Monday, March 2, 2026
Monday, March 2, 2026
Home Blog Page 1577

ಪುಟಿನ್ ಗೆ ತೀವ್ರಸ್ವರೂಪದ ಕಾಯಿಲೆ

0

ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್​ ರಕ್ತದ​ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ. ಈ ಕುರಿತಾಗಿ ಮಾಜಿ ಬ್ರಿಟಿಷ್​ ಗುಪ್ತಚರರೊಬ್ಬರು ಕೆಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಡೊನಾಲ್ಡ್ ಟ್ರಂಪ್ ಕುರಿತು ಬರೆದಿದ್ದ ಹಾಗೂ 2016ರ ಅಮೆರಿಕದ ಚುನಾವಣಾ ಪ್ರಚಾರದಲ್ಲಿ ರಷ್ಯಾದ ಹಸ್ತಕ್ಷೇಪವಿತ್ತು ಎಂದು ಆರೋಪಿಸಿದ್ದ ಕ್ರಿಸ್ಟೋಫರ್ ಸ್ಟೀಲ್, ರಷ್ಯಾ ಮತ್ತು ಇತರೆಡೆಯ ಮೂಲಗಳಿಂದ ಪುಟಿನ್ ಅನಾರೋಗ್ಯದ ಸಂಗತಿಗಳು ನಿಜವಾಗಿವೆ.

ಉಕ್ರೇನ್ ಯುದ್ಧಾರಂಭದ ನಂತರ ರಷ್ಯಾಧ್ಯಕ್ಷರ ಅನಾರೋಗ್ಯದ ಕುರಿತಾಗಿ ಹಲವು ಊಹಾಪೋಹಗಳು ಹರಡುತ್ತಿವೆ.
ಅವರು ತೀವ್ರ ಸ್ವರೂಪದ ಖಾಯಿಲೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಪುಟಿನ್ ಅವರನ್ನು ಕಾಡುತ್ತಿರುವ ಅನಾರೋಗ್ಯವು ನಿಖರವಾಗಿ ಏನೆಂದು ಗೊತ್ತಾಗಿಲ್ಲ. ಆದರೆ ಇದು ಗುಣಪಡಿಸಲಾಗದ ಅಥವಾ ಟರ್ಮಿನಲ್ ಯಾವುದಾದರೂ ಆಗಿರಬಹುದು ಎನ್ನಲಾಗುತ್ತಿದೆ. ಇನ್ನೊಂದೆಡೆ, ಪುಟಿನ್ ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ರಷ್ಯಾದ ನಾಯಕನೊಂದಿಗೆ ನಿಕಟ ಸಂಬಂಧ ಹೊಂದಿರುವ ಹೆಸರಿಸದ ಸರ್ಕಾರದ ಪ್ರತಿನಿಧಿಯೊಬ್ಬರು ಹೇಳಿರುವುದನ್ನು ಅಮೆರಿಕದ ನಿಯತಕಾಲಿಕೆ ವರದಿ ಮಾಡಿದೆ.

ಕಳೆದ ವಾರ ರಷ್ಯಾ ವಿಜಯ ದಿನಾಚರಣೆ ಸೇರಿದಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಪುಟಿನ್ ನಿಶಕ್ತರಾಗಿರುವಂತೆ ಕಂಡುಬಂದಿದ್ದರು. ಈ ಕುರಿತ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಭಾರತ-ನೇಪಾಳ ಸೌಹಾರ್ದ ಕಂಡು ಚೀನಾಕ್ಕೆ ತಳಮಳ?

0

ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸೋಮವಾರ ಬುದ್ಧ ಪೂರ್ಣಿಮಾ ದಿನದಂದು ನೇಪಾಳಕ್ಕೆ ಭೇಟಿ ನೀಡಿದ್ದಾರೆ.

ನೇಪಾಳ ಪ್ರಧಾನಿ ಶೇರ್ ಬಹಾದೂರ್ ದೇವುಬಾ ಅವರಿಂದ ಅದ್ದೂರಿಯಾದ ಸ್ವಾಗತ ಸಿಕ್ಕಿದೆ. ಇಬ್ಬರೂ ಕೂಡ ಲುಂಬಿನಿಯಲ್ಲಿರವ ಮಾಯಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಲುಂಬಿನಿ ಮಠದ ಪ್ರದೇಶದಲ್ಲಿ ಬೌದ್ಧ ಸಾಂಸ್ಕೃತಿ ಹಾಗೂ ಪಾರಂಪರಿಕ ಕೇಂದ್ರವೊಂದಕ್ಕೆ ಮಾನ್ಯ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಅಡಿಗಲ್ಲು ಹಾಕಿದ್ದಾರೆ. ಬೌದ್ಧ ಧರ್ಮ ಸಂಸ್ಥಾಪಕ ಗೌತಮ ಬುದ್ಧ ಸಿದ್ಧಾರ್ಥನಾಗಿ ಇದೇ ಲುಂಬಿನಿ ಪ್ರದೇಶದಲ್ಲಿ ಜನಿಸಿದ್ದು. ಈಗ ಈ ಐತಿಹಾಸಿಕ ಸ್ಥಳದಲ್ಲಿ ಭಾರತ ಮತ್ತು ನೇಪಾಳ ಪ್ರಧಾನಿಗಳಿಬ್ಬರು ಚೀನಾಗೆ ಹೊಸ ಸಂದೇಶ ರವಾನಿಸಿದಂತಿದೆ.

