Sunday, May 17, 2026
Sunday, May 17, 2026
Home Blog Page 151

B.Y.Raghavendra “ಜಡ್ಕಲ್ ಗ್ರಾಮೋತ್ಸವ”ಕ್ಕೆ ಸಂಸದ ರಾಘವೇಂದ್ರರಿಂದ ಚಾಲನೆ

0

B.Y.Raghavendra ಬೈಂದೂರು ಉತ್ಸವ – 2026 ಇದರ ಅಂಗವಾಗಿ ಗ್ರಾಮ ಪಂಚಾಯತ್‌ ಜಡ್ಕಲ್‌ ಇದರ ನೇತೃತ್ವದಲ್ಲಿ ನಡೆದ “ಜಡ್ಕಲ್‌ ಗ್ರಾಮೋತ್ಸವ – ಆರೋಗ್ಯ ಮೇಳ, ಉಚಿತ ಆರೋಗ್ಯ ತಪಾಸಣಾ ಶಿಬಿರ” ಕಾರ್ಯಕ್ರಮವನ್ನು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ‌.ರಾಘವೇಂದ್ರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬೈಂದೂರು ತಾಲೂಕಿನ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು

DC Shivamogga ಜನಹಿತ ಯೋಜನೆಗಳ ಅನುಷ್ಠಾನ: ಕಂದಾಯ & ಅರಣ್ಯ ಇಲಾಖೆಗಳ ಸಮನ್ವಯತೆ ಮುಖ್ಯ- ಡೀಸಿ ಗುರುದತ್ತ ಹೆಗಡೆ

0

DC Shivamogga ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ರೂಪಿಸಲಾಗಿರುವ ಅನೇಕ ಜನಹಿತ ಯೋಜನೆಗಳ ವ್ಯವಸ್ಥಿತ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಕಂದಾಯ ಮತ್ತು ಅರಣ್ಯ ಇಲಾಖಾ ಅಧಿಕಾರಿಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ವಲಯ ಮಟ್ಟದ ಅರಣ್ಯಾಧಿಕಾರಿಗಳು ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರ ಸಭೆಯ ಅ‍ಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕೆಲವು ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗಿದ್ದು, ಸಕಾಲದಲ್ಲಿ ಯೋಜನೆಗಳು ಪೂರ್ಣಗೊಳ್ಳದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ಆಯಾ ಇಲಾಖೆಗಳ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಲು ಹಾಗೂ ಎದುರಾಗಬಹುದಾದ ಸಮಸ್ಯೆಗಳ ಇತ್ಯರ್ಥಕ್ಕೆ ಪರಸ್ಪರರ ನಡುವೆ ಸಮನ್ವಯತೆ ಸಾಧಿಸಿಕೊಳ್ಳುವುದಲ್ಲದೆ ಕಾಲಕಾಲಕ್ಕೆ ಸಭೆಗಳನ್ನು ನಡೆಸುವಂತೆ ಅವರು ಸಲಹೆ ನೀಡಿದರು. ವಿಶೇಷವಾಗಿ ಹಲವು ದಶಕಗಳಿಂದ ಇತ್ಯರ್ಥಗೊಳ್ಳದೇ ಉಳಿದಿರುವ ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಹಲವು ದಶಕಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವವರಿಗೆ ನಿಯಮಾನುಸಾರ ದಾಖಲೆಗಳನ್ನು ಪರಿಶೀಲಿಸಿ, ಭೂಮಂಜೂರಾತಿಗೆ ಕ್ರಮ ವಹಿಸಬೇಕಾದ ತುರ್ತು ಅಗತ್ಯವಿರುವುದನ್ನು ತಿಳಿಸಿದ ಅವರು, ಈಗಾಗಲೇ ನಿಯಮಾನುಸಾರ ಗುರುತಿಸಲಾಗಿರುವ ಅರಣ್ಯ ಪ್ರದೇಶದಲ್ಲಿನ ಸಾಗುವಳಿದಾರರ ಸಮಸ್ಯೆಗೆ ನಿರ್ಣಾಯಕ ತೀರ್ಮಾನ ಕೈಗೊಳ್ಳುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಸಂಬಂಧಿಸಿದಂತೆ 9129ಎಕರೆಗೆ ಜಂಟಿ ಸರ್ವೇ ಕಾರ್ಯ ಪೂರ್ಣಗೊಂಡಿದೆ. ಅದಕ್ಕೆ ಸಂಬಂಧಿಸಿದಂತೆ ಸರ್ವೇಕಾರ್ಯದಿಂದ ಕೈಬಿಟ್ಟು ಹೋಗಿರುವ ಸಂತ್ರಸ್ಥರು ಆಯಾ ತಾಲೂಕಿನ ತಹಶೀಲ್ದಾರರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಿಗೆ ನೀಡಿರುವ ಅರ್ಜಿಗಳನ್ನು ಕ್ರಮಕ್ಕಾಗಿ ತಹಶೀಲ್ದಾರರಿಗೆ ಈ ಹಿಂದೆಯೇ ಸೂಚಿಸಲಾಗಿತ್ತು.

ಅದಕ್ಕಾಗಿ ವಿನ್ಯಾಸಗೊಳಿಸಲಾದ ಮಾದರಿ ನಮೂನೆಯನ್ನು ಸಹ ಈಗಾಗಲೇ ನೀಡಲಾಗಿದೆ. ಅವರ ವರದಿಯನ್ನು ಸೋಮವಾರದೊಳಗಾಗಿ ಪಡೆದು ಪರಿಶೀಲಿಸಿ, ಕ್ರಮಕ್ಕಾಗಿ ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು. ಹಲವು ಯೋಜನೆಗಳ ಅನುಷ್ಠಾನದಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಸಮಸ್ಯಾತ್ಮಕ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ಮೊಬೈಲ್‌ಸ್ಥಾವರ ನಿರ್ಮಾಣ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಜಲಜೀವನ ಮಿಷನ್‌, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಘನತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪನೆ, ರಸ್ತೆ ಅಗಲೀಕರಣ, ಅರಣ್ಯೇತರ ಪ್ರದೇಶಗಳಲ್ಲಿನ ಮರಗಳ ಕಟಾವಣೆ, ಮೇಲ್ಸೇತುವೆಗಳ ನಿರ್ಮಾಣ ಮುಂತಾದ ಕಾಮಗಾರಿಗಳಲ್ಲಿ ವಿಳಂಬವಾಗಿದ್ದು, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದರು.

DC Shivamogga
ಮೊಬೈಲ್‌ಸ್ಥಾವರಗಳ ನಿರ್ಮಾಣ ಕಾರ್ಯದಲ್ಲಿ ಸಮಸ್ಯೆ ಎದುರಾಗಿರುವ ಸ್ಥಳಗಳು ಮತ್ತು ಅಲ್ಲಿನ ತಾಂತ್ರಿಕ ಸಮಸ್ಯೆಗಳ ಕುರಿತು ಭಾರತ ಸಂಚಾರ ನಿಗಮದ ಅಧಿಕಾರಿಗಳು ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ಚರ್ಚಿಸಿ, ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ ಅವರು, ಕಂದಾಯ ಮತ್ತು ಅರಣ್ಯ ಇಲಾಖಾಧಿಕಾರಿಗಳು ಬಿ.ಎಸ್.ಎನ್.ಎಲ್‌.ನ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡುವಂತೆ ಸೂಚಿಸಿದ ಅವರು, ಸ್ಥಾವರಗಳ ನಿರ್ಮಾಣ ಕಾರ್ಯಕ್ಕೆ ಅಡ್ಡಿಪಡಿಸುವ ಸ್ಥಳಗಳಿದ್ದಲ್ಲಿ ಸ್ಥಳೀಯ ತಹಶೀಲ್ದಾರರು ಹಾಗೂ ಪೊಲೀಸ್‌ಸಹಕಾರ ಪಡೆದು, ಸ್ಥಾವರಗಳನ್ನು ನಿರ್ಮಿಸುವಂತೆ ಅವರು ಸೂಚಿಸಿದರು.

