Tuesday, February 17, 2026
Tuesday, February 17, 2026
Home Blog Page 157

Shivamogga Dasara ಸೆ.25. ಕುವೆಂಪು ರಂಗಮಂದಿರದಲ್ಲಿ ರೈತ ದಸರಾ ಕಾರ್ಯಕ್ರಮ

0

Shivamogga Dasara ನಾಡಹಬ್ಬ ಶಿವಮೊಗ್ಗ ದಸರಾ 2025 ರ ಅಂಗವಾಗಿ ಮಹಾನಗರ ಪಾಲಿಕೆ ವತಿಯಿಂದ ಸೆ.25 ರಂದು ನಗರದ ಕುವೆಂಪು ರಂಗಮಂದಿರ ರೈತ ದಸರಾ ಕಾರ್ಯಕ್ರಮವನ್ನು ಆಯೇಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಬಿ.ಹೆಚ್ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಳಿ ಜಾಥ ಕಾರ್ಯಕ್ರಮವನ್ನು ಪ್ರಗತಿ ಪರ ರೈತರು ಹಾಗೂ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ವಿಜೇತರಾದ ಶ್ರೀಮತಿ ಕಮಲಮ್ಮ ಹಾಗೂ ಕುವೆಂಪು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮವನ್ನು ಪ್ರಗತಿ ಪರ ರೈತರು ಹಾಗೂ ಉದಯೋನ್ಮುಖ ಕೃಷಿ ಪಂಡಿತ ಪ್ರಶಸ್ತಿ ವಿಜೇತರಾದ ಈರಪ್ಪ ನಾಯ್ಕ ಉದ್ಘಾಟನೆ ನೆರವೇರಿಸುವರು.
Shivamogga Dasara ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸಲಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಹಾಗೂ ಬೆಂಗಳೂರು ಪ್ರಾದೇಶಿಕ ವಿಭಾಗದ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಗೌರವ ಉಪಸ್ಥಿತಿರಾಗಿ ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳುವರು.

Nidhi Aapke Nikat ಸೆ.29 ರಂದು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ‘ನಿಧಿ ಆಪ್ಕೆ ನಿಕಟ್’ ಕಾರ್ಯಕ್ರಮ

0

Nidhi Aapke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸೆ. 29 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಎಹೆಚ್‌ಪಿ (ಶಾಹಿ ಎಕ್ಸ್ಪೋರ್ಟ್), ಅಪರಲ್ ಪ್ರೆöÊವೇಟ್ ಲಿ., ನಂ.34,35 & 37, ನಂದಿಹಳ್ಳಿ ಗ್ರಾಮ, ಕುಮದ್ವತಿ ಕಾಲೇಜು ಹತ್ತಿರ, ಎಸ್.ಎಸ್.ರಸ್ತೆ, ಶಿಕಾರಿಪುರ, ಶಿವಮೊಗ್ಗ ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ತೋಷನಿ ಅರ್ಬನ್ , #48/1, ಎವಿಕೆ ಕಾಲೇಜು ರಸ್ತೆ, ಪಿ.ಜೆ ಎಕ್ಸೆಟೆನ್ಷನ್, ತೋಷನಿ ಎಂಪೋರಿಯಾ ಇಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ. ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

Shivamogga District Amateur Boxing Association ಸೆ.26 & 27 ಶಿವಮೊಗ್ಗದ ನೆಹರೂ ಒಳ ಕ್ರೀಡಾಂಗಣದಲ್ಲಿ 14 ರಿಂದ17 ವಯೋಮಿತಿಯವರಿಗೆ ರಾಜ್ಯ ಬಾಕ್ಸಿಂಗ್ ಪಂದ್ಯಾವಳಿ

0

Shivamogga District Amateur Boxing Association ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಷಿಂಗ್ ಅಸೋಸಿಯೇಷನ್ ಹಾಗೂ ಮೌಂಟ್ ಹಿರಾ ಪಬ್ಲಿಕ್ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ. 26 ಮತ್ತು 27 ರಂದು ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ 14 ಮತ್ತು 17 ವರ್ಷ ವಯೋಮಿತಿಯೊಳಗಿನ ರಾಜ್ಯ ಬಾಕ್ಸಿಂಗ್ ಪಂದ್ಯಾವಳಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರುಗಳ ಘನಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಎಸ್. ಮಧು ಬಂಗಾರಪ್ಪರವರು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ ಹಾಗೂ ಭದ್ರಾವತಿ ಕ್ಷೇತ್ರ ಶಾಸಕ ಬಿ.ಕೆ ಸಂಗಮೇಶ್ವರ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಇವರುಗಳು ಉಪಸ್ಥಿತರಿರಲಿದ್ದಾರೆ.
Shivamogga District Amateur Boxing Association ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಹಾಗೂ ಗಣ್ಯರು ಭಾಗವಹಿಸುವರು.

