Sunday, May 17, 2026
Sunday, May 17, 2026
Home Blog Page 158

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

0

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಪಾವತಿಸದೆ ನಡೆಯುತ್ತಿರುವ ಗಂಭೀರ ಅಕ್ರಮವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳು , ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಪ್ರತಿನಿಧಿಗಳಾದ ಡಿ.ಎಸ್.ಅರುಣ್ ಅವರು ಇಂದು ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ವಿಷಯ ಪ್ರಸ್ತಾಪಿಸಿದರು.

ರಾಜ್ಯಾದ್ಯಂತ ಸಾವಿರಾರು ಗ್ರಂಥಪಾಲಕರು ತಿಂಗಳ ಕನಿಷ್ಠ ವೇತನಕ್ಕೂ ವಂಚಿತರಾಗುತ್ತಿರುವ ಬಗ್ಗೆ ಹಲವು ಜಿಲ್ಲೆಗಳಿಂದ ಬಂದಿರುವ ದೂರುಗಳು ಭಾರೀ ಆತಂಕಕ್ಕೆ ಕಾರಣವಾಗಿದ್ದು, ಕೆಲವು ಗ್ರಂಥಪಾಲಕರು ಆರ್ಥಿಕ ಬಿಕ್ಕಟ್ಟಿನಲ್ಲಿ ಪ್ರಾಣ ಕಳೆದುಕೊಂಡಿರುವ ಘಟನೆಗಳು ವರದಿಯಾದ ಹಿನ್ನೆಲೆ ವಿಷಯ ಮತ್ತಷ್ಟು ಗಂಭೀರವಾಗಿದೆ ಎಂದು ಮಾನ್ಯ ಶಾಸಕರು ಉಲ್ಲೆಕಿಸಿದರು.

ವೇತನ ಪಾವತಿ ಕಡಿಮೆ ಆಗಲು ಕಾರಣವಾಗಿರುವ ಆಡಳಿತಾತ್ಮಕ ಗೊಂದಲಗಳು, ಹಣ ಬಿಡುಗಡೆ ವಿಳಂಬ ಮತ್ತು ವರ್ಗೀಕರಣದ ದೋಷಗಳು ಕುರಿತು ಸರ್ಕಾರ ತಕ್ಷಣ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.

ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಮಾನ್ಯ ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

D S Arun ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು . ESI ಮತ್ತು PF ಅಂತಹ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಗ್ರಂಥಪಾಲಕರಿಗೆ ತಕ್ಷಣ ಜಾರಿಗೊಳಿಸಬೇಕು, ಗ್ರಂಥಪಾಲಕರಿಗೆ ಪ್ರತ್ಯೇಕ ಸೇವಾ ನಿಯಮಾವಳಿ (Service Rules) ರೂಪಿಸಬೇಕು ಮತ್ತು ರಾಜ್ಯ ಬಜೆಟ್‌ನಲ್ಲಿ ಇವರಿಗಾಗಿ ಪ್ರತ್ಯೇಕ ವಿನಿಯೋಗ ಒದಗಿಸಬೇಕು ಎಂದು ಸ್ಪಷ್ಟವಾಗಿ ಹೇಳಿದರು. ಈ ಮೂರು ಕ್ರಮಗಳು ಈಗಿನ ಪರಿಸ್ಥಿತಿಯಲ್ಲಿ ಅತಿ ಅವಶ್ಯಕವಾಗಿವೆ ಎಂದು ಹೇಳಿದರು.

ವೇತನ ಪಾವತಿಯಲ್ಲಿ ಪಾರದರ್ಶಕತೆ ಹಾಗೂ ವಿಳಂಬ ನಿವಾರಣೆಗಾಗಿ ನೇರ ಲಾಭ ವರ್ಗಾವಣೆ (DBT) ವ್ಯವಸ್ಥೆ ಜಾರಿಗೆ ತರಬೇಕೆಂದು ಕೂಡ ಅವರು ಸರ್ಕಾರಕ್ಕೆ ಸಲಹೆ ನೀಡಿದರು. ಲಕ್ಷಾಂತರ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿರುವ DBT ಮಾದರಿಯನ್ನು, ರಾಜ್ಯವು ಕೇವಲ ಆರು ಸಾವಿರಕ್ಕೂ ಕಡಿಮೆಯಿರುವ ಗ್ರಂಥಪಾಲಕರಿಗೆ ಜಾರಿಗೊಳಿಸುವುದು ಬಹಳ ಸುಲಭ ಮತ್ತು ಪರಿಣಾಮಕಾರಿ ಎಂಬುದನ್ನು ಡಿ. ಎಸ್. ಅರುಣ್ ಅವರು ಉದಾಹರಣೆ ನೀಡಿದರು.