ಜಿಲ್ಲೆಯ ಹಲವು ಭಾಗಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅರಣ್ಯ ಭೂಮಿ ಇರುವ ಕೆಲವು ಕಡೆಗಳಲ್ಲಿ ಹೆದ್ದಾರಿ ಕಾಮಗಾರಿ ಕೈಗೊಳ್ಳುವಲ್ಲಿ ತೀವ್ರ ತರಹದ ಅಡಚಣೆ ಉಂಟಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಹೊಸೂರು ಸಮೀಪ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ, ಮೈಸೂರು ಕಾಗದ ಕಾರ್ಖಾನೆಯ ವ್ಯಾಪ್ತಿಗೊಳಪಡುವ ಮರಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು ಅವುಗಳ ಕಟಾವಿಗೆ ಅನುಮತಿ, ರಾಷ್ಟ್ರೀಯ ಹೆದ್ದಾರಿ-69ರ ನಿರ್ಮಾಣ ಕಾರ್ಯ ಹಾಗೂ 69ರ ಅರಣ್ಯೇತರ ಪ್ರದೇಶದಲ್ಲಿನ ಮರಗಳ ಕಟಾವಿಗೆ ಇಲಾಖೆಗೆ ಶುಲ್ಕವನ್ನು ಪಾವತಿಸಲಾಗಿದ್ದು, ಅವುಗಳ ಕಟಾವಿಗೆ ಅನುಮತಿ ನೀಡುವಂತೆ ಮುಖ್ಯ ಅರಣ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.

ಜಿಲ್ಲೆಯ ಹೊಸನಗರ ತಾಲೂಕು ಸೇರಿದಂತೆ ಆಯ್ದ ವಿವಿಧ ಗ್ರಾಮೀಣ ಅರಣ್ಯ ಪ್ರದೇಶಗಳಲ್ಲಿ ಶುದ್ಧಕುಡಿಯುವ ನೀರನ್ನು ಪೂರೈಸಲು ಕುಡಿಯುವ ನೀರಿನ ಸ್ಥಾವರಗಳ ನಿರ್ಮಾಣಕ್ಕೆ, ಶುದ್ಧ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ, ಘನ ತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ಮಾಣಕ್ಕೆ ಹಾಗೂ ಗ್ರಾಮಠಾಣ ಪ್ರದೇಶಗಳಲ್ಲಿ ಬೆಳೆದು ನಿಂತ ಮರಗಳ ಕಟಾವಿಗೆ ಅರಣ್ಯ ಇಲಾಖೆಯು ಅನುಮತಿ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎನ್.ಹೇಮಂತ್‌ ಅವರು ತಿಳಿಸಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಟಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದ್ದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಸಕಾಲದಲ್ಲಿ ಅನುಮತಿ ಪಡೆದು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಹುದಾಗಿದೆ ಎಂದು ಶಿವಮೊಗ್ಗ ಬಿಸಿಎಫ್ ಹನುಮಂತಪ್ಪ ನವರು ಹೇಳಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ ಅವರು ಮಾತನಾಡಿ, ಹುಲಿಕಲ್‌ಘಾಟಿಯಲ್ಲಿ ರಸ್ತೆ ಕಾಮಗಾರಿ ಕಾರ್ಯಾರಂಭಗೊಳಿಸಲು ಅಗತ್ಯ ದಾಖಲೆಗಳೊಂದಿಗೆ ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸಿದಲ್ಲಿ ಪರಿಶೀಲಿಸಿ ಅನುಮತಿ ನೀಡಲು ಕ್ರಮವಹಿಸಲಾಗುವುದು ಎಂದರು. ಕಂದಾಯ ಮತ್ತು ಅರಣ್ಯ ಭೂಮಿಯ ವೆತ್ಯಾಸಗಳನ್ನು ಗುರುತಿಸಲು ನ್ಯಾಯಾಲಯದ ಮಾರ್ಗದರ್ಶನದಂತೆ ನೂತನ ತಂತ್ರಾಂಶವನ್ನು ರೂಪಿಸಿ, ಜಂಟಿ ಸರ್ವೇ ಕಾರ್ಯಕ್ಕೆ ಸರ್ಕಾರವು ಅನುಮತಿ ನೀಡಿದೆ. ಇಂತಹ ಸ್ಥಳಗಳಲ್ಲಿ ಕಂಡುಬರುವ ಮನೆ, ರಸ್ತೆ, ಶಾಲೆ, ಕಾಲೇಜು ಇತ್ಯಾದಿಗಳಿದ್ದಲ್ಲಿ ಅವುಗಳನ್ನು ಸರ್ವೇ ಕಾರ್ಯದಿಂದ ಕೈಬಿಡಲು ಅವಕಾಶ ನೀಡಿದೆ. ಈ ತಂತ್ರಾಂಶವನ್ನು ಕೆಳಹಂತ, ತಹಶೀಲ್ದಾರರ ಹಂತ ಹಾಗೂ ಹಿರಿಯ ಅಧಿಕಾರಿಗಳ ಹಂತದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಅಭಿವೃದ್ಧಿಪಡಿಸಲಾಗಿದೆ ಎಂದರು.

ಜಂಟಿ ಸರ್ವೇಕಾರ್ಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅರಣ್ಯಾಧಿಕಾರಿಗಳು, ಕಂದಾಯಾಧಿಕಾರಿಗಳು, ಸರ್ವೇಯರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಡಿಸೆಂಬರ್‌ಮತ್ತು 26ರಂದು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ತರಬೇತಿಯ ನಂತರ ಸರ್ವೇ ಕಾರ್ಯ ಆರಂಭಗೊಳ್ಳಲಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ
ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಹೇಮಂತ್‌, ಪ್ರೊಬೇಷನರ್‌ಅಧಿಕಾರಿ ಬಾಬು ರಾಜೇಂದ್ರಕುಮಾರ್‌, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಅಜ್ಜಯ್ಯ, ಪ್ರಸನ್ನ ಪಟಗಾರ್(ವನ್ಯಜೀವಿ), ಮೋಹನ್‌ಕುಮಾರ್‌, ಅಪರ ಜಿಲ್ಲಾಧಿಕಾರಿ ಅಭಿಷೇಕ್‌ವಿ ಸೇರಿದಂತೆ ವಲಯ ಅರಣ್ಯಾಧಿಕಾರಿಗಳು, ಎಲ್ಲಾ ತಾಲೂಕುಗಳ ತಹಶೀಲ್ದಾರರು ಸೇರಿದಂತೆ ಕಂದಾಯ ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

“Deemed Forest” (ಡೀಮ್ಡ್ ಫಾರೆಸ್ಟ್) ಎಂದರೆ, ಅಧಿಕೃತವಾಗಿ ಅರಣ್ಯ ಎಂದು ಘೋಷಿಸದಿದ್ದರೂ, ಅರಣ್ಯದ ಗುಣಲಕ್ಷಣಗಳನ್ನು ಹೊಂದಿರುವ ಭೂಮಿ; ಇದು 1996ರ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಬಂದ ಪರಿಕಲ್ಪನೆಯಾಗಿದೆ.