S. L. Byrappa ಕನ್ನಡದ ಚಿಂತಕ, ಕಾದಂಬರಿಕಾರ ಎಸ್.ಎಲ್.ಭೈರಪ್ಪ ವಿಧಿವಶ

0

S. L. Byrappa ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಸೆ.24ರಂದು ನಿಧನರಾಗಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಮಧ್ಯಾಹ್ನ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು.

ಈ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಪತ್ರಕರ್ತ ವಿಶ್ವೇಶ್ವರ ಭಟ್‌ ಅವರ ಬೆಂಗಳೂರಿನ ಮನೆಯಲ್ಲಿ ಬಂದು ವಾಸವಾಗಿದ್ದರು ಎನ್ನಲಾಗಿದೆ.

ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು.

S. L. Byrappa ಎಸ್ಎಲ್ ಬೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.

Medical Education and Skill Development ಮಾಚೇನಹಳ್ಳಿ ಸರ್ಕಾರಿ ಉಪಕರಣಾಗಾರ &‌ ಕಾಲೇಜಿಗೆ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಭೇಟಿ

0

Medical Education and Skill Development ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್ ಅವರು ಸೆ.20 ರ ಬೆಳಿಗ್ಗೆ 8.30 ಕ್ಕೆ ಜಿಲ್ಲೆಯ ಮಾಚೇನಹಳ್ಳಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಕಾಲೇಜಿನ ಆಡಳಿತ ಹಾಗೂ ತಾಂತ್ರಿಕ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

2025-26 ರ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿರುವ ಕೋರ್ಸ್ಗೆ ದಾಖಲಾದ ವಿದ್ಯಾರ್ಥಿನಿಯರಿಗೆ “ದೀಪಿಕಾ ವಿದ್ಯಾರ್ಥಿ” ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು.

Medical Education and Skill Development ಈ ವೇಳೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್.ಎಂ, ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್, ಜಿಟಿಟಿಸಿ ಪ್ರಾಶುಂಪಾಲರು, ಘಟಕದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

Madhu Bangarappa ದೇವಾಲಯಗಳಲ್ಲಿನ ಗಂಟೆ ಸದ್ದಿಗಿಂತ ಶಾಲೆಗಳಲ್ಲಿನ ಗಂಟೆ ಸದ್ದು ದೇಶ ಕಟ್ಟುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿಸುತ್ತದೆ- ಮಧು ಬಂಗಾರಪ್ಪ

0

Madhu Bangarappa ಹಸಿದ ಒಡಲಿಗೆ ಅನ್ನ, ಶ್ರಮಿಕ ಕೈಗಳಿಗೆ ಉದ್ಯೋಗ ದೊರೆತರೆ ಜೀವನ ಸುಗಮವಾಗಲಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ಸಮೀಪದ ಆಯನೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ಜಾಮಿಯ ಶಾದಿ ಮಹಲ್ ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ದೇವಾಲಯಗಲ್ಲಿನ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಗಂಟೆ ಸದ್ದು ದೇಶವನ್ನು ಕಟ್ಟುವ ಯುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ರೂಪಿಸುತ್ತದೆ. ಸಾಮಾಜಿಕವಾಗಿ ಸ್ಥಾನಮಾನ ಹೊಂದಲು ಶಿಕ್ಷಣ ಅಗತ್ಯವಾಗಿದೆ. ಮುಸ್ಲಿಂ ಸಮುದಾಯದವರು ಸಹ ಇತ್ತೀಚಿನ ದಿನಗಳಲ್ಲಿ ಶಿಕ್ಷಣಕೆಜೆ ಒತ್ತು ನೀಡಿ, ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳುವಲ್ಲಿ ಉತ್ಸುಕರಾಗಿದ್ದಾರೆ ಎಂದರು.

ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ಸಂಖ್ಯೆ ಅಂದ್ರೆ ಒಟ್ಟು ಸರ್ಕಾರಿ ನೌಕರರಲ್ಲಿ ಶೇ. 38ರಷ್ಟು ಶಿಕ್ಷಕರು ಸೇವೆ ಸಲ್ಲಿಸುತ್ತಿದ್ಫು, ಸುಮಾರು 45000ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದ ಅವರು, ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿಗಿಸಲು ಕ್ರಮ ಕೈಗೊಳ್ಳಲಾಗಿದೆ ಅಲ್ಲದೆ ಹಳೆಯ ಕಟ್ಟಡಗಳ ದುರಸ್ತಿ ಮತ್ತು ನೂತನ ಕೊಠಡಿಗಳ ನಿರ್ಮಾಣ ಕ್ಕೆ ಗಮನಹರಿಸಲಾಗುತ್ತಿದೆ ಎಂದರು.

ಅಜೀಮ್ ಪ್ರೇಮ್ ಜಿ ಫೌಂಡೇಶನ್ ಅವರ ವತಿಯಿಂದ 1591ಕೋಟಿ ರು. ಗಳ ಉದಾರ ನೆರವಿನಿಂದ ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಪೌಸ್ತಿಕ ಆಹಾರ ಮೊಟ್ಟೆಯನ್ನು ವಾರದ ಆರು ದಿನಗಳ ಕಾಲ ವಿತರಿಸಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಜೀವನ ಮಟ್ಟದ ಸುಧಾರಿಸಿದೆ. ಈ ಕಾರ್ಯಕ್ರಮ ವನ್ನು ನೆರೆಯ ರಾಜ್ಯಗಳು ಅನುಸರಿಸುತ್ತಿರುವುದು, ಮಧ್ಯವರ್ಥಿಗಳಿಲ್ಲದೆ ನೇರವಾಗಿ ಫಲಾನುಭವಿಗಳಿಗೆ ಸೌಲಭ್ಯ ನೀಡುತ್ತಿರುವುದು ಅದರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದರು.

Madhu Bangarappa ಸುಮಾರು ಎರಡು ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶಾದಿ ಮಹಲ್ ಉತ್ತಮ ವಿನ್ಯಾಸದಲ್ಲಿ ನಿರ್ಮಿಸಲಾಗಿದೆ. ಈ ಕಟ್ಟಡ ಉದ್ದೇಶಿತ ಕೆಲಸ ಕಾರ್ಯಗಳಿಗೆ ಬಳಕೆ ಆಗಬೇಕು. ಮುಂದಿನ ದಿನಗಳಲ್ಲಿ ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ನೆರವನ್ನು ಸರ್ಕಾರದಿಂದ ಒಡಹಿಸಲಾಗುವುದು ಎಂದರು.

ಕಾರ್ಯಕ್ರಮ ದಲ್ಲಿ ಶಾಸಕರಾದ ಶ್ರೀಮತಿ ಶಾರದಾ ಪೂರ್ಯಾನಾಯ್ಕ್, ಶ್ರೀಮತಿ ಬಲ್ಕಿಸ್ ಬಾನು, ಮಂಜುನಾಥ್ ಬಂಡಾರಿ, ಆಯನೂರ್ ಮಂಜುನಾಥ್, ಕಲಗೋದು ರತ್ನಾಕರ್, ರಮೇಶ್, ಶ್ರೀನಿವಾಸ್ ಕರಿಯಣ್ಣ, ಆರ್. ಪ್ರಸನ್ನಕುಮಾರ್, ಅಸಾಯದ್ ಅಬುಬಕರ್, ಜಬಿವುಲ್ಲಾ ರಾಜವಿ ಮತ್ತಿತರರು ಉಸ್ಥಿತರಿದ್ದರು.

Sri Adhichunchanagiri Mahasamsthana Math ಆದಿಚುಂಚನಗಿರಿ ಮೂಲ ಸಂಸ್ಥಾನದಲ್ಲಿ ರಾಜ್ಯಮಟ್ಟದ ಜಾನಪದ ಕಲಾಮೇಳ

0

Sri Adhichunchanagiri Mahasamsthana Math ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ನಾಳೆಯಿಂದ 25 ರವರೆಗೆಎರಡು ದಿನಗಳ ಕಾಲ ನಾಗಮಂಗಲ ತಾಲೂಕಿನ ಶ್ರೀ Sದಲ್ಲಿ ರಾಜ್ಯಮಟ್ಟದ 46ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳ ಚುಂಚಶ್ರೀ ಪ್ರಶಸ್ತಿ ಪ್ರಧಾನ ನಡೆಯಲಿದೆ.

ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಜಾನಪದ ಕಲಾವಿದರು ತಾವು ಕಲಿತಿರುವ ಗ್ರಾಮೀಣ ಸೊಗಡಿನ ಕಲೆಯನ್ನು ಪ್ರದರ್ಶಿಸುವ ಮೂಲಕ ಭೈರವೈಕ್ಯ ಬಾಲಗಂಗಾಧನಾಥ ಮಹಾ ಸ್ವಾಮೀಜಿಗಳವರ ಆಶಯವನ್ನು ಈಡೇರಿಸಲಿದ್ದಾರೆ.
ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ರಾಜ್ಯಮಟ್ಟದ ಜಾನಪದ ಕಲಾ ಮೇಳವನ್ನು ಇಂದು ಸಂಜೆ 5:00 ಗಂಟೆಗೆ ಶ್ರೀಗಳ ಜೊತೆಗೂಡಿ ಗಣ್ಯರು ಉದ್ಘಾಟಿಸಲಿದ್ದಾರೆ.
ಮುತ್ತಿನ ಪಾಲಕಿ ಉತ್ಸವ – ತೆಪ್ಪೋತ್ಸವ : ಸಂಜೆ 8:30 ಗಂಟೆಗೆ ಶ್ರೀ ಕ್ಷೇತ್ರದ ಜೋಡಿ ರಸ್ತೆಯಲ್ಲಿ ಶ್ರೀ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರ ಸರ್ವಾಲಂಕೃತ ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಜನಪದ ಕಲಾವಿದರ ವರ್ಣರಂಜಿತ ಮೆರವಣಿಗೆ ನಡೆಯುತ್ತದೆ. ಆ ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ಪುಷ್ಕರಣಿಯಲ್ಲಿ ತೆಪ್ಪೋತ್ಸವ ಜರುಗಲಿದೆ.
ಶ್ರೀ ಗುರು ಸಂಸ್ಮರ ಣೋತ್ಸವ:
Sri Adhichunchanagiri Mahasamsthana Math ಸೆ. 25ರ ಬೆಳಿಗ್ಗೆ 9:30 ಕ್ಕೆ ಭೈರವೈಕ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕ, ಶ್ರೀ ಗುರು ಸಂಸ್ಮರಣೋತ್ಸವ ಮತ್ತು ರಾಜ್ಯಮಟ್ಟದ 46ನೇ ಶ್ರೀ ಕಾಲಭೈರವೇಶ್ವರ ಜಾನಪದ ಕಲಾ ಮೇಳದ ಸಮಾರೋಪ ಸಮಾರಂಭ ನಡೆಯಲಿದೆ.ಜಾನಪದ ಕ್ಷೇತ್ರದ ನಾಡಿನ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಜಾನಪದ ಕಲಾಮೇಳದಲ್ಲಿ ಭಾಗವಹಿಸುವ ಎಲ್ಲಾ ಕಲಾವಿದರಿಗೆ ವಸ್ತ್ರ ಸೇರಿದಂತೆ ಪ್ರಯಾಣ ಭತ್ಯ ಹಾಗೂ ಉಚಿತ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು. ಜಾನಪದ ಕಲಾ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ತಮ್ಮ ಆಧಾರ್ ಕಾರ್ಡ್ ಜೊತೆಗೆ ತಮ್ಮ ಜಿಲ್ಲೆಯ ಆದಿಚುಂಚನಗಿರಿ ಶಾಖಾಮಠ ಅಥವಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಭಾಗವಹಿಸುವಿಕೆಯ ಪತ್ರವನ್ನು ಕಡ್ಡಾಯವಾಗಿ ತರತಕ್ಕದ್ದು, ಉತ್ತಮ ಪ್ರದರ್ಶನ ನೀಡಿದವರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ಶ್ರೀ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ತಿಳಿಸಿದ್ದಾರೆ.

