Monday, February 16, 2026
Monday, February 16, 2026
Home Blog Page 153

Yuva Nidhi Scheme ಯುವನಿಧಿ ಫಲಾನುಭವಿಗಳಿಗೆ ಸಿಎಂ ಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯತಾ ತರಬೇತಿಗೆ ಆನ್ ಲೈನ್ ಅರ್ಜಿ ಆಹ್ವಾನ

0

ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯು ಯುವನಿಧಿ ಫಲಾನುಭವಿಗಳಿಗೆ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

Yuva Nidhi Scheme ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಮೋಕ್ಷಗುಂಡ ಮತ್ತು ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಗಳ ಮುಖಾಂತರ ತರಬೇತಿ ನೀಡಲಾಗುತ್ತಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ ಮೂಲಕ ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

MESCOM ಸೆ.27. ಆಲ್ಕೊಳ ಸುತ್ತಮುತ್ತ ಆಯ್ದ ಪ್ರದೇಶಗಳಿಗೆ ವಿದ್ಯುತ್ ಪೂರೈಕೆ ಇಲ್ಲ. ಮೆಸ್ಕಾಂ ಪ್ರಕಟಣೆ

0

MESCOM ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12, ಎ.ಎಫ್-13 ಮತ್ತು ಎ.ಎಫ್-19 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.27 ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.

MESCOM ಆಲ್ಕೋಳ, ಗಜಾನನ ಲೇಔಟ್, ಹಾಲಪ್ಪ ಲೇಔಟ್, ಫಕಿರಪ್ಪ ಲೇಔಟ್, ವಿಕಾಸ ಶಾಲೆ, ಐಶ್ವರ್ಯ ಲೇಔಟ್, ಮುನಿಯಪ್ಪ ಲೇಔಟ್, ಕನಕ ಲೇಔಟ್, ವೆಟರ್ನರಿ ಕಾಲೇಜು ರಸ್ತೆ, ಜಿ.ಹೆಚ್.ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಸಂಗೊಳ್ಳಿ ರಾಯಣ್ಣ ಲೇಔಟ್, ರವಿಶಂಕರ್ ಗುರೂಜಿ ಶಾಲೆ, ತಮಿಳು ತಾಯ್ ಭವನ, ಹೊಂಗಿರಣ ಬಡಾವಣೆ, ಸಹಕಾರಿ ನಗರ, ಸಹ್ಯಾದ್ರಿ ನಗರ, ಸೋಮಿನಕೊಪ್ಪ, ಆಟೋ ಕಾಲೋನಿ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗಿರಿ ಲೇಔಟ್, ಎಂಎಂಎಸ್ ಭೋವಿ ಕಾಲೋನಿ, ಆದರ್ಶ ನಗರ, ರಾಜೇಶ್ ಲೇಔಟ್, ಗೆಜ್ಜೇನಹಳ್ಳಿ, ಹನುಮಂತ ನಗರ, ದೇವಕಾತಿ ಕೊಪ್ಪ, ಅಂಬೇಡ್ಕರ್ ಕ್ಯಾಂಪ್, ಶಿವಸಾಯಿ ಕಾರ್ಖಾನೆ, ಶರ್ಮ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

Rotary Jubilee Club Shimoga ರೋಟರಿ ಸಿಲ್ವರ್ ಜ್ಯೂಬಿಲಿಯಿಂದ ಇಂಜಿನಿಯರ್ಸ್ ರೋಟೇರಿಯನ್ಸ್ ಅವರಿಗೆ ಸನ್ಮಾನ

0

Rotary Jubilee Club Shimoga ರೋಟರಿ ಜ್ಯುಬಿಲಿ ಕ್ಲಬ್ ಶಿವಮೊಗ್ಗ ವಾರದ ಸಭೆಯಲ್ಲಿ ದೇಶ ಮತ್ತು ಅಂತರರಾಷ್ಟ್ರೀಯ ಪ್ರಖ್ಯಾತ ಅಭಿವೃದ್ಧಿ ಹರಿಕಾರ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಕ್ಲಬ್
ನ ಎಂಜಿನಿಯರ್ ರೋಟರಿಯನ್ಸ್ ಸದಸ್ಯರು ಗಳಾದ ಭಾರದ್ವಾಜ್, ಲಕ್ಷ್ಮೀನಾರಾಯಯಣ, ರಾಜಶೇಖರ್,ಗಂಗಾಧರ ಸ್ವಾಮಿಯವರನ್ನು ಸನ್ಮಾನಿಸಲಾಯಿತು. ಬಿ.ಎಸ್.ಅಶ್ವಥ್, ರೇವಣಸಿದ್ದಪ್ಪ, ಪ್ರವೀಣ್ ಜವಳಿ, ನವೀನ್, ಹೇಮಾಶೇಖರ್, ವಾಸವಿ ನವೀನ್, ವೆಂಕಟ್ ರಮಣಭಟ್, ಇನ್ನಿತರರು ಹಾಜರಿದ್ದರು

