Monday, March 2, 2026
Monday, March 2, 2026
Home Blog Page 1575

ವೇದಾಂತು ಕಂಪೆನಿಯ ಶೇ7 ಸಿಬ್ಬಂದಿ ಕಡಿತ: ಕ್ಷಮೆಕೋರಿದ ಸಿಇಒ

0

ಯುನಿಕಾರ್ನ್ ವೇದಾಂತು 424 ಉದ್ಯೋಗಿಗಳನ್ನು ಹಾಗೂ ಅದರ ಉದ್ಯೋಗಿಗಳ ಸುಮಾರು 7 ಪ್ರತಿಶತವನ್ನು ವಜಾಗೊಳಿಸುತ್ತಿದೆ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಸಹ ಸಂಸ್ಥಾಪಕರಾದ ವಂಶಿ ಕೃಷ್ಣ ಅವರು ತಮ್ಮ ಬ್ಲಾಗ್‌ನಲ್ಲಿ ಉದ್ಯೋಗಿಗಳಿಗೆ ಮುಂಬರುವ ತ್ರೈಮಾಸಿಕಗಳಿಗೆ ಬಂಡವಾಳದ ಕೊರತೆಯಿದೆ ಎಂದು ತಿಳಿಸಿದ್ದಾರೆ.

ವೇದಾಂತು ಈ ತಿಂಗಳ ಆರಂಭದಲ್ಲಿ ಸುಮಾರು 200 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಆದರೆ, ಈ ಬಾರಿ ಕಂಪನಿಯು ಶೇ.7ರಷ್ಟು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ವೇದಾಂತು ಸಿಇಒ ವಂಶಿ ಕೃಷ್ಣ, ಉದ್ಯೋಗಿಗಳಿಗೆ ಇಮೇಲ್‌ನಲ್ಲಿ, ಪ್ರಸ್ತುತ, ಬಾಹ್ಯ ಪರಿಸರವು ಕಠಿಣವಾಗಿದೆ. ಯುರೋಪ್‌ನಲ್ಲಿನ ಯುದ್ಧ, ಮುಂಬರುವ ಆರ್ಥಿಕ ಹಿಂಜರಿತದ ಭಯ ಹಾಗೂ ಫೆಡ್ ದರದ ಬಡ್ಡಿ ಏರಿಕೆಗಳು ಜಾಗತಿಕವಾಗಿ ಮತ್ತು ಭಾರತದಲ್ಲಿ ಷೇರುಗಳಲ್ಲಿ ಭಾರಿ ತಿದ್ದುಪಡಿಯೊಂದಿಗೆ ಹಣದುಬ್ಬರದ ಒತ್ತಡಕ್ಕೆ ಕಾರಣವಾಗಿವೆ. ಮುಂಬರುವ ತ್ರೈಮಾಸಿಕಗಳಿಗೆ ಬಂಡವಾಳದ ಕೊರತೆ ಇರುತ್ತದೆ ಎಂದು ಹೇಳಿದ್ದಾರೆ.

ಈ ದಿನಗಳು ಹೃದಯವಿದ್ರಾವಕವಾಗಿವೆ. ಹಾಗೂ ಅವನ್ನು ಮತ್ತೆಂದೂ ನೋಡಬಾರದು ಎಂದು ನಾನು ಭಾವಿಸುತ್ತೇನೆ. ವೈಯಕ್ತಿಕ ಮಟ್ಟದಲ್ಲಿ, ಅಂತಹ ನಿರ್ಧಾರದ ಮೂಲಕ ಬದುಕಲು ಮತ್ತು ಹೇಗಾದರೂ ನನ್ನ ನಿರ್ಧಾರಗಳು ಅಂತಹ ಪರಿಣಾಮಗಳಿಗೆ ಕಾರಣವಾಗಿವೆ ಎಂದು ನಾನು ಭಾವಿಸುತ್ತೇನೆ.
ಈ ಆಲೋಚನೆಯ ಸುತ್ತಲೂ ಯಾವುದೇ ಮಾರ್ಗವಿಲ್ಲ. ಇದನ್ನು ಹೇಳಲು ಯಾವುದೇ ಸುಲಭವಾದ ಮಾರ್ಗವಿಲ್ಲ, ಕ್ಷಮಿಸಿ ಎಂದು ವಂಶಿ ಕೃಷ್ಣ ಬರೆದಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕಾನೂನು ರಕ್ಷಕರೇ ಅಪರಾಧಿಗಳಾದರೆ
ಸಹಿಸುವುದಿಲ್ಲ-ಜ್ಞಾನೇಂದ್ರ

0

ಅಪರಾಧಿಗಳನ್ನು ಪತ್ತೆಹಚ್ಚುವ ಪೊಲೀಸರು ಅಪರಾಧಗಳಲ್ಲಿ ಭಾಗಿಯಾಗುವುದನ್ನು ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸಾರ್ವಜನಿಕರ ಆಸ್ತಿಪಾಸ್ತಿ ಮತ್ತು ಜೀವ ರಕ್ಷಣೆ ಹೊಣೆ ಹೊತ್ತಿರುವ ಪೊಲೀಸರು, ಆ ನಿಟ್ಟಿನಲ್ಲಿ ಹೊಣೆಗಾರಿಕೆ ಯನ್ನು ನಿಭಾಯಿಸಬೇಕು ಎಂದು ಹೇಳಿದ್ದಾರೆ.

ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ತನಿಖೆ ನಡೆಸುತ್ತಿರುವ ವಿಷಯದಲ್ಲಿ ಹೆಚ್ಚು ಜನ ಪೊಲೀಸ್ ಅಧಿಕಾರಿಗಳ ಪಾತ್ರವಿರುವ ಬಗ್ಗೆ ಪ್ರಸ್ತಾಪಿಸಿ, ವಿಷಾದಿಸಿದ ಸಚಿವರು, ಅಪರಾಧ ಪತ್ತೆ ಹಚ್ಚುವವರೆ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗುವುದಾದರೆ ಸಾರ್ವಜನಿಕರ ರಕ್ಷಣೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಸಾರ್ವಜನಿಕರು ಇಲಾಖೆಯ ಮೇಲೆ ಹೊಂದಿರುವ ಗೌರವ ಹಾಗೂ ನಂಬಿಕೆಯನ್ನು ಕಾಪಾಡಬೇಕು ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ಸರಗಳ್ಳತನ, ಮನೆ ದರೋಡೆ, ಕಳ್ಳತನ ಪ್ರಕರಣ ಗಳನ್ನು ತಡೆಗಟ್ಟಲು ಕಟ್ಟೆಚ್ಚರ ವಹಿಸುವಂತೆ ಆರಗ ಜ್ಞಾನೇಂದ್ರ ಅವರು ಸೂಚನೆ ನೀಡಿದ್ದಾರೆ.

ಅಕ್ರಮ ಗೋವುಗಳ ಹತ್ಯೆ ಮತ್ತು ಸಾಗಣಿಕೆ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ನೆರೆಯ ಆಂಧ್ರಪ್ರದೇಶ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗಗಳಲ್ಲಿ ರಕ್ತಚಂದನ ಮರಗಳ ಅಕ್ರಮ ಸಾಗಣೆ, ಗಾಂಜಾ ಹಾಗೂ ಮಾದಕ ವಸ್ತುಗಳ ಜಾಲ ಚಟುವಟಿಕೆಗಳನ್ನು ನಿಯಂತ್ರಿಸಲು ಆದ್ಯ ಗಮನ ನೀಡುವಂತೆ ಗೃಹ ಸಚಿವರು ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್, ಐಜಿ. ಚಂದ್ರಶೇಖರ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ವಂಶಿ ಕೃಷ್ಣ ಹಾಗೂ ಇನ್ನೂ ಮುಂತಾದ ಹಿರಿಯ ಪೋಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನ್ಯಾಯಾಲಯದ ಆದೇಶವನ್ನ ನಾವೆಲ್ಲ ಪಾಲಿಸಬೇಕು- ಜ್ಞಾನೇಂದ್ರ

0

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಗೆ ನೀಡಿದ್ದಾರೆ.

ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ವೇದಿಕೆಯು ಆಗ್ರಹಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯ ಮಸೀದಿ ಆಂಜನೇಯಸ್ವಾಮಿ ದೇವಾಲಯವಾಗಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ‘ನರೇಂದ್ರ ಮೋದಿ ವಿಚಾರ ಮಂಚ್’ ವೇದಿಕೆಯು ಹೇಳಿಕೆ ನೀಡಿದ್ದು, ಈ ಕುರಿತು ಹೋರಾಟ ನಡೆಸಲು ನರೇಂದ್ರ ಮೋದಿ ವಿಚಾರ ಮಂಚ್ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟದ ಸಿದ್ಧತೆಯಂತೆ ಈಗಾಗಲೇ ಸಂಘಟನೆಯು ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಬೆಳವಣಿಗೆಯು ನನ್ನ ಗಮನಕ್ಕೆ ಬಂದಿದೆ. ವಿವಾದವನ್ನು ತಾವಾಗಿಯೇ ಪರಿಹರಿಸಲು ಕಾನೂನು ಸುವ್ಯವಸ್ಥೆಗೆ ಸವಾಲೆಸೆಯುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಯಾರಾದರೂ ಕಾನೂನು ಸುವ್ಯವಸ್ಥೆಗೆ ಸವಾಲೆಸೆದಿದ್ದೇ ಆದರೆ, ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಶಾಲಾ ಪಠ್ಯದಲ್ಲಿ ಭಗತ್ ಸಿಂಗ್ ಪಾಠ ಕೈಬಿಟ್ಟಿಲ್ಲ- ನಾಗೇಶ್ ಸ್ಪಷ್ಟನೆ

0

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠಗಳನ್ನು ಪುಸ್ತಕದಿಂದ ಕೈಬಿಟ್ಟು ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೆವಾರ್ ಕುರಿತ ಪದ್ಯವನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎನ್ನುವ ಆರೋಪಕ್ಕೆ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

10ನೇ ತರಗತಿ ಪಠ್ಯಪುಸ್ತಕದಲ್ಲಿ ಭಗತ್‌ ಸಿಂಗ್ ಅವರ ಪಠ್ಯ ತೆಗೆದು ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡಗೆವಾರ್ ಪಠ್ಯ ಅಳವಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದವು.

