Saturday, August 8, 2026
Saturday, August 8, 2026
Home Blog Page 157

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

0

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ ಮೇಲೆ ಚಿರತೆ ದಾಳಿ ನಡೆಸಿದೆ. ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಡಗಂಟಿ ಗ್ರಾಮದ ಸುದೀಪ್, ಸಂಜೆ ಮುತ್ತಗಿ ಗ್ರಾಮ ಸಮೀಪದ ಮೆಕ್ಕೆಜೋಳದ ಜಮೀನಿಗೆ ಮೇವು ತರಲು ಹೋಗಿದ್ದಾಗ ಚಿರತೆ ದಿಢೀರ್ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಡಸನಹಳ್ಳಿ ಗ್ರಾಮದ ಮುತ್ತಣ್ಣ ಎಂಬುವರು ಶನಿವಾರ ಬೆಳಿಗ್ಗೆ ಗದ್ದೆಗೆ ನೀರು ಬಿಡುವುದಕ್ಕೆ ತೆರಳಿದ್ದಾಗ ಚಿರತೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನೂ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಸಂಜೆ ತಡಸನಹಳ್ಳಿ, ಅಡಗಂಟಿ ಗ್ರಾಮದ ನಡುವಿನ ಮುಖ್ಯರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಹೂವ್ಯನಾಯ್ಕ ಎಂಬುವರ ಮೇಲೂ ಚಿರತೆ ದಾಳಿ ನಡೆಸಲು ಯತ್ನಿಸಿದ್ದು, ಪ್ರಥಮ ಚಿಕಿತ್ಸೆ ಪಡೆದು ಅವರು ಮನೆಗೆ ತೆರಳಿದ್ದಾರೆ.
ತಡಸನಹಳ್ಳಿ, ಅಡಗಂಟಿ ಗ್ರಾಮದ ಜಮೀನಿನಲ್ಲಿ, ಮುತ್ತಗಿ ಕಿರು ಅರಣ್ಯ ಸೇರಿ ಮೂರು ಕಡೆ ಚಿರತೆ ಸೆರೆಗೆ ಬೋನ್ ಇಡಲಾಗಿದೆ.‌

Cheetah Attack ಚಿರತೆ ಮನುಷ್ಯನ ಮೇಲೆ ದಾಳಿ ಮಾಡುವುದು ಕಡಿಮೆ. ಅದು ಯಾವುದಾದರೂ ರೋಗದಿಂದ ಬಳಲುತ್ತಿರಬಹುದು ಅಥವಾ ವಿಚಲಿತವಾಗಿರುವ ಕಾರಣಕ್ಕೆ ಮನುಷ್ಯರ ಮೇಲೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ವಲಯ ಅರಣ್ಯಾಧಿಕಾರಿ ಜಾವಿದ್ ಅಂಗಡಿ ತಿಳಿಸಿದ್ದಾರೆ.

ಚಿರತೆ ದಾಳಿಯಿಂದಾಗಿ ಜನ ಆತಂಕಕ್ಕೊಳಗಾಗಿದ್ದು, ಜಮೀನಿಗೆ ತೆರಳುವುದಕ್ಕೆ ಹೆದರುತ್ತಿದ್ದಾರೆ. ಕೂಡಲೇ ಚಿರತೆ ಸೆರೆ ಹಿಡಿಯಬೇಕು ಎಂದು ರೈತರು ಒತ್ತಾಯಿಸಿದ್ದಾರೆ. ಜಮೀನಿಗೆ ತೆರಳುವ ಸಮಯದಲ್ಲಿ ರೈತರು ಎಚ್ಚರಿಕೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚಿಸಿದೆ.

Yakshagana ವಿದ್ಯಾರ್ಥಿಗಳ ಅಗತ್ಯಕ್ಕೆ ಸ್ಪಂದಿಸುವ ಯಕ್ಷಗಾನ ಕಲಾರಂಗ ಸಂಸ್ಥೆ ಬಿಟ್ಟರೆ ಮತ್ತೊಂದು ಕಂಡಿಲ್ಲ- ಡಾ.ಪಿ.ನಾರಾಯಣ