ಶಿವಮೊಗ್ಗದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಖರೀದಿ ಫಿಕ್ಸ್: ಕ್ವಿಂಟಾಲ್ ಬೆಲೆ ಎಷ್ಟು? ವಿವರಗಳಿಗೆ ಮಾಹಿತಿ ಓದಿ.

0

2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಮುಂದಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ. 2389 ದರವನ್ನು ನಿಗದಿಪಡಿಸಲಾಗಿದೆ.

ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಿದ್ದು, ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.

ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

MESCOM ಸೆ.27. ಕುಂಸಿ ವಿದ್ಯುತ್ ವಿತರಣಾ ಕೇಂದ್ರದ ಸುತ್ತಮುತ್ತ ವಿದ್ಯುತ್ ಪೂರೈಕೆ ವ್ಯತ್ಯಯ

0

MESCOM ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಸೆ.27 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿAದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, MESCOM ದೇವಬಾಳು. ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Karnataka Minorities Development Corporation ಅಲ್ಪ ಸಂಖ್ಯಾತರ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

0

Karnataka Minorities Development Corporation ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮವು 2025-26 ನೇ ಸಾಲಿನ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಬೌದ್ದರು, ಸಿಖ್ ಹಾಗೂ ಪಾರ್ಸಿ ಸಮುದಾಯವರಿಗೆ ವಿವಿಧ ಯೋಜನೆಗಳನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಶ್ರಮಶಕ್ತಿ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ವಿದೇಶಿ ವ್ಯಾಸಂಗ ಸಾಲ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ, ಸಾಂತ್ವಾನ ಯೋಜನೆ ಹಾಗೂ ವ್ಯಾಪಾರ/ ಉದ್ಯಮಿಗಳಿಗೆ ನೇರಸಾಲ ಯೋಜನೆಯಡಿ www.kmdconline.karnataka.gov.in ಮೂಲಕ ಅ.16 ರೊಳಗಾಗಿ ಅರ್ಜಿ ಸಲ್ಲಿಸುವುದು.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಎಲ್ಲಾ ಮೂಲಗಳಿಂದ ಕುಟುಂಬ ವಾರ್ಷಿಕ ಆದಾಯ ರೂ.6 ಲಕ್ಷದೊಳಗಿರಬೇಕು. ವೃತ್ತಿ ಪ್ರೋತ್ಸಾಹ ಯೋಜನೆಗೆ ನಗರ ಪ್ರದೇಶ ರೂ.1.30ಲಕ್ಷ ಹಾಗೂ ಗ್ರಾಮೀಣ ಪ್ರದೇಶ ರೂ.81000, ಸಾಂತ್ವಾನ ಯೋಜನೆಯಲ್ಲಿ ರೂ.8 ಲಕ್ಷದೊಳಗೆ ವಾರ್ಷಿಕ ಆದಾಯ ಇರಬೇಕು. ವಯಸ್ಸು ಕನಿಷ್ಠ 18 ರಿಂದ 55 ವರ್ಷದೊಳಗಿನವರಾಗಿರಬೇಕು. ಅರ್ಜಿದಾರರ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ವಾಸದ ದೃಢೀಕರಣ ಪತ್ರ ಮತ್ತು ಪಡಿತರ ಚೀಟಿಯನ್ನು ಹೊಂದಿರಬೇಕು.
Karnataka Minorities Development Corporation ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗದ ರಸ್ತೆ, ಅಚ್ಯುತರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ, ದೂ.ಸಂ :08182-228262 ನ್ನು ಸಂಪರ್ಕಿಸಬಹುದೆAದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಜಿಲ್ಲಾ ವ್ಯವಸ್ಥಾಪಕರು 6666 ತಿಳಿಸಿದ್ದಾರೆ.

