನ ಆರೋಗ್ಯಕರವಾಗಿರುತ್ತದೆ. ಹೃದಯದ ಸಮಸ್ಯೆಗಳಿಗೆ ಒತ್ತಡಮಯ ಜೀವನವು ಒಂದು ಕಾರಣವಾಗಿದ್ದು ಒತ್ತಡದಿಂದ ಹೊರಬನ್ನಿ, ಆರೋಗ್ಯಕರ ಜೀವನ ರೂಡಿಸಿಕೊಳ್ಳಿ, ನಿತ್ಯವೂ ವ್ಯಾಯಾಮ ಮಾಡಿ ಜೀವನಶೈಲಿ ಬದಲಾವಣೆ ಮಾಡಿಕೊಳ್ಳಿ ಇದೆಲ್ಲವೂ ಮಾಡುವುದರಿಂದ ಹೃದಯವು ಆರೋಗ್ಯವಾಗಿರುವಂತೆ ನೋಡಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಒಳ್ಳೆಯ ಒತ್ತಡ ತಂತ್ರಗಳನ್ನು ಅಳವಡಿಸಿಕೊಳ್ಳಿ : ಡಾ. ಬಾಲಸುಬ್ರಮಣಿ ಆರ್

ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹೃದಯ ಶಸ್ತ್ರ ಚಿಕಿತ್ಸ ತಜ್ಞರಾದ ಡಾ. ಬಾಲಸುಬ್ರಮಣಿ ಆರ್ ಅವರು ಮಾತನಾಡಿ ಹತ್ತು ವರ್ಷಗಳ ಹಿಂದೆ ಅರವತ್ತು ವಯಸ್ಸಿನ ಹಿರಿಯರು ಬೈಪಾಸ್ ಶಸ್ತ್ರಚಿಕಿತ್ಸೆ ಗೆ ಒಳಗಾಗುತ್ತಿದ್ದರು, ಕೋವಿಡ್ ನಂತರ 30 ವರ್ಷ ವಯಸ್ಸಿನವರಲ್ಲಿಯೂ ಸಹ ಬೈಪಾಸ್ ಚಿಕಿತ್ಸೆಗೆ ಆಗುತ್ತಿರುವುದನ್ನು ನೋಡುತ್ತಿದ್ದೇವೆ.

ಕುಟುಂಬ ಹಾಗೂ ಸಮಾಜಕ್ಕೆ ಉಪಯೋಗಕಾರಿ ಯಾಗುವ ಸಮಯದಲ್ಲಿ ಯುವಕರು ಪಾರ್ಶ್ವ ವಾಯು, ಹೃದಯ ಸಂಬಂಧಿ ಸಮಸ್ಯೆಗಳಿಗೆ ಒಳಗಾಗುತ್ತಿರುವುದು ತುಂಬಾ ಕಳವಳಕಾರಿಯಾಗಿದೆ, ಎಂದರು.

ಹೊಗೆ ಸೊಪ್ಪು ಸೇವನೆ, ಮದ್ಯಪಾನ, ಮಧುಮೇಹ, ಕೆಟ್ಟ ಕೊಲೆಸ್ಟ್ರಾಲ್ ಗಳು ಹೃದಯ ಸಂಬಂಧಿ ಕಾಯಿಲೆ ಉಂಟು ಮಾಡುತ್ತವೆ, ಇದಲ್ಲದೆ ಇಂದಿನ ಒತ್ತಡದ ಜೀವನ ಶೈಲಿಯೂ ಸಹ ಹೃದಯ ಸಂಬಂಧಿ ಕಾಯಿಲೆಗಳಿಗೆ ಪ್ರಮುಖ ಕಾರಣ ಆದ್ದರಿಂದ ಧನಾತ್ಮಕ ವಾಗಿರುವ ಒತ್ತಡ ನಿರ್ವಹಣಾ ತಂತ್ರಗಳನ್ನು ಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ದಿನವೂ ಕನಿಷ್ಠ 45 ನಿಮಿಷ ವ್ಯಾಯಾಮ ನಡಿಗೆ ಅಥವಾ ಜಿಮ್ ನಲ್ಲಿ ಕಸರತ್ತು ಮಾಡುವುದು, ಒಳ್ಳೆಯ ಪುಸ್ತಕಗಳನ್ನು ಓದುವುದು, ಪೌಷ್ಟಿಕ ಆಹಾರ ಸೇವನೆ, ಒಳ್ಳೆಯ 6-8 ತಾಸು ನಿದ್ದೆಈ ರೀತಿಯ ಒಳ್ಳೆಯ ಆರೋಗ್ಯಕರ ಒತ್ತಡ ನಿರ್ವಹಣಾ ತಂತ್ರಗಳನ್ನು ಅಳವಡಿಸಿಕೊಳ್ಳುವುದರಿಂದ ಒತ್ತಡದಿಂದ ಹೊರಬರುವುದಲ್ಲದೆ ಹೃದಯ ಆರೋಗ್ಯವು ಸಹ ಉತ್ತಮವಾಗಿರುತ್ತದೆ ಎಂದರು.

ನಿಮ್ಮ ನಂಬರನ್ನು ತಿಳಿದುಕೊಳ್ಳಿ, ಡಾ. ಶ್ರೀವತ್ಸ

ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾಕ್ಟರ್ ಶ್ರೀ ವತ್ಸ ಎನ್‌.ಎಸ್. ಮಾತನಾಡಿ ಪ್ರತಿ ವರ್ಷ ಸೆಪ್ಟಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಧ್ಯೇಯ ನಿಮ್ಮ ಹೃದಯದ ಬಡಿತವನ್ನು ತಪ್ಪಿಸಿಕೊಳ್ಳಬೇಡಿ (Don’t Miss a Beat) ಎಂಬುದಾಗಿದೆ ಇದರ ಅರ್ಥ ಹೃದಯ ಸಂಬಂಧಿ ಲಕ್ಷಣಗಳನ್ನು ನಾವು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂಬುದಾಗಿದೆ. ಹೃದಯ ಕಾಯಿಲೆ ಜಗತ್ತಿನಾದ್ಯಂತ ಉಂಟಾಗುತ್ತಿರುವ ಸಾವಿನ ಕಾರಣದಲ್ಲಿ ಪ್ರಥಮ ಸ್ಥಾನದಲ್ಲಿದೆ.

World Heart Day ಮೂರರಲ್ಲಿ ಒಂದು ಸಾವು ಹೃದಯ ಸಂಬಂಧಿ ಕಾಯಿಲೆಯಿಂದ ಉಂಟಾಗುತ್ತಿದೆ. ನಾಲ್ಕನೇ ಒಂದು ಭಾಗ ಹೃದಯಾಘಾತ 40 ವರ್ಷ ಒಳಗಿನವರಿಗೆ ಆಗುತ್ತಿದೆ ಎನ್ನಲಾಗುತ್ತದೆ, ಅರ್ಧದಷ್ಟು ಹೃದಯಾಘಾತ 50 ವರ್ಷ ವಯಸ್ಸಿನವರಿಗೆ ಆಗುತ್ತೆ ಎನ್ನಲಾಗುತ್ತದೆ ಇದು ತುಂಬಾ ಕಳವಳಕಾರಿ ಸಂಗತಿ, ಎಂದರು.

ಭಾರತೀಯರಲ್ಲಿ ಪಾಶ್ಚ್ಯಾತ್ಯರಿಗೆ ಹೋಲಿಸಿದರೆ ಹೃದಯ ಸಂಬಂಧಿ ಸಾವುಗಳು ಸಹ ಜಾಸ್ತಿ, 30-32 ವರ್ಷ ವಯಸ್ಸಿನ ಹೆಣ್ಣು ಮಕ್ಕಳಲ್ಲಿಯೂ ಸಹ ಹೃದಯಾಘಾತವಾಗಿ ಆಂಜಿಯೋ ಪ್ಲಾಸ್ಟಿ ಆದ ಉದಾಹರಣೆಗಳು ಸಹ ಇದೆ, ಎಂದರು.

ಹೃದಯಘಾತದ 5 ಲಕ್ಷಣಗಳನ್ನು ತಿಳಿಯಿರಿ

ಹೃದಯಾಘಾತದ 5 ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದಂತೆ ಡಾ. ಶ್ರೀವತ್ಸ ಅವರು ಸಲಹೆ ನೀಡಿದರು.

ಎದೆಯ ಮಧ್ಯ ಭಾಗದಲ್ಲಿ ಉರಿ, ಗಂಟಲು ನೋವು, ಎದೆ ಭಾರವಾಗಿರೋದು, ನೋವು ಎಡಗೈ ಅಥವಾ ಬಲಗೈಗೆ ಹಬ್ಬಿರುವುದು ನಿರ್ಲಕ್ಷಿಸಬೇಡಿ. ವಾಕಿಂಗ್ ಮಾಡುವಾಗ ಅಥವಾ ನಡೆಯುವಾಗ ಸುಸ್ತಾದರೆ ನಿರ್ಲಕ್ಷ ವಹಿಸದೇ ಅದನ್ನು ತುರ್ತಾಗಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದರು.

ಇಂದಿನ ಜನರಲ್ಲಿ ಬೊಜ್ಜು ಸಹ ವ್ಯಾಪಕವಾಗಿ ಬಾಧಿಸುತ್ತಿದೆ. ಭಾರತವನ್ನು ಮಧುಮೇಹದ ರಾಜಧಾನಿ ಎಂದು ಕರೆಯಲಾಗುತ್ತದೆ. ಆದ್ದರಿಂದ ಪುರುಷರು ಅವರ ಸೊಂಟದ ಸುತ್ತಳತೆ 35 ಇಂಚಿಗಿಂತ ಜಾಸ್ತಿ ಇರದಂತೆ ನೋಡಿಕೊಳ್ಳುವುದು ಹಾಗೂ ಹೆಣ್ಣು ಮಕ್ಕಳು ತಮ್ಮ ಸೊಂಟದ ಸುತ್ತಳತೆ ೩೧ ಸಿಎಂ ಗಿಂತ ಕಡಿಮೆ ಇರುವಂತೆ ನೋಡಿಕೊಳ್ಳುವುದು ತುಂಬಾ ಉತ್ತಮ. ಬಿಎಂಐ 25 ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳುವುದು ಹಾಗೂ ಯಾರು 25 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರು ಇದ್ದಾರೋ ಅವರು ವರ್ಷಕ್ಕೊಮ್ಮೆ ಲಿಪಿಡ್ ಪ್ರೊಫೈಲ್ ಟೆಸ್ಟ್ ಮಾಡಿಕೊಳ್ಳುವುದು, ಎಚ್ ಬಿ ಎ 1ಸಿ ೬ ಕ್ಕಿಂತ ಕಡಿಮೆ ಇರುವಂತೆ ನೋಡಿಕೊಳ್ಳಿ ಸಾಧ್ಯವಾದರೆ ಸಿಟಿ ಕೊರನರಿ ಅಂಜೀಯೋಗ್ರಾಮ್ ಮಾಡಿಸಿಕೊಳ್ಳುವುದು ಉತ್ತಮ. ರೋಗ ಬರದೇ ಇರುವಂತೆ ತಡೆಯುವುದು ರೋಗ ಬಂದ ನಂತರ ಚಿಕಿತ್ಸೆಗಿಂತ ಉತ್ತಮ ಎಂದರು.

