Tuesday, March 3, 2026
Tuesday, March 3, 2026
Home Blog Page 1561

ಡೇಟಾ ಶಾಸನ ಉಲ್ಲಂಘನೆ: ವಿದೇಶಿ ಕಂಪನಿಗಳ ಮೇಲೆ ರಷ್ಯದ ಕ್ರಮ

0

ರಷ್ಯಾದ ಸಂವಹನ ನಿಯಂತ್ರಕ ರೋಸ್ಕೊಮ್ನಾಡ್ಜೋರ್ ನಿನ್ನೆ ಶುಕ್ರವಾರದಂದು ಆಲ್ಫಾಬೆಟ್ ಇಂಕ್‌ನ ಗೂಗಲ್ ಹಾಗೂ ಇತರ 6 ವಿದೇಶಿ ತಂತ್ರಜ್ಞಾನ ಕಂಪನಿಗಳ ವಿರುದ್ಧ ವೈಯಕ್ತಿಕ ಡೇಟಾ ಶಾಸನದ ಉಲ್ಲಂಘನೆಗಾಗಿ ಆಡಳಿತಾತ್ಮಕ ಪ್ರಕರಣಗಳನ್ನು ದಾಖಲಿಸಿದೆ ಎಂದು ತಿಳಿಸಿದ್ದಾರೆ.

ಫೆಬ್ರವರಿ 24 ರಂದು ಉಕ್ರೇನ್‌ಗೆ ಅನೇಕ ಪಡೆಗಳನ್ನು ಕಳುಹಿಸಿದಾಗಿನಿಂದ ಪೂರ್ಣ ಪ್ರಮಾಣದ ಮಾಹಿತಿ ಕದನದಲ್ಲಿ ಭುಗಿಲೆದ್ದಿರುವ ವಿವಾದದಲ್ಲಿ ವಿಷಯ, ಸೆನ್ಸಾರ್‌ಶಿಪ್, ಡೇಟಾ ಹಾಗೂ ಸ್ಥಳೀಯ ಪ್ರಾತಿನಿಧ್ಯದ ಕುರಿತು ಮಾಸ್ಕೋ ಗೂಗಲ್ ನೊಂದಿಗೆ ಘರ್ಷಣೆ ಮಾಡಿದೆ.

ರಷ್ಯಾದ ಬಳಕೆದಾರರ ವೈಯಕ್ತಿಕ ಡೇಟಾವನ್ನು ರಷ್ಯಾದ ಪ್ರದೇಶದ ಡೇಟಾಬೇಸ್‌ಗಳಲ್ಲಿ ಸಂಗ್ರಹಿಸದಿದ್ದಕ್ಕಾಗಿ ರಷ್ಯಾ ಕಳೆದ ವರ್ಷ ಗೂಗಲ್‌ಗೆ 3 ಮಿಲಿಯನ್ ರೂಬಲ್ಸ್ ದಂಡ ವಿಧಿಸಿತು.ಹಾಗೂ ರಷ್ಯಾದ ಶಾಸನವನ್ನು ಅನುಸರಿಸಲು ಗೂಗಲ್‌ನ ಪುನರಾವರ್ತಿತ ವಿಫಲತೆಯ ಬಗ್ಗೆ ಹೊಸ ಪ್ರಕರಣವನ್ನು ತೆರೆದಿದೆ ಎಂದು ನಿನ್ನೆ ಶುಕ್ರವಾರ ಹೇಳಿದೆ.

ಪ್ರತಿಕ್ರಿಯಿಸಲು ನಿರಾಕರಿಸಿದ ಗೂಗಲ್, ದಂಡ ವಿಧಿಸಬಹುದು ಎಂದು ರೋಸ್ಕೊಮ್ನಾಡ್ಜೋರ್ ಹೇಳಿದರು.

