Monday, February 16, 2026
Monday, February 16, 2026
Home Blog Page 156

DVS College of Arts, Science and Commerce ಸಾಮಾಜಿಕ ಸಮಸ್ಯೆ ನಿವಾರಣೆಯಲ್ಲಿ ನಾಗರಿಕರ ಪಾಲ್ಗೊಳ್ಳುವಿಕೆ ಮುಖ್ಯ- ಪ್ರೊ.ಎ.ಷಣ್ಮುಖ

0

DVS College of Arts, Science and Commerce ಸಾಮಾಜಿಕ ಪರಿವರ್ತನೆಯಲ್ಲಿ ಯುವಶಕ್ತಿ, ಸಮುದಾಯ ಹಾಗೂ ರಾಜಕೀಯ ಪಕ್ಷಗಳ ಪಾತ್ರ ಮಹತ್ವದ್ದಾಗಿದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎ.ಷಣ್ಮುಖ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಸ್ತುತ ರಾಜಕಾರಣ ಮತ್ತು ಸಾಮಾಜಿಕ ಚಳವಳಿ ಕುರಿತು ಮಾತನಾಡಿ, ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸಲು ಪ್ರತಿಯೊಬ್ಬ ನಾಗರಿಕನೂ ಪ್ರಜ್ಞಾಪೂರ್ವಕ ಭಾವನೆಯೊಂದಿಗೆ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಪ್ರೊ. ಎಂ.ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಸಮಾಜದಲ್ಲಿನ ಆಗುಹೋಗುಗಳ ಬಗ್ಗೆ ಮಾಹಿತಿ ಹೊಂದಿರುವುದು ಅಗತ್ಯ. ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನರು ಹೆಚ್ಚಿನ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.
DVS College of Arts, Science and Commerce ವಿದ್ಯಾರ್ಥಿಗಳಿಗೆ ಪಠ್ಯ ಶಿಕ್ಷಣದ ಜತೆಯಲ್ಲಿ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ನೀಡುವ ದೃಷ್ಟಿಯಿಂದ ಇಂತಹ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ಅನುಕೂಲವಾಗುತ್ತವೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ದುರಗಪ್ಪ ಮುಂಡಗಿ, ಪ್ರಾಧ್ಯಾಪಕರಾದ ಡಾ. ಸುರೇಶ್ ಆರ್., ಅಭಿಷೇಕ್ ಜಿ.ಎಸ್., ಸಂತೋಷ್ ಕುಮಾರ್ ಕೆ.ಹೆಚ್. ಹಾಗೂ ಇತರ ಅಧ್ಯಾಪಕರು ಉಪಸ್ಥಿತರಿದ್ದರು.

ವಲಯ ಮಟ್ಟದ ಕ್ರೀಡಾಕೂಟದ ಥ್ರೋ ಬಾಲ್ ಸ್ಪರ್ಧೆ. ರಾಯಲ್ ಇಂಗ್ಲಿಷ್ ಮಾಧ್ಯಮ ಶಾಲೆಯ ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

0

ಶಿವಮೊಗ್ಗದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ವಿನೋಬನಗರದ ರಾಯಲ್ ಇಂಗ್ಲೀಷ್ ಮೀಡಿಯಂ ಶಾಲೆಗೆ ಇತ್ತೀಚೆಗೆ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರು ತ್ರೋಬಾಲಿನಲ್ಲಿ
ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೂ ಬಾಲಕರು , ಬಾಲಕಿಯರು ವಾಲಿಬಾಲ್ ಪಂದ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ , ಶಿಕ್ಷಕ ವೃಂದದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Sri Aurobindo Pre-University (Ind.) College ಕ್ರೀಡೆಯು ಶಿಕ್ಷಣದ ಪ್ರಮುಖ ಅಂಗ- ಎಸ್.ಚಂದ್ರಪ್ಪ