ತಾಲೂಕ ಆರೋಗ್ಯ ಅಧಿಕಾರಿ ಡಾ. ಚಂದ್ರಶೇಖರ್‌, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯಕೀಯ ನಿರ್ದೇಶಕರಾದ ಶ್ರೀ ವರ್ಗೀಸ್‌ ಪಿ ಜಾನ್, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್‌ ಎಸ್‌. ಎನ್. ಶ್ರೀ ರಾಜಪ್ಪ ಅಸಿಸ್ಟಂಟ್‌ ಕಮಾಡೆಂಟ್‌ ಶಿವಮೊಗ್ಗ, ಡಾ.ಅಶ್ವಲ್‌ ಎ ಜೆ, ಡಾ. ವಿಕ್ರಂ ಎಂಜೆ, ಡಾ. ಅಜಿತ್‌ ಶೆಟ್ಟಿ, ವೈದ್ಯಕೀಯ ಅಧೀಕ್ಷಕರಾದ ಡಾ.ಚಕ್ರವರ್ತಿ ಸಂಡೂರ್‌, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಇದ್ದರು.

ವಾಕಾಥಾನ್‌ ನಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Department of Tourism ಅಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ- ಮಧು ಬಂಗಾರಪ್ಪ

0

Department of Tourism ಶಿವಮೊಗ್ಗ ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೂತನವಾಗಿ ಆರಂಭಿಸಿರುವ ಜಾಲತಾಣದಲ್ಲಿ ಜಿಲ್ಲೆಯ ವಿಶೇಷವಾದ, ಅತ್ಯದ್ಭುತವಾದ ಛಾಯಾಚಿತ್ರಗಳು, ವಿಡಿಯೋ ತುಣುಕುಗಳು, ಮತ್ತಿತರ ಮಾಹಿತಿಯನ್ನು ಅಳವಡಿಸಿರುವುದು ಅತ್ಯಂತ ಪ್ರಶಂಸನಾರ್ಹ ಸಂಗತಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ
ಏರ್ಪಡಿಸಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಜಾಲತಾಣದಲ್ಲಿ ಜಿಲ್ಲೆಯ 61ಕ್ಕೂ ಹೆಚ್ಚಿನ ಜಿಲ್ಲೆಯ ಪ್ರವಾಸಿ ತಾಣಗಳು, ಸ್ಥಳ ಐತಿಹ್ಯ, ವ್ಯಕ್ತಿಚಿತ್ರ, ವಿಶ್ವ ಪ್ರಸಿದ್ಧ ಜೋಗದ ಜಲಪಾತ, ನಗರಕೋಟೆ, ಕೊಡಚಾದ್ರಿ ತಪ್ಪಲು, ವನ್ಯ ಮೃಗಗಳು, ಸಸ್ಯ ಸಂಪತ್ತು ಸೇರಿದಂತೆ ಸಹಸ್ರಾರು ವಿವಿಧ ಮಾಹಿತಿಯನ್ನು ಒದಗಿಸಿರುವುದು ಜಗತ್ತಿನ ಹಲವು ಭಾಗಗಳಲ್ಲಿ ವಾಸಿಸುವವರನ್ನು ಆಕರ್ಷಸುವಂತೆ ಮಾಡಿರುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದವರು ಪ್ರಶಂಸಿದರು.

ಆಳಿದ ಮೇಲೂ ಶಾಶ್ವತವಾಗಿ ಉಳಿಯುವುದು ವ್ಯಕ್ತಿಯ ಸಾಧನೆ ಮಾತ್ರ ಎಂದ ಅವರು, ಸರ್ಕಾರ ಈ ಹಿಂದೆ ಘೋಷಣೆ ಮಾಡಿದ್ದ ಜಿಲ್ಲೆಯ 41ಸ್ಥಳಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ದಿ. ಎಸ್.ಬಂಗಾರಪ್ಪನವರ ಸಮಾಧಿ ಸ್ಥಳ ಸೊರಬ ಪಟ್ಟಣದ ಬಂಗಾರಧಾಮ ಸೇರಿದಂತೆ
ಇನ್ನೂ 20 ಹೊಸ ಸ್ಥಳಗಳನ್ನು ಸೇರ್ಪಡೆಗೊಳಿಸಿ, 61ಸ್ಥಳಗಳ ಪಟ್ಟಿ ಬಿಡುಗಡೆಗೊಳಿಸಿರುವುದು ಬಂಗಾರಪ್ಪನವರ ಮಗನಾಗಿ ನನಗೆ ಸಂತಸ ತಂದಿದೆ ಎಂದರು.

ಜಿಲ್ಲೆಯಲ್ಲಿ ಹಲವು ವೈಶಿಷ್ಟಪೂರ್ಣ ವಿಶೇಷ ಹಾಗೂ ಆಕರ್ಷಕ ಸ್ಥಳಗಳಿವೆ. ಅವುಗಳನ್ನು ಜಗತ್ತಿಗೆ ಪರಿಚಯಿಸುವ ಅಗತ್ಯವೂ ಇದೆ. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯಿಂದಾಗಿ ಪರೋಕ್ಷವಾಗಿ ಸ್ಥಳೀಯರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ ಎಂದರು.

