Friday, February 6, 2026
Friday, February 6, 2026
Home Blog Page 16

Pradhan Mantri Shramayogi Man-Dhan Yojana ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ

0

Pradhan Mantri Shramayogi Man-Dhan Yojana ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ National Pension Scheme for the Traders and self Employed Persons -NPS-Traders ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೋಂದಾಯಿಸಲು 15 ಜನವರಿ ರಿಂದ 15 ಮಾರ್ಚ್ 2026 ರವರೆಗೆ “ವಿಶೇಷ ನೋಂದಣಿ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ.
18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದ್ದು, ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ ರೂ. 55/- ರಿಂದ ರೂ. 200/- ರವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ ರೂ.3000/- ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
Pradhan Mantri Shramayogi Man-Dhan Yojana ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್.ಹೆಚ್.ಜಿ. ಸದಸ್ಯರು, ಕೃಷಿ ಕಾರ್ಮಿಕರು. ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು ಹಾಗೂ ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿಗಳು ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಛೇರಿ, ಶಿವಮೊಗ್ಗ ಹಾಗೂ ತಾಲೂಕು ಕಾರ್ಮಿಕ ನಿರೀಕ್ಷಕರುಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Klive Special Article ಶ್ರೀಮದ್ಭಗವದ್ಗೀತೆ ಮತ್ತುಅಪರಾಧ ಶಾಸ್ತ್ರ

0


ಭಾಗ: 3
ಲೇ: ಡಾ.ರಾಮಕೃಷ್ಣ ಮುದ್ದೇಪಾಲ.

Klive Special Article ಅಪರಾಧ ನಿಯಂತ್ರಣದ ದೃಷ್ಟಿಯಿಂದ ಹಲವು ಆಯಾಮಗಳಲ್ಲಿ ಭಗವದ್ಗೀತೆಯನ್ನು ಪ್ರಯೋಗಿಸಬಹುದು.
೧. ನೈತಿಕ ಮೌಲ್ಯಗಳಿಂದ ವ್ಯಕ್ತಿತ್ವ ಪರಿವರ್ತನೆ:
ಅಭಯಂ ಸತ್ವಸಂಶುದ್ಧಿರ್ಜ್ಞಾನಯೋಗವ್ಯವಸ್ಥಿತಿಃ
ದಾನಂ ದಮಶ್ಚ ಯಜ್ಞಶ್ಚ ಸ್ವಾಧ್ಯಾಯಸ್ತಪ ಆರ್ಜವಮ್‌
ಅಹಿಂಸಾ ಸತ್ಯಮಕ್ರೋಧಸ್ತ್ಯಾಗಃ ಶಾಂತಿರಪೈಶುನಮ್‌
ದಯಾ ಭೂತೇಷ್ವಲೋಲುಪ್ತ್ವಂ ಮಾರ್ದವಂ ಹ್ರೀರಚಾಪಲಮ್‌
ತೇಜಃ ಕ್ಷಮಾ ಧೃತಿಃ ಶೌಚಮದ್ರೋಹೋ ನಾತಿಮಾನಿತಾ
ಭವಂತಿ ಸಂಪದಂ ದೈವೀಮಭಿಜಾತಸ್ಯ ಭಾರತII 16.1,2,3II
ದೈವೀಸಂಪತ್ತುಗಳೆಂದು ಕರೆಯಲ್ಪಡುವ ೨೬ ಗುಣಗಳು ನೈತಿಕ ಮೌಲ್ಯಗಳಾಗಿದ್ದು ಅವುಗಳಲ್ಲಿ ಕೆಲವನ್ನು ಅಳವಡಿಸಿಕೊಂಡರೂ ಅವು ವ್ಯಕ್ತಿತ್ವ ಪರಿವರ್ತನೆ ಮಾಡಬಲ್ಲವು ಅಥವಾ ಆದರ್ಶ ವ್ಯಕ್ತಿತ್ವವನ್ನು ರೂಪಿಸಿ ಅಪರಾಧೀ ಮಾನಸಿಕತೆಯನ್ನು ತೊಡೆಯಬಲ್ಲವು. ಇವುಗಳಿಗೆ ವಿರುದ್ಧವಾಗಿರುವ ಆಸುರೀ ಸಂಪತ್ತುಗಳು ಅಪರಾಧಕ್ಕೆ ಪೂರಕ ಅಂಶಗಳಾಗಿವೆ.
ದಂಭೋ ದರ್ಪೋತಿಮಾನಶ್ಚ ಕ್ರೋಧಃ ಪಾರುಷ್ಯಮೇವಚ‌I
ಅಜ್ಞಾನಂ ಚಾಭಿಜಾತಸ್ಯ ಪಾರ್ಥಸಂಪದಮಾಸುರೀಮ್II16.4II