0

Yakshagana ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ನಿಖಿಲ್ ಎಸ್. (ಶ್ರೀಮತಿ ಕುಸುಮಾ ಮತ್ತು ದಿ. ಶಿವರಾಮ ಇವರ ಪುತ್ರ ಎಸ್.ಎಸ್.ಎಲ್.ಸಿ. ಯಲ್ಲಿ 97.6% ಅಂಕ) ಇವನಿಗೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ಪಾಂಡೇಶ್ವರ ಮಂಜುನಾಥ ಹೊಳ್ಳ ಅವರ ಸ್ಮರಣಾರ್ಥ ಹಾಗೂ ಸರಸ್ವತಿ ಹೊಳ್ಳರ ಗೌರವಾರ್ಥ, ಅವರ ಪುತ್ರಿಯರ ಪ್ರಾಯೋಜಕತ್ವದಲ್ಲಿ,7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಮಂಜುನಾಥ ನಿಲಯ’ ವನ್ನು ಸರಸ್ವತಿ ಹೊಳ್ಳರು ಇಂದು (21.3.2026) ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ ಫಲಾನುಭವಿ ವಿದ್ಯಾರ್ಥಿಗಳ ಆಯ್ಕೆಯಲ್ಲಿ ಯಾರ ಮುಲಾಜಿಗು ಒಳಗಾಗದೆ ಸ್ವತಃ ಮನೆ ಭೇಟಿ ಮಾಡಿ ನಿರ್ಣಯಿಸುತ್ತದೆ. ವಿದ್ಯಾರ್ಥಿಗಳ ಅಗತ್ಯಕ್ಕೆ ಕೂಡಲೇ ಸ್ಪಂದಿಸುವ ಇನ್ನೊಂದು ಸಂಸ್ಥೆಯನ್ನು ನಾನು ಕಂಡಿಲ್ಲ ಎಂದು ಹೇಳಿದರು. ಶಿವಮೊಗ್ಗದ ಮಾಜಿ ರೋಟರಿ ಗವರ್ನರ್ ಡಾ.ಪಿ.ನಾರಾಯಣ ಮಾತನಾಡಿ, ಕಲಾರಂಗದ ನಾಲ್ಕು ಮುಖಗಳ ಸಾಧನೆಗೆ ಬೆರಗಾಗಿದ್ದೇನೆ. ಕಲಾವಿದರು ಮತ್ತು ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸಹಾಯ ಮಾಡುವ ಇಂತಹ ಇನ್ನೊಂದು ಸಂಸ್ಥೆ ಇರಲಿಕ್ಕಿಲ್ಲ. ನನ್ನ ಅಣ್ಣನ ಹೆಣ್ಣುಮಕ್ಕಳು ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿ ಒಳ್ಳೆಯ ಉದ್ಯೋಗ ಪಡೆದು ಈ ರೀತಿಯಾಗಿ ಸಮಾಜಪರ ಕಾರ್ಯ ಮಾಡುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದರು.ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರು ಯಕ್ಷಗಾನ ಕಲಾರಂಗದ ಪ್ರತಿಯೊಂದು ಕಾರ್ಯಕ್ರಮವು ಅನನ್ಯವಾಗಿರುತ್ತದೆ. ಸದಾ ಕ್ರಿಯಾಶೀಲವಾಗಿರುವ ಈ ಸಂಸ್ಥೆಯ ಕೆಲಸವೇ ಸಮಾಜಕ್ಕೊಂದು ದೊಡ್ಡ ಸಂದೇಶ ಎಂದು ಹೇಳಿದರು. ಡಾ. ಗೀತಾ ಸಾಮಕ್ ನಮ್ಮ ತಂದೆಯವರೇ ನಮಗೆ ಸ್ಫೂರ್ತಿ. ದೃಷ್ಟಿ ತೊಂದರೆ ನಡುವೆಯೂ ಅವರು ಮಾಡುತ್ತಿದ್ದ ಕೃಷಿ ಕಾರ್ಯ ಸಮಾಜಪರ ಕಾಳಜಿಯನ್ನು ನೋಡಿದರೆ ಆಶ್ಚರ್ಯವೆನಿಸುತ್ತದೆ. ಕೃಷಿಯಲ್ಲಿ ಆ ಕಾಲಕ್ಕೆ ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಮಾದರಿ ಕೃಷಿಕರಾಗಿದ್ದರು. ಕಷ್ಟದಲ್ಲಿರುವವರಿಗೆ ಸದಾ ಸಹಾಯ ಮಾಡುತ್ತಿದ್ದರು.ಹತ್ತಕ್ಕೂ ಮಿಕ್ಕಿ ಮನೆಗಳನ್ನು ನಿರ್ಮಿಸಿ ಕೊಟ್ಟು ಬಡವರಿಗೆ ಆಸರೆಯಾಗಿದ್ದರು. ನಾವು ಐವರು ಹೆಣ್ಣುಮಕ್ಕಳು ಶಿಕ್ಷಣ ಪಡೆದು ಉದ್ಯೋಗಸ್ತರಾಗುವಲ್ಲಿ ಅಮ್ಮನ ಕಾಳಜಿಯು ಅಷ್ಟೇ ಮುಖ್ಯವಾಗಿತ್ತು. ಇಂದು ಅಮ್ಮನ ಕೈಯಿಂದಲೇ Yakshagana ಈ ಮನೆಯನ್ನು ಉದ್ಘಾಟಿಸುವ ಅವಕಾಶ ಪುತ್ರಿಯರಾದ ನಮಗೆ ಧನ್ಯತೆ ತಂದಿದೆ ಎಂದರು. ಹೊಳ್ಳರ ಕುಟುಂಬಕ್ಕೆ ಕಲಾರಂಗದ ಕೆಲಸವನ್ನು ಪರಿಚಯಿಸಿದ ಪಿ. ವಾಸುದೇವ ಕಾರಂತರು ಹಂಚಿನ ಮನೆ ಕುಟುಂಬವೇ ಸಮಾಜಕ್ಕೆ ಆದರ್ಶ. ನಮ್ಮ ಬಂಧುಗಳಾದ ಈ ಹೆಣ್ಣುಮಕ್ಕಳ ಸಾಧನೆ ನಮಗೆಲ್ಲಾ ಅಭಿಮಾನದ ಸಂಗತಿಯಾಗಿದೆ ಎಂದರು. ಉಷಾ ಎನ್. ಹೆಬ್ಬಾರ್, ಡಾ. ಗಣೇಶ್ ಮಧ್ಯಸ್ಥ, ಕಿಶೋರ್ ಶೆಟ್ಟಿ ವೇದಿಕೆಯಲ್ಲಿದ್ದರು. ಸಂಧ್ಯಾ ಶರ್ಮಾ, ರೇಖಾ ಮಕ್ಕಿತ್ತಾಯ, ಡಾ.ತಾರಾ ಕಾರಂತ್, ಡಾ. ಎಸ್.ಜಿ.ಸಾಮಕ್, ನಾಗರಾಜ ಹೆಬ್ಬಾರ್, ಅರವಿಂದ ಶರ್ಮಾ, ಡಾ.ಕೃಷ್ಣಮೂರ್ತಿ ಮಕ್ಕಿತ್ತಾಯ, ಡಾ. ಕೃಷ್ಣ ಕಿರಣ್ ಕಾರಂತ್, ಯಶೋದಾ ಹೊಳ್ಳ ಹಾಗೂ ಸರಸ್ವತಿ ಹೊಳ್ಳರ ಮೊಮ್ಮಕ್ಕಳು ಉಪಸ್ಥಿತರಿದ್ದರು. ಸಂಸ್ಥೆಯ ಸದಸ್ಯರಾದ ಯು.ಎಸ್.ರಾಜಗೋಪಾಲ ಆಚಾರ್ಯ, ಭುವನಪ್ರಸಾದ ಹೆಗ್ಡೆ, ಅನಂತರಾಜ ಉಪಾಧ್ಯಾಯ, ಜಯರಾಮ ಪಡಿಯಾರ್, ರಾಮಚಂದ್ರ ಅಡಿಗ, ನಾಗರಾಜ ಹೆಗಡೆ ಭಾಗವಹಿಸಿದ್ದರು. ಬಿದ್ಕಲ್ ಕಟ್ಟೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕರುಣಾಕರ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷರು, ಫಲಾನುಭವಿ ವಿದ್ಯಾರ್ಥಿಗಳ ಬಂಧುಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