RDPR ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ, ಅವರ ಪರವಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಉತ್ತರ ನೀಡುತ್ತಾ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಡಿ.ಎಸ್.ಅರುಣ್ ಅವರ ಸೂಚನೆಗಳನ್ನು ಸಂಪೂರ್ಣವಾಗಿ ಸಮರ್ಥಿಸಿ, RDPR ಸಚಿವರು ಮತ್ತು ಇಲಾಖೆಯೊಂದಿಗೆ ಚರ್ಚಿಸಿ DBT ವ್ಯವಸ್ಥೆ ಸೇರಿದಂತೆ ಸಲ್ಲಿಸಿದ ಶಿಫಾರಸುಗಳ ಮೇಲೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.

ವಂದನೆಗಳೊಂದಿಗೆ

ಕಾರ್ಯಾಲಯ:: ಮಾನ್ಯ ಶಾಸಕರು ಡಿ.ಎಸ್.ಅರುಣ್ ವಿಧಾನ ಪರಿಷತ್

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

0

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನ ಕೊಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರು ಇಂದು ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಭಾಗ್ಯ, ಉಪಾಧ್ಯಕ್ಷ ಮಧು, ಮಾಜಿ ಅಧ್ಯಕ್ಷರಾದ ಓಂಕಾರಪ್ಪ, ಲೋಹಿತ್ ಕೆಪಿ ಮಲ್ಲಿಕಾರ್ಜುನ್, ಸದಸ್ಯರಾದ ರೋಹಿಣಿ, ಪ್ರತಿಭಾ, ನೇತ್ರಾವತಿ, ಲಲಿತಮ್ಮ ರಂಗನಾಥ್ ಲಕ್ಷ್ಮಣ್, ಪಿಡಿಒ ವಿಜಯ, ಕಾರ್ಯದರ್ಶಿ ಪರಶುರಾಮ್, ಸಿಬ್ಬಂದಿಗಳಾದ ಅಶ್ವಿನಿ ಚೇತನ್, ಅನ್ನಪೂರ್ಣಮ್ಮ, ರಮೇಶ್, ಸಿದ್ದೇಶ್, ರಾಘವೇಂದ್ರ, ಜಯಪ್ಪ, ಸವಿತಾ ಮುಂತಾದವರಿದ್ದರು

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ.

0

Canara Bank ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ೧೮ ರಿಂದ ೪೯ ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು ೮ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದು ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಗಳು
ಕ್ರ ಸ
ತರಬೇತಿಗಳು
ಅವದಿ
ಪ್ರಾರಂಬ ದಿನಾಂಕ
೦೧
ದ್ವಿಚಕ್ರ ವಾಹನ ರಿಪೇರಿ ಮತ್ತು ಎಲೆಕ್ಟಿçಕ್ ಬೈಕ್ ಸರ್ವಿಸ್
೩೪ ದಿನ
22/12/2025

Canara Bank ತರಬೇತಿಯು ಪ್ರಾರಂಭವಾಗಲಿದ್ದು ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-೫೭೭ ೨೧೬ (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ.9743429595, 8722384541, 9164411580, 8105378735 9449371579, 9481955721,

Karnataka Rakshana Vedike ಕರವೇ ಜನಮನ ರಾಜ್ಯ ಹೋರಾಟ ಸಂಘಟನೆಗೆ ಜನಾರ್ದನ್ ಅಧ್ಯಕ್ಷರಾಗಿ ಆಯ್ಕೆ.

