Tuesday, March 3, 2026
Tuesday, March 3, 2026
Home Blog Page 1566

ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿಅಡಿಕೆ ಧಾರಣೆ

0

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಬಂಪರ್ ಬೆಲೆ ಸಿಗುತ್ತಿದೆ. ಕೆಲ ಜಿಲ್ಲೆಗಳಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆಯಾಗಿದ್ದರೆ, ಕೆಲವು ಮಾರುಕಟ್ಟೆಗಳಲ್ಲಿ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ
ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆ ಬಗ್ಗೆ ಇಲ್ಲಿದೆ ಮಾಹಿತಿ:

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 54,599 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ.

ಅಡಿಕೆ ಗರಿಷ್ಠ ಬೆಲೆ (ಮೇ 23, 2022) ಹೀಗಿದೆ.

ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,339 ರೂ.

ಚನ್ನಗಿರಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,600 ರೂ.

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)
ರಾಶಿ ಅಡಿಕೆ
45,899 ರೂ.

ಹೊನ್ನಾಳಿ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
49,800 ರೂ.

ದಾವಣಗೆರೆ (ದಾವಣಗೆರೆ ಜಿಲ್ಲೆ)
ರಾಶಿ ಅಡಿಕೆ
50,609 ರೂ.

ಹೊಸನಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
46,439 ರೂ.

ಶಿರಸಿ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
49,669 ರೂ.

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
55,569 ರೂ.

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)
ರಾಶಿ ಅಡಿಕೆ
48,599 ರೂ.

ಸಾಗರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
49,299 ರೂ.

ಶಿಕಾರಿಪುರ (ಶಿವಮೊಗ್ಗ ಜಿಲ್ಲೆ)
ರಾಶಿ ಅಡಿಕೆ
45,900 ರೂ.

ಉಕ್ರೇನ್ ಗೆ 20 ದೇಶಗಳಿಂದ ಶಸ್ತ್ರಾಸ್ತ್ರಗಳ ನೆರವು

0

ಮಿತ್ರರಾಷ್ಟ್ರಗಳ ಸಭೆಯಲ್ಲಿ, ರಷ್ಯಾದ ಆಕ್ರಮಣವನ್ನು ಎದುರಿಸಲು ಉಕ್ರೇನ್ ಗೆ ಕ್ಷಿಪಣಿ, ಹೆಲಿಕಾಪ್ಟರ್ ಸಹಿತ ಶಸ್ತ್ರಾಸ್ತ್ರಗಳನ್ನು ಒದಗಿಸಲು 20 ದೇಶಗಳು ಮುಂದೆ ಬಂದಿವೆ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಘೋಷಿಸಿದ್ದಾರೆ.

20 ದೇಶಗಳು ಶಸ್ತ್ರಾಸ್ತ್ರ, ಸೇನಾ ಉಪಕರಣ, ಟ್ಯಾಂಕ್ ಗಳು, ಹೆಲಿಕಾಪ್ಟರ್ ಗಳು, ತಟ ರಕ್ಷಣಾ ವ್ಯವಸ್ಥೆ ಸಹಿತ ಶಸ್ತ್ರಾಸ್ತ್ರ ನೆರವಿನ ವಾಗ್ದಾನ ಮಾಡಿವೆ. ಇತರರು ಉಕ್ರೇನ್ ಯೋಧರಿಗೆ ತರಬೇತಿ ಒದಗಿಸುವುದಾಗಿ ಘೋಷಿಸಿದ್ದಾರೆ. 3 ತಿಂಗಳಿಂದ ನಡೆಯುತ್ತಿರುವ ಯುದ್ಧದ ಇತ್ತೀಚಿನ ಸ್ಥಿತಿಗತಿಯ ಬಗ್ಗೆ ಉಕ್ರೇನ್ ರಕ್ಷಣಾ ಸಚಿವ ಒಲೆಕ್ಸಿಯ್ ರೆಝ್ನಿಕೋವ್ ಸಭೆಗೆ ವಿವರಿಸಿದರು ಎಂದು ಆಸ್ಟಿನ್ ಹೇಳಿದ್ದಾರೆ.