Ripponpet News ಪೆಟ್ರೋಲ್ ಕೊರತೆ ಎಂಬ ಸುದ್ದಿ ನಂಬಿ ರಿಪ್ಪನ್ ಪೇಟೆಯ ‘ಬಂಕ್’ ಗಳಿಗೆ ಮುಗಿಬಿದ್ದ ಜನ.

0

Ripponpet News ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಹೆಚ್‌ಪಿ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗಾಗಿ ಜನರು ಮುಗಿಬಿದ್ದಿದ್ದು,
ಗಂಟೆಗಳ ಕಾಲ ಸಾಲಿನಲ್ಲಿ ನಿಂತು ಗ್ರಾಹಕರು ಇಂಧನ ಪಡೆದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿವೆ.

ರಿಪ್ಪನ್‌ಪೇಟೆಯಲ್ಲಿ ಒಟ್ಟು ನಾಲ್ಕು ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಹಿಸುತ್ತಿವೆ.
ಅವುಗಳಲ್ಲಿ ಮೂರು ಬಂಕ್‌ಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಸಂಪೂರ್ಣ ಖಾಲಿ ಎಂಬ ಆತಂಕ ಮೂಡಿದೆ.

Ripponpet News ಈ ಹಿನ್ನೆಲೆ ಶಿವಮೊಗ್ಗ ರಸ್ತೆಯ ಹೆಚ್‌ಪಿ ಬಂಕ್ ನಲ್ಲಿ ಮಾತ್ರ ಇಂಧನ ಲಭ್ಯವಿದ್ದ ಕಾರಣ ಜನರು ದೌಡಾಯಿಸಿದ್ದಾರೆ.

ಕೆಲವರು ಖಾಲಿ ಬಾಟಲ್‌ಗಳು ಹಾಗೂ ಕ್ಯಾನ್‌ಗಳನ್ನು ತಂದು ಹೆಚ್ಚಿನ ಪ್ರಮಾಣದಲ್ಲಿ ಪೆಟ್ರೋಲ್ ಸಂಗ್ರಹ ಮಾಡುತ್ತಿದ್ದಾರೆ.

ಇದರಿಂದ ಇಂಧನ ಕೊರತೆ ಇನ್ನಷ್ಟು ತೀವ್ರವಾಗ ಬಹುದು ಎಂದು ಸ್ಥಳೀಯರು ಆತಂಕಗೊಂಡಿರುವುದು ವ್ಯಕ್ತವಾಗುತ್ತದೆ.

Yakshagana ಶಿವಮೊಗ್ಗದ ವರದಾ ಐತಾಳ್ ಅವರಿಗೆ ಶಿವರಾಮ ಕಾರಂತ ಪ್ರತಿಷ್ಠಾನದಿಂದ “ಸಾಧಕಿ ಪ್ರಶಸ್ತಿ” ಪುರಸ್ಕಾರ.

0

Yakshagana ತಾll 15.03.2026 ರಂದು ಯಕ್ಷಗಾನ ದಲ್ಲಿ ಹೊಸಸಾಧ್ಯತೆಯ ಅನಾವರಣಕ್ಕಾಗಿ ಡಾllಶಿವರಾಮ ಕಾರಂತ ಸಾಧಕ ಸ್ತ್ರೀ ಮಹಿಳಾ ಪುರಸ್ಕಾರ ವನ್ನ ಶಿವಮೊಗ್ಗದ ಭರತನಾಟ್ಯ ಕಲಾವಿದೆ
ಶ್ರೀಮತಿ ವರದಾ ಐತಾಳ್ ಸ್ವೀಕರಿಸಿದರು.

Yakshagana ಶಿವಮೊಗ್ಗದ ಶ್ರೀಮತಿ ವರದಾ ಮಧುಸೂದನ ಐತಾಳ್ ಅವರಿಗೆ ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ನೀಡುವ ಸಾಧಕಿಯರ ಪ್ರಶಸ್ತಿ ನೀಡಲಾಯಿತು.

Ramadan ಸಮಾಜದಲ್ಲಿ ಶಾಂತಿ – ಸೌಹಾರ್ದದಿಂದ ಬಾಳಬೇಕು- ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ

0

Ramadan ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶನಿವಾರ ಸಂಭ್ರಮದಿಂದ ರಂಜಾನ್ (ಈದ್-ಉಲ್-ಫಿತ್ರ್) ಹಬ್ಬವನ್ನು ಆಚರಿಸಿದರು.

ಹಬ್ಬದ ಅಂಗವಾಗಿ ದಾನ ನೀಡುವುದರ ಮೂಲಕ ಆಚರಣೆಗೆ ಹೆಚ್ಚಿನ ಅರ್ಥ ನೀಡಲಾಯಿತು. ಚಿಣ್ಣರು ಹೊಸ ಬಟ್ಟೆ ಧರಿಸಿ ಸಂಭ್ರಮಿಸಿದರು.

