Tuesday, February 17, 2026
Tuesday, February 17, 2026
Home Blog Page 160

MESCOM ಸೆ.22. ಮಂಡ್ಲಿ ವ್ಯಾಪ್ತಿಯಲ್ಲಿನ ಕೆಲ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯ ಮೆಸ್ಕಾಂ ಪ್ರಕಟಣೆ.

0

MESCOM ಶಿವಮೊಗ್ಗ, ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.22 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 3.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು MESCOM ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂತಿಳಿಸಿದೆ.

DC shivamogga ಸೆ.22 ರಿಂದ ಆರಂಭಿಸುವ ಸಾಮಾಜಿಕ & ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಗಣತಿದಾರರೊಂದಿಗೆ ಸಹಕರಿಸಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

0

DC shivamogga ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯವು ಸೆ. 22 ರಿಂದ ಅ. 7 ರವರೆಗೆ ನಡೆಯಲಿದ್ದು, ಜಿಲ್ಲೆಯ ನಾಗರೀಕರು ಸಮೀಕ್ಷೆಗೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.
ಮೆಸ್ಕಾಂ ಇಲಾಖೆಯ ಮಾಹಿತಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಆರ್ ಆರ್ ಸಂಖ್ಯೆ ಹೊಂದಿರುವ ಅಂದಾಜು 543925 ಮನೆಗಳಿದ್ದು, ಈಗಾಗಲೇ ಮೀಟರ್ ರೀಡರ್‌ಗಳಿಂದ ಮನೆ ಮನೆಗೆ ಭೇಟಿ ನೀಡಿ ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯವು ಈಗಾಗಲೇ ಮುಕ್ತಾಯ ಹಂತಕ್ಕೆ ಬಂದಿದೆ.
DC shivamogga ಸಮೀಕ್ಷಾ ಕಾರ್ಯಕ್ಕಾಗಿ ಅಂದಾಜು 4215 ಸಂಖ್ಯೆಯ ಗಣತಿದಾರರನ್ನು ನೇಮಕ ಮಾಡಿದ್ದು, ಸದರಿ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಆಯೋಗದ ಪ್ರಶ್ನಾವಳಿಗೆ ಮೊಬೈಲ್ ಆಪ್ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ಹಾಗೂ
ಜಿಲ್ಲೆಯಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದಿರುವ ಗ್ರಾಮಗಳಲ್ಲಿರುವ ಕುಟುಂಬಗಳ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ನೆಟ್ವರ್ಕ್ ಸಂಪರ್ಕವಿರುವ ಸಮೀಪದ ಗ್ರಾಮ ಪಂಚಾಯತಿ/ಶಾಲಾ ಕಟ್ಟಡಗಳನ್ನು ಗುರುತಿಸಿದ್ದು ಇಲ್ಲಿ ಸಮೀಕ್ಷೆಗಾಗಿ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲು ಕ್ರಮವಹಿಸಲಾಗುತ್ತಿದ್ದು, ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯಕ್ಕೆ ಗಣತಿದಾರರಿಗೆ ಸಂಪೂರ್ಣ ಸಹಕಾರ ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸುವಂತೆ ನಾಗರಿಕರಲ್ಲಿ ಈ ಮೂಲಕ ಮನವಿ ಮಾಡಿದ್ದಾರೆ.

Klive Special Article ಕಥೆ ಹೇಳುತಿದೆ ಕಲ್ಲು…ಮಾಹಿತಿ: ದಿಲೀಪ್ ನಾಡಿಗ್ .ಶಿವಮೊಗ್ಗ

0

ಭಾಗ – 08

Klive Special Article ಕಥೆಯನ್ನು ಹೇಳುವ ಕಲ್ಲುಗಳು.

ಕರ್ನಾಟಕದ ಇತಿಹಾಸದಲ್ಲಿ ಬಲಿದಾನಗಳ‌ ಕಥೆಗಳೇ ಸಾವಿರಾರು ಇವೆ.‌ ಎಲ್ಲ ಕಥೆಗಳಿಗೂ ಒಂದು ಕಾರಣ, ಸಂಕಲ್ಪ, ಹರಕೆಗಳು ಇವೆ. ಅಪರೂಪದ ಸಂಗತಿಗಳಾಗಿ ಬಲಿದಾನದ ಕಥೆಗಳು ಶಾಸನದ ರೂಪದಲ್ಲಿ ನಮಗೆ ಸಿಗುತ್ತವೆ. ಕರ್ನಾಕಟದಲ್ಲಿ ಕೇವಲ ಬೆರಳೆಣಿಕೆಯಷ್ಟು ಸಿಗುವ ಅಮೂಲ್ಯವಾದ, ಬೆಲೆಕಟ್ಟಲಾಗದ ಆತ್ಮಬಲಿದಾನದ ಕಲ್ಲುಗಳು ವಿರಳ.‌

