Tuesday, February 17, 2026
Tuesday, February 17, 2026
Home Blog Page 158

Rotary Club Shimoga ಜಾಗೃತಿ ಬೈಕ್ ರೈಡ್ ಗಳಿಂದ ಜನರಲ್ಲಿ‌ ಜವಾಬ್ದಾರಿ ಸಂದೇಶ ಬಿತ್ತುವ ಕೆಲಸ- ಕೆ.ಎಸ್.ವಿಶ್ವನಾಥ ನಾಯಕ

0

Rotary Club Shimoga ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಅಧ್ಯಕ್ಷ ಕೆ.ಎಸ್.ವಿಶ್ವನಾಥ ನಾಯಕ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಹಾಗೂ ರೋಟರಿ ಕ್ಲಬ್ ಮಣಿಪಾಲ್ ಟೌನ್ ಜಂಟಿಯಾಗಿ ಆಯೋಜಿಸಿದ್ದ ಇಂಟರ್ ಜೋನ್ ಫ್ರೆಂಡ್‌ಶಿಪ್ ಎಕ್ಸ್ಚೇಂಜ್ ಕಾರ್ಯಕ್ರಮದ ಅಂಗವಾಗಿ “ರೋಡ್ ಸೇಫ್ಟಿ ರೈಡ್ ಫಾರ್ ಸೇಫ್ಟಿ” ಶೀರ್ಷಿಕೆಯಡಿ ಟ್ರಾಫಿಕ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಣಿಪಾಲ್‌ನಿಂದ ಬುಲೆಟ್ ರೈಡ್ ಮಾಡಿಕೊಂಡು ರಸ್ತೆ ಸುರಕ್ಷತೆ ಜಾಗೃತಿ ಸಂದೇಶ ಮೂಡಿಸುತ್ತಿರುವ ಮಣಿಪಾಲ್ ರೋಟರಿ ಸದಸ್ಯರು ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ. ಇಂತಹ ಜಾಗೃತಿ ರೈಡ್‌ಗಳು ಕೇವಲ ಬೈಕ್ ಸವಾರಿ ಅಲ್ಲ, ಜನರಲ್ಲಿ ಜವಾಬ್ದಾರಿ ಬಿತ್ತುವ ಸಂದೇಶ ಎಂದು ತಿಳಿಸಿದರು.
ರೋಟರಿ ಮಣಿಪಾಲ್ ಟೌನ್ ಅಧ್ಯಕ್ಷ ಡಾ. ದೀಪಕ್‌ರಾಮ್ ಬೈರಿ ಮಾತನಾಡಿ, ರಸ್ತೆ ನಮ್ಮೆಲ್ಲರ ಜೀವನದ ಮಾರ್ಗ. ನಿಯಮ ಪಾಲಿಸಿದರೆ ಜೀವ ಉಳಿಯುತ್ತದೆ, ಒಂದು ತಪ್ಪು ಕ್ಷಣ ಕುಟುಂಬವನ್ನೇ ಸಂಕಷ್ಟಕ್ಕೆ ತಳ್ಳಬಲ್ಲದು. ಆದ್ದರಿಂದ ಪ್ರತಿಯೊಬ್ಬರೂ ಸುರಕ್ಷತೆಯನ್ನು ಜೀವನದ ಭಾಗವನ್ನಾಗಿ ಮಾಡಬೇಕು ಎಂದು ಹೇಳಿದರು.
ರೋಟರಿ ಅಸಿಸ್ಟೆಂಟ್ ಗವರ್ನರ್ ಕೆ.ಪಿ. ಶೆಟ್ಟಿ ಮಾತನಾಡಿ, ಟ್ರಾಫಿಕ್ ನಿಯಮ ಪಾಲನೆ ಕಾನೂನುಬದ್ಧ ಕರ್ತವ್ಯ ಮಾತ್ರವಲ್ಲ, ಅದು ಸಾಮಾಜಿಕ ಹೊಣೆಗಾರಿಕೆಯೂ ಆಗಿದೆ. ನಿಯಮ ಪಾಲನೆಯಿಂದ ಅಪಘಾತ ತಡೆಯಬಹುದು, ಸಮಾಜದಲ್ಲಿ ಸುರಕ್ಷತೆ ವೃದ್ಧಿಯಾಗಬಹುದು ಎಂದು ಅಭಿಪ್ರಾಯಪಟ್ಟರು.
Rotary Club Shimoga ರೋಟರಿ ಮಣಿಪಾಲ್ ಟೌನ್‌ನಿಂದ 13 ಸದಸ್ಯರು ಬುಲೆಟ್ ರೈಡ್ ಮೂಲಕ ಶಿವಮೊಗ್ಗ ತಲುಪಿದ್ದು, ಬುಲೆಟ್ ರೈಡ್ ಮೂಲಕವೇ ರಸ್ತೆ ಸುರಕ್ಷತೆ ಪ್ರಾಮುಖ್ಯತೆ ಸಾರಿದರು. ಇದರ ಅಂಗವಾಗಿ ನಡೆದ ಜಾಗೃತಿ ಸಭೆಯಲ್ಲಿ ರಸ್ತೆ ನಿಯಮ, ಚಾಲಕರ ಹೊಣೆಗಾರಿಕೆ ಹಾಗೂ ವಾಹನ ಸುರಕ್ಷತೆ ಕುರಿತಂತೆ ಸಾರ್ವಜನಿಕರಿಗೆ ಮನಮುಟ್ಟುವ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಟ್ರಾಫಿಕ್ ನಿಯಮ ಪಾಲನೆ, ವಾಹನ ಸುರಕ್ಷತಾ ಕ್ರಮಗಳು ಹಾಗೂ ಕಾನೂನಾತ್ಮಕ ಜವಾಬ್ದಾರಿಗಳ ಬಗ್ಗೆ ಮಾಹಿತಿ ಹಂಚಲಾಗಿದೆ. ಸಮಾಜಮುಖಿ ಕಾನೂನುಬದ್ಧ ಪ್ರೇರಣಾದಾಯಕವಾದ ಈ ಜಾಗೃತಿ ಕಾರ್ಯಕ್ರಮ “ಸೇಫ್ ಡ್ರೈವ್ ಸೇಫ್ ಲೈಫ್” ಎಂಬ ಸಂದೇಶವನ್ನು ಮೂಡಿಸಲಾಯಿತು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಮಲ್ಲೇಶ್, ಧನರಾಜ್, ನಿತಿನ್, ಶೇಷಪ್ಪ ರೈ, ರೋಟರಿ ಮಣಿಪಾಲ್ ಟೌನ್ ಕಾರ್ಯದರ್ಶಿ ಮೋಹನ್ ನಾಯಕ್, ಡಾ. ಶ್ರೀಧರ್, ಡಾ.ಕುಮಾರ್ ಭಟ್, ಉಮೇಶ್ ರಾವ್, ಹೇಮಂತ್ ಕಾಂತ್, ವಾಸುದೇವ್ ಪೈ ಮತ್ತಿತರರು ಇದ್ದರು.