ಏರ್‌ಬಿಎನ್‌ಬಿ, ಪಿನ್‌ಟರೆಸ್ಟ್, ಲೈಕ್‌ಮೆ, ಟ್ವಿಚ್, ಆಪಲ್ ಮತ್ತು ಯುನೈಟೆಡ್ ಪಾರ್ಸೆಲ್ ಸರ್ವಿಸ್ ಪ್ರಥಮ ಬಾರಿಗೆ 1-6 ಮಿಲಿಯನ್ ರೂಬಲ್ಸ್‌ಗಳ ಸಂಭಾವ್ಯ ದಂಡವನ್ನು ಹೊಂದಿರುವ 6 ಕಂಪನಿಗಳ ವಿರುದ್ಧ ಪ್ರಕರಣಗಳನ್ನು ತೆರೆದಿದೆ ಎಂದು ನಿಯಂತ್ರಕ ಹೇಳಿದೆ.

ಹಿಂದೂ ಮಹಾಸಾಗರದಲ್ಲಿ ಸುನಾಮಿ, ಎಚ್ಚರಿಕೆ!

0

ಪೂರ್ವ ಟಿಮೋರ್ ಕರಾವಳಿಯಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಸುನಾಮಿ ಉಂಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಪೂರ್ವ ಟಿಮೋರ್ ಮತ್ತು ಇಂಡೋನೇಷ್ಯಾ ನಡುವೆ ವಿಭಜನೆಯಾಗಿರುವ ಟಿಮೋರ್ ದ್ವೀಪದ ಪೂರ್ವ ತುದಿಯಿಂದ 51.4 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಹೀಗಾಗಿ, ಹಿಂದೂ ಮಹಾಸಾಗರದ ಸುನಾಮಿ ಎಚ್ಚರಿಕೆ ಮತ್ತು ತಗ್ಗಿಸುವಿಕೆ ವ್ಯವಸ್ಥೆ (IOTWMS) ಈ ಪ್ರದೇಶಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದೆ. ಪೂರ್ವ ಟಿಮೋರ್ ಪೆಸಿಫಿಕ್ “ರಿಂಗ್ ಆಫ್ ಫೈರ್” ನಲ್ಲಿ ನೆಲೆಸಿದೆ. ಇದು ಆಗಾಗ ಭೂಕಂಪ ಉಂಟಾಗಲು ಕಾರಣವಾಗುತ್ತದೆ. ಫೆಬ್ರವರಿಯಲ್ಲಿ ನೆರೆಯ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ 6.2 ತೀವ್ರತೆಯ ಭೂಕಂಪ ಉಂಟಾಗಿತ್ತು. ಈ ಭೂಕಂಪದಲ್ಲಿ 12 ಜನರು ಸಾವನ್ನಪ್ಪಿದ್ದರು.

ಸರ್ಕಾರಿ ಶಾಲೆಗೆ ಡಿಮ್ಯಾಂಡಪೋ ಡಿಮ್ಯಾಂಡ್

0

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಭರ್ತಿಯಾಗಿದೆ. ದಾಖಲಾತಿ ಪ್ರಕ್ರಿಯೆಯನ್ನೇ ನಿಲ್ಲಿಸಿದ್ದಾರೆ. ಆದರೂ, ‘ಇದೇ ಶಾಲೆಗೆ ನಮ್ಮ ಮಕ್ಕಳು ಸೇರಬೇಕು’ ಎನ್ನುವುದು ಪಾಲಕರ ಒತ್ತಾಸೆ.

