Sunday, May 17, 2026
Sunday, May 17, 2026
Home Blog Page 152

ನೀರಾವರಿಗೆ ಅಕ್ರಮ ನೀರು ಬಳಕೆ;ತನಿಖೆ ನಡೆಸಲು ತಂಡ ರಚನೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

0

ಮಹಾರಾಷ್ಟ್ರ ರಾಜ್ಯವು ನೀರಾವರಿ ಯೋಜನೆಗಳಿಗೆ ಅಕ್ರಮವಾಗಿ ನೀರು ಬಳಕೆ ಮಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯದ ಅಧಿಕಾರಿಗಳ ಪ್ರತ್ಯೇಕ ತಂಡ ರಚನೆ ಮಾಡಿ, ವರದಿ ಪಡೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಿಳಿಸಿದರು.

ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಡಾ. ತಳವಾರ್ ಸಾಬಣ್ಣ ಅವರ ನಿಯಮ 33 ರ ಸೂಚನೆಗೆ ಉತ್ತರಿಸಿ ಮಾತನಾಡಿದರು.

ಕೃಷ್ಣ ಜಲವಿವಾದ ನ್ಯಾಯಾಧಿಕರಣ- 1 (ಬಚಾವತ್ ನ್ಯಾಯಾಧಿಕರಣ) 1976 ರಲ್ಲಿ ಅಂತಿಮ ತೀರ್ಪಿನ Clause-IX(A)(ii)(b) ಪ್ರಕಾರ ಮಹಾರಾಷ್ಟ್ರ ರಾಜ್ಯವು ಭೀಮಾ ನದಿಯಿಂದ 95 ಟಿಎಂಸಿಗಿಂತ ಹೆಚ್ಚಾಗಿ ನೀರನ್ನು ಬಳಸಬಾರದೆಂದು ಹಾಗೂ 3)(iii) ಪ್ರಕಾರ ಕರ್ನಾಟಕ ರಾಜ್ಯವು ಭೀಮಾ ಮುಖ್ಯ ನದಿಯಿಂದ 15 ಟಿಎಂಸಿಗಿಂತ ಹೆಚ್ಚು ಬಳಸಬಾರದೆಂದು ನಿಬರ್ಂಧವಿದೆ. ಸದರಿ ಅಂತಿಮ ತೀರ್ಪಿನಲ್ಲಿ ಕಣಿವೆ ಮಾಡಿರುವ ಒಟ್ಟಾರೆ ಹಂಚಿಕೆಯಲ್ಲಿ ಯಾವುದೇ ರಾಜ್ಯವು ಇನ್ನೊಂದು ರಾಜ್ಯಕ್ಕೆ ಬಿಡುಗಡೆ ಮಾಡುವ ಕುರಿತು ಆದೇಶವಿರುವುದಿಲ್ಲ.

ಜಲವಿವಾದ ನ್ಯಾಯಾಧಿಕರಣ-1 ವಿಧಿಸಿರುವ ನಿರ್ಬಂಧಕ್ಕೆ ಒಳಪಟ್ಟು ಕಣಿವ ಯೋಜನೆಗಳನ್ನು ಕೈಗೊಂಡಿರುತ್ತವೆ.

ಸೀನಾ ನದಿಯು ಮಹಾರಾಷ್ಟ್ರದ ಭೀಮಾ ನದಿಯ ಒಂದು ಉಪನದಿಯಾಗಿದೆ. ಕೃಷ್ಣ ಜಲವಿವಾದ ನ್ಯಾಯಾಧೀಕರಣ-॥ ರ ಮುಂದೆ ಮಹಾರಾಷ್ಟ್ರ ರಾಜ್ಯವು ಸಲ್ಲಿಸಿರುವ ಮಾಹಿತಿಯ ಪ್ರಕಾರ ಮಹಾರಾಷ್ಟ್ರ, ರಾಜ್ಯವು ಉಜ್ಜನಿ ಜಲಾಶಯದಿಂದ ನೀರನ್ನು ಸೀನಾ ನದಿಗೆ ತಿರುವುಗೊಳಿಸುತ್ತಿದೆ ಹಾಗೂ ಸದರಿ ಯೋಜನೆಯನ್ನು ಮಹಾರಾಷ್ಟ್ರ ರಾಜ್ಯಕ್ಕೆ ಮುಖ್ಯ ಭೀಮಾ ನದಿಯಲ್ಲಿ ನೀರನ್ನು ಬಳಸಲು ವಿಧಿಸಿರುವ ನಿಬರ್ಂಧದಡಿಯಲ್ಲಿ ಕೈಗೊಂಡಿರುವುದಾಗಿ ತಿಳಿದು ಬಂದಿದೆ.

ಕರ್ನಾಟಕ ರಾಜ್ಯವು ಕೃಷ್ಣ ಜಲವಿವಾದ ನ್ಯಾಯಾಧಿಕರಣ- 2 ರ ಮುಂದೆ ಭೀಮಾ ನದಿ ಉಪ ಕೊಳ್ಳದಲ್ಲಿನ ಬಳಕೆಗಾಗಿ 12 ಟಿ.ಎಂ.ಸಿ. ಹೆಚ್ಚುವರಿ ನೀರಿನ ಬೇಡಿಕೆಯನ್ನು ಮಂಡಿಸಿತ್ತು. ಆದರೆ ನ್ಯಾಯಾಧಿಕರಣವು ರಾಜ್ಯದ ಬೇಡಿಕೆಯನ್ನು ಪರಿಗಣಿಸಿರುವುದಿಲ್ಲ. ಕೃμÁ್ಣ ಜಲವಿವಾದ ನ್ಯಾಯಾಧಿಕರಣ-2 ರ ಆದೇಶದನ್ವಯ ಮಹಾರಾಷ್ಟ್ರ ರಾಜ್ಯವು 3 ಟಿ.ಎಂ.ಸಿ. ನೀರನ್ನು ನದಿಯಲ್ಲಿನ ಕನಿಷ್ಠ ಹರಿವಿಗಾಗಿ ಬಿಡುಗಡೆ ಮಾಡಬೇಕಾಗಿದ್ದು, ಇದರಲ್ಲಿ ವಾರ್ಷಿಕ (ಡಿಸೆಂಬರ್ ನಿಂದ ಮೇ ಅಂತ್ಯದವರೆಗೆ) ಭೀಮಾ ನದಿಯಲ್ಲಿ 1 ಟಿ.ಎಂ.ಸಿ. ನೀರನ್ನು ಮಹಾರಾಷ್ಟ್ರ ಕರ್ನಾಟಕ ಗಡಿ ಪ್ರದೇಶದ ತಾಕಳಿ ಮಾಪನ ಕೇಂದ್ರದಲ್ಲಿ ನದಿಯಲ್ಲಿನ ಕನಿಷ್ಠ ಹರಿವಿಗಾಗಿ ಹರಿಸಬೇಕೆಂದು ಸೂಚಿಸಲಾಗಿದೆ. ಈ ಪ್ರಮಾಣದ ನೀರನ್ನು ಇತರೆ ಉದ್ದೇಶಗಳಿಗೆ ಬಳಸಲು ರಾಜ್ಯಕ್ಕೆ ಅವಕಾಶವಿರುವುದಿಲ್ಲ. ಸದರಿ ಕೃಷ್ಣಜಲವಿವಾದ ನ್ಯಾಯಾಧಿಕರಣ-2 ರ ಆದೇಶವು ಗೆಜೆಟ್ ಪ್ರಕಟಣೆ ಆಗಬೇಕಾಗಿದೆ.