ವಿವಾದದ ಬಗ್ಗೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕೂಡ ಸ್ಪಷ್ಟನೆ ನೀಡಿದ್ದರು. “ಭಗತ್ ಸಿಂಗ್ ಪಠ್ಯಪುಸ್ತಕ ತೆಗೆದು ಹೆಡಗೆವಾರ್ ಪಠ್ಯ ಅಳವಡಿಕೆ ಮಾಡಿಲ್ಲ, ಆರೋಪ ಮಾಡುವ ಮೊದಲು ಪಠ್ಯಪುಸ್ತಕ ಓದಲಿ” ಎಂದಿದ್ದರು.

ವಿವಾದದ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ನೀಡಿದ್ದು, ಭಗತ್ ಸಿಂಗ್ ಪಠ್ಯ ತೆಗೆದು ಹೆಡಗೆವಾರ್ ಬಗ್ಗೆ ಪಠ್ಯದಲ್ಲಿ ಸೇರಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಸಮಿತಿಯು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕ ಪರಿಷ್ಕರಿಸಿರುತ್ತಾರೆ.

10ನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿದ್ದ ‘ಭಗತ್‌ಸಿಂಗ್’ ಗದ್ಯವನ್ನು ಕೈಬಿಟ್ಟು ‘ಹೆಡಗೆವಾರ್’ರವರ ಬಗ್ಗೆ ಗದ್ಯ ಸೇರಿಸಲಾಗಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದುದು. ವಾಸ್ತವವಾಗಿ ‘ಭಗತ್‌ಸಿಂಗ್’ ಗದ್ಯವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ಇನ್ನೂ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಜಾತ್ರೆ ಸಮಸ್ಯೆ Watsapp ಮೂಲಕ ಇತ್ಯರ್ಥಪಡಿಸಿದ ನ್ಯಾಯಮೂರ್ತಿಗಳು

0

ಕಾಲ ಬದಲಾಗುತ್ತಿದೆ. ಎಲ್ಲರೂ ಕೂಡ ಕಾಲಮಾನಕ್ಕೆ ತಕ್ಕಂತೆ ತಂತ್ರಜ್ಞಾನದ ಬಳಕೆಯ ಕಡೆಗೆ ವಾಲುತ್ತಿದ್ದಾರೆ. ಪ್ರತಿಯೊಂದಕ್ಕೂ ತಂತ್ರಜ್ಞಾನದ ಮೊರೆ ಹೋಗುವ ಜನರು ಸಾವಿರಾರು. ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೂಡ ಈಗ ಸಾಮಾಜಿಕ ಜಾಲತಾಣಗಳು ಲಗ್ಗೆಯಿಟ್ಟಿವೆ.

ಪೊಲೀಸರು ಸಾಮಾಜಿಕ ಜಾಲತಾಣಗಳನ್ನು ಬಳಸಿ ಕ್ರಿಮಿನಲ್ ಕೇಸ್ ಗಳನ್ನ ಬಗೆಹರಿಸುವ ಘಟನೆಗಳು ಈಗಾಗಲೇ ನೀವೆಲ್ಲರೂ ಕೇಳಿರ್ತೀರಾ…

ಆದರೆ ಈಗ ಆ ಸಾಲಿಗೆ ನ್ಯಾಯಾಧೀಶರೊಬ್ಬರು ಸೇರಿಕೊಂಡಿದ್ದಾರೆ. ಹೌದು , ಕೋರ್ಟ್ ಗಳಲ್ಲಿ ಯಾವುದಾದರೂ ಒಂದು ಕೇಸ್ ನಡೆಯುತ್ತಿದ್ದರೆ , ಅದು ಸಂಪೂರ್ಣವಾಗಿ ಇತ್ಯರ್ಥಗೊಳ್ಳಲು ಹಲವಾರು ವರ್ಷಗಳೇ ಬೇಕಾಗುತ್ತದೆ.
ಹೀಗಿರುವಾಗ ನ್ಯಾಯಾಧೀಶರೊಬ್ಬರು ವಾಟ್ಸಪ್ ಬಳಸಿ ಸಮಸ್ಯೆಯನ್ನು ಬಗೆಹರಿಸಿದ ಅಪರೂಪದ ಘಟನೆ ನಡೆದಿದೆ.

ಈ ಮೂಲಕ ವಾಟ್ಸಪ್ ಮೂಲಕ ವಿಚಾರಣೆ ನಡೆಸಿ ತೀರ್ಪು ನೀಡಿದ ಹಿರಿಮೆಗೆ ಮದ್ರಾಸ್ ಹೈಕೋರ್ಟ್ ಪಾತ್ರವಾಗಿದೆ.

ಇತಿಹಾಸದಲ್ಲಿಯೇ ಮೊದಲ ಬಾರಿಗೆ ನ್ಯಾಯಾಧೀಶರು ‘ವಾಟ್ಸಾಪ್’ ಮೂಲಕ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ.