  1. ಅಪರಾಧ ಮೂಲದ ವಿಶ್ಲೇ಼ಷಣೆ: ೧೪ನೇ ಅಧ್ಯಾಯದಲ್ಲಿ ತ್ರಿಗುಣಗಳನ್ನು ವಿಶ್ಲೇಷಿಸಲಾಗಿದೆ. ಸತ್ವಗುಣ ನೈತಿಕ ಬದುಕಿಗೆ ಪೂರಕವಾದರೆ ರಜೋಗುಣ ಕಾಮ, ಕ್ರೋಧದಿಂದ ಮತ್ತು ತಮೋಗುಣ ಅಜ್ಞಾನದಿಂದ ಅಪರಾಧವನ್ನು ಪ್ರೇರೇಪಿಸುತ್ತವೆ.
    ೩. ನಿಷ್ಕಾಮ ಕರ್ಮಯೋಗ, ಕರ್ತವ್ಯ ಪ್ರಜ್ಞೆ : ಗೀತೆಯ ಪ್ರಸಿದ್ಧ ವಾಕ್ಯವಾದ ” ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಷು ಕದಾಚನ” (೨.೪೭) ವ್ಯಕ್ತಿಗೆ ಕರ್ತವ್ಯಪ್ರಜ್ಞೆಯನ್ನು ಮೂಡಿಸಿ ಅಪರಾಧ ಪ್ರಜ್ಞೆಯನ್ನು ಹಿಮ್ಮೆಟ್ಟಿಸುತ್ತದೆ. ಪ್ರತಿಯೊಂದು ಕೃತ್ಯಕ್ಕೂ ಫಲವಿದೆ ಎಂಬ ಭಾವನೆ ವ್ಯಕ್ತಿಯನ್ನು ಅಪರಾಧ ಮಾಡಲು ಹಿಂಜರಿಯುವಂತೆ ಮಾಡುತ್ತದೆ.
    ೪. ಧರ್ಮಾಧರ್ಮ ವಿವೇಚನೆ: ನೈತಿಕ ಮೌಲ್ಯಗಳ ಸಾರವೆಂದು ಗುರುತಿಸಲ್ಪಡುವ “ಧರ್ಮ” ವನ್ನು ಭಗವದ್ಗೀತೆ ಬೋಧಿಸುತ್ತದೆ.
    ಶ್ರೇಯಾನ್‌ ಸ್ವಧರ್ಮೋ ವಿಗುಣಃ ಪರಧರ್ಮಾತ್‌ ಸ್ವನುಷ್ಠಿತಾತ್‌I
    ಸ್ವಧರ್ಮೇ ನಿಧನಂ ಶ್ರೇಯಃ ಪರಧರ್ಮೋ ಭಯಾವಹಃII3.35II
    ಸ್ವಧರ್ಮವು ವಿಗುಣವಾಗಿದ್ದರೂ ಚೆನ್ನಾಗಿ ಅನುಷ್ಠಾನ ಮಾಡಿದ ಪರಧರ್ಮಕ್ಕಿಂತ ಒಳ್ಳೆಯದು. ಸ್ವಧರ್ಮದಲ್ಲಿ ಮರಣವು ಶ್ರೇಯಸ್ಕರವಾದದ್ದು; ಪರಧರ್ಮವು ಭಯಂಕರವಾದದ್ದು.
    ಸ್ವಧರ್ಮಾನುಷ್ಠಾನವು ವ್ಯಕ್ತಿಯು ಅಪರಾಧದಂತಹ ಅಧಃಪಾತಕ್ಕೆ ಈಡಾಗುವುದನ್ನು ತಡೆಗಟ್ಟುತ್ತದೆ.
    ೫.ಭಕ್ತಿಮಾರ್ಗ: ಭಕ್ತಿಮಾರ್ಗವನ್ನು ಆಶ್ರಯಿಸಿದವನು ದುಷ್ಪ್ರವೃತ್ತಿಯವನಾದರೂ ಪರಿವರ್ತನೆ ಹೊಂದಿ ಪಾಪ ಬುದ್ಧಿಯನ್ನು ಕಳೆದುಕೊಳ್ಳುತ್ತಾನೆ.
    ಅಪಿ ಚೇತ್ಸುದುರಾಚಾರೋ ಭಜತೇ ಮಾಮನನ್ಯಭಾಕ್‌I
    ಸಾಧುರೇವ ಸ ಮಂತವ್ಯ: ಸಮ್ಯಗ್ವ್ಯವಸಿತೋ ಹಿ ಸಃII9.30II
    ಅತ್ಯಂತ ದುರಾಚಾರಿಯಾಗಿದ್ದರೂ ಅನನ್ಯಭಕ್ತಿಯಿಂದ ನನ್ನನ್ನು ಭಜಿಸಿದರೆ ಅವನು ಸಾಧುವೆಂದೇ ತಿಳಿಯತಕ್ಕದ್ದು, ಯಾಕೆಂದರೆ ಅವನು ನಿಶ್ಚಯ ಬುದ್ಧಿಯುಳ್ಳವನು.
    ಕ್ಷಿಪ್ರಂ ಭವತಿ ಧರ್ಮತ್ಮಾ ಶಶ್ವಚ್ಛಾಂತಿಂ ನಿಗಚ್ಛತಿI
    ಕೌಂತೇಯ ಪ್ರತಿಜಾನೀಹಿ ನ ಮೇ ಭಕ್ತಃ ಪ್ರಣಶ್ಯತಿII9.31II
    Klive Special Article ಅಂಥವನು ಬೇಗ ಧರ್ಮಾತ್ಮನಾಗಿ ಶಾಶ್ವತವಾದ ಶಾಂತಿಯನ್ನು ಹೊಂದುತ್ತಾನೆ. ನನ್ನ ಭಕ್ತನು ನಾಶವಾಗುವುದಿಲ್ಲ ಎಂದು ತಿಳಿದುಕೊ.
    ೬. ಜ್ಞಾನಯೋಗ: ಒಂದು ದೃಷ್ಟಿಯಿಂದ ನೋಡಿದರೆ ಅಪರಾಧಕ್ಕೆ ಅಜ್ಞಾನವೇ ಮೂಲವಾಗಿರುತ್ತದೆ. ” ನ ಹಿ ಜ್ಞಾನೇನ ಸದೃಶಂ ಪವಿತ್ರಮಿಹ ವಿದ್ಯತೇ (೪.೩೮)” ಎಂದರೆ ಈ ಲೋಕದಲ್ಲಿ ಜ್ಞಾನಕ್ಕೆ ಸಮನಾದ ಪವಿತ್ರವಸ್ತುವು ಯಾವುದೂ ಇರುವುದಿಲ್ಲ. ಜ್ಞಾನವನ್ನು ಪಡೆದವನು ಪರಮಶಾಂತಿಯನ್ನು ಪಡೆಯುತ್ತಾನೆ.
    ೭. ಮನೋನಿಯಂತ್ರಣ: ಇದು ಅಪರಾಧನಿಯಂತ್ರಣದಲ್ಲಿ ಅತಿ ಮಹತ್ವದ ವಿಷಯ ಆಗಿದ್ದು ಮನುಷ್ಯ ಯಾಕೆ ಪಾಪ ಮಾಡುತ್ತಾನೆ ಎನ್ನುವ ಅರ್ಜುನನ ಪ್ರಶ್ನೆಗೆ ಉತ್ತರ ಕೊಡುತ್ತ ಶ್ರೀಕೃಷ್ಣನು “ಕಾಮ ಏಷ ಕ್ರೋಧ ಏಷ ರಜೋಗುಣಸಮುದ್ಭವಃ(೩.೩೭)” ಅಂದರೆ ರಜೋಗುಣದಿಂದ ಹುಟ್ಟಿದ ಕಾಮ ಕ್ರೋಧಗಳೇ ಪಾಪಕ್ಕೆ ಕಾರಣವೆಂದು ವಿವರಿಸಿ ಇವುಗಳ ಆಶ್ರಯವಾಗಿರುವ ಇಂದ್ರಿಯ, ಮನಸ್ಸು ಬುದ್ಧಿಗಳನ್ನು ನಿಯಂತ್ರಿಸಿದರೆ ಅವುಗಳನ್ನು ನಿಯಂತ್ರಿಸಬಹುದೆಂದು ತಿಳಿಸುತ್ತಾನೆ.
    ಅಸಂಶಯಂ ಮಹಾಬಾಹೋ ಮನೋ ದುರ್ನಿಗ್ರಹಂ ಚಲಮ್‌I
    ಅಭ್ಯಾಸೇನ ತು ಕೌಂತೇಯ ವೈರಾಗ್ಯೇಣ ಚ ಗೃಹ್ಯತೇII6.35II
    ಮನಸ್ಸು ದುರ್ನಿಗ್ರಹವಾದದ್ದು ಮತ್ತು ಚಂಚಲವಾದದ್ದು. ಅಭ್ಯಾಸದಿಂದಲೂ ಮತ್ತು ವೈರಾಗ್ಯದಿಂದಲೂ ಅದನ್ನು ನಿಗ್ರಹಿಸಬಹುದು.
    ೮.ಸಮದರ್ಶಿತ್ವ: ವಿದ್ಯಾವಿನಯಸಂಪನ್ನೇ…..(೫.೧೮) ಮುಂತಾದ ಶ್ಲೋಕಗಳಲ್ಲಿ ಗೀತೆಯು ಎಲ್ಲರನ್ನು ಸಮನಾಗಿ ನೋಡುವುದನ್ನು ಬೋಧಿಸುತ್ತದೆ. ಸಮದರ್ಶಿತ್ವ, ಸಹಾನುಭೂತಿ, ಸೌಹಾರ್ದತೆ ಮತ್ತು ಸಹಕಾರಗಳಿಂದ ಅಪರಾಧವನ್ನು ತೊಡೆಯಬಹುದು. ಸಮದರ್ಶಿತ್ವವನ್ನು ೬ನೇ ಅಧ್ಯಾಯದ ೨೯,೩೦,೩೧,೩೨ನೇ ಶ್ಲೋಕಗಳಲ್ಲಿ ಚೆನ್ನಾಗಿ ವಿವರಿಸಲಾಗಿದೆ.
    ಆತ್ಮೌಪಮ್ಯೇನ ಸರ್ವತ್ರ ಸಮಂ ಪಶ್ಯತಿ ಯೋsರ್ಜುನI
    ಸುಖಂ ವಾ ಯದಿ ವಾ ದುಃಖಂ ಸ ಯೋಗೀ ಪರಮೋ ಮತಃII6.32II
    ಯಾವನು ಎಲ್ಲ ಪ್ರಾಣಿಗಳಲ್ಲಿಯೂ ಸುಖವನ್ನಾಗಲಿ ದುಃಖವನ್ನಾಗಲಿ ತನ್ನಂತೆಯೇ ಸಮವಾಗಿ ನೋಡುವನೋ ಆ ಯೋಗಿಯು ಶ್ರೇಷ್ಠನೆಂದು ನನ್ನ ಅಭಿಪ್ರಾಯ.

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

0

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ ಜ.23 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480841339.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಿವಮೊಗ್ಗ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆ

0

ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಿವಮೊಗ್ಗ ಇವರ ವತಿಯಿಂದ ಜ.26 ರ ಬೆಳಗ್ಗೆ 09 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರು ನೆರವೇರಿಸುವರು.
ಕಾರ್ಯಕ್ರಮದಲ್ಲಿ ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ಪಾಲಿಕೆ ಮಹಾಪೌರರು, ಜನಪ್ರತಿನಿಧಿಗಳು, ವಿವಿಧ ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿ.ಪಂ ಸಿಇಓ, ಮಹಾನಗರ ಪಾಲಿಕೆ ಆಯುಕ್ತರು, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮಾಧ್ಯಮದವರು, ಸರ್ಕಾರಿ ಅಧಿಕಾರಿಗಳು/ನೌಕರರು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಳ್ಳುವರು.
ಸಂಜೆ 5 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಪೊಲೀಸ್ ಬ್ಯಾಂಡ್ ಮತ್ತು ನಗರದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿರುತ್ತದೆ.

ಗೃಹರಕ್ಷಕ ದಳಕ್ಕೆ ಸೇರಲು ಅರ್ಜಿ ಆಹ್ವಾನ

0

ಶಿವಮೊಗ್ಗ ಜಿಲ್ಲೆಯ ಸ್ಥಳೀಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಖಾಲಿ ಇರುವ ಪುರುಷ ಮತ್ತು ಮಹಿಳಾ ಗೃಹರಕ್ಷಕರ “ನಿಷ್ಕಾಮ ಸೇವೆ ದ್ಯೇಯದ” ಅಡಿಯಲ್ಲಿ ಸೇವೆ ಸಲ್ಲಿಸಲು ಸಿದ್ದರಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗೃಹರಕ್ಷಕರಾಗಲು ಬೇಕಾದಆರ್ಹತೆ:-ಭಾರತೀಯ ಪ್ರಜೆಯಾಗಿರ ಬೇಕು. 19 ವರ್ಷದ ಮೇಲ್ಪಟ್ಟು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 10ನೇ ತರಗತಿ ಉತ್ತೀರ್ಣರಾಗಿರಬೇಕು. ವೈದ್ಯಕೀಯವಾಗಿ ಸಶಕ್ತರಾಗಿರಬೇಕು. ಪೊಲೀಸ್ ಠಾಣೆಯಲ್ಲಿ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು / ಆರೋಪ ಅಥವಾ ಅಪರಾಧಿ ಎಂದು ದಾಖಲಾಗಿರದಿದ್ದಲ್ಲಿ ಅಂತಹವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆಸಕ್ತರು ನಿಗದಿತ ಅರ್ಜಿಯನ್ನು ಸಮಾದೇಷ್ಟರ ಕಾರ್ಯಾಲಯ, ಗೃಹರಕ್ಷಕ ದಳ, ಶಿವಮೊಗ್ಗ. 08182 – 295630 & 255630 ಅಥವ ಜಿಲ್ಲೆಯ ಎಲ್ಲಾ ಗೃಹರಕ್ಷಕ ದಳ ಘಟಕ/ ಉಪ ಘಟಕಗಳ ಕಛೇರಿಗಳಲ್ಲಿ ಪಡೆದು, ಭರ್ತಿಮಾಡಿದ ಅರ್ಜಿಗಳನ್ನು ಫೆ. 03 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಸಮಾದೇಷ್ಟರು ಡಾ. ಚೇತನ ಹೆಚ್.ಪಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಗೃಹರಕ್ಷಕ ದಳ ಘಟಕ ಉಪ ಘಟಕ ಮತ್ತು ಘಟಕಾಧಿಕಾರಿಗಳು ಮೊಬೈಲ್ ನಂಬರ್‌ನ್ನು ಸಂಪರ್ಕಿಸುವುದು. ಶಿವಮೊಗ್ಗ, ಹೆಚ್.ಸಿ.ಶ್ರೀಧರ ಮೂರ್ತಿ-9964157471, ಕುಂಸಿ- ಎಂ.ಕುಮಾರ- 8197013844, ಹಾರನಹಳ್ಳಿ -ಜಿ.ರುದ್ರೇಶ್ -9972163398, ಭದ್ರಾವತಿ -ಜಗದೀಶ-9900283490, ಹೊಳೆಹೊನ್ನೂರು- ಅಕ್ರಾಉಲ್ಲಾ-9986104590, ತೀರ್ಥಹಳ್ಳಿ – ದಿಲೀಪ್ ಬಿ.ಎನ್. -7975957665, ಸಾಗರ – ಕೆ.ಎಸ್.ಮಂಜುನಾಥ – 8073831409, ಜೋಗ – ಡಿ.ಸಿದ್ದರಾಜು – 9449699459, ಶಿಕಾರಿಪುರ- ಕೆ.ವಿ.ಮಹೇಶ-9901325146, ಶಿರಾಳಕೊಪ್ಪ -ಎಂ.ವೀರಭದ್ರಸ್ವಾಮಿ-9741629961, ಹೊಸನಗರ- ಎಂ.ಅರ್.ಟೀಕಪ್ಪ-9901002423, ರಿಪ್ಪನ್‌ಪೇಟೆ -ಟಿ ಶಶಿಧರ್ ಆಚಾರ್ಯ್-9741477689, ಸೊರಬ- ಹೆಚ್.ಎಂ.ಪ್ರಶಾAತ್, 7976306266.