ಮಹಾರಾಷ್ಟ್ರ ರಾಜ್ಯವು ಕರ್ನಾಟಕ ರಾಜ್ಯಕ್ಕೆ ನಿಯಂತ್ರಿತ ಬಿಡುಗಡೆ (Regulated releases) ಮಾಡಲು ನ್ಯಾಯಮೂರ್ತಿ ಬಚಾವತ್ ರವರ ಆಯೋಗದ ವರದಿಯಲ್ಲಿ ಆದೇಶವಿರುವುದಿಲ್ಲ. ಹಾಗೂ ಕಣಿವೆ ರಾಜ್ಯಗಳು ಕುಡಿಯುವ ನೀರಿಗೆ ಹಾಗೂ ಕೈಗಾರಿಕೆಗಳಿಗೆ ಅಗತ್ಯವಿರುವ ನೀರನ್ನು ಹಂಚಿಕೆಯಾಗಿರುವ ಪ್ರಮಾಣದಲ್ಲೇ ಭರಿಸಬೇಕಾಗಿದೆ.

ಸಾಮಾನ್ಯ ವರ್ಷ (Normal Year) ಗಳಲ್ಲಿ ಭೀಮಾ ನದಿ ಪಾತ್ರದಡಿ ನೀರಿನ ಕೊರತೆ ಕಂಡುಬಂದಿರುವುದಿಲ್ಲ. ಕೊರತೆಯಾದ ಜಲ ವರ್ಷಗಳಲ್ಲಿ ಕುಡಿಯುವ ಹಾಗೂ ಇತರೆ ಅಗತ್ಯಗಳಿಗೆ ನೀರನ್ನು ಮಹಾರಾಷ್ಟ್ರ ರಾಜ್ಯದಿಂದ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಭೀಮಾ ನದಿ 786 ಕಿ.ಮೀ.ಗಳ ಒಟ್ಟು ಹರಿವಿನಲ್ಲಿ ಕರ್ನಾಟಕದಲ್ಲಿ 206 ಕಿ.ಮೀ. ಹರಿಯುವ ಭೀಮಾ ನದಿ ನೀರನ್ನು ನಂಬಿಕೊಂಡು 164 ಹಳ್ಳಿಗಳ ಜನರು ಬದುಕುತ್ತಿದ್ದಾರೆ. 1976ರಲ್ಲಿ ನ್ಯಾ.ಬಚಾವತ್ ಆಯೋಗದ ತೀರ್ಪಿನಂತೆ ಮಹಾರಾಷ್ಟ್ರಕ್ಕೆ 95 ಟಿಎಂಸಿ ಮತ್ತು ಕರ್ನಾಟಕ್ಕೆ 15 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಬೇಕಿತ್ತು. ಮಹಾರಾಷ್ಟ್ರ ರಾಜ್ಯ ಭೀಮಾ ನದಿಯ ನೀರನ್ನು ಅಕ್ರಮವಾಗಿ ಸುರಂಗ ಮಾರ್ಗದ ಮೂಲಕ ಸೀನಾ ನದಿಗೆ ಸೇರಿಸಿಕೊಳ್ಳುವುದರ ಜೊತೆಗೆ ಅನಧಿಕೃತ ಬ್ಯಾರೇಜ್ ಗಳನ್ನು ನಿರ್ಮಿಸಿ 95 ಟಿಎಂಸಿ ಗಿಂತಲೂ ಹೆಚ್ಚಿನ ನೀರನ್ನು ಬಳಸಿಕೊಳ್ಳುತ್ತಿದ್ದಾರೆ. ಇದು ನ್ಯಾ.ಬಚಾವತ್ ಆಯೋಗದ ತೀರ್ಪಿನ ಉಲ್ಲಂಘನೆಯಾಗಿದೆ. ಉಜನಿ ಅಣೆಕಟ್ಟೆಯಿಂದ ಡೆಡ್ ಸ್ಟೋರೇಜ್ ನೀರನ್ನು ಬಳಕೆ ಮಾಡುತ್ತಾರೆ. ಆದರೆ ಕರ್ನಾಟಕಕ್ಕೆ ಬಿಡುತ್ತಿಲ್ಲ. v ಬೇಸಿಗೆ ಕಾಲದಲ್ಲಿ ನದಿ ನೀರಿನ ಕೊರತೆಯಿಂದ ರೈತರು ಬೆಳೆದ ಲಕ್ಷಾಂತರ ಎಕರೆ ಕಬ್ಬು ಮತ್ತು ಇತರೆ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಕಳೆದ ವರ್ಷದ ಬೇಸಿಗೆಯಲ್ಲಿ ಭೀಮಾನದಿ ನೀರು ಸಂಪೂರ್ಣ ಬತ್ತಿಹೋಗಿದ್ದರಿಂದ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಜನರ ಕುಡಿಯುವ ನೀರು, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗಿತ್ತು. ಪ್ರತಿ ವರ್ಷ ಭೀಮಾ ತೀರದ ಜನರು ಒಟ್ಟಾಗಿ ಅಮರಣಾಂತರ ಉಪವಾಸ ಸತ್ಯಾಗ್ರಹ ಮಾಡಿ ಕುಡಿಯಲು ಬೇಕಾಗುವ ನೀರನ್ನು ಬಿಡಿಸಿಕೊಳ್ಳುತ್ತಿದ್ದಾರೆ. ಕನಿಷ್ಠ ಕುಡಿಯುವ ನೀರಿಗೂ ಸಂಕಷ್ಟಕ್ಕೆ ಸಿಲುಕುತ್ತಿರುವ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಯ ಜನರಿಗೆ 15 ಟಿಎಂಸಿ ನೀರನ್ನು ಸಮರ್ಪಕವಾಗಿ ಬಳಕೆಯಾಗಲು ಹಾಗೂ ಮಹಾರಾಷ್ಟ್ರದ ಅಕ್ರಮ ನೀರಾವರಿ ಯೋಜನೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ಕುರಿತು ಡಾ.ತಳವಾರ್ ಸಾಬಣ್ಣ ಅವರು ಕೋರಿದ್ದರು.