Rotary Club ಅಂಗಾಂಗದಾನ & ಮಹತ್ವ ಕುರಿತ ಸಮಾಜಮುಖಿ ಕಾರ್ಯದಲ್ಲಿ ಎಲ್ಲರೂ ಭಾಗಿಯಾಗಬೇಕು- ಕೆ.ಎಸ್.ವಿಶ್ವನಾಥ ನಾಯಕ್

0

Rotary Club ರೋಟರಿ ಕ್ಲಬ್ ಮಣಿಪಾಲ ಟೌನ್ ನೇತೃತ್ವದಲ್ಲಿ ಐಎಫ್‌ಎಂಆರ್ ಉಡುಪಿ ಚಾಪ್ಟರ್ ಹಾಗೂ ರೋಟರಿ ಕ್ಲಬ್ ಶಿವಮೊಗ್ಗ ರಿವರ್‌ಸೈಡ್ ಜಂಟಿ ಆಯೋಜನೆಯೊಂದಿಗೆ ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್ ಸಹಭಾಗಿತ್ವದೊಂದಿಗೆ ಆಯೋಜಿಸಿದ್ದ ಅಂಗಾಂಗ ದಾನ ಮತ್ತು ಅದರ ಮಹತ್ವ ಕುರಿತ ಸಮಾಜಮುಖಿ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಸಮಾಜಮುಖಿ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.

ಪಿಇಎಸ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್‌ ಮ್ಯಾನೇಜ್‌ಮೆಂಟ್ ಸ್ಟಡೀಸ್ ಪ್ರಾಚಾರ್ಯ ಡಾ. ಸುದರ್ಶನ್ ಮಾತನಾಡಿ, ಅಂಗಾಂಗ ದಾನದ ಮಹತ್ವವನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅಂಗಾಂಗ ದಾನದ ಜ್ಞಾನವು ಪ್ರತಿಯೊಬ್ಬರ ಪ್ರಸ್ತುತ ಜೀವನದಲ್ಲಿ ಅನಿವಾರ್ಯ ಎಂದು ಹೇಳಿದರು.

ಕಾಲೇಜಿನ ಪ್ರಾಧ್ಯಾಪಕಿ ಡಾ. ಅನಿತಾ ಸಿ.ಬಿ. ಮಾತನಾಡಿ, ದಾನ ನೀಡುವವರು ನಿಜವಾದ ದೇವರು. ಅಂಗಾಂಗ ದಾನವು ಇನ್ನೊಬ್ಬರ ಜೀವಕ್ಕೆ ಹೊಸ ಶಕ್ತಿ ನೀಡುವ ಅತ್ಯಂತ ಮಾನವೀಯ ಕಾರ್ಯ ಎಂದು ತಿಳಿಸಿದರು.

ಮಣಿಪಾಲ ಕೆಎಂಸಿಯ ಪ್ರೋಫೆಸರ್ ಆಫ್ ಅನಾಟಮಿ ಡಾ. ಕುಮಾರ್ ಎಂ.ಆರ್.ಭಟ್ ಮಾತನಾಡಿ, ಅಂಗಾಂಗ ದಾನದ ವಿವಿಧ ಆಯಾಮಗಳನ್ನು ವಿವರಿಸಿ, ಬ್ರೈನ್ ಡೆಡ್ ವ್ಯಕ್ತಿಯ ಅಂಗಾಂಗ ದಾನ ಪ್ರಕ್ರಿಯೆಗಳು, ಕಾನೂನುಬದ್ಧ ಕ್ರಮಗಳು ಹಾಗೂ ಸರ್ಕಾರದಿಂದ ದೊರೆಯುವ ಮಾನ್ಯತೆಗಳ ಬಗ್ಗೆ ಮಾಹಿತಿ ನೀಡಿದರು. ಇಂದಿನ ಕಾಲದಲ್ಲಿ ಆನ್‌ಲೈನ್ ಮುಖಾಂತರ ದೇಹದ ದಾನವನ್ನು ನೋಂದಣಿ ಮಾಡಬಹುದು ಮತ್ತು ಪ್ರಮಾಣಪತ್ರವನ್ನು ಪಡೆಯಬಹುದು ಎಂದರು.

Rotary Club ಸಹಾಯಕ ಗವರ್ನರ್ ಕೆ.ಪಿ.ಶೆಟ್ಟಿ ಮಾತನಾಡಿ, ಸಮಾಜಮುಖಿ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮಗಳು ಇದ್ದು, ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ತಿಳಿಸಿದರು.

ರೋಟರಿ ಇಂಟರ್ ಜೋನ್ ಫ್ರೆಂಡ್‌ಶಿಪ್ ಎಕ್ಸಚೇಂಜ್ ಧ್ವಜ ಹಸ್ತಾಂತರ ನಡೆಯಿತು. ರಿವರ್ ಸೈಡ್ ಸದಸ್ಯರಾದ ವಲಯ ಸೇನಾನಿ ಎಸ್.ಪಿ.ಶಂಕರ್, ಎಂ.ಪಿ.ಆನಂದ್ ಮೂರ್ತಿ, ಬಿ.ಜಿ.ಧನರಾಜ್, ಆರ್.ದೇವೇಂದ್ರಪ್ಪ, ಎಂ.ಆರ್.ಬಸವರಾಜ್, ಜೈಪ್ರಕಾಶ್, ಎಸ್.ಆರ್.ನಾಗರಾಜ್ ನಿತಿನ್ ಯಾದವ್, ರಾಕೇಶ್, ಕಾಲೇಜಿನ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

Chamber of Commerce Shivamogga ಜಿಎಸ್ ಟಿ 2.0 ನಲ್ಲಿನ ಸುಧಾರಣೆಗಳಿಂದ ಎಲ್ಲವರ್ಗದ ಜನರಿಗೂ ಅನುಕೂಲ- ಡಿ.ಎಸ್.ಅರುಣ್

0

Chamber of Commerce Shivamogga ಕೇಂದ್ರ ಸರ್ಕಾರವು ಜಿಎಸ್‌ಟಿ 2.0ನಲ್ಲಿ ಐತಿಹಾಸಿಕ ಸುಧಾರಣೆಗಳನ್ನು ತಂದಿದ್ದು, ಎಲ್ಲ ವರ್ಗದ ಜನರಿಗೂ ಅನುಕೂಲವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ದೇಶಾದ್ಯಂತ ಜಿಎಸ್‌ಟಿ 2.0 ಸುಧಾರಣೆ ಜಾರಿ ಹಿನ್ನೆಲೆಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಎಸ್‌ಟಿ ತೆರಿಗೆ ಬದಲಾವಣೆಯಿಂದ ಎಲ್ಲ ವರ್ಗದ ಜನರು ಲಾಭ ಪಡೆದುಕೊಳ್ಳಲಿದ್ದಾರೆ. ಈ ನಿರ್ಧಾರವನ್ನು ಜಾರಿಗೆ ತಂದ ಜಿಎಸ್‌ಟಿ ಕೌನ್ಸಿಲ್, ಕೇಂದ್ರ ಸರ್ಕಾರ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ತಿಳಿಸಿದರು.