ಉಕ್ರೇನ್ ರಕ್ಷಣಾ ಸಂಪರ್ಕ ಗುಂಪು ಎಂದು ಹೆಸರಿಸಲಾಗಿರುವ ಸಂಘಟನೆಯ ಸದಸ್ಯ ದೇಶಗಳ ಪ್ರತಿನಿಧಿಗಳು ಆನ್ ಲೈನ್ ಮೂಲಕ ನಡೆದ ಸಭೆಯಲ್ಲಿ ಪಾಲ್ಗೊಂಡು ಉಕ್ರೇನ್ ಗೆ ನೆರವು ಒದಗಿಸುವ ಬಗ್ಗೆ ಚರ್ಚೆ ನಡೆಸಿವೆ.

ಹಡಗು ನಿರೋಧಕ ಹಾರ್ಪೂನ್ ಕ್ಷಿಪಣಿ ವ್ಯವಸ್ಥೆ ಒದಗಿಸುವುದಾಗಿ ಡೆನ್ಮಾರ್ಕ್ ವಾಗ್ದಾನ ಮಾಡಿದೆ. ದಾಳಿ ಹೆಲಿಕಾಪ್ಟರ್, ಟ್ಯಾಂಕ್ ಗಳು ಹಾಗೂ ರಾಕೆಟ್ ವ್ಯವಸ್ಥೆಗಳನ್ನು ಝೆಕ್ ಗಣರಾಜ್ಯ ಒದಗಿಸಲಿದೆ. ಹಾರ್ಪೂನ್ ಕ್ಷಿಪಣಿ ದಡದಿಂದ 300 ಕಿ.ಮೀ ದೂರದಲ್ಲಿರುವ ಹಡಗುಗಳನ್ನು ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ. ಇವುಗಳನ್ನು ಕಪ್ಪು ಸಮುದ್ರದಲ್ಲಿರುವ ಉಕ್ರೇನ್ ನ ಒಡೆಸಾ ಬಂದರಿನಲ್ಲಿ ನಿಯೋಜಿಸಲಾಗುವುದು. ಈ ಕ್ಷಿಪಣಿಗಳು ರಷ್ಯಾದ ಕೆಲವು ನೌಕೆಗಳು ಲಂಗರು ಹಾಕಿರುವ ಸೆವಾಸ್ಟೊಪೊಲ್ ಬಂದರಿನ ಉದ್ದೇಶಿತ ಗುರಿಯನ್ನು ತಲುಪುವ ಸಾಮರ್ಥ್ಯ ಹೊಂದಿದೆ ಎಂದವರು ಹೇಳಿದ್ದಾರೆ.

ಈ ಮಧ್ಯೆ, ದೀರ್ಘದೂರ ವ್ಯಾಪ್ತಿಯ ಕ್ಷಿಪಣಿ, ಎಂ270 ಮತ್ತು ಎಂ 142 ಹಿಮರ್ ಕ್ಷಿಪಣಿ ಉಡಾವಣಾ ವ್ಯವಸ್ಥೆಯನ್ನು ತ್ವರಿತವಾಗಿ ಒದಗಿಸುವಂತೆ ಉಕ್ರೇನ್ ಅಮೆರಿಕವನ್ನು ಒತ್ತಾಯಿಸಿದೆ. ಈ ವ್ಯವಸ್ಥೆಯಿಂದ 187 ಮೈಲುಗಳಷ್ಟು ದೂರದ ಗುರಿಯನ್ನು ತಲುಪುವ ಸಾಮರ್ಥ್ಯದ ಹಲವು ಕ್ಷಿಪಣಿಗಳನ್ನು ಏಕಕಾಲದಲ್ಲಿ ಉಡಾಯಿಸಬಹುದಾಗಿದೆ.

ಜೈಲುವಾಸ ಶಿಕ್ಷೆಗೊಳಗಾದ ಸಿಧು ಈಗ ವೈದ್ಯಕೀಯ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು

0

1988 ರ ರೋಡ್ ರೇಜ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ ಪಟಿಯಾಲಾ ಕೇಂದ್ರ ಕಾರಾಗೃಹದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವೈದ್ಯರ ತಂಡ ಯಾವ ವಿಶೇಷ ಆಹಾರದ ಅಗತ್ಯವಿದೆ ಎಂಬುದನ್ನು ನೋಡುತ್ತದೆ ಮತ್ತು ನಂತರ ಅದು ಸ್ಥಳೀಯ ನ್ಯಾಯಾಲಯದಲ್ಲಿ (ಪಟಿಯಾಲದಲ್ಲಿ) ತನ್ನ ವರದಿಯನ್ನು ಸಲ್ಲಿಸುತ್ತದೆ ಎಂದು ಸಿಧು ಪರ ವಕೀಲರು ಹೇಳಿದ್ದಾರೆ.