ಪರಿಭಾಷೆ: ಕಾನೂನುಬದ್ಧವಾಗಿ ಅರಣ್ಯವೆಂದು ಗುರುತಿಸದಿದ್ದರೂ, ದಟ್ಟವಾದ ಮರಗಳಿಂದ ಕೂಡಿರುವ, ಅರಣ್ಯದಂತೆ ಕಾಣುವ ಭೂಮಿಯನ್ನು ‘ಡೀಮ್ಡ್ ಫಾರೆಸ್ಟ್’ ಎನ್ನುತ್ತಾರೆ.

ಪ್ರಸ್ತುತ ಕರ್ನಾಟಕದಲ್ಲಿ ಅರಣ್ಯ ಇಲಾಖೆಗೆ ಹಸ್ತಾಂತರಿಸದ ದಟ್ಟ ಅರಣ್ಯ ಪ್ರದೇಶಗಳು, ಅನುದಾನಿತರಿಗೆ ಹಂಚಿದರೂ ಸಾಗುವಳಿ ಮಾಡದ ಭೂಮಿ ಇತ್ಯಾದಿಗಳನ್ನು ‘ಡೀಮ್ಡ್ ಫಾರೆಸ್ಟ್’ ಎಂದು ಗುರುತಿಸಲಾಯಿತು.

‘ಡೀಮ್ಡ್ ಫಾರೆಸ್ಟ್’ ಎಂದರೆ, ದಾಖಲೆಗಳಲ್ಲಿ ‘ಅರಣ್ಯ’ ಎಂದು ನಮೂದಾಗದಿದ್ದರೂ, ವಾಸ್ತವವಾಗಿ ಅರಣ್ಯದಂತೆ ಇರುವ ಭೂಮಿ, ಇದನ್ನು 1996ರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಗುರುತಿಸಲಾಗಿತ್ತು.

B.Y.Raghavendra ಡಿಸೆಂಬರ್ 24.ಶಿವಮೊಗ್ಗದಲ್ಲಿ ಸಂಸದ್ ಕ್ರೀಡೋತ್ಸವ-2025 ಭಾಗವಹಿಸಲು ಸಂಸದ ರಾಘವೇಂದ್ರ ಕರೆ

0

B.Y.Raghavendra ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ, ದೇಶದ ಯುವಕರಲ್ಲಿ ಕ್ರೀಡೆ, ಶಿಸ್ತು ಮತ್ತು ನಾಯಕತ್ವವನ್ನು ಉತ್ತೇಜಿಸುವ ಉದ್ದೇಶದಿಂದ ದೇಶದ ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿಯೂ “ಸಂಸದ್ ಕ್ರೀಡಾ ಮಹೋತ್ಸವ” ಆರಂಭಿಸಲಾಗಿದೆ ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ.

ಈ ಅಭಿಯಾನದ ಅಂಗವಾಗಿ ಇದೇ ಡಿಸೆಂಬರ್ 24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಮ್ಮ ಕ್ಷೇತ್ರದ ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಂಡು ಭಾಗವಹಿಸಿ, ಈ ಕ್ರೀಡೋತ್ಸವವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದ್ದಾರೆ.

Madhu Bangarappa ಮುಂದಿನ ಶೈಕ್ಷಣಿಕ ವರ್ಷದಲ್ಲಿ 11 ಸಾವಿರ ಶಿಕ್ಷಕರ ನೇಮಕಾತಿ- ಮಧು ಬಂಗಾರಪ್ಪ

0

Madhu Bangarappa ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಹರೀಶ ಪೂಂಜ ಅವರ ಪ್ರಶ್ನೆಗೆ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಉತ್ತರಿಸಿದರು.

ಮುಂದಿನ ಶೈಕ್ಷಣಿಕ ವರ್ಷದೊಳಗೆ 11 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ 41,088 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. 1,78,935 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 1,33,345 ಹುದ್ದೆಗಳು ಭರ್ತಿಯಾಗಿದ್ದು, 45,590 ಹುದ್ದೆಗಳು ಖಾಲಿ ಇರುತ್ತವೆ. ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ನೇಮಕಾತಿ ಮಾಡಲು ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 5,024 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಪ್ರೌಢಶಾಲೆಗಳಿಗೆ 44,144 ಹುದ್ದೆಗಳು ಮಂಜೂರಾಗಿರುತ್ತವೆ. ಈ ಪೈಕಿ 32,010 ಹುದ್ದೆಗಳು ಭರ್ತಿಯಾಗಿದ್ದು 12,134 ಹುದ್ದೆಗಳು ಖಾಲಿ ಇರುತ್ತವೆ. ಪ್ರಸ್ತುತ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ 2025-2026ನೇ ಶೈಕ್ಷಣಿಕ ಸಾಲಿಗೆ ಪ್ರಾಥಮಿಕ ಶಾಲೆಗಳಲ್ಲಿ 40,000 ಮತ್ತು ಪ್ರೌಢಶಾಲೆಗಳಲ್ಲಿ 11,000 ಒಟ್ಟಾರೆಯಾಗಿ 51,000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡುವ ಮೂಲಕ ಶಿಕ್ಷಕರ ಕೊರತೆಯನ್ನು ಸರಿದೂರಿಸಲಾಗಿದೆ.

ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಕ್ರಮವಹಿಸಲಾಗಿದೆ. ಅಲ್ಲದೇ ವಿಕಲಚೇತನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ದೃಷ್ಟಿಯಿಂದ ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ 5 ದಿನ ಬೆಳಿಗ್ಗೆ ಬಿಸಿ ಹಾಲು, ಇದರೊಂದಿಗೆ ಮಿಕ್ಸ್ ರಾಗಿ ಮಾಲ್ಟ್, ಮಧ್ಯಾಹ್ನ ಬಿಸಿ ಊಟದೊಂದಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು.

Madhu Bangarappa ವಿದ್ಯಾವಿಕಾಸ ಯೋಜನೆಯಡಿ 1 ರಿಂದ 10ನೇ ತರಗತಿಯ ಮಕ್ಕಳಿಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಸಮವಸ್ತ್ರ ಸರಬರಾಜು ಮಾಡಲು ಮೊದಲನೇ ಜೊತೆ ಸಮವಸ್ತ್ರಕ್ಕಾಗಿ ₹83.07 ಕೋಟಿ ಬಿಡುಗಡೆ ಮಾಡಲಾಗಿದ್ದು, ಎರಡನೇ ಜೊತೆ ಸಮವಸ್ತ್ರಕ್ಕಾಗಿ ₹80.66 ಕೋಟಿ ಲಭ್ಯವಿರುತ್ತದೆ ಎಂದು ತಿಳಿಸಿದರು.