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಮಾತನಾಡಿ, ಜಿಎಸ್‌ಟಿ ಸುಧಾರಣೆಗಳು ದೇಶದ ಆರ್ಥಿಕತೆಯನ್ನು ಹೆಚ್ಚಿಸುತ್ತವೆ. ಸರಳ, ಪಾರದರ್ಶಕ ಹಾಗೂ ಜನಪರಗೊಳಿಸುವತ್ತ ದೊಡ್ಡ ಹೆಜ್ಜೆಯಾಗಿದೆ. ಶೇ. 5 ಮತ್ತು ಶೇ. 18 ಎರಡು ಸ್ಲ್ಯಾಬ್‌ಗಳು ಜಾರಿಯಾಗಲಿವೆ. ಐಷರಾಮಿ ವಸ್ತುಗಳಿಗೆ ಮಾತ್ರ ವಿಶೇಷ ಹೆಚ್ಚುವರಿ ದರಗಳು ಉಳಿಯುತ್ತವೆ ಎಂದು ಹೇಳಿದರು.

ದಿನನಿತ್ಯದ ಅಗತ್ಯ ವಸ್ತುಗಳು, ಆಹಾರ ಧಾನ್ಯಗಳು, ಔಷಧಿ ಮತ್ತು ಕೃಷಿ ಸಾಧನಗಳ ಮೇಲಿನ ತೆರಿಗೆ ಕಡಿಯವಾಗಿದೆ. ಇದರಿಂದ ಬಡವರು, ಮಧ್ಯಮ ವರ್ಗ ಮತ್ತು ರೈತರಿಗೆ ನೇರವಾದ ಲಾಭ ಸಿಗುತ್ತದೆ. ಕಟ್ಟಡ ಮತ್ತು ವಸತಿ ಕ್ಷೇತ್ರಕ್ಕೆ ಅನುಕೂಲವಾಗಲಿದೆ. ವ್ಯಾಪಾರ ಮತ್ತು ಉದ್ಯಮಗಳಿಗೆ ಅನುಕೂಲ, ಎಂಎಸ್‌ಎಂಇ ಮತ್ತು ಸಣ್ಣ ವ್ಯಾಪಾರಿಗಳಿಗೆ ಸುಲಭ ನೋಂದಣಿ ಹಾಗೂ ದೇಶದ ಜನರ ಆರ್ಥಿಕ ಬೆಳವಣಿಗೆಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದರು.

Chamber of Commerce Shivamogga ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ವಿನೋದ್ ಕುಮಾರ್ ಜೈನ್, ವಿನೋದ್ ಕುಮಾರ್.ಕೆ.ಜಿ., ಪ್ರದೀಪ್ ವಿ.ಎಲಿ, ಎಸ್.ಪಿ.ಶಂಕರ್, ಸಂಯೋಜಿತ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಾಣಿಜ್ಯೋದ್ಯಮಿಗಳು, ಮಹಿಳಾ ಉದ್ಯಮಿಗಳು, ಸೇವಾ ವಲಯ, ವೃತ್ತಿಪರರು ಹಾಗೂ ಕೈಗೊದ್ಯಮಿಗಳು ಹಾಜರಿದ್ದರು.

Klive Special Article ನವರಾತ್ರಿ ಎರಡನೇ ದಿನ “ಬ್ರಹ್ಮಚಾರಿಣಿ ದೇವಿ ಪ್ರಸೀದತು”

0

ಲೇ: ಎನ್.ಜಯಭೀಮ ಜೊಯ್ಸ್.ಶಿವಮೊಗ್ಗ.

ದಿನದ ಒಳ್ಳೆಯಮಾತು (ನವರಾತ್ರಿಯ ಎರಡನೇ ದಿನ)

ಶರನ್ನವರಾತ್ರಿ(ಎರಡನೆಯದಿನ)