ವಕೀಲರ ಪ್ರಕಾರ, ನವಜೋತ್ ಸಿಧು ಗೋಧಿ, ಸಕ್ಕರೆ, ಮೈದಾ ಮತ್ತು ಇತರ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವಂತಿಲ್ಲ. ಅವರು ಹಣ್ಣುಗಳು, ಪಪ್ಪಾಯಿ, ಪೇರಲ, ಡಬಲ್ ಟೋನ್ಡ್ ಹಾಲು, ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳನ್ನು ಹೊಂದಿರದ ಆಹಾರ ಪದಾರ್ಥಗಳನ್ನು ಸೇವಿಸಬಹುದು ಎಂದಿದ್ದಾರೆ.

ಅವರನ್ನು ಭಾರೀ ಭದ್ರತೆಯಲ್ಲಿ ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವಜೋತ್ ಸಿಧು ಜೈಲಿನಲ್ಲಿ ವಿಶೇಷ ಆಹಾರಕ್ರಮವನ್ನು ಬಯಸಿದ್ದಾರೆ ಎಂದು ಕ್ರಿಕೆಟಿಗ-ರಾಜಕಾರಣಿಯ ವಕೀಲ ಎಚ್‌ಪಿಎಸ್ ವರ್ಮಾ ಅವರು ಹೇಳಿದ್ದಾರೆ.

ವೈದ್ಯರ ತಂಡ ಆಸ್ಪತ್ರೆಯಲ್ಲಿ ನವಜೋತ್ ಸಿಧು ಅವರ ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ನಡೆಸುತ್ತದೆ ಎಂದು ಅವರು ತಿಳಿಸಿದ್ದಾರೆ.

2015 ರಲ್ಲಿ ನವಜೋತ್ ಸಿಂಗ್ ಸಿಧು ಅವರು ದೆಹಲಿಯ ಆಸ್ಪತ್ರೆಯಲ್ಲಿ ತೀವ್ರವಾದ ರಕ್ತನಾಳದ ಥ್ರಂಬೋಸಿಸ್ (ಡಿವಿಟಿ) ಗಾಗಿ ಚಿಕಿತ್ಸೆಗೆ ಒಳಗಾಗಿದ್ದರು.

ಡಿವಿಟಿ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಉಂಟಾಗುತ್ತದೆ, ಇದು ಸಾಮಾನ್ಯ ರಕ್ತದ ಹರಿವನ್ನು ತಡೆಯುತ್ತದೆ.

ಸಿಧು ಅವರನ್ನು ಕರೆತಂದ ನಂತರ ಹಲವಾರು ಕಾಂಗ್ರೆಸ್ ಬೆಂಬಲಿಗರು, ರಾಜೀಂದ್ರ ಆಸ್ಪತ್ರೆಗೆ ಧಾವಿಸಿದರು. ಮೇ 20 ರಂದು ಪಂಜಾಬ್ ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಸ್ಥಳೀಯ ನ್ಯಾಯಾಲಯದ ಮುಂದೆ ಶರಣಾದ ನಂತರ ಪಟಿಯಾಲ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

1988 ರ ರೋಡ್ ರೇಜ್ ಸಾವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಒಂದು ವರ್ಷದ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಹತ್ತನೇ ತರಗತಿ ಹೆಚ್ಚು ಅಂಕ ಪಡೆದ ನೋಂದಾಯಿತ ಕಾರ್ಮಿಕರ ಮಕ್ಕಳ ಮಾಹಿತಿ ಬೇಕಿದೆ

0

2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವು ಮೇ.19 ರಂದು ಪ್ರಕಟಗೊಂಡಿದೆ. ಇದರ ಹಿನ್ನಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳು ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ಎಲ್ಲಾ ಮಾಧ್ಯಮಗಳಲ್ಲಿ ಸುದ್ದಿ ಕೇಳಿ ಬರುತ್ತಿದೆ.