Shimoga Town Express Train ಸೆ.23 & 24 ರಂದು ರೈಲು ಸಂಖ್ಯೆ 16225 ಮೈಸೂರು- ಶಿವಮೊಗ್ಗ ಎಕ್ಸ್ ಪ್ರೆಸ್ 100 ನಿಮಿಷ ನಿಯಂತ್ರಣವಾಗಲಿದೆ

0

Shimoga Town Express Train ಮಂದಗೆರೆ ರೈಲ್ವೆ ಯಾರ್ಡ್‌ನಲ್ಲಿ ಸುರಕ್ಷತಾ ಕಾಮಗಾರಿ ಸಲುವಾಗಿ, ಸೆಪ್ಟೆಂಬರ್ 23 ಮತ್ತು 24 ರಂದು, ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 100 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

Chamber Of Commerce Shivamogga ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿಸೆಂಬರ್ 31 ವರೆಗೆ ಗಡುವು ವಿಸ್ತರಿಸಿ- ಬಿ.ಗೋಪಿನಾಥ್

0

Chamber Of Commerce Shivamogga ಆದಾಯ ತೆರಿಗೆ ಶಾಸನಬದ್ಧ ಆಡಿಟ್, ರಿಟರ್ನ್ ಫೈಲಿಂಗ್ ಮತ್ತು ಸೆಕ್ಷನ್ 12ಎಬಿ, 80ಜಿ ನೋಂದಣಿ ನವೀಕರಣಗಳಿಗೆ ಅಂತಿಮ ದಿನಾಂಕಗಳನ್ನು ವಿಸ್ತರಿಸುವಂತೆ ಆದಾಯ ತೆರಿಗೆ (ವಿನಾಯಿತಿ) ಪ್ರಧಾನ ಮುಖ್ಯ ಆಯುಕ್ತರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮನವಿ ಮಾಡಿದರು.

ಆದಾಯ ತೆರಿಗೆ ಲೆಕ್ಕಪರಿಶೋಧನಾ ವರದಿ, ಶಾಸನಬದ್ಧ ಆಡಿಟ್ ಮತ್ತು ರಿಟರ್ನ್ ಫೈಲಿಂಗ್ ಮತ್ತು ಸೆಕ್ಷನ್ 12ಎಬಿ, 80ಜಿ ನೋಂದಣಿಯ ನವೀಕರಣ ಫೈಲಿಂಗ್ ಗಡುವನ್ನು 2025ರ ಡಿಸೆಂಬರ್ 31ರವರೆಗೆ ವಿಸ್ತರಿಸಲು ಮನವಿ ಮಾಡಿದರು.

ದಿನಾಂಕ ವಿಸ್ತರಣೆ ನಿರ್ಧಾರವು ಹೆಚ್ಚಿನ ವಾಣಿಜ್ಯ, ಕೈಗಾರಿಕಾ, ಟ್ರಸ್ಟ್, ಲಾಭರಹಿತ ಸಂಸ್ಥೆ ಮತ್ತು ವೃತ್ತಿಪರರಿಗೆ ಅನುಕೂಲವಾಗುತ್ತದೆ. ಸರ್ಕಾರದ ನ್ಯಾಯಸಮ್ಮತೆ, ಸ್ಪಂದಿಸುವಿಕೆ ಮತ್ತು ವ್ಯವಹಾರವನ್ನು ಸುಲಭಗೊಳಿಸುವ ದೃಷ್ಟಿಕೋನದಲ್ಲಿ ಅವರ ನಂಬಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು.

ಆದಾಯ ತೆರಿಗೆ ಇಲಾಖೆ ಶಿವಮೊಗ್ಗ ವತಿಯಿಂದ ಕಿಮ್ಮನೆ ರೆಸಾರ್ಟ್ನಲ್ಲಿ ಹಮ್ಮಿಕೊಂಡಿದ್ದ ಅಖಿಲ ಭಾರತ ಪ್ರಧಾನ ಮುಖ್ಯ ಆಯುಕ್ತ ಆದಾಯ ತೆರಿಗೆ ( ವಿನಾಯಿತಿ ) ಅರಿವು ಕಾರ್ಯಕ್ರಮದ ಸಭೆಯಲ್ಲಿ ಟ್ರಸ್ಟ್ ಮತ್ತು ಲಾಭ ರಹಿತ ಸಂಸ್ಥೆಗಳ ಕಾಯ್ದೆ ನಿಯಮಗಳ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಚರ್ಚಿಸಿದರು.