ಅದರಲ್ಲೂ ನಮ್ಮ‌ಶಿವಮೊಗ್ಗ ಭಾಗದಲ್ಲೇ ಈ ರೀತಿಯ ಅಪರೂಪದಲ್ಲೇ ಅಪರೂದ ಬಲಿದಾನದ ಶಾಸನಗಳು ಮೂರು ಇವೆ.‌ಇಡೀ ಕರ್ನಾಟಕದಲ್ಲಿ ಕೇವಲ ಐದೋ, ಆರೋ ಸಂಖ್ಯೆಯ ಆತ್ಮಬಲಿದಾನದ ಶಾಸನಗಳನ್ನು ಕಾಣಬಹುದು.‌ ಅದರಲ್ಲಿ ಜನವರಿಯಲ್ಲಿ ನಾವು ಕಂಡ ಅಪರೂಪದ ಬಲಿದಾನದ ಶಾಸನವನ್ನು ನಮ್ಮ ಗುರುಗಳಾದ ಡಾ.‌ಸಾಮಕ್ ರವರ ಮಾರ್ಗದರ್ಶನದಲ್ಲಿ ವೀಕ್ಷಿಸಿ ಮೊನ್ನೆ ಅದನ್ನ ಸ್ವಚ್ಚ ಮಾಡಲಾಯಿತು.

ಮೊದಲ ಸಾಲಿನ ಲಿಪಿಯು ಸ್ಪಷ್ಟವಾಗಿ ಗೋಚರಿಸದಿದ್ದರೂ ಉಳಿದ ಸಾಲುಗಳನ್ನು ಸ್ವಲ್ಪ‌ ಕಷ್ಟಪಟ್ಟು ಓದಬೇಕಿದೆ. ಇದನ್ನ ನಾನು ಇಲ್ಲಿ‌ಯಾಕೆ ಇಂದೇ ಉಲ್ಲೇಖ ಮಾಡುತ್ತಿದ್ದೇನೆ ಎಂದರೆ ಇಂದು ಮಹಾಲಯ ಅಮಾವಾಸ್ಯೆ, ಸರ್ವಪಿತೃಗಳನ್ನೂ ಆಹ್ವಾನಿಸಿ ಗೌರವಿಸುವ ದಿನ ಜೊತೆಗೆ ಕರ್ನಾಟಕದಲ್ಲಿ ಗೋಚರವಾಗದ ಸೂರ್ಯಗ್ರಹಣದ ದಿನವಿಂದು. ಇಲ್ಲಿರುವ ಶಾಸನವೂ ಸಹ ರಾಹುಗ್ರಸ್ತ ಸೂರ್ಯಗ್ರಹಣದ ದಿನ ಆತ್ಮಬಲಿದಾನ ಮಾಡಿಕೊಂಡ ವೀರನೊಬ್ಬನ ಕಥೆಯಿದೆ.‌ಆ ಕಥೆಯನ್ನು ಬರೆಯಬೇಕಿದೆ.

ಶಾಸನದ ಮೇಲು ಭಾಗದಲ್ಲಿ ಸೂರ್ಯನನ್ನು ನುಂಗುತ್ತಿರುವ ಉರಗದ (ರಾಹು) ವಿನ ಕೆತ್ತನೆಯಿದೆ. ಅದರ ಕೆಳಭಾಗದಲ್ಲಿ ಅಪ್ಸರೆಯರು(ಗಣಿಕೆಯರು) ಆ ವೀರನನ್ನು ಕೈಲಾಸಕ್ಕೆ ಕರೆದುಕೊಂಡು ಹೋಗುವ ಕೆತ್ತನೆ ಇದ್ದು ಮಧ್ಯಭಾಗದಲ್ಲಿ ಸೂರ್ಯ ಗ್ರಹಣದ ದಿನ ಆತ್ಮಬಲಿದಾನ ಮಾಡಿಕೊಂಡ ವೀರನೊಬ್ಬನ ಬಗ್ಗೆ ಮಾಹಿತಿ ಇದೆ. ಪೂರ್ಣ ಕೆಳಭಾಗದಲ್ಲಿ ಆತ್ಮಬಲಿದಾನ ಮಾಡಿಕೊಂಡ ವ್ಯಕ್ತಿಯ ಭಲಭಾಗದಲ್ಲಿ ಕನ್ನಡಿಯಂತಹ ವಸ್ತುವಿದೆ, ಎಡಭಾಗದಲ್ಲಿ ಕುಂಭದ ಕೆತ್ತನೆಯಿದೆ.

ಸೂರ್ಯಗ್ರಹಣವನ್ನು ಬರಿಗಣ್ಣಿನಲ್ಲಿ ನೋಡಲಾಗದೆ ಕನ್ನಡಿಯ ಮೂಲಕ ಗ್ರಹಣ ಸಮಯದಲ್ಲಿ ಆತ್ಮಬಲಿದಾನ ಮಾಡಿಕೊಂಡನೆಂದು ತಿಳಿಯಬಹುದು.

ಪ್ರಶ್ನೆ ಇಷ್ಟೇ.