ಈ ಮಕ್ಕಳಿಗೆ ಅಗತ್ಯ ಪ್ರೋತ್ಸಾಹ ನೀಡಲು ಅನುಕೂಲವಾಗುವಂತೆ ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿರುವ ನೋಂದಾಯಿತ ಕಾರ್ಮಿಕ ಮಕ್ಕಳ ಹೆಸರು, ಫಲಾನುಭವಿಗಳ ಹೆಸರು, ನೋಂದಾಣಿ ಸಂಖ್ಯೆ, ದೂರವಾಣಿ ಸಂಖ್ಯೆ ಪಡೆದ ಅಂಕಗಳು, ವ್ಯಾಸಂಗ ಮಾಡಿದ ಶಾಲೆಯ ಹೆಸರು ಮತ್ತು ವಿಳಾಸ, ವಾಸವಿರುವ ಜಿಲ್ಲೆಯ ಹೆಸರುಗಳುಳ್ಳ ಮಾಹಿತಿಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ನೀಡಬೇಕಾಗಿರುವ ಹಿನ್ನಲೆಯಲ್ಲಿ ಮೇ.26 ರೊಳಗಾಗಿ ಹತ್ತಿರದ ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ಕಾರ್ಮಿಕ ಅಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕೆಂದು ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಥುರಾ, ಪೂಜಾಸ್ಥಳ ಕಾಯಿದೆ 1991ಗೆ ಒಳಪಡುವುದಿಲ್ಲ

0

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದದಲ್ಲಿ ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ 1991 ಅನ್ವಯವಾಗುವುದಿಲ್ಲ ಎಂದು ಉತ್ತರ ಪ್ರದೇಶದ ಮಥುರಾದಲ್ಲಿರುವ ನ್ಯಾಯಾಲಯ ತಿಳಿಸಿದೆ.

ವಿವಾದಿತ ಭೂಮಿಯನ್ನು ವಿಭಜಿಸುವ ರಾಜಿ ಸುಗ್ರೀವಾಜ್ಞೆಗೆ 1968 ರಲ್ಲಿ ಕಾನೂನನ್ನು ಜಾರಿಗೊಳಿಸುವ ಮೊದಲೇ ಸಹಿ ಮಾಡಲಾಗಿದೆ ಎಂದು ನ್ಯಾಯಾಲಯವು ಕಳೆದ ಗುರುವಾರ ಗಮನಿಸಿದೆ.

ಆದೇಶಕ್ಕೆ ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮಥುರಾ ಮತ್ತು ಕಾಶಿ ದೇವಾಲಯಗಳ ಮೇಲಿನ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ ಎಂದು ಹೇಳಿದೆ. ಶಾಹಿ ಈದ್ಗಾದ ವಕೀಲರು 1991 ರ ಕಾಯ್ದೆಯ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು, ಇಲ್ಲದಿದ್ದರೆ ಕೆಳ ನ್ಯಾಯಾಲಯಗಳು ಅದನ್ನು ನಿರಂಕುಶವಾಗಿ ವ್ಯಾಖ್ಯಾನಿಸುವುದನ್ನು ಮುಂದುವರಿಸುತ್ತವೆ ಎಂದು ಹೇಳಿದರು.

ದೂರಗಾಮಿ ಪರಿಣಾಮಗಳನ್ನು ಬೀರಬಹುದಾದ ಮಹತ್ವದ ಬೆಳವಣಿಗೆ ಇದಾಗಿದ್ದು, ಶ್ರೀ ಕೃಷ್ಣ ಜನ್ಮಭೂಮಿ ಟ್ರಸ್ಟ್ ಮತ್ತು ಇತರ ಖಾಸಗಿ ಪಕ್ಷಗಳ ನಾಗರಿಕ ಪರಿಷ್ಕರಣೆ ಅರ್ಜಿಯನ್ನುಅಂಗೀಕರಿಸಿ ವಿಚಾರಣೆಯ್ನು ಮಥುರಾ ಜಿಲ್ಲಾ ನ್ಯಾಯಾಧೀಶರು ಆರಂಭಿಸಿದ್ದಾರೆ. ಈ ವೇಳೆ ಈ ಅಭಿಪ್ರಾಯ ವಕ್ತಪಡಿಸಿದ್ದಾರೆ.

1968 ರಲ್ಲಿ ಶ್ರೀ ಕೃಷ್ಣ ಜನ್ಮಸ್ಥಾನ ಸೇವಾ ಸಂಸ್ಥಾನ ಮತ್ತು ಟ್ರಸ್ಟ್ ಶಾಹಿ ಮಸೀದಿ ಈದ್ಗಾ ರಾಜಿ ಒಪ್ಪಂದ ಮಾಡಿಕೊಂಡಿತ್ತು. ದೇವಾಲಯದ ಪ್ರಾಧಿಕಾರವು ವಿವಾದಿತ ಭೂಮಿಯನ್ನು ಮಸೀದಿ ಇರುವ ಈದ್ಗಾಕ್ಕೆ ಬಿಟ್ಟುಕೊಟ್ಟಿತ್ತು.