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

0

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನಗಳನ್ನು ಅಳವಡಿಸಿಕೊಂಡು ಉತ್ತಮ ಭವಿಷ್ಯ ಕಟ್ಟಿಕೊಳ್ಳಬಹುದು. ನಿಜಶರಣರು ಅವರಿಗೋಸ್ಕರ ಅಲ್ಲದೆ ಸಮಾಜಮುಖಿ ಕಾರ್ಯಗಳಿಂದ ಗುರುತಿಸಿಕೊಂಡವರು ಎಂದು ಶಾಸಕರು ಎಸ್ ಎನ್ ಚನ್ನಬಸಪ್ಪ ಹೇಳಿದರು.
ಅವರು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತೋತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು.
ಅಂಬಿಗರ ಚೌಡಯ್ಯರ ಸಮಾಜಸೇವೆ ಮಾಡುವ ಸಹಜ ಕ್ರಿಯೆಯಿಂದ ನಿಜಶರಣ ಎಂಬ ಹೆಸರು ಬಂದಿದೆ. ನಿಜಶರಣರು ನಮಗೆ ಸಂಸ್ಕೃತಿ, ಸಂಸ್ಕಾರ ಭಾವನೆಯ ಅರಿವನ್ನು ಮೂಡಿಸಿದ್ದಾರೆ. ಎಲ್ಲ ವಚನ ಸಾಹಿತ್ಯ ಒಂದೆಡೆ ಸೇರಿಸುವ ಪ್ರಯತ್ನ ಕರ್ನಾಟಕ ಸರ್ಕಾರ ನಡೆಸುತ್ತಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿಗಳು ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಎಸ್. ಬಿ. ವಾಸುದೇವ ರವರು ವಿಶೇಷ ಉಪನ್ಯಾಸ ನೀಡಿ ಭಕ್ತಿ ತೋರಿಕೆಯಾಗಿರದೇ ಅಂತರಾತ್ಮದಿಂದ ಅದನ್ನು ಸ್ಪರ್ಶಿಸಬೇಕು. 12 ನೇ ಶತಮಾನದಲ್ಲಿ ಕ್ರಾಂತಿಯ ರೂಪದಲ್ಲಿ ಹುಟ್ಟಿಕೊಂಡವರೇ ಅಂಬಿಗರ ಚೌಡಯ್ಯ. ಮಾನವನಿಗೆ ಬೇಕಾಗಿರುವುದು ಅಗತ್ಯ ಜ್ಞಾನ ಎಂದು ತಿಳಿಸಿದರು.
ಮನುಷ್ಯನ ವ್ಯಕ್ತಿತ್ವಕ್ಕೆ ಅಂಬಿಗರ ಚೌಡಯ್ಯನವರ ವಚನಗಳು ನಾಟುತ್ತವೆ. ಅದಕ್ಕನುಗುಣವಾಗಿ ಮೇಲು-ಕೀಳು ಎಂಬ ಭಾವನೆ ತೊಡೆದು ಹಾಕಬೇಕು.
S.N.Chennabasappa ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಮೇಶ್ ಹೆಚ್ ರವರು ಗಣ್ಯರಿಗೆ ಸ್ವಾಗತಿಸಿದರು.
ವೇದಿಕೆಯ ಮೇಲೆ ಜಿಲ್ಲಾ ಗಂಗಾಮತ ಸಂಘ ಅಧ್ಯಕ್ಷರಾದ ಡಿ ಬಿ ಕೆಂಚಪ್ಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

0

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು. ಅದು ಅನೇಕ ಕಲಾವಿದರನ್ನು ತನ್ನ ಮಡಿಲಲ್ಲಿ ಪೋಷಿಸುತ್ತಿದೆ. ಈ ಊರು ನೃತ್ಯ, ಸಂಗೀತ, ನಾಟಕ, ಯಕ್ಷಗಾನವೇ ಮೊದಲಾದ ಎಲ್ಲ ಪ್ರಕಾರಗಳಲ್ಲಿ ಶ್ರೇಷ್ಠವಾದ ಕಲಾವಿದರನ್ನು ಹೊಂದಿದೆ. ಇಲ್ಲಿ ಅನೇಕ ಸಂಗೀತ ವಿದ್ಯಾಲಯಗಳು ತಮ್ಮದೇ ಆದಂತಹ ವಿಶಿಷ್ಟ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಎಲ್ಲರ ಗಮನ ಸೆಳೆದು ಆಕರ್ಷಿಸಿರುವುದು ಒಂದೆಡೆಯಾದರೆ, ತಮ್ಮ ಸಂಗೀತ ಶಾಲೆಯ ರಜತ ಸಂಭ್ರಮಕ್ಕೆ “ವೀಣಾ ತ್ರಿಶತೋತ್ಸವ” ಆಚರಿಸಿ ಒಂದು ದಾಖಲೆಯನ್ನು ನಿರ್ಮಿಸಿದ್ದು ಶ್ರೀಸರಸ್ವತಿ ಸಂಗೀತ ವಿದ್ಯಾಲಯ. ಅದರ ಮುಖ್ಯಸ್ಥರಾದ ವಿ ll ಶ್ರೀಮತಿ ವಿಜಯಲಕ್ಷ್ಮಿರಾಘು ಅವರ ಶಿಷ್ಯವೃಂದದ ಜೊತೆಗೆ ಅನೇಕ ವಿದ್ಯಾಸಂಸ್ಥೆಗಳ ಸಹಕಾರದೊಂದಿಗೆ ನೀಡಿದ ವೀಣೆಯ ಅದ್ಭುತ ಕಾರ್ಯಕ್ರಮ ಐತಿಹಾಸಿಕ ದಾಖಲೆಯಾಯ್ತು. ಎರಡು ದಿನಗಳ ಕಾಲ ಅಲ್ಲಮಪ್ರಭು ಮೈದಾನದಲ್ಲಿ ಸುಂದರವಾದ ವೇದಿಕೆ ಹಾಗೂ ವೀಕ್ಷಕರಿಗೆ ಎಲ್ಲೂ ತೊಂದರೆಯಾಗದಿರುವಂತಹ ಆಸನದ ವ್ಯವಸ್ಥೆಯಿಂದ ಆಯೋಜಿತವಾದ ಈ ಕಾರ್ಯಕ್ರಮ ಪ್ರೇಕ್ಷಕರ ಮನಸ್ಸಿಗೆ ಮುದ ನೀಡಿತು.