ಬಂಧು-ಮಿತ್ರರ ಮನೆಗೆ ಭೇಟಿ ನೀಡಿ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳಲ್ಲಿ ವಿವಿಧ ಬಗೆಯ ಖಾಧ್ಯಗಳನ್ನು ತಯಾರಿಸಿ, ಸ್ನೇಹಿತರು, ಸಂಬಂಧಿಗಳ ಒಡಗೂಡಿ ಸಹ ಭೋಜನ ಮಾಡಿದರು.
ಪಟ್ಟಣದ ಮಾರ್ಕೆಟ್ ರಸ್ತೆಯ ಜಾಮಿಯಾ ಮಸೀದಿ, ಕಾನುಕೇರಿಯ ಅಹಲೇ ಸುನ್ನತ್‌ವಲ್ ಜಮಾತ್ ಜಾಮಿಯಾ ಮಸೀದಿ ಸೇರಿದಂತೆ ತಾಲೂಕಿನ ವಿವಿಧ ಮಸೀದಿಗಳಲ್ಲಿ ಮಸ್ಲೀಮರು ಪ್ರಾರ್ಥನೆ ಸಲ್ಲಿಸಿದರು. ನಂತರ ಮಸೀದಿಯಿಂದ ಈದ್ಗಾ ಮೈದಾನಕ್ಕೆ ಮೆರವಣಿಗೆ ಮೂಲಕ ತೆರಳಿ ಸಾಮೂಹಿಕ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಮಾರ್ಕೆಟ್ ರಸ್ತೆಯ ಜಾಮೀಯಾ ಮಸೀದಿಯ ಧರ್ಮಗುರು ಮೌಲಾನಾ ಮುಫ್ತಿ ತಪ್ಜಿಲ್ ಆಲಂ ಖಾಸ್ಮಿ ಧರ್ಮ ಸಂದೇಶ ನೀಡಿ, ಕಳೆದ ಒಂದು ತಿಂಗಳು ಕಾಲ ಕಠಿಣ ಉಪವಾಸ ವ್ರತದ ನಂತರ ಹಬ್ಬವನ್ನು ಆಚರಿಸಲಾಗುತ್ತಿದೆ. ಉಪವಾಸ ತಿಂಗಳಿನಲ್ಲಿ ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನದಲ್ಲಿ ರೂಪಿಸುವ ಅಪೂರ್ವ ಅವಕಾಶವಾಗಿದೆ.

Ramadan ನಿಶ್ಚಯವಾಗಿಯೂ ಅಲ್ಲಾಹ್ ಸಹನಶೀಲರ ಜೊತೆಗಿದ್ದಾನೆ. ಒಳ್ಳೆಯದನ್ನು ಮಾಡಿದರೆ, ಅದರಿಂದ ಒಳಿತನ್ನು ಕಾಣಬಹುದು. ರಂಜಾನ್‌ನ ಅತ್ಯಂತ ಸುಂದರ ಅಂಶವೆಂದರೆ ದಾನ. ವ್ಯಕ್ತಿಯು ತಾನು ಗಳಿಸಿದ ಸಂಪತ್ತಿನಲ್ಲಿ ಒಂದು ಭಾಗವನ್ನು ದಾನ ನೀಡುವುದಾಗಿದೆ. ಸಮಾಜದಲ್ಲಿ ಶಾಂತಿ – ಸೌಹಾರ್ದಯುತವಾಗಿ ಪ್ರತಿಯೊಬ್ಬರು ಬಾಳಬೇಕು. ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಸನ್ಮಾರ್ಗದ ಹಾದಿಯಲ್ಲಿ ನಡೆಯಬೇಕು ಎಂದರು.

ಜಾಮೀಯಾ ಮಸೀದಿಯ ಅಂಜುಮಾನ್ ಇಸ್ಮಾಹುಲ್ ಮುಸ್ಲೀಮಿನ್ ಕಮಿಟಿಯ ಅಧ್ಯಕ್ಷ ಸೈಯದ್ ಅಬ್ದುಲ್ ರೆಹಮಾನ್, ಕಾರ್ಯದರ್ಶಿ ಮುಹಮ್ಮದ್ ಸಲೀಂ ಮಾತನಾಡಿ, ಹಬ್ಬದ ಶುಭ ಸಂದೇಶ ತಿಳಿಸಿದರು. ಮುಸ್ಲಿಂ ಸಮಾಜದವರು ವಿಶ್ವ ಶಾಂತಿಗಾಗಿ ಪ್ರಾರ್ಥನೆ ಮಾಡಿದ್ದು ವಿಶೇಷವಾಗಿತ್ತು.