D. K. Shivakumar ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿ ಅಧ್ಯಯನಕ್ಕೆ ಪ್ರತ್ಯೇಕ ಸಮಿತಿ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ

0

D. K. Shivakumar ಪ್ರತ್ಯೇಕವಾದ ಸಮಿತಿಯೊಂದನ್ನು ರಚಿಸಿ, ಕೃಷ್ಣ ಮೇಲ್ದಂಡೆ ಯೋಜನೆಯ ಸಂತ್ರಸ್ತರ ವಾಸ್ತವ ಪರಿಸ್ಥಿತಿಯ ಬಗ್ಗೆ ಅಧ್ಯಯನ ನಡೆಸಿ ಅವರಿಗೆ ಸಹಾಯಹಸ್ತ ಕಲ್ಪಿಸುವುದಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಹೇಳಿದರು.

ಕೃಷ್ಣ ಮೇಲ್ದಂಡೆ ಯೋಜನೆಯಡಿಯಲ್ಲಿ ವಸತಿ ಹಾಗೂ ಜಮೀನುಗಳನ್ನು ಕಳೆದುಕೊಂಡ ರೈತರಿಗೆ ಪುನರ್ ವಸತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ನಿಯಮ 330ರ ಮೇರೆಗೆ ಸದಸ್ಯರಾದ ನಿರಾಣಿ ಹಣಮಂತಪ್ಪ ರುದ್ರಪ್ಪ ಹಾಗೂ ಪಿ.ಹೆಚ್. ಪೂಜಾರ್ ಅವರು ಪರಿಷತ್ತಿನಲ್ಲಿ ಗುರುವಾರ ಮಂಡಿಸಿದ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರವು ಸಂತ್ರಸ್ಥರ ನೆರವಿಗೆ ಬದ್ಧವಾಗಿದೆ ಎಂದು ತಿಳಿಸಿದರು.

D. K. Shivakumar ಕೃಷ್ಣ ಮೇಲ್ದಂಡೆ ಯೋಜನೆಯ ಪ್ರದೇಶದ ಸಂತ್ರಸ್ತರಿಗೆ ಸಮಾಜದಲ್ಲಿ ಗೌರವ ಸಿಗುತ್ತಿಲ್ಲ. ಇಲ್ಲಿವರೆಗೆ ಈ ಭಾಗದಲ್ಲಿ ಶೇ.50ರಷ್ಡು ಮಾತ್ರ ನೀರಾವರಿಯಾಗಿದ್ದು, ಇದುವರೆಗೆ ಪೂರ್ಣ ಪ್ರಮಾಣದಲ್ಲಿ ನೀರಾವರಿ ಆಗಿರುವುದಿಲ್ಲ. ಇದುವರೆಗೆ 146 ಪುನರ್ವಸತಿ ಕೇಂದ್ರಗಳಿಗೆ ಅಧಿಕಾರಿಗಳು ಸರಿಯಾಗಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಏನಾಗಿದೆ ಎಂದು ನೋಡಿಲ್ಲ. ಇನ್ನೂ 20 ವರ್ಷಗಳ ಕಳೆದರೆ ಅಲ್ಲಿನ ಜನ ಘೇರಾವು ಹಾಕುವ ಪರಿಸ್ಥಿತಿ ಬರಬಹುದು. ಆಣೆಕಟ್ಟು ವಿಸ್ತರಣೆಯಿಂದಾಗಿ ಬಾಧಿತವಾದ ಗ್ರಾಮಗಳಲ್ಲಿನ ಸಂತ್ರಸ್ಥರ ಪರಿಸ್ಥಿತಿ ಸರಿ ಇಲ್ಲ ಎಂದು ಸದಸ್ಯರಾದ ಪಿ ಎಚ್ ಪೂಜಾರ ಹಾಗೂ ನಿರಾಣಿ ಹಣಮಂತ ರುದ್ರಪ್ಪ ಅವರು ಸದನದಲ್ಲಿ ನೋವು ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಸಹಕಾರ ಕೋರಿ 7 ನಿರ್ಣಯಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ

0

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಸಹಕಾರ ಕೋರಿದ 7 ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಬೆಂಗಳೂರು ಪ್ರದೇಶದಲ್ಲಿನ ರಾಷ್ಟ್ರೀಯ ಪ್ರಾಮುಖ್ಯತೆ ಸಂಸ್ಥೆಗಳನ್ನು ಉತ್ತರ ಕರ್ನಾಟಕ್ಕೆ ಸ್ಥಳಾಂತರ ಮಾಡುವುದು, ಕೃಷ್ಣಾ ಜಲವಿವಾದ ನ್ಯಾಯಧೀಕರಣ-2 ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸುವುದು, ಮಹಾರಾಷ್ಟ್ರದ ವಿದರ್ಭ ಅಭಿವೃದ್ಧಿಗೆ ಮಂಡಳಿಗೆ ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ಆರ್ಥಿಕ ನೆರವಿನ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ ರೂ.5000 ಕೋಟಿ ಆರ್ಥಿಕ ನೆರವು ನೀಡುವುದು, ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸುವುದು, ಕಳಸಾ ಬಂಡೋರಿ ಯೋಜನೆ ಅನುಷ್ಠಾನಕ್ಕೆ ಮಂಜೂರಾತಿ ನೀಡುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಶೇ.50 ರಿಂದ ಶೇ.56ರಷ್ಟು ಹೆಚ್ಚಿಸಿದ ಮೀಸಲಾತಿ ಪ್ರಮಾಣದ ಅಧಿಸೂಚನೆ ಮತ್ತು ಆದೇಶಗಳನ್ನು ಭಾರತ ಸಂವಿಧಾನ ಅನುಸೂಚಿ-9 ಸೇರಿಸುವಂತೆ ಕೋರಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಸದನದಲ್ಲಿ ನಿರ್ಣಯಗಳನ್ನು ಮಂಡಿಸಿದರು.

ಚರ್ಚೆ ಬಳಿಕ ಸದನವು ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಿತು. ಈ ನಿರ್ಣಯಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು.

ಡಿಸೆಂಬರ್ 20 ಮತ್ತು 21 ರಂದು ರೋಟರಿ ಡಿಸ್ಟ್ರಿಕ್ಟ್ ಮಲೆನಾಡು ಕ್ರೀಡೋತ್ಸವ

0

Rotary Club ಶಿವಮೊಗ್ಗ ನಗರವು ಬರುವ ಡಿಸೆಂಬರ್ 20 ಮತ್ತು 21 ರಂದು ಕ್ರೀಡೇಗಷ್ಟೇ ಅಲ್ಲ, ಸೇವೆ, ಆರೋಗ್ಯ ಮತ್ತು ಸ್ನೇಹದ ಹಬ್ಬಕ್ಕೆ ಸಾಕ್ಷಿಯಾಗಲಿದೆ.

ರೋಟರಿ ಡಿಸ್ಟ್ರಿಕ್ಟ್ 3182ರ ಆಶ್ರಯದಲ್ಲಿ, ಜಿಲ್ಲಾ ಗವರ್ನರ್ ರೊಟೇರಿಯನ್ ಶ್ರೀ ಕೆ. ಪಾಲಾಕ್ಷ ಅವರ ಮಾರ್ಗದರ್ಶನದಲ್ಲಿ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅವರ ಆತಿಥ್ಯದಲ್ಲಿ ಈ ಜಿಲ್ಲಾ ಮಟ್ಟದ ಮಲೆನಾಡು ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ. ನಾಲ್ಕು ಜಿಲ್ಲೆಗಳ ರೋಟರಿ ಕ್ಲಬ್‌ಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಕ್ರೀಡಾಕೂಟವು, ರೋಟರಿ ಪರಿವಾರಕ್ಕೆ ಒಂದು ಕ್ರೀಡಾ ಹಬ್ಬವಾಗಿಯೇ ರೂಪುಗೊಳ್ಳುತ್ತಿದೆ.

ಈ ಎರಡು ದಿನಗಳ ಕ್ರೀಡೋತ್ಸವದಲ್ಲಿ ನಾಲ್ಕು ಜಿಲ್ಲೆಗಳ 87 ರೋಟರಿ ಕ್ಲಬ್‌ಗಳಿಂದ ಸುಮಾರು 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ವರ್ಷಪೂರ್ತಿ ಸಮಾಜದ ಸೇವೆಗಳಲ್ಲಿ ನಿರತರಾಗಿರುವ ರೊಟೇರಿಯನ್ಸ್ ಮತ್ತು ಅವರ ಕುಟುಂಬದವರು, ಆರೋಗ್ಯ ಕಾಪಾಡಿಕೊಳ್ಳುವ ಜಾಗೃತಿ ಸಂದೇಶವನ್ನು ಕ್ರೀಡೆಗಳ ಮೂಲಕ ಸಾರುತ್ತಿದ್ದಾರೆ.

ವಿವಿಧ ಕ್ರೀಡಾ ಸ್ಪರ್ಧೆಗಳು

ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಶಟಲ್ ಬ್ಯಾಡ್ಮಿಂಟನ್, ಚೆಸ್, ಕ್ಯಾರಂ ಹಾಗೂ ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದ್ದು, ಎಲ್ಲಾ ವಯೋಮಾನದ ರೋಟರಿ ಪರಿವಾರದ ಸದಸ್ಯರಿಗೆ ಆಟಗಾರರಾಗಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಇದು ಕೇವಲ ಸ್ಪರ್ಧೆಯಲ್ಲ, ಆರೋಗ್ಯಕರ ಜೀವನಶೈಲಿಯ ಪ್ರೇರಣೆಯೂ ಹೌದು.

ಉದ್ಘಾಟನಾ ಸಮಾರಂಭ

ದಿನಾಂಕ: 20 ಡಿಸೆಂಬರ್ 2025
ಸ್ಥಳ: ಪಿ.ಇ.ಎಸ್. ಕಾಲೇಜು ಕ್ರೀಡಾಂಗಣ, ಶಿವಮೊಗ್ಗ
ಸಮಯ: ಸಂಜೆ 4.00

Rotary Club ಈ ಜಿಲ್ಲಾ ಕ್ರೀಡೋತ್ಸವವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ
ರೊಟೇರಿಯನ್ ಡಿ.ಎಸ್. ಅರುಣ್, ವಿಧಾನ ಪರಿಷತ್ ಸದಸ್ಯರು
ರೊಟೇರಿಯನ್ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯರು
ಹಾಗೂ ಶಿವಮೊಗ್ಗದ ಹೆಮ್ಮೆ, ಅಂತಾರಾಷ್ಟ್ರೀಯ ಶಟಲ್ ಬ್ಯಾಡ್ಮಿಂಟನ್ ಆಟಗಾರ ಪೃಥ್ವಿ ಕೆ. ರಾಯ್ ಅವರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅವರಿಗೆ ವಿಶೇಷ ಗೌರವ ಸನ್ಮಾನ ನೆರವೇರಲಿದೆ.