“ದಧಾನಾಂ ಕರಪದ್ಮಾಭ್ಯಾಂ
ಅಕ್ಷಮಾಲಾ ಕಮಂಡಲೂ/
ದೇವಿ ಪ್ರಸೀದತು ಮಯಿ
ಬ್ರಹ್ಮಚಾರಿಣ್ಯನುತ್ತಮಾ//

Klive Special Article ನವರಾತ್ರಿ ಎರಡನೇ ದಿನ “ಬ್ರಹ್ಮಚಾರಿಣಿ ದೇವಿ ಪ್ರಸೀದತು” ಮೊದಲನೆಯ ದಿನ ದೇವಿಯ ಶೈಲಪುತ್ರಿರೂಪದಿಂದ ಪೂಜಿಸಲ್ಪಡುತ್ತಾಳೆ.ಇಂದು ನವರಾತ್ರಿಯ ಎರಡನೇ ದಿವಸ.
ಎರಡನೆಯ ದಿನ ದೇವಿಯನ್ನು ಬ್ರಹ್ಮಚಾರಿಣಿ
ರೂಪದಲ್ಲಿ ಪೂಜಿಸಲಾಗುತ್ತದೆ.
ಜಗನ್ಮಾತೆಯನ್ನು ಬ್ರಾಹ್ಮೀ ಸ್ವರೂಪದಲ್ಲಿ
ನೋಡುವಬಗೆ,ಕಮಂಡಲುಧಾರಿಣಿ,ಅಕ್ಷಮಾಲೆ.ಸಪ್ತಮಾತೃಕೆಯರಲ್ಲಿ ಬ್ರಾಹ್ಮಿಯೂ ಒಬ್ಬಳೆಂದು ಗುರುತಿಸಲ್ಪಟ್ಟಿದ್ದಾಳೆ.ಬ್ರಹ್ಮಚಾರಿಣಿ ಎಂದರೆ ಸಂತೋಷ ಮತ್ತುಶಾಂತ ಶಕ್ತಿಯನ್ನು ಹೊಂದಿರುವ ರೂಪ.ಮೋಕ್ಷವನ್ನು ಬಯಸಿಅಥವಾ ಕಾರ್ಯಗಳ
ವಿಮೋಚನೆಗೆ ಬಯಸಿ ದೇವಿಯ ಈ ಅವತಾರಕ್ಕೆ ಪೂಜೆ ಸಲ್ಲಿಸಿ ಆರಾಧಿಸಿದರೆದೇವಿ ಅನುಗ್ರಹ ಮಾಡುವಳು.
ಪ್ರಜಾಪತಿ ದಕ್ಷನಿಂದ ತನ್ನ ಪತಿ ಶಿವನು ಅವಮಾನಿತ
ಗೊಂಡಾಗ,ಸತಿಯಾಗಿ ಮರುಜನ್ಮ ಪಡೆದುಮತ್ತೆ ಶಿವನನ್ನೇ ವರಿಸಲು ಬ್ರಹ್ಮಚಾರಿಣಿಯಾಗಿ ಅವತರಿಸಿದ ರೂಪವೇ ಬ್ರಹ್ಮಚಾರಿಣಿ ದೇವಿ.
ಶಿವನನ್ನು ವಿವಾಹವಾಗಲು ದೀರ್ಘಕಾಲಬ್ರಹ್ಮಚಾರಿಣಿ
ಯು ಹಣ್ಣು-ಎಲೆ ಸೇವಿಸುತ್ತಾ ,ನಂತರ ಎಲ್ಲವನ್ನೂ ನಿಲ್ಲಿಸಿಬಹಳಕಠೋರವಾಗಿತಪಸ್ಸನ್ನುಆಚರಿಸುತ್ತಾಳೆ.ಈ ತಪಶಕ್ತಿಯಿಂದ ಶಿವನನ್ನು ಒಲಿಸಿಕೊಂಡು ವಿವಾಹವಾಗುವ ಅವತಾರವೇ ಬ್ರಹ್ಮಚಾರಿಣಿರೂಪ.
ಬಲಗೈಯಲ್ಲಿ ಜಪಮಾಲೆ,ಮತ್ತೊಂದು ಕೈಯಲ್ಲಿ ಕಮಂಡಲ ಹಿಡಿದು ನಿಂತ ಸ್ವರೂಪದಲ್ಲೇ ಬಹು ದೀರ್ಘಕಾಲತಪಸ್ಸನ್ನು ಆಚರಿಸಿ ತನ್ನನ್ನು ತಾನು ಶಿವನಿಗೆ ಅರ್ಪಿಸಿಕೊಂಡಿದ್ದರಿಂದ ಈ ದೇವಿಯನ್ನು ಅಪರ್ಣಾದೇವಿ ಎನ್ನುವ ಹೆಸರಿನಿಂದಲೂ ಕರೆಯಲಾಗಿದೆ.
Klive Special Article ನವರಾತ್ರಿ ಎರಡನೇ ದಿನ “ಬ್ರಹ್ಮಚಾರಿಣಿ ದೇವಿ ಪ್ರಸೀದತು” ಬ್ರಹ್ಮಚಾರಿಣಿಯ ರೂಪವು ಸಂತೋಷ ಮತ್ತು ಶಾಂತ
ಸ್ವಭಾವದ ರೂಪವಾಗಿದೆ.ಕಠಿಣವಾದದ್ದನ್ನು ಅಭ್ಯಾಸ ಮಾಡಲು ಮೋಕ್ಷವನ್ನು ಪಡೆಯಲು ಅಥವಾ ಕಾರ್ಯ
ಸಾಧನೆಗಾಗಿ ಈ ಅವತಾರದಲ್ಲಿರುವ ದೇವಿಯನ್ನು ಪೂಜಿಸುವುದರಿಂದ ಒಳ್ಳೆಯದಾಗುತ್ತದೆಂಬ ನಂಬಿಕೆಯಿದೆ.ದೇವಿಯನ್ನು ಆರಾಧನೆ ಮಾಡುವುದರಿಂದ ಸಂತೋಷ ಮತ್ತು ಸಮೃದ್ಧಿಯನ್ನು ಅನುಗ್ರಹಿಸುತ್ತಾಳೆ.ಬ್ರಹ್ಮಚಾರಿಣಿ ದೇವಿಯನ್ನು ಆರಾಧನೆ ಮಾಡುವುದು ತಪಸ್ಸು ಮಾಡಿದಷ್ಟೇ ಪುಣ್ಯವನ್ನು ತಂದು ಕೊಡುತ್ತದೆ.
ಬ್ರಹ್ಮಚಾರಿಣಿಯ ಈ ಅವತಾರದಲ್ಲಿ ಬಲಗೈಯಲ್ಲಿ ಜಪಮಾಲೆ ಹಾಗೂ ಎಡಗೈಯಲ್ಲಿ ಕಮಂಡಲುವನ್ನು ಹಿಡಿದಿರುವ ದುರ್ಗೆಯ ರೂಪವನ್ನು ಕಾಣಬಹುದು.
ದೇವಿಗೆ ಪ್ರಿಯವಾದ ಬಣ್ಣ ಹಸಿರು ಬಣ್ಣ.
ದೇವಿಯಎರಡನೆಯಅವತಾರವಾದಬ್ರಹ್ಮಚಾರಿಣಿದೇವಿಯನ್ನು ಭಕ್ತಿಯಿಂದ ಆರಾಧಿಸಿ,ಪೂಜಿಸಿ ದೇವಿಯ ಅನುಗ್ರಹ ಪಡೆಯೋಣ.