ಕಮಿಟಿಯ ಉಪಾಧ್ಯಕ್ಷ ಟಿ. ವಝೀರ್ ಆಹ್ಮದ್, ಜಂಟಿ ಕಾರ್ಯದರ್ಶಿ ಸೈಯದ್ ಖದೀರ್, ಯು. ಸೈಯದ್ ಇಮ್ರಾನ್, ಶಫಾಯತ್ ವುಲ್ಲಾ, ಅಯೂಬ್ ಖಾನ್, ಮಕ್ಬೂಲ್ ಆಹ್ಮದ್, ಪ್ರಮುಖರಾದ ಡಾ. ಸೈಯದ್ ಹಾಷಂ, ಎಂ. ಬಶೀರ್ ಆಹ್ಮದ್, ಅತೀಕ್ ವುರ್ ರೆಹಮಾನ್, ಎನ್. ನೂರ್ ಆಹ್ಮದ್, ಯು. ಫಯಾಜ್ ಆಹ್ಮದ್, ಯು. ಸೈಯದ್ ಸ್ವಾಲೇಹ, ಮೆಹಬೂಬ್ ಅಲಿ, ರಿಯಾಜ್ ಮೌಲಾನ, ಪತ್ರಕರ್ತ ಮುಹಮ್ಮದ್ ಆರೀಫ್, ಸೈಯದ್ ಶಾಹೀದ್, ಸಿರಾಜುದ್ದೀನ್, ಟಿ. ಸಮೀವುಲ್ಲಾ, ಸುಜಾಯತ್‌ವುಲ್ಲಾ, ಮುಹಮ್ಮದ್ ಸಾಜೀದ್ ಸೇರಿದಂತೆ ಸಾವಿರಾರು ಮುಸ್ಲಿಂ ಸಮಾಜದವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Chess ಮಾರ್ಚ್ 25 ರಿಂದ ಶಿವಮೊಗ್ಗದಲ್ಲಿ ಬೇಸಿಗೆ ರಜೆ ನಿಮಿತ್ತ ಚೆಸ್ ತರಬೇತಿ ಶಿಬಿರ.

0

Chess ಶಿವಮೊಗ್ಗ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಈ ಭಾರಿಯ ಬೇಸಿಗೆ ರಜೆ ನಿಮಿತ್ತ ಮಾ. 25ರಿಂದ ಏಪ್ರೀಲ್ 02ರವರೆಗೆ ಪ್ರತಿ ದಿನ ಬೆಳಿಗ್ಗೆ 10.30ರಿಂದ 11.30 ರವರೆಗೆ, ಸಂಜೆ5ರಿಂದ 6ಗಂಟೆವರೆಗೆ ರವೀಂದ್ರನಗರ ದಲ್ಲಿರುವ (ಶ್ರೀನಿವಾಸ ಕೃಪ) ಶಾಖೆಯಲ್ಲಿ ಎರಡು ಬ್ಯಾಚ್‌ಗಳಲ್ಲಿ ಚೆಸ್ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ.

Chess ಪ್ರತಿ ಬ್ಯಾಚ್‌ನಲ್ಲಿ 10ಮಕ್ಕಳಿಗೆ ಮಾತ್ರ ಅವಕಾಶವಿದೆ. ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು ಪ್ರಾಣೇಶ್ ಯಾದವ್ ಮೊ. 92424 01702, 9743819678ರಲ್ಲಿ ಸಂಪರ್ಕಿಸಲು ಕೋರಲಾಗಿದೆ.

Ugadi ಸೊರಬದಿಂದ ಚಂದ್ರಗುತ್ತಿವರೆಗೆ ವಕೀಲರ ಬಳಗದಿಂದ ಪಾದಯಾತ್ರೆ.