Italian Aerospace and Space Delegation ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ-ಪ್ರಮೋದ್ ಎಲ್.ಪಾಟೀಲ್

0

Italian Aerospace and Space Delegation ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ – ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು 2025 ನೇ ಸೆಪ್ಟೆಂಬರ್ 24 ರಂದು ಭೇಟಿ ನೀಡಿತು.

ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮರ್ಥ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು.

ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು.

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಅಡಿಯಲ್ಲಿ ಸುಗಮಗೊಳಿಸಲಾದ ಈ ಕಾರ್ಯಕ್ರಮವು ಬಾಹ್ಯಾಕಾಶ ಅನ್ವಯಿಕೆಗಳು, ಏರೋಸ್ಪೇಸ್ ತಂತ್ರಜ್ಞಾನಗಳು ಮತ್ತು ರಕ್ಷಣಾ ನಾವೀನ್ಯತೆಗಳಲ್ಲಿ ಸಹಯೋಗವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

ಜಂಟಿ ಸಂಶೋಧನೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಪ್ರತಿಭಾ ವಿನಿಮಯದಲ್ಲಿ ಭಾರತ – ಇಟಲಿ ಸಹಕಾರವನ್ನು ವೃದ್ಧಿಸುವುದು, ಮಾರುಕಟ್ಟೆ ಪ್ರವೇಶ, ಸಹ ಅಭಿವೃದ್ಧಿ, ಕೈಗಾರಿಕೆ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಅವಕಾಶಗಳನ್ನು ತೆರೆಯುವುದು ಹಾಗೂ ಬಾಹ್ಯಾಕಾಶ, ನಾವೀನ್ಯತೆ ಮತ್ತು ತಂತ್ರಜ್ಞಾನ ನೇತೃತ್ವದ ಬೆಳವಣಿಗೆಯಲ್ಲಿ ಕರ್ನಾಟಕವನ್ನು ಇಟಲಿಗೆ ಕಾರ್ಯತಂತ್ರದ ಪಾಲುದಾರರನ್ನಾಗಿ ಸ್ಥಾನೀಕರಿಸುವುದಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಯಿತು.

ಈ ಭೇಟಿಯು ಭಾರತ – ಇಟಲಿಯ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವುದಲ್ಲದೇ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ನಾವೀನ್ಯತೆಯಲ್ಲಿ ಜಾಗತಿಕ ಕೇಂದ್ರವಾಗಿ ಕರ್ನಾಟಕದ ಪಾತ್ರವನ್ನು ಬಲಪಡಿಸಲಿದೆ.

Italian Aerospace and Space Delegation ನಿಯೋಗದಲ್ಲಿ ಇಟಾಲಿಯನ್ ಬಾಹ್ಯಾಕಾಶ ಸಂಸ್ಥೆಯ ಉಪನಿರ್ದೇಶಕರಾದ ಮಾರಿಯಾ ಚಿಯಾರಾ ನೊಟೊ, ನವದೆಹಲಿಯ ಇಟಲಿಯ ವ್ಯಾಪಾರ ಆಯುಕ್ತರಾದ ಆಂಟೋನಿಯೆಟ್ಟಾ ಬಕ್ಕನಾರಿ, ಬೆಂUಳೂರಿನಲ್ಲಿನ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಹಾಗೂ ಇಟಲಿಯ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಎಂದು ಕನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ತಿಳಿಸಿದ್ದಾರೆ.

Shivamogga Dasara ಸೆ.28 “ಎಷ್ಟು ಇಡ್ಲಿ ತೀತೀರಿ? ಎಷ್ಟು ಹಣ್ಣು ತಿಂತೀರಿ?” ಸ್ಪರ್ಧೆ. ತಿಂಡಿಪೋತರಿಗೆ ,ಹಣ್ಣುಬಾಕರಿಗೆ ಅವಕಾಶ