0

Karnataka Rakshana Vedike ಶಿವಮೊಗ್ಗ ದಿನಾಂಕ 11.12.2025ರ ಗುರುವಾರದಂದು ಕರ್ನಾಟಕ ರಕ್ಷಣಾ ವೇದಿಕೆ ಜನ ಮನ ರಾಜ್ಯ ಹೋರಾಟ ಸಂಘಟನೆ ನೂತನ ಪದಾಧಿಕಾರಿಗಳ ಆಯ್ಕೆ ಈ ಸಂಘಟನೆಯಲ್ಲಿ ರಾಜ್ಯಾಧ್ಯಕ್ಷರಾಗಿ ಜನಾರ್ದನ್ ಶಾಲಿಯಾನ. ಕೆ. ಪ್ರಧಾನ ಕಾರ್ಯದರ್ಶಿಯಾಗಿ ಏನ್ ಮಾಲತೇಶ್ ಖಜಾಂಚಿಯಾಗಿ ಸಿದ್ದಣ್ಣನವರು. ಉಪಾಧ್ಯಕ್ಷರಾಗಿ ಯಶವಂತ್, ಎಸ್. ಸಂಘಟನೆ ಅಧ್ಯಕ್ಷರಾಗಿ ಅರುಣ್ ಕುಮಾರ್ ಎಂ. ಹಾಗೂ ಜಿಲ್ಲಾಧ್ಯಕ್ಷರಾಗಿ ಪ್ರಫುಲಚಂದ್ರ ಎಚ್. ಪ್ರಧಾನ ಕಾರ್ಯದರ್ಶಿಯಾಗಿ ರಾಮು ಜಿ. ಉಪಾಧ್ಯಕ್ಷರಾಗಿ ಮಂಜುನಾಥ್ ಎ. ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಲತೇಶ್ ಎನ್. ಸಂಘಟನೆ ಅಧ್ಯಕ್ಷರಾಗಿ ಸಂಗಮೇಶ್ ಈ. ಸಹ ಕಾರ್ಯದರ್ಶಿಯಾಗಿ ಯೋಗೇಶ್ ಎಲ್. ಗೌರವಾಧ್ಯಕ್ಷರಾಗಿ ಅಶೋಕ್ ಎಸ್,ಆರ್. ಹಾಗೂ ಮಹಿಳಾ ಜಿಲ್ಲಾ ಘಟಕ ಅಧ್ಯಕ್ಷರಾಗಿ ಸುಮಾ ಕೆ ಎಸ್. ಗೌರವಾಧ್ಯಕ್ಷರಾಗಿ ಡಾಕ್ಟರ್ ವೀಣಾ ಮೇಡಂ ಎಚ್. ಕಾರ್ಯದರ್ಶಿಯಾಗಿ ಪುಷ್ಪ ಒಡೆಯರ್ ಎ ಮತ್ತು ನಗರಾಧ್ಯಕ್ಷರಾಗಿ ರಾಮಣ್ಣ ರಾಗಿಗುಡ್ಡ. ಸಂಘಟನೆ ಅಧ್ಯಕ್ಷರಾಗಿ ಮಂಜು ನಾಯಕ್ ಎಸ್. ಪ್ರಧಾನ ಕಾರ್ಯದರ್ಶಿಯಾಗಿ ಪಾರ್ಥಿಬನ್ ಪಿ. Karnataka Rakshana Vedike ಉಪಾಧ್ಯಕ್ಷರಾಗಿ ಮನು ಕುಮಾರ್ ಎಂ ಸಹ ಕಾರ್ಯದರ್ಶಿಯಾಗಿ ಪ್ರೇಮ್ ಕುಮಾರ್ ಎಂ. ಗೌರವಾಧ್ಯಕ್ಷರಾಗಿ ರಾಮು ಎಚ್ ರವರನ್ನು ಈ ಒಂದು ಸಂಘಟನೆಗೆ ಆತ್ಮೀಯವಾಗಿ ಸೇರ್ಪಡೆಗೊಳಿಸಲಾಯಿತು. ಜಿಲ್ಲೆಯಲ್ಲಿನ ವಿವಿಧ ಸ್ಥಳಗಳಲ್ಲಿ ಸಂಘಟನೆಗಾಗಿ ಸಂಪರ್ಕಿಸಿ 9901826004