ಶ್ರೀ ಅಭೀಷ್ಟ ವರದರಾಜ ಸ್ವಾಮಿ ದೇವಸ್ಥಾನದ ‘ರಥ'(ಕಾರ್) ಉತ್ಸವವನ್ನು ಸೋಮವಾರ ನಡೆಸಬೇಕಿತಂತೆ ಆದರೆ, ಅಗ್ನಿ ಅವಘಡದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲವಂತೆ . ಉತ್ಸವ ನಡೆಸದಿದ್ದರೆ ತಮ್ಮ ಗ್ರಾಮವು ‘ದೇವರ ಕೋಪಕ್ಕೆ ಗುರಿಯಾಗಲಿದೆ’. ಕೂಡಲೇ ವಿಚಾರಣೆ ನಡೆಸಬೇಕೆಂದು ಆನುವಂಶಿಕ ಧರ್ಮದರ್ಶಿ ಪಿ.ಆರ್. ಶ್ರೀನಿವಾಸನ್ ಅರ್ಜಿ ಸಲ್ಲಿಸಿದ್ದರು.

ಈ ಕಾರಣಕ್ಕಾಗಿ ನ್ಯಾಯಮೂರ್ತಿ ಜಿ.ಆರ್.
ಸ್ವಾಮಿನಾಥನ್ ವಾಟ್ಸಾಪ್ ವಾಟ್ಸಪ್ ಮೂಲಕ ವಿಚಾರಣೆ ನಡೆಸಿದ್ದಾರೆ. ನಾಗರ್‌ ಕೋಯಿಲ್‌ ನಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದ ನ್ಯಾಯಾಧೀಶರು ವಿಭಿನ್ನ ರೀತಿಯಲ್ಲಿ ವಿಚಾರಣೆ ನಡೆಸಿದ್ದಾರೆ.

ಇದು ತ್ರಿಕೋನ ಅಧಿವೇಶನವಾಗಿತ್ತು. ನ್ಯಾಯಾಧೀಶರು ನಾಗರ್‌ ಕೋಯಿಲ್‌ ನಿಂದ ಪ್ರಕರಣವನ್ನು ಆಲಿಸಿದರು. ಅರ್ಜಿದಾರರ ವಕೀಲರು ಒಂದು ಸ್ಥಳದಲ್ಲಿ ಮತ್ತು ಅಡ್ವೊಕೇಟ್ ಜನರಲ್ ಆರ್. ಷಣ್ಮುಗಸುಂದರಂ ಮತ್ತೊಂದು ಸ್ಥಳದಲ್ಲಿದ್ದು ವಿಚಾರಣೆ ನಡೆದಿರುವುದು ವಿಶೇಷ.

ದೇವಸ್ಥಾನದ ಅನುವಂಶಿಕ ಟ್ರಸ್ಟಿಗೆ ರಥೋತ್ಸವ ನಿಲ್ಲಿಸುವಂತೆ ಆದೇಶ ಹೊರಡಿಸಲು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಸಂಬಂಧಿಸಿದ ಇನ್ಸ್‌ ಪೆಕ್ಟರ್‌ ಗೆ ಅಧಿಕಾರವಿಲ್ಲ ಎಂದು ಪರಿಗಣಿಸಿದ ನ್ಯಾಯಾಧೀಶರು ಅದನ್ನು ರದ್ದುಗೊಳಿಸಿದರು.

ಉತ್ಸವಗಳನ್ನು ನಡೆಸುವಾಗ ಸರ್ಕಾರವು ನಿಗದಿಪಡಿಸಿದ ನಿಯಮಗಳು ಮತ್ತು ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ದೇವಸ್ಥಾನದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಪ್ರದೇಶದಲ್ಲಿ ಪ್ರಾರಂಭದಿಂದ ಕೆಲವು ಗಂಟೆಗಳ ಕಾಲ ವಿದ್ಯುತ್ ಪೂರೈಕೆಯನ್ನು ಕಡಿತಗೊಳಿಸಬೇಕು ಎಂದರು.

ಕಳೆದ ತಿಂಗಳು ತಂಜಾವೂರು ಬಳಿ ದೇವಸ್ಥಾನದ ರಥವೊಂದು ಮೆರವಣಿಗೆ ವೇಳೆ ಹೈ ಟೆನ್ಶನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಸ್ಪರ್ಶದಿಂದ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದರು.

ಕಾರಣ ಏನೇ ಇರಲಿ, ನ್ಯಾಯಮೂರ್ತಿಗಳಾಗಿ ನಡೆ ದೇಶದ ಜನರ ಹುಬ್ಬೇರಿಸುವಂತೆ ಮಾಡಿದೆ. ತಂತ್ರಜ್ಞಾನದಿಂದ ಏನೆಲ್ಲಾ ಸಾಧ್ಯ ಎನ್ನುವುದಕ್ಕೆ ಇದೊಂದು ಉದಾಹರಣೆ ಅಷ್ಟೇ

ಮೈಕ್ರೋಸಾಫ್ಟ್ ಸಿಬ್ಬಂದಿಗಳಿಗೆ ವೇತನ ಹೆಚ್ಚಳ

0

ಮೈಕ್ರೋಸಾಫ್ಟ್ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸಂಬಳ ಹೆಚ್ಚಳ ಮಾಡುವುದಾಗಿ ಸಿಇಒ ಸತ್ಯ ನಾಡೆಲ್ಲಾ ಘೋಷಿಸಿದ್ದಾರೆ.