ಭಾರತ ಹಾಗೂ ನೇಪಾಳ ಪ್ರಧಾನಿಗಳು ಭೇಟಿಯಾದರೆ ಚೀನಾ ಯಾಕೆ ತಲೆಕೆಡಿಸಿಕೊಳ್ಳಬೇಕು ಎನಿಸಬಹುದು. ಕಳೆದ ಹಲವು ವರ್ಷಗಳಿಂದ ಭಾರತದ ಜೊತೆ ನೇಪಾಳ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುತ್ತಿದೆ. ಹಿಂದಿನ ಪ್ರಧಾನಿ ಕೆಪಿ ಶರ್ಮಾ ಓಲಿ ಸರ ನರೇಂದ್ರ ಮೋದಿಕಾರದ ಅವಧಿಯಲ್ಲಿ 2 ದೇಶಗಳ ಸ್ನೇಹಕ್ಕೆ ಆಗಿದ್ದ ಹಾನಿಯನ್ನು ಶೇರ್ ಬಹಾದೂರ್ ದೇವುಬಾ ಅವಧಿಯಲ್ಲಿ ಸರಿಪಡಿಸುವ ಕೆಲಸ ಆಗುತ್ತಿದೆ.

ಇಷ್ಟೇ ಆಗಿದ್ದರೆ ಚೀನಾ ಯೋಚಿಸುವ ಅಗತ್ಯ ಇರಲಿಲ್ಲ. ಭಾರತದೊಂದಿಗೆ ಸ್ನೇಹ ಸಂಪಾದನೆ ಮಾಡುವ ಜೊತೆ ಜೊತೆಗೆ ಚೀನಾದಿಂದಲೂ ನೇಪಾಳ ದೂರವಾಗುತ್ತಿರುವುದು ಗಮನಾರ್ಹ. ಶ್ರೀಲಂಕಾದ ಆರ್ಥಿಕ ಪರಿಸ್ಥಿತಿ ನೇಪಾಳಕ್ಕೆ ಒಂದು ಪಾಠವಾಗಿದೆ. ನೆರವು ನೀಡುವ ಹೆಸರಿನಲ್ಲಿ ಸಾಲ ನೀಡಿ ಶೂಲಕ್ಕೆ ಸಿಲುಕಿಸುವ ಚೀನಾದ ತಂತ್ರಗಾರಿಕೆಯನ್ನು ನೇಪಾಳ ಸಕಾಲಕ್ಕೆ ಅರ್ಥ ಮಾಡಿಕೊಂಡಿದೆ.ಆದ್ದರಿಂದ, ಚೀನಾದ ಪ್ರತಿಷ್ಠಿತ ಮತ್ತು ಮಹತ್ವಾಕಾಂಕ್ಷಿ ಬಿಆರ್‌ಐ ಯೋಜನೆಯನ್ನು ನೇಪಾಳ ಸ್ಥಗಿತಗೊಳಿಸಿ ಸುಮ್ಮನಾಗಿದೆ. ನೇಪಾಳವನ್ನು ಹಿಡಿದಿಟ್ಟುಕೊಂಡು ಭಾರತವನ್ನು ಹಣಿಯುವ ದುಸ್ಸಾಹಸಕ್ಕೆ ಚೀನಾ ಕೈಹಾಕುವುದು ಕಷ್ಟವಾಗಿದೆ ಎಂದು ತಜ್ಞರು ತಿಳಿಸುತ್ತಾರೆ

ಸಿ.ಎಚ್.ಪ್ರತಾಪ್ ರೆಡ್ಡಿ ಈಗ ಬೆಂಗಳೂರು ನೂತನ ಪೋಲಿಸ್ ಆಯುಕ್ತರು

0

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಈಗಾಗಲೇ 37 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನು ಲಾ ಅಂಡ್ ಆರ್ಡರ್ ನ ಹೆಚ್ಚುವರಿ ಡಿಜಿಪಿಯಾಗಿದ್ದಂತ ಸಿ ಹೆಚ್ ಪ್ರತಾಪ್ ರೆಡ್ಡಿಯವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕ್ರೈಂ ವಿಭಾಗದ ಡಿಸಿಪಿಯಾಗಿದ್ದಂತ ಎಂ ಎನ್ ಅನುಚೇತನ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದಂತ ಟಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದಂತ ಅಲೋಕ್ ಕುಮಾರ್ ಅವರನ್ನು, ಲಾ ಅಡ್ ಆರ್ಡರ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ನ ಎಡಿಜಿಪಿಯಾಗಿದ್ದಂತ ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