JCI Institute ಈಶ್ವರ್ ಬೂದಾಳ್ ಅವರಿಗೆ ಜೆಸಿಐ ನಿಂದ ಪ್ರತಿಷ್ಠಿತ ಕಮಲ ಪತ್ರ ಪ್ರಶಸ್ತಿ

0

JCI Institute ಸಮಾಜಮುಖಿ ಚಟುವಟಿಕೆಗಳಲ್ಲಿ ಜೆಸಿಐ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.
ಶಿವಮೊಗ್ಗ ನಗರದ ಶ್ರೀ ವಿಧಾತ್ರಿ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಯೋಜಿಸಿದ್ದ ಕಮಲ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಜತೆಯಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿದೆ. ಇದರಿಂದ ಇತರರಿಗೂ ಪ್ರೇರಣೆಯಾಗುತ್ತದೆ ಎಂದು ತಿಳಿಸಿದರು.
ಈಶ್ವರ್ ಬೂದಾಳ್ ಅವರ ಸೇವೆ ಸಮಾಜದಲ್ಲಿ ಬಹಳಷ್ಟು ಇದ್ದು, ಉದ್ಯಮದಲ್ಲಿ ಬಹಳ ವಿಶೇಷವಾದ ಸಾಧನೆ ಮಾಡಿ ಅಪಾರ ಜನ ಮೆಚ್ಚುಗೆ ಪಾತ್ರರಾಗಿದ್ದಾರೆ. ಅವರ ಸೇವೆಯೂ ಸಹ ತುಂಬಾ ಗಣನೀಯವಾಗಿದೆ ಎಂದು ತಿಳಿಸಿದರು.
JCI Institute ಜೆಸಿಐ ವಲಯ ಉಪಾಧ್ಯಕ್ಷ ಶೇಷಗಿರಿ ಮಾತನಾಡಿ, ವೃತ್ತಿಯ ಜೊತೆಗೆ ನಮ್ಮ ಪ್ರವೃತ್ತಿಯು ಬಹಳ ಮುಖ್ಯ. ಸಮಾಜದಲ್ಲಿ ನಮ್ಮ ವೃತ್ತಿಯಲ್ಲಿ ಸಾರ್ಥಕ ಸೇವೆ ಜೊತೆಗೆ ಮನುಕುಲದ ಸೇವೆಯು ಅಷ್ಟೇ ಪ್ರಮುಖ ಎಂದರು. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಮಾತನಾಡಿ, ಪ್ರತಿ ವರ್ಷ ಜೆಸಿಐ ಸಂಸ್ಥೆ ಈ ರೀತಿ ಯಶಸ್ವಿ ಉದ್ಯಮಿಗಳು ಹಾಗೂ ಸಮಾಜ ಸೇವಕರನ್ನು ಗುರುತಿಸಿ ನೀಡುತ್ತಿರುವ ಪ್ರತಿಷ್ಠಿತ ಇಂತಹ ಪ್ರಶಸ್ತಿಗೆ ಈಶ್ವರ್ ಬೂದಾಳ್ ಅವರು ಆಯ್ಕೆಯಾಗಿರುವುದು ತುಂಬಾ ಹೆಮ್ಮೆ ಎಂದು ತಿಳಿಸಿದರು.
ವೃತ್ತಿಯಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಸಮಾಜಮುಖಿಯಾಗಿ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸುತ್ತಿರುವ ವಾಸವಿ ಯುವಜನ ಸಂಘದ ಅಧ್ಯಕ್ಷ, ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ಉಪಾಧ್ಯಕ್ಷ, ಉದ್ಯಮಿ ಈಶ್ವರ್ ಬೂದಾಳ್ ಅವರಿಗೆ ಜೆಸಿಐ ಸಂಸ್ಥೆಯ ಪ್ರತಿಷ್ಠಿತ ಕಮಲ ಪತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೆಸಿಐ ಪ್ರಮುಖರಾದ ಮಹದೇವಸ್ವಾಮಿ, ಸಂತೋಷ್, ವಿಜಯಕುಮಾರ್, ಇನ್ನರ್ ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯ ಕುಮಾರ್, ವೀಣಾ ಕಿಶೋರ್, ಹರೀಶ್, ಕರುಣಾಕರ್, ಶಿಲ್ಪಾ, ಸುಪ್ರಿಯಾ, ಉಮಾ, ಸಂಧ್ಯಾ ವಿಜಯಕುಮಾರ್ ಉಪಸ್ಥಿತರಿದ್ದರು.

Stanford University ಶಿವಮೊಗ್ಗದ ಡಾ.ವರುಣ್ ಕುಮಾರ್ ಗೆ ವಿಶ್ವದ ಶೇ, 2 ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ಸ್ಥಾನ

0

Stanford University ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯ ಪ್ರಕಟಿಸಿದ 2025ನೇ ಸಾಲಿನ ವಿಶ್ವದ ಶೇ.2 ರಷ್ಟು ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಶಿವಮೊಗ್ಗ ನಗರದ ಡಾ.ವರುಣ್ ಕುಮಾರ್ ಆರ್ ಎಸ್ ಸತತ ಮೂರನೇ (2023, 2024, 2025) ಬಾರಿಗೆ ಸ್ಥಾನ ಪಡೆದಿದ್ದಾರೆ.

ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯವು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಸಂಶೋಧನೆ, ವರದಿ, ಉಲ್ಲೇಖಗಳು ಹಾಗೂ ಲೇಖನಗಳನ್ನೊಳಗೊಂಡ ಎಚ್-ಇಂಡೆಕ್ಸ್, ಐ-ಟೆನ್ ಇಂಡೆಕ್ಸ್ ಸೇರಿದಂತೆ ನಾನಾ ಮಾನದಂಡಗಳನ್ನು ಪರಿಗಣಿಸಿ ಜಾಗತಿಕವಾಗಿ ಸಿದ್ದಪಡಿಸಿರುವ ಅಗ್ರ ವಿಜ್ಞಾನಿಗಳ ಪಟ್ಟಿಯಲ್ಲಿ ಈ ವರ್ಷವೂ ಡಾ. ವರುಣ್ ಕುಮಾರ್ ಆರ್ ಎಸ್ ಅವರು ಸ್ಥಾನ ಪಡೆದಿದ್ದು, ಪ್ರಸ್ತುತ 2025 ನೇ ಸಾಲಿನ ಪಟ್ಟಿಯಲ್ಲಿ ಇವರುಗಳು ಕ್ರಮವಾಗಿ 11379, 44028, 545118, 121882, 12467 ಶ್ರೇಯಾಂಕಗಳನ್ನು ಪಡೆದಿದ್ದಾರೆ.

ಮಲೇಶಿಯಾದ ಸನ್-ವೇ ವಿಶ್ವವಿದ್ಯಾಲಯದ ಗಣಿತ ಶಾಸ್ತ್ರದ ಪ್ರಾಧ್ಯಾಪಕರಾಗಿರುವ ಡಾ. ವರುಣ್ ಕುಮಾರ್. ಆರ್. ಎಸ್. ಅವರು ಪತ್ರಕರ್ತ ಎನ್.ರವಿಕುಮಾರ್ ( ಟೆಲೆಕ್ಸ್) ಶ್ರೀಮತಿ ಶಶಿಕಲಾ ಅವರ ಪುತ್ರರಾಗಿದ್ದಾರೆ.

Stanford University ಡಾ. ಆರ್ ಎಸ್ ವರುಣ್ ಕುಮಾರ್ ಅವರೊಂದಿಗೆ ಗಣಿತ ಶಾಸ್ತçದ ಸಂಶೋಧಕ ಮಾರ್ಗದರ್ಶಕರಾದ ದಾವಣಗೆರೆ ವಿಶ್ವವಿದ್ಯಾನಿಲಯದ ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಬಿ ಸಿ ಪ್ರಸನ್ನಕುಮಾರ ಅವರೂ ಕೂಡ ಐದನೆ ಬಾರಿಗೆ ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನಪಡೆದಿದ್ದು ಪ್ರೊ. ಬಿ. ಸಿ. ಪ್ರಸನ್ನಕುಮಾರ್ ಅವರ ಮಾರ್ಗದರ್ಶನದಲ್ಲಿ ಗಣಿತ ಶಾಸ್ತ್ರದಲ್ಲಿ ಸಂಶೋಧನೆಯನ್ನು ಮಗಿಸಿರುವ ಡಾ. ಪುನೀತ್ ಗೌಡ (೨೦೨೨-೨೫) ಡಾ. ನವೀನ್ ಕುಮಾರ್ ಆರ್ (೨೦೨೨-೨೫) ಇವರುಗಳು ಸತತವಾಗಿ ಹಾಗೂ ಡಾ. ಮಧುಕೇಶ್ ಜೆ. ಕೆ (೨೦೨೩-೨೫) ಅವರುಗಳೂ ಕೂಡ ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ನಾಲ್ಕೂ ಸಹಾಯಕ ಪ್ರಾಧ್ಯಾಪಕರೂ ಸಹ ತಮ್ಮ ಮಾರ್ಗದರ್ಶಕರೊಡನೆಯೇ ವಿಜ್ಞಾನಿಗಳ ಪಟ್ಟಿಗೆ ಸೇರಿರುವುದು ಸ್ಪೂರ್ತಿದಾಯಕವಾಗಿದೆ.