ಆದರೆ, ಇತ್ತೀಚೆಗೆ ಸಲ್ಲಿಸಲಾದ ಅರ್ಜಿಗಳ ಒಂದು ಪ್ರತಿಯಲ್ಲಿ, ಭೂಮಿಯು ಭಗವಾನ್ ಶ್ರೀ ಕೃಷ್ಣ ವಿರಾಜಮಾನನ ಒಡೆತನದಲ್ಲಿದೆ ಮತ್ತು ಅಂತಹ ಒಪ್ಪಂದವನ್ನು ಮಾಡಲು ಟ್ರಸ್ಟ್‌ಗೆ ಯಾವುದೇ ಹಕ್ಕಿಲ್ಲ ಎಂದು ವಾದಿಸಿತು. ಇಲ್ಲಿಯವರೆಗೆ, ಮಥುರಾದ ವಿವಿಧ ನ್ಯಾಯಾಲಯಗಳಲ್ಲಿ ಬಹುತೇಕ ಒಂದೇ ರೀತಿಯ ಬೇಡಿಕೆಯೊಂದಿಗೆ (ಶಾಹಿ ಮಸೀದಿ ಈದ್ಗಾ ಸ್ಥಳಾಂತರ) 11 ಮೊಕದ್ದಮೆಗಳನ್ನು ಸಲ್ಲಿಸಲಾಗಿದೆ.

ಆದರೆ ಮುಸ್ಲಿಂ ಕಡೆಯವರು ಜ್ಞಾನವಾಪಿ ಮಸೀದಿಯನ್ನು ಪೂಜಾ ಸ್ಥಳಗಳ (ವಿಶೇಷ ನಿಬಂಧನೆಗಳು) ಕಾಯಿದೆ, 1991 ರ ಅಡಿಯಲ್ಲಿ ರಕ್ಷಿಸಲಾಗಿದೆ ಎಂದು ವಾದಿಸಿದ್ದಾರೆ.

ಪೂಜಾ ಸ್ಥಳಗಳ ಕಾಯಿದೆಯು ಪೂಜಾ ಸ್ಥಳದ ಧಾರ್ಮಿಕ ಪಾತ್ರವನ್ನು ಪರಿವರ್ತಿಸುವುದನ್ನು ನಿಷೇಧಿಸುತ್ತದೆ ಮತ್ತು ಭಾರತದ ಸ್ವಾತಂತ್ರ್ಯದ ಸಮಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುತ್ತದೆ.

ಕಾಯಿದೆಯು ಪ್ರಕಾರ, ‘ಯಾವುದೇ ಪೂಜಾ ಸ್ಥಳದ ಪರಿವರ್ತನೆಯನ್ನು ನಿಷೇಧಿಸುವ ಮತ್ತು 1947 ರ ಆಗಸ್ಟ್ 15 ನೇ ದಿನದಂದು ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಕಾಪಾಡಿಕೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ ಅಥವಾ ಅದಕ್ಕೆ ಸಂಬಂಧಿಸಿದ ವಿಷಯಗಳಿಗೆ ಒದಗಿಸುವ ಕಾಯಿದೆ’ ಎಂದು ಹೇಳುತ್ತದೆ.

ಟೋಕಿಯೋದಲ್ಲಿ ಮೋದಿ ಮನ ಸೆಳೆದ ಜಪಾನಿ ಎಳೆಯ

0

ಪ್ರಧಾನಿ ನರೇಂದ್ರ ಮೋದಿ ಪ್ರಸ್ತುತ ಜಪಾನ್‌ನ ಟೋಕಿಯೊ ನಗರಕ್ಕೆ ಎರಡು ದಿನಗಳ ಪ್ರವಾಸದಲ್ಲಿದ್ದಾರೆ.

ಟೋಕಿಯೋಗೆ ಬಂದಿಳಿದ ಅವರು, ಹೋಟೆಲ್‌ಗೆ ಆಗಮಿಸಿದ ಭಾರತೀಯ ಮಕ್ಕಳೊಂದಿಗೆ ತಮ್ಮ ಹಸ್ತಾಕ್ಷರಕ್ಕಾಗಿ ಕಾಯುತ್ತಿದ್ದ ಕೆಲವು ಜಪಾನಿನ ಮಕ್ಕಳೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಜಪಾನಿ ಬಾಲಕನೊಬ್ಬ ಕೈಯಲ್ಲಿ ತ್ರಿವರ್ಣ ಧ್ವಜವನ್ನು ಪ್ರಧಾನಿ ಮೋದಿಯೊಂದಿಗೆ ಹಿಂದಿ ಭಾಷೆಯಲ್ಲಿ ಸಂವಹನ ನಡೆಸಿದ್ದಾನೆ.