ಅಪರಿಚಿತ ವ್ಯಕ್ತಿ ಶವ ಪತ್ತೆ: ಮೆಗ್ಗಾನ್ ಅಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ

0

ಶಿವಮೊಗ್ಗ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಪಕ್ಕದ ಫುಟ್‌ಪಾತ್ ಮೇಲೆ ಡಿ. 15 ರಂದು ಸುಸ್ತಾಗಿ ಮಲಗಿದ್ದ ಸುಮಾರು 35-40 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಅಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿರುತ್ತಾರೆ.

ಮೃತ ಗಂಡಸಿನ ಹೆಸರು, ವಿಳಾಸ ಮತ್ತು ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರಕಿರುವುದಿಲ್ಲ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಮೃತನ ಚಹರೆ 5.6 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಮೈಬಣ್ಣ, ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು ಹೊಂದಿದ್ದು, ಬಲಗೈನ ಒಳಭಾಗದಲ್ಲಿ ಅಜಯ್ ಎಂಬ ಹಚ್ಚೆ ಗುರುತು ಇದೆ. ಮೈಮೇಲೆ ನೀಲಿ ಬಣ್ಣ ತುಂಬು ತೋಳಿನ ಅಂಗಿ, ಕಪ್ಪು ಬಣ್ಣದ ಜೀನ್ ಪ್ಯಾಂಟ್ ಧರಿಸಿರುತ್ತಾರೆ.

S.N.Chennabasappa ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದು- ಶಾಸಕ ಚನ್ನಬಸಪ್ಪ

0

S.N.Chennabasappa ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ ಮುಚ್ಚಿದಂತಾಗುತ್ತದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹೇಳಿದರು.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬಾಲ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವಣಗೊಳಿಸಲು ಅವಕಾಶ ಕಲ್ಪಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಕೂಡ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲೆಗಳು ಇಂತಹ ಚಟುವಟಿಕಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿವೆ.

ದೇಶ ಕಟ್ಟಲು ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿರಬೇಕು. ಶಿಕ್ಷಣ ಎಲ್ಲರಿಗೂ ಅತಿ ಅಗತ್ಯವಾಗಿದ್ದು, ಬಹು ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ದೇಶಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರಕುತ್ತಿದ್ದರೂ ಕಾರಣಾಂತರಗಳಿಂದ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಇದಕ್ಕೇನು ಕಾರಣವೆಂದು ನಾವೆಲ್ಲ ಅವಲೋಕಿಸುವುದು ಅತಿ ಮುಖ್ಯವಾಗಿದೆ ಎಂದರು.
ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವಾತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ.

S.N.Chennabasappa ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಹೆಚ್ ಎಂ ಮಧು, ಡಿಡಿಪಿಐ ಮಂಜುನಾಥ್, ಡಯಟ್ ಪ್ರಾಂಶುಪಾಲ ಕೃಷ್ಣಮೂರ್ತಿ, ಶಿವಮೊಗ್ಗ ಬಿಇಓ ರಮೇಶ್, ಜಿಪಿಟಿ ರಾಜ್ಯಾಧ್ಯಕ್ಷ ಮುರಳೀಧರ, ಪ್ರೌಢ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಪ್ರವಾಸಿ ಆಕರ್ಷಣೆ ಪಡೆದ ” ಚೆಲ್ ಸ್ನೇಕ್ ಹೆಡ್” ಮೀನು

0

ಸುಮಾರು 80 ವರ್ಷಗಳ ಕಾಲ ಕಾಣೆಯಾಗಿದ್ದ ವಿರಳ ತಾಜಾ ನೀರಿನ ಮೀನು ‘ಚೆಲ್ ಸ್ನೇಕ್‌ಹೆಡ್’ ಭಾರತದ ಹಿಮಾಲಯ ಪ್ರದೇಶದಲ್ಲಿ ವಿಜ್ಞಾನಿಗಳು ಮತ್ತೆ ಪತ್ತೆಹಚ್ಚಿದ್ದಾರೆ.

ಈ ಮೀನಿನ ವೈಜ್ಞಾನಿಕ ಹೆಸರು Channa amphibeus..

ಈ ಮೀನು ಕೊನೆಯದಾಗಿ 1933 ರಲ್ಲಿ ದಾಖಲಾಗಿತ್ತು. ಆ ನಂತರ ದಶಕಗಳ ಕಾಲ ಇದರ ಯಾವುದೇ ಪತ್ತೆ ಅಥವಾ ದೃಢ ದಾಖಲೆ ದೊರಕಿರಲಿಲ್ಲ. ಈ ಕಾರಣದಿಂದ ಇದನ್ನು ಅಳಿವಿನಂಚಿನಲ್ಲಿರುವ ಅಥವಾ ನಾಶವಾಗಿರಬಹುದಾದ ಪ್ರಭೇದ ಎಂದು ಪರಿಗಣಿಸಲಾಗಿತ್ತು.

ಇತ್ತೀಚೆಗೆ, ಸಂಶೋಧಕರು ಹಿಮಾಲಯದ ಚೆಲ್ ನದಿ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದಾಗ, ಈ ಮೀನಿನ ಮೂರು ಜೀವಂತ ಮಾದರಿಗಳನ್ನು ಗುರುತಿಸಲು ಸಾಧ್ಯವಾಯಿತು. ಸ್ಥಳೀಯ ಗ್ರಾಮೀಣ ಸಮುದಾಯದ ಸದಸ್ಯರು ಈ ಮೀನನ್ನು ಸಾಮಾನ್ಯವಾಗಿ ಹಿಡಿದು ಉಪಯೋಗಿಸುತ್ತಿದ್ದರು ಎಂಬ ಮಾಹಿತಿಯೇ ಈ ಮಹತ್ವದ ಪುನಃ ಪತ್ತೆಗೆ ಪ್ರಮುಖ ಸುಳಿವಾಯಿತು.

ಚೆಲ್ ಸ್ನೇಕ್‌ಹೆಡ್ ಮೀನು ತನ್ನ ವಿಶಿಷ್ಟ ದೇಹಾಕೃತಿ, ಹಸಿರು ಛಾಯೆಯ ಸ್ಕೇಲ್ಸ್ ಹಾಗೂ ಹಳದಿ ಪಟ್ಟಿಗಳಿಂದ ಗುರುತಿಸಬಹುದು. ಇದು ಇತರ ಸ್ನೇಕ್‌ಹೆಡ್ ಮೀನಿಗಿಂತ ಗಾತ್ರದಲ್ಲಿ ದೊಡ್ಡದು ಮತ್ತು ಅಪರೂಪದ ಲಕ್ಷಣಗಳನ್ನು ಹೊಂದಿದೆ.

ಈ ಪುನಃ ಪತ್ತೆ ಭಾರತದ ಜೈವ ವೈವಿಧ್ಯ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ಸಾಧನೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ಇದು ಹಿಮಾಲಯದ ನದಿ ಪರಿಸರಗಳ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ ಎಂಬುದನ್ನೂ ಒತ್ತಿಹೇಳುತ್ತದೆ.