ಶ್ರೀಲಂಕಾದಲ್ಲಿ ಪೆಟ್ರೋಲ್ ಕ್ಷಾಮ ಸನ್ನಿಹಿತ

0

ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾವು ಅಗತ್ಯ ಆಮದುಗಳಿಗೆ ಹಣಕಾಸು ಒದಗಿಸಲು ಡಾಲರ್‌ಗಳನ್ನು ಹುಡುಕಲು ಸಾಧ್ಯವಾಗದ ಕಾರಣ ಪೆಟ್ರೋಲ್ ಖಾಲಿಯಾಗಿದೆ ಎಂದು ಹೊಸ ಪ್ರಧಾನಿ ರಾಷ್ಟ್ರವನ್ನು ಉದ್ದೇಶಿಸಿ ಹೇಳಿದರು.

‘ನಮ್ಮಲ್ಲಿ ಪೆಟ್ರೋಲ್ ಖಾಲಿಯಾಗಿದೆ… ಸದ್ಯಕ್ಕೆ ನಮ್ಮಲ್ಲಿ ಒಂದೇ ದಿನಕ್ಕೆ ಪೆಟ್ರೋಲ್ ಸ್ಟಾಕ್‌ಗಳಿವೆ’ ಎಂದು ರನಿಲ್ ವಿಕ್ರಮಸಿಂಘೆ ಹೇಳಿದರು.

ಇದಕ್ಕೂ ಮೊದಲು, ಶ್ರೀಲಂಕಾದ ಹೊಸ ಪ್ರಧಾನಿ ಸೋಮವಾರ ಎರಡು ಪ್ರಮುಖ ವಿರೋಧ ಪಕ್ಷಗಳಿಂದ ನಿರ್ಣಾಯಕ ಬೆಂಬಲವನ್ನು ಗಳಿಸಿದರು, ದ್ವೀಪದ ಹದಗೆಡುತ್ತಿರುವ ಆರ್ಥಿಕ ಬಿಕ್ಕಟ್ಟಿನ ಮುಖಾಂತರ ಆಡಳಿತಾರೂಢ ರಾಜಪಕ್ಸೆ ಕುಲದ ಮೇಲಿನ ಒತ್ತಡವನ್ನು ಕಡಿಮೆ ಮಾಡಿದರು.
ಕುಸಿಯುತ್ತಿರುವ ಆರ್ಥಿಕತೆಯನ್ನು ನಿರ್ವಹಿಸಲು ಒಕ್ಕೂಟವನ್ನು ಬೆಂಬಲಿಸುವ ಮೊದಲು ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಅವರು ಕೆಳಗಿಳಿಯಬೇಕು ಎಂಬ ತನ್ನ ಬೇಡಿಕೆಗಳನ್ನು ಪ್ರಮುಖ ಪ್ರತಿಪಕ್ಷವಾದ SJB ಪಕ್ಷವು ಕೈಬಿಟ್ಟಿದೆ.SJB, ಅಥವಾ ಸಮಗಿ ಜನ ಬಲವೇಗಯ, ಹೊಸ ಪ್ರಧಾನಿ ರನಿಲ್ ವಿಕ್ರಮಸಿಂಘೆ ನೇತೃತ್ವದ ಏಕತೆ ಸರ್ಕಾರಕ್ಕೆ ಸೇರಲು ನಿರಾಕರಿಸಿತು, ಆದರೆ ‘ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಸಕಾರಾತ್ಮಕ ಪ್ರಯತ್ನಗಳನ್ನು ಬೇಷರತ್ತಾಗಿ ಬೆಂಬಲಿಸುತ್ತದೆ’ ಎಂದು ಹೇಳಿದರು.

ಮುಂಬರುವ ತಿಂಗಳುಗಳಲ್ಲಿ ತನ್ನ ದಿವಾಳಿಯಾದ ದೇಶವು ಇನ್ನಷ್ಟು ಸಂಕಷ್ಟಗಳನ್ನು ಎದುರಿಸಬಹುದು ಎಂದು ಎಚ್ಚರಿಸಿದ್ದಾರೆ.

ಎರಡನೇ ಅತಿ ದೊಡ್ಡ ವಿರೋಧ ಪಕ್ಷವಾದ ಶ್ರೀಲಂಕಾ ಫ್ರೀಡಂ ಪಾರ್ಟಿ (SLFP) ತಾನು ಸಂಪುಟಕ್ಕೆ ಸೇರುವುದಾಗಿ ಹೇಳಿದೆ.ಹಾಗಿದ್ದರೂ ಸಹ, ಸಾವಿರಾರು ಪ್ರತಿಭಟನಾಕಾರರು 73 ವರ್ಷದ ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ಸಮುದ್ರ-ಮುಂಭಾಗದ ಕಚೇರಿಯ ಹೊರಗೆ ಮೊಕ್ಕಾಂ ಹೂಡಿದ್ದರು, ಅವರ ಸಹೋದರ ಮಹಿಂದ ಅವರು ಕಳೆದ ವಾರ ಪ್ರಧಾನಿ ಸ್ಥಾನವನ್ನು ತೊರೆದರು, ಅವರ ರಾಜೀನಾಮೆಗೆ ಒತ್ತಾಯಿಸಿದರು.