ಮೊದಲ ದಿನ ವಿll ಇಂದು ನಾಗರಾಜ್ ಹಾಗು ಲಕ್ಷ್ಮೀನಾಗರಾಜ್ ಅವರ ಹಾಡುಗಾರಿಕೆ ಕರ್ಣಾನಂದವನ್ನು ನೀಡಿದರೆ, ಮರುದಿನದ ಉದ್ಘಾಟಕರಾಗಿ ಆಗಮಿಸಿದ ಮಹಾರಾಜರೂ ಸಂಸದರೂ ಶ್ರೀಯದುವೀರ ಒಡೆಯರ್ ಅವರು, ಮುಖ್ಯ ಅತಿಥಿಗಳಾದ ವಿ ll ಶ್ರೀಮತಿ ರೇವತಿ ಕಾಮತ್ ಮೊದಲಾದವರಿಂದ ಕೂಡಿದ ಅಚ್ಚುಕಟ್ಟಾದ ಸಭಾ ಕಾರ್ಯಕ್ರಮವಾದರೆ ವೇದಿಕೆ ಕಾರ್ಯಕ್ರಮ ಮುಗಿದು ವೀಣಾ ತ್ರಿಶತಿಯ ಉದ್ಘಾಟನೆಯ ದೃಶ್ಯವೇ ನೋಡುಗರಿಗೆ ಆ ಕಲ್ಪನೆ ವಾವ್ ಎಂಬ ಅನುಭವ ನೀಡಿತು. ಅಲ್ಲಿ ನುಡಿಸಿದ ಪ್ರತಿಯೊಂದು ಹಾಡುಗಳೂ ವಿಶೇಷವೇ ಅದರಲ್ಲೂ ಸಾಮಜವರಗಮನ, ಮಾಮವತು, ತಾಯಿ ಶಾರದೆ, ವಿಶ್ವವಿನೂತನ, ಅಯಿಗಿರಿ ನಂದಿನಿ ಹೀಗೆ ಒಂದಕ್ಕಿಂತ ಒಂದು ಅತ್ಯದ್ಭುತವಾದ ಪ್ರಸ್ತುತಿಯಾಗಿದ್ದವು. ಜೊತೆಗೆ ಮೈಸೂರ್ ಸಂಸ್ಥಾನದ ಪರಂಪರೆಯಲ್ಲಿ ಗೌರವಿಸುವ ವೀಣೆಯನ್ನು ಶ್ರೀ ಯದುವೀರ್ ಒಡೆಯರ್ ಅವರು ನುಡಿಸುವ ಪ್ರಯತ್ನಿಸಿದ್ದು ಒಂದು ವಿಶೇಷವೇ ಆಯಿತು. ಹಾಗೆಯೇ ಎಲ್ಲವುಗಳಲ್ಲೂ ಕಂಡು ಬಂದ ಏಕತಾನತೆ, ಪಕ್ಕ ವಾದ್ಯದವರ ವಿದ್ವತ್ ಪೂರ್ಣ ಸಾಥ್ ಈ ಕಾರ್ಯಕ್ರಮಕ್ಕೆ ಒಳ್ಳೆಯ ಮೆರುಗು ತಂದಿತ್ತು. ಆಗಮಿಸಿದ ಸಹೃದಯ ರಸಿಕರು ಈ ಎಲ್ಲ ಸೊಬಗನ್ನು ಕಣ್ತುಂಬಿಕೊಂಡು, ಮನಕಾನಂದದ ರಸಾನುಭೂತಿ ಅನುಭವಿಸಿದರು.

Klive Special Article ಅಷ್ಟೇ ಅಲ್ಲದೆ ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಸಂಗೀತ ಶಾಲೆಯ ನೃತ್ಯ ಶಾಲೆಯ ಹಾಗೂ ಇತರ ಪ್ರಮುಖರನ್ನು, ಗಣ್ಯರನ್ನು ಸನ್ಮಾನಿಸಿದ್ದು, ಗುರುವಂದನೆ, ಹಾಗೂ ಮಾತಾಪಿತೃಗಳ ಹೆಸರಿನಲ್ಲಿ ಒಬ್ಬ ಅಂಧ ವಿದ್ಯಾರ್ಥಿನಿಗೆ ವೀಣೆಯನ್ನೇ ನೀಡಿದ್ದು ಇವೆಲ್ಲವೂ ಅತ್ಯಂತ ಭಾವುಕ ಕ್ಷಣಗಳಾದವು. ಜೊತೆಗೆ ಸಾಧಕರ ಸನ್ಮಾನ, ಸಂಗೀತ ಶಾಲೆಗೆ ಹೆಮ್ಮೆ ತಂದ ವಿದ್ಯಾರ್ಥಿಗಳ ಹಾಗೂ ವಿಶೇಷ ಪ್ರತಿಭೆಗಳನ್ನು ಗುರುತಿಸಿ ಗೌರವಿಸಿದ್ದು ಸಹ ಗಮನಾರ್ಹವಾಗಿತ್ತು. ಈ ಎಲ್ಲದಕ್ಕೂ ಕಳಶಪ್ರಾಯದಂತೆ ಮೆರುಗು ತಂದಿದ್ದು ನಿರೂಪಕರ ನಿರೂಪಣೆ, ನಿಜವಾಗಿಯೂ ಪ್ರೇಕ್ಷಕರನ್ನು ಚಳಿಯ ಹೊತ್ತಿನಲ್ಲೂ ಐತಿಹಾಸಿಕ ದಾಖಲೆಯಾದ ಆ ಸಂದರ್ಭವೆಲ್ಲವೂ ಮನದಲ್ಲಿ ಅಚ್ಚಳಿಯದೆ ಉಳಿಯುವಂತಾಗಲು ನಿರೂಪಕರ ಸಂದರ್ಭೋಚಿತ ಅರ್ಥಪೂರ್ಣ ಹಾಗೂ ಜೋಶ್ ನಿಂದ ಕೂಡಿದ ನಿರೂಪಣೆ ಗಮನ ಸೆಳೆಯಿತು.

ಇವುಗಳ ಜೊತೆಯಲ್ಲಿ ಸೌಂಡ್ ಸಿಸ್ಟಮ್ ನ ಚಿನ್ನು ರವರ ಅದ್ಭುತ ಕಲ್ಪನೆಯ ವೇದಿಕೆ, ಹಾಗೆಯೇ ಪರಂಪರಾದವರು ಆಯೋಜಿಸಿದ ದೇಸಿ ವಸ್ತುಗಳ ಮೇಳ. ನಗರದ ಜನತೆಗೆ ಚಿತ್ತಾಕರ್ಷಕವಾಗಿತ್ತು. ಆಹಾರ ಮೇಳದ ಕಡೆಯಂತೂ ಜನ ಒಳ್ಳೆಯ ಆಹಾರ ಸವಿಯುತ್ತಾ ಉದರಾನಂದ ಒಂದೆಡೆಯಾದರೆ, ವೀಣೆಯ ನಾದದ ಝೇಂಕಾರದ ಕರ್ಣಾನಂದ ಮತ್ತೊಂದೆಡೆ ಎಲ್ಲವೂ ಅಲ್ಲಿ ವೈಶಿಷ್ಟ್ಯಪೂರ್ಣವಾಗಿತ್ತು.

ಸರಸ್ವತಿಯ ವೀಣೆಯ ನಾದದ ಝೇಂಕಾರ ನಗರದೆಲ್ಲೆಡೆ ಒಂದು ಧನಾತ್ಮಕ ವೈಬ್ ಮೂಡಿಸಿದ್ದಂತು ಸತ್ಯ. ಅಚ್ಚುಕಟ್ಟಾದ ಒಟ್ಟು ಆಯೋಜನೆ ನಗರದ ಎಲ್ಲಾ ಪ್ರಮುಖ ಸಂಗೀತ ಶಾಲೆಗಳವರನ್ನು ಜೋಡಿಸಿಕೊಂಡು ಶಾಸ್ತ್ರೀಯ ಸಂಗೀತಕ್ಕಿರುವಂತಹ ಘನತೆಯನ್ನು ಎತ್ತಿ ಹಿಡಿಯುವಲ್ಲಿ ಒಂದು ವೈವಿಧ್ಯತೆ ಮತ್ತು ಏಕತೆ ಮೂಡಿಸಿದ ಕಾರ್ಯಕ್ರಮ ಇದಾಗಿತ್ತು. ಒಟ್ಟಾರೆಯಾಗಿ ಓಂಕಾರದ ಶಂಖನಾದಕಿಂತ ಕಿಂಚಿದೂನಮ್ ಎಂಬ ಕವಿವಾಣಿಯು ಇಲ್ಲಿ ನೆನಪಾಗುವಂತಾಯ್ತು. ನಗರದ ಸಮಸ್ತ ಸಹೃದಯ ಪ್ರೇಕ್ಷಕರ ಪರವಾಗಿ ವಿದುಷಿ ಶ್ರೀಮತಿ ವಿಜಯಲಕ್ಷ್ಮಿ ರಾಘು ಹಾಗೂ ಅವರ ಬೆಂಬಲಕ್ಕೆ ನಿಂತ ಅವರ ಮನೆಯವರಾದ ಶ್ರೀ ಟಿ. ಎಸ್. ವೆಂಕಟರಾವ್, ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ಗೌರವ ಅಧ್ಯಕ್ಷರು, ಸುಶ್ರಾವ್ಯ ಸಂಗೀತ ವಿದ್ಯಾಲಯದ ಮುಖ್ಯಸ್ಥರಾದ ಶ್ರೀಮತಿ ವಿ ll ಜಯಶ್ರೀ ನಾಗರಾಜ್, ಸಾಯಿ ಶೃತಿ ಸಂಗೀತ ವಿದ್ಯಾಲಯದ ಮುಖ್ಯಸ್ಥರಾದ ಶ್ರೀ ಪದ್ಮಿನಿ ಸುಧೀರ್ ಇವರೆಲ್ಲರಿಗೂ ಅನಂತಾನಂತ ಧನ್ಯವಾದಗಳು. ವೀಣಾ ನಾದದ ಝೇಂಕಾರದ ಅನುರಣನ ಸ್ಮೃತಿಪಟಲದಲ್ಲಿ ಜೀವಿತಾವಧಿಯ ಮಹತ್ವದ ಕಾರ್ಯಕ್ರಮವಾಗಿ ಉಳಿಯುತ್ತದೆ ಎನ್ನುವುದಂತು ನಿಸ್ಸಂಶಯ.