0

Sri Aurobindo Pre-University (Ind.) College ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ೨೦೨೫-೨೬ನೇ ಸಾಲಿನ ಕ್ರೀಡಾಕೂಟಕ್ಕೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ನಂತರ ನಡೆದ ಸಮಾರಂಭದಲ್ಲಿ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ವಿಭಾಗದ ಉಪ ನಿರ್ದೇಶಕ ಎಸ್.ಚಂದ್ರಪ್ಪ ಅವರು ಮಾತನಾಡಿ, ಕ್ರೀಡೆಯು ಶಿಕ್ಷಣದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸದಢತೆ ಕಾಯ್ದುಕೊಳ್ಳಬಹುದು. ಅಲ್ಲದೆ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಕ್ರೀಡೆಯಲ್ಲಿ ಸಾಧನೆಗೆ ಸಾಕಷ್ಟು ಅವಕಾಶ ಇದ್ದು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಜಾವಳ್ಳಿಯ ಶ್ರೀ ಅರಬಿಂದೋ ಫೌಂಡೇಷನ್ ಫಾರ್ ಎಜುಕೇಷನ್ ಶೈಕ್ಷಣಿಕ ನಿರ್ದೇಶಕ ಎಚ್‌ಎನ್ ಅವರು ದ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಪ್ರಾಚರ‍್ಯರ ಸಂಘದ ಅಧ್ಯಕ್ಷ ಎಸ್.ಪಂಡರಿನಾಥ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಯೋಗೀಶ್, ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಂ.ಜೋಸೆಫ್, ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕ ಡಿ.ಟಿ ಶಶಿಧರ, ಶಿವಮೊಗ್ಗದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಫ್.ಕೆ.ಕುಟ್ರಿ, ಕ್ರೀಡಾ ಸಂಯೋಜಕ ಕೆ.ನಾಗೇಂದ್ರ ಪ್ರಸಾದ್, ವಿವಿಧ ಕಾಲೇಜಿನ ಉಪನ್ಯಾಸಕರು, ಕ್ರೀಡಾ ಪಟುಗಳು ಹಾಜರಿದ್ದರು.
Sri Aurobindo Pre-University (Ind.) College ವಿದ್ಯಾರ್ಥಿನಿ ಮೈತ್ರೇಯ ಸಂಗಡಿಗರು ಪ್ರಾರ್ಥಿಸಿ, ಉಪ ಪ್ರಾಚರ‍್ಯರಾದ ಎಂ.ಇ.ಆಶಾ ಸ್ವಾಗತಿಸಿ, ವಿಘ್ನೇಶ್ವರ ಘೋಡೆ ವಂದಿಸಿದರು.
ಫೋಟೊ ಫೈಲ್: ೨೨ಎಚ್‌ಎಚ್‌ಆರ್೧
ಹೊಳೆಹೊನ್ನೂರು ಸಮೀಪದ ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಸಹಯೋಗದಲ್ಲಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ೨೦೨೫-೨೬ನೇ ಸಾಲಿನ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ವಿಭಾಗದ ಉಪ ನಿರ್ದೇಶಕ ಎಸ್.ಚಂದ್ರಪ್ಪ ಅವರನ್ನು ಅಭಿನಂದಿಸಲಾಯಿತು.