ಇದರಿಂದ ಆಶ್ಚರ್ಯಗೊಂಡ ಪ್ರಧಾನಿ ನರೇಂದ್ರ ಮೋದಿ, ವ್ಹಾವ್​! ನೀವು ಹಿಂದಿ ಭಾಷೆಯನ್ನು ಎಲ್ಲಿ ಕಲಿತಿದ್ದೀರಿ ಎಂದು ಕೇಳಿದ್ದಾರೆ.

ಬಿಜೆಪಿಯಿಂದ ಸರ್ವಾಧಿಕಾರಿ ನಡವಳಿಕೆ- ಮಮತಾ

0

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಕೇಂದ್ರ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ರಕ್ಷಣೆಯಾಗಬೇಕಿದ್ದರೆ ಕೇಂದ್ರದ ಸಂಸ್ಥೆಗಳಿಗೆ ಸ್ವಾಯತ್ತೆ ನೀಡಬೇಕು ಎಂದೂ ಪ್ರತಿಪಾದಿಸಿದ್ದಾರೆ.
ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲಾಗುತ್ತಿಲ್ಲ. ಯಾಕೆಂದರೆ ಅವುಗಳಿಗೆ ಸ್ವಾಯತ್ತೆ ಇಲ್ಲ. ಸ್ವಾಯತ್ತೆ ಎಂಬುದು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿದೆ. ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಅವರಂಥ ಸರ್ವಾಧಿಕಾರಿಗಳ ಆಡಳಿತದ ಸಂದರ್ಭದಲ್ಲೇ ಈ ಮಟ್ಟದ ರಾಜಕೀಯ ಹಸ್ತಕ್ಷೇಪ ಇರಲಿಲ್ಲ ಎಂದು ಮಮತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಗಳ ವಿಚಾರದಲ್ಲಿ ಮಧ್ಯಪ್ರವೇಶಿಸುವುದನ್ನು ಖಂಡಿಸಿರುವ ಅವರು, ಬಿಜೆಪಿ ಆಡಳಿತದಲ್ಲಿ ಸರ್ವಾಧಿಕಾರಿಗಳಾದ ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಆಳ್ವಿಕೆಗಿಂತಲೂ ಹೀನಾಯ ಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದ್ದಾರೆ.

ಟೊಮ್ಯಾಟೊ ದರ ಏರಿತು ಈರುಳ್ಳಿ ಕೊಂಚ ಕುಸಿಯಿತು

0

ಕಳೆದ ಅನೇಕ ದಿನಗಳಿಂದ ಟೊಮೆಟೊ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರಿಂದ ಬೆಳೆಗಾರರ ಮುಖದಲ್ಲಿ ಸಂತಸ ನೋಡುವಂತಾಗಿದೆ. ಆದರೆ, ಇದೇ ಸಂದರ್ಭದಲ್ಲಿ ಈರುಳ್ಳಿ ದರ ಭಾರಿ ಪ್ರಮಾಣದಲ್ಲಿ ಇಳಿಮುಖ ಕಂಡು ರೈತರಿಗೆ ಸಂಕಷ್ಟ ಎದುರಾಗಿದೆ.

ಟೊಮೇಟೊ ದರ ಅನೇಕ ಕಡೆ ಕೆಜಿಗೆ 100 ರೂಪಾಯಿ ಗಡಿದಾಟಿದೆ.

ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ದರ ಏರಿಕೆ ಕಂಡಿದೆ. ಕೋಲಾರ ಮಾರುಕಟ್ಟೆಯಲ್ಲಿ ಸಗಟು ದರ ಕ್ವಿಂಟಾಲ್ 6000 ರೂಪಾಯಿಗೆ ಜಿಗಿದಿದೆ. ಏಪ್ರಿಲ್ 23 ರಂದು 1 ಕ್ವಿಂಟಾಲ್ ಟೊಮೆಟೊ ಸಗಟು ದರ ಗರಿಷ್ಠ 3200 ರೂಪಾಯಿ ಇತ್ತು. ದಿನೇ ದಿನೇ ಟೊಮೆಟೊ ಬೆಲೆ ಏರಿಕೆಯಾಗುತ್ತಿರುವುದದಿಂದ ಗ್ರಾಹಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.