ಅನೇಕ ಮಾಜಿ ಜಿಲ್ಲಾ ಗವರ್ನರ್‌ಗಳು, ಜಿಲ್ಲಾ ಪದಾಧಿಕಾರಿಗಳು ಹಾಗೂ ರೋಟರಿ ನಾಯಕರು ಈ ಉದ್ಘಾಟನಾ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ದಿನಾಂಕ: 21 ಡಿಸೆಂಬರ್ 2025ರಂದು
ನೆಹರು ಕ್ರೀಡಾಂಗಣದಲ್ಲಿ ಮಧ್ಯಾಹ್ನ 3.00ಗಂಟೆಗೆ

ಸಮಾರೋಪ ಸಮಾರಂಭ ನಡೆಯಲಿದೆ
ಚನ್ನಬಸಪ್ಪ, ಶಾಸಕರು
ಕೆ. ಎಸ್. ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ರುದ್ರೇಗೌಡ ಎಸ್., ಮಾಜಿ ವಿಧಾನ ಪರಿಷತ್ ಸದಸ್ಯರು
ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಿವಮೊಗ್ಗದ ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ ಕುಮಾರಿ ಸಹನಾ ಮೋಹನ್ ಅವರನ್ನು ವಿಶೇಷ ಅತಿಥಿಯಾಗಿ ಗೌರವಿಸಿ ಸನ್ಮಾನಿಸಲಾಗುತ್ತದೆ.

ಈ ಮಹತ್ವದ ಜಿಲ್ಲಾ ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾ ಸಮಿತಿಯ ಚೇರ್ಮನ್ ರೊಟೇರಿಯನ್ ರವಿ ಕೂಟೋಜಿ, ಇವೆಂಟ್ ಚೇರ್ಮನ್ ರೊಟೇರಿಯನ್ ಸಿ.ಎನ್. ಮಲ್ಲೇಶ್, ಅಸಿಸ್ಟಂಟ್ ಗವರ್ನರ್ ರೊಟೇರಿಯನ್ ಕೆ.ಪಿ. ಶೆಟ್ಟಿ,
ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಅಧ್ಯಕ್ಷ ರೊಟೇರಿಯನ್ ಕೆ.ಎಸ್. ವಿಶ್ವನಾಥ ನಾಯಕ ಮತ್ತು ಕ್ಲಬ್‌ನ ಎಲ್ಲಾ ಸದಸ್ಯರು ಹಾಗೂ ಪದಾಧಿಕಾರಿಗಳು ರೋಟರಿ ಪರಿವಾರದ ಎಲ್ಲಾ ಸದಸ್ಯರು, ಕುಟುಂಬಸ್ಥರು ಮತ್ತು ಕ್ರೀಡಾಭಿಮಾನಿಗಳು ಬಂದು ಭಾಗವಹಿಸಲು ಹೃದಯಪೂರ್ವಕವಾಗಿ ಆಹ್ವಾನಿಸಿದೆ.
ಈ ಎರಡು ದಿನಗಳ ಜಿಲ್ಲಾ ಮಟ್ಟದ ಮಲೆನಾಡು ಕ್ರೀಡೋತ್ಸವ–2025 ಕಾರ್ಯಕ್ರಮದ ಎಲ್ಲಾ ಅಧಿಕೃತ ಸಮಾರಂಭಗಳಿಗೆ ರೋಟರಿ ಡಿಸ್ಟ್ರಿಕ್ಟ್ 3182ರ ಜಿಲ್ಲಾ ಗವರ್ನರ್ ರೊಟೇರಿಯನ್ ಶ್ರೀಯುತ ಕೆ. ಪಾಲಾಕ್ಷ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Tiger and Lion Safari ಡಿ.23 ಮತ್ತು 30 ರ ಮಂಗಳವಾರದಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ ವೀಕ್ಷಣೆಗೆ ಆಹ್ವಾನ

0

Tiger and Lion Safari ಕ್ರಿಸ್‌ಮಸ್ ರಜೆಯ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ಡಿ.23 ಮತ್ತು 30 ರ ಮಂಗಳವಾರವೂ ಸಹ ತೆರೆದಿರುತ್ತದೆ.
Tiger and Lion Safari ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

Belagavi City Corporation ಮುಖ್ಯಮಂತ್ರಿಗಳಿಂದ ಇ-ಖಾತಾ ಲೋಕಾರ್ಪಣೆ, ಪೌರಕಾರ್ಮಿಕರಿಗೆ ನೇಮಕಾತಿ ಆದೇಶ, ಮನೆಗಳ ಹಕ್ಕುಪತ್ರಗಳ ವಿತರಣೆ

0

Belagavi City Corporation ಬೆಳಗಾವಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸುವರ್ಣಸೌಧದಲ್ಲಿ ಇ-ಖಾತಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಅವರು ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳುÀ ಮತ್ತು ಮನೆಯ ಹಕ್ಕುಪತ್ರಗಳ ವಿತರಣೆಗೆ ಸಹ ಅವರು ಚಾಲನೆ ನೀಡಿದರು. ಸಮಾರಂಭದಲ್ಲಿ ಇ ಖಾತಾ ಕೈಪಿಡಿ ಬಿಡುಗಡೆ ಮಾಡಲಾಯಿತು.

ಇದೆ ವೇಳೆ ಬೆಳಗಾವಿಯ 127 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಣೆ ಸಂಬಂಧ ಸಾಂಕೇತಿಕವಾಗಿ 10 ಜನರಿಗೆ ನೇಮಕಾತಿ ಆದೇಶ ಪತ್ರ ನೀಡಲಾಯಿತು. ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು.

ಅದೇ ರೀತಿ ವಿಜಯಪುರದ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 60 ಪೌರ ಕಾರ್ಮಿಕರಿಗೆ ಮನೆಯ ಸ್ವಾಧೀನ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಸಮಾರಂಭದಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಮಾತನಾಡಿ, ಸಾರ್ವಜನಿಕರ ಆಸ್ತಿ ದಾಖಲೆಯನ್ನು ಮತ್ತಷ್ಟು ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ ಇ-ಖಾತಾ ಸೇವೆ ಒದಗಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ತಿಳಿಸುವೆ. ನಗರಾಭಿವೃದ್ಧಿ ಮತ್ತು ನಗರ ಯೋಜನೆಯ ಸಚಿವರು ಉತ್ತಮ ಕಾರ್ಯ ಮಾಡಿದ್ದಾರೆ ಎಂದರು.