0

Shivamogga Dasara ಶಿವಮೊಗ್ಗ ದಸರಾ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಸೆ.28 ರಂದು ಸಂಜೆ 6 ಗಂಟೆಗೆ, ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್)ನಲ್ಲಿ ಆಹಾರ ಮೇಳ – ಸುಮಾರು 40 ಸ್ಟಾಲ್‌ಗಳನ್ನು ನಿರ್ಮಿಸಿ ಜಿಲ್ಲೆಯ ವಿವಿಧ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. Shivamogga Dasara ಸೆ.29 ರಂದು ಬೆಳಗ್ಗೆ 10.30ಕ್ಕೆ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಮೆಸ್ಕಾಂ ಇಲಾಖೆ ಹಾಗೂ ಸಾರ್ವಜನಿಕರಿಗೆ ಇಡ್ಲಿ ಸಾಂಬಾರ್ ಮತ್ತು ಹಣ್ಣು ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸೆ.30ರಂದು ಬೆಳಿಗ್ಗೆ 10.30ಕ್ಕೆ ವೀರಶೈವ ಕಲ್ಯಾಣ ಮಂಟಪದಲ್ಲಿ ಆರೋಗ್ಯಕರ ತಿನಿಸನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಆಹಾರ ದಸರಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Klive Special Article ನವರಾತ್ರಿ ಐದನೇ ದಿನ.ಶ್ರೀಸ್ಕಂದ ಮಾತಾ ರೂಪಿಣಿ ದೇವಿ,” ಸ್ಕಂದಮಾತಾ ಯಶಸ್ವಿನಿ”

0

ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ

Klive Special Article ದಿನದ ಒಳ್ಳೆಯಮಾತು(ನವರಾತ್ರಿ5ನೇ ದಿನ)
ನವರಾತ್ರಿ(ಐದನೆಯದಿನ).ಸ್ಕಂದಮಾತೆಯ ಆರಾಧನೆ


” ಸಿಂಹಾಸನಗತಾ ನಿತ್ಯಂ
ಪದ್ಮಾಂಚಿತ ಕರಾದ್ವಯಾ/
ಶುಭದಾಸ್ತು ಸದಾ ದೇವಿ
ಸ್ಕಂದಮಾತಾ ಯಶಸ್ವಿನೀ//”

ನವರಾತ್ರಿ ಹಬ್ಬದ ಐದನೇ ದಿನವಾದ ಇಂದು
ಸ್ಕಂದಮಾತೆಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಬುಧಗ್ರಹವನ್ನು ಪ್ರತಿನಿಧಿಸುವ ದುರ್ಗಾಮಾತೆಯ ಐದನೇ ಅವತಾರವಾದ ಸ್ಕಂದಮಾತೆ,ಸದಾ ತನ್ನ ಭಕ್ತರಮೇಲೆಸಹಾನುಭೂತಿತೋರುತ್ತಾಳೆ.ಪಾತಾಳಲೋಕದಲ್ಲಿದ್ದತಾರಕಾಸುರನೆಂಬ ರಾಕ್ಷಸನನ್ನು ಸಂಹರಿಸಲುತದೇವಿ ಸ್ಕಂದನಿಗೆ(ಸುಬ್ರಹ್ಮಣ್ಯ ಸ್ವಾಮಿ) ಜನ್ಮ ಕೊಡುತ್ತಾಳೆ.ಆದ್ದರಿಂದಈ ದೇವಿಯನ್ನು ಸ್ಕಂದಮಾತಾಎಂದುಕರೆಯುತ್ತಾರೆ.ಸ್ಕಂದಮಾತಾದೇವಿಯ ವಾಹನಸಿಂಹವಾಗಿರುತ್ತದೆ.ನಾಲ್ಕುಭುಜಗಳನ್ನು ಹೊಂದಿದ್ದು,ಎರಡು ಕೈಗಳಲ್ಲಿ ಕಮಲವನ್ನು
Klive Special Article ಹಿಡಿದಿರುತ್ತಾಳೆ.ದೇವಿಯು ಮಾತೃಸ್ವರೂಪಿಣಿಯಾಗಿ ಭಕ್ತಕೋಟಿಯನ್ನು ಹರಸುವಳು.
ಇಂತಹಮಾತೃಸ್ವರೂಪಿಣಿಯಾದಸ್ಕಂದಮಾತಾದೇವಿಯನ್ನು ಭಕ್ತಿಯಿಂದ ಆರಾಧಿಸಿ,ಪೂಜಿಸಿ ದೇವಿಯ ಅನುಗ್ರಹಕ್ಕೆಪಾತ್ರರಾಗೋಣ.