ಅಂತೆಯೇ ಜಿಲ್ಲೆಗೆ ಇನ್ನೂ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಸುವ ನಿಟ್ಟಿನಲ್ಲಿ ಜೋಗದ ಜಲಪಾತದ ಅಭಿವೃದ್ದಿ, ಚಂದ್ರಗುತ್ತಿ ಪ್ರಾಧಿಕಾರ ರಚಿಸಿ, ಅದರ ಅಭಿವೃದ್ಧಿಗೆ ವಿಶೇಷ ಗಮನಹರಿಸಲಾಗುವುದು ಎಂದರು.

Department of Tourism ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮಾತನಾಡಿ, 200ಕೋಟಿ ರೂ. ಗಳ ವೆಚ್ಚದಲ್ಲಿ ಜಿಲ್ಲೆಯ ಪ್ರವಾಸಿ ತನಗಳನ್ನು ಅಭಿವೃದ್ಧಿ ಪಡಿಸಲು ಉದ್ದೇಶಿಸಲಾಗಿದೆ. ಅದರಲ್ಲೂ ವಿಶೇವಾಗಿ ಜೋಗದಲ್ಲಿ ರೋಪ್ ವೇ, ಸಂಗೀತ ಕಾರಂಜಿ, ಜಿಪ್ ಲೈನ್, ಗ್ಲಾಸ್ ಹೌಸ್, ಸಾಹಸ ಕ್ರೀಡೆಗಳಿಗೆ ಉತ್ತೇಜನ ನೀಡುವಲ್ಲಿ ಗಮನ ಹರಿಸಲಾಗುತ್ತಿದೆ ಎಂದ ಅವರು ಕೊಡಚಾದ್ರಿ ತಪ್ಪಲು ಪ್ರದೇಶಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಅಗತ್ಯವಿದೆ ಎಂದವರು ನುಡಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಆರ್ಥಿಕ ನೆರವು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳ ವಿಕಾಸಕ್ಕೆ ಕ್ರಮ ವಹಿಸಲಾಗಿದೆ. ನೂತನ ಜಾಲತಾಣ ವಿನ್ಯಾಸ ಮಾಡುವಲ್ಲಿ ಸ್ಥಳೀಯ ಪ್ರತಿಭಾವಂತರ ಸೂಕ್ತ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಅಲ್ಲದೆ ಆಯೋಜಿಸಲಾಗಿದ್ದ ಹಲವು ಸ್ಪರ್ಧೆಗಳಲ್ಲಿನ ಆಕರ್ಷಕ ಛಾಯಾ ಚಿತ್ರಗಳು, ರೀಲ್ಸ್, ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ ಎಂದರು.

ಸಿಇಓ ಎನ್. ಹೇಮಂತ್ ಕುಮಾರ್ ಅವರು ಮಾತನಾಡಿ, ನೂತನ ವೆಬ್ಸೈಟ್ ನಲ್ಲಿ ಇಲ್ಲಿನ ಗುಡಿ ಕೈಗಾರಿಕೆ, ಪ್ರವಾಸಿ ತಾಣಗಳನ್ನು ಸೇರಿಸಲಾಗಿದೆ ಎಂದರು.

ಪ್ರವಾಸೋದ್ಯಮವನ್ನು ಉತ್ತೇಜಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ವಿವಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಕ್ಕೂ ಮುನ್ನ ರಂಗಮಂದಿರದ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲೆಯ ಪ್ರವಾಸಿತಾಣಗಳ ಆಕರ್ಷಕ ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿದರು.

ಈ ಛಾಯಾಚಿತ್ರ ಪ್ರದರ್ಶನವು ಇಂದಿನಿಂದ 5ದಿನಗಳ ಕಾಲ ನಡೆಯಲಿದೆ.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಸ್ ಬಾನು, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಪಲ್ಲವಿ ಜಿ. ಸಿಸಿಎಫ್ ಹನುಮಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಜಿ. ಕೆ. ಮಿಥುನ್ ಕುಮಾರ್, ಪ್ರೊಬಷನರ್ ಅಧಿಕಾರಿ ನಾಗೇಂದ್ರ ಬಾಬು, ಉಪವಿಭಾಗಾಧಿಕಾರಿ
ಸತ್ಯನಾರಾಯಣ್, ಧರ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.

Veterinary College ಪಶುವೈದ್ಯರು ಹೆಚ್ಚಿನ ಅಧ್ಯಯನದಿಂದ ಸಾಹಿತ್ಯ ಲೋಕಕ್ಕೆ ಉತ್ತಮ‌ ಕೊಡುಗೆ ನೀಡಬಹದು- ಟಿ‌.ಪಿ.ಅಶೋಕ

0

Veterinary College ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗದಲ್ಲಿ ಕನ್ನಡ ಪಶುವೈದ್ಯಕೀಯ ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಕಮ್ಮಟ-2025
ಕನ್ನಡ ಪಶುವೈದ್ಯಕೀಯ ಸಾಹಿತ್ಯ ಪರಿಷತ್ (ರಿ), ಕರ್ನಾಟಕ, ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ಆಯೋಜಿಸಿದ ದಿನಾಂಕ: 27-28 ಸಪ್ಟೆಂಬರ್ 2025 ರವರೆಗಿನ 2 ದಿನಗಳ ರಾಜ್ಯಮಟ್ಟದ “ಕನ್ನಡ ಭಾಷೆ, ಸಾಹಿತ್ಯ ಮತ್ತು ಪಶುವೈದ್ಯಕೀಯ ವಿಜ್ಞಾನ” ಈ ವಿಷಯದ “ಸಾಹಿತ್ಯ ಕಮ್ಮಟ-2025” ವನ್ನು ಉದ್ಘಾಟನೆ ಶ್ರೀ ಟಿ.ಪಿ.ಅಶೋಕ್, ಖ್ಯಾತ ವಿಮರ್ಶಕರು ಮತ್ತು ಸಾಹಿತಿಗಳು ಇವರು ಉದ್ಘಾಟಿಸಿದರು.