ಶಿವಮೊಗ್ಗದ ಹಿರಿಯ ಪತ್ರಿಕಾ ವಿತರಕ ಜಿ.ದೇವರಾಜ ಶೆಟ್ಟಿ ನಿಧನ

0

ಹಿರಿಯ ಪತ್ರಿಕಾ ವಿತರಕರರಾದ ದೇವರಾಜ ಶೆಟ್ಟಿ ನಿಧನರಾಗಿದ್ದಾರೆ. ಸುಮಾರು 50 ವರ್ಷದಿಂದ ಪೇಪರ್ ಸ್ಟಾಲ್ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದಾರೆ. ವರ್ಷದಿಂದ ಪೇಪರ್ ಸ್ಟಾಲ್ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರಾದ ಎನ್, ಮಾಲತೇಶ್, ಉಪಾಧ್ಯಕ್ಷರಾದ ರಾಮು ಜಿ, ನಾಗಭೂಷಣ್, , ಪ್ರಧಾನ ಕಾರ್ಯದರ್ಶಿಯಾದ ಮುಕ್ತಾ ರ್ ಹಮದ್( ನಜೀರ್, ಹುಲಿಗಿ ಕೃಷ್ಣ, ಪರಶುರಾಮ್, ಮಲ್ಲಿಕಾರ್ಜುನ್, ಗಜೇಂದ್ರ, ವಿನಯ್ ವಾಲಿ, ರಾಜ ವರ್ಮ ಜೈನ್,ಹರ್ಷ, ಪಾರ್ಥಿಬನ್ , ಯುವರಾಜ್, ಉಮೇಶ್, ಸತೀಶ್, ಯೋಗೇಶ್, ಮಂಜುನಾಥ್, ಪ್ರವೀಣ, ಪ್ರಾಣೇಶ್, ಮೌಲಾನಾ, ಪ್ರಶಾಂತ್ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾರೈಸಿದ್ದಾರೆ.

S.N.Chennabasapa ಪ್ಲಾಸ್ಟಿಕ್ ಚೀಲದ ಬದಲು ಬಟ್ಟೆ ಕೈಚೀಲ ಬಳಸಿ. ಪರಿಸರ ಉಳಿಸಿ- ಎಸ್.ಎನ್.ಚನ್ನಬಸಪ್ಪ

0

S.N.Chennabasapa ಪರಿಸರ ಸಂರಕ್ಷಣೆ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ಪರಿಸರ ಸಂರಕ್ಷಣೆಯಲ್ಲಿ ನಾವು ನೀವೆಲ್ಲರೂ ಕೈಜೋಡಿಸಬೇಕು
ಕಸವನ್ನು ಮೂಲದಿಂದಲೇ ವಿಂಗಡಣೆ ಮಾಡಬೇಕು.ಏಕ ಬಳಕೆಯ ಪ್ಲಾಸ್ಟಿಕ್ ಅನ್ನು ಬಳಸಬೇಡಿ ಬಟ್ಟೆ ಚೀಲಗಳನ್ನು ಮಾತ್ರ ಉಪಯೋಗಿಸಿ ಸೈಕಲ್ ಬಳಸಿ ಇಂಧನ ಉಳಿಸಿ ಎಂದು ಶಾಸಕ ಚನ್ನಬಸಪ್ಪನವರು ಕರೆ ನೀಡಿದರು.

ಅವರು ಮಹಾನಗರ ಪಾಲಿಕೆ ಆವರಣದಲ್ಲಿ ಪರಿಸರ ದಸರಾ ಕಾರ್ಯಕ್ರಮದ ಅಂಗವಾಗಿ ಸೈಕಲ್ ಜಾತಕೆ ಚಾಲನೆ ನೀಡಿ ಮಾತನಾಡಿದರು.

S.N.Chennabasapa ಪರಿಸರವಾದಿ. ಎಲ್ ಕೆ ಶ್ರೀಪತಿ. ಬಿಎಂ ಕುಮಾರಸ್ವಾಮಿ. ಜಿಲ್ಲಾ ಕಾನೂನು ಪ್ರಾಧಿಕಾರದ ನ್ಯಾಯಾಧೀಶರಾದ. ಸನ್ಮಾನ್ಯ ಸಂತೋಷ್ ಹಾಗು ಶಿವಮೊಗ್ಗ ಸೈಕಲ್ ಕ್ಲಬ್ಬಿನ ಅಧ್ಯಕ್ಷ ಶ್ರೀಕಾಂತ್. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್.. ಪರಿಸರ ನಾಗರಾಜ. ಪರಿಸರ ದಸರಾ ಸಂಚಾಲಕರಾದ.. ತ್ರಿವೇಣಿ… ಸುರೇಶ್ ಕುಮಾರ್.. ನರಸಿಂಹ ಮೂರ್ತಿ.. ಅನಾ ವಿಜೇಂದ್ರ..ವಾಯು ಮಾಲಿನ್ಯ.. ಜಿಲ್ಲಾ ಅಧಿಕಾರಿ. ಶಿಲ್ಪಾ.. ಹೆಗಡೆ… ವಗೀಶ್. ಹಾಗು ಸೈಕಲ್ ಕ್ಲಬ್ ಸದ್ಯಸರು ಉಪಸ್ಥಿತರಿದ್ದರು