Roller Skating ಶಿವಮೊಗ್ಗದ ಈರ್ವರು ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಗೆ ಆಯ್ಕೆ

0

Roller Skating ಇಲ್ಲಿನ ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ನ ಇಬ್ಬರು ಕ್ರೀಡಾಪಟುಗಳು ಕರ್ನಾಟಕ ಶಿಕ್ಷಣ ಇಲಾಖೆ ನಡೆಸಿದ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆಯುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳನ್ನು ಸಂಸ್ಥೆ ಅಭಿನಂದಿಸಿದೆ.
ರಾಜ್ಯಮಟ್ಟದ ಸ್ಕೇಟಿಂಗ್ ಕ್ರೀಡಾ ಪಂದ್ಯಾವಳಿಯು ಬೆಂಗಳೂರಿನ ಗಿಡ್ಡೇನಹಳ್ಳಿ ಸಿಟಿ ಸ್ಟೇಟರ್ಸ್ ಅರೆನಾದಲ್ಲಿ ನಡೆದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ 2000, 1000 ಹಾಗೂ 500 ಮೀಟರ್ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ನಮ್ಮ ಶಿವಮೊಗ್ಗ ಸಂಸ್ಥೆಯ ಕ್ರೀಡಾಪಟುಗಳು ಮೂರು ಚಿನ್ನದ ಪದಕ ಪಡೆದಿದ್ದು, ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಶಿವಮೊಗ್ಗದ ಜುಲ್ಪಿಕರ್ ಹಾಗೂ ನಾಜಿಮಾ ದಂಪತಿಗಳ ಮಗನಾಗಿರುವ ಪೈಸಲ್ ಸಾಧನೆಗೆ ಅಭಿನಂದನೆ ಸಲ್ಲಿಸಲಾಗಿದೆ.
ಅಂತೆಯೇ ಎರಡು ಬೆಳ್ಳಿ ಪದಕ ಪಡೆದ ನಿಖಿತಾ ಎನ್. ಉಪಾಧ್ಯ ಅವರು 500 ಮೀ ರೇಸ್ ಹಾಗೂ 3000 ಮೀಟರ್ ರೋಡ್ ರೇಸ್ ಸ್ಪರ್ದೆಯಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಜಿ. ಆರ್. ನಾಗರಾಜ ಹಾಗು ಅಶ್ವಿನಿ ಹೆಚ್. ವಿ. ದಂಪತಿಗಳ ಪುತ್ರಿ ನಿಖಿತಾ ಸಾಧನೆಗೆ ಅಭಿನಂದಿಸಲಾಗಿದೆ.
Roller Skating ಈ ಇಬ್ಬರು ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಇವರು ನಮ್ಮ ಶಿವಮೊಗ್ಗ ಸ್ಕೇಟಿಂಗ್ ಸಂಸ್ಥೆಯ ವಿಶ್ವಾಸ ಹಾಗೂ ಅತೀಶ್ ಅವರ ಬಳಿ ತರಬೇತಿ ಪಡೆಯುತ್ತಿದ್ದರು.
ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳನ್ನು ನಮ್ಮ ಶಿವಮೊಗ್ಗ ಸಂಸ್ಥೆಯ ಅಧ್ಯಕ್ಷ ಮೋಹನ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಂ ರವಿ ಹಾಗೂ ಸಂಸ್ಥೆಯ ಎಸ್ ಕೆ ಗಜೇಂದ್ರ ಸ್ವಾಮಿ, ಉಮಾ ರವಿ, ಯುವಜನ ಮತ್ತು ಕ್ರೀಡಾಧಿಕಾರಿ ರೇಖ್ಯಾನಾಯ್ಕ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಪೋಷಕರು ಅಭಿನಂದಿಸಿದ್ದಾರೆ.

Varna Pallata ಶಿವಮೊಗ್ಗದಲ್ಲಿ ” ವರ್ಣ ಪಲ್ಲಟ ” ಯಕ್ಷಗಾನ ಪ್ರದರ್ಶನ.