Klive Special Article ರಾಹುಗ್ರಸ್ತ ಸೂರ್ಯಗ್ರಹಣದ ದಿನ ದಂದು ಯಾರ ಸಲುವಾಗಿ ಆತ್ಮಬಲಿದಾನ ಮಾಡಿಕೊಂಡನೆಂದು. ಹರಕೆಯೋ, ಮತ್ತೇನೋ, ಕಥೆಯನ್ನು ಹುಡುಕಬೇಕಿದೆ. ಏನೇ ಆಗಲಿ ಪ್ರಾಚೀನ ಭಾರತದಲ್ಲಿ ಈ ರೀತಿಯ ಅಪರೂಪದ ಸಂಗತಿ ಹೊಸತೇನಲ್ಲ. ಆದರೂ ಒಬ್ಬ ವ್ಯಕ್ತಿ ಗ್ರಹಣದ ದಿನದಂದೇ ಯಾಕೆ ಆತ್ಮಬಲಿದಾನ ಮಾಡಿ ಕೊಳ್ಳಲು ಆಯ್ಕೆ ಮಾಡಿಕೊಂಡ ಎಂಬ ಜಿಜ್ಞಾಸೆಗೆ ಉತ್ತರ… ಸೂರ್ಯಗ್ರಹಣವಿರಬಹುದು, ಚಂದ್ರ ಗ್ರಹಣವಿರಬಹುದು ಆದಿನವು ಭೂದಾನಕ್ಕೆ, ಗೋದಾನಕ್ಕೆ, ಆತದಮಬಲಿದಾನಕ್ಕೆ ಅತ್ಯಂತ ಪ್ರಶಸ್ತ ಕಾಲವೆಂದು ಧರ್ಮಸಿಂದು ಶಾಸ್ತ್ರ ನಿರ್ಣಯವಿದೆ.

ನೂರಾರು ಭೂದಾನ ಶಾಸನವೂ ಸಹ ಗ್ರಹಣದ ದಿನದಂದೇ ನೆಡಲಾಗಿದೆ.‌ಧಾರ್ಮಿಕ ಕಾರಣವೆಂದರೆ ಪಿತೃಗಳಿಗೆ ಮೋಕ್ಷ ಸಿಗಲೆಂದು.

ತುರುಗೋಳ್ ಶಾಸನ, ಗೋಸಾಸ ಶಾಸನ,
ವೀರಗಲ್ಲು,
ಮಹಾಸತಿ ಕಲ್ಲು,
ಒಕ್ಕೈ ಸತಿ ಕಲ್ಲು,
ನಿಷಧಿ ಕಲ್ಲುಗಳು ಒಂದೊಂದು ಒಂದೊಂದು ಬಗೆಯ ಕಥೆಯನ್ನು ಹೇಳುತ್ತದೆ.

ಕಲ್ಲು,‌ಕಲ್ಲಿನಲಿ ಕಥೆ ಇದೆ, ವ್ಯಥೆ ಇದೆ, ವೀರನೊಬ್ಬನ ಇತಿಹಾಸವಡಗಿದೆ, ಮಹಾಸತಿಯೊಬ್ಬಳ ವ್ಯಥೆ ಇದೆ, ದುಃಖವಿದೆ, ದುಮ್ಮಾನವಿದೆ, ಹರಕೆ ಇದೆ, ಹರಿವೂ ಇದೆ, ತ್ಯಾಗ, ಬಲಿದಾನದಿಂದ ತಮ್ಮ ಕಥೆಯನ್ನು ಕಲ್ಲಿನಲ್ಲರಳಿಸಿ
ಅಮರ ವೀರರಾದರು, ಸ್ವರ್ಗಕ್ಕೋ, ಕೈಲಾಸಕ್ಕೋ ಪಯಣ ಬೆಳೆಸಿದರು.

ಹರನಿಗೂ, ಹರಿಗೂ ಅರಿಕೆ ಮಾಡಿಕೊಂಡರು, ಭವ್ಯ ಭಾರತದ, ಕುಂತಲವೆಂಬ ಕರ್ನಾಟಕದ ಇತಿಹಾಸದಲ್ಲಿ ತಮ್ಮ ವಂಶದ ಹೆಸರು ಸೂರ್ಯ, ಚಂದ್ರರಿರುವ ವರೆಗೂ ಚಿರಸ್ಥಾಯಿಯಾಗಿ ಉಳಿಯಲೆಂದು, ಗೋ ರಕ್ಷಣೆಗೆ, ಸ್ತ್ರೀ, ಜನಿಸಿದ ಭೂಮಿತಾಯಿ ರಕ್ಷಣೆಗೆ ಕಾದಾಡಿ ಮಹಾತ್ಮರಾದರು. ಅವರು ಕಥೆಯಾದರು, ಅಮರರಾದರು, ಆ ವೀರರ ಕಥೆಯನ್ನು ಹೇಳುವವರಿದ್ದರೂ, ಕೇಳುವರಿಲ್ಲ ಇಂದು. ಇದು ಇತಿಹಾಸ, ಇದು ವಿಪರ್ಯಾಸ.

ಕಲ್ಲಿನಲ್ಲಿ ಹುದುಗಿರುವ ಅಪರೂಪದ ಕಥೆಯನ್ನು ಹುಡುಕಿ ಹೇಳುವ ಆಸೆ ನನ್ನದು, ಆ ಆಸೆಗೆ ಬೆನ್ನುಲುಬಾಗಿ ನಿಂತವರು ಹಲವರು.

ವಿಶೇಷ ಧನ್ಯವಾದಗಳು,
ನನ್ನ ಗುರುಗಳು, ಮಾರ್ಗದರ್ಶಕರು,
ಡಾ. ಎಸ್.ಜಿ.ಸಾಮಕ್,

ಬೆನ್ನೆಲುಬಾಗಿ ನಿಂತವರು,
ಶ್ರೀರಾಮ್ ಗೋಪಾಲ್,
ಶ್ರೀ ಆದಿತ್ಯ ಪ್ರಸಾದ್,
ರಾಯಲ್ ಕಾಫಿ ವರ್ಕ್ಸ್, ಶಿವಮೊಗ್ಗ.