Sri Adichunchanagiri Education Trust ಏಷ್ಯನ್ ಗೇಮ್ಸ್ ಷಟಲ್ ಬ್ಯಾಡ್ಮಿಂಟನ್ಸ್ಪರ್ಧೆಯಲ್ಲಿ ಅಂಡರ್ 17 ಭಾರತ ತಂಡ ಪ್ರತಿನಿಧಿಸಲಿರುವ ಶಿವಮೊಗ್ಗದ ಅವಳಿ ಸೋದರರು

0

Sri Adichunchanagiri Education Trust ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪವನ್, ಪುನೀತ್, ಅವಳಿ ಸಹೋದರರು,ದೇಶದ ಪ್ರಮುಖ ಆಟಗಾರರಾಗುವ ಭರವಸೆ ಮೂಡಿಸಿದ್ದಾರೆ.

ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಓದುತ್ತಿರುವ ಅವಳಿ ಸಹೋದರರು,10ನೇ ತರಗತಿಯಲ್ಲಿ ವ್ಯಾಸಂಗಮಾಡುತ್ತಿದ್ದು, ಆಟದ ಜೊತೆಗೆ ಓದಿನಲ್ಲಿಯೂ ಮುಂದಿದ್ದಾರೆ.

ಪುನೀತ್.ಎಸ್. ಮತ್ತು ಪವನ್.ಎಸ್. ಹರಿಯಾಣದ ಪಂಚಕುಲದಲ್ಲಿ ನಡೆದಂತಹ 17 ವರ್ಷ ವಯೋಮಿತಿಯೊಳಗಿನ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿಭೆಗಳು.

ಈ ಪ್ರತಿಭಾನ್ವಿತರು ಹರಿಯಾಣದ ಪಂಚಕುಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ ರಾಷ್ಟ್ರೀಯ ಡಬಲ್ಸ್ ರ‌್ಯಾಂಕಿಂಗ್ ನಲ್ಲಿ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ, ಚಾಕ ಚಕ್ಕತೆಯ ಆಟದ ಪ್ರದರ್ಶನ ನೀಡಿ, ಡಬಲ್ಸ್ ನಲ್ಲಿ ಮತ್ತು ಮಿಕ್ಸಡ ಡಬಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು.ಹಾಗೂ ಅತ್ಯಾಕರ್ಷಕ ಪಾರಿತೋಷಕ ಮತ್ತು ಬಂಗಾರದ ಪದಕವನ್ನು ಜಿಲ್ಲೆ ಮತ್ತು ರಾಜ್ಯಕ್ಕೆ ಹಾಗೂ ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.

ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಡಬಲ್ಸ್ ರ‍್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಚರಣ್ ರಾಮ್ ಮತ್ತು ಹರಿಕೃಷ್ಣರನ್ನು ಸೋಲಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದು,ಭಾರತ ತಂಡಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.

ಮುಂದಿನ ತಿಂಗಳು ಅಕ್ಟೋಬರ್ 21 ರಿಂದ ಚೀನಾದಲ್ಲಿ ನಡೆಯುವ ಅಂಡರ್ 17 ವಯೋ ಮಿತಿಯೊಳಗಿನ ಏಷ್ಯನ್ ಗೇಮ್ಸ್ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ಪರವಾಗಿ ಆಡಲಿದ್ದಾರೆ.