ಜಾಗತಿಕ ಅಪರೂಪದ ಜೀವಿ ಬೆಂಗಳೂರಿನ ಅಕ್ವೇರಿಯಂ ಪ್ಯಾರಡೈಸ್‌ನಲ್ಲಿ ನೆಲೆಸಿದೆ

ಫನ್ ವರ್ಲ್ಡ್ ಪ್ರಸ್ತುತಪಡಿಸುವ ಭಾರತದ ಅತಿದೊಡ್ಡ ಅಕ್ವೇರಿಯಂ ಪ್ಯಾರಡೈಸ್, ಬೆಂಗಳೂರಿನ ಪ್ರಮುಖ ಜಲಜೀವಿ ಆಕರ್ಷಣೆಯೊಂದಾಗಿ, ಜಗತ್ತಿನ ಅತ್ಯಂತ ಅಪರೂಪದ ತಾಜಾ ನೀರಿನ ಮೀನುಗಳಲ್ಲಿ ಒಂದಾದ ಚೆಲ್ ಸ್ನೇಕ್‌ಹೆಡ್ (Channa amphibeus) ಸಾರ್ವಜನಿಕ ಪ್ರದರ್ಶನಕ್ಕೆ ತಂದಿರುವುದನ್ನು ಹೆಮ್ಮೆಯಿಂದ ಘೋಷಿಸುತ್ತದೆ.

ಪ್ರಸ್ತುತ ಜಗತ್ತಿನಾದ್ಯಂತ ಕೇವಲ ನಾಲ್ಕು ಮಾದರಿಗಳು ಮಾತ್ರ ದಾಖಲಾಗಿರುವುದರಿಂದ, ಈ ಅಪರೂಪದ ಸೇರ್ಪಡೆ ಬೆಂಗಳೂರು ನಗರಕ್ಕೆ ಐತಿಹಾಸಿಕ ಸಾಧನೆ ಹಾಗೂ ಜಾಗತಿಕ ತಾಜಾ ನೀರಿನ ಸಂರಕ್ಷಣೆಯ ಕ್ಷೇತ್ರದಲ್ಲಿ ಮಹತ್ವದ ಕ್ಷಣವಾಗಿದೆ.

ಒಂದು ಕಾಲದಲ್ಲಿ ಅಳಿವಿನ ಅಂಚಿನಲ್ಲಿದೆ ಎಂದು ಭಾವಿಸಲ್ಪಟ್ಟ ಚೆಲ್ ಸ್ನೇಕ್‌ಹೆಡ್, ಅತ್ಯಂತ ಅಪರೂಪದ ಹಾಗೂ ಸೀಮಿತ ತಾಜಾ ನೀರಿನ ವಾಸಸ್ಥಳಗಳಿಗೆ ಮೂಲವಾದ ಜೀವಿ. ಇದರ ಅಕ್ವೇರಿಯಂ ಪ್ಯಾರಡೈಸ್‌ನಲ್ಲಿ ಇರುವಿಕೆ, ಜಗತ್ತಿನ ಕೆಲವೇ ಆರಿಸಿಕೊಂಡ ಸ್ಥಳಗಳ ಪೈಕಿ ಬೆಂಗಳೂರನ್ನು ಸೇರಿಸುತ್ತದೆ, ಈ ಅತ್ಯಂತ ಅಪರೂಪದ ಮೀನಿನ ಸಂರಕ್ಷಣೆಯ ಹೊಣೆ ಹೊತ್ತಿರುವ ಸ್ಥಳಗಳಾಗಿವೆ.

“ಇದು ಕೇವಲ ಅಕ್ವೇರಿಯಂ ಪ್ಯಾರಡೈಸ್‌ಗೆ ಮಾತ್ರವಲ್ಲ, ಬೆಂಗಳೂರು ನಗರಕ್ಕೂ ಹೆಮ್ಮೆಯ ಕ್ಷಣ,” ಎಂದು ಸಂಸ್ಥೆಯ ಸನ್ನಿ ಸಬರ್ವಾಲ್ ತಿಳಿಸಿದ್ದಾರೆ. “ಜಗತ್ತಿನ ಕೇವಲ ನಾಲ್ಕು ಚೆಲ್ ಸ್ನೇಕ್‌ಹೆಡ್‌ಗಳಲ್ಲಿ ಒಂದನ್ನು ಇಲ್ಲಿ ಪ್ರದರ್ಶಿಸುವುದು, ಸಂರಕ್ಷಣೆ, ಹೊಣೆಗಾರ ಅಕ್ವೇರಿಯಂ ಕ್ರಮಗಳು ಮತ್ತು ಸಾರ್ವಜನಿಕ ಶಿಕ್ಷಣದ ಮೇಲಿನ ನಮ್ಮ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.”

ಚೆಲ್ ಸ್ನೇಕ್‌ಹೆಡ್ ಅದರ ಸಹಜ ವಾಸಸ್ಥಳವನ್ನು ಹೋಲುವಂತೆ ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ, ನಿಯಂತ್ರಿತ ಪರಿಸರದಲ್ಲಿ ಪಾಲಿಸಲಾಗುತ್ತಿದ್ದು, ಇದರ ಆರೋಗ್ಯ ಮತ್ತು ಕಲ್ಯಾಣಕ್ಕೆ ಅತ್ಯುತ್ತಮ ಪರಿಸ್ಥಿತಿಯನ್ನು ಒದಗಿಸಲಾಗುತ್ತಿದೆ. ಅಪರೂಪದ ಹಾಗೂ ಅಪಾಯದಲ್ಲಿರುವ ತಾಜಾ ನೀರಿನ ಜೀವಿಗಳ ಕುರಿತು ಸಂಶೋಧನೆ ಮತ್ತು ಜಾಗೃತಿ ಮೂಡಿಸಲು, ಅಕ್ವೇರಿಯಂ ಪ್ಯಾರಡೈಸ್ ನಿರಂತರವಾಗಿ ಜಲಜೀವಿ ತಜ್ಞರು ಮತ್ತು ಸಂರಕ್ಷಣಾ ಪರಿಣಿತರೊಂದಿಗೆ ಸಹಕರಿಸುತ್ತಿದೆ.

ಈ ಅಪೂರ್ವ ಜಾಗತಿಕ ಪ್ರದರ್ಶನ ಮತ್ತು ಮನಮುಟ್ಟುವ ಜೀವಂತ ಜಲ ಪ್ರದರ್ಶನಗಳೊಂದಿಗೆ, ಅಕ್ವೇರಿಯಂ ಪ್ಯಾರಡೈಸ್ ತನ್ನನ್ನು ಬೆಂಗಳೂರು ನಗರದ ಅತ್ಯಂತ ವಿಶಿಷ್ಟ ಕುಟುಂಬ ಹಾಗೂ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿ ಮತ್ತಷ್ಟು ಬಲಪಡಿಸಿದೆ.

ಅಕ್ವೇರಿಯಂ ಪ್ಯಾರಡೈಸ್ ಕುರಿತು : – ಬೆಂಗಳೂರು ನಗರದಲ್ಲಿರುವ ಅಕ್ವೇರಿಯಂ ಪ್ಯಾರಡೈಸ್, ಸಂರಕ್ಷಣೆ, ಶಿಕ್ಷಣ ಮತ್ತು ಆಕರ್ಷಕ ಜಲಜೀವಿ ಅನುಭವಗಳಿಗೆ ಸಮರ್ಪಿತವಾಗಿದೆ. ಅಪರೂಪದ ಹಾಗೂ ವಿಶಿಷ್ಟ ಜೀವಿಗಳನ್ನು ಪ್ರದರ್ಶಿಸುವುದರೊಂದಿಗೆ, ನೈತಿಕ ಹಾಗೂ ಜಾಗತಿಕ ಮಟ್ಟದ ಆರೈಕೆಯ ಮೂಲಕ ಜಲಜೀವ ವೈವಿಧ್ಯದ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದೆ.