ಪೌರ ಕಾರ್ಮಿಕರ ಸೇವೆ ಅತ್ಯಂತ ಅನನ್ಯವಾಗಿದ್ದು, ಅವರು ನೆಮ್ಮದಿಯಾಗಿರುವಂತೆ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ಮತ್ತು ಮನೆಯ ಹಕ್ಕುಗಳ ಪತ್ರ ವಿತರಣೆ ಮಾಡಿರುವುದು ರಾಜ್ಯ ಸರ್ಕಾರ ಮತ್ತು ಪೌರಾಡಳಿತ ಸಚಿವರ ಉತ್ತಮ ಕಾರ್ಯಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈ ವೇಳೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ ಅವರು ಮಾತನಾಡಿ, ಇ-ಆಸ್ತಿ ತಂತ್ರಾಂಶದ ಮೂಲಕವೇ ಕಡ್ಡಾಯವಾಗಿ ಇ-ಖಾತಾ ನೀಡಲು 2016ರಲ್ಲಿ ಸುತ್ತೋಲೆ ಹೊರಡಿಸಲಾಗಿದೆ. ಅದರಂತೆ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈವರೆಗೆ ಆಸ್ತಿ ಮಾಲೀಕರು ಇ-ಆಸ್ತಿ ತಂತ್ರಾಂಶದ ಮೂಲಕ ಅಂದಾಜು 29 ಲಕ್ಷ ಇ ಆಸ್ತಿಗಳಿಗೆ ಇ-ಖಾತಾ ಪಡೆದಿರುತ್ತಾರೆ. ಈ ಅಭಿಯಾನದ ಮುಂದುವರೆದ ಭಾಗವಾಗಿ ಇ-ಆಸ್ತಿ ತಂತ್ರಾಂಶವನ್ನು ಸರಳೀಕರಣಗೊಳಿಸಲಾಗಿದೆ. ಆಸ್ತಿ ಮಾಲೀಕರು ಯಾವುದೇ ಮಧ್ಯವರ್ತಿಗಳಿಲ್ಲದೇ ಹಾಗೂ ಯಾವುದೇ ಅಧಿಕಾರಿ ಸಿಬ್ಬಂದಿಯನ್ನು ಸಂಪರ್ಕಿಸದೇ ತಮ್ಮ ಮನೆಯಲ್ಲಿ ಕುಳಿತು ಸರಳವಾಗಿ ಸುಲಭವಾಗಿ ಇ-ಖಾತಾ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ 6 ಸಾವಿರಕ್ಕೂ ಅಧಿಕ ಕಾರ್ಮಿಕರಿಗೆ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಈ ಗೃಹಭಾಗ್ಯ ಯೋಜನೆಗೆ ಒಟ್ಟು 6119 ಫಲಾನುಭವಿಗಳನ್ನು ಗುರುತಿಸಲಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ 326 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿದ್ದು, ಇದುವರೆಗೆ 4159 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172 ಮತ್ತು ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Belagavi City Corporation ಪೌರಕಾರ್ಮಿಕರ ವಿಶೇಷ ನೇಮಕಾತಿ: ಪೌರಕಾರ್ಮಿಕರ ಹೊರಗುತ್ತಿಗೆ ಪದ್ಧತಿಯನ್ನು 2017 ರಲ್ಲಿ ಸ್ಥಗಿತಗೊಳಿಸಿ, ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಆದೇಶಿಸಲಾಗಿದೆ. ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದವರಿಗೆ ವಿಶೇಷ ನೇಮಕಾತಿಯಡಿ ಅವಕಾಶ ನೀಡಲಾಗುತ್ತಿದೆ. ವಿವಿಧ ಹಂತಗಳಲ್ಲಿ ಸಾವಿರಾರು ಪೌರಕಾರ್ಮಿಕರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 127 ಮತ್ತು ವಿಜಯಪುರದಲ್ಲಿ 66 ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರಗಳನ್ನು ನೀಡಿರುವುದು ಸಂತಸದ ವಿಚಾರ. ಇನ್ನೂ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಮಹಾನಗರಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣಿಕೀಕೃತ ಖಾತಾ ನೀಡುವ ಉದ್ದೇಶದಿಂದ 2016 ರಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಸೌಲಭ್ಯವನ್ನು ಜಾರಿಗೊಳಿಸಲಾಗಿದೆ. 2019 ರಿಂದ ಮಹಾನಗರಪಾಲಿಕೆಗಳಲ್ಲಿ ಇದನ್ನು ಕಡ್ಡಾಯಗೊಳಿಸಲಾಗಿದೆ. ಇದುವರೆಗೆ ರಾಜ್ಯಾದ್ಯಂತ ಸುಮಾರು 29 ಲಕ್ಷ ಇ-ಖಾತಾಗಳನ್ನು ಸೃಜಿಸಲಾಗಿದೆ. ಇದರಲ್ಲಿ 25,03,385 ಎ-ಖಾತಾ ಮತ್ತು 4,39,889 ಬಿ-ಖಾತಾಗಳು ಸೇರಿವೆ ಎಂದರು.