0

Varna Pallata ನಗರದ ಯಕ್ಷ ಸಂವರ್ಧನಾ (ರಿ) ವತಿಯಿಂದ ಪ್ರಸಿದ್ಧ ಶ್ರೀ ಹನುಮಗಿರಿ ಮೇಳದ ವತಿಯಿಂದ ವರ್ಣ ಪಲ್ಲಟ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಗೋಪಾಳದ ಸಿ ಬ್ಲಾಕ್‌ನಲ್ಲಿರುವ ಶ್ರೀ ಸಿದ್ಧಿ-ಬುದ್ಧಿ ಮಹಾಗಣಪತಿ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಡಿ. ೧೫ರ ಸೋಮವಾರ ಸಂಜೆ ೦೫.೩೦ರಿಂದ ಈ ಯಕ್ಷಗಾನ ಪ್ರದರ್ಶನದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ. ಚಿನ್ಮಯ್ ಭಟ್ ಕಲ್ಲಡ್ಕ ಪಾಲ್ಗೊಳ್ಳಲಿದ್ದಾರೆ. ಚಂಡೆ, ಮದ್ದಳೆಯಲ್ಲಿ ದೇಲಂತಮಜಲು ಸುಬ್ರಮಣ್ಯ ಭಟ್, ಚೈತನ್ಯ ಕೃಷ್ಣ ಪದ್ಯಾಣ, ಶ್ರೀಧರ ವಿಟ್ಲ , ಕೌಶಲ್ ರಾವ್ ಪುತ್ತಿಗೆ, ನಿಶ್ಚತ್ ಜೋಡುಕಲ್ಲು ಪಾಲ್ಗೊಳ್ಳಲಿದ್ದಾರೆ. ವಿದೂಷಕರಾಗಿ ಸೀತಾರಾಮ್ ಕುಮಾರ್ ಕಟೀಲು, ಮೋಹನ್ ಮುಚ್ಚುರು, ಸ್ತಿçà ವೇಷದಲ್ಲಿ ಸಂತೋಷ ಹಿಲಿಯಾಣ, ರಕ್ಷಿತ್ ಶೆಟ್ಟಿ ಪಡ್ರೆ, ಸತೀಶ್ ನೀರ್ಕೆರೆ, ಹರ್ಷ ಸಿದ್ದಾಪುರ ಗಮನ ಸೆಳೆಯಲಿದ್ದಾರೆ. ಪ್ರಧಾನ ಭೂಮಿಕೆಯಲ್ಲಿ ವಾಸುದೇವ ರಂಗಾ ಭಟ್, ಮಧೂರು, ಶ್ರೀ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಜಗದಾಭಿರಾಮ ಪಡುಬಿದ್ರಿ, ಸದಾಶಿವ ಕುಲಾಲ್ ವೇಣೂರು, ದಿವಾಕರ್ ರೈ ಸಂಪಾಜೆ, ಶಿವರಾಜ್ ಭಜಕೋಡ್ಲು, ಮುಖೇಶ್ ದೇವಧರ್ ನಿಡ್ಲೆ , ಅಜಿತ್ ಪುತ್ತಿಗೆ, ಪ್ರಥ್ವಿಶ್ ಪರ್ಕಳ, ಪೆರ್ಲ ಜಗನ್ನಾಥ ಶೆಟ್ಟಿ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ, ಪ್ರಸಾದ್ ಸವನೂರು, ಕೀರ್ತನ್ ಕಾರ್ಕಳ, ಸತೀಶ್ ಎಡಮೊಗೆ, ರೂಪೇಶ್ ಆಚಾರ್ಯ, ಅಭಿಷೇಕ್ ಕಲ್ಲಡ್ಕ , ಪ್ರಜ್ವಲ್ ಶೆಟ್ಟಿ, ಸೋಹನ್ ರೈ ರಾಮಕುಂಜ, ವಿದ್ಯಾಭೂಷಣ ಪಂಚಾಚೆರವರ ಅಭಿನಯವಿದೆ.
Varna Pallata ಯಕ್ಷಗಾನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಯೋಜಕರಾದ ಯಕ್ಷ ಸಂವರ್ಧನಾ ಟ್ರಸ್ಟ್ ಹಾಗೂ ಶ್ರೀ ಸಿದ್ಧಿ-ಬುದ್ಧಿ ಮಹಾಗಣಪತಿ ಮತ್ತು ಶ್ರೀ ಚೌಡೇಶ್ವರಿ ದೇವಸ್ಥಾನ ಸಮಿತಿಯ ಅಧ್ಯಕ್ಷರು ಪದಾಽಕಾರಿಗಳು ಕೋರಿದ್ದಾರೆ.
ವಿವರಗಳಿಗೆ 9845094318, 9342520413, 9632952015, 8217318814 ರಲ್ಲಿ ಸಂಪರ್ಕಿಸಬಹುದು.