ದಾಸ ಶ್ರೇಷ್ಠರ ಆರಾಧನೆಯ ಪುಣ್ಯ ಪರ್ವಕಾಲದಲ್ಲಿ, ತಮ್ಮ ಸಂಸ್ಥೆಯ ರಜತ ಮಹೋತ್ಸವದ ಸಂದರ್ಭದಲ್ಲಿನ ಈ ಕಾರ್ಯಕ್ರಮ ನಗರದ ಮಟ್ಟಿಗೆ ಒಂದು ಐತಿಹಾಸಿಕ ದಾಖಲೆಯೇ ಸರಿ. ಈ ಅದ್ಭುತ ಕಾರ್ಯಕ್ರಮಕ್ಕೆ ನಾವೆಲ್ಲ ಸಾಕ್ಷಿಯಾದೆವಲ್ಲ ಎಂಬ ಭಾವ ಮನದಲ್ಲಿ ಮತ್ತಷ್ಟು ಹೆಮ್ಮೆಯನ್ನು ತರಿಸುತ್ತದೆ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಅದೆಷ್ಟು ಪದಗಳಿಂದ ಬಣ್ಣಿಸಿದರೂ ಕಡಿಮೆಯೇ ಎನಿಸುತ್ತಿದೆ ನನ್ನ ಪಾಲಿಗೆ. ನನಗಂತೂ ವೀಣೆ ವಿಜಯಲಕ್ಷೀ ಎಂದೇ ಕರೆಸಿಕೊಳ್ಳುವ ಅವರು ಬೃಹತ್ ವೇದಿಕೆಯಲ್ಲಿ ಪಕ್ಕ ವಾದ್ಯಗಳ ನಡುವೆ ಸಾಕ್ಷಾತ್ ಸರಸ್ವತಿಯ ಹಾಗೆ ಕಂಡುಬಂದರು. ಅನೇಕ ವಿದ್ಯಾ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿತವಾದ ಕಾರ್ಯಕ್ರಮ ಇದಾಗಿತ್ತು. ಈ ಹಿಂದೆ ಪಂಚವೀಣೆ, ನವವೀಣೆ, ದಶವೀಣೆ, 25 ವಿಧಗಳ ಸಮೂಹ ಅಲ್ಲದೇ ಅಷ್ಟೋತ್ತರ ಶತವೀಣಾ ವೈಭವ ಇವುಗಳನ್ನು ಕಂಡ ನಾವು ವೀಣಾ ತ್ರಿಶತೋತ್ಸವ ಅಂದರೆ 300 ವೀಣೆಗಳು ಏಕಕಾಲದಲ್ಲಿ, ಏಕಲಯದಲ್ಲಿ ನಾದವನ್ನು ಹೊಮ್ಮಿಸಿ ಈಗಲೂ ಅದನ್ನು ನೆನೆಸಿಕೊಂಡರೆ ರೋಮಾಂಚನವಾಗುವಂತೆ ಮಾಡಿದ ಕಾರ್ಯಕ್ರಮವಾಗಿತ್ತು. ಈ ಕಲ್ಪನೆಗೆ ಒಂದು ಹ್ಯಾಟ್ಸ್ ಆಫ್ ಹೇಳಲೇಬೇಕು.

ಡಾ. ಮೈತ್ರೇಯಿ ಆದಿತ್ಯ
ಸಂಸ್ಕೃತ ಉಪನ್ಯಾಸಕರು
ಪೇಸ್ ಪಿ ಯು ಕಾಲೇಜ್, ಶಿವಮೊಗ್ಗ.

Thawar Chand Gehlot ಜ್ಞಾನಾಧಾರಿತ ಆರ್ಥಿಕತೆಯಿಂದ ನಾವೀನ್ಯತೆ ಆಧಾರಿತ ಶಕ್ತಿಯಾಗಿ ಭಾರತ ರೂಪುಗೊಳ್ಳಬೇಕು: ಶ್ರೀ ಥಾವರ್ ಚಂದ್ ಗೆಹ್ಲೋಟ್

0

Thawar Chand Gehlot “ಗ್ರಾಮೀಣಾಭಿವೃದ್ಧಿ, ಆರೋಗ್ಯ, ಶಿಕ್ಷಣ, ಪರಿಸರ ಮತ್ತು ಡಿಜಿಟಲ್ ಸೇರ್ಪಡೆಯಂತಹ ಸವಾಲುಗಳಿಗೆ ಪರಿಹಾರಗಳನ್ನು ನೀಡುವ ನವೋದ್ಯಮಗಳನ್ನು ವಿಶ್ವವಿದ್ಯಾಲಯಗಳು ಪ್ರೋತ್ಸಾಹಿಸಬೇಕು” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ದಕ್ಷಿಣ ವಲಯದ ಕುಲಪತಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. “ವಿಶ್ವವಿದ್ಯಾಲಯಗಳು ಉದ್ಯಮಶೀಲತೆಯ ಕೇಂದ್ರಗಳಾದಾಗ ಮಾತ್ರ ಭಾರತವು ಜ್ಞಾನಾಧಾರಿತ ಆರ್ಥಿಕತೆಯಿಂದ ನಾವೀನ್ಯತೆ ಆಧಾರಿತ ಸೂಪರ್ ಪವರ್‌ಗೆ ಚಲಿಸುತ್ತದೆ. ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಭಾಗವಹಿಸುವಂತೆ ಮಾಡಲು, ಅವರಿಗೆ ಇತ್ತೀಚಿನ ಜ್ಞಾನ ಮತ್ತು ತಂತ್ರಜ್ಞಾನವನ್ನು ಪರಿಚಯಿಸುವ ಅವಶ್ಯಕತೆಯಿದೆ, ಇದರಿಂದ ಅವರು ತಮ್ಮ ಕೆಲಸದ ದಕ್ಷತೆಯನ್ನು ಬಳಸಿಕೊಳ್ಳಬಹುದು ಮತ್ತು ಸ್ವ-ಉದ್ಯೋಗದತ್ತ ಪ್ರೇರಣೆ ಪಡೆಯಬಹುದು ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಹುದು” ಎಂದರು.