Shiomga Dasara ಶಿವಮೊಗ್ಗ ದಸರಾ ಮಹೋತ್ಸವಕ್ಕೆ ನಿವೃತ್ತಲೆ||. ಬಗ್ಗವಳ್ಳಿ ಸೋಮಶೇಖರ ರಾಜು ಅವರಿಂದ ವಿಧ್ಯುಕ್ತ ಚಾಲನೆ

0

Shiomga Dasara ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಸಾಹಸವನ್ನು ಪ್ರತಿಬಿಂಬಿಸುವ ನಾಡ ಹಬ್ಬ ದಸರಾ ನವರಾತ್ರಿ ಉತ್ಸವಕ್ಕೆ ನಗರದ ಕೋಟೆ ಶ್ರೀ ಚಂಡಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ಅವರು ವಿದ್ಯುಕ್ತ ಚಾಲನೆ ನೀಡಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ ಕೋಟೆ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದವರೆಗೂ ನಾಡ ದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹವನ್ನು ಬೆಳ್ಳಿಯ ಅಂಬಾರಿಯಲ್ಲಿ ಮೆರವಣಿಗೆ ನಡೆಸಲಾಯಿತು.

ಮೆರವಣಿಗೆ ಉದ್ದಕ್ಕೂ ವಿವಿಧ ಕಲಾ ತಂಡಗಳ ಪ್ರದರ್ಶನ ನಡೆಯಿತು. ವೇದಿಕೆ ಮೇಲೆ ಅಂಬಾರಿ ಹಾಗೂ ದೇವಿಯ ವಿಗ್ರಹವನ್ನು ಇಟ್ಟು ಮಹಾಮಂಗಳಾರತಿ ಎತ್ತುವ ಮೂಲಕ ದೇವಿಯ ಪ್ರತಿಷ್ಟಾಪನೆ ಮಾಡಲಾಯಿತು.

Shiomga Dasara ರಾಜ್ಯದ ಎರಡನೇ ಅತೀ ದೊಡ್ಡ ದಸರಾ ಮಹೋತ್ಸವ ಎಂದೇ ಖ್ಯಾತರಾದ ಶಿವಮೊಗ್ಗ ದಸರಾ ಮಹೋತ್ಸವದ ಪ್ರಯುಕ್ತ ಒಂಭತ್ತು ದಿನಗಳ ಕಾಲ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ದಸರಾದ ಕೊನೆಯ ದಿನ ಮೈಸೂರು ದಸರಾದಂತೆ ಇಲ್ಲೂ ಕೂಡಾ ಮೂಲಕ ಅಂಬಾರಿಯನ್ನು ಮೆರವಣಿಗೆ ಮಾಡಿ ನಂತರ ನಗರ ಫ್ರೀಡಂ ಪಾರ್ಕ್ ನಲ್ಲಿ ಅಂಬು ಕಡಿಯುವ ಮೂಲಕ ದಸರಾ ಕೊನೆಗೊಳ್ಳಲಿದೆ.

State Government Employees’ Friendly Cooperative Society ಸಹಕಾರ ಸಂಘಗಳು ಜಾತಿ,ಪಕ್ಷ,ಲಿಂಗಭೇದ ಬಿಟ್ಟು ಕಾರ್ಯ ನಿರ್ವಹಿಸಬೇಕು- ಆರ್.ಎಂ.ಮಂಜುನಾಥಗೌಡ

0

State Government Employees’ Friendly Cooperative Society ಸರ್ಕಾರದ ಯಾವುದೇ ನೆರವಿಲ್ಲದೆ, ಸರ್ಕಾರಗಳು ಮಾಡದಿರುವ ಸಮಾಜಮುಖಿ ಕಾರ್ಯವನ್ನು ಸಹಕಾರ ಸಂಘಗಳು ಮಾಡುತ್ತಿರುವುದು ಮಾದರಿ ಕಾರ್ಯಗಳಲ್ಲೊಂದಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ|| ಆರ್.ಎಂ.ಮಂಜುನಾಥಗೌಡ ಅವರು ಹೇಳಿದರು. ಅವರು ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ರಾಜ್ಯ ಸರ್ಕಾರಿ ನೌಕರರ ಸೌಹಾರ್ಧ ಸಹಕಾರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ದ್ವಾರಕಾ ಕನ್ವೆನ್ಶನ್‌ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಸರ್ವಸದಸ್ಯರ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಯಾವುದೇ ಸಹಕಾರ ಸಂಘಗಳು ಜಾತಿ, ಪಕ್ಷ ಮತ್ತು ಲಿಂಗಭೇದ ಮರೆತು ಕಾರ್ಯನಿರ್ವಹಿಸುವಂತಾಗಬೇಕು. ಯಾವುದೇ ಸಹಕಾರಿ ಸಂಸ್ಥೆ ನಾಯಕನ ವ್ಯಕ್ತಿತ್ವದ ಮೇಲೆ ಅವಲಂಬಿತವಾಗಿರುತ್ತವೆ ಎಂದವರು ನುಡಿದರು.ನಗರದ ಬೆಳವಣಿಗೆಯಲ್ಲಿ ಇಂತಹ ಸಹಕಾರ ಸಂಸ್ಥೆಗಳ ಪಾತ್ರ ಮಹತ್ವದ್ದಾಗಿದೆ ಎಂದ ಅವರು, ಸಂಘಗಳಲ್ಲಿ ಎಲ್ಲರಿಗೂ ಸರಳವಾಗಿ, ಸುಲಭವಾಗಿ ಸಾಲಸೌಲಭ್ಯಗಳು ದೊರೆಯುವಂತಾಗಬೇಕು. ಆಗ ನಿಜವಾದ ಸಹಕಾರದ ಪದಕ್ಕೆ ಅರ್ಥ ಬರಲಿದೆ. ಇದರಿಂದಾಗಿ ಅರ್ಹರಿಗೆ ಸಾಲಸೌಲಭ್ಯ ದೊರೆಯುವುದು ಮಾತ್ರವಲ್ಲ, ಪರೋಕ್ಷವಾಗಿ ಉದ್ಯೋಗಸೃಷ್ಠಿಯಾಗಲಿದೆ. ಸಾಲ ಪಡೆದವರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಇನ್ನೊಬ್ಬರ ಅವಶ್ಯಕತೆಗಳಿಗೆ ಸಹಕರಿಸಬೇಕು. ಸರ್ಕಾರದ ಹಸ್ತಕ್ಷೇಪವಿಲ್ಲದಿದ್ದಲ್ಲಿ ಸಹಕಾರಿ ಸಂಘಗಳು ಇನ್ನಷ್ಟು ರಚನಾತ್ಮಕವಾಗಿ ಕಾರ್ಯನಿರ್ವಹಿಸಲಿವೆ ಎಂದವರು ನುಡಿದರು.