ಚಿತ್ರಕೃಪೆ:
ಶ್ರೀ ಆದಿತ್ಯ ಪ್ರಸಾದ್.

Shivamogga City Corporation ಶಿವಮೊಗ್ಗ ದಸರಾ- 2025.ಕುಟುಂಬ ರಂಗ ಸ್ಪರ್ಧೆ ಗೆ ಸೆ.22 ರೊಳಗೆ ಪ್ರವೇಶ ಸಲ್ಲಿಕೆ ಗಡುವು

0

Shivamogga City Corporation ಶಿವಮೊಗ್ಗ ಮಹಾನಗರ ಪಾಲಿಕೆಯು ರಂಗದಸರಾ -2025 ರಡಿಯಲ್ಲಿ ಕುಟುಂಬ ರಂಗ ಎಂಬ ಕಾರ್ಯಕ್ರಮವನ್ನು ಆಯೋಜಿಸಿದೆ.
ಪಾಲಿಕೆ ವ್ಯಾಪ್ತಿಯ ಕುಟುಂಬದ ಸದಸ್ಯರು ಅಥವಾ ಅಕ್ಕಪಕ್ಕದ ಮನೆಯವರು ಕನಿಷ್ಠ 5 ರಿಂದ 12 ಜನ ಸೇರಿ ಅರ್ಧ ಗಂಟೆಯ ಕಿರು ನಾಟಕವನ್ನು ತಮ್ಮ ಮನೆಯಲ್ಲೇ ಅಥವಾ ಹತ್ತಿರದ ಅನುಕೂಲಕರ ಸ್ಥಳದಲ್ಲಿ ಅಭಿನಯಿಸಬೇಕು. ಇದರಲ್ಲಿ ಮೆಚ್ಚುಗೆ ಪಡೆದ ನಾಲ್ಕು ತಂಡಗಳನ್ನು ಆಯ್ಕೆ ಮಾಡಿ ನಗರದ ಕುವೆಂಪು ರಂಗಮಂದಿರದಲ್ಲಿ ಸೆ. 30 ರಂದು ಪ್ರದರ್ಶಿಸಲಾಗುವುದು. ನಾಟಕದ ವಿಷಯ ವಿವಾದಾತ್ಮಕ ಹಾಗೂ ಸಮಾಜದ ಶಾಂತಿಗೆ ಭಂಗ ತರುವ ವಿಚಾರವಾಗಿರಬಾರದು.
Shivamogga City Corporation ಆಸಕ್ತರು ಸೆ. 22 ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ರಂಗ ದಸರಾ ಸಮಿತಿ, ಮಹಾನಗರಪಾಲಿಕೆ, ಶಿವಮೊಗ್ಗ ಇವರ ಕಚೇರಿಯಲ್ಲಿ ಹೆಸರು ಅಥವಾ ತಂಡದ ಹೆಸರನ್ನು ನೋಂದಾಯಿಸಿಕೊಳ್ಳುವುದು. ನೊಂದಣಿ ಮಾಡಿದ ಮೊದಲ 15 ಸಾರ್ವಜನಿಕ ಕುಟುಂಬಗಳಿಗೆ ಪ್ರೋತ್ಸಾಹಧನವಾಗಿ ರೂ. 1000/-ಗಳಂತೆ ರಂಗ ದಸರಾ ಸಮಿತಿಯಿಂದ ಕಾರ್ಯಕ್ರಮ ಮುಗಿದ ನಂತರ ನೀಡಲಾಗುವುದು ಎಂದು ರಂಗ ದಸರಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಾಯಿಸಲು ಸಮಿತಿ ಅಧಿಕಾರಿ ಸದಸ್ಯೆ ಮಂಜುಶ್ರೀ-6364083666, ಸಂಚಾಲಕರು ಶ್ರೀಕಂಠ-8660756404, ಸುರೇಶ್ ಎಸ್.ಹೆಚ್.-9449925746 ಇವರುಗಳನ್ನು ಸಂಪರ್ಕಿಸುವುದು

CM Siddharamaiah ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಸೀಎಂ ಸಿದ್ಧರಾಮಯ್ಯ ಅವರಿಂದ ಖಡಕ್ ಸೂಚನೆ

0

CM Siddharamaiah ಬೆಂಗಳೂರು ನಗರ ರಸ್ತೆಗಳ ಸುಧಾರಣೆ ಹಾಗೂ ಸಂಚಾರ ವ್ಯವಸ್ಥೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಮುಖ್ಯಮಂತ್ತಿ ಸಿದ್ಧರಾಮಯ್ಯನವರು
ಖಡಕ್ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದ್ದಾರೆ
ಸಭೆಯ ಮುಖ್ಯಾಂಶಗಳು ಹೀಗಿವೆ:

  • ರಸ್ತೆ ಗುಂಡಿಗಳಿಂದ ವಾಹನ ಸವಾರರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ, ಈ ಬಗ್ಗೆ ಆಕ್ರೋಶ ಕೇಳಿಬರುತ್ತಿದ್ದರೂ ಈ ವರೆಗೆ ಗುಂಡಿ ಮುಚ್ಚದೆ ಇರುವುದು ಅಕ್ಷಮ್ಯ.
  • ಪ್ರತಿ ವಾರ್ಡ್ ನ ಎಂಜಿನಿಯರ್ ಗಳು, ಮುಖ್ಯ ಎಂಜಿನಿಯರ್ ಗಳು ಈಗಾಗಲೇ ಕ್ರಮ ವಹಿಸಬೇಕಿತ್ತು. ಇನ್ನು ಒಂದು ತಿಂಗಳ ಕಾಲಾವಕಾಶ ನೀಡುತ್ತೇವೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ವಹಿಸಲೇಬೇಕು ಮತ್ತು ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲೇಬೇಕು.
  • ರಸ್ತೆ ನಿರ್ವಹಣೆಗೆ ಸೂಕ್ತ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
  • ಗುತ್ತಿಗೆದಾರರೊಂದಿಗೆ ಶಾಮೀಲಾಗದೆ ಒದಗಿಸಿರುವ ಅನುದಾನಕ್ಕೆ ಉತ್ತಮ ಗುಣಮಟ್ಟದ ಕಾಮಗಾರಿಗಳನ್ನು,
    ವೈಜ್ಞಾನಿಕವಾದ ಕಾಮಗಾರಿಗಳನ್ನು ಪೂರೈಸಲು ಕ್ರಮ ವಹಿಸಬೇಕು.
  • ಮಳೆಗಾಲಕ್ಕೆ ಮುನ್ನವೇ ರಸ್ತೆ ಕಾಮಗಾರಿಗಳನ್ನು ಯಾಕೆ ಮಾಡುತ್ತಿಲ್ಲ, ಮಳೆಗಾಲದಲ್ಲಿಯೇ ಏಕೆ ಪ್ರಾರಂಭಿಸುವಿರಿ? ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೂತನವಾಗಿ ನೇಮಕಗೊಂಡಿರುವ ಆಯುಕ್ತರು ಫೀಲ್ಡ್ ವರ್ಕ್ ಮಾಡಿ, ನಿಗಾ ಇರಿಸಬೇಕು.
  • ಬಿಡಿಎ, ಬಿಎಂಆರ್‌ಸಿಎಲ್, ಜಲಮಂಡಳಿ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು.
  • ರಸ್ತೆ ಗುಂಡಿಗಳನ್ನು ಮುಚ್ಚಲು ಹಾಗೂ ಎಲ್ಲಾ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡಲು ಒಂದು ತಿಂಗಳ ಗಡುವು ನೀಡಲಾಗುವುದು, ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು.
  • ಮುಖ್ಯ ಆಯುಕ್ತರು ಪ್ರತಿ ವಾರ ಐದೂ ವಲಯಗಳ ಆಯುಕ್ತರೊಂದಿಗೆ ಸಭೆ ನಡೆಸಿ, ನಿರಂತರ ಸಂಪರ್ಕದಲ್ಲಿರಬೇಕು.
  • ಹಣದ ಕೊರತೆಯಿದ್ದರೆ ಆರ್ಥಿಕ ಇಲಾಖೆಯಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುತ್ತೇವೆ.
  • ಒಂದು ತಿಂಗಳ ನಂತರ ಮತ್ತೆ ಮೌಲ್ಯ ಮಾಪನ ನಡೆಸಲಾಗುವುದು
  • ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಸ್ತೆ ಜಾಲದಲ್ಲಿ
    1648.43 ಕಿ. ಮೀ ಉದ್ದದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಿವೆ. 46.61ಕಿ.ಮೀ ಹೈಡೆನ್ಸಿಟಿ ಕಾರಿಡಾರ್ ರಸ್ತೆಗಳಿವೆ.
  • ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಪಶ್ಚಿಮ ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ಗಳಲ್ಲಿ ಒಟ್ಟು 14,795 ರಸ್ತೆ ಗುಂಡಿಗಳನ್ನು ಗುರುತಿಸಿಲಾಗಿದೆ. ಈಗಾಗಲೇ 6,749 ಗುಂಡಿಗಳನ್ನು ಮುಚ್ಚಲಾಗಿದ್ದು, 8,046 ಗುಂಡಿಗಳು ಮುಚ್ಚಲು ಬಾಕಿ ಇವೆ.
  • ಈಗಾಗಲೇ 108.20 ಕಿ.ಮೀ ಉದ್ದದ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಂಡಿದೆ.‌143.68 ಕಿ.ಮೀ ಉದ್ದದ ರಸ್ತೆ ಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಪ್ರಗತಿಯಲ್ಲಿದೆ. ಒಟ್ಟಾರೆ 584.60 ಕಿ ಮೀ ಉದ್ದದ ರಸ್ತೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ.
  • ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆ ಗಳಲ್ಲಿ ಗುಂಡಿಗಳನ್ನು ಮುಚ್ಚಲು 2025-26 ರ ಆಯವ್ಯಯದಲ್ಲಿ 18 ಕೋಟಿ ರೂಪಾಯಿಗಳ ಅನುದಾನ ಒದಗಿಸಲಾಗಿದೆ.
  • ಎಲ್ಲಾ ನಗರ ಪಾಲಿಕೆಗಳಿಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲು ರೂ. 25 ಕೋಟಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಪಾಲಿಕೆಗಳಿಂದ ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ವಹಿಸಲಾಗಿದೆ.
  • CM Siddharamaiah ನೂತನ ತಂತ್ರಜ್ಞಾನ JETPATCHER ಬಳಸಿಕೊಳ್ಳಲು ರೂ. 2.50 ಕೋಟಿಗಳ ಮೊತ್ತದ ಟೆಂಡರ್ ಚಾಲ್ತಿಯಲ್ಲಿದ್ದು ಸದರಿ ತಂತ್ರಜ್ಞಾನದಿಂದ ತೇವಾಂಶವಿರುವ ಸಮಯದಲ್ಲಿಯೂ ಗುಂಡಿಗಳನ್ನು ಮುಚ್ಚಬಹುದಾಗಿದೆ.
  • ಐದೂ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ತಾಂತ್ರಿಕ ಸಮನ್ವಯಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳಬೇಕು.
  • ಇಬ್ಬಲೂರು ಜಂಕ್ಷನ್, ಅಗರ, ವೀರಣ್ಣನ ಪಾಳ್ಯ, ನಾಗವಾರ ಮತ್ತು ಹೆಬ್ಬಾಳ ಜಂಕ್ಷನ್ ಗಳಲ್ಲಿ ಜಲಮಂಡಳಿ ಮತ್ತು ಮೆಟ್ರೋ ಕಾಮಗಾರಿಯಿಂದ ಜಂಕ್ಷನ್ ಹಾಳಾಗಿದ್ದು ರೂ.400 ಕೋಟಿಗಳ ಹೊರವರ್ತುಲ ರಸ್ತೆ ಅಭಿವೃದ್ಧಿ ಯೋಜನೆಯಡಿ ಸಮಗ್ರವಾಗಿ ಅಭಿವೃದ್ದಿ ಪಡಿಸಲು ಉದ್ದೇಶಿಸಲಾಗಿದೆ.
  • ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