ನಂತರ ಅವರು ಮಾತನಾಡುತ್ತಾ ಮೂಕಪ್ರಾಣಿಗಳ ವೈದ್ಯರಾದ ಪಶುವೈದ್ಯರು ದಿನನಿತ್ಯ ಪಶುಗಳು ಮತ್ತು ಮನುಷ್ಯರ ಜೊತೆ ಬೆರೆಯುವುದರಿಂದ ಇವರ ಸಾಹಿತ್ಯವು ಅತ್ಯಂತ ಶ್ರೇಷ್ಟ ಮಟ್ಟಕ್ಕೆ ಬೆಳೆಯವ ಮಟ್ಟದ್ದು ಮತ್ತು ಈ ಕುರಿತು ಪಶುವೈದ್ಯರು ಇನ್ನೂ ಹೆಚ್ಚಿನ ಅಧ್ಯಯನ ಮಾಡಿ ಸಾಹಿತ್ಯ ಲೋಕಕ್ಕೆ ಹತ್ತಿರವಾದರೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬಹುದು ಎಂದರು.

ಕಾರ್ಯಕ್ರಮದಲ್ಲಿ ಡಾ: ಎನ್.ಬಿ.ಶ್ರೀಧರ ಇವರ ನವಕರ್ನಾಟಕ ಪ್ರಕಾಶನದ ಕೃತಿ “ಪಶುವೈದ್ಯನ ಪಯಣ: ಪಶುವೈದ್ಯಕೀಯ ವೃತ್ತಿಯ ಅನುಭವಗಳು” ಇದನ್ನು ಬಿಡುಗಡೆ ಮಾಡಲಾಯಿತು.
ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಭಾರಿ ಡೀನ್, ಡಾ ತಿರುಮಲೇಶ್ ಮಾತನಾಡುತ್ತಾ ಕನ್ನಡ ಭಾಷೆಯ ಗರಿಮೆ, ಪಶುವೈದ್ಯಕೀಯ ವೃತ್ತಿಯವರು ಇದನ್ನು ಅಳವಡಿಸಿಕೊಳ್ಳುವ ವಿಧಾನಗಳ ಮಹತ್ವ ತಿಳಿಸಿದರು.

ಕನ್ನಡ ಪಶುವೈದ್ಯಕೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ: ಎಸ್. ಬಿ.ರವಿಕುಮಾರ್ ಮಾತನಾಡಿ ಪಶುವೈದ್ಯರಿಗೆ ದಿನನಿತ್ಯದ ವೃತ್ತಿಯ ಜೀವನದಲ್ಲಿ ಜನ ಮತ್ತು ಪಶುಗಳ ನಿಕಟ ಸಂಪರ್ಕವಿರುವುದರಿಂದ ಸಾಹಿತ್ಯಕ್ಕೆ ವಸ್ತುಗಳು ಲಭ್ಯತೆ ಸುಲಭ, ಹೆಚ್ಚಿನ ಪಶುವೈದ್ಯರು ಬರವಣಿಗೆಯಲ್ಲಿ ತೊಡಗಿಸಿಕೊಂಡು ವೃತ್ತಿಯ ಕುರಿತು ಜನಮಾನಸ ತಲುಪಬೇಕೆಂದರು.

Veterinary College ಸಮಾರಂಭದಲ್ಲಿ ಶಿವಮೊಗ್ಗದ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ:ಬಾಬುರತ್ನ, ಪಶುವೈದ್ಯಕೀಯ ಸಾಹಿತಿ ಡಾ: ರಮಾನಂದ ಕಾರ್ಯಕ್ರಮದ ಸಂಘಟಕರಾದ ಡಾ: ಎನ್.ಬಿ,ಶ್ರೀಧರ ಮತ್ತು ಡಾ: ರವಿಕುಮಾರ್,ಪಿ. ಇವರು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಬಂದ 48 ಪಶುವೈದ್ಯಾಧಿಕಾರಿಗಳು ಮತ್ತು ಪಶುವೈದ್ಯಕೀಯ ಮಹಾವಿದ್ಯಾಲಯ,ಶಿವಮೊಗ್ಗದ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸಮಾವೇಶದಲ್ಲಿ ಒಟ್ಟು 11 ವಿವಿಧ ವಿಚಾರಗೋಷ್ಟಿಗಳಿರುತ್ತಿದ್ದು “ಪಶುವೈದ್ಯಕೀಯ ವಿದ್ಯಾರ್ಥಿ ಗೋಷ್ಟಿ” ಈ ಕಾರ್ಯಕ್ರಮದ ವಿಶೇಷವಾಗಿದೆ. ಡಾ: ಅರುಣ್ ಖರಾಟೆಯವರ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿದೆ.