ಸೌಹಾರ್ದ ಸಹಕಾರ ಸಂಘದಲ್ಲಿ 3600 ಮತ್ತು ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ 4800ಕ್ಕೂ ಹೆಚ್ಚಿನ ಜನ ಸದಸ್ಯತ್ವ ಪಡೆದಿರುವುದು ಹಾಗೂ ಈವರಗೆ ಗೃಹನಿರ್ಮಾಣ ಸಹಕಾರ ಸಂಘದ ವತಿಯಿಂದ ಸುಮಾರು 175 ಎಕರೆ ಪ್ರದೇಶದಲ್ಲಿ ಬಡಾವಣೆ ನಿರ್ಮಿಸಿ, ನಿವೇಶನ ವಿತರಿಸಿರುವುದು ಅತ್ಯಂತ ಪ್ರಶಂಸನಾರ್ಹ ಸಂಗತಿಯಾಗಿದೆ. ಇದರಿಂದಾಗಿ ಪ್ರತಿ ವ್ಯಕ್ತಿಯೂ ಚಿಕ್ಕದಾದರೂ ತನ್ನ ಕನಸಿನ ಮನೆಯನ್ನು ನಿರ್ಮಿಸಿಕೊಂಡು ನೆಮ್ಮದಿಯ ಜೀವನ ನಡೆಸಬಹುದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಸಹಕಾರಿ ಕ್ಷೇತ್ರದಲ್ಲಿ ನೌಕರರ ಸಂಘದ ವತಿಯಿಂದ ಸ್ಥಾಪಿಸಲಾಗಿರುವ ಎರಡೂ ಸಂಘಗಳು “ಎ” ಶ್ರೇಣಿಯಲ್ಲಿ ಗುರುತಿಸಿಕೊಳ್ಳುವ ಸ್ಥಾನಮಾನ ಹೊಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

11ವರ್ಷಗಳ ಅವಧಿಯಲ್ಲಿ ಸಂಘಟನೆಗೆ ಸಣ್ಣ ಕಪ್ಪುಚುಕ್ಕೆಯೂ ಬಾರದಂತೆ ನಡೆಸಿಕೊಂಡು ಬರಲಾಗಿದೆ. ಪ್ರಸಕ್ತ ಅವಧಿಯಲ್ಲಿ ಸಂಘವು ಸುಮಾರು 1.50ಕೋಟಿ ಲಾಭ ಗಳಿಸಿರುವುದು ಸಂತಸದ ವಿಷಯವಾಗಿದೆ. ಇಂತಹ ಸಂಘಟನೆಯನ್ನು ಆರಂಭದ ಹಂತದಲ್ಲಿ ರಾಜ್ಯದ ನೆರೆಯ ಜಿಲ್ಲೆಗಳಿಗೆ ನಂತರ ರಾಜ್ಯದ ಉದ್ದಗಲಕ್ಕೆ ವಿಸ್ತರಿಸುವ ಉದ್ಧೇಶ ಹೊಂದಲಾಗಿದೆ ಎಂದರು.

ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಈವರೆಗೆ ಸುಮಾರು 2500ಕ್ಕೂ ಹೆಚ್ಚಿನ ನೌಕರರಿಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ನಿವೇಶನಗಳನ್ನು ವಿತರಿಸಲಾಗಿದೆ. ಅಲ್ಲದೇ ಈಗಾಗಲೇ 110ಎಕರೆ ಭೂಪ್ರದೇಶದಲ್ಲಿ ಗುಣಮಟ್ಟದ ಕಾಮಗಾರಿಗಳೊಂದಿಗೆ ಕಾನೂನುಬದ್ದವಾಗಿ ಸೃಜಿಸಲಾಗಿರುವ 1500ನಿವೇಶನಗಳನ್ನು ಶೀಘ್ರದಲ್ಲಿ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದ ಅವರು, ಸಂಘಟನೆಯು ನೌಕರರ ನೆಮ್ಮದಿಯ ಬದುಕಿಗೆ ಆಸರೆಯಾಗಿದೆ ಎಂದರು.

State Government Employees’ Friendly Cooperative Society
ಮಹಾಸಭೆಯಲ್ಲಿ ನೌಕರರ ಪ್ರತಿಭಾವಂತ ಮಕ್ಕಳಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ನಂತರ ಶೇರುದಾರರ ಉಪಸ್ಥಿತಿಯಲ್ಲಿ ಸಂಘದ ಮಹಾಸಭೆಯಲ್ಲಿ ಅನೇಕ ವಿಷಯಗಳ ಕುರಿತು ಚರ್ಚಿಸಿ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಡಿ.ಸಿ.ಸಿ.ಬ್ಯಾಂಕ್‌ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಸೂಡಾ ಅಧ್ಯಕ್ಷ ಸುಂದರೇಶ್‌, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಸಹಕಾರ ಸಂಘಗಳ ಉಪನಿಬಂಧಕ ನಾಗಭೂಷಣ ಚಂದ್ರಶೇಖರ ಕಲ್ಮನೆ, ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್‌, ಆರ್.ಪಾಪಣ್ಣ, ಎನ್.ಎಂ.ರಂಗನಾಥ್‌, ನರಸಿಂಹಮೂರ್ತಿ, ದಿನೇಶ್‌, ಪ್ರಸನ್ನ, ಸುರೇಶ್‌, ಕೃಷ್ಣಮೂರ್ತಿ, ಸಿದ್ಧಬಸಪ್ಪ ಸೇರಿದಂತೆ ಅವಳಿ ಸಂಘಗಳ ಪದಾಧಿಕಾರಿಗಳು, ನಿರ್ದೇಶಕರು, ಶೇರುದಾರರು ಉಪಸ್ಥಿತರಿದ್ದರು.