0

Ugadi ಯುಗಾದಿ ಹಬ್ಬದ ಅಂಗವಾಗಿ ತಾಲೂಕಿನ ವಕೀಲರ ಬಳಗದ ವತಿಯಿಂದ ಪಟ್ಟಣದ ಪುರ ದೈವ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಶಕ್ತಿ ಪೀಠ ಚಂದ್ರಗುತ್ತಿಯ ಶ್ರೀ ರೇಣುಕಾಂಬಾ ದೇವಿ ಸನ್ನಿಧಿವರೆಗೆ ಎರಡನೇ ವರ್ಷದ ಪಾದಯಾತ್ರೆ ನಡೆಸಲಾಯಿತು.
ಶ್ರೀ ದೇವಿಗೆ ಪೂಜೆ ಸಲ್ಲಿಸಿ, ದರ್ಶನಾಶೀರ್ವಾದ ಪಡೆಯುವ ಜೊತೆಗೆ ಉತ್ತಮ ಮಳೆ ಬೆಳೆಯಾಗಲಿ, ರೈತಾಪಿ ಸಮೂಹ ಸಮೃದ್ಧಿಯಾಗಿರಲಿ, ನಾಡಿನಲ್ಲಿ ಸುಖ-ಶಾಂತಿ ನೆಲೆಸಿರಲಿ ಎಂದು ವಕೀಲರ ಬಳಗದಿಂದ ಪ್ರಾರ್ಥಿಸಲಾಯಿತು. ಪಾದಯಾತ್ರೆಯಲ್ಲಿ ವಕೀಲರ ಮಕ್ಕಳು ಸಹ ಪಾಲ್ಗೊಂಡಿದ್ದು ವಿಶೇಷವಾಗಿತ್ತು.
ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ಕೆ.ಎಚ್. ಚಂದ್ರಶೇಖರ್, ಮಾಜಿ ಅಧ್ಯಕ್ಷ ಸಿ.ವೈ. ಅಶೋಕ್, ಮಾಜಿ ಕಾರ್ಯದರ್ಶಿ ಎಸ್. ಅರುಣ್, ವಕೀಲರಾದ ಎಚ್. ಆನಂದ್, ಕೆ.ಪಿ. ಮಾರುತಿ, ಕೆ.ಎಸ್. ಪರಶುರಾಮ, ಎಚ್.ಇ. ಸತ್ಯನಾರಾಯಣ, ಶರತ್ ಯಂಕೇನ್, ಆಶೀಕ್ ನಾಗಪ್ಪ, ಯು.ಕೆ. ಗುರುಮೂರ್ತಿ, ಟಿ.ಜಿ. ಸೋಮಶೇಖರ, ಪ್ರಮುಖರಾದ ಹೂವಪ್ಪ ಯಂಕೇನ್, ಏಕಾಂತ ಮತ್ತಿತರರಿದ್ದರು.
Ugadi ೨೦ ಸೊರಬ ೦೧: ಸೊರಬ ಪಟ್ಟಣದಲ್ಲಿ ವಕೀಲರ ಬಳಗದಿಂದ ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದಿAದ ಚಂದ್ರಗುತ್ತಿಯ ಶಕ್ತಿಪೀಠ ಶ್ರೀ ರೇಣುಕಾಂಬ ಸನ್ನಿಧಿವರೆಗೆ ಯುಗಾದಿ ಹಬ್ಬದ ನಿಮಿತ್ತ ಪಾದಯಾತ್ರೆ ನಡೆಸಲಾಯಿತು.

DC shivamogga ಹಣದಾಸೆಗೆ ಸರ್ಕಾರಿ ದಾಖಲೆಗಳ ನಕಲಿ ಸೃಷ್ಟಿಸುವವರ ಬಗ್ಗೆ ಜಾಗರೂಕರಾಗಿರಿ- ‘ಡೀಸಿ ‘ಪ್ರಭುಲಿಂಗ ಕವಳಿಕಟ್ಟಿ.

0

DC shivamogga ಹಣದಾಸೆಗಾಗಿ ಸರ್ಕಾರಿ ದಾಖಲೆಗಳನ್ನು ನಕಲಿ ಮಾಡಿ, ಖಾಸಗಿ‌ ವ್ಯಕ್ತಿಗಳಿಗೆ ಜಮೀನು ಮಂಜೂರು ಮಾಡಲು ಪ್ರಯತ್ನಿಸುತ್ತಿದ್ದ ಸಾಗರ ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳ ವಿರುದ್ದ ಈಗಾಗಲೇ ಎಫ್ ಐ ಆರ್ ದಾಖಲಿಸಿ, ವಿಚಾರಣೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಇಂತಹ ವಿಚಾರಗಳಿಂದ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಸಾಗರ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳು ಜಮೀನು ಮಂಜೂರು ಮಾಡಿಸುವುದಾಗಿ ಖಾಸಗಿ‌ ವ್ಯಕ್ತಿಗಳಿಂದ ಹಣ ಪಡೆದು ಸರ್ಕಾರಿ ದಾಖಲೆಗಳನ್ನು ನಕಲಿ ಮಾಡುತ್ತಿದ್ದ ಜಾಲವೊಂದನ್ನು ಸಾಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರು ಬಯಲಿಗೆಳೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಆರು ಜನ ಆರೋಪಿಗಳ ವಿರುದ್ದ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ವಿಚಾರಣೆ ಆರಂಭಿಸಲಾಗಿದೆ.
ಮಾರ್ಚ್ 18ರ ಬುಧವಾರ ಮಧ್ಯಾಹ್ನ ತಹಶೀಲ್ದಾರ್ ಕಚೇರಿಯ ದಾಖಲೆ ಕೊಠಡಿಯ ಮೇಲ್ವಿಚಾರಕರು ಹಳೆಯ ಮಂಜೂರಾತಿ ಪತ್ರಗಳನ್ನು ತಿದ್ದುಪಡಿ ಮಾಡುತ್ತಿರುವುದನ್ನು ತಹಶೀಲ್ದಾರ್ ಅವರು ಖುದ್ದಾಗಿ ಗಮನಿಸಿದ್ದಾರೆ.