“ದಕ್ಷಿಣ ಭಾರತವು ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಯಾವಾಗಲೂ ನಾಯಕತ್ವವನ್ನು ಒದಗಿಸಿದೆ. ಬೆಂಗಳೂರಿನಂತಹ ನಗರಗಳು ಶಿಕ್ಷಣ, ಸಂಶೋಧನೆ ಮತ್ತು ಕೈಗಾರಿಕೆಗಳು ಒಟ್ಟಿಗೆ ಸೇರಿದಾಗ, ಜಾಗತಿಕ ಮಟ್ಟದ ನವೋದ್ಯಮಗಳು ಮತ್ತು ನಾವೀನ್ಯತೆಗಳು ಹುಟ್ಟುತ್ತವೆ ಎಂಬುದನ್ನು ಸಾಬೀತುಪಡಿಸಿವೆ. ನಾವು ಈ ಮಾದರಿಯನ್ನು ದೇಶದ ಇತರ ಭಾಗಗಳಿಗೂ ವಿಸ್ತರಿಸಬೇಕಾಗಿದೆ. “ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಚಿಂತನೆಯನ್ನು ಬೆಳೆಸಲು-ಶಿಕ್ಷಣ, ತಾಂತ್ರಿಕ-ರಾಷ್ಟ್ರೀಯತೆಯನ್ನು ಉತ್ತೇಜಿಸಲು ಇನ್ಕ್ಯುಬೇಷನ್ ಮತ್ತು ನಾವೀನ್ಯತೆ ಕೇಂದ್ರಗಳ ಸ್ಥಾಪನೆ, ನವೋದ್ಯಮ ಅಭಿವೃದ್ಧಿಗಾಗಿ ವಿಶ್ವವಿದ್ಯಾಲಯ-ಉದ್ಯಮ ಸಹಯೋಗ” ವಿಷಯಗಳ ಬಗ್ಗೆಯೂ ಚರ್ಚಿಸಲಾಗುವುದು. ಈ ಮೂರು ಉಪವಿಷಯಗಳು ಸಹ ಬಹಳ ಅರ್ಥಪೂರ್ಣವಾಗಿವೆ. ಉದ್ಯಮಶೀಲತೆಯು ಆರ್ಥಿಕ ಸಮೃದ್ಧಿಗೆ ಕೇವಲ ಒಂದು ಸಾಧನವಲ್ಲ, ಸಾಮಾಜಿಕ ಬದಲಾವಣೆ, ಸುಸ್ಥಿರ ಅಭಿವೃದ್ಧಿ ಮತ್ತು ಎಲ್ಲರನ್ನೂ ಒಳಗೊಳ್ಳುವ ಪ್ರಗತಿಗೆ ಪ್ರಬಲ ಸಾಧನವಾಗಿದೆ” ಎಂದು ಹೇಳಿದರು.
“ಭಾರತವು ಜ್ಞಾನ, ನಾವೀನ್ಯತೆ ಮತ್ತು ಉದ್ಯಮಶೀಲತೆಯಿಂದ ನಡೆಸಲ್ಪಡುವ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ. ಸ್ಟಾರ್ಟ್ಅಪ್ ಇಂಡಿಯಾ, ಆತ್ಮನಿರ್ಭರ ಭಾರತ್ ಮತ್ತು ಮೇಕ್ ಇನ್ ಇಂಡಿಯಾದಂತಹ ರಾಷ್ಟ್ರೀಯ ಅಭಿಯಾನಗಳು ದೇಶದ ಭವಿಷ್ಯವು ಪದವಿ ಪಡೆದ ಯುವಕರನ್ನು ಮತ್ತು ಉದ್ಯೋಗ ಸೃಷ್ಟಿಕರ್ತರನ್ನು ಸಿದ್ಧಪಡಿಸುವಲ್ಲಿದೆ ಎಂದು ಸ್ಪಷ್ಟಪಡಿಸಿವೆ. ಈ ದಿಕ್ಕಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ನಿರ್ಣಾಯಕವಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸ್ಟಾರ್ಟ್‌ಅಪ್ ಸಂಸ್ಕೃತಿಯನ್ನು ಬೆಳೆಸುವುದರಿಂದ ವಿದ್ಯಾರ್ಥಿಗಳಲ್ಲಿ ಸಮಸ್ಯೆ ಪರಿಹಾರ, ಅಪಾಯ-ತೆಗೆದುಕೊಳ್ಳುವಿಕೆ ಮತ್ತು ಸೃಜನಶೀಲ ಚಿಂತನೆ ಬೆಳೆಯುತ್ತದೆ. ಇನ್‌ಕ್ಯುಬೇಷನ್ ಕೇಂದ್ರಗಳು, ಸ್ಟಾರ್ಟ್‌ಅಪ್ ಲ್ಯಾಬ್‌ಗಳು, ಉದ್ಯಮ-ಶೈಕ್ಷಣಿಕ ಸಹಯೋಗಗಳು ಮತ್ತು ಮಾರ್ಗದರ್ಶನ ಕಾರ್ಯಕ್ರಮಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಕಾರ್ಯಸಾಧ್ಯವಾದ ಉತ್ಪನ್ನಗಳು ಮತ್ತು ಸೇವೆಗಳಾಗಿ ಪರಿವರ್ತಿಸಲು ವೇದಿಕೆಯನ್ನು ಒದಗಿಸುತ್ತವೆ” ಎಂದು ಅಭಿಪ್ರಾಯಪಟ್ಟರು.
“ಈ ಸಮ್ಮೇಳನದ ವಿಷಯವಾದ “ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯಮಶೀಲತೆ ಮತ್ತು ನವೋದ್ಯಮಗಳನ್ನು ಬೆಳೆಸುವುದು” ಅತ್ಯಂತ ಸೂಕ್ತವಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳು ಪದವಿ ಪ್ರದಾನ ಕೇಂದ್ರಗಳಷ್ಟೇ ಅಲ್ಲ, ನಾವೀನ್ಯತೆ, ನಾಯಕತ್ವ ಮತ್ತು ರಾಷ್ಟ್ರ ನಿರ್ಮಾಣದ ಕೇಂದ್ರಗಳೂ ಆಗಿವೆ. ಇಂದು ಉದ್ಯಮಶೀಲತೆ ಮತ್ತು ನವೋದ್ಯಮಗಳ ಯುಗ, ಇಲ್ಲಿ ಯುವಜನರ ಆಲೋಚನೆಗಳು ದೊಡ್ಡ ಆಸ್ತಿಯಾಗಿದೆ. ಈ ಆಲೋಚನೆಗಳಿಗೆ ಸರಿಯಾದ ಮಾರ್ಗದರ್ಶನ, ಸಂಪನ್ಮೂಲಗಳು ಮತ್ತು ಅವಕಾಶಗಳನ್ನು ನೀಡಿದರೆ, ಅವು ಸ್ವಾವಲಂಬಿಯಾಗುತ್ತವೆ ಮತ್ತು ಸಮಾಜ ಮತ್ತು ದೇಶಕ್ಕೆ ಉದ್ಯೋಗಗಳನ್ನು ಸೃಷ್ಟಿಸುತ್ತವೆ. ಪ್ರಸ್ತುತ ಸನ್ನಿವೇಶಗಳು ಮತ್ತು ಭವಿಷ್ಯದ ನಿರೀಕ್ಷೆಗಳನ್ನು ಗಮನಿಸಿದರೆ, ಉನ್ನತ ಶಿಕ್ಷಣದ ಭವಿಷ್ಯವನ್ನು ರೂಪಿಸುವಲ್ಲಿ ಭಾರತದ ಪಾತ್ರದ ಬಗ್ಗೆ ಚಿಂತಿಸುವ ಸಮಯ ಬಂದಿದೆ” ಎಂದು ತಿಳಿಸಿದೆ.
Thawar Chand Gehlot “1925 ರಲ್ಲಿ ಸ್ಥಾಪನೆಯಾದ ಭಾರತೀಯ ವಿಶ್ವವಿದ್ಯಾಲಯಗಳ ಸಂಘವು ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯ ಪ್ರಮುಖ ಉನ್ನತ ಸಂಸ್ಥೆಯಾಗಿದೆ. ಪ್ರಾರಂಭದಿಂದಲೂ, ಈ ಸಂಸ್ಥೆಯು ದೇಶದ ವಿಶ್ವವಿದ್ಯಾಲಯಗಳಲ್ಲಿ ಸಮನ್ವಯ, ಗುಣಮಟ್ಟ ಹೆಚ್ಚಿಸುವಿಕೆ ಮತ್ತು ರಾಷ್ಟ್ರೀಯ ಏಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇದು ಸಂಶೋಧನೆ, ನಾವೀನ್ಯತೆ, ಡಿಜಿಟಲ್ ಶಿಕ್ಷಣ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯ ಪರಿಣಾಮಕಾರಿ ಅನುಷ್ಠಾನವನ್ನು ಸಹ ಸಕ್ರಿಯವಾಗಿ ಬೆಂಬಲಿಸುತ್ತದೆ. AIU ಕ್ರೀಡೆಗಳಿಗೂ ಗಮನಾರ್ಹ ಕೊಡುಗೆಗಳನ್ನು ನೀಡುತ್ತದೆ. ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಗಳ ಮೂಲಕ, ಇದು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳನ್ನು ರೂಪಿಸಿದೆ” ಎಂದು ಶ್ಲಾಘಿಸಿದರು.

“ಬೆಂಗಳೂರಿನ ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾನಿಲಯವು ತನ್ನ ದೂರದೃಷ್ಟಿಯ ಶೈಕ್ಷಣಿಕ ವಾತಾವರಣ, ಸಂಶೋಧನಾ ಚಟುವಟಿಕೆಗಳು, ನವೀನ ಬೋಧನಾ ವಿಧಾನಗಳು ಮತ್ತು ಸರ್ವತೋಮುಖ ಅಭಿವೃದ್ಧಿಗೆ ಬದ್ಧತೆಗೆ ಹೆಸರುವಾಸಿಯಾಗಿದೆ. ಆಧುನಿಕ ಮೂಲಸೌಕರ್ಯ, ಅಂತರಶಿಸ್ತೀಯ ವಿಧಾನ ಮತ್ತು ಬಲವಾದ ಕೈಗಾರಿಕಾ ಸಂಪರ್ಕಗಳ ಮೂಲಕ, ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಬೌದ್ಧಿಕವಾಗಿ ಮತ್ತು ವೈಯಕ್ತಿಕವಾಗಿ ಬೆಳೆಯಲು ಅವಕಾಶಗಳನ್ನು ಒದಗಿಸುತ್ತದೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಎಂ.ಎಸ್. ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಎಂ.ಆರ್. ಜಯರಾಮ್, ಎಐಯು ಅಧ್ಯಕ್ಷ ಪ್ರೊಫೆಸರ್ ವಿನಯ್ ಕುಮಾರ್ ಪಾಠಕ್, ಪ್ರಧಾನ ಕಾರ್ಯದರ್ಶಿ ಡಾ. ಶ್ರೀಮತಿ ಪಂಕಜ್ ಮಿತ್ತಲ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