ಗೀಕ್‌ ವೈರ್ ಪ್ರಕಾರ, ಕಂಪನಿಯು ತನ್ನ ಸಿಬ್ಬಂದಿಯನ್ನು ಉಳಿಸಿಕೊಳ್ಳಲು ಹಿರಿಯ ನಿರ್ದೇಶಕರ ಮಟ್ಟದಲ್ಲಿ ಕನಿಷ್ಠ ಶೇ. 25 ರಷ್ಟು ಕಡಿಮೆ ಉದ್ಯೋಗಿಗಳಿಗೆ ಅರ್ಹತೆ-ಆಧಾರಿತ ಆದಾಯ ಮತ್ತು ವಾರ್ಷಿಕ ಸ್ಟಾಕ್ ಆಧಾರಿತ ಪರಿಹಾರದ ಶ್ರೇಣಿ ಹೆಚ್ಚಿಸಲು ಉದ್ದೇಶಿಸಿದೆ.

ಮೈಕ್ರೋಸಾಫ್ಟ್ ತನ್ನ ಜಾಗತಿಕ ಬಜೆಟ್ ದ್ವಿಗುಣಗೊಳಿಸಲು ಯೋಜಿಸುತ್ತಿದೆ. ಇದರಲ್ಲಿ ಉದ್ಯೋಗಿಗಳ ವೇತನ ಪರಿಹಾರವೂ ಸೇರಿದೆ.

ಉದ್ಯೋಗ ವಾರ್ತೆ

0

ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಕೇಂದ್ರ ಲೋಕಸೇವಾ ಆಯೋಗ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಬೇಕು. ಹುದ್ದೆಗಳಿಗೆ ಅನುಗುಣವಾಗಿ 7ನೇ ವೇತನ ಶ್ರೇಣಿ ಅನ್ವಯ 7, 8, 10, 11, 12ನೇ ಹಂತದ ವೇತನ ನಿಗದಿಪಡಿಸಲಾಗಿದೆ.
ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 30 ರಿಂದ 55 ವರ್ಷ ವಯೋಮಿತಿ ಇದ್ದು, ಮಿಸಲಾತಿ ಅಭ್ಯರ್ಥಿಗಳಿಗೆ ವಯೋಸಡಿಲಿಕೆ ಇದೆ.

ಹುದ್ದೆಗಳ ವಿವರ ಹೀಗಿದೆ :
ಸಹಾಯಕ ನಿರ್ದೇಶಕ-9
ಕಾರ್ಪೋರೇಟ್​​ ವ್ಯವಹಾರಗಳ ಸಚಿವಾಲಯದ ಸೀರಿಯಸ್​ ಫ್ರಾಡ್​ ಇನ್​ವೆಸ್ಟಿಗೇಷನ್​ ಆಫೀಸ್​ನಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಚಾರ್ಟ​ಡ್​ ಅಕೌಂಟ್​/ಮ್ಯಾನೇಜ್​ಮೆಂಟ್​ ಅಕೌಂಟೆಂಟ್​/ಫೈನಾನ್ಶಿಯಲ್​ ಅನಲಿಸ್ಟ್​ನಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಒಂದು ವರ್ಷ ವೃತ್ತಿ ಅನುಭವ ಕೇಳಲಾಗಿದೆ.
ಸಹಾಯಕ ಪ್ರಾಧ್ಯಾಪಕ-8
ಪುದುಚೇರಿಯ ಡಾ.ಅಂಬೇಡ್ಕರ್​ ಕಾನೂನು ಕಾಲೇಜಿನಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಭಾರತೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಬೋಧನೆಯಲ್ಲಿ ವೃತ್ತಿ ಅನುಭವ ಕೇಳಲಾಗಿದೆ.

ಸಹಾಯಕ ನಿರ್ದೇಶಕ-22 ಹುದ್ದೆ
ಹಣಕಾಸು ಸಚಿವಾಲಯದಡಿ ಮುಖ್ಯ ಸಲಹೆಗಾರ ವೆಚ್ಚ ಕಚೇರಿಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಚಾರ್ಟೆಟ್​​ ಅಕೌಂಟೆಂಟ್ಸ್​ ಅಥವಾ ಫೈನಾನ್ಸ್​ನಲ್ಲಿ ಪದವಿ ಪಡೆದವರಿಗೆ ಆದ್ಯತೆ.

ಹಿಂದಿ ಮಾಸ್ಟರ್​-1
ರಕ್ಷಣಾ ಸಚಿವಾಲಯದಡಿ ಬರುವ ಇಂಡಿಯನ್​ ಮಿಲಿಟರಿ ಕಾಲೇಜಿನಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಹಿಂದಿ ಭಾಷೆ ಬೋಧನೆಯಲ್ಲಿ ಮೂರು ವರ್ಷ ವೃತ್ತಿ ಅನುಭವ ಕೇಳಲಾಗಿದೆ.