Maharishi Valmiki Jayanti ಅಕ್ಟೋಬರ್ 7. ಶ್ರೀಮಹರ್ಷಿ ವಾಲ್ಮೀಕಿ ಜಯಂತಿ. ಜಿಲ್ಲೆಯಲ್ಲಿ ವಿಜೃಂಭಣೆಯ ಆಚರಣೆ- ಗುರುದತ್ತ ಹೆಗಡೆ

0

Maharishi Valmiki Jayanti ಅ.7 ರಂದು ನಗರದಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಈ ವರ್ಷ ಕಲಾ ತಂಡದ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಎಲ್ಲಿ ಆಚರಣೆ ಮಾಡಬೇಕೆಂಬ ಗೊಂದಲ ಬೇಡ, ಸಮಾಜದ ಮುಖಂಡರೆಲ್ಲಾ ಸೇರಿ ಇಲಾಖೆಯ ಅಧಿಕಾರಿಯೊಂದಿಗೆ ಚರ್ಚಿಸಿ ನಿರ್ಧಾರ ಮಾಡಿ, ಅದರಂತೆ ಜಿಲ್ಲಾಡಳಿತ ಜಯಂತಿಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತದೆ ಎಂದರು.
ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರದೊಂದಿಗೆ ಮೆರವಣಿಗೆ ಮಾಡಲಿದ್ದು, ಸಂಚಾರಕ್ಕೆ ಮತ್ತು ಮೆರವಣಿಗೆಗೆ ಯಾವುದೇ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆಗೆ ಮತ್ತು ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗುತ್ತದೆ. ಮೆರವಣಿಗೆಯಲ್ಲಿ ಹೊರಡುವ ಭಾವಚಿತ್ರಕ್ಕೆ ಹೂವಿನ ಹಾಗೂ ತೋರಣದ ಅಲಂಕಾರ ಮಹಾನಗರ ಪಾಲಿಕೆ ಮಾಡಲಿದ್ದು, ಜಯಂತಿ ಮುಗಿದ ಬಳಿಕ ಊಟ ಹಾಗೂ ಉತ್ತಮವಾದ ಕುಡಿಯುವ ನೀರಿನ ವ್ಯವಸ್ಥೆ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯಿಂದ ಮಾಡಲಾಗುತ್ತದೆ ಎಂದು ತಿಳಿಸಿದರು.
ಜಯಂತಿ ದಿನದಂದು ವಿದ್ಯಾನಗರದ ಬಳಿ ಇರುವ ವಾಲ್ಮೀಕಿ ವೃತ್ತಕ್ಕೆ ಹೊಸ ನಾಮಫಲಕ ಅಳವಡಿಸಲಿದ್ದು, ಸಮಾಜದ ಮುಖಂಡರಿಂದ ಪುಷ್ಪಾರ್ಚನೆ ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮೆರವಣಿಗೆಗೆ ಕಲಾ ತಂಡಗಳನ್ನು ನಿಯೋಜನೆ ಮಾಡಲು ತಿಳಿಸಲಾಗಿದ್ದು, ವಾಲ್ಮೀಕಿ ಸಮಾಜದಲ್ಲಿ ಕಲಾ ತಂಡಗಳಿದ್ದರೆ ಅದಕ್ಕೂ ಅವಕಾಶ ನೀಡಲಾಗುತ್ತದೆ ಎಂದರು.
ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಪ್ರಮುಖ ಅಧಿಕೃತ ಜಾಗದಲ್ಲಿ 10 ಫ್ಲೇಕ್ಸ್, ಬ್ಯಾನರ್ ಅವಳಡಿಸಲಾಗುತ್ತದೆ. ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರಥಮ ರ‍್ಯಾಂಕ್ ಪಡೆದ ವಾಲ್ಮೀಕಿ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ 1 ಲಕ್ಷ ಪ್ರೋತ್ಸಾಹ ಧನ ನೀಡಲಾಗುತ್ತದೆ. ಈ ದಿನದಂದು ಶಾಲೆ, ಕಾಲೇಜು ಹಾಗೂ ಸರ್ಕಾರಿ ಕಚೇರಿಯಲ್ಲಿ ಜಯಂತಿಯನ್ನು ಆಚರಣೆ ಮಾಡಲು ಸೂಚನೆ ನೀಡಲಾಗುತ್ತದೆ ಎಂದರು.
Maharishi Valmiki Jayanti ಸಮಾಜದ ಮುಖಂಡರು ಮಾತನಾಡಿ, ಈ ಬಾರಿ ಜಯಂತಿಗೆ ಗ್ರಾಮಾಂತರ ಭಾಗದಿಂದ ಹೆಚ್ಚಿನ ಜನರು ಬರಲಿದ್ದು, ಎಲ್ಲಾ ಸಂಘಟನೆಗಳು ಸಹ ಭಾಗಿತ್ವದಲ್ಲಿ ವಹಿಸಲಿದ್ದಾರೆ. ಹಾಗಾಗಿ ಕುವೆಂಪು ರಂಗಮಂದಿರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಮೇಶ್ ಕುಮಾರ್, ಜಿಲ್ಲಾ ಪರಿಶಿಷ್ಟ ಪಂಗಡ ಇಲಾಖೆಯ ಕಲ್ಯಾಣಾಧಿಕಾರಿ ಶ್ರೀನಿವಾಸ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರುಗಳು ಹಾಜರಿದ್ದರು.