India Scouts and Guides ಸ್ಕೌಟ್ಸ್ & ಗೈಡ್ಸ್ ತರಬೇತಿ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ,ಕೌಶಲ್ಯಗಳನ್ನ ವೃದ್ಧಿಸುತ್ತವೆ- ವಿ.ಅಭಿಷೇಕ್

0

India Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಬಿರಗಳು ಮಕ್ಕಳಲ್ಲಿ ಕ್ರಿಯಾಶೀಲ ಮನೋಭಾವ ಬೆಳೆಸುತ್ತವೆ ಎಂದು ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್ ಹೇಳಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ರೋವರ‍್ಸ್ ರೆಂಜರ‍್ಸ್ ಗಳಿಗೆ ಆಯೋಜಿಸಿದ್ದ ಮೂರು ದಿನಗಳ ನಿಪುಣ್ ಪದವಿ ಪರೀಕ್ಷಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ನಡೆಯುವ ವಿವಿಧ ರೀತಿಯ ತರಬೇತಿ ಶಿಬಿರಗಳು ಮಕ್ಕಳಲ್ಲಿ ಸೃಜನಶೀಲತೆ ಮತ್ತು ಕೌಶಲ್ಯಗಳನ್ನು ವೃದ್ಧಿಸುತ್ತವೆ ಎಂದು ತಿಳಿಸಿದರು.

ಮಕ್ಕಳಿಗೆ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬಹಳ ಮುಖ್ಯ. ಇದರಿಂದ ದೈಹಿಕ ಹಾಗೂ ಮಾನಸಿಕ ಶಕ್ತಿ ವೃದ್ಧಿಯಾಗುತ್ತದೆ. ಹೊಸ ಹೊಸ ವಿಷಯಗಳು ಅನಾವರಣಗೊಳ್ಳುತ್ತವೆ. ಪ್ರಪಂಚಾದ್ಯಂತ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ 200ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ತನ್ನದೇ ಆದ ಸೇವೆಗಳ ಮುಖಾಂತರ ಪ್ರಚಲಿತವಾಗಿದೆ. ಸ್ಕೌಟ್ಸ್ ಅಂಡ್ ಗೈಡ್ಸ್ ಒಂದು ಶಿಸ್ತುಬದ್ಧ ಹಾಗೂ ವ್ಯವಸ್ಥಿತವಾದ ಸೇವಾ ಸಂಸ್ಥೆಯಾಗಿದೆ. ಇದರಲ್ಲಿ ತರಬೇತಿ ಹಾಗೂ ಪರಿಣಿತಿ ಹೊಂದಿದವರು ಆತ್ಮವಿಶ್ವಾಸದಿಂದ ಎಲ್ಲ ಕ್ಷೇತ್ರಗಳಲ್ಲೂ ವಿಶೇಷವಾದ ಸಾಧನೆ ಮಾಡಲು ಅವಕಾಶವಾಗುತ್ತದೆ ಎಂದು ತಿಳಿಸಿದರು.

ಶಿಬಿರದ ನಾಯಕ ಎ.ವಿ.ರಾಜೇಶ್ ನಿಪುಣ್ ಪರೀಕ್ಷೆಯ ಬಗ್ಗೆ ಸಮಗ್ರ ಮಾಹಿತಿ ಹಾಗೂ ಅದರಲ್ಲಿ ಕಲಿಯಬಹುದಾದ ವಿಶೇಷ ವಿಷಯಗಳು ಬಗ್ಗೆ ಮಾಹಿತಿ ನೀಡಿದರು.

ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಮನೆ ಮನೆಗಳಿಗೂ ಸ್ಕೌಟ್ಸ್ ಮತ್ತು ಗೈಡ್ಸ್ ತಲುಪಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಸಹ ಈ ಚಳುವಳಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

India Scouts and Guides ಶಿಬಿರದ ಅಧ್ಯಕ್ಷತೆಯನ್ನು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಶಕುಂತಲಾ ಚಂದ್ರಶೇಖರ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಮಕ್ಕಳು, ಶಿಕ್ಷಕರಿಗೆ ವಿಶೇಷ ತರಬೇತಿ ಶಿಬಿರವನ್ನು ತಾಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ. ಇಂತಹ ಪರೀಕ್ಷೆಗಳಲ್ಲಿ ಪಾಸಾದ ವಿದ್ಯಾರ್ಥಿಗಳು ಮುಂದೆ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ ಎಂದರು.

ರೋವರ್ ವಿಭಾಗದ ಜಿಲ್ಲಾ ಆಯುಕ್ತ ರವಿ ಕೆ, ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ ಕೆ ವಿ, ಗೈಡ್ ಆಯುಕ್ತ ಲಕ್ಷ್ಮೀ ರವಿ, ಕೃಷ್ಣಸ್ವಾಮಿ, ಪರಮೇಶ್ವರಯ್ಯ, ಸದಾಶಿವ, ವಿನಯ ಭೂಷಣ್, ವೆಂಕಟೇಶ್, ರುದ್ರಪ್ಪ ಚೀಲೂರ್ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ತಾಲೂಕುಗಳಿಂದ 200ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

Sri Chowdeshwari Devi ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇವಿಗೆ ವಿಶೇಷ ಪೂಜೆ ಅರ್ಪಣೆ

0

Sri Chowdeshwari Devi ಚಾಲುಕ್ಯ ನಗರದಲ್ಲಿರುವ ಚೌಡೇಶ್ವರಿ ಅಮ್ಮನವರಿಗೆ ಸೆ.22ರಂದು ಶ್ರೀಮತಿ ಸುಧಾಮಣಿ ಶ್ರೀ ಷಣ್ಮುಖ ಕುಟುಂಬದವರಿಂದ ಅರಿಸಿನ ಕುಂಕುಮ ಅಲಂಕಾರ, ಶ್ರೀಮತಿ ರಾಜಶ್ರೀ ಶ್ರೀ ಪುರುಷೋತ್ತಮ ಕುಟುಂಬದವರಿಂದ ದುರ್ಗಾಹೋಮವನ್ನು ನೆರವೇರಿಸಲಾಯಿತು.

Sri Chowdeshwari Devi ಸೆ. 23ರಂದು ಶ್ರೀಮತಿ ಶೈಲಜಾ ಶ್ರೀ ಸ್ಯಾಮ್ಸನ್ ಕುಟುಂಬದವರಿಂದ ಮಹಾಲಕ್ಷ್ಮಿ ಅಲಂಕಾರ, ಶ್ರೀಮತಿ ಶೋಭಿತ ಶ್ರೀ ದೇವಿ ಪ್ರಸಾದ್ ಕುಟುಂಬದವರಿಂದ ಮಹಾಲಕ್ಷ್ಮಿ ಅಲಂಕಾರ 12.30ಕ್ಕೆ ಮಹಾಮಂಗರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
ಅದೇ ದಿನ ಸಂಜೆ 6.30ರಿಂದ ಯೋಗೀಶ ತಂಡದವರಿಂದ ವೀರಗಾಸೆ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗ ಬೇಕಾಗಿ ವಿನಂತಿ.
ಹೆಚ್ಚಿನ ಮಾಹಿತಿಗಾಗಿ ಚೇತನ್ ಭಟ್ 9980247081 ಸಂಪರ್ಕಿಸಬಹುದು.