ಅಸಿಸ್ಟೆಂಟ್​ ರಿಜಿಸ್ಟರ್​ ಜನರಲ್​-1
ಗೃಹ ವ್ಯವಹಾರಗಳ ಸಚಿವಾಲಯದ ರಿಜಿಸ್ಟಾರ್​ ಜನರಲ್​ ಕಚೇರಿಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭೌಗೋಳಿಕ ವಿಷಯದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ 10 ವರ್ಷ ವೃತ್ತಿ ಅನುಭವ ಕೇಳಲಾಗಿದೆ.

ಜೂನಿಯರ್​ ಸೈಂಟಿಫಿಕ್​ ಆಫೀಸರ್​-1
ಡೈರೆಕ್ಟರೇಟ್​ ಆಫ್​ ಫೋರೆನಿಕ್ಸ್​ ಸೈನ್ಸ್​ ಲ್ಯಾಬೋರೇಟರಿಯಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಭೌತಶಾಸ್ತ್ರ ವಿಷಯದಲ್ಲಿ ಪದವಿಯೊಂದಿಗೆ 3 ವರ್ಷ ವೃತ್ತಿ ಅನುಭವ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸೈಂಟಿಸ್ಟ್​ (ರಸಾಯನಶಾಸ್ತ್ರ)-3
ವಿಧಿ-ವಿಜ್ಞಾನ ಸೇವೆಗಳ ನಿರ್ದೇಶನಾಲಯದ ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ವಿಜ್ಞಾನ ವಿಷಯದಲ್ಲಿ ಪದವಿ ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಮೂರು ವರ್ಷ ವೃತ್ತಿ ಅನುಭವ ಕೇಳಲಾಗಿದೆ.

ಜೂನಿಯರ್​ ಸೈಂಟಿಫಿಕ್​ ಆಫೀಸರ್​-1
ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಜೂನಿಯರ್​ ಸೈಂಟಿಫಿಕ್​ ಆಫೀಸರ್​ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಮೂರು ವರ್ಷ ವೃತ್ತಿ ಅನುಭವವುಳ್ಳ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು.
ಜೂನಿಯರ್​ ಸೈಂಟಿಫಿಕ್​ ಆಫೀಸರ್​ (ಟಾಕ್ಸಿಕಾಲಜಿ)-2
ಕೇಂದ್ರೀಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪದವಿಯೊಂದಿಗೆ ಮೂರು ವರ್ಷ ವೃತ್ತಿ ಅನುಭವ ಕೇಳಲಾಗಿದೆ.

ಹಿರಿಯ ಉಪನ್ಯಾಸಕ-1
ಚಂಡೀಗಢದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಭಾರತೀಯ ವೈದ್ಯಕೀಯ ಮಂಡಳಿಯಲ್ಲಿ ವೈದ್ಯಕೀಯ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯೊಂದಿಗೆ 3 ವರ್ಷ ಬೋಧನಾ ಅನುಭವ ಕೇಳಲಾಗಿದೆ.
ಡ್ರಗ್​ ಇನ್​ಸ್ಪೆಕ್ಟರ್​-1
ಆಯುಷ್​ ಸಚಿವಾಲಯದಲ್ಲಿ ನೇಮಕ ಮಾಡಿಕೊಳ್ಳುತ್ತಿದ್ದು, ಇಂಡಿಯನ್​ ಮೆಡಿಸಿನ್​ನಲ್ಲಿ ಪದವಿ ಪಡೆದವರು ಹಾಗೂ ಫಾರ್ಮಸಿಯಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ.
ಆಯ್ಕೆ ಪ್ರಕ್ರಿಯೆ: ಶಾರ್ಟ್​ ಲಿಸ್ಟ್​ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ಕೊನೇ ದಿನ: 3.6.2022
ಅಧಿಸೂಚನೆಗೆ: https://bit.ly/3Li7dGf
ಮಾಹಿತಿಗೆ: https://www.upsc.gov.in/
ಆಯ್ಕೆ ಪ್ರಕ್ರಿಯೆ: ಶಾರ್ಟ್​ ಲಿಸ್ಟ್​ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 3.6.2022
ಅಧಿಸೂಚನೆಗೆ: https://bit.ly/3Li7dGf
ಮಾಹಿತಿಗೆ: https://www.upsc.gov.in/

ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಶಿವಮೊಗ್ಗ ಜಿಲ್ಲೆಯಲ್ಲಿನ ಪೂರ್ವಸಿದ್ಧತೆ

0

ಮೇ 21 ಮತ್ತು 22 ರಂದು ನಡೆಯಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ(6 ರಿಂದ 8ನೇ ತರಗತಿ) ನೇಮಕಾತಿ-2022 ಪರೀಕ್ಷೆಯ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ.