Sri Adichunchanagiri Education Trust ಈ ಪ್ರತಿಭೆಗಳು ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ಮಧುಸೂಧನ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ

ಈ ಕ್ರೀಡಾ ಪ್ರತಿಭೆಗಳು ರಾಷ್ಟ ಮತ್ತು ಅಂತರ್ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Bharat Scouts and Guides ಸಂಗೀತ ಕಲಿಕೆ ಆತ್ಮವಿಶ್ವಾಸ ವೃದ್ಧಿಸುತ್ತದೆ- ಶುಭಾ ಹರ್ಷ

0

Bharat Scouts and Guides ಸಂಗೀತ ಕಲಿಕೆಯಿಂದ ಆತ್ಮವಿಶ್ವಾಸ ವೃದ್ಧಿಸುವ ಜತೆಯಲ್ಲಿ ಮನೋವಿಕಸನ ಸಾಧ್ಯ. ಮನುಷ್ಯನಲ್ಲಿನ ಖಿನ್ನತೆ ದೂರವಾಗುತ್ತದೆ ಎಂದು ಸುಗಮ ಸಂಗೀತ ಪರಿಷತ್ ಕಲಾವಿದೆ ಶುಭ ಹರ್ಷ ಹೇಳಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಬೇಡನ್ ಪೊವೆಲ್‌ ಹಾಲಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಅತಿ ಮುಖ್ಯ. ಇಂತಹ ವೇದಿಕೆಗಳನ್ನು ಉಪಯೋಗಿಸಿಕೊಂಡರೆ ಮಕ್ಕಳಲ್ಲಿ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ತಿಳಿಸಿದರು.

ಹಿಂದುಸ್ತಾನಿ ಗಾಯಕಿ ರೇಣುಕಾ ಕಾರಂತ್ ಮಾತನಾಡಿ, ಸಂಗೀತದಿಂದ ಧ್ವನಿ ಸಂಸ್ಕರಣೆಯಾಗುತ್ತದೆ ಹಾಗೂ ಸದಾ ಹಸನ್ಮುಖಿಗಳಾಗಿರುತ್ತೇವೆ. ಸಂಗೀತ ಅಭ್ಯಾಸದಿಂದ ಒತ್ತಡ ನಿರ್ವಹಣೆಯಾಗುತ್ತದೆ. ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತದ ಆಸಕ್ತಿ ಬೆಳೆಸಬೇಕು ಎಂದರು.

ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತವನ್ನು ಶ್ರದ್ಧೆಯಿಂದ ಕಲಿತು ಅಭ್ಯಾಸ ಮಾಡಬೇಕು. ಇದರಿಂದ ವಿದ್ಯಾಭ್ಯಾಸಕ್ಕೂ ಸಹ ಒಳ್ಳೆಯದಾಗುತ್ತದೆ. ಪ್ರತಿ ವರ್ಷ ನಡೆಯುವ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ 150ಕ್ಕೂ ಹೆಚ್ಚು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ವಿಶೇಷವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಏಳು ವಿಭಾಗದ ಮಕ್ಕಳು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

Bharat Scouts and Guides ಸಂಗೀತದಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗುತ್ತಾರೆ. ಸಂಗೀತ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಗೈಡ್ ಆಯುಕ್ತೆ ಲಕ್ಷ್ಮೀ ರವಿ, ಜಂಟಿ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಮಲ್ಲಿಕಾರ್ಜುನ್ ಕಾನೂರು, ಕಾತ್ಯಾಯಿನಿ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸಿನ ಪ್ರಮುಖರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

Keladi Shivappa Nayak University of Agricultural and Horticultural Sciences ಸೆ.25. , ಇರುವಕ್ಕಿಯ ಕೃಷಿ ವಿವಿಯಲ್ಲಿ ಅಣಬೆ ಕೃಷಿ ಕುರಿತು ತರಬೇತಿ

0

Keladi Shivappa Nayak University of Agricultural and Horticultural Sciences ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು “ಅಣಬೆ ಕೃಷಿ “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.

ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್ ನ ಎರಡನೇ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ:25.09.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.

ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.

Keladi Shivappa Nayak University of Agricultural and Horticultural Sciences ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 6363725298 / 9448312978

ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-M7TL ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಿ.

Karnataka Media Academy ಮಾಧ್ಯಮ ಅಕಾಡೆಮಿಯಿಂದ ಇನ್ಫೋಸಿಸ್ ಸಿಎಸ್ ಆರ್ ಯೋಜನೆಯಡಿ ಪತ್ರಕರ್ತರಿಗೆ ತರಬೇತಿ, ಆಸಕ್ತರಿಂದ ಅರ್ಜಿ ಆಹ್ವಾನ

0

Karnataka Media Academy Infosys Springboard CSR ಉಪಕ್ರಮದಡಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರಿಗೆ ತರಬೇತಿಯನ್ನು ಆಯೋಜಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಕುರಿತು ಕೆಲವು ಮಾಹಿತಿ:

• ಈ ತರಬೇತಿಯು ಮೂರು ದಿನಗಳ ಅವಧಿಯದ್ದಾಗಿದ್ದು, ಇನ್‌ಫೋಸಿಸ್‌ನ ನಿಗದಿತ ತರಬೇತಿ ಕ್ಯಾಂಪಸ್‌ನಲ್ಲಿ ನಡೆಯಲಿದೆ.
• ಒಟ್ಟು ಮೂರು ಬ್ಯಾಚ್‌ಗಳಲ್ಲಿ ಈ ವರ್ಷ ತರಬೇತಿ ನಡೆಯಲಿದೆ. ಪ್ರತಿ ಬ್ಯಾಚ್‌ನಲ್ಲಿ 50 ಪತ್ರಕರ್ತರಿಗೆ ಅವಕಾಶ.
• ಒಂದು ಬ್ಯಾಚ್‌ ಮಹಿಳಾ ಆಯವ್ಯಯದಡಿ ಕೇವಲ ಪತ್ರಕರ್ತೆಯರಿಗೆ ಮಾತ್ರ ಆಯೋಜಿಸಲಾಗಿದೆ.
• ತರಬೇತಿಯ ಅವಧಿಯಲ್ಲಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ. ನಿಯಮಾನುಸಾರ ಪ್ರಯಾಣ ಭತ್ಯೆ ನೀಡಲಾಗುವುದು.
• ಮೊದಲ ತಂಡದ ತರಬೇತಿಯು ಅಕ್ಟೋಬರ್‌ ಕೊನೆಯ ವಾರದಲ್ಲಿ ನಡೆಯಲಿದೆ. ಉಳಿದ ತಂಡಗಳ ತರಬೇತಿಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
• ಈ ಕಾರ್ಯಕ್ರಮದಲ್ಲಿ ಡಿಜಿಟಲ್‌ ಮಾಧ್ಯಮ, ಎಐ ಬಳಕೆ ಹಾಗೂ ವ್ಯಕ್ತಿತ್ವ ವಿಕಸನ ಕುರಿತ ವಿಷಯಗಳಲ್ಲಿ ತರಬೇತಿ ನೀಡಲಾಗುವುದು.
• ತರಬೇತಿ ಕುರಿತು ಮಾರ್ಗಸೂಚಿಗಳನ್ವಯ ಸ್ವಯಂ ಮೌಲ್ಯಮಾಪನದ ನಂತರ ಪ್ರಮಾಣ ಪತ್ರ ವಿತರಿಸಲಾಗುವುದು.
• ಗೂಗಲ್‌ ಫಾರ್ಮ್‌ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.

Anavatti Mescom ಸೆ.26. ಆನವಟ್ಟಿ ಮೆಸ್ಕಾಂ ಉಪವಿಭಾಗೀಯ ಕಛೇರಿಯಲ್ಲಿ ಜನಸಂಪರ್ಕ ಸಭೆ

0

Anavatti Mescom ಆನವಟ್ಟಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 26 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ. ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Anavatti Mescom ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9448998783.