Narendra Modi “ನಶೆ ಮುಕ್ತ ಭಾರತ” ನಮೋ ಯುವ ಮ್ಯಾರಾಥನ್ ಗೆ ಸಂಸದ ರಾಘವೇಂದ್ರ ಚಾಲನೆ

0

Narendra Modi ಶಿವಮೊಗ್ಗ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 75 ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿತವಾಗಿದ್ದ ‘ನಮೋ ಯುವ ಓಟ’ ದ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.

Narendra Modi ಯುವಕರಿಗೆ ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳುವಂತೆ ಮತ್ತು ಮಾದಕ ವಸ್ತುಗಳಿಂದ ದೂರವಿರುವಂತೆ ಯುವಕರನ್ನು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ‘ನಶೆಮುಕ್ತ ಭಾರತ’ ಧೈಯದೊಂದಿಗೆ ದೇಶದ 75 ನಗರಗಳಲ್ಲಿ ಇಂದು ‘ನಮೋ ಯುವ ರನ್” ಮ್ಯಾರಾಥನ್ ನಡೆಯುತ್ತಿದ್ದು ಇದೊಂದು ದಾಖಲೆಯ ಅಭಿಯಾನವಾಗಿದೆ ಎಂದು ರಾಘವೇಂದ್ರ ಯುವಜನರನ್ನದ್ದೇಶಿಸಿ ಮಾತನಾಡಿದರು

S. N. Channabasappa ಜಾತಿ ಜನಗಣತಿ ಹಿಂದೂ ವಿರೋಧಿ. ರಾಜ್ಯ ಸರ್ಕಾರ ಮಣ್ಣುಮುಕ್ಕಲಿದೆ- ಶಾಸಕ ಚನ್ನಬಸಪ್ಪ

0

S. N. Channabasappa ರಾಜ್ಯ ಸರ್ಕಾರ ಸಮೀಕ್ಷೆಗೆ ಮುಂದಾಗಿ ಜಾತಿ ಗಣತಿ ನಡೆಸಲು ಉದ್ದೇಶಿಸಿದೆ ಆದರೆ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿಗೆ ಅಧಿಕಾರ ಇಲ್ಲ ಕೇಂದ್ರ ಸರ್ಕಾರ ಜನಗಣತಿಗೆ ಈಗಾಗಲೇ ನಿರ್ಧರಿಸಿದೆ ಆದರೆ ರಾಜ್ಯ ಸರ್ಕಾರ ತಾನು ಅಂದುಕೊಂಡದ್ದನ್ನು ಮಾಡುವುದಾಗಿ ಹೇಳಿದೆ. ಇದರಿಂದಾಗಿ ಮುಂದೆ ಸರ್ಕಾರ ಮಣ್ಣು ಮುಕ್ಕಲಿದೆ ಎಂದು ಶಾಸಕ ಚನ್ನಬಸಪ್ಪ ಹೇಳಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಜಾತಿಜನಗಣತಿ‌ ಬಗ್ಗೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿ ಮಾತನಾಡಿದರು.