District Legal Services Authority ಮಕ್ಕಳಲ್ಲಿ ಲೈಂಗಿಕ ಅರಿವು,ಬಾಲ್ಯ ವಿವಾಹ, ಹಾಗೂ ಫೋಕ್ಸೋ ವಿಚಾರಗಳ ಅರಿವು ಮೂಡಿಸಬೇಕು- ಎನ್.ಹೇಮಂತ್

0

District Legal Services Authority ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಮಕ್ಕಳೊಂದಿಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಮಕ್ಕಳಿಗೆ ಲೈಂಗಿಕ ಶಿಕ್ಷಣ, ಬಾಲ್ಯ ವಿವಾಹ ಹಾಗೂ ಪೋಕ್ಸೊ ವಿಚಾರಗಳ ಕುರಿತು ಅರಿವು ಮೂಡಿಸಬೇಕು ಎಂದು ಜಿ.ಪಂ ಸಿಇಓ ಹೇಮಂತ್.ಎನ್ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಿಷನ್ ಸುರಕ್ಷಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಮತ್ತು ವೈದ್ಯರು ಮಿಷನ್ ಸುರಕ್ಷಾ ಕಾರ್ಯಾಗಾರದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಜಿಲ್ಲೆಯಲ್ಲಿ 146 ಪೋಕ್ಸೊ ಪ್ರಕರಣಗಳು ದಾಖಲಾಗಿದೆ. ಹಾಗೂ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಇದನ್ನು ತಡೆಗಟ್ಟಲು, ಅಗತ್ಯವಾದ ತರಬೇತಿಯನ್ನು ಈ ಕಾರ್ಯಾಗಾರದಲ್ಲಿ ನೀಡಲಿದ್ದು, ಇದನ್ನು ಸಂಪೂರ್ಣವಾಗಿ ಶಿಕ್ಷಕರು ಬಳಕೆ ಮಾಡಿಕೊಂಡು ಶಾಲೆಯಲ್ಲಿ ಮಕ್ಕಳಿಗೆ ಕೂಡ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಇಂದಿನ ಮಕ್ಕಳಿಗೆ ಲೈಂಗಿಕ ಶಿಕ್ಷಣ ಮತ್ತು ಆಪ್ತ ಸಮಾಲೋಚನೆಗೆ ಒಳಪಡಿಸುವುದು ಬಹು ಮುಖ್ಯವಾಗಿದೆ. ಶಾಲೆ, ಮನೆ ಹಾಗು ಸಮಾಜದಲ್ಲಾಗುವ ಅನೇಕ ಘಟನೆಗಳು ಅವರ ಮೇಲೆ ಪರಿಣಾಮ ಬೀರುತ್ತದೆ. ಅದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ತಪ್ಪು ದಾರಿಯನ್ನು ತುಳಿಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಶಿಕ್ಷಕರ ಹಾಗೂ ವೈದ್ಯರು ಪ್ರತಿ ಮಕ್ಕಳಿಗೆ ಆಪ್ತ ಸಮಾಲೋಚನೆ ಮಾಡುವ ಮೂಲಕ ಅವರ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಬೇಕು.
ಸಂಕುಚಿತ ಭಾವನೆ ತೆಗೆದು ಹಾಕುವುದು, ಶಿಕ್ಷಕರು ಮತ್ತು ವೈದ್ಯರು ಪ್ರತಿ ತಿಂಗಳು ಆಪ್ತ ಸಮಾಲೋಚನೆ ಮಾಡುವುದು ಹಾಗೂ ಬಾಲ್ಯ ವಿವಾಹದ ಮೇಲೆ ಏರಿರುವ ಮೂಡನಂಭಿಕೆ ಹೋಗಲಾಡಿಸುವುದು ಈ ಕಾರ್ಯಾಗಾರದ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಶಿಕ್ಷಕರು, ವೈದ್ಯರು ಕೆಲಸ ಮಾಡಬೇಕು. ಈ ಕುರಿತು ಕಾವಲು ಸಮಿತಿಯಲ್ಲಿ, ಗ್ರಾಮ ಪಂಚಾಯಿತಿಯ ಮಕ್ಕಳ ಸಭೆಯಲ್ಲಿ ಚರ್ಚೆಯಾಗಬೇಕು. ಶಿಕ್ಷಣ ಇಲಾಖೆ ಇದರ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಜಾಹೀರಾತು ಸಿದ್ದಪಡಿಸಿ ಜಾಗೃತಿ ಮೂಡಿಸಬೇಕು. ಇಂತಹ ಕೆಲಸಗಳು ನಿರಂತವಾಗಿ ನಡೆದರೆ ಮಾತ್ರ ಬಾಲ್ಯವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಪೊಲೀಸ್ ಇನ್ಸ್ಪೆಕ್ಟರ್ ಗುರುರಾಜ್ ಮಾತನಾಡಿ, ನೈತಿಕವಾಗಿ ಮಕ್ಕಳು ಸದೃಢರಾಗಲು ತಂದೆ ತಾಯಿಯಂದಿರಷ್ಟೇ ಶಿಕ್ಷಕರ ಪಾತ್ರವೂ ಮುಖ್ಯವಾಗಿದೆ. ಆದರೆ ಇತ್ತೀಚೆಗೆ ಮಕ್ಕಳ ಅಪರಾಧ ಪ್ರಕರಣದಲ್ಲಿ ಶಿಕ್ಷಕರುಗಳು ಎರಡನೇ ಆರೋಪಿಯಾಗಿ ಬದಲಾಗುತ್ತಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಮೇಲೆ ಆಗುವ ದೌರ್ಜನ್ಯವನ್ನು ಶಿಕ್ಷಕರ ಬಳಿ ಬಂದು ಹೇಳಿದರೂ ಶಿಕ್ಷಕರು ಅದನ್ನು ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಪೋಕ್ಸೋ ಸೆಕ್ಷನ್ 21 ರಡಿಯಲ್ಲಿ 2 ನೇ ಆರೋಪಿಯಾಗಿ ದಾಖಲಾಗುತ್ತಿದ್ದಾರೆ. ಈ ಬಗ್ಗೆ ಎಲ್ಲಾ ಶಿಕ್ಷಕರು ಅರಿತುಕೊಳ್ಳಬೇಕು. ಇಂತಹ ವಿಚಾರ ಶಿಕ್ಷಕರ ಗಮನಕ್ಕೆ ಬಂದ ಕೂಡಲೇ 112 ಅಥವಾ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸಿ ದೂರು ನೀಡಬೇಕು. ಮಕ್ಕಳಿಗೂ ಸಹ ಸಹಾಯವಾಣಿಯ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಮಕ್ಕಳ ಹೊಣೆಗಾರಿಕೆ ಶಿಕ್ಷಕರದಾಗಿದ್ದು, ಅವರಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್, ಇತರೆ ವಿಷಯಗಳ ಬಗ್ಗೆ ತಿಳಿಸಬೇಕು. ಅಶ್ಲೀಲ ಪದಗಳ ಬಳಕೆ, ಖಾಸಗಿ ಅಂಗಗಳನ್ನು ಮುಟ್ಟುವುದು, ಖಾಸಗಿ ವಿಡಿಯೋ, ಫೋಟೋ ಹಂಚಿಕೆ ಮಾಡುವುದು ತಪ್ಪು. ಇಂತಹ ಅಪರಾಧ ಕೃತ್ಯ ಮಾಡಿದರೆ 67 ಬಿ ಐಐಟಿ ಪ್ರಕಾರ ಶಿಕ್ಷೆ ನೀಡಲಾಗುತ್ತದೆ ಎಂಬ ಕಾನೂನಿನ ಮಾಹಿತಿಯನ್ನು ಮಕ್ಕಳಿಗೆ ತಿಳಿಸಬೇಕು ಎಂದರು.
District Legal Services Authority ಡಾ.ವೀಣಾಭಟ್ ಉಪನ್ಯಾಸ ನೀಡಿ, ಸಮಾಜವು ಶಿಕ್ಷಿತವಾಗುತ್ತಿದ್ದರೂ ಬಾಲ ಗರ್ಭಿಣಿಯರ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಮಕ್ಕಳಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ ವ್ಯಾಪಕವಾಗುತ್ತಿದೆ. ಇದರಿಂದಾಗಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಗಂಡು ಹೆಣ್ಣು ಅನ್ನದೇ ಎಲ್ಲಾ ಮಕ್ಕಳಿಗೂ ಇದರ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ನೈತಿಕ ಶಿಕ್ಷಣದ ಜೊತೆಗೆ ಲೈಂಗಿಕ ಶಿಕ್ಷಣವೂ ಮಕ್ಕಳಿಗೆ ಅವಶ್ಯಕವಾಗಿದೆ. ಬಾಲ್ಯ ವಿವಾಹ, ಪೋಕ್ಸೋ ಕೃತ್ಯಗಳ ಬಗ್ಗೆ ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಅರಿವು ಮೂಡಿಸಬೇಕು ಎಂದರು.
ಹದಿಹರೆಯದಲ್ಲಿ ದೈಹಿಕವಾಗಿ, ಮಾನಸಿಕವಾಗಿ, ಭಾವನ್ಮಾತಕ, ಸಾಮಾಜಿಕ ಹಾಗೂ ನೈತಿಕವಾಗಿ ಬದಲಾವಣೆ ಉಂಟಾಗಲಿದ್ದು, ಸರಿಯಾದ ಮಾರ್ಗದರ್ಶನ ಇಲ್ಲದಿದ್ದರೆ ಇದು ಅಸುರಕ್ಷಿತ ಲೈಂಗಿಕತೆಗೆ ಕಾರಣವಾಗಿ ಇದರಿಂದ ಗರ್ಭದಾರಣೆ, ಲೈಂಗಿಕ ಸೋಂಕು, ಹೆಚ್‌ಐವಿ/ಏಡ್ಸ್ ಕಾಯಿಲೆಗಳಿಗೆ ತುತ್ತಾಗುವಂತೆ ಮಾಡಬಹುದು. ಇನ್ನೊಂದೆಡೆ ಜಾಗತೀಕರಣದಿಂದ ಉಂಟಾಗಿರುವ ಪ್ಲಾಸ್ಟಿಕ್ ಬಳಕೆಗಳು ಅದರಿಂದ ಬಿಡುಗಡೆಯಾಗುವ ರಾಸಾಯನಿಕ ಅಂಶಗಳು ಮಕ್ಕಳ ಶರೀರಕ್ಕೆ ಸೇರಿ ಹಾರ್ಮೋನ್‌ನಲ್ಲಿ ಏರುಪೇರಾಗುತ್ತಿದ್ದು, ಇದು ಮಕ್ಕಳ ದೇಹದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿರ್ಯಾ ಎಂ.ಎಸ್.ಸಂತೋಷ್, ಜಿ ಪಂ ಯೋಜಾನಾಧಿಕಾರಿ ನಂದಿನಿ, ಬಿಇಓ ರಮೇಶ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್, ತಾಲ್ಲೂಕು ಇಓ ಪರಮೇಶ್ವರಪ್ಪ, ವಿವಿಧ ತಾಲ್ಲೂಕಿನ ಶಿಕ್ಷಕರುಗಳು, ನೋಡಲ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ಮೆಗ್ಗಾನ್ ಆಸ್ಪತ್ರೆ ಶವಾಗಾರದಲ್ಲಿ ಮೃತ ಶೇಖರಪ್ಪ ಎಂಬುವವರ ಶವ ಇರಿಸಿದೆ: ಕುಂಸಿ ಪೊಲೀಸ್ ಠಾಣೆ ಪ್ರಕಟಣೆ