ರಫ್ತು ನಿಷೇಧ ಸೇರಿದಂತೆ ಹಲವು ಕಾರಣಗಳಿಂದಾಗಿ ಈರುಳ್ಳಿ ದರ ಕುಸಿತ ಕಂಡಿದೆ. ಬೆಂಗಳೂರಿನ ಮಾರುಕಟ್ಟೆಯಲ್ಲಿ ಈರುಳ್ಳಿ ಸಗಟು ದರ ಕೆಜಿಗೆ ಕೇವಲ 3 ರೂಪಾಯಿಗೆ ಕುಸಿದಿದೆ. 50 ಕೆಜಿಗೆ 500 ರೂ. ದರ ಇದೆ. ಕೆಲವೆಡೆ ಈರುಳ್ಳಿ ದರ ಇದಕ್ಕಿಂತಲೂ ಕಡಿಮೆಯಾಗಿದೆ ಎನ್ನಲಾಗಿದೆ.

ಬೆಳೆದ ಖರ್ಚು ಮಾಡಿದ ಬೆಲೆ ಕೂಡ ರೈತರಿಗೆ ಸಿಗದಂತಹ ಪರಿಸ್ಥಿತಿ ಎದುರಾಗಿದೆ. ಜಮೀನಿನಿಂದ ಮಾರುಕಟ್ಟೆಗೆ ಈರುಳ್ಳಿ ತೆಗೆದುಕೊಂಡು ಹೋದರೆ ಲಾರಿ ಬಾಡಿಗೆ ಕೂಡ ಸಿಗದ ಕಾರಣಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಸಗಟು ದರ 50 ಕೆಜಿ ಚೀಲಕ್ಕೆ 500ರಿಂದ 600 ರೂಪಾಯಿ, 2ನೇ ದರ್ಜೆಯ ಈರುಳ್ಳಿ 70 ಕೆಜಿ ಚೀಲದ ಸಗಟು ದರ 250 ರಿಂದ 300 ರೂಪಾಯಿಗೆ ಮಾರಾಟವಾಗಿದೆ ಎನ್ನಲಾಗಿದೆ.

ತುಂಗಭದ್ರಾ ಜಲಾಶಯ ಭರ್ತಿಗೆ ಇನ್ನೂ 25 ಅಡಿಯಿದೆ

0

ತುಂಗಭದ್ರಾ ಜಲಾಶಯಕ್ಕೆ 43,446 ಕ್ಯುಸೆಕ್‌ ನೀರು ಹರಿದು ಬಂದಿದೆ.ಜಲಾಶಯದ ನೀರಿನ ಮಟ್ಟವು 1608 ಅಡಿಗೆ ತಲುಪಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 1633 ಅಡಿ. ಜಲಾಶಯವು ಭರ್ತಿಯಾಗಲು ಇನ್ನು 25 ಅಡಿ ನೀರು ಬೇಕು.

ಜಲಾಶಯದಲ್ಲಿ 31 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ದಿನದಂದು ಜಲಾಶಯದ ನೀರಿನ ಮಟ್ಟ 1585 ಹಾಗೂ ಜಲಾಶಯದ ಒಳಹರಿವು ಕೇವಲ 764 ಕ್ಯುಸೆಕ್‌ ಇತ್ತು. ಕೇವಲ 7 ಟಿಎಂಸಿಯಷ್ಟು ನೀರು ಮಾತ್ರ ನೀರು ಶೇಖರಣೆಯಾಗಿತ್ತು.

ಕಳೆದ 4 ದಿನದಲ್ಲಿ ಜಲಾಶಯಕ್ಕೆ 2,10,347 ಲಕ್ಷ ಕ್ಯುಸೆಕ್‌ ನೀರು ಹರಿದು ಬಂದಿದೆ. ಶುಕ್ರವಾರ 16,048, ಶನಿವಾರ 61,189, ಭಾನುವಾರ 89,664 ಮತ್ತು ಸೋಮವಾರ 43,446 ಕ್ಯುಸೆಕ್‌ ನೀರು ಹರಿದು ಬಂದಿದೆ.
ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿದೆ. ಅದರೂ ಮೇ ಅಂತ್ಯದವರೆಗೆ ಜಲಾಶಯದಲ್ಲಿ 40 ಟಿಎಂಸಿ ನೀರು ಸಂಗ್ರಹವಾಗಲಿದೆ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ಚಕ್ರತೀರ್ಥರನ್ನ ಪಠ್ಯಪುಸ್ತಕ ಸಮಿತಿಯಿಂದ ಕಿತ್ತುಹಾಕಿ- ಸಿದ್ಧು ಕಿಡಿ