Shimoga News ಕನ್ನಡ ಮಾಧ್ಯಮದಲ್ಲಿ ಓದಿದವರು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ.- ಕೆ.ಎಸ್.ಗೀತಾ.

0

Shimoga News ಶ್ರೀಮತಿ ಕೆ.ಎಸ್ ಗೀತಾ ತಾವು ಶಿವಮೊಗ್ಗ ತಾಲ್ಲೂಕಿನ ಒಂದು ಪುಟ್ಟ ಶಾಲೆ ಆಡಿನಕೊಟ್ಟಿಗೆಯಲ್ಲಿ ಸಾಮಾನ್ಯ ಶಿಕ್ಷಕಿ. ನನ್ನಂತಹವರನ್ನು ಇಂದು ಕರೆಸಿ ಸನ್ಮಾನಿಸುತ್ತಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಅದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಕಿ ಕೆ.ಎಸ್.ಗೀತಾ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ರಾಜ್ಯೋತ್ಸವದ ಪ್ರಯುಕ್ತ ವನಿತಾ ವಿದ್ಯಾಲಯದಲ್ಲಿ ನಡೆದ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

ರಾಜ್ಯೋತ್ಸವದ ಮಹತ್ವದ ಬಗ್ಗೆ ಎಂ ಎನ್ ಸುಂದರ್ ರಾಜ್ ಅವರು ತಿಳಿಸುತ್ತಾ, ಕನ್ನಡ ಮಾಧ್ಯಮದಲ್ಲಿ ಓದಿ ನೂರಾರು ಗೌರವ ಡಾಕ್ಟರೇಟ್ ಗಳಿಸಿ, ಭಾರತರತ್ನ ಪ್ರಶಸ್ತಿಯನ್ನು ಪಡೆದ ಸಿ.ಎನ್.ಆರ್.ರಾವ್ ಬಗ್ಗೆ ನಾವೆಲ್ಲ ಅಭಿಮಾನ ಹೊಂದಬೇಕು ಎಂದು ಹೇಳಿದರು

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿ. ವಿಜಯಕುಮಾರ್ ಅವರು ಮಾತನಾಡಿ ಕನ್ನಡ ನಿತ್ಯೋತ್ಸವವಾಗಿ ಆಚರಿಸಬೇಕೆಂದು ಕರೆನೀಡಿದರು.

Shimoga News ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನು ಹರಿಪ್ರಸಾದ್ ನಡೆಸಿಕೊಟ್ಟರು.ವಿಜೇತ ಮಕ್ಕಳಿಗೆ ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಬಹುಮಾನ ವಿತರಿಸಿ, ಮಕ್ಕಳಲ್ಲಿ ಸ್ಫರ್ಧಾ ಮನೋಭಾವ ಬೆಳೆಯಲು ಇಂಥಾ ಕಾರ್ಯಕ್ರಮಗಳ ಅವಶ್ಯಕತೆ ಇದೆಯೆಂದು ಶ್ಲಾಘಿಸಿದರು.

ಶ್ರೀಮತಿ ತಾರಾಪ್ರಸಾದ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಮ್ಮ ಸಂಸ್ಥೆಯು ಒಬ್ಬ ನಿಷ್ಠಾವಂತ ಶಿಕ್ಷಕಿಯನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಹರಿಪ್ರಸಾದ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

ಮೊದಲು ಶಾಲಾ ಮಕ್ಕಳಿಂದ ಪ್ರಾರ್ಥನೆ ನಡೆಯಿತು.