ರಫ್ತು ನಿಷೇಧದ ನಂತರ ಬೆಲೆ ಏರಿಕೆ ಕಂಡ ಗೋಧಿ

0

ರಫ್ತುಗಳನ್ನು ನಿಷೇಧಿಸಲು ಭಾರತ ನಿರ್ಧರಿಸಿದ ನಂತರ ಸೋಮವಾರ ಗೋಧಿ ಬೆಲೆಗಳು ದಾಖಲೆಯ ಏರಿಕೆ ಕಂಡಿದೆ. ಪ್ರಮುಖ ಗೋಧಿ ರಫ್ತುದಾರ ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ಹಿನ್ನೆಲೆಯಲ್ಲಿ ಈಗಾಗಲೇ ಹೆಚ್ಚಿದ್ದ ಬೆಲೆ ಯುರೋಪಿಯನ್ ಮಾರುಕಟ್ಟೆಯು ತೆರೆದಂತೆ ಪ್ರತಿ ಟನ್‌ಗೆ 435 ಯುರೋಗಳಿಗೆ ಜಿಗಿದಿದೆ.

ಬಿಸಿ ಗಾಳಿ ಹಿನ್ನೆಲೆಯಲ್ಲಿ ಸರಕುಗಳ ರಫ್ತುಗಳನ್ನು ನಿಷೇಧಿಸಲು ಭಾರತ ನಿರ್ಧರಿಸಿದ ನಂತರ ಸೋಮವಾರ ಗೋಧಿ ಬೆಲೆಗಳು ದಾಖಲೆಯ ಎತ್ತರಕ್ಕೆ ಏರಿತು. ಮೇ 13 ರ ಅಧಿಸೂಚನೆಯ ಪ್ರಕಾರ ಸರ್ಕಾರವು ತನ್ನ ಆಹಾರ ಭದ್ರತೆಯನ್ನು ನಿರ್ವಹಿಸಲು ಸಾಗರೋತ್ತರ ಮಾರಾಟವನ್ನು ಸ್ಥಗಿತಗೊಳಿಸುತ್ತದೆ. ಇದು 7 ರಾಷ್ಟ್ರಗಳ ಗುಂಪಿನ ಕೃಷಿ ಮಂತ್ರಿಗಳಿಂದ ಟೀಕೆಗೆ ಗುರಿಯಾಯಿತು, ಅಂತಹ ಕ್ರಮಗಳು ವಿಶ್ವದ ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸುತ್ತವೆ ಎಂದು ಟೀಕಿಸಿದ್ದರು.

ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಜಾಗತಿಕ ಆಹಾರ ಬಿಕ್ಕಟ್ಟನ್ನು ಪರಿಹರಿಸುವುದಿಲ್ಲ ಎಂದು ಹೇಳಿದೆ. ಗ್ಲೋಬಲ್ ಟೈಮ್ಸ್ ಚೀನಾ ಸರ್ಕಾರದ ಔಟ್ಲೆಟ್, ಭಾರತವನ್ನು ದೂಷಿಸುವುದು ಆಹಾರದ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಿದೆ. ಈಗ, ಜಿ7 ನ ಕೃಷಿ ಮಂತ್ರಿಗಳು ಗೋಧಿ ರಫ್ತುಗಳನ್ನು ನಿಷೇಧಿಸದಂತೆ ಭಾರತವನ್ನು ಒತ್ತಾಯಿಸುತ್ತಾರೆ. ಬಳಿಕ ಜಿ7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಜಿಟಿ ನಲ್ಲಿ ಪ್ರಕಟವಾದ ಸಂಪಾದಕೀಯವು ಕೇಳಿದೆ.

ರಸ್ತೆ ಅಪಘಾತ ಸಂತ್ರಸ್ತರ ರಕ್ಷಣೆಗೆ ಪ್ರೇರಕವಾಗಿ ಜೀವರಕ್ಷಕ ಸಮ್ಮಾನ

0

ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರನ್ನ ರಕ್ಷಿಸಲು ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆಯಿಟ್ಟಿದ್ದು, ಜೀವ ರಕ್ಷಕರಿಗೆ ನಗದು ಹಣದ ಜೊತೆಗೆ ಪ್ರಮಾಣಪತ್ರ ನೀಡಲು ಮುಂದಾಗಿದೆ. ಅದ್ರಂತೆ, ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳನ್ನ ಆಸ್ಪತ್ರೆಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಜೀವ ರಕ್ಷಕರಿಗೆ ನಗದು ಪ್ರಶಸ್ತಿ ನೀಡಲು ಸರ್ಕಾರ ಯೋಜಿಸಿದೆ.