0

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಲೆನಾಡು ಕರಕುಶಲ ಉತ್ಸವ ಹಾಗೂ ಫಲಪುಷ್ಪ ಪ್ರದರ್ಶನದ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಗಣರಾಜ್ಯೋತ್ಸವದ ಪ್ರಯುಕ್ತ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಉದ್ಯಾನ ಕಲಾ ಸಂಘ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಾಲ್ಕು ದಿನಗಳ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಜ.24 ರ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ನೆರವೇರಿಸುವರು.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಂಸದರು, ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರುಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು.
ವಿಶೇಷತೆಗಳು : ಸುಮಾರು 2 ಲಕ್ಷ ಸಂಖ್ಯೆಯ ವಿವಿಧ ಬಣ್ಣದ ಹೂವುಗಳಾದ ಗುಲಾಬಿ, ಸೇವಂತಿಗೆ, ಆಂಥೋರಿಯA, ಕಾಮಿನಿ ಲೆ ಮತ್ತು ಫೋಲಿಯೇಜ್ ಗಿಡಗಳನ್ನು ಬಳಸಿ ವಿಶೇಷವಾದ ಹೂವಿನ ಕಲಾಕೃತಿಗಳನ್ನು ರಚನೆ ಇರುತ್ತದೆ.
ವಿವಿಧ ಜಾತಿಯ ಹೂವುಗಳಿಂದ 16 ಅಡಿ ಎತ್ತರದ ಕೋಟೆ ಹಾಗೂ ಕೆಳದಿ ಶಿವಪ್ಪ ನಾಯಕನ ಪ್ರತಿಮೆ ರಚನೆ, 15 ಅಡಿ ಎತ್ತರದ ಬಳ್ಳಿಗಾವಿ ಕೇದಾರೇಶ್ವರ ದೇವಸ್ಥಾನ ರಚನೆ. ಹೂವುಗಳು ಹಾಗೂ ಫೋಲಿಯೇಜ್‌ನಿಂದ 60 ಅಡಿ ಅಗಲ * 22 ಅಡಿ ಎತ್ತರದ ಜೋಗ ಜಲಪಾತದ ಕಲಾಕೃತಿಗಳು ಈ ಬಾರಿಯ ಆಕರ್ಷಣೆಗಳಾಗಿದ್ದು, ಹೂವಿನ ಐ ಲವ್ ಶಿವಮೊಗ್ಗ ಸೆಲ್ಫಿ ಪಾಯಿಂಟ್ ಕುಜ್ಬ ಗಿಡಗಳು(ಬೋನ್ಸಾಯ್) ಗಿಡಗಳ ಪ್ರದರ್ಶನ ಸಹ ಇರುತ್ತದೆ.
ಮಾರಾಟ ಮೇಳ –ಕ್ರಾಫ್ಟ್ಸ್ ಆಫ್ ಮಲ್ನಾಡ್ : ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್‌ಆರ್‌ಎಲ್‌ಎಂ) ಸಂಜೀವಿನಿ ಯೋಜನೆಯಡಿ ಸ್ವ ಸಹಾಯ ಗುಂಪಿನ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದ್ದು 12163 ಮಹಿಳಾ ಸ್ವಸಹಾಯ ಸಂಘಗಳಡಿ 126456 ಕುಟುಂಬಗಳನ್ನು ಗ್ರಾಮೀಣ ಅಭಿಯಾನದಡಿ ಸಂಘಟಿಸಲಾಗಿದೆ.
ಕ್ರಾಫ್ಟ್÷್ಸ ಆಫ್ ಮಲ್ನಾಡ್ ಎಂಬ ಹೆಸರಿನಡಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಬ್ರಾಂಡಿಗ್ ಮಾಡಿದ್ದು, ಈಗಾಗಲೇ ಈ ಬ್ರಾಂಡ್ ಅಡಿಯಲ್ಲಿ ಮಹಿಳೆಯರು ತಯಾರಿಸಿದ ದೀಪಗಳು ಮತ್ತಿತರೆ ಉತ್ಪನ್ನಗಳ ಉತ್ತಮ ಮಾರಾಟವಾಗಿದೆ. ಇದೀಗ ವಿಶೇಷವಾಗಿ ಇ-ಕಾಮರ್ಸ್ ವೆಬ್‌ಸೈಟ್ ರಚನೆ ಮಾಡುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ವಿವಿಧ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಲು ತಯಾರಿ ಮಾಡಿಕೊಳ್ಳಲಾಗಿದ್ದು ಮೇಳದ ಉದ್ಘಾಟನೆಯಂದು ಜಿಲ್ಲಾ ಉಸ್ತುವಾರಿ ಸಚಿವರು ವೆಬ್‌ಸೈಟ್‌ಗೆ ಚಾಲನೆ ನೀಡುವರು.
ಇದರೊಂದಿಗೆ ಪ್ರತಿಯೊಬ್ಬ ಸ್ವ ಸಹಾಯ ಗುಂಪಿನ ಮಹಿಳೆಯರು ಜೀವನೋಪಾಯದೊಂದಿಗೆ ಸ್ವಾವಲಂಬನೆಯ ಜೀವನ ನಿರ್ವಹಿಸುವಲ್ಲಿ ಅವಶ್ಯಕ ಸಾಮರ್ಥ್ಯಾಭಿವೃದ್ದಿ ಕೌಶಲ್ಯ ತರಬೇತಿಗಳು, ಉತ್ಪನ್ನಗಳ ಬ್ರಾö್ಯಂಡಿAಗ್, ಪ್ಯಾಕಿಂಗ್ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಮಹಿಳೆಯರ ಸಬಲೀಕರಣಕ್ಕಾಗಿ ನಿರಂತರ ಬೆಂಬಲಿಸಲಾಗುತ್ತಿದೆ.
ಮೇಳದ ವೈಶಿಷ್ಟ್ಯಗಳು: ಮೇಳದ ಮಳಿಗೆಗಳಲ್ಲಿ ರಾಜ್ಯ, ಹೊರ ರಾಜ್ಯ ಮತ್ತು ವಿವಿಧ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳ ಸ್ವ ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಮಣ್ಣಿನ ಅಲಂಕಾರಿಕ ಉತ್ಪನ್ನಗಳು, ಮ್ಯಾಕ್ರನ್ ಉತ್ಪನ್ನಗಳು, ಹಸೆ ಚಿತ್ತಾರ ಮತ್ತು ಭತ್ತದ ತೋರಣ, ಈಚಲು ಚಾಪೆ, ಮಣ್ಣಿನ ಆಭರಣಗಳು, ಮರದ ಕೆತ್ತನೆಗಳು, ಖೌದಿ ಉತ್ಪನ್ನಗಳು, ಕೊಪ್ಪಳದ ಕಿನ್ನಾಳ ಉತ್ಪನ್ನಗಳು, ಕೊಪ್ಪಳದ ಬನಾನ ಫೈಬರ್ ಉತ್ಪನ್ನಗಳು, ಚಿಕ್ಕಬಳ್ಳಾಪುರ ಲೆದರ್ ಉತ್ಪನ್ನಗಳು, ನವಲಗುಂದ ದುರಿ, ಮೈಸೂರು ಮರದ ಕೆತ್ತನೆಯ ಉತ್ಪನ್ನಗಳು, ಬೀದರ್ ಜಿಲ್ಲೆಯ ಬಿದರಿ ಉತ್ಪನ್ನಗಳು ಹಾಗೂ ಅಕ್ಕ ಕೆಫೆಯ ಸದಸ್ಯರು, ಇತರೆ ಸ್ವ ಸಹಾಯ ಗುಂಪಿನ ಸದಸ್ಯರಿಂದ ಆಹಾರ ಉತ್ಪನ್ನಗಳು ಮುಂತಾದವುಗಳು ಸಾರ್ವಜನಿಕರ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುತ್ತವೆ.
ಸಿರಿಧಾನ್ಯ ಮೇಳ: ರಾಜ್ಯದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹಾಗೂ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2026 ಪೂರ್ವಭಾವಿಯಾಗಿ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳವನ್ನು ಈ ಮೇಳದಲ್ಲಿಯೇ ಹಮ್ಮಿಕೊಳ್ಳಲಾಗಿದ್ದು, ಸಿರಿಧಾನ್ಯ ಕುರಿತಾದ ಪ್ರತ್ಯೇಕ ಮಳಿಗೆಯನ್ನು ಸ್ಥಾಪಿಸಲಾಗುವುದು.
ಕೈ ಮಗ್ಗ ಜವಳಿ ಮೇಳ : ಜವಳಿ ಮತ್ತು ಕೈಮಗ್ಗ ಹಾಗೂ ರೇಷ್ಮೆ ಇಲಾಖೆಯ ಸಹಯೋಗದಲ್ಲಿ 11 ರಾಜ್ಯಗಳು 19ಜಿಐ ಟ್ಯಾಗ್ ಹೊಂದಿರುವ ವಿವಿಧ ರೀತಿಯ ಸೀರೆಗಳು, ಶಾಲುಗಳು, ಬೆಡ್ ಶೀಟ್‌ಗಳು ಮತ್ತ ಕೆಎಸ್‌ಐಸಿ ಸೀರೆಗಳ ಪ್ರದರ್ಶನ ಮತ್ತು ಮಾರಾಟವಿರುತ್ತದೆ.
ವಿವಿಧ ಸ್ಪರ್ಧೆಗಳು : ರೈತರಿಗಾಗಿ – ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ರೈತರು ಬೆಳೆದ ವಿಶಿಷ್ಟ, ವಿಶೇಷ ರೀತಿಯ ಹೂ, ಹಣ್ಣು, ತರಕಾರಿ ಮತ್ತಿತರ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಜ.26 ರ ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿಗೆ ದೂ.ಸಂ 8495876466 ನ್ನು ಸಂಪರ್ಕಿಸಬಹುದು.
ಹೂ ರಂಗೋಲಿ ಸ್ಪರ್ಧೆ: ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಹೂ, ಹಣ್ಣು, ತರಕಾರಿ, ಬೇಳೆಕಾಳುಗಳ ಹಾಗೂ ದವಸ ಧಾನ್ಯಗಳನ್ನು ಬಳಸಿ ರಂಗೋಲಿ ರಚನೆ ಮಾಡಬೇಕು.
ಸಮಾರೋಪ ಸಮಾರಂಭದಲ್ಲಿ ಫಲ ಪುಷ್ಪ ಪ್ರದರ್ಶನದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಮತ್ತು ಭಾಗವಹಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದಿಸಲಾಗುವುದು. ಕಳೆದ ಬಾರಿಯ ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಜನ ಭೇಟಿ ನೀಡಿ ಸುಮಾರು ರೂ.20 ಲಕ್ಷ ವಹಿವಾಟು ಆಗಿತ್ತು. ಈ ಬಾರಿಯೂ ಜಿಲ್ಲೆಯ ಜನತೆ ಉತ್ತಮವಾಗಿ ಸ್ಪಂದಿಸುವರೆAದು ಆಶಿಸಿದ ಅವರು ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮೇಳವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪತ್ರಿಕಾಗೋಷ್ಟಿಯಲ್ಲಿ ಜಿ.ಪಂ ಯೋಜನಾ ನಿರ್ದೇಶಕಿ ನಂದಿನಿ, ಜಿಲ್ಲಾ ಉದ್ಯಾನ ಕಲಾ ಸಂಘದ ಉಪಾಧ್ಯಕ್ಷ ಸಿದ್ದಪ್ಪ ಹರಳೆಣ್ಣೆಯವರ್, ವೈ ಆರ್ ಮಲ್ಲಿಕಾರ್ಜುನ, ದುಮ್ಮಳ್ಳಿ ರಘು, ಚಂದ್ರಕಾಂತ ಹಸಗೋಡು ಹಾಜರಿದ್ದರು.