ಅಧಿಕೃತ ಆಸ್ತಿಗಳ ಜೊತೆಗೆ, ಕಂದಾಯ ಭೂಮಿ ಮತ್ತು ಅನುಮೋದನೆಯಾಗದ ಬಡಾವಣೆಗಳಲ್ಲಿನ ಆಸ್ತಿಗಳಿಗೂ ಇ-ಖಾತಾ ನೀಡಲು ಕಾಯ್ದೆಗೆ ತಿದ್ದುಪಡಿ ತಂದು ಬಿ-ಖಾತಾ ನೀಡಲು ಅವಕಾಶ ಕಲ್ಪಿಸಲಾಗಿದೆ. ದಿನಾಂಕ 10-09-2024ರ ಪೂರ್ವದಲ್ಲಿ ನೋಂದಣಿಯಾದ ಅನಧಿಕೃತ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಅವಕಾಶವಿದೆ. ನಾಗರಿಕರು ತಮ್ಮ ಆಸ್ತಿ ವಿವರಗಳನ್ನು ಆನ್ಲೈನ್ನಲ್ಲಿ ವೀಕ್ಷಿಸಿ, ವಿವರಗಳು ಸರಿಯಿದ್ದರೆ ನೇರವಾಗಿ ಅಂತಿಮ ಇ-ಖಾತೆಯನ್ನು ಪಡೆಯಬಹುದು. ವ್ಯತ್ಯಾಸಗಳಿದ್ದಲ್ಲಿ ಆನ್ಲೈನ್ ಮೂಲಕವೇ ಮಾಹಿತಿ ಸಲ್ಲಿಸಿ ಸರಿಪಡಿಸಿಕೊಳ್ಳಬಹುದು ಎಂದರು.

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸುತ್ತವೆ. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪೌರ ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಅದರಂತೆ ಈಗಾಗಲೇ ಸಾವಿರಾರು ಫಲಾನುಭವಿಗಳಿಗೆ ಮನೆ ಕೊಡುವ ಕಾರ್ಯ ರಾಜ್ಯದಲ್ಲಿ ಚಾಲ್ತಿಯಲ್ಲಿದೆ. ಬಡವರ ಮೇಲಿನ ಕಾಳಜಿಯಿಂದಾಗಿ ಮಾನ್ಯ ಮುಖ್ಯಮಂತ್ರಿಗಳು ಈ ಬಾರಿ ಮತ್ತೆ 180 ಹೊಸ ಇಂದಿರಾ ಕ್ಯಾಂಟಿನ್ ನೀಡಿದ್ದಾರೆ ಎಂದು ಸಚಿವರು ತಿಳಿಸಿದರು.

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸಿಫ್ ಸೇಠ್ ಅವರು ಮಾತನಾಡಿದರು. ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಡಾ.ಎಂ.ಬಿ.ಪಾಟೀಲ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಪೊನ್ನಣ್ಣ, ಕೂಡ್ಲಿಗಿ ಶಾಸಕ ಶ್ರೀನಿವಾಸ, ವಿಧಾನಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ನಸೀರ್ ಅಹ್ಮದ್, ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರರಾದ ಮಂಗೇಶ ಪವಾರ, ಉಪ ಮಹಾಪೌರರಾದ ವಾಣಿ ಜೋಶಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ತುμÁರ ಗಿರಿನಾಥ, ಸರ್ಕಾರದ ಕಾರ್ಯದರ್ಶಿಗಳಾದ ದೀಪಾ ಚೋಳನ್ ಸೇರಿದಂತೆ ಪ್ರಭುಲಿಂಗ ಕವಳಿಕಟ್ಟಿ, ಡಾ.ಸೆಲ್ವಮಣಿ ಆರ್ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯ ಸದಸ್ಯರು ಮತ್ತು ಇನ್ನೀತರರು ಉಪಸ್ಥಿತರಿದ್ದರು.

Karnataka State Road Safety Authority ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ ಅಂಗೀಕಾರ

0

Karnataka State Road Safety Authority ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2025ನ್ನು ವಿಧಾನ ಪರಿಷತ್‍ನಲ್ಲಿ ಅಂಗೀಕರಿಸಲಾಯಿತು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಾಹನಗಳನ್ನು ನೋಂದಣಿ ಮಾಡುವ ಸಮಯದಲ್ಲಿ ಒಂದು ಬಾರಿಯ ಸೆಸ್ ಅನ್ನು ಹೆಚ್ಚಿನ ಮಿತಿಯಲ್ಲಿ ವಿಧಿಸುವುದನ್ನು ಮತ್ತು ಸಂಗ್ರಹಿಸುವುದನ್ನು ಬಿಟ್ಟುಬಿಡುವುದಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ ಸಂ. 45)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದ್ದು, ಈ ವಿಧೇಯಕವನ್ನು ಪರ್ಯಾಲೋಚಿಸಿ, ಅಂಗೀಕರಿಸುವಂತೆ ಕೋರಿದರು.

Karnataka State Road Safety Authority ವಿಧೇಯಕದ ಬಗ್ಗೆ ಸದಸ್ಯರಾದ ರವಿಕುಮಾರ್, ಗೋವಿಂದರಾಜು, ಡಿ.ಎಸ್.ಅರುಣ್, ಭೋಜೆಗೌಡ, ಭಾರತಿ ಶೆಟ್ಟಿ, ತಳವಾರ ಸಾಬಣ್ಣ, ಶರವಣ, ಸಿ.ಟಿ.ರವಿ ಮಾತನಾಡಿದರು. ವಿಧೇಯಕವನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು.

Transport Minister Ramalinga Reddy ಬಾಂಬೆ ಸಾರ್ವಜನಿಕ ನ್ಯಾಸ ಕರ್ನಾಟಕ ತಿದ್ದುಪಡಿ ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಅಂಗೀಕಾರ

0

Transport Minister Ramalinga Reddy ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬಾಂಬೆ ಸಾರ್ವಜನಿಕ ನ್ಯಾಸ (ಕರ್ನಾಟಕ ತಿದ್ದುಪಡಿ) ವಿಧೇಯಕ-2025ಕ್ಕೆ ಮೇಲ್ಮನೆಯಲ್ಲಿ ಡಿ.18ರಂದುಅಂಗೀಕಾರ ದೊರೆಯಿತು.

ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಮನವಿ ಮಾಡಿದರು.

ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಇವರನ್ನು ಧರ್ಮಾದಾಯ ಆಯುಕ್ತರನ್ನಾಗಿ., ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಯನ್ನು ಜಂಟಿ ಧರ್ಮಾದಾಯ ಆಯುಕ್ತರನ್ನಾಗಿ., ಸಂಬಂಧಪಟ್ಟ ಉಪ ವಿಭಾಗದ ಉಪ ವಿಭಾಗಾಧಿಕಾರಿಯು ಉಪ ಧರ್ಮಾದಾಯ ಆಯುಕ್ತರನ್ನಾಗಿ ಮತ್ತು ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು ಸಹಾಯಕ ಧರ್ಮಾದಾಯ ಆಯುಕ್ತರನ್ನಾಗಿ ನೇಮಿಸಲು ತಿದ್ದುಪಡಿ ಮಾಡುವುದು ಅವಶ್ಯವೆಂದು ಪರಿಗಣಿಸಿ ಈ ವಿಧೇಯಕಕ್ಕೆ ತಿದ್ದುಪಡಿ ತರಲಾಗುತ್ತದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು. ಸಭಾಪತಿಗಳು, ವಿಧೇಯಕದ ಅಂಗೀಕಾರಕ್ಕಾಗಿ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಿದರು. ಪ್ರಸ್ತಾವಕ್ಕೆ ಪರಿಷತ್ತಿನಿಂದ ಅನುಮೋದನೆ ದೊರೆಯಿತು.

Bengaluru Metropolitan Transport Corporation ಬೆಂಗಳೂರ ಮಹಾನಗರ ಭೂ ಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಅಂಗೀಕಾರ

0

Bengaluru Metropolitan Transport Corporation ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬೆಂಗಳೂರ ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.

ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸದನದಲ್ಲಿ ಮನವಿ ಮಾಡಿದರು.

ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಧಿನಿಯಮ, 2022 (2023ರ ಕರ್ನಾಟಕ 2 ಅಧಿನಿಯಮ 6)ರಲ್ಲಿರುವ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಮತ್ತು ಕಾರ್ಯಕಾರಿ ಸಮಿತಿಯನ್ನು ಪರಿಷ್ಕರಿಸಲು, ಮಹಾಪೌರರು, ಬೃಹತ್ Bengaluru Metropolitan Transport Corporation ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರು ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024 ಅಧಿನಿಯಮಿತಿಯ ತತ್ಪರಿಣಾಮವಾಗಿ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಪಾಲಿಕೆಗಳನ್ನು ಸೇರಿಸಲು, ಈ ಅಧಿನಿಯಮವನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಸದನಕ್ಕೆ ಮಾಹಿತಿ ನೀಡಿದರು. ಸಭಾಪತಿಗಳು, ವಿಧೇಯಕದ ಅಂಗೀಕಾರಕ್ಕಾಗಿ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಿದರು. ಪ್ರಸ್ತಾವಕ್ಕೆ ಪರಿಷತ್ತಿನಿಂದ ಅನುಮೋದನೆ ದೊರೆಯಿತು.

Department of School Education ಪ್ರತಿಯೊಬ್ಬರು ಮತದಾನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಸದೃಢ ರಾಷ್ಟ್ರವನ್ನು ನಿರ್ಮಿಸೋಣ, ಚಂದ್ರಪ್ಪ ಎಸ್. ಗುಂಡಪಲ್ಲಿ

0

Department of School Education ಸಂವಿಧಾನ ಪ್ರದತ್ತವಾದ ಮೂಲಭೂತ ಹಕ್ಕುಗಳಂತೆಯೇ ಪ್ರತಿಯೊಬ್ಬರು ಚುನಾವಣಾ ಸಂದರ್ಭದಲ್ಲಿ ಮತದಾನವನ್ನು ನೀಡುವ ಮೂಲಕ ಸದೃಢ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ಚುನಾವಣಾ ಆಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಶಿವಮೊಗ್ಗ ಹಾಗೂ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆ(NVD) ಪ್ರಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಶಿವಮೊಗ್ಗ ತಾಲೂಕು ಮಟ್ಟದ ELC ಕನ್ನಡ ಪ್ರಬಂಧ ಸ್ಪರ್ಧೆ 2025-26 ಉದ್ಘಾಟಿಸಿ ಮಾತನಾಡಿದ ಶಾಲಾ ಶಿಕ್ಷಣ (ಪದವಿಪೂರ್ವ) ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯಂತ ಕಡಿಮೆ ಮತದಾನವಾಗುವುದು ವಿಷಾಧಕರ. ಮತದಾನ ಮಾಡುವುದು ಕೂಡ ಕರ್ತವ್ಯವಾಗಬೇಕು. ಚುನಾವಣೆಯ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಮತ ಚಲಾಯಿಸಿ ನಿಮ್ಮ ಭವಿಷ್ಯವನ್ನು ನೀವೇ ನಿರೂಪಿಸಿಕೊಳ್ಳಿ ಜಾಗೃತರಾಗಿರಿ ಎಂದು ಕಿವಿ ಮಾತು ಹೇಳಿದರು.
ಎಡಿಸಿ ಅಭಿಷೇಕ್ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಹೆಚ್. ವಿ. ಮಹೇಶ್ವರಪ್ಪ, ಉಪಾಧ್ಯಕ್ಷ ನಂಜಪ್ಪ. ಪ್ರಾಚಾರ್ಯ ಕೆ.ಎಚ್. ರಾಜು, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಎಫ್. ಕುಟ್ರಿ,ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ವೇದಿಕೆಯ ಮಂಜುನಾಥ್ ಬಣಕಾರ್ ಉಪಸ್ಥಿತರಿದ್ದರು.
Department of School Education ಇ ಎಲ್ ಸಿ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂಸಿಯ ಭರತ್ ಗೌಡ, ದ್ವಿತೀಯ ಸ್ಥಾನ ಸರ್ಕಾರಿ ಪದವಿಪೂರ್ವ ಕಾಲೇಜು ಆಯನೂರಿನ ಭಾಗ್ಯಲಕ್ಷ್ಮಿ, ತೃತೀಯ ಸ್ಥಾನ ಡಿವಿಎಸ್ ಸ್ವತಂತ್ರ ಪದವಿಪೂರ್ವ ಕಾಲೇಜಿನ ಲಾವಣ್ಯ ಪಡೆದರು.
ನಿರ್ಣಾಯಕರಾಗಿ ಉಪನ್ಯಾಸಕರಾದ ಕೆ.ಎಚ್. ಪುಟ್ಟಪ್ಪ ಬಿಳವಾಣಿ, ಹರೀಶ್ ಓ.ಎಸ್., ಶಬ್ರಿನ್ ಬಾನು ಭಾಗವಹಿಸಿದ್ದರು.