ಆಸ್ಪತ್ರೆಗೆ ಸಾಗಿಸಲು ಪ್ರೇರೆಪಿಸುವ ಉದ್ದೇಶದಿಂದ ನಗದು ಪ್ರಶಸ್ತಿ ನೀಡಲು ಸರ್ಕಾರ ಮುಂದಾಗಿದ್ದು, ಜೀವರಕ್ಷಕ ಆಯ್ಕೆಗಾಗಿ ರಾಜ್ಯಮಟ್ಟದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗುವುದು. ಈ ಮೌಲ್ಯಮಾಪನ ಸಮಿತಿಗಳನ್ನ ಜಿಲ್ಲಾಮಟ್ಟಗಳಲ್ಲಿ ರಚನೆಯಾಗಲಿದ್ದು, ಈ ಜಿಲ್ಲಾ ಮೌಲ್ಯಮಾಪನ ಸಮಿತಿಗಳನ್ನ ಡಿಸಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುವುದು.

ಅಂದ್ಹಾಗೆ, ಜೀವರಕ್ಷಕರಿಗೆ 5000 ರೂಪಾಯಿ ನಗದು ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಿಕೆಗಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಮಾರ್ಗಸೂಚಿಯಂತೆ ರಾಜ್ಯ ಮಟ್ಟದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗುತ್ತದೆ.

ಈ ಯೋಜನೆ 2026 ಮಾರ್ಚ್‌ 31ರವರೆಗೂ ಜಾರಿಯಲ್ಲಿರಲಿದೆ.

ಟೊಮ್ಯಾಟೊ ಜ್ವರ:ನಿಮಗಾಗಿ ಮಾಹಿತಿ

0

ಕೊರೋನಾ ಮಹಾಮಾರಿಯ ನಡುವೆ ಹೊಸದಾಗಿ ಟೊಮೇಟೊ ಜ್ವರ ಭೀತಿ ಎಲ್ಲೆಡೆ ಹೆಚ್ಚಳವಾಗಿದೆ.

ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಎಲ್ಲಾ ಕಡೆ ಭಯ ಇನ್ನೂ ಹೆಚ್ಚಾಗಿದೆ.

ಸುಮಾರು 5 ವರ್ಷದೊಳಗಿನ ಮಕ್ಕಳು ಈ ಜ್ವರದಿಂದ ಬಳಲುತ್ತಿದ್ದಾರೆ. ಈ ಕಾಯಿಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಆದರೆ, ಇದನ್ನು ನಿಯಂತ್ರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಡೆಂಗ್ಯೂ ಅಥವಾ ಚಿಕೂನ್‌ಗುನ್ಯಾ ಇದಕ್ಕೆ ಕಾರಣ ಎಂದು ಹಲವು ತಜ್ಞರು ತಿಳಿಸಿದ್ದಾರೆ.

ರೋಗ ಅಪಾಯಕಾರಿಯಾಗದಂತೆ ಆರೋಗ್ಯ ಇಲಾಖೆ ಜಾಗೃತಿ ಅಭಿಯಾನ ನಡೆಸುತ್ತಿದೆ. ಈ ರೋಗವು ಮುಖ್ಯವಾಗಿ ಕೇರಳದಲ್ಲಿ ಹೆಚ್ಚಾಗಿ ಹರಡಿದೆ.

ಆದರೆ ದೇಶದ ಆರೋಗ್ಯ ಸಚಿವಾಲಯ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಸಚಿವಾಲಯದ ಮೂಲಗಳು ಹೇಳಿದಂತೆ, ಇತರ ರಾಜ್ಯಗಳು ಸಹ ಅಲರ್ಟ್ ಆಗುವುದು ಅಗತ್ಯವಾಗಿದೆ. ಅದರಲ್ಲೂ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಅನಿವಾರ್ಯವಾಗಿದೆ.

ಅಂತರವನ್ನು ಕಾಪಾಡಿಕೊಳ್ಳುವುದು. ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು. ಹೆಚ್ಚಿನ ನೀರನ್ನು ಕುಡಿಯಬೇಕು. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಉತ್ತಮ.