ಕಿರ್ಲೋಸ್ಕರ್ ಕಾರ್ಖಾನೆಯ ಆಫೀಸರ್ಸ್ ಲೇಡೀಸ್ ಕ್ಲಬ್ ನ ಸಂಕ್ರಾಂತಿ ಹಬ್ಬ ಹಳದಿ–ಕುಂಕುಮ ಕಾರ್ಯಕ್ರಮ ಯಶಸ್ವಿ

0

ಪ್ರತಿ ವರ್ಷದಂತೆ ಈ ವರ್ಷವೂ ಕಿರ್ಲೋಸ್ಕರ್ ಕಾರ್ಖಾನೆಯ ಆಫೀಸರ್ಸ್ ಲೇಡೀಸ್ ಕ್ಲಬ್ ವತಿಯಿಂದ ಸಂಕ್ರಾಂತಿ ಹಬ್ಬದ ಅಂಗವಾಗಿ ಹಳದಿ–ಕುಂಕುಮ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ದಿನಾಂಕ 20-01-2026 ರಂದು ತಿಮ್ಲಾಪುರದಲ್ಲಿ ಆಯೋಜಿಸಲಾಗಿದ್ದು, ಸುಮಾರು 60 ಕ್ಕೂ ಹೆಚ್ಚು ಕ್ಲಬ್‌ನ ಮಹಿಳಾ ಸದಸ್ಯರು ಹಾಗೂ ಅವರ ಕುಟುಂಬದ ಸದಸ್ಯರು ಉತ್ಸಾಹ ಮತ್ತು ಸಂಭ್ರಮದಿಂದ ಭಾಗವಹಿಸಿದರು. ಮಹಿಳಾ ಸದಸ್ಯರಿಗಾಗಿ ಸಂಪ್ರದಾಯಬದ್ಧ ಹಳದಿ–ಕುಂಕುಮ ಕಾರ್ಯಕ್ರಮವನ್ನು ಸಂಕ್ರಾಂತಿಯ ಸಾಂಸ್ಕೃತಿಕ ಮೌಲ್ಯಗಳನ್ನು ಸಾರುವಂತೆ ಆತ್ಮೀಯ ವಾತಾವರಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮದ ಭಾಗವಾಗಿ ಸದಸ್ಯರು ಹೂಸಪೇಟೆ–ವಿಜಯನಗರ ಜಿಲ್ಲೆಯ ಎನ್‌ಎಚ್–13ರ ಬಳಿ ಇರುವ ತಿಮ್ಲಾಪುರದ ಐತಿಹಾಸಿಕ ದೇವಸ್ಥಾನಕ್ಕೆ ಭೇಟಿ ನೀಡಿ, ಅದರ ಇತಿಹಾಸ ಮತ್ತು ವಾಸ್ತುಶಿಲ್ಪದ ಕುರಿತು ಮಾಹಿತಿ ಪಡೆದುಕೊಂಡರು. ಈ ಪ್ರವಾಸವು ಮನರಂಜನೆಯ ಜೊತೆಗೆ ಜ್ಞಾನಾರ್ಜನೆಯ ಅನುಭವವನ್ನೂ ನೀಡಿತು.
ತಿಮ್ಲಾಪುರದ ಐತಿಹಾಸಿಕ ದೇವಸ್ಥಾನದ ಪೂರ್ಣ ಇತಿಹಾಸ
ತಿಮ್ಲಾಪುರ ಗ್ರಾಮದ ಈ ಐತಿಹಾಸಿಕ ದೇವಸ್ಥಾನ ಸಮೂಹವು ವಿಜಯನಗರ ಸಾಮ್ರಾಜ್ಯದ ಕಾಲಘಟ್ಟದ (ಸುಮಾರು ಕ್ರಿ.ಶ. 15ನೇ ಶತಮಾನ) ಅಮೂಲ್ಯ ಸಾಂಸ್ಕೃತಿಕ ಸ್ಮಾರಕವಾಗಿದ್ದು, ದಕ್ಷಿಣ ಭಾರತದ ದ್ರಾವಿಡ ಶೈಲಿಯ ಶಿಲ್ಪಕಲೆಗೆ ಅದ್ಭುತ ಉದಾಹರಣೆಯಾಗಿದೆ. ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನ ಆಗಿನ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯ ಅವಧಿಯಲ್ಲಿ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಆಗ ಅದರ ಭಾಗವಾಗಿ ಈ ದೇವಸ್ಥಾನಗಳನ್ನು ನಿರ್ಮಿಸಲಾಗಿದೆ ಎಂದು ಇತಿಹಾಸಕಾರರು ಅಭಿಪ್ರಾಯಪಡುತ್ತಾರೆ.
ಇತಿಹಾಸದ ದಾಖಲೆಗಳ ಪ್ರಕಾರ, ಕ್ರಿ.ಶ. 1461ರ ಅವಧಿಯಲ್ಲಿ ಈ ದೇವಸ್ಥಾನಗಳ ನಿರ್ಮಾಣ ಅಥವಾ ವಿಸ್ತರಣೆ ನಡೆದಿರುವ ಸಾಧ್ಯತೆಗಳಿವೆ. ಈ ದೇವಾಲಯಗಳು ಧಾರ್ಮಿಕ ಆರಾಧನೆಯ ಕೇಂದ್ರಗಳಾಗಿದ್ದಷ್ಟೇ ಅಲ್ಲದೆ, ಆ ಕಾಲದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳ ಕೇಂದ್ರಗಳಾಗಿಯೂ ಕಾರ್ಯನಿರ್ವಹಿಸಿದ್ದವು.
ಈ ದೇವಸ್ಥಾನ ಸಮೂಹದಲ್ಲಿ ವಿಶಾಲ ನವರಂಗ, ಗರ್ಭಗುಡಿ, ಸುಂದರವಾಗಿ ಕೆತ್ತಿದ ಕಲ್ಲಿನ ಸ್ತಂಭಗಳು, ದ್ರಾವಿಡ ಶೈಲಿಯ ಶಿಖರಗಳು
ಇವೆಲ್ಲವೂ ವಿಜಯನಗರ ಯುಗದ ಶಿಲ್ಪಿಗಳ ಉನ್ನತ ಕೌಶಲ್ಯವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತವೆ. ದೇವತೆಗಳ ಮೂರ್ತಿಗಳು ಹಾಗೂ ಪೌರಾಣಿಕ ಕಥನಗಳನ್ನು ಒಳಗೊಂಡ ಶಿಲ್ಪಾಕೃತಿಗಳು ಆ ಕಾಲದ ಧಾರ್ಮಿಕ ನಂಬಿಕೆಗಳು ಮತ್ತು ಭಕ್ತಿಪರಂಪರೆಯನ್ನು ಜೀವಂತವಾಗಿ ಚಿತ್ರಿಸುತ್ತವೆ.
ಅಂದು ತಿಮ್ಲಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಸಮೃದ್ಧವಾಗಿದ್ದುದಕ್ಕೆ ಈ ದೇವಸ್ಥಾನಗಳು ಸಾಕ್ಷಿಯಾಗಿವೆ. ಕಾಲಕ್ರಮೇಣ ನಿರ್ವಹಣೆಯ ಕೊರತೆಯಿಂದ ಕೆಲವು ಭಾಗಗಳು ಹಾನಿಗೊಳಗಾಗಿದ್ದರೂ, ಇಂದಿಗೂ ಈ ದೇವಸ್ಥಾನಗಳು ವಿಜಯನಗರ ಕಾಲದ ವೈಭವ ಮತ್ತು ಇತಿಹಾಸವನ್ನು ಜೀವಂತವಾಗಿ ಸಾರುತ್ತಿವೆ.
ಈ ಐತಿಹಾಸಿಕ ತಾಣದ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಮೂಲಕ ಸದಸ್ಯರು ನಮ್ಮ ಪರಂಪರೆ ಮತ್ತು ಇತಿಹಾಸವನ್ನು ಅರಿತುಕೊಳ್ಳುವ ಪ್ರಯತ್ನ ಮಾಡಿದರು.
ಈ ಸಂಪೂರ್ಣ ಕಾರ್ಯಕ್ರಮವು ಆಫೀಸರ್ಸ್ ಲೇಡೀಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಕಮಲಾ ಗುಮಾಸ್ತೆ ಅವರ ಮುಂದಾಳತ್ವದಲ್ಲಿ ಅತ್ಯಂತ ಸುವ್ಯವಸ್ಥಿತವಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳಿಗೆ ಮಹಿಳೆಯರಿಂದ ಹೆಣ್ಣು ಎರೆದು ಆಶೀರ್ವದಿಸುವ ಸಂಪ್ರಾದಾಯ ಮುಂದುವರೆಯಿತು. ಕ್ಲಬ್‌ನ ಪದಾಧಿಕಾರಿಗಳು ಮತ್ತು ಸದಸ್ಯರ ಸಹಕಾರದಿಂದ ಕಾರ್ಯಕ್ರಮ ಸ್ಮರಣೀಯವಾಗಿ ರೂಪುಗೊಂಡಿತು.
ಈ ಸಂಕ್ರಾಂತಿ ಕಾರ್ಯಕ್ರಮವು ಸದಸ್ಯರ ನಡುವೆ ಒಗ್ಗಟ್ಟು, ಸೌಹಾರ್ದತೆ ಮತ್ತು ಸಂಸ್ಕೃತಿಯ ಮಹತ್ವವನ್ನು ಮತ್ತಷ್ಟು ಬಲಪಡಿಸಿತು.