ಕಳೆದ ಮೂರು ವರ್ಷಗಳಿಂದ ಈ ಶಾಲೆಯಲ್ಲಿ ತಮ್ಮ ಮಕ್ಕಳಿಗೆ ಪ್ರವೇಶ ದೊರಕಿಸಲು ಪೋಷಕರು ಹರಸಾಹಸ ಪಡಬೇಕಿದೆ.
ಗುಣಮಟ್ಟದ ಶಿಕ್ಷಣ ಇನ್ನಿತರೆ ಸೌಲಭ್ಯಗಳ ಕಾರಣ ನಿರೀಕ್ಷೆ ಮೀರಿ ಮಕ್ಕಳು ದಾಖಲಾತಿ ಪಡೆಯುತ್ತಿದ್ದಾರೆ.
ಈ ಪರಿಯಾಗಿ ಬೇಡಿಕೆ ಸೃಷ್ಟಿಯಾಗಿರುವುದು ನಗರದ ಸರ್ಕಾರಿ ಶಾಲೆಗೆ. ನಗರದ ದುರ್ಗಿಗುಡಿಯ ಸರ್ಕಾರಿ ಮಾದರಿ ಇಂಗ್ಲಿಷ್‌ ಮಾಧ್ಯಮ ಶಾಲೆಯಲ್ಲಿ ಈಗಾಗಲೇ ಮಕ್ಕಳು ಹೆಚ್ಚಾಗಿದ್ದಾರೆ. ಇನ್ನಷ್ಟು ಹೆಚ್ಚಾದರೆ ಬೋಧನೆ, ಮಕ್ಕಳ ಬಗ್ಗೆ ಕಾಳಜಿ ವಹಿಸುವುದು ಕಷ್ಟವಾಗಲಿದೆ. ಪ್ರಮುಖವಾಗಿ ಮಕ್ಕಳಿಗೆ ಆಸನದ ಕೊರತೆ ಎದುರಾಗಲಿದೆ ಎನ್ನುತ್ತಾರೆ ಇಲ್ಲಿನ ಶಿಕ್ಷಕರು. ಆದರೆ, ಪಾಲಕರು ತಮ್ಮ ಮಕ್ಕಳು ಇದೇ ಶಾಲೆಗೆ ಸೇರಿಸಲು ಒತ್ತಡ ಹೇರುತ್ತಿದ್ದಾರೆ.

ಶಾಲೆಯಲ್ಲಿ 900 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅವಕಾಶವಿದೆ. ಈಗಾಗಲೇ ಈ ಶಾಲೆಯಲ್ಲಿ 1,200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ಇನ್ನೂ ದಾಖಲಾತಿಗೆ ಅರ್ಜಿಗಳು ಬರುತ್ತಲೇ ಇವೆ.

ಸರ್ಕಾರಿ ಶಾಲೆ ಎಂದು ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಇಲ್ಲಿನ ದುರ್ಗಿಗುಡಿ ಶಾಲೆ ಈಗ ಖಾಸಗಿ ಶಾಲೆಗೂ ಸಡ್ಡುಹೊಡೆದು ಸ್ಮಾರ್ಟ್ ಆಗಿದೆ. ‘ಸ್ಮಾರ್ಟ್ ಸಿಟಿ’ ಯೋಜನೆಯಡಿ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಅತ್ಯಾಧುನಿಕ ಸ್ಮಾರ್ಟ್ ಕ್ಲಾಸ್‍ಗಳನ್ನು ಪ್ರಾರಂಭಿಸಲಾಗುತ್ತಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ದುರ್ಗಿಗುಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಈಗಾಗಲೇ ಮಾದರಿಯಾಗಿ ಸ್ಮಾರ್ಟ್ ತರಗತಿಗಳನ್ನು ಪ್ರಾರಂಭಿಸಲಾಗಿದೆ.

ಸರ್ಕಾರದ ಪಠ್ಯಕ್ರಮವನ್ನು ಡಿಜಿಟಲೀಕರಣಗೊಳಿಸಿ ಶಾಲೆಗೆ ನೀಡಲಾಗಿದೆ. ಇವುಗಳ ಜತೆಗೆ ಯೂಟ್ಯೂಬ್ ಹಾಗೂ ಗೂಗಲ್ ಮೂಲಕ ಪಠ್ಯಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ವಿದ್ಯಾರ್ಥಿಗಳಿಗೆ ತೋರಿಸಲಾಗುತ್ತಿದೆ. ಅವುಗಳನ್ನು ಕೆ-ಯಾನ್ ಪ್ರೊಜೆಕ್ಟರ್ ಮೂಲಕ ಸ್ಮಾರ್ಟ್ ಬೋರ್ಡ್ ಮೇಲೆ ಪ್ರದರ್ಶಿಸಲಾಗುತ್ತಿದೆ. ಹೀಗೆ ಪ್ರದರ್ಶನಗೊಂಡ ಪಠ್ಯಗಳ ಕುರಿತು ಆವಶ್ಯಕತೆ ಇದ್ದಾಗ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿವರಿಸುತ್ತಿದ್ದಾರೆ.