ವಾತಾವರಣ ಅಧ್ಯಯನಕ್ಕೆ ಚೀನಾದ ಗಗನ ನೌಕೆ ಎವರೆಸ್ಟ್ ಮೇಲೆ ಹಾರಾಟ

0

ವಾತಾವರಣವನ್ನು ಅಧ್ಯಯನ ಮಾಡಲು ಜಾಗತಿಕ ಹವಾಮಾನ ತಜ್ಞರು, ಬಲೂನ್‌ ಅನ್ನು ಹಾರಿಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚೀನಾ ಇನ್ನೊಂದು ಹೆಜ್ಜೆ ಮುಂದೆ ಹೋಗಿ, ನೇಪಾಳ-ಚೀನ ಗಡಿಭಾಗದಲ್ಲಿರುವ ಎವರೆಸ್ಟ್‌ ಶಿಖರದಲ್ಲಿ ಹವಾವಾನ ನೌಕೆಯನ್ನೇ ಹಾರಿಬಿಟ್ಟಿದೆ!
ಇದರ ಮೂಲಕ ಆ ಭಾಗದ ಪರಿಸರ ಸಂಯೋಜನೆ, ಕಪ್ಪು ಇಂಗಾಲದ ಪ್ರಮಾಣ, ಇಂಗಾಲದ ಡೈಆಕ್ಸೈಡ್ ಪ್ರಮಾಣ, ಮೀಥೇನ್‌ ಯಾವ ಪ್ರಮಾಣದಲ್ಲಿದೆ ಎಂದು ಅಂಕಿಸಂಖ್ಯೆಗಳನ್ನು ಸಂಗ್ರಹಿಸಲಾಗುತ್ತದೆ.

ಹಾಗೆಯೇ ಭೂಮಿಯಿಂದ ನೀರು ಆವಿಯಾಗಿ ಆಗಸ ಸೇರುವ ಪ್ರಕ್ರಿಯೆಯನ್ನೂ ಅಧ್ಯಯನ ನಡೆಸಲಿದೆ.
ಎವರೆಸ್ಟ್‌ ಮೇಲೆ ಹಾರುತ್ತಿರುವ ಹವಾಮಾನ ನೌಕೆ ಸಮುದ್ರಮಟ್ಟದಿಂದ 9,032 ಮೀಟರ್‌ ಎತ್ತರದಲ್ಲಿದೆ. ಅಂದರೆ ಎವರೆಸ್ಟ್‌ಗಿಂತ ಎತ್ತರದಲ್ಲಿದೆ. ಎವರೆಸ್ಟ್‌ ಪರ್ವತ ಸಮುದ್ರಮಟ್ಟದಿಂದ 8,849 ಮೀ. ಎತ್ತರದಲ್ಲಿದೆ. ಇದು ವಿಶ್ವದಲ್ಲೇ ಅತಿ ಎತ್ತರದ ಪರ್ವತ ಎನ್ನುವುದು ಇಲ್ಲಿ ಗಮನಾರ್ಹ.

ಈ ಹವಾಮಾನ ನೌಕೆ 9,060 ಕ್ಯೂಬಿಕ್‌ ಮೀಟರ್‌ ವಿಸ್ತಾರವಾಗಿದೆ. ಇದರ ತೂಕ 2.625 ಟನ್‌ಗಳು. ಇದರ ಕೆಳಗೆ ನೇತಾಡುತ್ತಿರುವ ವಾಹನದ ತೂಕ 90 ಟನ್‌ಗಳು! ಇಂತಹ ಭಾರೀ ಗಾತ್ರದ ನೌಕೆಯ ಮೂಲಕ ಚೀನ ಮಾಹಿತಿ ಸಂಗ್ರಹಿಸಲು ಹೊರಟಿದೆ.
ಚೀನದ ಹಲವು ವೈಜ್ಞಾನಿಕ ಸಂಸ್ಥೆಗಳು ಈ ಅಧ್ಯಯನದಲ್ಲಿ ಪಾಲ್ಗೊಂಡಿವೆ. ಎವರೆಸ್ಟ್‌ ಪರ್ವತಶ್ರೇಣಿ ಚೀನ, ಟಿಬೆನ್‌ ಗಡಿಭಾಗದಲ್ಲೂ ಬರಲಿದೆ. ಆದ್ದರಿಂದ ಟಿಬೆಟ್‌ನ ವಾತಾವರಣವನ್ನು, ಓಜೋನ್‌ ಪದರದ ಸ್ಥಿತಿಯನ್ನೂ ಅರಿಯಲು ಚೀನಕ್ಕೆ ಸಹಾಯವಾಗಲಿದೆ.

ಕಾಶಿ ಜ್ಞಾನವಾಪಿಯಲ್ಲಿ ಶಿವಲಿಂಗ ಪತ್ತೆ

0

ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿ
ನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಈ ಹೇಳಿಕೆಯ ಬಳಿಕ ನ್ಯಾಯಾಲಯವು ಆ ಸ್ಥಳವನ್ನು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ತಡೆಹಿಡಿಯುವಂತೆ ಆದೇಶಿಸಿರುವುದು ನ್ಯಾಯಯುತವಾಗಿಲ್ಲ. ಹಾಗೂ ಕೋಮುಸೌಹಾರ್ದತೆಯನ್ನು ಹದಗೆಡಿಸುವ ಯತ್ನ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.