Madhu Bangarappa ವಿಕಲಚೇತನರ ಸರ್ವಾಂಗೀಣ ವಿಕಾಸಕ್ಕೆ ಮಾನವೀಯ ಕ್ರಮ- ಮಧು ಬಂಗಾರಪ್ಪ

0

Madhu Bangarappa ರಾಜ್ಯದ ಕಿವುಡ, ಮೂಕರು ಸೇರಿದಂತೆ ವಿಕಲಚೇತನರ ಸರ್ವಾಂಗೀಣ ವಿಕಾಸಕ್ಕೆ ಅಗತ್ಯವಾಗಿರುವ ಎಲ್ಲಾ ರೀತಿಯ ಕ್ರಮಗಳನ್ನು ಮಾನವೀಯ ನೆಲೆಯಲ್ಲಿ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಮೂಕರು ಮತ್ತು ಶ್ರವಣ ಮಾಂದ್ಯರ ಸಂಘ ಇವರುಗಳ ಸಂಯುಕ್ತಾಕ್ಷರದಲ್ಲಿ ಏರ್ಪಡಿಸಲಾಗಿದ್ದ ಕಿವುಡರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂಬಂಧ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ ಅವರು ಅಕ್ಟೋಬರ್ 03ರಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಕಲಚೇತನರಿಗೆ ಅಗತ್ಯವಾಗಿರುವ ನೆರವು ಆರ್ಥಿಕ ಸಹಕಾರ ನೀಡಲಾಗುವುದು ಎಂದ ಅವರು ರಾಜ್ಯದಾದ್ಯಂತ ಈಗಾಗಲೇ 44 ವಿಶೇಷ ಶಾಲೆಗಳು ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ನಡೆಯುತ್ತಿದೆ ಅದಕ್ಕಾಗಿ ಸರ್ಕಾರ ಮಾಡುತ್ತಿರುವ ಹಣಕಾಸಿನ ವಿವರವನ್ನು ಪಡೆದು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ ಹೆಚ್ ಶಂಕರ್ ಅವರು ಮಾತನಾಡಿ ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಸಂಖ್ಯೆಯ ವಿಕಲಚೇತನರಿದ್ದು ನಿರಂತರ ಶೋಷಣೆಗೆ ಒಳಗಾಗುತ್ತಿದ್ದಾರೆ ಅವರ ಕುಂದು ಕೊರತೆಗಳನ್ನು ಆಲಿಸುವರು ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Madhu Bangarappa ಪ್ರಸ್ತುತ ವಿಕಲಚತರಿಗೆ ನೀಡಲಾಗುತ್ತಿರುವ 1200 ರೂ. ಗಳ ಮಾಶಾಸನವನ್ನು 5,000ಗಳಿಗೆ ಏರಿಸಬೇಕಾದ ಅಗತ್ಯವಿದೆ ಅಲ್ಲದೆ ರಾಜ್ಯದಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣಿಕೆ ಅವಕಾಶ ಕಲ್ಪಿಸಬೇಕು. ಪ್ರತಿ ಜಿಲ್ಲೆಯಲ್ಲಿಯೂ ವಿಕಲಚೇತನರಿಗೆ ಪ್ರತ್ಯೇಕವಾಗಿ ಶಾಲೆಗಳನ್ನು ಆರಂಭಿಸಿ ಸಂಜ್ಞಾ ಭಾಷೆಯ ತಜ್ಞ ಶಿಕ್ಷಕರನ್ನು ನಿಯೋಜಿಸುವಂತೆ ಅವರು ಮನವಿ ಮಾಡಿದರು. ಅಲ್ಲದೆ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ವಿಕಲಚೇತನರಿಗೆ ಕಿವುಡ ಮೂಕರಿಗೆ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ ಅವರು, ನಿರ್ಲಕ್ಷಕ್ಕೆ ಒಳಗಾಗಿರುವ ವಿಕಲಚೇತನರಿಗೆ ಬೆಂಬಲವಾಗಿ ನಿಲ್ಲುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಸಿಎಫ್ ಹನುಮಂತಪ್ಪ ಉಮಾಶಂಕರ್ ರಮೇಶ್ ದೇವರಾಜ್ ನವೀನ್ ಕುಮಾರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

Klive Special Article ನವರಾತ್ರಿ ಏಳನೇ ದಿನ, ಶ್ರೀದೇವಿಯ ರೂಪ… “ಶ್ರೀಕಾಲರಾತ್ರಿ ಭಯಂಕರಿ”

0

ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ

Klive Special Article ದಿನದ ಒಳ್ಳೆಯಮಾತು (ನವರಾತ್ರಿ7ನೇ ದಿನ)
ನವರಾತ್ರಿ(ಏಳನೆಯದಿನ)..ಶ್ರೀದುರ್ಗಾಮಾತೆಯ ಏಳನೆಯ ದಿನದ ರೂಪವಾದ ಕಾಲರಾತ್ರಿದೇವಿ


” ಏಕವೇಣೀ ಜಪಾಕರ್ಣ ಪೂರಾ ನಗ್ನಾ
ಸ್ವರಾಸ್ಥಿತಾ/
ಲಂಬೋಷ್ಠೀ ಕರ್ಣಿಕಾಕರ್ಣಿ ತೈಲಾಭ್ಯಕ್ತಶರಿರಿಣೀ//
ವಾಮಪಾದೋಲ್ಲ ಸಲ್ಲೀಹಲತಾ
ಕಂಟಕ ಭೂಷಣಾ/
ವರ್ಧನ್ಮೂರ್ಧ ಧ್ವಜಾ ಕೃಷ್ಣಾ ಕಾಲರಾತ್ರೀ
ಭಯಂಕರೀ//