ಸ್ಮಾರ್ಟ್ ಬೋರ್ಡ್ ಮೇಲೆ ಬರೆಯಲು, ಪಠ್ಯವನ್ನು ಮೇಲೆ ಕೆಳಗೆ ಚಲಿಸುವಂತೆ ಮಾಡಲು ಸ್ಟೈಲಸ್ ಎಂಬ ಪೆನ್ ಬಳಸಲಾಗುತ್ತದೆ. ಸ್ಟೈಲಸ್ ಸಹಾಯದಿಂದ ಕಪ್ಪು ಹಲಗೆಯ ಮೇಲೆ ಬರೆಯುವಂತೆ ಸ್ಮಾರ್ಟ್ ಬೋರ್ಡ್ ಮೇಲೆಯೂ ಬರೆದು ವಿವರಿಸಲಾಗುತ್ತಿದೆ.

ಉಡುಪಿಗೆ ಬರುವವರ ಮೇಲೆ ಪೋಲಿಸ್ ವಿಶೇಷ ನಿಗಾ

0

ಕರಾವಳಿ ಅತಿಸೂಕ್ಷ್ಮ ಪ್ರದೇಶವಾಗಿದೆ. ಉಡುಪಿಯಲ್ಲಿ ಇತ್ತೀಚೆಗೆ ಹೊರಗಿನಿಂದ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣ ಹೆಚ್ಚಿದ್ದು ಈ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಜತೆಗೆ ಜಿಲ್ಲೆಯ ಎಲ್ಲ ಚೆಕ್‌ಪೋಸ್ಟ್‌ಗಳನ್ನು ಇನ್ನಷ್ಟು ಬಿಗಿಗೊಳಿಸಿ, ಹೊರಗಿನಿಂದ ಬರುವ ಸಂಶಯಾಸ್ಪದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುವುದು ಎಂದು ಎಡಿಜಿಪಿ ಆಲೋಕ್‌ ಕುಮಾರ್‌ ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಅಧಿಕಾರಿಗಳ ಜತೆ ಸಭೆ ನಡೆಸಿ ಅನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಉಡುಪಿಯಲ್ಲಿ ಹೊರಗಿನವರು ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನಿನ ಇತಿಮಿತಿಯಲ್ಲಿ ಏನೇನೂ ಮಾಡಲು ಸಾಧ್ಯವೋ ಆ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಕೆಲವು ತಾಂತ್ರಿಕ ವಿಷಯ ಇರುವುದರಿಂದ ತನಿಖೆ ಇನ್ನಷ್ಟು ಸಮಯ ಹಿಡಿಯಲಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದ್ದು ಸಮಿತಿ ಇನ್ನೂ ವರದಿ ನೀಡಿಲ್ಲ ಎಂದು ಹೇಳಿದರು.

ಕರಾವಳಿಯ ಸಮಸ್ಯೆಯನ್ನು ಅರಿಯುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಮೊದಲಿನಿಂದಲೂ ಈ ಪ್ರದೇಶದಲ್ಲಿ ಅಂಡರ್‌ವರ್ಲ್ಡ್ ಅನಂತರ ಬೇರೆ ಬೇರೆ ಪ್ರಕರಣ, ಈಗ ಹಿಜಾಬ್‌ ಹೀಗೆ ಸೂಕ್ಷ್ಮ ಪ್ರದೇಶವಾಗಿಯೇ ಉಳಿದಿದೆ. ಯಾವುದೇ ಪ್ರಕರಣ ಬಂದರೂ ಪೊಲೀಸ್‌ ಇಲಾಖೆ ಸಮರ್ಥವಾಗಿ ಎದುರಿಸಲಿದೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಕೆಸಿಆರ್ ಮಾತುಕತೆ

0

ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರು ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕೆಸಿಆರ್ ಅವರು,
ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.
ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ಹಿಂದಿಯ ಹಾಗೆ ತಮಿಳನ್ನೂ ಅಧೀಕೃತ ಭಾಷೆಯನ್ನಾಗಿ ಮಾಡಿ- ಸ್ಟಾಲಿನ್

0

ಭಾರತದ ಸರ್ಕಾರದ ಕಚೇರಿಗಳಲ್ಲಿ ಹಾಗೂ ಮದ್ರಾಸ್‌ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಮಾಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಪ್ರಸ್ತಾಪಿಸಿದ್ದಾರೆ.