ನ್ಯಾಯಾಲಯದ ಕಡ್ಡಾಯ ವೀಡಿಯೋಗ್ರಫಿ ಸಮೀಕ್ಷೆಯ ವೇಳೆಯಲ್ಲಿ, ಮುಸ್ಲಿಂರು ನಮಾಜ್ ಗೂ ಮುಂಚೆ ಕೈ ತೊಳೆದುಕೊಳ್ಳುವ ವಜೂಖಾನಾ ಸಮೀಪದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹಿಂದೂ ಪರ ವಕೀಲರು ಪ್ರತಿಪಾದಿಸಿದ್ದರು.

ಆದರೆ, ಈ ಹೇಳಿಕೆಯನ್ನು ಅಲ್ಲಗಳೆದಿರುವ ಮಸೀದಿ ನಿರ್ವಹಣಾ ಸಮಿತಿ ವಕ್ತಾರರೊಬ್ಬರು, ಇದು ಕಾರಂಜಿಯ ಭಾಗವಾಗಿದೆ ಎಂದಿದ್ದಾರೆ. ನ್ಯಾಯಾಲಯ ಸಾರ್ವಜನಿಕ ಪ್ರವೇಶ ತಡೆಯಿಡಿಯುವ ಆದೇಶ ಪ್ರಕಟಿಸುವ ಮುಂಚೆ ಮಸೀದಿ ಸಮಿತಿಯನ್ನು ಪ್ರತಿನಿಧಿಸುವ ವಕೀಲರು ಹೇಳುವುದನ್ನು ಸಂಪೂರ್ಣವಾಗಿ ಆಲಿಸಿಲ್ಲ ಎಂದು ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಮಸೀದಿಯಾಗಿದೆ. ಹಾಗೂ ಮಸೀದಿಯಾಗಿಯೇ ಉಳಿಯುತ್ತದೆ. ಇದನ್ನು ದೇವಾಲಯ ಎಂದು ಕರೆಯುವ ಪ್ರಯತ್ನವು ಕೋಮು ಸೌಹಾರ್ದತೆಯನ್ನು ಸೃಷ್ಟಿಸುವ ಪಿತೂರಿಗಿಂತ ಹೆಚ್ಚೇನೂ ಅಲ್ಲ. ಇದು ಸಾಂವಿಧಾನಿಕ ಹಕ್ಕುಗಳು ಮತ್ತು ಕಾನೂನಿಗೆ ವಿರುದ್ಧವಾದ ವಿಷಯವಾಗಿದೆ ಎಂದು ನಿನ್ನೆ ಸೋಮವಾರ ತಡರಾತ್ರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಎಐಎಂಪಿಎಲ್‌ಬಿ ಪ್ರಧಾನ ಕಾರ್ಯದರ್ಶಿ ಖಾಲಿದ್ ಸೈಫುಲ್ಲಾ ರಹಮಾನಿ ತಿಳಿಸಿದ್ದಾರೆ.

1937 ರಲ್ಲಿ, ದೀನ್ ಮೊಹಮ್ಮದ್ ವಿರುದ್ಧ ರಾಜ್ಯ ಕಾರ್ಯದರ್ಶಿ ಪ್ರಕರಣದಲ್ಲಿ, ನ್ಯಾಯಾಲಯವು ಮೌಖಿಕ ಸಾಕ್ಷ್ಯ ಮತ್ತು ದಾಖಲೆಗಳ ಆಧಾರದ ಮೇಲೆ ಜ್ಞಾನವಾಪಿ ಮಸೀದಿ ಸಂಕೀರ್ಣ ಮುಸ್ಲಿಂ ವಕ್ಫ್‌ಗೆ ಸೇರಿದೆ. ಅದರಲ್ಲಿ ನಮಾಜ್ ಮಾಡುವ ಹಕ್ಕು ಮುಸ್ಲಿಮರಿಗೆ ಇದೆ ಎಂದು ನಿರ್ಧರಿಸಿತ್ತು. ಮಸೀದಿಯ ವಿಸ್ತೀರ್ಣ ಎಷ್ಟು, ದೇವಸ್ಥಾನದ ವಿಸ್ತೀರ್ಣ ಎಷ್ಟು ಎಂಬುದನ್ನೂ ನ್ಯಾಯಾಲಯ ನಿರ್ಧರಿಸಿತ್ತು.

ಅದೇ ಸಮಯದಲ್ಲಿ, ವಝೂಖಾನಾವನ್ನು ಮಸೀದಿಯ ಆಸ್ತಿಯಾಗಿ ಸ್ವೀಕರಿಸಲಾಯಿತು ಎಂದು ರಹಮಾನಿ ಹೇಳಿದ್ದಾರೆ.