ಮೇ 21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಪೇಪರ್-1, ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಪೇಪರ್-2 ಪರೀಕ್ಷೆಯನ್ನು ನಡೆಸಲಾಗುವುದು. ಹಾಗೂ ಮೇ 22 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ರವರೆಗೆ ಪೇಪರ್-2 ಮತ್ತು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ಪೇಪರ್-3 ಪರೀಕ್ಷೆಯನ್ನು ಶಿವಮೊಗ್ಗ ನಗರದ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಈ ಪರೀಕ್ಷೆಯ ಸಂಬಂಧ ಜಿಲ್ಲಾಡಳಿತದಿಂದ ಕಂಟ್ರೋಲ್ ರೂಂ ಸ್ಥಾಪಿಸಿ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬಹುದಾದ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ಪಡೆಯಲಾಗುವುದು ಹಾಗೂ ಸಾರ್ವಜನಿಕರಿಂದ ಸ್ವೀಕರಿಸಬಹುದಾದ ಪರೀಕ್ಷೆಯ ಸಂಬಂಧ ದೂರಗಳ ಬಗ್ಗೆ ಸಹ ಸೂಕ್ತ ಮೇಲ್ವಿಚಾರಣೆಯನ್ನು ನಿರ್ವಹಿಸಲಾಗುವುದು. ಕಂಟ್ರೋಲ್ ರೂಂ ಸಂಖ್ಯೆ : 08182-268704, ಸ್ಥಳ ಅಪರ ಜಿಲ್ಲಾಧಿಕಾರಿಗಳ ಆಪ್ತಶಾಖೆ ಆಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್ ಹೊನ್ನಳ್ಳಿ ತಿಳಿಸಿದ್ದಾರೆ.

ಇಬ್ರಾಹಿಂ ಪ್ರಕರಣ ಅಡಕತ್ತರಿಯಲ್ಲಿ ಸಿಕ್ಕ ಅಡಿಕೆ ಜೆಡಿಎಸ್

0

ಕೆಲ ದಿನಗಳ ಹಿಂದೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ. ಇಬ್ರಾಹಿಂ ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ತಮಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ಸಿ.ಎಂ. ಇಬ್ರಾಹಿಂ ಕಾಂಗ್ರೆಸ್ ತೊರೆದಿದ್ದರು.

ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರ್ಪಡೆಯಿಂದ ಅಲ್ಪಸಂಖ್ಯಾತ ಮತಗಳನ್ನು ಗಳಿಸಲು ಸಹಾಯಕವಾಗುತ್ತದೆ ಎಂಬ ಕಾರಣಕ್ಕಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದರು.

ಸಿ.ಎಂ. ಇಬ್ರಾಹಿಂ, ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ತಮ್ಮನ್ನು ಅಭ್ಯರ್ಥಿಯನ್ನಾಗಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಸಂಖ್ಯಾಬಲದ ಆಧಾರದ ಮೇಲೆ ಜೆಡಿಎಸ್ ವಿಧಾನ ಪರಿಷತ್ ನ ಒಂದು ಸ್ಥಾನ ಗೆಲ್ಲಬಹುದಾಗಿದೆ. ಇದಕ್ಕೆ ಪಕ್ಷದ ರಾಜ್ಯಾಧ್ಯಕ್ಷರೇ ಬೇಡಿಕೆ ಇಟ್ಟಿರುವುದು ಜೆಡಿಎಸ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ ಎನ್ನಲಾಗಿದೆ.

ಈಗಾಗಲೇ ಸಿ.ಎಂ. ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು, ಇದೀಗ ಅವರನ್ನು ಮತ್ತೆ ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿಸಿದರೆ ಇತರೆ ಆಕಾಂಕ್ಷಿಗಳ ಅಸಮಾಧಾನಕ್ಕೆ ಕಾರಣವಾಗಬಹುದೆಂಬ ಆತಂಕವೂ ಜೆಡಿಎಸ್ ನಾಯಕರನ್ನು ಕಾಡುತ್ತಿದೆ ಎಂದು ಹೇಳಲಾಗಿದೆ.

ಮಕ್ಕಳ ಸಹಾಯವಾಣಿ 1098 ದಿನಾಚರಣೆ

0

ಮಕ್ಕಳ ಸಹಾಯವಾಣಿ -1098 ದಿನಾಚರಣೆ ಅಂಗವಾಗಿ ಮೇ ಮಾಹೆ ಪೂರ್ತಿ ಮಕ್ಕಳ ರಕ್ಷಣೆ, ಪಾಲನೆ ಪೋಷಣೆ ಹಾಗೂ ಮಕ್ಕಳ ಕಾನೂನುಗಳ ಕುರಿತು ಎಲ್ಲ ಶಾಲೆಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ವತಿಯಿಂದ ಮಂಗಳವಾರ ಗಾಡಿಕೊಪ್ಪದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ‘ಮಕ್ಕಳ ಸಹಾಯವಾಣಿ -1098 ದಿನಾಚರಣೆ’ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಕ್ಕಳೊಂದಿಗೆ ಸಹಾಯವಾಣಿ ಕುರಿತು ಸಂವಾದ ನಡೆಸಿದರು.