ಚೆನ್ನೈನಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸ್ಟಾಲಿನ್‌ ಹಲವು ಬೇಡಿಕೆಗಳನ್ನು ಮುಂದಿಟ್ಟರು.
ಶ್ರೀಲಂಕಾದಿಂದ ಕಚ್ಚಾತೀವು ದ್ವೀಪವನ್ನು ಮರಳಿ ಪಡೆಯಬೇಕು ಹಾಗೂ ನೀಟ್‌ ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಆಗ್ರಹಿಸಿದ್ದಾರೆ.

ಹಿಂದಿಯ ರೀತಿಯಲ್ಲಿ ತಮಿಳನ್ನೂ ಅಧಿಕೃತ ಭಾಷೆಯಾಗಿ ಮಾಡಿ ಹಾಗೂ ಮದ್ರಾಸ್‌ ಹೈಕೋರ್ಟ್‌ನಲ್ಲೂ ತಮಿಳು ಅಧಿಕೃತ ಭಾಷೆಯಾಗಲಿ ಎಂದು ಮುಖ್ಯಮಂತ್ರಿ ಸ್ಟಾಲಿನ್‌ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ತಮಿಳು ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಲಾಗಿದೆ.

ಇದರೊಂದಿಗೆ ಕೇಂದ್ರದಿಂದ ಬಾಕಿ ಇರುವ ₹14,006 ಕೋಟಿ ಜಿಎಸ್‌ಟಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಕೋರಿದ್ದಾರೆ.

ವೈಶ್ಯಾವೃತ್ತಿ ಕಾನೂನು ಬದ್ಧ ದಾಳಿ ನಡೆಸಿ ಅವರನ್ನು ಬಂಧಿಸಬಾರದು- ಸುಪ್ರೀಂ

0

ವೇಶ್ಯಾವಾಟಿಕೆಯೂ ಕಾನೂನುಬದ್ಧವಾದ ಒಂದು ವೃತ್ತಿ.
ಹೀಗಾಗಿ, ವೇಶ್ಯಾಗೃಹದ ಮೇಲೆ ದಾಳಿ ನಡೆಸಿ ವೇಶ್ಯೆಯರನ್ನು ಪೊಲೀಸರು ಬಂಧಿಸಬಾರದು. ಅವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ನೇತೃತ್ವದ ತ್ರಿಸದಸ್ಯ ಪೀಠವು ಲೈಂಗಿಕ ಕಾರ್ಯಕರ್ತರ ಹಕ್ಕುಗಳನ್ನು ಕಾಪಾಡಲು 6 ನಿರ್ದೇಶನಗಳನ್ನು ನೀಡಿದೆ. ಲೈಂಗಿಕ ಕಾರ್ಯಕರ್ತರು ಕಾನೂನಿನ ಸಮಾನ ರಕ್ಷಣೆಗೆ ಅರ್ಹರಾಗಿರುತ್ತಾರೆ. ಕ್ರಿಮಿನಲ್ ಕಾನೂನು ಎಲ್ಲಾ ಪ್ರಕರಣಗಳಲ್ಲಿ ವಯಸ್ಸು ಮತ್ತು ಒಪ್ಪಿಗೆಯ ಆಧಾರದ ಮೇಲೆ ಸಮಾನವಾಗಿ ಅನ್ವಯಿಸಬೇಕು. ಲೈಂಗಿಕ ಕಾರ್ಯಕರ್ತೆಯು ತನ್ನ ಒಪ್ಪಿಗೆಯೊಂದಿಗೆ ಭಾಗವಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾದಾಗ ಪೊಲೀಸರು ಮಧ್ಯಪ್ರವೇಶಿಸಬಾರದು. ಅವರ ವಿರುದ್ಧ ಯಾವುದೇ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಬಾರದು. ಈ ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನದ 2 ನೇ ಪರಿಚ್ಛೇದದ ಅಡಿಯಲ್ಲಿ ಗೌರವಯುತವಾದ ಜೀವನವನ್ನು ಹೊಂದುವ ಹಕ್ಕಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ವೇಶ್ಯಾವಾಟಿಕೆಯು ಒಂದು ವೃತ್ತಿಯಾಗಿದೆ. ಇದು ಕಾನೂನುಬಾಹಿರವಲ್ಲ. ಲೈಂಗಿಕ ಕಾರ್ಯಕರ್ತೆಯರು ಕಾನೂನಿನಡಿಯಲ್ಲಿ ಘನತೆ ಮತ್ತು ಸಮಾನ ರಕ್ಷಣೆಗೆ ಅರ್ಹರು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಸ್ವಯಂಪ್ರೇರಿತ ವೇಶ್ಯಾವಾಟಿಕೆ ಕಾನೂನುಬಾಹಿರವಲ್ಲ ಮತ್ತು ವೇಶ್ಯಾಗೃಹವನ್ನು ನಡೆಸುವುದು ಕಾನೂನುಬಾಹಿರವಾಗಿರುವುದರಿಂದ ವೇಶ್ಯಾಗೃಹಗಳ ಮೇಲಿನ ದಾಳಿಯಲ್ಲಿ ಲೈಂಗಿಕ ಕಾರ್ಯಕರ್ತರನ್ನು ಬಂಧಿಸಬಾರದು, ದಂಡ ವಿಧಿಸಬಾರದು, ಕಿರುಕುಳ ನೀಡಬಾರದು ಎಂದು ಪೀಠವು ಆದೇಶಿಸಿದೆ.
ಲೈಂಗಿಕ ಕಾರ್ಯಕರ್ತೆಯರ ಮಗುವನ್ನು ಕೇವಲ ಲೈಂಗಿಕ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ತಾಯಿಯಿಂದ ಬೇರ್ಪಡಿಸಬಾರದು ಎಂದು ನ್ಯಾಯಾಲಯ ಹೇಳಿದೆ.

ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡವರು ವಯಸ್ಕರಾಗಿದ್ದರೆ, ತಾವೇ ಇಷ್ಟಪಟ್ಟು ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರೆ ಅವರ ವಿರುದ್ಧ ಪೊಲೀಸರು ಕ್ರಿಮಿನಲ್ ಕ್ರಮ ಕೈಗೊಳ್ಳುವಂತಿಲ್ಲ.

ಅಪ್ರಾಪ್ತ ವಯಸ್ಕರು ವೇಶ್ಯಾಗೃಹದಲ್ಲಿ ಅಥವಾ ಲೈಂಗಿಕ ಕಾರ್ಯಕರ್ತರೊಂದಿಗೆ ವಾಸಿಸುತ್ತಿರುವುದು ಕಂಡುಬಂದರೆ, ಮಗುವನ್ನು ಕಳ್ಳಸಾಗಣೆ ಮಾಡಲಾಗಿದೆ ಎಂದು ಭಾವಿಸಬಾರದು. ಲೈಂಗಿಕ ಕಾರ್ಯಕರ್ತೆಯರನ್ನು ಈ ಮನೆಗಳಲ್ಲಿ ಇರಿಸಬಹುದು ಮತ್ತು ಲೈಂಗಿಕ ಕಾರ್ಯಕರ್ತೆಯ ಒಪ್ಪಿಗೆಯನ್ನು ಮ್ಯಾಜಿಸ್ಟ್ರೇಟ್ ನಿರ್ಧರಿಸಿದರೆ, ಅವರನ್ನು ಹೊರಗೆ ಬಿಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭಾರತದ ಇಮೇಜಿಗೆ ವಿದೇಶಗಳು ಮೆಚ್ಚುಗೆ ಸೂಸಿವೆ-ರಾಜ್ ನಾಥ್ ಸಿಂಗ್

0

ಇತ್ತೀಚೆಗೆ ಭಾರತದ ಚಿತ್ರಣ ಬದಲಾಗಿದ್ದು ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಇಂದು ಭಾರತದೊಂದಿಗೆ ಕೈಜೋಡಿಸಲು ಮುಂದಾಗಿವೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ.