0

ನಾಡಗೀತೆಯನ್ನು ಅವಮಾನ ಮಾಡಿದ, ರಾಷ್ಟ್ರಗೀತೆಯನ್ನು ಗೇಲಿ ಮಾಡಿದ ರೋಹಿತ್‌ ಚಕ್ರತೀರ್ಥನಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರನ್ನಾಗಿ ಬಿಜೆಪಿ ಸರ್ಕಾರ ನೇಮಕ ಮಾಡಿದೆ. ಸರ್ಕಾರಕ್ಕೆ ನಾಚಿಕೆ, ಮಾನ-ಮರ್ಯಾದೆ ಇದ್ದರೆ ಕೂಡಲೇ ಆತನನ್ನು ಕಿತ್ತು ಹಾಕಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕುವೆಂಪು ಅವರ ಬಗ್ಗೆ ಮತ್ತು ನಾಡಗೀತೆ ಬಗ್ಗೆ ಲಘುವಾಗಿ ಮಾತನಾಡಲು ಹೋಗಬಾರದು. ಅವರು ರಾಷ್ಟ್ರಕವಿ. ಅಂತಹವರ ಬಗ್ಗೆ ಗೇಲಿ ಮಾಡಿದವರಿಗೆ ಪಠ್ಯಪುಸ್ತಕ ಪರಿಷ್ಕರಣೆ ಜವಾಬ್ದಾರಿ ನೀಡುವುದು ಮೂರ್ಖತನ. ಪಠ್ಯ ಪರಿಷ್ಕರಣೆ ಮಾಡಲು ವಿಷಯ ತಜ್ಞರ ಸಮಿತಿ ಮಾಡಬೇಕು. ದೇಶ ಹಾಗೂ ಸಮಾಜದ ಹಿತದೃಷ್ಟಿಯಿಂದ ಯಾರ ಪಠ್ಯ ಇರಬೇಕು. ಯಾರ ಪಠ್ಯ ಇರಬಾರದು ಎಂದು ಅವರು ನಿರ್ಧಾರ ಮಾಡಲಿ. ರೋಹಿತ್‌ ಚಕ್ರತೀರ್ಥ ಆರ್‌ಎಸ್‌ಎಸ್‌ನವರು, ಅವರ ಬದಲು ಯಾವುದೇ ಪಕ್ಷ ಹಾಗೂ ಸಂಘಟನೆಗೆ ಸೇರದ ವಿಷಯ ತಜ್ಞರನ್ನು ಅಧ್ಯಕ್ಷರನ್ನಾಗಿ ಮಾಡಲಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಭಗತ್‌ಸಿಂಗ್‌, ಮಹಾತ್ಮ ಗಾಂಧಿ, ಡಾ.ಬಿ.ಆರ್‌. ಅಂಬೇಡ್ಕರ್‌, ನಾರಾಯಣ ಗುರುಗಳ ವಿಚಾರಗಳನ್ನು ಓದುವುದರಿಂದ ದೇಶಭಕ್ತಿ, ಸಹಿಷ್ಣುತೆ, ಸೌಹಾರ್ದತೆಯ ಮೌಲ್ಯಗಳು ಉದ್ದೀಪನಗೊಳ್ಳುತ್ತವೆ. ಬುದ್ಧ, ಬಸವಣ್ಣ, ಕನಕದಾಸರು ಇವರೆಲ್ಲ ಸಮಾಜ ಸುಧಾರಕರು. ಇಂಥವರ ಬಗ್ಗೆ ಮಕ್ಕಳಿಗೆ ಹೇಳಿ. ವಿದ್ಯಾರ್ಥಿಗಳನ್ನು ಜಾತ್ಯತೀತ ಹಾಗೂ ವೈಜ್ಞಾನಿಕ ಮನೋಭಾವದಿಂದ ನೋಡಬೇಕು. ಮಕ್ಕಳ ಜ್ಞಾನ ವಿಕಾಸವಾಗಬೇಕೋ, ಸಂಕುಚಿತವಾಗಬೇಕೋ, ಎಂದು ಪ್ರಶ್ನಿಸಿದ್ದಾರೆ.