ಇದು ಹಿಂದೂ ರಾಷ್ಟ್ರ. ಹಿಂದೂಗಳು ಇಲ್ಲಿ ಬಹುಸಂಖ್ಯಾತರು ಇದನ್ನು ಒಡೆಯಲು ರಾಜ್ಯ ಸರ್ಕಾರ ‌ಮುಂದಾಗಿದೆ ಹಾಗಾಗಿ ಗಣತಿ ವೇಳೆ ಎಲ್ಲರೂ ಹಿಂದೂ ಧರ್ಮ ಎಂದು ಬರೆಸಬೇಕು ಹಿಂದೂ ಜಾತಿಯನ್ನು ಕ್ರಿಶ್ಚಿಯನ್ ಮಾಡಲು ಹೊರಟಿದೆ

S. N. Channabasappa ಸರ್ಕಾರವೇ ಕ್ರಿಶ್ಚಿಯನ್ ಎಂದು ಬರೆಸಿ ಎಂದು ಪ್ರೇರೇಪಿಸುತ್ತಿದೆ ಈ ಮೂಲಕ ರಾಜ್ಯದ ವ್ಯವಸ್ಥೆಯನ್ನು ಬುಡಮೇಲು ಮಾಡಲು ಮುಂದಾಗಿದೆ ಹಿಂದೂ ಸಮಾಜದ ಪ್ರತಿಯೊಬ್ಬರೂ ಧರ್ಮ ಕಾಲಂ ನಲ್ಲಿ ಹಿಂದೂ ಧರ್ಮ ಎಂದು ಹಾಗೂ ಜಾತಿಯ ಕಾಲಂ ನಲ್ಲಿ ತಮ್ಮ ಜಾತಿ ಹೆಸರನ್ನು ಬರೆಸಬೇಕು ಮಠಾಧೀಶರು, ಸಾಧು-ಸಂತರು ಈ ಬಗ್ಗೆ ಗಮನ ಹರಿಸಬೇಕು ರಾಜ್ಯ ಸರ್ಕಾರ ಸಮೀಕ್ಷೆ ಹೆಸರಿನಲ್ಲಿ ವ್ಯವಸ್ಥೆಯನ್ನು ಉಧ್ವಸ್ಥಗೊಳಿಸಲು ಹೊರಟಿದೆ ಹಾಗಾಗಿ ಹಿಂದೂ ಸಮಾಜದ ಪ್ರತಿಯೊಬ್ಬರೂ ಒಗ್ಗಟ್ಟನ್ನು ಪ್ರದರ್ಶಿಸಬೇಕು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ಹಿಂದೂ ಧರ್ಮದ ಜಾತಿ ಏಕೆ ಬೇಕು

ಸರ್ಕಾರ ನೇರವಾಗಿ ಮತಾಂತರಕ್ಕೆ ಬೆಂಬಲ ನೀಡುತ್ತಿದೆ ಈ ಮೂಲಕ ಅವರು ಪಕ್ಷದ ಹೈ ಕಮಾಂಡ್ ನ್ನು ತೃಪ್ತಿಪಡಿಸಲು ಹೊರಟಿದ್ದಾರೆ ಸಿಎಂ ರಾಜ್ಯದ ವಾತಾವರಣವನ್ನು ಹಾಳು ಮಾಡಲು ಹೊರಟಿದ್ದಾರೆ ಧರ್ಮ ಒಡೆಯುವ ಹುನ್ನಾರವನ್ನು ಸಿಎಂ ಹಾಗೂ ಕಾಂಗ್ರೆಸ್ ಮಾಡುತ್ತಿದೆ ಮೈಸೂರು ದಸರಾ ಉದ್ಘಾಟನೆ ವಿಷಯದಲ್ಲಿ ನಮ್ಮ ನಂಬಿಕೆಗೆ ನೋವಾಗುವಂತೆ ಸರ್ಕಾರ ನಡೆದುಕೊಂಡಿದೆ ಎಂದು ರಾಜ್ಯ ಸರ್ಕಾರದ ನಡೆಯ ಬಗ್ಗೆ ಶಾಸಕ ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ

All India Radio Bhadravati ಆಕಾಶವಾಣಿ ಭದ್ರಾವತಿ ಕೇಂದ್ರದಿಂದ ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿ ಬಗ್ಗೆ ನೇರ ಪೋನ್ ಇನ್ ಕಾರ್ಯಕ್ರಮ

0

All India Radio Bhadravati ಆಕಾಶವಾಣಿ ಭದ್ರಾವತಿಯಿಂದ ಸೆ. 23 ರಂದು ಸಂಜೆ 6.51 ರಿಂದ 7.30 ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಪ್ರಸಾರವಾಗಲಿದ್ದು, ಚಿಕ್ಕಮಗಳೂರು ತಾಲೂಕಿನ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣಕುಮಾರ್. ಕೆ. ಎಲ್ ಅವರು ತೋಟಗಾರಿಕೆ ಬೆಳೆಗಳಲ್ಲಿ ಹನಿ ನೀರಾವರಿಯ ಪದ್ಧತಿಗಳ ಕುರಿತು ಮಾಹಿತಿ ನೀಡುತ್ತಾರೆ.
ದೂರವಾಣಿ ಸಂಖ್ಯೆ: 08282-270282, 270283, ವಾಟ್ಸಪ್ ಸಂಖ್ಯೆ: 9481572600.

ಪ.ಜಾ/ಪ.ಪಂಗಡಗಳ ನಿಗಮದಿಂದ ಅಲೆಮಾರಿ ಜನಾಂಗಕ್ಕೆ ವಿವಿಧ ಯೋಜನೆಗಳಡಿ ನೇರ ಸಾಲಕ್ಕೆ ಅರ್ಜಿ ಅವಧಿ ವಿಸ್ತರಣೆ

0

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥೀ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ಸೆ. 25ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.