ಕಾರವಾರದ ಐಎನ್‌ಎಸ್‌ ಕದಂಬ ನೌಕಾನೆಲೆಗೆ ಆಗಮಿಸಿ ಮಾತನಾಡಿದ ಅವರು,
ಈ ಹಿಂದೆ ಭಾರತವನ್ನು ಗಂಭೀರವಾಗಿ ಪರಿಗಣಿಸದೆ ಇದ್ದವರೂ ಈಗ ಭಾರತದತ್ತ ಒಲವು ತೋರುತ್ತಿದ್ದಾರೆ. ಕಾಲ ಬದಲಾಗಿದೆ. ಭಾರತದ ಸಲಹೆ, ಸೂಚನೆಗಳಿಗೆ ಎಲ್ಲೆಡೆ ಗೌರವ ಸಿಗುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ದೇಶದ ಗೌರವ, ಪ್ರತಿಷ್ಠೆ ಹೆಚ್ಚಾಗಿದೆ ಎಂದರು.

ತಾವು ಈಚೆಗೆ ಅಮೆರಿಕಕ್ಕೆ ಭೇಟಿ ನೀಡಿದಾಗ ಅಲ್ಲಿನ ನೌಕಾಪಡೆ ಮುಖ್ಯಸ್ಥರ ಜತೆ ಮಾತುಕತೆ ನಡೆಸಿದ್ದು, ಭಾರತದ ಜತೆ ಕೈಜೋಡಿಸಲು ಅವರು ಬಯಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್‌ ಆರ್‌. ಹರಿಕುಮಾರ ಮತ್ತು ವೈಸ್‌ ಅಡ್ಮಿರಲ್‌ ಅಜೇಂದ್ರ ಬಹದ್ದೂರ ಸಿಂಗ್‌, ರಿಯರ್‌ ಅಡ್ಮಿರಲ್‌ ಅತುಲ್‌ ಆನಂದ್‌, ಶಾಸಕಿ ರೂಪಾಲಿ ನಾಯ್ಕ ಮತ್ತಿತರರು ಇದ್ದರು.

ಸರ್ಕಾರಿ ಸಿಬ್ಬಂದಿಗೆ ಷಾಕ್ ನೀಡುತ್ತಿರುವ ಪಂಜಾಬ್ ಸಿಎಂ ಮಾನ್

0

ಜೈಲುಗಳಲ್ಲಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಲು ಪಂಜಾಬ್ ಸರ್ಕಾರ ಮುಂದಾಗಿದೆ.

ಕೈದಿಗಳ ಬಳಿ ಮೊಬೈಲ್​ ಸೇರಿ ಯಾವುದೇ ವಸ್ತುಗಳು ಕಂಡ ಬಂದರೆ ಜೈಲಿನ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುತ್ತಿದೆ. ಇದರಲ್ಲಿ ಈಗ ಫರೀದ್‌ಕೋಟ್ ಜೈಲಿನ ಅಧೀಕ್ಷಕನ ತಲೆ ತಂಡವಾಗಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಆಮ್​ ಆದ್ಮಿ ಸರ್ಕಾರವು ಮಾರ್ಚ್ 16ರಿಂದ ಮೇ 10ರವರೆಗೆ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದೆ. ಈ ಕಾರ್ಯಾಚರಣೆಯಲ್ಲಿ 710 ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ನಡುವೆ ಫರೀದ್‌ಕೋಟ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಕೈದಿಯೊಬ್ಬನ ವಿಡಿಯೋ ವೈರಲ್​ ಆಗಿತ್ತು. ಹೀಗಾಗಿ ಜೈಲಿನ ಅಧೀಕ್ಷಕ ಜೋಗಿಂದರ್ ಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಸ್ವತಃ ಕಾರಾಗೃಹ ಸಚಿವ ಹರ್ಜೋತ್ ಬೈನ್ಸ್ ಟ್ವೀಟ್​ ಮಾಡಿದ್ದು, ‘ಈಗಾಗಲೇ ಆಪ್​ ಸರ್ಕಾರ ಜೈಲುಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಲ್ಲಿಸಲು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಜೈಲಿನಲ್ಲಿ ಕೈದಿಯ ವಿಡಿಯೋ ವೈರಲ್ ಆದ ಪ್ರಕರಣ ಸಂಬಂಧ ಜೈಲ್ ಸೂಪರಿಂಟೆಂಡೆಂಟ್​ನ್ನು ಅಮಾನತುಗೊಳಿಸಲಾಗಿದೆ.