Shimoga News ಮಹಿಳೆಯರ ವ್ಯವಹಾರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ- ಗಣಪತಿ ಶೆಣೈ.

0

Shimoga News ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಆಭರಣ ಜ್ಯೂವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.
ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಎರಡು ದಿನ ಆಯೋಜಿಸಿರುವ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ ವ್ಯಾಪಾರ ಮಳಿಗೆ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಹಿಳೆಯರು ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಸಂಘ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವುದರ ಜತೆಗೆ ಆರ್ಥಿಕವಾಗಿ ಸಬಲರಾಗಬೇಕು. ಪರಸ್ಪರ ಒಡನಾಟ ಹೆಚ್ಚುತ್ತದೆ. ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಹೇಳಿದರು.
ಎಂಟು ಜಿಲ್ಲೆಗಳಿಂದ ಮಹಿಳಾ ಉದ್ಯಮಿಗಳು ಆಗಮಿಸಿದ್ದು, ಅವರ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿ ನಡೆಯುವುದರ ಮುಖಾಂತರ ಅವರಿಗೆ ಪ್ರೋತ್ಸಾಹಿಸಬೇಕು. ನಗರದ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಸಮಾವೇಶ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
Shimoga News ಡಾ. ಕಡಿದಾಳ್ ಗೋಪಾಲ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಸಮಾವೇಶದಲ್ಲಿ 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಚಲನಚಿತ್ರ ನಟಿ ಪೂಜಾ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಅನೂಪ್, ಅಂಜು ಆದಿಮೂರ್ತಿ, ಬಿಂದು ವಿಜಯ ಕುಮಾರ್, ಕಾರ್ಯದರ್ಶಿ ವೀಣಾ ಹರ್ಷ, ಆಶಾ ಶ್ರೀಕಾಂತ್, ಜಯಂತಿ ವಾಲಿ, ಮಧುರ ಮಹೇಶ್, ಲತಾ ಸೋಮಣ್ಣ, ಶ್ವೇತಾ ಅಶಿತ್, ಮಾಜಿ ಜಿಲ್ಲಾ ಚೇರ್ಮನ್ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಜ್ಯೋತಿ ಸುಬ್ಬೇಗೌಡ, ಆರ್ ಮನೋಹರ್, ಕಡಿದಾಳ್ ಪ್ರಕಾಶ್ ಹಾಗೂ ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.

ಕನ್ನಡ ಮಾಧ್ಯಮದಲ್ಲಿ ಓದಿದ್ದವರು ಇಂದು ಸಮಾಜದಲ್ಲಿ ಮುಂಚೂಣಿಯಲ್ಲಿದ್ದಾರೆ : ಕೆ.ಎಸ್.ಗೀತಾ

0

ಶಿವಮೊಗ್ಗ ತಾಲ್ಲೂಕಿನ ಒಂದು ಪುಟ್ಟ ಶಾಲೆ ಆಡಿನಕೊಟ್ಟಿಗೆಯಲ್ಲಿ ಸಾಮಾನ್ಯ ಶಿಕ್ಷಕಿ. ನನ್ನಂತಹವರನ್ನು ಇಂದು ಕರೆಸಿ ಸನ್ಮಾನಿಸುತ್ತಿರುವುದು ನನಗೆ ತುಂಬ ಸಂತೋಷವನ್ನುಂಟು ಮಾಡಿದೆ. ಅದಕ್ಕಾಗಿ ಎಲ್ಲರಿಗೂ ಧನ್ಯವಾದಗಳು ಎಂದು ಶಿಕ್ಷಕಿ ಕೆ.ಎಸ್.ಗೀತಾ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಲಲಿತ ಕಲಾ ಅಕಾಡೆಮಿ ವತಿಯಿಂದ ರಾಜ್ಯೋತ್ಸವದ ಪ್ರಯುಕ್ತ ವನಿತಾ ವಿದ್ಯಾಲಯದಲ್ಲಿ ನಡೆದ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.