DC shivamogga ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಲು ನಕಲಿ ದಾಖಲೆ ಸೃಷ್ಟಿಸುವ ಕೆಲಸ ಇಲ್ಲಿ ನಡೆಯುತ್ತಿತ್ತು.

ಸಾಗರ ತಹಶಿಲ್ದಾರ್ ಕಚೇರಿಯಲ್ಲಿ ಈ ಕಾರ್ಯವೆಸಗುತ್ತಿದ್ದವರ ವಿರುದ್ದ ಸೂಕ್ತ ಕಾನೂನು ಕ್ರಮ‌ ಕೈಗೊಳ್ಳಲಾಗುತ್ತಿದ್ದು , ಹೀಗೆ ಯಾವುದೇ ಸರ್ಕಾರಿ ದಾಖಲೆಗಳನ್ನು ನಕಲು ಮಾಡಿ, ಜಮೀನು ಮಂಜೂರು ಮಾಡಲು ಬರುವುದಿಲ್ಲ. ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅವರು ಮನವಿ‌ ಮಾಡಿದ್ದಾರೆ.

Rangayana Shimoga ರಂಗಾಯಣ ಆಹ್ವಾನಿಸಿದ್ದ ಬೇಸಿಗೆ ಶಿಬಿರದ ತರಬೇತಿದಾರರ ಆಯ್ಕೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

0

Rangayana Shimoga ರಂಗಾಯಣವು ಏ.14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವ ಚಿಣ್ಣರ ಸಿಹಿಮೊಗ್ಗೆ-ಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲು ರಂಗಭೂಮಿಯ ಹಿನ್ನೆಲೆಯುಳ್ಳ 06 ನಾಟಕ ನಿರ್ದೇಶಕರು ಮತ್ತು 06 ಜನ ಸಹಾಯಕ ನಿರ್ದೇಶಕರ ಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 16 ರಿಂದ ಮಾ. 30ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ ಎ.ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Rangayana Shimoga ಹೆಚ್ಚಿನ ಮಾಹಿತಿಗಾಗಿ ರಂಗಾಯಣ, ಶಿವಮೊಗ್ಗ ಕಛೇರಿ, ದೂರವಾಣಿ ಸಂಖ್ಯೆ 08182-256353, 7975229166 ಯನ್ನು ಸಂಪರ್ಕಿಸಬಹುದಾಗಿದೆ.

International Day of Forests ಉತ್ತಮ ಗಾಳಿ,ನೀರು,ಬೆಳಕು ದೊರೆಯಲು ಅರಣ್ಯ ಉಳಿಸಬೇಕು- ಬಿ.ವೈ‌.ರಾಘವೇಂದ್ರ.

0

International Day of Forests ವಿಶ್ವ ಅರಣ್ಯ ದಿನವಾದ ಇಂದು ಅಂತರ್ಜಲ ವೃದ್ಧಿ ಹಾಗೂ ಉತ್ತಮ ಮಳೆಗಾಗಿ ನಾವು ಕಾಡು, ಬೆಟ್ಟ-ಗುಡ್ಡಗಳ ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಉತ್ತಮ ಗಾಳಿ, ನೀರು, ಬೆಳಕು ದೊರೆಯಲು ಅರಣ್ಯ ಉಳಿಸಬೇಕಾಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.

ಬನ್ನಿ, ಅರಣ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸೋಣ ಎಂದು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.