ಎರಡು ದಿನಗಳ ಹಿಂದೆಯಷ್ಟೇ ಪಂಜಾಬ್​​ ಸಿಎಂ ಭಗವಂತ್ ಮಾನ್ ಅವರು ಕಮಿಷನ್​ ವಿಚಾರ ಸದ್ದು ಮಾಡ್ತಿದ್ದಂತೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ದಿಢೀರ್ ಕಿತ್ತಾಕಿದ್ದರು.

ಪಾಕ್ ನಲ್ಲಿ ಇಂಧನ ಶೇ 20 ಹೆಚ್ವಳ: ಇಮ್ರಾನ್ ಖಾನ್ ವಾಗ್ದಾಳಿ

0

ಪಾಕಿಸ್ತಾನದ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 30 PKR ಹೆಚ್ಚಿಸಿದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ 20% ಹೆಚ್ಚಳದೊಂದಿಗೆ ವಿದೇಶಿ ಮಾಸ್ಟರ್‌ಗಳ ಮುಂದೆ ಆಮದು ಮಾಡಿಕೊಂಡ ಸರ್ಕಾರದ ಅಧೀನಕ್ಕಾಗಿ ರಾಷ್ಟ್ರವು ಬೆಲೆ ಪಾವತಿಸಲು ಪ್ರಾರಂಭಿಸುತ್ತಿದೆ. ಇದು ಪಾಕಿಸ್ತಾನದ ಇತಿಹಾಸದಲ್ಲಿಯೇ ಅತಿ ಹೆಚ್ಚು ಏಕ ಬೆಲೆ ಏರಿಕೆಯಾಗಿದೆ. ಅಸಮರ್ಥ ಮತ್ತು ಸೂಕ್ಷ್ಮವಲ್ಲದ ಸರ್ಕಾರವು ರಷ್ಯಾದೊಂದಿಗೆ ನಮ್ಮ ಒಪ್ಪಂದವನ್ನು ಅನುಸರಿಸಲಿಲ್ಲ” ಎಂದು ಇಮ್ರಾನ್ ಖಾನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಪರ್ಯಾಯವಾಗಿ ರಷ್ಯಾದಿಂದ ಅಗ್ಗದ ತೈಲವನ್ನು ಖರೀದಿಸುವ ಮೂಲಕ ಅಮೆರಿಕಾದ ಕಾರ್ಯತಂತ್ರದ ಮಿತ್ರರಾಷ್ಟ್ರವಾದ ಭಾರತವು ಪ್ರತಿ ಲೀಟರ್‌ಗೆ PKR 25ರಷ್ಟು ಇಂಧನದ ಬೆಲೆಯನ್ನು ಕಡಿಮೆ ಮಾಡಲು ಯಶಸ್ವಿಯಾಗಿದೆ. ಈಗ ನಮ್ಮ ರಾಷ್ಟ್ರವು ಈ ಮೋಸಗಾರರ ಕೈಯಿಂದ ಹಣದುಬ್ಬರದ ಮತ್ತೊಂದು ಬೃಹತ್ ಪ್ರಮಾಣವನ್ನು ಅನುಭವಿಸುತ್ತದೆ” ಎಂದು ಮತ್ತೊಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭಾರತವನ್ನು ಇನ್ನೊಮ್ಮೆ ಹೊಗಳಿದ್ದಾರೆ. ಭಾರತದ ಕ್ರಮವನ್ನು ಹೊಗಳಿ, ಪಾಕ್​ ಸರ್ಕಾರವನ್ನು ಟೀಕಿಸಿರುವ ಇಮ್ರಾನ್ ಖಾನ್, ಈ ಸಂವೇದನಾರಹಿತ ಸರ್ಕಾರ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವು ರಷ್ಯಾದೊಂದಿಗೆ ಶೇ.30ರಷ್ಟು ಅಗ್ಗದ ತೈಲಕ್ಕಾಗಿ ಮಾಡಿಕೊಂಡ ಒಪ್ಪಂದವನ್ನು ಅನುಸರಿಸಿಲ್ಲ ಎಂದು ಹೇಳಿದ್ದಾರೆ.