0

ತುಮಕೂರು ದಿಬ್ಬೂರು ರಸ್ತೆ ವಾಸಿ ಶೇಖರಪ್ಪ ಎಂಬುವವರ ಮಗ ರಾಜು ಎಂಬ 37 ವರ್ಷ ವ್ಯಕ್ತಿ ಡಿ. 09 ರಂದು ಕುಂಸಿ ಆಸ್ಪತ್ರೆಗೆ ಎದೆಯುರಿ ಎಂದು ಸ್ವಯಂ ದಾಖಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಡಿ.12 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತೆಗೆ ಅಂಬುಲೆನ್ಸ್ ಮೂಲಕ ಕಳುಹಿಸಿದ್ದು, ಮಾರ್ಗ ಮಧ್ಯೆ ಮೃತ ಪಟ್ಟಿರುತ್ತಾರೆ.

ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಈ ವ್ಯಕ್ತಿಯು 5.8 ಅಡಿ ಎತ್ತರ, ದೃಢಕಾಯ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಮೈಮೇಲೆ ಮೆರೂನ್ ಕಲರ್ ಶರ್ಟ್, ಕ್ರೀಮ್ ಕಲರ್ ಪ್ಯಾಂಟ್ ಧರಿಸಿರುತ್ತಾನೆ.

ಈ ಮೃತನ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ಕುಂಸಿ ಪೊಲೀಸ್ ಠಾಣೆ ದೂ.ಸಂ.: 9480803351/ 08182-261412/ 261413 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

Chikmagalur Institute of Medical Sciences ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಖರೀದಿಸಿರುವ ಔಷಧಿ ಟೆಂಡರ್ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚನೆ : ಸಚಿವ ಡಾ.ಶರಣಪ್ರಕಾಶ ಪಾಟೀಲ್

0

Chikmagalur Institute of Medical Sciences ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಖರೀದಿಸಿರುವ ಔಷಧಿ ಟೆಂಡರ್ ಬಗ್ಗೆ ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು. ಸದರಿ ಸಮಿತಿ ನೀಡುವ ವರದಿ ಆಧರಿಸಿ ಮುಂದಿನ ಕ್ರಮವಹಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ: ಶರಣಪ್ರಕಾಶ ಆರ್.ಪಾಟೀಲ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಶಾಸಕರಾದ ಸಿ.ಟಿ.ರವಿ, ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಪ್ರತಾಪ್ ಸಿಂಹ ನಾಯಕ್ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದರು.