ಇಂದು ನವರಾತ್ರಿ ಹಬ್ಬದ ಏಳನೆಯದಿನ.
ದುರ್ಗಾಮಾತೆಯ ಏಳನೇ ರೂಪವು ಕಾಲರಾತ್ರಿಯಾಗಿದ್ದು,ದೇವಿಯ ಈ ರೂಪವು ಅಜ್ಞಾನ
ಮತ್ತು ಅಂಧಕಾರಗಳ ನಿವಾರಣೆಗಾಗಿಯೇ ಅವತಾರ
ವೆತ್ತಿದ್ದಾಳೆ ಎಂಬ ನಂಬಿಕೆಯಿದೆ.ರೌದ್ರಾವತಾರ ಮತ್ತು
ತುಂಬಾ ಉಗ್ರ ರೂಪದಲ್ಲಿರುವ ದುರ್ಗಾದೇವಿಯು
Klive Special Article ಕಾಲರಾತ್ರಿಯ ರೂಪ ಧರಿಸಿ ರಾಕ್ಷಸರ ವಿರುದ್ಧ ಹೋರಾಡಲು ಹೋಗುತ್ತಾಳೆ. ಈಕೆಯನ್ನು ಶುಭಂಕರಿಯೆಂತಲೂಕರೆಯುತ್ತಾರೆ.ಧರ್ಮರಕ್ಷಣೆಗಾಗಿ,
ಧರ್ಮವನ್ನು ಮೀರಿದವರ ಪಾಲಿಗೆ ದೇವಿಯು
ಕಾಲರಾತ್ರಿಯಾಗಿ ಭಯ ಹುಟ್ಟಿಸುವಳು.ಆದರೆ
ಭಕ್ತರ ಪಾಲಿಗೆ ಮಾತ್ರ ಮಾತೃ ಸ್ವರೂಪಿಣಿಯಾದ
ದುರ್ಗಾಮಾತೆಯೇ ಆಗಿರುವಳು.ಭಕ್ತರ ರಕ್ಷಣೆ
ಗಾಗಿಯೇ ಅವತಾರಮಾಡಿರುವ ಈ ದೇವಿಯನ್ನು ಆರಾಧಿಸಿ,ಪೂಜಿಸಿ ಅನುಗ್ರಹ ಪಡೆಯೋಣ.

Shrimad Jagadguru Shankaracharya ಕೂಡಲಿಯ ಶ್ರೀ ಶಾರದಾ ಪೀಠಮ್ ನಲ್ಲಿ ಶತಚಂಡಿಯಾಗ

0

Shrimad Jagadguru Shankaracharya ಇತಿಹಾಸ ಪ್ರಸಿದ್ಧ ಶಿವಮೊಗ್ಗ ತಾಲ್ಲೂಕಿನಲ್ಲಿರುವ ಕೂಡಲಿಯ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಕೂಡಲಿ ಶೃಂಗೇರಿ ದಕ್ಷಿಣಾಮ್ನಾಯ ಮೂಲ ಶ್ರೀ ಶಾರದಾ ಪೀಠಮ್‍ನಲ್ಲಿ ನವರಾತ್ರಿ ಪ್ರಯುಕ್ತ ಲೋಕಲ್ಯಾಣಾರ್ಥಕ್ಕಾಗಿ ಶತಚಂಡಿಯಾಗವನ್ನು ಆಯೋಜಿಸಲಾಗಿದೆ.

ಶ್ರೀಮಠದ ನೇ ಪೀಠಾಧಿಪತಿಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಸ್ವಾಮಿಗಳ ಸಾನ್ನಿಧ್ಯದಲ್ಲಿ ನವರಾತ್ರಿ ಪ್ರಯುಕ್ತ ಪ್ರತಿದಿನ ವಿವಿಧ ಹೋಮಗಳು ನಡೆಯುತ್ತಿದ್ದು, ಅಕ್ಟೋಬರ್ 1 ರಿಂದ ಶತಚಂಡಿಯಾಗ ನೆರವೇರಲಿದೆ.

ಶತಚಂಡಿಯಾಗವನ್ನು ಮತ್ತೂರಿನ ವಿದ್ವಾನ್ ಶ್ರೀ ಪ್ರದೀಪ್ ಅವಧಾನಿ ನೇತೃತ್ವದಲ್ಲಿ ನಡೆಸುತ್ತಿದ್ದು, ಭಕ್ತಾದಿಗಳು ಈ ಯಾಗದಲ್ಲಿ ಪಾಲ್ಗೊಂಡು, ಜಗದ್ಗುರುಗಳ ಮತ್ತು ಶ್ರೀ ಶಾರದಾ ಪರಮೇಶ್ವರಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Shrimad Jagadguru Shankaracharya ಮಾಹಿತಿಗಾಗಿ 9164185225, 9480544225, 9844570404 ಸಂಪರ್ಕಿಸಲು ಕೋರಿದೆ.

Rotary Biodiversity Park ರೋಟರಿ ಬಯೋಡೈವರ್ಸಿಟಿ ಎಂಡೋಮೆಂಟ್ ನಿಧಿಯನ್ನ ಆರೋಗ್ಯ, ಪರಿಸರ, ಶಿಕ್ಷಣ, ಮಹಿಳಾ ಸಬಲೀಕರಣ ಚಟುವಟಿಕೆಗಳಿಗೆ ವಿನಿಯೋಗ- ಪ್ರೊ.ಎ.ಎಸ್.ಚಂದ್ರಶೇಖರ್