ಮಕ್ಕಳ ಸಹಾಯವಾಣಿ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ಮಕ್ಕಳೊಂದಿಗೆ ನೇರವಾಗಿ ಸಂವಾದ ನಡೆಸಿ ಮಕ್ಕಳ ಸಹಾಯವಾಣಿ 1098 ಎಂದರೆ ಏನು, ಯಾವ ಸಂದರ್ಭದಲ್ಲಿ ಮಕ್ಕಳು ಇದನ್ನು ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು. ಹಾಗೂ ಕೆಲವು ಸಂದರ್ಭಗಳಲ್ಲಿ ಹೆಣ್ಣು ಮಕ್ಕಳು ಅನುಭವಿಸುವ ಹಿಂಸಾತ್ಮಕ ಕೃತ್ಯದ ವೇಳೆ ಸಹಾಯವಾಣಿಯ ನೆರವು, ಸಹಕಾರದ ಕುರಿತು ವಿವರಿಸಿದರು.

ಮಕ್ಕಳು ಬಾಲ ಕಾರ್ಮಿಕ, ಬಾಲ್ಯ ವಿವಾಹಕ್ಕೀಡಾದ ಸಂದರ್ಭ, ಶಾಲಾ ಡ್ರಾಪ್‍ಔಟ್ ಮತ್ತು ಇತರೆ ಸಮಸ್ಯೆಗಳು ಎದುರಾದಾಗ ನೇರವಾಗಿ 1098 ಗೆ ಕರೆ ಮಾಡಿ ನೆರವು ಪಡೆಯಬೇಕೆಂದು ತಿಳಿಸಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರ ನಿರ್ದೇಶನದನ್ವಯ ದಿ: 17-05-2022 ನ್ನು ಮಕ್ಕಳ ಸಹಾಯವಾಣಿ -1098 ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮೇ ಮಾಹೆ ಪೂರ್ತಿ ಎಲ್ಲ ಶಾಲೆಗಳಲ್ಲಿ ಮಕ್ಕಳ ಪಾಲನೆ, ಪೋಷಣೆ ಹಾಗೂ ಮಕ್ಕಳ ಕಾನೂನುಗಳ ಕುರಿತು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಸಹಯೋಗದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್ ಮಾತನಾಡಿ, 2012 ರಲ್ಲಿ ಪ್ರಾರಂಭವಾದ ಮಕ್ಕಳ ಸಹಾಯವಾಣಿಯು ಮಕ್ಕಳ ರಕ್ಷಣೆ, ಪಾಲನೆ ಪೋಷಣೆ ಬಗ್ಗೆ ಸಾಕಷ್ಟು ಬೆಳಕು ಚೆಲ್ಲಿದೆ. ಹಲವಾರು ಸಂದರ್ಭಗಳಲ್ಲಿ ಮಕ್ಕಳು ನೇರವಾಗಿ 1098 ಗೆ ಕರೆ ಮಾಡಿ ನೆರವು ಪಡೆದಿದ್ದಾರೆ. ಮಕ್ಕಳ ಸಹಾಯವಾಣಿ ಕುರಿತು ಅಧಿಕಾರಿಗಳು, ಸಂಘ ಸಂಸ್ಥೆಗಳು ಮತ್ತು ಜನಪ್ರತಿನಿಧಿಗಳಿಗೆ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಮಕ್ಕಳಿಗೆ ಘನತೆಯ ಬದುಕನ್ನು ನೀಡಲು ಮತ್ತು ಜಿಲ್ಲೆಯನ್ನು ಮಕ್ಕಳಸ್ನೇಹಿಯಾಗಿಸುವ ನಿಟ್ಟಿನಲ್ಲಿ ಮಕ್ಕಳ ಸಹಾಯವಾಣಿ ಕೆಲಸ ಮಾಡುತ್ತಿದೆ ಎಂದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ರೇಖಾ.ಜಿ.ಎಂ ಮಾತನಾಡಿ, ಮಕ್ಕಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಮಕ್ಕಳ ಸಹಾಯವಾಣಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಉತ್ತಮವಾಗಿ ಸ್ಪಂದಿಸುತ್ತಿವೆ. ಮಕ್ಕಳ ಬೇಕು ಬೇಡಗಳ ಬಗ್ಗೆ ಗಮನ ಹರಿಸುವುದು ಸೇರಿದಂತೆ ಮಕ್ಕಳ ಸಮಸ್ಯೆಗಳ ಕುರಿತು ಗಮನ ಹರಿಸಲು ಮಕ್ಕಳ ಸಹಾಯವಾಣಿ ಸಹಕಾರಿ ಎಂದರು.

ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿ-1098 ನಿರ್ದೇಶಕ ಡಾ.ಫಾ.ಅಬ್ರಹಾಂ, ಬಿಇಓ ನಾಗರಾಜ್, ಗಾಡಿಕೊಪ್ಪದ ಸ.ಹಿ.ಪ್ರಾ.ಶಾಲೆಯ ಶಾಲಾ ಮುಖ್ಯೋಪಾಧ್ಯಾಯ ಭುವನೇಶ್ವರಿ ಪಾಲ್ಗೊಂಡಿದ್ದರು. ಮಕ್ಕಳ ಸಹಾಯವಾಣಿ ಸಂಯೋಜಕ ಪ್ರಮೋದ್ ನಿರೂಪಿಸಿದರು. ಮಕ್ಕಳ ರಕ್ಷಣಾ ಘಟಕದ ಸಂಯೋಜಕಿ ಗಾಯತ್ರಿ ಸ್ವಾಗತಿಸಿದರು.