ಆದಾಯ ತೆರಿಗೆ ( ವಿನಾಯಿತಿ ) ಪ್ರಧಾನ ಮುಖ್ಯ ಆಯುಕ್ತ ಸುಧಾಂಶು ದಾರ್ ಮಿಶ್ರಾ, ಚಂಡಿಗಡದ ಜಯಶ್ರೀ ಶರ್ಮ ಹಾಗೂ ಬೆಂಗಳೂರಿನ ಜಿತೇಂದ್ರ ಕುಮಾರ್ ಅವರು ಟ್ರಸ್ಟ್ ಮತ್ತು ಲಾಭ ರಹಿತ ಸಂಸ್ಥೆಗಳ ಕಾಯ್ದೆ ನಿಯಮಗಳ ಆದಾಯ ತೆರಿಗೆಗೆ ಸಂಬಂಧಿಸಿದ ಅರಿವು ಕಾರ್ಯಕ್ರಮದ ಸಮಾಲೋಚನ ಸಭೆಯಲ್ಲಿ ಕರದಾತರು ಅನುಸರಿಸಬೇಕಾದ ಶಾಸನಬದ್ಧ ವಿಧಿ ವಿಧಾನಗಳ ಬಗ್ಗೆ ವಿವರಣೆ ನೀಡಿದರು.

Chamber Of Commerce Shivamogga ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್ ಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ಸಮಿತಿ ಚೇರ್ಮನ್ ಸಿ.ಎ.ಶರತ್, ನಿರ್ದೇಶಕ ಗಣೇಶ್ ಅಂಗಡಿ, ವಸಂತ್ ಹೋಬಳಿದಾರ್, ಮಾಜಿ ಅಧ್ಯಕ್ಷರಾದ ಕೆ.ವಿ.ವಸಂತ್ ಕುಮಾರ್, ಅನೇಕ ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಅನೇಕ ಚಾರ್ಟರ್ಡ್ ಅಕೌಂಟೆಂಟ್ಸ್ ಹಾಗೂ ತೆರಿಗೆ ಸಲಹೆಗಾರರು ಭಾಗವಹಿಸಿದ್ದರು.

Vipra Self-Employment Direct Loan Scheme ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ‌ ಆಹ್ವಾನ

0

Vipra Self-Employment Direct Loan Scheme 2025-26ನೇ ಸಾಲಿನ ವಿಪ್ರ ಸ್ವಉದ್ಯಮ ನೇರಸಾಲ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದ್ದು, ಹಸುಸಾಕಾಣಿಕೆ, ಗುಡಿಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ಫಲಾನುಭವಿಗಳಿಗೆ ಕನಿಷ್ಟ ರೂ.1.00 ಲಕ್ಷ ಹಾಗೂ ಗರಿಷ್ಟ ರೂ.2.00 ಲಕ್ಷಗಳ ಆರ್ಥಿಕ ನೆರವು ಒದಗಿಸಲಾಗುವುದು ಹಾಗೂ ಶೇ. 20% ಸಹಾಯಧನ ನೀಡಲಾಗುವುದು. ಉಳಿಕೆ ಮೊತ್ತಕ್ಕೆ ಶೇ 4% ವಾರ್ಷಿಕ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಮಹಿಳೆಯರಿಗೆ ಶೇ. 33% ಮತ್ತು ದಿವ್ಯಾಂಗದವರಿಗೆ ಶೇ. 5% ರಷ್ಟು ಮೀಸಲಾತಿ ನೀಡಲಾಗುವುದು.
Vipra Self-Employment Direct Loan Scheme ಅರ್ಜಿ ಸಲ್ಲಿಸಲು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣಪತ್ರ) ಹೊಂದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 18 ರಿಂದ 65 ವರ್ಷದೊಳಗಿರಬೇಕು. ಅರ್ಜಿದಾರರ ಆಧಾರ್ ನಂಬರ್ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು ಮತ್ತು ಬ್ಯಾಂಕ್ ಖಾತೆ ಸೀಡ್ ಆಗಿರಬೇಕು.
ಆಸಕ್ತ ಅರ್ಹ ಬ್ರಾಹ್ಮಣ ಸಮುದಾಯದವರು ಲಿಂಕ್ https://ksbdb.co.in/Loan/ www.ksbdb.karnataka.gov.in/ ಮುಖಾಂತರ ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಕೌಶ್ಯಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8029605888 ಮತ್ತು 8762249230 ಗಳನ್ನು ಹಾಗೂ Instagram & Facebook ಮೂಲಕ ಸಂಪರ್ಕಿಸಬಹುದಾಗಿದೆ.