0

Rotary Biodiversity Park ರೋಟರಿ ದತ್ತಿನಿಧಿ ಎಂಡೋಮೆಂಟ್ ಫಂಡ್‌ಗೆ 25 ಸಾವಿರ ಡಾಲರ್ ದೇಣಿಗೆ ನೀಡಿರುವ ರೋಟರಿ ಮಾಜಿ ಜಿಲ್ಲಾ ಗವರ್ನರ್ ಪ್ರೊ. ಎ.ಎಸ್.ಚಂದ್ರಶೇಖರ್‌ಗೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜು ನಿವೃತ್ತ ಅಧ್ಯಾಪಕರ ಸಂಘ ಹಾಗೂ ರೋಟರಿ ಬಯೋಡೈವರ್ಸಿಟಿ ಪಾರ್ಕ್ ವತಿಯಿಂದ ರೋಟರಿ ರಕ್ತನಿಧಿ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ನಿವೃತ್ತ ಪ್ರಾಂಶುಪಾಲ ಪ್ರೊ. ಎ.ಎಸ್.ಚಂದ್ರಶೇಖರ್ ಅವರು ರೋಟರಿ ಬಯೋಡೈವರ್ಸಿಟಿ ಫೌಂಡೇಷನ್ ಆಫ್ ರೋಟರಿ ಕ್ಲಬ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸನ್ಮಾನ ಸ್ವೀಕರಿಸಿ ಮಾತನಾಡಿದ ಚಂದ್ರಶೇಖರ್, ಎಂಡೋಮೆಂಟ್ ಫಂಡ್‌ನಿಂದ ಪ್ರತಿ ವರ್ಷ ಬರುವ ಆದಾಯದಲ್ಲಿ ಆರೋಗ್ಯ, ಪರಿಸರ, ಶಿಕ್ಷಣ, ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಯೋಜನೆಗಳಿಗೆ ವಿನಿಯೋಗಿಸಲಾಗುವುದು ಎಂದು ತಿಳಿಸಿದರು.
Rotary Biodiversity Park ಈವರೆಗೂ ಗ್ರಾಮಾಂತರ ಪ್ರದೇಶ ಹಾಗೂ ಸರ್ಕಾರಿ ಶಾಲೆಗಳಿಗೆ ನೆರವು ಒದಗಿಸುವಲ್ಲಿ ಮಹತ್ತರ ಕೆಲಸಗಳನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಅಧ್ಯಕ್ಷ ಪ್ರೊ. ಶಿವಣ್ಣ ಗೌಡ, ಕಾರ್ಯದರ್ಶಿ ಪ್ರೊ. ಕಣ್ಣಪ್ಪ, ಉಪಾಧ್ಯಕ್ಷ ಪ್ರೊ. ಚಂದ್ರಪ್ಪ, ಖಜಾಂಚಿ ಪ್ರೊ. ಮಂಜುನಾಥ, ಪ್ರೊ. ಧನಂಜಯ ಬಿ.ಆರ್., ಪ್ರೊ. ಬೋಗೇಶಪ್ಪ, ಪ್ರೊ. ಉಮಾಶಂಕರ್, ಪ್ರೊ. ಗಂಗಪ್ಪ, ಪ್ರೊ. ಷಣ್ಮುಖಪ್ಪ, ಪ್ರೊ. ಶಿವಮೂರ್ತಿ, ಪ್ರೊ. ನಾಗೇಂದ್ರಪ್ಪ, ಕೆ.ಪಿ.ಶೆಟ್ಟಿ, ಜಿ.ವಿಜಯಕುಮಾರ್, ನಾಗರಾಜ್, ವೀರಣ್ಣ ಹುಗ್ಗಿ, ಶಂಕರ್, ಜಗದೀಶ್, ಎಂ.ಪಿ.ಆನಂದಮೂರ್ತಿ, ರೋಟರಿ ಉತ್ತರ ಅಧ್ಯಕ್ಷ ಬಸವರಾಜಪ್ಪ ಹಾಗೂ ರೋಟರಿ ಪದಾಧಿಕಾರಿಗಳು ಹಾಜರಿದ್ದರು.

Minister Shivanand Patil ಉದ್ದು,ಹೆಸರುಕಾಳು ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು- ಸಚಿವ ಶಿವಾನಂದ ಪಾಟೀಲ್

0

Minister Shivanand Patil ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಆದೇಶ ಮಾಡಿದ್ದು, ಖರೀದಿ ಏಜನ್ಸಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.

ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು. ರೈತರ ಹೆಸರಿನಲ್ಲಿ ಮಾರಾಟ ಮಾಡಲು ಬರುವ ವರ್ತಕರ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಅವರಿಂದ ಖರೀದಿ ಮಾಡಬಾರದು ಎಂದು ತಿಳಿಸಿದ್ದಾರೆ.

ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್‌, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರುಕಾಳು, ಕಲಬುರಗಿ, ಬೀದರ್‌, ಯಾದಗಿರಿ, ಗದಗ, ಧಾರವಾಡ, ವಿಜಯಪುರ ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನಕಾಳು ಹಾಗೂ ಬಾಗಲಕೋಟೆ, ಬಳ್ಳಾರಿ, ಚಾಮರಾಜ ನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಮೈಸೂರು, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಗಳನ್ನು ಖರೀದಿ ಏಜನ್ಸಿಗಳನ್ನಾಗಿ ನೇಮಕ ಮಾಡಲಾಗಿದೆ.

Minister Shivanand Patil ನೋಂದಣಿ ಕಾಲಾವಧಿಯನ್ನು 80 ದಿನ ಹಾಗೂ ಖರೀದಿ ಅವಧಿಯನ್ನು 90ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು. ಖರೀದಿ ಸಂಸ್ಥೆಗಳು ರೈತರಿಗೆ ಅನುಕೂಲವಾಗುವಂತೆ ನಾಫೆಡ್‌ ಹಾಗೂ ಎನ್‌ಸಿಸಿಎಫ್‌ ಮಾರ್ಗಸೂಚಿ ಅನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳ ಮೂಲಕ ಒಡಂಬಡಿಕೆ ಮಾಡಿಕೊಂಡು ಖರೀದಿ ಕೇಂದ್ರ ತೆರೆಯಬೇಕು ಎಂದು ಸೂಚನೆ ನೀಡಿದ್ದಾರೆ.