ಕೊಡಗು, ಹಾವೇರಿ, ರಾಯಚೂರು ಮೆಡಿಕಲ್ ಕಾಲೇಜುಗಳಲ್ಲಿ ಕರೆದಿರುವ ಟೆಂಡರ್ ಮೊತ್ತಕ್ಕೂ ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನಲ್ಲಿ ಕರೆದಿರುವ ಟೆಂಡರ್ ಮೊತ್ತಕ್ಕೂ ಔಷಧಗಳ ದರಗಳಲ್ಲಿ ವ್ಯತ್ಯಾಸ ಕಂಡು ಬಂದಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅವಶ್ಯವಿದ್ದ ರೂ.4.90 ಕೋಟಿ ಮೊತ್ತದ ಔಷಧಗಳ ಪೈಕಿ ತುರ್ತು ಅವಶ್ಯವಿದ್ದ ರೂ.36 ಲಕ್ಷ ಮೊತ್ತದ ಔಷಧಗಳ ಸರಬರಾಜನ್ನು ಮಾತ್ರ ಪಡೆದು, ಉಳಿದ ಔಷಧಗಳ ಸರಬರಾಜು ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿರುತ್ತದೆ. ಔಷಧಗಳ ದರಗಳು ಹೆಚ್ಚಳವಾಗಿರುವ ಬಗ್ಗೆ, ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸಲು ತಜ್ಞರ ಸಮಿತಿಯೊಂದನ್ನು ರಚಿಸಿ, ವರದಿ ಪಡೆದು, ಮುಂದಿನ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ಸದನಕ್ಕೆ ವಿವರಿಸಿದರು.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ದಿನಾಂಕ:31-03-2025 ರವರೆಗೆ ಕೆ.ಎಸ್ .ಡಿ.ಎಲ್.ಎಸ್. ವತಿಯಿಂದ ಉಚಿತವಾಗಿ ಜೀವ ರಕ್ಷಕ ಔಷಧಗಳನ್ನು ಸರಬರಾಜು ಪಡೆಯಲಾಗುತ್ತಿದ್ದು, ಸದರಿ ಔಷಧಿಗಳನ್ನು ಹೊರತುಪಡಿಸಿ, ಅವಶ್ಯಕವಿರುವ 204 ಜೀವರಕ್ಷಕ ಔಷಧಿಗಳನ್ನು 2024-25ನೇ ಸಾಲಿಗೆ ಟೆಂಡರ್ ಮುಖೇನ ಖರೀದಿಸಲಾಗಿದ್ದು, ಜಿಲ್ಲಾ ಆಸ್ಪತ್ರೆಯು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಗೊಂಡ ನಂತರ 2025-26ನೇ ಸಾಲಿಗೆ 1 ವರ್ಷದ ಅವಧಿಗೆ ಜಾರಿಗೆ ಬರುವಂತೆ ಕ್ಲಿನಿಕಲ್ ವಿಭಾಗದ ಮುಖ್ಯಸ್ಥರುಗಳು ನೀಡಿರುವ ಬೇಡಿಕೆ ಪಟ್ಟಿಯಂತೆ ಅತ್ಯುತ್ತಮ ಗುಣಮಟ್ಟದ 416 ಜೀವ ರಕ್ಷಕ ಔಷಧಿಗಳನ್ನು ಪಡೆಯಲು ನಿಯಮಾನುಸಾರ ಟೆಂಡರ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿರುತ್ತದೆ.

ಈ ಹಂತದಲ್ಲಿ, 2024-25ನೇ ಸಾಲಿನಲ್ಲಿ ಜಿಲ್ಲಾಸ್ಪತ್ರೆಗೆ ಟೆಂಡರ್ ಮೂಲಕ ಖರೀದಿ ಮಾಡಲಾದ ಔಷಧಗಳ ದರಗಳನ್ನು ವೈದ್ಯಕೀಯ ಸಂಸ್ಥೆಯಲ್ಲಿ ಪ್ರಸಕ್ತ ಟೆಂಡರ್ ಕರೆಯಲಾಗಿರುವ ಔಷಧಗಳ ದರಗಳೊಂದಿಗೆ ಹೋಲಿಕೆ ಮಾಡಲಾಗಿ ಕೆಲವೊಂದು ಔಷಧಗಳ ಬೆಲೆಯಲ್ಲಿ ಗಣನೀಯ ವ್ಯತ್ಯಾಸ ಕಂಡು ಬಂದಿರುತ್ತದೆ. ಹಾಗೆಯೆ, ಕೊಡಗು, ಹಾವೇರಿ ಮತ್ತು ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ ಔಷಧಗಳನ್ನು ಟೆಂಡರ್ ಮೂಲಕ ಖರೀದಿಸಲಾಗುವ ದರಗಳನ್ನು ಪರಿಶೀಲಿಸಲಾಗಿ, ಕೆಲವೊಂದು ಔಷಧಗಳ ದರಗಳಲ್ಲಿ ಹೆಚ್ಚಳ ಕಂಡು ಬಂದಿರುತ್ತದೆ.

Chikmagalur Institute of Medical Sciences ಸಾಮಾನ್ಯವಾಗಿ, ವೈದ್ಯಕೀಯ ಕಾಲೇಜುಗಳ ಬೋಧಕ ಆಸ್ಪತ್ರೆಗಳಲ್ಲಿ ವಿವಿಧ ರೀತಿಯ ಹಾಸಿಗೆ ಸಾಮಥ್ರ್ಯವಿದ್ದು, ಆಯಾಯ ಸಂಸ್ಥೆಗಳು ಉಪಯೋಗಿಸುವ ಔಷಧ/ವಸ್ತುಗಳ ಬ್ರಾಂಡ್/ಕಂಪನಿ ಹಾಗೂ ಸಂಗ್ರಹಿಸುವ ಪ್ರಮಾಣ ಇತ್ಯಾದಿಗಳು ಒಂದು ಸಂಸ್ಥೆಗೂ ಮತ್ತೊಂದು ಸಂಸ್ಥೆಗೂ ವ್ಯತ್ಯಾಸವಾಗುವುದರಿಂದ ಎಲ್ಲಾ ವೈದ್ಯಕೀಯ ಸಂಸ್ಥೆಗಳು ಏಕರೂಪ ದರದಲ್ಲಿ ಔಷಧಗಳನ್ನು ಸಂಗ್ರಹಿಸಲು ಸಾಧ್ಯವಾಗುವುದಿಲ್ಲ. ಬದಲಿಗೆ, ಔಷಧಿ/ವಸ್ತುಗಳ ಪರಿಮಾಣ, ಗುಣಮಟ್ಟ, ಸಂಯೋಜನೆ (Composition) ಇತ್ಯಾದಿ ಆಧಾರದ ಮೇಲೆ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಲ್ಲಿ ದರಗಳನ್ನು ನಿಗದಿಪಡಿಸಿ, ವಿವಿಧ ಸ್ಥಳಗಳಲ್ಲಿ ವಿವಿಧ ದರಗಳಲ್ಲಿ ಔಷಧಗಳನ್ನು ಖರೀದಿಸಲಾಗುತ್ತದೆ ಎಂದು ತಿಳಿಸಿದರು.