ರಾಜ್ಯೋತ್ಸವದ ಮಹತ್ವದ ಬಗ್ಗೆ ಎಂ ಎನ್ ಸುಂದರ್ ರಾಜ್ ಅವರು ತಿಳಿಸುತ್ತಾ, ಕನ್ನಡ ಮಾಧ್ಯಮದಲ್ಲಿ ಓದಿ ನೂರಾರು ಗೌರವ ಡಾಕ್ಟರೇಟ್ ಗಳಿಸಿ, ಭಾರತರತ್ನ ಪ್ರಶಸ್ತಿಯನ್ನು ಪಡೆದ ಸಿ.ಎನ್.ಆರ್.ರಾವ್ ಬಗ್ಗೆ ನಾವೆಲ್ಲ ಅಭಿಮಾನ ಹೊಂದಬೇಕು ಎಂದು ಹೇಳಿದರು

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿ. ವಿಜಯಕುಮಾರ್ ಅವರು ಮಾತನಾಡಿ ಕನ್ನಡ ನಿತ್ಯೋತ್ಸವವಾಗಿ ಆಚರಿಸಬೇಕೆಂದು ಕರೆನೀಡಿದರು.

ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನು ಹರಿಪ್ರಸಾದ್ ನಡೆಸಿಕೊಟ್ಟರು. ವಿಜೇತ ಮಕ್ಕಳಿಗೆ ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಬಹುಮಾನ ವಿತರಿಸಿ, ಮಕ್ಕಳಲ್ಲಿ ಸ್ಫರ್ಧಾ ಮನೋಭಾವ ಬೆಳೆಯಲು ಇಂಥಾ ಕಾರ್ಯಕ್ರಮಗಳ ಅವಶ್ಯಕತೆ ಇದೆಯೆಂದು ಶ್ಲಾಘಿಸಿದರು.

ಶ್ರೀಮತಿ ತಾರಾಪ್ರಸಾದ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ತಮ್ಮ ಸಂಸ್ಥೆಯು ಒಬ್ಬ ನಿಷ್ಠಾವಂತ ಶಿಕ್ಷಕಿಯನ್ನು ಸನ್ಮಾನಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಹರಿಪ್ರಸಾದ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

ಮೊದಲು ಶಾಲಾ ಮಕ್ಕಳಿಂದ ಪ್ರಾರ್ಥನೆ ನಡೆಯಿತು.

Department of Kannada and Culture ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮ

0

Department of Kannada and Culture ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರಸ್ತುತ ಕಷ್ಟದ ಪರಿಸ್ಥಿತಿಯಲ್ಲಿರುವ 11,154 ಕಲಾವಿದರು, ಸಾಹಿತಿಗಳಿಗೆ ತಿಂಗಳಿಗೆ ರೂ. 2500 ದಂತೆ ಮಾಸಾಶನ ನೀಡಲಾಗುತ್ತಿದೆ. ಅಲ್ಲದೆ 410 ಜನ ಮೃತ ಕಲಾವಿದರ ಪತ್ನಿಯರಿಗೂ ಮಾಸಿಕ 500 ರೂ. ಮಾಸಾಶನ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದ ನವೆಂಬರ್ ತಿಂಗಳಿನವರೆಗೂ ಮಾಸಾಶನ ಪಾವತಿಸಲಾಗಿದೆ. ಮಾಸಾಶನ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ 1896 ಕಲಾವಿದರು, ಸಾಹಿತಿಗಳಿಗೂ ಕೂಡ ಮಾಸಾಶನ ಮಂಜೂರು ಮಾಡಲಾಗಿದೆ.

Department of Kannada and Culture ಜಾನಪದ ಜಾತ್ರೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿಲ್ಲ. ಈ ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು, ಸ್ಥಳೀಯ ಕಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಚಿತ್ರದುರ್ಗ, ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಮಟ್ಟದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ದಿನಾಂಕಗಳನ್ನು ಶೀಘ್ರ ನಿಗದಿಪಡಿಸಲಾಗುವುದು ಎಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಡಾ. ಅಶ್ವತ್ಥ ನಾರಾಯಣ ಹಾಗೂ ಆರ್ ಅಶೋಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಅವರ ಉತ್ತರಿಸಿದ್ದಾರೆ.