1991 ರಲ್ಲಿ, ಪೂಜಾ ಸ್ಥಳಗಳ ಕಾಯ್ದೆಯನ್ನು ಅಂಗೀಕರಿಸಿದ ಸಂಸತ್ತು 1947 ರಲ್ಲಿದ್ದ ಪೂಜಾ ಸ್ಥಳಗಳನ್ನು ಅದೇ ಸ್ಥಿತಿಯಲ್ಲಿ ನಿರ್ವಹಿಸಲಾಗುವುದು ಎಂದು ಹೇಳುತ್ತದೆ. ಬಾಬರಿ ಮಸೀದಿ ತೀರ್ಪಿನಲ್ಲೂ, ಎಲ್ಲಾ ಸ್ಥಳಗಳು ಪೂಜಾ ಸ್ಥಳಗಳು ಈ ಕಾನೂನಿನ ಅಡಿಯಲ್ಲಿರುತ್ತವೆ ಎಂದು ಹೇಳಿರುವುದಾಗಿ ಅವರು ಹೇಳಿದ್ದಾರೆ.

ಈ ಸಂಬಂಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿದೆ. ಪ್ರಕರಣ ವಿಚಾರಣೆ ಹಂತದಲ್ಲಿದೆ.

ಉಕ್ರೇನ್ ವಿರುದ್ಧದ ಸಮರದಲ್ಲಿ ರಷ್ಯ ಹಿಂದುಳಿದಿದೆ:ರಷ್ಯ ರಕ್ಷಣಾ ಸಚಿವಾಲಯ ವರದಿ

0

ರಷ್ಯಾ ಉಕ್ರೇನ್ ಮೇಲೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದಲೂ ದಾಳಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾದ ರಕ್ಷಣಾ ಸಚಿವಾಲಯವು, ಅನಿರ್ದಿಷ್ಟ ಹೋರಾಟ ಎದುರಿಸುತ್ತಿರುವ ಉಕ್ರೇನ್ ನಲ್ಲಿನ ಪರಿಸ್ಥಿತಿ
ಕುರಿತು ವರದಿಯನ್ನು ಬಿಡುಗಡೆ ಮಾಡಿದೆ.

ರಷ್ಯಾ ಪ್ರಸ್ತುತ ಯುದ್ಧದಲ್ಲಿ ಹಿಂದುಳಿದಿದೆ.
ರಷ್ಯಾ ಪಡೆಗಳ ಯುದ್ಧ ಸಾಮರ್ಥ್ಯ ಕಡಿಮೆಯಾಗಿದೆ ಮತ್ತು ಅನೇಕ ಸೈನಿಕರು ಸೆರೆಹಿಡಿಯಲ್ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಷ್ಯಾದ ಪಡೆಗಳು ಉಕ್ರೇನ್ ನ ಭೂ,ವಾಯು ಮತ್ತು ನೌಕಾ ನೆಲೆಗಳ ಮೇಲೆ ದಾಳಿ ನಡೆಸಿವೆ. ಆದರೆ ಯುದ್ಧದಲ್ಲಿ ಭಾರೀ ಸಾವುನೋವುಗಳು ಸಂಭವಿಸಿವೆ ಎನ್ನಲಾಗಿದೆ.

“ಮಿಸ್ಟರ್ ಪುಟಿನ್ ನಾವು ಸಾಧಿಸಿದ್ದೇವೆ” ಶತ್ರು ದೇಶದ ಗಡಿಯನ್ನು ತಲುಪಿದ್ದೇವೆ. ಉಕ್ರೇನಿಯನ್ ಸೈನಿಕರು ರಷ್ಯಾದ ಗಡಿಯನ್ನು ತಲುಪುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಆಸ್ಟ್ರಿಯಾ ಮತ್ತು ಉಕ್ರೇನ್‌ನ ಮಾಜಿ ರಾಯಭಾರಿ ಅಲೆಕ್ಸಾಂಡರ್ ಶೆರ್ಬಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ರಷ್ಯಾ ಪಡೆಗಳು ಕ್ಷಿಪ್ರ ದಾಳಿ ನಡೆಸಲು ಸಾಧ್ಯವಾಗುವುದಿಲ್ಲ ಎಂದು ರಕ್ಷಣಾ ಸಚಿವಾಲಯದ ಗುಪ್ತಚರ ವರದಿ ಭವಿಷ್ಯ ನುಡಿದಿದೆ. ಖಾರ್ಕಿವ್ ಪ್ರದೇಶದಲ್ಲಿ ಕೀವ್ ಪಡೆಗಳು ಉಕ್ರೇನ್-ರಷ್ಯಾ ಗಡಿಯನ್ನು ತಲುಪಿವೆ ಎಂದು ಉಕ್ರೇನಿಯನ್ ಆಂತರಿಕ ವ್ಯವಹಾರಗಳ ಸಚಿವಾಲಯದ ಸಲಹೆಗಾರ ವಾಡಿಮ್ ಡೆನಿಸೆಂಕೊ ಹೇಳಿದ್ದಾರೆ.