Chamber of Commerce Shivamogga ಕುಟುಂಬ ಮಿಲನ ಕಾರ್ಯಕ್ರಮಗಳಿಂದ ಪರಸ್ಪರ ಬಾಂಧವ್ಯ ಗಟ್ಟಿ,- ಜಿ.ವಿಜಯ ಕುಮಾರ್

0

Chamber of Commerce Shivamogga ಕುಟಂಬ ಮಿಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಖಿನ್ನತೆ ದೂರವಾಗಿಸುತ್ತದೆ. ಪರಸ್ಪರರಲ್ಲಿ ಒಡನಾಟ ಪ್ರೀತಿ ವಿಶ್ವಾಸ ವೃದ್ಧಿಯಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯಕುಮಾರ್ ಹೇಳಿದರು.

ಶಿವಮೊಗ್ಗ ನಗರದ ವಿನಾಯಕ ನಗರ ರೋಟರಿ ಬ್ಲಡ್ ಬ್ಯಾಂಕ್ ಸಭಾಂಗಣದಲ್ಲಿ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆ ವತಿಯಿಂದ ದಸರಾ ಹಬ್ಬ ದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಸ್ಪರ್ಧೆ, ಕ್ರೀಡೆ ಹಾಗೂ ಕುಟುಂಬ ಮಿಲನ. ಪ್ರತಿಭಾ ಪುರಸ್ಕಾರ. ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬರು ತಮ್ಮದೇ ಆದ ವ್ಯವಹಾರದಲ್ಲಿ ತೊಡಗಿರುತ್ತಾರೆ. ಒತ್ತಡದ ಜೀವನಶೈಲಿಯಲ್ಲಿ ಒಂದಿಷ್ಟ ಮನರಂಜನೆ, ಹಾಡು, ಸಾಂಸ್ಕೃತಿಕ ಕಾರ್ಯಕ್ರಮ ಹೊಸ ಚೈತನ್ಯ ನೀಡುತ್ತದೆ. ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಸಿಗುತ್ತದೆ ಎಂದು ತಿಳಿಸಿದರು.

ಭಾವಸಾರ ಇಂಡಿಯಾ ಪ್ರೇರಣ ಸಂಸ್ಥೆಯ ಸದಸ್ಯರು ಕರೋನಾ. ಹಾಗೂ ಪ್ರವಾಹ ಸಂದರ್ಭದಲ್ಲಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮ ಮಾಡಿರುವುದು ಶ್ಲಾಘನೀಯ. ಹಾಗೂ ರಕ್ತದಾನ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಿರುವುದು. ಮತ್ತು ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ವಿದ್ಯಾಭ್ಯಾಸದ ನೆರವು ನೀಡುತ್ತಿರುವುದು. ಸಂಸ್ಥೆಯ ಗೌರವವನ್ನು ಹೆಚ್ಚಿಸಿದೆ . ಸಂಸ್ಥೆಯಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ನೀಡುವ ಶಕ್ತಿ ದೊರಕಲಿ ಎಂದು ಆಶಿಸಿದರು.

ಅಂತ್ಯಾಕ್ಷರಿ ಸ್ಪರ್ಧೆ ಹಾಗೂ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಹಳೇ ಚಿತ್ರಗೀತೆಗಳನ್ನು ಹಾಡಿ ರಂಜಿಸಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾವಸಾರ ವಿಷನ್ ಇಂಡಿಯಾ ಪ್ರೇರಣಾ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಉತ್ತರ್ ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆ ಈಗಾಗಲೇ ಹತ್ತು ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಮಾಡುವ ಜತೆಯಲ್ಲಿ ಸದಸ್ಯರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

Chamber of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯದರ್ಶಿ ಅವಿನಾಶ್ ಮಿರಾಜ್ ಕರ್. .. ಸಂಸ್ಥಾಪಕ ಅಧ್ಯಕ್ಷರಾದ ಎಂ ಎನ್ ವೆಂಕಟೇಶ. ಮಾಜಿ ಅಧ್ಯಕ್ಷರುಗಳಾದ ಉಮಾ ವೆಂಕಟೇಶ್ ವಿನಾಯಕ ಡೊಯೆಜೆ ಸುನಿಲ್ ಬೇಂದ್ರೆ ಹರೀಶ್ ಲಾತೂರ ಹಾಗೂ ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.